Tag: ಏಡನ್‌ ಮಾರ್ಕ್ರಮ್‌

  • IPL 2023: ವಾಷಿಂಗ್ಟನ್‌ ಸುಂದರ್‌ ಔಟ್‌ – SRHಗೆ ಗಾಯದ ಮೇಲೆ ಬರೆ

    IPL 2023: ವಾಷಿಂಗ್ಟನ್‌ ಸುಂದರ್‌ ಔಟ್‌ – SRHಗೆ ಗಾಯದ ಮೇಲೆ ಬರೆ

    ಮುಂಬೈ: 2023ರ ಐಪಿಎಲ್‌ (IPL 2023) ಆವೃತ್ತಿಯಲ್ಲಿ ಪ್ಲೇ ಆಫ್‌ ಹಾದಿ ಕಠಿಣವಾಗಿಸಿಕೊಂಡಿರುವ ಸನ್‌ ರೈಸರ್ಸ್‌ ಹೈದರಾಬಾದ್‌ (SRH) ತಂಡಕ್ಕೆ ಈಗ ಗಾಯದ ಮೇಲೆ ಬರೆ ಎಳೆದಂತಾಗಿದೆ. ಮಂಡಿರಜ್ಜು ಗಾಯಕ್ಕೆ (Hamstring Injury) ತುತ್ತಾಗಿರುವ ಕಾರಣ ತಂಡದ ಸ್ಟಾರ್‌ ಆಲ್‌ರೌಂಡರ್‌ ವಾಷಿಂಗ್ಟನ್‌ ಸುಂದರ್‌ (Washington Sundar) ಟೂರ್ನಿಯಿಂದ ಹೊರ ಬಿದ್ದಿದ್ದಾರೆ.

    ಈ ಬಗ್ಗೆ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಹೈದರಾಬಾದ್‌ ತಂಡ ಮಂಡಿರಜ್ಜು ಗಾಯದಿಂದಾಗಿ ವಾಷಿಂಗ್ಟನ್‌ ಸುಂದರ್‌ ಅವರು 2023ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಿಂದ ಹೊರ ಬಿದ್ದಿದ್ದಾರೆ ಎಂದು ತಿಳಿಸಿದೆ. ಜೊತೆಗೆ ಆದಷ್ಟು ಬೇಗ ಗುಣಮುಖರಾಗಿ ವಾಷಿ ಎಂದು ಹಾರೈಸಿದೆ. ಇದನ್ನೂ ಓದಿ: ನಾವು ಸೋಲೋದಕ್ಕೆ ಅರ್ಹರು – ಕಿಂಗ್‌ ಕೊಹ್ಲಿ ಹತಾಶೆ

    16ನೇ ಆವೃತ್ತಿಯ ಐಪಿಎಲ್‌ನಲ್ಲಿ ವಾಷಿಂಗ್ಟನ್‌ ಸುಂದರ್‌ ಕಳೆ ಫಾರ್ಮನ್ನೇ ಮುಂದುವರಿಸಿದ್ದಾರೆ. ಆದ್ರೆ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ ಕೊನೆಯ ಪಂದ್ಯದಲ್ಲಿ ಬೌಲಿಂಗ್‌ ಮಾಡಿದ್ದ 4 ಓವರ್‌ಗಳಿಗೆ 28 ರನ್‌ ನೀಡಿದ್ದ ವಾಷಿಂಗ್ಟನ್‌, ಬ್ಯಾಟಿಂಗ್‌ನಲ್ಲಿ 15 ಎಸೆತಗಳಲ್ಲಿ 24 ರನ್‌ಗಳನ್ನು ಸಿಡಿಸಿದ್ದರು. ಇದರ ಹೊರತಾಗಿಯೂ ಈ ಪಂದ್ಯದಲ್ಲಿ ಹೈದರಾಬಾದ್‌ ಸೋತಿತ್ತು.

    ಈ ಆವೃತ್ತಿಯಲ್ಲಿ 7 ಪಂದ್ಯಗಳಲ್ಲಿ ವಾಷಿಂಗ್ಟನ್‌ ಸುಂದರ್‌ 60 ರನ್‌ ಗಳಿಸಿ, ಕೇವಲ 3 ವಿಕೆಟ್‌ ಪಡೆದಿದ್ದಾರೆ. ಚೆನ್ನೈ ಸೂಪರ್‌ ಕಿಂಗ್ಸ್ ವಿರುದ್ಧದ ಸೋಲಿನ ಬಳಿಕ ಮಾತನಾಡಿದ್ದ ಬ್ರಿಯಾನ್‌ ಲಾರಾ, ವಾಷಿಂಗ್ಟನ್‌ ಸುಂದರ್‌ ಅದ್ಭುತ ಆಲ್‌ರೌಂಡರ್‌ ಆಗಬೇಕೆಂದು ಫ್ರಾಂಚೈಸಿ ಬಯಸುತ್ತಿದೆ ಎಂದು ಹೇಳಿದ್ದರು. ಇದನ್ನೂ ಓದಿ: ನಮ್ಮ ಬ್ಲಡ್‌ ಗ್ರೂಪ್‌ RCB ಪಾಸಿಟಿವ್‌ – ಫ್ಯಾನ್ಸ್‌ ಪೋಸ್ಟರ್‌ ವೈರಲ್‌

    ಈಗಾಗಲೇ 7 ಪಂದ್ಯಗಳನ್ನಾಡಿರುವ ಹೈದರಾಬಾದ್‌ ತಂಡ‌ ಕೇವಲ 2ರಲ್ಲಿ ಮಾತ್ರ ಗೆಲುವು ಸಾಧಿಸಿ 4 ಅಂಕಗಳೊಂದಿಗೆ 9ನೇ ಸ್ಥಾನಕ್ಕೆ ಕುಸಿದಿದೆ. ಒಂದು ವೇಳೆ ಪ್ಲೆ ಆಫ್‌ ತಲುಪಬೇಕೆಂದರೂ ಉಳಿದ 7ರಲ್ಲಿ 6 ಪಂದ್ಯಗಳನ್ನಾದರೂ ಗೆಲ್ಲಲೇಬೇಕಿದೆ.

  • ಜಡೇಜಾ ಜಾದು, ಕಾನ್ವೆ ಕಿಕ್‌ – ತವರಿನಲ್ಲಿ ತಿಣುಕಾಡಿ ಗೆದ್ದ ಚೆನ್ನೈ; ಹೈದರಾಬಾದ್‌ ವಿರುದ್ಧ 7 ವಿಕೆಟ್‌ಗಳ ಜಯ

    ಜಡೇಜಾ ಜಾದು, ಕಾನ್ವೆ ಕಿಕ್‌ – ತವರಿನಲ್ಲಿ ತಿಣುಕಾಡಿ ಗೆದ್ದ ಚೆನ್ನೈ; ಹೈದರಾಬಾದ್‌ ವಿರುದ್ಧ 7 ವಿಕೆಟ್‌ಗಳ ಜಯ

    ಚೆನ್ನೈ: ಡಿವೋನ್‌ ಕಾನ್ವೆ ಸ್ಫೋಟಕ ಬ್ಯಾಟಿಂಗ್‌ ಹಾಗೂ ರವೀಂದ್ರ ಜಡೇಜಾ ಸ್ಪಿನ್‌ ಜಾದು ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ತವರಿನಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದೆ. ಆರಂಭದಲ್ಲಿ ಅಬ್ಬರಿಸಿದರೂ ಮಧ್ಯಮ ಕ್ರಮಾಂಕದಲ್ಲಿ ಹೈದರಾಬಾದ್‌ ಬೌಲರ್‌ಗಳ ಬಿಗಿ ಹಿಡಿತಕ್ಕೆ ಸಿಕ್ಕಿದ ಚೆನ್ನೈ 19ನೇ ಓವರ್‌ನಲ್ಲಿ ಗೆಲುವಿನ ಮೊತ್ತ ದಾಖಲಿಸಿದೆ.

    ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ ರೈಸರ್ಸ್‌ ಹೈದರಾಬಾದ್‌ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 134 ರನ್‌ ಗಳಿಸಿತು. 135 ರನ್‌ಗಳ ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ 18.4 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 138 ರನ್‌ ಗಳಿಸಿ ಗೆಲುವು ಸಾಧಿಸಿತು.

    ಚೇಸಿಂಗ್‌ ಆರಂಭಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌ ಉತ್ತಮ ಆರಂಭ ಪಡೆದುಕೊಂಡಿತ್ತು. ಆರಂಭಿಕರಾಗಿ ಕಣಕ್ಕಿಳಿದ ಡಿವೋನ್‌ ಕಾನ್ವೆ ಹಾಗೂ ಋತುರಾಜ್‌ ಗಾಯಕ್ವಾಡ್‌ ಭರ್ಜರಿ ಸಿಕ್ಸರ್‌, ಬೌಂಡರಿಯ ಆಟವಾಡಿದ್ದರು. ಮೊದಲ ವಿಕೆಟ್‌ ಪತನಕ್ಕೆ ಈ ಜೋಡಿ 66 ಎಸೆತಗಳಲ್ಲಿ 87 ರನ್‌ ಗಳಿಸಿತ್ತು. ಈ ವೇಳೆ ಋತುರಾಜ್‌ ಗಾಯಕ್ವಾಡ್‌ 35 ರನ್‌ (30 ಎಸೆತ, 2 ಬೌಂಡರಿ) ರನ್‌ ಗಳಿಸಿ ವಿಕೆಟ್‌ ಕಳೆದುಕೊಳ್ಳುತ್ತಿದ್ದಂತೆ ರನ್‌ ವೇಗ ಕಡಿಮೆಯಾಯಿತು.

    ಮಧ್ಯಮ ಕ್ರಮಾಂಕದಲ್ಲಿ ಬಿಗಿ ಬೌಲಿಂಗ್‌ ಹಿಡಿತ ಸಾಧಿಸಿದ ಹೈದರಾಬಾದ್‌ ತಂಡ ಚೆನ್ನೈ ಅಗ್ರಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳಾದ ಅಜಿಂಕ್ಯಾ ರಹಾನೆ ಹಾಗೂ ಅಂಬಟಿ ರಾಯುಡು ಅವರನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿತ್ತು. ಆದ್ರೆ ಡಿವೋನ್‌ ಕಾನ್ವೆ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಕೊನೆಯವರೆಗೂ ಹೋರಾಡಿದ ಡಿವೋನ್‌ ಕಾನ್ವೆ 57 ಎಸೆತಗಳಲ್ಲಿ 77 ರನ್‌ (12 ಬೌಂಡರಿ, 1 ಸಿಕ್ಸರ್) ಚಚ್ಚಿದರೆ, ಕೊನೆಯಲ್ಲಿ ಮೊಯಿನ್‌ ಅಲಿ 6 ರನ್‌ ಗಳಿಸಿ ಅಜೇಯರಾಗುಳಿದರು. ಅಜಿಂಕ್ಯಾ ರಹಾನೆ ಹಾಗೂ ಅಂಬಟಿ ರಾಯುಡು ತಲಾ 9 ರನ್‌ ಗಳಿಸಿ ಔಟಾದರು.

    ಟಾಸ್‌ ಸೋತು ಮೊದಲು ಕ್ರೀಸ್‌ಗಿಳಿದ ಹೈದರಾಬಾದ್‌ ತಂಡ ರವೀಂದ್ರ ಜಡೇಜಾ ಸೇರಿದಂತೆ ಚೆನ್ನೈ ಬೌಲರ್‌ಗಳ ದಾಳಿಗೆ ತತ್ತರಿಸಿತು. ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್‌ ಶರ್ಮಾ ಹಾಗೂ ಹ್ಯಾರಿ ಬ್ರೂಕ್‌ ಉತ್ತಮ ಆರಂಭ ಪಡೆಯುವಲ್ಲಿ ವಿಫಲರಾದರು. ಆರಂಭದಲ್ಲೇ ಆಕ್ರಮಣಕಾರಿ ಬ್ಯಾಟಿಂಗ್‌ಗೆ ಮುಂದಾದಾ ಬ್ರೂಕ್‌ 13 ಎಸೆತಗಲ್ಲಿ 18 ರನ್‌ ಗಳಿಸಿ ಔಟಾದರು. ಮತ್ತೋರ್ವ ಆರಂಭಿಕನಾಗಿ ಕಣಕ್ಕಿಳಿದಿದ್ದ ಅಭಿಷೇಕ್‌ ಶರ್ಮಾ 26 ಎಸೆತಗಳಲ್ಲಿ 34 ರನ್‌ (3 ಬೌಂಡರಿ, 1 ಸಿಕ್ಸರ್‌) ಗಳಿಸಿದರು. ನಂತರದಲ್ಲಿ ಕಣಕ್ಕಿಳಿದ ಯಾರೊಬ್ಬರೂ ಉತ್ತಮ ಜೊತೆಯಾಟ ನೀಡದ ಕಾರಣ ಹೈದರಾಬಾದ್‌ ತಂಡ ಅಲ್ಪ ಮೊತ್ತಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

    ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕಣಕ್ಕಿಳಿದವರಲ್ಲಿ ರಾಹುಲ್‌ ತ್ರಿಪಾಠಿ 21 ರನ್‌ ಗಳಿಸಿ ತಂಡಕ್ಕೆ ಸ್ವಲ್ಪ ಚೇತರಿಕೆ ನೀಡಿದರೆ, ನಾಯಕ ಏಡನ್‌ ಮಾರ್ಕ್ರಮ್‌ 12 ರನ್‌, ಹೆನ್ರಿಕ್ ಕ್ಲಾಸೆನ್ 17 ರನ್‌, ಮಯಾಂಕ್‌ ಅಗರ್ವಾಲ್‌ ಕೇವಲ 2 ರನ್‌, ವಾಷಿಂಗ್ಟನ್‌ ಸುಂದರ್‌ 9 ರನ್‌ ಹಾಗೂ ಮಾರ್ಕೊ ಜಾನ್ಸೆನ್‌ 17 ರನ್‌ ಗಳಿಸಿದರು.

    ಜಡೇಜಾ ಜಾದು: ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಸ್ಪಿನ್‌ ಜಾದು ನಡೆಸಿದ ರವೀಂದ್ರ ಜಡೇಜಾ 4 ಓವರ್‌ಗಳಲ್ಲಿ ಕೇವಲ 22 ರನ್‌ ನೀಡಿ ಪ್ರಮುಖ 3 ವಿಕೆಟ್‌ ಕಬಳಿಸಿದರು. ಇನ್ನೂ ಇಂಪ್ಯಾಕ್ಟ್‌ ಪ್ಲೇಯರ್‌ ಆಕಾಶ್‌ ಸಿಂಗ್‌, ಮಹೇಶ್‌ ತೀಕ್ಷಣ ಹಾಗೂ ಮತೀಶ ಪತಿರಾನ ತಲಾ ಒಂದೊಂದು ವಿಕೆಟ್‌ ಪಡೆದರು.