Tag: ಏಣಗಿ ಬಾಳಪ್ಪ

  • ಹಿರಿಯ ರಂಗಕರ್ಮಿ, ಏಣಗಿ ಬಾಳಪ್ಪನವರ ಪತ್ನಿ ಲಕ್ಷ್ಮೀಬಾಯಿ ನಿಧನ

    ಹಿರಿಯ ರಂಗಕರ್ಮಿ, ಏಣಗಿ ಬಾಳಪ್ಪನವರ ಪತ್ನಿ ಲಕ್ಷ್ಮೀಬಾಯಿ ನಿಧನ

    ಹಿರಿಯ ನಟಿ, ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ ಅವರು ಇಂದು ಮುಂಜಾನೆ ಧಾರವಾಡದ ರಜತಗಿರಿ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಸಿನಿಮಾ ಮತ್ತು ಕಿರುತೆರೆಯ ಖ್ಯಾತ ಕಲಾವಿದರ ಏಣಗಿ ನಟರಾಜ್ ಅವರ ತಾಯಿ ಮತ್ತು ಹಿರಿಯ ರಂಗಕರ್ಮಿ ಏಣಗಿ ಬಾಳಪ್ಪನವರ ಪತ್ನಿ ಇವರಾಗಿದ್ದಾರೆ. ಇದನ್ನೂ ಓದಿ : ಶಿವಣ್ಣನ ಹುಲಿ ಅವತಾರ: ಬೈರಾಗಿ ಹಾಡಿಗೆ ಭೀಮನ ಬಲ

    ಬಾಳಪ್ಪನವರ ಜತೆ ಅನೇಕ ನಾಟಕಗಳಲ್ಲಿ ಅಭಿನಯಿಸಿರುವ ಲಕ್ಷ್ಮೀ ಬಾಯಿ, ಪುತ್ರ ನಟರಾಜ್ ಜೊತೆ ‘ಸಿಂಗಾರವ್ವ’ ಸಿನಿಮಾದಲ್ಲಿ ನಟಿಸಿದ್ದರು. ಮಧ್ಯಾಹ್ನ ಧಾರವಾಡದ ಹೊಸಯಲ್ಲಾಪುರದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ : ಗೋವಾ ಸಿಎಂ ಭೇಟಿಯಾದ ಯಶ್, ರಾಧಿಕಾ ಪಂಡಿತ್

    ಲಕ್ಷ್ಮೀಬಾಯಿ ಅವರು ಬಾಳಪ್ಪನವರನ್ನು ಮದುವೆಯಾದ ನಂತರ ಬಾಳಪ್ಪನವರ ಕಲಾವೈಭವ ನಾಟ್ಯ ಸಂಘದಲ್ಲೇ ಬಣ್ಣ ಹಚ್ಚುವುದಕ್ಕೆ ಶುರು ಮಾಡಿದರು. ಲಕ್ಷ್ಮಿಬಾಯಿ ಅವರು ಪಾತ್ರಗಳಿಗೆ ಬಣ್ಣ ಹಚ್ಚುವುದು ಆರಂಭಿಸಿದಾಗ ಬಾಳಪ್ಪ ಅವರು ಸ್ತ್ರೀ ಪಾತ್ರಗಳಿಗೆ ಬಣ್ಣ ಹಚ್ಚುವುದು ನಿಲ್ಲಿಸಿದರು. ಹೇಮರಡ್ಡಿ ಮಲ್ಲಮ್ಮ, ಪಠಾಣಿ ಪಾಷಾ, ಚಲೇಜಾವ್, ಕುರುಕ್ಷೇತ್ರ, ಕಿತ್ತೂರು ಚನ್ನಮ್ಮ, ಬಡತನ ಭೂತ, ದೇವರ ಮಗು… ಹೀಗೆ ಅನೇಕ ನಾಟಕಗಳಲ್ಲಿ ಲಕ್ಷ್ಮೀಬಾಯಿ ಅಭಿನಯಿಸಿದ್ದಾರೆ. ಧಾರವಾಡದಲ್ಲಿ 1994ರಲ್ಲಿ ಮ್ಯಾಳ ನಾಟಕ ತಂಡ ಶುರುವಾದಾಗ ‘ಕುಂಕುಮ’ ನಾಟಕ ಆಡಬೇಕಿತ್ತು. ಆದರೆ ಈ ನಾಟಕದಲ್ಲಿ ಅನುರೂಧಾ ಪಾತ್ರ ಮಾಡಬೇಕಿದ್ದ ಪಾತ್ರಧಾರಿ ಕೈ ಕೊಟ್ಟ ಕಾರಣ ಲಕ್ಷ್ಮಿಬಾಯಿ ಅಭಿನಯಿಸಿದರು.

  • ಶತಾಯುಷಿ, ರಂಗಭೂಮಿ ಭೀಷ್ಮ ಏಣಗಿ ಬಾಳಪ್ಪ ಇನ್ನಿಲ್ಲ

    ಶತಾಯುಷಿ, ರಂಗಭೂಮಿ ಭೀಷ್ಮ ಏಣಗಿ ಬಾಳಪ್ಪ ಇನ್ನಿಲ್ಲ

    ಬೆಳಗಾವಿ: ನಾಟ್ಯ ಭೂಷಣ, ನಾಡೋಜ, ಶತಾಯುಷಿ, ರಂಗಭೂಮಿ ಭೀಷ್ಮ ಬಾಳಪ್ಪ (104) ವಿಧಿವಶರಾಗಿದ್ದಾರೆ.

    ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಬಾಳಪ್ಪ ಅವರಿಗೆ ಕಳೆದ ಮೂರು ವರ್ಷಗಳಿಂದ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಶತಾಯುಷಿ ಬಾಳಪ್ಪ ಅವರು ಏಣಗಿ ಗ್ರಾಮದಲ್ಲಿ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.

    ನೂರಾರು ನಾಟಕ, ಚಲನಚಿತ್ರದಲ್ಲಿ ಅಭಿನಯಿಸಿರುವ ಹಿರಿಯ ಕಲಾವಿದ ಏಣಗಿ ಬಾಳಪ್ಪ ಅವರ ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ 11 ಘಂಟೆಗೆ ಸವದತ್ತಿ ತಾಲೂಕಿನ ಏಣಗಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಬಾಳಪ್ಪನ್ನನವರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

    10ನೆಯ ತರಗತಿಯಲ್ಲಿ ಓದುತ್ತಿರುವಾಗಲೇ ರಂಗಭೂಮಿ ಪ್ರವೇಶಿಸಿದ ಅವರು ಸ್ತ್ರೀ ಪಾತ್ರಗಳ ಮೂಲಕವೂ ಜನಜನಿತರಾದರಲ್ಲದೆ ಅಪಾರ ಖ್ಯಾತಿಯನ್ನು ಪಡೆದರು. ‘ಕಿತ್ತೂರು ರುದ್ರಮ್ಮ’ ನಾಟಕದ ರುದ್ರಮ್ಮನ ಪಾತ್ರ ಇವರ ಮೊಟ್ಟಮೊದಲ ಸ್ರೀಪಾತ್ರ. ಚಿಕ್ಕೋಡಿ ಸಿದ್ಧಲಿಂಗ ಸ್ವಾಮೀಜಿಯವರ ಕಂಪೆನಿಯ ಮಹಾನಂಜ ನಾಟಕದಲ್ಲಿ ಪ್ರಹ್ಲಾದನಾಗಿ ಮನೋಜ್ಞ ಅಭಿನಯ ನೀಡಿದ್ದರು, ರಂಗ ಭೂಮಿಯ ದಾಖಲೆಯಾಗಿತ್ತು.

    ಹಲವು ವಿಡಂಬನಾ ನಾಟಕಗಳಲ್ಲಿ ನಟಿಸಿದ್ದ ಬಾಳಪ್ಪ ಅವರು ಬಸವೇಶ್ವರ ಪಾತ್ರದ ಮೂಲಕ ಉತ್ತರ ಕರ್ನಾಟಕದಲ್ಲಿ ಮನೆ ಮಾತಾಗಿದ್ದರು. ಕನ್ನಡ ಚಿತ್ರಗಳಲ್ಲೂ ನಟಿಸಿದ್ದ ಬಾಳಪ್ಪ ಅವರು ಶಿವರಾಜ್ ಕುಮಾರ್ ಅಭಿನಯಿಸಿದ್ದ ಗಡಿ ಬಿಡಿ ಕೃಷ್ಣ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದರು.