Tag: ಏರ್‌ಲೈನ್ಸ್

  • 179 ಮಂದಿ ಸಾವು ಪ್ರಕರಣ – ದೇಶದ ಎಲ್ಲಾ ಬೋಯಿಂಗ್ 737-800 ವಿಮಾನ ಪರೀಕ್ಷೆಗೆ ಮುಂದಾದ ದ. ಕೊರಿಯಾ

    179 ಮಂದಿ ಸಾವು ಪ್ರಕರಣ – ದೇಶದ ಎಲ್ಲಾ ಬೋಯಿಂಗ್ 737-800 ವಿಮಾನ ಪರೀಕ್ಷೆಗೆ ಮುಂದಾದ ದ. ಕೊರಿಯಾ

    ಸಿಯೋಲ್: ದೇಶದ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಎಲ್ಲಾ ಬೋಯಿಂಗ್ 737-800 ವಿಮಾನಗಳ (Boeing 737-800 aircraft) ಸುರಕ್ಷತಾ ತಪಾಸಣೆ ನಡೆಸುವುದಾಗಿ ದಕ್ಷಿಣ ಕೊರಿಯಾದ (South Korea) ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

    ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ (Muan International Airport) ಲ್ಯಾಂಡಿಂಗ್‌ ವೇಳೆ ಸಂಭವಿಸಿದ ದುರಂತದಲ್ಲಿ 179 ಮಂದಿ ಸಾವಿಗೀಡಾದ ಬೆನ್ನಲ್ಲೇ ದೇಶದ ವಿಮಾನಯಾನ ಸಂಸ್ಥೆಗಳು ಈ ಕ್ರಮಕ್ಕೆ ಮುಂದಾಗಿದೆ. ಅಪಘಾತಕ್ಕೆ ನಿಖರ ಕಾರಣ ಏನೆಂಬುದನ್ನು ಪತ್ತೆಹಚ್ಚುವ ತನಿಖೆಯ ಭಾಗವಾಗಿ ತಪಾಸಣೆಗೆ ಮುಂದಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ದಕ್ಷಿಣ ಕೊರಿಯಾ | ಲ್ಯಾಂಡಿಂಗ್ ಗೇರ್‌ ವೈಫಲ್ಯದಿಂದ ವಿಮಾನ ಪತನ – 179 ಮಂದಿ ದುರ್ಮರಣ

    ದಕ್ಷಿಣ ಕೊರಿಯಾದ ಹಂಗಾಮಿ ಅಧ್ಯಕ್ಷ ಚೋಯ್ ಸಾಂಗ್-ಮೊಕ್ ಅವರಿಂದು ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ದೇಶದ ವಿಮಾನ ಕಾರ್ಯಾಚರಣೆ ವ್ಯವಸ್ಥೆಗಳ ತುರ್ತು ಪರಿಶೀಲನೆ ನಡೆಸಿದರು. ಅಲ್ಲದೇ ಇಂತಹ ಘಟನೆಗಳು ಪುನರಾವರ್ತನೆ ಆಗಬಾರದು. ಅದಕ್ಕಾಗಿ ಬೋಯಿಂಗ್ 737-800 ವಿಮಾನಗಳ ಸುರಕ್ಷತಾ ತಪಾಸಣೆ ನಡೆಸಿ, ದೇಶದ ಒಟ್ಟಾರೆ ವಾಯುಯಾನ ಸುರಕ್ಷತಾ ವ್ಯವಸ್ಥೆಯನ್ನ ನವೀಕರಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

    ಬೋಯಿಂಗ್‌ 737-800 ವಿಮಾನವು ಬೋಯಿಂಗ್‌-737 ಮ್ಯಾಕ್ಸ್‌ ಸರಣಿಗಿಂತಲೂ ವಿಭಿನ್ನವಾಗಿದೆ. ಆದ್ದರಿಂದ ಜೆಟ್‌ ಏರ್‌ಲೈನ್‌ಗಳ ಲೆಕ್ಕಪರಿಶೋಧನೆ ಮತ್ತು ಸುರಕ್ಷತಾ ಮಾನದಂಡಗಳ ಕುರಿತು ವಿಮರ್ಷೆ ನಡೆಸುವುದಾಗಿ ಡೆಲ್ಟಾ ಏರ್ ಲೈನ್ಸ್‌ನ ಮಾಜಿ ಮುಖ್ಯ ಪೈಲಟ್ ಮತ್ತು ಈಗ ಸಲಹೆಗಾರರಾಗಿರುವ ಅಲನ್ ಪ್ರೈಸ್ ಹೇಳಿದ್ದಾರೆ. ಇದನ್ನೂ ಓದಿ: ಮಹಿಳೆಯರನ್ನು ಉದ್ಯೋಗದಿಂದ ಕೈಬಿಡಿ – ಎನ್‌ಜಿಒಗಳಿಗೆ ತಾಲಿಬಾನ್‌ ಎಚ್ಚರಿಕೆ

    ಒಂದು ದಿನದ ಹಿಂದೆಯಷ್ಟೇ ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ಪತನಗೊಂಡ ವಿಮಾನ ಕಂಪನಿಯು 39 ಬೋಯಿಂಗ್ 737-800 ಸರಣಿಯ ವಿಮಾನಗಳನ್ನು ನಿರ್ವಹಿಸುತ್ತದೆ. ಒಟ್ಟು 181 ಮಂದಿ ಪ್ರಯಾಣಿಕ ಪೈಕಿ ಇಬ್ಬರು ಮಾತ್ರ ಬದುಕುಳಿದು ಪವಾಡ ಸೃಷ್ಟಿಸಿದ್ದಾರೆ, ಆದ್ರೆ ಅವರ ಆರೋಗ್ಯ ಸ್ಥಿತಿಯೂ ಗಂಭೀರವಾಗಿದೆ ಏನ್ನಲಾಗಿದೆ. ಇದನ್ನೂ ಓದಿ: ಗ್ರೀನ್‌ಲ್ಯಾಂಡ್‌ ಮೇಲೆ ಟ್ರಂಪ್‌ಗೆ ಕಣ್ಣೇಕೆ? ಲಾಭವೇನು?

  • ಭಾರತದಲ್ಲಿ ಏರ್‌ಲೈನ್ಸ್ ವ್ಯವಸ್ಥೆಗಳು ಸಹಜ ಸ್ಥಿತಿಗೆ ಮರಳಿವೆ – ನಾಗರಿಕ ವಿಮಾನಯಾನ ಸಚಿವಾಲಯ

    ಭಾರತದಲ್ಲಿ ಏರ್‌ಲೈನ್ಸ್ ವ್ಯವಸ್ಥೆಗಳು ಸಹಜ ಸ್ಥಿತಿಗೆ ಮರಳಿವೆ – ನಾಗರಿಕ ವಿಮಾನಯಾನ ಸಚಿವಾಲಯ

    ನವದೆಹಲಿ: ಮೈಕ್ರೋಸಾಫ್ಟ್ ಕ್ಲೌಡ್‌ನಲ್ಲಿ (Microsoft Cloud) ಕಂಡುಬಂದ ಸಮಸ್ಯೆ ಸರಿಯಾಗಿದ್ದು, ಇದರಿಂದ ಉಂಟಾದ ಸಮಸ್ಯೆಗಳನ್ನು ಹಂತ ಹಂತವಾಗಿ ಸರಿಪಡಿಸಲಾಗುತ್ತಿದೆ. ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ವಿಮಾನಯಾನ ವ್ಯವಸ್ಥೆಗಳು ಸಹಜ ಸ್ಥಿತಿಗೆ ಮರಳಿವೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ (Ministry of Civil Aviation) ಶನಿವಾರ ಹೇಳಿದೆ.

    ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವಾಲಯ, ಬೆಳಗ್ಗೆ 3 ಗಂಟೆಯಿಂದ ವಿಮಾನ ನಿಲ್ದಾಣಗಳಲ್ಲಿ ಏರ್‌ಲೈನ್ ವ್ಯವಸ್ಥೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸಿವೆ. ಈಗ ವಿಮಾನ ಕಾರ್ಯಾಚರಣೆಗಳು ಸುಗಮವಾಗಿ ನಡೆಯುತ್ತಿವೆ. ಶುಕ್ರವಾರ ಅಡಚಣೆಗಳಿಂದ ಉಂಟಾದ ಸಮಸ್ಯೆಗಳನ್ನು ಸರಿಪಡಿಸಲಾಗುತ್ತಿದೆ ಎಂದು ಹೇಳಿದೆ.

    ಈ ನಡುವೆ ಬಯೋಮೆಟ್ರಿಕ್ ಆಧಾರಿತ ಬೋರ್ಡಿಂಗ್ ವ್ಯವಸ್ಥೆಯಾದ ಡಿಜಿ ಯಾತ್ರಾ ವ್ಯವಸ್ಥೆಯು ಕಾರ್ಯನಿರ್ವಹಿಸದ ಕಾರಣ ದೆಹಲಿಯ ಐಜಿಐ ವಿಮಾನ ನಿಲ್ದಾಣವು ಶನಿವಾರ ಬೆಳಗ್ಗೆ ಗಮನಾರ್ಹ ಅಡಚಣೆಗಳನ್ನು ಎದುರಿಸಿತು. ಪ್ರಯಾಣಿಕರು ಮ್ಯಾನುವಲ್ ಚೆಕ್ ಇನ್ ಮಾಡಲು ಪ್ರಯಾಸಪಡುತ್ತಿದ್ದರಿಂದ ನಿರ್ಗಮನ ಟರ್ಮಿನಲ್‌ಗಳಲ್ಲಿ ದೊಡ್ಡ ಸರತಿ ಸಾಲುಗಳು ಏರ್ಪಟ್ಟಿತು.

    ಪ್ರಯಾಣಿಕರಿಗೆ ಸಹಾಯ ಮಾಡಲು ಮತ್ತು ದಟ್ಟಣೆಯನ್ನು ನಿರ್ವಹಿಸಲು ವಿಮಾನ ನಿಲ್ದಾಣದ ಅಧಿಕಾರಿಗಳು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ 400ಕ್ಕೂ ಹೆಚ್ಚು ವಿಮಾನಗಳು ವಿಳಂಬವನ್ನು ಎದುರಿಸುತ್ತಿವೆ. ಹಲವಾರು ಪ್ರಯಾಣಿಕರು ಕೈಬರಹದ ಬೋರ್ಡಿಂಗ್ ಪಾಸ್‌ಗಳ ಚಿತ್ರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ.

  • Microsoft Outage: ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲ ಕಲ್ಲೋಲ; ಇದು ಸೈಬರ್‌ ದಾಳಿಯಲ್ಲ – ಕ್ರೌಡ್‌ಸ್ಟ್ರೈಕ್‌ ಸಿಇಒ ಸ್ಪಷ್ಟನೆ!

    Microsoft Outage: ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲ ಕಲ್ಲೋಲ; ಇದು ಸೈಬರ್‌ ದಾಳಿಯಲ್ಲ – ಕ್ರೌಡ್‌ಸ್ಟ್ರೈಕ್‌ ಸಿಇಒ ಸ್ಪಷ್ಟನೆ!

    – 200ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ಸ್ಥಗಿತ

    ನವದೆಹಲಿ: ಜಾಗತಿಕವಾಗಿ ಮೈಕ್ರೋಸಾಫ್ಟ್ ಕಾರ್ಯನಿರ್ವಹಣೆ ಸ್ಥಗಿತಗೊಂಡ (Microsoft Outage) ಕಾರಣ ದೇಶದ ವಿಮಾನ ನಿಲ್ದಾಣಗಳ (Airports) ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಮಾಹಿತಿ ದೊರಕದೇ ಪ್ರಯಾಣಿಕರು ಸಮಸ್ಯೆ ಎದುರಿಸಿದ್ದು ಎಲ್ಲಡೆ ಅಲ್ಲೋಲ ಕಲ್ಲೋಲ ಉಂಟಾಗಿದೆ.

    ಇಂಡಿಗೋ, ಆಕಾಸಾ ಏರ್, ಸ್ಪೈಸ್ ಜೆಟ್, ಏರ್ ಇಂಡಿಯಾ, ವಿಸ್ತಾರಾ ಮತ್ತು ಇತರ ವಿಮಾನಯಾನ ಸಂಸ್ಥೆಗಳ ಚೆಕ್-ಇನ್ ವ್ಯವಸ್ಥೆಗಳಿಗೆ ಸಮಸ್ಯೆಯಾಗಿವೆ. ಹೀಗಾಗಿ ದೇಶಾದ್ಯಂತ ಹಲವಾರು ವಿಮಾನ ನಿಲ್ದಾಣಗಳ ಕಾರ್ಯಾಚರಣೆಗೆ ಅಡಚಣೆ ಉಂಟಾಯಿತು. ರಾಷ್ಟ್ರ ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಲವಾರು ವಿಮಾನಗಳನ್ನು ರದ್ದುಪಡಿಸಲಾಯಿತು. ಆಮ್‌ಸ್ಟರ್‌ಡ್ಯಾಮ್‌ನಿಂದ ಜ್ಯೂರಿಚ್, ಸಿಂಗಾಪುರದಿಂದ ಹಾಂಗ್ ಕಾಂಗ್‌ನಲ್ಲೂ ಸಮಸ್ಯೆ ಸಂಭವಿಸಿತು.

    ವಿಂಡೋಸ್ ತಾಂತ್ರಿಕ ಸಮಸ್ಯೆ ಲ್ಯಾಪ್‌ಟಾಪ್, ಕಂಪ್ಯೂಟರ್‌ಗಳ ಮೇಲೆ ಬ್ಲೂಸಕ್ರೀನ್‌ ಮಾತ್ರ ಕಾಣಿಸಿದೆ. ಇದನ್ನು ತಾಂತ್ರಿಕ ಭಾಷೆಯಲ್ಲಿ ಬ್ಲೂಸ್ಕ್ರೀನ್‌ ಡೆತ್ ಎಂದು ಕರೆಯಲಾಗುತ್ತದೆ. ಇತ್ತೀಚಿಗೆ ಜಾಗತಿಕ ಸೈಬರ್ ಭದ್ರತಾ ಸಂಸ್ಥೆ ಕ್ರೌಡ್‌ಸ್ಟ್ರೈಕ್‌ನಲ್ಲಿ ಮಾಡಿದ ಫಾಲ್ಕನ್ ಸೆನ್ಸಾರ್ ಎಂಬ ಸಾಫ್ಟ್‌ವೇರ್‌ನಲ್ಲಿ ಆದ ಲೋಪದೋಷದಿಂದ ಈ ಸಮಸ್ಯೆ ಎದುರಾಗಿತ್ತು. ಕೊನೆಗೆ ಆಗಿರುವ ಯಡವಟ್ಟಿಗೆ ವಿಷಾದ ವ್ಯಕ್ತಪಡಿಸಿದ ಮೈಕ್ರೋಸಾಫ್ಟ್ ಸಂಸ್ಥೆ ಸಂಜೆ ಹೊತ್ತಿಗೆ ಸಮಸ್ಯೆ ಸರಿಪಡಿಸುವ ಕೆಲಸ ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    200ಕ್ಕೂ ಹೆಚ್ಚು ಇಂಡಿಗೋ ವಿಮಾನ ಸಂಚಾರ ರದ್ದು:
    ದೇಶದಲ್ಲಿ ಮಾತ್ರವಲ್ಲದೇ ವಿದೇಶಸಲ್ಲಿಯೂ ಮೈಕ್ರೋಸಾಫ್ಟ್‌ ತಾಂತ್ರಿಕ ಸಮಸ್ಯೆಯಿಂದ ಏರ್‌ಲೈನ್ಸ್‌ ಸಂಸ್ಥೆಗಳು ಸಮಸ್ಯೆ ಎದುರಿಸುವಂತಾಯಿತು. ದೇಶಾದ್ಯಂತ ಶುಕ್ರವಾರ 200ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಯಿತು. ಇದನ್ನೂ ಓದಿ: ರಾಜ್ಯದ ಜಲಾಶಯಗಳಲ್ಲಿ 536 ಟಿಎಂಸಿ ನೀರು ಸಂಗ್ರಹ – ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ

    ನಮ್ಮ ನಿಯಂತ್ರಣಕ್ಕೆ ಮೀರಿದ ಸಮಸ್ಯೆಯಿಂದಾಗಿ ವಿಮಾನ ಹಾರಾಟವನ್ನ ರದ್ದುಗೊಳಿಸಲಾಗಿದೆ. ವಿಮಾನವನ್ನು ಮರುಬುಕ್ ಮಾಡುವ ಅಥವಾ ಮರುಪಾವತಿ ಪಡೆಯುವ ಆಯ್ಕೆಯು ತಾತ್ಕಾಲಿಕವಾಗಿ ಲಭ್ಯವಿಲ್ಲ ಎಂದೂ ಇಂಡಿಯೋ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: 1.6 ಕೋಟಿ ಮೌಲ್ಯದ 3 ಮನೆ, 3 ಕೋಟಿಯ 2 ಶೆಡ್ – ಮುದ್ದುಕುಮಾರ್ ಆಸ್ತಿ ಕಂಡು ಅಧಿಕಾರಿಗಳೇ ಸುಸ್ತು!

    ಈ ಕುರಿತು ಪ್ರತಿಕ್ರಿಯಿಸಿರುವ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು, ಸಚಿವಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಕನಿಷ್ಠ ಅಡೆತಡೆಗಳನ್ನು ಖಚಿತಪಡಿಸಿಕೊಳ್ಳಲು ಮ್ಯಾನ್ಯುವಲ್‌ ವಿಧಾನಗಳನ್ನ ಬಳಸಿಕೊಂಡು ಸಕ್ರೀಯವಾಗಿ ಪರಿಸ್ಥಿತಿಯನ್ನು ಸಕ್ರಿಯವಾಗಿ ನಿರ್ವಹಿಸುತ್ತಿದ್ದೇವೆ. ಪ್ರಯಾಣಿಕರು ಇಂತಹ ಸಮಯದಲ್ಲಿ ಸಿಬ್ಬಂದಿಯೊಂದಿಗೆ ಸಹಕರಿಸಬೇಕು ಸೂಚಿಸಲಾಗಿದೆ. ಜೊತೆಗೆ ಎಲ್ಲಾ ವಿಮಾನ ನಿಲ್ದಾಣಗಳ ಪರಿಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.


    ಕ್ರೌಡ್‌ಸ್ಟ್ರೈಕ್‌ ಸ್ಪಷ್ಟನೆ ಏನು?
    ಕ್ರೌಡ್‌ಸ್ಟ್ರೈಕ್‌ ಸಾಫ್ಟ್‌ವೇರ್‌ ಕಂಪನಿ ಸಿಇಒ ಪ್ರತಿಕ್ರಿಯಿಸಿ, ಇದು ಯಾವುದೇ ಸೈಬರ್‌ ದಾಳಿಯಲ್ಲ, ತಾಂತ್ರಿಕ ದೋಷ. ಸಮಸ್ಯೆಯನ್ನು ಗುರುತಿಸಿ, ಪ್ರತ್ಯೇಕಿಸಲಾಗಿದೆ, ಪರಿಹಾರವನ್ನೂ ಕಂಡುಹಿಡಿಯಲಾಗಿದೆ. ನಮ್ಮ ವೆಬ್‌ಸೈಟ್‌ನಲ್ಲಿ ನವೀಕರಣ ಒದಗಿಸುವುದನ್ನು ಮುಂದುವರಿಸುತ್ತೇವೆ. ಕ್ರೌಡ್‌ಸ್ಟ್ರೈಕ್ ಗ್ರಾಹಕರ ಭದ್ರತೆ ಮತ್ತು ಸ್ಥಿರತೆ ಖಚಿತಪಡಿಸಿಕೊಳ್ಳಲು ನಮ್ಮ ತಂಡವನ್ನು ಸಂಪೂರ್ಣವಾಗಿ ಸಜ್ಜುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

  • ಕತಾರ್ ವಿಶ್ವದ ಬೆಸ್ಟ್ ಏರ್‌ಲೈನ್ – ಟಾಪ್ 20 ಸಂಸ್ಥೆಗಳಲ್ಲಿ ಕತಾರ್‌ಗೆ No-1 ಸ್ಥಾನ

    ಕತಾರ್ ವಿಶ್ವದ ಬೆಸ್ಟ್ ಏರ್‌ಲೈನ್ – ಟಾಪ್ 20 ಸಂಸ್ಥೆಗಳಲ್ಲಿ ಕತಾರ್‌ಗೆ No-1 ಸ್ಥಾನ

    ರಿಯಾದ್: ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಲೈನ್ (Skytrax World Airline) ಸಂಸ್ಥೆ ನಡೆಸಿದ ಗ್ರಾಹಕರ ಆನ್‌ಲೈನ್ ಸಮೀಕ್ಷೆಯಲ್ಲಿ ಸೌದಿ ಅರೇಬಿಯಾದ (Soudi Arabia) ಕತಾರ್ ಏರ್‌ವೇಸ್ (Qatar Airways) ಅತ್ಯುತ್ತಮ ಏರ್‌ಲೈನ್ ಸಂಸ್ಥೆ ಎಂದು ಗುರುತಿಸಿಕೊಂಡಿದ್ದು, ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಲೈನ್ ಅವಾರ್ಡ್ಸ್ 2022 ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

    ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಲೈನ್ ಇಂಗ್ಲಿಷ್, ಫ್ರೆಂಚ್, ಸ್ಪ್ಯಾನಿಷ್, ರಷ್ಯನ್, ಜಪಾನೀಸ್ ಮತ್ತು ಚೈನೀಸ್ ಭಾಷೆಗಳಲ್ಲಿ 2021 ಸೆಪ್ಟೆಂಬರ್‌ನಿಂದ 2022 ಆಗಸ್ಟ್ ವರೆಗೆ ನಡೆಸಿದ ವರ್ಲ್ಡ್ ಏರ್‌ಲೈನ್ (World Airline) ಗ್ರಾಹಕರ ಸಮೀಕ್ಷೆಯಲ್ಲಿ ಕತಾರ್‌ಗೆ ಬೆಸ್ಟ್ ಏರ್‌ಲೈನ್ ಸಂಸ್ಥೆ ಎಂಬ ಫಲಿತಾಂಶ ಬಂದಿದೆ.

    ಅಂತಿಮ ಸುತ್ತಿನಲ್ಲಿ 350ಕ್ಕೂ ಹೆಚ್ಚು ಏರ್‌ಲೈನ್ ಸಂಸ್ಥೆಗಳನ್ನು ಪಟ್ಟಿ ಮಾಡಲಾಗಿತ್ತು. ಅವುಗಳಲ್ಲಿ ಟಾಪ್-20 ಸಂಸ್ಥೆಗಳನ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು. ಈ ಪೈಕಿ ಕತಾರ್ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಇನ್ನುಳಿದಂತೆ ಸಿಂಗಾಪುರ್ ಏರ್‌ಲೈನ್ಸ್ (Singapore Airlines) ಲಿಮಿಟೆಡ್ ಮತ್ತು ಎಮಿರೇಟ್ಸ್ (Emirates) ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿವೆ. ಆದರೆ ಕಳೆದ ವರ್ಷದ 6ನೇ ಸ್ಥಾನದಲ್ಲಿದ್ದ ಕ್ಯಾಥೆ ಪೆಸಿಫಿಕ್ ಏರ್‌ಲೈನ್ಸ್ 16ನೇ ಸ್ಥಾನಕ್ಕೆ ಕುಸಿದಿದೆ. ಇದನ್ನೂ ಓದಿ: ರಷ್ಯಾದ ಶಾಲೆಯಲ್ಲಿ ಮನಸ್ಸೋಇಚ್ಛೆ ಗುಂಡು ಹಾರಿಸಿದ ಬಂದೂಕುಧಾರಿ- 5 ಮಕ್ಕಳು ಸೇರಿ 9 ಮಂದಿ ದುರ್ಮರಣ

    ಕೋವಿಡ್ ಸಾಂಕ್ರಾಮಿಕದ (Covid-19) ಸಂದರ್ಭದಲ್ಲಿ ಹಾಗೂ ಅದರ ನಂತರ ಸತತವಾಗಿ ಹಾರಾಟ ನಡೆಸಿದ ಕತಾರ್ ವಿಶ್ವದಾದ್ಯಂತ ಸುಮಾರು 30 ಸಂಸ್ಥೆಗಳನ್ನು ಒಳಗೊಂಡಿದೆ. ಜೊತೆಗೆ ಕತಾರ್ ವಿಮಾನಯಾನವನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ ಎಂದು ಸ್ಕೈಟ್ರಾಕ್ಸ್ ಸಿಇಒ ಎಡ್ವರ್ಡ್ ಪ್ಲಾಸ್ಟೆಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿದ್ದಕ್ಕೆ ತರಗತಿಗೆ ಪ್ರವೇಶ ನಿಷೇಧ – ವ್ಯಾಪಕ ಪ್ರತಿಭಟನೆ ಬಳಿಕ ಶಾಲೆ ಬಿಡಿಸಿದ ಪೋಷಕರು

    ಟಾಪ್-20 ಏರ್‌ಲೈನ್ಸ್ ಯಾವುವು?
    ಕತಾರ್ ಏರ್‌ವೇಸ್, ಸಿಂಗಾಪುರ್ ಏರ್‌ಲೈನ್ಸ್, ಎಮಿರೇಟ್ಸ್, ನಿಪ್ಪಾನ್ ಏರ್‌ವೇಸ್, ಕ್ವಾಂಟಾಸ್ ಏರ್‌ವೇಸ್, ಜಪಾನ್ ಏರ್‌ಲೈನ್ಸ್, ಟರ್ಕ್ ಹವಾ ಯೊಲ್ಲರಿ (ಟರ್ಕಿಶ್ ಏರ್‌ಲೈನ್ಸ್), ಏರ್ ಫ್ರಾನ್ಸ್, ಕೊರಿಯನ್ ಏರ್, ಸ್ವಿಸ್ ಇಂಟರ್ ನ್ಯಾಷನಲ್ ಏರ್‌ಲೈನ್ಸ್, ಬ್ರಿಟಿಷ್ ಏರ್‌ವೇಸ್, ಇತಿಹಾದ್ ಏರ್‌ವೇಸ್, ಚೀನಾ ಸೌತ್‌ರನ್, ಹೈನಾನ್ ಏರ್‌ಲೈನ್ಸ್, ಲುಫ್ಥಾನ್ಸ, ಕ್ಯಾಥೆ ಪೆಸಿಫಿಕ್, ಕೆಎಲ್‌ಎಂ, ಇವಿಎ ಏರ್, ವರ್ಜಿನ್ ಅಟ್ಲಾಂಟಿಕ್, ವಿಸ್ತಾರಾ ಏರ್‌ಲೈನ್ ಕ್ರಮವಾಗಿ 1 ರಿಂದ 20 ಸ್ಥಾನಗಳಲ್ಲಿವೆ.

    Live Tv
    [brid partner=56869869 player=32851 video=960834 autoplay=true]

  • ಸ್ಪೈಸ್‌ಜೆಟ್‌ ಪೈಲಟ್‌ನ ಲೈಸನ್ಸ್ 6 ತಿಂಗಳು ಅಮಾನತು – DGCA ಆದೇಶ

    ಸ್ಪೈಸ್‌ಜೆಟ್‌ ಪೈಲಟ್‌ನ ಲೈಸನ್ಸ್ 6 ತಿಂಗಳು ಅಮಾನತು – DGCA ಆದೇಶ

    ನವದೆಹಲಿ: ಏವಿಯೇಷನ್ ರೆಗ್ಯುಲೇಟರ್ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (DGCA) ಸ್ಪೈಸ್‌ಜೆಟ್‌ ಪೈಲಟ್‌ನ ಪರವಾನಗಿಯನ್ನು 6 ತಿಂಗಳ ಕಾಲ ಅಮಾನತುಗೊಳಿಸಿರುವುದಾಗಿ ತಿಳಿಸಿದೆ.

    ಮುಂಬೈನಿಂದ ದುರ್ಗಾಪುರಕ್ಕೆ ತೆರಳುವ ಏರ್‌ಲೈನ್ಸ್ ವಿಮಾನವು ಕಳೆದ ಮೇ ತಿಂಗಳಲ್ಲಿ ತೀವ್ರ ಪ್ರಕ್ಷುಬ್ಧತೆ ಎದುರಿಸಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿತ್ತು. ಈ ಘಟನೆಯನ್ನಾಧರಿಸಿ ಡಿಜಿಸಿಎ, ಲೈಸನ್ಸ್ ಅಮಾನತು ಮಾಡಿದೆ. ಇದನ್ನೂ ಓದಿ: ಸ್ಪೈಸ್‍ಜೆಟ್‍ನಲ್ಲಿ ಮುಂದುವರಿದ ತಾಂತ್ರಿಕ ದೋಷ: ಕಾಂಡ್ಲಾದಿಂದ ಬಂದ ವಿಮಾನ ಮುಂಬೈನಲ್ಲಿ ತುರ್ತು ಭೂಸ್ಪರ್ಶ

    ಕಳೆದ ಮೇ 1 ರಂದು ನಡೆದ ಘಟನೆಯಲ್ಲಿ 14 ಪ್ರಯಾಣಿಕರು ಮತ್ತು 3 ಕ್ಯಾಬಿನ್ ಸಿಬ್ಬಂದಿ ಗಾಯಗೊಂಡಿದ್ದರು. ಇದರೊಂದಿಗೆ ವಿವಿಧ ನಿಯಮ ಉಲ್ಲಂಘನೆಯ ಕಾರಣಗಳಿಂದಾಗಿ ಪೈಲಟ್‌ನ ಪರವಾನಗಿಯನ್ನು 6 ತಿಂಗಳ ಕಾಲ ಅಮಾನತುಗೊಳಿಸಿದೆ ಎಂದು ಡಿಜಿಸಿಎ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

    ಅಲ್ಲದೇ ಹವಾಮಾನ ಪರಿಸ್ಥಿತಿಯನ್ನು ಪೈಲಟ್ ಉತ್ತಮ ರೀತಿಯಲ್ಲಿ ನಿಭಾಯಿಸಬಹುದಿತ್ತು ಎಂದು ಹೇಳಿದ್ದಾರೆ. ಆದರೆ ಸ್ಪೈಸ್‌ಜೆಟ್‌ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ವಿಮಾನಗಳಲ್ಲಿ ತಾಂತ್ರಿಕ ದೋಷ – ಸ್ಪೈಸ್‌ಜೆಟ್‌ಗೆ ಶೋಕಾಸ್‌ ನೋಟಿಸ್‌

    ಇದು ಗಂಭೀರ ಘಟನೆಯಾಗಿರುವುದರಿಂದ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಈ ಕುರಿತು ತನಿಖೆ ನಡೆಸುತ್ತಿದೆ. ಘಟನೆ ನಡೆದಾಗ ವಿಮಾನದಲ್ಲಿ 2 ಪೈಲಟ್‌ಗಳು ಮತ್ತು 4 ಕ್ಯಾಬಿನ್ ಸಿಬ್ಬಂದಿ ಸೇರಿ 195 ಮಂದಿ ಇದ್ದರು. ಅವರಲ್ಲಿ 14 ಪ್ರಯಾಣಿಕರು ಮತ್ತು 3 ಕ್ಯಾಬಿನ್ ಸಿಬ್ಬಂದಿಗೆ ತಲೆಯ ಭಾಗ, ಬೆನ್ನುಮೂಳೆ, ಭುಜ, ಹಣೆ ಮತ್ತು ಮುಖದ ಭಾಗಕ್ಕೆ ತೀವ್ರ ಪೆಟ್ಟಾಗಿದೆ ಎಂದು ಡಿಜಿಸಿಎ ತಿಳಿಸಿದೆ.

    ಇತ್ತೀಚೆಗೆ ಹಲವು ಸ್ಪೈಸ್‌ಜೆಟ್ ವಿಮಾನಗಳು ತಾಂತ್ರಿಕ ಸಮಸ್ಯೆ ಎದುರಿಸುತ್ತಿವೆ. ಅದಕ್ಕಾಗಿ ಗರಿಷ್ಠ 8 ವಾರಗಳ ವರೆಗೆ ತನ್ನ ಶೇ.50 ರಷ್ಟು ವಿಮಾನಗಳನ್ನು ಮಾತ್ರ ನಿರ್ವಹಿಸುವಂತೆ ಡಿಜಿಸಿಎ ಏರ್‌ಲೈನ್‌ಗೆ ಆದೇಶಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಕೊನೆಗೂ ನನಸಾಯ್ತು ಅಮ್ಮ, ಮಗಳ ಕನಸು – ಒಂದೇ ವಿಮಾನಕ್ಕೆ ಇಬ್ಬರೂ ಪೈಲಟ್

    ಕೊನೆಗೂ ನನಸಾಯ್ತು ಅಮ್ಮ, ಮಗಳ ಕನಸು – ಒಂದೇ ವಿಮಾನಕ್ಕೆ ಇಬ್ಬರೂ ಪೈಲಟ್

    ವಾಷಿಂಗ್ಟನ್: ಕನಸು ನನಸಾದ್ರೆ ಸ್ವರ್ಗವೇ ಸಿಕ್ಕಂತೆ ಆಗುತ್ತೆ. ಅದರಂತೆ ತಾಯಿ-ಮಗಳ ಜೋಡಿಯೊಂದು ತಮ್ಮ ಕನಸನ್ನು ನನಸು ಮಾಡಿಕೊಂಡಿರುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ.

    ತಾಯಿ ಮತ್ತು ಮಗಳು ಜೋಡಿಯು ಸೌತ್‍ವೆಸ್ಟ್ ಏರ್‌ಲೈನ್‍ನ ಪೈಲಟ್‍ನಲ್ಲಿ ಸೇರಿಕೊಂಡಿದ್ದು, ಈ ಹೃದಯಸ್ಪರ್ಶಿ ಕ್ಷಣದ  ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಕ್ಯಾಪ್ಟನ್ ಹಾಲಿ ಪೆಟಿಟ್ ಮತ್ತು ಫಸ್ಟ್ ಆಫೀಸರ್ ಕೀಲಿ ಪೆಟಿಟ್ ಸೌತ್‍ವೆಸ್ಟ್ ಏರ್‌ಲೈನ್ಸ್‍ನ ಮೊದಲ ಜೋಡಿ ತಾಯಿ-ಮಗಳು ಪೈಲಟ್ ಆಗಿದ್ದಾರೆ. ಇದನ್ನೂ ಓದಿ: ಸಚಿವರಾಗಿ ಒಂದು ವರ್ಷ – ಆಂಜನೇಯನ ದರ್ಶನ ಪಡೆದ ಆರಗ

     

    View this post on Instagram

     

    A post shared by Southwest Airlines (@southwestair)

    ಏರ್‌ಲೈನ್ಸ್ ಸೋಶಿಯಲ್ ಮೀಡಿಯಾ ಈ ವಿಶೇಷ ವೀಡಿಯೋ ಶೇರ್ ಮಾಡಿಕೊಂಡಿದೆ. ವೀಡಿಯೋ ನೋಡಿದ ನೆಟ್ಟಿಗರು ಫುಲ್ ಖುಷ್ ಆಗಿದ್ದು, ಅಭಿನಂದಿಸಿದ್ದಾರೆ. ಕ್ಯಾಪ್ಟನ್ ಹಾಲಿ ತನ್ನ ಮಗಳನ್ನು ವಿಮಾನದಲ್ಲಿ ಪ್ರಯಾಣಿಕರಿಗೆ ಪರಿಚಯಿಸಿದ ಕ್ಷಣ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ವೀಡಿಯೋದಲ್ಲಿ ಏನಿದೆ?
    ತಾಯಿ-ಮಗಳ ಜೋಡಿ ಫ್ಲೈಟ್‍ನೊಳಗೆ ಫೋಟೋ ಫ್ರೇಮ್ ಹಿಡಿದುಕೊಂಡು ನಿಂತಿರುತ್ತಾರೆ. ಈ ಫೋಟೋ ಮೂಲಕ ಇವರ ಇಡೀ ಕುಟುಂಬ ಫ್ಲೈಟ್‍ನ ಪೈಲಟ್ ಆಗಿರುವುದು ತಿಳಿದುಬರುತ್ತೆ. ಇಬ್ಬರು ಫ್ಲೈಟ್ ಓಡಿಸುವುದನ್ನು ನೋಡಬಹುದು.

    ಈ ಕುರಿತು ಬರೆದುಕೊಂಡ ಹಾಲಿ(ತಾಯಿ), ಇಂದು ನನಗೆ ವಿಶೇಷ ದಿನ. ನೈಋತ್ಯ ಪೈಲಟ್‍ಗಳ ತಂಡದ ಹೊಚ್ಚ ಹೊಸ ಸದಸ್ಯೆ ಮತ್ತು ನನ್ನ ಮಗಳು ಕೀಲಿಯನ್ನು ನಾನು ನಿಮಗೆ ಪರಿಚಯಿಸಲು ಬಯಸುತ್ತೇನೆ ಎಂದು ಬರೆದು ವೀಡಿಯೋ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಸಿಮ್ ಕಾರ್ಡ್ ಇಲ್ಲದ ಮೊಬೈಲ್, ಖಾಲಿ ಹಾಳೆ ಕೈಗಿತ್ತು ಹೆತ್ತಮ್ಮನನ್ನೇ ಬಿಟ್ಟು ಹೋದ

    ಇಂದು ಕನಸು ನನಸಾಗಿದೆ. ಮೊದಲು, ನಾನು ಈ ವೃತ್ತಿಯನ್ನು ಕಂಡುಕೊಂಡು ಅದನ್ನು ಪ್ರೀತಿಸುತ್ತಿದ್ದೆ. ಆದರೆ ಇಗ ನನ್ನ ಮಗಳು ಈ ವೃತ್ತಿಯನ್ನು ಪ್ರೀತಿಸಿ ಇದೇ ವೃತ್ತಿಗೆ ಬರುತ್ತಿದ್ದಾಳೆ. ಇದು ಅತಿವಾಸ್ತವಿಕವಾಗಿದೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ರೀಲಂಕನ್ ಏರ್‌ಲೈನ್ಸ್ ಮಾರಾಟಕ್ಕೆ ಮುಂದಾದ ಸರ್ಕಾರ

    ಶ್ರೀಲಂಕನ್ ಏರ್‌ಲೈನ್ಸ್ ಮಾರಾಟಕ್ಕೆ ಮುಂದಾದ ಸರ್ಕಾರ

    ಕೊಲಂಬೋ: ಸಾಲದ ಸುಳಿಗೆ ಸಿಲುಕಿ ನಲುಗಿರುವ ಶ್ರೀಲಂಕಾ ಆರ್ಥಿಕ ಹಾಗೂ ರಾಜಕೀಯ ಬಿಕ್ಕಟ್ಟನ್ನು ನಿಭಾಯಿಸಲು ಹೆಣಗಾಡುತ್ತಿದೆ. ಈ ಯೋಜನೆಯ ಭಾಗವಾಗಿ ದ್ವೀಪ ರಾಷ್ಟ್ರ ತನ್ನ ರಾಷ್ಟ್ರೀಯ ವಿಮಾನಯಾನ ಸಂಸ್ಥೆ ಶ್ರೀಲಂಕನ್ ಏರ್‌ಲೈನ್ಸ್ ಅನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ.

    ಶ್ರೀಲಂಕಾದ ಹೊಸದಾಗಿ ನೇಮಕಗೊಂಡ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಶ್ರೀಲಂಕನ್ ಏರ್‌ಲೈನ್ಸ್ ಅನ್ನು ಖಾಸಗೀಕರಣಗೊಳಿಸಲು ಮುಂದಾಗಿದ್ದಾರೆ. ಈ ಮೂಲಕ ಆರ್ಥಿಕ ಹಾಗೂ ರಾಜಕೀಯ ಬಿಕ್ಕಟ್ಟನ್ನು ಸುಧಾರಿಸಲು ಪ್ರಯತ್ನಿಸುತ್ತಿದ್ದಾರೆ. ಇದನ್ನೂ ಓದಿ: ಮೈಕ್ರೋಸಾಫ್ಟ್ ಉದ್ಯೋಗಿಗಳಿಗೆ ಬಂಪರ್: ಒಂದೇ ಬಾರಿಗೆ ಸಂಬಳ ಡಬಲ್

    1948 ರಲ್ಲಿ ಬ್ರಿಟನ್‌ನಿಂದ ಸ್ವಾತಂತ್ರ‍್ಯ ಪಡೆದ ಬಳಿಕ ಶ್ರೀಲಂಕಾ ಇದೇ ಮೊದಲ ಬಾರಿಗೆ ತೀವ್ರವಾದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ನಷ್ಟದಲ್ಲಿರುವ ಶ್ರೀಲಂಕಾದ ಏರ್‌ಲೈನ್ಸ್ ಅನ್ನು ಖಾಸಗೀಕರಣಗೊಳಿಸುವ ಬಗ್ಗೆ ವಿಕ್ರಮಸಿಂಘೆ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಸ್ತಾಪಿಸಿದರು.

    ಶ್ರೀಲಂಕನ್ ಏರ್‌ಲೈನ್ಸ್‌ನ ವ್ಯವಸ್ಥಾಪಕ ಷೇರುದಾರ ಸ್ಥಾನದಿಂದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆಯನ್ನು ತೆಗೆದುಹಾಕಿದ ಬಳಿಕ ದೊಡ್ಡ ಮಟ್ಟದ ನಷ್ಟವನ್ನು ಅನುಭವಿಸಿತು. 2021 ಮಾರ್ಚ್ ಹೊತ್ತಿಗೆ ಅದರ ಒಟ್ಟು ನಷ್ಟ 372 ಶತಕೋಟಿ ರೂ. ಆಗಿತ್ತು ಎಂದು ಶ್ರೀಲಂಕಾ ಪ್ರಧಾನಿ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಸಂಕಷ್ಟಕ್ಕೆ ಸಿಲುಕಿದ ರಾಮಾಯಣ ಖ್ಯಾತಿಯ ಹಿಂದೂ ದೇವಾಲಯ!

    SRILANKA

    ಶ್ರೀಲಂಕನ್ ಏರ್‌ಲೈನ್ಸ್ ಅನ್ನು ಖಾಸಗೀಕರಣಗೊಳಿಸಿದರೂ ನಾವು ನಷ್ಟವನ್ನು ಭರಿಸುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈ ನಷ್ಟವನ್ನು ವಿಮಾನದಲ್ಲಿ ಇಲ್ಲಿವರೆಗೆ ಕಾಲಿಡದ, ಕಡು ಬಡತನದಲ್ಲಿ ಹುಟ್ಟಿರುವವರೂ ಭರಿಸಬೇಕಾಗುತ್ತದೆ ಎಂದು ವಿಕ್ರಮಸಿಂಘೆ ತಿಳಿಸಿದ್ದಾರೆ.