Tag: ಏರ್ ಇಂಡಿಯಾ

  • ಏರ್‌ ಇಂಡಿಯಾ 4,000 ಕೋಟಿ ನಷ್ಟ ಅನುಭವಿಸಲು ಪಾಕಿಸ್ತಾನ ಕಾರಣ – ಸಿಇಒ ಸ್ಪೋಟಕ ಮಾಹಿತಿ

    ಏರ್‌ ಇಂಡಿಯಾ 4,000 ಕೋಟಿ ನಷ್ಟ ಅನುಭವಿಸಲು ಪಾಕಿಸ್ತಾನ ಕಾರಣ – ಸಿಇಒ ಸ್ಪೋಟಕ ಮಾಹಿತಿ

    ನವದೆಹಲಿ: ಏರ್‌ ಇಂಡಿಯಾ (Air India) ಸಂಸ್ಥೆ 4,000 ಕೋಟಿಗೂ ಅಧಿಕ ನಷ್ಟ ಅನುಭವಿಸಲು ಪಾಕಿಸ್ತಾನ ಕಾರಣ ಎಂದು ಏರ್ ಇಂಡಿಯಾ ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ (Campbell Wilson) ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

    ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪಹಲ್ಗಾಮ್‌ ಭಯೋತ್ಪಾದಕ ದಾಳಿ (Pahalgam Attack) ಬಳಿಕ ಎರಡೂ ರಾಷ್ಟ್ರಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಇದರಿಂದ ಭಾರತ ಮತ್ತು ಪಾಕಿಸ್ತಾನ ಪರಸ್ಪರ ತಮ್ಮ ವಾಯುಪ್ರದೇಶವನ್ನು ಮುಚ್ಚಿದವು. ಇದು ಭಾರತೀಯ ವಿಮಾನಯಾನ ಸಂಸ್ಥೆಗಳ ಮೇಲೆ ಗಮನಾರ್ಹ ಪರಿಣಾಮ ಬೀರಿತು. ಏರ್‌ ಇಂಡಿಯಾ ಒಂದೇ ಸಂಸ್ಥೆ ಸುಮಾರು 4,000 ಕೋಟಿ ರೂ.ಗೂ ಹೆಚ್ಚು ನಷ್ಟ ಅನುಭವಿಸಿತು ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಮೋದಿ ಮತಕ್ಕಾಗಿ ಡ್ಯಾನ್ಸ್ & ಡ್ರಾಮಾ, ಬೇಕಿದ್ರೆ ಭರತನಾಟ್ಯನೂ ಮಾಡ್ತಾರೆ – ರಾಹುಲ್‌ ಗಾಂಧಿ ಲೇವಡಿ

    ಸಂಘರ್ಷದ ಬಳಿಕ ಪಾಕಿಸ್ತಾನ ತನ್ನ ವಾಯುಸೀಮೆಯನ್ನು (Pakistans Airspace) ನಿರಂತರವಾಗಿ ಮುಚ್ಚಿತು. ಇದರಿಂದ ಏರ್‌ ಇಂಡಿಯಾ ಸಂಸ್ಥೆ ನಿರಂತರ ನಷ್ಟ ಅನುಭವಿಸಿತು. ಏಕೆಂದ್ರೆ ಪಹಲ್ಗಾಮ್‌ ದಾಳಿ ಬಳಿಕ ಏರ್‌ ಇಂಡಿಯಾ ಹಲವಾರು ಅಂತಾರಾಷ್ಟ್ರೀಯ ವಿಮಾನಗಳ ಮಾರ್ಗಗಳನ್ನ ಬದಲಾಯಿಸಬೇಕಾಯಿತು. ಇದರಿಂದ ಕಾರ್ಯಾಚರಣೆಯ ವೆಚ್ಚ ಹೆಚ್ಚಾಯಿತು. ಇದೆಲ್ಲ ಕಾರಣಗಳಿಂದ ವಿಮಾನಯಾನ ಸಂಸ್ಥೆ ನಷ್ಟ ಅನುಭವಿಸಬೇಕಾಯ್ತು ಎಂದ ತಿಳಿಸಿದ್ರು. ಇದನ್ನೂ ಓದಿ: 10 ಮುಸ್ಲಿಂ ಯುವತಿಯರನ್ನು ಕರೆತಂದು ಹಿಂದೂ ಯುವಕರು ಮದುವೆಯಾಗಿ: ಬಿಜೆಪಿ ಮಾಜಿ ಶಾಸಕ ವಿವಾದಾತ್ಮಕ ಹೇಳಿಕೆ

    ಈ ಅವಧಿಯಲ್ಲಿ ಯುರೋಪ್‌ ಮತ್ತು ಯುನೈಟೆಡ್‌ ಸ್ಟೇಸ್ಟ್‌ಗೆ ಹೋಗುವ ಮಾರ್ಗಗಳು ಹೆಚ್ಚು ಪರಿಣಾಮ ಬೀರಿತು. ಈ ಮಾರ್ಗಗಳಲ್ಲಿ ಬದಲಾವಣೆ ಮಾಡಿದ್ದರಿಂದ 60 ರಿಂದ 90 ನಿಮಿಷಗಳ ಪ್ರಯಾಣ ಸಮಯ ಹೆಚ್ಚಾಯಿತು. ಜೊತೆಗೆ ಸಿಬ್ಬಂದಿ ಖರ್ಚು ಹೆಚ್ಚಾಯ್ತು ಎಂದು ವಿವರಿಸಿದ್ರು. ಇದನ್ನೂ ಓದಿ:  ಅಯೋಧ್ಯೆ ರಾಮಮಂದಿರಕ್ಕೆ 3 ಸಾವಿರ ಕೋಟಿ ದೇಣಿಗೆ; 1500 ಕೋಟಿ ರೂ. ಖರ್ಚು

    ಪಹಲ್ಗಾಮ್‌ನಲ್ಲಿ ಹರಿಯಿತು ನೆತ್ತರು
    ಏಪ್ರಿಲ್ 22ರಂದು ಶ್ರೀನಗರದ ಪಹಲ್ಗಾಮ್‌ನಲ್ಲಿರುವ ಬೈಸರನ್ ಕಣಿವೆಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಹಾಜರಿದ್ದರು. ಹಠಾತ್ ಭಯೋತ್ಪಾದಕ ದಾಳಿಯ ಸಮಯದಲ್ಲಿ, 26 ಜನರು ಸಾವನ್ನಪ್ಪಿದರು ಮತ್ತು ಗುಂಡಿನ ದಾಳಿಯಲ್ಲಿ 17 ಜನರು ಗಾಯಗೊಂಡರು. 370ನೇ ವಿಧಿ ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ಇದಾಗಿತ್ತು. ಟಿಆರ್‌ಎಫ್‌ ಸಂಘಟನೆ ಇದರ ಹೊಣೆ ಹೊತ್ತುಕೊಂಡಿತ್ತು.

  • Air India Plane Crash | ಪೈಲಟ್ ಕಡೆಯಿಂದ ಲೋಪ ಎಂಬ ಆರೋಪ ಬೇಜವಾಬ್ದಾರಿ ಎಂದ ಸುಪ್ರೀಂ

    Air India Plane Crash | ಪೈಲಟ್ ಕಡೆಯಿಂದ ಲೋಪ ಎಂಬ ಆರೋಪ ಬೇಜವಾಬ್ದಾರಿ ಎಂದ ಸುಪ್ರೀಂ

    – ಪ್ರಾಥಮಿಕ ತನಿಖಾ ವರದಿಯ ಕೆಲ ಅಂಶಗಳಿಗೆ ಸುಪ್ರೀಂ ಕೋರ್ಟ್ ಆಕ್ಷೇಪ
    – ಕೇಂದ್ರ ಮತ್ತು ಡಿಜಿಸಿಎ ಪ್ರತಿಕ್ರಿಯೆ ಕೇಳಿದ ಕೋರ್ಟ್

    ನವದೆಹಲಿ: ಜೂನ್ 12 ರಂದು ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತ (Air India Plane Crash)ದ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಸಲ್ಲಿಸಿದ ಪ್ರಾಥಮಿಕ ವರದಿಯ ಕೆಲವು ಅಂಶಗಳ ಬಗ್ಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

    ದುರಂತದ ಬಗ್ಗೆ ಸ್ವತಂತ್ರ, ನ್ಯಾಯಯುತ ಮತ್ತು ಕಾಲಮಿತಿಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಕೇಂದ್ರ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA)ಗೆ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: Air India Crash | 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಆಗದಿದ್ದೇ ದುರಂತಕ್ಕೆ ಕಾರಣ – AAIB ಪ್ರಾಥಮಿಕ ವರದಿ ಬಹಿರಂಗ

    ಜುಲೈ 12 ರಂದು ಬಿಡುಗಡೆಯಾದ AAIB ಪ್ರಾಥಮಿಕ ವರದಿಯು ಪೈಲಟ್‌ಗಳ (Pilots) ಕಡೆಯಿಂದ ಲೋಪಗಳನ್ನು ಸೂಚಿಸಿದೆ ಎಂಬುದನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರಿದ್ದ ದ್ವಿಸದಸ್ಯ ಪೀಠವು ಗಮನಿಸಿತು. ಈ ಅಂಶಗಳು ದುರದೃಷ್ಟಕರ, ಬೇಜವಾಬ್ದಾರಿ ಎಂದ ಪೀಠ ಈ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿತು.

    ಈ ವರದಿಯ ಉಲ್ಲೇಖಗಳನ್ನು ಪ್ರಶ್ನಿಸಿ ವಿಮಾನಯಾನ ಸುರಕ್ಷತೆ ಎನ್‌ಜಿಒ ಸೇಫ್ಟಿ ಮ್ಯಾಟರ್ಸ್ ಫೌಂಡೇಶನ್, ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಹೂಡಿತ್ತು. ಇಂಧನ-ಸ್ವಿಚ್ ದೋಷಗಳು ಮತ್ತು ವಿದ್ಯುತ್ ದೋಷಗಳಂತಹ ವ್ಯವಸ್ಥಿತ ವೈಪರೀತ್ಯಗಳನ್ನು ಕಡಿಮೆ ಮಾಡಿ, ಪೈಲಟ್ ದೋಷದ ನಿರೂಪಣೆ ಮಾಡಲಾಗಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಟೀಕಿಸಲಾಗಿತ್ತು. ಅಂತಾರಾಷ್ಟ್ರೀಯ ಪೈಲಟ್‌ ಒಕ್ಕೂಟ ಕೂಡ ಪ್ರಾಥಮಿಕ ತನಿಖಾ ವರದಿಯನ್ನು ಪ್ರಶ್ನಿಸಿತ್ತು.

    ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಅಪಘಾತ ಸಂಭವಿಸಿ 100ಕ್ಕೂ ಹೆಚ್ಚು ದಿನಗಳು ಕಳೆದಿದೆ. ಆದರೆ ಇದುವರೆಗೂ ಕೇವಲ ಪ್ರಾಥಮಿಕ ವರದಿಯನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಅಲ್ಲದೇ ವರದಿಯಲ್ಲಿ ಯಾವುದೇ ಅಪಘಾತಕ್ಕೆ ನಿಖರ ಕಾರಣ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಉಲ್ಲೇಖ ಇರದಿರುವುದರಿಂದ, ಬೋಯಿಂಗ್ ವಿಮಾನಗಳಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ಇಂದು ಅಪಾಯದಲ್ಲಿದ್ದಾರೆ ಎಂದು ವಾದಿಸಿದರು. ಇದನ್ನೂ ಓದಿ: Air India Crash | ವಿಮಾನ ದುರಂತಕ್ಕೂ ಮುನ್ನವೇ ಏರ್‌ ಇಂಡಿಯಾಕ್ಕೆ ಎಚ್ಚರಿಕೆ ನೀಡಿತ್ತು ಅಮೆರಿಕ

    ಅಪಘಾತದ ತನಿಖೆಗಾಗಿ ರಚಿಸಲಾದ ಐವರು ಸದಸ್ಯರ ತಂಡವು, ವಾಯುಯಾನ ನಿಯಂತ್ರಕ ಡಿಜಿಸಿಎಯ ಮೂವರು ಸದಸ್ಯರನ್ನು ಹೊಂದಿದ್ದು, ಗಂಭೀರ ಹಿತಾಸಕ್ತಿ ಸಂಘರ್ಷವನ್ನು ಸೃಷ್ಟಿಸುತ್ತದೆ. ಅಪಘಾತಕ್ಕೆ ಯಾವ ಸಂಸ್ಥೆಯನ್ನು ಪ್ರಶ್ನಿಸಲಾಗುತ್ತಿದೆಯೋ ಅದೇ ಸಂಸ್ಥೆಯ ಸದಸ್ಯರು ಹೇಗೆ ತನಿಖೆ ನಡೆಸಲು ಸಾಧ್ಯ? ಎಂದು ಪ್ರಶ್ನಿಸಿದರಲ್ಲದೇ ಅಪಘಾತದ ನಿಜವಾದ ಕಾರಣ ಸ್ಪಷ್ಟಪಡಿಸಲು ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್ ನಿಂದ ಡೇಟಾವನ್ನು ಪಡೆಯಲು ಭೂಷಣ್ ಕೋರಿದರು.

    ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು, ಅರ್ಜಿದಾರರ ವಾದ ಪುರಸ್ಕರಿಸಿತಾದರೂ, ಪ್ರಾಥಮಿಕ ತನಿಖೆಯ ಎಲ್ಲಾ ವರದಿಗಳನ್ನು ಸಾರ್ವಜನಿಕಗೊಳಿಸಿವುರಿಂದ ತನಿಖೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿತು. ಆದ್ರೆ ಅಪಘಾತಕ್ಕೆ ಪೈಲಟ್‌ ದೋಷ ನಿರೂಪಣೆಯನ್ನು ದ್ವಿಸದಸ್ಯ ಪೀಠ ದುರದೃಷ್ಟಕರ ಎಂದು ಬಣ್ಣಿಸಿತು.

    ಅಲ್ಲದೇ ಕೆಲವು ಮಾಹಿತಿಯನ್ನು ಪ್ರತಿಸ್ಪರ್ಧಿ ವಿಮಾನಯಾನ ಸಂಸ್ಥೆಗಳು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಗಮನಿಸಿದ ಪೀಠವು ಡಿಜಿಸಿಎ ಪ್ರತಿಕ್ರಿಯೆ ಕೇಳಿ ನೋಟಿಸ್‌ ಜಾರಿಗೊಳಿಸಲು ಸೂಚನೆ ನೀಡಿತು. ಇದನ್ನೂ ಓದಿ: Air India Plane crash | ಡೇಟಾ ರಿಕವರಿಗಾಗಿ ಬ್ಲ್ಯಾಕ್‌ ಬಾಕ್ಸ್ ಅಮೆರಿಕಕ್ಕೆ ರವಾನೆ

  • ಮಗನ ಪ್ರತಿಷ್ಠೆಗೆ ಧಕ್ಕೆ| ವಿಮಾನ ದುರಂತದ ಬಗ್ಗೆ ಮತ್ತೊಂದು ತನಿಖೆ ಮಾಡಿ: ಕ್ಯಾಪ್ಟನ್‌ ತಂದೆ ಒತ್ತಾಯ

    ಮಗನ ಪ್ರತಿಷ್ಠೆಗೆ ಧಕ್ಕೆ| ವಿಮಾನ ದುರಂತದ ಬಗ್ಗೆ ಮತ್ತೊಂದು ತನಿಖೆ ಮಾಡಿ: ಕ್ಯಾಪ್ಟನ್‌ ತಂದೆ ಒತ್ತಾಯ

    ಮುಂಬೈ: ಅಹಮದಾಬಾದ್‌ ಏರ್‌ ಇಂಡಿಯಾ (Air India) ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವೇ ಮತ್ತೊಂದು ತನಿಖೆ ನಡೆಸಬೇಕೆಂದು ಮೃತ ಪೈಲಟ್‌ ಕ್ಯಾಪ್ಟನ್ ಸುಮೀತ್ ಸಭರ್ವಾಲ್ (Captain Sumeet Sabharwal) ಅವರ ತಂದೆ ಪುಷ್ಕರಾಜ್ ಸಭರ್ವಾಲ್ ಒತ್ತಾಯಿಸಿದ್ದಾರೆ.

    ವಿಮಾನ ದುರಂತದ ಬಗ್ಗೆ ತನಿಖೆ ನಡೆಸಿದ ವಿಮಾನ ಅಪಘಾತ ತನಿಖಾ ಬ್ಯೂರೊದ (AAIB) ವರದಿ ಸೋರಿಕೆಯಾದ ಬೆನ್ನಲ್ಲೇ ನಾಗರಿಕ ವಿಮಾನಯಾನ ಕಾರ್ಯದರ್ಶಿ ಮತ್ತು AAIB ಮಹಾನಿರ್ದೇಶಕರಿಗೆ 91 ವರ್ಷದ ಪುಷ್ಕರಾಜ್ ಸಭರ್ವಾಲ್ ಪತ್ರ ಬರೆದಿದ್ದಾರೆ.

    ನನ್ನ 56 ವರ್ಷದ ಪುತ್ರ ಮಾನಸಿಕ ಒತ್ತಡದಲ್ಲಿದ್ದ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸುತ್ತಿದ್ದ ಎಂಬ ಅಂಶಗಳು ಸೋರಿಕೆಯಾಗಿದ್ದು ಇದು ಹಲವು ಉಹಾಪೋಹಗಳಿಗೆ ಕಾರಣವಾಗಿದೆ. ವರದಿ ಸೋರಿಕೆಯಿಂದ ನನ್ನ ಮಗನ ಪ್ರತಿಷ್ಠೆಗೆ ಧಕ್ಕೆಯಾಗಿದ್ದು ಕೇಂದ್ರ ಸರ್ಕಾರ ಮತ್ತೊಂದು ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

    ಸಭರ್ವಾಲ್ ಸುಮಾರು 15 ವರ್ಷಗಳ ಹಿಂದೆ ವಿಚ್ಛೇದನ ಪಡೆದಿದ್ದರೆ ತಾಯಿ 3 ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಈ ಎರಡು ಘಟನೆ ನಡೆದ ಬಳಿಕವೂ ಪುತ್ರ ಅಪಘಾತವಿಲ್ಲದೆ 100 ಕ್ಕೂ ಹೆಚ್ಚು ವಿಮಾನಗಳನ್ನು ನಿರ್ವಹಿಸಿದ್ದಾನೆ ಮತ್ತು ಯಾವುದೇ ಅಪಘಾತವನ್ನು ಮಾಡಿಲ್ಲ. ವಿಮಾನ ಹಾರಾಟ ಅನುಭವದಲ್ಲಿ ಉತ್ತಮ ಟ್ರ್ಯಾಕ್‌ ರೆಕಾರ್ಡ್‌ ಹೊಂದಿದ್ದಾನೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ:  ಏರ್‌ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು

    ಏರ್ ಇಂಡಿಯಾದ ಬೋಯಿಂಗ್ 787-8 ವಿಮಾನವು ಜೂನ್ 12 ರಂದು ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ಹೋಗಲು ಟೇಕಾಫ್‌ ಆಗಿತ್ತು. ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡು ಸಮೀಪದದಲ್ಲಿದ್ದ ಮೆಡಿಕಲ್‌ ಕಾಲೇಜ್‌ ಹಾಸ್ಟೆಲಿನ ಮೆಸ್‌ ಮೇಲೆ ಬಿದ್ದಿತ್ತು. ಪರಿಣಾಮ ವಿಮಾನದಲ್ಲಿದ್ದ 241 ಪ್ರಯಾಣಿಕರು ಸೇರಿದಂತೆ ಒಟ್ಟು 260 ಜನರು ಮೃತಪಟ್ಟಿದ್ದರು.

    ನಿಯಮ 12 ರ ಅಡಿಯಲ್ಲಿ ಕೇಂದ್ರ ಸರ್ಕಾರವು ಯಾವುದೇ ಭಾರತೀಯ-ನೋಂದಾಯಿತ ವಿಮಾನ ಅಪಘಾತದ ತನಿಖೆ ಅಗತ್ಯವೆಂದು ಭಾವಿಸಿದರೆ ಅದರ ಔಪಚಾರಿಕ ತನಿಖೆಗೆ ಆದೇಶಿಸಬಹುದು. ಈ ಪತ್ರದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ವಿಮಾನ ಅಪಘಾತ ತನಿಖಾ ಬ್ಯೂರೋದಿಂದ ತಕ್ಷಣದ ಯಾವುದೇ ಪ್ರತಿಕ್ರಿಯೆಗಳು ಬಂದಿಲ್ಲ.

    ತನ್ನ ಪ್ರಾಥಮಿಕ ವರದಿಯನ್ನು ಜುಲೈ 12 ರಂದು ಬಿಡುಗಡೆ ಮಾಡಿದ ನಂತರ AAIB ದುರಂತಕ್ಕೆ ಯಾವುದೇ ನಿರ್ದಿಷ್ಟ ಕಾರಣ ನೀಡಿರಲಿಲ್ಲ. ತನಿಖೆ ಮುಂದುವರಿದಿದೆ ಎಂದಷ್ಟೇ ಹೇಳಿತ್ತು.

  • ಏರ್‌ ಇಂಡಿಯಾ ಮುಂಬೈ-ಜೋಧ್‌ಪುರ ವಿಮಾನ ರನ್‌ವೇಯಲ್ಲೇ ಸ್ಟಾಪ್ ಮಾಡಿದ ಪೈಲಟ್

    ಏರ್‌ ಇಂಡಿಯಾ ಮುಂಬೈ-ಜೋಧ್‌ಪುರ ವಿಮಾನ ರನ್‌ವೇಯಲ್ಲೇ ಸ್ಟಾಪ್ ಮಾಡಿದ ಪೈಲಟ್

    – ವಿಮಾನ ಟೇಕಾಫ್‌ಗೆ ಸಿದ್ಧವಾಗಿತ್ತು; ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಮತ್ತೆ ಏರ್‌ಪೋರ್ಟ್ ಬೇ ಗೆ ವಾಪಸ್

    ಮುಂಬೈ: ಮುಂಬೈನಿಂದ ಜೋಧ್‌ಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ (Air India) ವಿಮಾನ AI645 ಟೇಕಾಫ್‌ ವೇಳೆಯೇ ತಾಂತ್ರಿಕ ಸಮಸ್ಯೆಯಿಂದಾಗಿ ರನ್‌ವೇಯಲ್ಲೇ ನಿಂತಿತು.

    ಮುಂಬೈ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ವಿಮಾನವು ಬೆಳಗ್ಗೆ 9:25ಕ್ಕೆ ಟೇಕಾಫ್‌ಗೆ ಸಿದ್ಧವಾಗಿತ್ತು. ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮತ್ತೆ ಏರ್‌ಪೋರ್ಟ್‌ ಬೇ ಗೆ ವಾಪಸ್‌ ಆಯಿತು. ಇದರಿಂದಾಗಿ ಅನಿರೀಕ್ಷಿತ ನಿಲುಗಡೆ ಉಂಟಾಯಿತು. ಇದನ್ನೂ ಓದಿ: ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

    ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ ಗೇಟ್‌ಗೆ ಹಿಂತಿರುಗುವಂತೆ ಮಾಡಲಾಯಿತು. ಸ್ವಲ್ಪ ಸಮಯದ ನಂತರ, ಪ್ರಯಾಣಿಕರನ್ನು ಮತ್ತೆ ಹತ್ತಲು ಹೇಳಲಾಯಿತು. ಆದಾಗ್ಯೂ, ಅವರು ಅದೇ ವಿಮಾನವನ್ನು ಮರು ಹತ್ತಿದ್ದಾರೆಯೇ ಅಥವಾ ಬೇರೆ ವಿಮಾನವನ್ನು ಹತ್ತಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

    ಮತ್ತೊಂದು ಘಟನೆಯಲ್ಲಿ, ಆಗಸ್ಟ್ 16 ರಂದು ಮಿಲನ್‌ನಿಂದ ದೆಹಲಿಗೆ ನಿಗದಿಯಾಗಿದ್ದ ಮತ್ತೊಂದು ಏರ್ ಇಂಡಿಯಾ ವಿಮಾನವನ್ನು ತಾಂತ್ರಿಕ ಸಮಸ್ಯೆ ಕಾರಣ ರದ್ದುಗೊಳಿಸಲಾಯಿತು. ವಿಮಾನ ಹಾರಾಟದ ಸಮಯದಲ್ಲಿ ನಿರ್ವಹಣಾ ಸಮಸ್ಯೆ ಕಂಡುಬಂದ ನಂತರ AI138 ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಸಂಸತ್‌ ಭವನದಲ್ಲಿ ಮತ್ತೆ ಭದ್ರತಾ ವೈಫಲ್ಯ – ಗೋಡೆ ಹಾರಿ ಆವರಣಕ್ಕೆ ಎಂಟ್ರಿ

    ಅನಿರೀಕ್ಷಿತ ರದ್ದತಿಯಿಂದ ಉಂಟಾದ ಅನಾನುಕೂಲತೆಗಾಗಿ ಏರ್‌ ಇಂಡಿಯಾ ವಕ್ತಾರರು ಹೇಳಿಕೆಯಲ್ಲಿ ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದ್ದಾರೆ.

  • ಕೋಲ್ಕತ್ತಾಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ; ಬೆಂಗಳೂರಿಗೆ ಮರಳಿದ ಏರ್‌ ಇಂಡಿಯಾ

    ಕೋಲ್ಕತ್ತಾಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ; ಬೆಂಗಳೂರಿಗೆ ಮರಳಿದ ಏರ್‌ ಇಂಡಿಯಾ

    ಬೆಂಗಳೂರು: ಬೆಂಗಳೂರಿನಿಂದ ಕೋಲ್ಕತ್ತಾಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಭಾನುವಾರ ರಾತ್ರಿ ಹೈಡ್ರಾಲಿಕ್ ವೈಫಲ್ಯದಿಂದಾಗಿ ಮಧ್ಯದಲ್ಲೇ ಹಿಂತಿರುಗಬೇಕಾಯಿತು ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

    ಬೆಂಗಳೂರು-ಕೋಲ್ಕತ್ತಾ ಮಾರ್ಗದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ (ವಿಮಾನ IX 2718)ದಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ತಾಂತ್ರಿಕ ದೋಷ ಕಾಣಿಸಿಕೊಂಡಿತು. ಈ ಬಗ್ಗೆ ವರದಿ ಮಾಡಿ, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ.

    ಕೆಐಎಯಿಂದ ಸಂಜೆ 7:05 ಕ್ಕೆ ಹೊರಡಬೇಕಿದ್ದ ವಿಮಾನವು ಸಂಜೆ 7:16 ಕ್ಕೆ ಹೊರಟು 9:19 ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ.

  • ಏರ್‌ ಇಂಡಿಯಾ ವಿಮಾನ ಪತನವಾದ 4 ದಿನದ ಬಳಿಕ ಸಿಕ್‌ ಲೀವ್‌ ಹಾಕಿದ್ರು 100ಕ್ಕೂ ಹೆಚ್ಚು ಪೈಲಟ್‌ಗಳು

    ಏರ್‌ ಇಂಡಿಯಾ ವಿಮಾನ ಪತನವಾದ 4 ದಿನದ ಬಳಿಕ ಸಿಕ್‌ ಲೀವ್‌ ಹಾಕಿದ್ರು 100ಕ್ಕೂ ಹೆಚ್ಚು ಪೈಲಟ್‌ಗಳು

    ನವದೆಹಲಿ: ಅಹಮಾದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನವಾವಾದ (Air India Plane Crash) 4 ದಿನದಲ್ಲಿ 100ಕ್ಕೂ ಹೆಚ್ಚು ಏರ್‌ ಇಂಡಿಯಾ ಪೈಲಟ್‌ಗಳು (Pilots) ಅನಾರೋಗ್ಯ (Sick Leave) ಕಾರಣಕ್ಕೆ ರಜೆ ತೆಗೆದುಕೊಂಡಿದ್ದರು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ವಿಮಾನಯಾನ ಖಾತೆಯ ರಾಜ್ಯ ಸಚಿವ ಮುರಳೀಧರ್ ಮೊಹೋಲ್, ಆ ದಿನ 51 ಕಮಾಂಡರ್‌ಗಳು ಮತ್ತು 61 ಫ್ಲೈಟ್ ಆಫೀಸರ್‌ಗಳು ಸಿಕ್‌ ಲೀವ್‌ ಪಡೆಯಲು ಮನವಿ ಮಾಡಿದ್ದರು ಎಂದು ಹೇಳಿದ್ದಾರೆ.

    ವಿಮಾನ ಹಾರಿಸುವ ಮುನ್ನ ಮಾನಸಿಕ ಆರೋಗ್ಯವನ್ನು ಪೈಲಟ್‌ಗಳು ಹೊಂದಿರಬೇಕೆಂದು ಫೆಬ್ರವರಿ 2023 ರಲ್ಲಿ ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಲಾಗಿದೆ. ವಿಮಾನ ಸಿಬ್ಬಂದಿ ಮತ್ತು ವಾಯು ಸಂಚಾರ ನಿಯಂತ್ರಕರಿಗೆ ಸಂಭಾವ್ಯ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಿರ್ವಹಿಸಲು ಆನ್‌ಲೈನ್‌ ಮೂಲಕ ತರಬೇತಿ ನೀಡುವಂತೆ  ಸೂಚಿಸಲಾಗಿದೆ.  ಇದನ್ನೂ ಓದಿ: 3,000 ಕೋಟಿ ಸಾಲ ವಂಚನೆ ಕೇಸ್‌ – ಅನಿಲ್‌ ಅಂಬಾನಿಗೆ ಸೇರಿದ 50 ಕಂಪನಿಗಳ ಮೇಲೆ ED ದಾಳಿ

    ಸಿಬ್ಬಂದಿ ಆಯಾಸ ಮತ್ತು ತರಬೇತಿಗೆ ಸಂಬಂಧಿಸಿದ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಏರ್‌ ಇಂಡಿಯಾಗೆ ನಾಲ್ಕು ಶೋ-ಕಾಸ್ ನೋಟಿಸ್‌ಗಳನ್ನು ಕಳುಹಿಸಿದೆ. ಕಳೆದ ಆರು ತಿಂಗಳಲ್ಲಿ ಬಹು ಸುರಕ್ಷತಾ ಉಲ್ಲಂಘನೆ ಮತ್ತು ಘಟನೆಗಳಿಗಾಗಿ ಏರ್‌ ಇಂಡಿಯಾ 13 ನೋಟಿಸ್‌ಗಳನ್ನು ಸ್ವೀಕರಿಸಿದೆ.

    ಜೂನ್‌ 12 ರಂದು ಅಹಮದಾಬಾದ್‌ನಿಂದ ಲಂಡನ್‌ನ ಗಾಟ್ವಿಕ್‌ ವಿಮಾನ ನಿಲ್ದಾಣಕ್ಕೆ ಏರ್‌ಇಂಡಿಯಾ ಬೋಯಿಂಗ್‌ 787 ಟೇಕಾಫ್‌ ಆಗಿತ್ತು. ಟೇಕಾಫ್‌ ಆದ ಕೆಲ ನಿಮಿಷದಲ್ಲಿ ಪತನಗೊಂಡು ಏರ್‌ ಪೋರ್ಟ್‌ ಸಮಿಪದಲ್ಲಿದ್ದ ಮೆಡಿಕಲ್‌ ಕಾಲೇಜ್‌ ಹಾಸ್ಟೆಲ್‌ ಮೇಲೆ ಬಿದ್ದಿತ್ತು. ಪರಿಣಾಮ 241 ಮಂದಿ ಮೃತಪಟ್ಟರೆ ಒಬ್ಬರು ಪವಾಡಸದೃಶವಾಗಿ ಪಾರಾಗಿದ್ದರು.

  • ದೆಹಲಿಯಲ್ಲಿ ಲ್ಯಾಂಡಿಂಗ್‌ ವೇಳೆ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ – ಪ್ರಯಾಣಿಕರು ಸೇಫ್

    ದೆಹಲಿಯಲ್ಲಿ ಲ್ಯಾಂಡಿಂಗ್‌ ವೇಳೆ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ – ಪ್ರಯಾಣಿಕರು ಸೇಫ್

    ನವದೆಹಲಿ: ಹಾಂಕಾಂಗ್‌ನಿಂದ (Hong Kong) ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನದಲ್ಲಿ (Air India Flight) ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    AI 315 ವಿಮಾನ ಮಂಗಳವಾರ ಮಧ್ಯಾಹ್ನ 12:12ಕ್ಕೆ ದೆಹಲಿಯಲ್ಲಿ (Delhi) ಲ್ಯಾಂಡ್ ಆಯಿತು. ಹಾರಾಟದ ವೇಳೆ ಯಾವುದೇ ಗಂಭೀರ ಸಮಸ್ಯೆಗಳು ಕಾಣಿಸಿಕೊಂಡಿಲ್ಲ. ಆದರೆ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದಂತೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಆಗಸ್ಟ್‌ನಲ್ಲಿ ಯೆಲ್ಲೋ ಲೈನ್ ಉದ್ಘಾಟನೆ ಸಾಧ್ಯತೆ

    ಪ್ರಯಾಣಿಕರು ವಿಮಾನದಿಂದ ಇಳಿಯುತ್ತಿದ್ದರು, ಈ ವೇಳೆ ವಿಮಾನದ ಒಂದು ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಏರ್‌ಲೈನ್‌ನಲ್ಲಿರುವ ಸ್ವಯಂಚಾಲಿತ ವ್ಯವಸ್ಥೆಯಿಂದಾಗಿ ಆಕ್ಸಿಲರಿ ಪವರ್ ಯೂನಿಟ್ ಬಂದ್ ಆಗಿದೆ. ವಿಮಾನಕ್ಕೆ ಸ್ವಲ್ಪ ಪ್ರಮಾಣದ ಹಾನಿಯಾಗಿದೆ. ಆದರೆ ಪ್ರಯಾಣಿಕರು ಅಷ್ಟು ಹೊತ್ತಿಗಾಗಲೇ ಕೆಳಗೆ ಇಳಿದ ಕಾರಣ ಯಾವುದೇ ಹಾನಿಯಾಗಿಲ್ಲ ಎಂದು ಏರ್ ಇಂಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ಇದನ್ನೂ ಓದಿ: ಹಾವೇರಿ | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಐವರಿಗೆ ಗಾಯ

  • ಮುಂಬೈಯಲ್ಲಿ ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ – ತಪ್ಪಿದ ಭಾರೀ ಅವಘಡ

    ಮುಂಬೈಯಲ್ಲಿ ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ – ತಪ್ಪಿದ ಭಾರೀ ಅವಘಡ

    – ಕೊಚ್ಚಿಯಿಂದ ಮುಂಬೈಗೆ ಆಗಮಿಸಿದ್ದ ವಿಮಾನ

    ಮುಂಬೈ: ಕೊಚ್ಚಿಯಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಭಾರೀ ಮಳೆಯಿಂದಾಗಿ ರನ್‌ವೇನಲ್ಲಿ ಜಾರಿ ಪಕ್ಕದ ಜಮೀನಿಗೆ ಹೋಗಿದ್ದು, ಬಳಿಕ ಪೈಲಟ್‌ನ ಚಾಣಕ್ಷ್ಯತನದಿಂದ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ ಘಟನೆ ಮುಂಬೈ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ.

    ಸೋಮವಾರ ಬೆಳಗ್ಗೆ 7:43ರ ಸುಮಾರಿಗೆ ಕೊಚ್ಚಿಯಿಂದ AI2744 ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗಿತ್ತು. ಅಲ್ಲಿಂದ ಹೊರಟು ಬೆಳಗ್ಗೆ 9:27ಕ್ಕೆ ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ಭಾರೀ ಮಳೆಯಿಂದಾಗಿ ವಿಮಾನವು ರನ್‌ವೇಯಿಂದ ಜರಿದು ಪಕ್ಕದ ಜಮೀನಿಗೆ ಹೋಗಿತ್ತು. ಬಳಿಕ ಪೈಲಟ್‌ನ ಚಾಣಕ್ಷ್ಯತನದಿಂದ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ.ಇದನ್ನೂ ಓದಿ: ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಕಾವೇರಿ ಕುಡಿಯುವ ನೀರು ಪೂರೈಕೆ: ಡಿಕೆಶಿ

    VT-TYA ನೋಂದಣಿಯ ಏರ್‌ಬಸ್ A320ne ವಿಮಾನವನ್ನು ಲ್ಯಾಂಡಿಂಗ್ ವೇಳೆ ಟರ್ಮಿನಲ್‌ಗೆ ಸಂಪರ್ಕಿಸಲಾಗಿದ್ದು, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ. ಯಾವುದೇ ಅವಘಡ ಸಂಭವಿಸಿಲ್ಲ. ಇನ್ನೂ ವಿಮಾನವು ರನ್‌ವೇಯಿಂದ ಜರಿದು ಪಕ್ಕಕ್ಕೆ ಹೋಗಿದ್ದರಿಂದ ನಿಲ್ದಾಣದ ಪ್ರಾಥಮಿಕ ರನ್‌ವೇ 09/27 ಹಾಗೂ ವಿಮಾನದ 3 ಟೈರ್‌ಗಳು ಸ್ಫೋಟಗೊಂಡು ಸಣ್ಣಪುಟ್ಟ ಹಾನಿಯಾಗಿದೆ. ಹೀಗಾಗಿ ಯಾವುದೇ ಅಡಚಣೆಯಿಲ್ಲದೇ ವಿಮಾನಗಳ ಹಾರಾಟಕ್ಕಾಗಿ ಎರಡನೇ ರನ್‌ವೇಯನ್ನು ಬಳಸಲಾಯಿತು.

    ಮುಂಬೈ ವಿಮಾನ ನಿಲ್ದಾಣವು ಎರಡು ಛೇದಿಸುವ ರನ್‌ವೇಗಳನ್ನು ಹೊಂದಿದ್ದು, ಒಂದು ಸಮಯದಲ್ಲಿ ಒಂದು ವಿಮಾನ ಮಾತ್ರ ಕಾರ್ಯನಿರ್ವಹಿಸಬಹುದು. ಜೊತೆಗೆ ಈ ವಿಮಾನ ನಿಲ್ದಾಣವು ವಿಶ್ವದ ಅತ್ಯಂತ ಜನದಟ್ಟಣೆಯಿಂದ ಕೂಡಿರುವ ಒಂದೇ ರನ್‌ವೇ ಕಾರ್ಯಾಚರಣೆ ಮಾಡುವ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ.

    ಮುಂಬೈನಲ್ಲಿ ನಿರಂತರ ಮಳೆಯಾಗುತ್ತಿರುವುದು ಈ ಅವಘಡಕ್ಕೆ ಕಾರಣವಾಗಿದೆ. ಸೋಮವಾರ ಬೆಳಿಗ್ಗೆ, ಮುಂಬೈ ಉಪನಗರಗಳಲ್ಲಿ 115 ಮಿ.ಮೀ ಮಳೆಯಾಗಿದ್ದರೆ, ಕೊಲಾಬಾದಲ್ಲಿ ಕೇವಲ 11 ಮಿ.ಮೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.ಇದನ್ನೂ ಓದಿ: ಇನ್ಮುಂದೆ ಉಪ್ಪಿ ʻನೆಕ್ಸ್ಟ್‌ ಲೆವೆಲ್‌ʼ – ಸದ್ದಿಲ್ಲದೇ ಸೆಟ್ಟೇರುತ್ತಿದೆ ಹೊಸ ಸಿನಿಮಾ

  • ಟೇಕಾಫ್ ಆಗಿ 16 ನಿಮಿಷಕ್ಕೆ ಲ್ಯಾಂಡ್ ಆಯ್ತು ಏರ್ ಇಂಡಿಯಾ ವಿಮಾನ

    ಟೇಕಾಫ್ ಆಗಿ 16 ನಿಮಿಷಕ್ಕೆ ಲ್ಯಾಂಡ್ ಆಯ್ತು ಏರ್ ಇಂಡಿಯಾ ವಿಮಾನ

    ಹೈದರಾಬಾದ್: ಇಲ್ಲಿನ ಫುಕೆಟ್‌ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ (IX 110) ತಾಂತ್ರಿಕ ದೋಷದಿಂದಾಗಿ ಟೇಕಾಫ್‌ ಆಗಿ 16 ನಿಮಿಷಕ್ಕೆ ಲ್ಯಾಂಡ್‌ ಆಗಿದೆ.

    98 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬೋಯಿಂಗ್ 737 ಮ್ಯಾಕ್ಸ್ 8 ವಿಮಾನ ಬೆಳಗ್ಗೆ 6:57 ಕ್ಕೆ ಸುರಕ್ಷಿತವಾಗಿ ವಾಪಸ್ ಬಂದಿಳಿದಿದೆ. ನಮ್ಮ ವಿಮಾನಗಳಲ್ಲಿ ಒಂದು ತಾಂತ್ರಿಕ ಸಮಸ್ಯೆಯಿಂದಾಗಿ ಟೇಕಾಫ್‌ ಆದ ಸ್ವಲ್ಪ ಸಮಯದ ನಂತರ ಹೈದರಾಬಾದ್‌ಗೆ ಹಿಂತಿರುಗಿತು. ಸಿಬ್ಬಂದಿ ಹೆಚ್ಚಿನ ಎಚ್ಚರಿಕೆಯಿಂದ ಹಿಂತಿರುಗಲು ನಿರ್ಧರಿಸಿದರು ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಪರ್ಯಾಯ ವಿಮಾನ ವ್ಯವಸ್ಥೆ ಮಾಡಲಾಗಿದ್ದು, ವಿಮಾನವು ಅಲ್ಲಿಂದ ಹೊರಟಿದೆ. ವಿಳಂಬದ ಸಮಯದಲ್ಲಿ ಪ್ರಯಾಣಿಕರಿಗೆ ಉಪಹಾರ ಒದಗಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

    ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ. ನಮ್ಮ ಕಾರ್ಯಾಚರಣೆಯ ಪ್ರತಿಯೊಂದು ಅಂಶದಲ್ಲೂ ಸುರಕ್ಷತೆ ಪ್ರಮುಖ ಆದ್ಯತೆಯಾಗಿದೆ ಎಂದು ಪುನರುಚ್ಚರಿಸುತ್ತೇವೆ ಎಂದು ಏರ್‌ ಇಂಡಿಯಾ ತಿಳಿಸಿದೆ.

    ವಿಮಾನವು ಬೆಳಗ್ಗೆ 6:40 ಕ್ಕೆ ಹೊರಟಿತು. ಆದರೆ, ಹೈದರಾಬಾದ್ ವಿಮಾನ ನಿಲ್ದಾಣದಿಂದ ಹೊರಟ ಕೆಲವು ನಿಮಿಷಗಳ ನಂತರ ಮತ್ತೆ ಇಳಿಯಿತು. ಅದು ಮಧ್ಯಾಹ್ನ 1:26 ಕ್ಕೆ ಫುಕೆಟ್‌ಗೆ ಮತ್ತೆ ಹೊರಟಿತು.

  • ಏರ್‌ ಇಂಡಿಯಾ ದುರಂತಕ್ಕೆ ಪೈಲಟ್ ಕಾರಣನಾ? – ಅಮೆರಿಕ ವರದಿಯಿಂದ ಗೊಂದಲ; ಪ್ರತಿಕ್ರಿಯೆಗೆ ಕೇಂದ್ರ ನಕಾರ

    ಏರ್‌ ಇಂಡಿಯಾ ದುರಂತಕ್ಕೆ ಪೈಲಟ್ ಕಾರಣನಾ? – ಅಮೆರಿಕ ವರದಿಯಿಂದ ಗೊಂದಲ; ಪ್ರತಿಕ್ರಿಯೆಗೆ ಕೇಂದ್ರ ನಕಾರ

    ಅಹ್ಮದಾಬಾದ್: ಇಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತ (Air India Plane Crash) ಹೇಗಾಯ್ತು ಅನ್ನೋ ಗೊಂದಲ ಮುಂದುವರಿದಿದೆ. ಈ ಮಧ್ಯೆ ಅಮೆರಿಕದ ವಾಲ್‌ಸ್ಟ್ರೀಟ್‌ ಜರ್ನಲ್, 260 ಜನರ ಸಾವಿಗೆ ಕಾರಣವಾದ ಅಂಶ ವರದಿ ಮಾಡಿದೆ.

    ಟೇಕಾಫ್ ಆಗಿದ್ದ ವಿಮಾನದ ಇಂಧನ ಕಟ್ ಆಗಿದ್ದೇ ದುರಂತಕ್ಕೆ ಕಾರಣ ಎಂದು ವರದಿ ಮಾಡಿದೆ. ಕ್ಯಾಪ್ಟನ್ ಸುಮೀತ್ ಸಬರ್‌ವಾಲ್ ಯಡವಟ್ಟಿನಿಂದಲೇ ಈ ದುರಂತ ನಡೆದೋಗಿದೆ. 15,000 ಗಂಟೆಗಳಷ್ಟು ಹಾರಾಟದ ಅನುಭವ ಹೊಂದಿದ್ದ ಸುಮಿತ್ ಸಬರ್‌ವಾಲ್, ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಇಂಧನ ಪೂರೈಕೆ ಕಟ್ ಆಫ್ ಮಾಡಿದ್ದರು. ಇದನ್ನು ಗಮನಿಸಿದ ಕೋ ಪೈಲಟ್ ಕ್ಲೈವ್‌ ಕುಂದರ್, ಗಾಬರಿಯಿಂದಲೇ ಕ್ಯಾಪ್ಟನ್‌ಗೆ ಕೇಳಿದ್ದಾರೆ. ಇಂಧನ ಯಾಕೆ ಸ್ವಿಚ್ ಆಫ್ ಮಾಡಿದ್ರಿ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಕ್ಯಾಪ್ಟನ್ ಸುಮೀತ್, ನಾನೇನು ಮಾಡಿಲ್ಲ ಅಂತ ಉತ್ತರ ಕೊಟ್ಟಿದ್ದಾರೆ. ಕಾಕ್‌ಪಿಟ್‌ನ ಸಂಭಾಷಣೆ ಬ್ಲಾಕ್‌ ಬಾಕ್ಸ್‌ನಲ್ಲಿ ರೆಕಾರ್ಡ್ ಆಗಿದೆ ಎನ್ನುತ್ತಿದೆ ವಾಲ್‌ಸ್ಟ್ರೀಟ್‌ ಜರ್ನಲ್‌ನ ವರದಿ. ಇದನ್ನೂ ಓದಿ:  ಇಂಧನಕ್ಕೆ ಪ್ರಮುಖ ಆದ್ಯತೆ – ನ್ಯಾಟೋ ಮುಖ್ಯಸ್ಥನ ನಿರ್ಬಂಧಗಳ ಬೆದರಿಕೆಗೆ ಭಾರತ ತಿರುಗೇಟು

    ಅಮೆರಿಕದ ಜರ್ನಲ್ ಮಾಡಿರೋ ವರದಿ ಬಗ್ಗೆ ವಿದೇಶಾಂಗ ಇಲಾಖೆ ಪ್ರತಿಕ್ರಿಯೆಗೆ ನಿರಾಕರಿಸಿದೆ. ವರದಿ ನೋಡಿ ಪ್ರತಿಕ್ರಿಯಿಸೋದಾಗಿ ವಿದೇಶಾಂಗ ಇಲಾಖೆಯ ವಕ್ತಾರರು ತಿಳಿಸಿದ್ದಾರೆ. ಇನ್ನೂ ವೈಮಾನಿಕ ತಜ್ಞರು, ಏರ್ ಇಂಡಿಯಾ ಪೈಲಟ್‌ಗಳನ್ನ ಟಾರ್ಗೆಟ್ ಮಾಡಿ ವರದಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಯುಪಿಯಲ್ಲಿ ಯೋಗಿ ಆದಿತ್ಯನಾಥ್‌ ಸಿಎಂ ಆದ ನಂತರ 15,000 ಎನ್‌ಕೌಂಟರ್‌ – 238 ಮಂದಿ ಹತ್ಯೆ

    AAIB ಪ್ರಾಥಮಿಕ ವರದಿಯಲ್ಲಿ ಏನಿದೆ?
    ಇದಕ್ಕೂ ಮುನ್ನ ಬಹಿರಂಗವಾಗಿದ್ದ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಪ್ರಾಥಮಿಕ ವರದಿ, ಬೋಯಿಂಗ್ 787 ಡ್ರೀಮ್‌ಲೈನರ್‌ ವಿಮಾನದಲ್ಲಿ ಏನೆಲ್ಲಾ ಆಯ್ತು ಅನ್ನೋದನ್ನ ತಿಳಿಸಿತ್ತು. ವಿಮಾನ ಅಪಘಾತ ತನಿಖಾ ಬ್ಯೂರೋ ವರದಿಯಲ್ಲಿ ಪೈಲಟ್‌ಗಳ ಕಾಕ್‌ಪಿಟ್‌ (Cockpit) ಧ್ವನಿ ರೆಕಾರ್ಡಿಂಗ್‌ ಡೇಟಾವನ್ನ ಉಲ್ಲೇಖಿಸಲಾಗಿದೆ. ಇದರಲ್ಲಿ ವಿಮಾನವು ವಾಯುಪ್ರದೇಶಕ್ಕೆ ತಲುಪಿದ ಕೆಲವೇ ಸೆಕೆಂಡುಗಳಲ್ಲಿ ಡ್ಯುಯಲ್-ಎಂಜಿನ್ ಸ್ಥಗಿತಗೊಂಡಿರುವುದು ಅಪಘಾತಕ್ಕೆ ಕಾರಣ ಎಂದು ಸೂಚಿಸಲಾಗಿದೆ. ಅಪಘಾತಕ್ಕೆ ಕೆಲ ಸೆಕೆಂಡುಗಳಿಗೂ ಮುನ್ನ ನಡೆದ ಸಂಭಾಷಣೆಯ ಒಂದು ಭಾಗದಲ್ಲಿ ಇದು ತಿಳಿದಿದೆ. ಜೊತೆಗೆ ವಿಮಾನವು 8 ಡಿಗ್ರಿ ಮೂಗು ಮೇಲಕ್ಕೆತ್ತಿದ ಸ್ಥಿತಿಯಲ್ಲಿತ್ತು. ಆದರೆ ಇಂಜಿನ್‌ಗಳು ಆಫ್ ಆಗಿದ್ದವು. ಇದರಿಂದ ವಿಮಾನವು ಏರಲು ಸಾಧ್ಯವಾಗಲಿಲ್ಲ ಎಂದು ವರದಿ ತಿಳಿಸಿದೆ.

    ಟೇಕ್ ಆಫ್ ಆದ 3 ಸೆಕೆಂಡ್‌ಗಳ ನಂತರ, ಎರಡೂ ಇಂಜಿನ್‌ಗಳ ಫ್ಯೂಯಲ್ ಕಂಟ್ರೋಲ್ ಸ್ವಿಚ್‌ಗಳು ರನ್‌ ನಿಂದ ಕಟ್‌ಆಫ್‌ಗೆ ಬದಲಾದವು. ಇದರಿಂದಾಗಿ ಥ್ರಸ್ಟ್ ಇದ್ದಕ್ಕಿದ್ದಂತೆ ಕಡಿಮೆಯಾಯಿತು. ಅಲ್ಲದೇ ಒಂದು ಪೈಲಟ್ ʻನೀವು ಏಕೆ ಕಟ್ ಆಫ್ ಮಾಡಿದ್ರಿ?ʼ ಎಂದು ಕೇಳುವುದು ಕೇಳಿಸುತ್ತದೆ. ಅದಕ್ಕೆ ಇನ್ನೊಬ್ಬ ಪೈಲಟ್ ʻನಾನು ಮಾಡಿಲ್ಲʼ ಎಂದು ಉತ್ತರಿಸುತ್ತಾರೆ. ಇದರಿಂದ ತಾಂತ್ರಿಕ ದೋಷ ಅಥವಾ ಆಕಸ್ಮಿಕವಾಗಿ ಸ್ವಿಚ್ ಆಫ್ ಆಗಿರಬಹುದು ಎಂದು ಶಂಕಿಸಲಾಗಿದೆ. ʻWhy did you cutoff?ʼ ಮತ್ತು ʻI did not do so,ʼ ಎಂಬ ಮಾತುಗಳು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಸಿಎಂ ನಿತೀಶ್ ಕುಮಾರ್ ಪಕ್ಷದ ನಾಯಕನ ಬರ್ಬರ ಹತ್ಯೆ – ನಾಲ್ಕೇ ದಿನಗಳಲ್ಲಿ 2ನೇ ರಾಜಕೀಯ ಹತ್ಯೆ

    ಇನ್ನೂ ಫ್ಲೈಟ್ ಡೇಟಾ ರೆಕಾರ್ಡರ್‌ ಪ್ರಕಾರ, ಇಂಜಿನ್-1 ಅನ್ನು ಸ್ವಯಂಚಾಲಿತವಾಗಿ ಮರುಪ್ರಾರಂಭಿಸಲು ಪ್ರಯತ್ನಿಸಿ, ಅದು ಯಶಸ್ವಿಯಾಯಿತು. ಆದ್ರೆ ಇಂಜಿನ್ 2 ಅನ್ನು ಮರುಪ್ರಾರಂಭಿಸಲು ಸಾಧ್ಯವಾಗಲಿಲ್ಲ. ಈ ಕಾರಣಕ್ಕಾಗಿ ರಾಮ್ ಏರ್ ಟರ್ಬೈನ್ (RAT) ಅನ್ನು ತುರ್ತು ವಿದ್ಯುತ್ ಮೂಲವಾಗಿ ಬಳಸಲಾಗಿತ್ತು. ಇದು ಟೇಕ್ ಆಫ್ ಆದ ತಕ್ಷಣವೇ ಕಾರ್ಯನಿರ್ವಹಿಸಲು ಪ್ರಾರಂಭಿಸಿತು. ಇದರಿಂದ ಅಗತ್ಯ ಸಿಸ್ಟಮ್‌ಗಳಿಗೆ ವಿದ್ಯುತ್ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು ಎಂದು ವರದಿ ತಿಳಿಸಿದೆ. RAT ಅಂದರೆ ವಿಮಾನದಲ್ಲಿನ ಎಲೆಕ್ಟ್ರಿಕಲ್ ವ್ಯವಸ್ಥೆ ಕೈಕೊಟ್ಟಾಗ ಉಪಯೋಗಿಸುವ ಒಂದು ಸಾಧನ.