Tag: ಏರ್ ಇಂಡಿಯಾ

  • ದುರಂತಕ್ಕೂ ಮುನ್ನ ಇದೇ ವಿಮಾನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು!

    ದುರಂತಕ್ಕೂ ಮುನ್ನ ಇದೇ ವಿಮಾನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು!

    ನವದೆಹಲಿ: ಅಹಮದಾಬಾದ್‌ನಲ್ಲಿ (Ahmedabad) ಪತನಗೊಂಡ ಏರ್ ಇಂಡಿಯಾ (Air India) ವಿಮಾನ ಅಪಘಾತಕ್ಕೂ ಮುನ್ನ ಪ್ಯಾರಿಸ್‌ನಿಂದ ದೆಹಲಿಗೆ (Delhi) ಹಾರಾಟ ನಡೆಸಿತ್ತು ಎಂದು ನಾಗರಿಕ ವಿಮಾನಯಾನ ಕಾರ್ಯದರ್ಶಿ ಸಮೀರ್ ಕುಮಾರ್ ಸಿನ್ಹಾ (Samir Kumar Sinha) ಮಾಹಿತಿ ನೀಡಿದ್ದಾರೆ.

    ಏರ್ ಇಂಡಿಯಾ ವಿಮಾನ ದುರಂತ ನಡೆದ 48 ಗಂಟೆ ಬಳಿಕ ಮೊದಲ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೂನ್ 12ರಂದು ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗುವ ಮುನ್ನ ಇದೇ ವಿಮಾನವು ಪ್ಯಾರಿಸ್‌ನಿಂದ (Paris) ದೆಹಲಿಗೆ ಹಾಗೂ ದೆಹಲಿಯಿಂದ ಅಹಮದಾಬಾದ್‌ಗೆ ಯಾವುದೇ ಸಮಸ್ಯೆಗಳಿಲ್ಲದೆ ಹಾರಾಟ ನಡೆಸಿತ್ತು ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು

    ಇದೇ ವೇಳೆ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಮಾತನಾಡಿ, ಸದ್ಯ ಬ್ಲ್ಯಾಕ್‌ಬಾಕ್ಸ್‌ನ್ನು ಡಿಕೋಡ್ ಮಾಡಲಾಗುತ್ತಿದ್ದು, ದುರಂತಕ್ಕೂ ಮುನ್ನ ವಿಮಾನದಲ್ಲಿ ಆಗಿದ್ದಾದರೂ ಏನು ಎನ್ನುವ ಮಾಹಿತಿ ತಿಳಿದುಬರಲಿದೆ. ಶುಕ್ರವಾರ ಸಂಜೆ ಬ್ಲ್ಯಾಕ್‌ಬಾಕ್ಸ್ ಪತ್ತೆಯಾಗಿದ್ದು. ಅಪಘಾತಕ್ಕೆ ನಿಖರವಾದ ಕಾರಣ ಇದರಿಂದ ತಿಳಿದುಬರಲಿದೆ. ಎಎಐಬಿ ತನ್ನ ತನಿಖೆಯನ್ನು ಪೂರ್ಣಗೊಳಿಸಿದ ಬಳಿಕ ವರದಿ ನೀಡಲಿದ್ದು, ಏನಾಗಿದೆ ಎಂಬುದು ಗೊತ್ತಾಗಲಿದೆ. ಘಟನೆ ಬಗ್ಗೆ ಬ್ರಿಟನ್, ಅಮೆರಿಕ ಸೇರಿದಂತೆ ಕೇಂದ್ರದ ಉನ್ನತ ಮಟ್ಟದ ಸಮಿತಿ ಸಹ ತನಿಖೆ ನಡೆಸುತ್ತಿದೆ ಎಂದರು.

    ಜೂನ್ 12ರಂದು ಅಹಮದಾಬಾದ್ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ಪರಿಣಾಮ ವಿಮಾನ ನಿಲ್ದಾಣದ ಸಮೀಪದ ಮೇಘನಿ ನಗರದ ಬಿಜೆ ಎಂಬಿಬಿಎಸ್ ಕಾಲೇಜಿನ ಹಾಸ್ಟೆಲ್ ಮೇಲೆ ಬಿದ್ದಿತ್ತು. ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್, ಒಬ್ಬ ಕೆನಡಾ ಮತ್ತು ಏಳು ಪೋರ್ಚುಗೀಸ್ ಪ್ರಜೆಗಳು 12 ಸಿಬ್ಬಂದಿ ಇದ್ದರು. ಈ ಪೈಕಿ 241 ಜನ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಪವಾಡ ಸದೃಶ್ಯ ಪಾರಾಗಿದ್ದಾರೆ. ಜೊತೆಗೆ ಬಿಜೆ ಮೆಡಿಕಲ್ ಕಾಲೇಜಿನ 5 ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಇನ್ನೂ ಭಾರೀ ಬೆಂಕಿ ಹೊತ್ತಿಕೊಂಡ ಪರಿಣಾಮ ಅಲ್ಲಿದ್ದ 19 ಸ್ಥಳೀಯರು ಸಾವಿಗೀಡಾಗಿದ್ದರು.ಇದನ್ನೂ ಓದಿ: Plane Crash | ಇಂಜಿನಿಯರ್‌ ಆಗುವ ಕನಸು ಕಂಡಿದ್ದ ಆಟೋ ಚಾಲಕನ ಮಗಳ ದುರಂತ ಅಂತ್ಯ

  • ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

    ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

    – 2022 ರಲ್ಲಿ ಮದುವೆಯಾಗಿತ್ತು ಈ ಜೋಡಿ

    ಗಾಂಧೀನಗರ: ಅಹಮದಾಬಾದ್‌ನಲ್ಲಿ (Ahmedabad) ಗುರುವಾರ ಸಂಭವಿಸಿದ ಏರ್‌ ಇಂಡಿಯಾ (Air India) ಭೀಕರ ಅವಘಡದಲ್ಲಿ, ಮದುವೆಯಾಗಿದ್ದ ಗೇ ಜೋಡಿಯು ದುರಂತ ಸಾವು ಕಂಡಿದೆ.

    ಜಾಮಿ ಮೀಕ್ (45) ಮತ್ತು ಫಿಯಾಂಗಲ್ ಗ್ರೀನ್ ಲಾ (39) ಇಬ್ಬರೂ ಗೇ ಜೋಡಿ.‌ ಲಂಡನ್-ಬ್ರಿಟನ್‌ನ ವಾಕ್ಸ್ ಹಾಲ್‌ನವರಾಗಿದ್ದ ಸಲಿಂಗಿ ಜೋಡಿ 2022ರಲ್ಲಿ ಮದುವೆಯಾಗಿದ್ದರು (Same Sex Marriage). ಇದನ್ನೂ ಓದಿ: ನಾನು ವಿಮಾನದಿಂದ ಜಂಪ್ ಮಾಡ್ಲಿಲ್ಲ – ದೊಡ್ಡ ಆಪತ್ತಿನಿಂದ ರಮೇಶ್ ವಿಶ್ವಾಸ್ ಕುಮಾರ್ ಪಾರಾಗಿದ್ದು ಹೇಗೆ?

    ಜಾಮಿ ಮೀಕ್ ಎಂಬಾತ ವೆಲ್ನೆಸ್ ಫೌಂಡ್ರಿಯ ಸಂಸ್ಥಾಪಕ. ಇವರಿಬ್ಬರೂ ಯೋಗ ತರಬೇತಿ, ಆಧ್ಯಾತ್ಮಿಕ ತರಬೇತಿ ನೀಡುತ್ತಿದ್ದರು. ಭಾರತ ಪ್ರವಾಸಕ್ಕೆ ಬಂದಿದ್ದರು. ಘಟನೆ ಹಿಂದಿನ‌ ದಿನ ರಾತ್ರಿ ಅತ್ಯದ್ಭುತ ಎಂದು ಬಣ್ಣಿಸಿ ವೀಡಿಯೋ ಮಾಡಿದ್ದರು.

    ಭಾರತ ಪ್ರವಾಸ ಮುಗಿಸಿ ಹೊರಟಾಗ ಖುಷಿಯಲ್ಲಿದ್ದರು. ಅಹಮದಾಬಾದ್ ವಿಮಾನ ನಿಲ್ದಾಣದ ಗೇಟ್‌ನಲ್ಲಿ ಕುಳಿತು ಇವರು ಮಾಡಿದ್ದ ಕೊನೆಯ ವೀಡಿಯೋ ವೈರಲ್ ಆಗಿತ್ತು. ವೀಡಿಯೋದಲ್ಲಿ ಭಾರತದ ಪ್ರವಾಸದ ಬಗ್ಗೆ ಮಾತನಾಡಿದ್ದರು. ಇದನ್ನೂ ಓದಿ: Mayday… unable to lift: ಕ್ಯಾಪ್ಟನ್‌ ಸುಮಿತ್‌ ಕೊನೆ ಕ್ಷಣದ ಆಡಿಯೋ ಲಭ್ಯ

    ಗುರುವಾರ ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಅಪಘಾತಕ್ಕೀಡಾದ ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಪೈಲಟ್‌ಗಳು ಮತ್ತು 10 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಈ ಪೈಕಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಮಾತ್ರ ಅಪಘಾತದಲ್ಲಿ ಬದುಕುಳಿದರು. ವಿಮಾನವು ಹಾಸ್ಟೆಲ್‌ವೊಂದಕ್ಕೆ ಡಿಕ್ಕಿ ಹೊಡೆದು ಪತನಗೊಂಡಿತು. ಪರಿಣಾಮವಾಗಿ ಪ್ರಯಾಣಿಕರು ಸೇರಿದಂತೆ 274 ಮಂದಿ ಮೃತಪಟ್ಟಿದ್ದಾರೆ.

  • ನಾನು ವಿಮಾನದಿಂದ ಜಂಪ್ ಮಾಡ್ಲಿಲ್ಲ – ದೊಡ್ಡ ಆಪತ್ತಿನಿಂದ ರಮೇಶ್ ವಿಶ್ವಾಸ್ ಕುಮಾರ್ ಪಾರಾಗಿದ್ದು ಹೇಗೆ?

    ನಾನು ವಿಮಾನದಿಂದ ಜಂಪ್ ಮಾಡ್ಲಿಲ್ಲ – ದೊಡ್ಡ ಆಪತ್ತಿನಿಂದ ರಮೇಶ್ ವಿಶ್ವಾಸ್ ಕುಮಾರ್ ಪಾರಾಗಿದ್ದು ಹೇಗೆ?

    ಅಹಮದಾಬಾದ್: ನಾನು ವಿಮಾನದಿಂದ ಜಂಪ್ ಮಾಡಲಿಲ್ಲ, ಬದಲಾಗಿ ಮುರಿದ ವಿಮಾನದ ಬಾಗಿಲಿನಿಂದ ನಡೆದುಕೊಂಡೇ ಬಂದೆ ಎಂದು ವಿಮಾನ ದುರಂತದಿಂದ (Air India Plane Crash) ಪಾರಾದ ಏಕೈಕ ಪ್ರಯಾಣಿಕ ರಮೇಶ್ ವಿಶ್ವಾಸ್ ಕುಮಾರ್ ಕುತೂಹಲಕಾರಿ ವಿಚಾರವನ್ನು ಬಿಚ್ಚಿಟ್ಟಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಮರ್ಜೆನ್ಸಿ ಡೋರ್ ಒಡೆದು ಹೋಗಿತ್ತು, ನನ್ನ ಸೀಟ್ ಕೂಡ ಒಡೆದು ಹೋಗಿತ್ತು. ಎಮರ್ಜೆನ್ಸಿ ಡೋರ್ ಮುರಿದಿತ್ತು. ಅದರಿಂದ ನಾನು ಹೊರಬಂದೆ. ನಾನು ಹೊರಬರುವಾಗ ಅಲ್ಪಸ್ವಲ್ಪ ಬೆಂಕಿ ಹೊತ್ತಿಕೊಂಡಿತ್ತು. ನಂತರ ಇಡೀ ವಿಮಾನ ಸುಟ್ಟು ಹೋಯಿತು. ನಾನು ನೆಲಮಹಡಿಯಲ್ಲಿ ಬಿದ್ದಿದ್ದೆ, ಅಲ್ಲಿಂದ ಪಾರಾದೆ ಎಂದರು. ಇದನ್ನೂ ಓದಿ:  ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

    ಅರ್ಧ ವಿಮಾನ ಕಟ್ಟಡದ ನೆಲಮಹಡಿಯಲ್ಲಿ ಇತ್ತು. ನಾನು ಹೊರಗಡೆ ಬಂದಾಗ ಅಲ್ಪ ಸ್ವಲ್ಪ ಬೆಂಕಿ ಹೊತ್ತಿಕೊಂಡಿತ್ತು. ತದನಂತರ ಬ್ಲಾಸ್ಟ್ ಆಯಿತು. ನೆಲಮಹಡಿಯಿಂದ ನಾನು ವಾಕ್ ಮಾಡಿಕೊಂಡೇ ಬಂದೆ. ಪ್ರಧಾನಮಂತ್ರಿ ಅವರು ಎಲ್ಲಾ ಓಕೆ ನಾ ಎಂದು ಮಾತನಾಡಿಸಿದರು. ನನ್ನ ಕುಟುಂಬ ಲಂಡನ್‌ನಲ್ಲಿ ಇದೆ. ನನ್ನ ಅಣ್ಣ ಭಾರತದಲ್ಲಿ ಇದ್ದಾನೆ ಎಂದು ಹೇಳಿದರು. ಇದನ್ನೂ ಓದಿ: 100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

  • ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

    ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

    ಅಹಮದಾಬಾದ್: ಏರ್ ಇಂಡಿಯಾ ವಿಮಾನ (Air India Flight) ದುರಂತದಲ್ಲಿ ಸಾವಿನ ಸಂಖ್ಯೆ 274ಕ್ಕೇರಿದ್ದು, ಪತನವಾದ ಸ್ಥಳದಲ್ಲಿ ಅವಶೇಷಗಳ ತೆರವು ಕಾರ್ಯ ಆರಂಭಗೊಂಡಿದೆ.

    ವಿಮಾನದ ಒಳಭಾಗವನ್ನು ಪರಿಶೀಲಿಸಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಒಳಗಡೆ ಮೃತ ದೇಹಗಳಿವೆಯೇ ಎಂದು ಪರಿಶೀಲಿಸಿ ತೆರವು ಕಾರ್ಯ ನಡೆಸಲಾಗುತ್ತಿದ್ದು, ಇಂದು ಇಡೀ ದಿನ ವಿಮಾನ ಟೇಲ್ ಭಾಗ (ವಿಮಾನದ ಹಿಂಭಾಗ) ತೆರವು ಕಾರ್ಯ ನಡೆಯಲಿದೆ.ವಿಮಾನ ತೆರವಿಗೆ ಮತ್ತೊಂದು ಕ್ರೇನ್ ಕೂಡ ಆಗಮಿಸಿದ್ದು, ಕಾರ್ಯಾಚರಣೆ ಚುರುಕುಗೊಂಡಿದೆ. ಇದನ್ನೂ ಓದಿ: ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

    ಎರಡು ಕ್ರೇನ್ ಮೂಲಕ ವಿಮಾನ ಮೇಲೆತ್ತುವ ಪ್ರಯತ್ನ ನಡೆಸಲಾಗುತ್ತಿದ್ದು, ಬಳಿಕ ಅದನ್ನು ನೆಲಕ್ಕಿಳಿಸಿ ಹಾಸ್ಟೆಲ್ ಪ್ರದೇಶದಿಂದ ಸ್ಥಳಾಂತರ ಮಾಡಲಾಗುತ್ತದೆ. ಇಂದು ಸಂಜೆ ತನಕ ಕಾರ್ಯಚರಣೆ ನಡೆಯುವ ಸಾಧ್ಯತೆಯಿದೆ. ಇದನ್ನೂ ಓದಿ: Mayday… unable to lift: ಕ್ಯಾಪ್ಟನ್‌ ಸುಮಿತ್‌ ಕೊನೆ ಕ್ಷಣದ ಆಡಿಯೋ ಲಭ್ಯ

    ವಿಮಾನ ಪತನಗೊಂಡ ಪರಿಣಾಮ ವಿಮಾನದ ಹಿಂಭಾಗ ಟೇಲ್ ಹೊರತುಪಡಿಸಿ ಇನ್ನೇನು ಉಳಿದಿಲ್ಲ. ಇಡೀ ವಿಮಾನ ಸಂಪೂರ್ಣ ನಾಶವಾಗಿದೆ. ವಿಮಾನದ 90% ಭಾಗ ಸುಟ್ಟು ಕರಕಲಾಗಿದ್ದು, ಹಿಂಬದಿಯ ಟೇಲ್ ಅವಶೇಷಗಳು ಮಾತ್ರ ಹಾಗೇ ಉಳಿದಿದೆ. ಬಾಕಿ ಉಳಿದ ವಿಮಾನ ಸಂಪೂರ್ಣ ನಾಶವಾಗಿದೆ. ವಿಮಾನದಲ್ಲಿದ್ದ ಇಂಧನ ಒಮ್ಮೆಲೇ ದಹಿಸಿದ ಹಿನ್ನೆಲೆ ಸುತ್ತಮುತ್ತಲಿನ ಪ್ರದೇಶ ಎಲ್ಲವೂ ಸುಟ್ಟು ಕರಕಲಾಗಿದೆ. ಇದನ್ನೂ ಓದಿ: 100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

  • Mayday… unable to lift: ಕ್ಯಾಪ್ಟನ್‌ ಸುಮಿತ್‌ ಕೊನೆ ಕ್ಷಣದ ಆಡಿಯೋ ಲಭ್ಯ

    Mayday… unable to lift: ಕ್ಯಾಪ್ಟನ್‌ ಸುಮಿತ್‌ ಕೊನೆ ಕ್ಷಣದ ಆಡಿಯೋ ಲಭ್ಯ

    – ‘ವಿಮಾನ ಮೇಲಕ್ಕೆ ಏರುತ್ತಿಲ್ಲ..’; ಕೊನೆ 5 ಸೆಕೆಂಡ್‌ಗಳ ಆಡಿಯೋ

    ಗಾಂಧೀನಗರ: ಅಹಮದಾಬಾದ್‌ನಲ್ಲಿ ವಿಮಾನ ದುರಂತದ (Ahmedabad Plane Crash) ಕೊನೆ ಕ್ಷಣಗಳಲ್ಲಿ ಏರ್ ಇಂಡಿಯಾ ಪೈಲಟ್ ಸುಮಿತ್ ಸಭರ್ವಾಲ್ (Sumeet Sabharwal) ಅವರು ಎಟಿಸಿಗೆ (ATC) ನೀಡಿದ ಕೊನೆ ಸಂದೇಶದ ಆಡಿಯೋ ಲಭ್ಯವಾಗಿದೆ. ಕೇವಲ 5 ಸೆಕೆಂಡ್‌ಗಳ ಆಡಿಯೋ ಸಿಕ್ಕಿದೆ.

    ‘ಮೇಡೇ… ಒತ್ತಡವಿಲ್ಲ, ಶಕ್ತಿ ಕಳೆದುಕೊಳ್ಳುತ್ತಿದೆ, ಮೇಲೇರಿಸಲು ಸಾಧ್ಯವಾಗುತ್ತಿಲ್ಲ’ ಎಂದು ಸಭರ್ವಾಲ್ ಅವರು ಎಟಿಸಿಗೆ ಕೊನೆಯ ಸಂದೇಶದಲ್ಲಿ ತಿಳಿಸಿದ್ದಾರೆ. ಇದಾದ ಕೆಲವು ಸೆಕೆಂಡುಗಳ ನಂತರ, ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಯಿತು. ಇದನ್ನೂ ಓದಿ: Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

    ವಿಮಾನವು 625 ಅಡಿ ಎತ್ತರವನ್ನು ತಲುಪಿದ ಸ್ವಲ್ಪ ಸಮಯದ ನಂತರ ನಿಮಿಷಕ್ಕೆ -475 ಅಡಿ ವೇಗದಲ್ಲಿ ಹಠಾತ್ ಇಳಿಯಲು ಪ್ರಾರಂಭಿಸಿತು. ತಕ್ಷಣವೇ ಪೈಲಟ್ ಸುಮೀತ್ ಸಭರ್ವಾಲ್ ಮತ್ತು ಸಹ-ಪೈಲಟ್ ಕ್ಲೈವ್ ಕುಂದರ್ ವಾಯು ಸಂಚಾರ ನಿಯಂತ್ರಣ (ಎಟಿಸಿ)ಗೆ ‘ಮೇಡೇ’ ಸಂದೇಶ ನೀಡಿದ್ದರು. ಇದರ ಬೆನ್ನಲ್ಲೇ ಎಟಿಸಿ ಮಾಡಿದ ಎಲ್ಲಾ ಕರೆಗಳಿಗೆ ಪೈಟಲ್‌ನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ.

    ಮೇಡೇ ಎಂದರೆ ವಿಮಾನ ತುಂಬಾ ಡೇಂಜರ್‌ನಲ್ಲಿದೆ ಎಂದರ್ಥ. ಜೀವಕ್ಕೆ ಅಪಾಯವಿದೆ ಎಂದು ತುರ್ತು ಪರಿಸ್ಥಿತಿಯನ್ನು ಸೂಚಿಸಲು ವಾಯುಯಾನ ಮತ್ತು ಸಮುದ್ರ ಸಂವಹನದಲ್ಲಿ ಬಳಸಲಾಗುವ ಅತ್ಯುನ್ನತ ಮಟ್ಟದ ರೇಡಿಯೋ ಸಂಕೇತವಾಗಿದೆ. ಇದು ತಕ್ಷಣದ ಸಹಾಯದ ಅಗತ್ಯವಿದೆ ಎಂದು ಸೂಚಿಸುತ್ತದೆ. ಇದನ್ನೂ ಓದಿ: 100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

    ‘ಮೇಡೇ’ ಎಂಬ ಪದವು ಫ್ರೆಂಚ್ ಪದ ‘ಮೈಡರ್’ನಿಂದ ಬಂದಿದೆ. ‘ನನಗೆ ಸಹಾಯ ಮಾಡಿ’ ಎಂಬುದು ಇದರ ಅರ್ಥ. ತುರ್ತು ಸಂದರ್ಭಗಳಲ್ಲಿ ಸ್ಪಷ್ಟ ಸಂವಹನ ಖಚಿತಪಡಿಸಿಕೊಳ್ಳಲು ಲಂಡನ್‌ನ ಕ್ರಾಯ್ಡನ್ ವಿಮಾನ ನಿಲ್ದಾಣದಲ್ಲಿ ರೇಡಿಯೋ ಅಧಿಕಾರಿಯಾಗಿದ್ದ ಫ್ರೆಡೆರಿಕ್ ಸ್ಟಾನ್ಲಿ ಮಾಕ್‌ಫೋರ್ಡ್ 1920 ರ ದಶಕದ ಆರಂಭದಲ್ಲಿ ಇದನ್ನು ಪರಿಚಯಿಸಿದರು. ನಂತರ ಈ ಪದವು ಪೈಲಟ್‌ಗಳು ಮತ್ತು ನಾವಿಕರಿಗೆ ಅಂತರರಾಷ್ಟ್ರೀಯ ರೇಡಿಯೋ ಸಂವಹನದ ಪ್ರಮಾಣಿತ ಭಾಗವಾಯಿತು. 1927 ರಲ್ಲಿ ಮೋರ್ಸ್ ಕೋಡ್ ಸಿಗ್ನಲ್ “SOS” ಜೊತೆಗೆ ಅಧಿಕೃತವಾಗಿ ಅಳವಡಿಸಿಕೊಳ್ಳಲಾಯಿತು.

  • 100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

    100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

    – ಬೋಯಿಂಗ್ ಮಾರುಕಟ್ಟೆಗೆ ಬಹುದೊಡ್ಡ ಆರ್ಥಿಕ ಹೊಡೆತ ಸಾಧ್ಯತೆ!

    ಅಹಮದಾಬಾದ್: ಬೋಯಿಂಗ್‌ನ 787-ಡ್ರೀಮ್ ಲೈನರ್ (Dreamliner 787) ಮಾಡೆಲ್ ಅತ್ಯಂತ ವಿಶ್ವಾಸಾರ್ಹದ ಜೊತೆಗೆ ಇಂಧನ ದಕ್ಷತೆ, ಸುರಕ್ಷತೆ, ಆರಾಮದಾಯಕ ಪ್ರಯಾಣಕ್ಕೆ ಹೆಸರುವಾಸಿಯಾಗಿದೆ. 14 ವರ್ಷಗಳಲ್ಲಿ ಸುಮಾರು 1 ಸಾವಿರ ಡ್ರೀಮ್ ಲೈನರ್ ವಿಮಾನಗಳನ್ನ ಮಾರಾಟ ಮಾಡುವ ಮೂಲಕ ಬೋಯಿಂಗ್ ದಾಖಲೆ ಬರೆದಿದೆ.

    ಸಾರ್ವಕಾಲಿಕ ಅತ್ಯುತ್ತಮ ಮಾರಾಟ ಕಂಡ ವೈಡ್-ಬಾಡಿ ಪ್ಯಾಸೆಂಜರ್ ವಿಮಾನ ಡ್ರೀಮ್ ಲೈನರ್ 100 ಕೋಟಿಗೂ ಹೆಚ್ಚು ಪ್ರಯಾಣಿಕರನ್ನ ಸಾಗಿಸಿದ ವಿಮಾನ ಎಂಬ ಬ್ರ‍್ಯಾಂಡ್ ಅನ್ನು ಅಲ್ಪಾವಧಿಯಲ್ಲಿಯೇ ಪಡೆದಿತ್ತು. ಇದನ್ನೂ ಓದಿ: ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ 12ರಲ್ಲಿ 9 ಸಿಬ್ಬಂದಿ ಮುಂಬೈ ವಾಸಿಗಳು

    ಈ ಹಿಂದೆ ಸುರಕ್ಷತೆಯ ಕುರಿತು ಬೋಯಿಂಗ್ (Boeing) ಕಂಪನಿಗೆ ಹಲವು ಸವಾಲುಗಳು ಎದುರಾಗಿದ್ದವು. ಹಲವು ಆರೋಪಗಳನ್ನ ಎದುರಿಸಿದ್ದ ಬೋಯಿಂಗ್‌ನ ಡ್ರೀಮ್ ಲೈನರ್ ಹಾರಾಟವನ್ನ 3 ತಿಂಗಳ ಕಾಲ ವಿಶ್ವದಾದ್ಯಂತ ನಿಷೇಧಿಸಲಾಗಿತ್ತು. ಆರೋಪ, ಸವಾಲುಗಳನ್ನ ಎದುರಿಸಿ ಮತ್ತೆ ವಿಶ್ವಾಸಾರ್ಹತೆ ಗಳಿಸಿದ್ದ ಬೋಯಿಂಗ್ ಪುನಃ ಆಕಾಶಕ್ಕೆ ಚಿಮ್ಮಿತ್ತು. ಆದ್ರೆ ಈಗ ಕಂಡು ಕೇಳರಿಯದ ದುರಂತಕ್ಕೆ ಸಾಕ್ಷಿಯಾಗಿದೆ. ಇದನ್ನೂ ಓದಿ: Plane Crash – ನಗುಮೊಗದ ಗಗನಸಖಿ ಮನೀಷಾ ಥಾಪಾ ದುರಂತ ಅಂತ್ಯ

    ಡ್ರೀಮ್ ಲೈನರ್ ವಿಮಾನದ ಆಯಸ್ಸು 30 ರಿಂದ 50 ವರ್ಷ ಎನ್ನಲಾಗಿದೆ. 210-250 ಸೀಟ್‌ಗಳೊಂದಿಗೆ 9,800 ಮೈಲುಗಳು ಪ್ರಯಾಣಿಸಬಲ್ಲವು. ಆದ್ರೆ ಅಹಮದಾಬಾದ್‌ನಲ್ಲಿ ಉರುಳಿದ ವಿಮಾನ ಆಯಸ್ಸು ಕೇವಲ 11 ವರ್ಷ. ಈ ಹಿಂದೆ ಸುರಕ್ಷತೆ ವಿಚಾರದಲ್ಲಿ ಎದ್ದ ಆರೋಪ, ಸವಾಲುಗಳನ್ನ ಮೆಟ್ಟಿ ನಿಂತು ವ್ಯಾಪಾರವನ್ನ ವಿಸ್ತರಿಸಿಕೊಳ್ತಿದ್ದ ವೇಳೆಯೇ ಬೋಯಿಂಗ್ ಕಂಪನಿಗೆ ಈ ದುರಂತ ದೊಡ್ಡ ಆರ್ಥಿಕ ಹೊಡೆತ ಕೊಡುವ ಭೀತಿ ಶುರುವಾಗಿದೆ. ಅದೇನೇ ಇರಲಿ ಅತಿ ಸುರಕ್ಷತೆಯ ವಿಮಾನ ಎಂದು ಹೇಳಿಕೊಂಡಿದ್ದ ವಿಮಾನ ಪತನಕ್ಕೆ (Plane Crash) ಸಾಕ್ಷಿಯಾಗಿರೋದು ನಿಜಕ್ಕೂ ದುರಂತವೇ ಸರಿ.

  • Plane Crash – ನಗುಮೊಗದ ಗಗನಸಖಿ ಮನೀಷಾ ಥಾಪಾ ದುರಂತ ಅಂತ್ಯ

    Plane Crash – ನಗುಮೊಗದ ಗಗನಸಖಿ ಮನೀಷಾ ಥಾಪಾ ದುರಂತ ಅಂತ್ಯ

    ಅಹಮದಾಬಾದ್: ಏರ್ ಇಂಡಿಯಾ (Air India) ವಿಮಾನ ಅಪಘಾತದಲ್ಲಿ ನಗುಮೊಗದ ಗಗನಸಖಿ ಮನೀಷಾ ಥಾಪಾ (27) ದುರಂತ ಅಂತ್ಯ ಕಂಡಿದ್ದಾರೆ.

    ಮನೀಷಾ ಥಾಪಾ (Manisha Thapa), ನೇಪಾಳ ಮೂಲದವರಾದರೂ, ಹುಟ್ಟಿ ಬೆಳೆದಿದ್ದೆಲ್ಲಾ ಪಾಟ್ನಾದಲ್ಲಿ. ಮೊದಲು ಇಂಡಿಗೋದಲ್ಲಿ ಗ್ರೌಂಡ್ ಸ್ಟಾಫ್ ಆಗಿ ವೃತ್ತಿಜೀವನ ಆರಂಭಿಸಿದ ಅವರು ಬಳಿಕ ಆಕಾಶ್ ಏರ್, ನಂತರ ಏರ್ ಇಂಡಿಯಾ ಸೇರಿದಲ್ಲಿ ಗಗನಸಖಿಯಾಗಿದ್ದರು. ಏರ್ ಇಂಡಿಯಾ ಸೇರಿದ ಬಳಿಕ ಹೆಚ್ಚಾಗಿ ಲಂಡನ್, ಆಸ್ಟ್ರೇಲಿಯಾ ಮಾರ್ಗದಲ್ಲಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ 12ರಲ್ಲಿ 9 ಸಿಬ್ಬಂದಿ ಮುಂಬೈ ವಾಸಿಗಳು

    ಏರ್ ಇಂಡಿಯಾ ಗಗನಸಖಿಯಾಗಿದ್ದ (Air Hostess) ಮನೀಷಾ ಸದಾ ಹಸನ್ಮುಖಿಯಾಗಿದ್ದರು. ಮನೀಷಾ ಕೋಪ ಮಾಡ್ಕೊಂಡಿದ್ದನ್ನು ನೋಡೇ ಇಲ್ಲ. ಎಲ್ಲದಕ್ಕೂ ನಗುವಿನ ಮೂಲಕವೇ ಉತ್ತರಿಸುತ್ತಿದ್ದಳು. ಅಲ್ಲದೇ ಕಲಿಕೆಯಲ್ಲಿಯೂ ಸದಾ ಮುಂದಿದ್ದರು ಎಂದು ಅವರ ಸ್ನೇಹಿತರು ಆಕೆಯನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ದುರಂತ – ಸಾವಿನ ಸಂಖ್ಯೆ 274ಕ್ಕೆ ಏರಿಕೆ

    ಇದೀಗ ಮನೀಷಾ ಸಾವಿನ ವಿಚಾರ ಕೇಳಿ, ಆಕೆ ತಾಯಿಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಸದ್ಯ ವೈದ್ಯರ ಆರೈಕೆಯಲ್ಲಿದ್ದಾರೆ. ಸದಾ ಆಗಸದಲ್ಲಿ ಹಾರಬೇಕೆಂದು ಕನಸುಕಂಡಿದ್ದ 10 ಗಗನಸಖಿರು ವಿಮಾನ ದುರಂತದಲ್ಲಿ ಬದುಕು ಅಂತ್ಯಗೊಳಿಸಿರುವುದು ಹೃದಯವಿದ್ರಾಕ ಸಂಗತಿಯಾಗಿದೆ. ಇದನ್ನೂ ಓದಿ: ಅಹಮದಾಬಾದ್ ವಿಮಾನ ಪತನ – 5 ತಂಡಗಳಿಂದ ತನಿಖೆ

    ಏನಿದು ಘಟನೆ?
    ಅಹಮದಾಬಾದ್ (Ahmedabad) ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟ ಏರ್‌ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು. ಪರಿಣಾಮ ಅಹಮದಾಬಾದ್ ಸಮೀಪದ ಮೇಘನಿ ನಗರದ ಬಿಜೆ ಎಂಬಿಬಿಎಸ್ ಕಾಲೇಜು ಸಂಕೀರ್ಣಕ್ಕೆ ಡಿಕ್ಕಿ ಹೊಡೆದಿತ್ತು. ವಿಮಾನದಲ್ಲಿ ಪೈಲಟ್, ಸಿಬ್ಬಂದಿ ಸೇರಿ ಒಟ್ಟು 242 ಪ್ರಯಾಣಿಕರಿದ್ದರು. ಈ ಪೈಕಿ 241 ಜನ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಪವಾಡ ಸದೃಶವಾಗಿ ಪಾರಾಗಿದ್ದಾರೆ.

  • ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ 12ರಲ್ಲಿ 9 ಸಿಬ್ಬಂದಿ ಮುಂಬೈ ವಾಸಿಗಳು

    ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ 12ರಲ್ಲಿ 9 ಸಿಬ್ಬಂದಿ ಮುಂಬೈ ವಾಸಿಗಳು

    ಅಹಮದಾಬಾದ್: ತಾಂತ್ರಿಕ ದೋಷದಿಂದ ಅಹಮದಾಬಾದ್‌ನ (Ahmedabad) ಮೇಘಾನಿಯಲ್ಲಿ ಏರ್ ಇಂಡಿಯಾ ವಿಮಾನ (Air India Flight) ಪತನಗೊಂಡ ಪರಿಣಾಮ 12 ಸಿಬ್ಬಂದಿ ಹಾಗೂ 230 ಪ್ರಯಾಣಿಕರು ಮೃತಪಟ್ಟಿದ್ದಾರೆ. ಮೃತಪಟ್ಟ 12 ಸಿಬ್ಬಂದಿ ಪೈಕಿ 9 ಮಂದಿ ಸಿಬ್ಬಂದಿ ಮುಂಬೈ (Mumbai) ವಾಸಿಗಳಾಗಿದ್ದಾರೆ.

    ಮೃತಪಟ್ಟ 12 ಸಿಬ್ಬಂದಿ ಪೈಕಿ 9 ಸಿಬ್ಬಂದಿ ಮುಂಬೈವಾಸಿಗಳಾಗಿದ್ದು, ಮುಂಬೈನಲ್ಲೇ ನೆಲೆಸಿದ್ದರು. ಇನ್ನುಳಿದ ಮೂವರು ಮಹಾರಾಷ್ಟ್ರ, ಬಿಹಾರ ಹಾಗೂ ಮಣಿಪುರದವರಾಗಿದ್ದಾರೆ. ಘಟನೆಯಲ್ಲಿ ಬಿಜೆ ಮೆಡಿಕಲ್ ಹಾಸ್ಪಿಟಲ್ ಎಂಬಿಬಿಎಸ್‌ನ 10 ವಿದ್ಯಾರ್ಥಿಗಳು ಸೇರಿದಂತೆ 274 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಇದನ್ನೂ ಓದಿ: 1.57 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ ಕೇರ್ ಟೇಕರ್ ಲೇಡಿ ಅರೆಸ್ಟ್

    ಮುಂಬೈನ 9 ಸಿಬ್ಬಂದಿ ಯಾರು?
    ಕ್ಯಾಪ್ಟನ್ ಸುಮೀತ್ ಸಭರ್ವಾಲ್, ಜಲವಾಯು ವಿಹಾರ್, ಪೋವೈ
    ಕ್ಲೈವ್ ಕುಂದರ್, ಮಂಗಳೂರು ಮೂಲದವರಾದರೂ ಬೊರಿವಲಿಯಲ್ಲಿ ವಾಸ
    ಅಪರ್ಣಾ ಮಹಾಡಿಕ್, ಗೋರೆಗಾಂವ್ ಈಸ್ಟ್
    ಸೈನೀತಾ ಚಕ್ರವರ್ತಿ, ಜುಹು ಕೋಲಿವಾಡ
    ದೀಪಕ್ ಪಾಠಕ್, ಬದ್ಲಾಪುರ್
    ರೋಷನಿ ಸೋಂಘಾರೆ, ಡೊಂಬಿವಿಲಿ
    ಶ್ರದ್ಧಾ ಧವನ್, ಮುಲುಂದ್
    ಮೈಥಿಲಿ ಪಾಟೀಲ್, ಪನ್ವೇಲ್
    ಎಂಗಂಥೋಯ್ ಶರ್ಮಾ, ಮಣಿಪುರದವರಾದರೂ ಮುಂಬೈನಲ್ಲಿ ವಾಸ

    ಉಳಿದ ಮೂವರು ಸಿಬ್ಬಂದಿ ಎಲ್ಲಿಯವರು?
    ಇರ್ಫಾನ್ ಶೇಖ್, ಸಂತ ತುಕಾರಾಂ ನಗರ, ಪಿಂಪ್ರಿ ಚಿಂಚ್ವಾಡ, ಮಹಾರಾಷ್ಟ್ರ
    ಮನೀಷಾ ಥಾಪಾ, ಪಾಟ್ನಾ, ಬಿಹಾರ
    ಲಮ್ನುಂಥೆಮ್ ಸಿಂಗ್ಸನ್, ಮಣಿಪುರ

  • ಏರ್‌ ಇಂಡಿಯಾ ವಿಮಾನ ದುರಂತ – ಸಾವಿನ ಸಂಖ್ಯೆ 274ಕ್ಕೆ ಏರಿಕೆ

    ಏರ್‌ ಇಂಡಿಯಾ ವಿಮಾನ ದುರಂತ – ಸಾವಿನ ಸಂಖ್ಯೆ 274ಕ್ಕೆ ಏರಿಕೆ

    ಗಾಂಧೀನಗರ: ಅಹಮದಾಬಾದ್‌ನಲ್ಲಿ (Ahmedabad) ಸಂಭವಿಸಿದ ಏರ್‌ ಇಂಡಿಯಾ (Air India) ಬೋಯಿಂಗ್‌ ಡ್ರೀಮ್‌ಲೈನರ್‌ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ.

    ಈ ಸಾವು-ನೋವುಗಳಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರು, ಪೈಲಟ್‌ ಹಾಗೂ ಸಿಬ್ಬಂದಿ, ವಿಮಾನ ಅಪಘಾತಕ್ಕೀಡಾದ ಸ್ಥಳದಲ್ಲಿದ್ದ ಜನರು ಸೇರಿದ್ದಾರೆ. ಇದನ್ನೂ ಓದಿ: ಅಹಮದಾಬಾದ್ ವಿಮಾನ ಪತನ – 5 ತಂಡಗಳಿಂದ ತನಿಖೆ

    ಗುರುವಾರ ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಅಪಘಾತಕ್ಕೀಡಾದ ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಪೈಲಟ್‌ಗಳು ಮತ್ತು 10 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಈ ಪೈಕಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಮಾತ್ರ ಅಪಘಾತದಲ್ಲಿ ಬದುಕುಳಿದರು.

    ದುರಂತಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ವಿಮಾನದಲ್ಲಿದ್ದ ಎರಡು ಬ್ಲ್ಯಾಕ್‌ಬಾಕ್ಸ್‌ಗಳ ಪೈಕಿ ಒಂದು ಪತ್ತೆಯಾಗಿದೆ. ಅದನ್ನು ಅಧಿಕಾರಿಗಳ ತಂಡ ಕೊಂಡೊಯ್ದಿದೆ. ಮತ್ತೊಂದು ಬ್ಲ್ಯಾಕ್‌ಬಾಕ್ಸ್‌ಗಾಗಿ ಹುಡುಕಾಟ ನಡೆದಿದೆ. ಇದನ್ನೂ ಓದಿ: ಬ್ಲ್ಯಾಕ್‌ಬಾಕ್ಸ್‌ನಲ್ಲಿ ಅಡಗಿದೆ ವಿಮಾನ ದುರಂತದ ರಹಸ್ಯ – ನಾಳೆಯೊಳಗೆ ಅಪಘಾತಕ್ಕೆ ಅಸಲಿ ಕಾರಣ ಸಿಗುತ್ತಾ?

    ಅಪಘಾತ ಸಂಭವಿಸಿದ ಮಾರನೇ ದಿನ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

  • ಅಹಮದಾಬಾದ್ ವಿಮಾನ ಪತನ – 5 ತಂಡಗಳಿಂದ ತನಿಖೆ

    ಅಹಮದಾಬಾದ್ ವಿಮಾನ ಪತನ – 5 ತಂಡಗಳಿಂದ ತನಿಖೆ

    ಅಹಮದಾಬಾದ್: ಎಂಜಿನ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿ ಅಹಮದಾಬಾದ್‌ನ (Ahmedabad) ವಿಮಾನ ನಿಲ್ದಾಣದ ಬಳಿಯ ಮೇಘಾನಿ ಜನವಸತಿ ಪ್ರದೇಶದಲ್ಲಿ ಏರ್ ಇಂಡಿಯಾ (Air India) ವಿಮಾನ ಪತನಗೊಂಡ (Plane Crash) ಪರಿಣಾಮ ವಿಮಾನದಲ್ಲಿದ್ದ 241 ಮಂದಿ ಸೇರಿದಂತೆ ಒಟ್ಟು 274 ಮಂದಿ ಮೃತಪಟ್ಟಿದ್ದಾರೆ. 100 ಕೋಟಿ ಪ್ರಯಾಣಿಕರನ್ನು ಸೇಫ್ ಲ್ಯಾಂಡ್ ಮಾಡಿ ಬ್ರ‍್ಯಾಂಡ್ ಸೃಷ್ಟಿಸಿದ್ದ ಏರ್ ಲೈನ್ಸ್‌ನಲ್ಲಿ ಏನು ತಾಂತ್ರಿಕದೋಷ ಉಂಟಾಯಿತು ಎಂಬ ಕುರಿತು ತನಿಖೆ ಆರಂಭಗೊಂಅಡಿದೆ.

    ಸುರಕ್ಷತೆ, ದಕ್ಷತೆ, ಆರಾಮದಾಯಕ ಬೋಯಿಂಗ್ 787 ವಿಮಾನಕ್ಕೆ ಏನಾಯಿತು? ಸೇಫ್ ಲ್ಯಾಂಡ್‌ಗೆ ಹೆಸರುವಾಸಿಯಾಗಿದ್ದ ವಿಮಾನ ಪತನ ಆಗಿದ್ದು ಹೇಗೆ ಎಂಬ ಕುರಿತು ತನಿಖೆ ತೀವ್ರಗೊಂಡಿದೆ. ವಿಮಾನ ಪತನಕ್ಕೆ ಕಾರಣ ಏನು ಎಂಬ ಕುರಿತು ಐದು ತಂಡಗಳು ತನಿಖೆ ಆರಂಭಿಸಿವೆ.

    ಎಎಐಬಿ (ಏರ್ ಕ್ರಾಫ್ಟ್ ಆಕ್ಸಿಡೆಂಟ್ ಇನ್ವೆಸ್ಟಿಗೇಷನ್ ಬ್ಯೂರೋ):
    ನಾಗರಿಕ ವಿಮಾನಯಾನ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಎಎಐಬಿ ದೇಶದಲ್ಲಿ ನಡೆಯುವ ವಿಮಾನ ದುರಂತಗಳ ಅಧಿಕೃತ ತನಿಖಾ ಸಂಸ್ಥೆಯಾಗಿದೆ.

    ಉನ್ನತ ಮಟ್ಟದ ಸಮಿತಿ:
    ಅಪಘಾತಕ್ಕೆ ನಿಖರ ಕಾರಣ ಪತ್ತೆ ಹಚ್ಚಿ, ವಿಮಾನಯಾನ ಸುರಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿವಿಧ ಕ್ಷೇತ್ರಗಳ ತಜ್ಞರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಈ ತಂಡ ತನಿಖಾ ತಂಡಗಳ ಸಹಯೋಗದೊಂದಿದೆ ಕಾರ್ಯ ನಿರ್ವಹಿಸಲಿದೆ.

    ಅಮೆರಿಕ ಮತ್ತು ಬ್ರಿಟನ್ ತಂಡಗಳು:
    ಅಮೆರಿಕ ಮತ್ತು ಬ್ರಿಟನ್ ತಂಡಗಳನ್ನು ಏರ್ ಇಂಡಿಯಾ ವಿಮಾನ ಪತನದ ತನಿಖೆಗೆ ನಿಯೋಜಿಸಲಾಗಿದೆ. ಅಮೆರಿಕ ಮೂಲದ ಬೋಯಿಂಗ್ ತಜ್ಞರು ಈ ತಂಡದಲ್ಲಿ ಇರಲಿದ್ದಾರೆ.

    ಎನ್‌ಐಎ:
    ಮತ್ತೊಂದಡೆ ರಾಷ್ಟ್ರೀಯ ತನಿಖಾ ದಳ ಕೂಡ ತನಿಖೆಗೆ ಇಳಿದಿದೆ. ವಿದ್ವಾಂಸಕ ಕೃತ್ಯ ದೃಷ್ಟಿಕೋನದಿಂದಲೂ ತನಿಖೆ ಆರಂಭಿಸಿದೆ.

    ಗುಜರಾತ್ ಪೊಲೀಸ್:
    ಗುಜರಾತ್ ಸರ್ಕಾರ 40 ಸದಸ್ಯರ ವಿಶೇಷ ತಂಡ ರಚಿಸಿದೆ. ಈ ತಂಡವು ನಾಗರಿಕ ವಿಮಾನಯಾನ ಸಚಿವಾಲಯದ ತನಿಖಾ ತಂಡಕ್ಕೆ ನೆರವು ನೀಡಲಿದೆ.