Tag: ಏರ್ ಇಂಡಿಯಾ

  • Ahmedabad Plane Crash | ಮಂಗಳೂರು ಮೂಲದ ಕ್ಲೈವ್‌ ಕುಂದರ್‌ ಸಹ ಪೈಲಟ್‌!

    Ahmedabad Plane Crash | ಮಂಗಳೂರು ಮೂಲದ ಕ್ಲೈವ್‌ ಕುಂದರ್‌ ಸಹ ಪೈಲಟ್‌!

    ನವದೆಹಲಿ: ಪತನಗೊಂಡ ಏರ್‌ ಇಂಡಿಯಾ (Air India) ವಿಮಾನದಲ್ಲಿ ಮಂಗಳೂರು ಮೂಲದ ಕ್ಲೈವ್ ಕುಂದರ್ (Clive Kunder) ಸಹ ಪೈಲಟ್‌ ಆಗಿದ್ದರು ಎಂಬ ವಿಚಾರ ಈಗ ತಿಳಿದು ಬಂದಿದೆ.

    ಫೆಡರಲ್ ವಾಯುಯಾನ ನಿಯಮಗಳ ಪ್ರಕಾರ ಪ್ರಯಾಣಿಕ ಮತ್ತು ಸರಕು ವಿಮಾನಗಳ ಹಾರಾಟಕ್ಕೆ ಕನಿಷ್ಠ ಇಬ್ಬರು ಪೈಲಟ್‌ಗಳು ಇರಬೇಕು. ಇದನ್ನೂ ಓದಿ: ಹಕ್ಕಿ ಡಿಕ್ಕಿಯಿಂದ ಟೇಕಾಫ್‌ ವೇಗ ಕಳೆದುಕೊಂಡು ವಿಮಾನ ಪತನ – ತಜ್ಞರು ಹೇಳೋದು ಏನು?

    ಕ್ಲೈವ್ ಕುಂದರ್ ಮುಂಬೈನಲ್ಲಿ ನೆಲೆಸಿದ್ದು ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ನಲ್ಲಿ ತರಬೇತಿ ಪಡೆದಿದ್ದರು. ಒಟ್ಟು 1,100 ಗಂಟೆಗಳ ವಿಮಾನ ಹಾರಾಟದ ಅನುಭವವನ್ನು ಹೊಂದಿದ್ದರು.

     

    ಕ್ಲೈವ್ ಕುಂದರ್ ಅವರು 8,200 ಗಂಟೆಗಳಿಗಿಂತ ಹೆಚ್ಚು ಹಾರಾಟದ ಅನುಭವ ಹೊಂದಿರುವ ಅನುಭವಿ ಪೈಲಟ್‌ ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅವರಿಗೆ ಸಹಾಯ ಮಾಡುತ್ತಿದ್ದರು.

    ಅಹಮದಾಬಾದ್‌ನಿಂದ ಲಂಡನ್‌ಗೆ ಮಧ್ಯಾಹ್ನ 1:39ಕ್ಕೆ ಟೇಕಾಫ್‌ ಆಗಿದ್ದ ಏರ್‌ ಇಂಡಿಯಾ ವಿಮಾನ ತಾಂತ್ರಿಕ ದೋಷದಿಂದ ಪತನಗೊಂಡು ಸಮೀಪದ ಮೇಘನಿ ನಗರದ ವಸತಿ ಪ್ರದೇಶದಲ್ಲಿವ ಮೆಡಿಕಲ್‌ ಹಾಸ್ಟೆಲ್‌ನ ಅಡುಗೆ ಮನೆ ಮೇಲೆ ಬಿದ್ದಿದೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌,? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

    ಇಬ್ಬರು ಪೈಲಟ್‌, 10 ಸಿಬ್ಬಂದಿ ಸೇರಿ ಒಟ್ಟು 242 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈಗಾಗಲೇ 130ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆ ಆಗುತ್ತಿದೆ.

    ಆಸ್ಪತ್ರೆಗೆ ಸೇರಿದ ಹಲವು ಮಂದಿಯ ಸ್ಥಿತಿ ಗಂಭೀರವಾಗಿದೆ. ವಿಮಾನ ಮೆಡಿಕಲ್‌ ಕಾಲೇಜಿನ ಹಾಸ್ಟೆಲಿನ ಅಡುಗೆ ಮನೆ ಮೇಲೆ ಬಿದ್ದಿದೆ. ಮಧ್ಯಾಹ್ನ ವಿದ್ಯಾರ್ಥಿಗಳು ಊಟ ಮಾಡುವ ಸಮಯದಲ್ಲೇ  ಕಟ್ಡಡದ ಮೇಲೆ ಬಿದ್ದ ಕಾರಣ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.

  • ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ: ಮೋದಿ

    ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ: ಮೋದಿ

    ನವದೆಹಲಿ: ಅಹಮದಾಬಾದ್‌ನಲ್ಲಿ (Ahmedabad) ಏರ್ ಇಂಡಿಯಾ (Air India) ವಿಮಾನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಸಂತಾಪ ಸೂಚಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ. ಇದರಿಂದ ಎಲ್ಲರಿಗೂ ಅತೀವ ನೋವು ಉಂಟಾಗಿದೆ. ದುರಂತದಲ್ಲಿ ಸಿಲುಕಿರುವವರಿಗೆ ನೆರವು ನೀಡುವ ವಿಚಾರವಾಗಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅಲ್ಲದೇ ನಿರಂತರವಾಗಿ ಅವರ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಬಿಜೆ ಮೆಡಿಕಲ್ ಆಸ್ಪತ್ರೆಗೆ ಬಡಿದ ಏರ್ ಇಂಡಿಯಾ ವಿಮಾನ – 7 ವಿದ್ಯಾರ್ಥಿಗಳ ಸಾವು ಶಂಕೆ

    ಇನ್ನೂ ಅವಘಡದ ಕುರಿತು ಅವರು, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿದ್ದು, ವಿಮಾನ ಅಪಘಾತದ ಕುರಿತು ಮಾಹಿತಿ ಪಡೆದಿದ್ದಾರೆ.

    ಏನಿದು ಘಟನೆ?
    ಟೇಕಾಫ್ ನಂತರ ಎಂಜಿನ್‌ನಲ್ಲಿ ತಾಂತ್ರಿಕದೋಷ ಉಂಟಾದ ಪರಿಣಾಮ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನ ವಿಮಾನ ನಿಲ್ದಾಣದ ಬಳಿಯ ಬಿಜೆ ಮೆಡಿಕಲ್ ಕಾಲೇಜಿನ ಮೇಲೆ ಪತನಗೊಂಡಿದೆ. ವಿಮಾನ ನಿಲ್ದಾಣದಿಂದ ಕೇವಲ 2 ಕಿ.ಮೀ ದೂರದ ಮೇಘಾನಿ ಪ್ರದೇಶದಲ್ಲಿ ವಿಮಾನ ಪತನಗೊಂಡಿದ್ದು, ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದೆ.

    ಅಲ್ಲದೇ ಬಿಜೆ ಮೆಡಿಕಲ್ ಕಾಲೇಜು ಹಾಸ್ಟೆಲ್‌ಗೆ ವಿಮಾನ ಬಡಿದ್ದಿದ್ದು, ಭಾರೀ ಸಾವು-ನೋವಿನ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ 7 ಅಗ್ನಿಶಾಮಕ ಹಾಗೂ ಎನ್‌ಡಿಆರ್‌ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈವರೆಗೂ 133 ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.ಇದನ್ನೂ ಓದಿ: ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

  • ವಿಮಾನ ಪತನ –  ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

    ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

    ಅಹಮದಾಬಾದ್‌: ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ (Former Gujarat CM Vijay Rupani) ವಿಮಾನ ದುರಂತದಲ್ಲಿ (Plane Crash)  ಮೃತಪಟ್ಟಿದ್ದಾರೆ.

    ಲಂಡನ್‌ಗೆ ಪ್ರಯಾಣಿಸುತ್ತಿದ್ದ ವಿಜಯ್‌ ರೂಪಾನಿ 12ನೇ ಸೀಟಿನಲ್ಲಿ ಕುಳಿತುಕೊಂಡಿದ್ದರು. ಲಂಡನ್‌ನಲ್ಲಿರುವ ಮಗಳ ಮನೆಗೆ ತೆರಳಲು ರೂಪಾನಿ ವಿಮಾನ ಹತ್ತಿದ್ದರು. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

     

    ಇಬ್ಬರು ಪೈಲಟ್‌, 10 ಸಿಬ್ಬಂದಿ ಸೇರಿ ಒಟ್ಟು 242 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈಗಾಗಲೇ 130ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆ ಆಗುತ್ತಿದೆ.

    ಆಸ್ಪತ್ರೆಗೆ ಸೇರಿದ ಹಲವು ಮಂದಿಯ ಸ್ಥಿತಿ ಗಂಭೀರವಾಗಿದೆ. ವಿಮಾನ ಮೆಡಿಕಲ್‌ ಕಾಲೇಜಿನ ಹಾಸ್ಟೆಲಿನ ಅಡುಗೆ ಮನೆ ಮೇಲೆ ಬಿದ್ದಿದೆ. ಮಧ್ಯಾಹ್ನ ವಿದ್ಯಾರ್ಥಿಗಳು ಊಟ ಮಾಡುವ ಸಮಯದಲ್ಲೇ ಪತನ ಗೊಂಡಿರುವ ಕಾರಣ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ – ಪೈಲಟ್‌ಗೆ ಇತ್ತು 8,200 ಗಂಟೆಗಳ ಹಾರಾಟದ ಅನುಭವ

  • ಹಕ್ಕಿ ಡಿಕ್ಕಿಯಿಂದ ಟೇಕಾಫ್‌ ವೇಗ ಕಳೆದುಕೊಂಡು ವಿಮಾನ ಪತನ – ತಜ್ಞರು ಹೇಳೋದು ಏನು?

    ಹಕ್ಕಿ ಡಿಕ್ಕಿಯಿಂದ ಟೇಕಾಫ್‌ ವೇಗ ಕಳೆದುಕೊಂಡು ವಿಮಾನ ಪತನ – ತಜ್ಞರು ಹೇಳೋದು ಏನು?

    ನವದೆಹಲಿ: ಹಕ್ಕಿ ಡಿಕ್ಕಿಯಾಗಿ (Bird Hit) ಅಹಮಾದಬಾದ್‌ನಲ್ಲಿ (Ahmedabad) ಏರ್‌ ಇಂಡಿಯಾ (Air India) ವಿಮಾನ ಪತನಗೊಂಡಿತಾ (Plane Crash) ಎಂಬ ಶಂಕೆ ವ್ಯಕ್ತವಾಗಿದೆ.

    ವಿಮಾನ ನಿಲ್ದಾಣದಿಂದ ಟೇಕಾಫ್‌ ಆಗುವಾಗ ವಿಮಾನದ ಎಂಜಿನ್‌ಗೆ ಪಕ್ಷಿ ಬಡಿದ ಕಾರಣ ಈ ದುರಂತ ಸಂಭವಿಸಬರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಟೇಕಾಫ್‌ ಆಗುವಾಗ ಎಂಜಿನ್‌ಗೆ ಪಕ್ಷಿ ಬಡಿದಾಗ ವಿಮಾನ ಮುಂದಕ್ಕೆ ಹೋಗಬೇಕಾದ ವೇಗ ಅಟೋಮ್ಯಾಟಿಕ್‌ ಆಗಿ ತಗ್ಗುತ್ತದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ʻಮೇ ಡೇʼ – ವಿಮಾನ ಪತನಕ್ಕೂ ಮುನ್ನ ಎಟಿಸಿಗೆ ಪೈಲಟ್‌ ಕೊಟ್ಟ ಕೊನೆಯ ಸಂದೇಶ

    ಸಾಧಾರಣವಾಗಿ ವಿಮಾನದ ಒಂದು ಎಂಜಿನ್‌ಗೆ ಪಕ್ಷಿ ಬಡಿದರೆ ಇನ್ನೊಂದು ಎಂಜಿನ್‌ ಮೂಲಕ ಚಾಲನೆ ಮಾಡಿ ಸಮೀಪದ ನಿಲ್ದಾಣದಲ್ಲಿ ಪೈಲಟ್‌ ತುರ್ತು ಲ್ಯಾಂಡ್‌ ಮಾಡುತ್ತಾರೆ. ಆದರೆ ಇಲ್ಲಿ ಎರಡು ಎಂಜಿನಿಗೆ ಪಕ್ಷಿ ಬಡಿದ ಕಾರಣ ವಿಮಾನ ವೇಗವನ್ನು ಕಳೆದುಕೊಂಡು ಪತನ ಹೊಂದಿರಬಹುದು ಎಂಬ ಅನುಮಾನವನ್ನು ಹಲವರು ವ್ಯಕ್ತಪಡಿಸಿದ್ದಾರೆ. ಈ ರೀತಿ ಎರಡು ಎಂಜಿನಿಗೆ ಪಕ್ಷಿ ಬಡಿಯುವುದು ಅಪರೂಪದಲ್ಲಿ ಅಪರೂಪ.

    ವಿಮಾನ ಟೇಕಾಫ್‌ ಆಗಿತ್ತು. ಅದರ ಲ್ಯಾಂಡಿಂಗ್ ಗೇರ್ ಮೇಲಕ್ಕೆತ್ತುವ ಮೊದಲೇ ವಿಮಾನವನ್ನು ಕೆಳಗಿಳಿಯಲು ಪ್ರಾರಂಭಿಸಲಾಗಿತ್ತು. ವಿಮಾನದ ಇಂಜಿನ್ ಶಕ್ತಿಯನ್ನು ಕಳೆದುಕೊಂಡರೆ ಮಾತ್ರ ಹೀಗಾಗುತ್ತದೆ. ತನಿಖೆಯಿಂದ ನಿಖರವಾದ ಕಾರಣ ತಿಳಿಯುವ ಸಾಧ್ಯತೆಯಿದೆ.

    ಅಹಮದಾಬಾದ್ ಏರ್‌ಪೋರ್ಟ್‌ನಲ್ಲಿ ಮೊದಲಿಂದಲೂ ಹಕ್ಕಿಗಳ ಸಮಸ್ಯೆ ಇದೆ ಎಂದು ವರದಿಯಾಗುತ್ತಿದೆ.

    ಅಹಮದಾಬಾದ್‌ನಿಂದ ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಮಧ್ಯಾಹ್ನ 1:39 ಸುಮಾರಿಗೆ ಟೇಕಾಫ್ ಆದ ಸ್ವಲ್ಪ ಸಮಯದಲ್ಲೇ ಅಪಘಾತಕ್ಕೀಡಾಗಿದೆ. ಈ ವಿಮಾನದಲ್ಲಿ 10 ಸಿಬ್ಬಂದಿ ಸೇರಿ, 242 ಜನರಿದ್ದರು. ಅದರಲ್ಲಿದ್ದ 110 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌,? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

    ವಿಮಾನದ ಬ್ಲಾಕ್‌ ಬಾಕ್ಸ್‌ ಪರಿಶೀಲನೆ ಬಳಿಕ ಈ ಅವಘಡಕ್ಕೆ ನಿಖರ ಕಾರಣ ತಿಳಿಯಲಿದೆ. ಅಧಿಕಾರಿಗಳು ವಿಮಾನ ದುರಂತದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌,? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

  • ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

    ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

    ಯಾವುದೇ ವಿಮಾನ/ ಹೆಲಿಕಾಪ್ಟರ್‌ ಪತನವಾದರೂ ಪತನದ ತನಿಖೆಯಲ್ಲಿ ಬ್ಲ್ಯಾಕ್‌ ಬಾಕ್ಸ್‌ (Black Box) ಪ್ರಮುಖ ಪಾತ್ರ ವಹಿಸುತ್ತದೆ. ಬ್ಲ್ಯಾಕ್ ಬಾಕ್ಸ್ ಹಾರಾಟದ ಸಮಯದಲ್ಲಿನ ವಿಮಾನದ ಎಲ್ಲಾ ಚಟುವಟಿಕೆಗಳನ್ನು ದಾಖಲಿಸುತ್ತದೆ. ಎಲ್ಲಾ ರೀತಿಯ ವಿಮಾನಗಳಲ್ಲಿ ಬ್ಲ್ಯಾಕ್‌ ಬಾಕ್ಸ್‌ ಅನ್ನು ಕಡ್ಡಾಯವಾಗಿ ಅಳವಡಿಸಲಾಗುತ್ತದೆ. ಹೀಗಾಗಿ ಇಲ್ಲಿ ಏನಿದು ವಿಮಾನ ಬ್ಲ್ಯಾಕ್‌ ಬಾಕ್ಸ್‌? ಹೇಗೆ ಕಾರ್ಯನಿರ್ವಹಿಸುತ್ತದೆ ಇತ್ಯಾದಿ ವಿಚಾರಗಳನ್ನು ಇಲ್ಲಿ ನೀಡಲಾಗಿದೆ.

    ಏನಿದು ಬ್ಲ್ಯಾಕ್‌ ಬಾಕ್ಸ್‌?
    ವಿಮಾನದಲ್ಲಿ ಧ್ವನಿಗ್ರಹಣಕ್ಕೆ ಬಳಸಲಾಗುವ ಎರಡು ಸಾಧನಗಳನ್ನು ತಾಂತ್ರಿಕ ಭಾಷೆಯಲ್ಲಿ ‘ಬ್ಲ್ಯಾಕ್ ಬಾಕ್ಸ್’ ಎಂದು ಕರೆಯಲಾಗುತ್ತದೆ. ಬ್ಲ್ಯಾಕ್ ಬಾಕ್ಸ್ ಅನ್ನು ‘ಫ್ಲೈಟ್ ಡಾಟಾ ರೆಕಾರ್ಡರ್’ ಎಂದೂ ಕರೆಯುತ್ತಾರೆ. ಬ್ಲ್ಯಾಕ್ ಬಾಕ್ಸ್ ಹಾರಾಟದ ಸಮಯದಲ್ಲಿನ ವಿಮಾನದ ಎಲ್ಲಾ ಚಟುವಟಿಕೆಗಳನ್ನು ದಾಖಲಿಸುತ್ತದೆ. ಎಲ್ಲ ರೀತಿಯ ವಿಮಾನಗಳಲ್ಲಿ ಬ್ಲ್ಯಾಕ್‌ ಬಾಕ್ಸ್‌ ಅನ್ನು ಕಡ್ಡಾಯವಾಗಿ ಅಳವಡಿಸಲಾಗುತ್ತದೆ.

    ವಿಮಾನ ಅಪಘಾತವಾದಾಗ ಅದಕ್ಕೆ ಕಾರಣ ಪತ್ತೆ ಹಚ್ಚಲು ನೆರವಾಗಲೆಂದೇ 5 ಕೆಜಿ ತೂಕದ ರೆಕಾರ್ಡಿಂಗ್ ಸಾಧನವನ್ನು ಅಳವಡಿಸಲಾಗುತ್ತದೆ. ಭದ್ರತೆಯ ದೃಷ್ಟಿಯಿಂದ ಕಪ್ಪು ಪೆಟ್ಟಿಗೆಯನ್ನು ಸಾಮಾನ್ಯವಾಗಿ ವಿಮಾನದ ಹಿಂಭಾಗದಲ್ಲಿ ಇಡಲಾಗುತ್ತದೆ. ಈ ಪೆಟ್ಟಿಗೆಯನ್ನು ಟೈಟಾನಿಯಂ ಲೋಹದಿಂದ ಮಾಡಲಾಗಿದ್ದು, ಟೈಟಾನಿಯಂ ಪೆಟ್ಟಿಗೆಯಲ್ಲಿ ಸುತ್ತುವರಿಯಲಾಗಿದೆ. ಇದು ಎಷ್ಟು ಶಕ್ತಿಶಾಲಿಯೆಂದರೆ ಸಮುದ್ರದಲ್ಲಿ ಬಿದ್ದರೆ ಅಥವಾ ಎತ್ತರದಿಂದ ಬಿದ್ದರೂ ಯಾವುದೇ ಆಘಾತವನ್ನು ತಡೆದುಕೊಳ್ಳುವ ಶಕ್ತಿಯನ್ನು ಹೊಂದಿದೆ.

     

    ಹಿಂಭಾಗದಲ್ಲಿ ಯಾಕೆ?
    ಅಪಘಾತದ ಸಂಭವಿಸಿದಾಗ ಹಿಂಭಾಗದಲ್ಲಿ ಅದರಲ್ಲೂ ಬಾಲದ ಕಡೆ ಪೆಟ್ಟು ಬೀಳುವುದು ಕಡಿಮೆ. ಯಾಕೆಂದರೆ ಬಾಲ ಎತ್ತರದಲ್ಲಿರುತ್ತದೆ. ಈ ಕಾರಣಕ್ಕೆ ಬಾಲದಲ್ಲಿ ಅಳವಡಿಸಲಾಗಿರುತ್ತದೆ. ವಿಮಾನದ ಎಂಜಿನ್‌ಗೆ ಜೋಡಿಸಲಾದ ಜನರೇಟರ್ ನಿಂದ ಬ್ಲ್ಯಾಕ್ ಬಾಕ್ಸ್ ಚಾರ್ಜ್ ಆಗುತ್ತದೆ.

    ಎರಡು ಪ್ರತ್ಯೇಕ ಪೆಟ್ಟಿಗೆಗಳಿವೆ
    1. ಫ್ಲೈಟ್ ಡೇಟಾ ರೆಕಾರ್ಡರ್ – ಈ ಪೆಟ್ಟಿಗೆಯಲ್ಲಿ ನಿರ್ದೇಶನ, ಎತ್ತರ, ಇಂಧನ, ವೇಗ, ಕ್ಯಾಬಿನ್ ತಾಪಮಾನ ಇತ್ಯಾದಿಗಳ ಬಗ್ಗೆ ಮಾಹಿತಿ ಇರುತ್ತದೆ. ಕೊನೆಯ 25 ಗಂಟೆಗಳ ಕಾಲದ ಒಟ್ಟು 88 ಮಾಹಿತಿಗಳ ಡೇಟಾವನ್ನು ಸಂಗ್ರಹಿಸುತ್ತದೆ. 1,100 ಡಿಗ್ರಿ ಸೆಲ್ಶಿಯಸ್‌ ತಾಪಮಾನ ಇದ್ದರೆ 1 ಗಂಟೆ, 260 ಡಿಗ್ರಿ ಸೆಲ್ಶಿಯಸ್‌ ತಾಪಮಾನ ಇದ್ದರೆ ಇದ್ದರೆ 10 ಗಂಟೆಗಳ ಕಾಲ ಡೇಟಾವನ್ನು ತಡೆದಿಟ್ಟುಕೊಳ್ಳಬಹುದು. ತನಿಖಾಧಿಕಾರಿಗಳಿಗೆ ಸುಲಭವಾಗಿ ಗುರುತಿಸಲು ಕೆಂಪು ಅಥವಾ ಗುಲಾಬಿ ಬಣ್ಣದಲ್ಲಿ ಈ ಪೆಟ್ಟಿಗೆಯನ್ನು ಮಾಡಲಾಗುತ್ತದೆ.

    2. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್: ಈ ಬಾಕ್ಸ್ ಕೊನೆಯ ಎರಡು ಗಂಟೆಗಳ ವಿಮಾನದ ಧ್ವನಿಯನ್ನು ದಾಖಲಿಸುತ್ತದೆ. ಯಾವುದೇ ಅಪಘಾತ ಸಂಭವಿಸುವ ಮೊದಲು ಎಂಜಿನ್, ತುರ್ತು ಎಚ್ಚರಿಕೆ, ಕ್ಯಾಬಿನ್ ಮತ್ತು ಕಾಕ್‌ಪಿಟ್‌ ಧ್ವನಿಯನ್ನು ದಾಖಲಿಸುತ್ತದೆ.

    ಹೇಗೆ ಕಾರ್ಯನಿರ್ವಹಿಸುತ್ತದೆ?
    ಇದು ಯಾವುದೇ ವಿದ್ಯುತ್ ಇಲ್ಲದೆ 30 ದಿನಗಳವರೆಗೆ ಬ್ಲಾಕ್‌ ಬಾಕ್ಸ್‌ ಕೆಲಸ ಮಾಡಬಹುದು. ಪತ್ತೆ ಕಾರ್ಯ ಸುಲಭವಾಗಲು ಸುಮಾರು 30 ದಿನಗಳವರೆಗೆ ಸಿಗ್ನಲ್‌ ಹೊರಸೂಸುತ್ತಿರುತ್ತದೆ. ಈ ಧ್ವನಿಯನ್ನು ತನಿಖಾಧಿಕಾರಿಗಳು ಸುಮಾರು 2-3 ಕಿಲೋಮೀಟರ್ ದೂರದಿಂದ ಗುರುತಿಸಬಹುದು. 14 ಸಾವಿರ ಅಡಿ ಆಳದ ಸಮದ್ರದಲ್ಲಿದ್ದರೂ ಸಿಗ್ನಲ್‌ ಹೊರ ಸೂಸುತ್ತಿರುತ್ತದೆ.

    ಬಳಕೆ ಆಗಿದ್ದು ಯಾವಾಗ?
    1953-54ರ ವರ್ಷದಲ್ಲಿ ವಿಮಾನ ಅಪಘಾತಗಳು ಹೆಚ್ಚಾಗುತ್ತಿತ್ತು. ಯಾಕೆ ಈ ಅಪಘಾತಗಳು ಸಂಭವಿಸುತ್ತದೆ ಎಂಬುದನ್ನು ಪತ್ತೆ ಹಚ್ಚಲು ಮತ್ತು ಮುಂದೆ ಅಪಘಾತ ತಡೆಯಲು ಬ್ಲ್ಯಾಕ್‌ಬಾಕ್ಸ್‌ ಅನ್ನು ಅಭಿವೃದ್ಧಿ ಪಡಿಸಲಾಯಿತು. ಈ ಮೊದಲು ಇದು ಕೆಂಪು ಬಣ್ಣದ್ದಲ್ಲಿತ್ತು. ಹೀಗಾಗಿ ಇದನ್ನು ʼಕೆಂಪು ಮೊಟ್ಟೆ’ ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು. ಬಳಿಕ ಬಾಕ್ಸ್‌ ಒಳಗಡೆ ಇರುವ ಗೋಡೆಗಳು ಕಪ್ಪು ಬಣ್ಣದ್ದಲ್ಲಿದ್ದ ಕಾರಣ ಇದನ್ನು ‘ಬ್ಲ್ಯಾಕ್ ಬಾಕ್ಸ್’ ಎಂದು ಕರೆಯಲಾಯಿತು. ವಿಮಾನ ಅಪಘಾತಕ್ಕೆ ನಿಖರ ಕಾರಣವನ್ನು ಈ ಬ್ಲ್ಯಾಕ್‌ ಬಾಕ್ಸ್‌ ನೀಡದೇ ಇದ್ದರೂ ತನಿಖೆಯಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ಸತ್ಯ.

  • ಏರ್‌ ಇಂಡಿಯಾ ವಿಮಾನ ಪತನ – ಪೈಲಟ್‌ಗೆ ಇತ್ತು 8,200 ಗಂಟೆಗಳ ಹಾರಾಟದ ಅನುಭವ

    ಏರ್‌ ಇಂಡಿಯಾ ವಿಮಾನ ಪತನ – ಪೈಲಟ್‌ಗೆ ಇತ್ತು 8,200 ಗಂಟೆಗಳ ಹಾರಾಟದ ಅನುಭವ

    ನವದೆಹಲಿ: ಪತನಗೊಂಡ ಏರ್‌ ಇಂಡಿಯಾ (Air India) ವಿಮಾನದ ಪೈಲಟ್‌ 8,200 ಗಂಟೆಗಳ ಹಾರಾಟದ ಅನುಭವ ಹೊಂದಿದ್ದರು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು (ಡಿಜಿಸಿಎ) ತಿಳಿಸಿದೆ.

    ಅಹಮದಾಬಾದ್‌ನಲ್ಲಿ ಲಂಡನ್‌ಗೆ ಹೊರಟ್ಟಿದ್ದ ಏರ್‌ ಇಂಡಿಯಾ ವಿಮಾನ ತಾಂತ್ರಿಕ ಸಮಸ್ಯೆಯಿಂದ ಪತನಗೊಂಡ ಬೆನ್ನಲ್ಲೇ ಡಿಜಿಸಿಎ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.

    ಹೇಳಿಕೆಯಲ್ಲಿ ಏನಿದೆ?
    ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.39ಕ್ಕೆ ಟೇಕಾಫ್‌ ಆಗಿದೆ. ವಿಮಾನದಲ್ಲಿ 2 ಪೈಲಟ್‌ಗಳು ಮತ್ತು 10 ಕ್ಯಾಬಿನ್ ಸಿಬ್ಬಂದಿ ಸೇರಿದಂತೆ 242 ಜನ ಪ್ರಯಾಣಿಸುತ್ತಿದ್ದರು.

    ಪೈಲಟ್‌ ಕ್ಯಾಪ್ಟನ್ ಸುಮೀತ್ ಸಭರ್ವಾಲ್ 8,200 ಗಂಟೆಗಳ ಅನುಭವ ಹೊಂದಿದ್ದರೆ ಸಹ-ಪೈಲಟ್ 1,100 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದರು. ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಏರ್‌ ಟ್ರಾಫಿಕ್‌ ಕಂಟ್ರೋಲ್‌ ಕರೆ ಬಂದಿದೆ. ನಂತರ ಎಟಿಸಿ ಮಾಡಿದ ಕರೆಗಳಿಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

  • ಪತನಗೊಂಡ ಏರ್‌ ಇಂಡಿಯಾ ವಿಮಾನದಲ್ಲಿದ್ದರು ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ

    ಪತನಗೊಂಡ ಏರ್‌ ಇಂಡಿಯಾ ವಿಮಾನದಲ್ಲಿದ್ದರು ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ

    ಅಹಮದಾಬಾದ್‌: ಪತನಗೊಂಡ ಏರ್‌ ಇಂಡಿಯಾ (Air India) ವಿಮಾನದಲ್ಲಿ ಗುಜರಾತಿನ ಮಾಜಿ ಸಿಎಂ ವಿಜಯ್‌ ರೂಪಾನಿ (Vijay Rupani) ಪ್ರಯಾಣಿಸುತ್ತಿದ್ದರು.

    ಪತನಗೊಂಡ ವಿಮಾನದಲ್ಲಿ ಸಿಬ್ಬಂದಿ ಸೇರಿ ಒಟ್ಟು 242 ಮಂದಿ ಪ್ರಯಾಣಿಸುತ್ತಿದ್ದರು. ಈಗಾಗಲೇ ಸ್ಥಳಕ್ಕೆ ಅಂಬುಲೆನ್ಸ್‌ ಮತ್ತು ಅಗ್ನಿಶಾಮಕ ದಳ ಧಾವಿಸಿವೆ.

    ಟೇಕಾಫ್‌ ಆದ ಕೆಲವೇ ನಿಮಿಷದಲ್ಲಿ ಲಂಡನ್‌ಗೆ ತೆರಳುತ್ತಿದ್ದ ಏರ್‌ಇಂಡಿಯಾ ವಿಮಾನ ಪತನಗೊಂಡಿದೆ. ವಿಮಾನ ಮಧ್ಯಾಹ್ನಅಹಮದಾಬಾದ್‌ನಿಂದ ಟೇಕಾಫ್‌ ಆಗಿತ್ತು. ಟೇಕಾಫ್‌ ಆದ 10 ನಿಮಿಷದಲ್ಲಿ ತಾಂತ್ರಿಕ ದೋಷದಿಂದ ವಿಮಾನ ಪತನಗೊಂಡು ಜನವಸತಿ ಕಟ್ಟಡದ ಮೇಲೆ ಬಿದ್ದಿದೆ.

  • ಶ್ರೀನಗರ, ಜಮ್ಮು ಸೇರಿ 5 ನಗರಗಳಿಗೆ ಇಂಡಿಗೋ, ಏರ್‌ ಇಂಡಿಯಾ ವಿಮಾನ ಹಾರಾಟ ರದ್ದು

    ಶ್ರೀನಗರ, ಜಮ್ಮು ಸೇರಿ 5 ನಗರಗಳಿಗೆ ಇಂಡಿಗೋ, ಏರ್‌ ಇಂಡಿಯಾ ವಿಮಾನ ಹಾರಾಟ ರದ್ದು

    ನವದೆಹಲಿ: ಇಂಡಿಗೋ (IndiGo) ಮತ್ತು ಏರ್ ಇಂಡಿಯಾ (Air India) ಇಂದು ಶ್ರೀನಗರ, ಜಮ್ಮು, ಅಮೃತಸರ, ಚಂಡೀಗಢ ಮತ್ತು ಇತರ ಮೂರು ಗಡಿ ನಗರಗಳಿಗೆ ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದೆ.

    ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗಳಿಗೆ ದ್ವಿಮುಖ ವಿಮಾನ ಕಾರ್ಯಾಚರಣೆಯನ್ನು ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ. ಇಂಡಿಗೋ ಜಮ್ಮು, ಅಮೃತಸರ, ಚಂಡೀಗಢ, ಲೇಹ್, ಶ್ರೀನಗರ ಮತ್ತು ರಾಜ್‌ಕೋಟ್‌ಗಳಿಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಸಹ ರದ್ದುಗೊಳಿಸಿದೆ. ಇದನ್ನೂ ಓದಿ: ರಜೆಯಲ್ಲಿದ್ದ ಯೋಧ ಮರಳಿ ಗಡಿಯತ್ತ – ಬೀಳ್ಕೊಟ್ಟ ಗುಬ್ಬಿ ನಾಗರಿಕರು

    ಇತ್ತೀಚಿನ ಬೆಳವಣಿಗೆ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗೆ ಹೋಗುವ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಮೇ 13ರ ಮಂಗಳವಾರ ರದ್ದುಗೊಳಿಸಲಾಗಿದೆ. ನಾವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ನಿಮಗೆ ಮಾಹಿತಿ ನೀಡುತ್ತೇವೆ ಎಂದು ಏರ್ ಇಂಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

    ಭಾರತ ಮತ್ತು ಪಾಕಿಸ್ತಾನ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದ್ದ ವಿಮಾನ ನಿಲ್ದಾಣಗಳು ಸೋಮವಾರ ನಾಗರಿಕ ವಿಮಾನಯಾನಕ್ಕಾಗಿ ಮತ್ತೆ ತೆರೆದಿದ್ದವು. ಕಳೆದ ವಾರ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ 32 ವಿಮಾನ ನಿಲ್ದಾಣಗಳಲ್ಲಿ ಮೇ 15ರ ಬಳಿಕ ನಾಗರಿಕ ವಿಮಾನ ಕಾರ್ಯಾಚರಣೆಗಳು ಪುನರಾರಂಭಗೊಳ್ಳಲಿವೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಸೋಮವಾರ ಪ್ರಕಟಿಸಿದೆ. ಇದನ್ನೂ ಓದಿ: ಎರಡೂ ಕಡೆಯಿಂದ ಒಂದೇ ಒಂದು ಗುಂಡು ಹೊಡೆಯಬಾರದು: DGMO ಸಭೆಯಲ್ಲಿ ಏನಾಯ್ತು?

    ಅಧಂಪುರ, ಅಂಬಾಲಾ, ಅವಂತಿಪುರ, ಬಟಿಂಡಾ, ಬಿಕಾನೇರ್, ಹಲ್ವಾರ, ಹಿಂಡನ್, ಜೈಸಲ್ಮೇರ್, ಕಾಂಡ್ಲಾ, ಕಂಗ್ರಾ (ಗಗ್ಗಲ್), ಕೆಶೋದ್, ಕಿಶನ್‌ಗಢ್, ಕುಲು ಮನಾಲಿ (ಭುಂಟರ್), ಮುಂದ್ರಾ, ಮುಂದ್ರಾ, ಪಠಾಣ್, ಪಠಾಣ್, ಸಾರ್ವಭೌಮ, ಪಠಾಣ್, ಸಿವಿಲಿಯನ್ ಫ್ಲೈಟ್ ಕಾರ್ಯಾಚರಣೆಯನ್ನು ಪುನರಾರಂಭಿಸಲು ವಿಮಾನ ನಿಲ್ದಾಣಗಳಿಗೆ ಅನುಮತಿಸಲಾಗಿದೆ.

  • ವಾಯುನೆಲೆ ನಿರ್ಬಂಧ – ಮೇ 10ರವರೆಗೆ 165ಕ್ಕೂ ಹೆಚ್ಚು ಇಂಡಿಗೋ ವಿಮಾನ ಬಂದ್

    ವಾಯುನೆಲೆ ನಿರ್ಬಂಧ – ಮೇ 10ರವರೆಗೆ 165ಕ್ಕೂ ಹೆಚ್ಚು ಇಂಡಿಗೋ ವಿಮಾನ ಬಂದ್

    ನವದೆಹಲಿ: ಭಾರತವು ಪಾಕಿಸ್ತಾನದ(Pakistan) ಉಗ್ರರ ತಾಣಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ವಾಯುನೆಲೆಯನ್ನು ನಿರ್ಬಂಧಿಸಲಾಗಿದ್ದು, ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ(Indigo) 165ಕ್ಕೂ ಹೆಚ್ಚು ವಿಮಾನಯಾನವನ್ನು ಸ್ಥಗಿತಗೊಳಿಸಿದೆ.

    ಜಮ್ಮು, ಶ್ರೀನಗರ, ಅಮೃತಸರ, ಲೇಹ್, ಚಂಡೀಗಢ, ಜೋಧ್‌ಪುರ, ಧರ್ಮಶಾಲಾ, ಬಿಕಾನೇರ್, ಗ್ವಾಲಿಯರ್, ಕಿಶನ್‌ಗಢ ಮತ್ತು ರಾಜ್‌ಕೋಟ್‌ಗೆ ತೆರಳುವ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಮೇ 10ರವರೆಗೆ ಇಂಡಿಗೋ ರದ್ದುಗೊಳಿಸಿದೆ. ಇದನ್ನೂ ಓದಿ: ರಾಜಕಾರಣಿಗಳು ಹೇಗೆ ಬದಲಾಗುತ್ತಾರೆ ಎಂಬುದಕ್ಕೆ ಸಿಎಂ ಸಿಂಧೂರವೇ ಸಾಕ್ಷಿ: ಪ್ರತಾಪ್‌ ಸಿಂಹ ಲೇವಡಿ

    ಪರಿಸ್ಥಿತಿ ಸೂಕ್ಷ್ಮತೆಯನ್ನು ಗಮನಿಸಿ ಇತರ ನಿಲ್ದಾಣಗಳಿಗೆ ವಿಮಾನ ಹಾರಾಟವನ್ನು ಹೊಂದಾಣಿಕೆ ಮಾಡಲಾಗುವುದು. ವಿಮಾನ ನಿಲ್ದಾಣಕ್ಕೆ ಹೋಗುವ ಮೊದಲು ಪ್ರಯಾಣಿಕರು ತಮ್ಮ ಪ್ರಯಾಣದ ಸ್ಥಿತಿಯನ್ನು ಪರಿಶೀಲಿಸುವಂತೆ ಗ್ರಾಹಕರಿಗೆ ಇಂಡಿಗೋ ಸಲಹೆ ನೀಡಿದೆ. ಇದನ್ನೂ ಓದಿ: JEM ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್‌ ಅಜರ್‌ ಕುಟುಂಬದ 10 ಜನ ಸೇರಿ 14 ಮಂದಿ ಹತ್ಯೆ

    ಅಲ್ಲದೇ ಏರ್ ಇಂಡಿಯಾ(Air India) ಸಂಸ್ಥೆ ಕೂಡ ಜಮ್ಮು, ಶ್ರೀನಗರ, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್ ನಿಲ್ದಾಣಗಳಿಗೆ ತೆರಳುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳ ಹಾರಾಟಗಳನ್ನು ಮೇ 10ರ ವರೆಗೆ ಬಂದ್ ಮಾಡಿದೆ ಎಂದು ಎಕ್ಸ್ ಮೂಲಕ ತಿಳಿಸಿದೆ. ಇದನ್ನೂ ಓದಿ: ಏರ್‌ಸ್ಟ್ರೈಕ್‌ಗೆ ಸಾಕ್ಷಿ ಎಲ್ಲಿದೆ ಅಂದವರ ಬಾಯಿಯನ್ನೇ ಬಂದ್‌ ಮಾಡಿದ ಸೇನೆ!

    `ಆಪರೇಷನ್ ಸಿಂಧೂರ'(Operation Sindoor) ಅಡಿಯಲ್ಲಿ ಭಾರತವು ಪಾಕಿಸ್ತಾನದ 9 ಉಗ್ರರ ಅಡಗುತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯ ನಂತರ ಭಾರತದ ಗಡಿಭಾಗಗಳಲ್ಲಿ ವಿಮಾನ ಹಾರಾಟವನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: I TOLD MODI – ಆಪರೇಷನ್‌ ಸಿಂಧೂರ ಬೆನ್ನಲ್ಲೇ ಕಾರ್ಟೂನ್‌ ವೈರಲ್‌ !

    18 ಏರ್‌ಪೋರ್ಟ್‌ಗಳ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ
    ಇನ್ನೂ ʻಆಪರೇಷನ್‌ ಸಿಂಧೂರʼ ಬೆನ್ನಲ್ಲೇ ಏರ್ ಇಂಡಿಯಾ, ಇಂಡಿಗೋ, ಸ್ಪೈಸ್‌ಜೆಟ್, ಏರ್ ಇಂಡಿಯಾ ಎಕ್ಸ್‌ಪ್ರೆಸ್, ಆಕಾಶ ಏರ್ ಮತ್ತು ಕೆಲವು ವಿದೇಶಿ ವಿಮಾನಯಾನ ಸಂಸ್ಥೆಗಳು ವಿವಿಧ ವಿಮಾನ ನಿಲ್ದಾಣಗಳಿಗೆ ತಮ್ಮ ಸೇವೆಗಳನ್ನು ರದ್ದುಗೊಳಿಸಿವೆ. ಒಟ್ಟು 18 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನ ರದ್ದುಗೊಳಿಸಲಾಗಿದೆ, ಈ ಪೈಕಿ ಶ್ರೀನಗರ, ಲೇಹ್, ಜಮ್ಮು, ಅಮೃತಸರ, ಪಠಾಣ್‌ಕೋಟ್, ಚಂಡೀಗಢ, ಜೋಧ್‌ಪುರ, ಜೈಸಲ್ಮೇರ್, ಶಿಮ್ಲಾ, ಧರ್ಮಶಾಲಾ ಮತ್ತು ಜಾಮ್‌ನಗರ ನಿಲ್ದಾಣಗಳೂ ಸೇರಿವೆ. ಒಟ್ಟಾರೆಯಾಗಿ ವಿವಿಧ ವಿಮಾನಯಾನ ಸಂಸ್ಥೆಗಳ 200ಕ್ಕೂ ಹೆಚ್ಚು ವಿಮಾನ ಹಾರಾಟವನ್ನ ರದ್ದುಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

  • ಪೈಲಟ್‌ಗಳಿಲ್ಲದ ವಿಮಾನಕ್ಕೆ ಏಕೆ ಹತ್ತಿಸುತ್ತೀರಿ – ಏರ್‌ ಇಂಡಿಯಾ ವಿರುದ್ಧ ಡೇವಿಡ್‌ ವಾರ್ನರ್‌ ಗರಂ!

    ಪೈಲಟ್‌ಗಳಿಲ್ಲದ ವಿಮಾನಕ್ಕೆ ಏಕೆ ಹತ್ತಿಸುತ್ತೀರಿ – ಏರ್‌ ಇಂಡಿಯಾ ವಿರುದ್ಧ ಡೇವಿಡ್‌ ವಾರ್ನರ್‌ ಗರಂ!

    ನವದೆಹಲಿ/ಕ್ಯಾನ್ಬೆರಾ: ಏರ್‌ ಇಂಡಿಯಾ (Air India) ವಿಮಾನ ವಿಳಂಬವಾಗಿದ್ದಕ್ಕೆ ಆಸ್ಟ್ರೇಲಿಯಾ ಮಾಜಿ ಸ್ಟಾರ್‌ ಕ್ರಿಕೆಟರ್‌ ಡೇವಿಡ್‌ ವಾರ್ನರ್‌ (David Warner) ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

    ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ʻʻನಾವು ಪೈಲಟ್‌ಗಳಿಲ್ಲದ ಏರ್‌ ಇಂಡಿಯಾ ವಿಮಾನ ಹತ್ತಿದ್ದೇವೆ. ಗಂಟೆಗಟ್ಟಲೆ ವಿಮಾನದಲ್ಲಿ ಕಾಯುತ್ತಿದ್ದೇವೆ. ಪೈಲಟ್‌ಗಳಿಲ್ಲದ ವಿಮಾನಕ್ಕೆ ನೀವು ಏಕೆ ಪ್ರಯಾಣಿಕರನ್ನು ಹತ್ತಿಸುತ್ತೀರಿ?ʼ ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್‌

    ಇದಕ್ಕೆ ಪ್ರತಿಕ್ರಿಯಿಸಿರುವ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆ, ಬೆಂಗಳೂರು ಏರ್‌ಪೋರ್ಟ್‌ನಿಂದ (Bengaluru Airport) ಹವಾಮಾನ ಸಂಬಂಧಿತ ಅಡಚಣೆಗಳಿಂದಾಗಿ ಎಲ್ಲಾ ವಿಮಾನಯಾನ ಸಂಸ್ಥೆಗಳ ಮಾರ್ಗ ಬದಲಾವಣೆ ಮತ್ತು ಕೆಲ ವಿಮಾನಗಳ ಹಾರಾಟದಲ್ಲಿ ವ್ಯತ್ಯವಾಗಿದೆ. ಹೀಗಾಗಿ ನಿಮ್ಮ ವಿಮಾನ ನಿರ್ವಹಿಸುವ ಸಿಬ್ಬಂದಿಯನ್ನ ತಡೆಯಹಿಡಿಯಲಾಗಿದ್ದು, ವಿಳಂಬಕ್ಕೆ ಕಾರಣವಾಗಿದೆ.. ನಿಮ್ಮ ತಾಳ್ಮೆಯನ್ನು ಪ್ರಸಂಶಿಸುತ್ತೇವೆ, ನಮ್ಮ ವಿಮಾನ ಆಯ್ಕೆ ಮಾಡಿಕೊಂಡಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದೆ.

    ಡೇವಿಡ್‌ ವಾರ್ನರ್‌ ಅವರು ಟ್ರಾವೆಲ್‌ ಏಜೆಂಟ್‌ ಮೂಲಕ ಟಿಕೆಟ್‌ ಬುಕ್‌ ಮಾಡಿದ್ದರು. ಮರುಪಾವತಿ ಲಭ್ಯವಿಲ್ಲದ ಟಿಕೆಟ್‌ ಬುಕ್‌ ಮಾಡಿದ ಕಾರಣ ಟ್ರಾವೆಲ್‌ ಏಜೆಂಟ್‌ ಟಿಕೆಟ್‌ ಹಣ ವಾಪಸ್‌ ನೀಡಲು ನಿರಾಕರಿಸಿದ್ದಾರೆ ಎಂದು ಸಹ ವರದಿಗಳು ತಿಳಿಸಿವೆ. ಇದನ್ನೂ ಓದಿ: ಅಮೆರಿಕ | ಗುಜರಾತ್‌ ಮೂಲದ ಅಪ್ಪ-ಮಗಳಿಗೆ ಗುಂಡಿಕ್ಕಿ ಹತ್ಯೆ – ಶೂಟರ್‌ ಅರೆಸ್ಟ್‌

    ಕಳೆದ ಫೆಬ್ರವರಿಯಲ್ಲಿ ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌, ಮುರಿದ ಸೀಟನ್ನು ನೀಡಿದ್ದಕ್ಕೆ ಏರ್‌ ಇಂಡಿಯಾ ವಿರುದ್ಧ ಕಿಡಿ ಕಾರಿದ್ದರು. ಇತ್ತೀಚೆಗೆ ಭಾರತೀಯ-ಕೆನಡಾದ ನಟಿ ಲೀಸಾ ರೇ ಸಹ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಏರ್‌ ಇಂಡಿಯಾವನ್ನು ಟೀಕಿಸಿದ್ದರು. ಇದನ್ನೂ ಓದಿ: ಮುರಿದ ಸೀಟ್‌ ನೀಡಿ ಮೋಸ ಮಾಡಿದ್ದೀರಿ: ಏರ್‌ ಇಂಡಿಯಾ ವಿರುದ್ಧ ಶಿವರಾಜ್‌ ಸಿಂಗ್‌ ಚೌಹಾಣ್‌ ಕೆಂಡಾಮಂಡಲ