Tag: ಏರ್ ಇಂಡಿಯಾ

  • ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಸಾವು

    ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಸಾವು

    ಲಕ್ನೋ: ದೆಹಲಿಯಿಂದ ಲಕ್ನೋಗೆ ಪ್ರಯಾಣಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಕ್ನೋ (Lucknow) ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Chaudhary Charan Singh International Airport) ನಡೆದಿದೆ.

    ಮೃತರನ್ನು ಬಿಹಾರದ (Bihar) ಗೋಪಾಲ್‌ಗಂಜ್‌ನ ಆಸಿಫುಲ್ಲಾ ಅನ್ಸಾರಿ(52) ಎಂದು ಗುರುತಿಸಲಾಗಿದೆ. ಬೆಳಗ್ಗೆ 8:10ಕ್ಕೆ ವಿಮಾನ ಲಕ್ನೋದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ನಂತರ, ಸಿಬ್ಬಂದಿ ಆಸಿಫುಲ್ಲಾರೊಂದಿಗೆ ಮಾತನಾಡಲು ಪ್ರಯತ್ನಿಸಿದರು. ಇದನ್ನೂ ಓದಿ: ಜಾನ್ವಿ ಕಪೂರ್‌ಗೆ ವಿಶೇಷ ಉಡುಗೊರೆ ನೀಡಿದ ರಾಮ್ ಚರಣ್ ಪತ್ನಿ

    ಈ ವೇಳೆ ಆಸಿಫುಲ್ಲಾರಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ವಿಮಾನದಲ್ಲಿದ್ದ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದರು. ಪ್ರಯಾಣದ ಮಧ್ಯೆ ಆಸಿಫುಲ್ಲಾ ಅವರು ಮೃತಪಟ್ಟಿರಬಹುದು ಎನ್ನಲಾಗಿದೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಕೋಲಾಹಲ- ಸ್ಪೀಕರ್‌ ಮೇಲೆ ಪೇಪರ್‌ ಎಸೆತ

    ಮರಣೋತ್ತರ ಪರೀಕ್ಷೆಗೆ ಮೃತ ದೇಹ ರವಾಸಿದ್ದಾರೆ. ಬಳಿಕವೇ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಮೂಲಗಳು ತಿಳಿಸಿವೆ.

  • ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ – ನ್ಯೂಯಾರ್ಕ್‌ಗೆ ಹೊರಟಿದ್ದ ವಿಮಾನ ಮುಂಬೈಗೆ ವಾಪಸ್‌

    ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ – ನ್ಯೂಯಾರ್ಕ್‌ಗೆ ಹೊರಟಿದ್ದ ವಿಮಾನ ಮುಂಬೈಗೆ ವಾಪಸ್‌

    ಮುಂಬೈ: ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ (Air India Flight) ವಿಮಾನಕ್ಕೆ ಭದ್ರತಾ ಬೆದರಿಕೆ ಬಂದಿದೆ. ವಿಮಾನದ ಶೌಚಾಲಯವೊಂದರಲ್ಲಿ ಬಾಂಬ್ ಬೆದರಿಕೆ ಪತ್ರ ಲಭ್ಯವಾಗಿದ್ದು, ಈ ಬೆನ್ನಲ್ಲೇ ವಿಮಾನವನ್ನು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು‌.

    ಘಟನೆಯನ್ನು ದೃಢಪಡಿಸಿದ ಏರ್ ಇಂಡಿಯಾ, ವಿಮಾನ ವಾಪಸ್ ಬರುವ ಮುನ್ನ ಅಗತ್ಯವಿರುವ ಎಲ್ಲಾ ಶಿಷ್ಟಾಚಾರಗಳನ್ನು ಅನುಸರಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

    ಮಾ.10 ರಂದು ಮುಂಬೈ-ನ್ಯೂಯಾರ್ಕ್ (ಜೆಎಫ್‌ಕೆ) ವಿಮಾನದಲ್ಲಿ ಹಾರಾಟ ನಡೆಸುತ್ತಿದ್ದಾಗ, ವಿಮಾನವು ಹಾರಾಟದ ಮಧ್ಯದಲ್ಲಿ ಸಂಭಾವ್ಯ ಭದ್ರತಾ ಬೆದರಿಕೆಯನ್ನು ಪತ್ತೆಹಚ್ಚಲಾಯಿತು. ಅಗತ್ಯ ಶಿಷ್ಟಾಚಾರಗಳನ್ನು ಅನುಸರಿಸಿದ ನಂತರ, ವಿಮಾನದಲ್ಲಿದ್ದ ಎಲ್ಲರ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ವಿಮಾನವು ಮುಂಬೈಗೆ ಮರಳಿತು.

    ವಿಮಾನವು ಬೆಳಗ್ಗೆ 10:25 ಕ್ಕೆ ಮುಂಬೈನಲ್ಲಿ ಸುರಕ್ಷಿತವಾಗಿ ಇಳಿಯಿತು. ವಿಮಾನವು ಭದ್ರತಾ ಸಂಸ್ಥೆಗಳಿಂದ ಕಡ್ಡಾಯ ತಪಾಸಣೆಗೆ ಒಳಗಾಗುತ್ತಿದೆ. ಏರ್ ಇಂಡಿಯಾ ಅಧಿಕಾರಿಗಳಿಗೆ ತನ್ನ ಸಂಪೂರ್ಣ ಸಹಕಾರವನ್ನು ನೀಡುತ್ತಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

    ಈಗ ವಿಮಾನದ ವೇಳಾಪಟ್ಟಿಯನ್ನು ಮಾ.11 ರಂದು ಬೆಳಗ್ಗೆ 5 ಗಂಟೆಗೆ ಹೊರಡುವಂತೆ ಮರು ನಿಗದಿಪಡಿಸಲಾಗಿದೆ. ಅಲ್ಲಿಯವರೆಗೆ ಎಲ್ಲಾ ಪ್ರಯಾಣಿಕರಿಗೆ ಹೋಟೆಲ್ ವಸತಿ, ಊಟ ಮತ್ತು ಇತರ ಸಹಾಯವನ್ನು ನೀಡಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

    ಭದ್ರತಾ ಸಂಸ್ಥೆಗಳು ಪ್ರಸ್ತುತ ವಿಮಾನವನ್ನು ಪರಿಶೀಲಿಸುತ್ತಿದ್ದು, ಭದ್ರತಾ ಬೆದರಿಕೆಯ ಸ್ವರೂಪದ ಕುರಿತು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ. ಬೋಯಿಂಗ್ 777-300 ಇಆರ್ ವಿಮಾನದಲ್ಲಿ 19 ಸಿಬ್ಬಂದಿ ಸೇರಿದಂತೆ 322 ಜನರು ಪ್ರಯಾಣ ಮಾಡ್ತಿದ್ದರು.

    ಪ್ರತ್ಯೇಕ ಘಟನೆಯಲ್ಲಿ ಚಿಕಾಗೋದಿಂದ ದೆಹಲಿಗೆ ಹೋಗುತ್ತಿದ್ದ ಮತ್ತೊಂದು ಏರ್ ಇಂಡಿಯಾ ವಿಮಾನವು ತಾಂತ್ರಿಕ ದೋಷದಿಂದಾಗಿ ತನ್ನ 12 ಶೌಚಾಲಯಗಳಲ್ಲಿ 11 ಶೌಚಾಲಯಗಳನ್ನು ನಿರುಪಯುಕ್ತಗೊಳಿಸಿದ ನಂತರ ಹಾದಿ ಮಧ್ಯೆ ಹಿಂತಿರುಗಬೇಕಾಯಿತು.

    ವಿಮಾನಯಾನ ವೆಬ್‌ಸೈಟ್ ವ್ಯೂ ಫ್ರಮ್ ದಿ ವಿಂಗ್ ವರದಿಯ ಪ್ರಕಾರ, ಏರ್ ಇಂಡಿಯಾ ವಿಮಾನ AI126 ತನ್ನ ಪ್ರಯಾಣದ ಸುಮಾರು ನಾಲ್ಕೂವರೆ ಗಂಟೆಗಳ ನಂತರ ಗ್ರೀನ್‌ಲ್ಯಾಂಡ್ ಮೇಲೆ ಹಾರುವಾಗ ಈ ಸಮಸ್ಯೆ ಕಂಡುಬಂದಿದೆ. 300 ಕ್ಕೂ ಹೆಚ್ಚು ಪ್ರಯಾಣಿಕರು ಮತ್ತು ಕೇವಲ ಒಂದು ಶೌಚಾಲಯ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾಗ, ವಿಮಾನವು ಚಿಕಾಗೋಗೆ ಹಿಂತಿರುಗಿತು.

  • ಮುರಿದ ಸೀಟ್‌ ನೀಡಿ ಮೋಸ ಮಾಡಿದ್ದೀರಿ: ಏರ್‌ ಇಂಡಿಯಾ ವಿರುದ್ಧ ಶಿವರಾಜ್‌ ಸಿಂಗ್‌ ಚೌಹಾಣ್‌ ಕೆಂಡಾಮಂಡಲ

    ಮುರಿದ ಸೀಟ್‌ ನೀಡಿ ಮೋಸ ಮಾಡಿದ್ದೀರಿ: ಏರ್‌ ಇಂಡಿಯಾ ವಿರುದ್ಧ ಶಿವರಾಜ್‌ ಸಿಂಗ್‌ ಚೌಹಾಣ್‌ ಕೆಂಡಾಮಂಡಲ

    ನವದೆಹಲಿ: ಏರ್‌ ಇಂಡಿಯಾದ (Air India) ಕೆಟ್ಟ ಸೇವೆಗೆ ಕೇಂದ್ರ ಕೃಷಿ ಸಚಿವ, ಮಾಜಿ ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ (Shivraj Singh Chouhan) ಕೆಂಡಾಮಂಡಲವಾಗಿದ್ದಾರೆ.

    ಮುರಿದ ಸೀಟನ್ನು ನೀಡಿದ್ದಕ್ಕೆ ಸಿಟ್ಟಾದ ಚೌಹಾಣ್‌ ಗ್ರಾಹಕರಿಗೆ ನೀವು ಮೋಸ ಮಾಡುತ್ತಿದ್ದೀರಿ. ಟಿಕೆಟ್‌ಗೆ ಪೂರ್ಣ ಶುಲ್ಕ ವಿಧಿಸಿದ ನಂತರ ಕೆಟ್ಟು ಹೋದ ಸೀಟ್‌ ಮೇಲೆ ಕುಳಿತುಕೊಳ್ಳುವಂತೆ ಹೇಳುವುದು ಅನೈತಿಕ. ಇದು ಪ್ರಯಾಣಿಕರಿಗೆ ಮಾಡುತ್ತಿರುವ ಮೋಸ ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕೆಟ್ಟ ಸೇವೆಗೆ ಸಾಮಾಜಿಕ ಜಾಲತಾಣದಲ್ಲಿ ದೀರ್ಘವಾದ ಪೋಸ್ಟ್‌ ಮಾಡಿ ಏರ್‌ ಇಂಡಿಯಾವನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

    ಶಿವರಾಜ್‌ ಸಿಂಗ್‌ ಅವರ ಪೋಸ್ಟ್‌ ಪ್ರಕಟವಾದ ನಂತರ ಏರ್‌ ಇಂಡಿಯಾ ಕ್ಷಮೆಯಾಚನೆ ಮಾಡಿದೆ. ಭವಿಷ್ಯದಲ್ಲಿ ಇಂತಹ ಯಾವುದೇ ಘಟನೆಗಳು ಸಂಭವಿಸದಂತೆ ನಾವು ಈ ವಿಷಯವನ್ನು ಎಚ್ಚರಿಕೆಯಿಂದ ಪರಿಶೀಲಿಸುತ್ತಿದ್ದೇವೆ. ದಯವಿಟ್ಟು ನಿಮ್ಮನ್ನು ಸಂಪರ್ಕಿಸಲು ಅನುಕೂಲಕರ ಸಮಯದ ಬಗ್ಗೆ ನಮಗೆ ಡೈರೆಕ್ಟ್‌ ಮೆಸೇಜ್‌ ಮಾಡಿ ಎಂದು ಕೇಳಿಕೊಂಡಿದೆ. ಇದನ್ನೂ ಓದಿ: ಅಪರಿಚಿತ ಮಹಿಳೆಗೆ `ನೀನು ತೆಳ್ಳಗೆ, ಬೆಳ್ಳಗೆ ಇದ್ದೀಯʼ ಅಂತ ಮೆಸೇಜ್‌ ಕಳಿಸೋದು ಅಶ್ಲೀಲತೆ: ಮುಂಬೈ ಕೋರ್ಟ್‌

    ಪೋಸ್ಟ್‌ನಲ್ಲಿ ಏನಿದೆ?
    ಇಂದು ನಾನು ಭೋಪಾಲ್‌ನಿಂದ ದೆಹಲಿಗೆ ಬಂದು ಪುಸಾದಲ್ಲಿ ಕಿಸಾನ್ ಮೇಳವನ್ನು ಉದ್ಘಾಟಿಸಿ, ಕುರುಕ್ಷೇತ್ರದಲ್ಲಿ ನೈಸರ್ಗಿಕ ಕೃಷಿ ಮಿಷನ್‌ನ ಸಭೆಯನ್ನು ನಡೆಸಿ, ಚಂಡೀಗಢದಲ್ಲಿ ಕಿಸಾನ್ ಸಂಘಟನೆಯ ಗೌರವಾನ್ವಿತ ಪ್ರತಿನಿಧಿಗಳೊಂದಿಗೆ ಚರ್ಚಿಸಬೇಕಿತ್ತು.

    ದೆಹಲಿಗೆ ಬರುವ ಉದ್ದೇಶದಿಂದ ಏರ್ ಇಂಡಿಯಾ ವಿಮಾನ ಸಂಖ್ಯೆ AI436 ರಲ್ಲಿ ಟಿಕೆಟ್ ಬುಕ್ ಮಾಡಿದ್ದೆ, ನನಗೆ ಸೀಟ್ ಸಂಖ್ಯೆ 8C ನೀಡಲಾಗಿತ್ತು. ನಾನು ಹೋಗಿ ಸೀಟಿನಲ್ಲಿ ಕುಳಿತೆ. ಆದರೆ ಆ ಸೀಟು ಮುರಿದು ಹೋಗಿತ್ತು.

    ಮುರಿದು ಹೋದ ಸೀಟನ್ನು ಯಾಕೆ ಹಂಚಿಕೆ ಮಾಡಲಾಗಿದೆ ಎಂದು ನಾನು ವಿಮಾನಯಾನ ಸಿಬ್ಬಂದಿಯನ್ನು ಕೇಳಿದ್ದೆ. ಅದಕ್ಕೆ ಅವರು, ಈ ಸೀಟು ಚೆನ್ನಾಗಿಲ್ಲ ಮತ್ತು ಅದರ ಟಿಕೆಟ್ ಮಾರಾಟ ಮಾಡಬಾರದು ಎಂದು ಆಡಳಿತ ಮಂಡಳಿಗೆ ಮೊದಲೇ ತಿಳಿಸಲಾಗಿತ್ತು ಎಂದು ಅವರು ನನಗೆ ಹೇಳಿದರು. ಆದರೆ ಈ ಒಂದು ಸೀಟು ಮಾತ್ರವಲ್ಲ ಇನ್ನು ಹಲವು ಸೀಟುಗಳು ಮುರಿದು ಹೋಗಿತ್ತು.

    ನನ್ನ ಸಹ ಪ್ರಯಾಣಿಕರು ನನ್ನ ಸೀಟನ್ನು ಬದಲಾಯಿಸಿ ಉತ್ತಮ ಸೀಟಿನಲ್ಲಿ ಕುಳಿತುಕೊಳ್ಳಲು ನನ್ನನ್ನು ಕೇಳಿದರು. ಆದರೆ ನನಗಾಗಿ ನಾನು ಇನ್ನೊಬ್ಬ ಸ್ನೇಹಿತನಿಗೆ ಯಾಕೆ ತೊಂದರೆ ಕೊಡಬೇಕು ಎಂದು ಭಾವಿಸಿ ನಾನು ಸೀಟಿನಲ್ಲೇ ಕುಳಿತು ಪ್ರಯಾಣವನ್ನು ಪೂರ್ಣಗೊಳಿಸಲು ನಿರ್ಧರಿಸಿದೆ.

    ಟಾಟಾ (TATA) ಆಡಳಿತವನ್ನು ವಹಿಸಿಕೊಂಡ ನಂತರ ಏರ್ ಇಂಡಿಯಾದ ಸೇವೆ ಸುಧಾರಣೆಯಾಗಲಿದೆ ಎಂದು ನನ್ನ ಅನಿಸಿಕೆಯಾಗಿತ್ತು. ಆದರೆ ಅದು ನನ್ನ ತಪ್ಪು ಕಲ್ಪನೆ ಎನ್ನುವುದು ಈಗ ನನಗೆ ಅರಿವಾಗಿದೆ. ಪ್ರಯಾಣಿಕರಿಂದ ಪೂರ್ಣ ಟಿಕೆಟ್‌ ದರವನ್ನು ಪಡೆದ ನಂತರ ಕೆಟ್ಟ ಮತ್ತು ಅನಾನುಕೂಲಕರವಾದ ಆಸನಗಳ ಮೇಲೆ ಕುಳಿತುಕೊಳ್ಳುವಂತೆ ಮಾಡುವುದು ಅನೈತಿಕ. ಇದು ಪ್ರಯಾಣಿಕರನ್ನು ಮೋಸಗೊಳಿಸುವುದಿಲ್ಲವೇ?

    ಭವಿಷ್ಯದಲ್ಲಿ ಯಾವುದೇ ಪ್ರಯಾಣಿಕರು ಇಂತಹ ಅನಾನುಕೂಲತೆಯನ್ನು ಎದುರಿಸದಂತೆ ಏರ್ ಇಂಡಿಯಾ ಆಡಳಿತ ಮಂಡಳಿ ಕ್ರಮ ಕೈಗೊಳ್ಳುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

     

  • ಏರ್ ಇಂಡಿಯಾದೊಂದಿಗೆ ವಿಸ್ತಾರ ವಿಲೀನ – ದೋಹಾದಿಂದ ಮುಂಬೈಗೆ ಮೊದಲ ವಿಮಾನ ಹಾರಾಟ

    ಏರ್ ಇಂಡಿಯಾದೊಂದಿಗೆ ವಿಸ್ತಾರ ವಿಲೀನ – ದೋಹಾದಿಂದ ಮುಂಬೈಗೆ ಮೊದಲ ವಿಮಾನ ಹಾರಾಟ

    ನವದೆಹಲಿ: ಏರ್ ಇಂಡಿಯಾ (Air India) ಹಾಗೂ ವಿಸ್ತಾರ (Vistara) ವಿಮಾನಯಾನ ಸಂಸ್ಥೆಗಳ ವಿಲೀನದ ಬಳಿಕ ಮೊದಲ ವಿಮಾನ ಹಾರಾಟಗೊಂಡಿದೆ.

    ಎ12286 ಕೋಡ್‌ನೊಂದಿಗೆ ಕಾರ್ಯನಿರ್ವಹಿಸುವ ವಿಮಾನವು ಸೋಮವಾರ ಸ್ಥಳೀಯ ಕಾಲಮಾನ ರಾತ್ರಿ 10:07ಕ್ಕೆ ಕತಾರ್‌ನ ದೋಹಾದಿಂದ ಮುಂಬೈಗೆ ಹೊರಟಿದ್ದು, ಮಂಗಳವಾರ ಬೆಳಿಗ್ಗೆ ಮುಂಬೈಗೆ ತಲುಪಲಿದೆ. ಟಾಟಾ ಗ್ರೂಪ್ಸ್‌ನ (TATA Groups) ಭಾಗವಾಗಿರುವ ಎರಡು ಸಂಸ್ಥೆಗಳು ವಿಲೀನಗೊಂಡಿದ್ದು, ವಿಲೀನವಾದ ಬಳಿಕ ಮೊದಲ ಅಂತರರಾಷ್ಟ್ರೀಯ ವಿಮಾನ ಹಾರಾಟಗೊಂಡಿದೆ. ಇನ್ನೂ ಭಾರತದಲ್ಲಿ ಮಂಗಳವಾರ ನಸುಕಿನ ಜಾವ 01:30 ಗಂಟೆಗೆ ಮುಂಬೈನಿಂದ (Mumbai) ದೆಹಲಿಗೆ (Delhi) ಮೊದಲ ವಿಮಾನ ಹಾರಾಟಗೊಂಡಿದೆ.ಇದನ್ನೂ ಓದಿ: ರೆಬೆಲ್ ಸ್ಟಾರ್ ಮನೆಯಲ್ಲಿ ಸಂಭ್ರಮ – ಮುದ್ದಾದ ಗಂಡು ಮಗುವಿಗೆ ಜನ್ಮ ಕೊಟ್ಟ ಅವಿವಾ

    ವಿಲೀನದ ನಂತರ ಏರ್ ಇಂಡಿಯಾ ನಿರ್ವಹಿಸುತ್ತಿರುವ ವಿಸ್ತಾರ ವಿಮಾನಗಳಿಗಾಗಿ ‘ಎ12ಎಕ್ಸ್ಎಕ್ಸ್ಎಕ್ಸ್’ ಕೋಡ್‌ನ್ನು ಬಳಸಲಾಗುತ್ತಿದೆ. ಇದು ಪ್ರಯಾಣಿಕರಿಗೆ ಬುಕ್ಕಿಂಗ್ ಸಮಯದಲ್ಲಿ ವಿಸ್ತಾರ ವಿಮಾನವನ್ನು ಗುರುತಿಸಲು ಸಹಾಯ ಮಾಡುತ್ತದೆ.

    ಟಾಟಾ ಗ್ರೂಪ್‌ನ ಭಾಗವಾಗಿರುವ ಎರಡೂ ವಿಮಾಯಾನ ಸಂಸ್ಥೆಗಳ ವಿಲೀನವು ದೇಶದ ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ಪ್ರಮುಖ ಬಲವರ್ಧನೆಯನ್ನು ಸೂಚಿಸುತ್ತದೆ. ವಿಸ್ತಾರ ಇದು ಟಾಟಾಸ್ ಮತ್ತು ಸಿಂಗಾಪುರ್ ಏರಲೈನ್ಸ್ ನಡುವಿನ ಜಂಟಿ ಉದ್ಯಮವಾಗಿದ್ದು, ವಿಸ್ತಾರ ವಿಲೀನಗೊಂಡ ಬಳಿಕ ಸಿಂಗಾಪುರ್ ಏರಲೈನ್ಸ್ (Singapore Airlines) ಏರ್ ಇಂಡಿಯಾದ 25.1 ಶೇಕಡಾ ಪಾಲನ್ನು ಪಡೆಯುತ್ತದೆ.ಇದನ್ನೂ ಓದಿ: ಪಿಜಿ ಆಯುಷ್‌ ತಾತ್ಕಾಲಿಕ ಫಲಿತಾಂಶ ಪ್ರಕಟ – ಕೆಇಎ

  • ಭಾರೀ ಭದ್ರತಾ ಲೋಪ | ದುಬೈ-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಅಮ್ಯುನಿಷನ್ ಕಾಟ್ರಿಡ್ಜ್ ಪತ್ತೆ

    ಭಾರೀ ಭದ್ರತಾ ಲೋಪ | ದುಬೈ-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಅಮ್ಯುನಿಷನ್ ಕಾಟ್ರಿಡ್ಜ್ ಪತ್ತೆ

    ನವದೆಹಲಿ: ಅಕ್ಟೋಬರ್‌ 27ರಂದು ದುಬೈನಿಂದ ದೆಹಲಿಗೆ ಬಂದ ಏರ್ ಇಂಡಿಯಾ ವಿಮಾನದ (Dubai-Delhi Air India flight) ಸೀಟಿನ ಪಾಕೆಟ್‌ನಲ್ಲಿ ಒಂದು ಮದ್ದುಗುಂಡಿನ ಕಾರ್ಟ್ರಿಡ್ಜ್ (Ammunition cartridge) ಪತ್ತೆಯಾಗಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

    ಭದ್ರತಾ ಪ್ರೋಟೋಕಾಲ್‌ಗಳ ಅನುಸಾರ ತಕ್ಷಣವೇ ಏರ್‌ಪೋರ್ಟ್ ಪೊಲೀಸರಿಗೆ ವಿಮಾನದ ಸಿಬ್ಬಂದಿ ದೂರು ನೀಡಿದ್ದಾರೆ. ಕಾರ್ಟ್ರಿಡ್ಜ್ ಎನ್ನುವುದು ಬಂದೂಕಿಗೆ ಬಳಸುವ ಮದ್ದುಗುಂಡಿನ ಸಾಮಗ್ರಿಯಾಗಿದೆ. ವಿಮಾನದಲ್ಲಿ ಅಂತಹ ವಸ್ತುಗಳನ್ನು ಕೊಂಡೊಯ್ಯುವುದಕ್ಕೆ ನಿಷೇಧವಿದೆ ಎಂದು ವಕ್ತಾರರು ತಿಳಿಸಿದ್ದಾರೆ.

    ಇತ್ತೀಚೆಗೆ ವಿಮಾನಗಳಿಗೆ ಹುಸಿಬಾಂಬ್‌ ಬೆದರಿಕೆಗಳು ಹೆಚ್ಚಾಗಿದೆ. ಇದರ ನಡುವೆ ಈ ಘಟನೆ ಆತಂಕಕ್ಕೆ ಕಾರಣವಾಗಿದೆ. ಇನ್ನೂ ಸೋಮವಾರ ಮುಂಜಾನೆ ಏರ್ ಇಂಡಿಯಾ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಬಳಿಕ ಪರಿಶೀಲನೆ ವೇಲೆ ವಿಮಾನದಲ್ಲಿ ಯಾವುದೇ ಅನುಮಾನಾಸ್ಪದ ಅಥವಾ ಸ್ಫೋಟಕಗಳು ಪತ್ತೆಯಾಗಿರಲಿಲ್ಲ.

    ಇತ್ತೀಚೆಗೆ 400ಕ್ಕೂ ಹೆಚ್ಚು ವಿಮಾನಗಳನ್ನು ಗುರಿಯಾಗಿಸಿಕೊಂಡು ಬೆದರಿಕೆ ಸಂದೇಶಗಳು ಬಂದಿದ್ದವು. ಇದಾದ ಬಳಿಕ ನಾಗರಿಕ ವಿಮಾನಯಾನ ಸಚಿವಾಲಯವು ಬೆದರಿಕೆಗಳ ವಿರುದ್ಧ ಬಲವಾದ ಕ್ರಮಗಳನ್ನು ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿತ್ತು. ಈ ಕ್ರಮದಲ್ಲಿ ಆಪಾಧಿತನಿಗೆ ನೋ-ಫ್ಲೈ ಸಹ ಸೇರಿರಲಿದೆ ಎಂದು ಸಚಿವಾಲಯ ತಿಳಿಸಿತ್ತು.

    ಇನ್ನೂ ವಿಮಾನಗಳಿಗೆ ಬಾಂಬ್‌ ಬೆದರಿಕೆ ಹಾಕಿರುವ ಆರೋಪದ ಮೇಲೆ ಶ್ರೀರಾಮ್ ಉಯಿಕೆ ಎಂಬಾತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ವಿಚಾರಣೆ ನಡೆಯುತ್ತಿದೆ.

  • ನ.19ರ ವರೆಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ: ಉಗ್ರ ಪನ್ನುನ್ ಬೆದರಿಕೆ

    ನ.19ರ ವರೆಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ: ಉಗ್ರ ಪನ್ನುನ್ ಬೆದರಿಕೆ

    ಒಟ್ಟಾವಾ: ಬಾಂಬ್ ಇಟ್ಟಿರುವುದಾಗಿ ಭಾರತದ ವಿವಿಧ ವಿಮಾನಗಳಿಗೆ ಬೆದರಿಕೆ ಕರೆ ಬರುತ್ತಿರುವ ಸಂದರ್ಭದಲ್ಲೇ ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನು (Gurpatwant Singh Pannun) ಹೊಸ ಬೆದರಿಕೆಯೊಂದನ್ನ ಹಾಕಿದ್ದಾರೆ. ನವೆಂಬರ್ 1ರಿಂದ 19ರ ವರೆಗೆ ಏರ್ ಇಂಡಿಯಾ ವಿಮಾನಗಳಲ್ಲಿ ಯಾರೂ ಪ್ರಯಾಣಿಸಬೇಡಿ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಯೋಗೇಶ್ವರ್‌ ಗುಡ್‌ಬೈ – ಕಾಂಗ್ರೆಸ್‌ನಿಂದ ಕೊನೆ ಕ್ಷಣದ ಕಸರತ್ತು ಆರಂಭ

    ಸಿಖ್ ಹತ್ಯಾಕಾಂಡಕ್ಕೆ 40 ವರ್ಷ ಪೂರ್ಣಗೊಳ್ಳುವ ನಿರ್ದಿಷ್ಟ ದಿನಾಂಕದಂದು ಏರ್ ಇಂಡಿಯಾ ವಿಮಾನದ ಮೇಲೆ ದಾಳಿ ನಡೆಯಲಿದೆ ಎಂದು ಎಚ್ಚರಿಸಿದ್ದಾರೆ ಎಂಬುದಾಗಿ ವರದಿಯಾಗಿದೆ. ಕನಡಾ ಮತ್ತು ಅಮೆರಿಕದ ದ್ವೀಪೌರತ್ವ ಹೊಂದಿರುವ ಸಿಖ್ ಫಾರ್ ಜಸ್ಟೀಸ್ (SFJ) ಸಂಸ್ಥಾಪಕ ಪನ್ನು, ಕಳೆದ ವರ್ಷ ಸಹ ಇದೇ ಅವಧಿಯಲ್ಲಿ ಬೆದರಿಕೆ ಒಡ್ಡಿದರು.

    ನಿಜ್ಜರ್ ಹತ್ಯೆ ಸೇರಿದಂತೆ ಕೆನಡಾದಲ್ಲಿರುವ ಖಲಿಸ್ತಾನ ಹೋರಾಟಗಾರರನ್ನು ಭಾರತ ಗುರಿಯಾಗಿಸಿಕೊಂಡಿದೆ ಎಂದು ಕೆನಡಾ ಆರೋಪಿಸುತ್ತಿದ್ದು, ಇದರ ಬೆನ್ನಲ್ಲೇ ಉಭಯ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಸಂಘರ್ಷ ನಡೆಯುತ್ತಿದೆ. 2023ರ ನವೆಂಬರ್‌ನಲ್ಲೂ ಇದೇ ರೀತಿಯ ಬೆದರಿಕೆ ಒಡ್ಡಿದ್ದ ಪನ್ನು, ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಹೆಸರು ಬದಲಿಸಲಾಗುವುದು. ನವೆಂಬರ್ 19ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸದಂತೆ ಎಚ್ಚರಿಕೆ ನೀಡಿದ್ದರು. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಈತನ ವಿರುದ್ಧ ಯುಎಪಿಎ ಕಾಯ್ದೆ ಅಡಿ ಪ್ರಕರಣ ದಾಖಲಿಸಿದೆ. ಡಿಸೆಂಬರ್ 13ರಂದು ಅಥವಾ ಅದಕ್ಕೂ ಮುನ್ನ ಸಂಸತ್ ಭವನವನ್ನು ಸ್ಫೋಟಿಸುವುದಾಗಿ ಕಳೆದ ವರ್ಷ ಬೆದರಿಕೆ ಹಾಕಿದ್ದರು.ಇದನ್ನೂ ಓದಿ: ವಿಪತ್ತು ತಡೆಯಲು ವಯನಾಡಿನಲ್ಲಿ X ಬ್ಯಾಂಡ್‌ ರೇಡಾರ್‌ ಅಳವಡಿಕೆ – ರೇಡಾರ್‌ ವಿಶೇಷತೆಯೇನು?

  • 6 ಇಂಡಿಗೋ ವಿಮಾನಗಳಲ್ಲಿ 12 ಬಾಂಬ್‌ – ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೊಂದು ಬೆದರಿಕೆ

    6 ಇಂಡಿಗೋ ವಿಮಾನಗಳಲ್ಲಿ 12 ಬಾಂಬ್‌ – ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೊಂದು ಬೆದರಿಕೆ

    ಬೆಂಗಳೂರು: ಕಳೆದ ಒಂದು ವಾರದಿಂದಲೂ ಭಾರತೀಯ ವಿಮಾನಗಳು (Flights) ಮಾತ್ರವಲ್ಲದೇ ವಿದೇಶಿ ವಿಮಾನಗಳಿಗೂ ಬಾಂಬ್‌ ಬೆದರಿಕೆ ಹೆಚ್ಚಾಗಿ ಕೇಳಿಬರುತ್ತಿದೆ. ಭಾನುವಾರವೂ ಇಂಡಿಗೋ, ವಿಸ್ತಾರ ಮತ್ತು ಏರ್ ಇಂಡಿಯಾದ (Air India) ತಲಾ 6 ವಿಮಾನಗಳಿಗೆ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ.

    6 ಇಂಡಿಗೋ ವಿಮಾನಗಳಲ್ಲಿ (IndiGo Flights) ತಲಾ 2 ಬಾಂಬ್‌ಗಳಿವೆ ಎಂಬ ಬೆದರಿಕೆ ಸಂದೇಶ ಬೆಂಗಳೂರು ವಿಮಾನ ನಿಲ್ದಾಣದ ಕಮಾಂಡ್ ಸೆಂಟರ್‌ಗೆ ಬಂದಿರುವುದಾಗಿ ಎಂದು ಮೂಲಗಳು ತಿಳಿಸಿವೆ. ಕಳೆದ ಒಂದು ವಾರದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿರುವ 2ನೇ ಬೆದರಿಕೆ (Bomb Threat) ಇದಾಗಿದೆ. ಇದನ್ನೂ ಓದಿ: ತಾಯಿಯನ್ನು ಇಷ್ಟೊಂದು ಪ್ರೀತಿಸುವ ವ್ಯಕ್ತಿಯನ್ನ ನಾನು ನೋಡಿಲ್ಲ: ಜಯಮಾಲ

    ಇಂಡಿಗೋ 6E58 ವಿಮಾನ (ಜೆಡ್ಡಾ ಮುಂಬೈ), 6E87 (ಕೋಯಿಕೋಡ್- ದಮಾಮ್), 6E11 (ದೆಹಲಿ- ಇಸ್ತಾನ್‌ಬುಲ್), 6E17 (ಮುಂಬೈ-ಇಸ್ತಾನ್‌ಬುಲ್), 6E133 (ಪುಣೆಯಿಂದ ಜೋಧಪುರ), ಮತ್ತು 6E112 (ಗೋವಾ ಅಹಮದಾಬಾದ್) ವಿಮಾನಗಳಿಗೆ ಬೆದರಿಕೆ ಸಂದೇಶ ಬಂದಿದೆ ಎಂದು ಇಂಡಿಗೋದ ವಕ್ತಾರರು ತಿಳಿಸಿದ್ದಾರೆ.  ಇದನ್ನೂ ಓದಿ: ಬೆಳಗಾವಿ| ಉದ್ಯಮಿ ಹತ್ಯೆ ಕೇಸ್ – 13 ಹಾರ್ಡ್ ಡಿಸ್ಕ್‌ಗಳಲ್ಲಿ ಸಂತೋಷ್‍ನ ಖಾಸಗಿ ವೀಡಿಯೋ ಪತ್ತೆ!

    ವಿಸ್ತಾರದ UK25 (ದೆಹಲಿ-ಫ್ರಾಂಕ್‌ ಫರ್ಟ್), UK106 (ಸಿಂಗಪುರ-ಮುಂಬೈ), UK146 (ಬಾಲಿ-ದೆಹಲಿ), UK116 (ಸಿಂಗಪುರ-ದೆಹಲಿ), UK110 (ಸಿಂಗಪುರ-ಪುಣೆ) ಮತ್ತು UK107 (ಮುಂಬೈ-ಸಿಂಗಪುರ) ಈ ಆರು ವಿಮಾನಗಳಿಗೆ ಬೆದರಿಕೆ ಬಂದಿದೆ ಎಂದು ವಿಸ್ತಾರ ಹೇಳಿದೆ.

    ಪ್ರೋಟೋಕಾಲ್‌ ಪ್ರಕಾರ ಎಲ್ಲಾ ಸಂಬಂಧಿತ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಲಾಗಿದೆ. ಅವರು ತಪಾಸಣೆ ನಡೆಸಿದ್ದಾರೆ ಎಂದು ವಿಸ್ತಾರ ಪ್ರಕಟಣೆಯಲ್ಲಿ ತಿಳಿಸಿದೆ. ಆಕಾಶ ಏರ್‌ನ ಕೆಲವು ವಿಮಾನಗಳಿಗೂ ಬಾಂಬ್ ಬೆದರಿಕೆ ಹಾಕಲಾಗಿದೆ. ತುರ್ತು ಪ್ರತಿಕ್ರಿಯೆ ತಂಡಗಳು ಪರಿಶೀಲನೆ ನಡೆಸುತ್ತಿವೆ. ಭದ್ರತಾ ಮತ್ತು ನಿಯಂತ್ರಣ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿವೆ ಎಂದು ಆಕಾಶ ಏರ್ ಹೇಳಿದೆ.

    ಏರ್ ಇಂಡಿಯಾದ ಕನಿಷ್ಠ ಆರು ವಿಮಾನಗಳಿಗೆ ಬೆದರಿಕೆ ಸಂದೇಶ ಬಂದಿದ್ದಾಗಿ ಮೂಲಗಳು ಹೇಳಿವೆ. ಆದರೆ ಈ ಬಗ್ಗೆ ಏರ್‌ಲೈನ್‌ನಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಇದನ್ನೂ ಓದಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ – ಬಿಜೆಪಿಯ 99 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

    ಪ್ರಸ್ತುತ ಕಳೆದ ಒಂದು ವಾರದಲ್ಲಿ 90ಕ್ಕೂ ಹೆಚ್ಚು ದೇಶ-ವಿದೇಶ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಅವುಗಳಲ್ಲಿ ಹೆಚ್ಚಿನವು ಹುಸಿ ಬೆದರಿಕೆಗಳಾಗಿವೆ.

  • 4 ದಿನದಲ್ಲಿ 20ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್‌ ಬೆದರಿಕೆ – ಲಂಡನ್‌, ಜರ್ಮನಿಯಲ್ಲಿ ಐಪಿ ಅಡ್ರೆಸ್‌ ಪತ್ತೆ

    4 ದಿನದಲ್ಲಿ 20ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್‌ ಬೆದರಿಕೆ – ಲಂಡನ್‌, ಜರ್ಮನಿಯಲ್ಲಿ ಐಪಿ ಅಡ್ರೆಸ್‌ ಪತ್ತೆ

    ನವದೆಹಲಿ: ಭಾರತ ಹಾಗೂ ವಿದೇಶಿ ವಿಮಾನಗಳು ಸೇರಿದಂತೆ 20ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್‌ ಬೆದರಿಕೆ (Bomb Threats) ಬಂದಿದ್ದ ಐಪಿ ವಿಳಾಸವನ್ನು (IP addresses) ಕೇಂದ್ರ ಗುಪ್ತಚರ ಸಂಸ್ಥೆಗಳು ಪತ್ತೆಹಚ್ಚಿವೆ. ಬಾಂಬ್‌ ಬೆದರಿಕೆ ಬಂದಿದ್ದ ಸೋಷಿಯಲ್‌ ಮೀಡಿಯಾ ಐಪಿ ವಿಳಾಸಗಳು ಲಂಡನ್‌ ಮತ್ತು ಜರ್ಮನಿಯಲ್ಲಿ ಪತ್ತೆಯಾಗಿವೆ ಎಂದು ವರದಿಯಾಗಿದೆ.

    ಇದೇ ಅಕ್ಟೋಬರ್‌ 14ರಿಂದ 17ರ ವರೆಗೆ ಸುಮಾರು 20ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್‌ ಬೆದರಿಕೆ ಬಂದಿರುವ ಪ್ರಕರಣಗಳು ವರದಿಯಾಗಿವೆ. ಭಾರತ ಸೇರಿದಂತೆ ಅನೇಕ ವಿದೇಶಿ ವಿಮಾನಗಳಿಗೂ (Indian flights) ಬೆದರಿಕೆ ಬಂದಿವೆ. ಭದ್ರತಾ ಪಡೆಗಳು ತಪಾಸಣೆ ನಡೆಸಿದ ನಂತರ ಅವು ಹುಸಿ ಬಾಂಬ್‌ ಬೆದರಿಕೆ ಎಂಬುದು ಗೊತ್ತಾಗಿದೆ. ಈ ಬೆನ್ನಲ್ಲೇ ಕೇಂದ್ರ ಗುಪ್ತಚರ ಸಂಸ್ಥೆ ಬೆದರಿಕೆ ಮೂಲವನ್ನು ಪತ್ತೆಹಚ್ಚುವ ಕೆಲಸಕ್ಕೆ ಮುಂದಾಗಿತ್ತು. ಬಳಿಕ ಲಂಡನ್‌ ಮತ್ತು ಜರ್ಮನಿಯಲ್ಲಿ ವಿಳಾಸ ಪತ್ತೆಯಾಗಿದ್ದು, ಎಕ್ಸ್‌ ಖಾತೆಗಳನ್ನು ನಿಷ್ಕ್ರಿಯಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಇದನ್ನೂ ಓದಿ: ಸ್ನೇಹಿತನ ವಿರುದ್ಧ ಸೇಡು ತೀರಿಸಿಕೊಳ್ಳಲು 4 ವಿಮಾನಗಳಿಗೆ ಬಾಂಬ್ ಬೆದರಿಕೆ – ಮುಂಬೈನಲ್ಲಿ ಅಪ್ರಾಪ್ತ ಅರೆಸ್ಟ್‌

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗುಪ್ತಚರ ಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು, ನಾವು ಪ್ರಾಥಮಿಕ ವರದಿಗಳನ್ನು ಸ್ವೀಕರಿಸಿದ್ದೇವೆ. ಈ ಮೂರು ಪ್ರತ್ಯೇಕ ಹ್ಯಾಂಡಲ್‌ಗಳಿಂದ ಪೋಸ್ಟ್‌ ಮಾಡಲಾಗಿದೆ. ಲಂಡನ್‌ನಲ್ಲಿ ಪತ್ತೆಯಾದ 2 ಐಪಿ ವಿಳಾಸ ಸಾಮಾನ್ಯ ವಿಳಾಸವಾಗಿದೆ. ಉಳಿದಂತೆ ಬಳಕೆದಾರರೊಬ್ಬರು VPN (ವರ್ಚುವಲ್ ಖಾಸಗಿ ನೆಟ್‌ವರ್ಕ್) ಬಳಸಿ ಎಕ್ಸ್‌ ಖಾತೆಯಲ್ಲಿ ಬೆದರಿಕೆ ಪೋಸ್ಟ್‌ ಮಾಡಿದ್ದಾರೆ ಎಂದು ತಿಳಿಸಿರುವುದಾಗಿ ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: ಬೆಂಗಳೂರು, ದೆಹಲಿಗೆ ಹೊರಟಿದ್ದ 2 ವಿಮಾನಗಳಿಗೆ ಬಾಂಬ್‌ ಬೆದರಿಕೆ – 3 ದಿನಗಳಲ್ಲಿ 12 ಕೇಸ್‌

    ಅ.16ರಂದು ಸಹ ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್‌ (Akasa Air) ವಿಮಾನ ಹಾಗೂ ಮುಂಬೈನಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನಗಳಿಗೂ (IndiGo Flight) ಬಾಂಬ್‌ ಬೆದರಿಕೆ ಬಂದಿತ್ತು. ಬೆದರಿಕೆ ಬೆನ್ನಲ್ಲೇ ವಿಮಾನಗಳನ್ನು ತುರ್ತು ಲ್ಯಾಂಡಿಂಗ್‌ ಮಾಡಿ ತೀವ್ರ ತಪಾಸಣೆ ನಡೆಸಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – ಶೇ.3 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಕ್ಯಾಬಿನೆಟ್‌ ಅನುಮೋದನೆ

  • ಸ್ನೇಹಿತನ ವಿರುದ್ಧ ಸೇಡು ತೀರಿಸಿಕೊಳ್ಳಲು 4 ವಿಮಾನಗಳಿಗೆ ಬಾಂಬ್ ಬೆದರಿಕೆ – ಮುಂಬೈನಲ್ಲಿ ಅಪ್ರಾಪ್ತ ಅರೆಸ್ಟ್‌

    ಸ್ನೇಹಿತನ ವಿರುದ್ಧ ಸೇಡು ತೀರಿಸಿಕೊಳ್ಳಲು 4 ವಿಮಾನಗಳಿಗೆ ಬಾಂಬ್ ಬೆದರಿಕೆ – ಮುಂಬೈನಲ್ಲಿ ಅಪ್ರಾಪ್ತ ಅರೆಸ್ಟ್‌

    ಮುಂಬೈ: ತನ್ನ ಸ್ನೇಹಿತನ ವಿರುದ್ಧ ಸೇಡು ತೀರಿಸಿಕೊಳ್ಳಲು ನಾಲ್ಕು ವಿಮಾನಗಳಿಗೆ (Flights) ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ್ದ ಅಪ್ರಾಪ್ತನನ್ನ ಮುಂಬೈನಲ್ಲಿ ಪೊಲೀಸರು (Mumbai Police) ಬಂಧಿಸಿದ್ದಾರೆ.

    ಸ್ನೇಹಿತನ ಹೆಸರಿನಲ್ಲಿ ಸೋಷಿಯಲ್‌ ಮೀಡಿಯಾ ನಕಲಿ ಖಾತೆ ತೆರೆದು, ಇದೇ ಅಕ್ಟೋಬರ್‌ 14ರಂದು ನಾಲ್ಕು ವಿಮಾನಗಳಿಗೆ ಬಾಂಬ್‌ ಬೆದರಿಕೆ (Bomb Threats) ಕಳುಹಿಸಿದ್ದಕ್ಕಾಗಿ ಅಪ್ರಾಪ್ತನನ್ನ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬೆಂಗಳೂರು, ದೆಹಲಿಗೆ ಹೊರಟಿದ್ದ 2 ವಿಮಾನಗಳಿಗೆ ಬಾಂಬ್‌ ಬೆದರಿಕೆ – 3 ದಿನಗಳಲ್ಲಿ 12 ಕೇಸ್‌

    ಬಂಧಿತ ಅಪ್ರಾಪ್ತನು ತನ್ನ ಸ್ನೇಹಿತನೊಂದಿಗೆ ಹಣದ ವಿಚಾರಕ್ಕೆ ಜಗಳವಾಡಿಕೊಂಡಿದ್ದ. ಅವನ ಮೇಲೆ ಸೇಡು ತೀರಿಸಿಕೊಳ್ಳಬೇಕೆಂದು ನಕಲಿ ಎಕ್ಸ್‌ ಖಾತೆಯೊಂದನ್ನ ತೆರೆದು, ಅದರಲ್ಲಿ ಬಾಂಬ್‌ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಕಾರು ಅಪಘಾತ – ಆಂಧ್ರಪ್ರದೇಶದ ಮೂವರು ಸೇರಿ, ಐವರು ಭಾರತೀಯರು ಸಾವು

    ಕಳೆದ ಮೂರು ದಿನಗಳಲ್ಲಿ ವಿಮಾನಗಳಿಗೆ ಬಾಂಬ್‌ ಬೆದರಿಕೆ ಹಾಕಿದ 12 ಪ್ರಕರಣಗಳು ಕಂಡುಬಂದಿವೆ. ಆದ್ರೆ ವಿಮಾನಗಳಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಬುಧವಾರ (ಇಂದು) ಸಹ ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್‌ ವಿಮಾನ QP1335 ಹಾಗೂ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ (ವಿಮಾನ ಸಂಖ್ಯೆ 6E 651) ಬಾಂಬ್‌ ಬೆದರಿಕೆ ಹಾಕಿರುವ ಪ್ರಕರಣಗಳು ಕಂಡುಬಂದಿವೆ.

    ತುರ್ತು ಸಭೆ:
    ವಿಮಾನಗಳಿಗೆ ಬಾಂಬ್‌ ಬೆದರಿಕೆ ವಿಚಾರವಾಗಿ ಬುಧವಾರ ಬೆಳಗ್ಗೆ 11 ಗಂಟೆಗೆ ಸಂಸದೀಯ ಸ್ಥಾಯಿ ಸಮಿತಿ ಸಭೆ ಸೇರಿತ್ತು. ಇದಕ್ಕೂ ಮುನ್ನ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಡಿಜಿಸಿಎ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – ಶೇ.3 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಕ್ಯಾಬಿನೆಟ್‌ ಅನುಮೋದನೆ

    ಡಾರ್ಕ್‌ವೆಬ್‌ ಮೇಲೆ ನಿಗಾ:
    ಬಾಂಬ್‌ ಬೆದರಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೆಲವು ಆರೋಪಿಗಳನ್ನು ಗುರುತಿಸಲಾಗಿದ್ದು, ಡಾರ್ಕ್ ವೆಬ್‌ನ ಮೇಲೆ ನಿಗಾ ಇಡಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

  • ಬೆಂಗಳೂರು, ದೆಹಲಿಗೆ ಹೊರಟಿದ್ದ 2 ವಿಮಾನಗಳಿಗೆ ಬಾಂಬ್‌ ಬೆದರಿಕೆ – 3 ದಿನಗಳಲ್ಲಿ 12 ಕೇಸ್‌

    ಬೆಂಗಳೂರು, ದೆಹಲಿಗೆ ಹೊರಟಿದ್ದ 2 ವಿಮಾನಗಳಿಗೆ ಬಾಂಬ್‌ ಬೆದರಿಕೆ – 3 ದಿನಗಳಲ್ಲಿ 12 ಕೇಸ್‌

    ನವದೆಹಲಿ: 184 ಪ್ರಯಾಣಿಕರನ್ನು ಹೊತ್ತು ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್‌ (Akasa Air) ವಿಮಾನ ಹಾಗೂ ಮುಂಬೈನಿಂದ ದೆಹಲಿಗೆ ಹೊರಟಿದ್ದ ಇಂಡಿಗೂ ವಿಮಾನಗಳಿಗೆ (IndiGo Flight) ಬಾಂಬ್‌ ಬೆದರಿಕೆ ಬಂದಿದೆ. ಇದು ಕಳೆದ ಮೂರು ದಿನಗಳಲ್ಲಿ 12ನೇ ಬೆದರಿಕೆ ಪ್ರಕರಣ ಆಗಿದೆ.

    ಸೋಷಿಯಲ್‌ ಮೀಡಿಯಾ ಮೂಲಕ ಬಾಂಬ್‌ ಬೆದರಿಕೆ (Bomb Threats) ಬರುತ್ತಿದ್ದಂತೆ ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್‌ ವಿಮಾನ QP1335 ಹಾಗೂ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನವನ್ನು (ವಿಮಾನ ಸಂಖ್ಯೆ 6E 651) ಅಹಮದಾಬಾದ್‌ಗೆ ಹಿಂತಿರುಗಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಎರಡು ದಿನಗಳ ಹಿಂದೆಯಷ್ಟೇ ಮುಂಬೈನಿಂದ ಹೊರಟಿದ್ದ ಏರ್‌ ಇಂಡಿಯಾ (Air India) ವಿಮಾನಗಳಿಗೂ ಬಾಂಬ್‌ ಬೆದರಿಕೆ ಬಂದಿತ್ತು. ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – ಶೇ.3 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಕ್ಯಾಬಿನೆಟ್‌ ಅನುಮೋದನೆ

    ಬಾಂಬ್‌ ಬೆದರಿಕೆ ಬೆನ್ನಲ್ಲೇ ಆಕಾಶ ಏರ್‌ನ ವಕ್ತಾರರು ಪ್ರತಿಕ್ರಿಯೆ ನೀಡಿದ್ದಾರೆ. ಆಕಾಶ ಏರ್‌ನ ಕ್ಯೂಪಿ 1335 ವಿಮಾನವು ದೆಹಲಿಯಿಂದ ಬೆಂಗಳೂರಿಗೆ ಹೊರಟಿತ್ತು. 174 ಪ್ರಯಾಣಿಕರು, ಮೂವರು ಮಕ್ಕಳು ಹಾಗೂ 7 ಸಿಬ್ಬಂದಿ ಸೇರಿ 184 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಬಾಂಬ್‌ ಬೆದರಿಕೆ ಕೇಳಿಬರುತ್ತಿದ್ದಂತೆ, ತುರ್ತು ನಿರ್ವಹಣಾ ತಂಡಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ನಡೆಸಿ, ದೆಹಲಿಗೆ ಹಿಂತಿರುಗಿಸುವಂತೆ ಪೈಲಟ್‌ಗಳಿಗೆ ಸೂಚನೆ ನೀಡಲಾಯಿತು. ಸದ್ಯ ನಮ್ಮ ತಂಡಗಳು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಂಡಿವೆ. ಜೊತೆಗೆ ಬಾಂಬ್‌ ಬೆದರಿಕೆ ಕುರಿತು ಮೇಲ್ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ಇಂಡಿಗೋ ವಕ್ತಾರರು ಸಹ ಪ್ರತಿಕ್ರಿಯೆ ನೀಡಿದ್ದು, ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ತುರ್ತು ನಿರ್ವಹಣಾ ತಂಡಗಳು ಪರಿಶೀಲನೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಾಸಕಾಂಗ ಪಕ್ಷದ ನಾಯಕನಾಗಿ ಸೈನಿ ಅವಿರೋಧ ಆಯ್ಕೆ – ಎರಡನೇ ಬಾರಿಗೆ ಸಿಎಂ ಆಗಿ ಗುರುವಾರ ಪ್ರಮಾಣವಚನ

    ಕಳೆದ ಮೂರು ದಿನಗಳಲ್ಲಿ ಏರ್‌ ಇಂಡಿಯಾ ದೆಹಲಿ-ನ್ಯೂಯಾರ್ಕ್‌ ವಿಮಾನ, ದಮ್ಮಾಮ್-ಲಕ್ನೋ ಇಂಡಿಗೋ ವಿಮಾನ, ಅಯೋಧ್ಯೆ-ಬೆಂಗಳೂರು ಏರ್ ಇಂಡಿಯಾ ಎಕ್ಸ್‌ಪ್ರೆಸ್, ದರ್ಭಾಂಗಾದಿಂದ ಮುಂಬೈಗೆ ಸ್ಪೈಸ್‌ಜೆಟ್ ವಿಮಾನ (SG116), ಬಾಗ್ಡೋಗ್ರಾ-ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್ ವಿಮಾನ (QP 1373) ಅಲಯನ್ಸ್ ಏರ್ ಅಮೃತಸರ-ಡೆಹ್ರಾಡೂನ್-ದೆಹಲಿ ವಿಮಾನ (9I 650) ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ (IX 684) ಹಾಗೂ ಮಧುರೈನಿಂದ ಸಿಂಗಾಪುರಕ್ಕೆ ಹೊರಟಿದ್ದ ವಿಮಾನಗಳಿಗೆ ಬಾಂಬ್‌ ಬೆದರಿಕೆ ಬಂದಿದೆ.

    ತುರ್ತು ಸಭೆ:
    ವಿಮಾನಗಳಿಗೆ ಬಾಂಬ್‌ ಬೆದರಿಕೆ ವಿಚಾರವಾಗಿ ಬುಧವಾರ ಬೆಳಗ್ಗೆ 11 ಗಂಟೆಗೆ ಸಂಸದೀಯ ಸ್ಥಾಯಿ ಸಮಿತಿ ಸಭೆ ಸೇರಿತ್ತು. ಇದಕ್ಕೂ ಮುನ್ನ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಡಿಜಿಸಿಎ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಇದನ್ನೂ ಓದಿ: ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮಕೈಗೊಳ್ಳದ ಹರಿಯಾಣ, ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಛೀಮಾರಿ

    ಡಾರ್ಕ್‌ವೆಬ್‌ ಮೇಲೆ ನಿಗಾ: 
    ಬಾಂಬ್‌ ಬೆದರಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೆಲವು ಆರೋಪಿಗಳನ್ನು ಗುರುತಿಸಲಾಗಿದ್ದು, ಡಾರ್ಕ್ ವೆಬ್‌ನ ಮೇಲೆ ನಿಗಾ ಇಡಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.