Tag: ಏರ್ ಇಂಡಿಯಾ

  • ಟೇಕಾಫ್‌ ಆಗಿದ್ದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ – ಸತತ 2 ಗಂಟೆ ಆಕಾಶದಲ್ಲೇ ಗಿರಕಿ ಹೊಡೆದ ಏರ್‌ ಇಂಡಿಯಾ ಫ್ಲೈಟ್‌

    ಟೇಕಾಫ್‌ ಆಗಿದ್ದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ – ಸತತ 2 ಗಂಟೆ ಆಕಾಶದಲ್ಲೇ ಗಿರಕಿ ಹೊಡೆದ ಏರ್‌ ಇಂಡಿಯಾ ಫ್ಲೈಟ್‌

    – ವಿಮಾನದಲ್ಲಿದ್ರು 140 ಪ್ರಯಾಣಿಕರು

    ಚೆನ್ನೈ: ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ (Air India Flight) ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ತಮಿಳುನಾಡಿನ (Tamil Nadu) ತಿರುಚ್ಚಿ ನಗರದ ಮೇಲೆ ಸುಮಾರು ಎರಡು ಗಂಟೆಗಳ ಕಾಲ ಆಕಾಶದಲ್ಲೇ ಗಿರಕಿ ಹೊಡೆದಿರುವ ಘಟನೆ ನಡೆದಿದೆ.

    141 ಪ್ರಯಾಣಿಕರಿದ್ದ ವಿಮಾನವು ತಿರುಚ್ಚಿ ವಿಮಾನ ನಿಲ್ದಾಣದಿಂದ ಸಂಜೆ 5:45 ಕ್ಕೆ ಟೇಕಾಫ್ ಆದ ನಂತರ ಲ್ಯಾಂಡಿಂಗ್ ಗೇರ್ ಸಮಸ್ಯೆಯನ್ನು ಎದುರಿಸಿತು. ಕೊನೆಗೆ ತಮಿಳುನಾಡಿನ ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ವಿಮಾನ ಸೇಫ್‌ ಆಗಿ ಲ್ಯಾಂಡಿಂಗ್‌ ಆಗಿದೆ. ಇದನ್ನೂ ಓದಿ: ಕೋರಮಂಗಲದಲ್ಲಿ ರಿಲಯನ್ಸ್ ರಿಟೇಲ್ ‘ಯೂಸ್ಟಾ’ ಸ್ಟೋರ್ ಓಪನ್ – ಯುವಜನರ ಫ್ಯಾಷನ್‌ ಬ್ರ್ಯಾಂಡ್‌

    ಶಾರ್ಜಾಕ್ಕೆ ಹೊರಟಿದ್ದ AXB 613 ವಿಮಾನವು ತಿರುಚಿರಾಪಳ್ಳಿಯಿಂದ ಟೇಕ್ ಆಫ್ ಆದ ಕೂಡಲೇ ಹೈಡ್ರಾಲಿಕ್ ವೈಫಲ್ಯವನ್ನು ವರದಿ ಮಾಡಿತ್ತು. ವಿಮಾನದಲ್ಲಿ 144 ಪ್ರಯಾಣಿಕರಿದ್ದರು.

    ವಿಮಾನವು ಇಂಧನವನ್ನು ಬರ್ನ್‌ ಮಾಡಲು ಇನ್ನೂ ತಿರುಚಿರಾಪಳ್ಳಿಯ ಸುತ್ತಲೂ ಸುತ್ತುತ್ತಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದರು. ಫ್ಲೈಟ್ ಟ್ರ್ಯಾಕಿಂಗ್ ವೆಬ್‌ಸೈಟ್ ಫ್ಲೈಟ್ ರಾಡಾರ್ ಪ್ರಕಾರ, ವಿಮಾನವು ಸುಮಾರು ಎರಡು ಗಂಟೆಗಳ ಕಾಲ ಒಂದೇ ಪ್ರದೇಶದಲ್ಲಿ ಸುತ್ತಾಡಿದೆ. ಇದನ್ನೂ ಓದಿ: ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಕೈಕೊಟ್ಟು ಕಾಶ್ಮೀರದಲ್ಲಿ ಎನ್‌ಸಿ ಕೈ ಹಿಡಿದ ಆಪ್‌!

  • ಸೆಪ್ಟೆಂಬರ್ 3 ಬಳಿಕ ವಿಸ್ತಾರ ಫ್ಲೈಟ್ ಬುಕ್ಕಿಂಗ್ ಇಲ್ಲ

    ಸೆಪ್ಟೆಂಬರ್ 3 ಬಳಿಕ ವಿಸ್ತಾರ ಫ್ಲೈಟ್ ಬುಕ್ಕಿಂಗ್ ಇಲ್ಲ

    ನವದೆಹಲಿ: ವಿಸ್ತಾರಾ (Vistara) ಮತ್ತು ಏರ್ ಇಂಡಿಯಾ (Air India) ನಡುವಿನ ಬಹು ನಿರೀಕ್ಷಿತ ವಿಲೀನವು ನವೆಂಬರ್ 11 ಮಧ್ಯರಾತ್ರಿ 12ರ ವೇಳೆಗೆ ಅಂತಿಮಗೊಳ್ಳಲಿದೆ. ಸಿಂಗಾಪುರ್ ಏರ್‌ಲೈನ್ಸ್ (Singapore Airlines) ವಿದೇಶಿ ನೇರ ಹೂಡಿಕೆಗೆ ಭಾರತ ಸರ್ಕಾರದಿಂದ ಅನುಮೋದನೆ ಪಡೆದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆಯುತ್ತಿದೆ.

    ನ.11ರ ಬಳಿಕ ವಿಸ್ತಾರಾ ವಿಮಾನಗಳು ಏರ್ ಇಂಡಿಯಾ ಬ್ರ‍್ಯಾಂಡ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತವೆ. ಸೆ.3ರಿಂದ ವಿಸ್ತಾರಾ ಫ್ಲೈಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುವುದಿಲ್ಲ. ವಿಸ್ತಾರಾ ಫ್ಲೈಟ್‌ಗಳ ಬುಕಿಂಗ್ ಅನ್ನು ಏರ್ ಇಂಡಿಯಾದ ವೆಬ್‌ಸೈಟ್‌ಗೆ ಮರುನಿರ್ದೇಶಿಸಲಾಗುತ್ತದೆ. ನ.11ರವರೆಗೆ ಮಾತ್ರ ವಿಸ್ತಾರ ಸಾಮಾನ್ಯ ವಿಮಾನಗಳು ಕಾರ್ಯಾನಿರ್ವಹಿಸಲಿವೆ.ಇದನ್ನೂ ಓದಿ: ನಿವಿ ಈಗ ಚಂದನ್‌ನ ಮುದ್ದು ರಾಕ್ಷಸಿ

    ಈ ವಿಲೀನದ ಕುರಿತು ಮಾತನಾಡಿದ ವಿಸ್ತಾರಾ ಸಿಇಒ ವಿನೋದ್ ಕಣ್ಣನ್ (Vinod Kannan) ಅವರು, ಈ ಸಮಯದಲ್ಲಿ ಗ್ರಾಹಕರಿಗೆ ಸುಗಮ ಸಂವಹನ ಮತ್ತು ಬೆಂಬಲವನ್ನು ಖಚಿತಪಡಿಸಿಕೊಳ್ಳಲು ಎರಡೂ ಏರ್‌ಲೈನ್‌ಗಳು ಬದ್ಧವಾಗಿರುತ್ತವೆ. ನಮ್ಮ ಗ್ರಾಹಕರಿಗೆ ಸೇವೆಯಲ್ಲಿ ಯಾವುದೇ ಅಡಚಣೆ ಉಂಟಾಗುವುದಿಲ್ಲ ಎಂದು ತಿಳಿಯಲು ನಮ್ಮ ತಂಡಗಳು ನಿಕಟವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದ್ದಾರೆ.

    ಮೊದಲ ಬಾರಿಗೆ ನವೆಂಬರ್ 2022ರಲ್ಲಿ ಘೋಷಿಸಲಾದ ವಿಲೀನವು ಏರ್ ಇಂಡಿಯಾವನ್ನು ವಿಶ್ವದ ಅತಿದೊಡ್ಡ ವಿಮಾನಯಾನ ಸಂಸ್ಥೆಗಳಲ್ಲಿ ಒಂದನ್ನಾಗಿಸಲಿದೆ. ಹೆಚ್ಚು ವ್ಯಾಪಕವಾದ ನೆಟ್‌ವರ್ಕ್ ಮತ್ತು ವರ್ಧಿತ ಸೇವಾ ಕೊಡುಗೆಗಳನ್ನು ನೀಡುವ ಕಾರ್ಯತಂತ್ರದ ಕಾರಣದಿಂದಾಗಿ ಈ ವಿಲೀನ ಮಾಡಲಾಗಿದೆ.ಇದನ್ನೂ ಓದಿ: ಇಂದು ದರ್ಶನ್‌ಗೆ ಸಿಗಲಿದೆ 90 ಗ್ರಾಂ ಮಟನ್

    ಪ್ರಸ್ತುತ ಟಾಟಾ ಗ್ರೂಪ್‌ನ ವಿಸ್ತಾರ ಮತ್ತು ಸಿಂಗಾಪುರ್ ಏರ್‌ಲೈನ್ಸ್ ನಡುವಿನ 51:49 ಜಂಟಿ ಉದ್ಯಮವಾಗಿದೆ. ಭಾರತ ಸರ್ಕಾರದ ಅನುಮತಿಯೊಂದಿಗೆ ಸಿಂಗಾಪುರ್ ಏರ್‌ಲೈನ್ಸ್ ಹೊಸದಾಗಿ ವಿಸ್ತರಿಸಿದ ಏರ್ ಇಂಡಿಯಾದಲ್ಲಿ ಶೇ.25.1 ಪಾಲನ್ನು ಸ್ವಾಧೀನಪಡಿಸಿಕೊಳ್ಳಲಿದೆ. ಏರ್ ಇಂಡಿಯಾ ಜೊತೆ ಸಿಂಗಾಪೂರ್ ಏರ್‌ಲೈನ್ಸ್ ಹೂಡಿಕೆ ಮಾಡುವುದರಿಂದ ಏರ್ ಇಂಡಿಯಾವನ್ನು ದೇಶಿಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ವಿಮಾನಯಾನ ಕಂಪನಿಯನ್ನಾಗಿ ಬೆಳೆಸಲಿದೆ.

  • ಅರ್ಹತೆ ಹೊಂದಿರದ ಸಿಬ್ಬಂದಿ ಬಳಕೆ – ಏರ್ ಇಂಡಿಯಾಗೆ 90 ಲಕ್ಷ ರೂ. ದಂಡ

    ಅರ್ಹತೆ ಹೊಂದಿರದ ಸಿಬ್ಬಂದಿ ಬಳಕೆ – ಏರ್ ಇಂಡಿಯಾಗೆ 90 ಲಕ್ಷ ರೂ. ದಂಡ

    ನವದೆಹಲಿ: ಅರ್ಹತೆ ಇಲ್ಲದ ಸಿಬ್ಬಂದಿಯನ್ನು ವಿಮಾನ ಯಾನಕ್ಕೆ ಬಳಕೆ ಮಾಡಿದ್ದಕ್ಕೆ ಏರ್ ಇಂಡಿಯಾಗೆ (Air India) ಡಿಜಿಸಿಎ (DGCA) 90 ಲಕ್ಷ ರೂ. ದಂಡ ವಿಧಿಸಿದೆ. ಅಲ್ಲದೇ ಏರ್ ಇಂಡಿಯಾದ ಕಾರ್ಯಾಚರಣೆಯ ನಿರ್ದೇಶಕರಿಗೆ 6 ಲಕ್ಷ ರೂ. ಮತ್ತು ತರಬೇತಿ ನಿರ್ದೇಶಕರಿಗೆ 3 ಲಕ್ಷ ರೂ. ದಂಡ ವಿಧಿಸಿದೆ.

    ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲು ಸಂಬಂಧಿಸಿದ ಪೈಲಟ್‍ಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮುಡಾ ಹಗರಣಕ್ಕೆ ಅಧಿಕಾರಿ ಕಾರಣವೇ ಹೊರತು ಪ್ರಾಧಿಕಾರ ಸಮಿತಿಯಲ್ಲ – ರಮೇಶ ಬಂಡಿಸಿದ್ದೇಗೌಡ

    ಏರ್ ಇಂಡಿಯಾ ಅನುಭವ ಇಲ್ಲದ ಲೈನ್ ಕ್ಯಾಪ್ಟನ್‍ಗಳನ್ನು ಬಳಸಿಕೊಂಡು ವಿಮಾನ ಹಾರಾಟ ನಡೆಸಿದೆ. ಇದು ಸುರಕ್ಷತಾ ನೀತಿ ಉಲ್ಲಂಘನೆಯಾಗಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಡಿಜಿಸಿಎ ಏರ್ ಇಂಡಿಯಾಗೆ ಎಚ್ಚರಿಕೆ ನೀಡಿದೆ.

    ಜು.10 ರಂದು ಏರ್‌ಲೈನ್‌ ಸಲ್ಲಿಸಿದ ವರದಿಯ ಬಳಿಕ ಡಿಜಿಸಿಎ ದಾಖಲಾತಿಗಳ ಪರಿಶೀಲನೆ, ವೇಳಾಪಟ್ಟಿ ಸೇರಿದಂತೆ ವಿಮಾನದ ಕಾರ್ಯಾಚರಣೆಗಳನ್ನು ಪರಿಶೀಲಿಸಿ ತನಿಖೆ ನಡೆಸಿತ್ತು. ತನಿಖೆ ವೇಳೆ ಹಲವಾರು ನಿಯಮ ಉಲ್ಲಂಘನೆಯಾಗಿರುವ ವಿಚಾರ ಬೆಳಕಿಗೆ ಬಂದಿತ್ತು. ಬಳಿಕ ನೋಟಿಸ್ ಜಾರಿಗೊಳಿಸಲಾಗಿತ್ತು. ಆದರೆ ನೋಟಿಸ್‍ಗೆ ನೀಡಿರುವ ಉತ್ತರ ತೃಪ್ತಿಕರವಾಗಿಲ್ಲ. ಈ ಕಾರಣಕ್ಕೆ ನಿಯಮದ ಪ್ರಕಾರ ದಂಡ ವಿಧಿಸಲಾಗಿದೆ. ಇದನ್ನೂ ಓದಿ: ಬೆಂಗ್ಳೂರು ಎಸಿಗಳು ಅಂದ್ರೆ ದುಡ್ಡು ಮಾಡೋಕೆ, ಬ್ಯುಸಿನೆಸ್ ಮಾಡೋಕೆ ಅಂದುಕೊಂಡಿದ್ದೀರಾ? – ಕೃಷ್ಣಭೈರೇಗೌಡ ತರಾಟೆ

  • ಲಂಡನ್‌ ಹೋಟೆಲ್‌ನಲ್ಲಿ ಏರ್‌ ಇಂಡಿಯಾ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ

    ಲಂಡನ್‌ ಹೋಟೆಲ್‌ನಲ್ಲಿ ಏರ್‌ ಇಂಡಿಯಾ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ

    ಲಂಡನ್‌: ಏರ್ ಇಂಡಿಯಾ (Air India) ಕ್ಯಾಬಿನ್ ಸಿಬ್ಬಂದಿಯ ಮೇಲೆ ಲಂಡನ್‌ನಲ್ಲಿರುವ ಹೋಟೆಲ್‌ನಲ್ಲಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

    ಪ್ರಮುಖ ಅಂತಾರಾಷ್ಟ್ರೀಯ ಹೋಟೆಲ್‌ನಲ್ಲಿ ಯಾರೋ ಅಕ್ರಮವಾಗಿ ಒಳನುಗ್ಗಿ ಹಲ್ಲೆ ನಡೆಸಿರುವ ಬಗ್ಗೆ ಬೇಸರ ಹೊರಹಾಕಿರುವ ಏರ್‌ಲೈನ್ಸ್‌, ವೃತ್ತಿಪರ ಸಮಾಲೋಚನೆ ಸೇರಿದಂತೆ ನಮ್ಮ ಸಹೋದ್ಯೋಗಿ ಮತ್ತು ಅವರ ತಂಡಕ್ಕೆ ನಾವು ಸಾಧ್ಯವಿರುವ ಎಲ್ಲ ಬೆಂಬಲವನ್ನು ಒದಗಿಸುತ್ತೇವೆ ಎಂದು ತಿಳಿಸಿದೆ. ಇದನ್ನೂ ಓದಿ: ಮುಸ್ಲಿಮರಿಗೆ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ: ಮುಸ್ಲಿಂ ಮಂಡಳಿ

    ಪ್ರಕರಣ ಸಂಬಂಧ ಲಂಡನ್‌ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಂತ್ರಸ್ತ ಸಿಬ್ಬಂದಿಯ ಗೌಪ್ಯತೆಯನ್ನು ಗೌರವಿಸಬೇಕು ಎಂದು ಏರ್ ಇಂಡಿಯಾ ವಿನಂತಿಸಿದೆ. ಘಟನೆಯ ಕೂಲಂಕಷ ತನಿಖೆ ಬಗ್ಗೆ ಕ್ರಮವಹಿಸಿರುವ ಬಗ್ಗೆಯೂ ಏರ್‌ಲೈನ್ಸ್‌ ಮಾಹಿತಿ ನೀಡಿದೆ.

    ಸಿಬ್ಬಂದಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂಬ ವರದಿಗಳ ಬಗ್ಗೆ ವಿಮಾನಯಾನ ಸಂಸ್ಥೆಯು ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ. ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ – ಸಂತ್ರಸ್ತರಿಗೆ ಮರೀಚಿಕೆಯಾಗಿಯೇ ಉಳಿದ ಉದ್ಯೋಗದ ಭರವಸೆ

  • ಒಂದೇ ರನ್‌ವೇಯಲ್ಲಿ ಲ್ಯಾಂಡಿಂಗ್‌, ಟೇಕಾಫ್‌- ಮುಂಬೈಯಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿತು ದುರಂತ

    ಒಂದೇ ರನ್‌ವೇಯಲ್ಲಿ ಲ್ಯಾಂಡಿಂಗ್‌, ಟೇಕಾಫ್‌- ಮುಂಬೈಯಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿತು ದುರಂತ

    ಮುಂಬೈ: ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mumbai Airport) ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೂ ದೊಡ್ಡ ದುರಂತ ಸಂಭವಿಸುವ ಸಾಧ್ಯತೆ ಇತ್ತು. ಶನಿವಾರ ಸಂಜೆ ಒಂದೇ ರನ್‌ವೇಯಲ್ಲಿ (Runway) ಏರ್‌ ಇಂಡಿಯಾ (Air India) ವಿಮಾನ ಟೇಕಾಫ್‌ ಆದರೆ ಇಂಡಿಗೋ (IndiGo) ವಿಮಾನ ಲ್ಯಾಂಡಿಂಗ್‌ ಆಗಿದೆ.

    ಏರ್‌ ಇಂಡಿಯಾ ವಿಮಾನ ತಿರುವನಂತಪುರಂಗೆ ಟೇಕಾಫ್‌ ಆಗುತ್ತಿತ್ತು. ಈ ಸಂದರ್ಭದಲ್ಲಿ ಇಂದೋರ್‌ನಿಂದ ಆಗಮಿಸಿದ ಇಂಡಿಗೋ ವಿಮಾನಕ್ಕೆ ತಪ್ಪಾಗಿ ರನ್‌ವೇಯಲ್ಲಿ ಲ್ಯಾಂಡಿಂಗ್‌ ಮಾಡಲು ಅನುಮತಿ ಸಿಕ್ಕಿದೆ.


    ಅನುಮತಿ ಸಿಕ್ಕಿದ ಕಾರಣ ಪೈಲಟ್‌ ರನ್‌ವೇಯಲ್ಲಿ ಟಚ್‌ಡೌನ್‌ ಆಗುತ್ತಿದ್ದಾಗ ಏರ್‌ ಇಂಡಿಯಾ ಜಸ್ಟ್‌ ಟೇಕಾಫ್‌ ಆಗಿತ್ತು. ಒಂದು ವೇಳೆ ಏರ್‌ ಇಂಡಿಯಾ ಟೇಕಾಫ್‌ ಕೆಲ ಸೆಕೆಂಡ್‌ ವಿಳಂಬವಾಗಿದ್ದರೆ ಹಿಂದಿನಿಂದ ಏರ್‌ ಇಂಡಿಯಾ ವಿಮಾನ ಡಿಕ್ಕಿ ಹೊಡೆಯುವ ಸಾಧ್ಯತೆ ಇತ್ತು.

    ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ನಾಗರಿಕ ವಿಮಾನಯಾನ ನಿರ್ದೇಶನಾಲಯ ತನಿಖೆಗೆ ಆದೇಶಿಸಿದೆ. ಇಂಡಿಗೋ ವಿಮಾನಕ್ಕೆ ಲ್ಯಾಂಡಿಂಗ್‌ ಮಾಡಲು ಅನುಮತಿ ನೀಡಿದ್ದ ಎಟಿಸಿ ಸಿಬ್ಬಂದಿಯನ್ನು ತನಿಖೆ ಮುಗಿಯುವರೆಗೂ ಕೆಲಸದಿಂದ ತೆಗೆಯಲಾಗಿದೆ.

  • ಅನಾರೋಗ್ಯ ಕಾರಣ ನೀಡಿ ಸಿಬ್ಬಂದಿ ಸಾಮೂಹಿಕ ರಜೆ – ಏರ್ ಇಂಡಿಯಾದ 86 ವಿಮಾನ ಹಾರಾಟ ರದ್ದು

    ಅನಾರೋಗ್ಯ ಕಾರಣ ನೀಡಿ ಸಿಬ್ಬಂದಿ ಸಾಮೂಹಿಕ ರಜೆ – ಏರ್ ಇಂಡಿಯಾದ 86 ವಿಮಾನ ಹಾರಾಟ ರದ್ದು

    ನವದೆಹಲಿ: ಅನಾರೋಗ್ಯ ಕಾರಣ ನೀಡಿ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ (Air India Express)) ಸಿಬ್ಬಂದಿ ಸಾಮೂಹಿಕ ರಜೆ ಹಾಕಿರುವ ಪರಿಣಾಮ ಏರ್‌ ಇಂಡಿಯಾದ 86 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಂಡಿದೆ.

    ಸುಮಾರು 300 ಹಿರಿಯ ಕ್ಯಾಬಿನ್ ಸಿಬ್ಬಂದಿ ಕೊನೆಯ ಕ್ಷಣದಲ್ಲಿ ಅನಾರೋಗ್ಯದ ಕಾರಣ ನೀಡಿ ಕರ್ತವ್ಯಕ್ಕೆ ಗೈರಾಗಿದ್ದಾರೆ. ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಹೀಗಾಗಿ ಅಂತರರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳ ಕಾರ್ಯಾಚರಣೆ ರದ್ದುಗೊಳಿಸಲಾಗಿದೆ. ಇದನ್ನೂ ಓದಿ: ಕೋವಿಡ್‌ ಲಸಿಕೆಯನ್ನು ಜಾಗತಿಕವಾಗಿ ಹಿಂತೆಗೆದುಕೊಳ್ಳಲು ಮುಂದಾದ ಅಸ್ಟ್ರಾಜೆನೆಕಾ

    ಸಂಬಳದ ವಿಚಾರದಲ್ಲಿ ಅಸಮಾಧಾನ ಹೊಂದಿರುವ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಯಾವುದೇ ನೋಟಿಸ್‌ ನೀಡದೇ ಕೆಲಸಕ್ಕೆ ಗೈರಾಗಿದ್ದಾರೆ. ಅನಾರೋಗ್ಯ ಕಾರಣ ನೀಡಿ ಸಾಮೂಹಿಕವಾಗಿ ಸಿಬ್ಬಂದಿ ರಜೆ ಹಾಕಿದ್ದಾರೆ.

    ಈ ಅನಿರೀಕ್ಷಿತ ಅಡಚಣೆಗಾಗಿ ನಾವು ನಮ್ಮ ಅತಿಥಿಗಳಿಗೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಈಗ ಎದುರಾಗಿರುವ ಪರಿಸ್ಥಿತಿಯು, ಇದುವರೆಗೆ ನಾವು ಒದಗಿಸಿರುವ ಸೇವೆಯ ಗುಣಮಟ್ಟವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಪ್ರಯಾಣಿಕರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಮಾಲ್ಡೀವ್ಸ್ ವಿದೇಶಾಂಗ ಸಚಿವ ನಾಳೆ ಭಾರತಕ್ಕೆ ಭೇಟಿ

    ರದ್ದತಿಯಿಂದ ತೊಂದರೆ ಅನುಭವಿಸುತ್ತಿರುವ ಪ್ರಯಾಣಿಕರಿಗೆ ಹಣ ಮರುಪಾವತಿ ಮಾಡಲಾಗುವುದು. ಪ್ರಯಾಣಕ್ಕೆ ದಿನಾಂಕವನ್ನು ಮರು ಹೊಂದಾಣಿಕೆ ಮಾಡಿಕೊಡಲಾಗುವುದು ಎಂದು ಏರ್‌ಲೈನ್ಸ್‌ ತಿಳಿಸಿದೆ.

  • ಏ.30 ರವರೆಗೆ  ಇಸ್ರೇಲ್‌ಗೆ ಏರ್ ಇಂಡಿಯಾ ಸೇವೆ ಸ್ಥಗಿತ

    ಏ.30 ರವರೆಗೆ ಇಸ್ರೇಲ್‌ಗೆ ಏರ್ ಇಂಡಿಯಾ ಸೇವೆ ಸ್ಥಗಿತ

    ನವದೆಹಲಿ: ಇಸ್ರೇಲ್ ಮತ್ತು ಇರಾನ್ (Israel and Iran) ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವುದರಿಂದ ಏಪ್ರಿಲ್ 30 ರವರೆಗೆ ಟೆಲ್ ಅವಿವ್‌ಗೆ (Tel Aviv) ಮತ್ತು ಅಲ್ಲಿಂದ ಬರುವ ಎಲ್ಲಾ ವಿಮಾನಗಳನ್ನು ಸ್ಥಗಿತಗೊಳಿಸಿದೆ.

    ಈ ಸಂಬಂಧ ಮಾಹಿತಿ ಹಂಚಿಕೊಂಡಿರುವ ಏರ್‌ ಇಂಡಿಯಾ (Air India), ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ಹೊರಡುವ ನಮ್ಮ ವಿಮಾನಗಳನ್ನು 30 ಏಪ್ರಿಲ್ ರವರೆಗೆ ಸ್ಥಗಿತಗೊಳಿಸಲಾಗುವುದು. ನಾವು ನಿರಂತರವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಈ ಸಮಯದಲ್ಲಿ ಟೆಲ್ ಅವಿವ್‌ಗೆ ಮತ್ತು ಅಲ್ಲಿಂದ ಪ್ರಯಾಣಕ್ಕಾಗಿ ಬುಕಿಂಗ್‌ಗಳನ್ನು ದೃಢಪಡಿಸಿದ ನಮ್ಮ ಪ್ರಯಾಣಿಕರಿಗೆ ಬೆಂಬಲವನ್ನು ನೀಡುತ್ತಿದ್ದೇವೆ. ಏರ್ ಇಂಡಿಯಾದಲ್ಲಿ ನಮ್ಮ ಗ್ರಾಹಕರು ಮತ್ತು ಸಿಬ್ಬಂದಿಯ ಸುರಕ್ಷತೆಯು ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದೆ.

    ಕಳೆದ ಭಾನುವಾರವಷ್ಟೇ ಏರ್ ಇಂಡಿಯಾ ಅಧಿಕಾರಿಯೊಬ್ಬರು ದೆಹಲಿ ಮತ್ತು ಟೆಲ್ ಅವೀವ್ ನಡುವಿನ ನೇರ ವಿಮಾನಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಇರಾನ್, ಇಸ್ರೇಲ್‍ಗೆ ಪ್ರಯಾಣಿಸದಂತೆ ನಾಗರಿಕರಿಗೆ ಕೇಂದ್ರದ ಸಲಹೆ

    ಟಾಟಾ ಸಮೂಹ-ಮಾಲೀಕತ್ವದ ವಾಹಕವು ಸುಮಾರು ಐದು ತಿಂಗಳ ಅಂತರದ ನಂತರ ಮಾರ್ಚ್ 3 ರಂದು ಇಸ್ರೇಲಿ ರಾಜಧಾನಿಗೆ ಸೇವೆಗಳನ್ನು ಮರುಪ್ರಾರಂಭಿಸಿತು. ಇಸ್ರೇಲಿ ನಗರದ ಮೇಲೆ ಹಮಾಸ್ ದಾಳಿಯ ಹಿನ್ನೆಲೆಯಲ್ಲಿ 2023 ರ ಅಕ್ಟೋಬರ್ 7 ರಿಂದ ಏರ್ ಇಂಡಿಯಾ ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಸ್ಥಗಿತಗೊಳಿಸಿತು.

  • ದಕ್ಷಿಣ ಭಾರತದ ಏವಿಯೇಷನ್‌ ಹಬ್‌ ಆಗುತ್ತಾ ಬೆಂಗ್ಳೂರು ಏರ್‌ಪೋರ್ಟ್‌?- ಏನಿದು ಏವಿಯೇಷನ್‌ ಹಬ್‌?

    ದಕ್ಷಿಣ ಭಾರತದ ಏವಿಯೇಷನ್‌ ಹಬ್‌ ಆಗುತ್ತಾ ಬೆಂಗ್ಳೂರು ಏರ್‌ಪೋರ್ಟ್‌?- ಏನಿದು ಏವಿಯೇಷನ್‌ ಹಬ್‌?

    – ಬೆಂಗಳೂರು ವಿಮಾನ ನಿಲ್ದಾಣವನ್ನು ಏರ್‌ ಇಂಡಿಯಾ ಹೇಗೆ ಪರಿವರ್ತಿಸುತ್ತೆ?

    ಬೆಂಗಳೂರು ವಿಮಾನ ನಿಲ್ದಾಣವನ್ನು ದಕ್ಷಿಣ ಭಾರತದ ಪ್ರಮುಖ ಏವಿಯೇಷನ್ ಹಬ್ (ವಾಯುಯಾನ ಕೇಂದ್ರ) ಆಗಿ ಅಭಿವೃದ್ಧಿಪಡಿಸುವುದಾಗಿ ಏರ್ ಇಂಡಿಯಾ ಘೋಷಿಸಿದೆ. ಈ ಸಂಬಂಧ ಏರ್ ಇಂಡಿಯಾ ಜೊತೆ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಒಪ್ಪಂದಕ್ಕೆ ಸಹಿ ಹಾಕಿದೆ. ಪ್ರಸ್ತುತ, ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇಂಡಿಗೋ ಮತ್ತು ಏರ್ ಇಂಡಿಯಾದಂತಹ ಪ್ರಮುಖ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ಕೇಂದ್ರವಾಗಿದೆ. ಆ ಸಾಲಿಗೆ ಬೆಂಗಳೂರು ಏರ್‌ಪೋರ್ಟ್ ಸೇರಿಸುವ ಪ್ರಯತ್ನ ನಡೆದಿದೆ.

    ಅಷ್ಟಕ್ಕೂ ಏನಿದು ಏವಿಯೇಷನ್ ಹಬ್? ಭಾರತದಲ್ಲಿ ಈಗ ಎಷ್ಟು ವಾಯುಯಾನ ಕೇಂದ್ರಗಳಿವೆ? ಏವಿಯೇಷನ್ ಹಬ್‌ನಿಂದ ಪ್ರಯೋಜನವೇನು ಎಂಬ ಪ್ರಶ್ನೆಗಳಿಗೆ ವಿವರ ಇಲ್ಲಿದೆ.

    ಏವಿಯೇಷನ್ ಹಬ್
    ಪ್ರಯಾಣಿಕರ ದಟ್ಟಣೆ ಮತ್ತು ವಿಮಾನ ಕಾರ್ಯಾಚರಣೆಗಳನ್ನು ಕೇಂದ್ರೀಕರಿಸಲು ಒಂದು ಅಥವಾ ಹೆಚ್ಚಿನ ವಿಮಾನಯಾನ ಸಂಸ್ಥೆಗಳು ಬಳಸುವ ವಿಮಾನ ನಿಲ್ದಾಣವೇ ಏವಿಯೇಷನ್ ಹಬ್. ಇದನ್ನ ಏರ್‌ಲೈನ್ ಹಬ್ ಅಥವಾ ಹಬ್ ವಿಮಾನ ನಿಲ್ದಾಣ ಅಂತಲೂ ಕರೆಯಲಾಗುತ್ತದೆ. ಪ್ರಯಾಣಿಕರು ತಾವು ಹೋಗಬಯಸುವ ವಿಶ್ವದ ವಿವಿಧ ನಗರಗಳಿಗೆ ನೇರ ಸಂಪರ್ಕ ಕಲ್ಪಿಸುವ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತವೆ. ಇದು ಹಬ್ ಮತ್ತು ಸ್ಪೋಕ್ ವ್ಯವಸ್ಥೆಯ ಭಾಗವಾಗಿದೆ. ಪ್ರಮುಖ ಅಂತಾರಾಷ್ಟ್ರೀಯ ನಗರಗಳ ನಡುವೆ ನೇರ ಸಂಪರ್ಕವನ್ನು ಒದಗಿಸುವ ಒಂದು ಅಥವಾ ಎರಡು ಪ್ರಮುಖ ವಿಮಾನಯಾನ ಸಂಸ್ಥೆಗಳೊಂದಿಗೆ ಈ ಹಬ್‌ಗಳನ್ನು ಗುರುತಿಸಲಾಗಿದೆ.

    ವಿಮಾನ ನಿಲ್ದಾಣದಲ್ಲಿ ದಕ್ಷ ಹಾಗೂ ಸುರಕ್ಷಿತ ಕಾರ್ಯಾಚರಣೆ ನಡೆಸುವುದು ಇದರ ಮುಖ್ಯ ಉದ್ದೇಶ. ಆಗ ಗ್ರಾಹಕರಿಗೆ ಉತ್ತಮ ಅನುಭವ ಸಿಗುತ್ತದೆ. ಈ ಉದ್ದೇಶದಿಂದ ಭಾರತದಲ್ಲಿ ವಾಯು ಸಂಪರ್ಕ ವಿಸ್ತರಿಸಲು ಏರ್ ಇಂಡಿಯಾ ಮುಂದಾಗಿದೆ.

    ವಿಮಾನಯಾನ ಸಂಶೋಧನಾ ಸಂಸ್ಥೆಯಾದ ಒಎಜಿ, ಲಂಡನ್ ಹೀಥ್ರೂವನ್ನು (2023 ಕ್ಕೆ) ವಿಶ್ವದ ಅತ್ಯಂತ ಹೆಚ್ಚು ಸಂಪರ್ಕಿತ ವಿಮಾನ ನಿಲ್ದಾಣವೆಂದು ಗುರುತಿಸಿದೆ. ಇದರ ಜೊತೆಗೆ ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣ, ನೆದರ್‌ಲ್ಯಾಂಡ್‌ನ ಆಮ್‌ಸ್ಟರ್‌ಡ್ಯಾಮ್ ವಿಮಾನ ನಿಲ್ದಾಣ, ಮಲೇಷ್ಯಾದ ಕೌಲಾಲಂಪುರ್ ವಿಮಾನ ನಿಲ್ದಾಣ ಮತ್ತು ಟೋಕಿಯೊದ ಹನೇಡಾ ವಿಮಾನ ನಿಲ್ದಾಣವನ್ನೂ ಗುರುತಿಸಲಾಗಿದೆ.

    ಹಬ್ ಅನ್ನು ಸ್ಥಾಪಿಸುವ ಪ್ರಮುಖ ಅಂಶವೆಂದರೆ, ಕನಿಷ್ಠ ಒಂದು ಏರ್‌ಲೈನ್‌ನ ಪ್ರಾಬಲ್ಯವನ್ನು ಹೊಂದಿರುವುದು. ಉದಾಹರಣೆಗೆ: ಹೀಥ್ರೂ ವಿಮಾನ ನಿಲ್ದಾಣದಲ್ಲಿ ಲಂಡನ್ ಹೀಥ್ರೂನಿಂದ ಕಾರ್ಯನಿರ್ವಹಿಸುವ ಒಟ್ಟು ವಿಮಾನಗಳ ಸಂಖ್ಯೆಯಲ್ಲಿ ಬ್ರಿಟಿಷ್ ಏರ್ವೇಸ್ 50% ಪಾಲನ್ನು ಹೊಂದಿದೆ. ಜೆಕೆಎಫ್ ವಿಮಾನ ನಿಲ್ದಾಣದಲ್ಲಿ ಡೆಲ್ಟಾ ಏರ್‌ಲೈನ್ 34% ಪಾಲನ್ನು ಹೊಂದಿದೆ. ಕೆಎಲ್‌ಎಂ-ರಾಯಲ್ ಏರ್‌ಲೈನ್, ಆಮ್‌ಸ್ಟರ್‌ಡ್ಯಾಮ್ ಶಿಪೋಲ್ ವಿಮಾನ ನಿಲ್ದಾಣದಲ್ಲಿ 53% ಪಾಲನ್ನು ಹೊಂದಿದೆ. ಕೌಲಾಲಂಪುರದಿಂದ ವಿಮಾನಗಳಲ್ಲಿ ಏರ್ ಏಷ್ಯಾ 34% ಪಾಲನ್ನು ಹೊಂದಿದೆ.

    ವಿಮಾನ ನಿಲ್ದಾಣ ಕೇಂದ್ರವು ಅಂತಾರಾಷ್ಟ್ರೀಯ-ಅಂತಾರಾಷ್ಟ್ರೀಯ ಅಥವಾ ಅಂತಾರಾಷ್ಟ್ರೀಯ-ದೇಶೀಯ ಸಂಪರ್ಕಕ್ಕೆ (2 ಮಾರ್ಗಗಳ ನಡುವೆ) ಕನಿಷ್ಠ ಸಾರಿಗೆ ಸಮಯ ಒದಗಿಸಬೇಕು. ಪ್ರತಿ ವರ್ಷ 90% ಪ್ರಯಾಣಿಕರ ಸಾಮರ್ಥ್ಯವನ್ನು ಹೊಂದಿರುವ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 50 ಗೇಟ್‌ಗಳನ್ನು ಹೊಂದಿರುವ ಮೂರು ಪ್ರಮುಖ ಟರ್ಮಿನಲ್‌ಗಳನ್ನು ಹೊಂದಿದೆ. ಪ್ರತಿಯೊಂದು ಟರ್ಮಿನಲ್‌ಗಳ ನಡುವೆ 30 ನಿಮಿಷಗಳ ವರೆಗೆ ಟ್ರಾನ್ಸ್‌ಫರ್‌ ಸಮಯವನ್ನು ಸುಗಮಗೊಳಿಸುತ್ತದೆ.

    ದಕ್ಷಿಣ ಭಾರತದಲ್ಲಿ ಏವಿಯೇಷನ್ ಹಬ್ ಯಾಕೆ?
    ದಕ್ಷಿಣ ಭಾರತದಿಂದ ನೇರ ದೀರ್ಘ ಪ್ರಯಾಣದ ಮಾರ್ಗಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನು ಪೂರೈಸಲು ಏರ್ ಇಂಡಿಯಾ ಉದ್ದೇಶಿಸಿದೆ. ಈ ಪಾಲುದಾರಿಕೆಯು ಎಂಆರ್‌ಓ ಪರಿಸರ ವ್ಯವಸ್ಥೆಯನ್ನು ಉತ್ತೇಜಿಸಲಿದೆ. ಜೊತೆಗೆ ಹೊಸ ಉದ್ಯೋಗಾವಕಾಶಗಳನ್ನೂ ಸೃಷ್ಟಿಸುತ್ತದೆ.

    ಬೆಂಗಳೂರು ಏರ್‌ಪೋರ್ಟ್‌ಗೆ ಒಲಿದ ಅವಕಾಶ!
    ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಕ್ಷಿಣ ಭಾರತದಲ್ಲಿಯೇ ಅತಿ ಹೆಚ್ಚು ಪ್ರಯಾಣಿಕರು ಪ್ರಯಾಣಿಸುವ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆ ಹೊಂದಿದೆ. ಈ ಒಪ್ಪಂದದೊಂದಿಗೆ ವಿಶ್ವದ ದೊಡ್ಡ ದೊಡ್ಡ ನಗರಗಳಿಗೆ ನೇರ ವಿಮಾನ ಸಂಪರ್ಕ ಸಾಧ್ಯವಾಗುತ್ತದೆ. ಅಷ್ಟೇ ಅಲ್ಲದೇ, ಪ್ರಯಾಣಿಕರಿಗೆ ಉತ್ತಮ ಪ್ರಯಾಣದ ಅನುಭವ ಕೂಡ ದೊರೆಯಲಿದೆ.

    1,200 ಹೊಸ ಉದ್ಯೋಗ ಸೃಷ್ಟಿ
    ಈ ಕಾರಣದಿಂದಾಗಿ ಏರ್ ಇಂಡಿಯಾವು ಕರ್ನಾಟಕ ಸರ್ಕಾರದೊಂದಿಗೆ ಸಹಿ ಹಾಕಿದೆ. ವಿಮಾನ ನಿಲ್ದಾಣದಲ್ಲಿ ನಿರ್ವಹಣೆ, ದುರಸ್ತಿ ಮತ್ತು ಉತ್ತಮ ಸೌಲಭ್ಯ ಒದಗಿಸುವ ಕೆಲಸ ಮಾಡಲಿದೆ. ಈ ಒಪ್ಪಂದದಿಂದಾಗಿ ರಾಜ್ಯದಲ್ಲಿ ಹೆಚ್ಚು ನುರಿತ ವ್ಯಕ್ತಿಗಳಿಗೆ 1,200 ಹೊಸ ಉದ್ಯೋಗಾವಕಾಶಗಳನ್ನೂ ಒದಗಿಸಲು ಸಾಧ್ಯವಾಗಲಿದೆ. 2023 ರಲ್ಲಿ ಬೆಂಗಳೂರು ವಿಮಾನ ನಿಲ್ದಾಣವು 3.72 ಕೋಟಿ ಪ್ರಯಾಣಿಕರನ್ನು ಹೊಂದಿತ್ತು.

    ಭಾರತದಲ್ಲಿ ಹಬ್‌
    ಭಾರತದ ಮೂಲಕ ವಿದೇಶಗಳ ವಿವಿಧ ಪ್ರಮುಖ ನಗರಗಳಿಗೆ ನೇರ ಸಂಪರ್ಕ ಸಾಧಿಸಲು ಕೇಂದ್ರ ಸರ್ಕಾರವು ದೇಶದಲ್ಲಿ ಏವಿಯೇಷನ್ ಹಬ್‌ಗಳನ್ನು ಅಭಿವೃದ್ಧಿಪಡಿಸಲು ಕ್ರಮಕೈಗೊಂಡಿದೆ. ಭಾರತದ ಅತಿ ದೊಡ್ಡ ಮತ್ತು ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿರುವ ದೆಹಲಿಯಲ್ಲಿ ಈ ಯೋಜನೆ ಜಾರಿಯಲ್ಲಿದೆ. 2022-23 (ಏಪ್ರಿಲ್-ಮಾರ್ಚ್) 4,29,964 ವಿಮಾನಗಳ ಕಾರ್ಯಾಚರಣೆ ಮತ್ತು 6.52 ಕೋಟಿ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಿದೆ.

    ಕೇಂದ್ರದ ರಾಷ್ಟ್ರೀಯ ವಿಮಾನಯಾನ ಹಬ್ ನೀತಿಯ ಪ್ರಕಾರ, ದುಬೈ ಮತ್ತು ದೋಹಾ ವಿಮಾನ ನಿಲ್ದಾಣಗಳಿಗೆ ಅನುಗುಣವಾಗಿ ದೆಹಲಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ಕೇಂದ್ರವಾಗಿಸಲು ಸರ್ಕಾರವು ಸಮಿತಿಯನ್ನು ರಚಿಸಿದೆ. ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ನಡುವೆ ತಡೆರಹಿತ ಸಂಪರ್ಕ ಸಾಧಿಸಲು, ಭದ್ರತಾ ತಪಾಸಣೆ ಹಾಗೂ ವಲಸೆಯ ಅಡಚಣೆಯಂತಹ ಸವಾಲುಗಳಿಗೆ ಈ ನೀತಿಯು ಪರಿಹಾರವಾಗಿದೆ.

  • ಇಸ್ರೆಲ್, ಇರಾನ್ ಉದ್ವಿಗ್ನತೆ – ಟೆಲ್ ಅವೀವ್‍ಗೆ ಏರ್ ಇಂಡಿಯಾ ಹಾರಾಟ ಸ್ಥಗಿತ

    ಇಸ್ರೆಲ್, ಇರಾನ್ ಉದ್ವಿಗ್ನತೆ – ಟೆಲ್ ಅವೀವ್‍ಗೆ ಏರ್ ಇಂಡಿಯಾ ಹಾರಾಟ ಸ್ಥಗಿತ

    ನವದೆಹಲಿ: ಇಸ್ರೇಲ್ (Israel) ಮತ್ತು ಇರಾನ್ (Iran) ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಟೆಲ್ ಅವೀವ್‍ಗೆ (Tel Aviv) ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಏರ್ ಇಂಡಿಯಾ (Air India) ನಿರ್ಧರಿಸಿದೆ.

    ದೆಹಲಿ ಮತ್ತು ಟೆಲ್ ಅವೀವ್ ನಡುವಿನ ನೇರ ವಿಮಾನ ಸಂಚಾರವನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗುವುದು ಎಂದು ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ರಾಯಭಾರಿ ಕಚೇರಿ ಮಾರ್ಗಸೂಚಿ ಬಿಡುಗಡೆ

    ಏರ್ ಇಂಡಿಯಾ ವಿಮಾನವು ದೆಹಲಿಯಿಂದ (Delhi) ಇಸ್ರೇಲ್‍ಗೆ ವಾರದಲ್ಲಿ ನಾಲ್ಕು ದಿನಗಳು ಹಾರಾಟ ನಡೆಸುತ್ತಿತ್ತು. ಇದೀಗ ತಾತ್ಕಾಲಿಕವಾಗಿ ಆ ಹಾರಾಟವನ್ನು ಸ್ಥಗಿತಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

    ಟಾಟಾ ಸಮೂಹದ ಮಾಲೀಕತ್ವದ ಏರ್ ಇಂಡಿಯಾ, ಸುಮಾರು ಐದು ತಿಂಗಳ ಅಂತರದ ನಂತರ ಮಾರ್ಚ್ 3 ರಿಂದು ಟೆಲ್ ಅವಿವ್‍ಗೆ ಸೇವೆಗಳನ್ನು ಮರುಪ್ರಾರಂಭಿಸಿತ್ತು. ಇಸ್ರೇಲಿ ನಗರದ ಮೇಲೆ ಹಮಾಸ್ ದಾಳಿಯ ಹಿನ್ನೆಲೆಯಲ್ಲಿ ಏರ್ ಇಂಡಿಯಾ 2023ರ ಅಕ್ಟೋಬರ್ 7 ರಿಂದ ಟೆಲ್ ಅವೀವ್‍ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಸ್ಥಗಿತಗೊಳಿಸಿತ್ತು. ಇದನ್ನೂ ಓದಿ: ಇರಾನ್‌ ವೈಮಾನಿಕ ದಾಳಿ; ಇಸ್ರೇಲ್‌ನ ಶಾಲಾ-ಕಾಲೇಜುಗಳು ಬಂದ್‌

  • ಆಸನಗಳು ಬಹುತೇಕ ಭರ್ತಿ – ಬೆಂಗಳೂರು ಟು ಅಯೋಧ್ಯೆ ವಿಮಾನ ಪ್ರಯಾಣಕ್ಕೆ ಭರ್ಜರಿ ಸ್ಪಂದನೆ

    ಆಸನಗಳು ಬಹುತೇಕ ಭರ್ತಿ – ಬೆಂಗಳೂರು ಟು ಅಯೋಧ್ಯೆ ವಿಮಾನ ಪ್ರಯಾಣಕ್ಕೆ ಭರ್ಜರಿ ಸ್ಪಂದನೆ

    ಬೆಂಗಳೂರು: ರಾಮ ಮಂದಿರ (Ram Mandir) ಲೋಕಾರ್ಪಣೆಯಾದ ಬಳಿಕ ಬೆಂಗಳೂರು (Bengaluru) ಮತ್ತು ಅಯೋಧ್ಯೆ (Ayodhya) ನಡುವಿನ ವಿಮಾನ ಪ್ರಯಾಣದ (Flight Travel) ಬೇಡಿಕೆ ಹೆಚ್ಚಾಗುತ್ತಿದೆ.

    ಕಳೆದ ನಾಲ್ಕು ವಾರಗಳಿಂದ ಎರಡು ನಗರಗಳ ನಡುವೆ ಸಂಚರಿಸುವ ವಿಮಾನದಲ್ಲಿ ಆಸನಗಳು ಬಹುತೇಕ ಭರ್ತಿಯಾಗುತ್ತಿದ್ದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಟೆಂಪಲ್‌ ಟೂರಿಸಂಗೆ (Temple Tourism) ಭರ್ಜರಿ ಸ್ಪಂದನೆ ಸಿಕ್ಕಿದೆ.

    ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮತ್ತು ಸ್ಪೈಸ್‌ಜೆಟ್ ಈ ಮಾರ್ಗದಲ್ಲಿ ಪ್ರತಿದಿನ ವಿಮಾನ ಸೇವೆ ನೀಡುತ್ತಿವೆ. ಕಡಿಮೆ ಸೀಟ್ ಬುಕ್‌ ಆಗಿದೆ ಎಂಬ ಕಾರಣ ನೀಡಿ ಇಲ್ಲಿಯವರೆಗೆ ಒಂದು ದಿನವೂ ವಿಮಾನದ ಸೇವೆಯನ್ನು ರದ್ದು ಮಾಡಿಲ್ಲ ಎಂದು ಈ ಕಂಪನಿಗಳು ಮಾಧ್ಯಮಕ್ಕೆ ತಿಳಿಸಿವೆ.

    ಜನವರಿ 22ರ ಹಿಂದಿನ ಬೇಡಿಕೆಗೆ ಹೋಲಿಸಿದರೆ ಅಯೋಧ್ಯೆಗೆ ಬುಕ್ಕಿಂಗ್‌ ಮಾಡುವವರ ಪ್ರಮಾಣ 100% ಏರಿಕೆಯಾಗಿದೆ. ಏಕಮುಖ ಸಂಚಾರಕ್ಕೆ 7,000 ರಿಂದ 11,000 ರೂಪಾಯಿಗಳ ನಡುವೆ ದರವಿದ್ದರೂ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ ಎಂದು ಉದ್ಯಮದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನವನ್ನೂ ಗೆಲ್ಲಲ್ಲ: ಖರ್ಗೆ ಭವಿಷ್ಯ

    ತೀರ್ಥಯಾತ್ರೆಗಳು ಮತ್ತು ಧಾರ್ಮಿಕ ಪ್ರವಾಸಗಳಲ್ಲಿ ಆಸಕ್ತಿ ಹೊಂದಿರುವ ಪ್ರಯಾಣಿಕರಿಂದ ಉತ್ತಮ ಬೇಡಿಕೆ ವ್ಯಕ್ತವಾಗುತ್ತಿದೆ. ಇದು ಸ್ಥಿರವಾದ ಬೆಳವಣಿಗೆಯನ್ನು ಸೂಚಿಸುತ್ತದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ತಿಳಿಸಿದ್ದಾರೆ. ಜನವರಿ 17 ರಿಂದ ಏರ್‌ ಇಂಡಿಯಾ ಸೇವೆ ಆರಂಭವಾಗಿದ್ದು ಇಲ್ಲಿಯವರೆಗೆ ಕಡಿಮೆ ಪ್ರಯಾಣಿಕರ ಕೊರತೆಯನ್ನು ಅನುಭವಿಸಿಲ್ಲ.

    ನೇರ ವಿಮಾನಗಳ ಜೊತೆಗೆ ಗ್ರಾಹಕರು ಲಕ್ನೋದವರೆಗೆ ವಿಮಾನದಲ್ಲಿ ತೆರಳಿ ನಂತರ ಅಯೋಧ್ಯೆಗೆ ರಸ್ತೆಯ ಮೂಲಕ ತೆರಳುತ್ತಿದ್ದಾರೆ. ಗಮನಿಸಲೇಬೇಕಾದ ಸಂಗತಿಯೆನೆಂದರೆ ಈ ಬೇಡಿಕೆ ಹಿರಿಯರ ವಿಭಾಗಕ್ಕೆ ಮಾತ್ರ ಸೀಮಿತವಾಗಿಲ್ಲ. ಯುವ ಜನತೆಯೂ ಅಯೋಧ್ಯೆ ವಿಮಾನ ಹತ್ತುತ್ತಿದ್ದಾರೆಂದು ಥಾಮಸ್‌ ಕುಕ್‌ ಭಾರತದ ಮುಖ್ಯಸ್ಥ ರಾಜೀವ್ ಕಾಳೆ ಹೇಳಿದ್ದಾರೆ. ಇದನ್ನೂ ಓದಿ: ಶಾಲೆಯಲ್ಲಿ ಧರ್ಮ ಅವಹೇಳನ ಆರೋಪ- ಮೀಡಿಯಾಗೆ ಹೇಳಿಕೆ ಕೊಟ್ಟ ಶಿಕ್ಷಕಿ ವಜಾ, ವಿದೇಶದಿಂದ ಬೆದರಿಕೆ

    ಬೆಂಗಳೂರು ಮಾತ್ರವಲ್ಲದೇ ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ ಮತ್ತು ಬೆಳಗಾವಿಯಂತಹ ಇತರ ನಗರಗಳಲ್ಲಿ ಸಹ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಮನ ಜೀವನಕ್ಕೆ ಸಂಬಂಧಿಸಿದ ಸ್ಥಳಗಳಾದ ಹಂಪಿ, ರಾಮೇಶ್ವರಂ ಮತ್ತು ಮಧುರೈ ಸೇರಿದಂತೆ ಹಲವು ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಈಗ ಹೆಚ್ಚಾಗುತ್ತಿದೆ.