ನವದೆಹಲಿ: ಮೈಸೂರು ದಸರಾ (Mysuru Dasara) ಉತ್ಸವದಲ್ಲಿ ವೈಮಾನಿಕ ಪ್ರದರ್ಶನ (Air Show) ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ (Defence Corridor) ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.
ಉತ್ತರಪ್ರದೇಶ ಹಾಗೂ ತಮಿಳುನಾಡು ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ, ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿ ಸಲ್ಲಿಸಿರುವ ಬಗ್ಗೆ ವಿವರಿಸಿದರು. ಇದನ್ನೂ ಓದಿ:ಕಾಡಾನೆ ದಾಳಿಗೆ ಮಾಜಿ ಶಾಸಕ ಬಲಿ
ರಾಹುಲ್ ಗಾಂಧಿಯನ್ನು ಭೇಟಿಯಾಗುವ ಕಾರ್ಯಕ್ರಮವಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ರಾಹುಲ್ ಗಾಂಧಿಯವರನ್ನು ಸಾಧ್ಯವಾದರೆ ಭೇಟಿಯಾಗುವುದಾಗಿ ತಿಳಿಸಿದರು. ಕಾಂಗ್ರೆಸ್ನ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಾಳೆ ನವದೆಹಲಿಗೆ ಆಗಮಿಸಲಿದ್ದು, ಅವರೊಂದಿಗೆ ವಿಧಾನಪರಿಷತ್ ಸದಸ್ಯರು ಹಾಗೂ ನಿಗಮಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು. ಅಂತೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭೇಟಿಗೆ ಸಮಯವನ್ನು ಕೋರಲಾಗಿದ್ದು, ನಾಳೆ ಭೇಟಿಯಾಗುವ ಸಾಧ್ಯತೆಯಿದೆ ಎಂದರು. ಇದನ್ನೂ ಓದಿ: ಉತ್ತರ ಭಾರತದ ಹಲವು ರಾಜ್ಯಗಳಿಗೆ ಪ್ರವಾಹ ಎಚ್ಚರಿಕೆ – ಹಿಮಾಚಲ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್
-6 ನೀರಾವರಿ ಯೋಜನೆಗಳಿಗೆ 11.122 ಕೋಟಿ ಅನುದಾನಕ್ಕಾಗಿ ಮನವಿ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಈ ಬಾರಿ 11 ದಿನಗಳ ಕಾಲ ನಡೆಯಲಿದ್ದು, ಇದೇ ವೇಳೆ ಏರ್ ಶೋ (Air Show) ನಡೆಸಲು ಕೇಂದ್ರ ಸರ್ಕಾರ (Central Govt) ಒಪ್ಪಿಗೆ ನೀಡಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದ ನಿಯೋಗ ರಾಜನಾಥ್ ಸಿಂಗ್ (Rajanath Singh) ಅವರನ್ನು ಭೇಟಿಯಾಗಿ ಏರ್ಶೋಗೆ ಮನವಿ ಸಲ್ಲಿಸಿತ್ತು. ರಾಜ್ಯ ಸರ್ಕಾರದ ಕೋರಿಕೆ ಬೆನ್ನಲ್ಲೇ ರಾಜನಾಥ್ ಸಿಂಗ್ ಮನವಿಗೆ ಒಪ್ಪಿಗೆ ಸೂಚಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಇದನ್ನೂ ಓದಿ: ಹೊಂಬಾಳೆ ಫಿಲಂಸ್ ಪ್ರಸ್ತುತಿ: ಮಹಾವತಾರ್ ನರಸಿಂಹ ಟ್ರೈಲರ್ ರಿಲೀಸ್
ಭೇಟಿ ವೇಳೆ ಬೆಂಗಳೂರಿನ (Bengaluru) ಟನಲ್ ಯೋಜನೆ, ಲಿಂಕ್ ರೋಡ್ ಹಾಗೂ ಏರ್ಪೋರ್ಟ್ ರಸ್ತೆಯಲ್ಲಿ ಡಬಲ್ ಡೆಕ್ಕರ್ ರಸ್ತೆಗೆ ರಕ್ಷಣಾ ಇಲಾಖೆಗೆ ಜಾಗ ಕೇಳಲಾಗಿತ್ತು. ಇದಕ್ಕೂ ಸರ್ಕಾರ ಸ್ಪಂದಿಸಿದೆ ಹಾಗೂ ನಾಳೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಭೇಟಿಗೂ ಅವಕಾಶ ಕೇಳಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಇದೇ ವೇಳೆ ಡಿಕೆಶಿ ಮಾತನಾಡಿ, ರಾಜ್ಯದ ಆರು ನೀರಾವರಿ ಯೋಜನೆಗಳಿಗೆ 11,122.76 ಕೋಟಿ ರೂ. ಅನುದಾನಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಕುಡಿಯುವ ನೀರಿನ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಶೇ.25ರಷ್ಟು ಆರ್ಥಿಕ ಸಹಾಯ, ಕಳಸಾ ಬಂಡೂರಿ ಯೋಜನೆ, ಕೃಷ್ಣಾ ನದಿ ನೀರಿನ ವಿಚಾರವಾಗಿ ಕೇಂದ್ರ ಜಲಶಕ್ತಿ ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಿ, ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ @siddaramaiah ಅವರು ದೆಹಲಿಯಲ್ಲಿ ರಕ್ಷಣಾ ಸಚಿವರಾದ @rajnathsingh ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಮಾಲೋಚನೆ ನಡೆಸಿದರು.… pic.twitter.com/Ci3wGvOhp8
ಬೆಂಗಳೂರಿನ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ಜಂಕ್ಷನ್ವರೆಗೆ ಸುರಂಗ ಮಾರ್ಗ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಛೇಡಿಸಿದ್ದಾರೆ. ಟನಲ್ ನಿರ್ಮಾಣಕ್ಕಾಗಿ ಕುಮಾರಸ್ವಾಮಿ ನೆರವು ಕೇಳಿರುವ ಡಿಕೆ ಶಿವಕುಮಾರ್, ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ ಎಂದು ಟೀಕಿಸಿದ್ದಾರೆ. ಟನಲ್ ನಿರ್ಮಾಣದಲ್ಲಿ ಹೆಚ್ಡಿಕೆ ಸಲಹೆ ಪಡೆಯಲಾಗುವುದು. ಅವರು ಗಡ್ಕರಿ ಭೇಟಿಯಾಗಿದ್ದು ಗೊತ್ತು. ಕೇಂದ್ರದಿಂದ ದುಡ್ಡು ಕೊಡಿಸಲಿ ಸಾಕು. ಕ್ರೇಡಿಟ್ ಯಾರು ಬೇಕಾದರೂ ತೆಗೆದುಕೊಳ್ಳಲಿ ಎಂದಿದ್ದಾರೆ.ಇದನ್ನೂ ಓದಿ: ಕಾಡಾನೆ ದಾಳಿಗೆ ಮಾಜಿ ಶಾಸಕ ಬಲಿ
ಬೆಂಗಳೂರು: ಏರೋ ಇಂಡಿಯಾ-2025 ರಲ್ಲಿ ಭಾರತೀಯ ಸೇನಾ ವಿಂಗ್ ಕಮಾಂಡರ್ಗಳು, ಪೈಲೆಟ್ಗಳ ಬಳಕೆಗಾಗಿಯೇ ಕನ್ನಡಿಗರು ತಯಾರು ಮಾಡಿರುವ ಅಡ್ವಾನ್ಸ್ಡ್ ಹೆಲ್ಮೆಟ್ ಗಮನ ಸೆಳೆಯುತ್ತಿದೆ.
ವರ್ಚಸ್ ಏರೋ ಸ್ಪೇಸ್ ಸಂಸ್ಥೆ ಸುಮಾರು 8 ರಿಂದ 10 ಕೋಟಿ ವೆಚ್ಚದ, ಒಂದು ಕೆ.ಜಿ. ತೂಕದ ಅಡ್ವಾನ್ಸ್ಡ್ ಹೆಲ್ಮೆಟ್ ಇದು.
ಸೆನ್ಸಾರ್ ಮೂಲಕ ಫೈಟರ್ ಜೆಟ್ ಮೇಲಿರುವ ಪೈಲೆಟ್ಗೆ ಸುತ್ತಲಿನ ಪ್ರದೇಶದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುತ್ತದೆ. ಜೊತೆಗೆ, ಕಣ್ಣಂಚಿನಲ್ಲೇ ಎಲ್ಲವು ತಿಳಿಯುವಂತೆ ಅಭಿವೃದ್ಧಿ ಪಡಿಸಲಾಗಿದೆ.
ಸದ್ಯ ಭಾರತದ ವಾಯುಪಡೆಯಲ್ಲಿರುವ ತೇಜಸ್ ವಿಮಾನದ ಅಪ್ಗ್ರೇಡ್ ವರ್ಷನ್ಗೆ ಮತ್ತು ಬಹುನೀರಿಕ್ಷಿತ ಭಾರತ ವಾಯಸೇನೆಯ ಮುಂಬರುವ ಫೈಟರ್ ಜೆಟ್ ಅಮ್ಕಾಗೆ ಬಳಕೆ ಮಾಡಲು ತಯಾರಿ ಮಾಡಲಾಗಿದೆ.
ಬೆಂಗಳೂರು: ಯಲಂಹಕದಲ್ಲಿ ನಡೆಯುತ್ತಿರುವ ‘ಏರೋ ಇಂಡಿಯಾ 2025’ (Aero India 2025) ಆಕರ್ಷಣೀಯವಾಗಿದೆ. ಇಂದಿನಿಂದ ಸಾರ್ವಜನಿಕರಿಗೆ ಏರ್ ಶೋ ವೀಕ್ಷಣೆಗೆ ಅವಕಾಶ ಸಿಗಲಿದೆ.0
ಇಂದು, ನಾಳೆ ಲಕ್ಷಾಂತರ ಜನ ಭಾಗಿಯಾಗುವ ಸಾಧ್ಯತೆ ಇದೆ. ಮೊದಲ ಮೂರು ದಿನ ಕೇವಲ ಅಡ್ವಾ ಪ್ರದೇಶಕ್ಕೆ ಮಾತ್ರ ಸಾರ್ವಜನಿಕರಿಗೆ ಅವಕಾಶ ನೀಡಲಾಗಿತ್ತು. ಇಂದಿನಿಂದ ಎರಡು ದಿನ ಸಂಪೂರ್ಣ ಏರೋ ಇಂಡಿಯಾ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಲಿದೆ.
ಒಂದು ಸಾವಿರ, ಎರಡೂವರೆ ಸಾವಿರಕ್ಕೆ ಟಿಕೆಟ್ ಪಡೆದವರು ಸಂಪೂರ್ಣ ಏರೋ ಇಂಡಿಯಾ ವೀಕ್ಷಣೆಗೆ ಅವಕಾಶ ಇರಲಿದೆ. ಇಂದು ಕೂಡ ಬೆಳಗ್ಗೆ 9:30 ರಿಂದ 12 ಮತ್ತು ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆ ವರೆಗೆ ಏರ್ ಶೋ ಎರಡು ಪ್ರದರ್ಶನ ಇರಲಿದೆ.
ಸೂರ್ಯಕಿರಣ, ಆಮೆರಿಕದ ಎಫ್ 35, ರಷ್ಯಾದ ಎಸ್ಯು 57, ತೇಜಸ್ ಎಲ್ಸಿಎ, ಎಲ್ಯುಹೆಚ್ ಹೆಲಿಕಾಪ್ಟರ್ ಪ್ರದರ್ಶನ ಕಣ್ಮನ ಸೆಳೆಯಲಿದೆ. ಎರಡೂವರೆ ಸಾವಿರ, 5 ಸಾವಿರ ಟಿಕೆಟ್ ಪಡೆದವರಿಗೆ ಕಾರ್ಯಕ್ರಮ ಪ್ರದೇಶದ ಹೊರಭಾಗ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
1 ಸಾವಿರ ರೂ. ಟಿಕೆಟ್ ಪಡೆದವರಿಗೆ ಜಕ್ಕೂರು, ಜಿಕೆವಿಕೆಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಇರಲಿದೆ. ಈ ಭಾಗದಲ್ಲಿ ಸವಾರರಿಗೆ ಕಳೆದು ಮೂರು ದಿನಕ್ಕಿಂತಲೂ ಹೆಚ್ಚು ವಾಹನ ದಟ್ಟನೆ ಎಫೆಕ್ಟ್ ಇಂದು, ನಾಳೆ ತಟ್ಟುವ ಸಾಧ್ಯತೆ ಇದೆ.
ತುಮಕೂರಿನ ಹೆಎಎಲ್ ಏಷ್ಯಾದ ಅತಿ ದೊಡ್ಡ ವಿಮಾನ ತಯಾರಿಕಾ ಕಾರ್ಖಾನೆಯತ್ತ ವಿದೇಶಿ ರಕ್ಷಣಾ ಅಧಿಕಾರಿಗಳ ಚಿತ್ತ ನೆಟ್ಟಿದೆ. ಮೇಕ್ ಇನ್ ಇಂಡಿಯಾ ಅಡಿಯಲ್ಲಿ ಉತ್ಪಾದನೆಗೊಳ್ಳುತ್ತಿರುವ ಉತ್ಪನ್ನಗಳ ಬಗ್ಗೆ ಜಗತ್ತಿನ ಮಾರುಕಟ್ಟೆಗೆ ಭಾರತೀಯ ಕಂಪನಿಗಳು ಪರಿಚಯಿಸಲಿವೆ.
ಮಲ್ಟಿರೋಲ್ ಫೈಟರ್ ಏರ್ ಕ್ರಾಫ್ಟ್ ಆಕರ್ಷಣೆ
ಎರಡನೇ ದಿನದ ಏರ್ ಶೋನಲ್ಲಿ ಸ್ವೀಡನ್ ದೇಶದ ಮಲ್ಟಿರೋಲ್ ಫೈಟರ್ ಏರ್ ಕ್ರಾಫ್ಟ್ ಎಲ್ಲರನ್ನೂ ಆಕರ್ಷಿಸುತ್ತಿದೆ. ಸಾಬ್ ಕಂಪನಿಯಿAದ ನಿರ್ಮಿತವಾದ ಈ ಫೈಟರ್ ಏರ್ ಕ್ರಾಫ್ಟನ್ನು ಭಾರತಕ್ಕೆ ಪರಿಚಯಿಸುವ ಕುರಿತು ಉಭಯ ರಾಷ್ಟ್ರಗಳ ಜೊತೆ ಮಾತುಕತೆ ಕೂಡ ನಡೆಯುತ್ತಿದೆ.
ಬ್ರೆಜಿಲ್ ಯುದ್ಧ ಕಾರ್ಗೋ ವಿಮಾನ
ಆಧುನಿಕ ಯುದ್ಧಗಳ ಸಂಧರ್ಭದಲ್ಲಿ ಫೈಟರ್ ಜೆಟ್ಗಳಷ್ಟೇ ಪ್ರಾಮುಖ್ಯತೆ ಕಾರ್ಗೋ ವಿಮಾನಗಳಿಗೂ ಇದೆ. ಫೈಟರ್ ಜೆಟ್ಗಳು ಶತ್ರುವಿನ ಮೇಲೆ ಮುಗಿಬೀಳುವ ಸಾಮಾರ್ಥ್ಯ ಹೊಂದಿವೆ. ಕಾರ್ಗೋ ವಿಮಾನಗಳು ಫೈಟರ್ ಜೆಟ್ಗಳಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತವೆ. ಅದೇ ರೀತಿ ಈ ಬಾರಿ ಏರ್ ಶೋನಲ್ಲಿ ಸಿ-390 ಮಿಲಿನಿಯಂ ಹೆಸರಿನ ಭಾರೀ ಗಾತ್ರದ ಬ್ರೆಜಿಲ್ ಮೂಲದ ಕಾರ್ಗೋ ವಿಮಾನ ತನ್ನತ್ತ ಸೆಳೆಯುತ್ತಿದೆ. ವಾಯುಸೇನೆಯಲ್ಲಿ 6 ರೀತಿಯ ಕಾರ್ಯವನ್ನ ಮಾಡಿ, ತನ್ನ ಸೇನೆಗೆ ಬಲ ತುಂಬುವ ಈ ಕಾರ್ಗೋ ಸದ್ಯ ಬ್ರೆಜಿಲ್, ಪೋರ್ಚುಗಲ್, ಹಂಗೇರಿ ದೇಶಗಳಲ್ಲಿ ಮಾತ್ರ ಕಾರ್ಯ ನಿರ್ವಹಿಸುತ್ತಿದೆ. ತಮ್ಮ ಸೇನೆಗೆ ಈ ಬಾಹುಬಲಿಯನ್ನ ಸೇರ್ಪಡೆ ಮಾಡಲು ಅನೇಕ ದೇಶಗಳು ಕೂಡ ಸಾಲಿನಲ್ಲಿ ಕಾದು ನಿಂತಿವೆ.
ಏರ್ ಶೋನ ಎರಡನೇ ದಿನವನ್ನ ನೋಡಲು ರಕ್ಷಣಾ ಇಲಾಖೆ ಅಧಿಕಾರಿಗಳ ಕುಟುಂಬಗಳು, ಗಣ್ಯರು ಯಲಹಂಕದ ವಾಯುನೆಲೆಗೆ ಆಗಮಿಸಿದ್ದಾರೆ.
ಬೆಂಗಳೂರು: ದೇಶದ 15ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ʻಏರೋ ಇಂಡಿಯಾ 2025ʼ (Aero India 2025) ಇಂದಿನಿಂದ ಆರಂಭಗೊಳ್ಳುತ್ತಿದೆ. ಈ ಹಿನ್ನೆಲೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Bengaluru International Airport) ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಇಂದು (ಸೋಮವಾರ) ಬೆಳಗ್ಗೆ 9 ರಿಂದ ಮಧ್ಯಾಹ್ನ 12ರ ವರೆಗೆ, ಮಧ್ಯಾಹ್ನ 2 ರಿಂದ ಸಂಜೆ 4ರ ವರೆಗೆ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ. ಫೆಬ್ರವರಿ 11 ಮತ್ತು 12 ರಂದು ಮಧ್ಯಾಹ್ನ 12 ರಿಂದ ಮಧ್ಯಾಹ್ನ 3ರ ವರೆಗೆ, ಫೆಬ್ರವರಿ 13 ಮತ್ತು 14ರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12ರ ವರೆಗೆ, ಮಧ್ಯಾಹ್ನ 2 ರಿಂದ ಸಂಜೆ 5ರ ವರೆಗೆ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೂಲಗಳು ತಿಳಿಸಿವೆ. ಏರ್ಶೋನಲ್ಲಿ ವೈಮಾನಿಕ ಪ್ರದರ್ಶನ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Aero India 2025 | ವೈಮಾನಿಕ ಪ್ರದರ್ಶನಕ್ಕಿಂದು ಚಾಲನೆ – ರಷ್ಯಾ, ಅಮೆರಿಕ ಸೇರಿ 90 ದೇಶಗಳು ಭಾಗಿ
ಯಲಹಂಕ ವಾಯುನೆಲೆಯಲ್ಲಿ ಇಂದು ಬೆಳಗ್ಗೆ 9:30ರ ವೇಳೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ದೇಶ – ವಿದೇಶಗಳ ಪ್ರಮುಖ ನಾಯಕರು, ರಕ್ಷಣಾ ವಿಭಾಗದ ಅಧಿಕಾರಿಗಳು ಏರ್ ಶೋ ನಲ್ಲಿ ಭಾಗಿಯಾಗಲಿದ್ದಾರೆ. ಫೆಬ್ರವರಿ 14ರ ವರೆಗೆ ನಡೆಯಲಿರುವ ಏರ್ ಶೋನಲ್ಲಿ ಅಮೆರಿಕ, ರಷ್ಯನ್ ಸೇರಿದಂತೆ ವಿವಿಧ ದೇಶಗಳ ಯುದ್ಧ ವಿಮಾನಗಳು ಭಾಗಿಯಾಗಲಿವೆ. ಇದನ್ನೂ ಓದಿ: Hassan | ಮದುವೆಯಾಗಲು ಪ್ರಿಯತಮೆ ನಿರಾಕರಣೆ – ವಿಷ ಸೇವಿಸಿ ಯುವಕ ಆತ್ಮಹತ್ಯೆ
ಈ ಬಾರಿಯ ವಿಶೇಷತೆ ಏನು?
ಈ ಬಾರಿ 42,438 ವಿಸ್ತೀರ್ಣದಲ್ಲಿ ಏರ್ ಶೋ ನಡೆಯುತ್ತಿದ್ದು, ವಿವಿಧ 30 ದೇಶಗಳ ರಕ್ಷಣಾ ಸಚಿವರು, ವಿವಿಧ ದೇಶಗಳ 43 ಮಂದಿ ಸೇನಾ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಒಟ್ಟಾರೆ 90 ದೇಶಗಳು ಏರೋ ಇಂಡಿಯಾದವನ್ನು ಪ್ರತಿನಿಧಿಸಲಿವೆ. 70 ಯುದ್ಧ ವಿಮಾನಗಳು, ಸರಕು, ತರಬೇತಿ ವಿಮಾನಗಳು, 30 ವಿಮಾನಗಳು, ಹೆಲಿಕಾಫ್ಟರ್ ಹೃದಯ ಬಡಿತ ಹೆಚ್ಚಿಸುವ ಕಸರತ್ತು ನಡೆಸಲಿವೆ. ರಷ್ಯನ್ & ಅಮೆರಿಕನ್ ಯುದ್ಧ ವಿಮಾನಗಳು ಈ ಪ್ರದರ್ಶನದ ಆಕರ್ಷಣೆಯಾಗಿವೆ. ಇದನ್ನೂ ಓದಿ: IND vs ENG, 2nd ODI: ರೋಹಿತ್ ಅಬ್ಬರದ ಶತಕ, ಜಡೇಜಾ ಸ್ಪಿನ್ ಜಾದು – ಆಂಗ್ಲರ ವಿರುದ್ಧ ಭಾರತಕ್ಕೆ 4 ವಿಕೆಟ್ಗಳ ಜಯ
ಅಲ್ಲದೇ ವಿವಿಧ ದೇಶಗಳ 900ಕ್ಕೂ ಹೆಚ್ಚು ಉತ್ಪಾದಕರು ಇದರಲ್ಲಿ ಭಾಗಿಯಾಗಲಿದ್ದಾರೆ. ಎಐ, ಡ್ರೋನ್, ಸೈಬರ್ ಸೆಕ್ಯೂರಿಟಿ, ಗ್ಲೋಬರ್ ಏರೋಸ್ಪೇಸ್, ನೂತನ ತಂತ್ರಜ್ಞಾನಗಳನ್ನು ಪರಿಚಯಿಸಲಿದ್ದಾರೆ. ಆತ್ಮನಿರ್ಭರ ಭಾರತ ಉತ್ಪನ್ನಗಳು ಈ ಬಾರಿಯ ಶೋನಲ್ಲಿ ಇರಲಿವೆ. 100 ವಿವಿಧ ಕಂಪನಿಗಳ ಸಿಇಒಗಳು, 50 ವಿದೇಶಿ ಓಎಂಎಸ್ ಭಾಗಿಯಾಗಲಿದ್ದಾರೆ. ಹೂಡಿಕೆ, ಸಂಶೋಧನೆ, ಜಾಯಿಂಟ್ ವೆಂಚರ್, ರಕ್ಷಣಾ ವಲಯದ ಬಗ್ಗೆ ಚರ್ಚೆ ನಡೆಯಲಿದೆ. 10 ವಿವಿಧ ವಿಷಯಗಳನ್ನ ಒಳಗೊಂಡ ಸೆಮಿನಾರ್ಗಳು ಇರಲಿದೆ. 70ಕ್ಕೂ ಹೆಚ್ಚು ಫ್ಲೈಯಿಂಗ್ ಡಿಸ್ಪ್ಲೇಗಳು ಏರ್ ಶೋನಲ್ಲಿ ಇರಲಿವೆ. 7 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ವೀಕ್ಷಕರು ಆಗಮಿಸುವ ನಿರೀಕ್ಷೆ ಹೊಂದಲಾಗಿದೆ.
– 70 ಯುದ್ಧ ವಿಮಾನ, 100ಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಭಾಗಿ
– ಏರ್ಪೋರ್ಟ್ ಸುತ್ತಮುತ್ತ ಹಲವು ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು
ಬೆಂಗಳೂರು: ನೋಡುಗರ ಹೃದಯ ಬಡಿತ ಹೆಚ್ಚಿಸುವ ವೈಮಾನಿಕ ಕಸರತ್ತು, ವೈಮಾನಿಕ ಹಾಗೂ ಬಾಹ್ಯಾಕಾಶ ಉದ್ದಿಮೆ, ಉದ್ಯಮಿಗಳ ಮುಖಾಮುಖಿಗೆ ವೇದಿಕೆಯಾಗಲಿರುವ ದೇಶದ 15ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ʻಏರೋ ಇಂಡಿಯಾ 2025ʼ (Aero India 2025) ಸೋಮವಾರ ಶುರುವಾಗಲಿದೆ.
ಯಲಹಂಕ ವಾಯುನೆಲೆಯಲ್ಲಿ (Yelahanka Air Base) ಇಂದು ಬೆಳಗ್ಗೆ 9:30ರ ವೇಳೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ದೇಶ – ವಿದೇಶಗಳ ಪ್ರಮುಖ ನಾಯಕರು, ರಕ್ಷಣಾ ವಿಭಾಗದ ಅಧಿಕಾರಿಗಳು ಏರ್ ಶೋ ನಲ್ಲಿ ಭಾಗಿಯಾಗಲಿದ್ದಾರೆ. ಇಂದಿನಿಂದ ಫೆಬ್ರವರಿ 14ರ ವರೆಗೆ ನಡೆಯಲಿರುವ ಏರ್ ಶೋನಲ್ಲಿ ಅಮೆರಿಕ, ರಷ್ಯನ್ ಸೇರಿದಂತೆ ವಿವಿಧ ದೇಶಗಳ ಯುದ್ಧ ವಿಮಾನಗಳು ಭಾಗಿಯಾಗಲಿವೆ. ಇದನ್ನೂ ಓದಿ: IND vs ENG, 2nd ODI: ರೋಹಿತ್ ಅಬ್ಬರದ ಶತಕ, ಜಡೇಜಾ ಸ್ಪಿನ್ ಜಾದು – ಆಂಗ್ಲರ ವಿರುದ್ಧ ಭಾರತಕ್ಕೆ 4 ವಿಕೆಟ್ಗಳ ಜಯ
ಈ ಬಾರಿ ʻರನ್ ವೇ ಟು ಬಿಲಿಯನ್ ಆಪರ್ಚುನಿಟಿ ಟ್ಯಾಗ್ ಲೈನ್ʼನಲ್ಲಿ ಏರ್ ಶೋ ಜರುಗಲಿದೆ. 100ಕ್ಕೂ ಹೆಚ್ಚು ದೇಶಗಳ, 900ಕ್ಕೂ ಹೆಚ್ಚು ಉತ್ಪಾದಕರು ಭಾಗಿಯಾಗುತ್ತಿದ್ದು, ಎಐ, ಡ್ರೋನ್, ಗ್ಲೋಬಲ್ ಏರೋ ಸ್ಪೇಸ್, ಸೇರಿದಂತೆ ನೂತನ ತಂತ್ರಜ್ಞಾನದ ವಿವಿಧ ವಸ್ತುಪ್ರದರ್ಶನಗಳನ್ನ ಕಣ್ತುಂಬಿಕೊಳ್ಳುವ ಅವಕಾಶ ಇರಲಿದೆ. ಕೊನೆಯ ಎರಡು ದಿನ ಸಾರ್ವಜನಿಕರಿಗೆ ಮುಕ್ತ ಅವಕಾಶ ಇರಲಿದೆ.
ಈ ಬಾರಿಯ ವಿಶೇಷತೆ ಏನು?
ಈ ಬಾರಿ 42,438 ವಿಸ್ತೀರ್ಣದಲ್ಲಿ ಏರ್ ಶೋ ನಡೆಯುತ್ತಿದ್ದು, ವಿವಿಧ 30 ದೇಶಗಳ ರಕ್ಷಣಾ ಸಚಿವರು, ವಿವಿಧ ದೇಶಗಳ 43 ಮಂದಿ ಸೇನಾ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಒಟ್ಟಾರೆ 90 ದೇಶಗಳು ಏರೋ ಇಂಡಿಯಾದವನ್ನು ಪ್ರತಿನಿಧಿಸಲಿವೆ. 70 ಯುದ್ಧ ವಿಮಾನಗಳು, ಸರಕು, ತರಬೇತಿ ವಿಮಾನಗಳು, 30 ವಿಮಾನಗಳು, ಹೆಲಿಕಾಫ್ಟರ್ ಹೃದಯ ಬಡಿತ ಹೆಚ್ಚಿಸುವ ಕಸರತ್ತು ನಡೆಸಲಿವೆ. ರಷ್ಯನ್ & ಅಮೆರಿಕನ್ ಯುದ್ಧ ವಿಮಾನಗಳು ಈ ಪ್ರದರ್ಶನದ ಆಕರ್ಷಣೆಯಾಗಿವೆ. ಇದನ್ನೂ ಓದಿ: ಫೆ.11ರಂದು ‘ಇನ್ವೆಸ್ಟ್ ಕರ್ನಾಟಕ 2025’ಕ್ಕೆ ಚಾಲನೆ – ಹೂಡಿಕೆ ಉತ್ಸವಕ್ಕೆ ಮುನ್ನುಡಿ: ಎಂ.ಬಿ.ಪಾಟೀಲ್
ಅಲ್ಲದೇ ವಿವಿಧ ದೇಶಗಳ 900ಕ್ಕೂ ಹೆಚ್ಚು ಉತ್ಪಾದಕರು ಇದರಲ್ಲಿ ಭಾಗಿಯಾಗಲಿದ್ದಾರೆ. ಎಐ, ಡ್ರೋನ್, ಸೈಬರ್ ಸೆಕ್ಯೂರಿಟಿ, ಗ್ಲೋಬರ್ ಏರೋಸ್ಪೇಸ್, ನೂತನ ತಂತ್ರಜ್ಞಾನಗಳನ್ನು ಪರಿಚಯಿಸಲಿದ್ದಾರೆ. ಆತ್ಮನಿರ್ಭರ ಭಾರತ ಉತ್ಪನ್ನಗಳು ಈ ಬಾರಿಯ ಶೋನಲ್ಲಿ ಇರಲಿವೆ. 100 ವಿವಿಧ ಕಂಪನಿಗಳ ಸಿಇಒಗಳು, 50 ವಿದೇಶಿ ಓಎಂಎಸ್ ಭಾಗಿಯಾಗಲಿದ್ದಾರೆ. ಹೂಡಿಕೆ, ಸಂಶೋಧನೆ, ಜಾಯಿಂಟ್ ವೆಂಚರ್, ರಕ್ಷಣಾ ವಲಯದ ಬಗ್ಗೆ ಚರ್ಚೆ ನಡೆಯಲಿದೆ. 10 ವಿವಿಧ ವಿಷಯಗಳನ್ನ ಒಳಗೊಂಡ ಸೆಮಿನಾರ್ಗಳು ಇರಲಿದೆ. 70ಕ್ಕೂ ಹೆಚ್ಚು ಫ್ಲೈಯಿಂಗ್ ಡಿಸ್ಪ್ಲೇಗಳು ಏರ್ ಶೋನಲ್ಲಿ ಇರಲಿವೆ. 7 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ವೀಕ್ಷಕರು ಆಗಮಿಸುವ ನಿರೀಕ್ಷೆ ಹೊಂದಲಾಗಿದೆ.
ಏರ್ಪೋರ್ಟ್ ರಸ್ತೆಯ ಸವಾರರಿಗೆ ಟ್ರಾಫಿಕ್ ಬಿಸಿ:
ಇನ್ನೂ ಇಂದಿನಿಂದ ಏರ್ ಶೋ ಆರಂಭ ಹಿನ್ನೆಲೆ 5 ದಿನಗಳ ಕಾಲ ಏರ್ಪೋರ್ಟ್ ರಸ್ತೆಯ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆ ಇದೆ. ವಿದೇಶಿ ಗಣ್ಯರು ಆಗಮಿಸುವ ಕಾರಣ ಎಲಿವೇಟೆಡ್ ರಸ್ತೆಯ ಓಡಾಟವನ್ನ ಕೆಲ ಕಾಲ ಬಂದ್ ಮಾಡಲಾಗುತ್ತೆ. ಸರ್ವೀಸ್ ರಸ್ತೆಯಲ್ಲೇ ಸಂಚಾರ ಮಾಡಬೇಕಿರೋ ಕಾರಣ ಆ ಭಾಗದ ವಾಹನ ಸವಾರರು 5 ದಿನಗಳ ಕಾಲ ಇದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಇನ್ನೂ, ಏರ್ ಪೋರ್ಟ್ ರಸ್ತೆ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಿ ಸಂಚಾರಿ ಪೊಲೀಸರು ಆದೇಶಿಸಿದ್ದಾರೆ. ಇದನ್ನೂ ಓದಿ: Hassan | ಮದುವೆಯಾಗಲು ಪ್ರಿಯತಮೆ ನಿರಾಕರಣೆ – ವಿಷ ಸೇವಿಸಿ ಯುವಕ ಆತ್ಮಹತ್ಯೆ
ಯಾವೆಲ್ಲ ವಾಹನಗಳಿಗೆ ಸಂಚಾರ ನಿಷೇಧ
* ಲಾರಿ, ಟ್ರಕ್, ಬಸ್, ಸರಕು ಸಾಗಾಣಿಕೆ ವಾಹನಗಳಿಗೆ ಸಂಚಾರ ನಿರ್ಬಂಧ
* ಮೇಖ್ರಿ ವೃತ್ತದಿಂದ-ಎಂವಿಐಟಿ ಕ್ರಾಸ್ವರೆಗೆ ಸಂಚಾರ ನಿಷೇಧ
* ಗೊರಗುಂಟೆಪಾಳ್ಯದಿಂದ ಹೆಬ್ಬಾಳ ಮಾರ್ಗವಾಗಿ ಹೆಣ್ಣೂರು ಕ್ರಾಸ್ವರೆಗೆ ನಿಷೇಧ
* ನಾಗವಾರ ಜಂಕ್ಷನ್ನಿಂದ ರೇವಾ ಕಾಲೇಜ್ ಜಂಕ್ಷನ್ವರೆಗೆ ಸಂಚಾರ ನಿಷೇಧ
* ಹೆಸರಘಟ್ಟ, ಚಿಕ್ಕಬಾಣಾವರ ಕಡೆಯಿಂದ ಬೆಂಗಳೂರು ಕಡೆಗೆ ಸಂಚಾರ ನಿಷೇಧ
* ಜಿಕೆವಿಕೆ ಕ್ಯಾಂಪಸ್ನಲ್ಲಿ ಸಾರ್ವಜನಿಕರಿಗೆ ಉಚಿತ ಪಾರ್ಕಿಂಗ್ ವ್ಯವಸ್ಥೆ
ಬೆಂಗಳೂರು: ನಾಳೆಯಿಂದ (ಫೆ.10) 15ನೇ ಆವೃತ್ತಿಯ ಏರೋ ಇಂಡಿಯಾ ಶೋ (Aero India Show) ಆರಂಭವಾಗಲಿದೆ. ಯಲಹಂಕದ (Yelahanka) ವಾಯು ನೆಲೆಯಲ್ಲಿ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಈ ಬಾರಿ ಹಲವು ದಾಖಲೆಗಳ ನೀರಿಕ್ಷೆಗಳನ್ನ ಹುಟ್ಟಿಸಿದೆ.
ರನ್ ಟು ಎ ಬಿಲಿಯನ್ ಆಪರ್ಚುನಿಟೀಸ್ ಎಂಬ ವಿಶಾಲ ಧ್ಯೇಯದೊಂದಿಗೆ 5 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಯಲಹಂಕ ವಾಯುನೆಲೆ ಸಿದ್ಧವಾಗಿದೆ. ಫೆಬ್ರವರಿ 10 ರಿಂದ 14ರವರೆಗೆ ನಡೆಯಲಿರುವ ಏರ್ ಶೋಗೆ ದೇಶ, ವಿದೇಶದ ಗಣ್ಯರು ಆಗಮಿಸಲಿದ್ದಾರೆ. ದೇಶ, ವಿದೇಶದ ವಾಯುಪಡೆಯ ವಿಮಾನಗಳು ಬಾನಂಗಳದಲ್ಲಿ ಮೋಡಿ ಮಾಡಲು ರೆಡಿಯಾಗಿವೆ. ಇದನ್ನೂ ಓದಿ: ಅಬ್ಬಬ್ಬಾ.. ಮೊದಲ ಚಿತ್ರಕ್ಕೆ ಇಷ್ಟೊಂದು ಸಂಭಾವನೆ ಪಡೆದಿದ್ದಾರಾ ಮೊನಾಲಿಸಾ?
ಕಾರ್ಯಕ್ರಮವನ್ನು ಭಾರತೀಯ ರಕ್ಷಣಾ ಇಲಾಖೆಯ ಸಚಿವ ರಾಜನಾಥ್ ಸಿಂಗ್ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದ ಮೊದಲ ಮೂರು ದಿನ ಅಂದರೆ ಫೆಬ್ರವರಿ 10, 11, 12ರವರೆಗೆ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ವ್ಯವಹಾರ ದಿನಗಳಾಗಿರುತ್ತವೆ. 13 ಮತ್ತು 14ರಂದು ಸಾರ್ವಜನಿಕ ವೀಕ್ಷಣೆಗೆ ಅವಕಾಶವನ್ನ ಕಲ್ಪಿಸಲಾಗಿದೆ. ಏರೋಸ್ಪೇಸ್ ವಲಯದಿಂದ ದೊಡ್ಡ ಶ್ರೇಣಿಯ ಮಿಲಿಟರಿ ವೇದಿಕೆಗಳ ವಾಯು ಪ್ರದರ್ಶನ, ವಸ್ತು ಪ್ರದರ್ಶನಗಳನ್ನು ಒಳಗೊಂಡಿದೆ. ಇದನ್ನೂ ಓದಿ: ಐಶ್ವರ್ಯ ಕೇಸಲ್ಲೀಗ ಪೊಲೀಸರಿಗೆ ಸಿಡಿಆರ್ ಸಂಕಷ್ಟ – ಎಸಿಪಿ ಚಂದನ್ಗೆ ಹೆಗಲಿಗೆ ತನಿಖೆ ಹೊಣೆ
ಏರೋ ಇಂಡಿಯಾ ಶೋ ಹೈಲೈಟ್ಸ್:
* ರಕ್ಷಣಾ ಸಚಿವರುಗಳ ಸಮಾವೇಶ, ದೇಶ ವಿದೇಶದ ರಕ್ಷಣಾ ಇಲಾಖೆಯ ಉನ್ನತ ಶ್ರೇಣಿಯ ಅಧಿಕಾರಿಗಳು ಭಾಗಿ.
* ಮೊದಲ ಮೂರು ದಿನ ಉದ್ಯಮದ ವೃತ್ತಿಪರರು, ನೀತಿ ನಿರೂಪಕರು, ಹೂಡಿಕೆದಾರರಿಗೆ ಮೀಸಲು.
* ಸಿಇಒ ದುಂಡು ಮೇಜಿನ ಸಭೆ, ಮಂಥನ್ ಸ್ಟಾರ್ಟ್ಅಪ್ ಕಾರ್ಯಕ್ರಮ.
* ಏರೋಸ್ಪೇಸ್ ಕಂಪನಿಗಳ ವ್ಯಾಪಾರ ಮೇಳ.
* ಆತ್ಮನಿರ್ಭರ್ ಯೋಜನೆಯಡಿ ಭಾರತೀಯ ರಕ್ಷಣಾ ಉತ್ಪಾದನೆ ಜಗತ್ತಿಗೆ ಪರಿಚಯಿಸುವುದು.
* ಭಾರತದಲ್ಲಿ ಉತ್ಪಾದನೆಯ ಉಪಕರಣಗಳನ್ನ ಇತರ ದೇಶಗಳಿಗೆ ಮಾರಾಟ ಮಾಡುವ ಕುರಿತು ಒಡಂಬಡಿಕೆಗಳು.
* ಭಾರತೀಯ ನವೋಧ್ಯಮಗಳ ಪ್ರಚಾರಕ್ಕಾಗಿ, ಅಭಿವೃದ್ಧಿಗಾಗಿ ಉತ್ಪನ್ನಗಳನ್ನ ವಿಶೇಷ ಐಡೆಕ್ಸ್ ಪೆವಿಲಿಯನ್ನಲ್ಲಿ ಪ್ರದರ್ಶನ
* ದೇಶಿಯ ನಿರ್ಮಿತ ಯುದ್ಧ ವಿಮಾನಗಳ ಪ್ರದರ್ಶನ
* ಡೈನಾಮಿಕ್ ಏರೋಬ್ಯಾಟಿಕ್ ಪ್ರದರ್ಶನಗಳು, ಲೈವ್ ತಂತ್ರಜ್ಞಾನ ಪ್ರದರ್ಶನಗಳು
* ರಕ್ಷಣಾ ವೈಮಾನಿಕ ಕ್ಷೇತ್ರದಲ್ಲಿ ಯುದ್ಧ ವಿಮಾನಗಳು, ಉಪಕರಣಗಳು ಸೇರಿ ಉತ್ಪನ್ನಗಳ ಖರೀದಿಗೂ ಹಲವು ದೇಶಗಳೊಂದಿಗೆ ಒಪ್ಪಂದಗಳಾಗುವ ನಿರೀಕ್ಷೆ.
ಏರೋಸ್ಪೇಸ್ ಮತ್ತು ರಕ್ಷಣೆಯಲ್ಲಿ ಸ್ವದೇಶಿಕರಣವನ್ನ ಉತ್ತೇಜಿಸುವುದು, ಅತ್ಯಾಧುನಿಕ ತಂತ್ರಜ್ಞಾನಗಳು, ಉತ್ಪನ್ನಗಳನ್ನು ಪ್ರದರ್ಶನ ಮಾಡಲಾಗುತ್ತದೆ. ಇಗಾಗಲೇ 700ಕ್ಕೂ ಪ್ರದರ್ಶಕರು ನೋಂದಣಿ ಮಾಡಿಕೊಂಡಿದ್ದು, ರಕ್ಷಣಾ ವ್ಯವಸ್ಥೆಗೆ ಸಂಬಂಧಪಟ್ಟಂತೆ ತಮ್ಮ ಉತ್ಪನ್ನಗಳನ್ನು ಪ್ರದರ್ಶನ ಮಾಡಲು ತಯಾರಿಗಳು ನಡೆಯುತ್ತಿವೆ. ಏರ್ ಶೋನಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಪಾಲಿಕೆ, ಜಿಲ್ಲಾಡಳಿತ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಇದನ್ನೂ ಓದಿ: ಮಹಾ ಕುಂಭಮೇಳಕ್ಕೆ ತೆರಳಿದ ಡಿಕೆಶಿ
ಬೆಂಗಳೂರು: 2025ನೇ ಸಾಲಿನ ಏರ್ ಶೋಗೆ (ಏರೋ ಇಂಡಿಯಾ – Aeroindia 2025) ದಿನಗಣನೆ ಆರಂಭವಾಗಿದೆ. ಇದೇ ಫೆ.10 ರಿಂದ 14ರ ವರೆಗೆ ನಡೆಯಲಿರುವ ವೈಮಾನಿಕ ಪ್ರದರ್ಶನದಲ್ಲಿ ದೇಶಿಯ ಹಾಗೂ ವಿದೇಶಿ ವಿಮಾನಗಳು ಪ್ರದರ್ಶನಗೊಳ್ಳುತ್ತಿವೆ. ವಿಮಾನಗಳ ಸುರಕ್ಷತೆಯ ಹಿನ್ನೆಲೆ ಹಲವಾರು ಸುರಕ್ಷತಾ ಕ್ರಮಗಳನ್ನು ಕೈಕೊಳ್ಳಲಾಗುತ್ತಿದೆ.
ಮೀನುಗಳು ಹೊರಗೆ ಬಂದ್ರೆ, ಪಕ್ಷಿಗಳ ಹಾರಾಟ ಹೆಚ್ಚಾಗಲಿದೆ. ಹೀಗಾಗಿ ವಿಮಾನಗಳ ಹಾರಾಟಕ್ಕೆ ತೊಂದರೆಯಾಗಲಿದೆ. ಆದ್ದರಿಂದ ಯಲಹಂಕ ವಾಯುನೆಲೆಯ ಸುತ್ತಮುತ್ತ ಹಾಗೂ ದೇವನಹಳ್ಳಿ ವ್ಯಾಪ್ತಿಗೆ ಬರುವ ಎಲ್ಲಾ ಕೆರೆಗಳಲ್ಲಿ ಮೀನು ಹಿಡುವಳಿ ಹಾಗೂ ಮೀನು ಮಾರಾಟವನ್ನು ಸ್ಥಗತಗೊಳಿಸಲು ಎಲ್ಲಾ ಟೆಂಡರ್ ಹಾಗೂ ಗುತ್ತಿಗೆದಾರರಿಗೆ ಮೀನುಗಾರಿಕಾ ಇಲಾಖೆ ಸೂಚಿಸಿದೆ. ಇದನ್ನೂ ಓದಿ: ಮುಡಾ ಕೇಸಲ್ಲಿ ಸಿದ್ದರಾಮಯ್ಯ & ಕುಟುಂಬ ನಿರಪರಾಧಿ ಅಂತ ಕೋರ್ಟ್ ಹೇಳಿಲ್ಲ: ವಿಜಯೇಂದ್ರ
ಬೆಂಗಳೂರು: ನಗರದಲ್ಲಿ ಫೆ.10ರಿಂದ ಏರ್ ಶೋ ಹಿನ್ನೆಲೆ ಏರ್ ಪೋರ್ಟ್ ರಸ್ತೆ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಿ ಬೆಂಗಳೂರು ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ.
ಯಾವ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು:
ನಿಟ್ಟೆ ಮೀನಾಕ್ಷಿ ಕಾಲೇಜ್ ರಸ್ತೆ ಹಾಗೂ ಬಾಗಲೂರು ಮುಖ್ಯ ರಸ್ತೆಯನ್ನು ಏಕಮುಖ ರಸ್ತೆಯಾಗಿ ಮಾರ್ಪಾಡು ಮಾಡಲಾಗಿದ್ದು, ಜಿಕೆವಿಕೆ ಕ್ಯಾಂಪಸ್ನಲ್ಲಿ ಸಾರ್ವಜನಿಕರಿಗೆ ಉಚಿತ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.ಇದನ್ನೂ ಓದಿ: ‘ಛಾವಾ’ ಚಿತ್ರದ ಮೂಲಕ ಮತ್ತೆ ಅದೃಷ್ಟ ಪರೀಕ್ಷೆಗಿಳಿದ ರಶ್ಮಿಕಾ ಮಂದಣ್ಣ
ಏರ್ ಶೋಗೆ ವಾಹನ ಸವಾರರು ಬರುವ ಮಾರ್ಗ: ಬೆಂಗಳೂರು ಪೂರ್ವದಿಂದ ಬರುವ ವಾಹನಗಳು: ಕೆ.ಆರ್. ಪುರ- ಬಾಗಲೂರು- ಹೆಣ್ಣೂರು ಕ್ರಾಸ್ – ಕೊತ್ತನೂರು – ಗುಬ್ಬಿ ಕ್ಲಾಸ್ – ಕಣ್ಣೂರು ಆಕ್ ಪಾಳ್ಯ – ವಿದ್ಯಾನಗರ ಕ್ರಾಸ್- ಹುಣಸಮಾರನಹಳ್ಳಿ.
ದಕ್ಷಿಣದಿಂದ ಬರುವ ವಾಹನಗಳು:
ಮೈಸೂರು ರಸ್ತೆ- ನಾಯಂಡನಹಳ್ಳಿ- ಚಂದ್ರಾಲೇಔಟ್-ಗೊರಗುಂಟೆಪಾಳ್ಯ- ಬಿಇಎಲ್ ವೃತ್ತ- ಗಂಗಮ್ಮ ವೃತ್ತ – ಎಂ.ಎಸ್ ಪಾಳ್ಯ ಸರ್ಕಲ್- ಮದರ್ ಡೈರಿ ಜಂಕ್ಷನ್ – ಉನ್ನಿ ಕೃಷ್ಣನ್ ಜಂಕ್ಷನ್ -ದೊಡ್ಡಬಳ್ಳಾಪುರ ಮುಖ್ಯ ರಸ್ತೆ ನಾಗೇನಹಳ್ಳಿ ಗೇಟ್.
ಲಾರಿ, ಟ್ರಕ್, ಬಸ್ ಹಾಗೂ ಸರಕು ಸಾಗಾಣಿಕೆ ವಾಹನಗಳಿಗೆ ಸಂಚಾರ ನಿರ್ಬಂಧ ಹೇರಲಾಗಿದೆ. ಬೆಂಗಳೂರು-ಬಳ್ಳಾರಿ ರಸ್ತೆ, ಮೇಖ್ರಿ ವೃತ್ತದಿಂದ-ಎಂವಿಐಟಿ ಕ್ರಾಸ್ವರೆಗೆ, ಗೊರಗುಂಟೆಪಾಳ್ಯದಿಂದ ಹೆಬ್ಬಾಳ ಮಾರ್ಗವಾಗಿ ಹೆಣ್ಣೂರು ಕ್ರಾಸ್ವರೆಗೆ, ನಾಗವಾರ ಜಂಕ್ಷನ್ನಿಂದ ರೇವಾ ಕಾಲೇಜ್ ಜಂಕ್ಷನ್ವರೆಗೆ, ಹಾಗೂ ಹೆಸರಘಟ್ಟ ಮತ್ತು ಚಿಕ್ಕಬಾಣಾವರ ಕಡೆಯಿಂದ ಬೆಂಗಳೂರು ಕಡೆಗೆ ಸಂಚಾರ ನಿಷೇಧಿಸಲಾಗಿದೆ.ಇದನ್ನೂ ಓದಿ: ಮಹಿಳಾ ಕ್ರೀಡೆಗಳಲ್ಲಿ ತೃತೀಯ ಲಿಂಗಿಗಳಿಗೆ ನಿಷೇಧ – ಆದೇಶಕ್ಕೆ ಟ್ರಂಪ್ ಸಹಿ