Tag: ಏಷ್ಯಾ ಕಪ್

  • ಏಪ್ಯಾ ಕಪ್ ಗೆದ್ದ ಭಾರತಕ್ಕೆ ವಿಶ್, ಬಳಿಕ ಟ್ವಿಸ್ಟ್ ಕೊಟ್ಟ ನಖ್ವಿ!

    ಏಪ್ಯಾ ಕಪ್ ಗೆದ್ದ ಭಾರತಕ್ಕೆ ವಿಶ್, ಬಳಿಕ ಟ್ವಿಸ್ಟ್ ಕೊಟ್ಟ ನಖ್ವಿ!

    ಮುಂಬೈ: ಏಷ್ಯಾಕಪ್ (Asia Cup) ಟ್ರೋಫಿ ಹಿಂದಿರುಗಿಸುವಂತೆ ಬಿಸಿಸಿಐ (BCCI) ಇಮೇಲ್ ಪತ್ರಕ್ಕೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ (Mohsin Naqwi) ಪ್ರತಿಕ್ರಿಯಿಸಿದ್ದಾರೆ. ಟ್ರೋಫಿ ಗೆದ್ದ ಟೀಂ ಇಂಡಿಯಾಕ್ಕೆ ಅಭಿನಂದನೆ ಸಲ್ಲಿಸಿರುವ ನಖ್ವಿ ಕೊನೆಯಲ್ಲಿ ಟ್ವಿಸ್ಟ್ ಕೊಟ್ಟಿದ್ದಾರೆ. `ಬಿಸಿಸಿಐ ಅಥವಾ ತಂಡದ ಯಾರಾದ್ರೂ ಬಂದು ಟ್ರೋಫಿ ಪಡೆಯಬಹುದು’ ಅಂತ ಹೇಳಿದ್ದಾರೆ.

    ಮಂಗಳವಾರ (ಅ.21) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮೊಹ್ಸಿನ್ ನಖ್ವಿಗೆ ಏಷ್ಯಾ ಕಪ್ ಟ್ರೋಫಿ ಹಸ್ತಾಂತರಿಸುವಂತೆ ಇಮೇಲ್ ಮೂಲಕ ಪತ್ರ ಬರೆದಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಏಪ್ಯಾ ಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆ ತಿಳಿಸುತ್ತೇನೆ. ಬಿಸಿಸಿಐ ಅಥವಾ ಭಾರತ ತಂಡದ ಯಾರಾದರೂ ಬಂದು ತೆಗೆದುಕೊಂಡು ಹೋಗಬಹುದು. ಅಲ್ಲದೇ ಭಾರತ ತಂಡಕ್ಕೆ ಏಷ್ಯಾ ಕಪ್ ಟ್ರೋಫಿಯನ್ನು ನೀಡಬೇಕೆಂದು ಬಯಸಿದರೆ, ದುಬೈನಲ್ಲಿ ಇನ್ನೊಮ್ಮೆ ಪ್ರಶಸ್ತಿ ವಿತರಿಸಲು ಕಾರ್ಯಕ್ರಮ ಆಯೋಜಿಸುವಂತೆ ಕೇಳಿಕೊಂಡಿದ್ದಾರೆ.ಇದನ್ನೂ ಓದಿ: ಏಷ್ಯಾ ಕಪ್‌ ಟ್ರೋಫಿಯನ್ನ ಭಾರತಕ್ಕೆ ಹಸ್ತಾಂತರಿಸಿ – ಮೊಹ್ಸಿನ್‌ ನಖ್ವಿಗೆ ಬಿಸಿಸಿಐ ವಾರ್ನಿಂಗ್‌

    ಮೂಲಗಳ ಪ್ರಕಾರ, ಭಾರತಕ್ಕೆ ನಾನು ಟ್ರೋಫಿ ನೀಡುವುದಿಲ್ಲ, ಅದರ ಬದಲು ನವೆಂಬರ್ ಮೊದಲ ವಾರದಲ್ಲಿ ಕಾರ್ಯಕ್ರಮ ಆಯೋಜಿಸುತ್ತೇವೆ. ಭಾರತ ತಂಡದ ಯಾರಾದರೂ ಬಂದು ಟ್ರೋಫಿ ಪಡೆಯಬಹುದು ಎಂದು ತಿಳಿಸಿದ್ದಾರೆ. ನಖ್ವಿ ಪ್ರತಿಕ್ರಿಯೆನ್ನು ಬಿಸಿಸಿಯ ನಿರಾಕರಿಸಿದ್ದು, ನಮಗೆ ಏಷ್ಯಾ ಕಪ್ ಟ್ರೋಫಿಯೇ ಬೇಡ ಎನ್ನುವ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ. ಜೊತೆಗೆ ಈ ಕುರಿತು ಐಸಿಸಿ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆಯಿದೆ.

    ಕಳೆದ ಸೆಪ್ಟೆಂಬರ್ 28ರಂದು ನಡೆದ ಟಿ೨೦ ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ, ಪಾಕ್ ವಿರುದ್ಧ ೫ ವಿಕೆಟ್‌ಗಳ ಜಯ ಸಾಧಿಸಿತು. ಆದ್ರೆ ನಖ್ವಿ ಅವರಿಂದ ಟ್ರೋಫಿ ಪಡೆಯಲು ಟೀಂ ಇಂಡಿಯಾ ನಿರಾಕರಿಸಿತು. ಹೀಗಾಗಿ ನಖ್ವಿ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಿಂದ ಹೊರಟರು ಜೊತೆಗೆ ಟ್ರೋಫಿಯನ್ನ ತೆಗೆದುಕೊಂಡು ಹೋದರು. ಹೀಗಾಗಿ ಭಾರತ ತಂಡ ಗೆದ್ದಿರುವ ಟ್ರೋಫಿಯನ್ನ ಹಿಂದಿರುಗಿಸುವಂತೆ ಹೇಳಿದೆ.

    ಟ್ರೋಫಿ ಎಲ್ಲಿದೆ?
    ಸದ್ಯ ಭಾರತ ಗೆದ್ದಿರುವ ಏಷ್ಯಾಕಪ್ ಟ್ರೋಫಿ ದುಬೈನ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಕಚೇರಿಯಲ್ಲೇ ಇದೆ. ತಮ್ಮ ಅನುಮತಿಯಿಲ್ಲದೇ ಯಾರೋ ಟ್ರೋಫಿಯನ್ನ ಹಸ್ತಾಂತರಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

    ನಖ್ವಿಯವರ ಆಪ್ತ ಮೂಲದ ಪ್ರಕಾರ, ಟ್ರೋಫಿ ದುಬೈನ ಎಸಿಸಿ ಕಚೇರಿಯಲ್ಲಿದೆ. ತನ್ನ ಅನುಮತಿಯಿಲ್ಲದೇ ಯಾರಿಗೂ ಟ್ರೋಫಿ ಹಸ್ತಾಂತರಿಸಬಾರದು. ಒಂದು ವೇಳೆ ಹಸ್ತಾಂತರಿಸಬೇಕಿದ್ರೆ, ನಾನೇ ಭಾರತ ತಂಡ ಅಥವಾ ಬಿಸಿಸಿಐಗೆ ವೈಯಕ್ತಿಕವಾಗಿ ಟ್ರೋಫಿ ಹಸ್ತಾಂತರಿಸೋದಾಗಿ ಹೇಳಿದ್ದಾರೆ.ಇದನ್ನೂ ಓದಿ: ಭಾರತಕ್ಕೆ ಏಷ್ಯಾ ಕಪ್‌ ನೀಡದ ಸಚಿವ ನಖ್ವಿಗೆ ಪಾಕ್‌ನಲ್ಲಿ ಚಿನ್ನದ ಪದಕ ನೀಡಿ ಸನ್ಮಾನಕ್ಕೆ ನಿರ್ಧಾರ

  • ಭಾರತಕ್ಕೆ ಏಷ್ಯಾ ಕಪ್‌ ನೀಡದ ಸಚಿವ ನಖ್ವಿಗೆ ಪಾಕ್‌ನಲ್ಲಿ ಚಿನ್ನದ ಪದಕ ನೀಡಿ ಸನ್ಮಾನಕ್ಕೆ ನಿರ್ಧಾರ

    ಭಾರತಕ್ಕೆ ಏಷ್ಯಾ ಕಪ್‌ ನೀಡದ ಸಚಿವ ನಖ್ವಿಗೆ ಪಾಕ್‌ನಲ್ಲಿ ಚಿನ್ನದ ಪದಕ ನೀಡಿ ಸನ್ಮಾನಕ್ಕೆ ನಿರ್ಧಾರ

    ಇಸ್ಲಾಮಾಬಾದ್: ಏಷ್ಯಾ ಕಪ್‌ನಲ್ಲಿ (Asia Cup 2025) ಭಾರತದ ವಿರುದ್ಧದ ನಿಲುವಿಗಾಗಿ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಮುಖ್ಯಸ್ಥ ಹಾಗೂ ಸಚಿವ ಮೊಹ್ಸಿನ್‌ ನಖ್ವಿಯನ್ನು (Mohsin Naqvi) ಗೌರವಿಸಲು ಪಾಕಿಸ್ತಾನ ಸರ್ಕಾರ ಮುಂದಾಗಿದೆ.

    ದುಬೈನಲ್ಲಿ ನಡೆದ ಏಷ್ಯಾ ಕಪ್ ಫೈನಲ್ ಪಂದ್ಯದ ನಂತರ ನಖ್ವಿ ಅವರ ಕ್ರಮಗಳು ವ್ಯಾಪಕ ಟೀಕೆಗೆ ಗುರಿಯಾಗಿದ್ದರೂ, ಈಗ ಅವರನ್ನು ಪಾಕಿಸ್ತಾನದಲ್ಲಿ ಸನ್ಮಾನಿಸಲಾಗುವುದು. ಕರಾಚಿಯಲ್ಲಿ ಔಪಚಾರಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಯೋಜಿಸಲಾಗಿದೆ ಎಂದು ವರದಿಯಾಗಿದೆ. ಅಲ್ಲಿ ನಖ್ವಿ ಅವರಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗುವುದು. ಪಿಪಿಪಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ. ಕಾರ್ಯಕ್ರಮದ ದಿನಾಂಕವನ್ನು ಇನ್ನೂ ಅಂತಿಮಗೊಳಿಸಿಲ್ಲ. ಇದನ್ನೂ ಓದಿ: ಬಿಸಿಸಿಐ ಮುಂದೆ ಮಂಡಿಯೂರಿದ ಪಾಕ್‌ ಸಚಿವ – ಕದ್ದೊಯ್ದಿದ್ದ ಏಷ್ಯಾ ಕಪ್‌ ವಾಪಸ್‌

    ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ, ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿತ್ತು. ನಂತರ ನಖ್ವಿ ಏಷ್ಯಾ ಕಪ್ ಟ್ರೋಫಿಯನ್ನು ವಿಜೇತರ ಪದಕಗಳ ಜೊತೆಗೆ ತಮ್ಮ ಹೋಟೆಲ್ ಕೋಣೆಗೆ ತೆಗೆದುಕೊಂಡು ಹೋದರು. ವ್ಯಾಪಕ ಟೀಕೆ ಬಳಿಕ ಟ್ರೋಫಿ ಮತ್ತು ಪದಕಗಳನ್ನು ಯುಎಇ ಕ್ರಿಕೆಟ್ ಮಂಡಳಿಗೆ ಹಸ್ತಾಂತರಿಸಲಾಗಿದೆ. ಆದರೆ, ಅವುಗಳನ್ನು ಯಾವಾಗ ಮತ್ತು ಹೇಗೆ ಭಾರತಕ್ಕೆ ತಲುಪಿಸಲಾಗುತ್ತದೆ ಎಂಬುದರ ಕುರಿತು ಯಾವುದೇ ಮಾಹಿತಿಯಿಲ್ಲ.

    ಕ್ರಿಕೆಟ್ ವಲಯದಲ್ಲಿ ನಖ್ವಿಯವರ ನಡೆಗೆ ಖಂಡಿಸಿದ್ದರೂ, ಏಷ್ಯಾ ಕಪ್‌ನಲ್ಲಿ ಭಾರತದ ವಿರುದ್ಧ ಇಂತಹ ನಿಲುವನ್ನು ತೆಗೆದುಕೊಂಡಿದ್ದಕ್ಕಾಗಿ ಅವರು ಶಹೀದ್ ಜುಲ್ಫಿಕರ್ ಅಲಿ ಭುಟ್ಟೋ ಎಕ್ಸಲೆನ್ಸ್ ಚಿನ್ನದ ಪದಕವನ್ನು ಸ್ವೀಕರಿಸಲಿದ್ದಾರೆ. ಕರಾಚಿಯಲ್ಲಿ ಔಪಚಾರಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಯೋಜಿಸಲಾಗಿದ್ದು, ಅಲ್ಲಿ ನಖ್ವಿ ಅವರಿಗೆ ಚಿನ್ನದ ಪದಕವನ್ನು ನೀಡಿ ಗೌರವಿಸಲಾಗುವುದು ಎಂದು ವರದಿಯಾಗಿದೆ. ಪಿಪಿಪಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ ಅವರನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಲು ಆಹ್ವಾನಿಸಲಾಗಿದೆ. ಕಾರ್ಯಕ್ರಮದ ದಿನಾಂಕವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಇದನ್ನೂ ಓದಿ: ಮತ್ತೆ ಹೊಸ ನಾಟಕ- ಕಪ್‌ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ

    ಸಿಂಧ್ ಮತ್ತು ಕರಾಚಿ ಬ್ಯಾಸ್ಕೆಟ್‌ಬಾಲ್ ಅಸೋಸಿಯೇಷನ್‌ಗಳ ಅಧ್ಯಕ್ಷ ವಕೀಲ ಗುಲಾಮ್ ಅಬ್ಬಾಸ್ ಜಮಾಲ್ ಅವರು ನಖ್ವಿ ಅವರನ್ನು ಸನ್ಮಾನಿಸಲಾಗುವುದು ಎಂದು ಘೋಷಿಸಿದ್ದಾರೆ. ಭಾರತದೊಂದಿಗೆ ರಾಜಕೀಯ ಮತ್ತು ಕ್ರೀಡಾ ಬಿಕ್ಕಟ್ಟಿನ ಸಮಯದಲ್ಲಿ ನಖ್ವಿಯವರ ಕ್ರಮಗಳು ರಾಷ್ಟ್ರೀಯ ಹೆಮ್ಮೆಯನ್ನು ಪುನಃಸ್ಥಾಪಿಸಿವೆ ಎಂದು ಜಮಾಲ್ ಹೇಳಿದ್ದಾರೆ.

  • ಮತ್ತೆ ಹೊಸ ನಾಟಕ- ಕಪ್‌ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ

    ಮತ್ತೆ ಹೊಸ ನಾಟಕ- ಕಪ್‌ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ

    ದುಬೈ: ಏಷ್ಯಾಕಪ್‌ ಫೈನಲ್‌ ಮುಗಿದ ಬಳಿಕವೂ ಹೈಡ್ರಾಮಾ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಟ್ರೋಫಿ ಎತ್ತಿಕೊಂಡು ಹೋಗಿ ಟ್ರೋಲ್‌ ಆದ ಬೆನ್ನಲ್ಲೇ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಮುಖ್ಯಸ್ಥ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ (Mohsin Naqvi) ಹೊಸ ನಾಟಕ ಆಡಲು ಆರಂಭಿಸಿದ್ದಾರೆ.

    ನಾನು ಟ್ರೋಫಿಯನ್ನು ಟೀಂ ಇಂಡಿಯಾಗೆ ನೀಡುತ್ತೇನೆ. ಆದರೆ ‘ಔಪಚಾರಿಕ ಸಮಾರಂಭ’ವನ್ನು ಆಯೋಜಿಸಬೇಕೆಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಇದನ್ನೂ ಓದಿ: 1 ಗಂಟೆ ಹೈಡ್ರಾಮಾ, ಟ್ರೋಫಿ ಜೊತೆ ಓಡಿದ ನಖ್ವಿ – ಮಧ್ಯರಾತ್ರಿ ಏನಾಯ್ತ? ಇಲ್ಲಿದೆ ಪೂರ್ಣ ವಿವರ

    ತನ್ನ ಕೈಯಿಂದ ಟ್ರೋಫಿ ಪಡೆಯಲು ಭಾರತ ನಿರಾಕರಿಸಿದ ಬೆನ್ನಲ್ಲೇ ನಖ್ವಿ ಎಸಿಸಿ ಈ ಹೊಸ ಷರತ್ತನ್ನು ನಖ್ವಿ ಇರಿಸಿದ್ದಾರೆ. ಆದರೆ ಈ ರೀತಿಯ ಕಾರ್ಯಕ್ರಮ ನಡೆಯದ ಟ್ರೋಫಿ ಹೇಗೆ ಭಾರತಕ್ಕೆ ಹೇಗೆ ಹಸ್ತಾಂತರವಾಗುತ್ತದೆ ಎನ್ನುವುದೇ ಸದ್ಯ ಕುತೂಹಲ. ಇದನ್ನೂಓದಿ: Asia Cup 2025 | ಚಾಂಪಿಯನ್‌ ಭಾರತ ತಂಡಕ್ಕೆ ಬಿಸಿಸಿಐನಿಂದ 21 ಕೋಟಿ ಗಿಫ್ಟ್‌

    ನಖ್ವಿ ನಡೆ ವಿರುದ್ಧ ಐಸಿಸಿಗೆ ದೂರು ನೀಡಲು ಬಿಸಿಸಿಐ ನಿರ್ಧರಿಸಿದೆ. ಟೀಂ ಇಂಡಿಯಾದ ನಿಲುವನ್ನು ಬಿಸಿಸಿಐ ಸಮರ್ಥಿಸಿಕೊಂಡಿದೆ. ನಮ್ಮ ವಿರುದ್ಧ ಯುದ್ಧ ನಡೆಸುತ್ತಿರುವ ವ್ಯಕ್ತಿಯಿಂದ ಭಾರತ ಟ್ರೋಫಿ ಸ್ವೀಕರಿಸಲು ಸಾಧ್ಯವಿಲ್ಲ. ಟ್ರೋಫಿ ಮತ್ತು ಪದಕಗಳನ್ನು ಆದಷ್ಟು ಬೇಗ ಭಾರತಕ್ಕೆ ಹಿಂದಿರುಗಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಅಂದಿದೆ. ಹೀಗಾಗಿ ನವೆಂಬರ್‌ನಲ್ಲಿ ನಡೆಯಲಿರುವ ಐಸಿಸಿ ಸಭೆಯಲ್ಲಿ ಪ್ರತಿಭಟಿಸಲು ಬಿಸಿಸಿಐ ನಿರ್ಧರಿಸಿದೆ.

  • ಮತ್ತೆ ಪಾಕಿಗೆ ನೋ ಎಂದ ಸ್ಕೈ – ನಾನು ಏನು ಹೇಳಲ್ಲ ಎಂದ ಸಲ್ಮಾನ್ ಅಲಿ

    ಮತ್ತೆ ಪಾಕಿಗೆ ನೋ ಎಂದ ಸ್ಕೈ – ನಾನು ಏನು ಹೇಳಲ್ಲ ಎಂದ ಸಲ್ಮಾನ್ ಅಲಿ

    ದುಬೈ: ಏಷ್ಯಾ ಕಪ್‌ ಫೈನಲ್‌ (Asia Cup Final) ಫೋಟೋಶೂಟ್‌ನಲ್ಲಿ ಭಾಗವಹಿಸದ ಮೂಲಕ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್‌ ಯಾದವ್‌ (Suryakumar Yadav) ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

    ಐಸಿಸಿ, ಏಷ್ಯಾಕಪ್‌ನಂತಹ ಪ್ರತಿಷ್ಠಿತ ಟೂರ್ನಿಯ ಫೈನಲ್‌ ಪಂದ್ಯಕ್ಕೂ ಮೊದಲು ಎರಡು ತಂಡಗಳ ನಾಯಕರು ಕಪ್‌ ಜೊತೆ ನಿಂತುಕೊಂಡು ಫೋಟೋಶೂಟ್‌ ಮಾಡಿಸುತ್ತಾರೆ. ಆದರೆ ಈ ಬಾರಿ ಸೂರ್ಯಕುಮಾರ್‌ ಯಾದವ್‌ ಫೋಟೋಶೂಟ್‌ಗೆ (Photoshoot) ʼನೋʼ ಎಂದಿದ್ದಾರೆ.  ಇದನ್ನೂ ಓದಿ:  ಏಷ್ಯಾ ಕಪ್‌ಗಾಗಿ ಇಂದು ಭಾರತ-ಪಾಕ್‌ ಸಮರ – 41 ವರ್ಷಗಳ ಇತಿಹಾಸಲ್ಲೇ ಫೈನಲ್‌ನಲ್ಲಿ ಮೊದಲ ಮುಖಾಮುಖಿ

    ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಕಿಸ್ತಾನ (Pakistan) ನಾಯಕ ಸಲ್ಮಾನ್ ಅಲಿ ಆಘಾ, ಫೋಟೋಶೂಟ್ ನಲ್ಲಿ ಭಾಗವಹಿಸಬೇಕೆ ಅಥವಾ ಬೇಡವೇ ಎಂಬುದು ಸೂರ್ಯಕುಮಾರ್ ಅವರ ನಿರ್ಧಾರ. ಈ ವಿಚಾರದ ಬಗ್ಗೆ ನಾನು ಏನು ಹೇಳಲಾರೆ ಎಂದು ತಿಳಿಸಿದರು.

    ಈ ಬಾರಿಯ ಏಷ್ಯಾ ಕಪ್‌ನಲ್ಲಿ ಭಾರತ ಪಾಕಿಸ್ತಾನ ಮೂರನೇ ಬಾರಿ ಮುಖಾಮುಖಿಯಾಗುತ್ತಿವೆ. ಲೀಗ್‌ ಮತ್ತು ಸೂಪರ್‌ 4 ಎರಡೂ ಪಂದ್ಯಗಳಲ್ಲಿ ಭಾರತವೇ ಜಯಗಳಿಸಿದೆ. ಅಷ್ಟೇ ಅಲ್ಲದೇ ಭಾರತ ಅಜೇಯವಾಗಿ ಫೈನಲ್‌ ಪ್ರವೇಶಿಸಿದೆ.

  • ಸಿಕ್ಸ್‌ ಮೇಲೆ ಸಿಕ್ಸ್‌ – ಏಷ್ಯಾಕಪ್‌ನಲ್ಲಿ ದಾಖಲೆ ಬರೆದ ಅಭಿಷೇಕ್‌ ಶರ್ಮಾ

    ಸಿಕ್ಸ್‌ ಮೇಲೆ ಸಿಕ್ಸ್‌ – ಏಷ್ಯಾಕಪ್‌ನಲ್ಲಿ ದಾಖಲೆ ಬರೆದ ಅಭಿಷೇಕ್‌ ಶರ್ಮಾ

    ದುಬೈ: ಏಷ್ಯಾಕಪ್‌ (Asia Cup) ಪಂದ್ಯಗಳಲ್ಲಿ ಸಿಕ್ಸ್‌ ಮೇಲೆ ಸಿಕ್ಸ್‌ (Six) ಸಿಡಿಸುತ್ತಿರುವ ಅಭಿಷೇಕ್‌ ಶರ್ಮಾ (Abhishek Sharma) ಇತಿಹಾಸ ಸೃಷ್ಟಿಸಿದ್ದಾರೆ.

    ಬಾಂಗ್ಲಾದೇಶ (Bangladesh) ವಿರುದ್ಧ ನಡೆದ ಪಂದ್ಯದಲ್ಲಿ 5 ಸಿಕ್ಸ್‌ ಸಿಡಿಸುವ ಮೂಲಕ ಒಂದು ಏಷ್ಯಾಕಪ್‌ ಆವೃತ್ತಿಯಲ್ಲಿ (ಸಿಂಗಲ್ ಎಡಿಷನ್)  ಅತಿ ಹೆಚ್ಚು ಸಿಕ್ಸ್‌ ಸಿಡಿಸಿದ ಬ್ಯಾಟರ್‌ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದಾರೆ. ಇಲ್ಲಿಯವರೆಗೆ ಶ್ರೀಲಂಕಾದ ಆರಂಭಿಕ ಆಟಗಾರ ಸನತ್‌ ಜಯಸೂರ್ಯ ಹೆಸರಿನಲ್ಲಿ ಈ ದಾಖಲೆ ಇತ್ತು. ಪಾಕಿಸ್ತಾನದಲ್ಲಿ ನಡೆದ 2008 ರ ಏಷ್ಯಾಕಪ್‌ ಟೂರ್ನಿಯಲ್ಲಿ 5 ಪಂದ್ಯವಾಡಿ  14 ಸಿಕ್ಸ್‌ ಹೊಡೆದಿದ್ದರು.

    ಈ ಪಂದ್ಯದಲ್ಲಿ ಅಭಿಷೇಕ್‌ ಶರ್ಮಾ 5 ಸಿಕ್ಸ್‌ ಸಿಡಿಸಿ ಜಯಸೂರ್ಯ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿದ್ದಾರೆ. ಇಲ್ಲಿಯವರೆಗೆ ಶರ್ಮಾ5 ಪಂದ್ಯಗಳಿಂದ  ಒಟ್ಟು 17 ಸಿಕ್ಸ್‌ ಸಿಡಿಸಿ ಮುನ್ನುಗ್ಗುತ್ತಿದ್ದಾರೆ. ಇದನ್ನೂ ಓದಿ: ಬಾಂಗ್ಲಾ ಬಗ್ಗು ಬಡಿದು ಅಜೇಯವಾಗಿ ಫೈನಲ್‌ ಪ್ರವೇಶಿಸಿದ ಭಾರತ

    ಭಾರತ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ (Rohit Sharama) 2018ರ ಆವೃತ್ತಿಯಲ್ಲಿ 13 ಸಿಕ್ಸರ್​ ಸಿಡಿಸಿದ್ದು ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ಶಾಹೀದ್ ಅಫ್ರಿದಿ 2010ರ ಟೂರ್ನಿಯಲ್ಲಿ 12 ಸಿಕ್ಸರ್ ಸಿಡಿಸಿ 4ನೇ ಸ್ಥಾನದಲ್ಲಿದ್ದಾರೆ.  ಅಫ್ಘಾನಿಸ್ತಾನದ ರಹಮನುಲ್ಲಾ ಗುರ್ಬಾಜ್ , 2022ರ ಟಿ20 ಮಾದರಿಯ ಏಷ್ಯಾಕಪ್​ನಲ್ಲಿ ಓಪನರ್ ಆಗಿ 12 ಸಿಕ್ಸರ್ ಸಿಡಿಸಿ ಅಫ್ರಿದಿ ಜೊತೆ 4ನೇ ಪಡೆದಿದ್ದಾರೆ.

    ಇಂದಿನ ಪಂದ್ಯದಲ್ಲಿ ಅಭಿಶೇಕ್‌ ಶರ್ಮಾ 37 ಎಸೆತಗಳಲ್ಲಿ 6 ಬೌಂಡರಿ, 5 ಸಿಕ್ಸ್‌ ನೆರವಿನಿಂದ 75 ರನ್‌ ಚಚ್ಚಿದ್ದಾರೆ. ಈ ಅತ್ಯುತ್ತಮ ಆಟಕ್ಕೆ ಅರ್ಹವಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿದೆ.


    ಯಾವ ತಂಡದ ವಿರುದ್ಧ ಅಭಿಷೇಕ್‌ ಶರ್ಮಾ ಎಷ್ಟು ಸಿಕ್ಸ್‌?
    ಯುಎಇ – 3
    ಪಾಕಿಸ್ತಾನ – 2
    ಒಮನ್‌ – 2
    ಪಾಕಿಸ್ತಾನ – 5
    ಬಾಂಗ್ಲಾದೇಶ – 5

  • ಬಾಂಗ್ಲಾ ಬಗ್ಗು ಬಡಿದು ಅಜೇಯವಾಗಿ ಫೈನಲ್‌ ಪ್ರವೇಶಿಸಿದ ಭಾರತ

    ಬಾಂಗ್ಲಾ ಬಗ್ಗು ಬಡಿದು ಅಜೇಯವಾಗಿ ಫೈನಲ್‌ ಪ್ರವೇಶಿಸಿದ ಭಾರತ

    – ಹಲವು ಕ್ಯಾಚ್‌ ಡ್ರಾಪ್‌ ಮಾಡಿದ್ದ ಟೀಂ ಇಂಡಿಯಾ

    ದುಬೈ: ಏಷ್ಯಾ ಕಪ್‌ (Asia Cup) ಸೂಪರ್‌ 4 ಪಂದ್ಯದಲ್ಲಿ ಬಾಂಗ್ಲಾದೇಶ (Bangladesh) ವಿರುದ್ಧ 41 ರನ್‌ಗಳ ಜಯ ಸಾಧಿಸಿದ ಭಾರತ (India) ಅಜೇಯವಾಗಿ ಫೈನಲ್‌ ಪ್ರವೇಶಿಸಿದೆ.

    ಗೆಲುವಿಗೆ 168 ರನ್‌ಗಳ ಗುರಿಯನ್ನು ಪಡೆದ ಬಾಂಗ್ಲಾ 19.3 ಓವರ್‌ಗಳಲ್ಲಿ 127 ರನ್‌ ಗಳಿಸಿ ಸೋಲನ್ನು ಒಪ್ಪಿಕೊಂಡಿತು. ಗುರುವಾರ ಪಾಕಿಸ್ತಾನ ಮತ್ತು ಬಾಂಗ್ಲಾ ನಡುವೆ ಪಂದ್ಯ ನಡೆಯಲಿದ್ದು ಈ ಪಂದ್ಯದಲ್ಲಿ ಜಯಗಳಿಸಿದವರು ಫೈನಲ್‌ ಪ್ರವೇಶಿಸಲಿದ್ದಾರೆ.

    ಬಾಂಗ್ಲಾ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡಿತು. ಬುಮ್ರಾ ತಮ್ಮ ಮೊದಲ ಓವರಿನ ಎರಡನೇ ಎಸೆತದಲ್ಲಿ ತಾಂಜಿದ್ ಹಸನ್ ಅವರನ್ನು ಔಟ್‌ ಮಾಡಿದರು.

    ಪರ್ವೇಜ್ ಹೊಸೇನ್ ಎಮನ್ 21 ರನ್‌ ಗಳಿಸಿ ಔಟಾದರು. ಒಂದು ಕಡೆ ವಿಕೆಟ್‌ ಪತನಗೊಳ್ಳುತ್ತಿದ್ದರೂ ಆರಂಭಿಕ ಆಟಗಾರ ಸೈಫ್‌ ಹಸನ್‌ ಮುನ್ನುಗ್ಗಿ ಹೊಡೆಯುತ್ತಿದ್ದರು. ಅಕ್ಷರ್‌ ಪಟೇಲ್‌, ಶಿವಂ ದುಬೆ ಮತ್ತು ಕೀಪರ್‌ ಸಂಜು ಸ್ಯಾಮ್ಸನ್‌, ಅಭಿಷೇಕ್‌ ಶರ್ಮಾ ಕ್ಯಾಚ್‌ ಡ್ರಾಪ್‌ ಮಾಡಿದರು. ಕೊನೆಗೆ 69 ರನ್‌(61 ಎಸೆತ, 3 ಬೌಂಡರಿ, 5 ಸಿಕ್ಸ್‌) ಬುಮ್ರಾ ಬೌಲಿಂಗ್‌ನಲ್ಲಿ ಸಿಕ್ಸ್‌ ಸಿಡಿಸಲು ಹೋದರು. ಆದರೆ ಬೌಂಡರಿ ಗೆರೆಯ ಬಳಿ ಅಕ್ಷರ್‌ ಪಟೇಲ್‌ ಉತ್ತಮ ಕ್ಯಾಚ್‌ ಹಿಡಿದಿದ್ದರಿಂದ ಔಟಾದರು.

    ಬಾಂಗ್ಲಾ ಉಳಿದ ಆಟಗಾರರಿಂದ ಉತ್ತಮ ಪ್ರತಿರೋಧ ವ್ಯಕ್ತವಾಗದ ಕಾರಣ ಪಂದ್ಯವನ್ನು ಸೋತಿತು. ಈ ಪಂದ್ಯದಲ್ಲಿ ಭಾರತ ಫೀಲ್ಡಿಂಗ್‌ ಕಳಪೆಯಾಗಿತ್ತು. ಹಲವು ಕ್ಯಾಚ್‌ಗಳನ್ನು ಆಟಗಾರರು ಕೈ ಚೆಲ್ಲಿದ್ದರು.

    ಕುಲದೀಪ್‌ ಯಾದವ್‌ 3 ವಿಕೆಟ್‌ಪಡೆದರೆ ಬುಮ್ರಾ, ವರುಣ್‌ ಚಕ್ರವರ್ತಿ ತಲಾ 2 ವಿಕೆಟ್‌, ಅಕ್ಷರ್‌ ಪಟೇಲ್‌ ಮತ್ತು ತಿಲಕ್‌ ವರ್ಮಾ ತಲಾ 1 ವಿಕೆಟ್‌ ಪಡೆದರು.

    ಶರ್ಮಾ ಸ್ಫೋಟಕ ಫಿಫ್ಟಿ:
    ಇದಕ್ಕೂ ಮೊದಲು ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ಅಭಿಷೇಕ್‌ ಶರ್ಮಾ (Abhishek Sharma) ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 168 ರನ್‌ ಗಳಿಸಿತ್ತು. ಭಾರತದ ಆರಂಭ ಉತ್ತಮವಾಗಿತ್ತು. ನಾಯಕ ಗಿಲ್‌ ಮತ್ತು ಅಭಿಷೇಕ್‌ ಶರ್ಮಾ 38 ಎಸೆತಗಳಲ್ಲಿ 77 ರನ್‌ ಜೊತೆಯಾಟವಾಡಿದರು. ಗಿಲ್‌ 29 ರನ್‌(19 ಎಸೆತ, 2 ಬೌಂಡರಿ, 1 ಸಿಕ್ಸ್‌) ಸಿಡಿಸಿ ಔಟಾದರು.

    ಗಿಲ್‌ ಔಟಾದ ಬೆನ್ನಲ್ಲೇ ಶಿವಂ ದುಬೆ 2 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಎರಡು ವಿಕೆಟ್‌ ಪತನಗೊಂಡರೂ ಮತ್ತೊಂದು ಕಡೆ ಅಭಿಷೇಕ್‌ ಶರ್ಮಾ ಸ್ಫೋಟಕ ಬ್ಯಾಟ್‌ ಬೀಸಿದರು. ಸಿಕ್ಸರ್‌ ಬೌಂಡರಿ ಸಿಡಿಸಿದ ಅಭಿಷೇಕ್‌ ಶರ್ಮಾ 75 ರನ್‌( 37 ಎಸೆತ, 6 ಬೌಂಡರಿ, 5 ಸಿಕ್ಸರ್‌) ರನೌಟ್‌ ಆದರು.


    ಅಭಿಷೇಕ್‌ ಶರ್ಮಾ ಔಟಾದ ಬೆನ್ನಲ್ಲೇ ಸೂರ್ಯಕುಮಾರ್‌ ಯಾದವ್‌ 5ರನ್‌, ತಿಲಕ್‌ ವರ್ಮಾ 5 ರನ್‌ ಗಳಿಸಿದರು. ಕೊನೆಯಲ್ಲಿ ಹಾರ್ದಿಕ್‌ ಪಾಂಡ್ಯ ಮತ್ತು ಅಕ್ಷರ್‌ ಪಟೇಲ್‌ 34 ಎಸೆತಗಳಲ್ಲಿ 39 ರನ್‌ ಹೊಡೆದರು. ಪಾಂಡ್ಯ 38 ರನ್‌(29 ಎಸೆತ, 4 ಬೌಂಡರಿ, 1 ಸಿಕ್ಸ್‌) ಹೊಡೆದು ಔಟಾದರೆ ಅಕ್ಷರ್‌ ಪಟೇಲ್‌ ಔಟಾಗದೇ 10 ರನ್‌ ಹೊಡೆದರು.

  • ಶರ್ಮಾ ಸ್ಫೋಟಕ ಫಿಫ್ಟಿ – ಬಾಂಗ್ಲಾಗೆ 169 ರನ್‌ ಟಾರ್ಗೆಟ್‌

    ಶರ್ಮಾ ಸ್ಫೋಟಕ ಫಿಫ್ಟಿ – ಬಾಂಗ್ಲಾಗೆ 169 ರನ್‌ ಟಾರ್ಗೆಟ್‌

    ದುಬೈ: ಅಭಿಷೇಕ್‌ ಶರ್ಮಾ (Abhishek Sharma) ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಏಷ್ಯಾ ಕಪ್‌ (Asia Cup) ಸೂಪರ್‌ 4 ಪಂದ್ಯದಲ್ಲಿ ಬಾಂಗ್ಲಾದೇಶದ (Bangladesh) ವಿರುದ್ಧ ಭಾರತ (Team India) 6 ವಿಕೆಟ್‌ ನಷ್ಟಕ್ಕೆ 168 ರನ್‌ ಹೊಡೆದಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಭಾರತದ ಆರಂಭ ಉತ್ತಮವಾಗಿತ್ತು. ನಾಯಕ ಗಿಲ್‌ ಮತ್ತು ಅಭಿಷೇಕ್‌ ಶರ್ಮಾ 38 ಎಸೆತಗಳಲ್ಲಿ 77 ರನ್‌ ಜೊತೆಯಾಟವಾಡಿದರು. ಗಿಲ್‌ 29 ರನ್‌(19 ಎಸೆತ, 2 ಬೌಂಡರಿ, 1 ಸಿಕ್ಸ್‌) ಸಿಡಿಸಿ ಔಟಾದರು.

    ಗಿಲ್‌ ಔಟಾದ ಬೆನ್ನಲ್ಲೇ ಶಿವಂ ದುಬೆ 2 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಎರಡು ವಿಕೆಟ್‌ ಪತನಗೊಂಡರೂ ಮತ್ತೊಂದು ಕಡೆ ಅಭಿಷೇಕ್‌ ಶರ್ಮಾ ಸ್ಫೋಟಕ ಬ್ಯಾಟ್‌ ಬೀಸಿದರು. ಸಿಕ್ಸರ್‌ ಬೌಂಡರಿ ಸಿಡಿಸಿದ ಅಭಿಷೇಕ್‌ ಶರ್ಮಾ 75 ರನ್‌( 37 ಎಸೆತ, 6 ಬೌಂಡರಿ, 5 ಸಿಕ್ಸರ್‌) ರನೌಟ್‌ ಆದರು.

    ಅಭಿಷೇಕ್‌ ಶರ್ಮಾ ಔಟಾದ ಬೆನ್ನಲ್ಲೇ ಸೂರ್ಯಕುಮಾರ್‌ ಯಾದವ್‌ 5ರನ್‌, ತಿಲಕ್‌ ವರ್ಮಾ 5 ರನ್‌ ಗಳಿಸಿದರು. ಕೊನೆಯಲ್ಲಿ ಹಾರ್ದಿಕ್‌ ಪಾಂಡ್ಯ ಮತ್ತು ಅಕ್ಷರ್‌ ಪಟೇಲ್‌ 34 ಎಸೆತಗಳಲ್ಲಿ 39 ರನ್‌ ಹೊಡೆದರು. ಪಾಂಡ್ಯ 38 ರನ್‌(29 ಎಸೆತ, 4 ಬೌಂಡರಿ, 1 ಸಿಕ್ಸ್‌) ಹೊಡೆದು ಔಟಾದರೆ ಅಕ್ಷರ್‌ ಪಟೇಲ್‌ ಔಟಾಗದೇ 10 ರನ್‌ ಹೊಡೆಯುವ ಮೂಲಕ ತಂಡದ ಮೊತ್ತವನ್ನು 160 ರನ್‌ಗಳ ಗಡಿ ದಾಟಿಸಿದರು. ಕೊನೆಯ 9 ಓವರ್‌ಗಳಲ್ಲಿ ಭಾರತ 4 ವಿಕೆಟ್‌ ಕಳೆದುಕೊಂಡು 56 ರನ್‌ ಸಿಡಿಸಿದ ಪರಿಣಾಮ ಹೆಚ್ಚು ರನ್‌ ಗಳಿಸಲು ಸಾಧ್ಯವಾಗಲಿಲ್ಲ.

  • ಬೇಡಿಕೆ ಈಡೇರಿಸದೇ ಇದ್ದರೆ ಟೂರ್ನಿಯನ್ನೇ ಬಹಿಷ್ಕರಿಸುತ್ತೇವೆ: ಪಾಕ್‌ ಬೆದರಿಕೆ

    ಬೇಡಿಕೆ ಈಡೇರಿಸದೇ ಇದ್ದರೆ ಟೂರ್ನಿಯನ್ನೇ ಬಹಿಷ್ಕರಿಸುತ್ತೇವೆ: ಪಾಕ್‌ ಬೆದರಿಕೆ

    ದುಬೈ: ತನ್ನ ಬೇಡಿಕೆಯನ್ನು ಈಡೇರಿಸದೇ ಇದ್ದರೆ ಏಷ್ಯಾ ಕಪ್‌ (Asia Cup) ಕ್ರಿಕೆಟ್‌ ಟೂರ್ನಿಯನ್ನೇ ಬಹಿಷ್ಕರಿಸುವುದಾಗಿ ಪಾಕಿಸ್ತಾನ (Pakistan) ಬೆದರಿಕೆ ಹಾಕಿದೆ.

    ಭಾರತದ (Team India) ವಿರುದ್ಧದ ಪಂದ್ಯದಲ್ಲಿ ಐಸಿಸಿ(ICC) ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ  ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ಅವರನ್ನು ವಜಾಗೊಳಿಸಬೇಕೆಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಒತ್ತಾಯಿಸಿದೆ. ಒಂದು ವೇಳೆ ಈ ಬೇಡಿಕೆಯನ್ನು ಈಡೇರಿಸದೇ ಇದ್ದರೆ ಟೂರ್ನಿಯನ್ನೇ ಬಹಿಷ್ಕರಿಸುವುದಾಗಿ ಒತ್ತಡ ಹಾಕಿದೆ.

    ಟೀಂ ಇಂಡಿಯಾ ನಾಯಕ ಸೂರ್ಯ ಕುಮಾರ್‌ ಯಾದವ್ (Surya Kumar Yadav) ಟಾಸ್‌ನಲ್ಲಿ ಪಾಕ್‌ ನಾಯಕ ಸಲ್ಮಾನ್ ಅಲಿ ಅಘಾ ಅವರ ಕೈಕುಲುಕಲಿಲ್ಲ. ಅಷ್ಟೇ ಅಲ್ಲದೇ ಪಂದ್ಯದ ಕೊನೆಯಲ್ಲೂ ಭಾರತದ ಆಟಗಾರರು ಪಾಕಿಸ್ತಾನದ ತಂಡದ ಆಟಗಾರರ ಹ್ಯಾಂಡ್‌ ಶೇಕ್‌ ಮಾಡಿರಲಿಲ್ಲ. ಇದನ್ನೂ ಓದಿ: ಕೆಲ ವಿಷಯಗಳು ಕ್ರೀಡಾ ಮನೋಭಾವಕ್ಕಿಂತಲೂ ದೊಡ್ಡದು ಕೈಕುಲುಕದ್ದಕ್ಕೆ ಸೂರ್ಯ ಸ್ಪಷ್ಟನೆ

    ಟಾಸ್ ಸಮಯದಲ್ಲಿ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ನಾಯಕ ಸಲ್ಮಾನ್ ಅಲಿ ಆಘಾ ಅವರ ಬಳಿ ಭಾರತ ತಂಡದ ನಾಯಕನ ಜೊತೆ ಕೈ ಕುಲುಕದಂತೆ ಕೇಳಿಕೊಂಡಿದ್ದರು. ಈ ನಡವಳಿಕೆ ಕ್ರೀಡಾ ಮನೋಭಾವಕ್ಕೆ ವಿರುದ್ಧವಾಗಿದೆ ಎಂದು ಪಿಸಿಬಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಮೊಹ್ಸಿನ್ ನಖ್ವಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

    ಐಸಿಸಿ ನಿಯಮಗಳ ಪ್ರಕಾರ ಪಂದ್ಯ ಮುಕ್ತಾಯವಾದ ಬಳಿಕ ಎರಡೂ ತಂಡಗಳ ಆಟಗಾರರು ಪರಸ್ಪರ ಅಭಿನಂದಿಸಬೇಕು. ಆದರೆ ಈ ನಿಯಮ ಇಲ್ಲಿ ಪಾಲನೆಯಾಗದೇ ಇರುವುದು ಪಾಕ್‌ ಸಿಟ್ಟಿಗೆ ಕಾರಣವಾಗಿದೆ.

    ಸೂರ್ಯಕುಮಾರ್‌ ಯಾದವ್‌ ಸಿಕ್ಸ್‌ ಸಿಡಿಸಿದ ಭಾರತ ತಂಡಕ್ಕೆ ಜಯವನ್ನು ತಂದುಕೊಟ್ಟರು. ಜಯ ಸಿಕ್ಕಿದ ನಂತರ ಸೂರ್ಯ ಮತ್ತು ಶಿವಂ ದುಬೆ ಪಾಕ್‌ ಆಟಗಾರರ ಕೈ ಕುಲುಕದೇ ನೇರವಾಗಿ ಡ್ರೆಸ್ಸಿಂಗ್‌ ಕೊಠಡಿಗೆ ಆಗಮಿಸಿದರು. ಇಬ್ಬರು ಕೊಠಡಿ ಪ್ರವೇಶಿಸಿದ ನಂತರ ಬಾಗಿಲು ಹಾಕಲಾಯಿತು. ಭಾರತದ ಆಟಗಾರರು ಕ್ರೀಡಾಂಗಣಕ್ಕೆ ಬರುತ್ತಾರೆ ಎಂಬ ನಿರೀಕ್ಷೆಯಲ್ಲಿ ಪಾಕ್‌ ಆಟಗಾರರು ಮೈದಾನದಲ್ಲೇ ಇದ್ದರು. ಆದರೆ ಭಾರತದ ಆಟಗಾರರು ಮೈದಾನಕ್ಕೆ ಇಳಿಯದ ಕಾರಣ ಪಾಕ್‌ ಆಟಗಾರರು ಕೊನೆಗೆ ತಮ್ಮ ಡ್ರೆಸ್ಸಿಂಗ್‌ ಕೊಠಡಿಗೆ ತೆರಳಿದರು.

  • Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್‌ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ

    Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್‌ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ

    ಮುಂಬೈ: ಏಷ್ಯಾ ಕಪ್‌ 2025ರ (Asia Cup) ಟೂರ್ನಿಗಾಗಿ ಟೀಂ ಇಂಡಿಯಾ (Team India) ಪ್ರಕಟಿಸಲಾಗಿದೆ. ಸೂರ್ಯಕುಮಾರ್‌ ಯಾದವ್‌ ತಂಡವನ್ನು ಮುನ್ನಡೆಸಲಿದ್ದಾರೆ. ಶುಭಮನ್‌ ಗಿಲ್‌ ಉಪನಾಯಕರಾಗಿದ್ದಾರೆ.

    ಮಂಗಳವಾರ ಮಧ್ಯಾಹ್ನ ಏಷ್ಯಾಕಪ್‌ಗಾಗಿ ಭಾರತದ 15 ಸದಸ್ಯರ ತಂಡವನ್ನು ಘೋಷಿಸಲಾಯಿತು. ಶುಭಮನ್ ಗಿಲ್, ಜಸ್ಪ್ರೀತ್ ಬುಮ್ರಾ ಮತ್ತು ಸಂಜು ಸ್ಯಾಮ್ಸನ್ ತಂಡದಲ್ಲಿದ್ದಾರೆ. ಕುಲದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ಅಕ್ಷರ್ ಪಟೇಲ್ ಅವರನ್ನು ಸ್ಪಿನ್ನರ್‌ಗಳಾಗಿ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: Asia Cup 2025 | ಹೊಸ ನಾಯಕತ್ವದಲ್ಲಿ ಪಾಕ್‌ ತಂಡ ಪ್ರಕಟ – ರಿಜ್ವಾನ್‌, ಬಾಬರ್‌ ಹೊರದಬ್ಬಿದ ಪಿಸಿಬಿ

    ಸೆಪ್ಟೆಂಬರ್ 9 ರಂದು ಯುಎಇಯಲ್ಲಿ ಆರಂಭವಾಗುವ ಏಷ್ಯಾಕಪ್‌ನೊಂದಿಗೆ ಭಾರತವು ಮುಂದಿನ ಫೆಬ್ರವರಿಯಲ್ಲಿ ಪುರುಷರ ಟಿ20 ವಿಶ್ವಕಪ್‌ಗೆ ಸಿದ್ಧತೆ ಪ್ರಾರಂಭಿಸಲಿದೆ. ಒಂದು ದಿನದ ನಂತರ ಭಾರತ ತನ್ನ ಮೊದಲ ಪಂದ್ಯವನ್ನು ಆಡಲಿದೆ.

    ಭಾರತ ತಂಡ ಹೀಗಿದೆ?
    ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್, ಜಿತೇಶ್ ಶರ್ಮಾ (ಡಬ್ಲ್ಯುಕೆ), ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ಹರ್ಷಿತ್‌ ರಾಣಾ, ರಿಂಕು ಸಿಂಗ್.

    ಐದು ಸ್ಟ್ಯಾಂಡ್-ಬೈಗಳು: ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್. ಇದನ್ನೂ ಓದಿ: ಅನಗತ್ಯ ರನ್‌ ಕದಿಯಲು ಯತ್ನಿಸಿ ಯಡವಟ್ಟು – ಮೈದಾನದಲ್ಲೇ ಬ್ಯಾಟ್‌ ಎಸೆದು ಪಾಕ್‌ ಓಪನರ್ ಆಕ್ರೋಶ

  • ಏಷ್ಯಾಕಪ್ ಆಯೋಜನೆಗೆ ಬಿಸಿಸಿಐ ಒಪ್ಪಿಗೆ – ಸೆಪ್ಟೆಂಬರ್‌ನಲ್ಲಿ ಭಾರತ, ಪಾಕ್ ಮುಖಾಮುಖಿ?

    ಏಷ್ಯಾಕಪ್ ಆಯೋಜನೆಗೆ ಬಿಸಿಸಿಐ ಒಪ್ಪಿಗೆ – ಸೆಪ್ಟೆಂಬರ್‌ನಲ್ಲಿ ಭಾರತ, ಪಾಕ್ ಮುಖಾಮುಖಿ?

    ಢಾಕಾ: ಏಷ್ಯಾ ಕಪ್ (Asia Cup) ಆಯೋಜಿಸಲು ಬಿಸಿಸಿಐ (BCCI) ಒಪ್ಪಿಗೆ ನೀಡಿದ್ದು ಸೆಪ್ಟೆಂಬರ್‌ನಲ್ಲಿ ದುಬೈ ಮತ್ತು ಅಬುಧಾಬಿಯಲ್ಲಿ ಪಂದ್ಯ ನಡೆಸುವ ಪ್ರಸ್ತಾಪ ಇರಿಸಿದೆ ಎಂದು ವರದಿಯಾಗಿದೆ.

    ಗುರುವಾರ ಢಾಕಾದಲ್ಲಿ ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ವಾರ್ಷಿಕ ಸಭೆಯಲ್ಲಿ (ಎಜಿಎಂ) ಏಷ್ಯಾ ಕಪ್ ಬಗ್ಗೆ ಚರ್ಚೆ ನಡೆಯಿತು. ಈ ವೇಳೆ ಭಾರತೀಯ ಕ್ರಿಕೆಟ್ ಮಂಡಳಿಯ ಅಧಿಕಾರಿಗಳು ವರ್ಚುವಲ್ ಆಗಿ ಭಾಗವಹಿಸಿದ್ದರು. ಸದ್ಯಕ್ಕೆ ಪಂದ್ಯಕ್ಕಾಗಿ ದುಬೈ ಮತ್ತು ಅಬುಧಾಬಿಯನ್ನು ಆಯ್ಕೆ ಮಾಡಿದ್ದು, ಒಂದೇ ಸ್ಥಳದಲ್ಲಿ ಪಂದ್ಯ ಆಯೋಜಿಸುವಂತೆ ಇಚ್ಛೆ ವ್ಯಕ್ತಪಡಿಸಿದೆ.ಇದನ್ನೂ ಓದಿ: 15 ವರ್ಷದಿಂದ ನಡೆಯುತ್ತಿದೆ ಬಳ್ಳಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ- ತಲೆ ಕೆಡಿಸಿಕೊಳ್ಳದ ಜನಪ್ರತಿನಿಧಿಗಳು

    ಮೂಲಗಳ ಪ್ರಕರ ಒಂದೇ ವಿಭಾಗದಲ್ಲಿ ಭಾರತ ಮತ್ತು ಪಾಕ್ ಬರುವ ಸಾಧ್ಯತೆಯಿದೆ. ಬಿಸಿಸಿಐ ಮೂರು ಸ್ಥಳಗಳಲ್ಲಿ ಪಂದ್ಯ ನಡೆಸುವ ಎಮಿರೇಟ್ಸ್ ಕ್ರಿಕೆಟ್ ಮಂಡಳಿಯ ಒಪ್ಪಂದಕ್ಕೆ ಸಹಿ ಹಾಕಿದ್ದು, ಏಷ್ಯಾ ಕಪ್‌ಗಾಗಿ ಕೇವಲ ಎರಡು ಸ್ಥಳಗಳನ್ನು ಮಾತ್ರ ಬಳಸಿಕೊಳ್ಳುವ ನಿರೀಕ್ಷೆಯಿದೆ. ಸದ್ಯದಲ್ಲೇ ಕ್ರಿಕೆಟ್ ವೇಳಾಪಟ್ಟಿ ಫೈನಲ್ ಆಗುವ ಸಾಧ್ಯತೆಗಳಿದ್ದು, ಬಿಸಿಸಿಐ ಧನದಾಹಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ದೇಶಕ್ಕಿಂತ ಹಣವೇ ಮುಖ್ಯವಾಯ್ತಾ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

    ಪಹಲ್ಗಾಮ್ ದಾಳಿಯ ಬಳಿಕ ಭಾರತ ಏಷ್ಯಾ ಕಪ್‌ನಲ್ಲಿ ಭಾಗವಹಿಸುವುದಿಲ್ಲ ಹಾಗೂ ಆತಿಥ್ಯ ವಹಿಸುವುದಿಲ್ಲ ಎಂದು ಮೇ ತಿಂಗಳಲ್ಲಿ ಮೂಲಗಳು ತಿಳಿಸಿದ್ದವು.ಇದನ್ನೂ ಓದಿ: DCC Bank Election| ಲಿಂಗಾಯತ ನಾಯಕರ ಸಭೆಗೆ ಜಾರಕಿಹೊಳಿ ಬ್ರದರ್ಸ್‌ ಚೆಕ್‌ಮೇಟ್!