Tag: ಐಎಂಎಫ್

  • 1 ಲೀಟರ್ ಅಡುಗೆ ಎಣ್ಣೆ 555 ರೂ., ಕೆಜಿ ತುಪ್ಪ 605 ರೂ.ಗೆ ದಿಢೀರ್ ಏರಿಕೆ

    1 ಲೀಟರ್ ಅಡುಗೆ ಎಣ್ಣೆ 555 ರೂ., ಕೆಜಿ ತುಪ್ಪ 605 ರೂ.ಗೆ ದಿಢೀರ್ ಏರಿಕೆ

    ಇಸ್ಲಾಮಾಬಾದ್: ಈಗಾಗಲೇ ಆರ್ಥಿಕ ಬಿಕ್ಕಟ್ಟಿನಿಂದ ದಿವಾಳಿಯಾಗಿರುವ ಶ್ರೀಲಂಕಾದಲ್ಲಿ ದಿನೇ ದಿನೇ ಪರಿಸ್ಥಿತಿ ಕ್ಷೀಣಿಸುತ್ತಿದೆ. ಇದರಿಂದ ಜನಸಾಮಾನ್ಯರೂ ಪರದಾಡುವಂತಾಗಿದೆ. ಇದೀಗ ನೆರೆಯ ಪಾಕಿಸ್ತಾನದಲ್ಲೂ ಅದೇ ಪರಿಸ್ಥಿತಿ ಎದುರಾಗುತ್ತಿದೆ.

    ಆದಾಯದ ಬಹುಪಾಲನ್ನು ಸೇನೆಗೆ ಖರ್ಚು ಮಾಡುವ ಪಾಕಿಸ್ತಾನದಲ್ಲಿ ಇದೀಗ ಆರ್ಥಿಕ ಬಿಕ್ಕಟ್ಟು ತೀವ್ರಗೊಂಡಿದೆ. ಖಾದ್ಯ ತೈಲ, ತುಪ್ಪ ಸೇರಿದಂತೆ ಹಲವು ಅಗತ್ಯ ವಸ್ತುಗಳ ಬೆಲೆ ದಾಖಲೆ ಮಟ್ಟಕ್ಕೆ ತಲುಪಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಲೀಟರ್‌ ಪೆಟ್ರೋಲ್‌ಗೆ 420 ರೂ., ಡೀಸೆಲ್‌ಗೆ 400 ರೂ.

    Shehbaz Sharif

    ಪಾಕಿಸ್ತಾನದ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಖಾದ್ಯ ತೈಲ ಬೆಲೆ ಗಗನಕ್ಕೇರಿದೆ. ಖಾದ್ಯ ತೈಲ ಒಂದೇ ಸಮನೇ 208 ರೂಪಾಯಿ ಹಾಗೂ ತುಪ್ಪದ ಬೆಲೆ ಪ್ರತಿ ಕೆಜಿಗೆ 213 ರೂಪಾಯಿ ಹೆಚ್ಚಾಗಿದೆ. ಇದರಿಂದ ಖಾದ್ಯ ತೈಲ 1 ಕೆಜಿಗೆ 555 ರೂಪಾಯಿ ಆಗಿದ್ದರೆ, 1 ಕೆಜಿ ತುಪ್ಪದ ಬೆಲೆ 605 ರೂಪಾಯಿ ಆಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಇದರ ಬೆಲೆ 500 ರಿಂದ 540 ರೂಪಾಯಿ ಇದೆ. ಈಗಾಗಲೇ ಪಾಕಿಸ್ತಾನ ಸರ್ಕಾರ ವಿದೇಶಿ ವಿನಿಮಯ ಸರಿದೂಗಿಸಲು ಆಮದು ಮೇಲೆ ನಿರ್ಬಂಧ ಹೇರಿದೆ. ಆದರೂ ಪರಿಸ್ಥಿತಿ ಹದಗೆಡುತ್ತಿದೆ.

    ಇಂಡೋನೇಷಿಯಾದ ತಾಳೆ ಎಣ್ಣೆ ರಫ್ತು ನಿಷೇಧ ಮಾಡಿದ ಬಳಿಕ ಪಾಕಿಸ್ತಾನದಲ್ಲಿ ಖಾದ್ಯ ತೈಲ ಹಾಗೂ ತುಪ್ಪದ ಬೆಲೆ ಶೇ.300 ರಷ್ಟು ಏರಿಕೆಯಾಗಿದೆ ಎಂದು ಪಾಕಿಸ್ತಾನದ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಜನರ ಮುಂದೆಯೇ ಬೆತ್ತಲೆ ಫೋಟೋ ಶೂಟ್ : ನಟಿ ಪೂನಂ ಪಾಂಡೆಗೆ ಸಂಕಷ್ಟ

    ಪಾಕ್ ರೂಪಾಯಿ ಬೆಲೆ ಪಾತಾಳಕ್ಕೆ: ಆರ್ಥಿಕ ಪರಿಸ್ಥಿತಿ ಹದಗೆಡುತ್ತಿರುವ ಪಾಕ್‌ನಲ್ಲಿ ರೂಪಾಯಿಯ ಮೌಲ್ಯ ದಾಖಲೆ ಪ್ರಮಾಣದ ಕುಸಿತ ಕಂಡಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ ಜೊತೆ ಪಾಕಿಸ್ತಾನ ಪ್ಯಾಕೇಜ್ ಮಾತುಕತೆ ನಡೆಸುತ್ತಿದೆ. ಇದರ ನಡುವೆ ರೂಪಾಯಿ ಶೇ.7 ರಷ್ಟು ಕುಸಿತವಾಗಿದೆ. ಇದನ್ನೂ ಓದಿ: ಕಣ್ಣು ಮಂಕಾಗ್ತಿದೆ, ಬೆರಳು ಅಲುಗಾಡ್ತಿದೆ – ಪುಟಿನ್ ಬದುಕಿರೋದು ಇನ್ನೂ ಮೂರೇ ವರ್ಷ!

    ಆರ್ಥಿಕ ಬಿಕ್ಕಟ್ಟು, ವಿದೇಶಿ ಸಾಲ, ವಿದೇಶಿ ವಿನಿಮಯ ಕೊರತೆ, ರೂಪಾಯಿ ಕುಸಿತ ಸೇರಿದಂತೆ ಹಲವು ಸಮಸ್ಯೆಗಳು ಪಾಕಿಸ್ತಾನ ಎದುರಿಸುತ್ತಿದೆ. ಇದರ ನಡುವೆ ಮುಂದಿನ ಹಣಕಾಸು ವರ್ಷದಲ್ಲಿ ಅಮೆರಿದಿಂದ ಪಡೆದಿರುವ 21 ಶತಕೋಟಿ ವಿದೇಶಿ ಸಾಲ ಮರುಪಾವತಿಸಬೇಕಿದೆ. ವಿದೇಶಿ ವಿನಿಮಯ ಕೊರತೆ ಎದುರಿಸುತ್ತಿರುವ ಪಾಕಿಸ್ತಾನ ತಲೆ ಮೇಲೆ ಕೈಹೊತ್ತು ಕೂತಿದೆ. ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ಜೊತೆ ಸಾಲಕ್ಕೆ ಮಾತುಕತೆ ನಡೆಸುತ್ತಿದೆ ಎಂದು ಪಾಕಿಸ್ತಾನದ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

  • ಚೀನಾ ಮೀರಿಸಿದ ಭಾರತ – ವಿಶ್ವದಲ್ಲೇ ಅತೀ ವೇಗದ ಅಭಿವೃದ್ಧಿ

    ಚೀನಾ ಮೀರಿಸಿದ ಭಾರತ – ವಿಶ್ವದಲ್ಲೇ ಅತೀ ವೇಗದ ಅಭಿವೃದ್ಧಿ

    ವಾಷಿಂಗ್ಟನ್: ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮದಿಂದ ಹಾಗೂ ಕೋವಿಡ್ ಪ್ರಭಾವದಿಂದ ಇಡೀ ವಿಶ್ವವೇ ನಲುಗಿ ಹೋಗಿ, ಆರ್ಥಿಕತೆ ಕುಗ್ಗುವ ಆತಂಕದಲ್ಲಿದೆ. ಆದರೆ ಭಾರತದ ಆರ್ಥಿಕತೆಯಲ್ಲಿ ಭಾರೀ ಪ್ರಮಾಣದ ಚೇತರಿಕೆ ಕಾಣುತ್ತಿದೆ.

    ಹೌದು, ಭಾರತ ಇದೀಗ ಚೀನಾವನ್ನೇ ಮೀರಿಸುವಷ್ಟು ವೇಗವಾಗಿ ಆರ್ಥಿಕತೆಯಲ್ಲಿ ಅಭಿವೃದ್ದಿ ಹೊಂದುತ್ತಿದೆ. 2022ನೇ ಇಸವಿಯಲ್ಲಿ ಭಾರತ ಶೇ.8.2 ರಷ್ಟು ಪ್ರಗತಿ ಕಾಣಲಿದೆ. ಇದು ಜಗತ್ತಿನಲ್ಲಿಯೇ ಅತೀ ವೇಗದ ಅಭಿವೃದ್ಧಿ ಹೊಂದಲಿರುವ ಆರ್ಥಿಕತೆ ಎನಿಸಿಕೊಳ್ಳಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ತಿಳಿಸಿದೆ. ಇದನ್ನೂ ಓದಿ: 12 ರಾಜ್ಯಗಳಲ್ಲಿ ವಿದ್ಯುತ್ ಸಮಸ್ಯೆ: ಮಹಾರಾಷ್ಟ್ರ ಸಚಿವ

     

    ಚೀನಾದ ಪ್ರಗತಿ ದರ ಶೇ.4.4 ರಷ್ಟು ಇದ್ದು, ಭಾರತ ಇದರ ದುಪ್ಪಟ್ಟು ವೇಗದಲ್ಲಿ ಅಭಿವೃದ್ದಿ ಹೊಂದುತ್ತಿದೆ. 2021ರ ಜಾಗತಿಕ ಆರ್ಥಿಕ ದರ ಶೇ.6.1 ಇದ್ದು, ಈ ವರ್ಷ ಶೇ.3.6 ಕ್ಕೆ ಭಾರೀ ಪ್ರಮಾಣದಲ್ಲಿ ಇಳಿಕೆ ಕಾಣಲಿದೆ ಎಂದು ಹೇಳಿದೆ. ಇದನ್ನೂ ಓದಿ: ಇಂದು ಸಂಜೆಯೊಳಗೆ ಶರಣಾಗಿ – ನಾಪತ್ತೆಯಾಗಿರುವ 8 ಹುಬ್ಬಳ್ಳಿ ಪುಂಡರಿಗೆ ಡೆಡ್‌ಲೈನ್‌

    ಕೆಲವು ತಿಂಗಳ ಹಿಂದೆ ಐಎಂಎಫ್ 2022ರ ಭಾರತದ ಆರ್ಥಿಕತೆ ಶೇ.9.1 ಇರಲಿದೆ ಎಂದು ತಿಳಿಸಿತ್ತು. ಇದೀಗ ಐಎಂಎಫ್ ಈ ಅಂದಾಜನ್ನು ಪರಿಷ್ಕರಿಸಿ, ಶೇ.0.8 ರಷ್ಟು ಕಡಿಮೆ ಮಾಡಿದೆ. 2023ರಲ್ಲಿ ಭಾರತದ ಆರ್ಥಿಕ ಪ್ರಗತಿ ಶೇ.6.9 ಇರಲಿದೆ ಎಂದು ತಿಳಿಸಿದೆ.

  • ಸೇನಾ ಹೆಲಿಕಾಪ್ಟರ್ ಪತನ: ಸರ್ಕಾರಿ ಸೇವೆಗೆ ಸೇರಿದ ಪ್ರದೀಪ್ ಪತ್ನಿ

    ಸೇನಾ ಹೆಲಿಕಾಪ್ಟರ್ ಪತನ: ಸರ್ಕಾರಿ ಸೇವೆಗೆ ಸೇರಿದ ಪ್ರದೀಪ್ ಪತ್ನಿ

    ತಿರುವನಂತಪುರಂ: ಸೇನಾ ಹೆಲಿಕಾಪ್ಟರ್ ಪತನಗೊಂಡು ಹುತಾತ್ಮರಾಗಿದ್ದ ಜೂನಿಯರ್ ವಾರಂಟ್ ಅಧಿಕಾರಿ ಪ್ರದೀಪ್ ಅವರ ಪತ್ನಿ ಕೇರಳದಲ್ಲಿ ಸರ್ಕಾರಿ ಸೇವೆಗೆ ಸೇರಿದ್ದಾರೆ.

    ಕಳೆದ ಡಿಸೆಂಬರ್ 8 ರಂದು ಭಾರತದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಇತರ ರಕ್ಷಣಾ ಅಧಿಕಾರಿಗಳು ಹೆಲಿಕಾಪ್ಟರ್ ಅಪಘಾತದಲ್ಲಿ ಜೂನಿಯರ್ ವಾರಂಟ್ ಅಧಿಕಾರಿ ಎ. ಪ್ರದೀಪ್ ಮೃತಪಟ್ಟಿದ್ದರು. ಈಗ ಪ್ರದೀಪ್ ಅವರ ಪತ್ನಿ ಶ್ರೀಲಕ್ಷ್ಮಿ ಅವರು ಸೋಮವಾರ ತ್ರಿಶ್ಯೂರ್‌ನಲ್ಲಿರುವ ತಾಲೂಕು ಕಚೇರಿಯಲ್ಲಿ ಗುಮಾಸ್ತರಾಗಿ ಕರ್ತವ್ಯ ನಿರ್ವಹಿಸಲು ಸೇರಿದ್ದಾರೆ ಎಂದು ಕಂದಾಯ ಸಚಿವ ಕೆ ರಾಜನ್ ತಿಳಿಸಿದರು.

    ದುರಂತದ ಬಳಿಕ ಡಿಸೆಂಬರ್ 15 ರಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಶ್ರೀಲಕ್ಷ್ಮಿಗೆ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ಸರ್ಕಾರಿ ಉದ್ಯೋಗ ನೀಡಲು ನಿರ್ಧರಿಸಲಾಗಿತ್ತು.

    ತಾಲೂಕು ಕಚೇರಿಗೆ ಆಗಮಿಸಿದ ರಾಜನ್ ಅವರು, ಗುಮಾಸ್ತ ಹುದ್ದೆಗೆ ತನ್ನ ಇಬ್ಬರು ಮಕ್ಕಳೊಂದಿಗೆ ಬಂದಿದ್ದ ಶ್ರೀಲಕ್ಷ್ಮಿಯನ್ನು ಬರಮಾಡಿಕೊಂಡಿದ್ದಾರೆ.  ಇದನ್ನೂ ಓದಿ: ರಾಹುಲ್ ಗಾಂಧಿ ಮುಖಕ್ಕೆ ಧ್ವಜವನ್ನು ಎಸೆದ ವ್ಯಕ್ತಿ

    ಹುದ್ದೆಗೆ ಬೇಕಾದ ಕೆಲ ಕಾಗದಗಳಿಗೆ ಸಹಿ ಮಾಡಿದ ನಂತರ ಲಕ್ಷ್ಮಿಯವರು ಕಣ್ಣೀರು ಹಾಕುತ್ತಾ ಮಾತನಾಡಿದ್ದು, ತಾಲೂಕು ಕಚೇರಿಯಲ್ಲಿ ಗುಮಾಸ್ತರಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗಿಸಿದ ಎಲ್ಲರಿಗೂ ನಾನು ಕೃತಜ್ಞಳಾಗಿದ್ದೇನೆ ಎಂದರು.

    ಶ್ರೀಲಕ್ಷ್ಮಿ ವಾಣಿಜ್ಯ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ರಾಜ್ಯ ಸರ್ಕಾರವು ಅವರ ಕುಟುಂಬದ ಭರವಸೆ ಉಳಿಸಿಕೊಂಡಿದ್ದು, ಅವರಿಗೆ ಸರ್ಕಾರಿ ಕೆಲಸ ನೀಡಿದೆ ಎಂದು ರಾಜನ್ ಹೇಳಿದರು.

    ಕೆಲಸದ ಹೊರತಾಗಿ, ರಾಜ್ಯ ಸರ್ಕಾರವು ಅವರಿಗೆ 5 ಲಕ್ಷ ರೂಪಾಯಿಗಳನ್ನು ನೀಡಿದ್ದು, ಪ್ರದೀಪ್ ಅವರ ತಂದೆ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆ ಅವರ ವೈದ್ಯಕೀಯ ಚಿಕಿತ್ಸೆಗಾಗಿ 3 ಲಕ್ಷ ರೂಪಾಯಿಗಳನ್ನು ನೀಡಿದೆ. ಇದನ್ನೂ ಓದಿ: ಸಿಎಂ ತವರು ಜಿಲ್ಲೆಗೂ ಕಾಲಿಟ್ಟ ಹಿಜಬ್, ಕೇಸರಿ ಶಾಲು ಫೈಟ್ – ವಿದ್ಯಾರ್ಥಿಗಳನ್ನ ಹೊರಹಾಕಿದ ಕಾಲೇಜು ಸಿಬ್ಬಂದಿ

    38 ವರ್ಷದ ಪ್ರದೀಪ್ ಅವರ ತಂದೆ ಕೇರಳದ ಒಂದು ಕಂಪನಿಯಲ್ಲಿ ಕಾರ್ಮಿಕರಾಗಿದ್ದರು. ಪ್ರದೀಪ್ 2002 ರಲ್ಲಿ ಐಎಎಫ್‍ಗೆ ಸೇರಿದ ನಂತರ ಅವರ ತಂದೆ ಉದ್ಯೋಗಕ್ಕೆ ರಾಜೀನಾಮೆ ನೀಡಿದ್ದರು.

  • ಭಾರತಕ್ಕಾಗಿ ಚಿಂತನಶೀಲ ನೀತಿ ಕಾರ್ಯಸೂಚಿ: ಬಜೆಟ್‌ ಬಗ್ಗೆ IMF ಮುಖ್ಯಸ್ಥೆ ಪ್ರತಿಕ್ರಿಯೆ

    ಭಾರತಕ್ಕಾಗಿ ಚಿಂತನಶೀಲ ನೀತಿ ಕಾರ್ಯಸೂಚಿ: ಬಜೆಟ್‌ ಬಗ್ಗೆ IMF ಮುಖ್ಯಸ್ಥೆ ಪ್ರತಿಕ್ರಿಯೆ

    ವಾಷಿಂಗ್ಟನ್‌: ಭಾರತ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆ.1ರಂದು ಬಜೆಟ್‌ ಮಂಡಿಸಿದರು. ಭಾರತಕ್ಕಾಗಿ ಚಿಂತನಶೀಲ ನೀತಿ ಕಾರ್ಯಸೂಚಿ ಇದಾಗಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ಮುಖ್ಯಸ್ಥೆ ಕ್ರಿಸ್ಟಿಲಿನಾ ಜಿಯೊರ್ಜಿವಾ ಬಣ್ಣಿಸಿದ್ದಾರೆ.

    ಕೇಂದ್ರ ಬಜೆಟ್‌ ಭಾರತಕ್ಕೆ ಅತ್ಯಂತ ಚಿಂತನಶೀಲ ನೀತಿ ಅಜೆಂಡಾವಾಗಿದೆ. ಮಾನವ ಬಂಡವಾಳ ಹೂಡಿಕೆ ಮತ್ತು ಡಿಜಿಟಲೀಕರಣದ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ನಾವೀನ್ಯತೆಗೆ ಹೆಚ್ಚಿನ ಒತ್ತು ನೀಡಿದೆ ಎಂದು ಕ್ರಿಸ್ಟಿಲಿನಾ ತಿಳಿಸಿದ್ದಾರೆ. ಇದನ್ನೂ ಓದಿ: Budget 2022 : ಚುನಾವಣಾ ಓಲೈಕೆ ಇಲ್ಲದ, ಜನಪ್ರಿಯ ಘೋಷಣೆಗಳಿಲ್ಲದ ಬಜೆಟ್‌

    ಭಾರತದ ಅಭಿವೃದ್ಧಿಗೆ ನಾವು ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದಾರೆ. 2022ಕ್ಕೆ ಭಾರತದ ಜಿಡಿಪಿ ಶೇ.9.5ರಿಂದ ಶೇ.9ಕ್ಕೆ ಸ್ವಲ್ಪ ಪ್ರಮಾಣದ ಇಳಿಕೆ ಕಂಡಿದೆ. ಆದರೆ 2023ಕ್ಕೆ ಇದನ್ನು ಮತ್ತಷ್ಟು ಹೆಚ್ಚಿಸಲು ಸಾಕಷ್ಟು ಯೋಜನೆಗಳಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಐಎಂಎಫ್‌ ಇದನ್ನು ಹಲವಾರು ಅಂಶಗಳ ಮೇಲೆ ಷರತ್ತುಬದ್ಧವಾಗಿ ನೋಡುತ್ತದೆ. ಕೋವಿಡ್‌ ಸಾಂಕ್ರಾಮಿಕದಲ್ಲಿ ಭಾರತ ಉತ್ತಮವಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಿದೆ. ಸೂಕ್ತ ಮಾರ್ಗದರ್ಶನ ಮತ್ತು ವಿವೇಕಯುತ ರೀತಿಯಲ್ಲಿ ನಡೆಯುತ್ತಿದ್ದು, ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Budget 2022 : ಮೋದಿ ಸೂಚನೆಯಂತೆ ಜನರಿಂದ ಹೆಚ್ಚುವರಿ ತೆರಿಗೆ ಸಂಗ್ರಹ ಇಲ್ಲ

    ಭಾರತವು ಅಲ್ಪಾವಧಿ ಸಮಸ್ಯೆಗಳನ್ನು ಪರಿಹರಿಸಲು ಯೋಜಿಸುತ್ತಿದೆ. ಆದರೆ ಅದು ದೀರ್ಘಾವಧಿಯ ರಚನಾತ್ಮಕ ರೂಪಾಂತರವೂ ಆಗಿದೆ. ಮಾನವ ಬಂಡವಾಳ ಹೂಡಿಕೆ ಮತ್ತು ಡಿಜಿಟಲೀಕರಣದ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ನಾವೀನ್ಯತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.

  • ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ನಿಧನ

    ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ನಿಧನ

    ಬೆಂಗಳೂರು: ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಸೇನಾಧಿಕಾರಿ, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ನಿಧನರಾದರು.

    ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ದಂಡನಾಯಕರಾದ ಬಿಪಿನ್ ರಾವತ್ ಸೇರಿ 13 ಮಂದಿ ಮೃತಪಟ್ಟಿದ್ದರು. ಆದರೆ ಇದೇ ತಂಡದಲ್ಲಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ತೀವ್ರ ಗಾಯಗೊಂಡು ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಅವರನ್ನು ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಜೀವನ್ಮರಣ ಹೋರಾಟ ನಡೆಸುತ್ತಿರುವ ವರುಣ್ ಸಿಂಗ್ ಬರೆದಿದ್ದ ಸ್ಫೂರ್ತಿದಾಯಕ ಪತ್ರ ವೈರಲ್

    ವರುಣ್ ಸಿಂಗ್ 95% ಕ್ಕೂ ಹೆಚ್ಚು ಸುಟ್ಟ ಗಾಯಗಳೊಂದಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವರುಣ್ ಸಿಂಗ್ ಆರೋಗ್ಯ ಪರಿಸ್ಥಿತಿ ಗಂಭೀರವಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ‌ ಏರ್‌ಲಿಫ್ಟ್ ಮೂಲಕ ಅವರನ್ನು ಕರೆ ತರಲಾಗಿತ್ತು.

    ವರುಣ್‌ ಸಿಂಗ್‌ ಅವರ ನಿಧನಕ್ಕೆ ಭಾರತೀಯ ವಾಯುಪಡೆ ತೀವ್ರ ಸಂತಾಪ ಸೂಚಿಸಿದೆ. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತ – ಕ್ಯಾಪ್ಟನ್ ವರುಣ್ ಸಿಂಗ್‌ಗೆ ಬೆಂಗಳೂರಿನಲ್ಲಿ ಹೆಚ್ಚಿನ ಚಿಕಿತ್ಸೆ

    ಶೌರ್ಯ ಚಕ್ರ
    ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಈ ವರ್ಷದ ಸ್ವಾತಂತ್ರ್ಯ ದಿನದಂದು 2020 ರಲ್ಲಿ ವೈಮಾನಿಕ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಎಲ್‍ಸಿಎ ತೇಜಸ್ ಯುದ್ಧ ವಿಮಾನವನ್ನು ಸಮರ್ಥವಾಗಿ ಲ್ಯಾಂಡಿಂಗ್ ಮಾಡಿ ಅದರಲ್ಲಿದ್ದ ಯೋಧರ ಪ್ರಾಣ ಉಳಿಸಿದಕ್ಕಾಗಿ ಶೌರ್ಯ ಚಕ್ರವನ್ನು ನೀಡಿ ಗೌರವಿಸಲಾಗಿತ್ತು. ಲೈಟ್ ಕಾಂಬ್ಯಾಟ್ ಏರ್‍ಕ್ರಾಫ್ಟ್ ಸ್ಕ್ವಾಡ್ರನ್‍ನಲ್ಲಿ ಪೈಲಟ್ ಆಗಿದ್ದ ವಿಂಗ್ ಕಮಾಂಡರ್ ವರುಣ್ ಸಿಂಗ್, ಅವರ ಅಸಾಧಾರಣ ಶೌರ್ಯಕ್ಕಾಗಿ ಭಾರತದ ಮೂರನೇ ಅತ್ಯುನ್ನತ ಶೌರ್ಯ ಪ್ರಶಸ್ತಿಯನ್ನು ಈ ವರ್ಷದ ಆಗಸ್ಟ್ 15 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೀಡಿ ಗೌರವಿಸಿದ್ದರು.

  • ಮೈಸೂರಿನ ಗೀತಾ ಗೋಪಿನಾಥ್‌ ಐಎಂಎಫ್‌ನ ಉನ್ನತ ಹುದ್ದೆಗೆ ಬಡ್ತಿ

    ಮೈಸೂರಿನ ಗೀತಾ ಗೋಪಿನಾಥ್‌ ಐಎಂಎಫ್‌ನ ಉನ್ನತ ಹುದ್ದೆಗೆ ಬಡ್ತಿ

    ವಾಷಿಂಗ್‌ಟನ್: ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್‌ ಅವರು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌)ಯ ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿ ಬಡ್ತಿ ಪಡೆದುಕೊಂಡಿದ್ದಾರೆ.

    ಐಎಂಎಫ್‌ನ ಹಾಲಿ ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿರುವ ಜೆಫ್ರಿ ಒಕಾಮೊಟೊ ಅವರ ಅಧಿಕಾರವಧಿ 2022ರ ಮೊದಲ ತಿಂಗಳು ಮುಕ್ತಾಯವಾಗಲಿದೆ. ಆ ಸ್ಥಾನಕ್ಕೆ ಗೀತಾ ಗೋಪಿನಾಥ್‌ ಬಡ್ತಿ ಪಡೆದಿದ್ದಾರೆ. ಐಎಂಎಫ್‌ನಲ್ಲಿ ಉನ್ನತ ಸ್ಥಾನಗಳಲ್ಲಿ ಸೇವೆ ಸಲ್ಲಿಸಿದ ಮಹಿಳೆಯರು ಎಂಬ ಹೆಗ್ಗಳಿಕೆಗೆ ಈ ಇಬ್ಬರೂ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಸ್ವಚ್ಛತೆ ಎನ್ನುವ ಪತ್ನಿಗೆ ಡೈವೋರ್ಸ್ ನೀಡಲು ಮುಂದಾದ ಪತಿ

    ಐಎಂಎಫ್‌ನ ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜೀವಾ ಅವರು, ಸೂಕ್ತ ಸಮಯಕ್ಕೆ ಸೂಕ್ತ ವ್ಯಕ್ತಿಯೇ ಪ್ರಮುಖ ಸ್ಥಾನಕ್ಕೆ ಬರುತ್ತಿದ್ದಾರೆ ಎಂದು ಗೀತಾ ಗೋಪಿನಾಥ್‌ ಅವರನ್ನು ಹೊಗಳಿದ್ದಾರೆ.

    ನಮ್ಮ ಸದಸ್ಯ ರಾಷ್ಟ್ರಗಳು ಎದುರಿಸುತ್ತಿರುವ ಆರ್ಥಿಕ ಸವಾಲುಗಳಿಗೆ ಸಾಂಕ್ರಾಮಿಕ ರೋಗ ಪ್ರಮುಖ ಕಾರಣವಾಗಿದೆ. ಗೀತಾ ಅವರು ವಿಶ್ವದ ಪ್ರಮುಖ ಅರ್ಥಶಾಸ್ತ್ರಜ್ಞರಲ್ಲಿ ಒಬ್ಬರು. ನಮ್ಮ ಕ್ಷೇತ್ರಕ್ಕೆ ಅಗತ್ಯವಿರುವ ಪರಿಣತಿಯನ್ನು ಅವರನ್ನು ಹೊಂದಿದ್ದಾರೆ ಎಂದು ಜಾರ್ಜೀವಾ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಸರ್ಕಾರಿ ಉದ್ಯೋಗ ಇಲ್ಲದೆ ಯುವಕರಲ್ಲಿ ಹತಾಶೆ: ವರುಣ್ ಗಾಂಧಿ

    ಜಾಗತಿಕ ಮಟ್ಟದಲ್ಲಿ ಅರ್ಥಶಾಸ್ತ್ರಜ್ಞೆಯಾಗಿ ಹೆಸರು ಮಾಡಿರುವ ಗೀತಾ ಗೋಪಿನಾಥ್‌ ಅವರು ಭಾರತದ ಕರ್ನಾಟಕ ರಾಜ್ಯದ ಮೈಸೂರು ಮೂಲದವರು.

  • ಅತ್ಯಾಚಾರದ ಆರೋಪ- ವಾಯುಸೇನೆ ಅಧಿಕಾರಿ ಅರೆಸ್ಟ್

    ಅತ್ಯಾಚಾರದ ಆರೋಪ- ವಾಯುಸೇನೆ ಅಧಿಕಾರಿ ಅರೆಸ್ಟ್

    ಚೆನ್ನೈ: ಭಾರತೀಯ ವಾಯುಪಡೆ(ಐಎಎಫ್) ಅಧಿಕಾರಿಯನ್ನು ಅತ್ಯಾಚಾರದ ಆರೋಪದ ಮೇಲೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ಅರೆಸ್ಟ್ ಮಾಡಲಾಗಿದೆ.

    ಫ್ಲೈಟ್ ಲೆಫ್ಟಿನೆಂಟ್ ಅಮಿತೇಶ್(29) ಅವರನ್ನು ಕೊಯಂಬತ್ತೂರಿನ ರೇಸ್ ಕೋರ್ಸ್‍ನ ಸಹೋದ್ಯೋಗಿಯ ಆರೋಪದ ಮೇಲೆ ಐಎಎಫ್ ಕ್ಯಾಂಪಸ್ ನಲ್ಲಿ ನಿನ್ನೆ ಬಂಧಿಸಲಾಗಿದೆ. ಅಮಿತೇಶ್ ಅವರು ಇಲ್ಲಿ ತರಬೇತಿ ಪಡೆಯುತ್ತಿದ್ದರು. ಇದನ್ನೂ ಓದಿ: ಹೆತ್ತ ಮಗಳನ್ನೇ ಕೊಂದ ತಂದೆ, ತಾಯಿ, ದೊಡ್ಡಪ್ಪ – ಮರ್ಯಾದಾ ಹತ್ಯಾ ಪ್ರಕರಣ ಬಯಲು

    ಈ ಕುರಿತು ಸಂತ್ರಸ್ತೆ ಮಾತನಾಡಿದ್ದು, ಸೆ.10ರಂದು ತರಬೇತಿ ಸಮಯದಲ್ಲಿ ನನಗೆ ಗಾಯವಾಯಿತು. ಅದಕ್ಕೆ ನಾನು ಔಷಧಿ ಸೇವಿಸಿ ಮಲಗಿಕೊಂಡೆ. ಆದರೆ ನಂತರ ಎಚ್ಚರವಾಗಿ ನೋಡಿದರೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು. ಯಾರು ಎಂದು ತಿಳಿದು ಅದನ್ನು ಐಎಎಫ್ ಅಧಿಕಾರಿಗಳಿಗೆ ದೂರು ನೀಡಿದೆ. ಆದರೂ ಸಹ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಅದಕ್ಕೆ ಕೊಯಮತ್ತೂರಿನ ಮಹಿಳಾ ಪೆÇಲೀಸ್ ಠಾಣೆಯನ್ನು ಸಂಪರ್ಕಿಸಿ ಅವರಿಗೆ ದೂರು ನೀಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಜಿಲ್ಲೆಯಲ್ಲಿ ಮರಳು ಸಾಗಾಣಿಕೆಗೆ ಮಕ್ಕಳ ಬಳಕೆ – ಕಣ್ಣುಮುಚ್ಚಿ ಕುಳಿತ ಪೊಲೀಸ್ ಇಲಾಖೆ

    ಈ ಹಿನ್ನೆಲೆ ಅಮಿತೇಶ್‍ನನ್ನು ಕೊಯಮತ್ತೂರಿನ ಪೊಲೀಸರು ಅರೆಸ್ಟ್ ಮಾಡಿದ್ದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಈಗ ಅಮಿತೇಶ್ ಅವರನ್ನು ಉಡುಮಲ್ ಪೇಟೆ ಜೈಲಿಗೆ ಕಳಹಿಸಲಾಗಿದೆ.

  • ಐಎಎಫ್‍ನ ಮೊದಲ ‘ರಫೇಲ್’ಗೆ ರಾಜನಾಥ್ ಸಿಂಗ್ ಆಯುಧ ಪೂಜೆ

    ಐಎಎಫ್‍ನ ಮೊದಲ ‘ರಫೇಲ್’ಗೆ ರಾಜನಾಥ್ ಸಿಂಗ್ ಆಯುಧ ಪೂಜೆ

    ನವದೆಹಲಿ: ಮೂರು ದಿನದ ಫ್ರಾನ್ಸ್ ಪ್ರವಾಸದಲ್ಲಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಪ್ಯಾರಿಸ್‍ನಲ್ಲಿ ಭಾರತೀಯ ವಾಯು ಪಡೆಯ(ಐಎಎಫ್) ಮೊದಲ ರಫೇಲ್ ಯುದ್ಧ ವಿಮಾನಕ್ಕೆ ಆಯುಧ ಪೂಜೆ ನೆರವೇರಿಸಿ, ಭಾರತಕ್ಕೆ ಹಸ್ತಾಂತರಿಸಿಕೊಳ್ಳಲ್ಲಿದ್ದಾರೆ.

    36 ರಫೇಲ್ ಜೆಟ್ ಯುದ್ಧ ವಿಮಾನಗಳು ಫ್ರಾನ್ಸ್ ನ ಬಂದರು ನಗರಿ ಬೋರ್ಡೆಕ್ಸ್ ನಲ್ಲಿ ತಯಾರಾಗುತ್ತಿದ್ದು, ಅವುಗಳ ಪೈಕಿ ಮೊದಲನೆ ಯುದ್ಧ ವಿಮಾನ ಇಂದು ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರವಾಗಲಿದೆ. ಆ ಬಳಿಕ, ರಾಜನಾಥ್ ಸಿಂಗ್ ವಿಜಯದಶಮಿಯ ಶುಭ ಸಂದರ್ಭದಲ್ಲಿ ಶಸ್ತ್ರಾಸ್ತ್ರಗಳ ಪೂಜೆ ಮಾಡಲಿದ್ದಾರೆ. ನಂತರ ರಫೇಲ್ ಯುದ್ಧ ವಿಮಾನದಲ್ಲಿ ಪ್ಯಾರಿಸ್ ವಾಯುನೆಲೆಯಿಂದ ಮೊದಲ ಹಾರಾಟದ ಅನುಭವ ಪಡೆಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಭಾರತ ಒಟ್ಟು 36 ರಫೇಲ್ ಯುದ್ಧ ವಿಮಾನಗಳನ್ನು ಖರೀದಿಸಿದೆ. ಸದ್ಯ ಅವುಗಳಲ್ಲಿ ಒಂದು ರಫೇಲ್ ಯುದ್ಧ ವಿಮಾನ ಮಾತ್ರ ಇಂದು ಫ್ರಾನ್ಸ್ ಭಾರತಕ್ಕೆ ಹಸ್ತಾಂತರಿಸಲಿದೆ. ಹಾಗೆಯೇ ಮೊದಲ ಹಂತದಲ್ಲಿ ನೀಡಲಾಗುವ ನಾಲ್ಕು ವಿಮಾನಗಳು 2020ರ ಮೇ ತಿಂಗಳಿನಲ್ಲಿ ಭಾರತೀಯ ವಾಯು ಪಡೆಯನ್ನು ಸೇರಲಿದೆ ಎನ್ನಲಾಗಿದೆ.

    ದಸರಾ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಸಂಸ್ಥಾಪನಾ ದಿನವನ್ನೂ ಆಚರಿಸಲಾಗುತ್ತಿದ್ದು, ಇದೇ ವೇಳೆ ರಾಜನಾಥ್ ಸಿಂಗ್ ಅವರು ಮೊದಲು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದು, ಬಳಿಕ ಫ್ರೆಂಚ್ ಸಶಸ್ತ್ರ ಪಡೆಗಳ ಸಚಿವ ಫ್ಲಾರೆನ್ಸ್ ಪಾರ್ಲಿ ಅವರೊಂದಿಗೆ ವಾರ್ಷಿಕ ರಕ್ಷಣಾ ಸಂವಾದವನ್ನು ನಡೆಸಲಿದ್ದಾರೆ.

    ಹಲವು ವರ್ಷದಿಂದ ರಾಜ್‍ನಾಥ್ ಸಿಂಗ್ ಅವರು ದಸರಾ ವೇಳೆ ಶಸ್ತ್ರ ಪೂಜೆ ಮಾಡುವ ಸಂಪ್ರದಾಯ ರೂಢಿಯಲ್ಲಿಟ್ಟುಕೊಂಡು ಬಂದಿದ್ದಾರೆ. ಈ ಹಿಂದೆ ಎನ್‍ಡಿಎ ಸರ್ಕಾರದ ಅವಧಿಯಲ್ಲಿ ಗೃಹ ಸಚಿವರಾಗಿದ್ದಾಗಲೂ ರಾಜ್‍ನಾಥ್ ಸಿಂಗ್ ಶಸ್ತ್ರ ಪೂಜೆ ನೆರವೇರಿಸಿದ್ದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

  • ಮಿಗ್-21 ನಲ್ಲಿ ಹಾರಾಡಿದ ಅಭಿನಂದನ್

    ಮಿಗ್-21 ನಲ್ಲಿ ಹಾರಾಡಿದ ಅಭಿನಂದನ್

    ಪಠಾಣ್‍ಕೋಟ್: ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಇಂದು ಏರ್ ಚೀಫ್ ಮಾರ್ಷಲ್ ಬಿಎಸ್ ಧನೋವಾ ಅವರೊಂದಿಗೆ ಮಿಗ್-21 ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.

    ಬಾಲಕೋಟ್ ಏರ್ ಸರ್ಜಿಕಲ್ ಸ್ಟ್ರೈಕ್ ಬಳಿಕ ಪಾಕಿಸ್ತಾನದ ಅತ್ಯಾಧುನಿಕ ಎಫ್-16 ಭಾರತದ ಗಡಿ ಪ್ರವೇಶಿಸಿತ್ತು. ಈ ವೇಳೆ ಕರ್ತವ್ಯದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್ ಮಿಗ್-21 ಮೂಲಕವೇ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದರು. ಸ್ವತಂತ್ರ ದಿನಾಚರಣೆಯಂದು ಅಭಿನಂದನ್ ಅವರಿಗೆ ವೀರ ಚಕ್ರ ನೀಡಿ ಭಾರತ ಸರ್ಕಾರ ಗೌರವಿಸಿತ್ತು.

    ಇಂದು ಪಂಜಾಬ್ ರಾಜ್ಯದ ಪಠಾಣಕೋಟ್ ವಾಯುನೆಲೆಯಿಂದ ಅಭಿನಂದನ್ ಮಿಗ್-21 ವಿಮಾನದಲ್ಲಿ ಹಾರಾಟ ನಡೆಸಿದರು. ವೈದ್ಯಕೀಯ ಪರೀಕ್ಷೆಯ ನಂತರ ಅಭಿನಂದನ್ ಅವರನ್ನು ವಿಮಾನ ಹಾರಾಟ ಹುದ್ದೆಗೆ ಪರಿಗಣಿಸಲಾಗಿತ್ತು. ಧನೋವಾರ ಜೊತೆ ಅಭಿನಂದನ್ ಸುಮಾರು ಅರ್ಧ ಗಂಟೆಗಳ ಕಾಲ ಹಾರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.

  • ಅಭಿನಂದನ್‍ಗೆ ಮಾರ್ಗದರ್ಶನ ನೀಡಿದ್ದ ಐಎಎಫ್ ಮಹಿಳಾ ನಿಯಂತ್ರಕಿಗೆ ಯುಧ್ ಸೇವಾ ಪದಕ

    ಅಭಿನಂದನ್‍ಗೆ ಮಾರ್ಗದರ್ಶನ ನೀಡಿದ್ದ ಐಎಎಫ್ ಮಹಿಳಾ ನಿಯಂತ್ರಕಿಗೆ ಯುಧ್ ಸೇವಾ ಪದಕ

    ನವದೆಹಲಿ: ಫೆಬ್ರವರಿ 27ರಂದು ಪಾಕಿಸ್ತಾನದ ಮತ್ತು ಭಾರತೀಯ ವಾಯುಸೇನೆಯ ಯುದ್ಧ ವಿಮಾನಗಳ ನಡುವೆ ನಡೆದ ಡಾಗ್‍ಫೈಟ್ ಬಗ್ಗೆ ಎಲ್ಲರಿಗೂ ತಿಳಿದಿದೆ. ಆ ವೇಳೆ ಐಎಎಫ್ ವಿಂಗ್ ಕಮಾಂಡರ್ ಅಭಿನಂದನ್‍ರಿಗೆ ಮಾರ್ಗದರ್ಶನ ನೀಡಿದ ಐಎಎಫ್ ಸ್ಕ್ವಾಡ್ರನ್ ಲೀಡರ್ ಮಿಂಟಿ ಅಗರ್ವಾಲ್‍ಗೆ ‘ಯುದ್ಧ ಸೇವಾ ಪದಕ’ ನೀಡಿ ಗೌರವಿಸಲಾಗಿದೆ.

    ಸ್ಕ್ವಾಡ್ರನ್ ಲೀಡರ್ ಮಿಂಟಿ ಅಗರ್ವಾಲ್ ಅವರು ಫೆಬ್ರವರಿ 27ರಂದು ನಡೆದ ಡಾಗ್‍ಫೈಟ್‍ನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಾರತೀಯ ಗಡಿ ನಿಯಂತ್ರಣ ರೇಖೆ ದಾಟಿ ಬಂದ ಪಾಕ್ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲು ಅಭಿನಂದನ್ ಅವರಿಗೆ ಮಿಂಟಿ ಅಗರ್ವಾಲ್ ಅವರು ಮಾರ್ಗದರ್ಶನ ನೀಡಿ ಸಹಕರಿಸಿದ್ದರು. ಆದ್ದರಿಂದ ಮಿಂಟಿ ಅಗರ್ವಾಲ್ ಅವರಿಗೆ ಭಾರತ ಸರ್ಕಾರ ಯುಧ್ ಸೇವಾ ಪದಕ ನೀಡಿ ಗೌರವಿಸಿದೆ.

    ಫೆ.27ರಂದು ಕರ್ತವ್ಯದಲ್ಲಿದ್ದ 7 ಮಂದಿ ಫೈಟರ್ ವಿಮಾನ ನಿಯಂತ್ರಕರಲ್ಲಿ ಮಿಂಟಿ ಅರ್ಗವಾಲ್ ಅವರು ಕೂಡ ಒಬ್ಬರಾಗಿದ್ದರು. ಆಗ ಪಾಕಿಸ್ತಾನ ಜೆಟ್‍ಗಳನ್ನು ತಡೆಯಲು ಭಾರತೀಯ ವಾಯು ಸೇನೆ ಆರಂಭಿಸಿದ್ದ ಪ್ರತಿಬಂಧ ಪ್ಯಾಕೆಜ್‍ಗಳನ್ನು ಮಿಂಟಿ ಅವರು ನಿಯಂತ್ರಿಸುತ್ತಿದ್ದರು.

    ಈ ಬಗ್ಗೆ ಮಾತನಾಡಿದ ಮಿಂಟಿ ಅಗರ್ವಾಲ್ ಅವರು, ಫೆ.26 ಮತ್ತು 27ರಂದು ನಡೆದಿದ್ದ ಎರಡು ಕಾರ್ಯಾಚರಣೆಯಲ್ಲೂ ನಾನು ಭಾಗಿಯಾಗಿದ್ದೆನು. ಅಭಿನಂದನ್ ಅವರು ವಿಮಾನ ಹಾರಾಟ ನಡೆಸುತ್ತಿದ್ದಾಗ ಎರಡು ಕಡೆಯಿಂದಲೂ ಅವರು ನನ್ನ ಜೊತೆ ಸಂಪರ್ಕದಲ್ಲಿದ್ದರು. ಅಭಿನಂದನ್ ಅವರಿಗೆ ನಾನು ಪಾಕ್ ಗಡಿ ದಾಟುವ ಮುನ್ನ ವಾಪಸ್ ಬರಲು ಹೇಳಿದ್ದೆ. ಆದರೆ ಪಾಕಿಸ್ತಾನ ವಾಯು ಸೇನೆ ನಮ್ಮ ಕಮ್ಯೂನಿಕೇಶನ್ ಸಿಸ್ಟಮ್ ಅನ್ನು ಜ್ಯಾಮ್ ಮಾಡಿತ್ತು. ಆದ್ದರಿಂದ ನಾನು ನೀಡಿದ್ದ ಮಾರ್ಗದರ್ಶನ ಅವರಿಗೆ ಸಂವಹನ ಆಗಿರಲಿಲ್ಲ ಎಂದು ತಿಳಿಸಿದರು.

    ಅಭಿನಂದನ್ ಅವರು ಕಾರ್ಯಾಚರಣೆಯಲ್ಲಿ ಇದ್ದಾಗ ನಾನು ಅವರಿಗೆ ವೈರಿ ಜೆಟ್‍ಗಳ ಬಗ್ಗೆ ಮಾಹಿತಿ ತಿಳಿಸುತ್ತಿದ್ದೆ. ವೈರಿಗಳ ವಿಮಾನ ಚಟುವಟಿಕೆಗಳ ಬಗ್ಗೆ ನಾನು ನಮ್ಮ ಪೈಲಟ್ ಗಳಿಗೆ ಹೇಳುತ್ತಿದ್ದೆ. ಅಲ್ಲದೆ ಎಫ್-16 ವಿಮಾನವನ್ನು ಹೊಡೆದುರುಳಿಸಿದಾಗ ಆದ ಖುಷಿ ವ್ಯಕ್ತಪಡಿಸಲು ಆಗಲ್ಲ. ಹಾಗೆಯೇ ಏರ್‌ಸ್ಟ್ರೈಕ್ ನಲ್ಲಿ ನಮ್ಮವರನ್ನು ಕಳೆದುಕೊಳ್ಳದೆ ಸುರಕ್ಷಿತವಾಗಿ ಕಾರ್ಯಾಚರಣೆ ನಡೆಸಿದ್ದು ಹೆಮ್ಮೆಯ ವಿಷಯವಾಗಿದೆ. ಒಟ್ಟಿಗೆ ಎಲ್ಲಾ ವಿಮಾನಗಳನ್ನು ನಿಯಂತ್ರಣ ಮಾಡುವುದು ಕಷ್ಟದ ವಿಚಾರ, ಆದರೆ ನಮ್ಮ ತಂಡ ಅದನ್ನು ಮಾಡಿ ತೋರಿಸಿದೆ ಎಂದು ಅನುಭವವನ್ನು ಹಂಚಿಕೊಂಡರು.

    ವಾಯು ಪಡೆಗೆ ಸೇರಬೇಕು ಎಂದು ಚಿಕ್ಕ ವಯಸ್ಸಿನಿಂದಲೂ ನಾನು ಕನಸು ಕಂಡಿದ್ದೆನು ಅದು ನಿಜವಾಯಿತು. ವಾಸ್ತವ್ಯವಾಗಿ ನಡೆಯುವ ಕಾರ್ಯಾಚರಣೆಯಲ್ಲಿ ಭಾಗಿಯಾಗಬೇಕು ಎಂದು ಐಎಎಫ್ ಯೋಧರು ಆಸೆ ಪಡುತ್ತಾರೆ. ವಾಯು ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವುದು ತೃಪ್ತಿ ನೀಡಿದೆ. ಇದು ಕೇವಲ ಒಬ್ಬರ ಪರಿಶ್ರಮವಲ್ಲ. ಇದು ನಮ್ಮ ತಂಡದ ಪರಿಶ್ರಮ. ತಂಡದಲ್ಲಿ ಪ್ರತಿಯೊಬ್ಬರಿಗೂ ಒಂದೊಂದು ಜವಾಬ್ದಾರಿ ಇರುತ್ತದೆ. ಅದನ್ನು ನಾವು ಶ್ರದ್ಧೆಯಿಂದ ನಿರ್ವಹಿಸಿದೆವು ಎಂದು ಹೇಳಿದರು.