Tag: ಐಎಂಎ ಹಗರಣ

  • ಸಾಯೋ ಮುನ್ನ ಕುತ್ತಿಗೆ ನೋವಿನ ಪ್ಯಾಡ್ ಧರಿಸಿದ್ದ ವಿಜಯ್ ಶಂಕರ್

    ಸಾಯೋ ಮುನ್ನ ಕುತ್ತಿಗೆ ನೋವಿನ ಪ್ಯಾಡ್ ಧರಿಸಿದ್ದ ವಿಜಯ್ ಶಂಕರ್

    ಬೆಂಗಳೂರು: ಐಎಎಸ್ ಅಧಿಕಾರಿ ವಿಜಯ್‍ಶಂಕರ್ ಸಾವಿನ ಸುತ್ತ ಹಲವು ಅನುಮಾನಗಳು ಮೂಡುತ್ತಿವೆ. ಅಧಿಕಾರಿ ಆತ್ಮಹತ್ಯೆಗೂ ಮುನ್ನ ಕುತ್ತಿಗೆಗೆ ನೋವಿನ ಪ್ಯಾಡ್ ಧರಿಸಿದ್ದರು. ಗಟ್ಟಿಯಾಗಿದ್ದ ಪ್ಲಾಸ್ಟಿಕ್ ಪ್ಯಾಡ್ ಮೇಲೆ ಕುತ್ತಿಗೆ ಬಿಗಿದಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ. ಅಲ್ಲದೆ ಸಾವಿಗೂ ಮುನ್ನ ಡೆತ್ ನೋಟ್ ಬರೆದಿದ್ದಾರೆಯೇ ಎಂದು ರಾತ್ರಿ ಪೊಲೀಸರು ಸುದೀರ್ಘವಾಗಿ ಮೃತದೇಹದ ಪಂಚನಾಮೆ ನಡೆಸಿದ್ದಾರೆ.

    ಐಎಎಸ್ ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆಗೆ ಕಾರಣವೇನು?, ಐಎಂಎ ಹಗರಣದ ವಿಚಾರಣೆಗೆ ಹೆದರಿ ಸಾವಿಗೆ ಶರಣಾದ್ರಾ..? ಸಿಬಿಐ ತನಿಖೆಯಿಂದ ಬಂಧನದ ಭೀತಿ ಎದುರಾಗಿತ್ತಾ..?, ಬಂಧನ ಭೀತಿಯಲ್ಲಿ ವಿಜಯ್ ಶಂಕರ್ ಆತ್ಮಹತ್ಯೆಗೆ ಶರಣಾದ್ರಾ?, ಕೌಟುಂಬಿಕ ಕಲಹ, ವೈಯಕ್ತಿಕ ವಿಚಾರದಲ್ಲಿ ಖಿನ್ನತೆ ಒಳಗಾಗಿದ್ರಾ ಹೀಗೆ ವಿವಿಧ ಆಯಾಮಗಳಿಂದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

    ಮಧ್ಯರಾತ್ರಿ ವಿಕ್ಟೋರಿಯಾ ಶವಾಗಾರಕ್ಕೆ ಮೃತ ದೇಹ ರವಾನಿಸಲಾಗಿದ್ದು, ಇಂದು ಕೊರೊನಾ ಸ್ವಾಬ್ ಟೆಸ್ಟ್ ನಂತರ ಪೋಸ್ಟ್ ಮಾರ್ಟಮ್ ಮಾಡಲಾಗುತ್ತೆ. ಪೋಸ್ಟ್ ಮಾರ್ಟಮ್ ನಂತರ ಮೃತ ದೇಹವನ್ನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತೆ. ಬಹುಕೋಟಿ ಐಎಂಎ ಹಗರಣದಲ್ಲಿ ಜೈಲು ವಾಸ ಅನುಭವಿಸಿದ್ದ ಐಎಎಸ್ ಅಧಿಕಾರಿ ವಿಜಯ್‍ಶಂಕರ್ ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದರು.

    ಬೆಂಗಳೂರಿನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿಜಯ್ ಶಂಕರ್, 20 ದಿನಗಳ ಹಿಂದೆಯಷ್ಟೇ ಕೆಲಸಕ್ಕೆ ಮರಳಿದ್ದರು. ಬೆಳಗ್ಗೆ ಕಚೇರಿಯಲ್ಲಿ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೂ ಸಭೆ ನಡೆಸಿದ್ದು, ಲವಲವಿಕೆಯಿಂದಲೇ ಕೆಲಸ ಮಾಡಿದ್ದರು. ಮಧ್ಯಾಹ್ನ ಕಚೇರಿಯಿಂದ ತೆರಳಿದ್ದ ವಿಜಯ್ ಶಂಕರ್ ಸಂಜೆ ಖಿನ್ನತೆಗೆ ಒಳಗಾಗಿ ನೇಣಿಗೆ ಶರಣಾಗಿದ್ದಾರೆ.

    ಐಎಂಎ ಕೇಸ್‍ನಲ್ಲಿ ಮನ್ಸೂರ್ ಖಾನ್‍ನಿಂದ 1.5 ಕೋಟಿ ರೂ.ಪಡೆದ ಆರೋಪ ವಿಜಯ್ ಶಂಕರ್ ಮೇಲಿತ್ತು. ಈ ಬಗ್ಗೆ 3 ದಿನದ ಹಿಂದೆ ವಿಚಾರಣೆಗೆ ಹಾಜರಾಗಲು ಸಿಬಿಐ ನೋಟಿಸ್ ಕೂಡ ಕೊಟ್ಟಿತ್ತು. ಒಟ್ಟನಲ್ಲಿ ಬಂಧನ ಭೀತಿಯಿಂದ ವಿಜಯ್ ಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

  • ಐಎಎಸ್ ಅಧಿಕಾರಿಯಿಂದ 10 ಕೋಟಿ ರೂ. ಬೇಡಿಕೆ: ಮನ್ಸೂರ್ ಬಾಂಬ್

    ಐಎಎಸ್ ಅಧಿಕಾರಿಯಿಂದ 10 ಕೋಟಿ ರೂ. ಬೇಡಿಕೆ: ಮನ್ಸೂರ್ ಬಾಂಬ್

    – ಸಚಿವ ಜಮೀರ್ ಅಹ್ಮದ್‍ಗೆ ಧನ್ಯವಾದ ತಿಳಿಸಿದ ಆರೋಪಿ

    ಬೆಂಗಳೂರು: ಐಎಎಸ್ ಅಧಿಕಾರಿಯೊಬ್ಬರು  10 ಕೋಟಿ ರೂ. ಬೇಡಿಕೆ ಇಟ್ಟಿದ್ದರು ಎಂದು ಐಎಂಎ ಹಗರಣದ ಆರೋಪಿ ಮನ್ಸೂರ್ ಖಾನ್ ಸ್ಫೋಟಕ ಹೇಳಿಕೆ ನೀಡಿದ್ದಾನೆ.

    ಮನ್ಸೂರ್ ಖಾನ್ ಮಾತನಾಡುತ್ತಿರುವ ವಿಡಿಯೋ ರಿಲೀಸ್ ಆಗಿದ್ದು, ಈ ವಿಡಿಯೋದಲ್ಲಿ ಬ್ಯಾಂಕೇತರ ಹಣಕಾಸು ಸಂಸ್ಥೆಯೊಂದು ಐಎಂಎನಲ್ಲಿ ಹೂಡಿಕೆ ಮಾಡಲು ಮುಂದಾಗಿತ್ತು. ಈ ಸಂಬಂಧ ಪರವಾನಿಗೆ ನೀಡಲು ಐಎಎಸ್ ಅಧಿಕಾರಿಯೊಬ್ಬರು 10 ಕೋಟಿ ರೂ. ಬೇಡಿಕೆ ಇಟ್ಟಿದ್ದರು. ಹಣ ಕೊಡುವುದು ವಿಳಂಬವಾಗಿದ್ದಕ್ಕೆ ಪರವಾನಿಗೆ ಪತ್ರವನ್ನು ನೀಡಲಿಲ್ಲ ಎಂದು ತಿಳಿಸಿದ್ದಾನೆ.

    ನಾನು ಒಬ್ಬರನ್ನು ಭೇಟಿಯಾಗಬೇಕಿದೆ. ಟಿಕೆಟ್ ಬುಕ್ ಮಾಡಿಕೊಟ್ಟರೆ ಹೋಗಿ ಆ ವ್ಯಕ್ತಿಯನ್ನು ಭೇಟಿಯಾಗಿ ಭಾರತಕ್ಕೆ ಮರಳುತ್ತೇನೆ. ಇದಕ್ಕೆ ನೀವು ಸಹಾಯ ಮಾಡಬೇಕಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರಿಗೆ ಮನವಿ ಮಾಡಿಕೊಂಡಿದ್ದಾನೆ.

    ಸಚಿವ ಜಮೀರ್ ಅಹ್ಮದ್‍ಖಾನ್ ಅವರು ಹೇಳಿರುವ ಒಂದು ವಿಡಿಯೋವನ್ನು ನಾನು ನೋಡಿದ್ದೇನೆ. ನೀವು ವಾಪಸ್ ಬನ್ನಿ. ನಿಮ್ಮ ಬೆಂಬಲಕ್ಕೆ ನಾನು ಇರುವೆ ಎಂದು ಭರವಸೆ ನೀಡಿದ್ದಾರೆ. ಅವರನ್ನು ಹೊರತುಪಡಿಸಿ ನನ್ನ ಬೆಂಬಲಕ್ಕೆ ಯಾರೂ ನಿಲ್ಲಲಿಲ್ಲ. ಮುಜ್ಜಾಯಿದೀನ್ ಕೂಡ ನನ್ನ ಬೆಂಬಲಕ್ಕೆ ನಿಲ್ಲಲಿಲ್ಲ ಎಂದು ಹೇಳುವ ಮೂಲಕ ಮನ್ಸೂರ್ ಖಾನ್ ಸಚಿವರಿಗೆ ಧನ್ಯವಾದ ತಿಳಿಸಿದ್ದಾನೆ.

    ಹೂಡಿಕೆದಾರರ ಹಣ ಯಾರ ಬಳಿಯಿದೆ ಎನ್ನುವ ಪಟ್ಟಿ ನನ್ನ ಬಳಿಯಿದೆ. ಅವರ ಜೊತೆ ಬೇಕಾದರೆ ನೀವು ಹೋರಾಡಿ ಹಣ ಪಡೆದುಕೊಳ್ಳಿ. ನಾನು ಭಾರತಕ್ಕೆ ಬಂದರೆ ನನ್ನನ್ನು ಮುಗಿಸುವುದಕ್ಕೆ ಎಲ್ಲಾ ಪ್ಲಾನ್ ನಡೆದಿದೆ. ನನ್ನ ಮುಗಿಸುವುದಕ್ಕೂ ಮುನ್ನ ಎಲ್ಲಾ ಸಾಕ್ಷಾಧಾರಗಳನ್ನು ಅಧಿಕಾರಿಗಳ ಮುಂದಿಡುವೆ. ಹಣ ವಸೂಲಿಗೆ ನೀವೂ ನೀವಾಗಿಯೇ ಹೋರಾಡುತ್ತೀರೋ? ಅಧಿಕಾರಿಗಳಿಗಳ ಮೂಲಕ ಹೋರಾಡುತ್ತೀರೋ ನನಗೆ ಗೊತ್ತಿಲ್ಲ. ಅಲೋಕ್ ಕುಮಾರ್ ಸರ್ ನನಗೆ 2-3 ದಿನ ಕಾಲಾವಕಾಶ ಕೊಡಿ. ನಾನು ಮಾನಸಿಕವಾಗಿ ತಯಾರಾಗಿ ಬರುವೆ. ನೀವು ಯಾರ ಮುಂದೆ ಹೇಳುತ್ತೀರೋ ಅವರನ್ನು ಭೇಟಿಯಾಗುವೆ. ವಿಮಾನ ನಿಲ್ದಾಣದಲ್ಲಿ ಟಿಕೆಟ್ ತಗೆದುಕೊಳ್ಳಬೇಕೋ, ಬೇಡವೋ ಎನ್ನುವುದನ್ನು ನೀವೇ ಹೇಳಿ ಎಂದು ಮನ್ಸೂರ್ ಖಾನ್ ಹೇಳಿದ್ದಾನೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]