Tag: ಐಎಂಎ

  • ಐಎಂಎ ಬಹುಕೋಟಿ ವಂಚನೆ ಪ್ರಕರಣ- ಪ್ರಮುಖ ಆರೋಪಿ ಮನ್ಸೂರ್ ಖಾನ್‍ಗೆ ಜಾಮೀನು

    ಐಎಂಎ ಬಹುಕೋಟಿ ವಂಚನೆ ಪ್ರಕರಣ- ಪ್ರಮುಖ ಆರೋಪಿ ಮನ್ಸೂರ್ ಖಾನ್‍ಗೆ ಜಾಮೀನು

    – ಜಾಮೀನು ಸಿಕ್ಕರೂ ಇಲ್ಲ ಬಿಡುಗಡೆ ಭಾಗ್ಯ

    ಬೆಂಗಳೂರು: ಭಾರೀ ಸಂಚಲನ ಸೃಷ್ಟಿಸಿದ್ದ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮನ್ಸೂರ್ ಖಾನ್‍ಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಿದೆ.

    ಮನ್ಸೂರ್ ಖಾನ್ ವಿರುದ್ಧ ಇಡಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

    ಅಧೀನ ನ್ಯಾಯಾಲಯ ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು, ಯಾವುದೇ ಕಾರಣಕ್ಕೂ ಸಾಕ್ಷ್ಯ ನಾಶ ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಪ್ರಕರಣದ ವಿಚಾರಣೆ ಮುಗಿಯುವ ವರೆಗೆ ಆಸ್ತಿ ವಿಲೇವಾರಿ ಮಾಡುವಂತಿಲ್ಲ. 15 ದಿನಗಳಿಗೊಮ್ಮೆ ಇಡಿ ಕಚೇರಿಗೆ ಭೇಟಿ ನೀಡಿ ಸಹಿ ಹಾಕಬೇಕು. ಟ್ರಯಲ್ ಕೋರ್ಟ್ ಅನುಮತಿ ಇಲ್ಲದೆ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಹೋಗುವಂತಿಲ್ಲ ಎಂಬುದು ಸೇರಿದಂತೆ ಇತರ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

    ಈ ಮೂಲಕ ಬಂಧನವಾಗಿ 15 ತಿಂಗಳ ನಂತರ ಮನ್ಸೂರ್ ಖಾನ್‍ಗೆ ಜಾಮೀನು ಸಿಕ್ಕಂತಾಗಿದೆ. ಸದ್ಯ ಇಡಿ ದಾಖಲಿಸಿದ್ದ ಪ್ರಕರಣದಲ್ಲಿ ಮಾತ್ರ ಜಾಮೀನು ಸಿಕ್ಕಿದೆ. ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ಸಿಕ್ಕಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ಜಾಮೀನು ಸಿಕ್ಕರೂ ಮನ್ಸೂರ್ ಖಾನ್ ಗೆ ಬಿಡುಗಡೆಯ ಭಾಗ್ಯ ಇಲ್ಲದಂತಾಗಿದೆ.

    ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ಪ್ರಾಥಮಿಕ ತನಿಖೆ ನಡೆಸಲಾಗಿತ್ತು. ಜಾರಿ ನಿದೇಶನಾಲಯ(ಇಡಿ) ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಪ್ರಕರಣದ ಕುರಿತು ಸ್ಫೋಟಕ ಮಾಹಿತಿಯನ್ನು ಮನ್ಸೂರ್ ಬಾಯ್ಬಿಟ್ಟಿದ್ದ. 1000ಕ್ಕೂ ಹೆಚ್ಚು ಕೋಟಿ ಮೌಲ್ಯದ ವ್ಯವಹಾರದ ರಹಸ್ಯ ವಿವರವನ್ನು ಇಡಿ ಅಧಿಕಾರಿಗಳು ಪಡೆದಿದ್ದಾರೆ ಎನ್ನಲಾಗಿತ್ತು. ಅಲ್ಲದೆ ಕೆಲ ಪ್ರಭಾವಿಗಳ ಹೆಸರುಗಳನ್ನು ಕೂಡ ಮನ್ಸೂರ್ ಪ್ರಸ್ತಾಪಿಸಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿತ್ತು.

    ಗ್ರಾಹಕರಿಗೆ ವಂಚಿಸಿದ್ದು ಹೇಗೆ?
    ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು.’

    ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ ಕಳೆದ ಏಪ್ರಿಲ್, ಮೇ ತಿಂಗಳಿನಲ್ಲಿ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದ್ದರು.

  • ಭಾರತದಲ್ಲಿ ಕೊರೊನಾಗೆ 196 ವೈದ್ಯರ ಸಾವು – ಪ್ರಧಾನಿ ಮೋದಿಗೆ ಐಎಂಎ ಪತ್ರ

    ಭಾರತದಲ್ಲಿ ಕೊರೊನಾಗೆ 196 ವೈದ್ಯರ ಸಾವು – ಪ್ರಧಾನಿ ಮೋದಿಗೆ ಐಎಂಎ ಪತ್ರ

    ನವದೆಹಲಿ: ಕೊರೊನಾ ಸೋಂಕಿನಿಂದ ಈವರೆಗೂ ಭಾರತದಲ್ಲಿ 196 ವೈದ್ಯರು ಪ್ರಾಣ ಕಳೆದುಕೊಂಡಿದ್ದು, ಈ ವಿಚಾರದ ಬಗ್ಗೆ ಗಮನ ಹರಿಸುವಂತೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.

    ಐಎಂಎ ಬರೆದ ಪತ್ರದಲ್ಲಿ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ವೈದ್ಯರ ಸಾವುಗಳು ಹೆಚ್ಚುತ್ತಿರುವ ಬಗ್ಗೆ ಕಳವಳಗಳ ವ್ಯಕ್ತಪಡಿಸಲಾಗಿದೆ. ಕೊರೊನಾದಿಂದಾಗಿ ವೈದ್ಯರು ಸೋಂಕಿಗೆ ಒಳಗಾಗುವ ಮತ್ತು ಪ್ರಾಣ ಕಳೆದುಕೊಳ್ಳುವ ಪ್ರಕರಣಗಳು ಹೆಚ್ಚುತ್ತಿವೆ. ಅವರಲ್ಲಿ ಅನೇಕ ಸಾಮಾನ್ಯ ವೈದ್ಯರಿದ್ದಾರೆ ಎಂದು ಬೇಸರ ವ್ಯಕ್ತಪಡಿಸಲಾಗಿದೆ.

    ಐಎಂಎ ದೇಶಾದ್ಯಂತ 3.5 ಲಕ್ಷ ವೈದ್ಯರನ್ನು ಪ್ರತಿನಿಧಿಸುತ್ತದೆ, ಅವರು ಕೈಗೆಟುಕುವ ಆರೋಗ್ಯ ಸೇವೆ ಒದಗಿಸುತ್ತಿದ್ದಾರೆ. ಇದರಲ್ಲಿ ಸರ್ಕಾರಿ ಮತ್ತು ಖಾಸಗಿ ವಲಯದ ನಡುವೆ ವ್ಯತ್ಯಾಸವನ್ನು ತೋರಿಸುವುದಿಲ್ಲ. ಈವರೆಗೂ ಭಾರತದಲ್ಲಿ 196 ವೈದ್ಯರನ್ನು ಕಳೆದುಕೊಂಡಿದ್ದೇವೆ, ವೈದ್ಯರು ಮತ್ತು ಅವರ ಕುಟುಂಬಗಳಿಗೆ ಕೊರೊನಾ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗುತ್ತಿಲ್ಲ ಎಂದು ವರದಿಯಾಗುತ್ತಿದೆ ಚಿಕಿತ್ಸೆಯ ಕೊರತೆಯಿಂದ ವೈದ್ಯರು ಸಾವನ್ನಪ್ಪುತ್ತಿರುವುದು ಕಳವಳಕಾರಿ ಎಂದು ಉಲ್ಲೇಖಿಸಲಾಗಿದೆ.

    ಹೀಗಾಗಿ ವಿಶೇಷ ಅಪಾಯದ ಗುಂಪಿನ ವೈದ್ಯರು ಮತ್ತು ಅವರ ಕುಟುಂಬಗಳಿಗೆ ಸಮರ್ಪಕ ಆರೋಗ್ಯ ಸೌಲಭ್ಯಗಳನ್ನು ಒದಗಿಸುವಂತೆ ನೋಡಿಕೊಳ್ಳಬೇಕು, ವೈದ್ಯರ ಜೀವ ಉಳಿಸುವುದರಿಂದ ಸಾವಿರಾರು ಜನರ ಪ್ರಾಣ ಉಳಿಸಬಹುದು ಎಂದು ಐಎಂಎ ಪತ್ರದ ಮೂಲಕ ಮನವಿ ಮಾಡಿದೆ.

  • ಐಎಂಎ ಬಳಿಕ ಭಾರತದಲ್ಲಿ ಕೊರೊನಾ ಸಮುದಾಯಕ್ಕೆ ಹಬ್ಬಿದೆ ಎಂದ ಮತ್ತೊಬ್ಬ ತಜ್ಞ

    ಐಎಂಎ ಬಳಿಕ ಭಾರತದಲ್ಲಿ ಕೊರೊನಾ ಸಮುದಾಯಕ್ಕೆ ಹಬ್ಬಿದೆ ಎಂದ ಮತ್ತೊಬ್ಬ ತಜ್ಞ

    ನವದೆಹಲಿ: ಭಾರತೀಯ ವೈದ್ಯಕೀಯ ಸಂಸ್ಥೆ(ಐಎಂಎ) ದೇಶದಲ್ಲಿ ಕೊರೊನಾ ಸಮುದಾಯ ಮಟ್ಟಕ್ಕೆ ಹಬ್ಬಿದೆ ಎಂದು ಎಚ್ಚರಿಸಿದ ಬೆನ್ನಲ್ಲೇ ಇದೀಗ ಸರ್ ಗಂಗಾರಾಮ್ ಆಸ್ಪತ್ರೆಯ ತಜ್ಞರೊಬ್ಬರು ಸಮುದಾಯಕ್ಕೆ ಹಬ್ಬಿರುವ ಕುರಿತು ತಿಳಿಸಿದ್ದಾರೆ.

    ಐಎಂಎ ವರದಿ ಬಳಿಕ ಈ ಕುರಿತು ಪ್ರತಿಕ್ರಿಯಿಸಿರುವ ಸರ್ ಗಂಗಾರಾಮ್ ಆಸ್ಪತ್ರೆಯ ಚೆಸ್ಟ್ ಸರ್ಜರಿ ಕೇಂದ್ರದ ಅಧ್ಯಕ್ಷ ಡಾ.ಅರವಿಂದ್ ಕುಮಾರ್, ಆರಂಭದಲ್ಲಿ ಸಮುದಾಯ ಹರಡುವಿಕೆ ಧಾರಾವಿ ಹಾಗೂ ದೆಹಲಿಯ ಹಲವು ಭಾಗಗಳಲ್ಲಿ ಅಂದರೆ ಸ್ಥಳೀಯ ಮಟ್ಟದಲ್ಲಿ ಮಾತ್ರ ಇತ್ತು. ಆದರೆ ಇದೀಗ ಅದು ಎಲ್ಲೆಡೆ ವ್ಯಾಪಿಸಿದೆ ಎಂದು ಹೇಳಿದ್ದಾರೆ.

    ಭಾರತದಲ್ಲಿ ಕೊರೊನಾ ಸಮುದಾಯಕ್ಕೆ ಹರಡಿದೆ ಎಂಬ ಐಎಂಎ ವರದಿಯನ್ನು ನಾನು ಶೇ.100ರಷ್ಟು ಒಪ್ಪುತ್ತೇನೆ. ಅಲ್ಲದೆ ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವುದನ್ನು ನೋಡಿದರೆ ಇದು ಆಶ್ಚರ್ಯವೂ ಅಲ್ಲ. ಎಲ್ಲರೂ ಕಣ್ಣಾರೆ ನೋಡುತ್ತಿರುವುದನ್ನು ಐಎಂಎ ಬಹಿರಂಗವಾಗಿ ಹೇಳಿದೆ. ದೇಶದಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವುದು ಮಾರಣಾಂತಿಕ ವೈರಸ್ ಸಮುದಾಯಕ್ಕೆ ಹರಡಿರುವ ಕುರಿತ ಫಲಿತಾಂಶವಾಗಿದೆ ಎಂದು ಅರವಿಂದ್ ಕುಮಾರ್ ತಿಳಿಸಿದ್ದಾರೆ.

    ಅಲ್ಲದೆ ಐಎಂಎ ಆಸ್ಪತ್ರೆಗಳ ಮಂಡಳಿಯ ಅಧ್ಯಕ್ಷ ಡಾ.ವಿ.ಕೆ.ಮೊಂಗಾ ಅವರು ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿ, ಇದೀಗ ಕೊರೊನಾ ಭಾರೀ ಪ್ರಮಾಣದಲ್ಲಿ ಬೆಳೆದಿದೆ. ಪ್ರತಿ ದಿನ ಸುಮಾರು 30 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿವೆ. ನಿಜವಾಗಿಯೂ ರಾಷ್ಟ್ರಕ್ಕೆ ಇದು ಕೆಟ್ಟ ಪರಿಸ್ಥಿತಿಯಾಗಿದೆ. ಗ್ರಾಮೀಣ ಪ್ರದೇಶಗಳಿಗೂ ಸೋಂಕು ಹಬ್ಬುತ್ತಿದೆ. ಇದು ಕೆಟ್ಟ ಸಂಕೇತ, ಇದೀಗ ಸಮುದಾಯಕ್ಕೆ ಹಬ್ಬಿರುವುದನ್ನು ಇದು ತೋರಿಸುತ್ತಿದೆ ಎಂದು ಡಾ.ಮೊಂಗಾ ಕಳವಳ ವ್ಯಕ್ತಪಡಿಸಿದ್ದಾರೆ.

    ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 38902 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10.77 ಲಕ್ಷಕ್ಕೆ ಏರಿಕೆಯಾಗಿದೆ. ಇದರಲ್ಲಿ 677422 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 373379 ಸಕ್ರಿಯ ಪ್ರಕರಣಗಳಿವೆ. ಅಲ್ಲದೆ ಕೊರೊನಾಗೆ ಸಂಬಂಧಿಸಿದ 543 ಜನ ಸೇರಿ ಒಟ್ಟು 26816 ಜನ ಕಳೆದ 24 ಗಂಟೆಗಳಲ್ಲಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಪಷ್ಟಪಡಿಸಿದೆ.

  • ವಿಜಯ್‌ ಶಂಕರ್‌ ಆತ್ಮಹತ್ಯೆ – ಸೂಸೈಡ್‌ಗೆ ಕಾರಣ ಏನು?

    ವಿಜಯ್‌ ಶಂಕರ್‌ ಆತ್ಮಹತ್ಯೆ – ಸೂಸೈಡ್‌ಗೆ ಕಾರಣ ಏನು?

    ಬೆಂಗಳೂರು: ಐಎಎಸ್ ಅಧಿಕಾರಿ ವಿಜಯ್‍ಶಂಕರ್ ಆತ್ಮಹತ್ಯೆಗೆ ನಿಜವಾದ ಕಾರಣ ಏನು ಎನ್ನವುದು ತಿಳಿದಿಲ್ಲ. ಆದರೆ ಐಎಂಎ ಹಗರಣ ಬೆಳಕಿಗೆ ಬಂದ ನಂತರ ಅವರು ಮಾನಸಿಕವಾಗಿ ನೊಂದಿದ್ದರು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ.

    ಐಎಂಎ ಹಗರಣದ ಸಂಬಂಧ ಸಿಬಿಐ ವಿಜಯ್ ಶಂಕರ್ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ನೀಡುವಂತೆ ಜೂನ್ 6 ರಂದು ಸಿಬಿಐ ಸರ್ಕಾರಕ್ಕೆ ಪತ್ರ ಬರೆದಿತ್ತು. ತನಿಖೆಯಲ್ಲಿ ಸಾಕಷ್ಟು ಮಾಹಿತಿಗಳು ಹೊರ ಬಂದಿವೆ. ಆರೋಪಿ ಸ್ಥಾನದಲ್ಲಿ ಇರುವ ವಿಜಯ್ ಶಂಕರ್ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಬೇಕು. ಅಲ್ಲದೆ ಆರೋಪಿ ವಿಜಯ್ ಶಂಕರ್‌ಗೆ ಸರ್ಕಾರ ಯಾವುದೇ ಸಹಾಯ ಮಾಡಬಾರದು ಎಂದು ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ಸಿಬಿಐ ಎಸ್‍ಪಿ ಶೇಪಸ್ ಕಲ್ಯಾಣ್ ಪತ್ರ ಬರೆದಿದ್ದರು.

    ಎಸ್‌ಪಿ ಬರೆದ ಪತ್ರಕ್ಕೆ ಜೂನ್‌ 8 ರಂದೇ ವಿಜಯ್‌ ಭಾಸ್ಕರ್‌ ಅನುಮತಿ ನೀಡಿದ್ದರು. ಇಲಾಖಾ ತನಿಖೆ ಮಾಡಲು ಸೂಕ್ತ ಪ್ರಕರಣ. ಈ ಸಂಬಂಧ ಕ್ರಮಕೈಗೊಳ್ಳಿ ಎಂದು ಸಂಬಂಧಪಟ್ಟ ಇಲಾಖೆಗೆ ಪತ್ರವನ್ನು ರವಾನಿಸಲಾಗಿತ್ತು.

    ಇಲಾಖಾ ಮಟ್ಟದ ತನಿಖೆಗೆ ಸರ್ಕಾರದ ಗ್ರೀನ್ ಸಿಗ್ನಲ್ ನೀಡಿದ್ದು ನಿವೃತ್ತಿಯ ಅಂಚಿನಲ್ಲಿ ಇದ್ದ ವಿಜಯ್ ಶಂಕರ್ ಗೆ ಇದು ಬಿಸಿ ತುಪ್ಪ ಆಗಿತ್ತು. ನಿವೃತ್ತಿಯ ಸಂದರ್ಭದಲ್ಲಿ ವಿಚಾರಣೆ ಮಾತ್ರ ಅಲ್ಲದೇ ಇಲಾಖೆ ಆರಂಭವಾದರೆ ಬಹಳ ಕಷ್ಟ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

    ವಿಶೇಷ ತನಿಖಾ ತಂಡ ಬಂಧಿಸಿ ಕೆಳ ನ್ಯಾಯಾಲಯದಲ್ಲಿ ಜಾಮೀನು ಸಿಗದೇ ಇದ್ದಾಗ ವಿಜಯ್‌ ಶಂಕರ್‌ ಕಣ್ಣೀರಿಟ್ಟಿದ್ದರು. ಜಿಲ್ಲಾಧಿಕಾರಿಯಾಗಿದ್ದಾಗ ಅಕ್ರಮ ಒತ್ತುವರಿ ಜಾಗಗಗಳನ್ನು ವಶ ಪಡಿಸಿ ಸರ್ಕಾರಕ್ಕೆ ಜಾಗ ನೀಡಿದ್ದಾಗ ಉತ್ತಮ ಹೆಸರು ಬಂದಿತ್ತು. ಈಗ ಮತ್ತೆ ಸಿಬಿಐ ವಿಚಾರಣೆ ಸರ್ಕಾರ ಅನುಮತಿ ನೀಡಿದ್ದರಿಂದ ವಿಜಯ್‌ ಶಂಕರ್‌ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಈ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎಂಬ ಪ್ರಶ್ನೆ ಎದ್ದಿದೆ.

    57 ವರ್ಷದ ವಿಜಯ್‌ ಶಂಕರ್‌ ನಿನ್ನೆ ಜಯನಗರದ ಟಿ ಬ್ಲಾಕ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಂಡ ಬಳಿಕ ಕೂಡಲೇ ಮರಣೋತ್ತರ ಪರೀಕ್ಷೆ ನಡೆಸದೇ ಗಂಟಲ ದ್ರವನ್ನು ಕೋವಿಡ್‌ 19 ಪರೀಕ್ಷೆಗೆ ಪಡೆಯಲಾಗಿತ್ತು. ಇಂದು ಮಧ್ಯಾಹ್ನ ಫಲಿತಾಂಶ ನೆಗೆಟಿವ್‌ ಬಂದಿದೆ.

    ತಂದೆ ಮೃತಪಟ್ಟ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಪುತ್ರಿ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನಡಿ ದೂರು ನೀಡಿದ್ದಾರೆ.

    ದೂರಿನಲ್ಲಿ ಏನಿದೆ?
    ಐಎಂಎ ಪ್ರಕರಣದಿಂದ ತಂದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಸಿಬಿಐ ತನಿಖೆ, ಪ್ರಾಸಿಕ್ಯೂಷನ್ ಬಗ್ಗೆ ಮಾನಸಿಕ ಘಾಸಿಗೆ ಒಳಗಾಗಿದ್ದರು. ಮಂಗಳವಾರ ಮಧ್ಯಾಹ್ನ ಮನೆಗೆ ಬಂದ ಬಳಿಕ ಮಹಡಿ ಮೇಲೆ ಹೋಗಿದ್ದರು. ವಿಶ್ರಾಂತಿ ಪಡೆಯಲು ಹೋಗಿದ್ದಾರೆ ಎಂದು ನಾವು ಭಾವಿಸಿದ್ದೆವು. ಸಂಜೆ ಎಷ್ಟು ಹೊತ್ತಾದರೂ ಕೊಠಡಿಯಿಂದ ಹೊರ ಬಂದಿರಲಿಲ್ಲ.

    ಐಎಂಎ ಪ್ರಕರಣದಿಂದ ತಂದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಸಿಬಿಐ ತನಿಖೆ, ಪ್ರಾಸಿಕ್ಯೂಷನ್ ಬಗ್ಗೆ ಮಾನಸಿಕ ಘಾಸಿಗೆ ಒಳಗಾಗಿದ್ದರು. ಮಂಗಳವಾರ ಮಧ್ಯಾಹ್ನ ಮನೆಗೆ ಬಂದ ಬಳಿಕ ಮಹಡಿ ಮೇಲೆ ಹೋಗಿದ್ದರು. ವಿಶ್ರಾಂತಿ ಪಡೆಯಲು ಹೋಗಿದ್ದಾರೆ ಎಂದು ನಾವು ಭಾವಿಸಿದ್ದೆವು. ಸಂಜೆ ಎಷ್ಟು ಹೊತ್ತಾದರೂ ಕೊಠಡಿಯಿಂದ ಹೊರ ಬಂದಿರಲಿಲ್ಲ.

    ಕೊಠಡಿಯ ಬಾಗಿಲು ಬಡಿದರೂ ತಂದೆ ಡೋರ್ ತೆಗೆಯಲಿಲ್ಲ. ಹೀಗಾಗಿ ಡೋರ್ ಮುರಿದ ಒಳಗೆ ಹೋಗಿದ್ದೆವು. ಈ ವೇಳೆ ನೇಣು ಬಿಗಿದ ಸ್ಥಿತಿಯಲ್ಲಿ ತಂದೆ ಇದ್ದರು. ಕೂಡಲೇ ವೈದ್ಯರನ್ನು ಕರೆಸಿ ನೋಡುವಷ್ಟರಲ್ಲಿ ಪ್ರಾಣ ಹೋಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

  • `ವಿಶ್ರಾಂತಿಗೆ  ತೆರಳಿದ್ದ ತಂದೆ ಹೊರ ಬರಲಿಲ್ಲ, ಕೊಠಡಿಯ ಡೋರ್‌ ಬಡಿದರೂ ತೆಗೆಯಲಿಲ್ಲ’- ಪುತ್ರಿಯಿಂದ ದೂರು

    `ವಿಶ್ರಾಂತಿಗೆ ತೆರಳಿದ್ದ ತಂದೆ ಹೊರ ಬರಲಿಲ್ಲ, ಕೊಠಡಿಯ ಡೋರ್‌ ಬಡಿದರೂ ತೆಗೆಯಲಿಲ್ಲ’- ಪುತ್ರಿಯಿಂದ ದೂರು

    ಬೆಂಗಳೂರು: ತಂದೆ ಮೃತಪಟ್ಟ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಪುತ್ರಿ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನಡಿ ದೂರು ನೀಡಿದ್ದಾರೆ.

    ದೂರಿನಲ್ಲಿ ಏನಿದೆ?
    ಐಎಂಎ ಪ್ರಕರಣದಿಂದ ತಂದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಸಿಬಿಐ ತನಿಖೆ, ಪ್ರಾಸಿಕ್ಯೂಷನ್ ಬಗ್ಗೆ ಮಾನಸಿಕ ಘಾಸಿಗೆ ಒಳಗಾಗಿದ್ದರು. ಮಂಗಳವಾರ ಮಧ್ಯಾಹ್ನ ಮನೆಗೆ ಬಂದ ಬಳಿಕ ಮಹಡಿ ಮೇಲೆ ಹೋಗಿದ್ದರು. ವಿಶ್ರಾಂತಿ ಪಡೆಯಲು ಹೋಗಿದ್ದಾರೆ ಎಂದು ನಾವು ಭಾವಿಸಿದ್ದೆವು. ಸಂಜೆ ಎಷ್ಟು ಹೊತ್ತಾದರೂ ಕೊಠಡಿಯಿಂದ ಹೊರ ಬಂದಿರಲಿಲ್ಲ.

    ಕೊಠಡಿಯ ಬಾಗಿಲು ಬಡಿದರೂ ತಂದೆ ಡೋರ್ ತೆಗೆಯಲಿಲ್ಲ. ಹೀಗಾಗಿ ಡೋರ್ ಮುರಿದ ಒಳಗೆ ಹೋಗಿದ್ದೆವು. ಈ ವೇಳೆ ನೇಣು ಬಿಗಿದ ಸ್ಥಿತಿಯಲ್ಲಿ ತಂದೆ ಇದ್ದರು. ಕೂಡಲೇ ವೈದ್ಯರನ್ನು ಕರೆಸಿ ನೋಡುವಷ್ಟರಲ್ಲಿ ಪ್ರಾಣ ಹೋಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    57 ವರ್ಷದ ವಿಜಯ್‌ ಶಂಕರ್‌ ನಿನ್ನೆ ಜಯನಗರದ ಟಿ ಬ್ಲಾಕ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಂಡ ಬಳಿಕ ಕೂಡಲೇ ಮರಣೋತ್ತರ ಪರೀಕ್ಷೆ ನಡೆಸದೇ ಗಂಟಲ ದ್ರವನ್ನು ಕೋವಿಡ್‌ 19 ಪರೀಕ್ಷೆಗೆ ಪಡೆಯಲಾಗಿತ್ತು. ಇಂದು ಮಧ್ಯಾಹ್ನ ಫಲಿತಾಂಶ ನೆಗೆಟಿವ್‌ ಬಂದಿದೆ.

    ಈಗ ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ನಡೆಸಲು ದೇಹವನ್ನು ತರಲಾಗಿದೆ. ಪರೀಕ್ಷೆ ಪೂರ್ಣಗೊಂಡ ಬಳಿಕ ಮೃತದೇಹವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರ ಮಾಡಲಾಗುತ್ತದೆ.

  • IMA ಹಗರಣ- ಅಮಾನತಾಗಿದ್ದ IAS ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ

    IMA ಹಗರಣ- ಅಮಾನತಾಗಿದ್ದ IAS ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ

    -SITಯಿಂದ ಬಂಧನಕ್ಕೊಳಗಾಗಿದ್ದ ವಿಜಯ್ ಶಂಕರ್

    ಬೆಂಗಳೂರು: ಐಎಂಎ ಹಗರಣ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

    2019 ಜುಲೈ 8ರಂದು ಎಸ್‍ಐಟಿ ಲಂಚ ಪಡೆದ ಆರೋಪದಲ್ಲಿ ವಿಜಯ್ ಶಂಕರ್ ಅವರನ್ನ ಬಂಧಿಸಿತ್ತು. ಇದಕ್ಕೂ ಮೊದಲ ಬಂಧನಕ್ಕೊಳಗಾಗಿದ್ದ  ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ಹೇಳಿಕೆ ಆಧಾರದ ಮೇಲೆ ಬಂಧಿಸಲಾಗಿತ್ತು.

    ಪ್ರಕರಣದಲ್ಲಿ ಜಾಮೀನು ಪಡೆದ ವಿಜಯ್ ಶಂಕರ್ ಹೊರ ಬಂಧಿದ್ದರು. ಇದೀಗ ಜಯನಗರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಬೆಂಗಳೂರಿನ ಜಿಲ್ಲಾಧಿಕಾರಿಯಾಗಿದ್ದ ವಿಜಯ್ ಶಂಕರ್ ಹೆಸರು ಐಎಂಎ ಹಗರಣದಲ್ಲಿ ಕೇಳಿ ಬಂದಿತ್ತು.

  • ಐಎಂಎ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೌಲ್ವಿಗೆ ಅದ್ದೂರಿ ಸನ್ಮಾನ

    ಐಎಂಎ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೌಲ್ವಿಗೆ ಅದ್ದೂರಿ ಸನ್ಮಾನ

    ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನಿನ ಮೇಲೆ ಬಿಡುಗಡೆಯಾದ ಮೌಲ್ವಿಗೆ ಅದ್ದೂರಿಯಾಗಿ ಸನ್ಮಾನ ಮಾಡಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಆರ್.ಟಿ.ನಗರ ಮೂಲದ ಮೌಲ್ವಿ ಅಫ್ಸರ್ ಹನೀಜ್ ಮನ್ಸೂರ್ ಖಾನ್‍ನಿಂದ ಮೂರು ಕೋಟಿ ರೂ. ಮೌಲ್ಯದ ಬಂಗಲೆ ಪಡೆದುಕೊಂಡಿದ್ದ. ಬಂಗಲೆ ಪಡೆದಿದ್ದರಿಂದ ತನ್ನ ಸಮುದಾಯದವರಿಗೆ ಐಎಂಎನಲ್ಲಿ ಹೂಡಿಕೆ ಮಾಡುವಂತೆ ಪ್ರೇರಣೆ ನೀಡುತ್ತಿದ್ದ. ಮಸೀದಿಯಲ್ಲಿ ಪ್ರಾರ್ಥನೆಗೆ ಬಂದ ವೇಳೆ ಪ್ರೇರೇಪಣೆ ನೀಡಿ ಹೂಡಿಕೆ ಮಾಡುವಂತೆ ಸೂಚನೆ ನೀಡುತ್ತಿದ್ದ. ಈ ಹಿನ್ನೆಲೆ ಸೆಪ್ಟೆಂಬರ್ ನಲ್ಲಿ ಎಸ್‍ಐಟಿ ಅಧಿಕಾರಿಗಳು ಮೌಲ್ವಿಯನ್ನು ಬಂಧಿಸಿದ್ದರು.

    ಆರೋಪಿ ಅಫ್ಸರ್ ಹನೀಜ್ ಎರಡು ದಿನಗಳ ಹಿಂದೆ ಸಿಬಿಐ ವಿಶೇಷ ನ್ಯಾಯಾಲಯದಿಂದ ಜಾಮೀನು ದೊರೆತು ಜೈಲಿನಿಂದ ಹೊರ ಬಂದಿದ್ದ. ಶಿವಾಜಿನಗರದ ಓಪಿಎಚ್ ರಸ್ತೆಯ ಬೇಪಾರಿಯನ್ ಮಸೀದಿಯಲ್ಲಿ ಬುಧವಾರ ಅಫ್ಸರ್ ಹನೀಜ್‍ಗೆ ಅದ್ದೂರಿಯಾಗಿ ಸನ್ಮಾನ ಮಾಡಲಾಗಿದೆ. ಮೌಲ್ವಿಯ ಸನ್ಮಾನದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ.

    ಈ ಹಿಂದೆ ಮಾಜಿ ಸಚಿವ ಜಮೀರ್ ಅಹ್ಮದ್ ಹಾಗೂ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಅವರು ಐಎಂಎ ಬಹು ಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಯ ಜೊತೆಗೆ ಪಾರ್ಟಿ ಮಾಡಿದ್ದರು. ಐಎಂಎ ಪ್ರಕರಣದಲ್ಲಿ ಜೈಲು ಸೇರಿದ್ದ ಮುಜಾಹಿದ್ದೀನ್ ಅಕ್ಟೋಬರ್ 13ರಂದು ಜಾಮೀನಿನ ಆಧಾರದ ಮೇಲೆ ಹೊರ ಬಂದಿದ್ದ. ಅಂದು ರಾತ್ರಿ ಮಾಜಿ ಸಚಿವ ಜಮೀರ್ ಅಹ್ಮದ್ ಅವರು ಮುಜಾಹಿದ್ದೀನ್ ಜೊತೆಗೆ ಪಾರ್ಟಿ ಮಾಡಿದ್ದರು.

    ಐಎಂಎ ಪ್ರಕರಣದಲ್ಲಿ ಮುಖ್ಯ ಆರೋಪಿ ಆಗಿರುವ ಐಎಂಎ ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನ್ ಪರಾರಿಯಾಗಲು ಮುಜಾಹಿದ್ದೀನ್ ಸಹಾಯ ಮಾಡಿದ್ದ. ಈ ಹಿನ್ನೆಲೆಯಲ್ಲಿ ಮುಜಾಹಿದ್ದೀನ್ ಮೇಲೆ ಎಸ್‍ಐಟಿ ರೇಡ್ ಮಾಡಿ ಅರೆಸ್ಟ್ ಮಾಡಿತ್ತು. ಆದರೆ ಅಕ್ಟೋಬರ್ 11ರಂದು ಮುಜಾಹಿದ್ದೀನ್‍ಗೆ ಹೈಕೋರ್ಟ್ ಏಕಸದಸ್ಯ ಪೀಠವು ಜಾಮೀನು ನೀಡಿತ್ತು. ಅಕ್ಟೋಬರ್ 13ರಂದು ಮುಜಾಹಿದ್ದೀನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಜೈಲಿನ ಹೊರಗೆ ನಿಂತಿದ್ದ ಬೆಂಬಲಿಗರು ಪಟಾಕಿ ಸಿಡಿಸಿ, ಹಾರ ಹಾಕಿ ಸ್ವಾಗತಿಸಿದ್ದರು.

    ಗ್ರಾಹಕರಿಗೆ ವಂಚಿಸಿದ್ದು ಹೇಗೆ?
    ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು.

    ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದ್ದರು.

  • ಶಿವಾಜಿನಗರ ಉಪ ಚುನಾವಣೆಯಲ್ಲಿ ಐಎಂಎ ಸದ್ದು- ಹೂಡಿಕೆದಾರರಿಂದ ಅಸ್ತ್ರ ಪ್ರಯೋಗ

    ಶಿವಾಜಿನಗರ ಉಪ ಚುನಾವಣೆಯಲ್ಲಿ ಐಎಂಎ ಸದ್ದು- ಹೂಡಿಕೆದಾರರಿಂದ ಅಸ್ತ್ರ ಪ್ರಯೋಗ

    ಬೆಂಗಳೂರು: ಶಿವಾಜಿನಗರ ಉಪ ಚುನಾವಣೆಯಲ್ಲಿ ಐಎಂಎ ಹಗರಣ ಸದ್ದು ಮಾಡುತ್ತಿದ್ದು, ಹೂಡಿಕೆದಾರರು ಎಲೆಕ್ಷನ್ ನಲ್ಲಿ ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ.

    ಎಲ್ಲಾ ಪಕ್ಷಗಳ ಮುಖಂಡರುಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ರಣತಂತ್ರ ಹೆಣೆಯುತ್ತಿದ್ದಾರೆ. ಉಪಚುನಾವಣೆ ರಂಗು ಪಡೆದುಕೊಂಡಿರುವ ಶಿವಾಜಿ ನಗರದಲ್ಲಿ ಜನರ ಆಕ್ರೋಶ ಕಟ್ಟೆಯೊಡೆದಿದ್ದು, ಅಭ್ಯರ್ಥಿಗಳ ವಿರುದ್ಧ ಸಿಡಿದೆದಿದ್ದಾರೆ. ಕಳೆದ ಆರೇಳು ತಿಂಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಐಎಂಎ ಪ್ರಕರಣ ಈಗ ಮತ್ತೆ ಸದ್ದು ಮಾಡುತ್ತಿದೆ.

    ಈ ಪ್ರಕರಣದಲ್ಲಿ ಮೋಸಕ್ಕೆ ಒಳಗಾದ ಹೂಡಿಕೆದಾರರಿಗೆ ಇದುವರೆಗೂ ಯಾವ ಸರ್ಕಾರ ಹಾಗೂ ಯಾವೊಬ್ಬ ಅಭ್ಯರ್ಥಿಗಳು ನ್ಯಾಯ ಕೊಡಿಸಿಲ್ಲ. ನಮಗೆ ಅನ್ಯಾಯವಾಗಿದೆ. ಹೀಗಾಗಿ ಕೆಲ ಮತದಾರರು ಈ ಸಲ ನಮ್ಮ ವೋಟ್ ನೋಟಾಗೆ ಅಂದರೆ, ಮತ್ತೇ ಕೆಲವರು ನಮಗೆ ಎಲೆಕ್ಷನ್ ಬೇಡ ಯಾರಿಗೂ ವೋಟ್ ಹಾಕಲ್ಲ ಎಂದು ಹೇಳುತ್ತಿದ್ದಾರೆ.

    ಐಎಂಎನಲ್ಲಿ ಸುಮಾರು 63 ಸಾವಿರಕ್ಕೂ ಹೆಚ್ಚು ಹೂಡಿಕೆದಾರರಿದ್ದು, ಇವರಲ್ಲಿ ಅತಿ ಹೆಚ್ಚು ಶಿವಾಜಿನಗರದ ಸ್ಥಳೀಯರೇ ಇದ್ದಾರೆ. ಅದರಲ್ಲೂ ಶೇಕಡ 60 ರಿಂದ 70ರಷ್ಟು ಮುಸ್ಲಿಂ ಸಮುದಾಯದವರೇ ಹೆಚ್ಚು ಹೂಡಿಕೆ ಮಾಡಿದ್ದಾರೆ. ಹೀಗಾಗಿ ಶಿವಾಜಿನಗರದ ಅಭ್ಯರ್ಥಿಗಳಿಗೆ ಐಎಂಎ ದೊಡ್ಡ ತಲೆ ಬಿಸಿಯಾಗಿದೆ. ಇನ್ನೂ ಕೆಲವರು ಐಎಂಎ ಆಸ್ತ್ರವನ್ನ ಪ್ರಣಾಳಿಕೆಯನ್ನಾಗಿಸಿಕೊಂಡು ಮತ ಪಡೆಯಲು ಮುಂದಾಗಿದ್ದಾರೆ. ಉಪಚುನಾವಣೆಯ ಮತದಾನಕ್ಕೆ ಎರಡು ದಿನಗಳಿವೆ. ಈ ಬೆನ್ನಲ್ಲೆ ಐಎಂಎ ನಲ್ಲಿ ಹಣ ಹೂಡಿದ ಜನರು ಚುನಾವಣೆಯಲ್ಲಿ ‘ನೋಟಾ’ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ.

  • ಐಎಂಎ ವಂಚನೆ ಪ್ರಕರಣ: 200 ಕೋಟಿಯ ಫಾರ್ಮ್ ಹೌಸ್, ಬಂಗಲೆಗಳು ಪತ್ತೆ!

    ಐಎಂಎ ವಂಚನೆ ಪ್ರಕರಣ: 200 ಕೋಟಿಯ ಫಾರ್ಮ್ ಹೌಸ್, ಬಂಗಲೆಗಳು ಪತ್ತೆ!

    ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳಿಗೆ ಈಗ ನಡುಕ ಶುರುವಾಗಿದೆ.

    ಐಎಂಎ ಬಗ್ಗೆ ವಿಚಾರಣೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೇರಿ 13 ಮಂದಿಯ ಮೇಲೆ ಎಫ್‍ಐಆರ್ ಮೇಲೆ ದಾಖಲು ಮಾಡಿದ್ದಾರೆ. ಸಿಬಿಐ ಅಧಿಕಾರಿಗಳು ಡಿಸಿ ವಿಜಯ್ ಶಂಕರ್ ಮನೆ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಬೇನಾಮಿ ಆಸ್ತಿ ಪತ್ರ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

    ಬೇನಾಮಿ ಆಸ್ತಿಯ ಹುಡುಕಿ ಹೊರಟ ಸಿಬಿಐ ಅಧಿಕಾರಿಗಳಿಗೆ ಶಾಕ್ ದೊರೆತಿದ್ದು, ಚಿತ್ತೂರಿನಲ್ಲಿ ಬೇನಾಮಿ ಪ್ರಾಪರ್ಟಿ ಪತ್ತೆಯಾಗಿದೆ. ಅಲ್ಲದೆ 200 ಕೋಟಿಯ ಫಾರ್ಮ್ ಹೌಸ್, ಬಂಗಲೆಗಳು ಕೂಡ ಪತ್ತೆಯಾಗಿದೆ.

    ಡಿಸಿಪಿ ಮನೆಯಲ್ಲಿ ಐಎಂಎಗೆ ಸಂಬಂಧಿಸಿದ ಡೈರಿ ಕೂಡ ಸಿಕ್ಕಿದೆ ಎನ್ನುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಡೈರಿಯಲ್ಲಿ ಎಂಬತ್ತೆರಡು ಕೋಟಿಯ ಡೀಲ್ ಕಹಾನಿ ಇದ್ದು, ಐಎಂಎಯಿಂದ ಆರು ಬಾರಿ ಪಡೆದ ಹಣದ ಲೆಕ್ಕಾಚಾರ ಬರೆದಿಡಲಾಗಿದೆ.

    ಇದೇ ರೀತಿ ಐಜಿ ಮನೆಯಲ್ಲೂ ಐಎಂಎ ಕಂಪೆನಿಯಿಂದ ಹಣ ಪಡೆದಿದ್ದ ದಾಖಲೆಗಳು ಪತ್ತೆಯಾಗಿದೆ. ಹಾಗಾಗಿ ಇದೀಗ 8 ಪೊಲೀಸ್ ಅಧಿಕಾರಿಗಳ ಮೇಲೆ ಸಿಬಿಐ ನೋಂದಣಿ ಪ್ರಮಾಣ ಪತ್ರ (ಆರ್ ಸಿ) ದಾಖಲಿಸಿಕೊಂಡಿದೆ.

    ಯಾರ ಮೇಲೆ ದಾಳಿ?
    ನವೆಂಬರ್ 8ರ ಶುಕ್ರವಾರದಂದು ಸಿಐಡಿ ಆರ್ಥಿಕ ಅಪರಾಧ ವಿಭಾಗದ ಐಜಿ ಹೇಮಂತ್ ನಿಂಬಾಳ್ಕರ್, ಸಿಐಡಿ ಪೊಲೀಸ್ ಉಪವರಿಷ್ಠಾಧಿಕಾರಿ ಇ.ಬಿ. ಶ್ರೀಧರ್, ಪೂರ್ವ ವಲಯ ಡಿಸಿಪಿ ಅಜಯ್ ಹಿಲೋರಿ, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣಾಧಿಕಾರಿ ಎಂ. ರಮೇಶ್, ಕಮರ್ಷಿಯಲ್ ಸ್ಟ್ರೀಟ್ ಠಾಣೆಯ ಉಪನಿರೀಕ್ಷಕ ಗೌರಿ ಶಂಕರ್, ಬೆಂಗಳೂರು ಉತ್ತರ ಉಪವಿಭಾಗದ ಎಸಿಪಿ ಹಾಗೂ ಕೆಪಿಐಡಿ ಕಾಯ್ದೆಯ ಅಧಿಕಾರಿ ಎಲ್.ಸಿ. ನಾಗರಾಜ್, ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ವಿಜಯ್ ಶಂಕರ್, ಉತ್ತರ ಉಪವಿಭಾಗದ ಲೆಕ್ಕಿಗ ಮಂಜುನಾಥ್, ಬಿಡಿಎ ಮುಖ್ಯ ಎಂಜಿನಿಯರ್ ಪಿಡಿ ಕುಮಾರ್, ಬೆಂಗಳೂರು ಉತ್ತರ ವಿಭಾಗದ ಲೆಕ್ಕಿಗ ಮಂಜುನಾಥ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು.

    ಅಜಯ್ ಹಿಲೋರಿ ಮೂಲತಃ ಉತ್ತರ ಪ್ರದೇಶದ ಮೀರತ್‍ನವರಾಗಿದ್ದು ಅವರ ಅಲ್ಲಿನ ನಿವಾಸದ ಮೇಲೆ ದಾಳಿ ನಡೆದಿದೆ. ದಾಳಿ ಮುಗಿಸಿ ಪಂಚನಾಮೆ ಮಾಡಿ ಸಿಬಿಐ ಅಧಿಕಾರಿಗಳು ತೆರಳಿದ್ದರು. ಸಿಬಿಐ ವಿಚಾರಣೆ ಸಮಯದಲ್ಲಿ ಐಎಂಐ ಮುಖ್ಯಸ್ಥ ಮನ್ಸೂರ್ ಖಾನ್ ಹೇಳಿಕೆಯ ಆಧಾರದ ಮೇಲೆ ಈ ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆದಿದೆ. ಸರ್ಕಾರಿ ಅಧಿಕಾರಿಗಳು ತನಿಖೆಯ ಸಂದರ್ಭದಲ್ಲಿ ಐಎಂಎ ಪರವಾಗಿ ವರದಿ ನೀಡಲು ಸಹಕರಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಸಿಬಿಐ ಹೇಳಿತ್ತು.

    ಯಾರ ಮೇಲೆ ಏನು ಆರೋಪ?
    ನಿಂಬಾಳ್ಕರ್- ಹಣ ಪಡದು ಕ್ಲೀನ್‍ಚಿಟ್ ಕೊಟ್ಟಿದ್ಧಾರೆ ಎಂಬ ಆರೋಪ
    ಅಜಯ್ ಹಿಲೋರಿ- ಪೂರ್ವ ವಲಯ ಡಿಸಿಪಿಯಾಗಿದ್ದಾಗ 20 ಕೋಟಿ ಹಣ 25 ಕೆಜಿ ಚಿನ್ನ ಪಡೆದಿದ್ದಾರೆಂಬ ಆರೋಪ
    ಶ್ರೀಧರ್- ಸಿಐಡಿಯಲ್ಲಿ ಕ್ಲೀನ್‍ಚಿಟ್ ಕೊಟ್ಟ ತನಿಖಾಧಿಕಾರಿ
    ಎಸಿಪಿ ರಮೇಶ್- ಪ್ರಕರಣ ದಾಖಲಿಸಿಕೊಳ್ಳದೇ ಪರವಾಗಿ ಕೆಲಸ ಮಾಡಿದ್ದು
    ರಮೇಶ್ – ಪ್ರಕರಣ ದಾಖಲಿಸಿಕೊಳ್ಳದೇ ಪರವಾಗಿ ಕೆಲಸ ಮಾಡಿದ್ದು

    ಗೌರಿಶಂಕರ್ – ಪ್ರಕರಣ ದಾಖಲಿಸಿಕೊಳ್ಳದೇ ಪರವಾಗಿ ಕೆಲಸ ಮಾಡಿದ್ದು
    ಎಸಿ ನಾಗರಾಜ್ – ಸರ್ಕಾರಿ ಇಲಾಖೆಯಲ್ಲಿ ಕ್ಲೀನ್‍ಚಿಟ್ ಕೊಡೊಕೆ 5 ಕೋಟಿ ಪಡೆದಿದ್ದಾರೆಂಬ ಆರೋಪ
    ವಿಜಯ್‍ಕುಮಾರ್ – 3 ಕೋಟಿ ಪಡೆದಿದ್ದಾರೆಂಬ ಆರೋಪ
    ಮಂಜುನಾಥ್ – 2 ಕೋಟಿ ಪಡೆದಿದ್ದಾರೆಂಬ ಆರೋಪ

  • ನಿಂಬಾಳ್ಕರ್, ಅಜಯ್ ಹಿಲೋರಿ ಸೇರಿ 9 ಮಂದಿಯ ಮೇಲೆ ಸಿಬಿಐ ದಾಳಿ

    ನಿಂಬಾಳ್ಕರ್, ಅಜಯ್ ಹಿಲೋರಿ ಸೇರಿ 9 ಮಂದಿಯ ಮೇಲೆ ಸಿಬಿಐ ದಾಳಿ

    ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿ ಸೇರಿದಂತೆ 9 ಮಂದಿ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದೆ.

    ಇಂದು ಬೆಳಗ್ಗೆಯೇ ಬೆಂಗಳೂರಿನ 11 ಕಡೆ, ಮಂಡ್ಯ, ರಾಮನಗರ ಮತ್ತು ಉತ್ತರ ಪ್ರದೇಶದ ಮೀರತ್ ನಗರದ ಒಂದೊಂದು ಕಡೆ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಕಲೆ ಹಾಕಿದ್ದಾರೆ.

    ಯಾರ ಮೇಲೆ ದಾಳಿ ನಡೆದಿದೆ?
    ಸಿಐಡಿ ಆರ್ಥಿಕ ಅಪರಾಧ ವಿಭಾಗದ ಐಜಿ ಹೇಮಂತ್ ನಿಂಬಾಳ್ಕರ್, ಸಿಐಡಿ ಪೊಲೀಸ್ ಉಪವರಿಷ್ಠಾಧಿಕಾರಿ ಇ.ಬಿ. ಶ್ರೀಧರ್, ಪೂರ್ವ ವಲಯ ಡಿಸಿಪಿ ಅಜಯ್ ಹಿಲೋರಿ, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣಾಧಿಕಾರಿ ಎಂ. ರಮೇಶ್, ಕಮರ್ಷಿಯಲ್ ಸ್ಟ್ರೀಟ್ ಠಾಣೆಯ ಉಪನಿರೀಕ್ಷಕ ಗೌರಿ ಶಂಕರ್, ಬೆಂಗಳೂರು ಉತ್ತರ ಉಪವಿಭಾಗದ ಎಸಿಪಿ ಹಾಗೂ ಕೆಪಿಐಡಿ ಕಾಯ್ದೆಯ ಅಧಿಕಾರಿ ಎಲ್.ಸಿ. ನಾಗರಾಜ್, ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ವಿಜಯ್ ಶಂಕರ್, ಉತ್ತರ ಉಪವಿಭಾಗದ ಲೆಕ್ಕಿಗ ಮಂಜುನಾಥ್, ಬಿಡಿಎ ಮುಖ್ಯ ಎಂಜಿನಿಯರ್ ಪಿಡಿ ಕುಮಾರ್, ಬೆಂಗಳೂರು ಉತ್ತರ ವಿಭಾಗದ ಲೆಕ್ಕಿಗ ಮಂಜುನಾಥ್ ನಿವಾಸದ ಮೇಲೆ ದಾಳಿ ನಡೆದಿದೆ.

    ಅಜಯ್ ಹಿಲೋರಿ ಮೂಲತಃ ಉತ್ತರ ಪ್ರದೇಶದ ಮೀರತ್‍ನವರಾಗಿದ್ದು ಅವರ ಅಲ್ಲಿನ ನಿವಾಸದ ಮೇಲೆ ದಾಳಿ ನಡೆದಿದೆ. ದಾಳಿ ಮುಗಿಸಿ ಪಂಚನಾಮೆ ಮಾಡಿ ಸಿಬಿಐ ಅಧಿಕಾರಿಗಳು ತೆರಳಿದ್ದಾರೆ. ಸಿಬಿಐ ವಿಚಾರಣೆ ಸಮಯದಲ್ಲಿ ಐಎಂಐ ಮುಖ್ಯಸ್ಥ ಮನ್ಸೂರ್ ಖಾನ್ ಹೇಳಿಕೆಯ ಆಧಾರದ ಮೇಲೆ ಈ ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆದಿದೆ.

    ಸರ್ಕಾರಿ ಅಧಿಕಾರಿಗಳು ತನಿಖೆಯ ಸಂದರ್ಭದಲ್ಲಿ ಐಎಂಎ ಪರವಾಗಿ ವರದಿ ನೀಡಲು ಸಹಕರಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಸಿಬಿಐ ಹೇಳಿದೆ.

    ಯಾರ ಮೇಲೆ ಏನು ಆರೋಪ?
    ನಿಂಬಾಳ್ಕರ್ – ಹಣ ಪಡದು ಕ್ಲೀನ್‍ಚಿಟ್ ಕೊಟ್ಟಿದ್ಧಾರೆ ಎಂಬ ಆರೋಪ
    ಅಜಯ್ ಹಿಲೋರಿ – ಪೂರ್ವ ವಲಯ ಡಿಸಿಪಿಯಾಗಿದ್ದಾಗ 20 ಕೋಟಿ ಹಣ 25 ಕೆಜಿ ಚಿನ್ನ ಪಡೆದಿದ್ದಾರೆಂಬ ಆರೋಪ
    ಶ್ರೀಧರ್ – ಸಿಐಡಿಯಲ್ಲಿ ಕ್ಲೀನ್‍ಚಿಟ್ ಕೊಟ್ಟ ತನಿಖಾಧಿಕಾರಿ
    ಎಸಿಪಿ ರಮೇಶ್ – ಪ್ರಕರಣ ದಾಖಲಿಸಿಕೊಳ್ಳದೇ ಪರವಾಗಿ ಕೆಲಸ ಮಾಡಿದ್ದು

    ರಮೇಶ್ – ಪ್ರಕರಣ ದಾಖಲಿಸಿಕೊಳ್ಳದೇ ಪರವಾಗಿ ಕೆಲಸ ಮಾಡಿದ್ದು
    ಗೌರಿಶಂಕರ್ – ಪ್ರಕರಣ ದಾಖಲಿಸಿಕೊಳ್ಳದೇ ಪರವಾಗಿ ಕೆಲಸ ಮಾಡಿದ್ದು
    ಎಸಿ ನಾಗರಾಜ್ – ಸರ್ಕಾರಿ ಇಲಾಖೆಯಲ್ಲಿ ಕ್ಲೀನ್‍ಚಿಟ್ ಕೊಡೊಕೆ 5 ಕೋಟಿ ಪಡೆದಿದ್ದಾರೆಂಬ ಆರೋಪ
    ವಿಜಯ್‍ಕುಮಾರ್ – 3 ಕೋಟಿ ಪಡೆದಿದ್ದಾರೆಂಬ ಆರೋಪ
    ಮಂಜುನಾಥ್ – 2 ಕೋಟಿ ಪಡೆದಿದ್ದಾರೆಂಬ ಆರೋಪ