Tag: ಐಎಂಎ

  • ಕೈಮುಗಿಯುತ್ತೇನೆ ಜನರ ಸಾಲ ತೀರಿಸಪ್ಪ – ಮನ್ಸೂರ್‌ಗೆ ಜಮೀರ್ ಮನವಿ

    ಕೈಮುಗಿಯುತ್ತೇನೆ ಜನರ ಸಾಲ ತೀರಿಸಪ್ಪ – ಮನ್ಸೂರ್‌ಗೆ ಜಮೀರ್ ಮನವಿ

    ಬೆಂಗಳೂರು: ಐಎಂಎ ವಂಚನೆ ಹಗರಣದ ಬಗ್ಗೆ ಶಾಸಕ ರೋಷನ್ ಬೇಗ್ ಅವರು ಪತ್ರಿಕಾ ಗೋಷ್ಠಿ ನಡೆಸಿದ ಬೆನ್ನಲ್ಲೇ ಸಚಿವ ಜಮೀರ್ ಅಹಮದ್ ಅವರು ಕೂಡ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ತಾನು ಸಂಸ್ಥೆಯೊಂದಿಗೆ ಯಾವುದೇ ಬೇನಾಮಿ ಹಣದ ವ್ಯವಹಾರ ನಡೆಸಿಲ್ಲ. ಎಲ್ಲವೂ ದಾಖಲೆ ಇಟ್ಟುಕೊಂಡೆ ವ್ಯವಹಾರ ನಡೆಸಿದ್ದಾಗಿ ಸಚಿವ ಜಮೀರ್ ಅಹಮದ್ ಸ್ಪಷ್ಟನೆ ನೀಡಿದ್ದಾರೆ.

    ನಾನು ಐಎಂಎ ಸಂಸ್ಥೆಯಿಂದ ಯಾವುದೇ ಸಾಲವನ್ನು ಪಡೆದುಕೊಂಡಿಲ್ಲ. ನನ್ನ ಆಸ್ತಿಯನ್ನ ಸಂಸ್ಥೆಗೆ ಸಂಪೂರ್ಣವಾಗಿ ಮಾರಾಟ ಮಾಡಿದ್ದೇನೆ. ಈ ಮಾರಾಟದ ವಿಚಾರವಾಗಿ ನಾನು ಸಂಸ್ಥೆಯಿಂದ 5 ಕೋಟಿ ರೂ. ಮುಂಗಡ ಹಣ ಪಡೆದಿದ್ದೇನೆ. 9 ಕೋಟಿ 38 ಲಕ್ಷ ರೂ.ಗೆ ಮಾರಾಟ ಮಾಡಿದ್ದೇನೆ. ಇದರ ತೆರಿಗೆಯನ್ನು ಕೂಡ ಸರ್ಕಾರಕ್ಕೆ ನಾನು ಪಾವತಿ ಮಾಡಿದ್ದು, ಯಾವುದೇ ರೀತಿಯಲ್ಲಿ ವಂಚನೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ಬಡ ಜನರು ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿದ್ದು, ಕೈಮುಗಿಯುತ್ತೇನೆ ಬಂದು ಜನರ ಸಾಲ ತೀರಿಸಪ್ಪ ಎಂದು ಮನವಿ ಮಾಡಿದರು.

    ಇಲ್ಲಿ ಯಾರೂ ಹರಿಶ್ಚಂದ್ರರು ಇಲ್ಲ, ಯಾವುದೇ ರೀತಿ ತಪ್ಪು ಮಾಡಿದ್ದರೆ ಅದನ್ನು ಒಪ್ಪಿಕೊಳ್ಳಬೇಕು. ಆದರೆ ನನ್ನ ವಿಚಾರದಲ್ಲಿ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಪ್ರಸಾರ ಆಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದೇನೆ. ನಾನು ರಿಚ್ಮಂಡ್ ಟೌನ್ ನಲ್ಲಿ ನನ್ನ ಆಸ್ತಿಯನ್ನು ಮಾರಾಟ ಮಾಡಿದ್ದೇನೆ. ಈ ಕುರಿತು ಸೇಲ್ ಮಾಹಿತಿ ನನ್ನ ಬಳಿ ಇದೆ. ಮನ್ಸೂರ್ ಬಳಿ ಯಾವುದೇ ಹಣ ಸಾಲ ಪಡೆದಿಲ್ಲ, ನನ್ನ ಆಸ್ತಿಯನ್ನೇ ಮಾರಾಟ ಮಾಡಿದ್ದೇನೆ. ಎಲ್ಲವೂ ಪಾರದರ್ಶಕ ವ್ಯವಹಾರ ಮಾಡಿದ್ದೇನೆ ಎಂದರು.

    ರಾಜಕೀಯ ನಿವೃತ್ತಿ:
    ಸದ್ಯ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ(ಎಸ್‍ಐಟಿ) ನಡೆಸುತ್ತಿದ್ದು, ತನಿಖೆಯನ್ನ ಸಿಬಿಐಗೆ ನೀಡಲು ಸಿಎಂ ಕುಮಾರಸ್ವಾಮಿ ಅವರು ಅಂತಿಮ ತೀರ್ಮಾನ ಮಾಡುತ್ತಾರೆ. ಸದ್ಯ ಎಸ್‍ಐಟಿ ತನಿಖೆಗೆ ನಾನು ಸಂಪೂರ್ಣ ಸಹಕಾರ ನೀಡುತ್ತೇನೆ. ನಮ್ಮ ಪಕ್ಷದ ನಾಯಕರಾದ ರೋಷನ್ ಬೇಗ್ ಅವರ ಹೆಸರು ಕೇಳಿ ಬಂದಿರುವರಿಂದ ಆ ಕುರಿತು ತನಿಖೆ ಆಗುತ್ತದೆ. ನನ್ನ ಬಗ್ಗೆಯೂ ತನಿಖೆ ನಡೆಲಿದೆ. ನಾವು ತನಿಖೆಗೆ ಸಹಕಾರ ನೀಡುತ್ತೇವೆ. ಯಾವುದೇ ಆರೋಪ ಸತ್ಯಾಂಶ ತನಿಖೆಯ ಬಳಿಕಷ್ಟೇ ತೀರ್ಮಾನ ಮಾಡಲು ಸಾಧ್ಯ ಎಂದರು.

    ಇದೇ ವೇಳೆ ಕಳೆದ ತಿಂಗಳ 26ನೇ ರಂದು ಮನ್ಸೂರ್ ಅವರನ್ನ ಭೇಟಿ ಮಾಡಿ ಮಾತನಾಡಿಸಿದ್ದೆ ಎಂದ ಅವರು, ಹೂಡಿಕೆ ಹಣ ಜನರಿಗೆ ಹಿಂದಿರುಗಿಸುವ ಬಗ್ಗೆ ಚರ್ಚೆ ನಡೆಸಿದ್ದೆ. ಆದರೆ ಆ ವೇಳೆ ಹಬ್ಬದ ಬಳಿಕ ಹಣ ಮರುಪಾವತಿ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಆ ವೇಳೆಗೆ ವಂಚನೆ ಬಗ್ಗೆ ಯಾವುದೇ ಮುನ್ಸೂಚನೆ ಇರಲಿಲ್ಲ. ಅಲ್ಲದೇ ಅವರು ಹೀಗೆ ಓಡಿ ಹೋಗುತ್ತಾರೆ ಎಂದು ತಿಳಿದಿರಲಿಲ್ಲ. ಅದೇ ದಿನ ಸಿಸಿಬಿ ಅಲೋಕ್ ಕುಮಾರ್ ಅವರು ಚರ್ಚೆ ನಡೆಸಿದ್ದರು ಎಂಬ ಮಾಹಿತಿ ಇದೆ. ನಾನು ಮನ್ಸೂರ್ ನಿಂದ ಸಾಲ ಪಡೆದಿರುವುದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದರು.

    ಬೇಗ್ ನಮ್ಮ ನಾಯಕರು:
    ಜನರು ಹಣ ಕಟ್ಟಿ ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಬಡವರ ಹಣ ಹಿಂದಿರುಗುವಂತೆ ಆತನಿಗೆ ಕೈ ಮುಗಿದು ಕೇಳಿ ಕೊಳ್ಳುತ್ತಿದ್ದೇನೆ ಎಂದು ಮಾಧ್ಯಮದ ಎದುರೇ ಕೈ ಮುಗಿದರು. ಅಲ್ಲದೇ ಮನ್ಸೂರ್ ಗೆ ಆಸ್ತಿ ಮಾರಾಟ ಮಾಡಿದ್ದಕ್ಕೆ ಪಶ್ಚಾತ್ತಾಪ ಇದೆ. ಅಲ್ಲದೇ ರೋಷನ್ ಬೇಗ್ ಹಾಗೂ ನನ್ನ ನಡುವೆ ಯಾವುದೇ ಅಸಮಾಧಾನ ಇಲ್ಲ. ನಾವು ಆತ್ಮೀಯರಿದ್ದೇವೆ ಎಂದು ತಿಳಿಸಿದರು.

  • ಹಣ ಕಳೆದುಕೊಂಡವರಿಗಾಗಿ ನನ್ನ ಹೃದಯ ಬಡಿದುಕೊಳ್ಳುತ್ತಿದೆ: ಶಾಸಕ ಬೇಗ್

    ಹಣ ಕಳೆದುಕೊಂಡವರಿಗಾಗಿ ನನ್ನ ಹೃದಯ ಬಡಿದುಕೊಳ್ಳುತ್ತಿದೆ: ಶಾಸಕ ಬೇಗ್

    – ಐಎಂಎ ಸಿಬಿಐ ತನಿಖೆಗೆ ನೀಡಲು ಆಗ್ರಹ

    ನವದೆಹಲಿ: ಐಎಂಎ ಪ್ರಕರಣದಲ್ಲಿ ಬಿಡುಗಡೆ ಆಗಿರುವ ಆಡಿಯೋದಲ್ಲಿ ನನ್ನ ಹೆಸರನ್ನು ಪ್ರಸ್ತಾಪ ಮಾಡಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ನೀಡಲು ನಾನು ಸಿಎಂ ಕುಮಾರಸ್ವಾಮಿ ಅವರು ಒತ್ತಾಯ ಮಾಡುತ್ತೇನೆ. ಕೇವಲ ಐಎಂಎ ಅಲ್ಲದೇ ಕ್ಯಾಪಿಟಲ್, ಅಲಾ, ಅಜ್ಮೇರಾ, ಅಂಬಿಡೆಂಟ್ ಸೇರಿದಂತೆ ಇತರೇ ಸಂಸ್ಥೆಗಳ ಮೇಲೂ ತನಿಖೆ ನಡೆಯಬೇಕಿದೆ ಎಂದು ಶಾಸಕ ರೋಷನ್ ಬೇಗ್ ಆಗ್ರಹಿಸಿದ್ದಾರೆ.

    ಪ್ರೆಸ್‍ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವನೋ ಒಬ್ಬ ಫ್ರಾಡ್ ನನ್ನ ಹೆಸರು ಹೇಳಿದ ತಕ್ಷಣ ಆರೋಪ ಆಗುತ್ತದೆ ಅಷ್ಟೇ. ಆರೋಪ ಮಾಡಿ ಜನರಿಗೆ ಮೋಸ ಮಾಡಿ ಪರಾರಿಯಾಗಿರುವ ಆತನ ಬಗ್ಗೆ ಸಂಪೂರ್ಣ ತನಿಖೆ ನಡೆಸುವುದು ಅಗತ್ಯ. ಆತನನ್ನು ಕೂಡಲೇ ಪತ್ತೆ ಮಾಡಿ ತನಿಖೆ ನಡೆಸಬೇಕಿದೆ. ಹಗರಣ ಮಾಡಿದಾತ 400 ಕೋಟಿ ರೂ. ಆರೋಪ ಮಾಡಿ ಓಡಿ ಹೋದರೆ ಎಷ್ಟು ಸಮಂಜಸ. ಅಲ್ಲದೇ ಇಡೀ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಹೆಚ್ಚಿನ ಅಧಿಕಾರ ಇರುವುದಿಂದ ತನಿಖೆ ಸಂಪೂರ್ಣವಾಗಿ ವೇಗವಾಗಿ ನಡೆಯುತ್ತದೆ ಎಂದು ಹೇಳಿದರು.

    ನನಗೆ ಐಎಂಎ ಸಂಸ್ಥೆಯೊಂದಿಗೆ ಯಾವುದೇ ಸಂಪರ್ಕ ಇಲ್ಲ. ನನ್ನ ಕ್ಷೇತ್ರದಲ್ಲಿ ನಾನು ಓದಿದ ಶಾಲೆಯನ್ನ ಅಭಿವೃದ್ಧಿ ಪಡಿಸಲು ಮುಂದಾದ ವೇಳೆ ಈ ಸಂಸ್ಥೆ ಅಭಿವೃದ್ಧಿ ಪಡಿಸಲು ಮುಂದಾಗಿತ್ತು. ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಲು ಸಹಕಾರ ನೀಡಿದೆ ಅಷ್ಟೇ. ಈ ಕಾರ್ಯಕ್ಕೆ ಸಿಎಂ ಕುಮಾರಸ್ವಾಮಿ ಅವರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದು ಎಲ್ಲರಿಗೂ ತಿಳಿದಿದೆ ಎಂದು ಸ್ಪಷ್ಟಪಡಿಸಿದರು.

    ಸದ್ಯ ಹಗರಣದಲ್ಲಿ ಮೋಸ ಹೋಗಿ ಪರದಾಡುತ್ತಿರುವವರ ಹಣ ಅವರಿಗೆ ಕೊಡಿಸುವ ಕಾರ್ಯ ಮೊದಲು ಆಗಬೇಕು. ಪ್ರಕರಣ ಸತ್ಯಾಂಶ ಹೊರ ಬರಬೇಕು ಎಂದರೆ ಆತ ನಾಪತ್ತೆಯಾಗುವ ಮುನ್ನ 48 ಗಂಟೆಗಳ ಅವಧಿಯಲ್ಲಿ ಯಾರಿಗೆ ಕಡೆ ಮಾಡಿದ್ದ. ಆತನ ಮೊಬೈಲ್ ವಾಟ್ಸಾಪ್ ಗೆ ಯಾವ ಸಂದೇಶಗಳು ಬಂದಿತ್ತು. ಅಲ್ಲದೇ ಯಾರೊಂದಿಗೆ ಆತ ಸಂಪರ್ಕದಲ್ಲಿ ಇದ್ದ ಎಂಬುದರ ಮಾಹಿತಿ ತನಿಖೆ ವೇಳೆ ಸಿಗಲಿದೆ. ನಾನು ಪ್ರಕರಣ ವಿಚಾರಣೆ ಸಂಬಂಧ ಎಸ್‍ಐಟಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ನನ್ನ ಹೃದಯ ಮೋಸ ಹೋದವರ ಪರ ಬಡಿದುಕೊಳ್ಳುತ್ತಿದೆ ಎಂದರು.

    ಬೆಳಗಾವಿಯಲ್ಲಿಯೂ ಇಂತಹದ್ದೆ ಪ್ರಕರಣ ನಡೆದಿತ್ತು, ಇದರಲ್ಲಿ ಕೆಲ ಮಂದಿ ನಾಪತ್ತೆಯಾಗಿದ್ದರೆ ಕೆಲವರು ಜಾಮೀನು ಪಡೆದು ಹೊರಗಿದ್ದರೆ. ಯಾವುದೇ ಪ್ರಕರಣವಾದರೂ ಹಣ ಕಳೆದುಕೊಂಡ ಜನರಿಗೆ ಅದಷ್ಟು ಬೇಗ ಹಣ ವಾಪಸ್ ಮಾಡಬೇಕು. ವಂಚನೆ ಮಾಡಿರುವ ವ್ಯಕ್ತಿಯ ಬ್ಯಾಂಕ್ ಖಾತೆ ಜಪ್ತಿ ಮಾಡಬೇಕಿದೆ. ನಾನು ಯಾವಾಗ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಮಾತನಾಡಿದ್ದೆನೋ ಆಗಲೇ ನನ್ನ ಮೇಲೆ ಆರೋಪ ಬಂದಿದೆ. ನಾನು ನನ್ನ ಕುಟುಂಬದ ಯಾವುದೇ ಸದಸ್ಯರು ಸಂಸ್ಥೆಯೊಂದಿಗೆ ವ್ಯವಹಾರ ನಡೆಸಿಲ್ಲ ಎಂದು ತಿಳಿಸಿದರು.

  • ಮನ್ಸೂರ್ ಹೆಸರಲ್ಲಿದೆ 488 ಕೋಟಿ ಮೌಲ್ಯದ ಚರಾಸ್ತಿ, 1,888 ಕೆಜಿ ಚಿನ್ನಾಭರಣ!

    ಮನ್ಸೂರ್ ಹೆಸರಲ್ಲಿದೆ 488 ಕೋಟಿ ಮೌಲ್ಯದ ಚರಾಸ್ತಿ, 1,888 ಕೆಜಿ ಚಿನ್ನಾಭರಣ!

    ಬೆಂಗಳೂರು: ಸಾವಿರಾರು ಜನರಿಗೆ ಮೋಸ ಮಾಡಿ ತಲೆಮರೆಸಿಕೊಂಡಿರುವ ಐಎಂಎ ಸಂಸ್ಥಾಪಕ ಮೊಹಮ್ಮದ್ ಮನ್ಸೂರ್ ಖಾನ್ ಸಾವಿರಾರು ಕೋಟಿ ರೂ. ಆಸ್ತಿಯನ್ನು ಹೊಂದಿದ್ದಾನೆ.

    ಮನ್ಸೂರ್ ಖಾನ್ ತನ್ನ ಹೆಸರಿನಲ್ಲಿ 488 ಕೋಟಿ ಮೌಲ್ಯದ ಚರಾಸ್ತಿ, 1,888 ಕೆಜಿ ಚಿನ್ನಾಭರಣ, 18.64 ಕೆ.ಜಿ ಪ್ಲಾಟಿನಂ, 463 ಕೆ.ಜಿಯ ಬೆಳ್ಳಿ ವಸ್ತುಗಳು, 30 ಸಾವಿರ ಕ್ಯಾರೆಟ್ ವಜ್ರ, 110 ಕೆ.ಜಿ ಬಿಳಿ ಬಂಗಾರ ಇದೆ ಎಂದು ಘೋಷಿಸಿಕೊಂಡಿದ್ದ.

    ಇಷ್ಟೇ ಅಲ್ಲದೇ ಐಎಂಎ ಗೋಲ್ಡ್‍ನಿಂದ ಅಡಮಾನ ಪಡೆದ 350 ಕೆ.ಜಿ ಚಿನ್ನ, ಕೋಟ್ಯಂತರ ರೂಪಾಯಿ ಬೆಲೆಬಾಳುವ ಅಮೂಲ್ಯ ರತ್ನಗಳು ಹೊಂದಿದ್ದೇನೆ ಎಂದು ಸ್ವತಃ ಘೋಷಿಸಿಕೊಂಡಿದ್ದನು.

    ಐಎಂಎ ನಲ್ಲಿ ಕೇವಲ ಹಣ ಮಾತ್ರ ಹೂಡಿಕೆ ಮಾಡದೇ ಜನರು ಚಿನ್ನವನ್ನು ಕೊಡ ಗಿರವಿ ಇಟ್ಟಿದ್ದಾರೆ. ಚಿನ್ನ ಗಿರವಿ ಇಟ್ಟು ಸಾಲ ಕೂಡ ಪಡೆದಿದ್ದಾರೆ. ಐಎಂಎ ವಿರುದ್ಧ ಇದುವರೆಗೂ 14 ಸಾವಿರಕ್ಕೂ ಅಧಿಕ ದೂರು ದಾಖಲಾಗಿದ್ದು. 14 ಸಾವಿರದಲ್ಲಿ 300 ರಿಂದ 400 ಜನ ಚಿನ್ನಾಭರಣಗಳನ್ನು ಗಿರವಿ ಇಟ್ಟವರು ದೂರು ನೀಡಿದ್ದಾರೆ. ಲಾಕರ್‍ನಲ್ಲಿ ಚಿನ್ನಾಭರಣ ಇಟ್ಟು ಹಣ ಪಡದು ಬಡ್ಡಿ ಕಟ್ಟುತ್ತಿದ್ದ ದೂರುದಾರು ಶೇ.4 ರಿಂದ ಶೇ.5 ಬಡ್ಡಿ ಕಟ್ಟುತ್ತಿದ್ದರು.

    ಸದ್ಯ ಚಿನ್ನಾಭರಣಗಳನ್ನು ಗಿರವಿ ಇಟ್ಟು ಸಾಲ ಪಡೆದವರ ಚಿನ್ನ ಸೇಫ್ ಇದ್ಯಾ ಇಲ್ವಾ ಅನ್ನೋ ಅನುಮಾನದಲ್ಲಿ ಇದ್ದಾರೆ.

  • ಸರ್ಕಾರ ನಿಮ್ಮೊಂದಿಗೆ ಇದೆ, ಕೂತು ಮಾತಾಡೋಣ – ಮನ್ಸೂರ್‌ಗೆ ಜಮೀರ್ ಖಾನ್ ಸಂದೇಶ

    ಸರ್ಕಾರ ನಿಮ್ಮೊಂದಿಗೆ ಇದೆ, ಕೂತು ಮಾತಾಡೋಣ – ಮನ್ಸೂರ್‌ಗೆ ಜಮೀರ್ ಖಾನ್ ಸಂದೇಶ

    ಬೆಂಗಳೂರು: ಸರ್ಕಾರ ನಿಮ್ಮೊಂದಿಗೆ ಇದೆ, ಕೂತು ಮಾತಾಡೋಣ ಎಂದು ಸಚಿವ ಜಮೀರ್ ಖಾನ್ ಅವರು ಐಎಂಎ ಮಾಲೀಕ ಮನ್ಸೂರ್ ಖಾನ್ ಬಳಿ ಮಾಧ್ಯಮಗಳ ಮೂಲಕ ಕೇಳಿಕೊಂಡಿದ್ದಾರೆ.

    ಜಮೀರ್ ಖಾನ್ ಮಾಧ್ಯಮಗಳ ಜೊತೆ ಮಾತನಾಡಿದ ವಿಡಿಯೋವನ್ನು ತಮ್ಮ ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾರೆ. ಟ್ವಿಟ್ಟರಿನಲ್ಲಿ ಈ ವಿಡಿಯೋವನ್ನು ಹಂಚಿಕೊಂಡು ಅದಕ್ಕೆ, ‘ಐಎಂಎ ಜ್ಯುವೆಲ್ಸ್ ಮಾಲೀಕ ಜನಾಬ್ ಮೊಹಮ್ಮದ್ ಮನ್ಸೂರ್ ಖಾನ್‍ಗೆ ಸಂದೇಶ’ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

    ವಿಡಿಯೋದಲ್ಲಿ ಏನಿದೆ?
    ಮಾಧ್ಯಮಗಳ ಮೂಲಕ ನಾನು ಒಂದು ವಿಚಾರವನ್ನು ಹೇಳಲು ಬಯಸುತ್ತೇನೆ. ಮನ್ಸೂರ್ ಖಾನ್ ಬನ್ನಿ ನೀವು ಭಯಪಡಬೇಡಿ. ನಿಮ್ಮೊಂದಿಗೆ ನಾವೇದ್ದೇವೆ, ಈ ಸರ್ಕಾರವಿದೆ. ಆಗಿದ್ದು ಆಗಿಹೋಯ್ತು. ನೀವು ಆಡಿಯೋದಲ್ಲಿ ಹೇಳಿರುವುದು ಸತ್ಯವಾದ್ರೆ ಮುಖಾಮುಖಿಯಾಗಿ ಕುಳಿತುಕೊಳ್ಳಿ, ನಿಮ್ಮ ಜೊತೆ ನಾವೇದ್ದೇವೆ. ನೀವು ಯಾರಿಗೆ ದುಡ್ಡು ಕೊಟ್ಟಿದ್ದೀರಾ ಅದನ್ನ ಹೇಳಿ. ಆ ದುಡ್ಡನ್ನು ರಿಕವರಿ ಮಾಡೋಣ ಅದನ್ನು ಬಡವರಿಗೆ ಹಂಚೋಣ. ನೀವು ಯಾವ ರಾಜಕಾರಣಿಗೆ ದುಡ್ಡು ಕೊಟ್ಟಿದ್ದೀರ ಎನ್ನುವುದ್ದನ್ನು ಹೇಳಿ. ಅದನ್ನು ರಿಕವರಿ ಮಾಡೋಣ, ಬಡವರ ದುಡ್ಡನ್ನು ಬಡವರಿಗೆ ಹಂಚೋಣ. ಮನ್ಸೂರ್ ಖಾನ್ ಬಂದು ಹೇಳಿದ್ರೆ ಎಲ್ಲಾ ಸತ್ಯ ಗೊತ್ತಾಗಲಿದೆ ಎಂದು ಹೇಳಿದ್ದಾರೆ.

    https://twitter.com/BZZameerAhmed/status/1138504249271312390

  • ಐಎಂಎ ಜ್ಯುವೆಲ್ಲರಿ ಹಗರಣದ ಹಿಂದೆ ಅಡಗಿದೆ ಕಾಂಗ್ರೆಸ್ ನಾಯಕರ ಪ್ರತಿಷ್ಠೆ

    ಐಎಂಎ ಜ್ಯುವೆಲ್ಲರಿ ಹಗರಣದ ಹಿಂದೆ ಅಡಗಿದೆ ಕಾಂಗ್ರೆಸ್ ನಾಯಕರ ಪ್ರತಿಷ್ಠೆ

    ಬೆಂಗಳೂರು: ಐಎಂಎ ಜ್ಯುವೆಲ್ಲರಿ ಹಗರಣದಲ್ಲಿ ತೆರೆಮರೆಯ ಪಾತ್ರಧಾರಿಗಳಾದ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ರೋಶನ್ ಬೇಗ್ ನಡುವಿನ ಮುಸ್ಲಿಂ ನಾಯಕತ್ವದ ಜಟಾಪಟಿ ಹಗರಣವು ಬಯಲಾಗುವಂತೆ ಮಾಡಿದೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ತಮಗೆ ಕೈ ತಪ್ಪಿದ್ದ ಸಚಿವ ಸ್ಥಾನ ಜಮೀರ್ ಅಹಮ್ಮದ್ ಅವರ ಪಾಲಾಗಿದ್ದು ರೋಶನ್ ಬೇಗ್ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ತಾವೇ ಮುಸ್ಲಿಂ ಸಮುದಾಯದ ನಾಯಕ ಎಂಬ ನಾಯಕತ್ವದ ಜಟಾಪಟಿ ಇಬ್ಬರ ನಡುವಿನ ಅಸಮಾಧಾನ ಬೇರೆ ಬೇರೆ ರೂಪ ಪಡೆಯುವಂತೆ ಮಾಡಿದೆ.

    ಪಕ್ಷದ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ರೋಶನ್ ಬೇಗ್ ಕಾಂಗ್ರೆಸ್ ನಲ್ಲಿ ಯಾರಿಗೂ ಬೇಡವಾಗಿದ್ದರು. ಇದನ್ನೇ ಸೂಕ್ತ ಸಮಯ ಎಂದು ಭಾವಿಸಿದ ಸಚಿವ ಜಮೀರ್ ಐಎಂಎ ಹಗರಣದ ರೂವಾರಿ ಮನ್ಸೂರ್ ಆಡಿಯೋ ಬಿಡುಗಡೆ ಮಾಡಿಸಿದರು ಅನ್ನೋದು ರೋಶನ್ ಬೇಗ್ ಬೆಂಬಲಿಗರ ಆರೋಪವಾಗಿದೆ.

    ತಮ್ಮ ವಿರುದ್ಧ ಆಡಿಯೋ ಬಿಡುಗಡೆ ಮಾಡಿದ ಜಮೀರ್ ವಿರುದ್ಧ ರೋಶನ್ ಬೇಗ್ ಜಮೀರ್ ಹಾಗೂ ಐಎಂಎ ಮಾಲೀಕನ ನಡುವಿನ 5 ಕೋಟಿ ಹಣಕಾಸು ವ್ಯವಹಾರದ ದಾಖಲೆ ಬಿಡುಗಡೆ ಮಾಡಿಸಿದರು ಎನ್ನಲಾಗುತ್ತಿದೆ. ಹಾಗೆ ನೋಡಿದರೆ ರೋಶನ್ ಬೇಗ್ ಹಾಗೂ ಜಮೀರ್ ಇಬ್ಬರು ಕೂಡ ಐಎಂಎ ಮಾಲೀಕ ಮನ್ಸೂರ್ ಗೆ ಆತ್ಮೀಯರಾಗಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರು ಹಗರಣದ ಭಾಗಿಯಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

    ಸಮುದಾಯದ ನಾಯಕತ್ವಕ್ಕಾಗಿ ನಡೆದ ಪೈಪೋಟಿ ಕುರಿತು ಪರಸ್ಪರ ಒಬ್ಬರನ್ನೊಬ್ಬರ ಬಗ್ಗೆ ಮಾತನಾಡಿಕೊಳ್ಳಲು ಹೋಗಿ ಸಮುದಾಯದ ಮುಂದೆ ಇಕ್ಕಟ್ಟಿಗೆ ಸಿಲುಕಿದ್ದಾರೆ. ಈ ಮೂಲಕ ನಾಯಕರ ಪ್ರತಿಷ್ಠೆ, ಒಳ ಜಗಳದಿಂದ ದೊಡ್ಡ ಹಗರಣವೊಂದು ಬಯಲಾಗುವಂತೆ ಮಾಡಿದೆ.

  • IMA ವಿರುದ್ಧ 11 ಸಾವಿರಕ್ಕೇರಿದ ಕಂಪ್ಲೆಂಟ್- ತನಿಖೆಯ ಹೊಣೆ ಎಡಿಜಿಪಿ ಸಲೀಂಗೆ ಸಾಧ್ಯತೆ

    IMA ವಿರುದ್ಧ 11 ಸಾವಿರಕ್ಕೇರಿದ ಕಂಪ್ಲೆಂಟ್- ತನಿಖೆಯ ಹೊಣೆ ಎಡಿಜಿಪಿ ಸಲೀಂಗೆ ಸಾಧ್ಯತೆ

    ಬೆಂಗಳೂರು: ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್‍ಗಟ್ಟೆ ಕಂಪ್ಲೆಂಟ್‍ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ.

    ಎಸ್‍ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ.

    ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ ಪ್ರತಾಪ್ ರೆಡ್ಡಿ ಅವರನ್ನು ನೇಮಿಸುವ ಸಾಧ್ಯತೆಯೂ ಇದೆ. ಈ ಮಧ್ಯೆ ಸಾವಿರಾರು ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿ ನಾಪತ್ತೆಯಾಗಿರುವ ಐಎಂಎ ಮಾಲೀಕನ ವಿರುದ್ಧ ರಸ್ತೆಗಿಳಿದಿದ್ದ ಮೋಸ ಹೋದವರು, ಧಿಡೀರ್ ಅಂತ ಶಾಸಕ ರೋಷನ್ ಬೇಗ್ ಮನೆಗೆ ಲಗ್ಗೆ ಇಟ್ಟಿದರು. ಕೋಲ್ಸ್ ಪಾರ್ಕ್ ನಲ್ಲಿರುವ ರೋಷನ್ ಬೇಗ್ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

    ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಪ್ರತಿಭಟನಾಕಾರರನ್ನ ಪೊಲೀಸರು ಮನವೊಲಿಸೋ ಯತ್ನ ಮಾಡಿದರು. ರೋಷನ್ ಬೇಗ್ ಮನೆಯಲ್ಲಿ ಇಲ್ಲ ಅನ್ನೋದು ತಿಳಿದು ಪ್ರತಿಭಟನಾಕಾರರು ಜಾಗ ಖಾಲಿ ಮಾಡಿದರು. ಶಾಸಕ ರೋಷನ್ ಬೇಗ್ ದೆಹಲಿಯಿಂದ ಬೆಂಗಳೂರಿಗೆ ಮರಳುತ್ತಿದ್ದು ಮುಂಜಾಗೃತ ಕ್ರಮವಾಗಿ ರೋಷನ್ ಬೇಗ್ ಮನೆ ಬಳಿ ಪೊಲೀಸ್ ಬೀಗಿ ಭದ್ರತೆ ಒದಗಿಸಲಾಗಿದೆ.

  • ಐಎಂಎ ದೋಖಾಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್-ಮನ್ಸೂರ್ ಖಾನ್ ಜೊತೆಗೆ ಸಚಿವ ಜಮೀರ್ ಗೂ ನಂಟು?

    ಐಎಂಎ ದೋಖಾಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್-ಮನ್ಸೂರ್ ಖಾನ್ ಜೊತೆಗೆ ಸಚಿವ ಜಮೀರ್ ಗೂ ನಂಟು?

    -ಐಎಂಎ ವಿರುದ್ಧ 8 ಸಾವಿರ ದೂರು
    -ಮತ್ತೊಂದು ಆಡಿಯೋ ರಿಲೀಸ್
    -ಬೀದಿಗೆ ಬಂದ 1,800 ಉದ್ಯೋಗಿಗಳು

    ಬೆಂಗಳೂರು: ಹೂಡಿಕೆಯ ಹೆಸರಿನಲ್ಲಿ ಲಕ್ಷಾಂತರ ಮಂದಿಗೆ ವಂಚಿಸಿರುವ ಐಎಂಎ ಜ್ಯುವೆಲ್ಲರ್ಸ್ ಮಾಲೀಕನ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದೋಖಾ ಪ್ರಕರಣವನ್ನು ಎಸ್‍ಐಟಿಗೆ ವಹಿಸಿದೆ. ಮೊದಲು ಈ ಪ್ರಕರಣವನ್ನು ಸಿಸಿಬಿಗೆ ವಹಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದರು. ಆದರೆ ಸಚಿವ ಜಮೀರ್ ಅಹ್ಮದ್ ನಿಯೋಗದ ಮನವಿ ಮೇರೆಗೆ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಎಸ್‍ಐಟಿ ಗೆ ವಹಿಸಿದೆ.

    ನಿಗೂಢವಾಗಿ ನಾಪತ್ತೆಯಾಗಿರುವ ಮನ್ಸೂರ್ ಖಾನ್ ಪತ್ತೆಗಾಗಿ ಐದು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಈ ನಡುವೆ ಇಂದು ಕೂಡ ಐಎಂಎಯಿಂದ ಮೋಸ ಹೋಗಿರುವ ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿ ಆಕ್ರೋಶ ಹೊರ ಹಾಕಿದರು. ಸಮದ್ ಹೌಸ್‍ಗೆ ತೆರಳಿ ಅಲ್ಲಿ ತೆರೆಯಲಾಗಿರುವ ವಿಶೇಷ ಕೌಂಟರ್ ಗಳಲ್ಲಿ ದೂರು ಸಲ್ಲಿಸಿದರು. ಇದುವರೆಗೂ ಸುಮಾರು 8 ಸಾವಿರ ದೂರುಗಳು ಐಎಂಎ ವಿರುದ್ಧ ದಾಖಲಾಗಿವೆ.

    ದೂರಿನ ಬಳಿಕ ಐಎಂಎ ಹೂಡಿಕೆದಾರರು ನಗರ ಪೊಲೀಸ್ ಆಯುಕ್ತರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ನ್ಯಾಯಕ್ಕಾಗಿ ಮನವಿ ಸಲ್ಲಿಸಿದರು. ಈ ಮಧ್ಯೆ ಐಎಂಎ ಜ್ಯುವೆಲ್ಲರಿಯ ಮೊಬೈಲ್ ಆ್ಯಪ್ ಕೂಡ ಸ್ಥಗಿತಗೊಂಡಿದೆ. ಈ ಆ್ಯಪ್‍ನಲ್ಲಿ ಹೂಡಿಕೆ, ಬಡ್ಡಿ, ತಿಂಗಳ ರಿಟರ್ನ್ಸ್ ಮಾಹಿತಿ ಲಭ್ಯವಾಗುತ್ತಿತ್ತು. ಇತ್ತ ಅದ್ಯಾಕೋ ಏನೋ ರೋಷನ್ ಬೇಗ್ ಮಾಲೀಕತ್ವದ ಉರ್ದು ಪತ್ರಿಕೆ ಸಿಯಾಸತ್ ಕೂಡ ಇವತ್ತು ಮುದ್ರಣಗೊಂಡಿಲ್ಲ. ಇತ್ತ ಐಎಂಎ ಜ್ಯುವೆಲ್ಲರಿಯಲ್ಲಿ ಕೆಲಸಕ್ಕಿದ್ದ 1,800 ಉದ್ಯೋಗಿಗಳು ಇದೀಗ ಬೀದಿಗೆ ಬಿದ್ದಿದ್ದಾರೆ.

    ಜಮೀರ್ ಹೆಸರು ತಳುಕು:
    ಸೋಮವಾರ ಮಾಜಿ ಸಚಿವ ರೋಷನ್ ಬೇಗ್ ಹೆಸರು ಐಎಂಎ ಪ್ರಕರಣದಲ್ಲಿ ತಳಕು ಹಾಕಿಕೊಂಡಿತ್ತು. ಇವತ್ತು ಸಚಿವ ಜಮೀರ್ ಅಹ್ಮದ್ ಖಾನ್ ಸರದಿ. ಚುನಾವಣೆ ಸಂದರ್ಭದಲ್ಲಿ ಜಮೀರ್ ಅಹ್ಮದ್ ಸಲ್ಲಿಸಿರೋ ಅಫಿಡವಿಟ್ ಈಗ ವೈರಲ್ ಆಗಿದೆ. ಇದರಲ್ಲಿ ರಿಚ್ಮಂಡ್ ಸರ್ಕಲ್ ಬಳಿ ಇರುವ ಎರಡೂವರೆ ಕೋಟಿ ಮೌಲ್ಯದ ಆಸ್ತಿಯನ್ನು ನೀಡಿ ಐಎಂಎ ಬಳಿ 5 ಕೋಟಿ ಸಾಲ ಪಡೆದಿರುವುದಾಗಿ ಜಮೀರ್ ಅಹ್ಮದ್ ಹೇಳಿಕೊಂಡಿದ್ದಾರೆ. ಈ ದಾಖಲೆ ಬಹಿರಂಗವಾಗುತ್ತಿದ್ದಂತೆ, ಐಎಂಎ ಮಾಲೀಕನ ಜೊತೆ ಸಚಿವ ಜಮೀರ್ ಪಾರ್ಟಿ ಮಾಡುವ ಫೋಟೋ ಇದೀಗ ವೈರಲ್ ಆಗಿದೆ.

    ಪಕ್ಷಗಳ ಫೋಟೋ ವಾರ್:
    ವಂಚಕ ಮನ್ಸೂರ್ ಜೊತೆಗೆ ಸಿಎಂ ಮತ್ತು ರೋಷನ್ ಬೇಗ್ ಊಟ ಮಾಡುತ್ತಿರುವ ಫೋಟೋವನ್ನು ಟ್ವೀಟಿಸಿರೋ ಬಿಜೆಪಿ, ಬಿರಿಯಾನಿ ಡೇ ಅಂತ ಕಾಲೆಳೆದಿದೆ. ನೀನೂ ತಿನ್ನು ನಾನು ತಿಂತೀನಿ ಅನ್ನೋದು ಜೆಡಿಎಸ್ ಪದ್ಧತಿ. ಖಾನ್‍ನಂತವರು ತಿಂದು ಲೂಟಿ ಮಾಡಿ ಓಡಿಹೋಗೋರು. ಇಂತಹ ವಂಚಕರ ಜೊತೆಗೆ ಸಿಎಂ ಬಿರಿಯಾನಿ ಡೇ ಸಾಕಷ್ಟು ವಿಷಯವನ್ನ ಹೇಳುತ್ತೆ ಅಂತ ಬಿಜೆಪಿ ಟೀಕಿಸಿದೆ. ಹಳೆ ಫೋಟೋವನ್ನು ಟ್ಯಾಗ್ ಮಾಡಿ ಬಿಜೆಪಿ ಜನರ ಹಾದಿ ತಪ್ಪಿಸ್ತಿದೆ ಅಂತ ಸಿಎಂ ತಿರುಗೇಟು ನೀಡಿದ್ದಾರೆ.

    ಸಿಎಂ ಪ್ರತಿಕ್ರಿಯೆಗೆ ಮತ್ತೆ ತಿರುಗೇಟು ಕೊಟ್ಟಿರುವ ಬಿಜೆಪಿ ನಿಮ್ಮನ್ನು ನೀವು ಬಲಿಪಶು ಅಂತ ಕಣ್ಣೀರು ಹಾಕೋ ಬದಲು ವಂಚಕನ ವಿರುದ್ಧ ಕ್ರಮ ಕೈಗೊಳ್ಳುವುದು ನಿಮ್ಮ ಮೊದಲ ಆದ್ಯತೆ ಆಗಿರಲಿ ಅಂತ ಟ್ವೀಟಿಸಿದೆ. ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಐಎಂಎಗೆ ಪಿಎಫ್‍ಐ ನಂಟಿರುವ ಸಂಶಯ ವ್ಯಕ್ತಪಡಿಸಿದ್ದಾರೆ. ಪ್ರಕರಣದಲ್ಲಿ ರೋಷನ್ ಬೇಗ್, ಜಮೀರ್ ಹೆಸರು ಕೇಳಿ ಬರ್ತಿದ್ದು, ಇವರ ಆಸ್ತಿ ಜಪ್ತಿ ಮಾಡಿ, ಸಿಬಿಐನಿಂದ ತನಿಖೆ ಮಾಡಿಸಬೇಕು ಅಂತಾ ಆಗ್ರಹಿಸಿದ್ದಾರೆ. ಆಡಿಯೋದಲ್ಲಿರೋದೆಲ್ಲಾ ಸತ್ಯ, ರೋಷನ್ ಬೇಗ್ ಹೆಸರು ಕೂಡ ಕೇಳಿಬಂದಿದೆ. ಈ ಬಗ್ಗೆ ಸಮಗ್ರ ತನಿಖೆ ಆಗ್ಬೇಕು ಅಂತಾ ಬಿಜೆಪಿಯ ಅಬ್ದುಲ್ ಅಜೀಮ್ ಒತ್ತಾಯಿಸಿದ್ದಾರೆ.

    ಮತ್ತೊಂದು ಆಡಿಯೋ ರಿಲೀಸ್:
    ಈ ಎಲ್ಲಾ ಬೆಳವಣಿಗೆ ನಡುವೆ ಐಎಂಎ ಜ್ಯುವೆಲ್ಲರಿ ಎಂಡಿ ಮನ್ಸೂರ್‍ದು ಎನ್ನಲಾದ ಮತ್ತೊಂದು ಆಡಿಯೋ ರಿಲೀಸ್ ಆಗಿದೆ. ಐಎಂಎ ಎಂಡಿ ಮನ್ಸೂರ್ ಆದ ನಾನು ಜೀವಂತವಾಗಿದ್ದಾರೆ. ನನ್ನ ವಿರುದ್ಧ ರೋಷನ್ ಬೇಗ್ ಮತ್ತಿತರರು ದೊಡ್ಡಮಟ್ಟದಲ್ಲಿ ಷಡ್ಯಂತ್ರ್ಯ ನಡೆದಿದೆ. ನಾನು ಆತ್ಮಹತ್ಯೆ ಮಾಡಿಕೊಳ್ತೇನೆ ಎಂದು ಸುದ್ದಿ ಹರಡಲಾಗಿದೆ. ನಾನು ನನ್ನ ಕುಟುಂಬ ಸದಸ್ಯರು ಓಡಿಹೋಗಿದ್ದಾರೆ ಎಂದು ಹಬ್ಬಿಸಲಾಗುತ್ತಿದೆ. ಇದೆಲ್ಲಾ ಸುಳ್ಳು ನಾನು ಜೀವಂತವಾಗಿದ್ದೇನೆ. ಎಲ್ಲಾ ಹೂಡಿಕೆದಾರರಿಗೆ ಜೂನ್ 15ರಿಂದ ಹಂತಹಂತವಾಗಿ ಹಣ ಹಿಂದಿರುಗಿಸ್ತೇನೆ ಎಂಬ ಮಾಹಿತಿ ಆಡಿಯೋದಲ್ಲಿದೆ. ಜೊತೆಗೆ ಇಂದು ಸಂಜೆ ಸಮದ್ ಹೌಸ್‍ನಲ್ಲಿ ರಾಹೀಲ್ ಸಭೆ ನಡೆಸುತ್ತಾನೆ ಎನ್ನಲಾಗಿತ್ತು. ಆದ್ರೆ ಅಂತಹ ಯಾವುದೇ ಸಭೆ ನಡೆಯಲಿಲ್ಲ. ಜೊತೆಗೆ ಇದು ಅಸಲಿ ಆಡಿಯೋನಾ ಅಥ್ವಾ ನಕಲಿ ಆಡಿಯೋನಾ..? ಹೂಡಿಕೆದಾರರ ದಾರಿ ತಪ್ಪಿಸಲು ಈ ಆಡಿಯೋ ಹರಿಬಿಡಲಾಗಿದ್ಯಾ ಅನ್ನೋ ಪ್ರಶ್ನೆ ಎದ್ದಿದೆ.

    ಆಡಿಯೋದಲ್ಲಿ ಏನಿದೆ?
    ನಾನು ಮನ್ಸೂರ್ ಖಾನ್, ಐಎಂಎ ಸಂಸ್ಥಾಪಕ. ನಾನು ಜೀವಂತವಾಗಿದ್ದೇನೆ. ನನ್ನ ಹಿಂದೆ ಷಡ್ಯಂತ್ರ ನಡೆಯುತ್ತಿದೆ. ನಾನು ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಸುದ್ದಿ ಹರಡಿಸಲಾಗಿದೆ. ನನ್ನ ಕುಟುಂಬ ಹಾಗೂ ನಾನು ಓಡಿ ಹೋಗಿದ್ದೇನೆಂದು ಸುದ್ದಿ ಹರಡಿಸಲಾಗಿದೆ. ಅದೆಲ್ಲಾ ಸುಳ್ಳು. ನಾನು ಅಲ್ಲಾಹನ ಆಶೀರ್ವಾದದಿಂದ ಚೆನ್ನಾಗಿದ್ದು, ಬೆಂಗಳೂರಿನಲ್ಲೇ ಇದ್ದೇನೆ. ನನ್ನನ್ನು ಓಡಿಸಲು ಸಾಕಷ್ಟು ಷಡ್ಯಂತ್ರ ನಡೆಯುತ್ತಿದೆ. ಈ ಷಡ್ಯಂತ್ರ್ಯ ಅವರಿಗೆ ಮುಳವಾಗುತ್ತೆ. ಸ್ಥಳೀಯ ಶಾಸಕ ರೋಷನ್ ಬೇಗ್, ಶಕೀಲ್ ಅಹಮದ್ ನನ್ನನ್ನು ಓಡಿಸಲು ಷಡ್ಯಂತ್ರ ಮಾಡಿದ್ದಾರೆ. ಇದರ ಹಿಂದೆ ದೊಡ್ಡ ದೊಡ್ಡವರ ಕೈವಾಡವಿದೆ. ನಾನು ಎಲ್ಲರ ಆಸ್ತಿ ಒಡವೆ, ಪಡೆದು ಹೂಡಿಕೆ ಮಾಡಿದ್ದೇನೆ. ಸದ್ಯದ ನನ್ನ ಪರಿಸ್ಥಿತಿ ಬಿಗಡಾಯಿಸಿದೆ.

    ನನ್ನ ಬಳಿ ಏನೇನಿದೆ ಎಲ್ಲಾ ಮಾಹಿತಿಯನ್ನ ರಾಹೀಲ್‍ಗೆ ಕೊಟ್ಟಿದ್ದೇನೆ. ಸಂಜೆ 5 ಗಂಟೆಗೆ ರಾಹೀಲ್ ಸಭೆ ನಡೆಸುತ್ತಾರೆ. ಸಭೆಯಲ್ಲಿ ರಾಹೀಲ್‍ನನ್ನ ಪ್ರಶ್ನೆ ಮಾಡಿ, ನಿಮ್ಮ ಹಣ ಎಲ್ಲೂ ಹೋಗಲ್ಲ. ಹಣವನ್ನ ಹಿಂದಿರುಗಿಸುತ್ತೇನೆ. ಜೂನ್ 15 ರೊಳಗೆ ನಿಮ್ಮ ಹಣವನ್ನ ಹಿಂದಿರುಗಿಸುತ್ತೇನೆ. ಮೊದಲಿಗೆ ಸಣ್ಣ ಹೂಡಿಕೆದಾರರು ನಂತರ ಮಧ್ಯಮ ಹೂಡಿಕೆದಾರರು ತದ ನಂತರ ಬೃಹತ್ ಹೂಡಿಕೆದಾರರಿಗೆ ಹಣ ಹಿಂತಿರುಗಿಸುತ್ತೇನೆ. ನಾನು ಎಲ್ಲಿಯೂ ಹೋಗಿಲ್ಲ. ಬೆಂಗಳೂರಿನಲ್ಲೇ ಇದ್ದೇನೆ.

  • ಐಎಂಎ ಪ್ರಕರಣ- ಅಜ್ಜಿ, 3ನೇ, 4ನೇ ಪತ್ನಿ, ಮಕ್ಕಳು ಸೇರಿ 10 ಮಂದಿಯೊಂದಿಗೆ ಖಾನ್ ಎಸ್ಕೇಪ್

    ಐಎಂಎ ಪ್ರಕರಣ- ಅಜ್ಜಿ, 3ನೇ, 4ನೇ ಪತ್ನಿ, ಮಕ್ಕಳು ಸೇರಿ 10 ಮಂದಿಯೊಂದಿಗೆ ಖಾನ್ ಎಸ್ಕೇಪ್

    ಬೆಂಗಳೂರು: ರಾಜ್ಯಾದ್ಯಂತ ಭಾರೀ ವಂಚನೆ ಮಾಡಿದ ಐಎಂಎ ಜ್ಯುವೆಲ್ಲರಿ ಮಾಲೀಕ ಮನ್ಸೂರ್ ತನ್ನ ಅಜ್ಜಿ, 3ನೇ ಪತ್ನಿ, 4ನೇ ಹೆಂಡತಿ ಹಾಗೂ ಮಕ್ಕಳು ಸೇರಿದಂತೆ ಸುಮಾರು 10 ಮಂದಿಯೊಂದಿಗೆ ಪರಾರಿಯಾಗಿದ್ದಾನೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಸೋಮವಾರ(ಮೇ 10)ದಂದು 2 ತಿಂಗಳ ಬಡ್ಡಿ ಹಾಕೋಣ ಎಂದು ಹೇಳಿದ್ದ ಖತರ್ನಾಕ್ ಖಾನ್ ಬಗ್ಗೆ ಇದೀಗ ಮತ್ತಷ್ಟು ದೋಖಾಗಳು ಬಯಲಾಗುತ್ತಿವೆ. ಐಎಂಎ ಕಂಪನಿ ವಂಚನೆಯಿಂದ ಕಂಗಾಲಾದ ಗ್ರಾಹಕರು ಬೀದಿಗಿಳಿಯುತ್ತಿದ್ದಂತೆಯೇ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಈ ವೇಳೆ ಆತನ ಒಂದೊಂದೇ ಖತರ್ನಾಕ್ ಸ್ಟೋರಿಗಳು ಹೊರಬರುತ್ತಿವೆ.

    1,900 ಕೋಟಿ ಹಣವಿರುವ ಖಾತೆಯಿಂದ ಬರೋಬ್ಬರಿ 1,200 ಕೋಟಿ ಹಣವನ್ನು ತನ್ನ ಮತ್ತೊಂದು ಖಾತೆಗೆ ವರ್ಗಾವಣೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಹೀಗೆ ಹಣ ವರ್ಗಾವಣೆ ಮಾಡಿಕೊಂಡ ತಕ್ಷಣ ಮನ್ಸೂರ್ ತನ್ನ ಕುಟುಂಬಸ್ಥರ ಜೊತೆ ಎಸ್ಕೇಪ್ ಆಗಿದ್ದಾನೆ.

    ಈ ಮಧ್ಯೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಾಟಕವಾಡಿದ್ದನು. ಈ ಹೇಳಿಕೆ ನೀಡಿದ ಬಳಿಕ ಆತ ನಿನ್ನೆಯೇ 17 ಕೋಟಿ ಹಣವನ್ನು ವರ್ಗಾವಣೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಇತ್ತ ಐಎಂಎ ಮಾಲೀಕ ಮನ್ಸೂರ್ ಅವರಿಗೆ ಏನು ಆಗಿಲ್ಲ ಎಂದು ಜ್ಯುವೆಲ್ಲರಿಯ ಸೇಲ್ಸ್ ಅಸೋಶಿಯೇಟ್ ಮಹಮ್ಮದ್ ಶಾಬಾದ್ ತಿಳಿಸಿದ್ದಾರೆ.

    ವಂಚನೆ ಹೇಗೆ?
    ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು. ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದರು.

  • ಬೆಂಗ್ಳೂರು ಅಲ್ಲ ರಾಜ್ಯವ್ಯಾಪಿ ಜನರಿಂದ ಐಎಂಎಗೆ ಹಣ ಹೂಡಿಕೆ

    ಬೆಂಗ್ಳೂರು ಅಲ್ಲ ರಾಜ್ಯವ್ಯಾಪಿ ಜನರಿಂದ ಐಎಂಎಗೆ ಹಣ ಹೂಡಿಕೆ

    ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು.

    ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ.
    ಇದನ್ನೂ ಓದಿ: ಐಎಂಎ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿಲ್ವಂತೆ – ಲಾಭಾಂಶದ ಆಸೆಗೆ ಲಕ್ಷ, ಕೋಟಿ ಕಳೆದುಕೊಂಡ್ರು

    ರಾತ್ರಿಯೆಲ್ಲಾ ಪೊಲೀಸರು ದೂರು ಸ್ವೀಕರಿಸಿದ್ದು, ಧೈರ್ಯ ಹೇಳುವ ಕೆಲಸವನ್ನೂ ಮಾಡಿದ್ದಾರೆ. ಜ್ಯುವೆಲ್ಲರಿ ಬಳಿ ಸಾವಿರಾರು ಜನ ಜಮಾಯಿಸಿದ್ದರಿಂದ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಅಂದಹಾಗೆ, ಬೆಂಗಳೂರು ಮಾತ್ರ ಅಲ್ಲ, ರಾಜ್ಯಾದ್ಯಂತ ಮೋಸ ಹೋದವರು ಆತಂಕ್ಕೀಡಾಗಿದ್ದಾರೆ. ದಾವಣಗೆರೆಯಲ್ಲಿ ಜನ ಪ್ರತಿಭಟಿಸಿದ್ದಾರೆ.

    ದುಪ್ಪಟ್ಟು ಹಣದ ಆಸೆಯಿಂದ ಮಕ್ಕಳ ಶಾಲಾ ಶುಲ್ಕಗೆ ಸಹಾಯ ಆಗುತ್ತದೆ ಎಂದು 4 ಲಕ್ಷ ಹೂಡಿದ್ವಿ. 3 ಪರ್ಸೆಂಟ್ ಬಡ್ಡಿಯಲ್ಲಿ ಜೀವನ ಸಾಗಿಸ್ತಿದ್ವಿ. ಈಗ ನೋಡಿದ್ರೆ ಹಿಂಗಾಯ್ತು ಅಂತ ಸೊಹ್ರಾಬಾನು ಕಣ್ಣೀರು ಹಾಕ್ತಿದ್ದಾರೆ.

    ಮೆಕ್ಯಾನಿಕ್ ಕೆಲಸ ಮಾಡುವ ಇಮ್ತಿಯಾಜ್ ಪಾಷಾ, ತಂಗಿಯ ಮದುವೆಗೆ ಅಂತಾ 1.5 ಲಕ್ಷ ಹೂಡಿಕೆ ಮಾಡಿದ್ದರು. ಇದೇ 10 ರಂದು ಹಣ ತೆಗೆಯಲು ಅರ್ಜಿ ಕೂಡ ಹಾಕಿದ್ದರು. ಅಷ್ಟರಲ್ಲಿ ಮನ್ಸೂರ್ ಖಾನ್ ಪರಾರಿ ಸುದ್ದಿ ನೋಡಿ ಕಂಗಾಲಾಗಿದ್ದಾರೆ. ಉಸ್ಮಾನ್ ಮತ್ತು ನಾಸಿರುದ್ದೀನ್ ಪ್ರತೀ ತಿಂಗಳು ಮನೆ ಬಾಡಿಗೆ ಕಟ್ಟಲು ಹಣ ಆಗಲಿ ಎಂದು ಹೂಡಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.

    ವಂಚನೆ ಹೇಗೆ?
    ಐಎಂಎ ಜ್ಯುವೆಲ್ಸ್ ನಿಂದ ಚಿನ್ನ, ವಜ್ರ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು. ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದರು.

  • ಐಎಂಎ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿಲ್ವಂತೆ – ಲಾಭಾಂಶದ ಆಸೆಗೆ ಲಕ್ಷ, ಕೋಟಿ ಕಳೆದುಕೊಂಡ್ರು

    ಐಎಂಎ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿಲ್ವಂತೆ – ಲಾಭಾಂಶದ ಆಸೆಗೆ ಲಕ್ಷ, ಕೋಟಿ ಕಳೆದುಕೊಂಡ್ರು

    ಬೆಂಗಳೂರು: ಐಎಂಎ ಮಾಲೀಕ ಮನ್ಸೂರ್ ಅವರಿಗೆ ಏನು ಆಗಿಲ್ಲ ಎಂದು ಜ್ಯುವೆಲ್ಲರಿಯ ಸೇಲ್ಸ್ ಅಸೋಶಿಯೇಟ್ ಮಹಮ್ಮದ್ ಶಾಬಾದ್ ತಿಳಿಸಿದ್ದಾರೆ.

    ಮಾನ್ಸೂರ್ ಮೃತಪಟ್ಟಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿ ಮಹಮದ್ ಶಾಬಾದ್ ಅವರನ್ನು ಸಂಪರ್ಕಿಸಿತ್ತು. ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಎಂಡಿ ಸೇಫ್ ಆಗಿದ್ದಾರೆ. ಅವರಿಗೆ ಏನು ಆಗಿಲ್ಲ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ವಿಚಾರ ಸುಳ್ಳು ಎಂಂದು ಹೇಳಿದ್ದಾರೆ.

    ನಮ್ಮ ಎಂಡಿ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ಸೆಕ್ಯೂರಿಟಿ ಉದ್ದೇಶದಿಂದ ಬೇರೆ ಕಡೆ ಹೋಗಿರಬಹುದು ಅಂದಿದ್ದಾರೆ. ಅಲ್ಲದೆ ಆಡಿಯೋದಲ್ಲಿ ರೋಷನ್ ಬೇಗ್ ಹೆಸರನ್ನು ಯಾರೋ ಸೃಷ್ಟಿ ಮಾಡಿದ್ದಾರೆ. ನಾವು ಸೈಬರ್ ಕ್ರೈಮ್‍ಗೆ ದೂರು ನೀಡಿದ್ದೇವೆ ಎಂದು ಶಾಬಾದ್ ಹೇಳಿದ್ದಾರೆ.

    ಈ ನಡುವೆ ಶಾಬಾದ್ ಯುಎಇಗೆ ತೆರಳಿದ್ದಾರೆ ಎನ್ನುವ ಸುದ್ದಿ ಹರಿದಾಡತೊಡಗಿದೆ. ಕಂಪನಿ ವಿರುದ್ಧ ಗ್ರಾಹಕರು ತಿರುಗಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ ಜೂನ್ 8 ಶನಿವಾರ ಸಂಜೆಯೇ ಯುಎಇಗೆ ಶಾಬಾದ್ ಪರಾರಿಯಾಗಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

    ಎಸ್‍ಐಟಿ ರಚನೆ?
    ಐಎಂಎ ವಂಚನೆ ಕೇಸ್ ಪ್ರಕರಣದ ಶೀಘ್ರ ಇತ್ಯರ್ಥಕ್ಕೆ ವಿಶೇಷ ತನಿಖಾ ತಂಡ(ಎಸ್‍ಐಟಿ) ರಚನೆ ಮಾಡುವ ಸಾಧ್ಯತೆಯಿದೆ. ಸುಮಾರು 25 ಸಾವಿರಕ್ಕೂ ಹೆಚ್ಚುಮಂದಿ ಹೂಡಿಕೆ ಮಾಡಿದ್ದು, ಎಸ್‍ಐಟಿ ರಚನೆ ಮಾಡಿ ಪ್ರಕರಣದಿಂದ ನೊಂದವರಿಗೆ ನ್ಯಾಯ ಕೊಡಿಸಲು ಸರ್ಕಾರ ಮುಂದಾಗಿದೆ.

    ಇವತ್ತು ಮುಖ್ಯಮಂತ್ರಿಗಳ ಜೊತೆ ಗೃಹ ಸಚಿವ ಎಂಬಿ ಪಾಟೀಲರು ಚರ್ಚೆ ಮಾಡಿದ ಬಳಿಕ, ಎಸ್‍ಐಟಿ, ಸಿಐಡಿ, ಸಿಸಿಬಿ ಎನ್ನುವುದು ಗೊತ್ತಾಗಲಿದೆ.

    ಆಂಬಿಡೆಂಟ್ ಕೇಸ್ ತನಿಖೆ ನಡೆಸಿದ ಕೆಲ ಅಧಿಕಾರಿಗಳನ್ನ ಬಳಸಿಕೊಂಡು ಎಸ್‍ಐಟಿ ರಚಿಸಿದರೆ ಒಳ್ಳೆಯದು. ಮನ್ಸೂರ್ ವಿದೇಶದಲ್ಲಿ ತಲೆ ಮರೆಸಿಕೊಂಡಿರುವುದರಿಂದ ಆದಷ್ಟು ಬೇಗ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕಿದೆ. ಈ ಮಧ್ಯೆ, ಕಾಂಗ್ರೆಸ್ ಪಕ್ಷ ಹಾಗೂ ಸಮ್ಮಿಶ್ರ ಸರ್ಕಾರದ ವಿರುದ್ಧ ರೋಷಕಾರಿದ್ದ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಎಸ್‍ಐಟಿ ತನಿಖೆಯ ಇಕ್ಕಟ್ಟಿಗೆ ಸಿಲುಕಿಸಲು ದೊಡ್ಡ ಅಸ್ತ್ರ ಸಿಕ್ಕಿದಂತಾಗಿದೆ ಎನ್ನುವ ಮಾತೂ ಕೇಳಿ ಬಂದಿದೆ.

    ವಂಚನೆ ಹೇಗೆ?
    ಐಎಂಎ ಜ್ಯುವೆಲ್ಸ್ ನಿಂದ ಚಿನ್ನ, ವಜ್ರ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು. ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದರು.