Tag: ಐಎಎಸ್ ಅಧಿಕಾರಿ

  • ಜಾತಿ ಕಿರುಕುಳಕ್ಕೆ ಬೇಸತ್ತು IPS ಅಧಿಕಾರಿ ಸಾವು – IAS ಪತ್ನಿ ದೂರು ನೀಡಿದ್ರೂ FIR ದಾಖಲಿಸದ ಪೊಲೀಸರು

    ಜಾತಿ ಕಿರುಕುಳಕ್ಕೆ ಬೇಸತ್ತು IPS ಅಧಿಕಾರಿ ಸಾವು – IAS ಪತ್ನಿ ದೂರು ನೀಡಿದ್ರೂ FIR ದಾಖಲಿಸದ ಪೊಲೀಸರು

    – ಡಿಜಿಪಿ, ಎಸ್ಪಿ ವಿರುದ್ಧವೇ ಪೊಲೀಸರಿಗೆ ಪತ್ನಿ ದೂರು; ಸಿಎಂಗೆ ಪತ್ರ ಬರೆದು ನ್ಯಾಯಕ್ಕೆ ಮನವಿ
    – ಒಂದಲ್ಲ 3 ಸೂಸೈಡ್ ನೋಟ್ ಬರೆದಿಟ್ಟಿದ್ದ ಐಪಿಎಸ್ ಅಧಿಕಾರಿ

    ಚಂಡೀಗಢ: ಇದೇ ಅಕ್ಟೋಬರ್ 7 ರಂದು ಚಂಡೀಗಢದ (Chandigarh) ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹರಿಯಾಣದ ಹಿರಿಯ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಪತ್ನಿ ಹಿರಿಯ ಐಎಎಸ್ ಅಧಿಕಾರಿ (IPS officer) ಅಮ್ನೀತ್ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿಗೆ ಪತ್ರ ಬರೆದಿದ್ದಾರೆ.

    8 ಪುಟಗಳ ಆತ್ಮಹತ್ಯೆ ಟಿಪ್ಪಣಿ ಮತ್ತು ಔಪಚಾರಿಕ ದೂರಿನ ಹೊರತಾಗಿಯೂ ಯಾವುದೇ ಎಫ್‌ಐಆರ್ (FIR) ದಾಖಲಿಸಲಾಗಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

    ಪತಿಯ ಆತ್ಮಹತ್ಯೆ ಪತ್ರವನ್ನು ಉಲ್ಲೇಖಿಸಿ ಬರೆದ ಪತ್ರದಲ್ಲಿ, ಕಿರುಕುಳ, ಅವಮಾನ ಮತ್ತು ಮಾನಸಿಕ ಹಿಂಸೆಯಲ್ಲಿ ಭಾಗಿಯಾಗಿರುವ ಹಿರಿಯ ಅಧಿಕಾರಿಗಳ ಎಲ್ಲಾ ವಿವರಗಳನ್ನು ನೀಡಿದರು, ಚಂಡೀಗಢ ಪೊಲೀಸರು, ನಿರ್ಲಕ್ಷಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ಟೇಕಾಫ್‌ ಆದ ಕೆಲವೇ ಹೊತ್ತಲ್ಲಿ ಸ್ಕಿಡ್‌ ಆಗಿ ಹುಲ್ಲಿನ ಮೇಲೆ ಬಿದ್ದ ಪ್ರೈವೆಟ್ ಜೆಟ್‌

    ಹರಿಯಾಣ ಪೊಲೀಸ್ (Haryana Police) ಮತ್ತು ಆಡಳಿತದ ಪ್ರಭಾವಿ ಉನ್ನತ ಅಧಿಕಾರಿಗಳು ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಅವರು ಚಂಡೀಗಢ ಪೊಲೀಸರ ಮೇಲೆ ಪ್ರಭಾವ ಬೀರುತ್ತಿರುವುದೇ ಯಾವುದೇ ಕ್ರಮ ಕೈಗೊಳ್ಳದಿರಲು ಕಾರಣ. ಈ ಉನ್ನತ ಹುದ್ದೆಯಲ್ಲಿರುವ, ಪ್ರಭಾವಿ ಅಧಿಕಾರಿಗಳು ನನ್ನ ಮತ್ತು ನನ್ನ ಕುಟುಂಬದ ಮೇಲೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಾರೆ ಮತ್ತು ಬೇರೆ ರೀತಿಯಲ್ಲಿ ನನ್ನನ್ನು ಸಿಲುಕಿಸಲು ಪ್ರಯತ್ನಿಸಬಹುದು ಎಂದು ಅವರು ಪತ್ರದಲ್ಲಿ ಹೇಳಿಕೊಂಡಿದ್ದಾರೆ.

    ಮುಖ್ಯಮಂತ್ರಿ ನಯಾಬ್‌ ಸಿಂಗ್​ ಸೈನಿ ನೇತೃತ್ವದಲ್ಲಿ ಹರಿಯಾಣ ಸರ್ಕಾರದ ನಿಯೋಗದೊಂದಿಗೆ ಅಮ್ನೀತ್ ಅವರು ಜಪಾನ್​ಗೆ ತೆರಳಿದಾಗ ಪತಿ ಆತ್ಮಹತ್ಯೆಗೆ ಶರಣಾಗಿದ್ದು, ವಿಷಯ ತಿಳಿದು ಅವರು ತಕ್ಷಣವೇ ಅವರು ಪ್ರವಾಸದಿಂದ ಹಿಂತಿರುಗಿದ್ದರು. ಇದನ್ನೂ ಓದಿ: ಭಾರತದಲ್ಲಿ 9 ಬ್ರಿಟಿಷ್‌ ವಿವಿ ಕ್ಯಾಂಪಸ್‌ಗಳ ಸ್ಥಾಪನೆ: ಬ್ರಿಟನ್‌ ಪ್ರಧಾನಿ ಘೋಷಣೆ

    ತಾವು ಜಪಾನ್​ನಿಂದ ಮರಳಿದ ತಕ್ಷಣ ಪತಿಯ ಲ್ಯಾಪ್​ಟಾಪ್​ ಬ್ಯಾಗ್​ನಲ್ಲಿ ಡೆತ್‌ನೋಟ್‌ನ 2ನೇ ಪ್ರತಿ ಸಿಕ್ಕಿದೆ. ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ಹಿನ್ನೆಲೆಯಲ್ಲಿ ಜಾತಿ ತಾರತಮ್ಯಕ್ಕೆ ಒಳಗಾಗಿದ್ದರು. ರೋಹ್ಟಕ್​ ಎಸ್​ಪಿ ನರೇಂದ್ರ ಬಿಜರ್ನಿಯಾ, ಡಿಜಿಪಿ ಕಪೂರ್​ ಅವರ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿದ್ದು, ಅರ್ಬನ್​ ಎಸ್ಟೇಟ್​​ ಪೊಲೀಸ್​ ಠಾಣೆಯಲ್ಲಿ ಅವರ ವಿರುದ್ಧ ಸುಳ್ಳು ಎಫ್​ಐಆರ್​ ದಾಖಲಿಸಲಾಗಿದೆ. ಈ ಘಟನೆಯಿಂದಾಗಿ ಪತಿ ಹೆಚ್ಚು ಒತ್ತಡಕ್ಕೆ ಒಳಗಾಗಿದ್ದರು. ಈ ವಿಷಯವನ್ನು ಡಿಜಿಪಿ ಮತ್ತು ಎಸ್ಪಿ ಜೊತೆ ಚರ್ಚಿಸಲು ಪತಿ ಮಾಡಿದ ಪ್ರಯತ್ನಗಳು ವಿಫಲವಾದ ಕಾರಣ ಅವರು ಈ ರೀತಿಯ ನಿರ್ಧಾರ ತೆಗೆದುಕೊಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸ್ಪೆಷಲ್‌ ರಾವಲ್ಪಿಂಡಿ ಚಿಕನ್ ಟಿಕ್ಕಾ ಮಸಾಲಾ, ಬಾಲಕೋಟ್ ತಿರಮಿಸು ತಿಂದ ಭಾರತೀಯ ವಾಯುಸೇನೆ

    ಅಮ್ನಿತ್‌ ತಮ್ಮ ಪತಿಯನ್ನು ಸಂಪರ್ಕಿಸಲು ಪ್ರಯತ್ನಿಸಿದರು ಮತ್ತು ಅವರ ಆತ್ಮಹತ್ಯೆ ಪತ್ರ ಮತ್ತು ಉಯಿಲು ಪತ್ರವನ್ನು ಸ್ವೀಕರಿಸಿದ ನಂತರ ಅವರಿಗೆ 15 ಬಾರಿ ಕರೆ ಮಾಡಿರುವುದಾಗಿ ಹೇಳಿದರು. ಅವರ ಕರೆಗಳಿಗೆ ಉತ್ತರಿಸದ ಹಿನ್ನಲೆ ತಮ್ಮ ಚಿಕ್ಕ ಮಗಳಿಗೆ ವಿಚಾರಿಸಲು ಕರೆ ಮಾಡಲಾಯಿತು, ಅವರು ಮನೆಗೆ ಧಾವಿಸಿದಾಗ, ನೆಲಮಾಳಿಗೆಯಲ್ಲಿ ರೆಕ್ಲೈನರ್ ಮೇಲೆ ತನ್ನ ಪತಿಯ ನಿರ್ಜೀವ ದೇಹವು ಕಂಡುಬಂದಿತು ಎಂದು ವಿವರಿಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಧಿಕಾರಿಗಳ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಬೇಕು. ತನಿಖೆಯ ಮೇಲೆ ಹಸ್ತಕ್ಷೇಪ, ಸಾಕ್ಷ್ಯಾಧಾರಗಳ ತಿರುಚುವಿಕೆ ಅಥವಾ ಪ್ರಭಾವ ತಡೆಯಲು ಆರೋಪಿತರನ್ನು ಅಮಾನತುಗೊಳಿಸುವಂತೆಯೂ ಅವರು ಕೋರಿದ್ದಾರೆ.

  • ಐಎಎಸ್ ಅಧಿಕಾರಿ ಅಂತ ಹೇಳ್ಕೊಂಡು ದೇಶ್ಯಾದ್ಯಂತ 20ಕ್ಕೂ ಅಧಿಕ ಮಹಿಳೆಯರಿಗೆ ವಂಚನೆ

    ಐಎಎಸ್ ಅಧಿಕಾರಿ ಅಂತ ಹೇಳ್ಕೊಂಡು ದೇಶ್ಯಾದ್ಯಂತ 20ಕ್ಕೂ ಅಧಿಕ ಮಹಿಳೆಯರಿಗೆ ವಂಚನೆ

    – ಖಾಸಗಿ ಫೋಟೋ, ವಿಡಿಯೋ ಪಡೆದು 5 ಲಕ್ಷಕ್ಕೆ ಡಿಮ್ಯಾಂಡ್

    ಬೆಂಗಳೂರು: ಮ್ಯಾಟ್ರಿಮೋನಿಯಲ್ಲಿ (Matrimony) ಐಎಎಸ್ (IAS) ಅಧಿಕಾರಿ ಎಂದು ಹೇಳಿಕೊಂಡು ಮಹಿಳೆಯರಿಗೆ ಹಣಕ್ಕಾಗಿ ವಂಚಿಸುತ್ತಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ.

    ಮ್ಯಾಟ್ರಿಮೋನಿ ವೈಬ್‌ಸೈಟ್‌ನಲ್ಲಿ ಜೀವನ್ ಕುಮಾರ್ ಎಂಬ ವ್ಯಕ್ತಿ ಐಡಿ ಕ್ರಿಯೆಟ್ ಮಾಡಿ ಐಎಎಸ್ ಆಫೀಸರ್ ಎಂದು ಮಹಿಳೆಗೆ ವಂಚಿಸುತ್ತಿದ್ದ. ಐಎಎಸ್, ಐಪಿಎಸ್ ಆಗಿರುವುದಾಗಿ ಹೇಳುತ್ತಿದ್ದ. ಬಳಿಕ ಮದುವೆ ಆಗುವುದಾಗಿ ನಂಬಿಸಿ ಕ್ಲೋಸ್ ಆಗಿ ಮೆಸೇಜ್ ಮಾಡಿ, ಖಾಸಗಿ ಫೋಟೊ ಹಾಗೂ ವಿಡಿಯೋ ಪಡೆಯುತ್ತಿದ್ದ.ಇದನ್ನೂ ಓದಿ:ಚಾಮರಾಜನಗರ| ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ – 18 ಅಡಿ ಉದ್ದದ ಸರಳಲ್ಲಿ ಬಾಯಿ ಬೀಗ

    ಅದಾದ ಸ್ವಲ್ಪ ದಿನಗಳ ನಂತರ ತಾಯಿಗೆ ಕ್ಯಾನ್ಸರ್ ಇದೆ. ಚಿಕಿತ್ಸೆಗೆ ಹಣ ಬೇಕು ಹಾಗೂ ಟ್ರಬಲ್ ಇದೆ ಎಂದು ಹೇಳಿ ಹಣ ಪಡೆಯುತ್ತಿದ್ದ. ಮೊದಲು 3 ಲಕ್ಷ ಹಣ ಪಡೆದು, ಮತ್ತೆ 5 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದ. ಹಣ ಕೊಡದೇ ಹೋದರೆ ಖಾಸಗಿ ಫೋಟೊ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ.

    ಒಂದು ವೇಳೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ದೇಶ್ಯಾದ್ಯಂತ 20ಕ್ಕೂ ಅಧಿಕ ಮಹಿಳೆಯರಿಗೆ ಇದೇ ರೀತಿ ಮೋಸ ಮಾಡಿರುವುದಾಗಿ ತಿಳಿದುಬಂದಿದ್ದು, ಸದ್ಯ ಹೆಬ್ಬಾಳ ಪೋಲಿಸ್ ಠಾಣೆಯಲ್ಲಿ (Hebbal Police Station) ದೂರು ದಾಖಲಾಗಿದೆ.ಇದನ್ನೂ ಓದಿ:ವಿದೇಶಿ ಕಾರುಗಳ ಮೇಲೆ ಶೇ.25 ಸುಂಕ – ಟ್ರಂಪ್‌ ಮತ್ತೆ ಹೊಸ ಬಾಂಬ್‌

  • ಮುಡಾ ಕೇಸ್‌ನಲ್ಲಿ ಬಿಗ್‌ ಅಪ್ಡೇಟ್‌ – ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ಸದ್ದಿಲ್ಲದೇ ತನಿಖೆ ಮುಗಿಸಿದ ಸರ್ಕಾರ

    ಮುಡಾ ಕೇಸ್‌ನಲ್ಲಿ ಬಿಗ್‌ ಅಪ್ಡೇಟ್‌ – ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ಸದ್ದಿಲ್ಲದೇ ತನಿಖೆ ಮುಗಿಸಿದ ಸರ್ಕಾರ

    ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) ಭ್ರಷ್ಟಾಚಾರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಒಂದೆಡೆ ಲೋಕಾಯುಕ್ತ ತನಿಖೆ (Lokayukta Investigation) ನಡೆಯುತ್ತಿದೆ. ಈ ನಡುವೆ ಬದಲಿ ನಿವೇಶನಗಳ ಹಂಚಿಕೆಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಇಲಾಖಾ ಹಂತದಲ್ಲಿ ತನಿಖೆ ನಡೆಸಲಾಗಿದ್ದು, ಸಲ್ಲಿದ್ದಲದೇ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

    ಐಎಎಸ್ ಅಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಮಿತಿಯ ತನಿಖಾ ವರದಿಯನ್ನಾಧಿರಿ ಸರ್ಕಾರ ಅಧೀನ ಕಾರ್ಯದರ್ಶಿ ಕೆ.ಲತಾ ಅವರು ಮುಡಾದ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಅವರಿಗೆ ನೋಟಿಸ್‌ ನೀಡಿದ್ದಾರೆ.

    ಮುಡಾ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಮಿತಿಯ ನೇತೃತ್ವದಲ್ಲಿ ಇಲಾಖೆ ಮಟ್ಟದಲ್ಲಿ ತನಿಖೆ ನಡೆಸಲಾಗಿತ್ತು. ಬಳಿಕ ಆ ವರದಿಯನ್ನ ಇಲಾಖೆಗೆ ಸಲ್ಲಿಸಲಾಗಿತ್ತು. ಈ ವರದಿಯಲ್ಲಿ 8 ಪ್ರಕರಣಗಳಲ್ಲಿ ಬದಲಿ ನಿವೇಶನ ಹಂಚಿಕೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ಎಂಬುದು ಸಾಕ್ಷಿ ಸಮೇತ ಸಾಭೀತಾಗಿದೆ. ಇದರಿಂದ ಮುಡಾಗೆ ಹಾಗೂ ಸರ್ಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ನಷ್ಟ ಉಂಟಾಗಿದೆ, ದಿನೇಶ್‌ ಕುಮಾರ್‌ ಅವರು ಮುಡಾ ಆಯುಕ್ತರಾಗಿದ್ದ ಸಂದರ್ಭದಲ್ಲಿ ಈ ನಷ್ಟ ಉಂಟಾಗಿದೆ ಎಂಬ ಅಂಶಗಳನ್ನ ಉಲ್ಲೇಖ ಮಾಡಲಾಗಿದೆ. ವರಧಿಯನ್ನಾಧರಿಸಿ ಸರ್ಕಾರದ ಅಧೀನ ಕಾರ್ಯದರ್ಶಿಗಳು ದಿನೇಶ್‌ ಕುಮಾರ್‌ ಅವರಿಗೆ ನೋಟಿಸ್‌ ಜಾರಿಗೊಳಿಸಿದ್ದಾರೆ.

    ನೋಟಿಸ್‌ ಕೊಟ್ಟಿರುವ ಸರ್ಕಾರ ಅಧೀನ ಕಾರ್ಯದರ್ಶಿ ಕೆ.ಲತಾ, ವರದಿಯಲ್ಲಿ ಉಲ್ಲೇಖವಾಗಿರುವ ಎಲ್ಲಾ ಹಂತದ ಅಧಿಕಾರಿಗಳ ಸಂಪೂರ್ಣ ಮಾಹಿತಿ ಕೊಡಬೇಕು. ಸರ್ಕಾರಕ್ಕೆ ಉಂಟಾದ ಆರ್ಥಿಕ ನಷ್ಟದ ಬಗ್ಗೆ ಅಂದಾಜು ವಿವರ ಸಲ್ಲಿಸಬೇಕು. ಆ ಎಲ್ಲಾ ಕಡತಗಳ ದೃಢೀಕೃತ ಆದೇಶ ಪ್ರತಿಗಳನ್ನ ನೀಡಬೇಕೆಂದು ನೋಟೀಸ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಗುಲಾಬ್ ಜಾಮೂನ್ ಅಂತ ನಂಬರ್ ಸೇವ್ ಮಾಡಿಕೊಂಡಿದ್ದ ಶ್ವೇತಾ – ವರ್ತೂರ್‌ ಪ್ರಕಾಶ್‌ಗೆ ಬಂಧನ ಭೀತಿ?

    ಈ ವಿಚಾರದಲ್ಲಿ ಯಾವುದೇ ಒಬ್ಬ ನೌಕರನನ್ನ ಪ್ರಕರಣದಿಂದ ಹೊರಗುಳಿಯಲು ಆಸ್ಪದ ಕೊಟ್ಟಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸುತ್ತೇವೆಂದು ಇಂದಿನ ಆಯುಕ್ತರಿಗೆ ಎಚ್ಚರಿಕೆ ಸಹ ಕೊಟ್ಟಿದ್ದಾರೆ. ಈ ಕುರಿತು ಇಂದಿನ ಆಯುಕ್ತರಿಗೆ ಸರ್ಕಾರದ ಅಧೀನ ಕಾರ್ಯದರ್ಶಿ ಬರೆದಿರುವ ಸುತ್ತೋಲೆ ಪಬ್ಲಿಕ್‌ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಸಿರಿಯಾದಲ್ಲಿ ಬಿಕ್ಕಟ್ಟು – ಅಲ್ಲೋಲ ಕಲ್ಲೋಲ ಎಬ್ಬಿಸಿದೆ ಆಕೆಯ ಒಂದು ವೀಡಿಯೋ; ದೊಡ್ಡಣ್ಣನ ಕುತಂತ್ರದಿಂದ ಹೀಗಾಯ್ತಾ?

  • MUDA Case | ಮುಡಾ ಬ್ರಹ್ಮಾಂಡ ಭ್ರಷ್ಟಾಚಾರಕ್ಕಿತ್ತಾ ಐಎಎಸ್ ಅಧಿಕಾರಿಯ ಶ್ರೀರಕ್ಷೆ?

    MUDA Case | ಮುಡಾ ಬ್ರಹ್ಮಾಂಡ ಭ್ರಷ್ಟಾಚಾರಕ್ಕಿತ್ತಾ ಐಎಎಸ್ ಅಧಿಕಾರಿಯ ಶ್ರೀರಕ್ಷೆ?

    – 144 ಫೈಲ್‌ ತೆಗೆದುಕೊಂಡು ಹೋದದ್ದು ನಿಜವೇ?
    – ಲೋಕಾಯುಕ್ತ ಸರ್ಚ್‌ ವಾರೆಂಟ್‌ನಲ್ಲಿ ಸ್ಫೋಟಕ ಮಾಹಿತಿ

    ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ) ಸೈಟು ಹಂಚಿಕೆ ಅಕ್ರಮದ (MUDA Scam) ತನಿಖೆ ಚುರುಕು ಪಡೆದಿರುವ ಹೊತ್ತಿನಲ್ಲೇ ಮತ್ತೊಂದು ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಇದರಿಂದ ಮುಡಾ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನಗರಾಭಿವೃದ್ಧಿ ಇಲಾಖೆಯ ಐಎಎಸ್ ಅಧಿಕಾರಿಯ ಶ್ರೀರಕ್ಷೆ ಇತ್ತಾ? ಅನ್ನೂ ಅನುಮಾನಕ್ಕೆ ಲೋಕಾಯುಕ್ತದ (Lokayukta) ಅಧಿಕೃತ ದಾಖಲೆ ಎಡೆಮಾಡಿಕೊಟ್ಟಿದೆ.

    ಹೌದು. ಬ್ರಹ್ಮಾಂಡ ಭ್ರಷ್ಟಾಚಾರದ ಹಿನ್ನೆಲೆ ಮುಡಾ ಮೂಡಾದಲ್ಲಿನ ದಾಖಲೆ ಜಪ್ತಿಗೆ ಲೋಕಾಯುಕ್ತ ಸರ್ಚ್ ವಾರೆಂಟ್ (Search Warrant) ಸಿದ್ಧಪಡಿಸಿಕೊಂಡಿತ್ತು. ಜೂನ್ 28ರ ಸಂಜೆ ಸರ್ಚ್ ವಾರೆಂಟ್ ಸಿದ್ಧವಾಗಿತ್ತು. ಸರ್ಚ್ ವಾರೆಂಟ್ ಸಿದ್ಧವಾದ 12 ತಾಸಿನೊಳಗೆ (ಜೂನ್ 29ರ ಬೆಳಗ್ಗೆ ) ಸಿನಿಮೀಯ ರೀತಿಯಲ್ಲಿ ಮೈಸೂರು ಪ್ರಾಧಿಕಾರಕ್ಕೆ ಐಎಎಸ್‌ ಅಧಿಕಾರಿ ಬಂದಿದ್ದರು. ಒಟ್ಟು 144 ಕಡತಗಳನ್ನ ತೆಗೆದುಕೊಂಡು ಹೋಗಿದ್ದರು ಲೋಕಾಯುಕ್ತವೇ ತನ್ನ ರಿಪೋರ್ಟ್‌ನಲ್ಲಿ ಉಲ್ಲೇಖಿಸಿತ್ತು. ಇನ್ನೂ ನಾವು ದಾಳಿ ಮಾಡಿ ಪ್ರಯೋಜನ ಇಲ್ಲ ಎಂದು ಲಿಖಿತವಾಗಿ ಉಲ್ಲೇಖಿಸಿ ಲೋಕಾಯುಕ್ತ ಸರ್ಚ್ ವಾರೆಂಟ್ ರದ್ದು ಪಡಿಸಿಕೊಂಡಿತ್ತು ಎಂದು ದಾಖಲೆಯಲ್ಲಿ ತಿಳಿದುಬಂದಿದೆ. ಇದನ್ನೂ ಓದಿ: MUDA Scam| ನೋಟಿಸ್‌ ಇಲ್ಲದೇ ರಾತ್ರಿ ದಿಢೀರ್‌ ಲೋಕಾ ಎಸ್‌ಪಿ ಕಚೇರಿಗೆ ಭೇಟಿ ನೀಡಿದ ಸಿಎಂ ಬಾಮೈದ!

    ಸರ್ಚ್ ವಾರೆಂಟ್‌ನಲ್ಲಿ ಇದ್ದ ಅಂಶಗಳೇನು?
    ಜೂನ್ 28ರ ಸಂಜೆ ಲೋಕಾಯುಕ್ತ ಸರ್ಚ್‌ ವಾರಂಟ್‌ನಲ್ಲಿ ಹಲವು ಸ್ಫೋಟಕ ಮಾಹಿತಿ ಬೆಳಿಕಿಗೆ ಬಂದಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸೈಟ್ ಹಂಚಿಕೆಯಲ್ಲಿ ಗೋಲ್ ಮಾಲ್ ಆಗುತ್ತಿದೆ. ಬದಲಿ ನಿವೇಶ ಕೊಡುವ ವಿಚಾರದಲ್ಲಿ ಎಲ್ಲಾ ಕಾನೂನು ಉಲ್ಲಂಘನೆ ಆಗಿದೆ. ಎಲ್ಲಾ ಅಕ್ರಮ ನೀತಿಗಳ ಅನುಸರಿಸಿ ನಿವೇಶನ ಮಂಜೂರು ಮಾಡಲಾಗುತ್ತಿದೆ, ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ. ಇದರ ಬಗ್ಗೆ ನೋಟಿಸ್ ಕೊಟ್ಟು ದಾಖಲೆ ಕೇಳಿದರೆ ಅಧಿಕಾರಿಗಳು ಯಾವ ದಾಖಲೆ ಕೊಡುವುದಿಲ್ಲ. ದಾಖಲೆ ಕೇಳಿದ ಕೂಡಲೇ ದಾಖಲೆ ನಾಶಮಾಡುತ್ತಾರೆ. ಅಲ್ಲದೇ ದಾಖಲೆಗಳನ್ನು ಸುಟ್ಟು ಹಾಕುತ್ತಾರೆ. ಇದಕ್ಕಾಗಿ ದಿಢೀರ್ ದಾಳಿ ಮಾಡಿ ದಾಖಲೆ ಜಪ್ತಿ ಮಾಡುವ ಅವಶ್ಯಕತೆ ಇದೆ. ನಗರ ಯೋಜನಾ ವಿಭಾಗ, ಮುಡಾ ಸೂಪರಿಂಟೆಂಡೆಂಟ್ ಕಚೇರಿಯಲ್ಲಿನ ಮಹತ್ವದ ದಾಖಲೆ ಜಪ್ತಿ ಮಾಡಲೇ ಬೇಕಾಗಿದೆ. ಹೀಗಾಗಿ ದಿಢೀರ್ ದಾಳಿ ಮಾಡಲು ಸರ್ಚ್ ವಾರೆಂಟ್ ಜಾರಿ ಮಾಡಲಾಗಿತ್ತು. ಇದನ್ನೂ ಓದಿ: ಸಿದ್ದರಾಮಯ್ಯಗೆ 120 ಕೋಟಿ ರೂ. ಪರಿಹಾರ ಕೊಡಬೇಕಿತ್ತು: ಸಿಎಂ ಪರ ಮಾಜಿ ಶಾಸಕ ಬ್ಯಾಟಿಂಗ್‌

    ಟೈಂ ಲೈನ್:
    * ಜೂನ್ 28ರ ಸಂಜೆ ಸರ್ಚ್ ವಾರೆಂಟ್ ಸಿದ್ಧ.
    * ಜೂನ್ 29ರ ಬೆಳಗ್ಗೆ ಐಎಎಸ್ ಅಧಿಕಾರಿ ಪ್ರಾಧಿಕಾರಕ್ಕೆ ಎಂಟ್ರಿ.
    * ಜುಲೈ 1ಕ್ಕೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಪ್ರಾಧಿಕಾರಕ್ಕೆ ದಿಢೀರ್ ಆಗಮನ ಸಭೆ.
    * ಜುಲೈ 2ಕ್ಕೆ ಮೈಸೂರು ಲೋಕಾಯುಕ್ತರ ವರ್ಗಾವಣೆ
    * ಈ ಎಲ್ಲಾ ಬೆಳವಣಿಗೆಗಳನ್ನು ಲಿಖಿತವಾಗಿ ಉಲ್ಲೇಖಿಸಿ ಸರ್ಚ್ ವಾರೆಂಟ್ ರದ್ದು.
    * ಐಎಎಸ್ ಅಧಿಕಾರಿ ಬಂದು 144 ಫೈಲ್‌ ತೆಗೆದುಕೊಂಡು ಹೋಗಿದ್ದಾರೆ ಎಂದು ಲೋಕಾಯುಕ್ತ ರೀಪೋರ್ಟ್

  • ಅಕ್ರಮ ಹಣ ವರ್ಗಾವಣೆ ಕೇಸ್‌ – ಹಿರಿಯ ಐಎಎಸ್‌ ಅಧಿಕಾರಿ, ಆರ್‌ಜೆಡಿ ಮಾಜಿ ಶಾಸಕ ಅರೆಸ್ಟ್‌

    ಅಕ್ರಮ ಹಣ ವರ್ಗಾವಣೆ ಕೇಸ್‌ – ಹಿರಿಯ ಐಎಎಸ್‌ ಅಧಿಕಾರಿ, ಆರ್‌ಜೆಡಿ ಮಾಜಿ ಶಾಸಕ ಅರೆಸ್ಟ್‌

    ಪಾಟ್ನಾ: ಬಿಹಾರ ವಿದ್ಯುತ್ ಸಚಿವಾಲಯದಲ್ಲಿ (Bihar Power Ministry) ನಡೆದಿದೆ ಎನ್ನಲಾದ ಟೆಂಡರ್ ಹಗರಣ ಪ್ರಕರಣಕ್ಕೆ ಸಬಂಧಿಸಿದಂತೆ ಬಿಹಾರದ ಹಿರಿಯ ಐಎಎಸ್ ಅಧಿಕಾರಿ ಮತ್ತು ಆರ್‌ಜೆಡಿ ಮಾಜಿ ಶಾಸಕರೊಬ್ಬರನ್ನ ಜಾರಿ ನಿರ್ದೇಶನಾಲಯ (ED) ಬಂಧಿಸಿದೆ.

    ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಸೆಕ್ಷನ್‌ಗಳ ಅಡಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಸಂಜೀವ್‌ ಹನ್ಸ್‌ ಅವರನ್ನ ಪಾಟ್ನಾದಲ್ಲಿ ಮತ್ತು ಗುಲಾಬ್‌ ಯಾದವ್‌ ಅವರನ್ನ ದೆಹಲಿಯಲ್ಲಿ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಬಿಹಾರದ ವಿದ್ಯುತ್ ಸಚಿವಾಲಯದ ಟೆಂಡರ್ ಹಗರಣದಲ್ಲಿ ಭಾಗಿಯಾಗಿದ್ದರು ಎಂಬ ಆರೋಪ ಇವರ ಮೇಲಿದೆ. ಇದನ್ನೂ ಓದಿ: ತಲೆ ಸೀಳಿದ ಬುಲೆಟ್‌, ಬೆರಳು ಕಟ್‌; ಭೀಕರ ಹತ್ಯೆಯಾದ ಹಮಾಸ್‌ ಮುಖ್ಯಸ್ಥನ ದೇಹ ಸ್ಥಿತಿ ಹೇಗಿತ್ತು?

    ಬಿಹಾರ ಕೇಡರ್ ಐಎಎಸ್ ಅಧಿಕಾರಿ ಸಂಜೀವ್ ಹನ್ಸ್ ರಾಜ್ಯ ವಿದ್ಯುತ್ ಇಲಾಖೆಗೆ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಕಾನೂನು ಜಾರಿ ನಿರ್ದೇಶನಾಲಯ ಅವರ ನಿವಾಸದ ಮೇಲೆ ಮೊದಲು ದಾಳಿ ನಡೆಸಿತ್ತು. ಶೋಧ ಕಾರ್ಯಾಚರಣೆ ಬಳಿಕ ಅವರನ್ನು ಸಾಮಾನ್ಯ ಆಡಳಿತ ವಿಭಾಗಕ್ಕೆ ಆಗಸ್ಟ್‌ನಲ್ಲಿ ವರ್ಗಾಯಿಸಲಾಗಿತ್ತು. ಝಂಜಾರ್ಪುರ ಮಾಜಿ ಶಾಸಕ ಗುಲಾಬ್ ಯಾದವ್, ಹನ್ಸ್ ಅವರ ನಿಕಟವರ್ತಿ ಎಂದು ಮೂಲಗಳು ತಿಳಿಸಿವೆ.

    ಹನ್ಸ್ ಹಾಗೂ ಯಾದವ್ ಅವರಿಗೆ ಸೇರಿದ ಹಲವು ಆಸ್ತಿಗಳ ಮೇಲೆ ಗುರುವಾರ ಕೊನೆಯ ಸುತ್ತಿನ ದಾಳಿ ನಡೆಸಿ ಶೋಧ ಕಾರ್ಯ ನಡೆಸಿತ್ತು. ಬಳಿಕ ಶುಕ್ರವಾರ ಪಾಟ್ನಾದಲ್ಲಿ ಹನ್ಸ್ ಅವರನ್ನು ಬಂಧಿಸಿದ್ದರೆ, ಯಾದವ್ ಅವರನ್ನು ಹಣ ದುರ್ಬಳಕೆ ಕಾಯ್ದೆಯಡಿ ದೆಹಲಿಯಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: Chattisgarh | ಅಬುಜ್ಮಾರ್ ಎನ್‌ಕೌಂಟರ್‌ನಲ್ಲಿ 38 ಮಾವೋವಾದಿಗಳ ಹತ್ಯೆ

    ಬಿಹಾರ ಪೊಲೀಸರು ದಾಖಲಿಸಿದ ಎಫ್ಐಆರ್‌ನಲ್ಲಿ ಹಣ ದುರುಪಯೋಗ ಆರೋಪ ಹೊರಿಸಲಾಗಿದೆ. ಸರ್ಕಾರಿ ಉದ್ಯೋಗ ಕೊಡಿಸಲು ನೆರವಾಗುವ ನೆಪದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವೂ ಹನ್ಸ್ ಮೇಲಿತ್ತು. ಆದರೆ ಪಾಟ್ನಾ ಹೈಕೋರ್ಟ್ ಈ ಪ್ರಕರಣವನ್ನು ಕಳೆದ ಆಗಸ್ಟ್‌ನಲ್ಲಿ ವಜಾಗೊಳಿಸಿತ್ತು. ಇದನ್ನೂ ಓದಿ: ಬಿಬಿಎಂಪಿಯಿಂದ ತುರ್ತು ಇ-ಖಾತಾ ಪಡೆಯಲು ಮಾರ್ಗಸೂಚಿ ಬಿಡುಗಡೆ – ಗೈಡ್‌ಲೈನ್‌ನಲ್ಲಿ ಏನಿದೆ?

  • ಕರ್ನಾಟಕ ಗೆಜೆಟಿಯರ್‌ಗೆ ರೋಹಿಣಿ ಸಿಂಧೂರಿ ಚೀಫ್ ಎಡಿಟರ್

    ಕರ್ನಾಟಕ ಗೆಜೆಟಿಯರ್‌ಗೆ ರೋಹಿಣಿ ಸಿಂಧೂರಿ ಚೀಫ್ ಎಡಿಟರ್

    ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ಕೊನೆಗೂ ಸರ್ಕಾರ ಹುದ್ದೆ ನೀಡಿದೆ. ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರ ಹುದ್ದೆಗೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ.

    ಕಳೆದ ಕೆಲ ತಿಂಗಳ ಹಿಂದೆ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ನಡುವೆ ಕಿತ್ತಾಟ ನಡೆದಿತ್ತು. ಈ ವೇಳೆ ಇಬ್ಬರಿಗೂ ಸರ್ಕಾರ ಹುದ್ದೆಯನ್ನು ನೀಡದೆ ವರ್ಗಾವಣೆ ಮಾಡಿತ್ತು. ಕಳೆದ 6 ತಿಂಗಳಿನಿಂದ ಸರ್ಕಾರ ರೋಹಿಣಿ ಸಿಂಧೂರಿಗೆ ಯಾವುದೇ ಹುದ್ದೆ ನೀಡಿರಲಿಲ್ಲ. ಇದನ್ನೂ ಓದಿ: ಚೈತ್ರಾ ಕುಂದಾಪುರ ವಂಚನೆ ಬಯಲಾಗ್ತಿದ್ದಂತೆ ಬಿಜೆಪಿ ಟೀಕಿಸಿದ ಕಾಂಗ್ರೆಸ್

    ಈಗಾಗಲೇ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತೆ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇದರಲ್ಲಿ ರೋಹಿಣಿ ಸಿಂಧೂರಿಗೂ ಹುದ್ದೆ ನೀಡಿದೆ. ಇದೀಗ ರೋಹಿಣಿ ಸಿಂಧೂರಿಗೆ ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರಾಗಿ ವರ್ಗಾವಣೆ ಮಾಡಿದೆ. ಇದನ್ನೂ ಓದಿ: ಯಾವುದೋ ಫೋನ್ ಬಂತೆಂದು ಕಾರ್ಯಕ್ರಮ ರದ್ದು ಮಾಡಿದ್ದ ಚೈತ್ರಾ ಕುಂದಾಪುರ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಐಎಎಸ್ ಅಧಿಕಾರಿಯನ್ನೇ ಒತ್ತೆಯಾಳಾಗಿ ಇರಿಸಿ, ಥಳಿಸಿದ ಜನಸಮೂಹ

    ಐಎಎಸ್ ಅಧಿಕಾರಿಯನ್ನೇ ಒತ್ತೆಯಾಳಾಗಿ ಇರಿಸಿ, ಥಳಿಸಿದ ಜನಸಮೂಹ

    ಗಾಂಧಿನಗರ: ಐಎಎಸ್ ಅಧಿಕಾರಿಯೊಬ್ಬರನ್ನು (IAS officer) ಜನಸಮೂಹವೊಂದು ಒತ್ತೆಯಾಳಾಗಿ (Hostage) ಇರಿಸಿ ಥಳಿಸಿರುವ ಘಟನೆ ಗುಜರಾತ್‌ನಲ್ಲಿ (Gujarat) ನಡೆದಿದೆ.

    ಗುಜರಾತ್‌ನ ಐಎಎಸ್ ಅಧಿಕಾರಿ ನಿತಿನ್ ಸಾಂಗ್ವಾನ್ (Nitin Sangwan) ಅವರು ಸಬರ್‌ಕಾಂತ್ ಜಿಲ್ಲೆಯ ಘರೋಯ್ ಅಣೆಕಟ್ಟಿನ ಬಳಿಯ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭ ಮೀನುಗಾರಿಕೆಯಲ್ಲಿ ತೊಡಗಿದ್ದ ಗುಂಪೊಂದು ಅವರನ್ನು ಒತ್ತೆಯಾಳಾಗಿ ಇರಿಸಿ, ಥಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    CRIME 2

    ವರದಿಗಳ ಪ್ರಕಾರ ಮೀನುಗಾರಿಕೆ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದ್ದು, ಈ ಹಿನ್ನೆಲೆ ಐಎಎಸ್ ಅಧಿಕಾರಿಯನ್ನು ಜನರ ಗುಂಪು ಒತ್ತೆಯಾಳಾಗಿ ಇರಿಸಿ ಥಳಿಸಿದೆ ಎನ್ನಲಾಗಿದೆ.

    ಮೀನುಗಾರಿಕಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸಾಂಗ್ವಾನ್ ಅವರು ಸೋಮವಾರ ತಮ್ಮ ಅಧೀನ ಸಿಬ್ಬಂದಿಯೊಂದಿಗೆ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮೀನುಗಾರಿಕೆಯಲ್ಲಿ ತೊಡಗಿದ್ದವರು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ತಮ್ಮ ಜೊತೆಗಿದ್ದ ಸಿಬ್ಬಂದಿ ಹಲ್ಲೆಯಲ್ಲಿ ಗಾಯಗೊಂಡಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    KILLING CRIME

    ಸಾಂಗ್ವಾನ್ ಅವರು ಪೊಲೀಸ್ ಠಾಣೆಗೆ ನೀಡಿರುವ ದೂರಿನ ಪ್ರಕಾರ, ಮೀನುಗಾರಿಕಾ ಗುತ್ತಿಗೆದಾರರಲ್ಲಿ ಒಬ್ಬರಾದ ಬಾಬು ಪರ್ಮಾರ್ ಪ್ರಮುಖ ಆರೋಪಿ. ಸಾಂಗ್ವಾನ್ ಸ್ಥಳಕ್ಕೆ ಭೇಟಿ ನೀಡಿದ್ದಾಗ ಆತ ವಾಗ್ವಾದ ಪ್ರಾರಂಭಿಸಿದ್ದಾನೆ. ಇದಕ್ಕೆ ಸಾಂಗ್ವಾನ್ ಬಾಬು ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿಯಿಂದ ಅಂತರ ಕಾಯ್ದುಕೊಂಡ ನಾರಾಯಣಗೌಡ- ಶಕ್ತಿಪ್ರದರ್ಶನಕ್ಕೆ ಸಿದ್ಧತೆ ನಡೆಸ್ತಿದ್ದಾರಾ ಸಚಿವರು?

    ಈ ವೇಳೆ ಕೋಪಗೊಂಡ ಬಾಬು, ಸಾಂಗ್ವಾನ್ ಅವರ ಮೊಣಕಾಲನ್ನು ಕಚ್ಚಿದ್ದಾನೆ. ಬಳಿಕ ಇನ್ನೂ ನಾಲ್ವರು ಅಲ್ಲಿಗೆ ಬಂದು ಐಎಎಸ್ ಅಧಿಕಾರಿಗೆ ಥಳಿಸಿದ್ದಾರೆ. ಬಳಿಕ ಬಾಬು ಇನ್ನೂ 10-12 ಜನರನ್ನು ಕರೆದಿದ್ದು, ಅವರೆಲ್ಲರೂ ಮಾರಕಾಸ್ತ್ರಗಳನ್ನು ಹಿಡಿದು ಬಂದಿದ್ದಾರೆ. ಬಳಿಕ ಸಾಂಗ್ವಾನ್ ಅವರನ್ನು ಒತ್ತೆಯಾಳಾಗಿ ಇರಿಸಿ, ಥಳಿಸಿದ್ದಾರೆ.

    CRIME

    ತಮ್ಮ ಮೇಲೆ ಪೊಲೀಸ್ ದೂರನ್ನು ನೀಡಬಾರದು ಎಂದು ಜನರ ಗುಂಪು ಸಾಂಗ್ವಾನ್ ಅವರಿಗೆ ಬೆದರಿಕೆ ಹಾಕಿದೆ. ಇದಕ್ಕೆ ಸಾಂಗ್ವಾನ್ ಒಪ್ಪಿದ್ದು, ಕಾಗದದಲ್ಲಿ ಇದನ್ನು ಬರೆದು ಸಹಿಯನ್ನೂ ಹಾಕಿದ್ದಾರೆ. ಬಳಿಕ ಸಾಂಗ್ವಾನ್ ಅವರನ್ನು ಗುಂಪು ಹೋಗಲು ಬಿಟ್ಟಿದೆ.

    ಐಎಎಸ್ ಅಧಿಕಾರಿ ಮೇಲೆ ದಾಳಿ ನಡೆಸಿರುವ ಆರೋಪದ ಮೇಲೆ ಪೊಲೀಸರು ಇದೀಗ ಮೂವರನ್ನು ಬಂಧಿಸಿದ್ದಾರೆ. ಇತರ ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೆಎಂಎಫ್ ಹಾಲು ವಿತರಣೆಯಲ್ಲಿ ತೊಂದರೆ- ನಂದಿನಿ ಬೂತ್‍ಗಳಿಗೆ ಅರ್ಧಕರ್ಧ ಸಪ್ಲೈ

  • ಮಹಿಳೆ ಮೇಲೆ ಅತ್ಯಾಚಾರ; ವೀಡಿಯೋ ಲೀಕ್‌ ಮಾಡೋದಾಗಿ ಬೆದರಿಕೆ ಹಾಕಿದ್ದ IAS ಅಧಿಕಾರಿ, ಮಾಜಿ ಶಾಸಕ ವಿರುದ್ಧ ಕೇಸ್‌

    ಮಹಿಳೆ ಮೇಲೆ ಅತ್ಯಾಚಾರ; ವೀಡಿಯೋ ಲೀಕ್‌ ಮಾಡೋದಾಗಿ ಬೆದರಿಕೆ ಹಾಕಿದ್ದ IAS ಅಧಿಕಾರಿ, ಮಾಜಿ ಶಾಸಕ ವಿರುದ್ಧ ಕೇಸ್‌

    ಪಾಟ್ನಾ: ಬಿಹಾರದಲ್ಲಿ (Bihar) ಮಹಿಳೆಯೊಬ್ಬರ ಮೇಲೆ ಅತ್ಯಾಚಾರ (Rape) ಎಸಗಿ ವೀಡಿಯೋ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಐಎಎಸ್‌ ಅಧಿಕಾರಿ (IAS Officer) ಹಾಗೂ ಮಾಜಿ ಶಾಸಕನ (Ex MLA) ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    ಹಿರಿಯ ಐಎಎಸ್‌ ಅಧಿಕಾರಿ ಸಂಜೀವ್‌ ಹನ್ಸ್‌ ಮತ್ತು ಆರ್‌ಜೆಡಿ ಮಾಜಿ ಶಾಸಕ ಗುಲಾಬ್‌ ಯಾದವ್‌ ವಿರುದ್ಧ ದಾನಾಪುರದ ನ್ಯಾಯಾಲಯ ಆದೇಶದ ಮೇರೆಗೆ ಪಾಟ್ನಾದ ರೂಪಸ್‌ಪುರ ಪೊಲೀಸ್ ಠಾಣೆಯಲ್ಲಿ ಕೇಸ್‌ ಹಾಕಿದ್ದಾರೆ. ಇದನ್ನೂ ಓದಿ: ಹಿಮದಿಂದ ಕೂಡಿದ್ದ ಟ್ರ್ಯಾಕ್‌ನಿಂದ ಜಾರಿ ಕಮರಿಗೆ ಬಿದ್ದ ವಾಹನ – 3 ಯೋಧರು ಹುತಾತ್ಮ

    2021 ರಲ್ಲಿ ದೆಹಲಿಯ ಹೋಟೆಲ್‌ನಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಮಹಿಳೆ ದೂರಿದ್ದರು. ಐಎಎಸ್‌ ಅಧಿಕಾರಿ, ಮಾಜಿ ಶಾಸಕನ ವಿರುದ್ಧ ಆರೋಪ ಹೊರಿಸಲಾಗಿದೆ. ಬಂದೂಕು ತೋರಿಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಗಂಭೀರ ಆರೋಪ ಹೊರಿಸಲಾಗಿದೆ.

    ಸಂತ್ರಸ್ತೆ ಮೊದಲು ಸಿವಿಲ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್‌ ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಸಂತ್ರಸ್ತೆ ಪಾಟ್ನಾ ಹೈಕೋರ್ಟ್‌ನ ಬಾಗಿಲು ತಟ್ಟಿದ್ದು, ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸದ ಪಾಟ್ನಾ ಪೊಲೀಸರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ಸಿವಿಲ್ ನ್ಯಾಯಾಲಯವು ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸುವಂತೆ ಸೂಚಿಸಿತು. ಈ ವಿಚಾರದಲ್ಲಿ ನಿರಾಸಕ್ತಿ ವಹಿಸಿದ್ದ ಪಾಟ್ನಾ ಪೊಲೀಸರಿಗೆ ಎಚ್ಚರಿಕೆಯನ್ನೂ ನೀಡಿದೆ. ಇದನ್ನೂ ಓದಿ: ಮದುವೆಯಾಗಲು ಹೆಣ್ಣು ಹುಡುಕಿಕೊಡುವಂತೆ ಯುವಕ ಕರೆ- ಡಿಟೇಲ್ಸ್ ಕಳುಹಿಸು ಅಂದ್ರು ಶಾಸಕ

    ಆಗ ಶಾಸಕನಾಗಿದ್ದ ಗುಲಾಬ್‌ ಯಾದವ್‌, ಮಹಿಳಾ ಆಯೋಗದ ಸದಸ್ಯೆ ಮಾಡುವುದಾಗಿ ಭರವಸೆ ನೀಡಿ ಪಾಟ್ನಾದ ತನ್ನ ನಿವಾಸದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ. ಅದನ್ನು ವೀಡಿಯೋ ಮಾಡಿಕೊಂಡು ಆಕೆಗೆ ಬ್ಲ್ಯಾಕ್‌ಮೇಲ್‌ ಮಾಡಿದ್ದ. ಮತ್ತೆ ಆಕೆಯನ್ನು ದೆಹಲಿಗೆ ಕರೆಸಿಕೊಂಡು ತಾನು ಹಾಗೂ ಐಎಎಸ್‌ ಅಧಿಕಾರಿ ಇಬ್ಬರೂ ಅತ್ಯಾಚಾರ ಎಸಗಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇನ್‍ಸ್ಟಾಗ್ರಾಮ್‍ನಲ್ಲಿ ಚುನಾವಣಾ ಆಯೋಗದ ಕಾರ್‌ನೊಂದಿಗೆ ಐಎಎಸ್ ಅಧಿಕಾರಿ ಪೋಸ್ಟ್ – ಕರ್ತವ್ಯದಿಂದ ವಜಾ

    ಇನ್‍ಸ್ಟಾಗ್ರಾಮ್‍ನಲ್ಲಿ ಚುನಾವಣಾ ಆಯೋಗದ ಕಾರ್‌ನೊಂದಿಗೆ ಐಎಎಸ್ ಅಧಿಕಾರಿ ಪೋಸ್ಟ್ – ಕರ್ತವ್ಯದಿಂದ ವಜಾ

    ಗಾಂಧೀನಗರ: ಗುಜರಾತ್ ವಿಧಾನಸಭೆ (Gujarat Election) ಚುನಾವಣೆಗಾಗಿ ಚುನಾವಣಾ ವೀಕ್ಷಕರಾಗಿ ನೇಮಕಗೊಂಡಿದ್ದ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ (Abhishek Singh) ತಮ್ಮ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಫೋಟೋ ಪೋಸ್ಟ್ ಮಾಡಿದ್ದಕ್ಕಾಗಿ ಕೇಂದ್ರ ಚುನಾವಣಾ ಆಯೋಗ (Election Commission) ಅವರನ್ನು ಚುನಾವಣಾ ಕರ್ತವ್ಯದಿಂದ ತೆಗೆದುಹಾಕಿದೆ.

    ಅಭಿಷೇಕ್ ಸಿಂಗ್‍ರನ್ನು ಅಹಮದಾಬಾದ್‍ನ ಬಾಪುನಗರ ಮತ್ತು ಅಸರ್ವಾ ಎರಡು ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರಾಗಿ ನೇಮಕ ಮಾಡಲಾಗಿತ್ತು. ಆ ಬಳಿಕ ಅಭಿಷೇಕ್ ಸಿಂಗ್ ಇನ್‍ಸ್ಟಾಗ್ರಾಮ್‍ನಲ್ಲಿ ಚುನಾವಣಾ ಆಯೋಗದಿಂದ ನೀಡಲಾಗಿದ್ದ ಅಧಿಕೃತ ವಾಹನದ ಪಕ್ಕದಲ್ಲಿ ನಿಂತು ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ವಾಹನದ ಮುಂಭಾಗದಲ್ಲಿ ʼಭಾರತೀಯ ಚುನಾವಣಾ ಆಯೋಗದ ವೀಕ್ಷಕʼ ಎಂದು ಬರೆಯಲಾಗಿತ್ತು. ಇದನ್ನು ಗಮನಿಸಿ ಚುನಾವಣಾ ಆಯೋಗ ಅವರನ್ನು ಚುನಾವಣಾ ಕರ್ತವ್ಯದಿಂದ ತೆಗೆದು ಹಾಕಿದ್ದು, ಪ್ರಚಾರದ ಗೀಳಿನಿಂದಾಗಿ ಅಧಿಕಾರ ಕಳೆದುಕೊಂಡಿದ್ದಾರೆ. ಅವರ ಬದಲಿಗೆ ಸಾಮಾನ್ಯ ವೀಕ್ಷಕರನ್ನು ನೇಮಿಸುವವರೆಗೆ ಈ ಎರಡು ಕ್ಷೇತ್ರಗಳ ಉಸ್ತುವಾರಿಯನ್ನು ಐಎಎಸ್ ಅಧಿಕಾರಿ ಕ್ರಿಶನ್ ಬಾಜ್‍ಪೇಯ್ ಅವರಿಗೆ ನೀಡಲಾಗಿದೆ. ಕ್ರಿಶನ್ ಅವರು ಇತರ ಹತ್ತಿರದ ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರಾಗಿ ನೇಮಕಗೊಂಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಆಯ್ಕೆ ಸಮಿತಿ ವಜಾ – ಹೊಸ ಸಮಿತಿ ರಚನೆಗೆ ಅರ್ಜಿ ಆಹ್ವಾನ

     

    View this post on Instagram

     

    A post shared by Abhishek Singh (@abhishek_as_it_is)

    ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಭಿಷೇಕ್ ಸಿಂಗ್ ಅವರನ್ನು ತೆಗೆದುಹಾಕಲಾಗಿದೆ ಮತ್ತು ಸಾಮಾನ್ಯ ವೀಕ್ಷಕರನ್ನು ನೇಮಿಸುವವರೆಗೆ ಕ್ರಿಶನ್ ಬಾಜ್‍ಪೇಯ್ ಅವರಿಗೆ ಉಸ್ತುವಾರಿ ನೀಡಲಾಗಿದೆ ಎಂದು ಜಂಟಿ ಮುಖ್ಯ ಚುನಾವಣಾಧಿಕಾರಿ ಅಜಯ್ ಭಟ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ರಾಮನಿಗಿಂತ ರಾವಣ ಜ್ಞಾನಿ – ವಿವೇಕ ಇರುವುದರಿಂದ ಜನ ರಾಮನನ್ನು ಪೂಜಿಸುತ್ತಾರೆ: ರಾಜನಾಥ್ ಸಿಂಗ್

    Live Tv
    [brid partner=56869869 player=32851 video=960834 autoplay=true]

  • ಇಂದು ಸ್ಯಾನಿಟರಿ ಪ್ಯಾಡ್, ನಾಳೆ ಕಾಂಡೋಮ್ ಕೇಳ್ತೀರಿ- ಮಹಿಳಾ IAS ಅಧಿಕಾರಿ ವೀಡಿಯೋ ವೈರಲ್

    ಇಂದು ಸ್ಯಾನಿಟರಿ ಪ್ಯಾಡ್, ನಾಳೆ ಕಾಂಡೋಮ್ ಕೇಳ್ತೀರಿ- ಮಹಿಳಾ IAS ಅಧಿಕಾರಿ ವೀಡಿಯೋ ವೈರಲ್

    ಪಾಟ್ನಾ: ಮಹಿಳಾ ಐಎಎಸ್ ಅಧಿಕಾರಿಯೊಬ್ಬರು (IAS Officer) ಶಾಲಾ ವಿದ್ಯಾರ್ಥಿನಿ (Student) ಕಾಂಡೋಮ್ (Condom) ಬೇಕೇ? ಎಂದು ಖಾರವಾಗಿ ಪ್ರಶ್ನಿಸಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

    ಬಿಹಾರದ (Bihar) ಪಾಟ್ನಾದಲ್ಲಿ (Patna) ಮಹಿಳಾ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯೊಬ್ಬಳು ಸರ್ಕಾರ ಸ್ಯಾನಿಟರಿ ಪ್ಯಾಡ್ (Sanitary Pad) ನೀಡಬಹುದಾ ಎಂದು ಕೇಳಿದ ಪ್ರಶ್ನೆಗೆ ಅಧಿಕಾರಿ ಖಾರವಾಗಿ ಉತ್ತರಿಸಿದ್ದಾರೆ.

    ಬಿಹಾರದ ವಿದ್ಯಾರ್ಥಿನಿಯೊಬ್ಬಳು, ಸರ್ಕಾರ 20-30 ರೂ.ಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ನೀಡಬಹುದಾ ಎಂದು ಸರಳವಾಗಿ ಪ್ರಶ್ನಿಸಿದ್ದಾಳೆ. ಈ ವೇಳೆ ಉತ್ತರಿಸಿದ ಐಎಎಸ್ ಅಧಿಕಾರಿ ಹರ್ಜೋತ್ ಕೌರ್ ಭಮ್ರಾ, ಇಂದು ನೀವು ಸ್ಯಾನಿಟರಿ ಪ್ಯಾಡ್ ಕೇಳುತ್ತಿದ್ದೀರಿ, ನಾಳೆ ಜೀನ್ಸ್ ಕೂಡಾ ಕೇಳುತ್ತೀರಿ. ಬಳಿಕ ಕೆಲವು ಸುಂದರವಾದ ಪಾದುಕೆಗಳನ್ನೂ ಏಕೆ ಕೇಳಬಾರದು? ಕೊನೆಗೆ ಸರ್ಕಾರ ನಿಮಗೆ ಕುಟುಂಬ ಯೋಜನೆ ವಿಧಾನ, ಕಾಂಡೋಮ್‌ಗಳನ್ನೂ ಕೂಡಾ ನೀಡುತ್ತದೆ ಎಂಬುದನ್ನು ನೀವು ನಿರೀಕ್ಷಿಸುತ್ತೀರಿ ಅಲ್ವಾ? ಎಂದು ಕೇಳಿದ್ದಾರೆ. ಇದನ್ನೂ ಓದಿ: ಹೆಸರು ಬದಲಾವಣೆಗೆ ಮುಂದಾದ ಶೋಭಾ ಕರಂದ್ಲಾಜೆ – ಏನಿದು ಹೊಸ ವರಸೆ?

    ಈ ವೇಳೆ ವಿದ್ಯಾರ್ಥಿನಿ, ಜನರ ಮತಗಳಿಂದ ತಾನೇ ಸರ್ಕಾರ ರಚನೆಯಾಗುತ್ತದೆ? ಸರ್ಕಾರ ಜನರ ಸೇವೆ ಮಾಡುವುದರಲ್ಲಿ ತಪ್ಪೇನಿದೆ? ಎಂದು ಕೇಳಿದ್ದಾಳೆ. ಇದಕ್ಕೆ ಸಿಡಿಮಿಡಿಗೊಂಡ ಅಧಿಕಾರಿ, ಇದು ಮೂರ್ಖನದ ಪರಮಾವಧಿ. ನಿಮಗೆ ಮತ ಹಾಕಲು ಆಗಲ್ಲ ಅಂದ್ರೆ ಹಾಕಬೇಡಿ. ಬೇಕೆಂದರೆ ಪಾಕಿಸ್ತಾನಿಗಳಾಗಿ. ಹಣ ಹಾಗೂ ಸೇವೆಗೋಸ್ಕರ ನೀವು ಮತ ಹಾಕುತ್ತೀರಾ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಟ್‌ವೀಲರ್, ಪಿಟ್‌ಬುಲ್ ತಳಿಯ ನಾಯಿಗೆ ಈ ನಗರದಲ್ಲಿ ನಿಷೇಧ – ಉಲ್ಲಂಘಿಸಿದ್ರೆ ದಂಡ

    ಇದಕ್ಕೆ ಉತ್ತರಿಸಿದ ವಿದ್ಯಾರ್ಥಿನಿ, ನಾನು ಭಾರತೀಯಳು. ನಾನೇಕೆ ಪಾಕಿಸ್ತಾನಿಯಾಗಬೇಕು? ಎಂದು ಪ್ರಶ್ನಿಸಿದ್ದಾಳೆ. ಈ ವೀಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅಧಿಕಾರಿಯನ್ನು ಜನರು ವ್ಯಾಪಕವಾಗಿ ಟೀಕಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]