Tag: ಐಐಟಿ ಮದ್ರಾಸ್

  • ಗೋಮೂತ್ರದ ಔಷಧೀಯ ಗುಣಗಳನ್ನ ಪರಿಗಣಿಸಬೇಕು – ಐಐಟಿ ಮದ್ರಾಸ್‌ ನಿರ್ದೇಶಕ

    ಗೋಮೂತ್ರದ ಔಷಧೀಯ ಗುಣಗಳನ್ನ ಪರಿಗಣಿಸಬೇಕು – ಐಐಟಿ ಮದ್ರಾಸ್‌ ನಿರ್ದೇಶಕ

    – ಕಾಂಗ್ರೆಸ್‌ ಸಂಸದ ಪಿ. ಕಾರ್ತಿ ಚಿದಂಬರಂ ಆಕ್ಷೇಪ

    ಚೆನ್ನೈ: ಐಐಟಿ ಮದ್ರಾಸ್‌ ನಿರ್ದೇಶಕ ವಿ. ಕಾಮಕೋಟಿ (V Kamakoti) ಗೋಮೂತ್ರದಲ್ಲಿನ ಔಷಧೀಯ ಗುಣಗಳನ್ನ ಕೊಂಡಾಡಿರುವ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಐಐಟಿ ನಿರ್ದೇಶಕನ ಹೇಳಿಕೆಗೆ ತಮಿಳುನಾಡು ಕಾಂಗ್ರೆಸ್‌ ಸಂಸದ ಪಿ. ಕಾರ್ತಿ ಚಿದಂಬರಂ (Karti P Chidambaram) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಈ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಐಐಟಿ ಮದ್ರಾಸ್ ನಿರ್ದೇಶಕರು ನಕಲಿ ವಿಜ್ಞಾನವನ್ನು ಹರಡುತ್ತಿರುವುದು ಅಸಂಬದ್ಧವಾಗಿದೆ ಎಂದು ಆಕ್ಷೇಪಿಸಿದ್ದಾರೆ.

    ಕಾಮಕೋಟಿ ಹೇಳಿದ್ದೇನು?
    ಗೋಮೂತ್ರವು (Cow Urine) ಬ್ಯಾಕ್ಟೀರಿಯಾ ನಿರೋಧಕ, ಶಿಲೀಂಧ್ರಯ ನಿರೋಧಕ ಹಾಗೂ ಜೀರ್ಣಕಾರಕ ಗುಣಗಳನ್ನು ಹೊಂದಿದೆ. ಹೊಟ್ಟೆ ಉರಿ ಸಮಸ್ಯೆಯಂತಹ ಆರೋಗ್ಯ ಸಮಸ್ಯೆಗಳಿಗೆ ಗೋಮೂತ್ರ ಸೂಕ್ತ. ಅಲ್ಲದೇ ಗೋಮೂತ್ರದ ಔಷಧೀಯ ಗುಣಗಳನ್ನು ಪರಿಗಣಿಸಬೇಕು ಎಂದೂ ಕಾಮಕೋಟಿ ಎಂದೂ ಪ್ರತಿಪಾದಿಸಿದ್ದಾರೆ.

    ಇದೇ ತಿಂಗಳು ಜನವರಿ 15ರಂದು ಮಾತು ಪೊಂಗಲ್ ಪ್ರಯುಕ್ತ ಗೋ ಸಂರಕ್ಷಣಾ ಶಾಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುವಾಗ, ಸನ್ಯಾಸಿಯೊಬ್ಬರು ತೀವ್ರ ಜ್ವರವಿದ್ದಾಗ ಗೋಮೂತ್ರ ಸೇವಿಸಿ ಹೇಗೆ ಚೇತರಿಸಿಕೊಂಡರು ಎಂಬ ಉದಾಹರಣೆ ನೀಡುವಾಗ ಕಾಮಕೋಟಿ ಅವರು ಈ ಹೇಳಿಕೆಗಳನ್ನು ನೀಡಿದ್ದರು.

    ಸಂಶೋಧನಾ ವರದಿ ಹೇಳಿದ್ದೇನು?
    ಈ ಹಿಂದೆ ಉತ್ತರ ಪ್ರದೇಶದ ಬರೇಲಿಯಲ್ಲಿ ಇರುವ ಭಾರತೀಯ ಪಶು ಸಂಶೋಧನಾ ಸಂಸ್ಥೆ (IVRI) ಗೋಮೂತ್ರದ ಕುರಿತು ವರದಿಯೊಂದನ್ನ ಪ್ರಕಟಿಸಿತ್ತು. ಸಂಸ್ಕರಣೆ ಮಾಡದ, ತಾಜಾ ಗೋ ಮೂತ್ರದಲ್ಲಿ ವಿಷಕಾರಿ ಬ್ಯಾಕ್ಟೀರಿಯಾಗಳು ಇರುತ್ತವೆ. ಹೀಗಾಗಿ, ಗೋ ಮೂತ್ರದ ನೇರ ಸೇವನೆ ಮಾನವನ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ತಜ್ಞರ ವರದಿ ತಿಳಿಸಿತ್ತು.

  • ಜಿಂಕೆ ಮೇಲೆ ಕೋತಿ ಸವಾರಿ- ಐಐಟಿ ಮದ್ರಾಸ್‌ನಲ್ಲಿ ಅಪರೂಪದ ದೃಶ್ಯ ಸೆರೆ

    ಜಿಂಕೆ ಮೇಲೆ ಕೋತಿ ಸವಾರಿ- ಐಐಟಿ ಮದ್ರಾಸ್‌ನಲ್ಲಿ ಅಪರೂಪದ ದೃಶ್ಯ ಸೆರೆ

    ಚೆನ್ನೈ: ಕೆಲವೊಮ್ಮೆ ಸಾಮಾಜಿಕ ಮಾಧ್ಯಮಗಳಲ್ಲಿ‌ (Social Media) ಕಂಡು ಬರುವ ಮುಗ್ದ ಪ್ರಾಣಿಗಳ ವೀಡಿಯೋಗಳು (Animal Video) ಜನರನ್ನು ನಕ್ಕು ನಗಿಸದೇ ಇರಲಾರದು. ಪ್ರಾಣಿಗಳ ಆಟಾಟೋಪಗಳನ್ನು ನೋಡುವುದು ಜನರ ಖಿನ್ನತೆಗೆ ರಾಮಬಾಣವೂ ಹೌದು. ಇಂತಹುದೇ ಒಂದು ವೀಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

    ಎಂದಾದರೂ ನೀವು ಜಿಂಕೆಯ (Deer) ಮೇಲೆ ಕೋತಿ (Monkey) ಸವಾರಿ ಮಾಡಿರುವುದನ್ನು ನೋಡಿದ್ದೀರಾ? ಇಲ್ಲ ಎಂದಾದರೆ ಇಲ್ಲೊಂದು ಅಂತಹುದೇ ವೀಡಿಯೋ ವೈರಲ್ ಆಗುತ್ತಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ (IIT Madras) ಕ್ಯಾಂಪಸ್‌ನಲ್ಲಿ ಸೆರೆಹಿಡಿಯಲಾದ ಈ ವೀಡಿಯೋ ನೆಟ್ಟಿಗರ ಮನ ಗೆದ್ದಿದೆ.

    ವೀಡಿಯೋದಲ್ಲಿ ಜಿಂಕೆಯೊಂದು ಕ್ಯಾಂಪಸ್‌ನ ಕಟ್ಟಡಗಳ ಸಮೀಪ ಹುಲ್ಲನ್ನು ಮೇಯಲು ಅಡ್ಡಾಡುತ್ತಿದೆ. ಅದರ ಮೇಲೆ ಆರಾಮವಾಗಿ ಕುಳಿತ ಕೋತಿಯೊಂದು ಆ ಗಳಿಗೆಯನ್ನು ಆನಂದಿಸುತ್ತಿದೆ. ತನ್ನ ಮೇಲೆ ಮಂಗ ಸವಾರಿ ಮಾಡುತ್ತಿದ್ದರೂ ಜಿಂಕೆ ಕಿಂಚಿತ್ತೂ ವಿಚಲಿತವಾಗದೇ ಹಾಯಾಗಿ ಓಡಾಡಿಕೊಂಡಿದೆ. ಇದನ್ನೂ ಓದಿ: ರಾಜ್ಯದಲ್ಲಿ `108′ ಸಮಸ್ಯೆ – 2 ತಿಂಗಳಲ್ಲಿ ಬಗೆಹರಿಯಲಿದೆ ಎಂದ ಸುಧಾಕರ್

    ಇದೀಗ ವೀಡಿಯೋ ಭಾರೀ ವೈರಲ್ ಆಗುತ್ತಿರುವುದು ಮಾತ್ರವಲ್ಲದೇ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಐಐಟಿ ಮದ್ರಾಸ್‌ನಲ್ಲಿ ಮಂಗಗಳು ಹೀಗಿರುತ್ತವೆ ಎಂದು ಕೆಲವರು ಹೇಳಿದರೆ, ಇನ್ನೊಬ್ಬರು, ಮಂಗಗಳು ಮನುಷ್ಯರಂತೆ ಪ್ರಾಣಿಗಳ ಮೇಲೆ ಸವಾರಿ ಮಾಡಲು ಹೇಗೆ ಸಾಧ್ಯ ಎಂದು ಆಶ್ಚರ್ಯಪಟ್ಟಿದ್ದಾರೆ. ಇನ್ನೊಬ್ಬರು ಅದು ಐಐಟಿ ಕ್ಯಾಂಪಸ್‌ನ ಮಂಗ, ಹೀಗಾಗಿ ಇಷ್ಟೊಂದು ಸ್ಮಾರ್ಟ್ ಆಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

    ಐಐಟಿ ಮದ್ರಾಸ್ ಕ್ಯಾಂಪಸ್ ಅನ್ನು ಚೆನ್ನೈನ ಗಿಂಡಿ ರಾಷ್ಟ್ರೀಯ ಉದ್ಯಾನವನದ ಬಳಿ ನಿರ್ಮಿಸಲಾಗಿದ್ದು, ಅದರ ಹೆಚ್ಚಿನ ಭಾಗ ಸಂರಕ್ಷಿತ ಅರಣ್ಯ ಪ್ರದೇಶವಾಗಿದೆ. ಹೀಗಾಗಿ ಅಲ್ಲಿನ ಕ್ಯಾಂಪಸ್‌ನಲ್ಲಿ ಜಿಂಕೆ, ಕೋತಿ ಸೇರಿದಂತೆ ಅನೇಕ ಜಾತಿಯ ಪ್ರಾಣಿಗಳು ಕಂಡುಬರುವುದು ಸರ್ವೇಸಾಮಾನ್ಯವಾಗಿದೆ. ಇದನ್ನೂ ಓದಿ: ಅಪ್ಪು ಗುಣಗಳನ್ನ ಅಳವಡಿಸಿಕೊಳ್ಳಬೇಕು ಎಂದು ಫ್ಯಾನ್ಸ್‌ಗೆ ಉಪ್ಪಿ ಸಂದೇಶ

    Live Tv
    [brid partner=56869869 player=32851 video=960834 autoplay=true]

  • ದೆಹಲಿಯಲ್ಲಿ ಒಬ್ಬನಿಂದ ಇಬ್ಬರಿಗೆ ಸೋಂಕು: ಐಐಟಿ ಮದ್ರಾಸ್

    ದೆಹಲಿಯಲ್ಲಿ ಒಬ್ಬನಿಂದ ಇಬ್ಬರಿಗೆ ಸೋಂಕು: ಐಐಟಿ ಮದ್ರಾಸ್

    ನವದೆಹಲಿ: ದೆಹಲಿಯಲ್ಲಿ ಕೊರೊನಾ ನಾಲ್ಕನೇ ಅಲೆ ಕಾಡಲಾರಂಭಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಒಬ್ಬ ಸೋಂಕಿತ ವ್ಯಕ್ತಿಯಿಂದ ಇಬ್ಬರಿಗೆ ಕೊರೊನಾ ಹರಡುತ್ತಿದೆ ಎಂಬ ಅಂಶ ಐಐಟಿ ಮದ್ರಾಸ್‍ನ ವರದಿಯೊಂದರಲ್ಲಿ ತಿಳಿಸಿದೆ.

    ವರದಿ ಪ್ರಕಾರ ದೆಹಲಿಯಲ್ಲಿ ಕೊರೊನಾ ನಾಲ್ಕನೇ ಅಲೆ ಆರಂಭವಾಗಿದೆ. ಇಲ್ಲಿ ಒಬ್ಬ ಸೋಂಕಿತನಿಂದ ಇಬ್ಬರಿಗೆ ಸೋಂಕು ಹರಡುತ್ತಿದೆ ಎಂಬುದು ಸಂಶೋಧನೆಯಿಂದ ತಿಳಿದುಬಂದಿದೆ. ಐಐಟಿ-ಮದ್ರಾಸ್‍ನ ಗಣಿತಶಾಸ್ತ್ರ ವಿಭಾಗ ಮತ್ತು ಕಂಪ್ಯೂಟೇಶನಲ್ ಗಣಿತ ಮತ್ತು ದತ್ತಾಂಶ ವಿಜ್ಞಾನ ಕೇಂದ್ರದ ಪ್ರೊ.ನೀಲೇಶ್ ಎಸ್ ಉಪಾಧ್ಯೆಯ ಮತ್ತು ಪ್ರೊ.ಎಸ್ ಸುಂದರ್ ಅವರ ನೇತೃತ್ವದಲ್ಲಿ ನಡೆದ ಸರ್ವೇಯಲ್ಲಿ ಈ ಅಂಶ ಪತ್ತೆಯಾಗಿದೆ. ಇದನ್ನೂ ಓದಿ: ಹೊಸ ಆತಂಕ ಹುಟ್ಟಿಸಿದ ಓಮಿಕ್ರಾನ್ BA.2.12 ತಳಿ

    ಈಗಾಗಲೇ ದೇಶದ ವಿವಿಧ ನಗರಗಳಲ್ಲಿ ಓಮಿಕ್ರಾನ್ ಉಪತಳಿಗಳಾದ ಬಿಎ.2 ಮತ್ತು ಬಿಎ.2.12 ತಳಿ ಪತ್ತೆಯಾಗಿದೆ. ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾ ನಗರಗಳಲ್ಲಿ ಈ ತಳಿ ಪತ್ತೆಯಾದರೂ ಕೂಡ ದೆಹಲಿಯಷ್ಟು ತೀವ್ರ ಪ್ರಮಾಣದಲ್ಲಿ ಸೋಂಕು ಹರಡುತ್ತಿಲ್ಲ. ದೆಹಲಿಯಲ್ಲಿ 1,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿದ್ದು, ಪಾಸಿಟಿವಿಟಿ ರೇಟ್ 4.64ಕ್ಕೆ ಏರಿಕೆ ಕಂಡಿದೆ. ಕೆಲ ಸೋಂಕಿತರಲ್ಲಿ ಬಿಎ.2.12 ಲಕ್ಷಣಗಳು ಪತ್ತೆಯಾಗಿದೆ. ಇದನ್ನೂ ಓದಿ: 15% ಜನರಿಗಾಗಿ 85% ನಾಗರಿಕರ ಮೂಲಭೂತ ಹಕ್ಕು ಉಲ್ಲಂಘನೆ – ಹಲಾಲ್ ಉತ್ಪನ್ನ ನಿಷೇಧಿಸುವಂತೆ ಸುಪ್ರೀಂನಲ್ಲಿ ಅರ್ಜಿ

    ದೇಶದಲ್ಲಿ ಈ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ನಿತ್ಯ ಸಾವಿರಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಕೊರೊನಾ ಸೋಂಕು ಹೆಚ್ಚಿದ ಹಿನ್ನೆಲೆ ಪಂಜಾಬ್, ಹರಿಯಾಣ, ದೆಹಲಿ, ಚೆನ್ನೈ ಸೇರಿದಂತೆ ಹಲವು ರಾಜ್ಯಗಳು ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂಬ ಆದೇಶ ಹೊರಡಿಸಿವೆ. ಇದಲ್ಲದೆ ಮಾಸ್ಕ್ ಧರಿಸದಿದ್ದರೆ ದಂಡ ಪ್ರಯೋಗಿಸಲು ಅಲ್ಲಿನ ಸರ್ಕಾರಗಳು ನಿರ್ಧರಿಸಿವೆ.