Tag: ಐಟಿ ಉದ್ಯೋಗಿ

  • ಗೆಳೆಯನಿಗೆ ಮದ್ವೆಯಾಗಲು ಹೆಣ್ಣು ಸಿಗ್ತಿಲ್ಲ- ನೀರಿನ ಸಮಸ್ಯೆ ಬಗೆಹರಿಸುವಂತೆ ರಾಗಾಗೆ ಮನವಿ

    ಗೆಳೆಯನಿಗೆ ಮದ್ವೆಯಾಗಲು ಹೆಣ್ಣು ಸಿಗ್ತಿಲ್ಲ- ನೀರಿನ ಸಮಸ್ಯೆ ಬಗೆಹರಿಸುವಂತೆ ರಾಗಾಗೆ ಮನವಿ

    ಬೆಂಗಳೂರು: ಬೇಸಿಗೆ ಶುರುವಾಗುತ್ತಿದ್ದಂತೆಯೇ ಸಿಲಿಕಾನ್‌ ಸಿಟಿಯಲ್ಲಿ ನೀರಿನ ಸಮಸ್ಯೆ (Bengaluru Water Crisis) ಕಾಡುತ್ತಿದೆ. ಇದೀಗ ಈ ಸಮಸ್ಯೆ ಜೊತೆ ಇನ್ನೊಂದು ಸಮಸ್ಯೆ ಯುವಕರನ್ನು ಕಾಡುತ್ತಿದೆ.

    ಹೌದು. ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯಿಂದ ಜನ ಬಳಲುತ್ತಿದ್ದರೆ, ಇತ್ತ ಈ ಸಮಸ್ಯೆಯಿಂದಾಗಿ ವಯಸ್ಸಿಗೆ ಬಂದ ಯುವಕರಿಗೆ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವಂತೆ. ಹೀಗಂತ ನರೇಂದ್ರ ಎಂಬವರು ತನ್ನ ಗೆಳೆಯನ ಪರಿಸ್ಥಿತಿಯನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಗಮನಕ್ಕೆ ತರುವ ಪ್ರಯತ್ನ ಮಾಡಿದ್ದಾರೆ.

    ಈ ಸಂಬಂಧ ತನ್ನ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ವ್ಯಕ್ತಿ, ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಐಟಿ ಉದ್ಯೋಗದಲ್ಲಿ ಇರುವ ತನ್ನ ಗೆಳೆಯನಿಗೆ ಹೆಣ್ಣು ಸಿಗುತ್ತಿಲ್ಲ. ಹೀಗಾಗಿ ರಾಹುಲ್‌ ಗಾಂಧಿಯವರೇ ದಯವಿಟ್ಟು ನೀರಿನ ಸಮಸ್ಯೆ ಬಗೆಹರಿಸಿ. ಈ ಮೂಲಕ ಗೆಳೆಯನಿಗೆ ಮದುವೆಯಾಗಲು ಹುಡುಗಿ ಸಿಗುವಂತೆ ಮಾಡಿ ಎಂದು ರಾಗಾಗೆ ಟ್ಯಾಗ್‌ ಮಾಡಿ ಮನವಿ ಮಾಡಿಕೊಂಡಿದ್ದಾರೆ.

    ಎಕ್ಸ್‌ನಲ್ಲಿ ಬರೆದುಕೊಂಡಿದ್ದೇನು..?: ರಾಹುಲ್ ಗಾಂಧಿಯವರೇ ದಯವಿಟ್ಟು ಗಮನಿಸಿ, ಆದ್ಯತೆಯ ಮೇರೆಗೆ ಬೆಂಗಳೂರಿನ ನೀರಿನ ಸಮಸ್ಯೆ ಬಗೆಹರಿಸಿ. ಬೆಂಗಳೂರಿನಲ್ಲಿ ಐಟಿ ಉದ್ಯೋಗಿಯಾಗಿರುವ ಸ್ನೇಹಿತನೊಬ್ಬ ತನ್ನ ಸದ್ಯದ ಪರಿಸ್ಥಿತಿಯನ್ನು ನನ್ನೊಂದಿಗೆ ಹಂಚಿಕೊಂಡಿದ್ದಾನೆ. ನನ್ನ ಗೆಳೆಯ ಮದುವೆಯಾಗಲು ಸಿದ್ಧವಿದ್ದು, ವಧುವಿನ ಹುಡುಕಾಟದಲ್ಲಿದ್ದಾರೆ. ಆದರೆ ಎಷ್ಟೇ ಹುಡುಕಿದರೂ ಅವರಿಗೆ ವಧು ಸಿಗುತ್ತಿಲ್ಲ. ನೀರಿನ ಸಮಸ್ಯೆಯಿಂದಾಗಿ ಹುಡುಗಿಯರು ಮದುವೆಯಾಗಲು ಒಪ್ಪಿಗೆ ಸೂಚಿಸುತ್ತಿಲ್ಲ ಎಂದು ನನ್ನ ಮುಂದೆ ಬೇಸರ ವ್ಯಕ್ತಪಡಿಸಿದ್ದಾನೆ. ಇದನ್ನೂ ಓದಿ: ಜಲಮಂಡಳಿಯಿಂದ ನೀರಿನ ಕೊರತೆಯಿರುವ ಪ್ರದೇಶಗಳ ಪಟ್ಟಿ ರಿಲೀಸ್

    ಒಟ್ಟಿನಲ್ಲಿ ಈ ಬಾರಿ ಸಿಲಿಕಾನ್‌ ಸಿಟಿ ಮಂದಿಗೆ ನೀರಿನ ಬಿಸಿ ತಾಗಿದೆ. ಕಳೆದ ಒಂದು ತಿಂಗಳಿಂದ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಳ್ತಾ ಇದೆ. ಹನಿ ಹನಿ ನೀರಿಗೂ ಜನ ಪರದಾಡ್ತಿದ್ದಾರೆ. ನೀರು ಪೂರೈಕೆ ಮಾಡೋದ್ರಲ್ಲಿ ಸರ್ಕಾರ ಮತ್ತು ಜಲಮಂಡಳಿ ಸತತ ಪ್ರಯತ್ನ ಮಾಡ್ತಾ ಇದೆ. ಈ ಮಧ್ಯೆ ಜಲಮಂಡಳಿ ಬೆಂಗಳೂರಿನಲ್ಲಿ ನೀರಿನ ಕೊರತೆ ಇರುವ ಪ್ರದೇಶಗಳ ಸರ್ವೆ ಮಾಡಿದೆ. ಪ್ರಮುಖವಾಗಿ 257 ಏರಿಯಾಗಳಲ್ಲಿ ನೀರಿನ ಕೊರತೆ ಇರೋದು ಗೊತ್ತಾಗಿದೆ. ಬೋರ್ ವೆಲ್‌ಗಳು ಬತ್ತಿ ಹೋಗಿದ್ದು, ಅಂತರ್ಜಲದ ಮಟ್ಟ ಕುಸಿದಿರೋದು ನೀರಿನ ಸಮಸ್ಯೆಗೆ ಕಾರಣ ಎಂಬ ಮಾಹಿತಿ ಲಭ್ಯವಾಗಿದೆ.

  • ಮೆಟ್ರೋದಲ್ಲಿ ಯುವತಿ ಹಿಂದಿನಿಂದ ಮೈ,ಕೈ ಮುಟ್ಟಿ ಎಸ್ಕೇಪ್‍ಗೆ ಯತ್ನ- ಯುವಕ ಅರೆಸ್ಟ್

    ಮೆಟ್ರೋದಲ್ಲಿ ಯುವತಿ ಹಿಂದಿನಿಂದ ಮೈ,ಕೈ ಮುಟ್ಟಿ ಎಸ್ಕೇಪ್‍ಗೆ ಯತ್ನ- ಯುವಕ ಅರೆಸ್ಟ್

    ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ಯುವತಿಯೊಬ್ಬಳ ಹಿಂದಿನಿಂದ ಮೈ, ಕೈ ಮುಟ್ಟಿ ಬಳಿಕ ಪರಾರಿಯಾಗಲು ಯತ್ನಿಸಿದವನನ್ನು ಬಂಧಿಸಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿಯನ್ನು ಲೊಕೇಶ್ ಆಚಾರ್ ಎಂದು ಗುರುತಿಸಲಾಗಿದೆ. ಈ ಘಟನೆ ಗುರುವಾರ ಬೆಳಗ್ಗೆ 9.40ರ ಸುಮಾರಿಗೆ ನಡೆದಿದೆ.

    ನಡೆದಿದ್ದೇನು..?: 22 ವರ್ಷದ ಐಟಿ ಮಹಿಳಾ ಉದ್ಯೋಗಿ ರಾಜಾಜಿನಗರದಲ್ಲಿ ನಿನ್ನೆ ಬೆಳಗ್ಗೆ 9.40ಕ್ಕೆ ಮೆಟ್ರೋ ಹತ್ತಿದ್ದಾರೆ. ಈ ವೇಳೆ ಆರೋಪಿ ಲೋಕೇಶ್ ಹಿಂಬದಿಯಲ್ಲಿ ನಿಂತು ಯುವತಿಯ ಮೈ ಕೈ ಮುಟ್ಟಿದ್ದಾನೆ. ಇದು ಗಮನಕ್ಕೆ ಬರುತ್ತಿದ್ದಂತೆಯೇ ಯುವತಿ ಜೋರಾಗಿ ಕಿರುಚಿದ್ದಾಳೆ. ಇದರಿಂದ ಗಲಿಬಿಲಿಗೊಂಡ ಲೋಕೇಶ್ ಮುಂದಿನ ನಿಲ್ದಾಣ ಬರುತ್ತಿದ್ದಂತೆಯೇ ಎಸ್ಕೇಪ್ ಆಗಲು ಯತ್ನಿಸಿದ್ದಾನೆ.

    ಕೂಡಲೇ ಅಲರ್ಟ್ ಆದ ಮೆಟ್ರೋ ಭದ್ರತಾ ಸಿಬ್ಬಂದಿ ಪುಟ್ಟಮಾದಯ್ಯ ಮತ್ತು ಸಹಾಯಕ ದಿವಾಕರ್ ಸ್ಥಳಕ್ಕೆ ಆಗಮಿಸಿದ್ದಾರೆ. ಅಲ್ಲದೆ ಆರೋಪಿ 30 ವರ್ಷದ ಲೋಕೇಶ್‍ನನ್ನು ಬಂಧಿಸಿದ್ದಾರೆ. ನಂತರ ಆತನನ್ನು ಉಪ್ಪಾರ ಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ. ತನಿಖೆಯ ವೇಳೆ ಆರೋಪಿ ಲೋಕೇಶ್ ಕರಾಳ ಇತಿಹಾಸ ಬಯಲಾಗಿದೆ. ಇದನ್ನೂ ಓದಿ: ಸಿಎಂ ತವರಲ್ಲೇ ಇಂದಿರಾ ಕ್ಯಾಂಟಿನ್ ನಡೆಸಲು ನಿರಾಸಕ್ತಿ; ಬಯಲಾಯ್ತು ಕಳ್ಳ ಲೆಕ್ಕ – ʻಪಬ್ಲಿಕ್ʼ ವರದಿಯಿಂದ ಎಚ್ಚೆತ್ತ ಪಾಲಿಕೆ

    ಕಿಡಿಗೇಡಿ ಲೋಕೇಶ್ ಕ್ರೈಂ ಹಿನ್ನೆಲೆ ಇರುವ ವ್ಯಕ್ತಿಯಾಗಿದ್ದು, ಈ ಹಿಂದೆಯೇ ಈತನ ಮೇಲೆ ಕೆಲ ಕೇಸ್‍ಗಳಿರುವುದು ಬಯಲಾಗಿದೆ. ಈ ಹಿಂದೆ ಬಿಎಂಟಿಸಿ ಬಸ್ಸಿನಲ್ಲಿ ಯುವತಿಯ ಮೊಬೈಲ್ ಕಳ್ಳತನ ಮಾಡಲು ಹೋಗಿ ತಗ್ಲಾಕೊಂಡಿದ್ದ. ಇದಲ್ಲದೇ ಆರೋಪಿ ಬಳಿಯಿಂದ 20 ಮೊಬೈಲ್ ಫೋನ್ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿತ್ತು. ಹೀಗೆ ತನಿಖೆಯ ವೇಳೆ ಲೊಕೇಶ್ ಕಳ್ಳತನವನ್ನೇ ಕಾಯಕ ಮಾಡಿರುವ ಮ್ಯಾಟರ್ ರಿವೀಲ್ ಆಗಿದೆ.

  • 15 ನಿಮಿಷದಲ್ಲಿ ಸೈಕಲಿನಲ್ಲಿ ಟೀ ತಂದುಕೊಟ್ಟ ಡೆಲಿವರಿ ಬಾಯ್‍ಗೆ ಐಟಿ ಉದ್ಯೋಗಿಯಿಂದ ಬೈಕ್ ಗಿಫ್ಟ್..!

    15 ನಿಮಿಷದಲ್ಲಿ ಸೈಕಲಿನಲ್ಲಿ ಟೀ ತಂದುಕೊಟ್ಟ ಡೆಲಿವರಿ ಬಾಯ್‍ಗೆ ಐಟಿ ಉದ್ಯೋಗಿಯಿಂದ ಬೈಕ್ ಗಿಫ್ಟ್..!

    – ಒಂದೇ ದಿನದಲ್ಲಿ 73 ಸಾವಿರ ರೂ. ಸಂಗ್ರಹ
    – ಸಹಾಯ ಮಾಡಿ ಮಾನವೀಯತೆ ಮೆರೆದ ಜನ

    ಹೈದರಾಬಾದ್: ನಮ್ಮ ಸುತ್ತಮುತ್ತಲೂ ಒಳ್ಳೆಯವರೂ ಇದ್ದಾರೆ ಎಂಬುದನ್ನು ಹೈದರಾಬಾದ್ ನ ಐಟಿ ಉದ್ಯೋಗಿಯೊಬ್ಬರು ಸಾಬೀತು ಪಡಿಸಿದ್ದಾರೆ.

    ಹೌದು. ಮಳೆಯಲ್ಲಿ ನೆನೆದುಕೊಂಡೇ 15 ನಿಮಿಷದಲ್ಲಿ ಟೀ ತಂದು ಕೊಟ್ಟ ಝೋಮ್ಯಾಟೋ ಡೆಲಿವರಿ ಬಾಯ್ ಗೆ ಬೈಕ್ ಗಿಫ್ಟ್ ಮಾಡಿದ್ದಾರೆ. ತನಗೆ ಬೈಕ್ ಸಿಗುತ್ತಿದ್ದಂತೆಯೇ ಡೆಲಿವರಿ ಬಾಯ್ ಖುಷಿಗೆ ಪಾರವೇ ಇಲ್ಲದಂತಾಗಿದೆ. ಡೆಲಿವರಿ ಬಾಯ್ ನನ್ನು ಮೊಹಮ್ಮದ್ ಅಖೀಲ್ ಎಂದು ಗುರುತಿಸಲಾಗಿದ್ದು, ಈತನಿಗೆ ರಾಬಿನ್ ಮುಕೇಶ್ ಎಂಬವರು ಬೈಕ್ ನೀಡಿದ್ದಾರೆ.

    ರಾಬಿನ್ ಮುಕೇಶ್ ಹೈದರಾಬಾದ್ ನಲ್ಲಿ ಐಟಿ ಉದ್ಯೋಗಿಯಾಗಿದ್ದಾರೆ. ಇವರು ಒಂದು ದಿನ ಫುಡ್ ಡೆಲಿವರಿ ಆ್ಯಪ್ ಮೂಲಕ ಟೀ ಆರ್ಡರ್ ಮಾಡಿದ್ದರು. ಈ ವೇಳೆ ಟೀ ತಂದು ಕೊಟ್ಟ ಯುವಕನ ಕಂಡು ಮುಕೇಶ್ ಮನಸ್ಸು ಕರಗಿದ್ದು, ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ: WTC ಫೈನಲ್ ಭಾರತ ಗೆದ್ದರೆ ಬೆತ್ತಲಾಗುವೆ – ಪೂನಂ ಪಾಂಡೆ

    ಈ ಸಂಬಂಧ ಮಾಧ್ಯಮದ ಜೊತೆ ಮಾತನಾಡಿದ ಮುಕೇಶ್, ರಾತ್ರಿ 10 ಗಂಟೆ ಸುಮಾರಿಗೆ ನಾನು ಮನೆಯಿಂದಲೇ ಕೆಲಸ ಮಾಡುತ್ತಿದ್ದೆ. ಈ ವೇಳೆ ನನಗೆ ಟೀ ಕುಡಿಯಬೇಕು ಅನಿಸಿತ್ತು. ಹೀಗಾಗಿ ನಾನು ಹೈದರಾಬಾದ್ ನಲ್ಲಿರುವ ಲಕ್ಡಿ-ಕಾ-ಪೂಲ್ ಎಂಬ ಹೋಟೇಲಿನಿಂದ ಟೀ ಆರ್ಡರ್ ಆಡಿದೆ. ಅಂತೆಯೇ ಕೆಲ ಸಮಯದ ಬಳಿಕ ಡೆಲಿವರಿ ಬಾಯ್ ಎಲ್ಲಿದ್ದಾನೆ ಎಂಬುದನ್ನು ಟ್ರ್ಯಾಕ್ ಮಾಡಿದೆ. ಆಗ ನನ್ನ ಆರ್ಡರ್ ಅನ್ನು ಮೊಹಮ್ಮದ್ ಅಕೀಲ್ ಎಂಬಾತ ತರುತ್ತಿದ್ದಾನೆ ಎಂಬುದು ಗೊತ್ತಾಯಿತು. ಅಲ್ಲದೆ ಆತ ಮೆಹದಿಪಟ್ನಂನಲ್ಲಿರುವುದನ್ನು ಗಮನಿಸಿದೆ. ನಾನು ಆರ್ಡರ್ ಮಾಡಿದ 15 ನಿಮಿಷಕ್ಕೆ ಪಾರ್ಸೆಲ್ ನಾನು ಇರುವ ಅಪಾರ್ಟ್ ಮೆಂಟ್ ಗೆ ಬಂದಿದೆ ಎಂದರು.

    ಮತ್ತೆ ಮಾತು ಮುಂದುವರಿಸಿದ ಅವರು, ಅಪಾರ್ಟ್ ಮೆಂಟ್ ಬಳಿ ಬಂದವನೇ ಕೆಳಗೆ ಬಂದು ಪಾರ್ಸೆಲ್ ತೆಗೆದುಕೊಂಡು ಹೋಗುವಂತೆ ನನಗೆ ಕರೆ ಮಾಡಿದ್ದಾನೆ. ಕೂಡಲೇ ನಾನು ಕೆಳಗಡೆ ಹೋದೆ. ವಿಪರೀತ ಮಳೆಯಿಂದಾಗಿ ಸಂಪೂರ್ಣವಾಗಿ ತೇವಗೊಂಡಿದ್ದ ಯುವಕನನ್ನು ನಾನು ನೋಡಿದೆ. ಜಡಿ ಮಳೆಯಲ್ಲಿ ಒದ್ದೆಯಾಗಿಕೊಂಡೇ ಕೇವಲ 15 ನಿಮಿಷಗಳಲ್ಲಿ ಬೈಸಿಕಲ್‍ನಲ್ಲಿ ಬಂದು ಹೇಗೆ ಇಷ್ಟು ಬೇಗ ತಲುಪಿದೆ ಎಂದು ಪ್ರಶ್ನಿಸಿದೆ. ಆಗ ಅವನು, ಕಳೆದ ಒಂದು ವರ್ಷದಿಂದ ಬೈಸಿಕಲ್ ಮೂಲಕ ಫುಡ್ ಡೆಲಿವರಿ ಮಾಡುತ್ತಿರುವುದಾಗಿ ತಿಳಿಸಿದ. ಈ ಮಾತುಗಳನ್ನು ಕೇಳಿ ನನಗೆ ನಿಜಕ್ಕೂ ಬೇಸರವಾಯಿತು ಎಂದರು.

    ಹೀಗೆ ಮಾತನಾಡುತ್ತಾ ಮುಕೇಶ್, ಹುಡುಗನ ಬಳಿ ಅನುಮತಿ ಪಡೆದು ಫೋಟೋ ತೆಗೆದುಕೊಂಡಿದ್ದಾರೆ. ಅಲ್ಲದೆ ಆತ ಒಬ್ಬ ಬಿಟೆಕ್ ಪದವೀಧರ ಎಂಬುದು ಗೊತ್ತಾಯಿರು. ಕೂಡಲೇ ಅಕೀಲ್ ಫೋಟೋವನ್ನು ಮುಕೇಶ್ ತಮ್ಮ ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿಕೊಂಡು ಇಡೀ ಕಥೆಯನ್ನು ವಿವರಿಸಿದೆ. ಇದನ್ನು ಓದಿದ ಹಲವಾರು ಮಂದಿ ಸಾಕಷ್ಟು ಕಾಮೆಂಟ್ ಮಾಡಿದ್ದುಟ್ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅಲ್ಲದೆ ಅಕೀಲ್ ಗೆ ಸಹಾಯ ಮಾಡುವುದಾಗಿ ತಿಳಿಸಿದರು.

    ಈ ಹಿನ್ನೆಲೆಯಲ್ಲಿ ಅಕೀಲ್ ನನ್ನು ಕೇಳಿದಾಗ ಆತ ತನಗೆ ಬೈಕ್ ಸಿಕ್ಕರೆ ತುಂಬಾ ಸಹಾಯ ಆಗುತ್ತೆ ಎಂದು ಹೇಳಿದ್ದಾನೆ. ಈ ಹಿನ್ನೆಲೆಯಲ್ಲಿ ಅದೇ ದಿನ ಹಣ ಸಂಗ್ರಹಿಸಲು ಆರಂಭಿಸಿದ್ದು, ಮರು ದಿನವೇ ಅಕೀಲ್ ಗೆ ಬೈಕ್ ಉಡುಗೊರೆಯಾಗಿ ನೀಡಲಾಗಿದೆ. ಇಷ್ಟೆಲ್ಲಾ ಆಗಿದ್ದು ಕೇವಲ 12 ಗಂಟೆಯಲ್ಲಿ. ಅನೇಕ ಮಂದಿ ಅಕೀಲ್ ಗಾಗಿ ಸಹಾಯ ಮಾಡಿದ್ದು, ಅಮೆರಿಕದಲ್ಲಿ ನೆಲೆಸಿರುವ ಮಹಿಳೆಯೊಬ್ಬರು 30 ಸಾವಿರ ಹಣ ನೀಡಿರುವುದಾಗಿ ಮುಕೇಶ್ ವಿವರಿಸಿದ್ದಾರೆ.

    ಒಟ್ಟಿನಲ್ಲಿ ಕೇವಲ 12 ಗಂಟೆಯಲ್ಲಿ 73 ಸಾವಿರ ರೂ. ಕ್ರೂಢೀಕರಿಸಿ ಅಕೀಲ್ ಗೆ ಸಹಾಯ ಮಾಡಿದ್ದು ಸದ್ಯ ಹಣ ಸಂಗ್ರಹವನ್ನು ನಿಲ್ಲಿಸಲಾಗಿದೆ ಎಂದು ಮುಕೇಶ್ ತಿಳಿಸಿ, ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.