Tag: ಐಟಿ ರಿಟರ್ನ್

  • ಐಟಿ ರಿಟರ್ನ್‌ ಸಲ್ಲಿಕೆ- ಲಾಸ್ಟ್‌ ಡೇಟ್‌ ಯಾವುದೇ ಕಾರಣಕ್ಕೂ ವಿಸ್ತರಣೆಯಾಗಲ್ಲ

    ಐಟಿ ರಿಟರ್ನ್‌ ಸಲ್ಲಿಕೆ- ಲಾಸ್ಟ್‌ ಡೇಟ್‌ ಯಾವುದೇ ಕಾರಣಕ್ಕೂ ವಿಸ್ತರಣೆಯಾಗಲ್ಲ

    ನವದೆಹಲಿ: 2024-25ನೇ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ (IT Return Filing) ಸಲ್ಲಿಸುವ ಕೊನೆಯ ದಿನಾಂಕವನ್ನು (Last Date) ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ (Income Tax Department) ಸ್ಪಷ್ಟಪಡಿಸಿದೆ.

    ಐಟಿಆರ್‌ಗಳನ್ನು ಸಲ್ಲಿಸುವ ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಸೂಚಿಸುವ ಸುಳ್ಳು ಸುದ್ದಿಯನ್ನು ತೆರಿಗೆ ಇಲಾಖೆ ತಳ್ಳಿಹಾಕಿದೆ. ತೆರಿಗೆದಾರರು ಅಧಿಕೃತ ಆದಾಯ ತೆರಿಗೆ ಆಫ್ ಇಂಡಿಯಾ ಎಕ್ಸ್ ಹ್ಯಾಂಡಲ್‌ನಲ್ಲಿ ಪ್ರಕಟವಾಗುವ ಮಾಹಿತಿಯನ್ನು ನಂಬಬೇಕು ಎಂದು ತಿಳಿಸಿದೆ.

    ಐಟಿಆರ್ ಫೈಲಿಂಗ್, ತೆರಿಗೆ ಪಾವತಿ ಮತ್ತು ಇತರ ಸಂಬಂಧಿತ ಸೇವೆಗಳಿಗೆ ತೆರಿಗೆದಾರರಿಗೆ ಸಹಾಯ ಮಾಡಲು, ನಮ್ಮ ಸಹಾಯವಾಣಿ 24/7 ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದೆ. ನಾವು ಕರೆಗಳು, ಲೈವ್ ಚಾಟ್‌ಗಳು, ವೆಬ್ ಎಕ್ಸ್ ಸೆಷನ್‌ಗಳು, ಮತ್ತು ಎಕ್ಸ್ ಮೂಲಕ ಬೆಂಬಲವನ್ನು ಒದಗಿಸುತ್ತಿದ್ದೇವೆ ಎಂದು ತೆರಿಗೆ ಇಲಾಖೆ ಹೇಳಿದೆ.

    ಐಟಿಆರ್‌ ಫೈಲಿಂಗ್‌ಗೆ ಇಂದು(ಸೆ.15) ಕೊನೆಯ ದಿನವಾಗಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಸೆ.30 ರವರೆಗೆ ವಿಸ್ತರಿಸಲಾಗಿದೆ ಎಂಬ ಸುಳ್ಳು ಸುದ್ದಿಗಳು ಪ್ರಕಟವಾಗುತ್ತಿದೆ.

  • 3 ತಿಂಗಳು ಎಟಿಎಂನಿಂದ ತೆಗೆಯೋ ಹಣಕ್ಕೆ ಸೇವಾ ಶುಲ್ಕ ಇಲ್ಲ

    3 ತಿಂಗಳು ಎಟಿಎಂನಿಂದ ತೆಗೆಯೋ ಹಣಕ್ಕೆ ಸೇವಾ ಶುಲ್ಕ ಇಲ್ಲ

    – ಜನ ಸಾಮಾನ್ಯರಿಗಾಗಿ ಸರ್ಕಾರದ ನಾಲ್ಕು ಹೆಜ್ಜೆ
    – ಉದ್ಯೋಗಿ, ಉದ್ಯಮಿಗಳಿಗೆ ಕೊಂಚ ರಿಲೀಫ್

    ನವದೆಹಲಿ: ಕೊರೊನಾ ವೈರಸ್ ಭಾರತದ ಅರ್ಥ ವ್ಯವಸ್ಥೆಗೆ ಭಾರೀ ಹೊಡೆತವನ್ನು ನೀಡಿದೆ. ವಾಣಿಜ್ಯ ಚಟುವಟಿಕೆಗಳು ಸ್ತಬ್ಧವಾದ ಹಿನ್ನೆಲೆಯಲ್ಲಿ ಸಾಮಾನ್ಯ ಜನರು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಇಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಜನಹಿತಕ್ಕಾಗಿ ಹಲವು ಪ್ಯಾಕೇಜ್ ಘೋಷಿಸಿದ್ದಾರೆ. ಈ ಎಲ್ಲ ಘೋಷಣೆಗಳು ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ.

    ಜನ ಸಾಮಾನ್ಯರಿಗಾಗಿ ಸರ್ಕಾರದ ನಾಲ್ಕು ಹೆಜ್ಜೆ
    1. ಮುಂದಿನ ಮೂರು ತಿಂಗಳು ಯಾವುದೇ ಎಟಿಎಂನಿಂದ ಹಣ ಡ್ರಾ ಮೇಲೆ ಸೇವಾ ಶುಲ್ಕ ಇರುವುದಿಲ್ಲ.
    2. ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ ಉಳಿಸಿಕೊಳ್ಳುವ ಅವಶ್ಯಕತೆ ಇಲ್ಲ.
    3. ಐಟಿಆರ್ ರಿಟರ್ನ್ ಫೈಲ್ ಮಾಡುವ ದಿನಾಂಕವನ್ನು ಜೂನ್ 30ರವರೆಗೆ ವಿಸ್ತರಣೆ
    4. ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡಿಕೊಳ್ಳುವ ಅವಧಿ ಜೂನ್ 30ರವರೆಗೆ ವಿಸ್ತರಣೆ.

    ಉದ್ಯೋಗಿ, ಉದ್ಯಮಿಗಳಿಗೆ ಕೊಂಚ ರಿಲೀಫ್
    1. ಟಿಡಿಎಸ್ ಪಾವತಿ ವಿಳಂಬ ಮೇಲಿನ ಬಡ್ಡಿಯನ್ನು ಶೇ.12ರಿಂದ ಶೇ.9ಕ್ಕೆ ಇಳಿಕೆ.
    2. 2018-19 ಆರ್ಥಿಕ ವರ್ಷದ ಇನ್‍ಕಮ್ ಟ್ಯಾಕ್ಸ್ ಫೈಲ್ ಮಾಡಲು ಜೂನ್ 30ರವರೆಗೆ ಅವಕಾಶ.
    3. ವಿವಾದ್ ಸೇ ವಿಶ್ವಾಸ್ ಯೋಜನೆ ಮತ್ತು ಆಧಾರ್-ಪ್ಯಾನ್ ಲಿಂಕ್ ಮಾಡುವ ದಿನಾಂಕ ಜೂನ್ 30ರವರೆಗೆ ವಿಸ್ತರಣೆ.
    4. 5 ಕೋಟಿ ರೂ.ಗೂ ಕಡಿಮೆ ಟರ್ನ್ ಓವರ್ ಹೊಂದಿರುವ ಕಂಪನಿಗಳಿಗೆ ತಡವಾಗಿ ಮಾಡುವ ಜಿಎಸ್‍ಟಿ ಫೈಲಿಂಗ್ ಮೇಲೆ ವಿಧಿಸಲಾಗುವ ಬಡ್ಡಿ, ದಂಡ ಮತ್ತ ಲೇಟ್ ಫೀಸ್ ಗಳಿಂದ ವಿನಾಯ್ತಿ. ಮಾರ್ಚ್-ಏಪ್ರಿಲ್-ಮೇ ಫೈಲಿಂಗ್ ಮಾಡಲು ಜೂನ್ 30ರವರೆಗೆ ಅವಕಾಶ.
    5. ರಫ್ತು ಮತ್ತು ಆಮದು ವ್ಯವಹಾರಗಳಲ್ಲಿ ಸರಳೀಕರಣ ಮತ್ತು ಪರಿಹಾರ. ಕಸ್ಟಮ್ ಕ್ಲಿಯರೆನ್ಸ್ ಸೇರಿದಂತೆ ಹಲವು ಸೇವೆಗಳು ಜೂನ್ 30ರವರೆಗೆ ಲಭ್ಯ. ಈ ಸಂಬಂಧ 24 ಗಂಟೆಗೂ ಕಾರ್ಯ ನಿರ್ವಹಣೆ
    6. ಕಂಪನಿಯ ನಿರ್ದೇಶಕರು 182 ದಿನ ದೇಶದಲ್ಲಿ ಇರಬೇಕಾದ ಅನಿವಾರ್ಯತೆಯಿಂದ ಮುಕ್ತ.
    7. ಒಂದು ಕೋಟಿ ರೂ.ಗಿಂತಲೂ ಕಡಿಮೆ ವ್ಯವಹಾರ ನಡೆಸುವ ಕಂಪನಿಗಳ ವಿರದ್ಧ ದಿವಾಳಿ ಪ್ರಕಿಯೆ ಆರಂಭಿಸಲ್ಲ.

    ಕೊರೊನಾ ವೈರಸ್ ಹರಡುವ ಮೊದಲೇ ಭಾರತದ ಆರ್ಥಿಕ ವ್ಯವಸ್ಥೆ ನಿಧಾನಗತಿಯಲ್ಲಿ ಸಾಗುತ್ತಿತ್ತು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇಶದ ಎಲ್ಲ ರಾಜ್ಯಗಳು ಸ್ತಬ್ಧಗೊಂಡಿದ್ದರಿಂದ ಆರ್ಥಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ.