Tag: ಐತಿಹಾಸಿಕ ಸ್ಮಾರಕಗಳು

  • ಚರ್ಚ್‌ಗಳೂ ಸೇರಿ 4 ತಿಂಗಳಲ್ಲಿ 150ಕ್ಕೂ ಹೆಚ್ಚು ಸ್ಮಾರಕಗಳು ನೆಲಸಮ – ಯುನೆಸ್ಕೋ ವರದಿ

    ಚರ್ಚ್‌ಗಳೂ ಸೇರಿ 4 ತಿಂಗಳಲ್ಲಿ 150ಕ್ಕೂ ಹೆಚ್ಚು ಸ್ಮಾರಕಗಳು ನೆಲಸಮ – ಯುನೆಸ್ಕೋ ವರದಿ

    ಕೀವ್: ರಷ್ಯಾ ಯುದ್ಧ ಆರಂಭವಾದಾಗಿನಿಂದಲೂ ರಷ್ಯಾ ಉಕ್ರೇನ್ ಮೇಲೆ ಸತತವಾಗಿ ದಾಳಿ ನಡೆಸುತ್ತಲೇ ಇದೆ. ಈ ನಡುವೆ ಉಕ್ರೇನ್‌ನಲ್ಲಿರುವ 152 ಸಾಂಸ್ಕೃತಿಕ ಹಾಗೂ ಐತಿಹಾಸಿಕ ತಾಣಗಳನ್ನು ಸಂಪೂರ್ಣ ನಾಶ ಮಾಡಿರುವುದಾಗಿ ಯುಎನ್ ತಜ್ಞರು ದೃಢಪಡಿಸಿದ್ದಾರೆ ಎಂದು ಯುನೆಸ್ಕೋ ಸಾಂಸ್ಕೃತಿಕ ಸಂಸ್ಥೆ ತಿಳಿಸಿದೆ.

    ಅವುಗಳಲ್ಲಿ ವಸ್ತುಸಂಗ್ರಹಾಲಯಗಳು, ಸ್ಮಾರಕಗಳು, ಚರ್ಚ್‌ಗಳು, ಗ್ರಂಥಾಲಯಗಳು, ಧಾರ್ಮಿಕ ಕಟ್ಟಡಗಳು ಹಾಗೂ ಇತರ ಅಸಾಧಾರಣ ಕಟ್ಟಡಗಳೂ ಸೇರಿವೆ. ಕೆಲವು ಸಂಪೂರ್ಣ ಹಾನಿಯಾಗಿದ್ದಾರೆ, ಕೆಲವು ಭಾಗಶಃ ಹಾನಿಯಾಗಿವೆ ಎಂಬುದಾಗಿ ತಜ್ಞರ ವರದಿ ಹೇಳಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಮಾಡಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು – ನಾಳೆ ನಾಮಪತ್ರ ಸಲ್ಲಿಕೆ

    ಕಳೆದ ಫೆಬ್ರವರಿ 24 ರಿಂದ ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ಪ್ರಾರಂಭವಾಯಿತು. ಆಗಿನಿಂದಲೂ ರಷ್ಯಾ ಉಕ್ರೇನಿನ ತಾಣಗಳು ಹಾನಿಗೊಳಗಾಗಿವೆ. ಉಕ್ರೇನಿಯನ್ ಸಾಂಸ್ಕೃತಿಕ ತಾಣಗಳ ಮೇಲಿನ ಈ ಪುನರಾವರ್ತಿತ ದಾಳಿಗಳು ನಿಲ್ಲಬೇಕು. ಯಾವುದೇ ಸಂದರ್ಭದಲ್ಲಿಯೂ ಸಾಂಸ್ಕೃತಿಕ ಹಾಗೂ ಪಾರಂಪರಿಕ ತಾಣಗಳನ್ನು ಗುರಿಯಾಗಿಸಬಾರದು ಎಂದು ಯುನೆಸ್ಕೋದ ಮಹಾನಿರ್ದೇಶಕ ಆಡ್ರೆ ಅಜೌಲೆ ತಿಳಿಸಿದ್ದಾರೆ. ಇದನ್ನೂ ಓದಿ: ರಕ್ತ ಪರೀಕ್ಷೆ ಮೂಲಕ ಸ್ತನ ಕ್ಯಾನ್ಸರ್‌ ಪತ್ತೆ – ತಂತ್ರಜ್ಞಾನ ಭಾರತದಲ್ಲೂ ಲಭ್ಯ

    ರಷ್ಯಾದ ಪಡೆಗಳು ಅಥವಾ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಉಕ್ರೇನ್ ಪಾರಂಪರಿಕ ತಾಣಗಳನ್ನು ನಾಶಪಡಿಸುವಲ್ಲಿ ತಪ್ಪಿತಸ್ಥರೆಂಬುದು ಕಂಡುಬಂದರೆ ಅಂತಾರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಬಹುದು ಎಂದು ಯುನೆಸ್ಕೋ ಎಚ್ಚರಿಸಿದೆ.

    Live Tv

  • ಕಿಡಿಗೇಡಿಗಳಿಂದ ಸ್ಮಾರಕ ಧ್ವಂಸ – ಎಸ್‍ಪಿಯಿಂದ ಸ್ಥಳ ಪರಿಶೀಲನೆ

    ಕಿಡಿಗೇಡಿಗಳಿಂದ ಸ್ಮಾರಕ ಧ್ವಂಸ – ಎಸ್‍ಪಿಯಿಂದ ಸ್ಥಳ ಪರಿಶೀಲನೆ

    – ಆರೋಪಿಗಳ ಬಂಧನಕ್ಕೆ ತಂಡ ರಚನೆ

    ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿಯ ಗಜ ಶಾಲೆಯ ಹಿಂಭಾಗದ ಸಾಲು ಕಂಬಗಳನ್ನ ಮೂರು ನಾಲ್ಕು ದಿನಗಳ ಹಿಂದೆ ಕಿಡಿಗೇಡಿಗಳು ಧ್ವಂಸಗೊಳಿಸಿದ್ದರು. ಕಿಡಿಗೇಡಿಗಳು ಸ್ಮಾರಕಗಳನ್ನ ಧ್ವಂಸಗೊಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಹಾಗೂ ಪ್ರಾಚ್ಯ ವಸ್ತು ಹಾಗೂ ಪುರಾತತ್ವ ಸರ್ವೇಕ್ಷಣಾ ಇಲಾಖೆ ಎಚ್ಚೆತ್ತುಕೊಂಡಿದೆ.

    ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್ ಹಾಗೂ ಎಎಸ್‍ಐ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ನಾಲ್ಕು ದಿನಗಳ ಹಿಂದೆ ಉತ್ತರ ಭಾರತ ಮೂಲದ ನಾಲ್ವರು ಪ್ರವಾಸಿಗರು ಗಜಶಾಲೆಯ ಹಿಂಭಾಗದ ಸಾಲುಕಂಬಗಳನ್ನು ಕೆಡವಿ ಸ್ಮಾರಕಗಳನ್ನ ಹಾನಿ ಮಾಡಿದ್ದರು. ಇದರ ವಿಡಿಯೋವನ್ನ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು.

    ಈ ಘಟನೆಯ ಬಗ್ಗೆ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಕಮಲಾಪುರ ಅಂಬೇಡ್ಕರ್ ವೃತ್ತದಲ್ಲಿ ಹಾಗೂ ಹೊಸಪೇಟೆ ಕಂಪ್ಲಿ ರಸ್ತೆಯಲ್ಲಿ ಹಂಪಿ ಗ್ರಾಮಸ್ಥರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ್ದರು. ಸ್ಮಾರಕಗಳನ್ನ ಹಾನಿ ಮಾಡಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಸ್ಥಳೀಯರು ಒತ್ತಾಯಿಸಿದ್ದು, ಇದೀಗ ಘಟನೆಯ ಬಗ್ಗೆ ಹಂಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

    ವೈರಲ್ ವೀಡಿಯೋ ಹಿನ್ನೆಲೆಯಲ್ಲಿ ಈಗಾಗಾಲೇ ತನಿಖೆ ಮಾಡಲಾಗುತ್ತಿದೆ. ನಾಲ್ವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಪುರಾತತ್ವ ಇಲಾಖೆ ಎರಡು ವರ್ಷದ ಹಿಂದೆ ಈ ಘಟನೆಯಾಗಿದೆ ಎನ್ನುತ್ತಿದ್ದಾರೆ. ಆರು ತಿಂಗಳ ಹಿಂದೆ ಘಟನೆ ನಡೆದಿರಬಹುದು, ಆದ್ರೆ ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಬಳ್ಳಾರಿ ಜಿಲ್ಲಾ ಎಸ್ ಪಿ ಅರುಣ್ ರಂಗರಾಜನ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv