Tag: ಐಪಿಎಲ್

  • IPL Auction 2026 | ಡಿಸೆಂಬರ್‌ನಲ್ಲಿ ಮಿನಿ ಹರಾಜು – ರಿಟೇನ್‌ ಆಟಗಾರರ ಪಟ್ಟಿ ಪ್ರಕಟಿಸಲು ಡೆಡ್‌ಲೈನ್‌ ಫಿಕ್ಸ್‌!

    IPL Auction 2026 | ಡಿಸೆಂಬರ್‌ನಲ್ಲಿ ಮಿನಿ ಹರಾಜು – ರಿಟೇನ್‌ ಆಟಗಾರರ ಪಟ್ಟಿ ಪ್ರಕಟಿಸಲು ಡೆಡ್‌ಲೈನ್‌ ಫಿಕ್ಸ್‌!

    – ಐವರು ಸ್ಟಾರ್‌ ಪ್ಲೇಯರ್‌ಗಳನ್ನ ಹೊರದಬ್ಬಲು ಮುಂದಾದ ಸಿಎಸ್‌ಕೆ
    – ಫ್ರಾಂಚೈಸಿಗಳ ಪರ್ಸ್‌ ಮೊತ್ತ 151 ಕೋಟಿಗೆ ಹೆಚ್ಚಳ

    ಮುಂಬೈ: ಮುಂದಿನ ಡಿಸೆಂಬರ್‌ 13 ರಿಂದ 15ರ ಅವಧಿಯಲ್ಲಿ 2026ರ ಐಪಿಎಲ್‌ ಟೂರ್ನಿಗೆ ಮಿನಿ ಹರಾಜು (IPL Mini Auction) ನಡೆಯುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಎಲ್ಲಾ ಫ್ರಾಂಚೈಸಿಗಳು ರಿಟೇನ್‌ ಆಟಗಾರರ ಪಟ್ಟಿ ಪ್ರಕಟಿಸಲು ಡೆಡ್‌ಲೈನ್‌ ಫಿಕ್ಸ್‌ ಮಾಡಲಾಗಿದೆ.

    ಮುಂದಿನ ನವೆಂಬರ್‌ 15ರ ಒಳಗೆ ಎಲ್ಲಾ ಫ್ರಾಂಚೈಸಿಗಳು ರಿಟೇನ್‌ ಆಟಗಾರರ ಪಟ್ಟಿಯನ್ನು ಪ್ರಕಟಿಸಲು ಐಪಿಎಲ್‌ ಮಂಡಳಿ ಸೂಚನೆ ನೀಡಿರುವುದಾಗಿ ವರದಿಗಳು ತಿಳಿಸಿವೆ. ಇದನ್ನೂ ಓದಿ: ಭಾರತಕ್ಕೆ ಏಷ್ಯಾ ಕಪ್‌ ನೀಡದ ಸಚಿವ ನಖ್ವಿಗೆ ಪಾಕ್‌ನಲ್ಲಿ ಚಿನ್ನದ ಪದಕ ನೀಡಿ ಸನ್ಮಾನಕ್ಕೆ ನಿರ್ಧಾರ

    3 ವರ್ಷಗಳಿಗೊಮ್ಮೆ ಮೆಗಾ ಹರಾಜು ನಡೆಯಲಿದೆ. 2025ರ ಐಪಿಎಲ್‌ ಟೂರ್ನಿ ವೇಳೆ ಮೆಗಾ ಹರಾಜು ನಡೆದಿತ್ತು. ಆದ್ದರಿಂದ ಈ ಬಾರಿ ಮಿನಿ ಹರಾಜು ನಡೆಯಲಿದೆ. ಆದ್ರೆ ಬಿಸಿಸಿಐ (BCCI) ಈಗಾಗಲೇ ವಿಧಿಸಿರುವಂತೆ ಕಳೆದಬಾರಿಗಿಂತ ಫ್ರಾಂಚೈಸಿಗಳ ಪರ್ಸ್‌ ಮೊತ್ತ ಹಿಗ್ಗಲಿದೆ.

    ಪರ್ಸ್‌ ಮೊತ್ತ ಇನ್ನಷ್ಟು ಹೆಚ್ಚಳ
    ಈ ಹಿಂದೆ 90 ಕೋಟಿ ರೂ.ಗಳಷ್ಟಿದ್ದ ಐಪಿಎಲ್‌ ಫ್ರಾಂಚೈಸಿಗಳ ಪರ್ಸ್‌ 2023-24ರ ಐಪಿಎಲ್‌ ಟೂರ್ನಿಯಲ್ಲಿ 100 ಕೋಟಿ ರೂ.ಗೆ ಹೆಚ್ಚಿಸಲಾಗಿತ್ತು. 2025ರ ಐಪಿಎಲ್‌ ಟೂರ್ನಿಯ ಮೆಗಾ ಹರಾಜಿಗೂ ಮುನ್ನ ಬಿಸಿಸಿಐ ಮೂರು ವರ್ಷಗಳ ಅವಧಿಗೆ ವೇತನ ಸೇರಿ ಪರ್ಸ್‌ ಮೊತ್ತವನ್ನ 157 ಕೋಟಿ ರೂ.ಗಳ ವರೆಗೆ ಹೆಚ್ಚಿಸಿದೆ. ಅದರಂತೆ 2025ರ ಐಪಿಎಲ್‌ ಟೂರ್ನಿಯಲ್ಲಿ ಫ್ರಾಂಚೈಸಿಗಳು ಸಂಬಳ ಮಿತಿ ಸೇರಿ ತಲಾ 146 ಕೋಟಿ ರೂ. ಬಳಕೆ ಮಾಡಿದ್ದವು. 2026ರ ಟೂರ್ನಿಗೆ 151 ಕೋಟಿ ರೂ. ಬಳಕೆ ಮಾಡಲಿದ್ದು, 2027ರ ಟೂರ್ನಿಗೆ 157 ಕೋಟಿ ರೂ.ಗಳನ್ನು ಫ್ರಾಂಚೈಸಿಗಳು ಬಳಸಲಿವೆ. ಇದನ್ನೂ ಓದಿ: 2027ರ ವಿಶ್ವಕಪ್‌ ಆಡೋದು ಡೌಟ್‌ – ಆಸೀಸ್‌ ಸರಣಿ ಬಳಿಕ ʻಹಿಟ್‌ಮ್ಯಾನ್‌, ಕ್ರಿಕೆಟ್‌ ಲೋಕದ ಕಿಂಗ್‌ ಯುಗ ಅಂತ್ಯ?

    ಐವರು ಸ್ಟಾರ್‌ಗಳನ್ನ ಹೊರದಬ್ಬಲು ಮುಂದಾದ ಸಿಎಸ್‌ಕೆ
    ಇನ್ನೂ ಮಿನಿ ಹರಾಜಿಗೂ ಮುನ್ನ ರಿಟೇನ್‌ ಆಟಗಾರರ ಪಟ್ಟಿ ಬಿಡುಗಡೆಗೊಳಿಸಲು ಡೆಡ್‌ಲೈನ್‌ ಫಿಕ್ಸ್‌ ಮಾಡ್ತಿದ್ದಂತೆ ದೀಪಕ್ ‌ಹೂಡ, ವಿಜಯ್‌ ಶಂಕರ್‌, ರಾಹುಲ್‌ ತ್ರಿಪಾಟಿ, ಸ್ಯಾಮ್‌ ಕರ್ರನ್‌, ಡಿವೋನ್‌ ಕಾನ್ವೆ ಅವರನ್ನ ತಂಡದಿಂದ ಹೊರಬ್ಬಲು ಫ್ರಾಂಚೈಸಿ ನಿರ್ಧರಿಸಿದೆ ಎಂಧು ತಿಳಿದುಬಂದಿದೆ. ಈ ಬಗ್ಗೆ ಸಿಎಸ್‌ಕೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಇದನ್ನೂ ಓದಿ: 6 ಆಟಗಾರರ ರಿಟೇನ್‌ಗೆ ಬಿಸಿಸಿಐ ಅವಕಾಶ, ಪರ್ಸ್‌ ಮೊತ್ತ 120 ರಿಂದ 157 ಕೋಟಿ ರೂ.ಗೆ ಹೆಚ್ಚಳ!

  • ತಂಡದಲ್ಲಿ ಸಿಗಬೇಕಾದ ಗೌರವ ಸಿಗಲಿಲ್ಲ, ಕುಂಬ್ಳೆ ಮುಂದೆ ಅತ್ತಿದ್ದೆ: ಕ್ರಿಸ್‌ ಗೇಲ್‌

    ತಂಡದಲ್ಲಿ ಸಿಗಬೇಕಾದ ಗೌರವ ಸಿಗಲಿಲ್ಲ, ಕುಂಬ್ಳೆ ಮುಂದೆ ಅತ್ತಿದ್ದೆ: ಕ್ರಿಸ್‌ ಗೇಲ್‌

    ಮುಂಬೈ: ಪಂಜಾಬ್‌ ಕಿಂಗ್ಸ್‌ (Punjab Kings) ತಂಡದಲ್ಲಿ ನನಗೆ ಸಿಗಬೇಕಾದ ಗೌರವ ಸಿಗಲಿಲ್ಲ. ನನ್ನನ್ನು ಸಣ್ಣ ಮಕ್ಕಳಂತೆ ನಡೆಸಿಕೊಂಡಿದ್ದರು ಎಂದು ಎಂದು ಮಾಜಿ ವಿಂಡೀಸ್‌ ಆಟಗಾರ ಕ್ರಿಸ್‌ ಗೇಲ್‌ (Chris Gayle) ಹೇಳಿದ್ದಾರೆ.

    ಶುಭಂಕರ್ ಮಿಶ್ರಾ ಅವರ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಗೇಲ್‌, ಗೌರವದಿಂದ ನನ್ನನ್ನು ತಂಡ ನಡೆಸಿಕೊಂಡಿರಲಿಲ್ಲ. ಇದರಿಂದ ನಾನು ಖಿನ್ನತೆಗೆ ಒಳಗಾಗುವ ಸ್ಥಿತಿ ತಲುಪಿದ್ದೆ ಎಂದು ತಿಳಿಸಿದರು.

    ಪಂಜಾಬ್ ಕಿಂಗ್ಸ್ ತಂಡದಲ್ಲಿ ನನ್ನ ಐಪಿಎಲ್ ಜೀವನ ಬಹಳ ಬೇಗ ಕೊನೆಯಾಯಿತು. ನಾನು ತಂಡಕ್ಕೆ ಕೊಡುಗೆ ನೀಡಿದ್ದರೂ ಹಿರಿಯ ಆಟಗಾರನಾಗಿ ಕೊಡಬೇಕಾದ ಗೌರವ ಸಿಗಲಿಲ್ಲ. ಅನಿಲ್‌ ಕುಂಬ್ಳೆ (Anil Kumble) ಅವರ ಜೊತೆ ಮಾತನಾಡುವಾಗ ನಾನು ಅತ್ತಿದ್ದೆ. ತಂಡ ನನ್ನನ್ನು ನಡೆಸಿಕೊಂಡ ರೀತಿಯಿಂದ ನಿರಾಸೆಯಾಗಿತ್ತು ಎಂದು ದೂರಿದರು. ಇದನ್ನೂ ಓದಿ: BCCI ಬ್ಯಾಂಕ್ ಬ್ಯಾಲೆನ್ಸ್‌ 20 ಸಾವಿರ ಕೋಟಿಗೂ ಅಧಿಕ 5 ವರ್ಷದಲ್ಲಿ 14,627 ಕೋಟಿ ಆದಾಯ ಹೆಚ್ಚಳ

    ಕೆಎಲ್‌ ರಾಹುಲ್‌ ಅವರು ಕರೆ ಮಾಡಿ ಕ್ರಿಸ್‌ ಇರು ಮುಂದಿನ ಪಂದ್ಯದಲ್ಲಿ ಅವಕಾಶ ಸಿಗಲಿದೆ ಎಂದು ಹೇಳಿದರು. ಇದಕ್ಕೆ ನಾನು, ನಿಮಗೆ ಒಳ್ಳೆಯದಾಗಿ ಎಂದು ಹೇಳಿ ಬ್ಯಾಗ್‌ ಹಿಡಿದು ಹೊರಟೆ ಎಂದು ಹಳೆಯ ನೆನಪನ್ನು ಬಿಚ್ಚಿಟ್ಟರು.

    ಕ್ರಿಸ್ ಗೇಲ್ ಅವರು ಐಪಿಎಲ್‌ನಲ್ಲಿ 2018ರಿಂದ 2021ರವರೆಗೆ ಪಂಜಾಬ್ ಕಿಂಗ್ಸ್ ತಂಡದ ಪರವಾಗಿ ಆಡಿದ್ದರು. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಆರಂಭಿಕ ಆಟಗಾರರಾಗಿ 41 ಪಂದ್ಯಗಳಲ್ಲಿ 40.75 ಸರಾಸರಿಯಲ್ಲಿ 1,304 ರನ್ ಹೊಡೆದಿದ್ದರು. ಇದರಲ್ಲಿ 1 ಶತಕ ಮತ್ತು ಹನ್ನೊಂದು ಅರ್ಧ ಶತಕಗಳಿದ್ದವು. ಅವರ ಸ್ಟ್ರೈಕ್ ರೇಟ್ 148.65 ಆಗಿದ್ದರೂ ತಂಡದ ಮ್ಯಾನೇಜ್ ಮೆಂಟ್ ಅವರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದಿದ್ದಾರೆ.

    ಗೇಲ್‌ ಐಪಿಎಲ್‌ನಲ್ಲಿ ಮೂರು ತಂಡಗಳನ್ನು ಪ್ರತಿನಿಧಿಸಿದ್ದಾರೆ. ಆರಂಭದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌(2009-10), ನಂತರ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (2011-2027), ಬಳಿಕ ಪಂಜಾಬ್‌ ಕಿಂಗ್ಸ್‌ (2018-2021) ತಂಡದ ಪರ ಆಡಿದ್ದರು.

  • ಜಿಎಸ್‌ಟಿ ಪರಿಷ್ಕರಣೆ ಬೆನ್ನಲ್ಲೇ ದುಬಾರಿಯಾಗಲಿದೆ ಆರ್‌ಸಿಬಿ ಟಿಕೆಟ್‌ ದರ

    ಜಿಎಸ್‌ಟಿ ಪರಿಷ್ಕರಣೆ ಬೆನ್ನಲ್ಲೇ ದುಬಾರಿಯಾಗಲಿದೆ ಆರ್‌ಸಿಬಿ ಟಿಕೆಟ್‌ ದರ

    – ಆರ್‌ಸಿಬಿಯ ಬೆಂಗಳೂರು ಪಂದ್ಯಗಳಿಗೆ ಅತಿ ಹೆಚ್ಚು ದರ

    ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(GST) ಸ್ಲ್ಯಾಬ್‌ ಪರಿಷ್ಕರಣೆ ಬೆನ್ನಲ್ಲೇ 2026ನೇ ಆವೃತ್ತಿಯ ಐಪಿಎಲ್‌ ಪಂದ್ಯಗಳ (IPL Match) ಟಿಕೆಟ್‌ ದರ ದುಬಾರಿಯಾಗಲಿದೆ.

    ಇಲ್ಲಿಯವರೆಗೆ ಐಪಿಎಲ್ ಟಿಕೆಟ್‌ಗಳು 28% ರಷ್ಟು ತೆರಿಗೆ ಸ್ಲ್ಯಾಬ್ ಅಡಿಯಲ್ಲಿದ್ದವು. ಆದರೆ ಪರಿಷ್ಕರಣೆಯಾದ ಬಳಿಕ ಇವು 40% ರ ವಿಭಾಗದಲ್ಲಿ ಬರುವುದರಿಂದ ಟಿಕೆಟ್‌ ದರ (Ticket Price) ಏರಿಕೆಯಾಗಲಿದೆ.

    ತಂಬಾಕು ಉತ್ಪನ್ನಗಳು ಹಾಗೂ ಕ್ಯಾಸಿನೊ, ರೇಸ್ ಕ್ಲಬ್‌ಗಳು ಮತ್ತು ಇತರ ಐಷಾರಾಮಿ ಖರ್ಚುಗಳಿಗೆ 40% ತೆರಿಗೆ ಹಾಕಲಾಗಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬೆಂಗಳೂರಿನ ಪಂದ್ಯದ ಟಿಕೆಟ್‌ ದರ ಭಾರೀ ಏರಿಕೆಯಾಗುವ ಸಾಧ್ಯತೆಯಿದೆ.

    ಎಷ್ಟು ಏರಿಕೆಯಾಗಬಹುದು?
    ಈ ಸೀಸನ್ ವರೆಗೆ 500 ರೂ. ಮೂಲ ಬೆಲೆ ಹೊಂದಿದ್ದ ಟಿಕೆಟ್‌ 28% ಜಿಎಸ್‌ಟಿ ಹಾಕಲಾಗುತ್ತಿತ್ತು. ಹೀಗಾಗಿ ಒಂದು ಟಿಕೆಟ್‌ ದರ 640 ರೂ. ಆಗುತ್ತಿತ್ತು. 2026 ರ ಆವೃತ್ತಿಯಲ್ಲಿ ಸರ್ಕಾರವು 40% ರಷ್ಟು ಜಿಎಸ್‌ಟಿ ವಿಧಿಸಿದ ನಂತರ ಅದೇ ಟಿಕೆಟ್‌ ದರ 700 ರೂ.ಗೆ ಏರಿಕೆಯಾಗಲಿದೆ.  ಇದನ್ನೂ ಓದಿ: ಇನ್ಮುಂದೆ ಜಿಎಸ್‌ಟಿಯಲ್ಲಿ 2 ಸ್ಲ್ಯಾಬ್‌ ಸೆ.22 ರಿಂದ ಜಾರಿ| ಯಾವ ವಸ್ತುಗಳ ಬೆಲೆ ಇಳಿಕೆ? ಯಾವುದು ಏರಿಕೆ? ಇಲ್ಲಿದೆ ಪಟ್ಟಿ

    ಈ ವರ್ಷ ಆರ್‌ಸಿಬಿಯ ಬೆಂಗಳೂರು ಪಂದ್ಯದ ದುಬಾರಿ ಟಿಕೆಟ್‌ ಬೆಲೆ 42,350 ರೂ. ಇತ್ತು. ಈ ದರಕ್ಕೆ 40% ಜಿಎಸ್‌ಟಿ ಹಾಕಿದರೆ ಸುಮಾರು 4 ಸಾವಿರ ರೂ. ಏರಿಕೆ ಕಾಣಬಹುದು. ಚೆಪಾಕ್‌ನಲ್ಲಿ ಅತ್ಯಂತ ದುಬಾರಿ ಟಿಕೆಟ್ (7,000 ರೂ.) 7,656 ಕ್ಕೆ ಏರುವ ಸಾಧ್ಯತೆಯಿದೆ. ಆರ್‌ಸಿಬಿಯ ಬೆಂಗಳೂರು ಪಂದ್ಯದ ಕಡಿಮೆ ಬೆಲೆಯ ಟಿಕೆಟ್‌ಗೆ 2,300 ರೂ. ಇತ್ತು. ಇನ್ನು ಮುಂದೆ ಈ ದರ 2,515 ರೂ. ಆಗಬಹುದು.

    ಐಪಿಎಲ್‌ನಲ್ಲಿ ಆರ್‌ಸಿಬಿ ಮತ್ತು ಚೆನ್ನೈ ತಂಡಕ್ಕೆ ಭಾರೀ ಅಭಿಮಾನಿಗಳಿದ್ದಾರೆ. ಬೇರೆ ತಂಡಗಳಿಗೆ ಹೋಲಿಸಿದರೆ ಈ ಎರಡು ತಂಡಗಳ ಟಿಕೆಟ್‌ ದರ ಜಾಸ್ತಿ ಇರುತ್ತದೆ. ಮನರಂಜನಾ ತೆರಿಗೆ ವಿಧಿಸುವುದರಿಂದ ಟಿಕೆಟ್‌ ದರ ಮತ್ತಷ್ಟು ಏರಿಕೆಯಾಗುತ್ತದೆ.  ಆರ್‌ಸಿಬಿಯಲ್ಲಿ ವಿರಾಟ್‌ ಕೊಹ್ಲಿ ಸೇರಿದಂತೆ ಈ ಹಿಂದೆ ಹಲವು ಸ್ಟಾರ್‌ ಪ್ಲೇಯರ್‌ಗಳು ಹಿಂದೆ ಆಡಿದ್ದರಿಂದ ಬೆಲೆ ಜಾಸ್ತಿಯಿದೆ. ಆದರೆ ಬೆಂಗಳೂರು ಹೊರತುಪಡಿಸಿ ಬೇರೆ ಕಡೆ ನಡೆಯುವ ಆರ್‌ಸಿಬಿ ಪಂದ್ಯದ ಟಿಕೆಟ್‌ ದರ ಕಡಿಮೆ ಇರುತ್ತದೆ.  ಇದನ್ನೂ ಓದಿ: ಅಕ್ರಮ ಬೆಟ್ಟಿಂಗ್ಆ್ಯಪ್ ಪ್ರಕರಣ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶಿಖರ್ಧವನ್‌ಗೆ ಇಡಿ ಸಮನ್ಸ್

    ಟಿಕೆಟ್‌ ದರಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನಲ್ಲಿ ಯಾವುದೇ ನಿಯಮಗಳು ಇಲ್ಲ. ಹೀಗಾಗಿ ಫ್ರಾಂಚೈಸಿಗಳು ಪಂದ್ಯದ ಟಿಕೆಟ್‌ ದರವನ್ನು ತಮಗೆ ಇಷ್ಟ ಬಂದಂತೆ ನಿಗದಿ ಮಾಡುತ್ತವೆ.

    ಐಪಿಎಲ್ ಮಾತ್ರವಲ್ಲ, ಪ್ರೊ ಕಬಡ್ಡಿ ಲೀಗ್ ಮತ್ತು ಇಂಡಿಯನ್ ಸೂಪರ್ ಲೀಗ್ ಕೂಡ ಟಿಕೆಟ್ ಬೆಲೆಯಲ್ಲಿ ಹೆಚ್ಚಳವಾಗಬಹುದು. 500 ರೂ. ಗಿಂತ ಹೆಚ್ಚಿಲ್ಲದ ಮಾನ್ಯತೆ ಪಡೆದ ಕ್ರೀಡಾಕೂಟಗಳು ಸೇರಿದಂತೆ ಇತರ ಕ್ರೀಡಾಕೂಟಗಳಿಗೆ ಪ್ರವೇಶಕ್ಕೆ ವಿನಾಯಿತಿ ನೀಡಲಾಗಿದೆ. ಟಿಕೆಟ್‌ ದರ 500 ರೂ.ಗಿಂತ ಜಾಸ್ತಿ ಇದ್ದರೆ ಅದಕ್ಕೆ 18% ರ ಪ್ರಮಾಣಿತ ದರದಲ್ಲಿ ತೆರಿಗೆ ವಿಧಿಸಲಾಗುತ್ತದೆ.

    ಈ ಬಾರಿ ಆರ್‌ಸಿಬಿ ಟಿಕೆಟ್‌ ದರ ಎಷ್ಟಿತ್ತು?
    ಕೆಐಎ ವೈರ್‌ ಮತ್ತು ಕೇಬಲ್‌ಗಳು ಎ ಸ್ಟ್ಯಾಂಡ್: 2,300 ರೂ.
    ಬೋಟ್ ಸಿ ಸ್ಟ್ಯಾಂಡ್ – 3,300
    ಪೂಮಾ ಬಿ ಸ್ಟ್ಯಾಂಡ್ 3,300
    ಟಿಕೆಟ್‌ ಜಿಟಿ ಅನೆಕ್ಸ್ – 4,000 ರೂ.
    ಕತಾರ್ ಏರ್‌ವೇಸ್ ಜಾವಗಲ್‌ ಶ್ರೀನಾಥ್ ಸ್ಟ್ಯಾಂಡ್ – 10,000 ರೂ.
    ಬಿರ್ಲಾ ಎಸ್ಟೇಟ್ ಬಿಎಸ್ ಚಂದ್ರಶೇಖರ್ ಸ್ಟ್ಯಾಂಡ್ – 15,000 ರೂ.

  • ಐಪಿಎಲ್‌ಗೆ ಗುಡ್‌ಬೈ ಹೇಳಿದ ಅಶ್ವಿನ್‌

    ಐಪಿಎಲ್‌ಗೆ ಗುಡ್‌ಬೈ ಹೇಳಿದ ಅಶ್ವಿನ್‌

    ಚೆನ್ನೈ: ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌ (R Ashwin) ಅವರು ತಮ್ಮ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL) ವೃತ್ತಿಜೀವನಕ್ಕೆ ನಿವೃತ್ತಿ ಹೇಳಿದ್ದಾರೆ.

    221 ಪಂದ್ಯಗಳನ್ನು ಆಡಿ 187 ವಿಕೆಟ್‌ಗಳನ್ನು ಪಡೆದಿರುವ ಅಶ್ವಿನ್‌ ಸಾಮಾಜಿಕ ಜಾಲತಾಣದಲ್ಲಿ (Social Media) ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

    ಪ್ರತಿ ಅಂತ್ಯವು ಹೊಸ ಆರಂಭವನ್ನು ಹೊಂದಿರುತ್ತದೆ. ಐಪಿಎಲ್ ಕ್ರಿಕೆಟಿಗನಾಗಿ ನನ್ನ ಸಮಯ ಇಂದು ಕೊನೆಗೊಳ್ಳುತ್ತದೆ. ಎಲ್ಲಾ ಅದ್ಭುತ ನೆನಪುಗಳು ಮತ್ತು ಸಂಬಂಧಗಳನ್ನು ನೀಡಿದ ಎಲ್ಲಾ ಫ್ರಾಂಚೈಸಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಮುಖ್ಯವಾಗಿ ಐಪಿಎಲ್ ಮತ್ತು ಬಿಸಿಸಿಐಗೆ (BCCI) ಕೃತಜ್ಞತೆಗಳು ಎಂದು ಹೇಳಿದ್ದರು. ಇದನ್ನೂ ಓದಿ: ಆನ್‌ಲೈನ್ ಗೇಮಿಂಗ್ ನಿಷೇಧ BCCI ಪ್ರಾಯೋಜಕತ್ವದಿಂದ ಹಿಂದೆ ಸರಿದ Dream11

    ಐಪಿಎಲ್‌ನಲ್ಲಿ ಅಶ್ವಿನ್‌ ಐದು ತಂಡಗಳ ಪರ ಆಡಿದ್ದಾರೆ ಅಷ್ಟೇ ಅಲ್ಲದೇ ನಾಯಕನಾಗಿ ಪಂಜಾಬ್‌ ಕಿಂಗ್ಸ್‌ (Punjab Kings) ತಂಡವನ್ನು ಮುನ್ನಡೆಸಿದ್ದಾರೆ. ತಮ್ಮ ಐಪಿಎಲ್ ವೃತ್ತಿಜೀವನದ ಅವಧಿಯಲ್ಲಿ ಅವರು ಚೆನ್ನೈ ಸೂಪರ್ ಕಿಂಗ್ಸ್, ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್, ಪಂಜಾಬ್ ಕಿಂಗ್ಸ್, ದೆಹಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಅನ್ನು ಪ್ರತಿನಿಧಿಸಿದ್ದರು.

    ಅಶ್ವಿನ್ ಟೂರ್ನಿಯ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಯಜುವೇಂದ್ರ ಚಹಲ್‌, ಭುವನೇಶ್ವರ್ ಕುಮಾರ್, ಸುನಿಲ್ ನರೈನ್ ಮತ್ತು ಪಿಯೂಷ್ ಚಾವ್ಲಾ ನಂತರ ಅಶ್ವಿನ್‌ ಇದ್ದಾರೆ.

    ಅಶ್ವಿನ್‌ ಕೊನೆಯ ಬಾರಿ ಚೆನ್ನೈ ತಂಡದ ಪರ ಆಡಿದ್ದರು. 2025 ರಲ್ಲಿ ಚೆನ್ನೈ ತಂಡ ಅಶ್ವಿನ್‌ ಅವರನ್ನು 9.75 ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ 9 ಪಂದ್ಯವಾಡಿ 7 ವಿಕೆಟ್‌ ಮಾತ್ರ ಪಡೆದಿದ್ದರು.

  • BCCI ಅಕೌಂಟ್‌ನಲ್ಲಿದೆ 30,000 ಕೋಟಿ ಹಣ – IPLನಿಂದಲೇ ಅತೀ ಹೆಚ್ಚು ಗಳಿಕೆ!

    BCCI ಅಕೌಂಟ್‌ನಲ್ಲಿದೆ 30,000 ಕೋಟಿ ಹಣ – IPLನಿಂದಲೇ ಅತೀ ಹೆಚ್ಚು ಗಳಿಕೆ!

    -2023-24ರ ಐಪಿಎಲ್‌ನಿಂದಲೇ 9,742 ಕೋಟಿ ರೂ. ಆದಾಯ
    -ವರ್ಷಕ್ಕೆ 1,000 ಕೋಟಿ ಬಡ್ಡಿ!

    ನವದೆಹಲಿ: ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಸಂಸ್ಥೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬಳಿ ಬರೋಬ್ಬರಿ 30 ಸಾವಿರ ಕೋಟಿ ರೂ. ನಿಧಿ ಇದೆ. ಈ ನಿಧಿಯಿಂದಲೇ ಬಿಸಿಸಿಐ ಪ್ರತಿ ವರ್ಷ 1000 ಕೋಟಿ ರೂ. ಬಡ್ಡಿಗಳಿಸುತ್ತಿದೆ ಎಂಬ ಅಚ್ಚರಿಯ ಸಂಗತಿಯೊಂದು ಹೊರಬಿದ್ದಿದೆ.

    ಈ ಬಗ್ಗೆ ರೆಡಿಪ್ಯೂಷನ್ ಸಂಸ್ಥೆ ವರದಿ ಮಾಡಿದ್ದು, ಬಿಸಿಸಿಐ 2023-24ರ ಆರ್ಥಿಕ ವರ್ಷದಲ್ಲಿ 9,742 ಕೋಟಿ ರೂ. ಆದಾಯಗಳಿಸಿದೆ ಎಂದು ಉಲ್ಲೇಖಿಸಿದೆ. 2008ರಲ್ಲಿ ಆರಂಭಗೊಂಡಿದ್ದ ಐಪಿಎಲ್ ಈಗ ಬಿಸಿಸಿಐ ಪಾಲಿನ ಚಿನ್ನದ ಮೊಟ್ಟೆ ಇಡುವ ಕೋಳಿ ಎನಿಸಿಕೊಂಡಿದ್ದು, ಬಿಸಿಸಿಐ ತನ್ನ ಹೆಚ್ಚಿನ ಆದಾಯವನ್ನು ಇಂಡಿಯನ್ ಪ್ರೀಮಿಯರ್ ಲೀಗ್(IPL) ಮೂಲಕವೇ ಗಳಿಸುತ್ತದೆ. ಲೀಗ್‌ನಿಂದ 2023-24ರಲ್ಲಿ ಮಂಡಳಿಗೆ 5,761 ಕೋಟಿ ರೂ. ಆದಾಯ ಲಭಿಸಿದೆ.ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – 2 ತಾಲೂಕುಗಳ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

    ಈ ನಿಧಿ ಬಿಸಿಸಿಐನ ಆದಾಯದ ಶೇ.59ರಷ್ಟಿದೆ. ಜೊತೆಗೆ ಐಸಿಸಿಯಿಂದಲೂ ಬಹುಪಾಲು ಮೊತ್ತ ಬಿಸಿಸಿಐಗೆ ಲಭಿಸುತ್ತದೆ. ಮಹಿಳಾ ಪ್ರೀಮಿಯರ್ ಲೀಗ್ (WPL)ನಿಂದ 378 ಕೋಟಿ ರೂ. ಆದಾಯ ಲಭಿಸಿದ್ದು, ಭಾರತದ ಪುರುಷರ ಕ್ರಿಕೆಟ್ ತಂಡದ ಸರಣಿಗಳ ಮೂಲಕ 2,350 ಕೋಟಿ ರೂ.ಗೂ ಹೆಚ್ಚು ಲಾಭವಾಗಿದೆ.

    ಬಿಸಿಸಿಐಗೆ ಆದಾಯ ಹೇಗೆ ಬರುತ್ತೆ?
    ಬಿಸಿಸಿಐ ತನ್ನ ಬಹುಪಾಲು ಆದಾಯವನ್ನು ಐಪಿಎಲ್ ಮೂಲಕವೇ ಗಳಿಸುತ್ತದೆ. ಐಪಿಎಲ್ ತಂಡಗಳ ಮಾರಾಟ, ಮಾಧ್ಯಮ ಹಕ್ಕು, ಜಾಹೀರಾತುಗಳಿಂದ ಬಹುಕೋಟಿ ಆದಾಯ ಬಿಸಿಸಿಐಗೆ ಬರುತ್ತದೆ. ಉಳಿದಂತೆ ಕಿಟ್ ಪ್ರಾಯೋಜಕತ್ವ, ಶೀರ್ಷಿಕೆ ಪ್ರಾಯೋಜಕತ್ವ, ಭಾರತ ತಂಡದ ಸರಣಿ ಆಯೋಜನೆ, ದೇಸಿ ಟೂರ್ನಿ, ಡಬ್ಲ್ಯುಪಿಎಲ್ ಹಾಗೂ ಇತರ ಮೂಲಗಳಿಂದಲೂ ಮಂಡಳಿಗೆ ಹಣ ಹರಿದುಬರುತ್ತಿದೆ.

    ಐಸಿಸಿಗಿಂತ ಬಿಸಿಸಿಐ ಆದಾಯವೇ ಹೆಚ್ಚು:
    ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಕೂಡಾ ಭಾರತೀಯ ಕ್ರಿಕೆಟ್ ಮಂಡಳಿಯ ಮೇಲೆ ಹೆಚ್ಚು ಅವಲಂಬಿತವಾಗಿದೆ. ವಿಶೇಷವೆಂದರೆ ಐಸಿಸಿಗಿಂತ ಬಿಸಿಸಿಐ ವಾರ್ಷಿಕವಾಗಿ ಹೆಚ್ಚಿನ ಆದಾಯ ಗಳಿಸುತ್ತದೆ. ಜಾಗತಿಕ ಕ್ರಿಕೆಟ್‌ನ ಆರ್ಥಿಕತೆಯಲ್ಲಿ ಭಾರತ ಕೊಡುಗೆ ಶೇ.70ರಿಂದ 80ರಷ್ಟಿದೆ. ಅಂದರೆ ವಾರ್ಷಿಕವಾಗಿ 5,000 ಕೋಟಿ ರೂ.ಗೂ ಹೆಚ್ಚಿನ ಹಣ ಸಂಪಾದಿಸುವ ಐಸಿಸಿ, 4,000 ಕೋಟಿ ರೂ.ಯಷ್ಟು ಮೊತ್ತವನ್ನು ಬಿಸಿಸಿಐ ಮೂಲಕವೇ ಗಳಿಸುತ್ತದೆ. ಇದಕ್ಕೆ ಪ್ರತಿಯಾಗಿ ವಾರ್ಷಿಕವಾಗಿ ಐಸಿಸಿ ತನ್ನ ಸದಸ್ಯ ರಾಷ್ಟ್ರಗಳಿಗೆ ಹಂಚುವ ಆದಾಯದಲ್ಲಿ ಬಿಸಿಸಿಐ ಶೇ.38.5ರಷ್ಟು ಪಾಲು ಪಡೆಯುತ್ತದೆ.ಇದನ್ನೂ ಓದಿ: ಚಿಕ್ಕಮಗಳೂರು | ಪ್ರವಾಸಿ ಬಸ್‌ ಪಲ್ಟಿ – 25 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

  • ಆರ್‌ಸಿಬಿ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡಿದೆ – ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಬಾಂಬ್

    ಆರ್‌ಸಿಬಿ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡಿದೆ – ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಬಾಂಬ್

    – ಬಿಸಿಸಿಐಗೆ ಶೀಘ್ರದಲ್ಲೇ ದೂರು ಕೊಡ್ತೇನೆ ಎಂದ ಅಬ್ರಹಾಂ

    ಬೆಂಗಳೂರು: 2025ರ ಐಪಿಎಲ್‌ ಫೈನಲ್‌ನಲ್ಲಿ ಪಂಜಾಬ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಗೆದ್ದು 18 ವರ್ಷಗಳ ಬಳಿಕ ಟ್ರೋಫಿ ಮುಡಿಗೇರಿಸಿಕೊಂಡಿತು. ಆದ್ರೆ ಈ ಖುಷಿ ಒಂದು ದಿನವೂ ಉಳಿಯಲಿಲ್ಲ. ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ರು. ಈ ಎಲ್ಲ ಬೆಳವಣಿಗೆಗಳ ನಡುವೆ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ (TJ Abraham) ಆರ್‌ಸಿಬಿ ವಿರುದ್ಧ ಫಿಕ್ಸಿಂಗ್‌ ಬಾಂಬ್‌ ಸಿಡಿಸಿದ್ದಾರೆ.

    ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ (Bengaluru Stampede Case) ಸಂಬಂಧಿಸಿದಂತೆ ಸಿಎಂ, ಡಿಸಿಎಂ ಸೇರಿದಂತೆ ಐಎಎಸ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಟಿಜೆ ಅಬ್ರಹಾಂ ದೂರು ದಾಖಲಿಸಿದ್ದಾರೆ. ಇದೇ ವೇಳೆ ಆರ್‌ಸಿಬಿ ವಿರುದ್ಧ ಫಿಕ್ಸಿಂಗ್‌ ಆರೋಪ ಮಾಡಿದ್ದಾರೆ. ಇದನ್ನೂ ಓದಿ: `ಬನ್ನಿ ಹಾಪ್ ಕ್ಯಾಚ್’ ರೂಲ್ಸ್‌ಗೆ ಐಸಿಸಿ ಬ್ರೇಕ್ – ಶೀಘ್ರವೇ ಹೊಸ ರೂಲ್ಸ್

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫೈನಲ್ ಪಂದ್ಯಕ್ಕೂ ಮುನ್ನವೇ ವಿಧಾನಸೌಧದ ಬಳಿ ಸಂಭ್ರಮಾಚರಣೆ, ಮೆರವಣಿಗೆ ಸಂಬಂಧ ಕಬ್ಬನ್ ಪಾರ್ಕ್ ಎಸಿಪಿಗೆ ಮಾಹಿತಿ ನೀಡಿ, ವಿಧಾನಸೌಧ ಬಳಿ ತಯಾರಿ ಮಾಡಿದ್ರಿ. ನಮ್ಮ ತಂಡ ಗೆಲ್ಲುತ್ತೆ ಅನ್ನೋ ಬಗ್ಗೆ ನಿಮಗೆ ಗೊತ್ತಾಗಿದ್ದು ಹೇಗೆ? ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

    ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಯಕ್ರಮ ಆಯೋಜನೆ ಪ್ಲ್ಯಾನ್ ಮಾಡಿದ್ದು ಹೇಗೆ? ಆಗಿದ್ದರೆ ಮೊದಲೇ ಆರ್‌ಸಿಬಿ ಗೆಲ್ಲುವ ಬಗ್ಗೆ ನಿಮಗೆ ಮಾಹಿತಿ‌ ಇತ್ತಾ? ಅಥವಾ ಮ್ಯಾಚ್ ಫಿಕ್ಸಿಂಗ್ ಆಗಿತ್ತಾ? ಈ ಬಗ್ಗೆ ಅನುಮಾನ ಇದೆ. ಈ ಬಗ್ಗೆಯೂ ಬಿಸಿಸಿಐಗೆ ಮುಂದಿನ ದಿನಗಳಲ್ಲಿ ದೂರು ಕೊಡ್ತೇನೆ ಎಂದಿದ್ದಾರೆ. ಇದನ್ನೂ ಓದಿ: 5 ಎಸೆತಗಳಲ್ಲಿ 5 ವಿಕೆಟ್‌ – ಮತ್ತೆ ದಿಗ್ವೇಶ್‌ ರಾಥಿ ಕಮಾಲ್‌

  • 5 ಎಸೆತಗಳಲ್ಲಿ 5 ವಿಕೆಟ್‌ – ಮತ್ತೆ ದಿಗ್ವೇಶ್‌ ರಾಥಿ ಕಮಾಲ್‌

    5 ಎಸೆತಗಳಲ್ಲಿ 5 ವಿಕೆಟ್‌ – ಮತ್ತೆ ದಿಗ್ವೇಶ್‌ ರಾಥಿ ಕಮಾಲ್‌

    ಲಕ್ನೋ: ಐಪಿಎಲ್‌ನಲ್ಲಿ (IPL) ತನ್ನ ಬೌಲಿಂಗ್‌ನಿಂದಲೇ ಸುದ್ದಿಯಾಗಿದ್ದ ಬೌಲರ್‌ ದಿಗ್ವೇಶ್‌ ರಾಥಿ (Digvesh Rathi) ಈಗ ಸ್ಥಳೀಯ ಕ್ರಿಕೆಟ್‌ ಪಂದ್ಯದಲ್ಲಿ 5 ಎಸೆತಗಳಲ್ಲಿ 5 ವಿಕೆಟ್‌ ಕಬಳಿಸುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.

    ಲಕ್ನೋ ಸೂಪರ್‌ ಜೈಂಟ್ಸ್‌ (LSG) ತಂಡ ಮಾಲೀಕ ಸಂಜೀವ್‌ ಗೋಯೆಂಕಾ (Sanjiv Goenka) ದಿಗ್ವೇಶ್‌ ರಾಥಿ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಸ್ಥಳೀಯ ಟಿ20 ಪಂದ್ಯದಲ್ಲಿ ದಿಗ್ವೇಶ್ ರಾಥಿ 5 ವಿಕೆಟ್ ಪಡೆದಿರುವ ಈ ಕ್ಲಿಪ್ ಅನ್ನು ಆಕಸ್ಮಿಕವಾಗಿ ನೋಡಿದೆ. ಐಪಿಎಲ್ 2025 ರಲ್ಲಿ ಉದಯವಾದ ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: `ಬನ್ನಿ ಹಾಪ್ ಕ್ಯಾಚ್’ ರೂಲ್ಸ್‌ಗೆ ಐಸಿಸಿ ಬ್ರೇಕ್ – ಶೀಘ್ರವೇ ಹೊಸ ರೂಲ್ಸ್

    26 ವರ್ಷದ ದಿಗ್ವೇಶ್‌ ಈ ಬಾರಿ ಐಪಿಎಲ್‌ನಲ್ಲಿ ಕಮಾಲ್‌ ಮಾಡಿದ್ದರು. 13 ಪಂದ್ಯಗಳಲ್ಲಿ 14 ವಿಕೆಟ್‌ ಪಡೆದು ಮಿಂಚಿದ್ದರು. ಚೊಚ್ಚಲ ಐಪಿಎಲ್‌ ಆವೃತ್ತಿಯಲ್ಲಿ ಉದ್ಧಟತನ ತೋರಿದ್ದಕ್ಕೆ ದಿಗ್ವೇಶ್ ಅವರನ್ನು ಅಮಾನತು ಮಾಡಲಾಗಿತ್ತು. ಇದನ್ನೂ ಓದಿ: ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಉದ್ಧಟತನ – ಒಂದು ಪಂದ್ಯಕ್ಕೆ ದಿಗ್ವೇಶ್ ಅಮಾನತು, ಭಾರೀ ದಂಡ

    ವಿಕೆಟ್‌ ಪಡೆದ ನಂತರ ನೋಟ್‌ಬುಕ್ ಸಂಭ್ರಮಾಚರಣೆ ಮಾಡಿದ್ದಕ್ಕಾಗಿ ರಾಥಿ ಅವರಿಗೆ ದಂಡ ವಿಧಿಸಲಾಗಿತ್ತು.

     

  • ಐಪಿಎಲ್ ಬೆಟ್ಟಿಂಗ್ ಆಡಲು ಮನೆಗಳ್ಳತನ ಮಾಡುತ್ತಿದ್ದ ಖದೀಮ ಪೊಲೀಸರ ಅತಿಥಿ

    ಐಪಿಎಲ್ ಬೆಟ್ಟಿಂಗ್ ಆಡಲು ಮನೆಗಳ್ಳತನ ಮಾಡುತ್ತಿದ್ದ ಖದೀಮ ಪೊಲೀಸರ ಅತಿಥಿ

    ಮಂಡ್ಯ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL) ನಡೆಯುವ ವೇಳೆ ಬೆಟ್ಟಿಂಗ್‌ ಹಣಕ್ಕಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಖತರ್ನಾಕ್‌ ಒಬ್ಬನನ್ನ ಮಂಡ್ಯ ಪೊಲೀಸರು (Mandya Police) ಬಂಧಿಸಿದ್ದಾರೆ.

    ಸಂತೋಷ್‌ ಅಲಿಯಾಸ್ ಐಪಿಎಲ್ ಸಂತೋಷ್ ಬಂಧಿತ ಆರೋಪಿ. ಈತ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮುದಿಗೆರೆ ಗ್ರಾಮದವನು. ಹೆಸರಿಗೆ ವ್ಯವಸಾಯ ಕಸುಬಾದ್ರೆ, ಮೂಲ ಕಾಯಕ ಮನೆಗಳ್ಳತನ ಮಾಡೋದು ಬಳಿಕ ಅದರಿಂದ ಬಂದ ಹಣದಲ್ಲಿ ಐಪಿಎಲ್‌ ಬೆಟ್ಟಿಂಗ್ (IPL Betting) ಆಡೋದು ಕಾಯಕವಾಗಿತ್ತು. ಇದನ್ನೂ ಓದಿ: ಇಡೀ ವಿಮಾನ ಸುಟ್ಟು ಭಸ್ಮವಾದರೂ ಒಂದಿಷ್ಟೂ ಹಾನಿಯಾಗದ ಸ್ಥಿತಿಯಲ್ಲಿ ಸಿಕ್ತು ಭಗವದ್ಗೀತೆ ಪುಸ್ತಕ

    ಈತ ಐಪಿಎಲ್ ಬೆಟ್ಟಿಂಗ್ ಅತಿಯಾಗಿ ಆಡುತ್ತಿದ್ದರಿಂದ ಈತನನ್ನು ಐಪಿಎಲ್ ಸಂತೋಷ್ ಅಂತಾನೇ ಕರೆಯುತ್ತಿದ್ರು‌. ಈ ವ್ಯಕ್ತಿ ಬಿಂಡಗನವಿಲೆ, ಬೆಳ್ಳೂರು, ನಾಗಮಂಗಲ, ತುರುವೆಕೆರೆ, ಹುಲಿಯೂರು ದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 10 ಮನೆಗಳ್ಳತನವನ್ನು ಮಾಡಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ. ಪದೇ ಪದೇ ಈ ಭಾಗದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾದ್ದರಿಂದ ನಾಗಮಂಗಲ ಸಿಪಿಐ ನಿರಂಜನ್ ನೇತೃತ್ವದಲ್ಲಿ ಪಿಎಸ್‌ಐ ರವಿಕುಮಾರ್, ಮಾರುತಿ ಒಳಗೊಂಡ 10 ಜನರ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು.

    ಬಳಿಕ ಈ ತಂಡ ಟೆಕ್ನಿಕಲ್ ಎವಿಡೆನ್ಸ್‌ಗಳನ್ನು ಆಧರಿಸಿ ಖತರ್ನಾಕ್ ಸಂತೋಷ್‌ನ್ನು ಬಂಧಿಸುವಲ್ಲಿ ಯಶಸ್ಸಿಯಾಗಿದೆ. ಬಂಧಿತನಿಂದ 40 ಲಕ್ಷ ಮೌಲ್ಯದ 490 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಇದನ್ನೂ ಓದಿ: Plane crash | ಲಂಡನ್ ತಲುಪಿ ಫೋನ್ ಮಾಡ್ತೀನಿ ಅಂದಿದ್ದ ಗಗನಸಖಿ ಮಗಳು – ಬಾರದ ಲೋಕಕ್ಕೆ ಹೋದ್ಳು..!

  • ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ತಲಾ 5 ಕೋಟಿ ಪರಿಹಾರ ಕೊಡ್ಬೇಕು: ವಾಟಾಳ್‌ ನಾಗರಾಜ್‌ ಆಗ್ರಹ

    ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ತಲಾ 5 ಕೋಟಿ ಪರಿಹಾರ ಕೊಡ್ಬೇಕು: ವಾಟಾಳ್‌ ನಾಗರಾಜ್‌ ಆಗ್ರಹ

    ಬೆಂಗಳೂರು: ಕಾಲ್ತುಳಿತದಲ್ಲಿ (Stampede) ಮೃತಪಟ್ಟ ಸಂತ್ರಸ್ತರ ಕುಟುಂಬಗಳಿಗೆ ತಲಾ 5 ಕೋಟಿ ಪರಿಹಾರ ಕೊಡುವಂತೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ (Vatal Nagaraj) ಆಗ್ರಹಿಸಿದ್ದಾರೆ.

    ಬೆಂಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI), ಕರ್ನಾಟಕ ಕ್ರಿಕೆಟ್‌ ಅಸೋಸಿಯೇಷನ್‌, ಆರ್‌ಸಿಬಿ (RCB) ಫ್ರಾಂಚೈಸಿ ಹಾಗೂ ಕರ್ನಾಟಕ ಸರ್ಕಾರ (Karnataka Government) ಸೇರಿ ಒಬ್ಬೊಬ್ಬ ಸಂತ್ರಸ್ತರ ಕುಟುಂಬಗಳಿಗೆ ತಲಾ ಐದು ಕೋಟಿ ರೂ ಪರಿಹಾರ ಜಾರಿಗೊಳಿಸಬೇಕು. ಜೊತೆಗೆ ಗಾಯಗೊಂಡವರ ಜೀವನದ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

    Chinnaswamy Stampede

    ನಮ್ಮ ರಾಜ್ಯದಲ್ಲಿ ಮಾನವ ಹಕ್ಕುಗಳ ಆಯೋಗ ಅಂತ ಇದೆ, ಅದು ಈಗ ʻಮಾನವ ವಿರೋಧಿಗಳ ಆಯೋಗʼ ಆಗಿದೆ. ಈ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಒತ್ತಾಯಿಸಿದರಲ್ಲದೇ, ದಯಾನಂದ್‌ ಅವರನ್ನ ಅಮಾನತ್ತಿನಲ್ಲಿಟ್ಟಿರುವುದು ನಾಡಿನ ಜನತೆಗೆ ಹಾಗೂ ಇಡೀ ಪೊಲೀಸ್‌ ಇಲಾಖೆಗೆ ಮಾಡಿದ ಅಪಮಾನ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳಿಗೆ ಬಿಗ್‌ ಶಾಕ್‌ – ಆರ್‌ಸಿಬಿ ಸೇಲ್‌..?

    ಏನಾಗಿತ್ತು?
    ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿತು. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿತು. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿತು. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ದೀಪಾವಳಿಯಂಥಹ ಸಂಭ್ರಮ ಇತ್ತು. ಆವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು.

    ಮರುದಿನ ಅಂದ್ರೆ ಜೂ.4ರಂದು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಅಭಿಮಾನಿಗಳ ಸಾಗರವೇ ಹರಿದುಬಂದಿತ್ತು. ಚಿನ್ನಸ್ವಾಮಿ ಸ್ಟೇಡಿಯಂ ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದರು. ಆ ಬಳಿಕ ರಾಜ್ಯ ಸರ್ಕಾರ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಹಾಗೂ ಆರ್‌ಸಿಬಿ ಫ್ರಾಂಚೈಸಿ ತಲಾ 10 ಲಕ್ಷ ರೂ. ಕೆಎಸ್‌ಸಿಎ ತಲಾ 5 ಲಕ್ಷ ಪರಿಹಾರ ಘೋಷಿಸಿತ್ತು. ನಂತರ ಕರ್ನಾಟಕ ಸರ್ಕಾರ ಪರಿಹಾರದ ಮೊತ್ತವನ್ನು 25 ಲಕ್ಷ ರೂ.ಗಳಿಗೆ ಹೆಚ್ಚಿಸಿತು.

  • ಅಭಿಮಾನಿಗಳಿಗೆ ಬಿಗ್‌ ಶಾಕ್‌ – ಆರ್‌ಸಿಬಿ ಸೇಲ್‌..?

    ಅಭಿಮಾನಿಗಳಿಗೆ ಬಿಗ್‌ ಶಾಕ್‌ – ಆರ್‌ಸಿಬಿ ಸೇಲ್‌..?

    ಮುಂಬೈ: ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ (Chinnaswamy Stampede Case) ಕೋಲಾಹಲ ಎಬ್ಬಿಸಿರುವ ಹೊತ್ತಿನಲ್ಲೇ ಆರ್‌ಸಿಬಿ ಫ್ರಾಂಚೈಸಿಯಲ್ಲಿ ಬಹುದೊಡ್ಡ ಬೆಳವಣಿಗೆ ನಡೆದಿದೆ. ಇಂಡಿಯನ್‌ ಪ್ರೀಮಿಯರ್‌ಲೀಗ್‌ನಲ್ಲಿ ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ತಂಡವಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಫ್ರಾಂಚೈಸಿಯನ್ನ ಮಾರಾಟ ಮಾಡಲು ಮಾಲೀಕತ್ವದ ಸಂಸ್ಥೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

    ಹೌದು. ಆರ್‌ಸಿಬಿ ಫ್ರಾಂಚೈಸಿಯಲ್ಲಿ ಹೂಡಿಕೆಮಾಡಿರುವ ತನ್ನ ಪಾಲನ್ನು ಮಾರಾಟ ಮಾಡಲು ಪೋಷಕ ಕಂಪನಿಯಾದ ಡಿಯಾಜಿಯೊ (Diageo) ಮುಂದಾಗಿದೆ. ಹೀಗಾಗಿ ಆರ್‌ಸಿಬಿ ಶೀಘ್ರದಲ್ಲೇ ಹೊಸ ಮಾಲೀಕರನ್ನು ಪಡೆಯುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

    18 ವರ್ಷಗಳ ಬಳಿಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಟ್ರೋಫಿ ಗೆದ್ದ ಒಂದು ವಾರದಲ್ಲೇ ಈ ಬೆಳವಣಿಗೆ ನಡೆದಿದೆ. ಡಿಯಾಜಿಯೊ ಪ್ರೈವೆಟ್‌ ಲಿಮಿಟೆಡ್‌ ಕಂಪನಿ ಆರ್‌ಸಿಬಿಯಲ್ಲಿ ಹೂಡಿಕೆ ಮಾಡಿರುವ ತನ್ನ ಪಾಲನ್ನು ಮಾರಾಟ ಮಾಡಲು ಮಾತುಕತೆ ನಡೆಸುತ್ತಿರುವುದಾಗಿ ಬ್ಲೂಮ್‌ಬರ್ಗ್ ವರದಿ ಮಾಡಿದೆ. ಈ ಬೆನ್ನಲ್ಲೇ ಯುನೈಟೆಡ್‌ ಸ್ಪಿರಿಟ್ಸ್‌ನ (United Spirits) ಷೇರುಗಳಲ್ಲೂ ಭಾರೀ ಏರಿಕೆ ಕಂಡಿದೆ. ಬ್ರೂವರೀಸ್ ಮತ್ತು ಡಿಸ್ಟಿಲರೀಸ್ ಸಂಸ್ಥೆಯ ಷೇರುಗಳು ದಿನದಲ್ಲಿ ಶೇ.3.28 ರಷ್ಟು ಏರಿಕೆಯಾಗಿ ಪ್ರತಿ ಷೇರು 1,645 ರೂ.ಗಳಿಗೆ ತಲುಪಿದೆ. ಇದು ಕಳೆದ 5 ತಿಂಗಳಲ್ಲೇ ಗರಿಷ್ಠ ಮಟ್ಟವಾಗಿದೆ.

    ವರದಿಗಳ ಪ್ರಕಾರ, ಡಿಯಾಜಿಯೊ ಕಂಪನಿಯು ಪ್ರಮುಖ ಸಲಹೆಗಾರರೊಂದಿಗೆ ಈಗಾಗಲೇ ಆರಂಭಿಕ ಸುತ್ತಿನ ಮಾತುಕತೆ ನಡೆಸಿದ್ದು, ಎರಡು ರೀತಿಯ ಬೆಳವಣಿಗೆಗಳು ಕಂಡುಬಂದಿವೆ. ಡಿಯಾಜಿಯೊ ಆರ್‌ಸಿಬಿ ಫ್ರಾಂಚೈಸಿಯಲ್ಲಿ ಹೂಡಿಕೆ ಮಾಡಿರುವ ತನ್ನ ಪಾಲನ್ನು ಅಥವಾ ಇಡೀ ಫ್ರಾಂಚೈಸಿ ಶೇರನ್ನೇ ಮಾರಾಟ ಮಾಡಲು ಮಾತುಕತೆ ನಡೆಸುತ್ತಿದೆ. ಆದ್ರೆ ಕಂಪನಿಯು ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಫ್ರಾಂಚೈಸಿಯನ್ನ ಒಟ್ಟು 200 ಕೋಟಿ ಡಾಲರ್‌ಗೆ ಮೌಲ್ಯೀಕರಿಸಬಹುದು ಎಂದು ಹೇಳಲಾಗಿದೆ. ಈ ನಿರ್ಧಾರ ಇನ್ನೂ ಅಧಿಕೃತವಾಗಿಲ್ಲ.

    ಡಿಯಾಜಿಯೊ ನಿರ್ಧಾರಕ್ಕೆ ಕಾರಣವೇನು?
    ಡಿಯಾಜಿಯೊ ಜಾಗತೀಕವಾಗಿ ಬದಲಾವಣೆ ತರಲು ತನ್ನ ಮಾಲೀಕತ್ವ ಬದಲಾವಣೆಗೆ ಎದುರುನೋಡುತ್ತಿದೆ. ಏಕೆಂದರೆ ಅಮೆರಿಕ ಡಿಯಾಜಿಯೊದ ಅತಿದೊಡ್ಡ ಮಾರುಕಟ್ಟೆ. ಆದ್ರೆ ಇತ್ತೀಚೆಗೆ ಸುಂಕದ ಹೊಡೆತ ಹಾಗೂ ಆಲ್ಕೋಹಾಲ್‌ ಉತ್ಪನ್ನಗಳಿಗೆ ಗ್ರಾಹಕರ ಬೇಡಿಕೆ ಕುಸಿದ ಬೆನ್ನಲ್ಲೇ ಮದ್ಯ ಮಾರಾಟಕ್ಕೆ ಹೊಡೆತ ಬಿದ್ದಿದೆ. ಆದ್ದರಿಂದ ಆರ್‌ಸಿಬಿಯಲ್ಲಿನ ತನ್ನ ಪಾಲನ್ನು ಮಾರಾಟ ಮಾಡಿದ್ರೆ ಆರ್ಥಿಕ ಚೇತರಿಕೆ ಜೊತೆಗೆ ತನ್ನ ಪ್ರಮುಖ ವ್ಯವಹಾರಗಳ ಮೇಲೆ ಗಮನಹರಿಸಲು ಸಾಧ್ಯವಾಗುತ್ತದೆ. ಅದಕ್ಕಾಗಿ ತನ್ನ ಪಾಲನ್ನು ಮಾರಾಟ ಮಾಡುವ ನಿರ್ಧಾರಕ್ಕೆ ಬಂದಿದೆ ಎಂದು ತಿಳಿದುಬಂದಿದೆ.

    ಸರ್ಕಾರದ ಒತ್ತಡ ಕಾರಣವೇ?
    ಮತ್ತೊಂದು ಕಡೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಆಯೋಜಿಸಿರುವ ವೃತ್ತಿಪರ ಟಿ20 ಕ್ರಿಕೆಟ್ ಲೀಗ್‌ನಲ್ಲಿ ಬಾಡಿಗೆ ಜಾಹೀರಾತು ಸೇರಿದಂತೆ ಎಲ್ಲಾ ರೀತಿಯ ತಂಬಾಕು ಮತ್ತು ಆಲ್ಕೋಹಾಲ್ ಪ್ರಚಾರಗಳನ್ನು ನಿಷೇಧಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಮತ್ತೊಮ್ಮೆ ಐಪಿಎಲ್‌ ಮಂಡಳಿಗೆ ನಿರ್ದೇಶನ ನೀಡಿದೆ. ಇದೂ ಸಹ ಒಂದು ಕಾರಣ ಇರಬಹುದು ಎಂದು ಹೇಳಲಾಗುತ್ತಿದೆ.

    2008ರಲ್ಲಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಮೂಲಕ ಪದಾರ್ಪಣೆ ಮಾಡಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ವಿಜಯ್‌ ಮಲ್ಯ ಅವರ ಮಾಲೀಕತ್ವದಲ್ಲಿತ್ತು. ಮಲ್ಯ ಅವರ ಉದ್ಯಮ ಸಾಮ್ರಾಜ್ಯ ದಿವಾಳಿಯಾದ ನಂತರ ಡಿಯಾಜಿಯೊ ಕಂಪನಿಯ ಯುನೈಟೆಡ್ ಸ್ಪಿರಿಟ್ಸ್ ಸ್ವಾಧೀನಪಡಿಸಿಕೊಂಡಿತು.