Tag: ಐಪಿಎಲ್

  • ಗುಜರಾತ್‌ ಬೆಂಕಿ ಬ್ಯಾಟಿಂಗ್‌ಗೆ ಹೈದರಾಬಾದ್‌ ಬರ್ನ್‌!

    ಗುಜರಾತ್‌ ಬೆಂಕಿ ಬ್ಯಾಟಿಂಗ್‌ಗೆ ಹೈದರಾಬಾದ್‌ ಬರ್ನ್‌!

    ಅಹಮದಾಬಾದ್‌: ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಗುಜರಾತ್‌ ಟೈಟಾನ್ಸ್‌ (Gujarat Titans) ಹೈದರಾಬಾದ್‌ ಸನ್‌ರೈಸರ್ಸ್‌ (Sunrisers Hyderabad) ವಿರುದ್ಧ 38 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ 6 ವಿಕೆಟ್‌ ನಷ್ಟಕ್ಕೆ 224 ರನ್‌ ಗಳಿಸಿತು. ಕಠಿಣ ಸವಾಲನ್ನು ಬೆನ್ನಟ್ಟಿದ ಹೈದರಾಬಾದ್‌ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 186 ರನ್‌ ಗಳಿಸಿ ಸೋಲನ್ನು ಒಪ್ಪಿಕೊಂಡಿತು.

    ಹೈದರಾಬಾದ್‌ ಆರಂಭ ಉತ್ತಮವಾಗಿತ್ತು. ಮೊದಲ ವಿಕೆಟಿಗೆ ಟ್ರಾವಿಸ್‌ ಹೆಡ್‌ ಮತ್ತು ಅಭಿಶೇಕ್‌ ಶರ್ಮಾ 27 ಎಸೆತಗಳಲ್ಲಿ 49 ರನ್‌ ಜೊತೆಯಾಟವಾಡಿದ್ದರು. ಹೆಡ್‌ 20 ರನ್‌ ಗಳಿಸಿ ಔಟಾದರೆ ಇಶನ್‌ ಕಿಶನ್‌ 13 ರನ್‌ ಗಳಿಸಿ ಔಟಾಗುವ ಮೂಲಕ ಮತ್ತೆ ವಿಫಲರಾದರು.


    ನಂತರ ಅಭಿಶೇಕ್‌ ಶರ್ಮಾ ಮತ್ತು ಕ್ಲಾಸೆನ್‌ 33 ಎಸೆತಗಳಲ್ಲಿ 57 ರನ್‌ ಜೊತೆಯಾಟವಾಡಿದರು. ಉತ್ತಮವಾಗಿ ಆಡುತ್ತಿದ್ದ ಅಭಿಶೇಕ್‌ ಶರ್ಮಾ 74 ರನ್‌(41 ಎಸೆತ, 4 ಬೌಂಡರಿ, 6 ಸಿಕ್ಸ್‌ ಹೊಡೆದು) ಔಟಾದರು. ಶರ್ಮಾ ಔಟಾದ ಬೆನ್ನಲ್ಲೇ ಹೈದರಾಬಾದ್‌ ಕ್ಲಾಸೆನ್‌, ಅಂಕಿತ್‌ ವರ್ಮಾ, ಮೆಂಡೀಸ್‌ ಔಟಾದರು. ನಿತಿಶ್‌ ಕುಮಾರ್‌ ರೆಡ್ಡಿ ಔಟಾಗದೇ 21 ರನ್‌, ಪ್ಯಾಟ್‌ ಕಮಿನ್ಸ್‌ ಔಟಾಗದೇ ಔಟಾಗದೇ 19 ರನ್‌ (10 ಎಸೆತ, 1 ಬೌಂಡರಿ, 1 ಸಿಕ್ಸ್‌ ) ಹೊಡೆದರು

    ಸಿರಾಜ್‌ ಮತ್ತು ಪ್ರಸಿದ್ಧ್‌ ಕೃಷ್ಣ ತಲಾ 2 ವಿಕೆಟ್‌ ಪಡೆದರೆ ಇಶಾಂತ್‌ ಶರ್ಮಾ ಮತ್ತು ಜೆರಾಲ್ಡ್ ಕೋಟ್ಜೀ ತಲಾ ಒಂದೊಂದು ವಿಕೆಟ್‌ ಪಡೆದರು.

    ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ ಪರ ಆರಂಭಿಕ ಆಟಗಾರರಾದ ಸಾಯಿ ಸುದರ್ಶನ್‌ (Sai Sudharsan) ಮತ್ತು ನಾಯಕ ಶುಭಮನ್‌ ಗಿಲ್‌ (Shubman Gil) 41 ಎಸೆತಗಳಲ್ಲಿ 87 ರನ್‌ ಜೊತೆಯಾಟವಾಡಿದರು. ಸಾಯಿ ಸುದರ್ಶನ್‌ 48 ರನ್‌(23 ಎಸೆತ, 9 ಬೌಂಡರಿ ಹೊಡೆದು ಔಟಾದರು. ನಂತರ ಎರಡನೆ ವಿಕೆಟಿಗೆ ಗಿಲ್‌ ಮತ್ತು ಜೋಸ್‌ ಬಟ್ಲರ್‌ 37 ಎಸೆತಗಳಲ್ಲಿ 62 ರನ್‌ ಹೊಡೆದರು.

    ಗಿಲ್‌ 76 ರನ್‌(38 ಎಸೆತ, 10 ಬೌಂಡರಿ, 2 ಸಿಕ್ಸ್‌) ಗಳಿಸಿದ್ದಾಗ ರನೌಟ್‌ ಆದರು. ಬಟ್ಲರ್‌ 64 ರನ್‌(37 ಎಸೆತ, 3 ಬೌಂಡರಿ, 4 ಸಿಕ್ಸ್‌) ಹೊಡೆದು ಕ್ಯಾಚ್‌ ನೀಡಿ ಹೊರನಡೆದರು.

  • ಲಕ್ನೋ ಸೂಪರ್‌ ಆಟಕ್ಕೆ ಶರಣಾದ ರಾಯಲ್ಸ್‌ – 2 ರನ್‌ಗಳ ರೋಚಕ ಜಯ

    ಲಕ್ನೋ ಸೂಪರ್‌ ಆಟಕ್ಕೆ ಶರಣಾದ ರಾಯಲ್ಸ್‌ – 2 ರನ್‌ಗಳ ರೋಚಕ ಜಯ

    ಜೈಪುರ: ಕೊನೆಯಲ್ಲಿ ಬೌಲರ್‌ಗಳ ಅತ್ಯುತ್ತಮ ಪ್ರದರ್ಶನದಿಂದ ರಾಜಸ್ಥಾನ ರಾಯಲ್ಸ್‌ (Rjasthan Royals) ವಿರುದ್ಧ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) 2 ರನ್‌ಗಳ ರೋಚಕ ಜಯ ಸಾಧಿಸಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟ್‌ ಬೀಸಿದ ಲಕ್ನೋ 5 ವಿಕೆಟ್‌ ನಷ್ಟಕ್ಕೆ 180 ರನ್‌ ಗಳಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ರಾಜಸ್ಥಾನ 20 ಓವರ್‌ಗಳಲ್ಲಿ 5 ವಿಕೆಟಿ ನಷ್ಟಕ್ಕೆ 178 ರನ್‌ ಹೊಡೆದು ಸೋಲನ್ನು ಒಪ್ಪಿಕೊಂಡಿತ್ತು.

    ಕೊನೆಯ ಓವರ್‌ವರೆಗೂ ಗೆಲುವು ರಾಜಸ್ಥಾನ ಕಡೆಗೆ ವಾಲಿತ್ತು. ಕೊನೆಯ 6 ಎಸೆತಗಳಲ್ಲಿ 9 ರನ್‌ ಬೇಕಿತ್ತು.ಕ್ರೀಸ್‌ನಲ್ಲಿ ಹೆಟ್ಮೇಯರ್‌ ಮತ್ತು ಧ್ರುವ್‌ ಜುರೇಲ್‌ ಇದ್ದರು. ಮೊದಲ ಎರಡು ಎಸೆತದಲ್ಲಿ ಸಿಂಗಲ್‌ ಮತ್ತು 2 ರನ್‌ ತೆಗೆದ ಹೆಟ್ಮೇಯರ್‌ ಮೂರನೇ ಎಸೆತದಲ್ಲಿ ಕ್ಯಾಚ್‌ ನೀಡಿ ಔಟಾಗುವ ಮೂಲಕ ಪಂದ್ಯ ರೋಚಕ ಘಟ್ಟದತ್ತ ತಿರುಗಿತು.

    4ನೇ ಎಸೆತದಲ್ಲಿ ಯಾವುದೇ ರನ್‌ ಬರಲಿಲ್ಲ. 5 ಎಸೆತದಲ್ಲಿ ದುಬೆ ಸಿಕ್ಸ್‌ ಸಿಡಿಸಲು ಹೋದರು. ಆದರೆ ಮಿಲ್ಲರ್‌ ಕ್ಯಾಚ್‌ ಡ್ರಾಪ್‌ ಮಾಡಿದ ಕಾರಣ 2 ರನ್‌ ಓಡಿದರು. ಕೊನೆಯ ಎಸೆತದಲ್ಲಿ 4 ರನ್‌ ಬೇಕಿತ್ತು. ಆದರೆ ದುಬೆ ಸಿಂಗಲ್‌ ರನ್‌ ತೆಗೆದ ಕಾರಣ ಲಕ್ನೋ ಪಂದ್ಯವನ್ನು ಗೆದ್ದುಕೊಂಡಿತು.

    ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ ಸೂಪರ್‌ ಓವರ್‌ನಲ್ಲಿ ಸೋತಿತ್ತು. ಈಗ ಲಕ್ನೋ ವಿರುದ್ಧವೂ ಕೊನೆ ಕ್ಷಣದಲ್ಲಿ ಬ್ಯಾಟ್ಸ್‌ಮನ್‌ಗಳು ಕೈಕೊಟ್ಟ ಕಾರಣ ರಾಜಸ್ಥಾನ ಸೋಲು ಕಂಡಿದೆ.

    ರಾಜಸ್ಥಾನ ಪರ ಜೈಸ್ವಾಲ್‌ 74 ರನ್‌(52 ಎಸೆತ, 5 ಬೌಂಡರಿ, 4 ಸಿಕ್ಸ್‌), ಮೊದಲ ಪಂದ್ಯವಾಡಿದ 14 ರ ಸೂರ್ಯವಂಶಿ 34 ರನ್‌(20 ಎಸೆತ, 2 ಬೌಂಡರಿ, 3 ಸಿಕ್ಸ್‌), ನಾಯಕ ರಿಯಾನ್‌ ಪರಾಗ್‌ 39 ರನ್‌(26 ಎಸೆತ, 3 ಬೌಂಡರಿ, 2 ಸಿಕ್ಸ್‌) ಸಿಡಿಸಿ ಔಟಾದರು. ಅವೇಶ್‌ ಖಾನ್‌ ಮೂರು ವಿಕೆಟ್‌ ಕೀಳುವ ಮೂಲಕ ರಾಜಸ್ಥಾನಕ್ಕೆ ಶಾಕ್‌ ನೀಡಿದರು.

    ಲಕ್ನೋ ಪರ ಮಾರ್ಕ್ರಾಮ್ 66 ರನ್‌(45 ಎಸೆತ, 5 ಬೌಂಡರಿ, 3 ಸಿಕ್ಸ್‌), ಅಯುಷ್‌ ಬದೋನಿ 50 ರನ್‌ (34 ಎಸೆತ, 5 ಬೌಂಡರಿ, 1 ಸಿಕ್ಸ್‌) ಹೊಡೆದರೆ ಕೊನೆಯಲ್ಲಿ ಅಬ್ದುಲ್‌ ಸಮಾದ್‌ ಔಟಾಗದೇ 30 ರನ್‌ (10 ಎಸೆತ, 4 ಸಿಕ್ಸ್‌) ಸಿಡಿಸಿದ ಪರಿಣಾಮ ತಂಡ 180 ರನ್‌ ಗಳಿಸಿತು.

  • ಮೊದಲ ಎಸೆತದಲ್ಲಿ ಸಿಕ್ಸ್‌ ಸಿಡಿಸಿದ 14ರ ವೈಭವ್‌ – ಒಂದೇ ಪಂದ್ಯದಲ್ಲಿ 2 ದಾಖಲೆ

    ಮೊದಲ ಎಸೆತದಲ್ಲಿ ಸಿಕ್ಸ್‌ ಸಿಡಿಸಿದ 14ರ ವೈಭವ್‌ – ಒಂದೇ ಪಂದ್ಯದಲ್ಲಿ 2 ದಾಖಲೆ

    ಜೈಪುರ: ತಾನು ಎದುರಿಸಿದ ಮೊದಲ ಎಸೆತದಲ್ಲೇ ಸಿಕ್ಸ್‌ ಸಿಡಿಸುವ ಮೂಲಕ ರಾಜಸ್ಥಾನ (Rjasthan Royals) 14 ವರ್ಷದ ಯುವ ಬ್ಯಾಟರ್‌ ವೈಭವ್‌ ಸೂರ್ಯವಂಶಿ (Vaibhav Suryavanshi) ಐಪಿಎಲ್‌ನಲ್ಲಿ ದಾಖಲೆ ಬರೆದಿದ್ದಾರೆ.

    14 ವರ್ಷ, 23 ದಿನಗಳ ವಯಸ್ಸಿನಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಸೂರ್ಯವಂಶಿ ಪಾತ್ರವಾಗಿದ್ದಾರೆ. ಇದರ ಜೊತೆ ಮೊದಲ ಪಂದ್ಯದಲ್ಲಿ ಮೊದಲ ಎಸೆತದಲ್ಲಿ ಸಿಕ್ಸ್‌ ಸಿಡಿಸಿದ ಕಿರಿಯ ಆಟಗಾರ ಎಂಬ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.

    ನಾಯಕ ಸಂಜು ಸಾಮ್ಸನ್‌ ಗಾಯಗೊಂಡ ಹಿನ್ನೆಲೆಯಲ್ಲಿ ಲಕ್ನೋ (Lucknow Super Giants) ವಿರುದ್ಧ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಓಪನರ್‌ ಆಗಿ ಆಗಮಿಸಿದ ಸೂರ್ಯವಂಶಿ ಅವರು ಮೊದಲ ಓವರ್‌ ಎಸೆದ ಶಾರ್ದೂಲ್‌ ಠಾಕೂರ್‌ ಅವರ ಮೂರನೇ ಎಸೆತವನ್ನು ಸಿಕ್ಸರ್‌ಗೆ ಅಟ್ಟಿದ್ದರು.

    ಈ ಪಂದ್ಯದಲ್ಲೇ ಸ್ಫೋಟಕ ಆಟ ಪ್ರದರ್ಶಿಸಿದ ಸೂರ್ಯವಂಶಿ 34 ರನ್‌ ರನ್‌ (20 ಎಸೆತ, 2 ಬೌಂಡರಿ, 3 ಸಿಕ್ಸ್‌) ಸಿಡಿಸಿ ಔಟಾದರು. ಮೊದಲ ವಿಕೆಟಿಗೆ ಯಶಸ್ವಿ ಜೈಸ್ವಾಲ್‌ ಜೊತೆ 52 ಎಸೆತಗಳಲ್ಲಿ 85 ರನ್‌ ಜೊತೆಯಾಟವಾಡಿದ್ದರು. ಔಟಾಗಿ ಪೆವಿಲಿಯನ್‌ ಕಡೆಗೆ ಹೋಗವಾಗ ಸೂರ್ಯವಂಶಿ ಕಣ್ಣೀರು ಹಾಕುತ್ತಾ ಹೆಜ್ಜೆ ಹಾಕಿದರು.

     

     

    ಐಪಿಎಲ್‌ ಹರಾಜಿನಲ್ಲಿ ಸೂರ್ಯವಂಶಿಯನ್ನು ರಾಜಸ್ಥಾನ ರಾಯಲ್ಸ್‌ 1.1 ಕೋಟಿ ರೂ. ನೀಡಿ ಖರೀದಿಸಿತ್ತು.

    5ನೇ ವಯಸ್ಸಿನಲ್ಲೇ ಕ್ರಿಕೆಟ್ ಅಭ್ಯಾಸ ಶುರು ಮಾಡಿದ್ದ ವೈಭವ್, 12ನೇ ವಯಸ್ಸಿಗೆ ಪ್ರಥಮ ದರ್ಜೆ ಪಂದ್ಯವಾಡಿದ್ದರು. ಈಗಾಗಲೇ ರಣಜಿ ಟ್ರೋಫಿ, ಹೇಮಂತ್ ಟ್ರೋಫಿ, ಕೂಚ್ ಬೆಹಾರ್ ಟ್ರೋಫಿ ಮತ್ತು ವಿನೂ ಮಂಕಡ್ ಟೂರ್ನಿಗಳಲ್ಲಿ ಆಡಿದ್ದಾರೆ. 13ನೇ ವಯಸ್ಸಿನೊಳಗೆ ಭಾರತ ಅಂಡರ್-19 ತಂಡದಲ್ಲೂ ಕಾಣಿಸಿಕೊಂಡಿದ್ದಾರೆ.

    2023 ರಲ್ಲಿ ರಣಜಿ ಟೂರ್ನಿಗೆ ಪಾದಾರ್ಪಣೆ ಮಾಡಿದ್ದ ಸೂರ್ಯವಂಶಿ, ಆ ಬಳಿಕ ಬಿಹಾರ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ರಣಧೀರ್ ವರ್ಮಾ ಅಂಡರ್ 19 ಏಕದಿನ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ತ್ರಿಶತಕ ಸಿಡಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಕಳೆದ ತಿಂಗಳು ಆಸ್ಟ್ರೇಲಿಯಾದ ಅಂಡರ್-19 ತಂಡದ ವಿರುದ್ಧ 64 ಎಸೆತಗಳಲ್ಲಿ 104 ರನ್ ಸಿಡಿಸಿ ಮಿಂಚಿದ್ದರು. ಈ ವೇಳೆ ಅವರು ಕೇವಲ 58 ಎಸೆತಗಳಲ್ಲಿ ಶತಕ ಪೂರೈಸಿ, ಅಂಡರ್-19 ಟೆಸ್ಟ್‌ನಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತೀಯ ಬ್ಯಾಟ್ಸ್‌ಮನ್ ಆಗಿ ಹೊರಹೊಮ್ಮಿದ್ದರು.

    ಸೂರ್ಯವಂಶಿ ಈವರೆಗೆ ಒಟ್ಟು 49 ಶತಕಗಳನ್ನು ಸಿಡಿಸಿದ್ದಾರೆ. ಇದರಿಂದಲೇ ವೈಭವ್ ಹೆಸರು ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡಿತ್ತು.

  • ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲು – ಬೆಂಗಳೂರಿನಲ್ಲಿ ಪಂಜಾಬ್‌ ಕಿಂಗ್‌

    ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲು – ಬೆಂಗಳೂರಿನಲ್ಲಿ ಪಂಜಾಬ್‌ ಕಿಂಗ್‌

    ಬೆಂಗಳೂರು: ತವರಿನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರಿಗೆ (RCB) ಹ್ಯಾಟ್ರಿಕ್‌ ಸೋಲಾಗಿದೆ. ಮಳೆಯ (Rain) ಆಟದಲ್ಲಿ ಆರ್‌ಸಿಬಿ ವಿರುದ್ಧ ಪಂಜಾಬ್‌ ಕಿಂಗ್ಸ್‌ (Punjab Kings) 5 ವಿಕೆಟ್‌ಗಳ ಜಯ ಗಳಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಏರಿದೆ.

    ಮಳೆಯಿಂದಾಗಿ 7:30ಕ್ಕೆ ಆರಂಭವಾಗಿದ್ದ ಪಂದ್ಯ 2 ಗಂಟೆ ತಡವಾಗಿ 9:30ಕ್ಕೆ ಆರಂಭವಾಯಿತು. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ಆರಂಭದಲ್ಲೇ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತ್ತು. ಕೊನೆಯಲ್ಲಿ ಟಿಮ್‌ ಡೇವಿಡ್‌ (Tim David) ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಆರ್‌ಸಿಬಿ 9 ವಿಕೆಟ್‌ ನಷ್ಟಕ್ಕೆ 95 ರನ್‌ ಹೊಡೆಯಿತು.

    ಸುಲಭದ ಸವಾಲನ್ನು ಬೆನ್ನಟ್ಟಿದ ಪಂಜಾಬ್‌ 12.1  ಓವರ್‌ಗಳಲ್ಲಿ 5  ವಿಕೆಟ್‌ ನಷ್ಟಕ್ಕೆ 98 ರನ್‌ ಹೊಡೆದು ಜಯಗಳಿಸಿತು. ಈ ಮೊದಲು ಗುಜರಾತ್‌ ಟೈಟಾನ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಪಂದ್ಯವನ್ನು ಸೋತಿತ್ತು. ಈಗ ಮತ್ತೆ ತವರಿನಲ್ಲಿ ರಾಜಸ್ಥಾನದ ವಿರುದ್ಧ ಸೋತಿದೆ. ಇದನ್ನೂ ಓದಿ: ʻಈ ಸಲ ಕಪ್‌ ನಮ್ದೇʼ ಅಂತ ಹೇಳಬೇಡಿ, ಹೇಳಿದಾಗೆಲ್ಲ ತೊಂದ್ರೆ ಆಗುತ್ತೆ: ಅನಿಲ್‌ ಕುಂಬ್ಳೆ

    ಪಂಜಾಬ್‌ ಪರ ನೆಹಾಲ್ ವಧೇರಾ ಔಟಾಗದೇ 33 ರನ್‌ (19 ಎಸೆತ, 3 ಬೌಂಡರಿ, 3 ಸಿಕ್ಸ್‌) ಪ್ರಿಯಾಂಶ್‌ ಆರ್ಯ 16 ರನ್‌, ಪ್ರಭುಸಿಮ್ರಾನ್‌ಸಿಂಗ್‌ 13 ರನ್‌ ಹೊಡೆದು ಜಯವನ್ನು ತಂದುಕೊಟ್ಟರು.

    ಆರ್‌ಸಿಬಿ ಪರ ಸಾಲ್ಟ್‌ 4 ರನ್‌, ಕೊಹ್ಲಿ 1 ರನ್‌, ನಾಯಕ ಪಾಟೀದರ್‌ 23 ರನ್‌ (18 ಎಸೆತ, 1 ಬೌಂಡರಿ, 1 ಸಿಕ್ಸ್‌ ) ಹೊಡೆದು ಔಟಾದರು.

    63 ರನ್‌ಗಳಿಗೆ 9 ವಿಕೆಟ್‌ ಕಳೆದುಕೊಂಡಿದ್ದರೂ ಕೊನೆಯಲ್ಲಿ ಡೇವಿಡ್‌ ಔಟಾಗದೇ ಸ್ಫೋಟಕ 50 ರನ್‌ (26 ಎಸೆತ, 5 ಬೌಂಡರಿ, 3 ಸಿಕ್ಸ್‌) ಹೊಡೆದು ತಂಡದ ಮೊತ್ತವನ್ನು 90 ರನ್‌ಗಳ ಗಡಿಯನ್ನು ದಾಟಿಸಿದರು.

    ಆರ್ಶ್‌ದೀಪ್‌ ಸಿಂಗ್‌, ಜಾನ್‌ಸೆನ್‌ ಚಹಲ್‌, ಹರ್‌ಪ್ರೀತ್‌ ಬಾರ್‌ ತಲಾ 2 ವಿಕೆಟ್‌ ಪಡೆದರು.

  • ಸ್ಟಾರ್ಕ್ ಮ್ಯಾಜಿಕ್‌, ಸೂಪರ್‌ ಓವರ್‌ನಲ್ಲಿ ಗೆದ್ದ ಡೆಲ್ಲಿ – ಪಂದ್ಯ ಟೈ ಆಗಿದ್ದು ಹೇಗೆ?

    ಸ್ಟಾರ್ಕ್ ಮ್ಯಾಜಿಕ್‌, ಸೂಪರ್‌ ಓವರ್‌ನಲ್ಲಿ ಗೆದ್ದ ಡೆಲ್ಲಿ – ಪಂದ್ಯ ಟೈ ಆಗಿದ್ದು ಹೇಗೆ?

    ನವದೆಹಲಿ: ಮಿಚೆಲ್‌ ಸ್ಟಾರ್ಕ್ ಮ್ಯಾಜಿಕ್‌ ಬೌಲಿಂಗ್‌ ನೆರವಿನಿಂದ ಸೂಪರ್‌ ಓವರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ರಾಜಸ್ಥಾನ ರಾಯಲ್ಸ್‌ ವಿರುದ್ಧ ರೋಚಕ ಜಯ ಸಾಧಿಸಿದೆ. ಈ ಮೂಲಕ ತವರಿನಲ್ಲೂ ಗೆದ್ದು ಬೀಗಿದೆ.

    ಸೂಪರ್‌ ಓವರ್‌ ಹೇಗಿತ್ತು?
    ರಾಜಸ್ಥಾನ ಪರ ಹೆಟ್ಮೇಯರ್ ಮತ್ತು ಪರಾಗ್‌ ಕ್ರೀಸ್‌ಗೆ ಆಗಮಿಸಿದರು. ಸ್ಟಾರ್ಕ್ ಎಸೆದ ಮೊದಲ ಎಸೆತದಲ್ಲಿ ಯಾವುದೇ ರನ್‌ ಬಂದಿಲ್ಲ, ಎರಡನೇ ಎಸೆತದಲ್ಲಿ ಬೌಂಡರಿ ಹೊಡೆದ ಹೆಟ್ಮೇಯರ್‌ ಮೂರನೇ ಎಸೆತದಲ್ಲಿ ಒಂದು ರನ್‌ ತೆಗೆದರು. 4 ಎಸೆತವನ್ನು ಪರಾಗ್‌ ಬೌಂಡರಿಗೆ ಅಟ್ಟಿದ್ದರು. ಆದರೆ ಈ ಎಸೆತ ನೋಬಾಲ್‌ ಆಗಿತ್ತು. ಮರು ಎಸೆತದಲ್ಲಿ ಯಾವುದೇ ರನ್‌ ಬಂದಿಲ್ಲ. ಆದರೆ ಹೆಟ್ಮೇಯರ್‌ ಓಡಿದ್ದರಿಂದ ಪರಾಗ್‌ ರನೌಟ್‌ ಆದರು. 5ನೇ ಎಸತದಲ್ಲಿ ಹೆಟ್ಮೆಯರ್‌ 2 ರನ್‌ ಕದಿಯಲು ಮುಂದಾಗಿದ್ದರು. ಆದರೆ 2 ರನ್‌ ಓಡುವ ವೇಳೆ ಜೈಸ್ವಾಲ್‌ ರನೌಟ್‌ ಆದರು. ಎರಡು ವಿಕೆಟ್‌ ಪತನಗೊಂಡ ಪರಿಣಾಮ ರಾಜಸ್ಥಾನದ ಇನ್ನಿಂಗ್ಸ್‌ 11 ರನ್‌ಗಳಿಗೆ ಅಂತ್ಯವಾಯಿತು.

    ಡೆಲ್ಲಿ ಪರ ಕ್ರೀಸ್‌ಗೆ ರಾಹುಲ್‌ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಬಂದಿದ್ದರು. ಸಂದೀಪ್‌ ಎಸೆದ ಮೊದಲ ಓವರ್‌ನ ಮೊದಲ ಎಸೆತದಲ್ಲಿ ರಾಹುಲ್‌ 2 ರನ್‌, ಎರಡನೇ ಎಸೆತದಲ್ಲಿ 4 ರನ್‌, ಮೂರನೇ ಎಸೆತದಲ್ಲಿ ಒಂದು ರನ್‌ ಓಡಿದರು. 4ನೇ ಎಸೆತವನ್ನು ಸ್ಟಬ್ಸ್ ಸಿಕ್ಸ್‌ಗೆ ಅಟ್ಟುವ ಮೂಲಕ ಡೆಲ್ಲಿ ತಂಡಕ್ಕೆ ರೋಚಕ ಜಯವನ್ನು ತಂದುಕೊಟ್ಟರು.

    ಟೈ ಆಗಿದ್ದು ಹೇಗೆ?
    ಕೊನೆಯ 6 ಎಸೆತಗಳಲ್ಲಿ ರಾಜಸ್ಥಾನ (Rajasthan Royals) ಗೆಲುವಿಗೆ 9 ರನ್‌ ಬೇಕಿತ್ತು. ಆದರೆ ಮಿಚೆಕ್‌ ಮಿಚೆಲ್ ಸ್ಟಾರ್ಕ್ ಕೇವಲ 8 ರನ್‌ ನೀಡಿದ್ದರಿಂದ ಪಂದ್ಯ ಟೈನಲ್ಲಿ ಅಂತ್ಯವಾಯಿತು.

    ಬುಧವಾರ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) 20 ಓವರ್‌ಗೆ 5 ವಿಕೆಟ್‌ ನಷ್ಟಕ್ಕೆ 188 ರನ್‌ ಗಳಿಸಿತು. ನಂತರ ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್‌ ಓವರ್‌ನಲ್ಲಿ 4 ವಿಕೆಟ್‌ ಕಳೆದುಕೊಂಡು 188 ರನ್‌ ಗಳಿಸುವ ಮೂಲಕ ಮ್ಯಾಚ್‌ ಟೈ ಆಗುವ ಮೂಲಕ ಪಂದ್ಯ ರೋಚಕ ಘಟಕ್ಕೆ ತಿರುಗಿತು ಇದನ್ನೂ ಓದಿ: ಐಪಿಎಲ್‌ನಲ್ಲಿ ಫಿಕ್ಸಿಂಗ್‌ ಕರಿನೆರಳು | ಹೈದರಾಬಾದ್‌ ಉದ್ಯಮಿ ಸಂರ್ಪಕಿಸಿದ್ರೆ ಕೂಡ್ಲೇ ತಿಳಿಸಿ – ಆಟಗಾರರಿಗೆ ವಾರ್ನಿಂಗ್‌

    ಡೆಲ್ಲಿ ಕ್ಯಾಪಿಟಲ್ಸ್ ಪರ ಇನಿಂಗ್ಸ್ ಆರಂಭಿಸಿದ ಜೇಕ್ ಫ್ರೇಸರ್-ಮೆಕ್‌ಗುರ್ಕ್ 5 ಬಾಲ್‌ಗೆ 9 ರನ್‌ ಹೊಡೆದು ಪೆವಿಲಿಯನ್‌ ಸೇರಿದರು. ಬಳಿಕ ಬಂದ ಕರುಣ್‌ ನಾಯರ್‌ ರನ್‌ ಔಟ್‌ ಆಗುವ ಮೂಲಕ ಫ್ಯಾನ್ಸ್‌ಗೆ ನಿರಾಸೆ ಮೂಡಿಸಿದರು. ನಂತರ ಕ್ರೀಸ್‌ಗಿಳಿದ ಕನ್ನಡಿಗ ಕೆ ಎಲ್‌ ರಾಹುಲ್‌ ಹಾಗೂ ಅಭಿಷೇಕ್‌ ಪೋರೆಲ್‌ 57 ಎಸೆತಗಳಲ್ಲಿ 63 ರನ್ ಜೊತೆಯಾಟವಾಡಿದರು. 38 ರನ್‌ ಕಲೆ ಹಾಕಿದ ಕೆ ಎಲ್‌ ರಾಹುಲ್‌, ಜೋಫ್ರಾ ಆರ್ಚರ್‌ಗೆ ವಿಕೆಟ್‌ ಒಪ್ಪಿಸಿದರು. ಬಳಿಕ ಯುವ ಆಟಗಾರ ಅಭಿಷೇಕ್‌ ಪೊರೆಲ್‌ 49 ರನ್‌ಗೆ ಔಟ್‌ ಆಗುವ ಮೂಲಕ ಅರ್ಧಶತಕ ಬಾರಿಸುವಲ್ಲಿ ವಿಫಲರಾದರು.

    105 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಟ್ರಿಸ್ಟಾನ್ ಸ್ಟಬ್ಸ್ ಹಾಗೂ ನಾಯಕ ಅಕ್ಸರ್‌ ಪಟೇಲ್‌ ಆಸರೆಯಾದರು. ಈ ಜೋಡಿ 19 ಎಸೆತಗಳಲ್ಲಿ 41 ರನ್‌ ಕಲೆ ಹಾಕುವ ಮೂಲಕ ತಂಡ ಮೊತ್ತವನ್ನು ಹೆಚ್ಚಿಸಿದರು ಅಕ್ಷರ್ ಪಟೇಲ್ 14 ಎಸೆತಗಳಲ್ಲಿ 34 ರನ್ ಬಾರಿಸಿ ಔಟಾದರು. ಟ್ರಿಸ್ಟಾನ್ ಸ್ಟಬ್ಸ್ ಅಜೇಯ 34 ರನ್‌ ಗಳಿಸಿದರು. ಬಳಿಕ ಬ್ಯಾಟಿಂಗ್‌ ಮಾಡಿದ ಅಶುತೋಷ್‌ ಶರ್ಮಾ ಅಜೇಯ 15 ರನ್‌ ಬಾರಿಸಿ ತಂಡಕ್ಕೆ ಕೊಡುಗೆ ನೀಡಿದರು.

    ರಾಜಸ್ಥಾನ ಪರ ಜೋಫ್ರಾ ಆರ್ಚರ್ 2 ವಿಕೆಟ್‌ ಉರುಳಿಸಿದರು. ಉಳಿದಂತೆ ಮಹೇಶ್ ತೀಕ್ಷಣ್, ವನಿಂದು ಹಸರಂಗಾ ತಲಾ ಒಂದು ವಿಕೆಟ್‌ಗಳಿಸಿದರು.

    ಡೆಲ್ಲಿ ನೀಡಿದ 189 ರನ್‌ ಗುರಿ ಬೆನ್ನಟ್ಟಿದ ರಾಜಸ್ಥಾನ್‌ ಆರಂಭಿಕ ಬ್ಯಾಟ್ಸ್‌ಮೆನ್‌ ಯಶಸ್ವಿ ಜೆಸ್ವಾಲ್‌ ಮತ್ತು ನಾಯಕ ಸಂಜು ಸ್ಯಾಮ್ಸನ್‌ 34 ಬಾಲ್‌ಗೆ 61 ರನ್‌ ಜೊತೆಯಾಟವಾಡುವ ಮೂಲಕ ಡೆಲ್ಲಿ ಬೌಲರ್ಸ್‌ಗಳ ಬೆವರಿಳಿಸಿದರು. ಸಂಜು 19 ಬಾಲ್‌ಗೆ 31 ರನ್‌ ಗಳಿಸಿ ಗಾಯಗೊಂಡ ಬಳಿಕ ನಿವೃತ್ತಿಗೊಂಡರು.

    ರಿಯಾನ್‌ ಪರಾಗ್‌ 8 ರನ್‌ ಗಳಿಸಿ ಅಕ್ಷರ್‌ ಪಟೇಲ್‌ಗೆ ವಿಕೆಟ್‌ ಒಪ್ಪಿಸಿದರು. ಬಳಿಕ ಜೆಸ್ವಾಲ್‌ ಹಾಗೂ ನಿತೀಶ್‌ ರಾಣಾ ತಲಾ ಅರ್ಧಶತಕ ಸಿಡಿಸುವ ಮೂಲಕ ತಂಡವನ್ನು ಗೆಲುವಿನ ಹಾದಿಯತ್ತ ಕೊಂಡೊಯ್ದು ಓಟಾದರು. 17 ರನ್‌ ಗೆ ಜುರೇಲ್‌ 26 ರನ್‌ ಗಳಿಸಿ ಕೊನೆಯ ಬಾಲ್‌ನಲ್ಲಿ ರನ್‌ ಔಟಾದರು. ಹೆಟ್ಮೇಯರ್‌ 15 ರನ್‌ ಗಳಿಸುವ ಅಜೇಯರಾಗಿ ಉಳಿದರು.

  • ಬೌಲರ್‌ಗಳ ಆಟಕ್ಕೆ 20 ವಿಕೆಟ್‌ ಪತನ – ಪಂಜಾಬ್‌ಗೆ ರೋಚಕ 16 ರನ್‌ಗಳ ಜಯ

    ಬೌಲರ್‌ಗಳ ಆಟಕ್ಕೆ 20 ವಿಕೆಟ್‌ ಪತನ – ಪಂಜಾಬ್‌ಗೆ ರೋಚಕ 16 ರನ್‌ಗಳ ಜಯ

    ಮುಲ್ತಾನ್‌ಪುರ್‌: ಐಪಿಎಲ್‌ನಲ್ಲಿ ಬ್ಯಾಟ್ಸ್‌ಮನ್‌ಗಳೇ ವಿಜೃಂಭಿಸುತ್ತಾರೆ ಎಂಬ ಕೂಗಿನ ಮಧ್ಯೆ ಬೌಲರ್‌ಗಳು ಮಿಂಚಿದ್ದಾರೆ. ಪಂಜಾಬ್‌ (Punjab Kings) ಮತ್ತು ಕೋಲ್ಕತ್ತಾ (Kolkata Knight Riders) ವಿರುದ್ಧ ಪಂದ್ಯದಲ್ಲಿ 20 ವಿಕೆಟ್‌ ಪತನಗೊಂಡರೂ ಕೊನೆಗೂ ಪಂಜಾಬ್‌ ರೋಚಕ 16 ರನ್‌ಗಳ ಜಯ ದಾಖಲಿಸುವಲ್ಲಿ ಯಶಸ್ವಿಯಾಗಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಪಂಜಾಬ್‌ 15.2 ಓವರ್‌ಗಳಲ್ಲಿ 111 ರನ್‌ಗಳಿಗೆ ಆಲೌಟ್‌ ಆಯ್ತು. ಸುಲಭದ ಸವಾಲನ್ನು ಬೆನ್ನಟ್ಟಿದ ಕೋಲ್ಕತ್ತಾ 15.1 ಓವರ್‌ಗಳಲ್ಲಿ 95 ರನ್‌ಗಳಿಗೆ ಆಲೌಟ್‌ ಆಗಿ ಸೋಲನ್ನು ಒಪ್ಪಿಕೊಂಡಿದೆ.

     

    7 ರನ್‌ ಗಳಿಸುವಷ್ಟರಲ್ಲೇ ಕೋಲ್ಕತ್ತಾ ಎರಡು ವಿಕೆಟ್‌ ಕಳೆದುಕೊಂಡರೂ ರಘುವಂಶಿ ಮತ್ತು ರೆಹಾನೆ ನಿಧಾನವಾಗಿ ಆಡಿ ಇನ್ನಿಂಗ್ಸ್‌ ಕಟ್ಟಿದರು. ರಹಾನೆ 17 ರನ್‌ ರಘುವಂಶಿ 37 ರನ್‌ (28 ಎಸೆತ, 5 ಬೌಂಡರಿ, 1 ಸಿಕ್ಸ್‌ ) ಸಿಡಿಸಿ ಔಟಾದರು. ಇವರಿಬ್ಬರು ಔಟಾದ ಬೆನ್ನಲ್ಲೇ ಪತನ ಆರಂಭವಾಯಿತು. ಇದನ್ನೂ ಓದಿ: ಕೇವಲ 26 ರನ್‌ ಗಳಿಸಿದರೂ, ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ

    12ನೇ ಓವರ್‌ನಲ್ಲಿ ಚಹಲ್‌ (Yuzvendra Chahal) ಅವರು ರಿಂಕು ಸಿಂಗ್‌ ಮತ್ತು ರಮಣ್‌ದೀಪ್‌ ಸಿಂಗ್‌ ಅವರನ್ನು ಔಟ್‌ ಮಾಡುವ ಮೂಲಕ ಪಂದ್ಯಕ್ಕೆ ರೋಚಕ ತಿರುವು ನೀಡಿದರು. ಹೀಗಿದ್ದರೂ ರಸೆಲ್‌ ಅಬ್ಬರಿಸುತ್ತಿದ್ದರು. ಆದರೆ ರಸೆಲ್‌ 17 ರನ್‌ಗಳಿಸಿದಾಗ ಜಾನ್‌ಸೆನ್‌ ಎಸೆತದಲ್ಲಿ ಬೌಲ್ಡ್‌ ಆಗುವ ಮೂಲಕ ಕಿಂಗ್ಸ್‌ ಪಂದ್ಯವನ್ನು ಸೋತಿತು.

     

    ಚಹಲ್‌ 4 ವಿಕೆಟ್‌ ಕಿತ್ತರೆ, ಜಾನ್‌ಸೆನ್‌ 3 ವಿಕೆಟ್‌ ಕಿತ್ತರು. ಮ್ಯಾಕ್ಸ್‌ವೆಲ್‌, ಆರ್ಶ್‌ದೀಪ್‌ ಸಿಂಗ್‌, ಬಾರ್ಟ್ಲೆಟ್ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ಸೆಂಚುರಿ ಬಾರಿಸಿದ್ದಕ್ಕೆ ಪಾಕ್‌ ಸೂಪರ್‌ ಲೀಗಲ್ಲಿ ಸಿಕ್ಕಿದ್ದು ಹೇರ್ ಡ್ರೈಯರ್‌!

    ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ ಕಿಂಗ್ಸ್‌ ಆರಂಭಿಕ ಮೂವರು ಆಟಗಾರರನ್ನು ಹರ್ಷಿತ್‌ ರಾಣಾ ಪೆವಿಲಿಯನ್‌ಗೆ ಕಳುಹಿಸಿದ್ದರು. ಪ್ರಿಯಾಂಶ್‌ ಅರ್ಯಾ 22 ರನ್‌(12 ಎಸೆತ, 3 ಬೌಂಡರಿ, 1 ಸಿಕ್ಸ್‌), ಪ್ರಭುಸಿಮ್ರಾನ್‌ ಸಿಂಗ್‌ 30 ರನ್‌(15 ಎಸೆತ, 2 ಬೌಂಡರಿ, 3 ಸಿಕ್ಸ್‌) ಕೊನೆಯಲ್ಲಿ ಶಶಾಂಕ್‌ ಸಿಂಗ್‌ 18 ರನ್‌ ಹೊಡೆದ ಪರಿಣಾಮ ಪಂಜಾಬ್‌ 100 ರನ್‌ಗಳ ಗಡಿಯನ್ನು ದಾಟಿತ್ತು.

    ಹರ್ಷಿತ್‌ ರಾಣಾ 3 ವಿಕೆಟ್‌, ವರುಣ್‌ ಚಕ್ರವರ್ತಿ ಮತ್ತು ಸುನಿಲ್‌ ನರೈನ್‌ ತಲಾ 2 ವಿಕೆಟ್‌, ವೈಭವ್‌ ಅರೋರ, ಅನ್ರಿಚ್ ನಾರ್ಟ್ಜೆ ತಲಾ ಒಂದೊಂದು ವಿಕೆಟ್‌ ಕಿತ್ತರು.

     

  • ಕೊನೆಗೂ ಗೆದ್ದ ಚೆನ್ನೈ – ಲಕ್ನೋ ವಿರುದ್ಧ ರೋಚಕ ಜಯ

    ಕೊನೆಗೂ ಗೆದ್ದ ಚೆನ್ನೈ – ಲಕ್ನೋ ವಿರುದ್ಧ ರೋಚಕ ಜಯ

    ಲಕ್ನೋ: ಕೊನೆಯಲ್ಲಿ ನಾಯಕ ಧೋನಿ (MS Dhoni) ಮತ್ತು ಶಿವಂ ದುಬೆ (Shivam Dube) ಅವರ ಸ್ಫೋಟಕ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ಲಕ್ನೋ ಸೂಪರ್‌ ಜೈಂಟ್ಸ್‌ (LSG) ವಿರುದ್ಧ ರೋಚಕ 4 ವಿಕೆಟ್‌ಗಳ ಜಯ ಸಾಧಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಲಕ್ನೋ 7 ವಿಕೆಟ್‌ ನಷ್ಟಕ್ಕೆ 166 ರನ್‌ ಹೊಡೆಯಿತು. ಈ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಇನ್ನು ಮೂರು ಎಸೆತ ಬಾಕಿ ಇರುವಂತೆಯೇ 5 ವಿಕೆಟ್‌ ನಷ್ಟಕ್ಕೆ 5 ರನ್‌ ಹೊಡೆಯುವ ಮೂಲಕ ಜಯ ಸಾಧಿಸಿತು.

     

    ಚೆನ್ನೈ ಕಳೆದ 5 ಪಂದ್ಯಗಳಲ್ಲಿ ಸತತ ಸೋಲನ್ನು ಅನುಭವಿಸಿತ್ತು. ಈಗ 7ನೇ ಪಂದ್ಯದಲ್ಲಿ ಜಯ ಗಳಿಸುವ ಮೂಲಕ ಅಭಿಮಾನಿಗಳಿಗೆ ಸಿಹಿ ನೀಡಿದೆ. ಮುರಿಯದ 6ನೇ ವಿಕೆಟಿಗೆ ಧೋನಿ ಮತ್ತು ದುಬೆ 28 ಎಸೆತಗಳಲ್ಲಿ 57 ರನ್‌ ಹೊಡೆಯುವ ಮೂಲಕ ತಂಡಕ್ಕೆ ಜಯವನ್ನು ತಂದುಕೊಟ್ಟರು. ಧೋನಿ ಔಟಾದಗೇ 26 ರನ್‌ (11 ಎಸೆತ, 4 ಬೌಂಡರಿ) ಶಿವಂ ದುಬೆ ಔಟಾಗದೇ 43 ರನ್‌ (37 ಎಸೆತ, 3 ಬೌಂಡರಿ, 2 ಸಿಕ್ಸ್‌ ) ಹೊಡೆದರು.

    ಚೆನ್ನೈ ಆರಂಭ ಉತ್ತಮವಾಗಿತ್ತು. ಮೊದಲ ವಿಕೆಟಿಗೆ ರಚಿನ್‌ ರವೀಂದ್ರ ಮತ್ತು ಶೇಕ್‌ ರಶೀದ್‌ 52 ರನ್‌ ಜೊತೆಯಾಟವಾಡಿದರು. ಇಂದು ಮೊದಲ ಪಂದ್ಯವಾಡಿದ ಶೇಕ್‌ ರಶೀದ್‌ 27 ರನ್‌ ಹೊಡೆದರೆ ರಚಿನ್‌ ರವೀಂದ್ರ 37 ರನ್‌(22 ಎಸೆತ, 5 ಬೌಂಡರಿ) ಹೊಡೆದು ವಿಕೆಟ್‌ ಒಪ್ಪಿಸಿದ್ದರು. ಮಧ್ಯಮ ಕ್ರಮಾಂಕದಲ್ಲಿ ಕುಸಿತ ಕಂಡರೂ ದುಬೆ ತಾಳ್ಮೆಯಿಂದ ಇನ್ನಿಂಗ್ಸ್‌ ಕಟ್ಟಿದ್ದರು.

     

    ಲಕ್ನೋ ಪರ ನಾಯಕ ರಿಷಭ್‌ ಪಂತ್‌ ಈ ಐಪಿಎಲ್‌ನಲ್ಲಿ ಮೊದಲ ಅರ್ಧಶತಕ ಸಿಡಿಸಿದರು. 63 ರನ್‌(49 ಎಸೆತ, 4 ಬೌಂಡರಿ, 4 ಸಿಕ್ಸ್‌) ಆರಂಭಿಕ ಆಟಗಾರ ಮಿಚೆಲ್‌ ಮಾರ್ಷ್‌ 30 ರನ್‌( 25 ಎಸೆತ, 2 ಬೌಂಡರಿ, 2 ಸಿಕ್ಸ್‌) ಹೊಡೆದು ‌ಔಟಾದರು. ನೂರ್‌ ಅಹ್ಮದ್ ಮತ್ತು ಪತಿರಾನ ತಲಾ ಎರಡು ವಿಕೆಟ್‌ ಪಡೆದರು.

  • RCBvsDC | ಪಂದ್ಯದ ಟಿಕೆಟ್ ಕಾಳಸಂತೆಯಲ್ಲಿ ಮಾರಾಟ – 8 ಮಂದಿ ಸಿಸಿಬಿ ಬಲೆಗೆ

    RCBvsDC | ಪಂದ್ಯದ ಟಿಕೆಟ್ ಕಾಳಸಂತೆಯಲ್ಲಿ ಮಾರಾಟ – 8 ಮಂದಿ ಸಿಸಿಬಿ ಬಲೆಗೆ

    ಬೆಂಗಳೂರು: ಐಪಿಎಲ್ (IPL) ಮ್ಯಾಚ್‌ಗಳ ಟಿಕೆಟ್ ಸಿಕ್ಕರೆ ಅವರೇ ಪುಣ್ಯವಂತರು ಎನ್ನುವ ಹಾಗಾಗಿದೆ. ಯಾಕೆಂದರೆ ಎಷ್ಟೇ ಕಷ್ಟಪಟ್ಟರೂ ಸಹ ಟಿಕೆಟ್‌ಗಳು ಸಿಕ್ತಿಲ್ಲ. ಗುರುವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್‌ಸಿಬಿ (Royal Challengers Bengaluru) ಹಾಗೂ ದೆಹಲಿ (Delhi Capitals) ನಡುವಿನ ಪಂದ್ಯದ ಟಿಕೆಟ್‌ಗಳನ್ನ ದುಪ್ಪಟ್ಟು ಬೆಲೆಗೆ ಬ್ಲಾಕ್‌ನಲ್ಲಿ ಮಾರಾಟ ಮಾಡುತ್ತಿದ್ದ 8 ಮಂದಿ ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಚಿನ್ನಸ್ವಾಮಿ ಸ್ಟೇಡಿಯಂನ (Chinnaswamy Stadium) ಸುತ್ತಮುತ್ತ, ಕಬ್ಬನ್ ಪಾರ್ಕ್ (Cubbon Park) ಒಳಗೆ ಟಿಕೆಟ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸಿಸಿಬಿ ಡಿಸಿಪಿ ಅಕಾಯ್ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ರಾಣಾ ಕರೆತಂದ ವಿಮಾನಕ್ಕೆ ನೀಡಲಾಗಿತ್ತು ಡಮ್ಮಿ ಕೋಡ್‌, ಮಧ್ಯೆ 11 ಗಂಟೆ ಪಿಟ್‌ ಸ್ಟಾಪ್‌!

    ಮಫ್ತಿಯಲ್ಲಿ ಟಿಕೆಟ್ ಖರೀದಿಸುವ ನೆಪದಲ್ಲಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, ಆರೋಪಿಗಳನ್ನು ಬಂಧಿಸಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಒಪ್ಪಿಸಿದರು. ಈ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರನ್ನು ವಿಚಾರಣೆ ಮಾಡಲಾಗುತ್ತಿದೆ. ಇದನ್ನೂ ಓದಿ: ಆಕಾಶದಲ್ಲೇ ತುಂಡಾದ ಹೆಲಿಕಾಪ್ಟರ್‌ನ ಫ್ಯಾನ್‌ – ಐವರು ದುರ್ಮರಣ

    ಬ್ಲಾಕ್ ಟಿಕೆಟ್ ಹಿಂದೆ ಯಾರಿದ್ದಾರೆ. ಟಿಕೆಟ್ ಹೇಗೆ ಸಿಕ್ತು ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • IPL 2025 – ಜಿಯೋದಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಚಿತ ಇಂಟರ್ನೆಟ್

    IPL 2025 – ಜಿಯೋದಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಚಿತ ಇಂಟರ್ನೆಟ್

    ಬೆಂಗಳೂರು: ಐಪಿಎಲ್ (IPL 2025) ಪಂದ್ಯಗಳು ನಡೆಯುತ್ತಿರುವ ಮೈದಾನಗಳಲ್ಲಿ ಜಿಯೋದಿಂದ (Jio) ಉಚಿತ ಮೊಬೈಲ್ ಇಂಟರ್ನೆಟ್ ದೊರೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ (M.Chinnaswamy Stadium) ಮೈದಾನದಲ್ಲೂ ಉಚಿತ ಸೇವೆ ಲಭ್ಯವಿದ್ದು, ಅದಕ್ಕಾಗಿಯೇ ಜಿಯೋ 2000 ಬೂಸ್ಟರ್‌ ಸೆಲ್‌ಗಳನ್ನು ಅಳವಡಿಸಿದೆ. ಪ್ರೇಕ್ಷಕರು ವೈಫೈ ಆನ್ ಮಾಡಿ, ಮೊಬೈಲ್ ಸಂಖ್ಯೆ ನಮೂದಿಸಿ, ಬರುವ ಒಟಿಪಿಯನ್ನು ಹಾಕಿದರೆ, ಉಚಿತ ಇಂಟರ್ನೆಟ್‌ ಪಡೆಯಬಹುದಾಗಿದೆ.

    ಇಂದು (ಏ.10) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ- ಡೆಲ್ಲಿ ಕ್ಯಾಪಿಟಲ್ಸ್ ನಡುವೆ 24ನೇ ಪಂದ್ಯ ನಡೆಯಲಿದೆ. ​ಸದ್ಯ ಈ ಐಪಿಎಲ್​ನಲ್ಲಿ 3 ಪಂದ್ಯಗಳನ್ನು ಆಡಿರುವ ಡೆಲ್ಲಿ ಕ್ಯಾಪಿಟಲ್ಸ್​ ಮೂರರಲ್ಲೂ ವಿಜಯ ಸಾಧಿಸಿ ಟಾಪ್​ನಲ್ಲಿದೆ. ಆರ್​ಸಿಬಿ 4 ಪಂದ್ಯಗಳನ್ನ ಆಡಿ ಒಂದರಲ್ಲಿ ಮಾತ್ರ ಸೋಲು ಕಂಡಿದೆ. ಇದನ್ನೂ ಓದಿ: 159ಕ್ಕೆ ರಾಜಸ್ಥಾನ್‌ ಆಲೌಟ್‌; ಗುಜರಾತ್‌ಗೆ 58 ರನ್‌ಗಳ ಭರ್ಜರಿ ಜಯ

    ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಜೊತೆ ಮ್ಯಾಚ್ ಆಡಿದಾಗೆಲ್ಲಾ ಹೆಚ್ಚು ಬಾರಿ ಬೆಂಗಳೂರು ತಂಡವೇ ಜಯಗಳಿಸಿದೆ. ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳು ಇದುವರೆಗೆ 31 ಐಪಿಎಲ್​ ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಆರ್​ಸಿಬಿ 19 ಪಂದ್ಯಗಳಲ್ಲಿ ಜಯಗಳಿಸಿದ್ದರೆ, ಡೆಲ್ಲಿ ತಂಡ ಕೇವಲ 11 ರಲ್ಲಿ ಜಯಗಳಿಸಿದೆ. ಇದರಲ್ಲಿ 12 ಪಂದ್ಯಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ನಡೆದಿವೆ. ಈ 12 ರಲ್ಲಿ 7 ಪಂದ್ಯಗಳಲ್ಲಿ ಆರ್​ಸಿಬಿ ಜಯ ಸಾಧಿಸಿದೆ. ಇದನ್ನೂ ಓದಿ: ಐಪಿಎಲ್ 2025: ಪಂಜಾಬ್ ಆಲ್‌ರೌಂಡರ್ ಮ್ಯಾಕ್ಸ್‌ವೆಲ್‌ಗೆ ಪಂದ್ಯದ 25% ದಂಡ

  • ಆರ್‌ಸಿಬಿ ಗೆದ್ದ ಮೂರು ಗೆಲುವು ಸಾಮಾನ್ಯ ಗೆಲುವಲ್ಲ!

    ಆರ್‌ಸಿಬಿ ಗೆದ್ದ ಮೂರು ಗೆಲುವು ಸಾಮಾನ್ಯ ಗೆಲುವಲ್ಲ!

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಗೆದ್ದು ಬೀಗಿದೆ. ಗೆದ್ದ ಮೂರು ಗೆಲುವು ಸಾಮಾನ್ಯ ಗೆಲುವಲ್ಲ.

    ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ನಲ್ಲಿ 2019ರ ಬಳಿಕ ಗೆದ್ದಿರಲಿಲ್ಲ. ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ 2008ರ ಮೊದಲ ಐಪಿಎಲ್‌ ಆವೃತ್ತಿಯ ಬಳಿಕ ಆರ್‌ಸಿಬಿಗೆ ಇಲ್ಲಿ ಗೆಲುವು ದಕ್ಕಿರಲಿಲ್ಲ. ಮುಂಬೈನಲ್ಲಿ ಆರ್‌ಸಿಬಿ ಕೊನೆಯ ಬಾರಿ ಗೆದ್ದಿದ್ದು 2015 ರಲ್ಲಿ. ಆದರೆ ಈ ಬಾರಿ ಮೂರು ಪ್ರತಿಷ್ಠಿತ ಕ್ರೀಡಾಂಗಣದಲ್ಲಿ ಆರ್‌ಸಿಬಿ ಗೆದ್ದು ಬೀಗಿದೆ. ಇದನ್ನೂ ಓದಿ: ಪಾಂಡ್ಯ ಪರಾಕ್ರಮ ವ್ಯರ್ಥ, ಮುಂಬೈ ಭದ್ರಕೋಟೆ ಛಿದ್ರ – ಆರ್‌ಸಿಬಿಗೆ 12 ರನ್‌ಗಳ ರೋಚಕ ಜಯ

    ಮೊದಲ ಪಂದ್ಯದಲ್ಲಿ ಕೋಲ್ಕತ್ತಾ (KKR) ವಿರುದ್ಧ 7 ವಿಕೆಟ್‌ಗಳಿಂದ ಗೆದ್ದ ಆರ್‌ಸಿಬಿ ಎರಡನೇ ಪಂದ್ಯದಲ್ಲಿ ಚೆನ್ನೈ (CSK) ವಿರುದ್ಧ 50 ರನ್‌ಗಳಿಂದ ಗೆದ್ದು ಬೀಗಿತ್ತು. ಮೂರನೇ ಪಂದ್ಯದಲ್ಲಿ ಗುಜರಾತ್‌ ಜೈಂಟ್ಸ್‌ (GT) ವಿರುದ್ಧ ಆರ್‌ಸಿಬಿ ಸೋತಿತ್ತು. ಈಗ ಮುಂಬೈ (MI) ವಿರುದ್ಧ ನಡೆದ ನಾಲ್ಕನೇ ಪಂದ್ಯದಲ್ಲಿ ರೋಚಕ 12 ರನ್‌ ಗಳಿಂದ ಗೆದ್ದು ಬೀಗಿದೆ. ಇದನ್ನೂ ಓದಿ: New Zealand v/s Pakistan – ಕ್ರಿಕೆಟ್ ಪಂದ್ಯದ ವೇಳೆಯೇ ಗ್ರೌಂಡ್‌ನಲ್ಲಿ ಪವರ್‌ಕಟ್; ಮುಂದೇನಾಯ್ತು?

    ಚೆನ್ನೈ ಮತ್ತು ಮುಂಬೈ ವಿರುದ್ಧದ ಪಂದ್ಯದಲ್ಲಿ ಉತ್ತಮ ಆಟವಾಡಿದ ನಾಯಕ ರಜತ್‌ ಪಾಟಿದರ್‌ (Rajat Patidar) ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿರುವುದು ವಿಶೇಷ. ಚೆನ್ನೈ ವಿರುದ್ಧ ರಜತ್‌ ಪಟೀದಾರ್‌ 51 ರನ್‌(32 ಎಸೆತ, 4 ಬೌಂಡರಿ, 3 ಸಿಕ್ಸ್‌) ಹೊಡೆದರೆ ಮುಂಬೈ ವಿರುದ್ಧ 64 ರನ್‌ (32 ಎಸೆತ, 5 ಬೌಂಡರಿ, 4 ಸಿಕ್ಸ್‌) ಚಚ್ಚಿದ್ದರು.

     

     

    ಸೋಮವಾರ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 5 ವಿಕೆಟ್‌ ನಷ್ಟಕ್ಕೆ 221 ರನ್‌ ಬಾರಿಸಿತ್ತು. 222 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಮುಂಬೈ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 209 ರನ್‌ ಗಳಿಸಿ ಸೋಲೊಪ್ಪಿಕೊಂಡಿತು. ಮುಂದೆ ಆರ್‌ಸಿಬಿ ಏ.10 ರಂದು ಬೆಂಗಳೂರಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಕಾದಾಡಲಿದೆ.

    ಅಂಕಪಟ್ಟಿಯಲ್ಲಿ ಆರ್‌ಸಿಬಿ 6 ಅಂಕ ಸಂಪಾದಿಸಿದರೂ ನೆಟ್‌ ರನ್‌ ರೇಟ್‌ನಲ್ಲಿ ಹಿಂದಿರುವ ಕಾರಣ ಮೂರನೇ ಸ್ಥಾನದಲ್ಲಿದೆ. ಆಡಿರುವ ಮೂರು ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್‌ ಮೊದಲ ಸ್ಥಾನದಲ್ಲಿದ್ದರೆ 4 ಪಂದ್ಯವಾಡಿ ಮೂರರಲ್ಲಿ ಜಯಗಳಿಸಿರುವ ಗುಜರಾತ್‌ ಎರಡನೇ ಸ್ಥಾನದಲ್ಲಿದೆ.