Tag: ಐಪಿಎಲ್

  • ಆರ್‌ಸಿಬಿಯಲ್ಲಿ ಇರೋ ಸುಖ ಗೊತ್ತೇ ಇರಲಿಲ್ಲ.. ಹೂಂ ಅಂತೀಯಾ: ಕನ್ನಡದಲ್ಲಿ ಸೊಗಸಾಗಿ ಹಾಡಿದ ಪಡಿಕ್ಕಲ್‌

    ಆರ್‌ಸಿಬಿಯಲ್ಲಿ ಇರೋ ಸುಖ ಗೊತ್ತೇ ಇರಲಿಲ್ಲ.. ಹೂಂ ಅಂತೀಯಾ: ಕನ್ನಡದಲ್ಲಿ ಸೊಗಸಾಗಿ ಹಾಡಿದ ಪಡಿಕ್ಕಲ್‌

    – ಬೆಂಗಳೂರು ಮನೆ, ವಾಪಸ್‌ ಬಂದಿದ್ದಕ್ಕೆ ಖುಷಿ ಇದೆ ಎಂದ ಕನ್ನಡಿಗ

    ಬೆಂಗಳೂರು: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಗುಜರಾತ್‌ ಟೈಟಾನ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಈ ಹಿನ್ನೆಲೆಯಲ್ಲಿ ನಟ, ರೇಡಿಯೋ ಜಾಕಿ ಡ್ಯಾನಿಷ್‌ ಸೇಟ್‌ ಅವರು ಆರ್‌ಸಿಬಿ ತಂಡದ ಆಟಗಾರ ದೇವದತ್‌ ಪಡಿಕ್ಕಲ್‌ ಸಂದರ್ಶನ ಮಾಡಿದ್ದಾರೆ. ಕನ್ನಡಿಗನಾದ ಪಡಿಕ್ಕಲ್‌ ಕನ್ನಡವನ್ನು ಸೊಗಸಾಗಿ ಮಾತನಾಡಿದ್ದಾರೆ.

    ಆರ್‌ಸಿಬಿ ಇನ್‌ಸೈಡ್‌ ಶೋನಲ್ಲಿ ಪಡಿಕ್ಕಲ್‌ ಅವರನ್ನು ‘ಡಿಡಿಪಿ’ ಎಂದು ಸೇಟ್‌ ಪರಿಚಯಿಸುತ್ತಾರೆ. ಕನ್ನಡದಲ್ಲೇ ಪ್ರಶ್ನೆಗಳನ್ನು ಕೇಳುತ್ತಾರೆ. ‘ಹೇಗಿತ್ತಪ್ಪ ನಾರ್ಥ್‌ ಇಂಡಿಯಾ ಟೂರ್‌’ ಎಂದು ಕೇಳ್ತಾರೆ. ಅದಕ್ಕೆ ಪಡಿಕ್ಕಲ್‌, ‘ತುಂಬಾ ಚೆನ್ನಾಗಿತ್ತು. ಬೆಂಗಳೂರು ನನ್ನ ಮನೆ. ವಾಪಸ್‌ ಬಂದಿದ್ದಕ್ಕೆ ತುಂಬಾ ಖುಷಿಯಾಗಿದೆ’ ಎಂದು ಕನ್ನಡದಲ್ಲೇ ಹೇಳ್ತಾರೆ.

    ಮೊದಲು ನೀನು ಯೂತ್‌ಫುಲ್‌ ರೀತಿ ಮಾತಾಡ್ತಿದ್ದೆ. ಈಗ ಹರ್ಷ ಬೋಗ್ಲೆ ಥರ ಮಾತಾಡ್ತಿದ್ದೀಯಾ ಅಂತ ಕೇಳಿದಾಗ, ‘ಮತ್ತೆ ಹೆಂಗೆ ಮಾತಾಡ್ಬೇಕು’ ಅಂತ ಕನ್ನಡದಲ್ಲೇ ಪಡಿಕ್ಕಲ್‌ ಮರುಪ್ರಶ್ನೆ ಹಾಕ್ತಾರೆ. ಸ್ವಲ್ಪ ಜಾಲಿ ಆಗಿರು ಎಂದಾಗ, ‘ನಿಮ್‌ ಹತ್ರ ಜಾಲಿಯಾಗಿರೋಕೆ ಸ್ವಲ್ಪ ಕಷ್ಟ ಇದೆ’ ಅಂತ ಪಡಿಕ್ಕಲ್‌ ಉತ್ತರಿಸುತ್ತಾರೆ.

    ಇನ್‌ಸ್ಟಾದಲ್ಲಿ ಕೊರಿಯನ್ಸ್‌ ರೀತಿ ಸ್ಟೈಲ್‌ ಮಾಡ್ತಿದ್ದೀಯಾ ಎಂದು ಕೇಳಿದಾಗ, ‘ಅದೇ ತಾನೆ ಟ್ರೆಂಡ್‌ ಈಗ’ ಎಂದು ಪಡಿಕ್ಕಲ್‌ ಉತ್ತರಿಸುತ್ತಾರೆ.

    ಯುಗಾದಿ, ದೀಪಾವಳಿಗೆ ನಾರ್ಮಲ್‌ ಆಗಿ ವಿಶ್‌ ಮಾಡ್ತೀಯಾ. ಅಂತಾರಾಷ್ಟ್ರೀಯ ವಿಶೇಷ ದಿನಗಳಿಗೆ ವಿಶ್‌ ಮಾಡು ಎಂದಾಗ, ‘ವಿಶ್ವ ಕಪ್‌ ಕೇಕ್‌ ದಿನ.. ವಿಶ್ವ ಶೌಚಾಲಯದ ದಿನ.. ವಿಶ್ವ ಮೊಟ್ಟೆ ದಿನ’ಕ್ಕೆ ಕನ್ನಡದಲ್ಲೇ ವಿಶ್‌ ಮಾಡಿ ಪಡಿಕ್ಕಲ್‌ ಗಮನ ಸೆಳೆದಿದ್ದಾರೆ.

    ಪ್ರೀತಿಯಲ್ಲಿ ಇರೋ ಸುಖ ಗೊತ್ತೇ ಇರಲಿಲ್ಲ ಹಾಡನ್ನು ಮಾರ್ಪಡಿಸಿ, ಆರ್‌ಸಿಬಿಯಲ್ಲಿ ಇರೋ ಸುಖ ಗೊತ್ತೇ ಇರಲಿಲ್ಲ ಎಂದು ಸೇಟ್‌ ಹಾಡುತ್ತಾರೆ. ಅದಕ್ಕೆ ಹೂಂ ಅಂತೀಯಾ.. ಎಂದು ಪಡಿಕ್ಕಲ್‌ ದನಿಗೂಡಿಸುತ್ತಾರೆ. ಸಂದರ್ಶನವು ಫನ್‌ ಆಗಿ ಸಾಗುತ್ತದೆ.

  • ಸಿಡ್ನಿ ಸಿಕ್ಸರ್‌ ಪರ ಆಡಲಿದ್ದಾರೆ ಕೊಹ್ಲಿ!

    ಸಿಡ್ನಿ ಸಿಕ್ಸರ್‌ ಪರ ಆಡಲಿದ್ದಾರೆ ಕೊಹ್ಲಿ!

    ಮೆಲ್ಬರ್ನ್‌ : ವಿರಾಟ್‌ ಕೊಹ್ಲಿ (Virat Kohli) ಸಿಡ್ನಿ ಸಿಕ್ಸರ್‌ ಪರ ಆಡಲಿದ್ದಾರೆ. ಹೀಗಂತ ಸಿಡ್ನಿ ಸಿಕ್ಸರ್‌ (Sydney Sixers) ತಂಡವೇ ಅಧಿಕೃತವಾಗಿಯೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಕೊಹ್ಲಿ ಅಭಿಮಾನಿಗಳಿಗೆ ಬೆಳ್ಳಂಬೆಳಗ್ಗೆ ತಲೆಗೆ ಹುಳ ಬಿಟ್ಟಿದೆ.

    ಭಾರತದಲ್ಲಿ ಹೇಗೆ ಇಂಡಿಯನ್‌ ಪೀಮಿಯರ್‌ ಲೀಗ್‌ (IPL) ಇದೆಯೋ ಅದೇ ರೀತಿ ಆಸ್ಟ್ರೇಲಿಯಾದಲ್ಲಿ (Austrila) ಬಿಗ್‌ ಬ್ಯಾಷ್‌ ಲೀಗ್‌ (BBL) ಇದೆ. ಈ ಲೀಗ್‌ನಲ್ಲಿರುವ ಸಿಡ್ನಿ ಸಿಕ್ಸರ್‌, ಮುಂದಿನ ಎರಡು ಆವೃತ್ತಿಯಲ್ಲಿ ವಿರಾಟ್‌ ಕೊಹ್ಲಿ ನಮ್ಮ ತಂಡವನ್ನು ಪ್ರತಿನಿಧಿಸುತ್ತಾರೆ ಎಂದು ಪೋಸ್ಟ್‌ ಮಾಡಿದೆ.

     

    ಈ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನಲ್ಲೇ ಸಿಡ್ನಿ ಸಿಕ್ಸರ್‌ ಏಪ್ರಿಲ್‌ ಫೂಲ್ಸ್‌ ಡೇ (April Fools Day) ಎಂದು ಪೋಸ್ಟ್‌ ಮಾಡಿ ಎದ್ದಿದ್ದ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದೆ.

    ಬಿಸಿಸಿಐ (BCCI) ಐಪಿಎಲ್‌ಗೆ ಆದ್ಯತೆ ನೀಡುವ ಮತ್ತು ದೇಶೀಯ ಕ್ರಿಕೆಟ್‌ ಹಿತಾಸಕ್ತಿಗಳನ್ನು ರಕ್ಷಿಸುವ ಗುರಿಯನ್ನು ಹೊಂದಿರುವ ನೀತಿಯಿಂದಾಗಿ ಭಾರತೀಯ ಆಟಗಾರರು ಇತರ ಕ್ರಿಕೆಟ್ ಲೀಗ್‌ಗಳಿಗೆ ಆಸಕ್ತಿ ತೋರಿಸುತ್ತಿಲ್ಲ.  ಇದನ್ನೂ ಓದಿ: ಐಪಿಎಲ್‌ನಿಂದ ಬ್ಯಾನ್‌ ಮಾಡಿ – ರಿಯಾನ್‌ ಪರಾಗ್‌ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್‌

    ಇದರ ಜೊತೆ ಇನ್ನೊಂದು ಕಾರಣ ಇದೆ. ಭಾರತದ ಯಾವುದೇ ಕ್ರಿಕೆಟಿಗ ಕೂಡ ವಿದೇಶಿ ಕ್ರಿಕೆಟ್ ಲೀಗ್ ಟೂರ್ನಿಗಳಲ್ಲಿ ಭಾಗವಹಿಸಬೇಕೆಂದರೆ ಆ ಆಟಗಾರ ಬಿಸಿಸಿಐ ಜೊತೆಗಿನ ಎಲ್ಲಾ ರೀತಿಯ ಸಂಬಂಧವನ್ನು ಕಡಿತಗೊಳಿಸಬೇಕಾಗುತ್ತದೆ. ಅಷ್ಟೇ ಅಲ್ಲದೇ ಐಪಿಎಲ್‌ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್‍ನಿಂದ ನಿವೃತ್ತಿ ಹೊಂದಬೇಕಾಗುತ್ತದೆ. ಇದನ್ನೂ ಓದಿ: ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಗೆದ್ದ ಬಳಿಕ ಕೊಹ್ಲಿ ಟ್ರೋಲ್‌ ಮಾಡಿದವರಿಗೆ ಚಳಿ ಬಿಡಿಸಿದ ನಟಿ

    ಬಿಸಿಸಿಐ ವಿದೇಶಿ ಟೂರ್ನಿಗೆ ಹೋಗಲೇಬಾರದು ಎಂದು ಯಾವುದೇ ನಿರ್ಬಂಧ ಹೇರಿಲ್ಲ. ಸದ್ಯ ಐಪಿಎಲ್‌ನಷ್ಟು ಪ್ರಚಾರ ಬೇರೆ ಯಾವುದೇ ಕ್ರಿಕೆಟ್‌ ಟೂರ್ನಿಗೆ ಇಲ್ಲ. ಹೀಗಾಗಿ ಭಾರತದ ಆಟಗಾರರು ವಿದೇಶಿ ಟೂರ್ನಿಗಳಲ್ಲಿ ಭಾಗವಹಿಸಲು ಅಷ್ಟೊಂದು ಆಸಕ್ತಿ ತೋರಿಸುತ್ತಿಲ್ಲ.

     

  • ಬೆಂಗಳೂರಿನಲ್ಲಿ ನಡೆಯುವ ಐಪಿಎಲ್‌ ಪಂದ್ಯಾವಳಿಗಳಿಗೆ ಮೆಟ್ರೋ ಸೇವೆ ವಿಸ್ತರಣೆ

    ಬೆಂಗಳೂರಿನಲ್ಲಿ ನಡೆಯುವ ಐಪಿಎಲ್‌ ಪಂದ್ಯಾವಳಿಗಳಿಗೆ ಮೆಟ್ರೋ ಸೇವೆ ವಿಸ್ತರಣೆ

    ಬೆಂಗಳೂರು: ಏ.2ರಂದು ಬೆಂಗಳೂರಿನಲ್ಲಿ (Bengaluru) ಈ ಸೀಸನ್‌ನ ಮೊದಲ ಐಪಿಎಲ್  (IPL) ಪಂದ್ಯ ನಡೆಯಲಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ನಡೆಯುವ ಎಲ್ಲಾ ಐಪಿಎಲ್ ಪಂದ್ಯಾವಳಿಗಳಿಗೆ ಮೆಟ್ರೋ ಸೇವೆ ವಿಸ್ತರಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

    ಬೆಂಗಳೂರಿನಲ್ಲಿ ಒಟ್ಟು 7 ಮ್ಯಾಚ್‌ಗಳು ನಡೆಯಲಿವೆ. 7 ಪಂದ್ಯಗಳು ನಡೆಯುವ ದಿನ ಮೆಟ್ರೋ (Namma Metro) ಸೇವೆ ವಿಸ್ತರಣೆ ಮಾಡಲಾಗಿದೆ. ಮೆಟ್ರೋ ರೈಲು ಸೇವೆಯನ್ನು ರಾತ್ರಿ 12:30ರವರೆಗೂ ವಿಸ್ತರಿಸಿದೆ ಎಂದು ಬಿಎಂಆರ್‌ಸಿಎಲ್ (BMRCL) ಮಾಹಿತಿ ನೀಡಿದೆ. ಇದನ್ನೂ ಓದಿ: ವಿಜಯಪುರದಲ್ಲಿ ಕಂಪಿಸಿದ ಭೂಮಿ – ಗಾಬರಿಗೊಂಡು ಮನೆಯಿಂದ ಹೊರಗೆ ಓಡಿದ ಜನ

    ಚಲ್ಲಘಟ್ಟ, ಮಾದಾವರ, ರೇಷ್ಮೆ ಸಂಸ್ಥೆ ಮತ್ತು ವೈಟ್‌ಫೀಲ್ಡ್ ಮಾರ್ಗಗಳಲ್ಲಿ ಮಧ್ಯ ರಾತ್ರಿ 12:30ರವರೆಗೂ ಮೆಟ್ರೋ ಸಂಚರಿಸಲಿದೆ. ಮೆಜೆಸ್ಟಿಕ್‌ನಿಂದ ಕೊನೆಯ ರೈಲು ನಾಲ್ಕು ಟರ್ಮಿನಲ್‌ಗಳಿಗೂ ಮಧ್ಯರಾತ್ರಿ 1:15ಕ್ಕೆ ಹೊರಡಲಿದೆ. ಏ.8, ಏ.10, ಏ.18, ಏ.24, ಮೇ 3, 13 ಮತ್ತು 17ರಂದು ಬೆಂಗಳೂರಿನಲ್ಲಿ ಐಪಿಎಲ್ ಮ್ಯಾಚ್ ನಡೆಯಲಿವೆ. ನಾಳೆ (ಏ.2) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮತ್ತು ಜಿಟಿ ತಂಡದ ನಡುವೆ ಮೊದಲ ಪಂದ್ಯ ನಡೆಯಲಿದೆ. ಇದನ್ನೂ ಓದಿ: ಒಡಿಶಾ ಕರಾವಳಿಯಲ್ಲಿ ಸೈಕ್ಲೋನ್ ಎಫೆಕ್ಟ್ – ಬೆಂಗಳೂರಿಗೆ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ

  • ನಾಳೆ ಬೆಂಗಳೂರಿನಲ್ಲಿ ಸೀಸನ್‌ನ ಮೊದಲ ಐಪಿಎಲ್ ಪಂದ್ಯ – ಚಿನ್ನಸ್ವಾಮಿ ಸುತ್ತಮುತ್ತ ಬಂದೋಬಸ್ತ್

    ನಾಳೆ ಬೆಂಗಳೂರಿನಲ್ಲಿ ಸೀಸನ್‌ನ ಮೊದಲ ಐಪಿಎಲ್ ಪಂದ್ಯ – ಚಿನ್ನಸ್ವಾಮಿ ಸುತ್ತಮುತ್ತ ಬಂದೋಬಸ್ತ್

    ಬೆಂಗಳೂರು: ನಾಳೆ (ಏ.2) ಬೆಂಗಳೂರಿನಲ್ಲಿ ಐಪಿಎಲ್ (IPL) ಸೀಸನ್ 18ರ ಮೊದಲ ಮ್ಯಾಚ್ ನಡೆಯಲಿದ್ದು, ಆರ್‌ಸಿಬಿ-ಜಿಟಿ (RCB vs GT) ಮುಖಾಮುಖಿಯಾಗಲಿದೆ. ಐಪಿಎಲ್ ಪಂದ್ಯ ಹಿನ್ನೆಲೆ ಸಂಚಾರಿ ಪೊಲೀಸರು ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಸುತ್ತಮುತ್ತ ಟ್ರಾಫಿಕ್ ತಡೆಗಟ್ಟಲು ಹಲವು ಕ್ರಮ ಕೈಗೊಂಡಿದ್ದು, ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ಟ್ರಾಫಿಕ್ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

    ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆಯವರೆಗೂ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದ್ದು, ಮ್ಯಾಚ್ ನೋಡಲು ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳ ಕೊರತೆ ಇರುವುದರಿಂದ ಬಿಎಂಟಿಸಿ, ಮೆಟ್ರೋ ಬಳಸಲು ಮನವಿ ಮಾಡಿದ್ದಾರೆ. ಓಲಾ, ಊಬರ್, ಆಟೋ ಇತ್ಯಾದಿ ಕ್ಯಾಬ್‌ಗಳು ಪಿಕ್ ಆಪ್ ಮತ್ತು ಡ್ರಾಪ್ ಮಾಡಲು ಸ್ಥಳ ನಿಗದಿ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರು| ವಾಕಿಂಗ್ ವೇಳೆ ಮಾಲಕಿ ಕೈಯಿಂದ ಸಾಕು ನಾಯಿ ಕಿತ್ತೊಯ್ದ ಕಳ್ಳರು

    ಎಲ್ಲೆಲ್ಲಿ ಪಾರ್ಕಿಂಗ್ ನಿಷೇಧ?
    *ಕ್ವೀನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ.
    *ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ.
    *ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆವರೆಗೆ.
    *ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ.
    *ಸೆಂಟ್ರಲ್ ಸ್ಟ್ರೀಟ್ ರಸ್ತೆಯ ಎರಡೂ ಕಡೆ.
    *ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಓ. ವೃತ್ತದಿಂದ ಡಿಕೆನ್ಸ್ನ್ ರಸ್ತೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ.
    *ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ.
    *ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆವರೆಗೆ ಹಾಗೂ ಆಶಿರ್ವಾದಂ ವೃತ್ತದವರೆಗೆ.
    *ಕಸ್ತೂರ್ಬಾ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ.
    *ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ.
    *ಕಬ್ಬನ್‌ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ.
    *ಲ್ಯಾವೆಲ್ಲಿ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ವರೆಗೆ.
    *ವಿಠಲ್ ಮಲ್ಯ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್‌ಕಾಟನ್ ಬಾಲಕೀಯರ ಶಾಲೆಯವರೆಗೆ ಪಾರ್ಕಿಂಗ್ ನಿಷೇಧಿಸಲಾಗಿದೆ.

    ಪಾರ್ಕಿಂಗ್‌ಗೂ ಸ್ಥಳ ನಿಗದಿ:
    ಪಂದ್ಯ ವೀಕ್ಷಣೆ ಮಾಡಲು ಬರೋರಿಗೆ ಸೆಂಟ್ ಜೋಸೆಫ್ ಹೈಸ್ಕೂಲ್ ಗ್ರೌಂಡ್ ಜೊತೆಗೆ ಯು.ಬಿ.ಸಿಟಿ ನಿಲುಗಡೆ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದು, ಕೆಎಸ್‌ಸಿಎ ಸದಸ್ಯರ ವಾಹನಗಳನ್ನು ಸೆಂಟ್ ಜೋಸೆಫ್ ಬಾಲಕರ ಶಾಲೆ ಮೈದಾನದಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಇದನ್ನೂ ಓದಿ: ಬೆಲೆ ಏರಿಕೆ ಬಗ್ಗೆ ಮುಂಚೆ ಹೇಳಿದ್ರೆ ಕಾಂಗ್ರೆಸ್ 50 ಸೀಟು ಗೆಲ್ಲುತ್ತಿರಲಿಲ್ಲ: ಸಿ.ಟಿ.ರವಿ ಕಿಡಿ

  • ಬೌಂಡರಿ ಬಳಿ ಮೇಲಕ್ಕೆ ಜಿಗಿದು ಕ್ಯಾಚ್‌ – ಮೆಕ್‌ಗುರ್ಕ್ ಮ್ಯಾಜಿಕ್‌ಗೆ  ಅನಿಕೇತ್‌ ಔಟ್‌

    ಬೌಂಡರಿ ಬಳಿ ಮೇಲಕ್ಕೆ ಜಿಗಿದು ಕ್ಯಾಚ್‌ – ಮೆಕ್‌ಗುರ್ಕ್ ಮ್ಯಾಜಿಕ್‌ಗೆ ಅನಿಕೇತ್‌ ಔಟ್‌

    ವಿಶಾಖಪಟ್ಟಣ: ಸನ್‌ರೈಸರ್ಸ್‌ ಹೈದರಾಬಾದ್‌ (SRH) ವಿರುದ್ಧ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ (DC) ತಂಡದ ಜೇಕ್ ಫ್ರೇಸರ್-ಮೆಕ್‌ಗುರ್ಕ್ (Jake Fraser-McGurk) ಅದ್ಭುತವಾದ ಕ್ಯಾಚ್‌ ಹಿಡಿದು ಎಲ್ಲರನ್ನೂ ನಿಬ್ಬೆರಾಗಿಸಿದ್ದಾರೆ.

    ಒಂದು ಕಡೆ ವಿಕೆಟ್‌ ಉರುಳುತ್ತಿದ್ದರೂ ಬಂಡೆಯಂತೆ ನಿಂತು ಅನಿಕೇತ್ ವರ್ಮಾ ಬ್ಯಾಟ್‌ ಬೀಸುತ್ತಿದ್ದರು. 34 ಎಸೆತದಲ್ಲಿ ಅರ್ಧಶತಕ ಸಿಡಿಸಿ ಮುನ್ನುಗುತ್ತಿದ್ದರು.

    ಕುಲದೀಪ್‌ ಎಸೆದ 16ನೇ ಓವರ್‌ ಐದನೇ ಎಸೆತದಲ್ಲಿ ಸಿಕ್ಸ್‌ ಸಿಡಿಸಲು ಅನಿಕೇತ್‌ ವರ್ಮಾ ಬಲವಾಗಿ ಬ್ಯಾಟ್‌ ಬೀಸಿದರು. ಈ ಡೀಪ್‌ ಮಿಡ್‌ ವಿಕೆಟ್‌ನಲ್ಲಿದ್ದ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಗಾಳಿಯಲ್ಲಿ ಮೇಲಕ್ಕೆ ಹಾರಿ ಕ್ಯಾಚ್‌ ಹಿಡಿದರು. ಒಂದು ವೇಳೆ ಕ್ಯಾಚ್‌ ಹಿಡಿಯದೇ ಇದ್ದರೆ ಸಿಕ್ಸ್‌ಗೆ ಹೋಗುತ್ತಿತ್ತು. ಮೆಕ್‌ಗುರ್ಕ್ ಸರಿಯಾದ ಸಮಯಕ್ಕೆ ಮೇಲಕ್ಕೆ ಜಿಗಿದು 74 ರನ್‌(41 ಎಸೆತ, 5 ಬೌಂಡರಿ, 6 ಸಿಕ್ಸ್‌) ಸಿಡಿಸಿದ ಅಂಕಿತ್‌ ವರ್ಮಾ ಅವರನ್ನು ಔಟ್‌ ಮಾಡಿ ತಂಡಕ್ಕೆ ದೊಡ್ಡ ರಿಲೀಫ್‌ ನೀಡಿದರು. ಇದನ್ನೂ ಓದಿ: ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಗೆದ್ದ ಬಳಿಕ ಕೊಹ್ಲಿ ಟ್ರೋಲ್‌ ಮಾಡಿದವರಿಗೆ ಚಳಿ ಬಿಡಿಸಿದ ನಟಿ

     

    ಈ ಪಂದ್ಯದಲ್ಲೇ ಮೆಕ್‌ಗುರ್ಕ್ ಪ್ಯಾಟ್‌ ಕಮ್ಮಿನ್ಸ್‌ ಅವರ ಕ್ಯಾಚನ್ನು ಬೌಂಡರಿ ಬಳಿಯೇ ಹಿಡಿದಿದ್ದರು. ಇದನ್ನೂ ಓದಿ: 43ನೇ ವಯಸ್ಸಿನಲ್ಲೂ ಭರ್ಜರಿ ಬ್ಯಾಟಿಂಗ್ – ಸಿಎಸ್‌ಕೆ ಪರ ಐತಿಹಾಸಿಕ ದಾಖಲೆ ಬರೆದ ಕೂಲ್ ಕ್ಯಾಪ್ಟನ್

    ಆಸ್ಟ್ರೇಲಿಯಾ ಮೆಕ್‌ಗುರ್ಕ್ ಈ ರೀತಿ ಕ್ಯಾಚ್‌ ಹಿಡಿಯುವುದು ಇದು ಮೊದಲೆನಲ್ಲ. ಈ ಹಿಂದೆ ಬಿಗ್‌ ಬ್ಯಾಷ್‌ ಲೀಗ್‌ನಲ್ಲೂ ಬೌಂಡರಿ ಬಳಿಯೇ ಕ್ಯಾಚ್‌ ಹಿಡಿದಿದ್ದರು.

  • ಸಿಕ್ಸರ್‌, ಬೌಂಡರಿಗಳ ಸುರಿಮಳೆ – ಈ ಐಪಿಎಲ್‌ನಲ್ಲಿ ಪೂರನ್‌ ದಾಖಲೆ

    ಸಿಕ್ಸರ್‌, ಬೌಂಡರಿಗಳ ಸುರಿಮಳೆ – ಈ ಐಪಿಎಲ್‌ನಲ್ಲಿ ಪೂರನ್‌ ದಾಖಲೆ

    ಹೈದರಾಬಾದ್‌: ಲಕ್ನೋ ತಂಡದ ಸ್ಫೋಟಕ ಬ್ಯಾಟ್ಸ್‌ಮನ್‌ ನಿಕೋಲಸ್ ಪೂರನ್ (Nicholas Pooran) ಅವರು ಐಪಿಎಲ್‌ನಲ್ಲಿ (IPL) ವೇಗದ ಅರ್ಧಶತಕ ಸಿಡಿಸಿ ಈ ಐಪಿಎಲ್‌ನಲ್ಲಿ ದಾಖಲೆ ಬರೆದಿದ್ದಾರೆ.

    ಸನ್‌ರೈಸರ್ಸ್‌ ವಿರುದ್ಧ ಕೇವಲ 18 ಎಸೆತಗಳಲ್ಲಿ 50 ರನ್‌ ಸಿಡಿಸಿ ಪೂರನ್‌ ಸಾಧನೆ ಮಾಡಿದ್ದಾರೆ. 4 ರನ್‌ಗೆ 1 ವಿಕೆಟ್‌ ಕಳೆದುಕೊಂಡಿದ್ದಾಗ ಕ್ರೀಸ್‌ಗೆ ಆಗಮಿಸಿದ ಪೂರನ್‌ ಬೌಂಡರಿ, ಸಿಕ್ಸ್‌ ಸಿಡಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು.

    ಪೂರನ್‌ ಔಟಾದಾಗ ತಂಡದ ಮೊತ್ತ 120 ಆಗಿತ್ತು. ಈ ಪೈಕಿ ಪೂರನ್‌ ಒಬ್ಬರೇ 70 ರನ್‌ (26 ಎಸೆತ, 6 ಬೌಂಡರಿ, 6 ಸಿಕ್ಸ್‌) ಚಚ್ಚಿದ್ದರು. ಇದನ್ನೂ ಓದಿ: ಕಿಂಗ್ಸ್ ಗೆಲುವಿಗೆ ಕನ್ನಡಿಗನ ಕಾಣಿಕೆ – ವೈಶಾಖ್ ವಿಜಯ್ ಯಾರು?

    2025ರ ಐಪಿಎಲ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿದ ಆಟಗಾರರು
    ಪೂರನ್‌ (ಎಲ್‌ಎಸ್‌ಜಿ) – 50 ರನ್‌, 18 ಎಸೆತ
    ಮಾರ್ಷ್‌ (ಎಲ್‌ಎಸ್‌ಜಿ) – 50 ರನ್‌, 21 ಎಸೆತ
    ಹೆಡ್‌(ಎಸ್‌ಆರ್‌ಹೆಚ್‌) – 50 ರನ್‌, 21 ಎಸೆತ

    ಐಪಿಎಲ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಯಶಸ್ವಿ ಜೈಸ್ವಾಲ್‌ ಹೆಸರಿನಲ್ಲಿದೆ. ಜೈಸಸ್ವಾಲ್‌ 13 ಎಸೆತದಲ್ಲಿ ಅರ್ಧಶತಕ ಸಿಡಿಸಿದರೆ ಕೆಎಲ್‌ ರಾಹುಲ್‌ 14 ಎಸೆತದಲ್ಲಿ 50 ಹೊಡೆದಿದ್ದಾರೆ.

  • ಅಶುತೋಶ್‌ ಬೆಂಕಿ ಆಟಕ್ಕೆ ಲಕ್ನೋ ಬರ್ನ್‌! – ಇಂಪ್ಯಾಕ್ಟ್‌ ಪ್ಲೇಯರ್‌ ಆಟ, ಡೆಲ್ಲಿಗೆ ರೋಚಕ ಜಯ

    ಅಶುತೋಶ್‌ ಬೆಂಕಿ ಆಟಕ್ಕೆ ಲಕ್ನೋ ಬರ್ನ್‌! – ಇಂಪ್ಯಾಕ್ಟ್‌ ಪ್ಲೇಯರ್‌ ಆಟ, ಡೆಲ್ಲಿಗೆ ರೋಚಕ ಜಯ

    ವಿಶಾಖಪಟ್ಟಣ: 7 ರನ್‌ಗಳಿಗೆ 3 ವಿಕೆಟ್‌ ಪತನಗೊಂಡಿದ್ದರೂ ಕೊನೆಯಲ್ಲಿ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕ್ರೀಸ್‌ಗ ಬಂದ ಅಶುತೋಷ್‌ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ಡೆಲ್ಲಿ ತಂಡ  ಲಕ್ನೋ ವಿರುದ್ಧ 1 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಲಕ್ನೋ 8 ವಿಕೆಟ್‌ ನಷ್ಟಕ್ಕೆ 209 ರನ್‌ ಹೊಡೆಯಿತು. ಕಠಿಣ ಸವಾಲು ಬೆನ್ನತ್ತಿದ ಡೆಲ್ಲಿ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡರೂ ಅಂತಿಮವಾಗಿ 19.3 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 211 ರನ್‌ಗಳಿಸಿ ಗೆಲುವು ಸಾಧಿಸಿತು.

    ಡೆಲ್ಲಿ 7 ರನ್‌ಗಳಿಸುವಷ್ಟರಲ್ಲೇ 3 ವಿಕೆಟ್‌ ಕಳೆದುಕೊಂಡಿತ್ತು. ನಾಯಕ ಅಕ್ಷರ್‌ ಪಟೇಲ್‌ 22 ರನ್ (11 ಎಸೆತ, 3 ಬೌಂಡರಿ, 1 ಸಿಕ್ಸ್‌), ಡುಪ್ಲೆಸಿಸ್‌ 29 ರನ್‌(18 ಎಸೆತ, 3 ಬೌಂಡರಿ, 2 ಸಿಕ್ಸ್‌) ಸಿಡಿಸಿ ಸ್ವಲ್ಪ ಚೇತರಿಕೆ ನೀಡಿದರು. ಟ್ರಿಸ್ಟಾನ್ ಸ್ಟಬ್ಸ್ 34 ರನ್‌(22 ಎಸೆತ, 1 ಬೌಂಡರಿ, 3 ಸಿಕ್ಸ್‌) ಸಿಡಿಸಿ ಔಟಾದಾಗ ಪಂದ್ಯ ಲಕ್ನೋ ಪರ ವಾಲಿತ್ತು.

    7ನೇ ವಿಕೆಟಿಗೆ ಅಶುತೋಷ್‌ ಮತ್ತು ನಿಗಮ್‌ 22 ಎಸೆತಗಳಲ್ಲಿ 55 ರನ್‌ ಹೊಡೆಯುವ ಮೂಲಕ ಪಂದ್ಯಕ್ಕೆ ರೋಚಕ ತಿರುವು ನೀಡಿದರು. ಡೆಲ್ಲಿ ಪರ 16ನೇ ಓವರ್‌ನಲ್ಲಿ 20 ರನ್‌, 17 ನೇ ಓವರ್‌ನಲ್ಲಿ 3 ರನ್‌, 18ನೇ ಓವರ್‌ನಲ್ಲಿ 17 ರನ್‌, 19ನೇ ಓವರ್‌ನಲ್ಲಿ 16 ರನ್‌ ಬಂದಿತ್ತು. 20ನೇ ಓವರ್‌ನಲ್ಲಿ 6 ರನ್‌ ಬೇಕಿತ್ತು. ಸ್ಟ್ರೈಕ್‌ನಲ್ಲಿದ್ದ ಮೋಹಿತ್‌ ಶರ್ಮಾ ಮೊದಲ ಎಸೆತದಲ್ಲಿ ಸ್ಟಂಪ್‌ ಔಟಾಗುವ ಸಾಧ್ಯತೆ ಇತ್ತು. ಎರಡನೇ ಎಸೆತದಲ್ಲಿ 1 ರನ್‌ ಓಡಿ ಅಶುತೋಷ್‌ಗೆ ಸ್ಟ್ರೈಕ್‌ ನೀಡಿದರು.3ನೇ ಎಸೆತವನ್ನು ಅಶುತೋಶ್‌ ಸಿಕ್ಸ್‌ಗೆ ಅಟ್ಟುವ ಮೂಲಕ ಡೆಲ್ಲಿ ತಂಡಕ್ಕೆ ಜಯವನ್ನು ತಂದುಕೊಟ್ಟರು.

    ವಿಪ್ರಜ್‌ ನಿಗಮ್‌ 39 ರನ್‌(15 ಎಸೆತ, 5 ಬೌಂಡರಿ, 2 ಸಿಕ್ಸ್‌) ಹೊಡೆದು ಔಟಾದರೆ ಅಶುತೋಷ್‌ ಔಟಾಗದೇ 66 ರನ್‌(31 ಎಸೆತ, 5 ಬೌಂಡರಿ, 5 ಸಿಕ್ಸ್‌) ಸಿಡಿಸಿ ಗೆಲುವು ತಂದರು.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಲಕ್ನೋ ಉತ್ತಮ ಆರಂಭ ಪಡೆಯಿತು. ಮಾಕ್ರಮ್‌ ಮತ್ತು ಮಿಚೆಲ್‌ ಮಾರ್ಶ್‌ ಮೊದಲ ವಿಕೆಟಿಗೆ 46 ರನ್‌ ಹೊಡೆದರು. ಎರಡನೇ ವಿಕೆಟಿಗೆ ಮಾರ್ಶ್‌ ಮತ್ತು ನಿಕೂಲಸ್‌ ಪೂರನ್‌ 42 ರನ್‌ ಎಸೆತಗಳಲ್ಲಿ 87 ರನ್‌ ಜೊತೆಯಾಟವಾಡಿದರು.

    ಮಾರ್ಶ್‌ 72 ರನ್‌(36 ಎಸೆತ, 6 ಬೌಂಡರಿ, 6 ಸಿಕ್ಸರ್‌) ಹೊಡೆದರೆ ಪೂರನ್‌ 75 ರನ್‌(30 ಎಸೆತ, 6 ಬೌಂಡರಿ, 7 ಸಿಕ್ಸ್‌) ಹೊಡೆದು ಔಟಾದರು. ಕೊನೆಯಲ್ಲಿ ಡೇವಿಡ್‌ ಮಿಲ್ಲರ್‌ ಔಟಾಗದೇ 27 ರನ್‌( 19 ಎಸೆತ, 1 ಬೌಂಡರಿ, 2 ಸಿಕ್ಸ್‌) ಸಿಡಿಸಿದ ಪರಿಣಾಮ ಲಕ್ನೋ 200 ರನ್‌ಗಳ ಗಡಿಯನ್ನು ದಾಟಿತು.

  • ಆರ್‌ಸಿಬಿ Vs ಕೋಲ್ಕತ್ತಾ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ

    ಆರ್‌ಸಿಬಿ Vs ಕೋಲ್ಕತ್ತಾ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ

    ಕೋಲ್ಕತ್ತಾ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಮತ್ತು ಕೋಲ್ಕತ್ತಾ ನೈಟ್‌ರೈಡರ್ಸ್‌ (KKR) ನಡುವೆ ಇಂದು ನಡೆಯಲಿರುವ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಯಿದೆ.

    ಬೆಳಗ್ಗೆಯಿಂದಲೇ ಕೋಲ್ಕತ್ತಾದಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಇದೇ ರೀತಿಯ ಮಳೆ ರಾತ್ರಿಯು (Rain) ಸುರಿಯುವ ಸಾಧ್ಯತೆಯಿದೆ. ರಾತ್ರಿ ಮಳೆ ಸುರಿಯುವ ಸಾಧ್ಯತೆ 20% ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದನ್ನೂ ಓದಿ: ಅಭಿಮಾನಿಗಳೇ ನಮ್ಮನೆ ದೇವ್ರು – ಎರಡು ಕೈ ಜೋಡಿಸಿ ಪಾಟಿದಾರ್‌ ಕೃತಜ್ಞತೆ

    ಐಪಿಎಲ್‌ ಪಂದ್ಯ 7:30ಕ್ಕೆ ಆರಂಭವಾಗುತ್ತದೆ. ಪಂದ್ಯಕ್ಕೂ ಮೊದಲು ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಶ್ರೇಯಾ ಘೋಷಾಲ್‌, ದಿಶಾ ಪಟಾನಿ, ಶಾರೂಖ್‌ ಖಾನ್‌ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸಂಜೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದೆ. ಕೊನೆಗೆ ಸಿಡಿಮದ್ದು ಪ್ರದರ್ಶನ ನಡೆಯಲಿದೆ. ಇದನ್ನೂ ಓದಿ: ಐಪಿಎಲ್‌ 10 ಸೆಕೆಂಡ್‌ ಜಾಹೀರಾತಿಗೆ ಲಕ್ಷ ಲಕ್ಷ – 4,500 ಕೋಟಿ ಆದಾಯ ನಿರೀಕ್ಷೆಯಲ್ಲಿ ಜಿಯೋಸ್ಟಾರ್‌

    17 ವರ್ಷಗಳ ಹಿಂದೆ ಐಪಿಎಲ್‌ (IPL) ಆರಂಭಗೊಂಡಾಗ ಆರ್‌ಸಿಬಿ ಮತ್ತು ಕೋಲ್ಕತ್ತಾ ಮುಖಾಮುಖಿಯಾಗಿದ್ದವು. ಈಗ ಮತ್ತೆ ಈ ಎರಡೂ ತಂಡಗಳು ಮುಖಾಮುಖಿಯಾಗುತ್ತಿವೆ. ಎರಡೂ ತಂಡಗಳು ಹೊಸ ನಾಯಕತ್ವ ಮತ್ತು ಹೊಸ ರೂಪದಲ್ಲಿ ಮಿಂಚುತ್ತಿವೆ.


    ಕಳೆದ ಬಾರಿ ಕೆಕೆಆರ್‌ ಚಾಂಪಿಯನ್‌ ಆಗಿದ್ದರೆ ನಾಯಕನಾಗಿದ್ದ ಶ್ರೇಯಸ್‌ ಅಯ್ಯರ್‌ ಈ ಬಾರಿ ಈ ಪಂಜಾಬ್‌ ತಂಡವನ್ನು ಮುನ್ನಡೆಸುತ್ತಿದ್ದಾರೆ. ಡುಪ್ಲೆಸಿಸ್‌ ಅವರನ್ನು ಆರ್‌ಸಿಬಿ ಕೈಬಿಟ್ಟಿದ್ದು ರಜತ್‌ ಪಾಟಿದಾರ್‌ ಅವರನ್ನು ನಾಯಕರಾಗಿದ್ದಾರೆ. ಎರಡು ತಂಡಗಳು ಬಲವಾಗಿದ್ದು ಪಂದ್ಯ ವೀಕ್ಷಿಸಲು ಅಭಿಮಾನಿಗಳು ತಯಾರಾಗಿದ್ದಾರೆ. ಆದರೆ ಈ ರೋಚಕ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಹೆಚ್ಚಿದೆ.

  • ಐಪಿಎಲ್‌ 10 ಸೆಕೆಂಡ್‌ ಜಾಹೀರಾತಿಗೆ ಲಕ್ಷ ಲಕ್ಷ – 4,500 ಕೋಟಿ ಆದಾಯ ನಿರೀಕ್ಷೆಯಲ್ಲಿ ಜಿಯೋಸ್ಟಾರ್‌

    ಐಪಿಎಲ್‌ 10 ಸೆಕೆಂಡ್‌ ಜಾಹೀರಾತಿಗೆ ಲಕ್ಷ ಲಕ್ಷ – 4,500 ಕೋಟಿ ಆದಾಯ ನಿರೀಕ್ಷೆಯಲ್ಲಿ ಜಿಯೋಸ್ಟಾರ್‌

    ಮುಂಬೈ: ಇಂದಿನಿಂದ ಐಪಿಎಲ್‌ (IPL) ಹಬ್ಬ ಆರಂಭವಾಗಲಿದ್ದು ಪ್ರಸಾರ ಹಕ್ಕುಗಳನ್ನು ಪಡೆದಿರುವ ಜಿಯೋ ಮತ್ತು ಸ್ಟಾರ್‌ ಈ ಬಾರಿಯ ಟೂರ್ನಿಯ ಜಾಹೀರಾತುಗಳಿಂದ ಒಟ್ಟು 4,500 ಕೋಟಿ ರೂ. ಆದಾಯವನ್ನು ನಿರೀಕ್ಷಿಸುತ್ತಿದೆ.

    ಟಿವಿ ಮತ್ತು ಡಿಜಿಟಲ್‌ನಿಂದ 100 ಕೋಟಿ ವೀಕ್ಷಣೆಯ ಗುರಿಯನ್ನು ಹಾಕಲಾಗಿದ್ದು ಹತ್ತು ಸೆಕೆಂಡ್‌ ಟಿವಿ ಜಾಹೀರಾತಿಗೆ 8.5 ಲಕ್ಷ ರೂ. ದರವನ್ನು ನಿಗದಿಪಡಿಸಲಾಗಿದೆ. ಈಗಾಗಲೇ 32 ಕಂಪನಿಗಳು ಜಾಹೀರಾತು ನೀಡಲು ಮುಂದೆ ಬಂದಿದ್ದು ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ವರದಿಯಾಗಿದೆ.

    ಸಾಧಾರಣವಾಗಿ ಐಪಿಎಲ್‌ನಲ್ಲಿ ದೊಡ್ಡ ಕಂಪನಿಗಳು ಜಾಹೀರಾತು ನೀಡುತ್ತಿದ್ದವು. ಆದರೆ ಈ ಬಾರಿ ಯೂಟ್ಯೂಬ್‌ ಮತ್ತು ಫೇಸ್‌ಬುಕ್‌ನಲ್ಲಿ ವಿಡಿಯೋದಲ್ಲಿ ಜಾಹೀರಾತು ನೀಡುತ್ತಿರುವ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳನ್ನು (SME) ಜಿಯೋಹಾಟ್‌ಸ್ಟಾರ್‌ ಸಂಪರ್ಕಿಸಿವೆ. ಇದನ್ನೂ ಓದಿ: ಜಿಯೋ ಗ್ರಾಹಕರಿಗೆ ಮಾತ್ರ ಐಪಿಎಲ್‌ ವೀಕ್ಷಣೆ ಉಚಿತ! – ಎಷ್ಟು ರಿಚಾರ್ಜ್‌ ಮಾಡಿದ್ರೆ ಫ್ರೀ?

    ಜಿಯೋಹಾಟ್‌ಸ್ಟಾರ್‌ (JioHotstar) ಐಪಿಎಲ್‌ ಅವಧಿಯಲ್ಲಿ ಒಟ್ಟು 10 ಕೋಟಿ ಸಬ್‌ಸ್ಕ್ರೈಬರ್‌ ಅದರಲ್ಲೂ 4 ಕೋಟಿ ಹೊಸ ಗ್ರಾಹಕರ ಮೇಲೆ ಕಣ್ಣಿಟ್ಟಿದೆ.

    ಕಳೆದ ವರ್ಷ ಟಿವಿ ಮತ್ತು ಡಿಜಿಟಲ್‌ನಿಂದ ಒಟ್ಟು 4,000 ಕೋಟಿ ರೂ. ಆದಾಯ ಬಂದಿತ್ತು.  ಕಳೆದ ಬಾರಿಗಿಂತ  ಬಾರಿ  500 ಕೋಟಿ ರೂ. ಹೆಚ್ಚು ಆದಾಯ ಸಂಗ್ರಹಿಸುವ ಗುರಿಯನ್ನು ಜಿಯೋ ಸ್ಟಾರ್‌ ಹಾಕಿಕೊಂಡಿದೆ. ಇದನ್ನೂ ಓದಿ: ಅಭಿಮಾನಿಗಳೇ ನಮ್ಮನೆ ದೇವ್ರು – ಎರಡು ಕೈ ಜೋಡಿಸಿ ಪಾಟಿದಾರ್‌ ಕೃತಜ್ಞತೆ

    ಐಪಿಎಲ್‌ ಡಿಜಿಟಲ್‌ ರೈಟ್ಸ್‌ ಅನ್ನು ವಯಾಕಾಮ್‌ ಪಡೆದ ನಂತರ ಕ್ರಿಕೆಟ್‌ ಪ್ರೇಮಿಗಳು ಜಿಯೋಸಿನಿಮಾದಲ್ಲಿ (JioCinema) ಉಚಿತವಾಗಿ ಪಂದ್ಯವನ್ನು ವೀಕ್ಷಿಸಬಹುದಾಗಿತ್ತು. ಆದರೆ ಈಗ ಜಿಯೋ ಮತ್ತು ಹಾಟ್‌ಸ್ಟಾರ್‌ ವಿಲೀನಗೊಂಡಿದೆ. ಜಿಯೋ ಸಿನಿಮಾ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ವಿಲೀನಗೊಂಡು ಜಿಯೋಸ್ಟಾರ್ ಆಗಿ ಬದಲಾಗಿದ್ದು ಈ ವರ್ಷದಿಂದ ಐಪಿಎಲ್‌ ಅಭಿಮಾನಿಗಳು ಹಣವನ್ನು ಪಾವತಿಸಿ ಕ್ರಿಕೆಟ್‌ ವೀಕ್ಷಣೆ ಮಾಡಬೇಕಾಗುತ್ತದೆ.

    ಮಾಧ್ಯಮ ಹಕ್ಕು ಎಷ್ಟು?
    2008 ಸೋನಿ ನೆಟ್‌ವರ್ವಕ್‌ಗೆ 10 ವರ್ಷ ಕಾಲ ಒಟ್ಟು 8,200 ಕೋಟಿ ರೂ.ಗೆ ನೀಡಿತ್ತು. 2017-22 ಟಿವಿ ಮತ್ತು ಡಿಜಿಟಲ್‌ ರೈಟ್ಸ್‌ ಅನ್ನು ಡಿಸ್ನಿ ಹಾಟ್‌ಸ್ಟಾರ್‌ ಒಟ್ಟು 16,347 ಕೋಟಿ ರೂ. ನೀಡಿ ಪಡೆದುಕೊಂಡಿತ್ತು. ಆದರೆ 2023-27ರ ಅವಧಿಯ 410 ಪಂದ್ಯಗಳಿಗೆ ಡಿಜಿಟಲ್‌ ಮತ್ತು ಟಿವಿ ರೈಟ್ಸ್‌ ಪ್ರತ್ಯೇಕವಾಗಿ ವಿಂಗಡನೆ ಮಾಡಲಾಗಿತ್ತು. ಡಿಜಿಟಲ್‌ ರೈಟ್ಸ್‌ -ವಯಾಕಾಮ್‌ 23,758 ಕೋಟಿ ರೂ. ನೀಡಿ ಖರೀದಿಸಿದರೆ ಟಿವಿ ಹಕ್ಕುಗಳನ್ನು- 23,575 ಕೋಟಿ ರೂ.ಗೆ ವಾಲ್ಟ್‌  ಡಿಸ್ನಿ ಕಂಪನಿ ನೀಡಿ ಪಡೆದುಕೊಂಡಿತ್ತು.

     

  • ಅಭಿಮಾನಿಗಳೇ ನಮ್ಮನೆ ದೇವ್ರು – ಎರಡು ಕೈ ಜೋಡಿಸಿ ಪಾಟಿದಾರ್‌ ಕೃತಜ್ಞತೆ

    ಅಭಿಮಾನಿಗಳೇ ನಮ್ಮನೆ ದೇವ್ರು – ಎರಡು ಕೈ ಜೋಡಿಸಿ ಪಾಟಿದಾರ್‌ ಕೃತಜ್ಞತೆ

    ಬೆಂಗಳೂರು: ಇಂದಿನಿಂದ 65 ದಿನಗಳ ಐಪಿಎಲ್‌ (IPL) ಹಬ್ಬ ಆರಂಭವಾಗಲಿದ್ದು ಕೋಲ್ಕತ್ತಾದಲ್ಲಿ ಆರ್‌ಸಿಬಿ (RCB) ಮತ್ತು ಕೋಲ್ಕತ್ತಾ ತಂಡಗಳ ನಡವೆ ಮೊದಲ ಪಂದ್ಯ ನಡೆಯಲಿದೆ. ಮೊದಲ ಪಂದ್ಯದ ಆರಂಭಕ್ಕೂ ಮುನ್ನ ಆರ್‌ಸಿಬಿ ತಂಡದ ನಾಯಕ ರಜತ್‌ ಪಾಟಿದಾರ್‌ (Rajat Patidar) ಅವರು ಎರಡು ಕೈ ಜೋಡಿಸಿ ನಟ ರಾಜ್‌ಕುಮಾರ್‌ ಅವರ ಪ್ರಸಿದ್ಧ “ಅಭಿಮಾನಿಗಳೇ ನಮ್ಮ ದೇವರು” ಡೈಲಾಗ್‌ ಹೊಡೆದು ಅಭಿಮಾನಿಗಳಿಗೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

    ಕಳೆದ 16 ಆವೃತ್ತಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡ ಇಲ್ಲಿಯವರೆಗೆ ಚಾಂಪಿಯನ್‌ ಆಗಿ ಹೊರಹೊಮ್ಮಿಲ್ಲ. ಚಾಂಪಿಯನ್‌ ಆಗದೇ ಇದ್ದರೂ ಅಭಿಮಾನಿಗಳ ಪ್ರೀತಿ ಮಾತ್ರ ಕಮ್ಮಿಯಾಗಿಲ್ಲ. ಇದಕ್ಕೆ ಸಾಕ್ಷಿ ಯಾವುದು ಎಂದರೆ ಆರ್‌ಸಿಬಿ  ಪಂದ್ಯಗಳು. ಬೆಂಗಳೂರು ಮಾತ್ರವಲ್ಲ ಬೇರೆ ಕಡೆ ನಡೆದ ಪಂದ್ಯಗಳಲ್ಲೂ ಸ್ಟೇಡಿಯಂ ಭರ್ತಿಯಾಗಿರುತ್ತದೆ. ಅಭಿಮಾನಿಗಳು ಆರ್‌ಸಿಬಿ ಪ್ಲೇ ಕಾರ್ಡ್‌ ಹಿಡಿದು ತಂಡಕ್ಕೆ ಪ್ರೋತ್ಸಾಹ ನೀಡುತ್ತಿರುತ್ತಾರೆ.

    ಬೆಂಗಳೂರಿನಲ್ಲಿ (Bengaluru) ಆರ್‌ಸಿಬಿ ಪಂದ್ಯ ಆಯೋಜನೆಗೊಂಡರೆ ದುಬಾರಿ ಟಿಕೆಟ್‌ ದರ ಇದ್ದರೂ ಇದ್ದರೂ ಅದು ಮಾರಾಟವಾಗುತ್ತದೆ. ಸ್ಟೇಡಿಯಂನಲ್ಲಿ ಆರ್‌ಸಿಬಿ ಆರ್‌ಸಿಬಿ…ಧ್ವನಿ ಮೊಳಗುತ್ತಿರುತ್ತದೆ. ಪುರುಷರ ಕ್ರಿಕೆಟ್‌ ಮಾತ್ರವಲ್ಲ, ಆರ್‌ಸಿಬಿ ಮಹಿಳೆಯರ ತಂಡಕ್ಕೂ ಅಭಿಮಾನಿಗಳು ಪ್ರೋತ್ಸಾಹ ನೀಡುತ್ತಾರೆ. ಈ ಕಾರಣಕ್ಕೆ ಐಪಿಎಲ್‌ ಆರಂಭಕ್ಕೆ ಮೊದಲು ನೂತನ ನಾಯಕ ರಜತ್‌ ಪಾಟಿದಾರ್‌ ಅವರು ಮಿಸ್ಟರ್ ನ್ಯಾಗ್ಸ್‌ ಅವರ ಆರ್‌ಸಿಬಿ  ಇನ್‌ಸೈಡ್‌ ಶೋನಲ್ಲಿ ಅಭಿಮಾನಿಗಳೇ ನಮ್ಮ ದೇವರು ಎಂದು ಹೆಮ್ಮೆಯಿಂದ ಹೇಳಿದ್ದಾರೆ. ಇದನ್ನೂ ಓದಿ: UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಆರ್‌ಸಿಬಿ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಪಾಟಿದಾರ್‌ಗೆ ನಾಯಕ ಪಟ್ಟ ಸಿಕ್ಕಿದ್ದು ಹೇಗೆ?

    2021 ರಿಂದ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿರುವ ಮಧ್ಯಪ್ರದೇಶದ ಪಾಟಿದರ್‌ ಈ ವರ್ಷದಿಂದ ತಂಡವನ್ನು ಮುನ್ನಡೆಸಲಿದ್ದಾರೆ. ರಜತ್ ಪಾಟಿದಾರ್ ಅವರಿಗೆ ನಾಯಕತ್ವದ ಅನುಭವ ಇದೆ. ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯಪ್ರದೇಶ ತಂಡವನ್ನು ಲೀಡ್‌ ಮಾಡಿದ್ದರು.

    2022 ರಿಂದ 2024 ರವರೆಗೆ ದಕ್ಷಿಣ ಆಫ್ರಿಕಾದ ಫಾಫ್ ಡುಪ್ಲೆಸಿಸ್ (Faf du Plessis) ಆರ್​ಸಿಬಿ ನಾಯಕರಾಗಿದ್ದರು. ಆದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿತ್ತು. ಹರಾಜಿನಲ್ಲಿ 40 ವರ್ಷದ ಡುಪ್ಲೆಸಿಸ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ 2 ಕೋಟಿ ರೂ. ನೀಡಿ ಖರೀದಿಸಿತ್ತು.