Tag: ಐಪಿಎಲ್

  • ಈ ಬಾರಿಯೂ ಆರ್‌ಸಿಬಿ ಬೆಂಗಳೂರು ಪಂದ್ಯಗಳ ಟಿಕೆಟ್‌ ದರ ದುಬಾರಿ

    ಈ ಬಾರಿಯೂ ಆರ್‌ಸಿಬಿ ಬೆಂಗಳೂರು ಪಂದ್ಯಗಳ ಟಿಕೆಟ್‌ ದರ ದುಬಾರಿ

    ಬೆಂಗಳೂರು:  ಪ್ರತಿವರ್ಷದಂತೆ  ಬೆಂಗಳೂರಿನಲ್ಲಿ (Bengaluru) ನಡೆಯಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರಿನ (RCB) ಕ್ರಿಕೆಟ್‌ ಪಂದ್ಯಗಳ ಟಿಕೆಟ್‌ ದರ ದುಬಾರಿಯಾಗಿದ್ದು ಇಳಿಕೆ ಮಾಡುವಂತೆ ಆಗ್ರಹ ಕೇಳಿ ಬಂದಿದೆ.

    ಸಾಮಾನ್ಯ ಕ್ರಿಕೆಟ್ ಅಭಿಮಾನಿಗಳಿಗೆ ನಿಲುಕದ ರೀತಿಯಲ್ಲಿ ಟಿಕೆಟ್ ದರ (Ticket Price) ಇರುವ ಹಿನ್ನೆಲೆಯಲ್ಲಿ ಟಿಕೆಟ್ ದರ ಕಡಿಮೆ ಮಾಡುವಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಧ್ಯಕ್ಷ ಪ್ರಥಮೇಶ್ ಮಿಶ್ರಾಗೆ ಅವರಿಗೆ ಕನ್ನಡ ಚಳುವಳಿ ಕೇಂದ್ರ ಸಮಿತಿಯಿಂದ ಪತ್ರ ಬರೆಯಲಾಗಿದೆ.

    ಆರ್‌ಸಿಬಿ ಪಂದ್ಯಗಳ ಟಿಕೆಟ್‌ನ ಆರಂಭಿಕ ದರವೇ 2,300 ರೂ. ನಿಂದ ಆರಂಭವಾಗಿ 43,000 ರೂ. ವರೆಗೆ ಇದೆ.  ಬುಧವಾರದಿಂದ ಟಿಕೆಟ್‌ ಮಾರಾಟ ಆರಂಭವಾಗಿದ್ದು ಮೊದಲ ಪಂದ್ಯದ ಟಿಕೆಟ್‌ಗಳು ಈಗಾಗಲೇ ಖಾಲಿಯಾಗಿದೆ.  ಆರ್‌ಸಿಬಿ ಅಭಿಮಾನಿಗಳು ಆರ್‌ಸಿಬಿ ವೆಬ್‌ಸೈಟ್‌ ಅಥವಾ ಬುಕ್‌ಮೈ ಶೋ ವೆಬ್‌ಸೈಟಿನಿಂದ ಐಪಿಎಲ್‌ ಪಂದ್ಯಗಳ ಟಿಕೆಟ್‌ ಖರೀದಿಸಬಹುದು.  ಇದನ್ನೂ ಓದಿ: IPL 2025 | ಸಾರ್ವಕಾಲಿಕ ದಾಖಲೆ ಬರೆದವರು, ಕೆಟ್ಟ ದಾಖಲೆ ಹೆಗಲಿಗೇರಿಸಿಕೊಂಡವರು…

    ಟಿಕೆಟ್ ಬೆಲೆ ಎಷ್ಟಿದೆ?
    ಕೆಐಎ ವೈರ್‌ಗಳು ಮತ್ತು ಕೇಬಲ್‌ಗಳು ಎ ಸ್ಟ್ಯಾಂಡ್: 2,300 ರೂ.
    ಬೋಟ್ ಸಿ ಸ್ಟ್ಯಾಂಡ್ – 3,300
    ಪೂಮಾ ಬಿ ಸ್ಟ್ಯಾಂಡ್ 3,300
    ಟಿಕೆಟಿ ಜಿಟಿ ಅನೆಕ್ಸ್ – 4,000 ರೂ.
    ಕತಾರ್ ಏರ್‌ವೇಸ್ ಜಾವಗಲ್‌ ಶ್ರೀನಾಥ್ ಸ್ಟ್ಯಾಂಡ್ – 10,000 ರೂ.
    ಬಿರ್ಲಾ ಎಸ್ಟೇಟ್ ಬಿಎಸ್ ಚಂದ್ರಶೇಖರ್ ಸ್ಟ್ಯಾಂಡ್ – 15,000 ರೂ.

    ಬೆಂಗಳೂರಿನಲ್ಲಿ ಯಾವ ದಿನ ಪಂದ್ಯ?
    RCB vs GT: ಏಪ್ರಿಲ್ 2
    RCB vs DC: ಏಪ್ರಿಲ್ 10
    RCB vs PBKS: ಏಪ್ರಿಲ್ 18
    RCB vs RR: ಏಪ್ರಿಲ್ 24
    RCB vs CSK: ಮೇ 3
    RCB vs SRH: ಮೇ 13
    RCB vs KKR: ಮೇ 17

     

  • IPL 2025 | 10 ತಂಡಗಳ ನಾಯಕರ ಹೆಸರು ಫೈನಲ್‌ – 9 ಮಂದಿ ಭಾರತೀಯರದ್ದೇ ಆರ್ಭಟ

    IPL 2025 | 10 ತಂಡಗಳ ನಾಯಕರ ಹೆಸರು ಫೈನಲ್‌ – 9 ಮಂದಿ ಭಾರತೀಯರದ್ದೇ ಆರ್ಭಟ

    ಐಸಿಸಿ ಚಾಂಪಿಯನ್ಸ್ ಟ್ರೋಫಿ, ಡಬ್ಲ್ಯೂಪಿಎಲ್‌ ಬಳಿಕ ಕ್ರಿಕೆಟ್ ಪ್ರಿಯರ ಚಿತ್ತ ಈಗ ಐಪಿಎಲ್ ಕಡೆ ತಿರುಗಿದೆ. ಪ್ರತಿಷ್ಠಿಯ 18ನೇ ಆವೃತ್ತಿಯ ಈ ಕ್ರೀಡಾಕೂಟ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಕ್ರಿಕೆಟ್‌ ಪ್ರೇಮಿಗಳು ತುದಿಗಾಲಲ್ಲಿ ಕಾಯುತ್ತಿದ್ದಾರೆ. ಈಗಾಗಲೇ ಎಲ್ಲಾ ಹತ್ತು ಫ್ರಾಂಚೈಸ್ ಗಳು ತಮ್ಮತಮ್ಮ ನಾಯಕರ ಹೆಸರನ್ನು ಆಯಾ ಫ್ರಾಂಚೈಸಿಗಳು ಅಂತಿಮಗೊಳಿಸಿವೆ.

    ಹಿಂದೆಲ್ಲಾ ಟೂರ್ನಿಗಳಲ್ಲಿ ವಿದೇಶಿ ಆಟಗಾರರೇ ಹೆಚ್ಚಾಗಿ ನಾಯಕರಾಗಿದ್ದ ಉದಾಹರಣೆಗಳಿವೆ. ಆದರೆ, ಈ ಬಾರಿಯ ಐಪಿಎಲ್ ನಲ್ಲಿ ಒಬ್ಬರು ಮಾತ್ರವೇ ವಿದೇಶಿ ಆಟಗಾರ ನಾಯಕನಾಗಿದ್ದು, ಮಿಕ್ಕೆಲ್ಲ ತಂಡಗಳಿಗೆ ಟೀಂ ಇಂಡಿಯಾದ ಆಟಗಾರರೇ ನಾಯಕರಾಗಿರುವುದು ವಿಶೇಷ. ಈ ಮೊದಲು ಆಸ್ಟ್ರೇಲಿಯಾದ ಸ್ಟಾರ್ ಆಟಗಾರರಾದ ಡೇವಿಡ್ ವಾರ್ನರ್, ಆಡಂ ಗಿಲ್ಕ್ರಿಸ್ಟ್, ಶೇನ್ ವಾರ್ನ್, ಸ್ಟೀವನ್ ಸ್ಮಿತ್, ಕ್ಯಾಮರೂನ್ ವೈಟ್, ಶ್ರೀಲಂಕಾದ ಕುಮಾರ ಸಂಗಕ್ಕರ, ನ್ಯೂಜಿಲ್ಯಾಂಡ್ ದೇಶದ ಕೇನ್ ವಿಲಿಯಮ್ಸನ್, ಡೇನಿಯಲ್ ವೆಟ್ಟೋರಿ, ಬ್ರಿಂಡನ್‌ ಮಕಲಂ ಮುಂತಾದ ವಿದೇಶಿ ಆಟಗಾರರು ಫ್ರಾಂಚೈಸ್ ನಾಯಕರಾಗಿದ್ದರು.

    ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನೂ ಮೂವರು ವಿದೇಶಿ ಆಟಗಾರರು ಮುನ್ನಡೆಸಿದ್ದರು. 2009ರಲ್ಲಿ ಕೆವಿನ್ ಪೀಟರ್ಸನ್, 2011 ಮತ್ತು 2012ರಲ್ಲಿ ಡೇನಿಯಲ್ ವೆಟ್ಟೋರಿ ಮತ್ತು 2022, 2023 ಮತ್ತು 2024ರ ಆವೃತ್ತಿಯಲ್ಲಿ ದಕ್ಷಿಣ ಆಫ್ರಿಕಾದ ಫಾಫ್ ಡು ಪ್ಲೆಸಿಸ್ ನಾಯಕರಾಗಿದ್ದರು. ಇದೇ ರೀತಿ ಬಹುತೇಕ ಎಲ್ಲಾ ಫ್ರಾಂಚೈಸ್ ನಾಯಕರೂ ಕೆಲವು ಆವೃತ್ತಿಗಳಲ್ಲು ನಾಯಕರಾಗಿದ್ದರು. ಉದಾಹರಣೆಗೆ, ಮುಂಬೈ ಇಂಡಿಯನ್ಸ್ ತಂಡವನ್ನು ದಕ್ಷಿಣ ಆಫ್ರಿಕಾದ ಶಾನ್ ಪೊಲಾಕ್ (2008), ವೆಸ್ಟ್ ಇಂಡೀಸ್ ತಂಡದ ಡ್ವೇನ್‌ ಬ್ರಾವೋ (2010) ಮತ್ತು ಕೀರನ್ ಪೊಲಾರ್ಡ್ (2014 – 2021) ಸ್ಟ್ಯಾಂಡ್ ಇನ್ ನಾಯಕರಾಗಿದ್ದರು. ಆದ್ರೆ 18ನೇ ಆವೃತ್ತಿಯಲ್ಲಿ ಭಾರತೀಯರ ಆರ್ಭಟವೇ ಜೋರಾಗಿದೆ. 10 ತಂಡಗಳ ಪೈಕಿ 9 ಮಂದಿ ಭಾರತೀಯರೇ ನಾಯಕರಾಗಿ ಮಿಂಚುತ್ತಿದ್ದಾರೆ.

    ಚಾಂಪಿಯನ್‌ಗೆ ಪಟ್ಟ ಕಟ್ಟಿದ ಡೆಲ್ಲಿ ಕ್ಯಾಪಿಟಲ್ಸ್‌
    ಡೆಲ್ಲಿ ಕ್ಯಾಪಿಟಲ್ಸ್ ತಂಡವೂ ನಾಯಕರು ಯಾರು ಎನ್ನುವುದನ್ನು ಶುಕ್ರವಾರ (ಮಾ. 14) ಬಹಿರಂಗಗೊಳಿಸಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಉತ್ತಮ ಆಲ್ರೌಂಡ್ ಸಾಧನೆ ತೋರಿದ ಮತ್ತು ತಂಡದ ಸಹ ಆಟಗಾರರಿಂದ ಬಾಪೂ ಎಂದು ಕರೆಯಲ್ಪಡುವ ಅಕ್ಷರ್ ಪಟೇಲ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕರ್ನಾಟಕ ಮೂಲದ ಕೆ.ಎಲ್.ರಾಹುಲ್ ಅವರನ್ನೂ 14 ಕೋಟಿಗೆ ಖರೀದಿಸಿತ್ತು. ಅಕ್ಷರ್ ಪಟೇಲ್ ಮತ್ತು ಕೆ.ಎಲ್.ರಾಹುಲ್ ನಡುವೆ ನಾಯಕತ್ವಕ್ಕೆ ಪೈಪೋಟಿ ನಡೆದಿತ್ತು. ಆದರೆ, ನಾಯಕನ ಜವಾಬ್ದಾರಿ ರಾಹುಲ್ ಬೇಡ ಎಂದ ಕಾರಣಕ್ಕಾಗಿ ಅಕ್ಷರ್ ಪಟೇಲ್‌ಗೆ ಕ್ಯಾಪ್ಟೆನ್ಸಿ ಒಲಿದು ಬಂತು ಎಂದು ಹೇಳಲಾಗುತ್ತಿದೆ.

    ಐಪಿಎಲ್‌ನ 10 ತಂಡಗಳು ಮತ್ತು ನಾಯಕರ ಪಟ್ಟಿ ಹೀಗಿದೆ…

    1. ಮುಂಬೈ ಇಂಡಿಯನ್ಸ್ – ಹಾರ್ದಿಕ್ ಪಾಂಡ್ಯ
    2. ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಜತ್ ಪಾಟೀದಾರ್
    3. ಕೋಲ್ಕತ ನೈಟ್ ರೈಡರ್ಸ್ – ಅಜಿಂಕ್ಯ ರಹಾನೆ
    4. ಚೆನ್ನೈ ಸೂಪರ್ ಕಿಂಗ್ಸ್ – ರುತುರಾಜ್ ಗಾಯಕ್ವಾಡ್
    5. ಗುಜರಾತ್ ಟೈಟನ್ಸ್ – ಶುಭ್ಮನ್ ಗಿಲ್
    6. ರಾಜಸ್ಥಾನ ರಾಯಲ್ಸ್ – ಸಂಜು ಸ್ಯಾಮ್ಸನ್
    7. ಲಕ್ನೋ ಸೂಪರ್ ಜೈಂಟ್ಸ್‌ – ರಿಷಭ್ ಪಂತ್
    8. ಪಂಜಾಬ್ ಕಿಂಗ್ಸ್ – ಶ್ರೇಯಸ್ ಐಯ್ಯರ್
    9. ಡೆಲ್ಲಿ ಕ್ಯಾಪಿಟಲ್ಸ್ – ಅಕ್ಷರ್ ಪಟೇಲ್
    10. ಸನ್ ರೈಸರ್ಸ್ ಹೈದರಾಬಾದ್ – ಪ್ಯಾಟ್ ಕಮ್ಮಿನ್ಸ್ (ಆಸ್ಟ್ರೇಲಿಯಾ).
  • ಕಾಲಿಗೆ ಬ್ಯಾಂಡೇಜ್ ಕಟ್ಟಿಕೊಂಡೇ ಕೋಚಿಂಗ್‌ಗೆ ಬಂದ ರಾಹುಲ್ ದ್ರಾವಿಡ್

    ಕಾಲಿಗೆ ಬ್ಯಾಂಡೇಜ್ ಕಟ್ಟಿಕೊಂಡೇ ಕೋಚಿಂಗ್‌ಗೆ ಬಂದ ರಾಹುಲ್ ದ್ರಾವಿಡ್

    ಜೈಪುರ: ಕ್ರಿಕೆಟ್ ಆಡುವಾಗ ಕಾಲಿಗೆ ಗಂಭೀರ ಗಾಯ ಮಾಡಿಕೊಂಡಿದ್ದ ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ (Rahul Dravid) ಕಾಲಿಗೆ ಬ್ಯಾಂಡೇಜ್ ಕಟ್ಟಿಕೊಂಡೇ ರಾಜಸ್ತಾನ ರಾಯಲ್ಸ್ (Rajsthan Royals) ತಂಡದ ಆಟಗಾರರಿಗೆ ಕೋಚಿಂಗ್ ನೀಡುತ್ತಿರುವ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

    ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 18ನೇ ಆವೃತ್ತಿಯ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಹಲವು ಆಟಗಾರರು ತಂಡ ಸೇರಿಕೊಂಡಿದ್ದು, ತವರು ಮೈದಾನಗಳಲ್ಲಿ ಕಠಿಣ ಅಭ್ಯಾಸ ಆರಂಭಿಸಿದ್ದಾರೆ. ಈ ಮಧ್ಯೆ ಕಾಲಿಗೆ ಗಂಭೀರ ಗಾಯ ಮಾಡಿಕೊಂಡು ಎದ್ದು ನಿಲ್ಲಲೂ ಸಾಧ್ಯವಾಗದಂತಹ ಪರಿಸ್ಥಿತಿಯಲ್ಲಿರುವ ರಾಹುಲ್ ದ್ರಾವಿಡ್ ತರಬೇತಿ ಸಲುವಾಗಿ ಮೈದಾನಕ್ಕೆ ಆಗಮಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ಇದನ್ನೂ ಓದಿ: 6 ಅಡಿ ಎತ್ತರದ ವ್ಯಕ್ತಿಯೊಬ್ಬ ಚಿನ್ನವಿದ್ದ ಎರಡು ಬಾಕ್ಸ್ ನೀಡಿದ್ದ: ರನ್ಯಾ ತಪ್ಪೊಪ್ಪಿಗೆ

    ಮಾತ್ರವಲ್ಲದೇ ಕಾಲಿನ ಗಾಯದ ಹೊರತಾಗಿಯೂ ತಂಡದ ತರಬೇತಿ ಅವಧಿಯಲ್ಲಿ ಅಚ್ಚರಿಯ ರೀತಿಯಲ್ಲಿ ಕಾಣಿಸಿಕೊಂಡು ಆಟಗಾರರಿಗೆ ತರಬೇತಿ ಕೂಡ ನೀಡಿದ್ದಾರೆ. ಪ್ರಸ್ತುತ ಸರಿಯಾಗಿ ನಡೆಯಲು ಸಾಧ್ಯವಾಗದ ದ್ರಾವಿಡ್, ಗಾಲ್ಫ್ ಕಾರ್ಟ್‌ನಲ್ಲಿ ಮೈದಾನಕ್ಕೆ ಆಗಮಿಸಿದ್ದು, ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ಗೆ ಮಾರ್ಗದರ್ಶನ ನೀಡುತ್ತಾ ಕ್ರಚಸ್ ಸಹಾಯದಿಂದ ನಿಂತಿದ್ದರು. ಇದನ್ನೂ ಓದಿ: ಅಂಬಾನಿ ಮಗನ ಮದುವೆಯಲ್ಲಿ ಡೈಮಂಡ್ ಕಳೆದುಕೊಂಡ ಕಿಮ್ ಕರ್ದಾಶಿಯಾನ್

    ಈ ವಿಡಿಯೋವನ್ನು ರಾಜಸ್ಥಾನ ರಾಯಲ್ಸ್ ತಂಡ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ‘ಭಾರತದ ಮಾಜಿ ಕೋಚ್ 10 ವರ್ಷಗಳ ನಂತರ ಆರ್‌ಆರ್‌ಗೆ ಮರಳುತ್ತಿದ್ದಾರೆ. ಈ ಹಿಂದೆ ನಾಯಕ ಮತ್ತು ಮಾರ್ಗದರ್ಶಕರಾಗಿ ನಿರ್ಣಾಯಕ ಪಾತ್ರ ವಹಿಸಿದ್ದರು. ಇದೀಗ ಮತ್ತೆ ಕೋಚ್ ಆಗಿ ತಂಡ ಸೇರ್ಪಡೆಯಾಗಿದ್ದಾರೆ’ ಎಂದು ಸಂತಸ ಹಂಚಿಕೊಂಡಿದೆ. ಇದನ್ನೂ ಓದಿ: ಹಾರ್ದಿಕ್‌ ಪಾಂಡ್ಯ ಕಮಾಲ್‌ – ಜಸ್ಟ್‌ 6 ನಿಮಿಷದಲ್ಲಿ ಕೊಹ್ಲಿ ದಾಖಲೆ ಉಡೀಸ್‌

    ಬೆಂಗಳೂರಿನ ಎಸ್‌ಎಲ್‌ಎಸ್ ಕ್ರೀಡಾಂಗಣದಲ್ಲಿ ಯಂಗ್ ಲಯನ್ಸ್ ಕ್ಲಬ್ ವಿರುದ್ಧದ ಪಂದ್ಯದಲ್ಲಿ ದ್ರಾವಿಡ್ ಮತ್ತು ಅವರ ಮಗ ಅನ್ವಯ್ ವಿಜಯ ಕ್ರಿಕೆಟ್ ಕ್ಲಬ್ ಅನ್ನು ಪ್ರತಿನಿಧಿಸಿದ್ದರು. ಈ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಗಾಯಗೊಂಡಿದ್ದರು. ಎಡಗಾಲಿಗೆ ದೊಡ್ಡ ಮಟ್ಟದಲ್ಲೇ ಬ್ಯಾಂಡೇಜ್ ಹಾಕಿದ್ದ ವೈದ್ಯರು ವಿಶ್ರಾಂತಿ ಸೂಚಿಸಿದ್ದರು. ಇದು ಐಪಿಎಲ್ ಆರಂಭದ ಸಮಯದಲ್ಲಿ ರಾಜಸ್ತಾನ ರಾಯಲ್ಸ್ ತಂಡದ ಆತಂಕಕ್ಕೂ ಕಾರಣವಾಗಿತ್ತು. ಇದನ್ನೂ ಓದಿ: ತುಂಗಾಭದ್ರಾ ಅಣೆಕಟ್ಟಿನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಕ್ರಮ: ಡಿ.ಕೆ.ಶಿವಕುಮಾರ್

  • ತಂಬಾಕು, ಮದ್ಯದ ಜಾಹೀರಾತು ನಿಯಂತ್ರಿಸಿ – ಬಿಸಿಸಿಐ ಅಧ್ಯಕ್ಷರಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ

    ತಂಬಾಕು, ಮದ್ಯದ ಜಾಹೀರಾತು ನಿಯಂತ್ರಿಸಿ – ಬಿಸಿಸಿಐ ಅಧ್ಯಕ್ಷರಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ

    ನವದೆಹಲಿ: ಭಾರತದ ಆರೋಗ್ಯ ಸಚಿವಾಲಯವು ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮತ್ತು ಬಿಸಿಸಿಐ (BCCI) ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಮಾರ್ಚ್ 22 ರಿಂದ ಪ್ರಾರಂಭವಾಗುವ ಐಪಿಎಲ್ ಪಂದ್ಯಗಳ ನೇರ ಪ್ರಸಾರದಲ್ಲಿ ತಂಬಾಕು ಮತ್ತು ಮದ್ಯದ ಜಾಹೀರಾತುಗಳನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಸೂಚನೆ ನೀಡಿದೆ.

    ಆರೋಗ್ಯ ಮತ್ತು ಫಿಟ್‌ನೆಸ್‌ಗೆ ಸಂಬಂಧಿಸಿದ ಈ ಕಾರ್ಯಕ್ರಮದಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ತಂಬಾಕು ಮತ್ತು ಮದ್ಯವನ್ನು ಉತ್ತೇಜಿಸಿದರೆ ಅದು ಸ್ವತಃ ತನ್ನದೇ ನಿಯಮಗಳಿಗೆ ವಿರುದ್ಧವಾಗಿರುತ್ತದೆ ಎಂದು ಸಚಿವಾಲಯ ಹೇಳಿದೆ. ಇದನ್ನೂ ಓದಿ: ನಟಿ ರನ್ಯಾಗೆ KIADB ಜಾಗ ಕೊಟ್ಟಿದ್ದೇ ಬಿಜೆಪಿ, ಈಗ ಕಾಂಗ್ರೆಸ್ ಮೇಲೆ ಆರೋಪ ಮಾಡೋ ನೈತಿಕತೆ ಅವರಿಗಿಲ್ಲ: ಹೆಚ್.ಸಿ ಬಾಲಕೃಷ್ಣ

    ಕ್ರೀಡಾಂಗಣಗಳಲ್ಲಿನ ಬದಲಿ ಜಾಹೀರಾತುಗಳು, ರಾಷ್ಟ್ರೀಯ ದೂರದರ್ಶನ, ಕಾರ್ಯಕ್ರಮಗಳಲ್ಲಿನ ಉತ್ಪನ್ನಗಳು ಮತ್ತು ಕ್ರೀಡಾಪಟುಗಳು ಉತ್ಪನ್ನಗಳನ್ನು ಅನುಮೋದಿಸುವುದು ಸೇರಿದಂತೆ ಎಲ್ಲಾ ರೀತಿಯ ಜಾಹೀರಾತುಗಳನ್ನು ನಿಷೇಧಿಸಲು ಐಪಿಎಲ್ ಅನ್ನು ಕಟ್ಟುನಿಟ್ಟಾಗಿ ಕ್ರಮ ತೆಗೆದುಕೊಳ್ಳಲು ಆರೋಗ್ಯ ಇಲಾಖೆ ಒತ್ತಾಯಿಸಲಾಗಿದೆ.

    ಭಾರತವು ಹೃದಯ ಕಾಯಿಲೆ, ಕ್ಯಾನ್ಸರ್, ಟೈಪ್ 2 ಮಧುಮೇಹ, ಅಧಿಕ ರಕ್ತದೊತ್ತಡ, ಮೂತ್ರಪಿಂಡ ಮತ್ತು ಯಕೃತ್ತಿನ ಸೋಂಕುಗಳು, ಕ್ಯಾನ್ಸರ್ ಮತ್ತು ಶ್ವಾಸಕೋಶದ ಕಾಯಿಲೆಗಳಂತಹ ವಿವಿಧ ಸಾಂಕ್ರಾಮಿಕವಲ್ಲದ ಕಾಯಿಲೆಗಳ ಹೆಚ್ಚುತ್ತಿರುವ ಹೊರೆಯನ್ನು ಎದುರಿಸುತ್ತಿದೆ. ಭಾರತವು ಸಾಂಕ್ರಾಮಿಕವಲ್ಲದ ಕಾಯಿಲೆಗಳಾದ ಹೃದಯ ಸಂಬಂಧಿ ಕಾಯಿಲೆಗಳು, ಕ್ಯಾನ್ಸರ್, ದೀರ್ಘಕಾಲದ ಶ್ವಾಸಕೋಶದ ಕಾಯಿಲೆ, ಮಧುಮೇಹ, ಅಧಿಕ ರಕ್ತದೊತ್ತಡ ಇತ್ಯಾದಿಗಳಿಂದ ಗಣನೀಯ ಹೊರೆಯನ್ನು ಅನುಭವಿಸುತ್ತಿದೆ. ಇವು ವಾರ್ಷಿಕವಾಗಿ 70% ಕ್ಕಿಂತ ಹೆಚ್ಚು ಸಾವುಗಳಿಗೆ ಕಾರಣವಾಗಿವೆ.  ಇದನ್ನೂ ಓದಿ: ಹೆಣ್ಣನ್ನ ದೂಷಿಸುವುದು ಫ್ಯಾಷನ್‌ ಆಗಿದೆ – ಬ್ಯೂಟಿ ಜೊತೆ ಚಹಲ್‌ ಡೇಟಿಂಗ್‌ ವಂದತಿ ಬೆನ್ನಲ್ಲೇ ಧನಶ್ರೀ ರಿಯಾಕ್ಷನ್‌

    ತಂಬಾಕು ಮತ್ತು ಮದ್ಯ ಸೇವನೆಯು ಅಪಾಯಕಾರಿ ಅಂಶಗಳಾಗಿವೆ. ತಂಬಾಕು ಸಂಬಂಧಿತ ಸಾವುಗಳಲ್ಲಿ ವಿಶ್ವಾದ್ಯಂತ ನಾವು ಎರಡನೇ ಸ್ಥಾನ ಪಡೆದಿದ್ದೇವೆ, ಸುಮಾರು 14 ಲಕ್ಷ ವಾರ್ಷಿಕ ಸಾವುಗಳು ಸಂಭವಿಸಿವೆ, ಆದರೆ ಮದ್ಯವು ಭಾರತೀಯರು ಬಳಸುವ ಅತ್ಯಂತ ಸಾಮಾನ್ಯವಾದ ಮನೋ-ಕ್ರಿಯಾತ್ಮಕ ವಸ್ತುವಾಗಿದೆ ಎಂದು ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ. ಅತುಲ್ ಗೋಯೆಲ್ ಐಪಿಎಲ್ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಈ ರೋಗಗಳಲ್ಲಿ ಹೆಚ್ಚಿನವು ಧೂಮಪಾನ ಮತ್ತು ಅತಿಯಾದ ಮದ್ಯಪಾನ ಸೇರಿದಂತೆ ಜೀವನಶೈಲಿಯ ಆಯ್ಕೆಗಳೊಂದಿಗೆ ಸಂಬಂಧ ಹೊಂದಿವೆ. ಈ ಜೀವನಶೈಲಿಯ ಅಭ್ಯಾಸಗಳು ದೀರ್ಘಾವಧಿಯಲ್ಲಿ ವಿನಾಶಕಾರಿ ಫಲಿತಾಂಶಗಳನ್ನು ಉಂಟುಮಾಡಬಹುದು ಎಂದು ಹೇಳಿದ್ದಾರೆ. ಆರೋಗ್ಯ ಸಚಿವಾಲಯದ ಪ್ರಕಾರ, ತಂಬಾಕು ಮತ್ತು ಸಿಗರೇಟ್‌ಗಳ ಮೇಲಿನ ನಿಷೇಧವು ಸಾಂಕ್ರಾಮಿಕವಲ್ಲದ ರೋಗಗಳ ಹೊರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ದೇಶದ ಮೇಲಿನ ಆರೋಗ್ಯ ರಕ್ಷಣಾ ಒತ್ತಡವನ್ನು ಕಡಿಮೆ ಮಾಡುತ್ತದೆ. ಇದನ್ನೂ ಓದಿ: ಗುಜರಾತ್‌ | 5 ವರ್ಷದ ಬಾಲಕಿಯ ನರಬಲಿ – ದೇವಾಲಯದ ಮೆಟ್ಟಿಲುಗಳ ಮೇಲೆ ರಕ್ತ ಅರ್ಪಿಸಿದ ಪಾಪಿ!

  • ಲಲಿತ್ ಮೋದಿಗೆ ನೀಡಿದ್ದ ವಾನುವಾಟು ಪಾಸ್‌ಪೋರ್ಟ್ ರದ್ದು – ವಾನುವಾಟು ಪ್ರಧಾನಿ ಆದೇಶ

    ಲಲಿತ್ ಮೋದಿಗೆ ನೀಡಿದ್ದ ವಾನುವಾಟು ಪಾಸ್‌ಪೋರ್ಟ್ ರದ್ದು – ವಾನುವಾಟು ಪ್ರಧಾನಿ ಆದೇಶ

    – ಗಡೀಪಾರು ತಪ್ಪಿಸಲು ಪ್ಲ್ಯಾನ್ ಮಾಡಿದ್ದ ಲಲಿತ್ ಮೋದಿ

    ಪೋರ್ಟ್‌ ವಿಲಾ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸಂಸ್ಥಾಪಕ ಲಲಿತ್ ಮೋದಿ ಅವರ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸುವಂತೆ ವನವಾಟು ಪ್ರಧಾನಿ ಜೋಥಮ್ ನಪತ್ ಪೌರತ್ವ ಆಯೋಗಕ್ಕೆ ಆದೇಶಿಸಿದ್ದಾರೆ.

    ಮೋದಿಯವರ ವನವಾಟು ಪಾಸ್‌ಪೋರ್ಟ್ ರದ್ದುಗೊಳಿಸುವ ಪ್ರಕ್ರಿಯೆಗಳನ್ನು ತಕ್ಷಣವೇ ಪ್ರಾರಂಭಿಸಲು ನಾನು ಪೌರತ್ವ ಆಯೋಗಕ್ಕೆ ಸೂಚಿಸಿದ್ದೇನೆ ಎಂದು ನಪತ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಲಲಿತ್‌ ಮೋದಿಗೆ ಎಚ್ಚರಿಕೆ ನೋಟಿಸ್‌ ಹೊರಡಿಸಬೇಕೆಂಬ ಮನವಿಯನ್ನು ಇಂಟರ್‌ಪೋಲ್‌ ಎರಡು ಬಾರಿ ತಿರಸ್ಕರಿಸಿದೆ. ಅವರ ಹಿನ್ನೆಲೆ ಪರಿಶೀಲಿಸಿದಾಗಲೂ ಯಾವುದೇ ಅಪರಾಧ ಶಿಕ್ಷೆ ಕಂಡುಬಂದಿಲ್ಲ ಎಂದಿದ್ದು, ಅವರ ಅರ್ಜಿಯನ್ನು ರದ್ದು ಮಾಡುವಂತೆ ಸೂಚಿಸಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

    ವನವಾಟು ಪಾಸ್‌ಪೋರ್ಟ್‌ ಒಂದು ಸವಲತ್ತು ಅಷ್ಟೆ. ಅದು ಹಕ್ಕಲ್ಲ. ಅರ್ಜಿದಾರರು ಪೌರತ್ವಕ್ಕಾಗಿ ಕಾನೂನುಬದ್ಧ ಕಾರಣಗಳನ್ನು ಒದಗಿಸಬೇಕು. ಆ ಕಾನೂನುಬದ್ಧ ಕಾರಣಗಳಲ್ಲಿ ಹಸ್ತಾಂತರವನ್ನು ತಪ್ಪಿಸುವ ಪ್ರಯತ್ನದ ಯಾವುದೇ ಅಂಶಗಳನ್ನು ಒಳಗೊಂಡಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ.

  • ಈ ಬಾರಿಯ ಐಪಿಎಲ್‌ನಲ್ಲಿ ಹೊಸ ಬ್ಯಾಟ್ ಬಳಸಲಿದ್ದಾರೆ ಧೋನಿ

    ಈ ಬಾರಿಯ ಐಪಿಎಲ್‌ನಲ್ಲಿ ಹೊಸ ಬ್ಯಾಟ್ ಬಳಸಲಿದ್ದಾರೆ ಧೋನಿ

    ಮುಂಬೈ: ಮಾರ್ಚ್ 22ರಿಂದ ಆರಂಭವಾಗಲಿರುವ 2025ರ ಐಪಿಎಲ್ ಆವೃತ್ತಿಯಲ್ಲಿ ಎಂ.ಎಸ್ ಧೋನಿ (MS Dhoni) ಹೊಸ ಬ್ಯಾಟ್ ಬಳಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    2025ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (IPL) ಮಹೇಂದ್ರ ಸಿಂಗ್ ಧೋನಿ ಹೊಸ ಬ್ಯಾಟ್ ಬಳಸಲಿದ್ದು, ಈ ಬ್ಯಾಟ್‌ನ ತೂಕದಲ್ಲಿ ಇಳಿಕೆಯಾಗಲಿದೆ. ಸದ್ಯ ಐಪಿಎಲ್‌ಗಾಗಿ ರಾಂಚಿಯಲ್ಲಿ ಧೋನಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.ಇದನ್ನೂ ಓದಿ: ಹಿರಿಯ ರಂಗ ಕಲಾವಿದೆ ವಿಮಲಾ ರಂಗಾಚಾರ್ ವಿಧಿವಶ

    ಸಾಮಾನ್ಯವಾಗಿ ಧೋನಿ 1,250 ರಿಂದ 1,300 ಗ್ರಾಂ ತೂಕದ ಬ್ಯಾಟ್‌ನ್ನು ಉಪಯೋಗಿಸುತ್ತಿದ್ದರು. ಆದರೆ ಇದೀಗ ಅದನ್ನು ಕನಿಷ್ಠ 10-20 ಗ್ರಾಂಗೆ ಕಡಿಮೆ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ, ಇತ್ತೀಚಿಗಷ್ಟೇ ಮೀರತ್‌ನ ಸ್ಯಾನ್ಸ್ಪೇರಿಲ್ಸ್ ಗ್ರೀನ್‌ಲ್ಯಾಂಡ್ಸ್ ಕ್ರಿಕೆಟ್ ಸಲಕರಣೆಗಳ ಕಂಪನಿ, ಧೋನಿಗೆ ನಾಲ್ಕು ಬ್ಯಾಟ್‌ಗಳನ್ನು ನೀಡಿದೆ ಎಂದು ತಿಳಿಸಿದೆ.

    ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಶಿಬಿರವು ಮಾರ್ಚ್ 10ರ ಬಳಿಕ ಪ್ರಾರಂಭವಾಗಲಿದೆ. ಚೆನ್ನೈ ತಂಡ ಮಾರ್ಚ್ ಮೊದಲ ವಾರವೇ ಇಲ್ಲಿ ಅಭ್ಯಾಸ ನಡೆಸಲು ಮುಂದಾಗಿತ್ತು. ಆದರೆ ಬಿಸಿಸಿಐ ಅನುಮತಿ ನೀಡದ ಕಾರಣ ಸದ್ಯ ತಂಡ ರಾಂಚಿಯಲ್ಲಿ ಧೋನಿ ಅಭ್ಯಾಸ ಮಾಡುತ್ತಿದ್ದಾರೆ.ಇದನ್ನೂ ಓದಿ: ವಿಜಯೇಂದ್ರ ವಿರುದ್ಧ ಯತ್ನಾಳ್ ನೇತೃತ್ವದಲ್ಲಿ ಲಿಂಗಾಯತ ಮುಖಂಡರ ಸಭೆ – ಹೈಕಮಾಂಡ್ ಭೇಟಿಗೆ ತೀರ್ಮಾನ

     

  • IPL 2025 Schedule | ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್‌ KKR vs RCB ಕಾದಾಟ – ಪಂದ್ಯ ಯಾವಾಗ?

    IPL 2025 Schedule | ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್‌ KKR vs RCB ಕಾದಾಟ – ಪಂದ್ಯ ಯಾವಾಗ?

    – ಮೊದಲ ಸೂಪರ್‌ ಸಂಡೇ CSK vs MI ಹಣಾಹಣಿ

    ಮುಂಬೈ: ಬಹುನಿರೀಕ್ಷಿತ ಐಪಿಎಲ್ 2025ರ ವೇಳಾಪಟ್ಟಿ (IPL 2025 Schedule) ಭಾನುವಾರ (ಇಂದು) ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ಅಧಿಕೃತವಾಗಿ ಬಿಡುಗಡೆಗೊಳಿಸಿದೆ.

    18ನೇ ಆವೃತ್ತಿಯ ಐಪಿಎಲ್‌ (IPL 2025) ಟೂರ್ನಿ ಮಾರ್ಚ್ 22ರಿಂದ ಆರಂಭವಾಗಲಿದ್ದು, ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಟೂರ್ನಿ ಉದ್ಘಾಟನೆಯಾಗಲಿದೆ. ಹಾಲಿ ಚಾಂಪಿಯನ್‌ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಸುಮಾರು 2 ತಿಂಗಳ ಕಾಲ ಕ್ರಿಕೆಟ್‌ ಪ್ರೇಮಿಗಳಿಗೆ ರಸದೌತಣ ಇರಲಿದೆ. ‌

    ಮಾರ್ಚ್‌ 22ರಿಂದ ಟೂರ್ನಿ ಆರಂಭವಾಗಲಿದ್ದು, ಮೇ 25ರಂದು ಫೈನಲ್‌ ಪಂದ್ಯ ನಡೆಯಲಿದೆ. ಒಟ್ಟು 13 ತಾಣಗಳಲ್ಲಿ 74 ಪಂದ್ಯಗಳು ನಿಗದಿಯಾಗಿವೆ. 12 ಡಬಲ್ ಹೆಡರ್ (ದಿನಕ್ಕೆ 2 ಪಂದ್ಯ) ಪಂದ್ಯಗಳು ಇರಲಿದೆ. ಡಬಲ್‌ ಹೆಡರ್‌ ಇದ್ದಂತಹ ಸಂದರ್ಭದಲ್ಲಿ ಮಧ್ಯಾಹ್ನ 3.30ಕ್ಕೆ ಮೊದಲ ಪಂದ್ಯ ಮತ್ತು ರಾತ್ರಿ 7.30ಕ್ಕೆ 2ನೇ ಪಂದ್ಯ ಆರಂಭವಾಗಲಿವೆ.

    ಪ್ಲೇ-ಆಫ್ ಪಂದ್ಯಗಳಿಗೆ ಹೈದರಾಬಾದ್ ಮತ್ತು ಕೋಲ್ಕತ್ತಾ ತಾಣಗಳು ಆತಿಥ್ಯ ವಹಿಸಲಿವೆ. ಮೇ 20 ರಂದು ಹೈದರಾಬಾದ್‌ನಲ್ಲಿ ಮೊದಲ ಕ್ವಾಲಿಫೈಯರ್ ಮತ್ತು ಮೇ 21 ರಂದು ಎಲಿಮಿನೇಟರ್ ಪಂದ್ಯಗಳು ನಡೆಯಲಿವೆ. ಮೇ 23ರಂದು ಕೋಲ್ಕತ್ತಾದ ಈಡನ್‌ ಗಾರ್ಡನ್‌ನಲ್ಲಿ 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಮೇ 25ರಂದು ಕೋಲ್ಕತ್ತಾದಲ್ಲೇ ಫೈನಲ್‌ ಪಂದ್ಯ ನಡೆಯಲಿದೆ.  

  • ಜಿಯೋ ಹಾಟ್‌ಸ್ಟಾರ್‌ ವಿಲೀನ | ಇನ್ಮುಂದೆ ಐಪಿಎಲ್‌ ಉಚಿತ ವೀಕ್ಷಣೆ ಇಲ್ಲ- ಎರಡನ್ನೂ ಸಬ್‌ಸ್ಕ್ರೈಬ್‌ ಮಾಡಿದವರ ಕಥೆ ಏನು?

    ಜಿಯೋ ಹಾಟ್‌ಸ್ಟಾರ್‌ ವಿಲೀನ | ಇನ್ಮುಂದೆ ಐಪಿಎಲ್‌ ಉಚಿತ ವೀಕ್ಷಣೆ ಇಲ್ಲ- ಎರಡನ್ನೂ ಸಬ್‌ಸ್ಕ್ರೈಬ್‌ ಮಾಡಿದವರ ಕಥೆ ಏನು?

    ಮುಂಬೈ: ಇನ್ನು ಮುಂದೆ ಐಪಿಎಲ್‌ ಕ್ರಿಕೆಟ್‌ (IPL Cricket) ಪಂದ್ಯಗಳನ್ನು ಜಿಯೋ ಸಿನಿಮಾದಲ್ಲಿ (Jio Cinema) ಉಚಿತವಾಗಿ ವೀಕ್ಷಣೆ ಮಾಡಲು ಸಾಧ್ಯವಿಲ್ಲ.

    ಕಳೆದ ಎರಡು ವರ್ಷಗಳಿಂದ ಜಿಯೋ ಸಿನಿಮಾದಲ್ಲಿ ಐಪಿಎಲ್‌ ಪಂದ್ಯಗಳನ್ನು ವೀಕ್ಷಣೆ ಮಾಡಬಹುದಾಗಿತ್ತು. ಆದರೆ ಇನ್ನು ಮುಂದೆ ಜಿಯೋ ಹಾಟ್‌ಸ್ಟಾರ್‌ (Jio Hotstar) ಆಪ್‌ನಲ್ಲಿ ಹಣ ಪಾವತಿಸಿ ಎಲ್ಲಾ ಲೈವ್‌ ಸ್ಟ್ರೀಮ್‌ಗಳನ್ನು ನೋಡಬಹುದು.

    ಡಿಸ್ನಿ-ರಿಲಯನ್ಸ್ (Disney Reliance Joint Venture) ವಿಲೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಜಿಯೋ ಸಿನಿಮಾ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ವಿಲೀನಗೊಂಡು ಜಿಯೋಸ್ಟಾರ್ ಆಗಿ ಬದಲಾಗಿದ್ದು ಶುಕ್ರವಾರ ಹೊಸ ಸ್ಟ್ರೀಮಿಂಗ್ ಅಪ್ಲಿಕೇಶನನ್ನು ಬಿಡುಗಡೆ ಮಾಡಲಾಗಿದೆ.

    ಮಾಧ್ಯಮಗಳಲ್ಲಿ ಬಂದಿರುವ ವರದಿ ಪ್ರಕಾರ ಲೈವ್‌ಸ್ಟ್ರೀಮ್‌ ಆರಂಭಗೊಂಡ ಕೆಲ ನಿಮಿಷ ಉಚಿತವಾಗಿ ವೀಕ್ಷಿಸಲು ಸಾಧ್ಯವಾಗುತ್ತದೆ. ಈ ಉಚಿತ ನಿಮಿಷಗಳು ಕೊನೆಗೊಂಡ ನಂತರ ಚಂದಾದಾರಿಕೆಯ ಆರಂಭಿಕ ಬೆಲೆ 149 ರೂ. ಆಗಿರುವ ಪುಟ ಕಾಣಿಸಲಿದೆ. ಈ ಹಿಂದೆಯೂ ಹಾಟ್‌ಸ್ಟಾರ್‌ ಬಳಕೆದಾರರಿಗೆ ಇದೇ ರೀತಿಯ ಆಫರ್‌ ನೀಡಿತ್ತು.  ಇದನ್ನೂ ಓದಿ: Champions Trophy | ವಿಜೇತ ತಂಡಕ್ಕೆ ಸಿಗಲಿದೆ 19.45 ಕೋಟಿ – ಗೆದ್ದ ಪ್ರತಿ ಪಂದ್ಯಕ್ಕೂ ಸಿಗುತ್ತೆ ಹಣ

    ಈಗಲೂ ಪ್ರವೇಶಿಸಬಹುದು:
    ಡಿಸ್ನಿ+ ಹಾಟ್‌ಸ್ಟಾರ್ ಮತ್ತು ಜಿಯೋಸಿನಿಮಾ ಎರಡನ್ನೂ ಸಬ್‌ಸ್ಕ್ರೈಬ್‌ ಮಾಡಿದ ಚಂದಾದಾರರು ತಮ್ಮ ಯೋಜನೆಗಳು ಮತ್ತು ಪ್ರಯೋಜನಗಳನ್ನು ಈಗಲೂ ಪಡೆದುಕೊಳ್ಳಬಹುದು. ಜಿಯೋ ಸಿನಿಮಾ ಸಬ್‌ಸ್ಕ್ರೈಬ್‌ ಮಾಡಿದ ಚಂದದಾರರು ಈಗಲೂ ಆಪ್‌ ಪ್ರವೇಶಿಸಬಹುದು. ಆದರೆ ಕಂಟೆಂಟ್‌ ಜಿಯೋಹಾಟ್‌ಸ್ಟಾರ್‌ನಲ್ಲಿ ಪ್ಲೇ ಆಗುತ್ತದೆ. ಸಕ್ರಿಯ ಜಿಯೋಸಿನಿಮಾ ಚಂದಾದಾರಿಕೆಗಳನ್ನು ಹೊಂದಿರುವವರು ತಮ್ಮ ಯೋಜನೆಯ ಅವಧಿ ಮುಗಿಯುವವರೆಗೆ ಕಾಯಬೇಕು ಅಥವಾ ಹೊಸ ಪ್ಲಾಟ್‌ಫಾರ್ಮ್‌ಗೆ ಬದಲಾಯಿಸಬೇಕು. ಹೀಗಾಗಿ ಈಗಾಗಲೇ ಚಂದಾದಾರರಾಗಿರುವ ಬಳಕೆದಾರರು ತಮ್ಮ ಚಂದಾದಾರಿಕೆಗಳನ್ನು ಕಳೆದುಕೊಳ್ಳುವುದಿಲ್ಲ ಮತ್ತು ಅವರ ಆಯಾ ಪ್ಲ್ಯಾನ್‌ ಮುಗಿಯವರೆಗೂ ಜಿಯೋಹಾಟ್‌ಸ್ಟಾರ್ ಅನ್ನು ಉಚಿತವಾಗಿ ಪ್ರವೇಶಿಸಲು ಸಾಧ್ಯವಾಗುತ್ತದೆ. ಇದನ್ನೂ ಓದಿ:  UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಆರ್‌ಸಿಬಿ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಪಾಟಿದಾರ್‌ಗೆ ನಾಯಕ ಪಟ್ಟ ಸಿಕ್ಕಿದ್ದು ಹೇಗೆ?

    ಭಾರೀ ಮೊತ್ತಕ್ಕೆ ಖರೀದಿ:
    2017-22ರ ಅವಧಿಯ ಐಪಿಎಲ್‌ ಟಿವಿ ಮತ್ತು ಡಿಜಿಟಲ್‌ ರೈಟ್ಸ್‌ ಅನ್ನು ಡಿಸ್ನಿ ಹಾಟ್‌ಸ್ಟಾರ್‌ 16,347 ಕೋಟಿ ರೂ. ನೀಡಿ ಪಡೆದುಕೊಂಡಿತ್ತು. 2023ರಲ್ಲಿ ಟಿವಿ ಮತ್ತು ಡಿಜಿಟಲ್‌ ರೈಟ್ಸ್‌ ವಿಂಗಡನೆ ಮಾಡಲಾಗಿತ್ತು. 2023-27ರ 410 ಪಂದ್ಯಗಳಿಗೆ ಡಿಜಿಟಲ್‌ ಹಕ್ಕುಗಳನ್ನು 23,758 ಕೋಟಿ ರೂ.ಗೆ ವಯಾಕಾಮ್ 18 ಪಡೆದುಕೊಂಡಿದ್ದರೆ, ಟಿವಿ ಹಕ್ಕುಗಳನ್ನು ವಾಲ್ಟ್ ಡಿಸ್ನಿ ಕಂಪನಿ 23,575 ಕೋಟಿ ರೂ. ನೀಡಿ ಖರೀದಿಸಿತ್ತು.

    ಯಾರ ಬಳಿ ಯಾವ ಹಕ್ಕು?
    ರಿಲಯನ್ಸ್‌ ಜಿಯೋ ಸಿನಿಮಾ ಐಪಿಎಲ್‌ ಕ್ರಿಕೆಟ್‌, ಚಳಿಗಾಲದ ಒಲಿಂಪಿಕ್ಸ್‌, ಇಂಡಿಯನ್ ಸೂಪರ್ ಲೀಗ್ ಫುಟ್‌ಬಾಲ್‌ ಹಕ್ಕು ಹೊಂದಿದೆ. ಡಿಸ್ನಿ ಹಾಟ್‌ಸ್ಟಾರ್‌ ಐಸಿಸಿ ಆಯೋಜಿಸುವ ಕ್ರಿಕೆಟ್‌ ಪಂದ್ಯಗಳು, ಇಂಗ್ಲಿಷ್ ಪ್ರೀಮಿಯರ್ ಲೀಗ್, ದೇಶೀಯ ಪ್ರೊ ಕಬಡ್ಡಿ ಲೀಗ್‌ನ ಹಕ್ಕುಗಳನ್ನು ಹೊಂದಿದೆ. ವಿಲೀನಗೊಂಡ ಬಳಿಕ ಎಲ್ಲಾ ಕ್ರೀಡೆಗಳನ್ನು ಜಿಯೋ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು.

    ಹಾಟ್‌ಸ್ಟಾರ್‌ನಲ್ಲಿ ಐಪಿಎಲ್‌ ಕ್ರಿಕೆಟ್‌ ವೀಕ್ಷಿಸಬೇಕಾದರೆ ಸಬ್‌ಸ್ಕ್ರೈಬ್‌ ಆಗಬೇಕಿತ್ತು. ಆದರೆ 2023 ರಲ್ಲಿ ಜಿಯೋ ರೈಟ್ಸ್‌ ಪಡೆದ ನಂತರ ಐಪಿಎಲ್‌ ಲೈವ್‌ ಸ್ಟ್ರೀಮಿಂಗ್‌ ಉಚಿತವಾಗಿ ನೀಡಿತ್ತು. ಇದರಿಂದಾಗಿ ಐಪಿಎಲ್‌ ವೀಕ್ಷಕರ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಇದನ್ನೂ ಓದಿ: ಡ್ಯಾಂಡ್ರಫ್ ಜಾಹೀರಾತಿನಿಂದ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿರುಷ್ಕಾ! – ಇಬ್ಬರ ಲವ್‌ ಸ್ಟೋರಿಯನ್ನು ನೀವು ಓದಲೇಬೇಕು

     

    ಜಂಟಿ ಉದ್ಯಮಕ್ಕೆ ಸಹಿ:
    2024ರ ಫೆಬ್ರವರಿಯಲ್ಲಿ ವಯಾಕಾಮ್ 18 ಮೀಡಿಯಾ ಪ್ರೈವೆಟ್‌ ಲಿಮಿಟೆಡ್ ಮತ್ತು ವಾಲ್ಟ್ ಡಿಸ್ನಿ ಕಂಪನಿ 70 ಸಾವಿರ ಕೋಟಿ ರೂ. ಮೊತ್ತದ ಜಂಟಿ ಉದ್ಯಮಕ್ಕೆ ಸಹಿ ಹಾಕಿದ್ದವು. ಈ ವಹಿವಾಟಿನ ಭಾಗವಾಗಿ ವಯಾಕಾಮ್ 18ಕ್ಕೆ ಸೇರಿದ ಮಾಧ್ಯಮ ಸಂಸ್ಥೆಗಳನ್ನು ಕೋರ್ಟ್ ಅನುಮೋದಿತ ವ್ಯವಸ್ಥೆ ಮೂಲಕ ಸ್ಟಾರ್ ಇಂಡಿಯಾ ಪ್ರೈವೆಟ್ ಲಿಮಿಟೆಡ್‌ನಲ್ಲಿ ವಿಲೀನಗೊಳಿಸಲು ಅನುಮತಿ ಸಿಕ್ಕಿತ್ತು.

    ರಿಲಯನ್ಸ್ ಇಂಡಸ್ಟ್ರೀಸ್‌, ವಯಾಕಾಮ್ 18 ಮೀಡಿಯಾ ಪ್ರೈವೆಟ್‌ ಲಿಮಿಟೆಡ್ ಮತ್ತು ವಾಲ್ಟ್ ಡಿಸ್ನಿ ಕಂಪನಿಯ ವಿಲೀನದ ಭಾಗವಾಗಿ ಪರವಾನಗಿಯನ್ನು ಸ್ಟಾರ್ ಇಂಡಿಯಾಗೆ ವರ್ಗಾಯಿಸಲು ಕೇಂದ್ರ ಸರ್ಕಾರ ಸೆಪ್ಟೆಂಬರ್‌ 27 ರಂದು ಅನುಮೋದನೆ ನೀಡಿತ್ತು. ಪರವಾನಗಿ ಹಸ್ತಾಂತರಕ್ಕೆ ಅನುಮೋದನೆ ನೀಡಿದ್ದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಇದು ಭಾರತೀಯ ಸ್ಪರ್ಧಾತ್ಮಕ ಆಯೋಗವು (CCI) ವಿಧಿಸಿದ ಷರತ್ತುಗಳಿಗೆ ಒಳಪಟ್ಟಿರುತ್ತದೆ ಎಂದು ಆದೇಶದಲ್ಲಿ ತಿಳಿಸಿತ್ತು.

    ಡಿಸ್ನಿ ಮತ್ತು ರಿಲಯನ್ಸ್ ನಡುವಿನ ವಿಲೀನ ಒಪ್ಪಂದದಿಂದಾಗಿ 120 ಟಿವಿ ಚಾನೆಲ್‌ಗಳು ಮತ್ತು ಎರಡು ಸ್ಟ್ರೀಮಿಂಗ್ ಅಪ್ಲಿಕೇಶನ್‌ಗಳೊಂದಿಗೆ ಭಾರತದ ಅತಿದೊಡ್ಡ ಮನರಂಜನಾ ಕಂಪನಿಯಾಗಿ ಹೊರಹೊಮ್ಮಿದೆ.

  • UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಆರ್‌ಸಿಬಿ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಪಾಟಿದಾರ್‌ಗೆ ನಾಯಕ ಪಟ್ಟ ಸಿಕ್ಕಿದ್ದು ಹೇಗೆ?

    UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಆರ್‌ಸಿಬಿ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಪಾಟಿದಾರ್‌ಗೆ ನಾಯಕ ಪಟ್ಟ ಸಿಕ್ಕಿದ್ದು ಹೇಗೆ?

    ಬೆಂಗಳೂರು: ಸಾಧನೆಯ ಜೊತೆ ಅದೃಷ್ಟ ಇದ್ದರೆ ವ್ಯಕ್ತಿಯ ಹುದ್ದೆ ಹೇಗೆ ಬೇಕಾದರೂ ಬದಲಾಗಬಹುದು ಎನ್ನುವುದಕ್ಕೆ  ರಜತ್‌ ಪಾಟಿದಾರ್‌ ಈಗ ಸಾಕ್ಷಿಯಾಗಿದ್ದಾರೆ.  ಟೂರ್ನಿಯ ಅರ್ಧದಲ್ಲೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡವನ್ನು ಸೇರಿದ್ದ ರಜತ್‌ ಪಾಟಿದಾರ್‌ (Rajat Patidar) ಈಗ ಆ ತಂಡವನ್ನೇ ಮುನ್ನಡೆಸುವ ಮೂಲಕ ಐಪಿಎಲ್‌ನಲ್ಲಿ (IPL) ಸಾಧನೆ ಮಾಡಿದ್ದಾರೆ.

    2021 ರಲ್ಲಿ ಆರ್‌ಸಿಬಿ ತಂಡವನ್ನು ಸೇರಿದ್ದ ರಜತ್‌ ಕೇವಲ 4 ಪಂದ್ಯದಲ್ಲಿ 71 ರನ್‌ ಹೊಡೆದಿದ್ದರು. ಕಳಪೆ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಆರ್‌ಸಿಬಿ ಅವರನ್ನು ಕೈಬಿಟ್ಟಿತ್ತು. 2022ರ ಹರಾಜಿನಲ್ಲಿ ಯಾವುದೇ ತಂಡ ರಜತ್‌ ಅವರನ್ನು ಖರೀದಿಸದ ಕಾರಣ ಅಲ್‌ಸೋಲ್ಡ್‌ ಆಗಿದ್ದರು.

    2022ರ ಆವೃತ್ತಿಯಲ್ಲಿ ಕರ್ನಾಟಕದ ಲುವ್ನಿತ್ ಸಿಸೋಡಿಯಾ (Luvnith Sisodia) ಗಂಭೀರವಾಗಿ ಗಾಯಗೊಳ್ಳುತ್ತಾರೆ. ಇವರ ಜಾಗಕ್ಕೆ ಯಾರನ್ನು ಖರೀದಿಸಬೇಕು ಎಂದು ಯೋಚನೆಯಲ್ಲಿದ್ದಾಗ ಆರ್‌ಸಿಬಿಗೆ ಹೊಳೆದದ್ದೇ ರಜತ್‌ ಪಾಟಿದಾರ್‌ ಹೆಸರು. ಹೀಗಾಗಿ ಟೂರ್ನಿಯ ಅರ್ಧದಲ್ಲಿ ರಜತ್‌ ಮತ್ತೆ ಆರ್‌ಸಿಬಿ ತಂಡವನ್ನು ಸೇರುತ್ತಾರೆ. ಇದನ್ನೂ ಓದಿ: ಕಾರು ಅಪಘಾತದಲ್ಲಿ ರಿಷಭ್‌ ಪಂತ್‌ ಉಳಿಸಿದ್ದ ವ್ಯಕ್ತಿ ಪ್ರೇಯಸಿ ಜೊತೆ ಆತ್ಮಹತ್ಯೆಗೆ ಯತ್ನ – ಪ್ರಿಯತಮೆ ಸಾವು

    20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಆರ್‌ಸಿಬಿಗೆ ಮರಳಿ ಬಂದ ನಂತರ ರಜತ್‌ ಸ್ಫೋಟಕ ಆಟವನ್ನು ಪ್ರದರ್ಶಿಸುತ್ತಾರೆ. ಅದರಲ್ಲೂ ಎಲಿಮಿನೇಟರ್‌ ಪಂದ್ಯದಲ್ಲಿ ರಜತ್‌ ಲಕ್ನೋ ವಿರುದ್ಧ ಕೇವಲ 54 ಎಸೆತಗಳಲ್ಲಿ 112 ರನ್‌ ( 12 ಬೌಂಡರಿ,7 ಸಿಕ್ಸ್‌) ಹೊಡೆದು ದಾಖಲೆ ನಿರ್ಮಿಸಿದ್ದರು. ಈ ಪಂದ್ಯವನ್ನು ಆರ್‌ಸಿಬಿ ರೋಚಕ 14 ರನ್‌ಗಳಿಂದ ಗೆದ್ದುಕೊಳ್ಳುತ್ತದೆ. ಈ ಮೂಲಕ ಭಾರತ ತಂಡ ಸೇರದೇ ಶತಕ ಹೊಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ರಜತ್‌ ಪಾತ್ರವಾಗುತ್ತಾರೆ.

     

    2024 ರಲ್ಲಿ ಆರ್‌ಸಿಬಿ ವಿರಾಟ್‌ ಕೊಹ್ಲಿ, ರಜತ್‌ ಪಾಟಿದಾರ್‌, ಯಶ್‌ ದಯಾಳ್‌ ಅವರನ್ನು ಉಳಿಸಿಕೊಂಡಿತ್ತು. ನಾಯಕನಾಗಿದ್ದ ಡುಪ್ಲೆಸಿಸ್‌ ಅವರನ್ನು ಕೈ ಬಿಟ್ಟು ರಜತ್‌ ಪಾಟಿದರ್‌ ಅವರನ್ನು 11 ಕೋಟಿ ರೂ. ನೀಡಿ ಉಳಿಸಿಕೊಂಡಾಗ ಈ ಬಾರಿ ಆರ್‌ಸಿಬಿ ನಾಯಕನಾಗುತ್ತಾರಾ ಎಂಬ ಪ್ರಶ್ನೆ ಆಗಲೇ ಎದ್ದಿತ್ತು. ಆದರೆ ವಿರಾಟ್‌ ಕೊಹ್ಲಿ ಅವರನ್ನು ಉಳಿಸಿಕೊಂಡಿರುವಾಗ ಯಾರು ನಾಯಕನಾಗಬಹುದು ಎಂಬ ಕುತೂಹಲ ಮೂಡಿತ್ತು. ಆದರೆ ಈಗ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದ್ದು ಆರ್‌ಸಿಬಿ ತಂಡ ರಜತ್‌ ಅವರಿಗೆ ನಾಯಕತ್ವದ ಪಟ್ಟ ನೀಡಿದೆ.

    ಮೂರು ಅವೃತ್ತಿಯಲ್ಲಿ ರಜತ್‌ 27 ಐಪಿಎಲ್‌ ಪಂದ್ಯಗಳಿಂದ 799 ರನ್‌ ಹೊಡೆದಿದ್ದಾರೆ. 1 ಶತಕ, 7 ಅರ್ಧಶತಕ ಸಿಡಿಸಿದ್ದಾರೆ. 34.74 ಬ್ಯಾಟಿಂಗ್‌ ಸರಾಸರಿ, 158.85 ಸ್ಟ್ರೈಕ್‌ ರೇಟ್‌ ಹೊಂದಿರುವ ರಜತ್‌ ಐಪಿಎಲ್‌ನಲ್ಲಿ ಬೌಂಡರಿಗಿಂತಲೂ ಸಿಕ್ಸ್‌ ಹೆಚ್ಚು ಸಿಡಿಸಿದ್ದಾರೆ. ಇಲ್ಲಿಯವರೆಗೆ ಒಟ್ಟು 51 ಬೌಂಡರಿ, 54 ಸಿಕ್ಸ್‌ ಸಿಡಿಸಿ ಸ್ಫೋಟಕ ಬ್ಯಾಟ್ಸ್‌ಮನ್‌ ಎಂದೇ ಗುರುತಿಸಿಕೊಂಡಿದ್ದಾರೆ.

    ಯಾವ ವರ್ಷ ಎಷ್ಟು ರನ್‌?
    2021 – 4 ಪಂದ್ಯ, 71 ರನ್‌
    2022 – 8 ಪಂದ್ಯ, 333 ರನ್‌
    2024 – 15 ಪಂದ್ಯ, 395 ರನ್‌

  • ಆರ್‌ಸಿಬಿ ನಾಯಕನಾಗಿ ರಜತ್‌ ಪಾಟಿದಾರ್‌ ಆಯ್ಕೆ

    ಆರ್‌ಸಿಬಿ ನಾಯಕನಾಗಿ ರಜತ್‌ ಪಾಟಿದಾರ್‌ ಆಯ್ಕೆ

    ಬೆಂಗಳೂರು:  ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ನೂತನ ನಾಯಕನಾಗಿ ಸ್ಫೋಟಕ ಬ್ಯಾಟ್ಸ್‌ಮನ್‌ ರಜತ್‌ ಪಾಟಿದಾರ್‌ (Rajat Patidar)  ಅವರನ್ನು ಆಯ್ಕೆ ಮಾಡಲಾಗಿದೆ.

    2021 ರಿಂದ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿರುವ ಪಾಟಿದರ್‌ 2025ರ ಐಪಿಎಲ್‌ ಆವೃತ್ತಿಗೆ ಆರ್‌ಸಿಬಿಯನ್ನು ಮುನ್ನಡೆಸಲಿದ್ದಾರೆ.

     


    ರಜತ್ ಪಾಟಿದಾರ್ ಅವರಿಗೆ ನಾಯಕತ್ವದ ಅನುಭವ ಇದೆ. ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ ತಂಡದ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದರು.

     

    2022 ರಿಂದ 2024 ರವರೆಗೆ  ದಕ್ಷಿಣ ಆಫ್ರಿಕಾದ ಫಾಫ್ ಡುಪ್ಲೆಸಿಸ್ ಆರ್​ಸಿಬಿ ನಾಯಕರಾಗಿದ್ದರು. ಆದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿತ್ತು. ಹರಾಜಿನಲ್ಲಿ 40 ವರ್ಷದ ಡುಪ್ಲೆಸಿಸ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌  2 ಕೋಟಿ ರೂ. ನೀಡಿ ಖರೀದಿಸಿತ್ತು.