Tag: ಐಪಿಸಿ

  • ಪಾಗಲ್ ಪ್ರೇಮಿ ಕಾಟಕ್ಕೆ ಬೇಸತ್ತು UP ಮೂಲದ ದಂತ ವೈದ್ಯೆ ಆತ್ಮಹತ್ಯೆ

    ಪಾಗಲ್ ಪ್ರೇಮಿ ಕಾಟಕ್ಕೆ ಬೇಸತ್ತು UP ಮೂಲದ ದಂತ ವೈದ್ಯೆ ಆತ್ಮಹತ್ಯೆ

    ಬೆಂಗಳೂರು: ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು ದಂತ ವೈದ್ಯೆ (Dentist) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಸಂಜಯ್ ನಗರದಲ್ಲಿ (SanjayNagar) ನಡೆದಿದೆ.

    ಜನವರಿ 25ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಿಯಾಂನ್ಷಿ ತ್ರಿಪಾಠಿ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆ. ಇದನ್ನೂ ಓದಿ: ವಿಡಿಯೋ ಕಾಲ್ ಮಾಡಿ ಹೆಂಡತಿ ತೋರಿಸದಿದ್ದಕ್ಕೆ ಸ್ನೇಹಿತನಿಗೆ ಚಾಕು ಇರಿತ

    ಉತ್ತರಪ್ರದೇಶ (Uttar Pradesh) ಲಕ್ನೋ ಮೂಲದ ಪ್ರಿಯಾಂನ್ಷಿ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ (MS Ramaiah Memorial Hospital) ದಂತವೈದ್ಯೆ ಆಗಿ ಕೆಲಸ ಮಾಡುತ್ತಿದ್ದರು.

    ಅದೇ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯನಾಗಿದ್ದ ಸುಮಿತ್ ತನ್ನನ್ನು ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ. ಆದ್ರೆ ಪ್ರಿಯಾಂನ್ಷಿ ತ್ರಿಪಾಠಿ, ಪ್ರೀತಿಗೆ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡ ವೈದ್ಯ ಸುಮಿತ್, ಪ್ರಿಯಾಂನ್ಷಿ ತ್ರಿಪಾಠಿಯ ವ್ಯಕ್ತಿತ್ವದ ಬಗ್ಗೆ ಕೆಟ್ಟದಾಗಿ ಬಿಂಬಿಸಿದ್ದ. ಆಕೆ ಸರಿಯಿಲ್ಲ, ಸಿಗರೆಟ್ ಸೇದುತ್ತಾಳೆ, ಡ್ರಿಂಗ್ಸ್ ಮಾಡ್ತಾಳೆ.. ಸಿಕ್ಕ ಸಿಕ್ಕವರ ಜೊತೆಗೆ ಓಡಾಡ್ತಾಳೆ ಅಂತಾ ಹೇಳಿಕೊಂಡು ಬರ್ತಿದ್ದ. ಇದರಿಂದ ಮನನೊಂದ ಪ್ರಿಯಾಂನ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಪ್ರಿಯಾಂನ್ಷಿ ತಂದೆ ಸುಶೀಲ್ ತ್ರಿಪಾಠಿ ಅವರು ನೀಡಿದ ದೂರು ಆಧರಿಸಿ ಸಂಜಯ್ ನಗರದ ಪೊಲೀಸರು ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಗುಬ್ಬಿ ಜಾತ್ರೆಯಲ್ಲಿ ಅನ್ಯಕೋಮಿನವರ ವ್ಯಾಪಾರಕ್ಕೆ ನಿಷೇಧ ಹೇರಲು ಒತ್ತಾಯ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 2013ರ ರೇಪ್‌ಕೇಸ್‌: ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ

    2013ರ ರೇಪ್‌ಕೇಸ್‌: ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ

    ಗಾಂಧಿನಗರ: 2013ರ ಅತ್ಯಾಚಾರ ಪ್ರಕರಣದರಲ್ಲಿ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ (81) (Asaram Bapu) ಗುಜರಾತ್‌ನ ಸೆಷನ್ಸ್ ನ್ಯಾಯಾಲಯವು (Gujarat Sessions Court) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

    ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಡಿ.ಕೆ. ಸೋನಿ (DK Soni) ಅವರು ವಾದ-ವಿವಾದ ಆಲಿಸಿದ ನಂತರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಇದನ್ನೂ ಓದಿ: ವಿಸ್ತಾರ ವಿಮಾನದಲ್ಲಿ ಅರೆಬೆತ್ತಲಾಗಿ ಓಡಾಡಿದ ಮಹಿಳೆ – ಗಲಾಟೆ ಮಾಡಿ ಸಿಬ್ಬಂದಿ ಮೇಲೆ ಹಲ್ಲೆ

    2013ರಲ್ಲಿ ತನ್ನ ಶಿಷ್ಯೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ 81 ವರ್ಷದ ಅಸಾರಾಂ ಬಾಪುವನ್ನು ದೋಷಿ ಎಂದು ಶಿಕ್ಷೆ ವಿಧಿಸಲಾಗಿದೆ. ಇದನ್ನೂ ಓದಿ: ಹುಡುಗಿಯರೇ.. ಮದುವೆಗೂ ಮುನ್ನ ಭಾವಿ ಪತಿಗೆ ಈ ಪ್ರಶ್ನೆ ಕೇಳೋದನ್ನ ಮರಿಬೇಡಿ

    ಸೋಮವಾರ ವಿಚಾರಣೆ ನಡೆಸಿದ್ದ ಗಾಂಧಿನಗರದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 2013ರ ಈ ಪ್ರಕರಣದಲ್ಲಿ ಅಸಾರಾಂ ಬಾಪುವಿನ ಪತ್ನಿ ಸೇರಿ ಪ್ರಕರಣದ ಆರೋಪಿಗಳಾಗಿದ್ದ 6 ಮಂದಿಯನ್ನ ಖುಲಾಸೆಗೊಳಿಸಿತು. ಪೂರಕ ಸಾಕ್ಷ್ಯಾಧಾರ ಇಲ್ಲದ ಕಾರಣ ಐವರು ಆರೋಪಿಗಳನ್ನು ಖುಲಾಸೆಗೊಳಿಸಿತು. ಇದರಲ್ಲಿ ಅಸಾರಾಂ ಬಾಪುವಿನ ಪತ್ನಿಯೂ ಸೇರಿದ್ದಾರೆ.

    ನಂತರ ನ್ಯಾಯಾಧೀಶರಾದ ಡಿ.ಕೆ ಸೋನಿ ಅವರು, ಐಪಿಸಿ (IPC) ಸೆಕ್ಷನ್ 376 (2)(ಸಿ) (ಬಲವಂತವಾಗಿ ಸಂಭೋಗ ಹಾಗೂ ತನ್ನ ಅಭಿರಕ್ಷೆಯಲ್ಲಿರುವ ಸ್ತ್ರೀಯೊಡನೆ ಸಂಭೋಗ ಮಾಡುವುದು), 377 (ಅಸ್ವಾಭಾವಿಕ ಲೈಂಗಿಕತೆ), 342 (ಅಕ್ರಮ ಬಂಧನಕ್ಕಾಗಿ ದಂಡನೆ), 506 (2) (ಅಪರಾಧಿಕ ಭಯೋತ್ಪಾದಕರಿಗೆ ದಂಡನೆ), 354 (ಮಹಿಳೆಯನ್ನು ಮಾನಭಂಗ ಮಾಡುವ ಉದ್ದೇಶದಿಂದ ಅವಳ ಮೇಲೆ ಹಲ್ಲೆ), 357 (ಒಬ್ಬ ವ್ಯಕ್ತಿಯನ್ನು ಅಕ್ರಮವಾಗಿ ಬಂಧನದಲ್ಲಿಡುವ ಪ್ರಯತ್ನದಲ್ಲಿ ಅವನ ಮೇಲೆ ಹಲ್ಲೆ) ಅಡಿಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

    ಅಸಾರಾಂ ಬಾಪು ಈಗಾಗಲೇ ಎರಡು ಪ್ರತ್ಯೇಕ ಲೈಂಗಿಕ ಅಪರಾಧ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ. 2013 ರಲ್ಲಿ ಅವನನ್ನು ಇಂದೋರ್‌ನಿಂದ ಕರೆತಂದು 2018 ರಿಂದ ಜೋಧ್‌ಪುರದ ಜೈಲಿನಲ್ಲಿ ಇರಿಸಲಾಗಿದೆ.

    2013ರಲ್ಲಿ ರಾಜಸ್ಥಾನದ ತನ್ನ ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಇನ್ನೊಂದು ಪ್ರಕರಣದಲ್ಲಿ ಇದೀಗ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮದ್ವೆಗೆ ಮುಂಚೆನೇ ಮಗು- ಬಾತ್‌ರೂಂ ಕಿಟಕಿಯಿಂದ ಶಿಶು ಎಸೆದ 20ರ ಯುವತಿ!

    ಮದ್ವೆಗೆ ಮುಂಚೆನೇ ಮಗು- ಬಾತ್‌ರೂಂ ಕಿಟಕಿಯಿಂದ ಶಿಶು ಎಸೆದ 20ರ ಯುವತಿ!

    ನವದೆಹಲಿ: ಮದುವೆಯಾಗದೇ (Marriage) ಮಗುವಿಗೆ ಜನ್ಮ ನೀಡಿದ 20 ವರ್ಷದ ಯುವತಿ ಸಾಮಾಜಿಕ ಕಳಂಕಕ್ಕೆ ಹೆದರಿ ಅಪಾರ್ಟ್ಮೆಂಟ್‌ನ ಬಾತ್‌ರೂಮ್ ಕಿಟಕಿಯಿಂದ ಮಗುವನ್ನು ಎಸೆದು ಕೊಂದಿರುವ ಘಟನೆ ಪೂರ್ವ ದೆಹಲಿಯ ನ್ಯೂಅಶೋಕ್ ವಿಹಾರದಲ್ಲಿ ನಡೆದಿದೆ.

    ನೋಯ್ಡಾದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಯುವತಿ, ಸೋಮವಾರ ಮಗುವಿಗೆ ಜನ್ಮ ನೀಡಿದ್ದಾಳೆ. ನಂತರ ಸಾಮಾಜಿಕ ಕಳಂಕಕ್ಕೆ (Social Stigma) ಹೆದರಿ ಮಗುವನ್ನು ತಾನು ವಾಸಿಸುತ್ತಿದ್ದ ಜೈ ಅಂಬೆ ಅಪಾರ್ಟ್ಮೆಂಟ್‌ನ ಬಾತ್‌ರೂಮ್ ಕಿಟಕಿಯಿಂದ ಎಸೆದು ಕೊಂದಿದ್ದಾಳೆ. ಇದೀಗ ಪೊಲೀಸರಿಗೆ (Police) ಸಿಕ್ಕಿಬಿದ್ದಿದ್ದಾಳೆ. ಇದನ್ನೂ ಓದಿ: ಮುದ್ದಿನ ಶ್ವಾನ ಹುಡುಕಿಕೊಡಿ- 10 ಸಾವಿರ ಬಹುಮಾನ ಘೋಷಿಸಿದ ಕುಟುಂಬ!

    ಮಗು ರಸ್ತೆಯಲ್ಲಿ ಬಿದ್ದಿದ್ದನ್ನು ಕಂಡು ಸ್ಥಳೀಯರು ನೋಯ್ಡಾದ ಮೆಟ್ರೋ ಆಸ್ಪತ್ರೆಗೆ (Metro Hospital) ಕರೆದೊಯ್ದರು, ಹೆಚ್ಚಿನ ಚಿಕಿತ್ಸೆಗಾಗಿ ಎಲ್‌ಬಿಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಷ್ಟರಲ್ಲಿ ಮಗು ಮೃತಪಟ್ಟಿದ್ದು. ನಂತರ ಶಿಶು ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸ್ ಉಪ ಆಯುಕ್ತ (ಪೂರ್ವ) ಅಮೃತ ಗುಗುಲೋತ್, ರಕ್ತದ ಕಲೆಗಳ ಜಾಡು ಹಿಡಿದು ಆರೋಪಿ ಯುವತಿಯನ್ನ ಬಂಧಿಸುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ದಿಢೀರ್‌ ಉರುಳಿದ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ – ತಾಯಿ, ಮಗು ದುರ್ಮರಣ

    ಬಳಿಕ ತನಿಖೆಯಲ್ಲಿ ತಾನು ಅವಿವಾಹಿತೆ, ಸಾಮಾಜಿಕ ಕಳಂಕಕ್ಕೆ ಹೆದರಿ ಮಗುವನ್ನು ಬಾತ್‌ರೂಮಿನ ಕಿಟಕಿಯಿಂದ ಎಸೆದಿದ್ದಾಗಿ ಒಪ್ಪಿಕೊಂಡಿದ್ದಾಳೆ. ಆರೋಪಿ ಯುವತಿ ವಿರುದ್ಧ ಐಪಿಸಿ (IPC) ಸೆಕ್ಷನ್ 302 (ಕೊಲೆ), 201 ಅಪರಾಧದ ಸಾಕ್ಷಿಗಳನ್ನು ಮರೆಮಾಚುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಯುವತಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಪೊಲೀಸರು ಕಣ್ಗಾವಲು ಇರಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆಪರೇಷನ್ ಥಿಯೇಟರ್‌ನಲ್ಲಿ ಮಹಿಳೆಯ ಖಾಸಗಿ ಭಾಗಗಳನ್ನು ಮುಟ್ಟಿ ಕಿರುಕುಳ

    ಆಪರೇಷನ್ ಥಿಯೇಟರ್‌ನಲ್ಲಿ ಮಹಿಳೆಯ ಖಾಸಗಿ ಭಾಗಗಳನ್ನು ಮುಟ್ಟಿ ಕಿರುಕುಳ

    ಕೋಲ್ಕತ್ತಾ: ಇಲ್ಲಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ (Operation Theatre) ಅರೆಪ್ರಜ್ಞಾವಸ್ಥೆಯಲ್ಲಿ ಮಲಗಿದ್ದಾಗ ಆಸ್ಪತ್ರೆ (Hospital) ಸಿಬ್ಬಂದಿಯೊಬ್ಬ ಆಕೆಯ ಖಾಸಗಿ ಭಾಗಗಳನ್ನ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಮಹಿಳೆಯೊಬ್ಬರು ಆರೋಪಿಸಿ ಫೂಲ್ಬಗಾನ್ ಪೊಲೀಸರಿಗೆ (Police) ದೂರು ನೀಡಿದ್ದಾರೆ.

    CRIME COURT

    ಕೋಲ್ಕತ್ತಾ (Kolkata) ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಪಿತ್ತಕೋಶದ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದರು. ಗುರುವಾರ ಬೆಳಗ್ಗೆ 9 ಗಂಟೆ ವೇಳೆಗೆ ಆಪರೇಷನ್ ಥಿಯೇಟರ್‌ಗೆ ವರ್ಗಾಯಿಸಿ ಅರಿವಳಿಕೆ ನೀಡಿದ್ದಾರೆ. 11 ಗಂಟೆಗೆ ವೇಳೆಗೆಲ್ಲಾ ಶಸ್ತçಚಿಕಿತ್ಸೆ ಮುಗಿದಿದೆ. ಬಳಿಕ ಮಹಿಳೆ ಅರೆ ಪ್ರಜ್ಞಾವಸ್ಥೆಯಲ್ಲಿ ಮಲಗಿದ್ದಾಗ ಯಾರೋ ತನ್ನ ಖಾಸಗಿ ಭಾಗಗಳನ್ನು ಮುಟ್ಟಿ ಕಿರುಕುಳ ನೀಡಿರುವುದಾಗಿ ಮಹಿಳೆ ಲಿಖಿತ ದೂರು ನೀಡಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿ 10 ಲಕ್ಷ ಹಣ ಸಿಕ್ಕಿದ ಕೇಸ್ – ಆರೋಪಿ ಜಗದೀಶ್‌ಗೆ ಷರತ್ತುಬದ್ಧ ಜಾಮೀನು

    ಮಹಿಳೆ ಹೇಳಿದ್ದೇನು?
    ನಾನು ನಿಧಾನವಾಗಿ ಪ್ರಜ್ಞಾವಸ್ಥೆಗೆ ಬರುತ್ತಿದ್ದೆ. ಈ ವೇಳೆ ಸ್ವಲ್ಪವೇ ಕಣ್ಣು ತೆರೆದು ನೋಡಿದಾಗ ನನ್ನ ಬಲಭಾಗದಲ್ಲಿ ವ್ಯಕ್ತಿಯೊಬ್ಬ ನಿಂತಿದ್ದ. ಅವನು ನನ್ನನ್ನು ತಬ್ಬಿಕೊಳ್ಳುತ್ತಿದ್ದ. ನನಗೆ ತುಂಬಾ ನೋವಾಗುತ್ತಿತ್ತು. ನನಗೆ ಅರಿವಳಿಕೆ ನೀಡಿದ್ದರಿಂದ ಅವನನ್ನು ತಡೆಯಲು ಸಾಧ್ಯವಾಗಲಿಲ್ಲ. ಆದರೆ ನನಗೆ ಪ್ರಜ್ಞೆ ಬಂದು ನೋಡಿದಾಗ ನನ್ನ ಖಾಸಗಿ ಭಾಗಗಳಲ್ಲಿ ಆಗಿದ್ದ ಗುರುತುಗಳನ್ನು ಗಮನಿಸಿದೆ ಎಂದು ಹೇಳಿದ್ದಾರೆ.

    ಆಪರೇಷನ್ ಥಿಯೇಟರ್‌ನಲ್ಲಿ ನನಗೆ ಏನಾಯಿತು ಅನ್ನೋದು ಸಂಪೂರ್ಣವಾಗಿ ತಿಳಿದಿಲ್ಲ. ಆದ್ರೆ ಅಪರಾಧ ನಡೆಯುವಾಗ ಯಾರೊಬ್ಬರೂ ಮಹಿಳಾ ಸಿಬ್ಬಂದಿ ಇರಲಿಲ್ಲ. ಆದ್ರೆ ನನ್ನ ಬಲ ಎದೆಯ ಮೇಲೆ ಗುರುತುಗಳು ಕಂಡುಬಂದಿವೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಕೈಗಾರಿಕೆಗಳ ಉದ್ಯೋಗದಲ್ಲಿ ಶೇ.80 ರಷ್ಟು ಪ್ರಾಶಸ್ತ್ಯ, ಭಾಷಾ ಅಭಿವೃದ್ಧಿಗೆ ಶೀಘ್ರ ಕಾನೂನು ಸ್ವರೂಪ: ಬೊಮ್ಮಾಯಿ

    ಮಹಿಳೆ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಫೂಲ್ಬಗಾನ್ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಆರೋಪಿ ವಿರುದ್ಧ ಐಪಿಸಿ (IPC) ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಮಹಿಳೆಯ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಿದ್ದು, ಮೆಡಿಕಲ್ ರಿಪೋರ್ಟ್‌ಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚಲಿಸುತ್ತಿದ್ದ ಬೈಕ್‌ಟ್ಯಾಂಕ್ ಮೇಲೆ ಕುಳಿತು ಪ್ರಿಯಕರನೊಂದಿಗೆ ರೊಮ್ಯಾನ್ಸ್ – ಪೊಲೀಸರು ಕೊಟ್ರು ಶಾಕ್

    ಚಲಿಸುತ್ತಿದ್ದ ಬೈಕ್‌ಟ್ಯಾಂಕ್ ಮೇಲೆ ಕುಳಿತು ಪ್ರಿಯಕರನೊಂದಿಗೆ ರೊಮ್ಯಾನ್ಸ್ – ಪೊಲೀಸರು ಕೊಟ್ರು ಶಾಕ್

    ಅಮರಾವತಿ: ಪ್ರೇಮಿಗಳಿಗೆ (Lovers) ಜಗತ್ತೇ ಕುರುಡಾಗಿರುತ್ತದೆ. ಕೆಲ ಪ್ರೇಮಿಗಳಂತೂ ಅಕ್ಕಪಕ್ಕ ಯಾರಿರುತ್ತಾರೆ ಎಂಬ ಅರಿವೇ ಇಲ್ಲದೇ ಸಾರ್ವಜನಿಕ ಪ್ರದೇಶಗಳಲ್ಲೂ ಹುಚ್ಚಾಟ ಮರೆಯುವುದನ್ನು ನೋಡಿರುತ್ತೇವೆ. ಸದ್ಯ ಪ್ರೇಮಿಗಳಿಬ್ಬರು ಹಾಡಹಗಲೇ ರಸ್ತೆಯಲ್ಲಿ ಬೈಕ್ ಮೇಲೆ ಕುಳಿತು ರೊಮ್ಯಾನ್ಸ್ ಮಾಡಿಕೊಂಡು ಚಲಿಸುತ್ತಿರುವ ವೀಡಿಯೋ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದೆ.

    ಯುವ ಪ್ರೇಮಿಗಳಿಬ್ಬರು ಹಾಡಹಗಲೇ ಬೈಕ್ ಮೇಲೆ ರಾಜಾರೋಷವಾಗಿ ತಬ್ಬಿಕೊಂಡು ಹೋಗುತ್ತಿದ್ದಾರೆ. ಬೈಕಿನ (Bike) ಪೆಟ್ರೋಲ್ ಟ್ಯಾಂಕ್ ಮೇಲೆ ಉಲ್ಟಾ ಕುಳಿತ ಯುವತಿ ತನ್ನ ಪ್ರಿಯಕರನನ್ನು ಬಿಗಿದಪ್ಪಿಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಇದೇ ವೇಳೆ ಹಿಂಬಂದಿಯಿಂದ ಬರುತ್ತಿದ್ದ ವಾಹನ ಸವಾರರು ಇಬ್ಬರ ರೊಮ್ಯಾನ್ಸ್ (Romance) ದೃಶ್ಯವನ್ನು ವೀಡಿಯೋ ಮಾಡಿ ಜಾಲತಾಣದಲ್ಲಿ (Social Media) ಹರಿಬಿಟ್ಟಿದ್ದಾರೆ. ಈ ಪ್ರೇಮಿಗಳ ನಡೆಗೆ ಎಲ್ಲೆಡೆ ಆಕ್ಷೇಪ ವ್ಯಕ್ತವಾಗಿದೆ. ಇದನ್ನೂ ಓದಿ: ಹೊಸ ವರ್ಷದಂದೇ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 25 ರೂ. ಏರಿಕೆ

    ಪೊಲೀಸರು ಕೊಟ್ರು ಶಾಕ್: ಆಂಧ್ರಪ್ರದೇಶದ (Andhra Pradesh) ವಿಶಾಖಪಟ್ಟಣಂನ ಸ್ಟೀಲ್ ಪ್ಲಾಂಟ್ ರಸ್ತೆಯಲ್ಲಿ ಬೈಕ್ ಮೇಲೆ ರೊಮ್ಯಾನ್ಸ್ ಮಾಡುತ್ತಾ ತೆರಳುತ್ತಿದ್ದ ಪ್ರೇಮಿಗಳಿಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಯನ್ನು ಇಲ್ಲಿನ ಚೋಡವರಂ ನಿವಾಸಿ ಕೆ.ಶೈಲಜಾ (19) ಹಾಗೂ ಯುವಕ ಅಜಯ್ ಕುಮಾರ್ (22) ಎಂದು ಗುರುತಿಸಲಾಗಿದೆ. ಬಳಿಕ ಯುವಕನ ಬೈಕ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಪ್ರೇಮಿಗಳಿಬ್ಬರು ನಡೆಸಿದ ಹುಚ್ಚಾಟದಿಂದ ರಸ್ತೆ ಸುರಕ್ಷತೆ ನಿಯಮವನ್ನು ಉಲ್ಲಂಘಿಸಿದ್ದು, ಐಪಿಸಿ (IPC) ಸೆಕ್ಷನ್ 336, 279 ಹಾಗೂ ಮೋಟಾರು ವಾಹನ ಕಾಯ್ದೆ (Motor Vehicle Act) ಸೆಕ್ಷನ್ 132, 129ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ವಿಶಾಖಪಟ್ಟಣಂ ಪೊಲೀಸ್ ಆಯುಕ್ತ ಸಿ.ಎಚ್. ಶ್ರೀಕಾಂತ್ ತಿಳಿಸಿದ್ದಾರೆ. ಅಲ್ಲದೇ ನಾಗಕರಿಕರು ವಾಹನ ಚಲಾಯಿಸುವಾಗ ಸಂಚಾರ ನಿಯಮ ಪಾಲನೆ ಮಾಡುವಂತೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಬೈಕ್ ಟ್ಯಾಂಕ್ ಮೇಲೆ ಕುಳಿತು ಪ್ರೇಮಿಗಳ ಲಿಪ್‍ಲಾಕ್ – ಲವರ್ಸ್ ಜಾಲಿ ರೈಡ್ ವೀಡಿಯೋ ವೈರಲ್

    lovers

    ಈ ಹಿಂದೆ ದೆಹಲಿಯಲ್ಲಿ ರಾತ್ರಿ ವೇಳೆ ಪ್ರೇಮಿಗಳಿಬ್ಬರು ನಡು ರಸ್ತೆಯಲ್ಲಿ ರೊಮ್ಯಾನ್ಸ್ ಮಾಡಿಕೊಂಡು ಹೋಗುತ್ತಿದ್ದದ್ದು, ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲೂ ಇಂತಹದ್ದೇ ಕೇಸ್ ಬೆಳಕಿಗೆ ಬಂದಿತ್ತು.

    Live Tv
    [brid partner=56869869 player=32851 video=960834 autoplay=true]

  • IIT ವಿದ್ಯಾರ್ಥಿನಿ ಮೈ-ಕೈ ಮುಟ್ಟಿ ಲೈಂಗಿಕ ಕಿರುಕುಳ – ಪೊಲೀಸ್ ಕಾನ್‌ಸ್ಟೇಬಲ್ ಸಸ್ಪೆಂಡ್

    IIT ವಿದ್ಯಾರ್ಥಿನಿ ಮೈ-ಕೈ ಮುಟ್ಟಿ ಲೈಂಗಿಕ ಕಿರುಕುಳ – ಪೊಲೀಸ್ ಕಾನ್‌ಸ್ಟೇಬಲ್ ಸಸ್ಪೆಂಡ್

    ಮುಂಬೈ: 19 ವರ್ಷದ ಐಐಟಿ ವಿದ್ಯಾರ್ಥಿನಿಯ (IIT Student) ಮೈ-ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 30 ವರ್ಷದ ಪೊಲೀಸ್ ಕಾನ್‌ಸ್ಟೇಬಲ್‌ (Police Constable)  ಒಬ್ಬನನ್ನ ಅಮಾನತುಗೊಳಿಸಿರುವ ಘಟನೆ ಮುಂಬೈನ (Mumbai) ಸಂಪದ ಪಾಮ್ ಬೀಚ್ ಬಳಿ ನಡೆದಿದೆ.

    ಪೊಲೀಸ್ ಕಾನ್‌ಸ್ಟೇಬಲ್ ಕುಡಿತ ಮತ್ತಿನಲ್ಲಿ ವಿದ್ಯಾರ್ಥಿನಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಆಕೆಯನ್ನು ಬೈಕ್‌ನಲ್ಲಿ ಕೂರುವಂತೆ ಒತ್ತಾಯಿಸಿದ್ದಾನೆ ಎಂದು ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪೊವೈ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಸದ್ಯ ಪೊಲೀಸ್ ಕಾನ್ಸ್ಸ್ಟೇಬಲ್‌ನನ್ನ ಅಮಾನತುಗೊಳಿಸಿದ್ದು, ನವಿ ಮುಂಬೈ ಪೊಲೀಸ್ ಆಯಕ್ತ ಮಿಲಿಂದ್ ಭರಾಂಬೆ ಘಟನೆ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಹೊಸ ವರ್ಷಾಚರಣೆ ನಡುವೆ ಮೈಮರೆತ ಪ್ರೇಮಿಗಳು – ರಸ್ತೆ ಬ್ಲಾಕ್‍ಮಾಡಿ ನೋಡ್ಕೊಂಡು ನಿಂತಿದ್ದವರ ಮೇಲೆ ಲಾಠಿಚಾರ್ಜ್

    CRIME COURT

    ನಡೆದಿದ್ದೇನು?
    ಸಂತ್ರಸ್ತೆಯು ಶುಕ್ರವಾರ ಬೆಳಗ್ಗಿನ ಜಾವ 3:15ರ ವೇಳೆಗೆ ಸಂಪದ ಪಾಮ್ ಬೀಚ್ ರಸ್ತೆಯಲ್ಲಿರುವ ಭೂಮಿರಾಜ್ ಕೋಸ್ಟರಿಕಾ ಬಿಲ್ಡಿಂಗ್‌ನಲ್ಲಿ ತನ್ನ ಸ್ನೇಹಿತನೊಂದಿಗೆ ಇದ್ದಳು. ಈ ವೇಳೆ ಅಲ್ಲಿಗೆ ಕಾನ್‌ಸ್ಟೇಬಲ್‌ ದೀಪಕ್ ರಾಥೋಡ್ ತನ್ನ ಬೈಕ್ ನಿಲ್ಲಿಸಿ, ಇಬ್ಬರೂ ಮಾತನಾಡಿದ್ದನ್ನು ಕೇಳಿಸಿಕೊಂಡಿದ್ದಾನೆ. ಬಳಿಕ ಆಕೆಯ ಮೈ-ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಆಕೆಯನ್ನು ತನ್ನ ಬೈಕ್‌ನಲ್ಲಿ ಕೂರುವಂತೆ ಒತ್ತಾಯಿಸಿದ್ದಾನೆ. ಇದರಿಂದ ಕೋಪಗೊಂಡು ಆಕೆ ಮತ್ತು ಅವಳ ಸ್ನೇಹಿತ ಜೋರಾಗಿ ಗಲಾಟೆ ಮಾಡಿದಾಗ ಪೊಲೀಸ್ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ಆಧುನಿಕ ಭಾರತದ ಪಿತಾಮಹ ದೇಶಕ್ಕಾಗಿ ಏನ್ ಮಾಡಿದ್ದಾರೆ – ನಿತೀಶ್ ಕುಮಾರ್ ಪ್ರಶ್ನೆ

    KILLING CRIME

    ಈ ಬಗ್ಗೆ ಸಂಪದ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರು ನಿರಾಕರಿಸಿದ್ದಾರೆ. ನಂತರ ಆಕೆ ಪೊವೈ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಥೋಡ್ ವಿರುದ್ಧ ಐಪಿಸಿ (IPC) ಸೆಕ್ಷನ್ 354 (ಲೈಂಗಿಕ ದೌರ್ಜನ್ಯ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ವಿದ್ಯಾರ್ಥಿನಿಗೆ ಕಿಸ್ ಕೊಟ್ಟು ಯಾರಿಗೂ ಹೇಳ್ಬೇಡ ಎಂದ ಶಿಕ್ಷಕನ ವಿರುದ್ಧ ಕೇಸ್

    ವಿದ್ಯಾರ್ಥಿನಿಗೆ ಕಿಸ್ ಕೊಟ್ಟು ಯಾರಿಗೂ ಹೇಳ್ಬೇಡ ಎಂದ ಶಿಕ್ಷಕನ ವಿರುದ್ಧ ಕೇಸ್

    ಚಿಕ್ಕೋಡಿ: ಸ್ಥಳೀಯ ಖಾಸಗಿ ಶಿಕ್ಷಣ ಸಂಸ್ಥೆಯ (Private Educational Institution) ಪ್ರೌಢ ಶಾಲೆಯ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕನೊಬ್ಬ (Teacher) ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನಡೆದಿದ್ದು, ಕಾಮುಕ ಶಿಕ್ಷಕನ ವಿರುದ್ಧ ಕೇಸ್ ದಾಖಲಾಗಿದೆ.

    ಪಟ್ಟಣದ ಖಾಸಗಿ ಪ್ರೌಢ ಶಾಲೆಯ ಕನ್ನಡ ಮಾಧ್ಯಮದ ಶಿಕ್ಷಕ ಬಿ.ಆರ್. ಬಾಡಕರ 10ನೇ ತರಗತಿಯ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಡಿ.23 ರಂದು ಶಿಕ್ಷಕನ ವಿರುದ್ಧ ದೂರು ನೀಡಿದ್ದಾಳೆ. ಇದನ್ನೂ ಓದಿ: ಹಾಸನ ಜೆಡಿಎಸ್ ಕಾರ್ಯಕರ್ತರಿಗೆ ಮೈಸೂರಿನಲ್ಲಿ ಭರ್ಜರಿ ಬಾಡೂಟ

    ಅಲ್ಲದೇ ಕಾಮುಕ ಶಿಕ್ಷಕ ಬಾಡಕರ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯವನ್ನೂ ನಡೆಸಿದ್ದಾನೆ. ಈ ವಿಷಯ ಯಾರಿಗಾದ್ರೂ ಹೇಳಿದ್ರೆ ಇಂಟರ್‌ನಲ್ ಅಂಕಗಳನ್ನ ಕಡಿತಗೊಳಿಸೋದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಶಿಕ್ಷಕನ ಈ ಕೃತ್ಯಕ್ಕೆ ಸಹಕರಿಸಿದ ಮತ್ತೊಬ್ಬ ಶಿಕ್ಷಕ ಕೆ.ಎಂ ಕೋಳಿ ವಿರುದ್ಧವೂ ದೂರು ನೀಡಲಾಗಿತ್ತು. ಇದನ್ನೂ ಓದಿ: ವಿದ್ಯಾರ್ಥಿನಿಯರು ಹಾಜರಾಗದಿದ್ರೆ ನಮಗೂ ಉನ್ನತ ಶಿಕ್ಷಣ ಬೇಡ – ತಾಲಿಬಾನ್‌ಗೆ ವಿದ್ಯಾರ್ಥಿಗಳಿಂದ ಎಚ್ಚರಿಕೆ

    ಈ ಹಿನ್ನೆಲೆಯಲ್ಲಿ ಆರೋಪಿಗಳ (Accused) ವಿರುದ್ಧ ಸಂಕೇಶ್ವರ ಪೋಲಿಸ್ ಠಾಣೆಯಲ್ಲಿ (Police Station) ಐಪಿಸಿ (IPC) ಸೆಕ್ಷನ್ 354 (A), 109, 506 ಅಡಿಯಲ್ಲಿ, ಪೋಕ್ಸೋ (POCSO Act) ಹಾಗೂ ಎಸ್ಸಿ-ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ-2015ರ ಅಡಿಯಲ್ಲಿ ಕೇಸ್‌ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • SC-ST ಕಾಯ್ದೆಯಡಿ ಅಮಾಯಕರು ಸುಳ್ಳು ಪ್ರಕರಣಗಳಿಗೆ ಬಲಿಯಾಗ್ತಿದ್ದಾರೆ : ಕೇರಳ ಹೈಕೋರ್ಟ್

    SC-ST ಕಾಯ್ದೆಯಡಿ ಅಮಾಯಕರು ಸುಳ್ಳು ಪ್ರಕರಣಗಳಿಗೆ ಬಲಿಯಾಗ್ತಿದ್ದಾರೆ : ಕೇರಳ ಹೈಕೋರ್ಟ್

    ತಿರುನಂತರಪುರಂ: ಎಸ್ಸಿ-ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ (SC-ST (POA) Act) ಅಡಿಯಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಪರಿಗಣಿಸುವಾಗ ಎಚ್ಚರಿಕೆಯಿಂದ ವಿಶ್ಲೇಷಣೆ ಮಾಡಬೇಕು ಎಂದು ಕೇರಳ ಹೈಕೋರ್ಟ್ (Kerala High Court) ಸೂಚಿಸಿದೆ.

    ಅನೇಕ ಅಮಾಯಕರು ಸುಳ್ಳು ಪ್ರಕರಣಗಳಿಗೆ ಬಲಿಯಾಗುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಆದ್ದರಿಂದ ಎಸ್ಸಿ-ಎಸ್ಟಿ ಕಾಯ್ದೆ ಅಡಿಯ ಪ್ರಕರಣಗಳು ಬಂದಾಗ ನ್ಯಾಯಾಲಯಗಳು (Court) ಹೆಚ್ಚಿನ ವಿವರಗಳಿಗೆ ಗಮನ ಕೊಡಬೇಕು ಎಂದು ನ್ಯಾಯಮೂರ್ತಿ ಎ. ಬದ್ರುದ್ದೀನ್ ಅವರಿದ್ದ ಏಕಸದಸ್ಯ ಪೀಠ ಹೇಳಿದೆ. ಇದನ್ನೂ ಓದಿ: ಝಿಕಾ ಆತಂಕ – ಕಾಂಡೋಮ್ ಜಾಗೃತಿ ಬಳಿಕ ಗರ್ಭಿಣಿಯರ ಮೇಲೆ ತೀವ್ರ ನಿಗಾ

    ಎಸ್ಸಿ-ಎಸ್ಟಿ ಕಾಯ್ದೆ (ದೌರ್ಜನ್ಯ ತಡೆ) ಅಡಿಯಲ್ಲಿ ಅನೇಕ ಮುಗ್ಧರು ಸುಳ್ಳು ಪ್ರಕರಣಗಳಿಗೆ ಬಲಿಯಾಗುತ್ತಿರುವುದು ಆಘಾತಕಾರಿ ಘಟನೆ. ಆದ್ದರಿಂದ ನ್ಯಾಯಾಲಯಗಳು ಪ್ರಕರಣಗಳನ್ನು ಮೂಲದಿಂದ ವಿಶ್ಲೇಷಣೆ ಮಾಡುವ ಅಗತ್ಯವಿದೆ. ಪ್ರಕರಣದ ಹುಟ್ಟು, ಅಪರಾಧದ ನೋಂದಣಿಯಾಗುವುದಕ್ಕೂ ಮುಂಚಿನ ಪೂರ್ವಕಥೆಗಳು, ದೂರುದಾರ ಮತ್ತು ಆರೋಪಿ (Accused) ನಡುವಿನ ದ್ವೇಷದ ಅಸ್ತಿತ್ವ ಈ ಎಲ್ಲ ಅಂಶಗಳನ್ನು ಉಲ್ಲೇಖಿಸಬೇಕು. ಜೊತೆಗೆ ಜಾಮೀನು ಅರ್ಜಿ ಪರಿಗಣಿಸುವಾಗ ಹಿಂದಿನ ವಿವಾದಗಳು, ಪ್ರಕರಣಗಳು ಹಾಗೂ ದೂರುಗಳನ್ನು ಪರಿಗಣಿಸಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

    ವಿಶೇಷ ನ್ಯಾಯಾಲಯ ತನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ಸಮಯದಲ್ಲಿ ಕೋರ್ಟ್ ಈ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದೆ. ಇದನ್ನೂ ಓದಿ: ತನ್ನ ಚುನಾವಣೆಯ ಗೆಲುವಿನ ರಹಸ್ಯ ರಿವೀಲ್ ಮಾಡಿದ ಮೋದಿ

    court order law

    ಏನಿದು ಪ್ರಕರಣ?
    ಬ್ಯಾಂಕ್‌ಗೆ ಹೋದಾಗ ಅಲ್ಲಿದ್ದ ಮಹಿಳಾ ಉದ್ಯೋಗಿ ತನ್ನನ್ನು ಜಾತಿ ಹೆಸರಿನಿಂದ ನಿಂದಿಸಿದ್ದಾಳೆ ಎಂದು ಆರೋಪಿಸಿ ಎಸ್ಸಿ-ಎಸ್ಟಿ ಕಾಯ್ದೆ (ದೌರ್ಜನ್ಯ ತಡೆ) ಅಡಿ ಕೇಸ್ ವ್ಯಕ್ತಿಯೊಬ್ಬರು ಪ್ರಕರಣ ದಾಖಲಿಸಿದ್ದರು. ಆದರೆ ದೂರುದಾರ ವ್ಯಕ್ತಿ ಎಸ್ಸಿ-ಎಸ್ಟಿ ಸಮುದಾಯಕ್ಕೆ ಸೇರಿದ ವ್ಯಕ್ತಿಯಾಗಿರಲಿಲ್ಲ. ಮಹಿಳೆಯೊಂದಿಗೆ ಕೆಲಸ ಮಾಡುತ್ತಿದ್ದವರಲ್ಲಿ ಒಬ್ಬರಾಗಿದ್ದರು. ಪದೇ-ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದರಿಂದ ಮಹಿಳೆ ಪೊಲೀಸ್ ದೂರು ದಾಖಲಿಸಿದ್ದರು. ಈ ಲೈಂಗಿಕ ಕಿರುಕುಳದ ದೂರನ್ನು ಹಿಂತೆಗೆದುಕೊಳ್ಳುವಂತೆ ಬೆದರಿಸಲು ಮಾಡಿದ ಪ್ರಯತ್ನಗಳಲ್ಲಿ ಇದೂ ಒಂದಾಗಿದೆ ಎಂದು ಮಹಿಳಾ ಪರ ವಕೀಲರು ವಾದಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಗ್ಯಾಂಗ್ ರೇಪ್ – ಮಹಿಳೆಯ ಖಾಸಗಿ ಭಾಗಕ್ಕೆ ಸಿಗರೇಟ್‌ನಿಂದ ಸುಟ್ಟು ವಿಕೃತಿ

    ಗ್ಯಾಂಗ್ ರೇಪ್ – ಮಹಿಳೆಯ ಖಾಸಗಿ ಭಾಗಕ್ಕೆ ಸಿಗರೇಟ್‌ನಿಂದ ಸುಟ್ಟು ವಿಕೃತಿ

    ಮುಂಬೈ: ಮಹಿಳೆಯೊಬ್ಬರ (Women) ಮನೆಗೆ ನುಗಿದ್ದ ಮೂವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಹರಿತವಾದ ಕತ್ತಿಯಿಂದ ಹಲ್ಲೆ ಮಾಡಿ, ಸಿಗರೇಟ್ (Cigarettes) ನಿಂದ ಆಕೆಯ ಖಾಸಗಿ ಭಾಗಗಳನ್ನು ಸುಟ್ಟು ವಿಕೃತಿ ಮೆರೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    CRIME COURT

    ಮುಂಬೈನ ಕುರ್ಲಾದಲ್ಲಿರುವ 42 ವರ್ಷದ ಮಹಿಳೆ ಮೇಲೆ ಅತ್ಯಾಚಾರ (Gang Rape) ನಡೆದಿದ್ದು, ಹರಿತವಾದ ಆಯುಧಗಳಿಂದ ಮಹಿಳೆಗೆ ಕಿರುಕುಳ ನೀಡಲಾಗಿದೆ. ಅತ್ಯಾಚಾರ ಎಸಗಿದ ಕಾಮುಕರು ಹಾಗೂ ಸಂತ್ರಸ್ತೆ ಒಂದೇ ಪ್ರದೇಶದವರಾಗಿದ್ದರು ಎಂದು ಪೊಲೀಸರು (Mumbai Police) ತಿಳಿಸಿದ್ದಾರೆ. ಇದನ್ನೂ ಓದಿ: ತುರಹಳ್ಳಿ ಫಾರೆಸ್ಟ್‌ನಲ್ಲಿ ಆಪರೇಷನ್ ಚಿರತೆ- ಬೆಂಗ್ಳೂರಿನಲ್ಲೂ `ರುದ್ರಪ್ರಯಾಗ’ದ ಥ್ರಿಲ್ಲರ್ ಸ್ಟೋರಿ

    CRIME (1)

    ವಿಕೃತ ಮನಸ್ಥಿತಿ: ಮಹಿಳೆ ಒಂಟಿಯಾಗಿರುವುದನ್ನು ನೋಡಿಕೊಂಡ ಕಾಮುಕರು ಒಬ್ಬೊಬ್ಬರಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿ, ಮನಸ್ಸೋ ಇಚ್ಚೆ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೇ ಆಕೆಯ ಖಾಸಗಿ ಭಾಗಗಳನ್ನು ಸಿಗರೇಟ್‌ನಿಂದ ಸುಟ್ಟಿದ್ದಾರೆ. ಎದೆ ಭಾಗದ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ಮಾಡಿದ್ದಾರೆ. ಅದರಲ್ಲೊಬ್ಬ ಕೃತ್ಯವನ್ನೂ ವೀಡಿಯೋ ಮಾಡಿಕೊಂಡಿದ್ದು, ಪೊಲೀಸರಿಗೆ ಹೇಳಿದ್ರೆ ಜಾಲತಾಣದಲ್ಲಿ (Social Media) ವೀಡಿಯೋ ಹರಿಯಬಿಡೋದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಘಟನೆ ನಡೆದ ಒಂದೆರಡು ದಿನಗಳ ನಂತರ ಮಹಿಳೆ ನೆರೆಯವರೊಂದಿಗೆ ಕಷ್ಟ ವಿವರಿಸಿದ್ದಾಳೆ. ನಂತರ ಎನ್‌ಜಿಒ ಸಂಸ್ಥೆಯೊಂದು ಸಂಪರ್ಕಿಸಿ ಆಕೆಗೆ ಧೈರ್ಯ ತುಂಬಿದೆ. ನಂತರ ಮಹಿಳೆ ಕುರ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಇದನ್ನೂ ಓದಿ: ಇಕ್ಬಾಲ್ ಅನ್ಸಾರಿ ಹನುಮ ಮಾಲಾಧಾರಿಗಳಿಗೆ ಸ್ವಾಗತ ಕೋರಿ ಬ್ಯಾನರ್ – ಶ್ರೀರಾಮಸೇನೆ ಆಕ್ಷೇಪ

    Crime-Scene

    ಅತ್ಯಾಚಾರ ಎಸಗಿದ ಮೂವರು ಕಾಮುಕರ ವಿರುದ್ಧ ಐಪಿಸಿ (IPC) ಸೆಕ್ಷನ್ 376 (ಅತ್ಯಾಚಾರ), 376 ಡಿ (ಸಾಮೂಹಿಕ ಅತ್ಯಾಚಾರ), 377 (ಅಸ್ವಾಭಾವಿಕ ಲೈಂಗಿಕತೆ), 324 (ಅಪಾಯಕಾರಿ ಆಯುಧದಿಂದ ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು) ಹಾಗೂ ಇತರ ಅಪರಾಧಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು (Mumbai Police) ಶೋಧ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಯಾವುದೇ ಹುಡ್ಗಿಯನ್ನ 14 ಸೆಕೆಂಡಿಗಿಂತ ಜಾಸ್ತಿ ಗುರಾಯಿಸಿದ್ರೆ, ನೋಡಿ ಕವಿತೆ ಹೇಳಿದ್ರೆ ಕೇಸ್

    ಯಾವುದೇ ಹುಡ್ಗಿಯನ್ನ 14 ಸೆಕೆಂಡಿಗಿಂತ ಜಾಸ್ತಿ ಗುರಾಯಿಸಿದ್ರೆ, ನೋಡಿ ಕವಿತೆ ಹೇಳಿದ್ರೆ ಕೇಸ್

    ನವದೆಹಲಿ: ಯಾವುದೇ ಹುಡುಗಿ ಅಥವಾ ಮಹಿಳೆಯನ್ನ 14 ಸೆಕೆಂಡ್‌ಗಿಂತ ಹೆಚ್ಚು ಕಾಲ ಗುರಾಯಿಸಿದ್ರೆ, ಅಶ್ಲೀಲ ಸನ್ನೆ ಮಾಡಿದ್ರೆ, ಹಾಡು ಅಥವಾ ಕವಿತೆ ಹೇಳಿದ್ರೆ ಐಪಿಸಿ (IPL) ಸೆಕ್ಷನ್ ಅಡಿಯಲ್ಲಿ ಬಂಧಿಸಬಹುದಾಗಿದೆ ಎಂದು ನ್ಯಾಷನಲ್ ಕ್ರೈಂ ಇನ್ವೆಷ್ಟಿಗೇಶನ್ ಬ್ಯೂರೋ (NCIB) ಹೆಸರಿನ ಸರ್ಕಾರೇತರ ಸಂಸ್ಥೆಯೊಂದು ತಿಳಿಸಿದೆ.

    ನ್ಯಾಷನಲ್ ಕ್ರೈಂ ಇನ್ವೆಷ್ಟಿಗೇಶನ್ ಬ್ಯೂರೋ ಹೆಸರಿನ ಎನ್‌ಜಿಒ (NGO) ಸಂಸ್ಥೆ ಈ ಕುರಿತು ಟ್ವೀಟ್ ಮಾಡಿದ್ದು, ಯಾವುದೇ ಹುಡುಗಿ ಅಥವಾ ಮಹಿಳೆಯನ್ನ 14 ಸೆಕೆಂಡ್‌ಗಿಂತಲೂ ಹೆಚ್ಚುಕಾಲ ಗುರಾಯಿಸುವುದು, ಅಶ್ಲೀಲ ಸನ್ನೆ ಮಾಡಿದ್ರೆ, ಹಾಡು ಅಥವಾ ಕವಿತೆ ಹೇಳುವುದು ಭಾರತೀಯ ದಂಡ ಸಂಹಿತೆ ಸೆಕ್ಷನ್ 294 (A) ಮತ್ತು (B) ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಪಠ್ಯ ಸಂದೇಶ ಕಳುಹಿಸುವ ಅಪರಾಧಕ್ಕೆ ಗರಿಷ್ಠ 3 ತಿಂಗಳ ಶಿಕ್ಷೆ ವಿಧಿಸಬಹುದಾಗಿದೆ. ಆದ್ದರಿಂದ ಈ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್ ದಾಖಲಿಸಬಹುದು ಎಂದು ತಿಳಿಸಿದೆ.

    ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ (Social Media) ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದು ಜನರನ್ನು ದಾರಿ ತಪ್ಪಿಸುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿದೆ. ಇದನ್ನೂ ಓದಿ: ನ.30 ರಿಂದ ಪುರುಷ ಸಂತಾನಹರಣ ಚಿಕಿತ್ಸಾ ಶಿಬಿರ – ಚಿಕಿತ್ಸೆಗುಂಟು 1,100 ರೂ. ಪ್ರೋತ್ಸಾಹಧನ

    ಎನ್‌ಸಿಐಬಿ ಕೇಂದ್ರಕಚೇರಿ ಹೆಸರಿನಲ್ಲಿ ಖಾತೆ ಪರಿಶೀಲನೆ ಆಗಿದೆ. ಇದರ ಲೋಗೋ ಪೊಲೀಸ್ ಇಲಾಖೆಯ ಲೋಗೋವನ್ನೇ ಹೋಲುತ್ತದೆ. ಎನ್‌ಜಿಒ ಸಂಸ್ಥೆ ಎಂಬುದನ್ನು ತನ್ನ ಟೈಮ್‌ಲೈನ್‌ನಲ್ಲಿ ಹೇಳಿಕೊಂಡಿದೆ. ಹೀಗಾಗಿ ಇದು ಸರ್ಕಾರದ ಆದೇಶವೆಂದು ಸಾಮಾಜಿಕ ಜಾಲತಾಣ ಬಳಕೆದಾರರು ಗೊಂದಲಕ್ಕೊಳಗಾಗಿದ್ದಾರೆ. ಇದನ್ನೂ ಓದಿ: ಅಶ್ಲೀಲ ವೀಡಿಯೋ ಕಳುಹಿಸಿ ಮುಸ್ಲಿಮ್‌ ಯುವಕರ ತಲೆಕೆಡಿಸಿದ್ದ ಶಾರೀಕ್‌

    ಸೆಕ್ಷನ್ ಹೇಳೋದೇನು?
    ಯಾವುದೇ ಒಬ್ಬ ವ್ಯಕ್ತಿಯು ಮತ್ತೊಬ್ಬರಿಗೆ ಕಿರುಕುಳ ಉಂಟಾಗುವ ಹಾಗೆ ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಕೃತ್ಯವನ್ನು ಮಾಡಿದರೆ, ಅಥವಾ ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಹಾಡುಗಳನ್ನು ಹಾಡಿದರೆ, ಕೇಳಿದರೆ ಅಥವಾ ಉಚ್ಚರಿಸಿದರೆ ಐಪಿಸಿ ಸೆಕ್ಷನ್ 294 ರ ಅಡಿ ಶಿಕ್ಷಾರ್ಹ ಅಪರಾಧವಾಗಿದೆ. ಹಾಗೆಯೇ ಒಬ್ಬ ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಉದ್ದೇವಿರುವ ಶಬ್ಧ, ಸಂಜ್ಞೆ ಅಥವಾ ಕೃತ್ಯಗಳು ಸೆಕ್ಷನ್ 509ರ ಅಡಿ ಶಿಕ್ಷಾರ್ಹ ಅಪರಾಧವಾಗುತ್ತದೆ.

    Live Tv
    [brid partner=56869869 player=32851 video=960834 autoplay=true]