ನವದೆಹಲಿ: 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಪೊಲೀಸರು (Delhi Police) ಬಂಧಿಸಿರುವ ಘಟನೆ ಇಲ್ಲಿನ ಮೌಜ್ಪುರ ಪ್ರದೇಶದ ಮಸೀದಿಯಲ್ಲಿ (Delhi Mosque) ನಡೆದಿದೆ. ಕಳೆದ 2 ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆರೋಪಿ ಮೊಹಮ್ಮದ್ ಅರ್ಮಾನ್ ಎಂದು ಗುರುತಿಸಲಾಗಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಬಂಧಿಸಿದ್ದು ಜಾಫ್ರಾಬಾದ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆ (POCSO Act) ಹಾಗೂ ಐಪಿಸಿ (IPC) ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ನಾವೇನಾದರೂ ಸಿಡಿದೆದ್ದರೆ ನೀವು ಉಳಿಯುವುದಿಲ್ಲ – ಕಾಂಗ್ರೆಸ್ಗೆ ಮುತಾಲಿಕ್ ವಾರ್ನಿಂಗ್
ಕೆಲ ಕಿಡಿಗೇಡಿಗಳು ಮೌಜ್ಪುರ ಪ್ರದೇಶದಲ್ಲಿರುವ ಮಸೀದಿಗೆ ಬಂದಿದ್ದರು. ಅವರು ಮಸೀದಿಯೊಳಗೆ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದರು. ನವೆಂಬರ್ 9 ರಂದು, ಬಾಲಕಿ ತನ್ನ ತರಗತಿ ಮುಗಿದ ನಂತರ ಮಸೀದಿಗೆ ಭೇಟಿ ನೀಡಿದ್ದಳು. ಆಕೆ ಒಂಟಿಯಾಗಿರುವುದು ಕಂಡು ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಸೂರಜ್ಕುಂಡ್: ಭಾರತೀಯ ದಂಡ ಸಂಹಿತೆ (IPC) ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ (CRPC) ಗಳಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶೀಗ್ರವೇ ಸದನದಲ್ಲಿ ಹೊಸ ಕರಡನ್ನು ಮಂಡಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.
ಹರಿಯಾಣದ ಸೂರಜ್ಕುಂಡ್ನಲ್ಲಿ ನಡೆಯುತ್ತಿರುವ ಎರಡು ದಿನಗಳ ಚಿಂತನ ಶಿಬಿರದಲ್ಲಿ ಮಾತನಾಡಿದ ಅವರು, ಭಾರತೀಯ ದಂಡ ಸಂಹಿತೆ (IPC) ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ (CRPC) ಸುಧಾರಿಸುವ ನಿಟ್ಟಿನಲ್ಲಿ ಹಲವು ಸಲಹೆಗಳನ್ನು ಸ್ವೀಕರಿಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಎರಡೂ ಶಾಸನಗಳ ತಿದ್ದುಪಡಿಗೆ ಸಂಬಂಧಿಸಿದಂತೆ ಸದನದಲ್ಲಿ ಹೊಸದಾಗಿ ಕರಡು ಮಂಡಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರೆನ್ಸಿ ನೋಟುಗಳಲ್ಲಿರಲಿ ಗಣೇಶ, ಲಕ್ಷ್ಮೀ ಚಿತ್ರ – ಮೋದಿಗೆ ಕೇಜ್ರಿವಾಲ್ ಪತ್ರ
मोदी सरकार की आतंकवाद के खिलाफ जीरो टॉलरेंस की नीति है। इसके लिए NIA व अन्य एजेंसियों को मजबूत किया गया है।
मोदी सरकार 2024 तक देश के हर राज्य में NIA की शाखा बना कर एक दृढ़ आतंकवाद-रोधी नेटवर्क बनाने की दिशा में काम कर रही है। pic.twitter.com/3utn1fL9DR
ಐಪಿಸಿ, ಸಿಆರ್ಪಿಸಿ ಸುಧಾರಣೆಗಳಿಗಾಗಿ ಸಾಕಷ್ಟು ಸಮಯ ವಿನಿಯೋಗಿಸಿದ್ದು, ಆಳವಾಗಿ ಅಧ್ಯಯನ ಮಾಡಲಾಗುತ್ತಿದೆ. ಭಾರತದಲ್ಲಿ ಕ್ರಿಮಿನಲ್ ಕಾನೂನು (Law) ಸುಧಾರಣೆ ಶಿಫಾರಸ್ಸು ಮಾಡುವಂತೆ ಗೃಹ ಸಚಿವರು 2020ರ ಮೇನಲ್ಲಿ ಐವರು ಸದಸ್ಯರ ಸಮಿತಿಯನ್ನು ರಚಿಸಿದ್ದರು. ದೆಹಲಿಯ ಕಾನೂನು ವಿಶ್ವವಿದ್ಯಾಲಯದ (Delhi Law University) ಕುಲಪತಿ ಪ್ರೊ. ರಣಬೀರ್ ಸಿಂಗ್ ಅವರು ಸಮಿತಿಯ ನೇತೃತ್ವ ವಹಿಸಿದ್ದಾರೆ. ಇದನ್ನೂ ಓದಿ: ದುಷ್ಕರ್ಮಿಗಳಿಂದ 52 ಅಡಿಕೆ ಗಿಡಗಳ ನಾಶ- ಜಮೀನಿನಲ್ಲಿಯೇ ಹೊರಳಾಡಿ ರೈತ ಕಣ್ಣೀರು
ಸಮಿತಿ ರಚಿಸಿದಾಗ ವೈವಿಧ್ಯತೆ ಮತ್ತು ಪಾರದರ್ಶಕತೆ ಕೊರತೆಯ ಹಿನ್ನೆಲೆಯಲ್ಲಿ ವಕೀಲರು, ನಿವೃತ್ತ ನ್ಯಾಯಮೂರ್ತಿಗಳು, ಶಿಕ್ಷಣ ತಜ್ಞರು ಆತಂಕ ವ್ಯಕ್ತಪಡಿಸಿದ್ದರು. ಇದಕ್ಕೆ ಸಮಿತಿಯು ಎಲ್ಲಾ ರೀತಿಯ ಅಭಿಪ್ರಾಯ ಮತ್ತು ಸಲಹೆಗಳನ್ನು ಗೌರವಿಸುವುದಾಗಿ ಹೇಳಿತ್ತು. ಪಾರದರ್ಶಕತೆಯ ದೃಷ್ಟಿಯಿಂದ ಎಲ್ಲಾ ರೀತಿಯ ಮಾಹಿತಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸುವುದಾಗಿ ಹೇಳಿತ್ತು. ಹಾಗಾಗಿ ಸೂಕ್ತ ಸಲಹೆಗಳನ್ನು ಸ್ವೀಕರಿಸಿದ್ದು, ಶೀಘ್ರದಲ್ಲೇ ಕರಡು ಮಂಡಿಸುವುದಾಗಿ ಅವರು ಘೋಷಿಸಿದ್ದಾರೆ.
ಪ್ರತಿ ರಾಜ್ಯದಲ್ಲೂ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕೇಂದ್ರ ಆರಂಭಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಅಮಿತ್ ಶಾ ಮಾಹಿತಿ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಮುಂಬೈ: ಅಪ್ರಾಪ್ತ ಬಾಲಕಿಯನ್ನು `ಐಟಂ’ ಎಂದು ಕರೆದು ಲೈಂಗಿಕವಾಗಿ ಕಿರುಕುಳ ನೀಡಿದ 25 ವರ್ಷದ ಉದ್ಯಮಿಯೊಬ್ಬನಿಗೆ 7 ವರ್ಷಗಳ ಬಳಿಕ 1.5 ವರ್ಷ ಜೈಲು ಶಿಕ್ಷೆ ವಿಧಿಸಿರುವ ಮುಂಬೈ ಕೋರ್ಟ್ (Mumbai Court), ಮಹಿಳೆಯರನ್ನು ಐಟಂ ಎಂದು ಕರೆಯುವಂತಿಲ್ಲ ಎಂದು ರೋಡ್ ರೋಮಿಯೋಗಳಿಗೆ ಖಡಕ್ ಎಚ್ಚರಿಕೆ ನೀಡಿದೆ.
ಮುಂಬೈನ ದಿಂಡೋಶಿಯಲ್ಲಿರುವ ಸೆಷನ್ಸ್ ಕೋರ್ಟ್ನ (Sessions Court) ವಿಶೇಷ ನ್ಯಾಯಾಧೀಶರಾದ ಎಸ್.ಜೆ ಅನ್ಸಾರಿ ಅವರ ನೇತೃತ್ವದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಿತು. ಈ ವೇಳೆ `ಐಟಂ’ ಎಂಬ ಪದವು ಮಹಿಳೆಯರನ್ನು ಲೈಂಗಿಕ ರೀತಿಯಲ್ಲಿ ಆಕ್ಷೇಪಿಸುತ್ತದೆ. ಇದು ಐಪಿಸಿ (IPC) ಸೆಕ್ಷನ್ 354ರ ಅತಿರೇಖದ ವರ್ತನೆಯನ್ನು ಸೂಚಿಸುವ ಅಪರಾಧವಾಗಿದೆ ಎಂದು ಪರಿಗಣಿಸಿದೆ. ಇದನ್ನೂ ಓದಿ: ಮಹಿಳೆಯರ ನಗ್ನ ವೀಡಿಯೋ ಇಟ್ಕೊಂಡು ಬ್ಲಾಕ್ಮೇಲ್ ಮಾಡ್ತಿದ್ದ ಆರೋಪಿ ಅರೆಸ್ಟ್
ಹಾಗಾಗಿ ಅಪ್ರಾಪ್ತ ಬಾಲಕಿಯನ್ನು ಐಟಂ ಎಂದು ಕರೆದ ಉದ್ಯಮಿಯನ್ನು ಐಪಿಸಿ (IPC) ಸೆಕ್ಷನ್ 354 ಹಾಗೂ ಲೈಂಗಿಕ ಅಪರಾಧಗಳು ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಅಪರಾಧಿ ಎಂದು ಘೋಷಿಸಿ, 1.5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ ಮಹಿಳೆಯರನ್ನು (Womens) ರಕ್ಷಿಸಲು ಇಂತಹ ಕಠಿಣ ಅಪರಾಧ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತವಾಗಿದೆ ಎಂದು ನ್ಯಾಯಾಧೀಶರು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ನಿಷೇಧದ ನಡುವೆಯೂ ಪಟಾಕಿ ಸದ್ದು- ಅತಿಯಾದ ವಾಯುಮಾಲಿನ್ಯದಿಂದ ಉಸಿರಾಟಕ್ಕೂ ತೊಂದರೆ
ಆರೋಪಿಯು `ಐಟಂ’ ಎಂಬ ಪದವನ್ನು ಬಳಸುವ ಮೂಲಕ ಆಕೆಯನ್ನು ಸಂಬೋಧಿಸಿದ್ದಾನೆ. ಇದು ಹುಡುಗಿಯರನ್ನು ಅವಹೇಳನಕಾರಿ ಶೈಲಿ ಸಂಬೋಧಿಸುವ ಸಾಮಾನ್ಯ ಪದವಾಗಿದೆ, ಜೊತೆಗೆ ಅತಿರೇಕದ ವರ್ತನೆಯನ್ನು ತೋರುತ್ತದೆ. ಇಂತಹ ಅಪರಾಧಗಳನ್ನು ಕಠಿಣ ಕ್ರಮಗಳ ಮೂಲಕ ನಿಭಾಯಿಸಬೇಕಿದೆ. ಜೊತೆಗೆ ರೋಡ್ ರೋಮಿಯೋಗಳಿಗೆ ತಕ್ಕಪಾಠ ಕಲಿಸುವ ಜೊತೆಗೆ ಮಹುಳೆಯರನ್ನು ರಕ್ಷಿಸಬೇಕಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಮೇಲಿನ ಎಲ್ಲ ಅಂಶಗಳನ್ನು ಪರಿಗಣಿಸಿ ಆರೋಪಿಗೆ 1.5 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಮುಂಬೈನ ದಿಂಡೋಶಿಯಲ್ಲಿರುವ ಸೆಷನ್ಸ್ ಕೋರ್ಟ್ 2015ರಲ್ಲಿ ನಡೆದ ಘಟನೆಗೆ ಈಗ ಶಿಕ್ಷೆ ವಿಧಿಸಿದೆ. 2015ರಂದು ಅಪ್ರಾಪ್ತ ಬಾಲಕಿ ಶಾಲೆಯಿಂದ ಹಿಂದಿರುಗುತ್ತಿದ್ದಾಗ ಉದ್ಯಮಿಯೊಬ್ಬ ಬಾಲಕಿಯನ್ನು ಐಟಂ ಎಂದು ಸಂಬೋಧಿಸಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು, ಇದೀಗ ಕೋರ್ಟ್ ಶಿಕ್ಷೆ ವಿಧಿಸಿದೆ.
Live Tv
[brid partner=56869869 player=32851 video=960834 autoplay=true]
ಭೋಪಾಲ್: ಅತ್ಯಾಚಾರಕ್ಕೀಡಾದ ಸಂತ್ರಸ್ತೆಯನ್ನು ಕೊಲ್ಲದೇ ಜೀವಂತವಾಗಿ ಉಳಿಸಿ ದಯೆ ತೋರಿದ್ದಾನೆ ಎಂಬ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಹೈಕೋರ್ಟಿನ (Madhya Pradesh High Court) ಇಂದೋರ್ ಪೀಠವು ಇತ್ತೀಚೆಗೆ ಅತ್ಯಾಚಾರ ಅಪರಾಧಿಯೋರ್ವನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು 20 ವರ್ಷಗಳ ಕಠಿಣ ಜೈಲು (Jail) ಶಿಕ್ಷೆಗೆ ಇಳಿಸಿದೆ.
ಮೇಲ್ಮನವಿಯನ್ನು ಭಾಗಶಃ ಅನುಮತಿಸಿದ ದ್ವಿಸದಸ್ಯ ಪೀಠವು, ಮಹಿಳೆಯರ ಘನತೆಯ ಬಗ್ಗೆ ಗೌರವವಿಲ್ಲ ಎಂದು ತೋರಿಸುವ 4 ವರ್ಷ ವಯಸ್ಸಿನ ಹೆಣ್ಣುಮಗುವಿನ ಮೇಲೆ ಪೈಶಾಚಿಕ ಕೃತ್ಯ ಎಸಗಿರುವುದು ರಾಕ್ಷಸ ಮನಸ್ಥಿತಿಯನ್ನು ತೋರಿಸುತ್ತದೆ. ಆದರೂ ಜೀವಾವಧಿ ಶಿಕ್ಷೆಗೆ ಈ ಪ್ರಕರಣ ಅರ್ಹವಲ್ಲ. ಸಂತ್ರಸ್ತೆಯನ್ನು ಜೀವಂತ ಬಿಟ್ಟು ದಯೆ ತೋರಿದ್ದಾನೆ. ಆ ಕಾರಣಕ್ಕೆ ಜೀವಾವಧಿ ಶಿಕ್ಷೆಯನ್ನು 20 ವರ್ಷಗಳ ಕಠಿಣ ಜೈಲು ಶಿಕ್ಷೆಗೆ ಇಳಿಸಬಹುದು ಎಂದು ಹೇಳಿದೆ.
12 ವರ್ಷದೊಳಗಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ತನ್ನನ್ನು ದೋಷಿ ಎಂದು ಇಂದೋರ್ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿದಾರ ರಾಮು ಅಲಿಯಾಸ್ ರಾಮ್ಸಿಂಗ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯ ಈ ತೀರ್ಪು ನೀಡಿದೆ.
ಪ್ರಕರಣದಲ್ಲಿ ಅಪರಾಧಿಯು ಸಂತ್ರಸ್ತೆ ಗುಡಿಸಲಿನ ಬಳಿ ಟೆಂಟ್ನಲ್ಲಿ ವಾಸಿಸುತ್ತಿದ್ದನು. ಒಂದು ರೂಪಾಯಿ ಕೊಡುವ ನೆಪದಲ್ಲಿ ಸಂತ್ರಸ್ತೆಯನ್ನು ಆರೋಪಿ ಟೆಂಟ್ಗೆ ಕರೆದಿದ್ದಾನೆ. ಅಲ್ಲಿಯೇ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದಾನೆ. ಬಳಿಕ ಸಂತ್ರಸ್ತೆ ಕೂಗು ಕೇಳಿ ಆಕೆಯ ತಂದೆ ಹಾಗೂ ಅಜ್ಜಿ ಸಹಾಯಕ್ಕೆ ಧಾವಿಸಿದ್ದಾರೆ. ಟೆಂಟ್ ಪ್ರವೇಶಿಸಿದಾಗ ಮಗು ರಕ್ತಸ್ರಾವವಾಗಿ ಬಿದ್ದಿರುವುದು ಹಾಗೂ ಅಪರಾಧಿ ಬೆತ್ತಲೆಯಾಗಿರುವುದನ್ನು ಕಂಡಿದ್ದಾರೆ. ಬಳಿಕ ಆತ ಓಡಿಹೋಗಿದ್ದಾನೆ. ನಂತರ ಬಾಲಕಿ ಇಡೀ ಘಟನೆಯ ಬಗ್ಗೆ ತಂದೆಗೆ ತಿಳಿಸಿದ್ದು, ಆಕೆಯನ್ನು ಪರೀಕ್ಷೆಗಾಗಿ ಆಸ್ಪತ್ರೆಗೆ (Hospital) ಕರೆದೊಯ್ದಾಗ, ವೈದ್ಯರು ಅತ್ಯಾಚಾರ ಆಗಿರುವುದನ್ನು ಖಚಿತಪಡಿಸಿದ್ದರು.
ಬಳಿಕ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ 1989ರ ಸೆಕ್ಷನ್ 3(1)12ರ (SCST Act 1989) ಭಾರತೀಯ ದಂಡ ಸಂಹಿತೆಯ (IPC) ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ನಂತರ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಇದು ವಿಚಾರಣಾ ನ್ಯಾಯಾಲಯಕ್ಕೆ ಬದ್ಧವಾಗಿತ್ತು. ಸಾಕ್ಷ್ಯವನ್ನು ದಾಖಲಿಸಿದ ನಂತರ ಮೇಲ್ಮನವಿದಾರನನ್ನು ಅಪರಾಧಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.
Live Tv
[brid partner=56869869 player=32851 video=960834 autoplay=true]
ಲಕ್ನೋ: ಉತ್ತರಪ್ರದೇಶದ (UttarPradesh) ಸಂಭಾಲ್ನಲ್ಲಿ ನಡೆದ ರ್ಯಾಲಿಯಲ್ಲಿ ಹಿಂದೂಗಳ (Hindu Community) ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಎಐಎಂಐಎಂ (AIMIM) ಅಧ್ಯಕ್ಷ ಶೌಕತ್ ಅಲಿ (Shaukat Ali) ವಿರುದ್ಧ ಕೋಮು ಸೌಹಾರ್ದತೆಗೆ ಧಕ್ಕೆ ತಂದಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
ಶೌಕತ್ ಅಲಿ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 153-A (ಧರ್ಮ, ಜನಾಂಗ, ಜನ್ಮ ಸ್ಥಳ, ಭಾಷೆ, ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು) ಮತ್ತು 295-A (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: 10ರ ಬಾಲಕಿಯನ್ನು ರೇಪ್ ಮಾಡಿ ಕೊಲೆ ಮಾಡಿದ್ದ ವ್ಯಕ್ತಿಗೆ ಮರಣದಂಡನೆ
“We ruled for eight hundred years, Hindus used to bow before us with their hands behind them” : #AIMIM's state president Shaukat Ali. pic.twitter.com/h0eROSALLf
ಶೌಕತ್ ಅಲಿ ಹೇಳಿದ್ದೇನು?: ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶೌಕತ್ ಅಲಿ (Shaukat Ali), 832 ವರ್ಷಗಳ ಕಾಲ ಮುಸ್ಲಿಮರು (Muslims) ಹಿಂದೂಗಳ ಮೇಲೆ ಆಳ್ವಿಕೆ ನಡೆಸಿದರು. ಆಗ ಹಿಂದೂಗಳು ಮುಸ್ಲಿಂ ದೊರೆಗಳ ಮುಂದೆ ಕೈ ಜೋಡಿಸಿ `ಜಿ, ಹುಜೂರ್’ ಎಂದು ತಲೆಬಾಗುತ್ತಿದ್ದರು. ಮುಸ್ಲಿಮರು ಎರಡು ಬಾರಿ ಮದುವೆಯಾಗುತ್ತಾರೆ (Marriage). ಇಬ್ಬರನ್ನೂ ಗೌರವದಿಂದ ನೋಡಿಕೊಳ್ಳುತ್ತಾರೆ. ಆದರೆ ಹಿಂದೂಗಳು ಒಬ್ಬರನ್ನು ಮದುವೆಯಾಗಿ, ಮೂವರು ಪ್ರೇಯಸಿಯರನ್ನ ಇಟ್ಟುಕೊಳ್ಳುತ್ತಾರೆ ಎಂದು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. ಈ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಶಾಲಾ ಪ್ರಾರ್ಥನೆ ವೇಳೆ ಕುಸಿದು ಬಿದ್ದು ಬಾಲಕಿ ಸಾವು!
ಮುಂದುವರಿದು ಮಾತನಾಡಿದ ಅಲಿ, ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೊಂದುತ್ತಾರೆ, ಎರಡು ಮದುವೆಯಾಗುತ್ತಾರೆ ಎಂದು ಹಿಂದೂಗಳು ಆರೋಪಿಸುತ್ತಾರೆ. ನಾವು ಎರಡು ಬಾರಿ ಮದುವೆಯಾಗುತ್ತೇವೆ ನಿಜ. ಆದರೆ ಇಬ್ಬರು ಹೆಂಡತಿಯರಿಗೂ ಗೌರವ ನೀಡುತ್ತೇವೆ. ಆದರೆ ನೀವು ಒಬ್ಬರನ್ನು ಮದುವೆಯಾಗಿ ಮೂವರು ಪ್ರೇಯಸಿಯರನ್ನು ಇಟ್ಟುಕೊಳ್ಳುವುದು ಯಾರಿಗೂ ತಿಳಿದಿಲ್ಲ. ಅವರಲ್ಲಿ ಯಾರಿಗೂ ನೀವು ಗೌರವ ಕೊಡುವುದಿಲ್ಲ ಎಂದು ಕಿಡಿಕಾರಿದರು. ಮುಂದೆ ಬಿಜೆಪಿ ದುರ್ಬಲವಾದಾಗ ಹಿಂದೂಗಳು ಮುಸ್ಲಿಮರ ಹಿಂದೆ ಬರುತ್ತಾರೆ ಎಂದು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: 6 ವರ್ಷದ ಬಾಲಕನ ಕತ್ತು ಸೀಳಿ ನರಬಲಿ ನೀಡಿರುವ ಘಟನೆ ದಕ್ಷಿಣ ದೆಹಲಿಯ (NewDelhi) ಲೋಧಿ ಕಾಲೊನಿಯಲ್ಲಿ ನಡೆದಿದ್ದು, ಇಬ್ಬರು ಆರೋಪಿ (Accused) ಗಳನ್ನು ಪೊಲೀಸರು (Police) ಬಂಧಿಸಿದ್ದಾರೆ.
ಬಿಹಾರ (Bihar) ಮೂಲದ ವಿಜಯ್ ಕುಮಾರ್, ಅಮರ್ ಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳು ಮತ್ತು ಬಾಲಕನ ಪೋಷಕರು ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಒಂದೇ ಕೊಳೆಗೇರಿಯಲ್ಲಿ ವಾಸವಾಗಿದ್ದರು. ವಿಜಯ್ ಮತ್ತು ಅಮರ್ ಅಪರಾಧ ಎಸಗುವಾಗ ಮಾದಕ ವಸ್ತು ಸೇವಿಸಿದ್ದರು. ಪ್ರಸಾದ ಸೇವಿಸಿದ ಬಳಿಕ ಶ್ರೇಯಸ್ಸಾಗಲು ಹುಡುಗನನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡಲು 2 ಕೋಟಿ ರೂ. ಬಿಡುಗಡೆ: ಪ್ರಭು ಚವ್ಹಾಣ್
ಶನಿವಾರ ಊಟ ಮಾಡಿದ ನಂತರ ಭಜನೆ ಕೇಳುತ್ತಿದ್ದೆವು. ರಾತ್ರಿ 10:30ರ ಸುಮಾರಿಗೆ ಬಾಲಕ ತನ್ನ ಶೆಡ್ಗೆ ಹಿಂತಿರುಗುತ್ತಿದ್ದಾಗ ಆರೋಪಿಗಳು ಬಾಲಕನನ್ನು ತಮ್ಮ ಅಡುಗೆ ಸ್ಥಳಕ್ಕೆ ಕರೆದು ಮೊದಲು ತಲೆಯ ಮೇಲೆ ಹಲ್ಲೆ ನಡೆಸಿ ನಂತರ ಕತ್ತು ಸೀಳಿ ಕೊಂದಿದ್ದಾರೆ. ಬಳಿಕ ಮಗನ ಮೃತದೇಹ ಕಂಡು ಗಾಬರಿಗೊಂಡಿದ್ದಾರೆ ಎಂದು ಬಾಲಕನ ತಂದೆ ದೂರಿನಲ್ಲಿ ತಿಳಿಸಿರುವುದಾಗಿ ಉಪ ಪೊಲೀಸ್ ಆಯುಕ್ತ (ದಕ್ಷಿಣ) ಚಂದನ್ ಚೌಧರಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಗಳ ಆಗಮನದ ಖುಷಿಯಲ್ಲಿ ಮೇಘನಾ ರಾಜ್
ಬಳಿಕ ವಿಧಿವಿಜ್ಞಾನ (Forensic Science) ತಜ್ಞರು ಘಟನಾಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಏಮ್ಸ್ (AIIMS) ಟ್ರಾಮಾ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಬಾಲಕನ ತಂದೆಯ ಹೇಳಿಕೆಯನ್ನು ಆಧರಿಸಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 302, 34ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Live Tv
[brid partner=56869869 player=32851 video=960834 autoplay=true]
ಮುಂಬೈ: ಬುರ್ಖಾ (Burqa) ಧರಿಸಿ ಮುಸ್ಲಿಂ ಸಂಪ್ರದಾಯ (Muslim Tradition) ಪಾಲನೆ ಮಾಡದೇ ಇದ್ದುದ್ದಕ್ಕಾಗಿ ಪತ್ನಿಯನ್ನ ಅನೇಕ ಬಾರಿ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಮುಂಬೈನಲ್ಲಿ (Mumbai) ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಟ್ಯಾಕ್ಸಿ ಡ್ರೈವರ್ (Taxi Driver) ಇಕ್ಬಾಲ್ ಶೇಕ್ (36)ನನ್ನು ಬಂಧಿಸಲಾಗಿದೆ. ತನ್ನ ಪತ್ನಿ ಮುಸ್ಲಿಂ ಸಂಪ್ರದಾಯ ಅನುಸರಿಸಲು ನಿರಾಕರಿಸಿದ್ದರಿಂದ ಚಾಕುವಿನಿಂದ ಇರಿದು ಕೊಂದಿದ್ದಾನೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ‘ಆಸ್ಕರ್’ ಗಾಗಿ ಭಾರತದಿಂದ ಕಳುಹಿಸುವ ಸಿನಿಮಾ ಆಯ್ಕೆ ಸಮಿತಿಯಲ್ಲಿ ನಿರ್ದೇಶಕ ಪವನ್ ಒಡೆಯರ್
ಹಿಂದೂ ಮಹಿಳೆ (Hindu Women) ರೂಪಾಲಿ 2019ರಲ್ಲಿ ಮುಸ್ಲಿಂ ಸಮುದಾಯದ ಇಕ್ಬಾಲ್ ಶೇಖ್ನನ್ನು ವಿವಾಹ (Marriage) ವಾದರು. ತಮ್ಮ ಹೆಸರನ್ನು ಜಾರಾ ಎಂದೂ ಬದಲಾಯಿಸಿಕೊಂಡಿದ್ದರು. ದಂಪತಿಗಳಿಗೆ 2020ರಲ್ಲಿ ಒಂದು ಮಗು ಜನಿಸಿತ್ತು. ಕಳೆದ ಕೆಲವು ತಿಂಗಳಿನಿಂದ ಇಕ್ಬಾಲ್ ಶೇಖ್ ಕುಟುಂಬಸ್ಥರು ಬುರ್ಖಾ ಧರಿಸುವಂತೆ ರೂಪಾಲಿಗೆ ಒತ್ತಡ ಹೇರುತ್ತಿದ್ದರಿಂದ ಆಕೆ ತನ್ನ ಮಗನೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿರುವುದಾಗಿ ಪೊಲೀಸ್ ಅಧಿಕಾರಿ ವಿಲಾಸ್ ರಾಥೋಡ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಟೀಲ್ ಒಬ್ಬ ವಿದೂಷಕ, ಪಾಪ ಇನ್ನೂ ಮೆಚ್ಯೂರಿಟಿ ಇಲ್ಲ: ಸಿದ್ದರಾಮಯ್ಯ
ನಿನ್ನೆ (ಸೆ.26) ವಿಚ್ಛೇದನ ಕೇಳುವುದಕ್ಕಾಗಿ ಇಕ್ಬಾಲ್, ರೂಪಾಲಿಯನ್ನು ಮನೆಗೆ ಕರೆದಿದ್ದನು. ನಂತರ ಮಗು ಪಾಲನೆ ಮಾಡುವ ವಿಚಾರಕ್ಕೆ ಇಬ್ಬರ ನಡುವೆ ರಾತ್ರಿ 10 ಗಂಟೆ ಸುಮಾರಿಗೆ ಜಗಳ ನಡೆದಿದೆ. ಇದರಿಂದ ಕೋಪಗೊಂಡ ಪತಿ ಆಕೆಯನ್ನು ಎಳೆದೊಯ್ದು ಚಾಕುವಿನಿಂದ ಅನೇಕ ಬಾರಿ ಇರಿದಿದ್ದಾನೆ. ಇದರಿಂದ ಪತ್ನಿ ಸ್ಥಳದಲ್ಲೇ ಮೃತಪಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಐಪಿಸಿ ಸೆಕ್ಷನ್ (IPC Section) 302 (ಕೊಲೆ ಅಪರಾಧ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Live Tv
[brid partner=56869869 player=32851 video=960834 autoplay=true]
ಡೆಹ್ರಾಡೂನ್: ಫೇಸ್ಬುಕ್ನಲ್ಲಿ (FaceBook) ಪರಿಚಯವಾದ ಯುವಕನೊಬ್ಬ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ (Marriage) ಭರವಸೆ ನೀಡಿ, ಆಕೆಯಿಂದ ಖಾಸಗಿ ವೀಡಿಯೋಗಳನ್ನು (Private Video) ಕಳಿಸಿಕೊಂಡ ನಂತರ ತನ್ನ ಸ್ನೇಹಿತರೊಂದಿಗೂ ದೈಹಿಕ ಸಂಪರ್ಕ ಬೆಳೆಸುವಂತೆ ಕಿರುಕುಳ ನೀಡಿರುವ ಘಟನೆ ಉತ್ತರಾಖಂಡದ ಉಧಮ್ ಸಿಂಗ್ ನಗರದಲ್ಲಿ ನಡೆದಿದೆ.
ಯುವಕ ತನ್ನೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ಹುಡುಗಿ ನೀಡಿದ ದೂರಿನ ಮೇರೆಗೆ ದಿನೇಶಪುರ ಪೊಲೀಸ್ (Uttarakhand Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಐಪಿಸಿ ಸೆಕ್ಷನ್ ((IPC Section) 376 (ಬಲವಂತದ ಸಂಭೋಗ), 304 (ಕೊಲೆ ಎಂದು ಪರಿಗಣಿಸಲಾದ ಆಪರಾಧಿಕ ಮಾನವ ಹತ್ಯೆ) ಮತ್ತು 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಏನಿದು ಫೇಸ್ಬುಕ್ ಪ್ರೇಮ ಪರಿಚಯ?
3 ವರ್ಷಗಳ ಹಿಂದೆ ಫೇಸ್ಬುಕ್ನಲ್ಲಿ (FaceBook) ಯುವಕ ಹಾಗೂ ಹುಡುಗಿಯ ಪರಿಚಯವಾಗಿದೆ. ನಂತರ ಸ್ನೇಹ ಪ್ರೀತಿಗೆ ತಿರುಗಿದೆ. ಇದೇ ವೇಳೆ ಯುವಕ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ, ಆಕೆ ಸ್ನಾನ ಗೃಹದಲ್ಲಿ ನಿಂತು ಖಾಸಗಿ ವೀಡಿಯೋ ಹಾಗೂ ಫೋಟೋಗಳನ್ನು ಕಳುಹಿಸುವಂತೆ ಕೇಳಿಕೊಂಡಿದ್ದಾನೆ. ಆಕೆ ಎಂಎಂಎಸ್ (MMS) ನಲ್ಲಿ ಫೋಟೋ ವೀಡಿಯೋಗಳನ್ನು ಕಳುಹಿಸಿದ ನಂತರ ಬ್ಲಾಕ್ ಮೇಲ್ (Blackmail) ಮಾಡಲು ಶುರು ಮಾಡಿದ್ದಾನೆ. ಅಲ್ಲದೇ ಮದುವೆ (Marriage) ಪ್ರಸ್ತಾಪ ನಿರಾಕರಿಸಿ ತನ್ನ ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಬೆಳೆಸುವಂತೆ ಒತ್ತಡ ಹೇರಲು ಮುಂದಾಗಿದ್ದಾನೆ. ಇದಕ್ಕೆ ಹುಡುಗಿ ಒಪ್ಪದೇ ಇದ್ದರಿಂದ ಆಕೆಯ ಖಾಸಗಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ (Social Media) ಹರಿಯಬಿಟ್ಟಿದ್ದಾನೆ. ಇದರಿಂದ ಮನನೊಂದ ಹುಡುಗಿ ಪೋಷಕರಿಗೆ ವಿಷಯ ತಿಳಿಸಿ ದೂರು ದಾಖಲಿಸಿದ್ದಾಳೆ.
ಉತ್ತರಾಖಂಡದ ಉಧಮ್ ಸಿಂಗ್ ನಗರದ ದಿನೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Live Tv
[brid partner=56869869 player=32851 video=960834 autoplay=true]
ರಾಯಪುರ: ಸಮಯಕ್ಕೆ ಸರಿಯಾಗಿ ಅಡುಗೆ ಮಾಡಲಿಲ್ಲವೆಂಬ ಕಾರಣಕ್ಕೆ ಸ್ವತಃ ಪೋಷಕರೇ 12 ವರ್ಷದ ಮಗಳನ್ನು ಕೊಂದು ಮೃತದೇಹವನ್ನು ಕಾಡಿನಲ್ಲಿ ಎಸೆದಿದ್ದ ಘಟನೆ ಛತ್ತಿಸ್ಗಢದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ತಂದೆ ವಿಶ್ವನಾಥ್ ಎಕ್ಕಾ ಮತ್ತು ಅವರ ಪತ್ನಿ ದಿಲ್ಸಾ ಎಕ್ಕಾ ಇಬ್ಬರನ್ನು ಬಂಧಿಸಲಾಗಿದೆ. ಈ ವರ್ಷ ಜೂನ್ ನಲ್ಲಿ ಘಟನೆ ನಡೆದಿತ್ತು. ಕೃತ್ಯ ಎಸಗಿದ್ದ ಪೋಷಕರು ತನಿಖೆಯ ದಾರಿ ತಪ್ಪಿಸುವ ಉದ್ದೇಶದಿಂದ ಮಗಳನ್ನು ತಾವೇ ಕೊಂದು ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರೈಲ್ವೆ ಅಂಡರ್ ಪಾಸ್ನಲ್ಲಿ ಸಿಲುಕಿದ ಕಾಲೇಜ್ ಬಸ್- ವಿದ್ಯಾರ್ಥಿಗಳ ರಕ್ಷಣೆ
ಕೃತ್ಯ ನಡೆದಿದ್ದು ಹೇಗೆ?
2022ರ ಜೂನ್ 28ರಂದು 12 ವರ್ಷದ ತಮ್ಮ ಮಗಳು ಸಮಯಕ್ಕೆ ಸರಿತಯಾಗಿ ಅಡುಗೆ ಮಾಡಲಿಲ್ಲ ಹಾಗೂ ದನಕರುಗಳಿಗೆ ಮೇವು ಹಾಕಿರಲಿಲ್ಲ. ಇದರಿಂದ ಕೋಪಗೊಂಡ ಬಾಲಕಿ ತಂದೆ ದೊಣ್ಣೆಯಿಂದ ಥಳಿಸಿದ್ದಾನೆ. ನೆಲದ ಮೇಲೆ ಬಿದ್ದು ಒದ್ದಾಡುತ್ತಲೇ ಹುಡುಗೆ ಪ್ರಾಣ ಬಿಟ್ಟಿದ್ದಾಳೆ. ಈ ಸಂದರ್ಭದಲ್ಲಿ ಆಕೆಯ ತಾಯಿ ಕೂಡ ಇದ್ದರು. ಬಳಿಕ ಇಬ್ಬರೂ ಸೇರಿ ಮಗಳ ಮೃತದೇಹವನ್ನು ಇಲ್ಲಿನ ಸುರ್ಗುಜಾ ಜಿಲ್ಲೆಯ ಕಾಡಿನಲ್ಲಿ ಎಸೆದಿದ್ದಾರೆ. ನಂತರ ಯಾರಿಗೂ ಅನುಮಾನ ಬಾರದಂತೆ ಮಗಳು ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದಾರೆ.
ಇದೇ ತಿಂಗಳ ಆಗಸ್ಟ್ 26ರಂದು ಹುಡುಗಿಯ ತಂದೆಯೇ ತಮ್ಮ ಮಗಳ ದೇಹವು ಕೊಳೆತ ಸ್ಥಿತಿಯಲ್ಲಿ ಕಾಡಿನಲ್ಲಿ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಮಗಳ ಬಟ್ಟೆ ಹಾಗೂ ಚಪ್ಪಲಿಯನ್ನೂ ಗುರುತಿಸಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು ತನಿಖೆಗೆ ಒಳಪಡಿಸಿದಾಗ ತಾವೇ ಕೊಲೆ ಮಾಡಿರುವುದು ತಿಳಿದುಬಂದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲೂ ಜೆಡಿಯು ಬಿಜೆಪಿಯೊಂದಿಗಿನ ಮೈತ್ರಿ ವಾಪಸ್?
ಘಟನೆ ಜೂನ್ನಲ್ಲಿ ನಡೆದಿತ್ತು. ಆದರೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ನಿನ್ನೆ ಸಂಜೆ ಆರೋಪಿ ಪೋಷಕರನ್ನು ಬಂಧಿಸಲಾಗಿದೆ. ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 302 (ಕೊಲೆ) ಮತ್ತು 201 (ಅಪರಾಧದ ಸಾಕ್ಷ್ಯಗಳನ್ನು ಮರೆಮಾಚುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಭೋಪಾಲ್: 8ನೇ ತರಗತಿ ಓದುತ್ತಿದ್ದ 15 ವರ್ಷದ ಬುಡಕಟ್ಟು ಸಮುದಾಯದ ಬಾಲಕಿ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆಗಸ್ಟ್ 25ರಂದು ಈ ಘಟನೆ ನಡೆದಿದೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಓರ್ವ ಅಪ್ರಾಪ್ತನನ್ನೂ ವಶಕ್ಕೆ ಪಡೆಯಲಾಗಿದೆ. 8ನೇ ತರಗತಿ ಓದುತ್ತಿದ್ದ ಬಾಲಕಿಯು ಪರಿಚಿತ ಬಾಲಕನೊಂದಿಗೆ ಹೊರಗೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಇಬ್ಬರ ವಿರುದ್ಧ ಪೋಕ್ಸೋ ಹಾಗೂ ಸಂಬಂಧಪಟ್ಟ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪ್ರಾಪ್ತನಿಂದಲೇ ಅತ್ಯಾಚಾರ: ಮತ್ತೊಂದು ಘಟನೆಯಲ್ಲಿ ಉತ್ತರಪ್ರದೇಶದ ಹಳ್ಳಿಯೊಂದರಲ್ಲಿ ಅಪ್ರಾಪ್ತೆಯ ಮೇಲೆ 15 ವರ್ಷದ ಬಾಲಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. 5 ವರ್ಷದ ಬಾಲಕಿಯನ್ನು ಬರ್ಫಿ ನೀಡುವ ಆಮಿಷವೊಡ್ಡಿ ಬಾಲಕ ಏಕಾಂತ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಬಳಿಕ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 3,700 ಕೆ.ಜಿ ಸ್ಫೋಟಕ, 10 ಸೆಕೆಂಡ್- 1,200 ಕೋಟಿಯ ದೈತ್ಯ ಅವಳಿ ಕಟ್ಟಡ ಉಡೀಸ್
ಬಾಲಕಿಯ ಕಿರುಚಾಟ ಕೇಳಿ ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸಂತ್ರಸ್ತೆ ಮಾನಸಿಕವಾಗಿ ಅಸ್ವಸ್ಥಳಾಗಿದ್ದು, ಆಕೆಯ ಕುಟುಂಬ ಸದಸ್ಯರು ಆರೋಪಿ ಮನೆಗೆ ತೆರಳಿದಾಗ, ಆರೋಪಿಯ ತಂದೆ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಮತ್ತು ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಘಟನೆಯ ಸಂಬಂಧ ಆರೋಪಿಯ ತಂದೆಯನ್ನೂ ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ರಾಷ್ಟ್ರಕ್ಕಾಗಿ ಖಾದಿ, ಆದ್ರೆ ರಾಷ್ಟ್ರಧ್ವಜಕ್ಕೆ ಚೈನೀಸ್ ಪಾಲಿಸ್ಟರ್ : ಮೋದಿ ವಿರುದ್ಧ ರಾಹುಲ್ ಟೀಕೆ
ನಗರದ ಹೆಚ್ಚುವರಿ ಎಸ್ಪಿ ರಾಹುಲ್ ಭಾಟಿ, ಆರೋಪಿಗಳ ವಿರುದ್ಧ ಐಪಿಸಿಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಕ್ಯಾಂಟ್ನ ಇನ್ಸ್ಪೆಕ್ಟರ್ ರಾಜೀವ್ ಕುಮಾರ್ ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]