Tag: ಐಪಿಸಿ

  • ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ಸಾವು ಪ್ರಕರಣ – ಪತಿಗೆ 10 ವರ್ಷ ಜೈಲು, 12 ಲಕ್ಷ ದಂಡ

    ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ಸಾವು ಪ್ರಕರಣ – ಪತಿಗೆ 10 ವರ್ಷ ಜೈಲು, 12 ಲಕ್ಷ ದಂಡ

    ತಿರುವನಂತಪುರಂ: ಇಡೀ ಕೇರಳ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ್ದ ಕೇರಳದ ನರ್ಸಿಂಗ್ ವಿದ್ಯಾರ್ಥಿನಿ ವಿಸ್ಮಯಾಳ (22) ಸಾವಿನ ಪ್ರಕರಣದಲ್ಲಿ ಆರೋಪಿಯಾಗಿದ್ದ ಆಕೆಯ ಪತಿ ಎಸ್.ಕಿರಣ್ ಕುಮಾರ್‌ಗೆ 10 ವರ್ಷ ಜೈಲು ಶಿಕ್ಷೆ ಹಾಗೂ 12.55 ಲಕ್ಷ ರೂ. ದಂಡ ವಿಧಿಸಿದೆ.

    ವಿಸ್ಮಯಾಳ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಕ್ಕಾಗಿ 6 ವರ್ಷ ಜೈಲು 2 ಲಕ್ಷ ರೂ. ದಂಡ, ಕ್ರಿಮಿನಲ್ ಬೆದರಿಕೆಯ ಅಪರಾಧಕ್ಕಾಗಿ 2 ವರ್ಷ ಜೈಲು, 50 ಸಾವಿರ ದಂಡ, ವರ್ದಕ್ಷಿಣೆ ನಿಷೇಧ ಕಾಯ್ದೆ ಅಡಿಯಲ್ಲಿ 6 ವರ್ಷ ಜೈಲು 10 ಲಕ್ಷ ರೂ. ದಂಡ, ವರದಕ್ಷಿಣೆ ಕಿರುಕುಳ ನೀಡಿದ ಅಪರಾಧಕ್ಕಾಗಿ 1 ವರ್ಷ ಜೈಲು ಹಾಗೂ 5 ಸಾವಿರ ದಂಡ ಸೇರಿದಂತೆ ಒಟ್ಟಾರೆ 25 ವರ್ಷ ಜೈಲು ಶಿಕ್ಷೆ ವಿಧಿಸಿದ್ದರೂ, 10 ವರ್ಷ ಅವರು ಜೈಲು ವಾಸ ಅನುಭವಿಸಬೇಕಾಗುತ್ತದೆ. ಜೊತೆಗೆ 12.55 ಲಕ್ಷ ರೂಪಾಯಿಗಳನ್ನು ವಿಸ್ಮಯಾ ಪೋಷಕರಿಗೆ ಪರಿಹಾರವಾಗಿ ನೀಡಬೇಕಾಗುತ್ತದೆ ಎಂದು ಕೊಲ್ಲಂ ಕೋರ್ಟ್ ಆದೇಶದಲ್ಲಿ ತಿಳಿಸಿದೆ.

    ಪ್ರಕರಣದ ಏಕೈಕ ಆರೋಪಿಯಾಗಿರುವ ಕಿರಣ್‌ಗೆ ಭಾರತೀಯ ದಂಡ ಸಂಹಿತೆ(IPC)ಯ ಅನ್ವಯ 304B (ವರದಕ್ಷಿಣೆ ಸಾವು), 498 A (ವರದಕ್ಷಿಣೆ ಕಿರುಕುಳ) ಮತ್ತು 306 (ಆತ್ಮಹತ್ಯೆಗೆ ಪ್ರಚೋದನೆ) ಈ 3 ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ. ವಿಸ್ಮಯಾ ಸಾವಿಗೂ ಮುನ್ನ ಗಂಡ-ಹೆಂಡತಿ ನಡುವಿನ ಫೋನ್ ಸಂಭಾಷಣೆಯ ರೆಕಾರ್ಡಿಂಗ್ ಸೇರಿದಂತೆ ಡಿಜಿಟಲ್ ಸಾಕ್ಷ್ಯಗಳು ಪ್ರಕರಣದಲ್ಲಿ ಪ್ರಮುಖ ಪುರಾವೆಯಾಗಿ ಸಿಕ್ಕಿದ್ದನ್ನು ಆಧಾರಿಸಿ ತೀರ್ಪು ಪ್ರಕಟಿಸಿದೆ.

    ನರ್ಸಿಂಗ್ ವಿದ್ಯಾರ್ಥಿನಿ ವಿಸ್ಮಯಾಳ ಸಾವಿನ ಪ್ರಕರಣದಲ್ಲಿ ಪತಿಯೇ ತಪ್ಪಿತಸ್ಥ ಎಂದು ಕೊಲ್ಲಂ ಕೋರ್ಟ್ ನಿನ್ನೆ ತೀರ್ಪು ನೀಡಿತ್ತು. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ.ಎನ್.ಸುಜಿತ್ ಅವರು, ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿದ್ದರು.

    ವರದಕ್ಷಿಣೆ ಕಿರುಕುಳದಿಂದ ವಿಸ್ಮಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇರಳ ಪೊಲೀಸರು 500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು. 22 ವರ್ಷದ ವಿಸ್ಮಯಾ ಜೂನ್ 21, 2021 ರಂದು ಕೊಲ್ಲಂ ಜಿಲ್ಲೆಯ ಸಾಸ್ತಾಮ ಕೋಟಾದಲ್ಲಿ ತನ್ನ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಘಟನೆಗೆ ಒಂದು ದಿನ ಮೊದಲೇ ವಿಸ್ಮಯಾ ತನ್ನ ಸಂಬಂಧಿಕರಿಗೆ ವರದಕ್ಷಿಣೆ ಕಿರುಕುಳದ ಆರೋಪದ ಬಗ್ಗೆ ವಾಟ್ಸಾಪ್ ಸಂದೇಶಗಳನ್ನು ಕಳುಹಿಸಿದ್ದಳು. ಜೊತೆಗೆ ತನ್ನ ದೇಹದ ಮೇಲೆ ಗಾಯಗಳು ಹಾಗೂ ಹೊಡೆದ ಗುರುತುಗಳ ಫೋಟೋಗಳನ್ನು ಕಳುಹಿಸಿದ್ದಳು.

    2020ರಲ್ಲಿ ನಡೆದ ವಿವಾಹದ ವೇಳೆ ಕುಮಾರ್‌ಗೆ ವರದಕ್ಷಿಣೆಯಾಗಿ 10 ಲಕ್ಷ ರೂ. ಮೌಲ್ಯದ ಕಾರನ್ನು ನೀಡಿದ್ದಲ್ಲದೆ 100 ಸವರನ್ ಚಿನ್ನ ಹಾಗೂ 1 ಎಕರೆಗೂ ಹೆಚ್ಚು ಭೂಮಿ ನೀಡಲಾಗಿತ್ತು. ಆದರೆ ಕುಮಾರ್‌ಗೆ ಕಾರು ಇಷ್ಟವಾಗದೆ 10 ಲಕ್ಷ ರೂ. ನಗದು ಬೇಕೆಂದು ಬಯಸಿದ್ದ. ಅದು ಸಾಧ್ಯವಿಲ್ಲ ಎಂದು ಹೇಳಿದ್ದರಿಂದ ಆಕೆಗೆ ಚಿತ್ರಹಿಂಸೆ ನೀಡಲು ಪ್ರಾರಂಭಿಸಿದ್ದಾನೆ ಎಂದು ವಿಸ್ಮಯಾಳ ತಂದೆ ಹೇಳಿದ್ದರು. ಈ ಪ್ರಕರಣ ಇಂದು ಅಂತ್ಯಕಂಡಿದ್ದು, ವಿಸ್ಮಯಾಳ ಪತಿಗೆ ಶಿಕ್ಷೆ ವಿಧಿಸಲಾಗಿದೆ.

  • ಕೇಂದ್ರದ ಮರು ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹ ಕೇಸ್‌ ದಾಖಲಿಸುವಂತಿಲ್ಲ: ಸುಪ್ರೀಂ

    ಕೇಂದ್ರದ ಮರು ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹ ಕೇಸ್‌ ದಾಖಲಿಸುವಂತಿಲ್ಲ: ಸುಪ್ರೀಂ

    ನವದೆಹಲಿ: ಕೇಂದ್ರ ಸರ್ಕಾರದ ಮರುಪರಿಶೀಲನೆ ಪೂರ್ಣಗೊಳ್ಳುವವರೆಗೆ ದೇಶದ್ರೋಹದ ಅಡಿ ಪ್ರಕರಣ ದಾಖಲಿಸುವಂತಿಲ್ಲ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.

    ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ, ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ಹಿಮಾ ಕೊಹ್ಲಿ ಅವರಿದ್ದ ನ್ಯಾಯಪೀಠ ಈ ಮಧ್ಯಂತರ ಆದೇಶ ನೀಡಿದೆ.

    ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ 124ಎ (ದೇಶದ್ರೋಹ) ಅಡಿಯಲ್ಲಿ ಪ್ರಕರಣ ದಾಖಲಾಗಿ ಜೈಲಿನಲ್ಲಿರುವವರು ಜಾಮೀನು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರವು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸುವ ವರೆಗೆ ಸರ್ಕಾರಗಳು ದೇಶದ್ರೋಹ ಪ್ರಕರಣವನ್ನು ಬಳಸಿಕೊಳ್ಳುವಂತಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ದೇವಸ್ಥಾನದ ಮೇಲೆ ನಿರ್ಮಾಣವಾದ ಯಾವುದೇ ಮಸೀದಿಯನ್ನೂ ಬಿಡುವುದಿಲ್ಲ, ಎಲ್ಲವನ್ನೂ ಕೆಡವುತ್ತೇವೆ: ಬಿಜೆಪಿ ನಾಯಕ

    ದೇಶದ್ರೋಹ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಪೀಠ ಜುಲೈಗೆ ಮುಂದೂಡಿಕೆ ಮಾಡಿದೆ.

    ಕೇಂದ್ರ ಹೇಳಿದ್ದೇನು?
    ಸೋಮವಾರ ದೇಶದ್ರೋಹದ ಕಾನೂನನ್ನು ಪುನರ್ ಪರಿಶೀಲಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‍ಗೆ ಕೇಂದ್ರ ಸರ್ಕಾರ ತಿಳಿಸಿತ್ತು ದೇಶದ ಸಾರ್ವಭೌಮತ್ವದ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ. ಕಾಯ್ದೆಯ ಪುನರ್ ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹದ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಬಾರದು ಎಂದು ಕೇಂದ್ರ ಅಫಿಡವಿಟ್‌ ಸಲ್ಲಿಸಿತ್ತು.

    court order law

    ಬ್ರಿಟೀಷರ ಕಾಲದ ಕಾಯ್ದೆಗಳನ್ನು ಬದಿಗೆ ಸರಿಸಲು ಸರ್ಕಾರ ತೀರ್ಮಾನಿಸಲಾಗಿದೆ. ಇದರ ಭಾಗವಾಗಿ ದೇಶದ್ರೋಹ ಕಾನೂನು ಪರಿಶೀಲನೆ ಮಾಡುತ್ತಿದ್ದೇವೆ. ದೇಶದ್ರೋಹ ಕಾಯ್ದೆಗೆ ಸಂಬಂಧಿಸಿ ಹಲವು ವರ್ಗಗಳಿಂದ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳನ್ನು ಪ್ರಧಾನಿ ಮೋದಿ ಪರಿಗಣಿಸಿದ್ದಾರೆ. ಈ ಕಾಯ್ದೆಯ ದುರ್ಬಳಕೆ ಆಗುತ್ತಿರುವ ಬಗ್ಗೆಯೂ ಗಮನ ಹರಿಸಿದ್ದಾರೆ ಎಂದು ಕೇಂದ್ರ ಅಫಿಡವಿಟ್‌ನಲ್ಲಿ ಉಲ್ಲೇಖಿಸಿತ್ತು.

    ಸ್ವಾತಂತ್ರ್ಯ ಸಿಕ್ಕಿದ ಬಳಿಕವೂ 75 ವರ್ಷದ ಹಿಂದಿನ ಕಾನೂನು ಅಗತ್ಯವಿದೆಯೇ ಎಂದು 2021ರ ಜುಲೈನಲ್ಲಿ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು.

  • 12 ದಿನಗಳ ಜೈಲುವಾಸದ ನಂತರ ಪತಿಯನ್ನು ನೋಡಿ ಕಣ್ಣೀರಿಟ್ಟ ನವನೀತ್ ರಾಣಾ

    12 ದಿನಗಳ ಜೈಲುವಾಸದ ನಂತರ ಪತಿಯನ್ನು ನೋಡಿ ಕಣ್ಣೀರಿಟ್ಟ ನವನೀತ್ ರಾಣಾ

    ಮುಂಬೈ: 12 ದಿನಗಳ ಜೈಲುವಾಸದ ನಂತರ ಮತ್ತೆ ಶಾಸಕ ಪತಿ ರವಿ ರಾಣಾ ಮತ್ತು ಅಮರಾವತಿ ಸಂಸದೆ ನವನೀತ್ ರಾಣಾ ಒಂದಾಗಿದ್ದು, ಕಣ್ಣೀರಿಟ್ಟಿದ್ದಾರೆ.

    ಗುರುವಾರ ನವನೀತ್ ರಾಣಾ ಬೈಕುಲ್ಲಾ ಜೈಲಿನಿಂದ ಬಿಡುಗಡೆಯಾಗಿದ್ದು, ಆಕೆಯ ಪತಿ ರವಿ ರಾಣಾ ತಲೋಜಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ವೇಳೆ ನವನೀತ್ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಹಿನ್ನೆಲೆ ರವಿ, ಆಸ್ಪತ್ರೆಗೆ ಮಡದಿಯನ್ನು ನೋಡಲು ಬಂದಿದ್ದಾರೆ. ಪತಿಯನ್ನು ನೋಡಿದ ತಕ್ಷಣ ನವನೀತ್ ಅಳಲು ಪ್ರಾರಂಭ ಮಾಡಿದ್ದಾರೆ. ದಂಪತಿ ಭಾವನಾತ್ಮಕವಾಗಿ ಒಬ್ಬರನ್ನೊಬ್ಬರು ನೋಡಿಕೊಂಡಿದ್ದು, ನಂತರ ರವಿ ಅವರು ಸಾಂತ್ವನ ಮಾಡಿದರು. ಇದನ್ನೂ ಓದಿ: ಬಂಧನದಲ್ಲಿರುವ ರಾಣಾ ದಂಪತಿ ನಿವಾಸದಲ್ಲಿ ಅಕ್ರಮ ಕಟ್ಟಡ – ಬಿಎಂಸಿ ನೋಟೀಸ್

    ನವನೀತ್ ರಾಣಾ ಅವರ ವಕೀಲರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಸಂಸದರು ಅಸ್ವಸ್ಥರಾಗಿದ್ದರು. ಅವರ ರಕ್ತದೊತ್ತಡ ಹೆಚ್ಚಾಗಿದೆ. ಅವರಿಗೆ ದೇಹದಲ್ಲಿ ನೋವು ಮತ್ತು ಸ್ಪಾಂಡಿಲೈಟಿಸ್ ಇತ್ತು. ನಂತರ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದರು.

    Navneet Rana Ravi Rana 2

    ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124(ಎ) (ದೇಶದ್ರೋಹ) ಮತ್ತು 153 (ಎ) (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ರಾಣಾ ದಂಪತಿಯನ್ನು ಏಪ್ರಿಲ್ 23 ರಂದು ಖಾರ್ ಪೊಲೀಸರು ಬಂಧಿಸಿದ್ದರು.

  • 15 ವರ್ಷದ ಹುಡುಗಿ ಮೇಲೆ ಅತ್ಯಾಚಾರ- ಇಬ್ಬರು ಅಪ್ರಾಪ್ತರು ಸೇರಿ ನಾಲ್ವರ ಬಂಧನ

    ಕೋಲ್ಕತ್ತಾ: ಇತ್ತೀಚೆಗಷ್ಟೇ ಹಿಂಸಾಚಾರ ಕೃತ್ಯ ನಡೆದು, ತನಿಖೆ ಸಿಬಿಐ ಹಂತದಲ್ಲಿರುವಾಗಲೇ ಪಶ್ಚಿಮ ಬಂಗಳಾದ ಬೀರ್ಭುಮ್ ಜಿಲ್ಲೆಯಲ್ಲಿ ಅಪ್ರಾಪ್ತ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 14ರ ರಾತ್ರಿ 15 ವರ್ಷದ ಅಪ್ರಾಪ್ತ ಹುಡುಗಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ.

    CRIME 2

    ಘಟನೆಗೆ ಸಂಬಂಧಿಸಿದಂತೆ 14 ವರ್ಷದ ಇಬ್ಬರು ಹುಡುಗರು ಸೇರಿ ನಾಲ್ವರು ಆರೋಪಿಗಳನ್ನು ಬೀರ್ಭುಮ್ ಜಿಲ್ಲೆಯಲ್ಲಿ ಬಂಧಿಸಲಾಗಿದ್ದು, ಆರೋಪಿಗಳು ಸ್ಥಳೀಯ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಲಕ್ಷ್ಮೀರಾಮ್ ಸೂರೇನ್ ಮತ್ತು ಸುನೀಲ್ ಇಬ್ಬರು ಯುವಕರನ್ನು ಭಾನುವಾರ ತಡರಾತ್ರಿ ಪರುಯಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಬಂಧಿಸಿದ ಕೆಲವೇ ಗಂಟೆಗಳಲ್ಲಿ ಅಪ್ರಾಪ್ತ ಬಾಲಕರನ್ನೂ ಪತ್ತೆಹಚ್ಚಲಾಗಿದೆ ಎಂದು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ತಂದೆಯನ್ನು ಕೊಂದ ಮಾನಸಿಕ ಅಸ್ವಸ್ಥೆ ಅರೆಸ್ಟ್

    ಹುಡುಗಿಯು ಇಲ್ಲಿನ ಶಾಂತಿನಿಕೇತನ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಸ್ಥಳೀಯ ಯುವಕನೊಂದಿಗೆ ಕುಳಿತಿದ್ದಾಗ, ಆತನನ್ನು ಗೆಳೆಯನೆಂದು ಭಾವಿಸಿ, ಕೆಲ ಯುವಕರು ಇಬ್ಬರ ಮೇಲೆ ಮೇಲೆ ಹಲ್ಲೆ ನಡೆಸಿ, ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.

    CRIME (1)

    ಸ್ಥಳೀಯ ನ್ಯಾಯಾಲಯವು ಸೋಮವಾರ ಇಬ್ಬರು ಯುವಕರನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಅಪ್ರಾಪ್ತ ಬಾಲಕರನ್ನು ರಿಮ್ಯಾಂಡ್ ರೂಂಗೆ ಕಳುಹಿಸಲಾಗಿದೆ. ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಅತ್ಯಾಚಾರದಲ್ಲಿ ನಾಲ್ವರು ಭಾಗಿಯಾಗಿದ್ದಾರೆಯೇ ಇಲ್ಲವೇ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ ಎಂದು ಬಿರ್ಭೂಮ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಂದ್ರ ನಾಥ್ ತ್ರಿಪಾಠಿ ಎಚ್‌ಟಿಗೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಸಿನಿಮೀಯ ರೀತಿ ದರೋಡೆಕೋರನನ್ನೇ ಹಿಡಿದ ಮನೆಯವರು

    ಪಶ್ಚಿಮ ಬಂಗಾಳ ಮಹಿಳಾ ಆಯೋಗದ ಅಧ್ಯಕ್ಷೆ ಲೀನಾ ಗಂಗೋಪಾಧ್ಯಾಯ ಅವರು ಬಾಲಕಿಯನ್ನು ಭೇಟಿಯಾಗಿ, ಆಕೆಯ ಕುಟುಂಬಸ್ಥರು ಹಾಗೂ ಪೊಲೀಸರೊಂದಿಗೆ ಮಾತುಕತೆ ನಡೆಸಿದ್ದಾರೆ.

  • ಪಾಕ್ ಹೊಗಳುವ ಹಾಡು ಹಾಕಿದ ಇಬ್ಬರ ವಿರುದ್ಧ ಕೇಸ್

    ಪಾಕ್ ಹೊಗಳುವ ಹಾಡು ಹಾಕಿದ ಇಬ್ಬರ ವಿರುದ್ಧ ಕೇಸ್

    ಲಕ್ನೋ: ಪಾಕಿಸ್ತಾನವನ್ನು ಹೊಗಳುವ ಹಾಡನ್ನು ಹಾಕಿದ ಇಬ್ಬರು ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

    ಯುಪಿಯ ಬರೇಲಿಯಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ಫೋನ್‍ನಲ್ಲಿ ಪಾಕಿಸ್ತಾನವನ್ನು ಹೊಗಳುವ ಹಾಡನ್ನು ಹಾಕಿಕೊಂಡಿದ್ದರು. ಈ ರೀತಿ ಮಾಡುವುದು ರಾಷ್ಟ್ರೀಯ ಏಕೀಕರಣಕ್ಕೆ ಅಡ್ಡಿಪಡಿಸಿದಂತೆ ಎಂಬ ಆರೋಪದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಬೈಕ್‍ಗೆ ಲಾರಿ ಡಿಕ್ಕಿ – ಫಾರ್ಮಾ ಕಂಪನಿ ನೌಕರ ಸಾವು

    PAK

    ಪಾಕಿಸ್ತಾನವನ್ನು ಹೊಗಳುವ ಹಾಡನ್ನು ಹಾಕಬೇಡಿ ಎಂದು ಆಕ್ಷೇಪ ವ್ಯಕ್ತಪಡಿಸಿದರೂ, ಅವರು ಮತ್ತೆ ಮತ್ತೆ ಅದೇ ಕೆಲಸ ಮಾಡುತ್ತಾರೆ ಎಂದು ಗ್ರಾಮಸ್ಥರಾದ ಆಶಿಶ್ ದೂರಿನಲ್ಲಿ ತಿಳಿಸಿದ್ದಾರೆ. ಈ ದೂರಿನ ಆಧಾರದ ಮೇರೆಗೆ ಇಬ್ಬರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಈ ವ್ಯಕ್ತಿಗಳು ಸಿಂಘೈ ಮುರಾವಾನ್ ಗ್ರಾಮದ ನಿವಾಸಿಗಳು ಎಂದು ಪೊಲೀಸರು ವಿವರಿಸಿರು.

    ನಡೆದಿದ್ದೇನು?
    ಆರೋಪಿಗಳು ಗ್ರಾಮದಲ್ಲಿ ಬೇರೆಯವರಿಗೂ ಕೇಳಿಸುವಂತೆ ಪಾಕಿಸ್ತಾನ್ ಹೊಗಳುವ ಹಾಡನ್ನು ಜೋರಾಗಿ ಹಾಕಿಕೊಂಡಿದ್ದಾರೆ. ಇದನ್ನು ಆಕ್ಷೇಪಿಸಿ ಆಶಿಶ್ ಪ್ರಶ್ನಿಸುತ್ತಾರೆ. ಈ ಹಿನ್ನೆಲೆ ಇಬ್ಬರ ನಡುವೆ ಜಗಳ ಪ್ರಾರಂಭವಾಗಿದೆ. ಘಟನೆಯ ವೀಡಿಯೋವನ್ನು ಫೋನ್‍ನಲ್ಲಿ ಸೆರೆಹಿಡಿಯಲಾಗಿದ್ದು, ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಳ್ಳಲಾಗಿದೆ.

    ಇದು ಪೊಲೀಸರ ಗಮನಕ್ಕೂ ಬಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಈ ವೀಡಿಯೋ ವೈರಲ್ ಆದ ಬಳಿಕ ಆಶಿಶ್ ಆರೋಪಿಗಳ ವಿರುದ್ಧ ದೂರನ್ನು ನೀಡಿದ್ದಾರೆ ಎಂದು ಬರೇಲಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜ್‍ಕುಮಾರ್ ಅಗರ್‍ವಾಲ್ ತಿಳಿಸಿದರು. ಇದನ್ನೂ ಓದಿ:  ರಾಯಬಾಗದಲ್ಲಿ ಆರನೇ ವಾರಕ್ಕೆ ಕಾಲಿಟ್ಟ ‘ಕನ್ನೇರಿ’ ಚಿತ್ರ – ಪ್ರೇಕ್ಷಕರಿಂದ ಸಂಭ್ರಮಾಚರಣೆ

    ರಾಷ್ಟ್ರೀಯ ಏಕೀಕರಣಕ್ಕೆ ಅಡ್ಡಿಪಡಿಸುವ ಕೃತ್ಯಗಳಿಗೆ ಸಂಬಂಧಿಸಿದ ಐಪಿಸಿಯ ಸೆಕ್ಷನ್ 153 ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.

  • ಯಾರಿಗಾದರೂ ತಿಳಿಸಿದ್ರೆ ಜೀವ ಸಹಿತ ಬಿಡಲ್ಲ- ಅಣ್ಣನಿಂದಲೇ ತಂಗಿ ಮೇಲೆ ರೇಪ್

    ಯಾರಿಗಾದರೂ ತಿಳಿಸಿದ್ರೆ ಜೀವ ಸಹಿತ ಬಿಡಲ್ಲ- ಅಣ್ಣನಿಂದಲೇ ತಂಗಿ ಮೇಲೆ ರೇಪ್

    ಯಾದಗಿರಿ: ಸೀತಾಫಲ ಹಣ್ಣು ತರಲು ಹೋಗೋಣ ಎಂದು ಕರೆದುಕೊಂಡು ಹೋಗಿ ಅಣ್ಣನೆ ತಂಗಿ ಮೇಲೆ ಅತ್ಯಾಚಾರ ಮಾಡಿದ್ದು, ಅಲ್ಲದೇ ಯಾರಿಗಾದರೂ ತಿಳಿಸಿದ್ರೆ ಜೀವ ಸಹಿತ ಬಿಡಲ್ಲ ಎಂದು ಜೀವ ಬೆದರಿಕೆ ಹಾಕಿದ ಘಟನೆ ಯಾದಗಿರಿಯಲ್ಲಿ ನಡೆದಿದೆ.

    ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಇದೇ ಅ.4 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ಜಿಲ್ಲೆಯ ಸುರಪುರ ತಾಲೂಕಿನ ವ್ಯಾಪ್ತಿಯ ನಿವಾಸಿಯಾಗಿದ್ದು, ಅದೇ ಗ್ರಾಮ ನಿವಾಸಿ ಚಿಕ್ಕಪ್ಪನ ಮಗಳ ಮೇಲೆ ಅತ್ಯಾಚಾರ ವ್ಯಸಗಿರುವ ಆರೋಪ ಕೇಳಿಬಂದಿದೆ. ಇದನ್ನೂ ಓದಿ:  ಜೆಡಿಎಸ್ ಅನ್ನು ರಾಜಕೀಯವಾಗಿ 1 ಕಿ.ಮೀ, 1 ಮೀಟರ್ ದೂರ ಇಡಬೇಕು: ಪ್ರೀತಂಗೌಡ

    ಅ.4 ರಂದು ಸಂತ್ರಸ್ತೆಯನ್ನು ತನ್ನ ಗ್ರಾಮದಿಂದ ಸುರಪುರಕ್ಕೆ ಕರೆದುಕೊಂಡು ಬಂದ ಆರೋಪಿ, ಬಳಿಕ ಸಂತ್ರಸ್ತೆಗೆ ಸುಳ್ಳು ಹೇಳಿ ಗೋಗಿ ಪೊಲೀಸ್ ಠಾಣೆ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ, ವಿಷಯ ಯಾರಿಗಾದರೂ ತಿಳಿಸಿದ್ರೆ ಜೀವ ಸಹಿತ ಬಿಡುವುದಿಲ್ಲ ಎಂದು ಸಂತ್ರಸ್ತೆಗೆ ಜೀವ ಭಯ ಸಹ ಹಾಕಿದ್ದಾನೆ.

    ಈ ಪ್ರಕರಣ ಕುರಿತು ನಿನ್ನೆ ಗೋಗಿ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯಿಂದ ದೂರು ದಾಖಲಾಗಿದೆ. ಸದ್ಯ ಅತ್ಯಾಚಾರ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಸೆಕ್ಷನ್ 376(ಅತ್ಯಾಚಾರ) ಮತ್ತು 506(ಕ್ರಿಮಿನಲ್ ಬೆದರಿಕೆ) ಅಡಿ ಕೇಸ್ ದಾಖಲಾಗಿದೆ. ಇದನ್ನೂ ಓದಿ:  ಪೋಲಿಪುಂಡರ ಹಾವಳಿ ತಪ್ಪಿಸಿ – ಶಾಸಕರನ್ನು ತಡೆದು ಮನವಿ ನೀಡಿದ ವಿದ್ಯಾರ್ಥಿನಿಯರು

  • ಕಾರಲ್ಲೇ ಕೂರಿಸಿ ಯುವಕ, ಯುವತಿಯ ವೀಡಿಯೋ ರೆಕಾರ್ಡ್ – 5 ಲಕ್ಷಕ್ಕೆ ಬೇಡಿಕೆ

    ಕಾರಲ್ಲೇ ಕೂರಿಸಿ ಯುವಕ, ಯುವತಿಯ ವೀಡಿಯೋ ರೆಕಾರ್ಡ್ – 5 ಲಕ್ಷಕ್ಕೆ ಬೇಡಿಕೆ

    – ಯುವತಿಯ ಕೈಯನ್ನು ಹಿಡಿದು ಎಳೆದಾಡಿ ಪುಂಡರ ಅಟ್ಟಹಾಸ
    – ಬೆಂಗಳೂರಿನ ಹೊರವಲಯದಲ್ಲಿ ಸುತ್ತಾಡಲು ಹೋದವರಿಗೆ ಟಾರ್ಚರ್

    ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಕಹಿ ಮರೆಯುವ ಮುನ್ನವೇ ಮತ್ತೊಂದು ಕಹಿ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಪ್ರಕರಣ ಸಂಬಂಧ ಹಂದೇನಹಳ್ಳಿ ಗ್ರಾಮದ ಸಯ್ಯದ್ ಆಸಿಫ್ ಫಾಷಾ, ನವಾಜ್ ಪಾಷ, ಲಿಯಾಖತ್ ಪಾಷಾ, ಸಲ್ಮಾನ್ ಖಾನ್, ರೂಹಿದ್ ರನ್ನು ಪೊಲೀಸರು ಬಂಧಿಸಿದ್ದಾರೆ.

    ಏನಿದು ಪ್ರಕರಣ?

    ಯುವತಿಯೊಬ್ಬಳು ಸಂಬಂಧಿ ಯುವಕನ ಜೊತೆ ಇದೇ ತಿಂಗಳ 25 ರಂದು ಬೆಳಗ್ಗೆ 11 ಗಂಟೆಗೆ ಖಾಸಗಿ ಲೇಔಟ್ ಗೆ ತೆರಳಿದ್ದರು. ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹಂದೇನಹಳ್ಳಿ ಗ್ರಾಮದ ಖಾಸಗಿ ಲೇಔಟ್ ಗೆ ಈ ಜೋಡಿ ಹೋಗುತ್ತಿತ್ತು. ಈ ವೇಳೆ ಇವರಿಬ್ಬರು ಕಾರಿನಲ್ಲಿ ಕೂತು ಸ್ನ್ಯಾಕ್ಸ್ ಮತ್ತು ತಂಪು ಪಾನೀಯ ಸೇವಿಸ್ತಿದ್ದರು. ಆಗ 11:30ಕ್ಕೆ ದುರುಳರ ಗ್ಯಾಂಗ್ ಎಂಟ್ರಿಕೊಟ್ಟಿತ್ತು. ಇದನ್ನೂ ಓದಿ: ಮೂಕಜೀವಿಗಳ ಸಂಕಷ್ಟಕ್ಕೆ ಮಿಡಿಯುವ ಕೋಟೆನಾಡಿನ ಮಾನವೀಯತೆಯ ಹೃದಯ

    ಈ ಯುವತಿ ಯುವಕನನ್ನು ನೋಡಿ ಅವರ ವೀಡಿಯೋವನ್ನು ಮಾಡಿದ್ದು, ಕಾರಿನಲ್ಲೇ ಕೂರುವಂತೆ ಹೆದರಿಸಿದ್ದಾರೆ. ಇಬ್ಬರ ಖಾಸಗಿ ಕ್ಷಣಗಳನ್ನು ಮೊಬೈಲ್ ನಲ್ಲಿ ಈ ಗ್ಯಾಂಗ್ ಹಿಂದಿನಿಂದ ಚಿತ್ರೀಕರಿಸಿದ್ದು, ಅಲ್ಲದೆ ಯುವತಿಯ ಕೈ ಹಿಡಿದು ಎಳೆದಾಡಿದ್ದಾರೆ. ಐದು ಲಕ್ಷ ಹಣ ಕೊಡಬೇಕು, ಇಲ್ಲವಾದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಈ ವೀಡಿಯೋವನ್ನು ಹರಿಬಿಡೋದಾಗಿ ಬೆದರಿಕೆ ಹಾಕಿದ್ದಾರೆ. ಅಷ್ಟರಲ್ಲಿ ಈ ಗ್ಯಾಂಗ್ ದೂರದಲ್ಲಿ ಜನ ಬರುತ್ತಿರುವುದು ನೋಡಿ ಅಲ್ಲಿಂದ ಪರಾರಿಯಾಗಿದ್ದಾರೆ.

    ಪರಿಣಾಮ ಯುವತಿ ಆಘಾತದಿಂದ ಚೇತರಿಸಿಕೊಂಡು ಘಟನೆಯ ಬಗ್ಗೆ ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 354(ಎ) (ಹೆಂಗಸಿನ ಮಾನಭಂಗ ಮಾಡುವ ಉದ್ದೇಶದಿಂದ ಅವಳ ಮೇಲೆ ಹಲ್ಲೆ ಅಥವಾ ಅಪರಾಧಿಕ ಬಲಪ್ರಯೋಗ ಮಾಡುವುದು), 354(ಡಿ)(ಹಿಂಬಾಲಿಸುವುದು), 504(ಶಾಂತಿಭಂಗವನ್ನು ಮಾಡಲು ಉದ್ರೇಕಿಸುವುದಕ್ಕಾಗಿ ಉದ್ದೇಶಪೂರ್ವಕ ಅವಮಾನ), 149(ಏಕೋದ್ದೇಶವನ್ನು ಈಡೇರಿಸುವಲ್ಲಿ ಮಾಡಲಾದ ಅಪರಾಧದ), 384(ಸುಲಿಗೆ)ಅಡಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ರೈತ ಮಹಿಳೆ ಮೇಲೆ ಲೇಡಿ ಪಿಎಸ್‍ಐ ದರ್ಪ

    ಅನಿರೀಕ್ಷಿತ ಘಟನೆಯಿಂದ ಹೆದರಿದ್ದ ಯುವತಿ ಆರೋಪಿಗಳ ಮುಖ ನೋಡಿದ್ರೆ ಗುರುತು ಪತ್ತೆ ಹಚ್ಚೋದಾಗಿ ಹೇಳಿದ್ದರು. ಈ ಸಂಬಂಧ ಯುವತಿಯ ದೂರು ಬೆನ್ನಲ್ಲೇ ಪೊಲೀಸರು ಆಪರೇಷನ್ ಕೀಚಕರ ಗ್ಯಾಂಗ್ ಗೆ ಬಲೆ ಬೀಸಿದ್ದಾರೆ. ಸ್ವಲ್ಪ ತಡ ಮಾಡಿದ್ರೂ ಎಸ್ಕೇಪ್ ಆಗ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ.

    ಆರೋಪಿಗಳ ಮೊಬೈಲ್ ನಲ್ಲಿದ್ದ ಖಾಸಗಿ ವೀಡಿಯೋವನ್ನು ಪೊಲೀಸರು ಡಿಲೀಟ್ ಮಾಡಿದ್ದಾರೆ. ಆರೋಪಿಗಳ ಪೆರೇಡ್‍ನ್ನು ಯುವತಿಯ ಮುಂದೆ ಮಾಡಿಸಿದಾಗ ಅವರ ಗುರುತನ್ನು ಹಿಡಿದ್ದಾರೆ. ಹಂದೇನ ಹಳ್ಳಿಯವರಾದ ಇವರು ಸಣ್ಣ ಪುಟ್ಟ ಕೆಲಸ ಮಾಡ್ಕೊಂಡಿದ್ದರು. ಅಂದು ಯುವಕ ಯುವತಿ ಏಕಾಂತದಲ್ಲಿದ್ದಾಗ ವೀಡಿಯೋ ಹಿಡಿದು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ವೇಳೆ ಯುವತಿಯ ಹಣೆಬರಹ ಚೆನ್ನಾಗಿತ್ತು. ದುರಂತ ಏನೂ ಆಗಿಲ್ಲ. ಸದ್ಯ ಎಲ್ಲ ಆರೋಪಿಗಳನ್ನು ಪೊಲೀಸರು ಜೈಲಿಗೆ ಹಾಕಿದ್ದಾರೆ.

    ಯುವತಿ ದೂರಿನಲ್ಲಿ ಏನಿತ್ತು?

    ನಾನು ಬೆಂಗಳೂರಿನಲ್ಲಿ ವಾಸವಾಗಿದ್ದು, ಸೆ.25 ರಂದು ಬೆಳಗ್ಗೆ 11 ಗಂಟೆಗೆ ನನ್ನ ನಂಬರಿನ ಕಾರಿನಲ್ಲಿ ಸಂಬಂಧಿಯ ಜೊತೆಗೆ ದುನ್ನಸಂದ್ರ ಕ್ರಾಸ್, ಹಂದೇನಹಳ್ಳಿ ಗ್ರಾಮದ ಹತ್ತಿರವಿರುವ ಖಾಸಗಿರವರ ಲೇಔಟ್ ಗೆ ಹೋಗಿದ್ದೆವು. ಈ ವೇಳೆ ಕಾರಿನಲ್ಲಿ ನಾವಿಬ್ಬರು ಮಾತನಾಡಿಕೊಂಡು ಸ್ನ್ಯಾಕ್ಸ್ ಮತ್ತು ತಂಪು ಪಾನೀಯಗಳನ್ನು ಕುಡಿಯುತ್ತಿದ್ದೆವು. ಸುಮಾರು 12 ಗಂಟೆ ಸಮಯದಲ್ಲಿ ಯಾರೋ 5-6 ಅಪರಿಚಿತರು, ಏಕಾಏಕಿ ನಮ್ಮ ಕಾರಿನ ಹತ್ತಿರ ಬಂದು, ನಮ್ಮನ್ನು ಫೋಟೋ, ವೀಡಿಯೋ ಮಾಡಿದ್ದೀವಿ ಎಂದು ನನ್ನ ಕೈ ಹಿಡಿದು ಎಳೆದಾಡಿದರು.

    ನನ್ನ ಜೊತೆಗಿದ್ದ ಸಂಬಂಧಿಯು ಅವರಿಂದ ಬಿಡಿಸಿ, ನನ್ನನ್ನು ಕಾರಿನಲ್ಲಿ ಕೂಡಿಸಿದರು. ಅವರು ನಮಗೆ ಐದು ಲಕ್ಷ ಹಣ ಕೊಡಬೇಕು. ಇಲ್ಲದಿದ್ದರೆ ನಮ್ಮ ಮೊಬೈಲ್ ನಲ್ಲಿ ವೀಡಿಯೊಗಳನ್ನು ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತೇವೆ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿ ಹೆದರಿಸುತ್ತಿದ್ದರು. ಆಗ ಯಾರೋ ದೂರದಲ್ಲಿ ಜನರು ಬರುವುದನ್ನ ನೋಡಿ ಇಬ್ಬರು ಬೈಕ್ ನಲ್ಲಿ, ಇನ್ನುಳಿದವರು ಸ್ಥಳದಿಂದ ಹೊರಟು ಹೋದರು. ಇದನ್ನೂ ಓದಿ: 10 ತಿಂಗಳ ಶಿಕ್ಷೆ ತಪ್ಪಿಸಲು 9 ವರ್ಷದಿಂದ ತಲೆ ಮರೆಸಿಕೊಂಡ ಆರೋಪಿ ಅಂದರ್

    ನಾವು ಈ ಘಟನೆಯಿಂದ ಭಯಭೀತರಾಗಿ ಠಾಣೆಗೆ ತಡವಾಗಿ ಬಂದು ದೂರು ನೀಡಿರುತ್ತೇನೆ. ನಮಗೆ ಅವಾಚ್ಯ ಪದಗಳಿಂದ ಬೈದು, ಹಣ ಕೊಡುವಂತೆ ಹೆದರಿಸಿರುವ ಅಪರಿಚಿತ ಐದು-ಆರು ಜನರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಕೋರುತ್ತೇನೆ. ಮತ್ತೊಮ್ಮೆ ಅವರನ್ನ ನೋಡಿದರೆ ಗುರುತಿಸುತ್ತೇನೆ.

  • ಚಿಕಿತ್ಸೆಗೆ ಬಂದಿದ್ದ 4 ಮಕ್ಕಳ ತಾಯಿಯ ಜೊತೆ ವೈದ್ಯನ ಲವ್‌, ಕಾರಿನಲ್ಲಿ ಕೊಲೆ

    ಚಿಕಿತ್ಸೆಗೆ ಬಂದಿದ್ದ 4 ಮಕ್ಕಳ ತಾಯಿಯ ಜೊತೆ ವೈದ್ಯನ ಲವ್‌, ಕಾರಿನಲ್ಲಿ ಕೊಲೆ

    – ಒಂದು ತಿಂಗಳ ನಂತರ ಕೊಲೆ ಕೇಸ್‌ ಬೇಧಿಸಿದ ಪೊಲೀಸರು
    – ಇಬ್ಬರಿಗೂ ಮದುವೆಯಾಗಿದ್ದರೂ ಲವ್‌

    ಲಕ್ನೋ: ಕ್ಲಿನಿಕ್‍ಗೆ ಬಂದ ವಿವಾಹಿತ ಮಹಿಳೆಯನ್ನು ಪ್ರೀತಿಸಿ ಆಕೆಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಗಾಜಿಯಾಬಾದ್ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ.

    ಇಸ್ಮಾಯಿಲ್(33) ಬಂಧಿತ ವೈದ್ಯ. ಸೆಪ್ಟೆಂಬರ್‌ನಲ್ಲಿ ಈತ 4 ಮಕ್ಕಳ ತಾಯಿಯನ್ನು ಕೊಲೆ ಮಾಡಿದ್ದ. ಈಗ ಪೊಲೀಸರು ಈತನ ಮೇಲೆ ವಿವಿಧ ಐಪಿಸಿ ಸೆಕ್ಷನ್‍ಗಳನ್ನು ಹಾಕಿ ಬಂಧಿಸಿದ್ದಾರೆ.

    ಪ್ರಕರಣ ಪತ್ತೆಯಾಗಿದ್ದು ಹೇಗೆ?
    ಸೆಪ್ಟೆಂಬರ್ 7ರಂದು ಮಹಿಳೆ ನಾಪತ್ತೆಯಾದ ಹಿನ್ನೆಲೆಯಲ್ಲಿ ಆಕೆಯ ಪತಿ ಗಾಜಿಯಾಬಾದ್ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದರು. ಕಾಣೆಯಾದ ಮಹಿಳೆಯ ಫೋಟೋವನ್ನು ಇತರ ಜಿಲ್ಲೆಗಳು ಮತ್ತು ರಾಜ್ಯಗಳ ಪೊಲೀಸ್ ಠಾಣೆಗಳೊಂದಿಗೆ ಹಂಚಿಕೊಂಡು ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಒಂದು ತಿಂಗಳ ಹುಡುಕಾಟದ ನಂತರವೂ ಮಹಿಳೆಯನ್ನು ಪತ್ತೆ ಮಾಡಲು ಸಾಧ್ಯವಾಗಲಿಲ್ಲ.

    ಅಕ್ಟೋಬರ್ 15ರಂದು ಕುರುಕ್ಷೇತ್ರದಲ್ಲಿ ಒಂದು ಅಪರಿಚಿತ ಶವ ಪತ್ತೆಯಾಗಿತ್ತು. ಈ ಶವದ ಮುಖ ಮತ್ತು ನಾಪತ್ತೆಯಾಗಿದ್ದ ಮಹಿಳೆಯ ಫೋಟೋ ಹೋಲಿಕೆಯಾಗುತ್ತದೆ ಎಂದು ಹರ್ಯಾಣ ಪೊಲೀಸರು ಗಾಜಿಯಾಬಾದ್ ಪೊಲೀಸರಿಗೆ ಮಾಹಿತಿ ನೀಡಿದ್ದರು.

    ಶವ ಪತ್ತೆಯಾದ ಬಳಿಕ ಆಕೆಯ ಫೋನ್ ಕರೆ ಮತ್ತು ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಪೊಲೀಸರಿಗೆ ವೈದ್ಯ ಇಸ್ಮಾಯಿಲ್ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.

    ಕೊಲೆ ಮಾಡಿದ್ದು ಯಾಕೆ?
    ಇಸ್ಮಾಯಿಲ್ ಕ್ಲಿನಿಕ್ ನಡೆಸುತ್ತಿದ್ದು, ಕೆಲ ತಿಂಗಳ ಹಿಂದೆ ಮಹಿಳೆಯೊಬ್ಬಳು ಕ್ಲಿನಿಕ್‍ಗೆ ಚಿಕಿತ್ಸೆಗೆ ಬಂದಿದ್ದಳು. ಈತ ನೀಡಿದ ಚಿಕಿತ್ಸೆಯಿಂದ ಆಕೆ ಗುಣವಾಗಿದ್ದರು. ನಂತರ ಇಬ್ಬರು ಹೆಚ್ಚು ಸ್ನೇಹಿತರಾಗಿದ್ದು ಬಳಿಕ ಈ ಸ್ನೇಹ ಪ್ರೀತಿಗೆ ತಿರುಗಿತ್ತು.

    ಇಬ್ಬರು ಪ್ರೀತಿಸುತ್ತಿದ್ದ ಹಿನ್ನೆಲೆಯಲ್ಲಿ ಇಸ್ಮಾಯಿಲ್ ಸೆಪ್ಟೆಂಬರ್ 7ರಂದು ಮಹಿಳೆಯನ್ನು ಪಹಾರ್‌ಗಂಜ್‌ ಹೋಟೆಲ್‍ಗೆ ದ್ವಿಚಕ್ರವಾಹನದಲ್ಲಿ ಕರೆದೊಕೊಂಡು ಹೋಗಿದ್ದ. ಮರುದಿನ ಕಾರನ್ನು ಬಾಡಿಗೆ ಪಡೆದು ಚಂಡೀಗಢಕ್ಕೆ ಹೋಗುವಾಗ ದಾರಿ ಮಧ್ಯೆ ಇಬ್ಬರ ನಡುವೆ ಜಗಳವಾಗಿದೆ.

    ಇಬ್ಬರಿಗೂ ಮದುವೆಯಾಗಿದ್ದರೂ ಮಹಿಳೆ ವೈದ್ಯನ ಬಳಿ ತನ್ನ ಜೊತೆ ವಾಸಿಸುವಂತೆ ಪೀಡಿಸುತ್ತಿದ್ದಳು. ಜಗಳ ಜೋರಾಗುತ್ತಿದ್ದಂತೆ ಅಸ್ತಮಾ ರೋಗಿಯಾಗಿದ್ದ ಮಹಿಳೆಗೆ ಉಸಿರಾಟ ತೊಂದರೆ ಪ್ರಾರಂಭವಾಗಿದೆ. ಹೀಗಾಗಿ ಇಸ್ಮಾಯಿಲ್ ಇಂಜೆಕ್ಷನ್ ಮೂಲಕ ಔಷಧಿ ನೀಡಿದ್ದು, ಮಹಿಳೆ ಪ್ರಜ್ಞೆ ಕಳೆದುಕೊಂಡಿದ್ದಾಳೆ. ಈ ವೇಳೆ ಟವಲ್ ನಿಂದ ಮಹಿಳೆಯನ್ನು ಉಸಿರುಗಟ್ಟಿಸಿ ಕಾರಿನಲ್ಲೇ ಇಸ್ಮಾಯಿಲ್ ಕೊಲೆಗೈದಿದ್ದಾನೆ. ಬಳಿಕ ಆಕೆಯ ಶವವನ್ನು ನಿರ್ಜನ ಪ್ರದೇಶದಲ್ಲಿ ಎಸೆದು ಮನೆಗೆ ಮರಳಿದ್ದ.

    ವಿಚಾರಣೆ ವೇಳೆ ಆಕೆ ತನ್ನನ್ನು ಮದುವೆಯಾಗುವಂತೆ ಒತ್ತಾಯ ಮಾಡುತ್ತಿದ್ದಕ್ಕೆ ನಾನು ಕೊಲೆ ಮಾಡಿರುವುದಾಗಿ ಇಸ್ಮಾಯಿಲ್ ಕೃತ್ಯವನ್ನು‌ ಒಪ್ಪಿಕೊಂಡಿದ್ದಾನೆ. ಕೊಲೆ ಮಾಡಿದ ಬಳಿಕ ತನಗೂ ಈ ಕೃತ್ಯಕ್ಕೂ ಯಾವುದೇ ಸಂಬಂಧ ಇಲ್ಲದಂತೆ ಯಾರಿಗೂ ಅನುಮಾನ ಬಾರದಂತೆ ಕ್ಲಿನಿಕ್‌ ನಡೆಸುತ್ತಿದ್ದ.