Tag: ಐಶ್ವರ್ಯಾ ಅರ್ಜುನ್

  • ಅರ್ಜುನ್ ಸರ್ಜಾ ಕುಟುಂಬದಲ್ಲಿ ಕಳೆಗಟ್ಟಿದ ಮಗಳ ಮದುವೆ ಸಂಭ್ರಮ

    ಅರ್ಜುನ್ ಸರ್ಜಾ ಕುಟುಂಬದಲ್ಲಿ ಕಳೆಗಟ್ಟಿದ ಮಗಳ ಮದುವೆ ಸಂಭ್ರಮ

    ಹುಭಾಷಾ ನಟ ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯಾ ಸರ್ಜಾ (Aishwarya Sarja) ಮದುವೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಜೂನ್ 10ರಂದು ಚೆನ್ನೈ ಹನುಮಾನ್ ದೇವಸ್ಥಾನದಲ್ಲಿ ಐಶ್ವರ್ಯಾ ಮತ್ತು ಉಮಾಪತಿ (Umapathy Ramaiah) ಮದುವೆ ಜರುಗಲಿದೆ. ಸದ್ಯ ಹಳದಿ ಶಾಸ್ತ್ರ ಮತ್ತು ಮೆಹಂದಿ ಸಮಾರಂಭ ಅದ್ಧೂರಿಯಾಗಿ ನಡೆದಿದೆ. ಇದನ್ನೂ ಓದಿ:ಗುಟ್ಟಾಗಿ ಎಂಗೇಜ್‌ಮೆಂಟ್ ಮಾಡಿಕೊಂಡ ‘ಗಂಗೆ ಬಾರೆ ತುಂಗೆ ಬಾರೆ’ ನಟಿ

    ಅರ್ಜುನ್ ಸರ್ಜಾ ಪುತ್ರಿ ಹಳದಿ ಬಣ್ಣದ ಉಡುಗೆಯಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಮದುವೆ ಸಂಭ್ರಮದಲ್ಲಿರುವ ಪುತ್ರಿಗೆ ಅರ್ಜುನ್ ಸರ್ಜಾ ಮುತ್ತು ಕೊಟ್ಟು ಮುದ್ದು ಮಾಡಿರೋದು ಎಲ್ಲರ ಗಮನ ಸೆಳೆದಿದೆ. ಐಶ್ವರ್ಯಾ ಮದುವೆ ಶಾಸ್ತ್ರದ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇದನ್ನೂ ಓದಿ:ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ರಜನಿಕಾಂತ್

    ಐಶ್ವರ್ಯಾ ಮತ್ತು ತಮಿಳು ನಟ ಉಮಾಪತಿ ರಾಮಯ್ಯ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಗೆ ಎರಡು ಕುಟುಂಬದ ಸಮ್ಮತಿಯ ಮೇರೆಗೆ ಇತ್ತೀಚೆಗೆ ಅದ್ಧೂರಿಯಾಗಿ ಎಂಗೇಂಜ್‌ಮೆಂಟ್ ನಡೆದಿತ್ತು. ಈಗ ಜೂನ್ 10ಕ್ಕೆ ದಾಂಪತ್ಯ (Wedding) ಜೀವನಕ್ಕೆ ಕಾಲಿಡಲು ನಟಿ ರೆಡಿಯಾಗಿದ್ದಾರೆ.

    ಜೂನ್ 10ರ ಮಗಳ ಮದುವೆಗೆ ಮತ್ತು ಜೂನ್ 14ರಂದು ನಡೆಯಲಿರುವ ಆರತಕ್ಷತೆಗೆ ಕನ್ನಡದ ಹೆಸರಾಂತ ನಟ ಜಗ್ಗೇಶ್ ಸೇರಿದಂತೆ ಅನೇಕರಿಗೆ ಆಮಂತ್ರಣ ನೀಡಿದ್ದಾರೆ ಅರ್ಜುನ್ ಸರ್ಜಾ ದಂಪತಿ. ಸ್ಯಾಂಡಲ್‌ವುಡ್ ಮತ್ತು ಸೌತ್‌ನ ಅನೇಕ ನಟ, ನಟಿಯರಿಗೆ ಮತ್ತು ರಾಜಕೀಯ ಕ್ಷೇತ್ರದಲ್ಲಿರುವ ಗಣ್ಯರಿಗೆ ಮದುವೆ ಆಹ್ವಾನ ನೀಡಿದ್ದಾರೆ.

    ಅಂದಹಾಗೆ, ಐಶ್ವರ್ಯಾ ಅವರು 2018ರಲ್ಲಿ ‘ಪ್ರೇಮ ಬರಹ’ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಚಂದನ್ ಕುಮಾರ್‌ಗೆ ನಾಯಕಿಯಾಗಿದ್ದರು. ಮಗಳ ಚಿತ್ರಕ್ಕೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು. ಈ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ತೆರೆಕಂಡಿತ್ತು.

  • ಥೇಟ್ ಚಿರು ಮೂಗಿನಂತೆ ಮಗುವಿನ ಮೂಗಿದೆ: ಐಶ್ವರ್ಯಾ ಸರ್ಜಾ

    ಥೇಟ್ ಚಿರು ಮೂಗಿನಂತೆ ಮಗುವಿನ ಮೂಗಿದೆ: ಐಶ್ವರ್ಯಾ ಸರ್ಜಾ

    ಬೆಂಗಳೂರು: ಮೇಘನಾ ರಾಜ್ ಡೆಲಿವರಿ ಬಳಿಕ ಇದೀಗ ಅರ್ಜುನ್ ಸರ್ಜಾ ಕುಟುಂಬ ಆಸ್ಪತ್ರೆಗೆ ತೆರಳಿ ಜೂನಿಯರ್ ಚಿರುನನ್ನು ಕಣ್ತುಂಬಿಕೊಂಡು ಸಂತಸಪಟ್ಟಿದ್ದಾರೆ. ಇದೇ ವೇಳೆ ನಟಿ, ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಮಾಧ್ಯಮಗಳ ಜೊತೆ ಮಗು ಬಗ್ಗೆ ಮಾತನಾಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಐಶ್ವರ್ಯಾ, ತುಂಬಾ ಕ್ಯೂಟ್ ಆಗಿದ್ದಾನೆ. ಸೇಮ್ ಚಿರು ತರಾನೇ ಇದಾನೆ. ಒಬ್ಬರಿಂದ ಇನ್ನೊಬ್ಬರಿಗೆ ಸ್ವಲ್ಪ ಬದಲಾವಣೆ ಇರಬಹುದು. ಆದರೆ ಮೂಗು ಮಾತ್ರ ಥೇಟ್ ಅವನ ತರಾನೇ ಇದೆ. ಈ ಅನುಭವವನ್ನು ಹೇಳಿಕೊಳ್ಳಲು ಸಾಧ್ಯವೇ ಇಲ್ಲ. ತುಂಬಾ ಖುಷಿಯಾಗುತ್ತಿದೆ. ಆದರೆ ಅದೇ ಸಮಯದಲ್ಲಿ ಚಿರು ನೆನಪು ಸಹ ಬರುತ್ತಿದೆ. ಆದರೆ ಅವನ ಆಶೀರ್ವಾದ ಯಾವಾಗಲೂ ಮಗು ಮೇಲೆ ಇರುತ್ತದೆ ಎಂದರು. ಇದನ್ನೂ ಓದಿ: ಚಿರು ಮಗನನ್ನ 20 ವರ್ಷದ ನಂತ್ರ ನಾನೇ ಲಾಂಚ್ ಮಾಡ್ತೀನಿ: ಅರ್ಜುನ್ ಸರ್ಜಾ

    ಈ ಮಗು ತುಂಬಾ ಸ್ಪೆಷಲ್, ಯಾಕಂದ್ರೆ ನಮ್ಮ ಕಟುಂಬದ ಪ್ರೀತಿ ಒಂದುಕಡೆಯಾದರೆ. ಮತ್ತೊಂದು ಕಡೆ ಇಡೀ ಕರ್ನಾಟಕದ ಪ್ರೀತಿ, ಆಶೀರ್ವಾದ ಈ ಮಗು ಮೇಲಿದೆ. ತುಂಬಾನೇ ಖುಷಿಯಾಗುತ್ತದೆ. ಗಂಡು ಮಗುನೇ ಆಗುತ್ತೆ ಎಂದು ಎಲ್ಲರೂ ಗೆಸ್ ಮಾಡಿದ್ದೆವು. ಆದರೆ ನನಗೆ ಎಲ್ಲೋ ಒಂದು ಕಡೆ ಹೆಣ್ಣು ಮಗು ಆಗಬಹುದಾ ಎಂದು ಅನಿಸಿತ್ತು. ಮೇಘನಾ ತುಂಬಾ ಮುದ್ದಾಗಿ ಕಾಣಿಸುತ್ತಿದದ್ದರಿಂದ ಹಾಗೆ ಅನ್ನಿಸಿತ್ತು. ಆದರೆ ಯಾವುದೇ ಮಗುವಾದರೂ ನಮಗೆ ಖುಷಿ ಇತ್ತು. ಈಗ ಗಂಡು ಮಗುವಾಗಿದ್ದಕ್ಕೆ ಎಲ್ಲರಿಗೂ ಹೆಚ್ಚು ಸಂತಸವಾಗಿದೆ ಎಂದು ಐಶ್ವರ್ಯಾ ಹೇಳಿದ್ದಾರೆ.

    ಇದೇ ವೇಳೆ ಅರ್ಜುನ್ ಸರ್ಜಾ ಪತ್ನಿ ಆಶಾ ರಾಣಿ ಮಾತನಾಡಿ, ತುಂಬಾ ಖುಷಿಯಾಗಿದೆ. ಹೃದಯಪೂರ್ವಕವಾಗಿ ಮಗುವನ್ನು ಸ್ವಾಗತಿಸಿದ್ದೇವೆ. ತಾಯಿ, ಮಗುವನ್ನು ದೇವರು ಚೆನ್ನಾಗಿ ನೋಡಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಆದರೆ ಚಿರುನನ್ನು ಮಿಸ್ ಮಾಡುತ್ತೇವೆ. ಆ ಮಗುನಲ್ಲೇ ಚಿರುನನ್ನು ನೋಡುತ್ತೇವೆ. ಅಜ್ಜಿ ಆಗಿರೋ ಸಂಭ್ರಮ ಹೇಳೋಕೆ ಆಗಲ್ಲ ಎಂದು ಹೇಳಿದ್ದಾರೆ.

    ಮೇಘನಾ ಅವರಿಗೆ ಹೆರಿಗೆಯಾದಾಗ ಅರ್ಜುನ್ ಸರ್ಜಾ ತಮಿಳುನಾಡಿನಲ್ಲಿದ್ದರು. ಹೀಗಾಗಿ ಬರಲು ಆಗಿರಲಿಲ್ಲ. ಇದೀಗ ಬೆಂಗಳೂರಿಗೆ ಆಗಮಿಸಿದ್ದು, ಈ ಹಿನ್ನೆಲೆ ಮೆಘನಾ ಹಾಗೂ ಜೂನಿಯರ್ ಚಿರುನನ್ನು ಕಣ್ತುಂಬಿಕೊಂಡು ಸಂತಸ ಪಟ್ಟಿದ್ದಾರೆ. ಕುಟುಂಬ ಸಮೇತರಾಗಿ ಆಸ್ಪತ್ರೆಗೆ ಆಗಮಿಸಿ ಮೇಘನಾ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಮಗುವನ್ನು ಎತ್ತಿ ಮುದ್ದಾಡಿ ಸಂತಸ ಪಟ್ಟಿದ್ದಾರೆ.

  • ಬಾಲ್ಯದ ಫೋಟೋ ಹಾಕಿ ಐಶ್ವರ್ಯಾ ಅರ್ಜುನ್ ಭಾವುಕ

    ಬಾಲ್ಯದ ಫೋಟೋ ಹಾಕಿ ಐಶ್ವರ್ಯಾ ಅರ್ಜುನ್ ಭಾವುಕ

    ಚೆನ್ನೈ: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಅಕಾಲಿಕವಾಗಿ ಮರಣ ಹೊಂದಿದ್ದು, ಇಡೀ ಕುಟುಂಬದವರು ದುಃಖದಲ್ಲಿದ್ದಾರೆ. ಅಣ್ಣನ ಅಗಲಿಕೆಯ ಐದು ದಿನಗಳ ನಂತರ ಧ್ರುವ ಸರ್ಜಾ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ನೋವನ್ನು ಹೇಳಿಕೊಂಡಿದ್ದರು. ಇದೀಗ ನಟಿ ಐಶ್ವರ್ಯಾ ಅರ್ಜುನ್ ಚಿರಂಜೀವಿಯನ್ನು ನೆನೆದು ಭಾವುಕರಾಗಿದ್ದಾರೆ.

    ನಟ ಅರ್ಜುನ್ ಅವರ ಪುತ್ರಿ ಐಶ್ವರ್ಯಾ ಇನ್‍ಸ್ಟಾಗ್ರಾಂನಲ್ಲಿ ಚಿರಂಜೀವಿ ಸರ್ಜಾ ಅವರ ಜೊತೆಗಿನ ಬಾಲ್ಯದ ಫೋಟೋವನ್ನು ಹಾಕುವ ಮೂಲಕ ಕಂಬನಿ ಮಿಡಿದಿದ್ದಾರೆ. ಸರ್ಜಾ ಕುಟುಂಬದ ಮಕ್ಕಳೆಲ್ಲರು ಒಟ್ಟಿಗೆ ಬೆಳೆದವರು. ಅರ್ಜುನ್ ಸರ್ಜಾ ಅವರ ಸಹೋದರಿ ಅಮ್ಮಾಜಿ ಅವರ ಮಕ್ಕಳಾದ ಚಿರು, ಧ್ರುವ, ಕಿಶೋರ್ ಸರ್ಜಾ, ಅರ್ಜುನ್ ಪುತ್ರಿಯರಾದ ಐಶ್ವರ್ಯಾ ಮತ್ತು ಅಂಜನಾ ಹೀಗೆ ಎಲ್ಲರು ಒಟ್ಟಿಗೆ ಆಡಿಕೊಂಡು ಬೆಳೆದವರು.

    ಇದೀಗ ಇಡೀ ಕುಟುಂಬ ಚಿರು ಅವರನ್ನು ಕಳೆದುಕೊಂಡಿರುವ ದುಃಖದಲ್ಲಿದ್ದಾರೆ. ಹೀಗಾಗಿ ಬಾಲ್ಯದಲ್ಲಿ ಚಿರು ಜೊತೆಗೆ ತೆಗೆಸಿಕೊಂಡ ಫೋಟೋಗಳನ್ನು ಐಶ್ವರ್ಯಾ, ತಮ್ಮ ಇನ್‍ಸ್ಟಾಗ್ರಾಮ್ ಶೇರ್ ಮಾಡಿಕೊಂಡಿದ್ದಾರೆ. ಆ ಫೋಟೋಗಳಲ್ಲಿ ಚಿರು, ಧ್ರುವ, ಐಶ್ವರ್ಯಾ, ಅವರ ಸಹೋದರಿ ಅಂಜನಾ, ಸೂರಜ್ ಇದ್ದಾರೆ. ಈ ಫೋಟೋಗೆ ‘ಚಿರಂಜೀವಿ’ ಎಂದು ಬರೆದು ಹಾರ್ಟ್ ಎಮೋಜಿ ಹಾಕಿ ಕ್ಯಾಪ್ಶನ್ ಕೊಟ್ಟಿದ್ದಾರೆ.

    ನಟಿ ಐಶ್ವರ್ಯಾ ಅಭಿನಯಿಸಿರುವ ‘ಪ್ರೇಮ ಬರಹ’ ಸಿನಿಮಾದ ಹಾಡೋಂದರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ಧ್ರುವ, ಚಿರಂಜೀವಿ ಜೊತೆಗೆ ಅರ್ಜುನ್ ಸರ್ಜಾ ಕೂಡ ಮಿಂಚಿದ್ದರು. ಈ ಮೂಲಕ ಐಶ್ವರ್ಯಾ ನಟನೆಯ ಕನ್ನಡ ಸಿನಿಮಾಕ್ಕೆ ಚಿರು ಸಾಥ್ ನೀಡಿದ್ದರು.

    https://www.instagram.com/p/CBVOUWtJF34/?igshid=1mg3oio32tqnq

    ಅಣ್ಣನನ್ನು ಕಳೆದುಕೊಂಡು ಐದು ದಿನಗಳ ಬಳಿಕ ಧ್ರುವ ಸರ್ಜಾ ಇನ್‍ಸ್ಟಾಗ್ರಾಂನಲ್ಲಿ ತಮ್ಮ ನೋವನ್ನು ಹೇಳಿಕೊಂಡಿದ್ದರು. ಚಿರಂಜೀವಿ ಸರ್ಜಾ ಸಾವಿಗೂ ಒಂದು ದಿನ ಮುನ್ನ ಶೇರ್ ಮಾಡಿಕೊಂಡಿದ್ದ ಫೋಟೋ ನೋಡಿ ನೋವನ್ನು ತೋಡಿಕೊಂಡಿದ್ದರು. ‘ನೀನು ನನಗೆ ವಾಪಸ್ ಬೇಕು. ನೀ ಇರದೆ ನನಗೆ ಇರಲು ಸಾಧ್ಯವಾಗುತ್ತಿಲ್ಲ’ ಎಂದು ಧ್ರುವ ಸರ್ಜಾ ನೋವಿನ ನುಡಿಗಳನ್ನು ಸ್ಟೇಟಸ್‍ನಲ್ಲಿ ಬರೆದುಕೊಂಡಿದ್ದರು.