Tag: ಐಶ್ವರ್ಯಾ ಗೌಡ

  • ಡಿಕೆ ಬ್ರದರ್ಸ್ ಹೆಸ್ರಲ್ಲಿ ವಂಚನೆ ಕೇಸ್; ಸಿನಿಮಾ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಿದ್ದ `ಬಂಗಾರಿ’ ಗೌಡ!

    ಡಿಕೆ ಬ್ರದರ್ಸ್ ಹೆಸ್ರಲ್ಲಿ ವಂಚನೆ ಕೇಸ್; ಸಿನಿಮಾ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಿದ್ದ `ಬಂಗಾರಿ’ ಗೌಡ!

    ಬೆಂಗಳೂರು: ಡಿಕೆ ಬ್ರದರ್ಸ್ ಹೆಸರಿನಲ್ಲಿ ಕೋಟಿ ಕೋಟಿ ರೂ. ವಂಚನೆ ಮಾಡಿದ ಐಶ್ವರ್ಯ ಗೌಡ (Aishwarya Gowda) ಪ್ರಕರಣ ಸಂಬಂಧ ಮತ್ತೊಂದು ಸ್ಫೋಟಕ ಮಾಹಿತಿ ಹೊರಬಿದ್ದಿದೆ.

    ಡಿ.ಕೆ.ಸುರೇಶ್ (D K Suresh) ಹಾಗೂ ಡಿ.ಕೆ.ಶಿವಕುಮಾರ್ (D K Shivakumar) ಅವರು ನನ್ನ ಅಣ್ಣಂದಿರು, ನಾನು ಅವರ ತಂಗಿ ಅಂತಾ ಹೇಳಿಕೊಂಡು ವಂಚನೆ ಮಾಡಿರುವ ಐಶ್ವರ್ಯ ಗೌಡ ಪ್ರಕರಣ ಫಿಲ್ಮ್ ಚೇಂಬರ್ ಮೆಟ್ಟಿಲೇರಿದೆ. ತನಿಖೆ ವೇಳೆ ಬಂಗಾರಿ ಗೌಡ ಸಿನಿಮಾ ನಿರ್ಮಾಣ ಮಾಡೋದಕ್ಕೆ ತಯಾರಿ ನಡೆಸಿದ್ದಳು ಅನ್ನೋ ಮಾಹಿತಿ ಹೊರಬಿದ್ದಿದೆ. ಇದನ್ನೂ ಓದಿ: ಕಳ್ಳ ಸಂಬಂಧ ಆರೋಪ – ಯುವಕನನ್ನ ಥಳಿಸಿ ಚಿಕ್ಕಮ್ಮನೊಂದಿಗೆ ಮದುವೆ ಮಾಡಿಸಿದ ಗ್ಯಾಂಗ್‌

    ಐಶ್ವರ್ಯ ಗೌಡ, ಎಸ್‌ಎಲ್‌ವಿ ಪ್ರೊಡಕ್ಷನ್ಸ್ ಅನ್ನೋ ಸಂಸ್ಥೆಯನ್ನ ನೊಂದಾಯಿಸಿ ಆ ಮೂಲಕ ಸಿನಿಮಾ ನಿರ್ಮಾಣ ಮಾಡಲು ಪ್ಲ್ಯಾನ್ ಮಾಡಿದ್ದಳು ಎಂಬ ವಿಚಾರ ಬಯಲಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಲು ಫಿಲ್ಮ್ ಚೇಂಬರ್‌ಗೆ (Film Chamber) ಸಿಐಡಿ ಡಿವೈಎಸ್‌ಪಿ ಅಂಜುಮಾಲ ನಾಯಕ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಮಾದರಿಯಲ್ಲಿ ಭಯಾನಕ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್‌ – ಪ್ರಮುಖ ಆರೋಪಿ ಅರೆಸ್ಟ್‌

    ಇನ್ನು ಈ ವಿಚಾರವಾಗಿ ವಾಣಿಜ್ಯ ಮಂಡಳಿಯಿಂದಲೂ ಪ್ರತಿಕ್ರಿಯೆ ಸಿಕ್ಕಿದ್ದು, ಈ ಹೆಸರಿನಲ್ಲಿ ಯಾವ ಪ್ರೊಡಕ್ಷನ್ ರಿಜಿಸ್ಟರ್ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

  • ಇಡಿಯಿಂದ ಎರಡನೇ ಬಾರಿ ವಿಚಾರಣೆ – ಆಸ್ತಿಯ ಲೆಕ್ಕ ಕೊಟ್ಟ ಡಿ.ಕೆ ಸುರೇಶ್

    ಇಡಿಯಿಂದ ಎರಡನೇ ಬಾರಿ ವಿಚಾರಣೆ – ಆಸ್ತಿಯ ಲೆಕ್ಕ ಕೊಟ್ಟ ಡಿ.ಕೆ ಸುರೇಶ್

    ಬೆಂಗಳೂರು: ಐಶ್ವರ್ಯ ಗೌಡಳಿಂದ (Aishwarya Gowda) ವಂಚನೆ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಂಸದ ಡಿ.ಕೆ ಸುರೇಶ್‌ರನ್ನ (D K Suresh) ಎರಡನೇ ಬಾರಿಗೆ ವಿಚಾರಣೆ ನಡೆಸಿದ್ದಾರೆ.

    10 ದಿನಗಳ ಹಿಂದೆ ವಿಚಾರಣೆ ಎದರುಸಿದ ಬಳಿಕ ಜುಲೈ 8ಕ್ಕೆ ಹೆಚ್ಚುವರಿ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಮಂಗಳವಾರ 11 ಗಂಟೆ ವೇಳೆಗೆ ವಿಚಾರಣೆಗೆ ಹಾಜರಾಗಿ ಮಧ್ಯಾಹ್ನ 2 ಗಂಟೆವರೆಗೂ ವಿಚಾರಣೆ ಎದುರಿಸಿದರು. ಇದನ್ನೂ ಓದಿ: ಕಾಂತಾರ ಪ್ರೀಕ್ವೆಲ್ ಯಶಸ್ಸಿಗಾಗಿ ರಿಷಬ್ ಶೆಟ್ಟಿ ಸ್ನೇಹಿತರಿಂದ ವಿಶೇಷ ಪೂಜೆ

    ವಿಚಾರಣೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನ್ಯಾಯಕ್ಕೆ ಒಳಗಾಗಿದ್ದವರು ಏನು ಮಾಹಿತಿ ಕೊಟ್ಟಿದ್ದಾರೊ ನನಗೆ ಗೊತ್ತಿಲ್ಲ. ನನ್ನನ್ನು ಕರೆದಿದ್ದಾರೆ ಅದಕ್ಕೆ ಬಂದು ಹೇಳಿಕೆ ಕೊಟ್ಟಿದ್ದೇನೆ. ಅವರು ಕೇಳಿದ ದಾಖಲೆ ನೀಡಿದ್ದೇನೆ. ವೈಯಕ್ತಿಕ ಆಸ್ತಿ ಹಾಗೂ ಅದರ ದಾಖಲೆಗಳನ್ನು ಕೇಳಿದರು ಅದನ್ನೂ ಕೊಟ್ಟಿದ್ದೇನೆ ಎಂದರು. ಇದನ್ನೂ ಓದಿ: ಶೂ ಒಳಗೆ, ಮನೆ ಎದುರು ಕೀ ಮುಚ್ಚಿಡುವವರೇ ಹುಷಾರ್ – 65 ಲಕ್ಷ ರೂ. ಕನ್ನ ಹಾಕಿದ್ದವ ಅರೆಸ್ಟ್

    ನನಗೂ ಆಕೆಗೂ ಯಾವುದೇ ಸಂಬಂಧ ಇಲ್ಲ. ಅದು ಹೇಗೆ ಈ ಕೇಸ್‌ಗೆ ಲಿಂಕ್ ಮಾಡಿದ್ರೋ ಗೊತ್ತಿಲ್ಲ. ಕೊಟ್ಟಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತೇವೆ ಎಂದಿದ್ದಾರೆ. ಅವರು ಪರಿಶೀಲನೆ ನಡೆಸಲಿ. ಮತ್ತೆ ವಿಚಾರಣೆಗೆ ಬನ್ನಿ ಎಂದು ಕರೆದಿಲ್ಲ. ಐಟಿಗೂ, ಲೋಕಾಯುಕ್ತಕ್ಕೂ ಸಹ ಮಾಹಿತಿ ಮತ್ತು ದಾಖಲಾತಿ ಕೊಟ್ಟಿದ್ದೇವೆ. ಅದೇ ರೀತಿ ಇಲ್ಲಿಯೂ ಕೊಟ್ಟಿದ್ದು ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಿದ್ದೇನೆ ಎಂದು ಹೇಳಿದರು.

  • ಗುರುವಾರ ವಿಚಾರಣೆಗೆ ಇಡಿ ಸಮನ್ಸ್ ಬಂದಿದೆ: ಡಿ.ಕೆ ಸುರೇಶ್

    ಗುರುವಾರ ವಿಚಾರಣೆಗೆ ಇಡಿ ಸಮನ್ಸ್ ಬಂದಿದೆ: ಡಿ.ಕೆ ಸುರೇಶ್

    ಬೆಂಗಳೂರು: ಐಶ್ವರ್ಯ ಗೌಡ (Aishwarya Gowda) ಪ್ರಕರಣದಲ್ಲಿ ಇಡಿ ಸಮನ್ಸ್ ಬಂದಿದ್ದು, ಗುರುವಾರ ವಿಚಾರಣೆಗೆ ಬರಲು ಹೇಳಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ (DK Suresh) ಸ್ಪಷ್ಟನೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಮಧ್ಯಾಹ್ನ 12:30ಕ್ಕೆ ಇಡಿಯವರು ಬಂದು ಸಮನ್ಸ್ ನೀಡಿದ್ದಾರೆ. ನಾನು ಹೊರಗೆ ಹೋಗಿದ್ದೆ. ಇಡಿಯವರು ಬಂದಿದ್ದಾರೆ ಎಂದು ಗೊತ್ತಾದ ಮೇಲೆ ಬಂದೆ ಅವರು ಸಮನ್ಸ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಐಶ್ವರ್ಯಗೌಡ ವಂಚನೆ ಕೇಸ್ – ಡಿ.ಕೆ.ಸುರೇಶ್‌ಗೆ ED ಸಮನ್ಸ್

    ಸಮನ್ಸ್‌ನಲ್ಲಿ ಯಾವ ಪ್ರಕರಣ ಅಂತ ಇಲ್ಲ. ಆದರೆ ದಾಖಲಾತಿ ನೋಡಿದಾಗ ಈ ಪ್ರಕರಣ ಅಂತ ಗೊತ್ತಾಯ್ತು. ಗುರುವಾರ ವಿಚಾರಣೆಗೆ ಬನ್ನಿ ಅಂದಿದ್ದಾರೆ. ಆದರೆ ಪೂರ್ವ ನಿಯೋಜಿತ ಕಾರ್ಯಕ್ರಮ ಇದೆ. ಅದಕ್ಕೆ ಸೋಮವಾರ ಬರುತ್ತೇನೆ ಎಂದು ಮೌಖಿಕವಾಗಿ ತಿಳಿಸಿದ್ದೇನೆ. ಈಗ ಮೇಲ್ ಮೂಲಕ ಅಧಿಕೃತವಾಗಿ ತಿಳಿಸುತ್ತಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ದ್ವೇಷ ಭಾಷಣದ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಖಾದರ್ ಅಸಮಾಧಾನ – ಗೃಹ ಸಚಿವರಿಗೆ ಪತ್ರ

    ನಾನು ಯಾವುದೇ ಅಕೌಂಟ್ ಟ್ರಾನ್ಸಾಕ್ಷನ್ ನಡೆಸಿರಲಿಲ್ಲ. ಅವರು ನಮ್ಮ ಕ್ಷೇತ್ರದವರು ಒಂದೆರಡು ಕಾರ್ಯಕ್ರಮಕ್ಕೆ ಹೋಗಿದ್ದೆ. ನನ್ನ ತಂಗಿ ಅನ್ನೋ ಹೆಸರಲ್ಲಿ ಹೀಗೆಲ್ಲ ಮಾಡಿದ್ದಾರೆ ಎಂದು ಗೊತ್ತಾದಾಗ ನಾನೇ ದೂರು ಕೊಟ್ಟಿದ್ದೇನೆ. ಇಡಿಯವರು 7 ರಿಂದ 8 ದಾಖಲೆಗಳನ್ನು ಕೇಳಿದ್ದಾರೆ. ನನ್ನ ಬಳಿ ದಾಖಲೆ ಕೇಳಿದ್ದು ಅಸಂಬದ್ಧ. ಅದನ್ನ ಹೋದಾಗ ಅಲ್ಲಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

  • ಎಂಗೇಜ್ ಮೆಂಟ್ ಮೂಡ್ ನಲ್ಲಿ ನಟಿ ಐಶ್ವರ್ಯಾ ಗೌಡ

    ಎಂಗೇಜ್ ಮೆಂಟ್ ಮೂಡ್ ನಲ್ಲಿ ನಟಿ ಐಶ್ವರ್ಯಾ ಗೌಡ

    ತ್ತೀಚೆಗೆ ಬಿಡುಗಡೆಯಾದ ‘ಪ್ರವೀಣ’ ಚಿತ್ರದಲ್ಲಿ ತಮ್ಮ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ನಟಿ ಐಶ್ವರ್ಯಾ ಗೌಡ (Aishwarya Gowda), ಇದೀಗ ಬೋನಗಾನಿ (Bonagani)ಎಂಟರ್ಟೈನ್ಮೆಂಟ್ ಅಡಿ ನಿರ್ಮಾಣವಾಗುತ್ತಿರುವ ‘ಎಂಗೇಜ್ ಮೆಂಟ್’ (Engagement) ಎಂಬ ಪ್ಯಾನ್ ಇಂಡಿಯಾ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

    ನಿಖಿಲ್ ಕುಮಾರ್ ಅಭಿನಯದ ‘ಜಾಗ್ವಾರ್’ ಚಿತ್ರದಲ್ಲಿ ಬಾಲನಟಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಐಶ್ವರ್ಯಾ, ಪ್ರವೀಣ ಚಿತ್ರದಲ್ಲಿ ನಟಿಸಿದರು. ಆ ನಂತರ ರಾಜು ಬೋನಗಾನಿ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರ ‘ರೇವ್ ಪಾರ್ಟಿ’ಯಲ್ಲಿ ದ್ವಿತೀಯ ನಾಯಕಿಯಾಗಿ ಅಭಿನಯಿಸಿದರು. ಇಂದಿನ ಯುವಜನತೆ ಡ್ರಗ್ಸ್ ಗೆ ಹೇಗೆ ದಾಸರಾಗುತ್ತಿದ್ದಾರೆ ಎಂದು ಸಾರುವ ಈ ಚಿತ್ರ ಬಿಡುಗಡೆ ಆಗುವುದಕ್ಕಿಂತ ಮೊದಲೇ, ಅದೇ ನಿರ್ದೇಶಕರ ಇನ್ನೊಂದು ಪ್ಯಾನ್ ಇಂಡಿಯಾ ಚಿತ್ರವಾದ ‘ಎಂಗೇಜ್ ಮೆಂಟ್’ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅಪ್ಪಾಜಿ ಮೇಲಿನ ಪ್ರೀತಿ ಉಕ್ಕಿ ಹರಿಯುತ್ತಿದೆ – ನಿಶ್ವಿಕಾ ನಾಯ್ಡು

    ತಮ್ಮ ಚಿತ್ರಜೀವನದ ಕುರಿತು ಮಾತನಾಡುವ ಐಶ್ವರ್ಯಾ, ‘ನನಗೆ ಚಿಕ್ಕಂದಿನಿಂದಲೂ ನಟನೆಯ  ಬಗ್ಗೆ ಅಪಾರವಾದ ಆಸಕ್ತಿ. ಅದೇ ಆಸಕ್ತಿಯಿಂದ ‘ಜಾಗ್ವಾರ್’ ಚಿತ್ರದ ಮೂಲಕ ಚಿತ್ರರಂಗಕ್ಕೆ ಬಂದೆ. ಪ್ರವೀಣ ಚಿತ್ರ ಸಹ ನನಗೆ ಒಳ್ಳೆಯ ಬ್ರೇಕ್ ನೀಡಿತು. ಆ ಚಿತ್ರದಿಂದ ನನಗೆ ರೇವ್ ಪಾರ್ಟಿ ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿತು. ಅದರಲ್ಲಿನ ನನ್ನ ಅಭಿನಯದ ನೋಡಿ ನಿರ್ದೇಶಕ ಬೋನಗಾನಿ ಅವರು ‘ಎಂಗೇಜ್ ಮೆಂಟ್’ ಚಿತ್ರದಲ್ಲಿ ನಾಯಕಿಯಾಗುವ ಅವಕಾಶವನ್ನು ನೀಡಿದ್ದಾರೆ. ಈ ಚಿತ್ರ ಸಹ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಯಶಸ್ಸು ಕಾಣಲಿದೆ ಎಂಬ ನಂಬಿಕೆ ನನಗಿದೆ’  ಎಂದು ಹೇಳುತ್ತಾರೆ. ‘ಈ ಸಿನಿಮಾದ ಪ್ರೀಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ.