Tag: ಐಶ್ವರ್ಯಾ ರೈ

  • ‘ಪೊನ್ನಿಯಿನ್ ಸೆಲ್ವನ್-2’ ಸಿನಿಮಾದ ಮತ್ತೊಂದು ಹಾಡು ರಿಲೀಸ್

    ‘ಪೊನ್ನಿಯಿನ್ ಸೆಲ್ವನ್-2’ ಸಿನಿಮಾದ ಮತ್ತೊಂದು ಹಾಡು ರಿಲೀಸ್

    ಖ್ಯಾತ ನಿರ್ದೇಶಕ ಮಣಿರತ್ನಂ (Mani Ratnam) ಡ್ರೀಮ್ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ ‘ಪೊನ್ನಿಯಿನ್ ಸೆಲ್ವನ್-2 (Ponniyin Selvan 2) ಬಿಡುಗಡೆಗೆ ರೆಡಿಯಾಗಿದೆ. ಏಪ್ರಿಲ್ 28ಕ್ಕೆ ಸಿನಿಮಾ ವರ್ಲ್ಡ್ ವೈಡ್ ಅದ್ದೂರಿಯಾಗಿ ತೆರೆ ಕಾಣುತ್ತಿದೆ. ಈಗಾಗಲೇ ಟೀಸರ್ ಮೂಲಕ ಸೀಕ್ವೆಲ್ 2 ಮೋಡಿ ಮಾಡಲು ಶುರುವಿಟ್ಟಿದೆ. ಇದೀಗ ಚಿತ್ರತಂಡ ಚಿತ್ರದ ಮೊದಲ ಸಾಂಗ್ ‘ಕಿರುನಗೆ’ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆ ಮಾಡಿದೆ.

    ಮ್ಯೂಸಿಕ್ ಮಾಂತ್ರಿಕ ಎ.ಆರ್.ರೆಹಮಾನ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ‘ಕಿರುನಗೆ’ ಹಾಡಿಗೆ ಜಯಂತ್ ಕಾಯ್ಕಿಣಿ ಚೆಂದದ ಸಾಲುಗಳನ್ನು ಪೋಣಿಸಿದ್ದು, ಗಾಯಕಿ ರಕ್ಷಿತಾ ಸುರೇಶ್ ಇಂಪಾದ ದನಿಯಾಗಿದ್ದಾರೆ. ಕಿರುನಗೆ  ಮೆಲೋಡಿ ಹಾಡು ಬಿಡುಗಡೆಯಾಗಿ ಕೇಳುಗರ ಮನ  ಸೆಳೆಯುತ್ತಿದೆ.  ಇದನ್ನೂ ಓದಿ: ಸೆಕ್ಸ್ ಸಿಂಬಲ್ ಅಂತ ಕರೆದರೆ ಬೇಸರವಿಲ್ಲ ಎಂದ ನಟಿ ಮಲೈಕಾ

    ಲೈಕಾ ಪ್ರೊಡಕ್ಷನ್ಸ್ ಮತ್ತು ಮದ್ರಾಸ್ ಟಾಕೀಸ್ ಬ್ಯಾನರ್ ನಡಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಸ್ಟಾರ್ ತಾರಾಬಳಗವಿರುವ ಸಿನಿಮಾ ‘ಪೊನ್ನಿಯಿನ್ ಸೆಲ್ವನ್ -2’. ಕಾರ್ತಿ (Karthi), ಐಶ್ವರ್ಯಾ ರೈ (Aishwarya Rai), ಚಿಯಾನ್ ವಿಕ್ರಮ್, ಜಯಂ ರವಿ, ತ್ರಿಶಾ, ಶರತ್ ಕುಮಾರ್, ಪ್ರಕಾಶ್ ರಾಜ್ ದಿಗ್ಗಜ ಕಲಾವಿದರ ಸಮಾಗಮ ಚಿತ್ರದಲ್ಲಿದೆ. ಮಣಿರತ್ನಂ ನಿರ್ದೇಶನ ಒಂದು ಶಕ್ತಿಯಾದ್ರೆ, ಎ.ಆರ್.ರೆಹಮಾನ್ ಮ್ಯೂಸಿಕ್, ರವಿವರ್ಮನ್ ಕ್ಯಾಮೆರಾ ವರ್ಕ್, ಸ್ಟಾರ್ ಹಾಗೂ ಅನುಭವಿ ಕಲಾವಿದರ ನಟನೆ, ಅದ್ದೂರಿ ಮೇಕಿಂಗ್ ಎಲ್ಲವೂ ಸೀಕ್ವೆಲ್ 2 ಮೇಲೆ ನಿರೀಕ್ಷೆ ಹೆಚ್ಚಿಸಿದೆ.

    ಲೇಖಕ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕಲ್ಕಿ ಕೃಷ್ಣಮೂರ್ತಿ ಬರೆದ ಕಾದಂಬರಿ ‘ಪೊನ್ನಿಯಿನ್ ಸೆಲ್ವನ್’ ಆಧಾರಿತ ಚಿತ್ರವಿದು. ಸೆಪ್ಟೆಂಬರ್ 30ರಲ್ಲಿ ತೆರೆಕಂಡ ಮೊದಲ ಸೀಕ್ವೆಲ್ ಅಭೂತಪೂರ್ವ ರೆಸ್ಪಾನ್ಸ್ ಪಡೆದುಕೊಂಡಿತ್ತು. ಇದೀಗ ಆ ಗೆಲುವಿನ ಸಂಭ್ರಮದಲ್ಲೇ ಎರಡನೇ ಸೀಕ್ವೆಲ್ ರೆಕಾರ್ಡ್ ಕ್ರಿಯೇಟ್ ಮಾಡಲು ರೆಡಿಯಾಗಿದೆ.  ಏಪ್ರಿಲ್ 28ಕ್ಕೆ ‘ಪೊನ್ನಿಯಿನ್ ಸೆಲ್ವನ್’ ಸೀಕ್ವೆಲ್ 2 ತೆರೆ ಮೇಲೆ ಮ್ಯಾಜಿಕ್ ಸೃಷ್ಟಿಸಲು ಬರಲಿದೆ.

  • ‘ಪೊನ್ನಿಯಿನ್ ಸೆಲ್ವನ್-2’ ತಮಿಳು, ಹಿಂದಿ ಆವೃತ್ತಿ ಬಿಡುಗಡೆ

    ‘ಪೊನ್ನಿಯಿನ್ ಸೆಲ್ವನ್-2’ ತಮಿಳು, ಹಿಂದಿ ಆವೃತ್ತಿ ಬಿಡುಗಡೆ

    ಮ್ಯಾಕ್ಸ್ ಕಾರ್ಪೊರೇಷನ್ ಮತ್ತು ಲೈಕಾ ಪ್ರೊಡಕ್ಷನ್ಸ್ ದಕ್ಷಿಣ ಭಾರತದ ಬಹು ನಿರೀಕ್ಷಿತ ಚಿತ್ರ ‘ಪೊನ್ನಿಯಿನ್ ಸೆಲ್ವನ್-2’ (Ponniyin Selvan 2) ತಮಿಳು ಹಾಗೂ ಹಿಂದಿ ಆವೃತ್ತಿ ಐಮ್ಯಾಕ್ಸ್ ನಲ್ಲಿ ಬಿಡುಗಡೆಯಾಗುತ್ತಿರುವುದನ್ನು ಖಾತ್ರಿ ಪಡಿಸಿದೆ. ತಮಿಳು ಚಿತ್ರರಂಗದ ಬಿಗ್ ಪ್ರಾಜೆಕ್ಟ್ ಹಾಗೂ ಸ್ಟಾರ್ ತಾರಾಗಣವನ್ನೊಳಗೊಂಡ ‘ಪೊನ್ನಿಯಿನ್ ಸೆಲ್ವನ್-2’ ಏಪ್ರಿಲ್ 28ರಂದು ಬಿಡುಗಡೆಯಾಗುತ್ತಿದ್ದು, ಭಾರತದಾದ್ಯಂತ ಚಿತ್ರದ ತಮಿಳು ಹಾಗೂ ಹಿಂದಿ ಆವೃತ್ತಿ ಐಮ್ಯಾಕ್ಸ್ ಥಿಯೇಟರ್ ಗಳಲ್ಲಿ ಬಿಡುಗಡೆಯಾಗುತ್ತಿದೆ.

    ಖ್ಯಾತ ನಿರ್ದೇಶಕ ಮಣಿರತ್ನಂ (Mani Ratnam) ಡ್ರೀಮ್ ಪ್ರಾಜೆಕ್ಟ್ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ. ಕಾರ್ತಿ (Karthi), ಐಶ್ವರ್ಯಾ ರೈ (Aishwarya Rai), ಚಿಯಾನ್ ವಿಕ್ರಮ್ (Chiyan Vikram), ಜಯಂ ರವಿ, ತ್ರಿಶಾ, ಶರತ್ ಕುಮಾರ್, ಪ್ರಕಾಶ್ ರಾಜ್ ರಂತಹ ದಿಗ್ಗಜ ಕಲಾವಿದರ ಸಮಾಗಮವಿರುವ ಈ ಚಿತ್ರ ಪ್ರೇಕ್ಷಕ ಮಹಾಶಯರಿಂದಲೂ ಬಹುಪರಾಕ್ ಪಡೆದುಕೊಂಡಿತ್ತು. ಸೀಕ್ವಲ್ 2 ಏಪ್ರಿಲ್ 28ರಂದು ಮನರಂಜನೆ ನೀಡಲು ಸಜ್ಜಾಗಿದೆ. ಪ್ಯಾನ್ ಇಂಡಿಯಾ ಚಿತ್ರದ ತಮಿಳು ಹಾಗೂ ಹಿಂದಿ ಸೀಕ್ವೆಲ್ ಐಮ್ಯಾಕ್ಸ್ ನಲ್ಲಿ ಬಿಡುಗಡೆಯಾಗುತ್ತಿದೆ. ಇದನ್ನೂ ಓದಿ:ಥೈಲ್ಯಾಂಡ್‌ನಲ್ಲಿ ನಟಿ ಸೋನು ಜೊತೆ ನೇಹಾ ಗೌಡ ಮೋಜು- ಮಸ್ತಿ

    ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ಪ್ರಖ್ಯಾತಿ ಗಳಿಸಿರುವ ಲೈಕಾ ಸ್ಟುಡಿಯೋ ತಮಿಳು ಚಿತ್ರರಂಗದ ಬಿಗ್ ಬಜೆಟ್ ಸಿನಿಮಾಗಳಾದ ‘ಐ’, ‘ರೋಬೋಟ್ 2.0’ ಹಾಗೂ ‘ಪೊನ್ನಿಯಿನ್ ಸೆಲ್ವನ್- 1’ ನಿರ್ಮಾಣ ಮಾಡಿದೆ. ಇದೀಗ ‘ಪೊನ್ನಿಯಿನ್ ಸೆಲ್ವನ್- 2’ ಕೂಡ ಇದೇ ಸಂಸ್ಥೆಯಡಿ ನಿರ್ಮಾಣವಾಗಿ ತೆರೆ ಕಾಣುತ್ತಿದೆ. ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಸಂಗೀತ ನಿರ್ದೇಶನ, ರವಿವರ್ಮನ್ ಛಾಯಾಗ್ರಹಣ, ಶ್ರೀಕರ್ ಪ್ರಸಾದ್ ಸಂಕಲನ ಚಿತ್ರಕ್ಕಿದೆ. ಸಾಕಷ್ಟು ನಿರೀಕ್ಷೆ ಕ್ರಿಯೇಟ್ ಮಾಡಿರುವ ‘ಪೊನ್ನಿಯಿನ್ ಸೆಲ್ವನ್- 2’ ಏಪ್ರಿಲ್ 28ರಂದು ಬಿಡುಗಡೆಯಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸೆಲೆಬ್ರಿಟಿಗಳ ಕ್ರಿಸ್‌ಮಸ್‌ ಹಬ್ಬದ ಸಂಭ್ರಮ

    ಸೆಲೆಬ್ರಿಟಿಗಳ ಕ್ರಿಸ್‌ಮಸ್‌ ಹಬ್ಬದ ಸಂಭ್ರಮ

    ವಿಶ್ವಾದ್ಯಂತ ಕ್ರಿಸ್‌ಮಸ್ ಹಬ್ಬದ ಸಂಭ್ರಮ, ಸಡಗರ ಜೋರಾಗಿದೆ. ಹಾಗೆಯೇ ಸೆಲೆಬ್ರೆಟಿಗಳ ಮನೆಯಲ್ಲೂ ಕ್ರಿಸ್‌ಮಸ್ ಹಬ್ಬ (Christmas Festival) ಕಳೆಗಟ್ಟಿದೆ. ರಾಧಿಕಾ ಪಂಡಿತ್, ರಶ್ಮಿಕಾ, ಐಶ್ವರ್ಯ ರೈ ಸೇರಿದಂತೆ ಹಲವರು ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ.

    ಸ್ಯಾಂಡಲ್‌ವುಡ್ (Sandalwood) ನಟಿ ರಾಧಿಕಾ ಪಂಡಿತ್ (Radhika Pandit) ಪ್ರತಿ ವರ್ಷದಂತೆ ಈ ವರ್ಷವು ಕೂಡ ಕ್ರಿಸ್‌ಮಸ್ ಹಬ್ಬವನ್ನು ಆಚರಿಸಿದ್ದಾರೆ. ಇತ್ತೀಚೆಗೆ ಐರಾ ಮತ್ತು ಯಥರ್ವ್ ಕ್ರಿಸ್‌ಮಸ್‌ಗೆ ಕುಕ್ಕೀಸ್ ಮಾಡ್ತಿರುವ ಫೋಟೋಗಳನ್ನ ನಟಿ ಶೇರ್ ಮಾಡಿದ್ದರು.

    ಐಶ್ವರ್ಯ ರೈ (Aishwarya Rai) ಕೂಡ ಮುದ್ದು ಮಗಳು ಆರಾಧ್ಯ ಜೊತೆಗಿನ ಕ್ರಿಸ್‌ಮಸ್ ಸಂಭ್ರಮದ ಫೋಟೋವನ್ನ ಹಂಚಿಕೊಂಡಿದ್ದರು. ಈ ಮೂಲಕ ಎಲ್ಲರಿಗೂ ನಟಿ ಶುಭ ಹಾರೈಸಿದ್ದರು. ಇದನ್ನೂ ಓದಿ: ಬಾಯ್‌ಫ್ರೆಂಡ್ ಜಾಕಿ ಭಗ್ನಾನಿ ಬರ್ತ್‌ಡೇಗೆ ನಟಿ ರಾಕುಲ್ ಲವ್ಲಿ ವಿಶ್

    ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ನಟಿ ರಶ್ಮಿಕಾ(Rashmika Mandanna), ಸಿನಿಮಾಗಳಿಗೆ ಬ್ರೇಕ್ ಕೊಟ್ಟು ಕ್ರಿಸ್‌ಮಸ್ ಫೆಸ್ಟಿವಲ್ ಆಚರಣೆ ಮಾಡಿದ್ದಾರೆ. ಕ್ರಿಸ್‌ಮಸ್ ಟ್ರಿ ಪಕ್ಕ ನಿಂತಿರುವ ಚೆಂದದ ಫೋಟೋವನ್ನ ಶೇರ್ ಮಾಡಿದ್ದಾರೆ.

     

    View this post on Instagram

     

    A post shared by Preity G Zinta (@realpz)

    ಬಾಲಿವುಡ್ ನಟಿ ಪ್ರೀತಿ ಜಿಂಟಾ (Preethi Zinta) ಮನೆಯಲ್ಲಿ ಕ್ರಿಸ್‌ಮಸ್ ಹಬ್ಬ ಆಚರಿಸಲಾಗಿದೆ. ಈ ಕುರಿತ ವಿಡಿಯೋವನ್ನ ನಟಿ ಶೇರ್ ಮಾಡಿದ್ದಾರೆ. ಹಬ್ಬದ ಪ್ರಯುಕ್ತ ಎಲ್ಲರಿಗೂ ಒಳ್ಳೆಯದಾಗಲಿ ಎಂದು ವಿಶ್ ಮಾಡಿದ್ದಾರೆ.

    ನಟಿ ಕರಿಷ್ಮಾ ಕಪೂರ್ (Karishma Kapoor) ಅವರು ಸಾಂತಾ ಕ್ಲಾಸ್ ರೀತಿ ಡ್ರೆಸ್ ಮಾಡಿಕೊಂಡಿದ್ದಾರೆ. ಕ್ರಿಸ್‌ಮಸ್ ಟ್ರೀ ಎದುರು ಕುಳಿತು, ತಮ್ಮ ಮುದ್ದು ಶ್ವಾನದ ಜೊತೆ ಅವರು ಪೋಸ್ ನೀಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಹಬ್ಬದ ಶುಭಾಶಯ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪುತ್ರಿ ಆರಾಧ್ಯಗೆ ಲಿಪ್ ಕಿಸ್ ಮಾಡಿ ಹುಟ್ಟುಹಬ್ಬಕ್ಕೆ ಶುಭಕೋರಿದ ಐಶ್ವರ್ಯಾ ರೈ: ನೆಟ್ಟಿಗರ ಟ್ರೋಲ್

    ಪುತ್ರಿ ಆರಾಧ್ಯಗೆ ಲಿಪ್ ಕಿಸ್ ಮಾಡಿ ಹುಟ್ಟುಹಬ್ಬಕ್ಕೆ ಶುಭಕೋರಿದ ಐಶ್ವರ್ಯಾ ರೈ: ನೆಟ್ಟಿಗರ ಟ್ರೋಲ್

    ಬಿಗ್ ಬಿ ಸೊಸೆ, ವಿಶ್ವ ಸುಂದರಿ ಐಶ್ವರ್ಯಾ ರೈ ಬಚ್ಚನ್(Aishwarya Rai Bachchan) ಮತ್ತು ನಟ ಅಭಿಷೇಕ್ ಬಚ್ಚನ್ ಏಕೈಕ ಪುತ್ರಿ ಆರಾಧ್ಯಾ ಬಚ್ಚನ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 11ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಆರಾಧ್ಯಾಳಿಗೆ ಅಮ್ಮ ಐಶ್ವರ್ಯಾ ರೈ ಪ್ರೀತಿಯಿಂದ ಸಿಹಿ ಮುತ್ತು ನೀಡಿ ವಿಶ್ ಮಾಡಿದ್ದಾರೆ. ಮಗಳಿಗೆ ಲಿಪ್‌ಕಿಸ್ ಮಾಡಿರುವ ಐಶ್ವರ್ಯಾ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಐಶ್ವರ್ಯಾ ಮಗಳಿಗೆ ಕಿಸ್ ಮಾಡಿರುವುದಕ್ಕೆ ಕೆಲವರು ತಕರಾರು ಮಾಡಿದ್ದಾರೆ.

    `ಪೊನ್ನಿಯನ್ ಸೆಲ್ವನ್'(Ponniyan Selvan) ಚಿತ್ರದ ಸಕ್ಸಸ್ ನಂತರ ಮತ್ತೆ ಸಿನಿಮಾಗಳಲ್ಲಿ ಐಶ್ವರ್ಯಾ ಆಕ್ಟೀವ್ ಆಗಿದ್ದಾರೆ. ಇನ್ನೂ ಇಂದು ಐಶ್ವರ್ಯಾ ಮಗಳು ಆರಾಧ್ಯ ಹುಟ್ಟುಹಬ್ಬವಾಗಿದ್ದು, ವಿಶೇಷವಾಗಿ ನಟಿ ಶುಭಕೋರಿದ್ದಾರೆ. ಈಗ ನಟಿ ಶುಭಕೋರಿರುವ ರೀತಿಗೆ ನೆಟ್ಟಿಗರಿಂದ ತರಾಟೆ ಶುರುವಾಗಿದೆ. ಮಗಳು ಆರಾಧ್ಯಳಿಗೆ ಮುತ್ತು ನೀಡುತ್ತಿರುವ ಫೋಟೋ ಶೇರ್ ಮಾಡಿ, ನನ್ನ ಪ್ರೀತಿ, ನನ್ನ ಜೀವ, ತುಂಬಾ ಪ್ರೀತಿಸುತ್ತೀನಿ, ನನ್ನ ಆರಾಧ್ಯ ಎಂದು ಬರೆದುಕೊಂಡಿದ್ದಾರೆ. ತಾಯಿ-ಮಗಳ ಮುದ್ದಾದ ಫೋಟೋಗೆ ಅಭಿಮಾನಿಗಳು ಲೈಕ್ಸ್ ಮತ್ತು ಹಾರ್ಟ್ ಇಮೋಜಿ ಹಾಕಿ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಕೆಲವರು ಅತಿಯಾಯಿತು, ತುಟಿಗೆ ಕಿಸ್ ಮಾಡುವುದು ಸರಿಯಲ್ಲ ಎಂದು ಕಾಮೆಂಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದನ್ನೂ ಓದಿ:ಬಿಗ್‌ ಬಾಸ್‌ ಮನೆಯಲ್ಲಿ ಮತ್ತೆ ರೂಪೇಶ್ ರಾಜಣ್ಣ ಕಿರಿಕ್

    ಅನೇಕರು ಹುಟ್ಟುಹಬ್ಬ ಶುಭಾಶಯಗಳು ಮಿನಿ ಐಶ್ ಎಂದು ಹೇಳಿದ್ದಾರೆ. ಮತ್ತೋರ್ವ ಆಭಿಮಾನಿ ಕಾಮೆಂಟ್ ಮಾಡಿ ಸುಂದರವಾದ ಕ್ಷಣವನ್ನು ಕ್ಯಾಪ್ಚರ್ ಮಾಡಲಾಗಿದೆ ಎಂದು ಹೇಳಿದ್ದಾರೆ. ತಾಯಿ-ಮಗಳ ಅದ್ಭುತವಾದ ಫೋಟೋ ಎಂದು ವ್ಯಕ್ತಿಯೊಬ್ಬ ಪ್ರೀತಿ ವ್ಯಕ್ತಪಡಿಸಿದ್ದಾರೆ.

    ನಟಿ ಐಶ್ವರ್ಯಾ ಸದಾ ಮಗಳ ಜೊತೆಯೇ ಇರುತ್ತಾರೆ. ಕೈ ಹಿಡಿದುಕೊಂಡೆ ಕರೆದುಕೊಂಡು ಹೋಗುತ್ತಾರೆ. ಈ ಎಲ್ಲಾ ವಿಚಾರಗಳು ಟ್ರೋಲಿಗರ ಬಾಯಿಗೆ ಆಹಾರವಾಗಿತ್ತು. ಈಗ ಮಗಳಿಗೆ ಲಿಪ್ ಕಿಸ್ ಮಾಡಿರೋದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • 46ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಷೇಕ್ ಬಚ್ಚನ್

    46ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಷೇಕ್ ಬಚ್ಚನ್

    ಮುಂಬೈ: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ತಮ್ಮ ಮುಂಬರುವ ಚಿತ್ರ ‘ಘೂಮರ್’ ಸೆಟ್‍ನಲ್ಲಿ ಶನಿವಾರ (ಫೆ. 5) ರಂದು 46ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸಾಮಾಜಿಕ ಜಾಲತಾಣದಲ್ಲಿ ಅವರ ಸ್ನೇಹಿತರು ಹಾಗೂ ಕುಟುಂಬದವರು ಹುಟ್ಟುಹಬ್ಬದ ಪ್ರಯುಕ್ತ ಶುಭಾಶಯಗಳನ್ನು ಸಲ್ಲಿಸಿದ್ದಾರೆ.

    ಪತ್ನಿ ಐಶ್ವರ್ಯಾ ರೈ ಬಚ್ಚನ್, ಅಭಿಷೇಕ್ ಅವರಿಗೆ ಹುಟ್ಟುಹಬ್ಬದ ಸಂದೇಶವನ್ನು ನೀಡಿದ್ದು, ತಮ್ಮ ಕುಟುಂಬದ ಜೊತೆಗೆ ಮಗಳು ಆರಾಧ್ಯ ಹಾಗೂ ಪತಿಯ ಬಾಲ್ಯದ ಫೋಟೋವನ್ನು ಕೊಲಾಜ್ ಮಾಡಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ

    ಹ್ಯಾಪಿ ಹ್ಯಾಪಿ ಬರ್ತ್‍ಡೇ ಡಿಯರೆಸ್ಟ್ ಬೇಬಿ- ಲವ್ ಯೂ ಪಪ್ಪಾ, ನಿಮಗೆ ನನ್ನಿಂದ ಪ್ರೀತಿಯ ಅಪ್ಪುಗೆಗಳು. ದೇವರು ನಿಮಗೆ ಹೆಚ್ಚು ಸಂತೋಷ, ಶಾಂತಿ, ಉತ್ತಮ ಆರೋಗ್ಯ, ತೃಪ್ತಿ, ಶಾಂತತೆ ಹೀಗೆ ಜೀವನದಲ್ಲಿ ನೀವು ಬಯಸುವುದೆಲ್ಲವನ್ನು ಆಶೀರ್ವದಿಸಲಿ ಎಂದು ಶೀರ್ಷಿಕೆ ಬರೆದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಕನ್ನಡಕ್ಕೂ ದನಿಗೂಡಿಸಿದ್ದ ಲತಾ ಮಂಗೇಶ್ಕರ್

    ಐಶ್ವರ್ಯಾ ರೈ ಅವರು ಈಗಾಗಲೇ ತಮಿಳಿನ ಮಣಿರತ್ನಂ ಅವರ ‘ಪೊನ್ನಿಯಿನ್ ಸೆಲ್ವನ್’ ಚಿತ್ರದ ಮೂಲಕ ಚಲನಚಿತ್ರರಂಗಕ್ಕೆ ಮತ್ತೆ ಮರಳಲು ಸಿದ್ಧರಾಗಿದ್ದಾರೆ. ಚಿತ್ರವು ಇದೇ 2022ರಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

    ಇದರ ಮಧ್ಯೆ ಅಭಿಷೇಕ್ ಬಚ್ಚನ್ ಕೊನೆಯದಾಗಿ ‘ಬಾಬ್ ಬಿಸ್ವಾಸ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ಅಭಿಷೇಕ್ ಅಸಂಭವ ಆದರೆ ಮಾರಣಾಂತಿಕ ಒಪ್ಪಂದದ ಕೊಲೆಗಾರನಾಗಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಟ್ರೇಲರ್ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗಿದೆ. ನಂತರ ತಂದೆ ಬಿಗ್ ಬಿ ಕೂಡ ತಮ್ಮ ಮಗನ ನಟನೆಯ ಬಗ್ಗೆ ಹೆಮ್ಮೆಪಡುತ್ತೇನೆ ಎಂದು ಟ್ವೀಟ್ ಮಾಡಿದ್ದರು.

    ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ 2007 ಏಪ್ರಿಲ್ 20 ರಂದು ವಿವಾಹವಾಗಿದ್ದು, ಈ ಜೋಡಿಗೆ ಆರಾಧ್ಯ ಬಚ್ಚನ್ ಎಂಬ ಮಗಳಿದ್ದಾಳೆ.

  • ಮಾಜಿ ವಿಶ್ವಸುಂದರಿ, ನಟಿ ಐಶ್ವರ್ಯಾ ರೈಗೆ ಇ.ಡಿ ಸಮನ್ಸ್

    ಮಾಜಿ ವಿಶ್ವಸುಂದರಿ, ನಟಿ ಐಶ್ವರ್ಯಾ ರೈಗೆ ಇ.ಡಿ ಸಮನ್ಸ್

    ಮುಂಬೈ: ಮಾಜಿ ವಿಶ್ವಸುಂದರಿ, ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್‍ಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ.

    ದೆಹಲಿಯಲ್ಲಿ ಇರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಇಂದು ಹಾಜರಾಗುವಂತೆ ಐಶ್ವರ್ಯಾ ರೈ ಅವರಿಗೆ ಸಮನ್ಸ್ ನೀಡಲಾಗಿದೆ. ಮುಂಬೈನಲ್ಲಿರುವ ಅವರ ಪ್ರತೀಕ್ಷಾ ನಿವಾಸಕ್ಕೆ ಸಮನ್ಸ್ ತಲುಪಿದ್ದು, 15 ದಿನಗಳ ಒಳಗೆ ಪ್ರತಿಕ್ರಿಯಿಸುವಂತೆ ತಿಳಿಸಲಾಗಿದೆ.

    2016ರಿಂದಲೂ ಪನಾಮಾ ಪೇಪರ್ಸ್ ಲೀಕ್ ಪ್ರಕರಣ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದರು. ಪನಾಮಾ ಪೇಪರ್ಸ್ ಪ್ರಕರಣದಲ್ಲಿ ವಿದೇಶದಲ್ಲಿ ಹಣವನ್ನು ಸಂಗ್ರಹಿಸಿದ ಹಲವಾರು ಸೆಲೆಬ್ರಿಟಿಗಳ ಹೆಸರು ಕೆಳಿಬಂದಿದೆ.

    ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಜಾರಿ ನಿರ್ದೇಶನಾಲಯವು ಹಣ ವರ್ಗಾವಣೆ ತಡೆ ಕಾಯ್ದೆ 2002(ಪೆಎಂಎಲ್‍ಎ)ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಐಶ್ವರ್ಯಾ ರೈ ಬಚ್ಚನ್‍ಗೆ ಸೂಚಿಸಲಾಗಿದೆ. ವಿಚಾರಣೆಗೆ ಹಾಜರಾಗಲು ಬೇರೆ ದಿನಾಂಕವನ್ನು ಅವರು ಕೇಳಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: 40 ಸಾವಿರ ವರ್ಷಗಳಿಂದ ಭಾರತೀಯರ ಡಿಎನ್‌ಎ ಒಂದೇ ಆಗಿದೆ: ಆರ್‌ಎಸ್‌ಎಸ್‌ ಮುಖ್ಯಸ್ಥ

    ಈ ಹಿಂದೆ ಕೂಡ ಐಶ್ವರ್ಯಾರನ್ನು ವಿಚಾರಣೆಗೆ ಕರೆಯಲಾಗಿತ್ತು. ಆದರೆ ಆಗ ಅವರು ಎರಡು ಬಾರಿ ವಿಚಾರಣೆ ದಿನಾಂಕ ಮುಂದೂಡಲು ಕೇಳಿಕೊಂಡಿದ್ದರು ಎನ್ನಲಾಗಿದೆ. ಇದನ್ನೂ ಓದಿ:  ಹಿಂದುತ್ವದಲ್ಲಿ ನಂಬಿಕೆ ಇದ್ದವರು ಭಾರತೀಯರ DNA ಒಂದೇ ಎಂದು ಭಾವಿಸುತ್ತಾರೆ: ರಾಹುಲ್

    ಏನಿದು ಪನಾಮ ಪೇಪರ್ ಕೇಸ್?
    ಅಂತಾರಾಷ್ಟ್ರೀಯ ತನಿಖಾ ಪತ್ರಕರ್ತರ ಒಕ್ಕೂಟ (ಐಸಿಐಜೆ) ಎಂಬ ಅಮೆರಿಕ ಮೂಲದ ಸರ್ಕಾರೇತರ ಸಂಘಟನೆಯೊಂದು `ಪನಾಮ ಪೇಪರ್’ ಹೆಸರಿನಲ್ಲಿ ದಾಖಲೆಗಳನ್ನು 2015ರ ಏಪ್ರಿಲ್ ನಲ್ಲಿ ಬಿಡುಗಡೆ ಮಾಡಿತ್ತು. ಪನಾಮ ಮೂಲದ ಕಾನೂನು ಸೇವಾ ಕಂಪನಿ ಮೊಸ್ಸಾಕ್ ಫೋನ್ಸೆಕಾದಿಂದ ಗುಪ್ತವಾಗಿ ಪಡೆದಿದ್ದ ಮಾಹಿತಿಗಳನ್ನು ಐಸಿಐಜೆ ಬಿಡುಗಡೆ ಮಾಡಿತ್ತು. ವಿಶ್ವದ ಸುಮಾರು 12 ವಿವಿಧ ಈಗಿನ ಮತ್ತು ಮಾಜಿ ನಾಯಕರು, 128 ವಿವಿಧ ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು, ಸಿನಿಮಾ ಸೆಲೆಬ್ರಿಟಿಗಳು ವಿವಿಧ ಕಡೆ ಹಣವನ್ನು ಸಂಗ್ರಹಿಸಿದ್ದ ಮಾಹಿತಿ ಈ ವರದಿಯಲ್ಲಿತ್ತು. 1977 ರಿಂದ 2015 ರವರೆಗೆ 40 ವರ್ಷದ ಅವಧಿಯ ಮಾಹಿತಿಗಳು, 2.14 ಲಕ್ಷ ವಿದೇಶಿ ಸಂಸ್ಥೆಗಳ ಮಾಹಿತಿಗಳು ಇದರಲ್ಲಿತ್ತು.

  • ಸೊಸೆ, ಮೊಮ್ಮಗಳು ಡಿಸ್ಚಾರ್ಜ್ ಖುಷಿಯಿಂದ ಕಣ್ಣೀರಿಟ್ಟ ಬಿಗ್ ಬಿ

    ಸೊಸೆ, ಮೊಮ್ಮಗಳು ಡಿಸ್ಚಾರ್ಜ್ ಖುಷಿಯಿಂದ ಕಣ್ಣೀರಿಟ್ಟ ಬಿಗ್ ಬಿ

    ಮುಂಬೈ: ಸೊಸೆ ಐಶ್ವರ್ಯಾ ರೈ ಮತ್ತು ಮೊಮ್ಮಗಳು ಆರಾಧ್ಯ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸಂತಸದ ವಿಷಯ ಕೇಳಿ ಬಿಗ್ ಬಿ ಅಮಿತಾಬ್ ಬಚ್ಚನ್ ಕಣ್ಣೀರಿಟ್ಟಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅಮಿತಾಬ್ ಬಚ್ಚನ್, ಮೊಮ್ಮಗಳು ಮತ್ತು ಸೊಸೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸುದ್ದಿ ಕೇಳಿದ ಕೂಡಲೇ ಕಣ್ಣಂಚಲಿ ನೀರು ಬಂತು. ಓ ದೇವರೆ ನಿನ್ನ ಕೃಪೆ ಹೀಗೆ ಇರಲಿ ಎಂದು ಭಾವನಾತ್ಮಕವಾಗಿ ಕೆಲ ಸಾಲುಗಳನ್ನು ಬರೆದುಕೊಂಡಿದ್ದಾರೆ.

    ಸೋಮವಾರ ಸಂಜೆ ಪುತ್ರಿ ಮತ್ತು ಪತ್ನಿ ಮುಂಬೈನ ನಾನಾವತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿರುವ ವಿಷಯವನ್ನು ಅಭಿಷೇಕ್ ಬಚ್ಚನ್ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. “ನಿಮ್ಮ ನಿರಂತರ ಪ್ರಾರ್ಥನೆ ಮತ್ತು ಶುಭಾಶಯಗಳಿಗೆ ಧನ್ಯವಾದಗಳು. ಐಶ್ವರ್ಯ ಮತ್ತು ಆರಾಧ್ಯ ಇಬ್ಬರಿಗೂ ಕೋವಿಡ್ ನೆಗೆಟಿವ್ ಬಂದಿದೆ. ಅವರು ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದು, ಈಗ ಮನೆಯಲ್ಲಿದ್ದಾರೆ. ನಾನು ಮತ್ತು ನನ್ನ ತಂದೆ ವೈದ್ಯಕೀಯ ಸಿಬ್ಬಂದಿಯ ಆರೈಕೆಯಲ್ಲಿ ಆಸ್ಪತ್ರೆಯಲ್ಲಿದ್ದೇನೆ” ಎಂದು ಟ್ವೀಟ್ ಮಾಡುವ ಮೂಲಕ ಅಭಿಷೇಕ್ ಬಚ್ಚನ್ ತಿಳಿಸಿದ್ರು.

    ಜುಲೈ 11ರಂದು ಅಭಿಷೇಕ್ ಬಚ್ಚನ್ ಮತ್ತು ಅಮಿತಾಬ್ ಬಚ್ಚನ್ ಇಬ್ಬರಿಗೂ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ಮರುದಿನ ಅಂದ್ರೆ ಐಶ್ವರ್ಯಾ ಮತ್ತು ಆರಾಧ್ಯಗೂ ಸೋಂಕು ಖಚಿತವಾಗಿತ್ತು. ಹಾಗಾಗಿ ಎಲ್ಲರೂ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು.

  • ಐಶ್ವರ್ಯಾ ರೈ ಫೋಟೋ ಹಂಚಿಕೊಂಡ WWE ಸೂಪರ್ ಸ್ಟಾರ್ ಜಾನ್ ಸಿನಾ

    ಐಶ್ವರ್ಯಾ ರೈ ಫೋಟೋ ಹಂಚಿಕೊಂಡ WWE ಸೂಪರ್ ಸ್ಟಾರ್ ಜಾನ್ ಸಿನಾ

    ಮುಂಬೈ: ಡಬ್ಲ್ಯೂಡಬ್ಲ್ಯೂಇ ಸೂಪರ್ ಸ್ಟಾರ್ ಜಾನ್ ಸಿನಾ ಅವರು ಇತ್ತೀಚೆಗೆ ಕೊರೊನಾ ಸೋಂಕಿಗೆ ತುತ್ತಾಗಿರುವ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

    ಇತ್ತೀಚೆಗೆ ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಅವರಿಗೆ ಮೊದಲು ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ನಂತರ ಐಶ್ವರ್ಯಾ ರೈ ಮತ್ತು ಮಗಳ ಆರಾಧ್ಯ ಬಚ್ಚನ್ ಅವರಿಗೆ ಕೊರೊನಾ ಕಾಣಿಸಿಕೊಂಡಿದ್ದು, ಕಳೆದ ಶುಕ್ರವಾರದವರೆಗೂ ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು, ನಂತರ ಅವರನ್ನು ಕೂಡ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    https://www.instagram.com/p/CCyL3cWFeWb/

    ಕೊರೊನಾ ಭೀತಿಯಿಂದ ಆಸ್ಪತ್ರೆ ಸೇರಿರುವ ಐಶ್ವರ್ಯಾ ರೈ ಅವರ ಫೋಟೋವನ್ನು ಜಾನ್ ಸಿನಾ ಅವರು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಆದರೆ ಯಾವುದೇ ಕ್ಯಾಪ್ಶನ್ ಬರೆದುಕೊಂಡಿಲ್ಲ. ಜುಲೈ 11ರಂದು ಅಮಿತಾಬ್ ಬಚ್ಚನ್ ಅವರಿಗೆ ಮತ್ತು ಅಭಿಷೇಕ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಕುರಿತು ಅಂದು ಟ್ವೀಟ್ ಮಾಡಿದ್ದ ಬಿಗ್‍ಬಿ, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆಸ್ಪತ್ರೆಗೆ ಸ್ಥಳಾಂತರಗೊಂಡಿದ್ದೇನೆ ಎಂದಿದ್ದರು. ಆಗ ಕೂಡ ಜಾನ್ ಸಿನಾ ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಅವರ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದರು.

    https://www.instagram.com/p/CCi38tClP1V/

    ಡಬ್ಲ್ಯೂಡಬ್ಲ್ಯೂಇ ಸೂಪರ್ ಸ್ಟಾರ್ ಜಾನ್ ಸಿನಾ ಅವರು ಕುಸ್ತಿಯ ಜೊತೆಗೆ ಸಿನಿಮಾದಲ್ಲಿ ನಟನೆಯನ್ನು ಮಾಡುತ್ತಾರೆ. ಅವರಿಗೆ ಇಡೀ ವಿಶ್ವದಲ್ಲೇ ಅಭಿಮಾನಿಗಳಿದ್ದು, ಭಾರತದಲ್ಲೂ ಅವರ ಅಭಿಮಾನಿಗಳು ಇದ್ದಾರೆ. ಬಾಲಿವುಡ್ ಜೊತೆ ನಿಕಟ ಸಂಬಂಧವೊಂದಿರುವ ಅವರು ಕಳೆದ ಜೂನ್ 14ರಂದು ಆತ್ಮಹತ್ಯೆ ಮಾಡಿಕೊಂಡ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಫೋಟೋವನ್ನು ಕೂಡ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದರು.

  • ಐಶ್ವರ್ಯಾ ರೈ, ಪುತ್ರಿ ಆರಾಧ್ಯ ಬಚ್ಚನ್‌ಗೆ ಕೊರೊನಾ, ಆಸ್ಪತ್ರೆಗೆ ದಾಖಲು

    ಐಶ್ವರ್ಯಾ ರೈ, ಪುತ್ರಿ ಆರಾಧ್ಯ ಬಚ್ಚನ್‌ಗೆ ಕೊರೊನಾ, ಆಸ್ಪತ್ರೆಗೆ ದಾಖಲು

    ಮುಂಬೈ: ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾಧ್ಯ ಬಚ್ಚನ್ ಅವರಿಗೆ ಕೊರೊನಾ ಸೋಂಕು ತಗಲಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಕಳೆದ ಆರು ದಿನಗಳ ಹಿಂದೆ ಹಿರಿಯ ನಟ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್‍ಗೆ ಮೊದಲು ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದಾದ ನಂತರ ನಟಿ ಐಶ್ವರ್ಯಾ ರೈ ಅವರಿಗೂ ಮತ್ತು ಪುತ್ರಿ ಆರಾಧ್ಯ ಬಚ್ಚನ್ ಅವರಿಗೂ ಅಲ್ಪ ಮಟ್ಟದ ಸೋಂಕಿನ ಗುಣಲಕ್ಷಣಗಳು ಕಾಣಿಸಿಕೊಂಡಿದ್ದವು. ಆದರೆ ಜಯಾ ಬಚ್ಚನ್ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿತ್ತು.

    ಕೊರೊನಾ ವೈರಸ್ ಗುಣಲಕ್ಷಣ ಕಾಣಿಸಿಕೊಂಡ ತಕ್ಷಣ ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಪ ಮಟ್ಟದ ಗುಣಲಕ್ಷಣಗಳು ಕಂಡು ಬಂದಿದ್ದ ಐಶ್ವರ್ಯಾ ಮತ್ತು ಆರಾಧ್ಯ ಮನೆಯಲ್ಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಅವರು ಕೂಡ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಶ್ಚರ್ಯಾ ಮತ್ತು ಆರಾಧ್ಯ ಆಸ್ಪತ್ರೆಗೆ ದಾಖಲಾಗಿದ್ದು, ನಾವು ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ಖಚಿತ ಪಡಿಸಿದೆ.

    ಜುಲೈ 11ರಂದು ಅಮಿತಾಬ್ ಬಚ್ಚನ್ ಅವರಿಗೆ ಮತ್ತು ಅಭಿಷೇಕ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಕುರಿತು ಅಂದು ಟ್ವೀಟ್ ಮಾಡಿದ್ದ ಬಿಗ್‍ಬಿ, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆಸ್ಪತ್ರೆಗೆ ಸ್ಥಳಾಂತರಗೊಂಡಿದ್ದೇನೆ. ನಮ್ಮ ಕುಟುಂಬದವರು ಹಾಗೂ ಸಿಬ್ಬಂದಿಯನ್ನು ಸಹ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿಗಾಗಿ ಕಾಯುತ್ತಿದ್ದೇವೆ ಎಂದು ಬರೆದುಕೊಂಡಿದ್ದರು.

  • ಡ್ರಗ್ಸ್ ಸೇವಿಸಿ ದೇವರ ರೀತಿ ಡ್ರೆಸ್ ಹಾಕ್ತಿದ್ರು ತೇಜ್ ಪ್ರತಾಪ್ ಯಾದವ್: ಪತ್ನಿ

    ಡ್ರಗ್ಸ್ ಸೇವಿಸಿ ದೇವರ ರೀತಿ ಡ್ರೆಸ್ ಹಾಕ್ತಿದ್ರು ತೇಜ್ ಪ್ರತಾಪ್ ಯಾದವ್: ಪತ್ನಿ

    -ಪತಿಯ ಅವತಾರದ ರಹಸ್ಯ ಬಿಚ್ಚಿಟ್ಟ ಐಶ್ವರ್ಯಾ

    ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ತಮ್ಮ ವಿಭಿನ್ನ ವೇಷ ಭೂಷಣಗಳ ಮೂಲಕ ಹೆಚ್ಚು ಸುದ್ದಿಯಾಗುತ್ತಿರುವ ನಾಯಕ. ಇತ್ತೀಚೆಗೆ ಶಿವ ವೇಷಧಾರಿಯಾಗಿ ಕಾಣಿಸಿಕೊಂಡಿದ್ದ ತೇಜ್ ಪ್ರತಾಪ್ ಯಾದವ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದವು. ತೇಜ್ ಪ್ರತಾಪ್ ನಿಂದ ದೂರವಾಗಿರುವ ಪತ್ನಿ ಐಶ್ವರ್ಯಾ ಪತಿಯ ವೇಷದ ಹಿಂದಿನ ರಹಸ್ಯವನ್ನು ಹೊರ ಹಾಕಿದ್ದಾರೆ.

    ನನ್ನ ಪತಿ ಮಾದಕ ವ್ಯಸನಿಯಾಗಿದ್ದು, ಡ್ರಗ್ಸ್ ಸೇವಿಸಿದಾಗ ದೇವರ ರೀತಿಯಲ್ಲಿ ಡ್ರೆಸ್ ಹಾಕುತ್ತಾರೆ. ಈ ರೀತಿ ಡ್ರೆಸ್ ಧರಿಸಿದಾಗ ತಾವು ದೇವರ ಅವತಾರ ಎಂಬಂತೆ ವರ್ತಿಸುತ್ತಾರೆ. ಮದುವೆ ಬಳಿಕ ಈ ವಿಷಯ ನನಗೆ ತಿಳಿಯಿತು. ಪತಿಗೆ ಬುದ್ಧಿ ಹೇಳುವಂತೆ ನಾನು ಅವರ ತಾಯಿ ಮತ್ತು ಸೋದರಿಗೆ ಈ ವಿಷಯವನ್ನು ತಿಳಿಸಿದೆ. ಅವರಿಬ್ಬರು ಪತಿಗೆ ತಿಳಿ ಹೇಳಿದ್ರೂ, ತೇಜ್ ಪ್ರತಾಪ್ ವರ್ತನೆಯಲ್ಲಿ ಯಾವುದೇ ಬದಲಾವಣೆಗಳು ಆಗಲಿಲ್ಲ ಎಂದು ಐಶ್ವರ್ಯ ಬೇಸರ ವ್ಯಕ್ತಪಡಿಸಿದ್ರು.

    ಒಂದು ದಿನ ಡ್ರಗ್ಸ್ ಸೇವಿಸಿದಾಗ ದೇವತೆ ರಾಧೆ ರೀತಿಯಲ್ಲಿ ವಿಗ್ ಹಾಕಿಕೊಂಡು, ಮೇಕಪ್ ಜೊತೆ ಲೆಹೆಂಗಾ ಮತ್ತು ಬ್ಲೌಸ್ ಸಹ ಧರಿಸಿದ್ದರು. ಗಾಂಜಾ ಸೇವನೆ ತ್ಯಜಿಸುವ ಮಾತನಾಡಿದ್ರೆ, ಇದು ಬಾಬಾ ಬೋಲೆನಾಥನ ಪ್ರಸಾದ. ಹಾಗಾಗಿ ಗಾಂಜಾ ಸೇವನೆ ತ್ಯಜಿಸಲು ಸಾಧ್ಯವಿಲ್ಲ. ಮಹಿಳೆಯ ತರಹ ಡ್ರೆಸ್ ಧರಿಸೋದು ನಿಲ್ಲಿಸಿ ಎಂದಾಗ ಕೃಷ್ಣನೇ ರಾಧ, ರಾಧೆಯೇ ಕೃಷ್ಣ ಎನ್ನುತ್ತಿದ್ದರು ಎಂದು ಐಶ್ವರ್ಯಾ ಆರೋಪಿಸಿದ್ದಾರೆ.

    ತೇಜ್ ಪ್ರತಾಪ್ ಆರೋಪವೇನು?
    ಐಶ್ವರ್ಯ 2019ರ ಚುನಾವಣೆಗೆ ತಮ್ಮ ತಂದೆ ಚಂದ್ರಿಕಾ ರಾಯ್ ಅವರಿಗೆ ಛಪರಾ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಬೇಕೆಂದು ಪತಿ ತೇಜ್ ಪ್ರತಾಪ್ ಮೇಲೆ ಒತ್ತಡ ಹಾಕುತ್ತಿದ್ದರಂತೆ. ತನ್ನ ತಂದೆಗೆ ಟಿಕೆಟ್ ನೀಡಬೇಕೆಂದು ಐಶ್ವರ್ಯ ಪತಿಯೊಂದಿಗೆ ಹಲವು ಬಾರಿ ಜಗಳ ಮಾಡಿಕೊಂಡಿದ್ದರು. ನಿಮ್ಮನ್ನು ಮದುವೆ ಆದ್ರೂ ನಾನು ತಂದೆಗೆ ಟಿಕೆಟ್ ಕೊಡಿಸಿದೆ ಇದ್ರೆ ಏನು ಪ್ರಯೋಜನ ಎಂದು ಹಲವು ಬಾರಿ ಗಲಾಟೆ ಮಾಡುತ್ತಿದ್ದಳು ಎಂದು ವಿಚ್ಛೇದನದ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಮದುವೆಯಾದ ಬಳಿಕ ಮೇ 12ರಿಂದ ಸೆಪ್ಟೆಂಬರ್ 1ರವರೆಗೆ ಇಬ್ಬರ ದಾಂಪತ್ಯದಲ್ಲಿ ಸದಾ ಗಲಾಟೆ ನಡೆಯುತ್ತಿತ್ತು. ದೆಹಲಿ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದಿರುವ ಐಶ್ವರ್ಯ ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗಿದ್ದಳು. ನಾನು ಭಜನೆ-ಕೀರ್ತನೆಗಳನ್ನು ಕೇಳಿದ್ರೆ, ಆಕೆ ವೆಸ್ಟರ್ನ್ ಹಾಡುಗಳನ್ನು ಇಷ್ಟಪಡುತ್ತಿದ್ದಳು. ಇಬ್ಬರ ಅಭಿರುಚಿಗಳು ಬೇರೆ ಬೇರೆಯಾಗಿದ್ದು, ಸಂಸಾರದಲ್ಲಿ ಹೊಂದಾಣಿಕೆಯೇ ಇರಲಿಲ್ಲ. ಒಮ್ಮೆ ನನ್ನ ಹಿರಿಯ ಸೋದರಿ ಮೀಸಾ ಭಾರತಿ ಸಲಹೆ ನೀಡಿದ್ದನ್ನು ತಪ್ಪಾಗಿ ಅರ್ಥೈಸಿಕೊಂಡು ಎಲ್ಲರ ಮೇಲೆ ಕೋಪಗೊಂಡಿದ್ದಳು ಎಂದು ತೇಜ್ ಪ್ರತಾಪ್ ಪತ್ನಿಯ ಮೇಲೆ ಸಾಲು ಸಾಲು ಆರೋಪಗಳನ್ನು ಮಾಡಿದ್ದಾರೆ.

    2018 ಮೇನಲ್ಲಿ ತೇಜ್ ಪ್ರತಾಪ್ ಯಾದವ್ ಮತ್ತು ಐಶ್ವರ್ಯಾರ ಮದುವೆ ಅದ್ಧೂರಿಯಾಗಿ ನಡೆದಿತ್ತು. ಮದುವೆಯಾದ ಐದು ತಿಂಗಳ ಬಳಿಕ ತೇಜ್ ಪ್ರತಾಪ್ ಯಾದವ್ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದರು.