Tag: ಐಶ್ವರ್ಯಾ ರೈ

  • ವಿವೇಕ್ ಒಬೇರಾಯ್ ಟ್ವೀಟ್‍ಗೆ ಸಲ್ಮಾನ್ ಮೊದಲ ಪ್ರತಿಕ್ರಿಯೆ

    ವಿವೇಕ್ ಒಬೇರಾಯ್ ಟ್ವೀಟ್‍ಗೆ ಸಲ್ಮಾನ್ ಮೊದಲ ಪ್ರತಿಕ್ರಿಯೆ

    ಮುಂಬೈ: ನಟ ವಿವೇಕ್ ಒಬೇರಾಯ್ ವಿವಾದಾತ್ಮಕ ಟ್ವೀಟ್‍ಗೆ ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ತಮ್ಮ ಮೊದಲ ಪ್ರತಿಕ್ರಿಯೆಯನ್ನ ನೀಡಿದ್ದಾರೆ.

    ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಲ್ಮಾನ್ ಖಾನ್ ಅವರಿಗೆ ವಿವಾದಾತ್ಮಕ ಟ್ವೀಟ್ ಕುರಿತಾಗಿ ಮಾಧ್ಯಮಗಳು ಪ್ರಶ್ನೆ ಮಾಡಿದ್ದವು. ನನಗೆ ಬಹಳ ಕೆಲಸಗಳಿವೆ. ನಾನು ಕೆಲಸ ಮಾಡಲೇ, ಮೀಮ್ಸ್ ಗಳನ್ನು ನೋಡುತ್ತಾ ಕುಳಿತುಕೊಳ್ಳಲೇ ಎಂದು ಕಿಡಿಕಾರಿದ್ದಾರೆ.

    ಭಾರತ್ ಸಿನಿಮಾ ಪ್ರಚಾರದ ಸಂದರ್ಭದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದ ಸಲ್ಮಾನ್ ಖಾನ್, ಸಾಮಾಜಿಕ ಜಾಲತಾಣಗಳತ್ತ ನಾನು ಹೆಚ್ಚು ಗಮನ ಕೊಡಲ್ಲ. ಮೊದಲಿನಂತೆ ಸೋಶಿಯಲ್ ಮೀಡಿಯಾದಲ್ಲಿಯೂ ಹೆಚ್ಚು ಆ್ಯಕ್ಟೀವ್ ಆಗಿರಲ್ಲ. ಕಾಲಹರಣಕ್ಕಾಗಿ ಅನಾವಶ್ಯಕ ಟ್ವೀಟ್‍ಗಳನ್ನು ಮಾಡಲ್ಲ. ನನಗೆ ನನ್ನದೇ ಆದ ಕೆಲಸಗಳಿವೆ. ಕೆಲಸದತ್ತ ಗಮನ ನೀಡದೇ ಯಾರೋ ಮಾಡಿದ ಟ್ವೀಟ್ ಮತ್ತು ಮೀಮ್ಸ್ ನೋಡುತ್ತಾ ಸಮಯ ವ್ಯರ್ಥ ಮಾಡಲ್ಲ ಎಂದು ಖಡಕ್ ಮಾತನ್ನು ಆಡಿದ್ದಾರೆ.

    ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಹೊರ ಬಂದ ಮರುದಿನ ವಿವೇಕ್ ಒಬೇರಾಯ್, ನಟಿ ಐಶ್ವರ್ಯಾ ರೈ ವೈವಾಹಿಕ ಪೂರ್ವ ಖಾಸಗಿ ಜೀವನವನ್ನು ಬಿಂಬಿಸುವ ಮೀಮ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಎಕ್ಸಿಟ್ ಪೋಲ್ ಮೀಮ್ ವಿವಾದಕ್ಕೆ ಕಾರಣವಾಗುತ್ತಲೇ ಸ್ಪಷ್ಟನೆ ನೀಡಿದ ವಿವೇಕ್ ಒಬೇರಾಯ್ ಕ್ಷಮೆ ಕೇಳಿ ಟ್ವೀಟ್ ಡಿಲೀಟ್ ಮಾಡಿದ್ದರು. ಈ ಮೀಮ್ ಟ್ವೀಟ್ ನಲ್ಲಿ ಐಶ್ವರ್ಯಾ ಮತ್ತು ಸಲ್ಮಾನ್ ಖಾನ್ ಜೊತೆಗಿನ ಫೋಟೋವನ್ನು ಬಳಸಿಕೊಳ್ಳಲಾಗಿತ್ತು.

  • ವಿವಾದಕ್ಕೆ ಕಾರಣವಾಯ್ತು ವಿವೇಕ್ ಒಬೇರಾಯ್ ಎಕ್ಸಿಟ್ ಪೋಲ್ ಪೋಸ್ಟ್

    ವಿವಾದಕ್ಕೆ ಕಾರಣವಾಯ್ತು ವಿವೇಕ್ ಒಬೇರಾಯ್ ಎಕ್ಸಿಟ್ ಪೋಲ್ ಪೋಸ್ಟ್

    – ಒಬೇರಾಯ್ ವಿರುದ್ಧ ಸೋನಂ, ಜ್ವಾಲಾ ಗುಟ್ಟಾ ಗರಂ

    ಮುಂಬೈ: ಬಾಲಿವುಡ್ ನಟ ವಿವೇಕ್ ಒಬೇರಾಯ್ ಇಂದು ಮಧ್ಯಾಹ್ನ ಮಾಡಿದ್ದ ಎಕ್ಸಿಟ್ ಪೋಲ್ ಪೋಸ್ಟ್ ಟ್ವೀಟ್ ವಿವಾದಕ್ಕೆ ಕಾರಣವಾಗಿದೆ. ನಟಿ ಸೋನಂ ಕಪೂರ್, ಟೆನ್ನಿಸ್ ಆಟಗಾರ್ತಿ ಜ್ವಾಲಾ ಗುಟ್ಟಾ ಸೇರಿದಂತೆ ದೇಶದ ಮಹಿಳೆಯರ ಕೆಂಗಣ್ಣಿಗೆ ವಿವೇಕ್ ಟ್ವೀಟ್ ಗುರಿಯಾಗಿದೆ.

    ಮಾಜಿ ವಿಶ್ವ ಸುಂದರಿ, ಬಿಗ್ ಬಿ ಅಮಿತಾಬ್ ಬಚ್ಚನ್ ಸೊಸೆಯಾಗಿರುವ ಐಶ್ವರ್ಯಾ ರೈ ಅವರ ವೈವಾಹಿಕ ಪೂರ್ವ ಸಂಬಂಧದ ವಿಚಾರಗಳನ್ನು ವಿವೇಕ್ ಒಬೇರಾಯ್ ಕೆಣಕ್ಕಿದ್ದು, ಮಹಿಳೆಯರ ಆಕ್ರೋಶಕ್ಕೆ ಕಾರಣವಾಗಿದೆ. 2006ರಲ್ಲಿ ಅಭಿಷೇಕ್ ಬಚ್ಚನ್ ಅವರನ್ನು ಮದುವೆಯಾಗುವ ಮೂಲಕ ಐಶ್ವರ್ಯಾ ತಮ್ಮ ಬಗ್ಗೆ ಬಾಲಿವುಡ್ ಅಂಗಳದಲ್ಲಿ ಅಂತೆ-ಕಂತೆಗಳಿಗೆ ಪೂರ್ಣ ವಿರಾಮ ಹಾಕಿದ್ದಾರೆ. ಏಳು ವರ್ಷದ ಮುದ್ದು ಮಗಳ ತಾಯಿಯಾಗಿರುವ ಐಶ್ವರ್ಯಾ ಯಾವುದೇ ವಿವಾದಗಳಿಗೆ ಗುರಿಯಾಗದೇ ಖಾಸಗಿ ಜೀವನದಲ್ಲಿ ಖುಷಿಯಾಗಿದ್ದಾರೆ.

    ಇದೀಗ ಐಶ್ವರ್ಯಾರ ಹಳೆಯ ವಿಷಯಗಳನ್ನು ಕೆದಕಿರುವ ವಿವೇಕ್ ಒಬೇರಾಯ್ ವಿರುದ್ಧ ಮಹಾರಾಷ್ಟ್ರದ ಮಹಿಳಾ ಆಯೋಗ ಕ್ರಮಕ್ಕೆ ಮುಂದಾಗಿದೆ. ಎಕ್ಸಿಟ್ ಪೋಲ್ ಟ್ರೋಲ್ ಫೋಟೋ ಹಾಕಿಕೊಂಡಿದ್ದ ವಿವೇಕ್, ಕ್ರಿಯೇಟಿವಿಟಿ ಫೋಟೋ ಶಾಪ್. ಇದರಲ್ಲಿ ರಾಜಕೀಯ ಇಲ್ಲ. ಇಷ್ಟೇ ಬದುಕು ಎಂದು ಬರೆದುಕೊಂಡಿದ್ದರು.

    ಈ ಕುರಿತು ಪ್ರತಿಕ್ರಿಯಿಸಿರುವ ನಟಿ ಸೋನಂ ಕಪೂರ್, ಅಸಹ್ಯ ಮತ್ತು ತೆಗಳಿಕೆಗೂ ಈ ಟ್ವೀಟ್ ಅರ್ಹವಲ್ಲ ಎಂದು ಕಿಡಿಕಾರಿದ್ದಾರೆ. ಜ್ವಾಲಾ ಗುಟ್ಟಾ ಸಹ ಇದೊಂದು ಸಂಪೂರ್ಣ ಅಸಹ್ಯಕರ ಮತ್ತು ಅಸಂಬದ್ಧವಾದ ಟ್ವೀಟ್ ಇದಾಗಿದೆ ಎಂದು ಬರೆದುಕೊಂಡಿದ್ದಾರೆ. ವಿವೇಕ್ ಟ್ವೀಟ್ ಫೋಟೋಗೆ ಎಲ್ಲಡೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಐಶ್ವರ್ಯಾ ಅಥವಾ ಅಭಿಷೇಕ್ ಬಚ್ಚನ್ ಈ ವಿಷಯದ ಕುರಿತಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    ಟ್ರೋಲ್ ಫೋಟೋದಲ್ಲಿ ಏನಿದೆ?
    ಸಲ್ಮಾನ್ ಮತ್ತು ಐಶ್ವರ್ಯ ಜೊತೆಗಿನ ಫೋಟೋ ಹಾಕಿ Opinion Poll, ವಿವೇಕ್-ಐಶ್ವರ್ಯಾ ಫೋಟೋಗೆ Exit Poll ಕೊನೆಗೆ ಅಭಿಷೇಕ್ ಬಚ್ಚನ್, ಐಶ್ವರ್ಯ ಮತ್ತು ಆರಾಧ್ಯ ಜೊತೆಗಿನ ಫೋಟೋಗೆ Result ಅಂತಾ ಬರೆಯಲಾಗಿದೆ.

    https://twitter.com/vivekoberoi/status/1130380916142907392

  • ಎಕ್ಸಿಟ್ ಪೋಲ್ ಟ್ರೋಲ್ ಫೋಟೋ ಹಂಚಿಕೊಂಡು ‘ಐಶ್’ ನೆನೆದ ವಿವೇಕ್ ಒಬೇರಾಯ್

    ಎಕ್ಸಿಟ್ ಪೋಲ್ ಟ್ರೋಲ್ ಫೋಟೋ ಹಂಚಿಕೊಂಡು ‘ಐಶ್’ ನೆನೆದ ವಿವೇಕ್ ಒಬೇರಾಯ್

    ಮುಂಬೈ: ಭಾನುವಾರ ಲೋಕಸಮರದ ಚುನಾವಣೋತ್ತರ ಸಮೀಕ್ಷೆಗಳು ಹೊರ ಬಂದಿವೆ. ಎಕ್ಸಿಟ್ ಪೋಲ್ ಕುರಿತಂತೆ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್, ಮೀಮ್ಸ್ ಗಳು ಸಹ ಹರಿದಾಡುತ್ತಿವೆ. ಈ ಟ್ರೋಲ್ ಗಳ ಮೂಲಕವೇ ರಾಜಕೀಯ ನಾಯಕರು ಒಬ್ಬರನ್ನೊಬ್ಬರ ಕಾಲೆಳೆಯುತ್ತಿದ್ದಾರೆ. ಈ ನಡುವೆ ಎಕ್ಸಿಟ್ ಪೋಲ್ ಟ್ರೋಲ್ ತನ್ನ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ನಟ ವಿವೇಕ್ ಒಬೇರಾಯ್ ತಮ್ಮ ಮಾಜಿ ಗೆಳತಿ ಐಶ್ವರ್ಯಾ ರೈ ನೆನೆಪು ಮಾಡಿಕೊಂಡಿದ್ದಾರೆ.

    ಮಾಜಿ ವಿಶ್ವ ಸುಂದರಿ, ಬಿಗ್ ಬಿ ಮನೆಯ ಮುದ್ದು ಸೊಸೆ ಐಶ್ವರ್ಯಾ ರೈ ಹೆಸರು ಹಲವು ನಟರೊಂದಿಗೆ ತಳಕು ಹಾಕಿಕೊಂಡಿತ್ತು. ಯಶಸ್ವಿ ಸಿನಿಮಾಗಳನ್ನು ನೀಡುತ್ತಿದ್ದ ಐಶ್ವರ್ಯಾ ರೈ ಹೆಸರು ಮೊದಲಿಗೆ ಬಾಲಿವುಡ್ ಬಾಯಿಜಾನ್ ಸಲ್ಮಾನ್ ಖಾನ್ ಕೇಳಿ ಬಂದಿತ್ತು. ತದನಂತರ ವಿವೇಕ್ ಒಬೇರಾಯ್ ಜೊತೆಗೆ ಕೇಳಿ ಬಂದಿತ್ತು. ಎಲ್ಲ ಗಾಸಿಪ್ ಗಳ ನಡುವೆ ಅಭಿಷೇಕ್ ಬಚ್ಚನ್ ರನ್ನು ವರಿಸುವ ಮೂಲಕ ಎಲ್ಲ ಅಂತೆ ಕಂತೆಗಳಿಗೆ ತೆರೆ ಎಳೆದಿದ್ದರು.

    ಸಲ್ಮಾನ್ ಮತ್ತು ಐಶ್ವರ್ಯ ಜೊತೆಗಿನ ಫೋಟೋ ಹಾಕಿ Opinion Poll, ವಿವೇಕ್-ಐಶ್ವರ್ಯಾ ಫೋಟೋಗೆ Exit Poll ಕೊನೆಗೆ ಅಭಿಷೇಕ್ ಬಚ್ಚನ್, ಐಶ್ವರ್ಯ ಮತ್ತು ಆರಾಧ್ಯ ಜೊತೆಗಿನ ಫೋಟೋಗೆ Result ಅಂತಾ ಬರೆಯಲಾಗಿದೆ. ಈ ಮೂರು ಫೋಟೋಗಳನ್ನು ಸೇರಿಸಿರುವ ಟ್ರೋಲ್ ವಿವೇಕ್ ಹಂಚಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

    https://twitter.com/vivekoberoi/status/1130380916142907392

  • ಐಶ್ವರ್ಯಾ ಪುತ್ರಿಯ ಡ್ಯಾನ್ಸ್-ವೈರಲ್ ಆಯ್ತು ವಿಡಿಯೋ

    ಐಶ್ವರ್ಯಾ ಪುತ್ರಿಯ ಡ್ಯಾನ್ಸ್-ವೈರಲ್ ಆಯ್ತು ವಿಡಿಯೋ

    ಮುಂಬೈ: ಬಾಲಿವುಡ್ ಕ್ಯೂಟ್ ಜೋಡಿ ಐಶ್ವರ್ಯಾ ಮತ್ತು ಅಭಿಷೇಕ್ ಬಚ್ಚನ್ ಪುತ್ರಿ ಆರಾಧ್ಯಳ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಶನಿವಾರ ಕಾರ್ಯಕ್ರಮದಲ್ಲಿ ಆರಾಧ್ಯ ವೃತ್ತಿಪರ ಡ್ಯಾನ್ಸರ್ ರೀತಿಯಲ್ಲಿ ಹೆಜ್ಜೆ ಹಾಕುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದ್ದಾಳೆ. 7 ವರ್ಷದ ಆರಾಧ್ಯ ಸಮ್ಮರ್ ಫಂಕ್-2019 ಕಾರ್ಯಕ್ರಮದಲ್ಲಿ ಜೋಯಾ ಆಖ್ತರ್ ಅವರ ಗಲ್ಲಿ ಬಾಯ್ ಚಿತ್ರದ ಹಾಡಿಗೆ ಗಲೀ ಮೇ ಹಾಡಿಹೆ ಸಖತ್ ಸ್ಟೆಪ್ಸ್ ಹಾಕಿದ್ದಾಳೆ.

    ಜಯಾ ಬಚ್ಚನ್, ವೃಂದಾ ರೈ ಮತ್ತು ಐಶ್ವರ್ಯಾ ರೈ ಕಾರ್ಯಕ್ರಮಕ್ಕೆ ಆಗಮಿಸಿ ಆರಾಧ್ಯಳ ಡ್ಯಾನ್ಸ್ ಗೆ ಮೆಚ್ಚುಗೆ ಸೂಚಿಸಿದ್ದಾರೆ. ಇನ್ ಸ್ಟಾಗ್ರಾಮ್ ನಲ್ಲಿ ಈ ವಿಡಿಯೋ ಅಪ್ಲೋಡ್ ಆಗಿದ್ದು, 1 ಲಕ್ಷಕ್ಕೂ ಅಧಿಕ ವ್ಯೂವ್ ಪಡೆದುಕೊಂಡಿದ್ದು, 9 ಸಾವಿರಕ್ಕೂ ಹೆಚ್ಚು ಲೈಕ್ಸ್ ಪಡೆದುಕೊಂಡಿದೆ.

    https://www.instagram.com/p/BxnmhXoHrx8/

  • ಮಾವನ ಮೇಲೆ ಮುನಿಸಿಕೊಂಡ್ರಂತೆ ಐಶ್ವರ್ಯಾ ರೈ!

    ಮಾವನ ಮೇಲೆ ಮುನಿಸಿಕೊಂಡ್ರಂತೆ ಐಶ್ವರ್ಯಾ ರೈ!

    ಮುಂಬೈ: ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಮಾವ ಅಮಿತಾಬ್ ಬಚ್ಚನ್ ಮೇಲೆ ಮುನಿಸಿಕೊಂಡಿದ್ದಾರೆ ಎಂಬ ಸುದ್ದಿಯೊಂದು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.

    ಐಶ್ವರ್ಯ ರೈ ತಮ್ಮ ಬಿಡುವಿನ ಸಮಯದಲ್ಲಿ ಕುಟುಂಬ ಸದಸ್ಯರೊಂದಿಗೆ ಕಳೆಯಲು ಇಚ್ಚಿಸುವ ಮಹಿಳೆ. ಶೂಟಿಂಗ್ ನಿಂದ ಬಿಡುವು ಸಿಕ್ಕ ಕೂಡಲೇ ಪತಿ ಅಭಿಷೇಕ್ ಬಚ್ಚನ್, ಪುತ್ರಿ ಆರಾಧ್ಯ, ಮಾವ ಅಮಿತಾಬ್ ಬಚ್ಚನ್ ಮತ್ತು ಅತ್ತೆ ಜಯಾ ಬಚ್ಚನ್ ಜೊತೆ ಪ್ರವಾಸವನ್ನು ಕೈಗೊಳ್ಳುತ್ತಾರೆ. ಕಳೆದ ಕೆಲವು ದಿನಗಳಿಂದ ಐಶ್ವರ್ಯಾ ಪತಿ ಮತ್ತು ಪುತ್ರಿಯೊಂದಿಗೆ ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ. ಮಾವನ ಮೇಲಿನ ಮುನಿಸಿನಿಂದಾಗಿಯೇ ಅಮಿತಾಬ್ ಬಚ್ಚನ್ ಜೊತೆ ಐಶ್ವರ್ಯಾ ಕಾಣಿಸಿಕೊಳ್ಳುತ್ತಿಲ್ಲ ಎಂದು ಬಾಲಿವುಡ್ ಗಲ್ಲಿಗಳು ಹೇಳುತ್ತಿವೆ.

    ಮುನಿಸ್ಯಾಕೆ? ಬಾಲಿವುಡ್ ಕಿಸ್ಸಿಂಗ್ ಸ್ಟಾರ್ ಇಮ್ರಾನ್ ಹಶ್ಮಿ ಜೊತೆ ಅಮಿತಾಬ್ ಬಚ್ಚನ್ ನಟಿಸುತ್ತಿದ್ದಾರೆ. ಈ ಇಮ್ರಾನ್ ಹಶ್ಮಿ ಹೇಳಿಕೆಯಿಂದ ಐಶ್ವರ್ಯಾ ರೈ ಮುನಿಸಿಕೊಂಡಿದ್ದರು. ಈಗ ಇಮ್ರಾನ್ ಹಶ್ಮಿ ಸಿನಿಮಾದಲ್ಲಿ ಬಿಗ್ ಬಿ ಬಣ್ಣ ಹಚ್ಚುತ್ತೀರೋದಕ್ಕೆ ಐಶ್ ಮುನಿಸಿಕೊಂಡಿದ್ದಾರೆ ಎಂದು ಮಾಧ್ಯಮವೊಂದು ಬಿತ್ತರಿಸಿದೆ.

    ಇಮ್ರಾನ್ ಹಶ್ಮಿ ಹೇಳಿದ್ದೇನು? ಎರಡು ವರ್ಷಗಳ ಹಿಂದೆ ಕಾಫಿ ವಿಥ್ ಕರಣ್ ಕಾರ್ಯಕ್ರಮದಲ್ಲಿ ಇಮ್ರಾನ್ ಹಶ್ಮಿ ಭಾಗಿಯಾಗಿದ್ದರು. ರ್ಯಾಪಿಡ್ ಫೈರ್ ಸುತ್ತಿನ ವೇಳೆ ಐಶ್ವರ್ಯಾ ರೈ ಅವರ ಸೌಂದರ್ಯವನ್ನು ಪ್ಲಾಸ್ಟಿಕ್ ಸರ್ಜರಿ ಎಂಬರ್ಥದಲ್ಲಿ ಹೇಳಿದ್ದರು. ಹೇಳಿಕೆ ವಿವಾದವಾಗುತ್ತಿದಂತಲೇ ಇಮ್ರಾನ್ ಹಶ್ಮಿ ಕ್ಷಮೆಯನ್ನು ಕೇಳಿದ್ದರು.

    ಇನ್ನು ಇತ್ತೀಚೆಗೆ ಕಾರ್ಯಕ್ರಮದಲ್ಲಿ ಐಶ್ವರ್ಯಾಗೆ ಇದೂವರೆಗೂ ನಿಮ್ಮ ಬಗ್ಗೆ ಯಾವ ಹೇಳಿಕೆ ನಿಮಗೆ ಬೇಸರ ತರಿಸಿದೆ ಎಂದು ಕೇಳಲಾಗಿತ್ತು. ನಾನು ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದೇನೆ ಎಂದು ಕೆಲವರು ಹೇಳಿದ್ದು ಬೇಸರ ತರಿಸಿದೆ ಎಂದು ಹೇಳಿದ್ದರು.

  • ಐಶ್ವರ್ಯಾ ರೈ, ಶಿಲ್ಪಾ ಶೆಟ್ಟಿ ಜೊತೆ ತುಳು ಸಿನಿಮಾ ಮಾಡ್ತಾರಾ ಸುನೀಲ್ ಶೆಟ್ಟಿ?

    ಐಶ್ವರ್ಯಾ ರೈ, ಶಿಲ್ಪಾ ಶೆಟ್ಟಿ ಜೊತೆ ತುಳು ಸಿನಿಮಾ ಮಾಡ್ತಾರಾ ಸುನೀಲ್ ಶೆಟ್ಟಿ?

    ಮುಂಬೈ: ಮಂಗಳೂರು ಸೀಮೆಯ ಕರಾವಳಿ ಪ್ರದೇಶದಿಂದ ಹೋದವರು ಪ್ರಸಿದ್ಧ ನಟ ನಟಿಯರಾಗಿ ಭಾರತ ಮಾತ್ರವಲ್ಲದೇ ವಿಶ್ವಾದ್ಯಂತ ಸದ್ದು ಮಾಡುತ್ತಿದ್ದಾರೆ. ಅಂಥ ಕರಾವಳಿಗರ ಸಾಲಿನಲ್ಲಿ ಐಶ್ವರ್ಯಾ ರೈ, ಸುನೀಲ್ ಶಿಟ್ಟಿ, ಶಿಲ್ಪಾ ಶೆಟ್ಟಿ ಮುಂತಾದವರು ಬಾಲಿವುಡ್ ಐಕಾನ್‍ಗಳಾಗಿ ಮಿಂಚುತ್ತಿದ್ದಾರೆ. ಇವರೆಲ್ಲರೂ ಸೇರಿಕೊಂಡು ತುಳು ಸಿನಿಮಾವೊಂದನ್ನು ಮಾಡಿದರೆ ತುಳುವರ ಪಾಲಿಗದು ಹಬ್ಬ. ಇಂಥಾದ್ದೊಂದು ಹಬ್ಬ ಶುರುವಾಗೋ ಸೂಚನೆಯನ್ನು ಸುನೀಲ್ ಶೆಟ್ಟಿ ರವಾನಿಸಿದ್ದಾರೆ!

    ಬಾಲಿವುಡ್ ನಲ್ಲಿ ಸ್ಟಾರ್ ಆಗಿದ್ದರೂ ಕೂಡಾ ತುಳುನಾಡ ಸಂಸ್ಕೃತಿ, ತುಳು ಭಾಷೆಯ ಬಗ್ಗೆ ಅಪಾರ ಪ್ರೀತಿ ಹೊಂದಿರುವವರು ಸುನೀಲ್ ಶೆಟ್ಟಿ. ಕರಾವಳಿಯ ಕಾರ್ಯಕ್ರಮಗಳಿಗೆಲ್ಲ ಓಡೋಡಿ ಬಂದು ಪಾಲ್ಗೊಳ್ಳುವ ಸುನೀಲ್ ಉಡುಪಿಯಲ್ಲಿ ನಡೆದ ಬಂಟರ ಕಾರ್ಯಕ್ರಮಕ್ಕೂ ಹಾಜರಾಗಿದ್ದರು. ಇದರಲ್ಲಿ ರಕ್ಷಿತ್ ಶೆಟ್ಟಿ ಸೇರಿದಂತೆ ಆ ಸಮುದಾಯದ ಸ್ಯಾಂಡಲ್‍ವುಡ್ ನಟ ನಟಿಯರೂ ಪಾಲ್ಗೊಂಡಿದ್ದರು.

    ಈ ಸಂದರ್ಭದಲ್ಲಿ ರಕ್ಷಿತ್ ಶೆಟ್ಟಿ ಸೇರಿದಂತೆ ಎಲ್ಲರ ಹೆಸರು ಹೇಳಿಯೇ ಅಭಿನಂದಿಸಿದ ಸುನೀಲ್ ತುಳುನಾಡು ತಮ್ಮ ತಾಯಿ ನೆಲ. ತುಳು ಭಾಷೆ ತಮ್ಮ ಶಕ್ತಿ ಅಂದಿದ್ದಾರೆ. ಇದೇ ಸಂದರ್ಭದಲ್ಲಿ ತಾವು ಕನ್ನಡ ಚಿತ್ರದಲ್ಲಿ ನಟಿಸುತ್ತಿರೋ ವಿಚಾರವನ್ನೂ ಹೆಮ್ಮೆಯಿಂದಲೇ ಹೇಳಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಬಾಲಿವುಡ್ ಸ್ನೇಹಿತರು ಮತ್ತು ತುಳುನಾಡಿನವರಾದ ಐಶ್ವರ್ಯಾ ರೈ, ಶಿಲ್ಪಾ ಶೆಟ್ಟಿ ಮತ್ತು ರೋಹಿತ್ ಶೆಟ್ಟಿ ಮುಂತಾದವರು ಜೊತೆಗೂಡಿ ತುಳು ಚಿತ್ರವೊಂದನ್ನು ಮಾಡುವ ಆಲೋಚನೆ ಇರೋದಾಗಿಯೂ ಹೇಳಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಐಶ್ವರ್ಯಾ ರೈ ಮಗಳು ಆರಾಧ್ಯ ಪ್ರಧಾನಿಯಾಗ್ತಾಳೆ!

    ಐಶ್ವರ್ಯಾ ರೈ ಮಗಳು ಆರಾಧ್ಯ ಪ್ರಧಾನಿಯಾಗ್ತಾಳೆ!

    ಹೈದರಾಬಾದ್: ಬಾಲಿವುಡ್‍ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಮೊಮ್ಮಗಳು ಹಾಗೂ ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ- ಅಭಿಷೇಕ್ ಬಚ್ಚನ್ ಅವರ ಏಕೈಕ ಪುತ್ರಿ ಆರಾಧ್ಯ ಮುಂದೊಂದು ದಿನ ಪ್ರಧಾನಿಯಾಗ್ತಾಳೆ ಅಂತ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ.

    ಡಿ. ಜ್ಞಾನೇಶ್ವರ್ ಅವರು ಭವಿಷ್ಯ ನುಡಿದ ಜ್ಯೋತಿಷಿಯಾಗಿದ್ದು, ಆರಾಧ್ಯಾ ಅವರಿಗೆ ರಾಜಕೀಯದಲ್ಲಿ ಉತ್ತಮ ಭವಿಷ್ಯವಿದೆ ಅಂತ ಹೇಳಿದ್ದಾರೆ. ಮುನ್ನೋಟ 2018 ಎನ್ನುವ ವಿಚಾರದ ಬಗ್ಗೆ ಸುದ್ದಿಗೋಷ್ಠಿಯನ್ನು ನಡೆಸಿ ಜ್ಯೋತಿಷಿ ಡಿ. ಜ್ಞಾನೇಶ್ವರ್ ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ಆರಾಧ್ಯ ತನ್ನ ಹೆಸರನ್ನು ರೋಹಿಣಿ ಎಂದು ಬದಲಿಸಿಕೊಂಡರೆ ಅವಳು ದೇಶದ ಪ್ರಧಾನ ಮಂತ್ರಿ ಆಗಬಹುದು ಎಂದು ಸಲಹೆ ನೀಡಿದ್ರು.

    ನಟರಾದ ಚಿರಂಜೀವಿ ಮತ್ತು ರಜನಿಕಾಂತ್ ಅವರು ರಾಜಕೀಯಕ್ಕೆ ಬರುತ್ತಾರೆ. 2009ರಲ್ಲಿ ಅವಿಭಜಿತ ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಈ ಹಿಂದೆ ಭವಿಷ್ಯ ನುಡಿದಿದ್ದರು.

    ಅಷ್ಟೆ ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಅಧಿಕಾರವನ್ನು ಏರಲಿದ್ದಾರೆ. ಮುಂದೆ ತಮಿಳುನಾಡಿನಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ರಜನಿಕಾಂತ್ ಪಕ್ಷ ವಿಜಯ ಸಾಧಿಸುವುದರೊಂದಿಗೆ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

    2024 ರಲ್ಲಿ ಭಾರತ ಮತ್ತು ಪಾಕಿಸ್ತಾನ ಮಧ್ಯ ಯುದ್ಧ ನಡೆಯಲಿದೆ. ರಿಲಯನ್ಸ್ ಇಂಡಸ್ಟ್ರೀಸ್ ಕಂಪೆನಿಯ ಮಾಲೀಕ ಮುಕೇಶ್ ಅಂಬಾನಿ ಪುತ್ರ ಆಕಾಶ್ ಅಂಬಾನಿ ಮದುವೆ 2019ರಲ್ಲಿ ನಡೆದರೆ ಉತ್ತಮ ಎನ್ನುವ ಸಲಹೆಯನ್ನು ನೀಡಿದ್ದಾರೆ.

  • ಭಾರತೀಯ ನಾರಿ ಡಯಾನಾ ಹೆಡನ್ ಅಲ್ಲ, ಐಶ್ವರ್ಯಾ ರೈ: ಮೋದಿ ಎಚ್ಚರಿಕೆಯ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ಕೊಟ್ಟ ತ್ರಿಪುರಾ ಸಿಎಂ

    ಭಾರತೀಯ ನಾರಿ ಡಯಾನಾ ಹೆಡನ್ ಅಲ್ಲ, ಐಶ್ವರ್ಯಾ ರೈ: ಮೋದಿ ಎಚ್ಚರಿಕೆಯ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ಕೊಟ್ಟ ತ್ರಿಪುರಾ ಸಿಎಂ

    ಅಗರ್ತಲಾ: ಇತ್ತೀಚೆಗಷ್ಟೇ ಇಂಟರ್ ನೆಟ್ ಬಗ್ಗೆ ಹೇಳಿಕೆ ನೀಡಿದ್ದ ತ್ರಿಪುರಾ ಸಿಎಂ ವಿಪ್ಲವ್ ದೇವ್ ಇದೀಗ ಮತ್ತೊಂದು ಹೇಳಿಕೆ ನೀಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.

    ಅಗರ್ತಲಾದ ಪ್ರಜ್ಞಾ ಭವನ್ ನಲ್ಲಿ ನಡೆದ ಕೈ ಮಗ್ಗಗಳು ಮತ್ತು ಕರಕುಶಲ ವಸ್ತುಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಐಶ್ವರ್ಯಾ ರೈ ನಿಜವಾದ ಭಾರತೀಯ ನಾರಿ. ಆದ್ರೆ ಮಾಜಿ ವಿಶ್ವಸುಂದರಿ ಡಯಾನಾ ಹೆಡನ್ ಅಲ್ಲ. ಭಾರತೀಯ ನಾರಿ ಲಕ್ಷ್ಮಿ, ಸರಸ್ವತಿಯರನ್ನು ಪ್ರತಿನಿಧಿಸುತ್ತಾರೆ. ಐಶ್ವರ್ಯ ರೈ ಸಹ ಭಾರತೀಯ ಮಹಿಳೆಯರನ್ನು ಪ್ರತಿನಿಧಿಸುತ್ತಾರೆ ಅಂತ ಹೇಳಿದ್ದಾರೆ.

    `ಐಶ್ವರ್ಯ ರೈ ಅವರಿಗೆ ಈ ಕಿರೀಟ ತೊಡಿಸಿದ್ದರಲ್ಲಿ ಅರ್ಥವಿದೆ. ಆದರೆ ಡಯಾನಾ ಹೆಡನ್ ಗೆ ಈ ಪ್ರಶಸ್ತಿ ಸಿಕ್ಕಿದ್ದು ಹೇಗೆ?’ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ:  ಮಹಾಭಾರತದ ಕಾಲದಲ್ಲೇ ಇಂಟರ್ ನೆಟ್ ಇತ್ತು : ತ್ರಿಪುರಾ ಸಿಎಂ

    `ಹಿಂದೆ ಭಾರತೀಯ ಮಹಿಳೆಯರು ಸೌಂದರ್ಯವರ್ಧಕ, ಶಾಂಪೂ ಮೊದಲಾದವುಗಳನ್ನು ಬಳಸುತ್ತಿರಲಿಲ್ಲ. ಆ ಸಂದರ್ಭದಲ್ಲಿ ಇವುಗಳೆಲ್ಲ ಅಂತಾರಾಷ್ಟ್ರೀಯ ಮಾಫಿಯಾಗಳಾಗಿದ್ದವು. ನಮ್ಮ ದೇಶದಲ್ಲಿ ಸಾಕಷ್ಟು ಮಾರುಕಟ್ಟೆ ಇದೆ. ಇಂದು ದೇಶದ ಮೂಲೆ ಮೂಲೆಯಲ್ಲಿಯೂ ಬ್ಯೂಟಿ ಪಾರ್ಲರ್ ಗಳು ತಲೆಯೆತ್ತಿವೆ. ಆದರೆ ಇವುಗಳಿಂದ ಸಿಗುವ ಸೌಂದರ್ಯ ನಿಜವಾದ ಸೌಂದರ್ಯವಲ್ಲ’ ಎಂದು ಅವರು ತಿಳಿಸಿದ್ದಾರೆ.

    ಒಟ್ಟಿನಲ್ಲಿ  ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಪಕ್ಷದ ಎಲ್ಲಾ ನಾಯಕರಿಗೂ ಸೂಚನೆ ನೀಡಿದ್ದರು. ವಿನಾಕಾರಣ ಯಾರೊಬ್ಬರೂ ಮಾಧ್ಯಮದ ಮುಂದೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದೆಂದು ಎಚ್ಚರಿಕೆ ನೀಡಿದ್ದರು. 1994ರಲ್ಲಿ ಐಶ್ವರ್ಯಾ ರೈ ವಿಶ್ವ ಸುಂದರಿಯಾದ್ರೆ, 1997 ರಲ್ಲಿ ಡಯಾನಾ ಹೆಡನ್ ವಿಶ್ವ ಸುಂದರಿ ಪಟ್ಟವನ್ನು ತನ್ನ ಮುಡಿಗೇರಿಸಿಕೊಂಡಿದ್ದರು.

  • ಲೈಂಗಿಕ ಕಿರುಕುಳದ ವಿರುದ್ಧ `ಮಿಟೂ’ ಚಳುವಳಿಗೆ ಐಶ್ವರ್ಯಾ ರೈ ಬೆಂಬಲ

    ಲೈಂಗಿಕ ಕಿರುಕುಳದ ವಿರುದ್ಧ `ಮಿಟೂ’ ಚಳುವಳಿಗೆ ಐಶ್ವರ್ಯಾ ರೈ ಬೆಂಬಲ

    ಮುಂಬೈ: ಸಮಾಜದಲ್ಲಿ ಮಹಿಳೆಯರು ಕೆಲಸ ಮಾಡುವ ಜಾಗದಲ್ಲಿ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವುದರ ವಿರುದ್ಧ ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಬಚ್ಚನ್ ಅವರು `ಮಿಟೂ’ ಚಳುವಳಿಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.

    ಇತ್ತೀಚೆಗೆ ಖಾಸಗಿ ಪತ್ರಿಕೆಯೊಂದರ ಜೊತೆ ಮಾತನಾಡಿದ ಐಶ್ವರ್ಯಾ, “ಸಿಡ್ನಿಯಲ್ಲಿ `ಮಿಟೂ’ ಚಳುವಳಿಯ ಬಗ್ಗೆ ಮಾತುಕತೆ ನಡೆದಿದೆ. ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳು ನಡೆಯುತ್ತಿದ್ದು, ಈ ವಿಚಾರವನ್ನು `ಮಿಟೂ’ ನಲ್ಲಿ ಹಂಚಿಕೊಂಡರೆ ಬಗೆಹರಿಸಲು ಸಾಧ್ಯವಾಗುತ್ತದೆ ಅಂತ ತೀರ್ಮಾನಕ್ಕೆ ಬರಲಾಗಿದೆ. ತುಂಬಾ ಚರ್ಚೆ ಮಾಡಿದ ಬಳಿಕ ಈ ಚಳುವಳಿಯನ್ನು ಪ್ರಾರಂಭಿಸಲಾಗಿದೆ. ಒಂದು ಒಳ್ಳೆ ವಿಷಯ ಎಂದರೆ ಈ ಕುರಿತು ಜನರು ಕೂಡ ಮಾತನಾಡುತ್ತಿದ್ದಾರೆ. ಇದು ವಿಶ್ವಕ್ಕೆ ಸೇರಿದ್ದು, ಇದನ್ನು ಸೀಮಿತವಾಗಿಸುವುದಿಲ್ಲ. ಈ ಚಳುವಳಿಯು ಸಕಾರಾತ್ಮವಾಗಿದೆ ಎಂದು ಹೇಳಿದರು.

    ಅಷ್ಟೇ ಅಲ್ಲದೇ ಮಹಿಳೆ ತನಗೆ ಆಗುತ್ತಿರುವ ಅನ್ಯಾಯದ ವಿರುದ್ಧ ತಾನೇ ಬಂದು ಮಾತನಾಡಿದರೆ ಒಳ್ಳೆಯದು. ಆಕೆ ಯಾವುದಕ್ಕೂ ರಾಜಿ ಮಾಡಿಕೊಳ್ಳದೆ ಹೇಳಿಕೊಂಡರೆ ಅದು ಖುಷಿಯ ವಿಷಯವಾಗಿದೆ. ಇದು ಯಾವುದೇ ವ್ಯವಹಾರ ಅಥವಾ ಚಲನಚಿತ್ರಕ್ಕೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ ಎಲ್ಲ ರೀತಿಯಲ್ಲೂ ಮಹಿಳೆಯರು ತಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೇಳಿಕೊಳ್ಳಲು ಇಲ್ಲಿ ಮುಕ್ತ ಅವಕಾಶವಿದೆ ಅಂತ ಅವರು ವಿವರಿಸಿದ್ದಾರೆ.

    ಹಾಲಿವುಡ್‍ನ ಪ್ರಸಿದ್ಧ ನಿರ್ಮಾಪಕ ಹಾರ್ವೆ ವೈನ್ಸ್ಟೈನ್ ಲೈಂಗಿಕ ದೌರ್ಜನ್ಯದ ಹಗರಣ ಬೆಳಕಿಗೆ ಬರುತ್ತಿದ್ದಂತೆ ಕಳೆದ ವರ್ಷ ಹಾಲಿವುಡ್ ಮಿಟೂ ಚಳುವಳಿ ಕಿಕ್ ಸ್ಟಾರ್ಟರ್ ಅನ್ನು ಬೆಂಬಲಿಸಿತು. ಜಗತ್ತಿನಾದ್ಯಂತ ಜನರೊಂದಿಗೆ ಇಂತಹ ಪ್ರಕರಣಗಳ ಉಗಮದ ಕುರಿತು ಜಾಗೃತಿ ಮೂಡಿಸಲು ವ್ಯಾಪಕವಾಗಿ ಸಾಮಾಜಿಕ ಮಾಧ್ಯಮದಲ್ಲಿ ಹ್ಯಾಶ್ ಟ್ಯಾಗ್ ಅನ್ನು ಬಳಸಲಾಗಿತ್ತು.

  • ಐಶ್ವರ್ಯ ರೈ, ಸೋನಂ ಕಪೂರ್ ಸೇರಿದಂತೆ ಬಾಲಿವುಡ್ ನಟ-ನಟಿಯರಿಂದ ಶ್ರೀದೇವಿ ಅಂತಿಮ ದರ್ಶನ

    ಐಶ್ವರ್ಯ ರೈ, ಸೋನಂ ಕಪೂರ್ ಸೇರಿದಂತೆ ಬಾಲಿವುಡ್ ನಟ-ನಟಿಯರಿಂದ ಶ್ರೀದೇವಿ ಅಂತಿಮ ದರ್ಶನ

    ಮುಂಬೈ: ಅನೇಕ ಬಾಲಿವುಡ್ ನಟ ನಟಿಯರು ಹಾಗೂ ಚಿತ್ರರಂಗದವರು ನಟಿ ಶ್ರೀದೇವಿಯ ಅಂತಿಮ ದರ್ಶನ ಪಡೆದಿದ್ದಾರೆ.

    ಮುಂಬೈನ ಲೋಖಂಡ್ವಾಲಾದ ಸೆಲೆಬ್ರೇಷನ್ ಸ್ಪೋರ್ಟ್ಸ್ ಕ್ಲಬ್‍ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಟಿ ಐಶ್ವರ್ಯಾ ರೈ ಬಚ್ಚನ್, ಜಯಾ ಬಚ್ಚನ್, ಜಯಪ್ರದಾ, ತಬು, ಸುಶ್ಮಿತಾ ಸೇನ್, ಮಾಧುರಿ ದೀಕ್ಷಿತ್, ಶ್ರೀದೇವಿಯ ಸೋದರ ಸೊಸೆ ಸೋನಂ ಕಪೂರ್, ಕಾಜೋಲ್, ಅಜಯ್ ದೇವಗನ್ ಮುಂತಾದ ಬಾಲಿವುಡ್ ನಟ ನಟಿಯರು ಸೇರಿದಂತೆ ಇತರೆ ಗಣ್ಯರು ಹಾಗೂ ಅಭಿಮಾನಿಗಳು ಶ್ರೀದೇವಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

    ಇಂದು ಮಧ್ಯಾಹ್ನ 2 ಗಂಟೆಗೆ ಶ್ರೀದೇವಿಯ ಅಂತಿಮ ಯಾತ್ರೆ ಆರಂಭವಾಗಲಿದ್ದು, 3.30ರ ವೇಳೆಗೆ ವಿಲೆ ಪಾರ್ಲೆ ವೆಸ್ಟ್‍ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

    ಸಂಬಂಧಿಕರ ಮದುವೆಗೆಂದು ದುಬೈಗೆ ತೆರಳಿದ್ದ ವೇಳೆ ಕಳೆದ ಶನಿವಾರ ಶ್ರೀದೇವಿ ಮೃತಪಟ್ಟಿದ್ದರು. ವೈದ್ಯಕೀಯ ಹಾಘೂ ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಶ್ರೀದೇವಿ ಅವರ ಪಾರ್ಥೀವ ಶರೀರವನ್ನು ಮಂಗಳವಾರ ರಾತ್ರಿ ಮುಂಬೈಗೆ ತರಲಾಗಿತ್ತು.

    ಆಕಸ್ಮಿಕವಾಗಿ ಬಾತ್‍ಟಬ್‍ನಲ್ಲಿ ಮುಳುಗಿ ಶ್ರೀದೇವಿ ಸಾವನ್ನಪ್ಪಿದ್ದಾರೆಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಹೇಳಲಾಗಿದೆ.