Tag: ಐಶ್ವರ್ಯ ರಂಗರಾಜನ್

  • ನಾಯಕಿಯಾಗಿ ಎಂಟ್ರಿ ಕೊಟ್ಟ ಸಿಂಗರ್ ಐಶ್ವರ್ಯ ರಂಗರಾಜನ್

    ನಾಯಕಿಯಾಗಿ ಎಂಟ್ರಿ ಕೊಟ್ಟ ಸಿಂಗರ್ ಐಶ್ವರ್ಯ ರಂಗರಾಜನ್

    ರಿಗಮಪ ವೇದಿಕೆಯ ಮೂಲಕ ನಾಡಿಗೆ ಪರಿಚಯವಾದ ಹಾಗೂ ‘ಮೀಟ್ ಮಾಡೋಣ, ಇಲ್ಲ ಡೇಟ್ ಮಾಡೋಣ’ ಹಾಡಿನಿಂದ ಸುಪ್ರಸಿದ್ಧಿ ಪಡೆದ ಗಾಯಕಿ ಐಶ್ವರ್ಯ ರಂಗರಾಜನ್ (Aishwarya Rangarajan) ನಾಯಕಿಯಾಗಿ ಸ್ಯಾಂಡಲ್ ವುಡ್ ಪ್ರವೇಶ ಮಾಡಿದ್ದಾರೆ. ಹಾಡಿನ ಮೂಲಕ ಚಿತ್ರ ಪ್ರೇಮಿಗಳನ್ನು ಸೆಳೆದಿರುವ ಐಶ್ವರ್ಯ, ಇದೀಗ ನಟಿಯಾಗಿಯೂ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

    ಭೂಮಿಕಾ ಕ್ರಿಯೇಷನ್ಸ್ ನಡಿ ತಿಲಕ್‍ ರಾಜು ಮತ್ತು ರಾಜಣ್ಣ ನಿರ್ಮಿಸುತ್ತಿರುವ ‘ಮನ್‍ರೇ’ (Mann Ray) ಚಿತ್ರದಲ್ಲಿ ಅಜಯ್‍ ರಾಜ್‍ (Ajay Raj) ನಾಯಕನಾಗಿ ಕಾಣಿಸಿಕೊಂಡರೆ, ಗಾಯಕಿ ಐಶ್ವರ್ಯ ರಂಗರಾಜನ್‍ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇನ್ನು, ‘ಅಮೃತವರ್ಷಿಣಿ’ ಖ್ಯಾತಿಯ ರಜನಿ, ಪ್ರಮೋದ್‍ ಶೆಟ್ಟಿ, ಸೂರ್ಯ ಸಿದ್ಧಾರ್ಥ್, ಅಮಿತ್ ರಾಜ್ ಮುಂತಾದವರು ನಟಿಸುತ್ತಿದ್ದಾರೆ.

    ‘ಮನ್‍ರೇ’ ಕುರಿತು ಮಾತನಾಡುವ ಗುರು ಸಾವನ್‍, ‘’ಮನ್‍ ರೇ’ ಎಂದರೆ ಮನಸ್ಸಿನ ಎಕ್ಸ್ ರೇ ಎಂದರ್ಥ. ಮನಸ್ಸಿನ ತೊಳಲಾಟವನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನವನ್ನು ಮಾಡುತ್ತಿದ್ದೇವೆ. ಕಾನ್ಶಿಯಸ್‍ ಮತ್ತು ಸಬ್‍ ಕಾನ್ಶಿಯಸ್‍ ಮೈಂಡ್‍ ನಡುವಿನ ತೊಳಲಾಟವಿದು. ಸುಮಾರು 8-9 ವರ್ಷಗಳ ಹಿಂದೆಯೇ ಕಥೆ ಮಾಡಿಕೊಂಡಿದ್ದೆ. ಇದೊಂದು ಸೈಕಲಾಜಿಕಲ್‍ ಥ್ರಿಲ್ಲರ್ ಕಥೆ. ಸಂಪೂರ್ಣ ಕಾಲ್ಪನಿಕ’ ಎನ್ನುತ್ತಾರೆ ಅವರು.

    ಈ ಸಮಸ್ಯೆ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ ಎನ್ನುವ ಗುರು, ‘ನಾವು ಏನೋ ಕೆಲಸ ಮಾಡುತ್ತಿದ್ದರೆ, ಮನಸ್ಸು ಇನ್ನೇನೋ ಯೋಚಿಸುತ್ತಿರುತ್ತದೆ. ಇಲ್ಲಿ ನಾಯಕ ಆರವ್‍, ಭ್ರಮೆಯ ಲೋಕದಲ್ಲಿ ಬದುಕುತ್ತಿರುತ್ತಾನೆ. ಅವನು ವಾಸ್ತವಕ್ಕೆ ಹೇಗೆ ಬರುತ್ತಾನೆ. ಅವನ ಸುತ್ತಲಿನವರು, ಅವನ ಈ ಸಮಸ್ಯೆಯಿಂದ ಎಷ್ಟೆಲ್ಲಾ ಕಷ್ಟಪಡುತ್ತಾರೆ ಎನ್ನುವುದನ್ನು ಈ ಚಿತ್ರದ ಮೂಲಕ ಪ್ರಯತ್ನ ಮಾಡುತ್ತಿದ್ದೇವೆ. ಪ್ರಮೋದ್‍ ಶೆಟ್ಟಿ ಇಲ್ಲಿ ಅರಸ್‍ ಎಂಬ ವೈದ್ಯರ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಪ್ರೀಪ್ರೊಡಕ್ಷನ್‍ ಕೆಲಸಗಳು ನಡೆಯುತ್ತಿವೆ. ನವೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭವಾಗಿ ಮುಂದಿನ ವರ್ಷ ಮೇನಲ್ಲಿ ಬಿಡುಗಡೆ ಮಾಡುವ ಪ್ಲಾನ್‍ ಇದೆ’ ಎನ್ನುತ್ತಾರೆ.

    ಸಾಮಾನ್ಯವಾಗಿ ಸೈಕಲಾಜಿಕಲ್‍ ಥ್ರಿಲ್ಲರ್ ಎಂದರೆ ಕ್ರೈಮ್‍ ಅಥವಾ ಹಿಂಸೆ ಇರುತ್ತದೆ. ಆದರೆ, ಈ ಚಿತ್ರದಲ್ಲಿ ಅಂಥದ್ದು ಯಾವುದೂ ಇರುವುದಿಲ್ಲ ಎನ್ನುವ ಅಜಯ್‍ ರಾಜ್‍, ‘ಸರಳವಾಗಿ ಹೇಳಬೇಕು ಎಂದರೆ ಇದು ಮನಸ್ಸಿನೊಳಗೆ ನಡೆಯುವ ಸಂಘರ್ಷ. ಇಲ್ಲಿ ನಾಯಕನೇ ಸಮಸ್ಯೆ. ಅವನಿಂದ ಏನಾಗುತ್ತದೆ ಎಂಬುದು ಕಥೆ’ ಎಂದರು.

    ರಜನಿಗೆ ಇಲ್ಲಿ ವಿಶೇಷ ಪಾತ್ರ ಸಿಕ್ಕಿದೆಯಂತೆ. ಅಷ್ಟೇ ಅಲ್ಲ, ಇದು ಅವರ ಕನಸಿನ ಪಾತ್ರವಂತೆ. ‘ನಿರ್ದೇಶಕರು ಬಂದು ಒಂದು ಸೀನ್‍ ಕೇಳಿ, ಆ ನಂತರ ಚಿತ್ರದಲ್ಲಿ ನಟಿಸುವ ಬಗ್ಗೆ ಯೋಚನೆ ಮಾಡಿ ಎಂದರು. ಬಹುಶಃ ಗ್ಲಾಮರಸ್‍ ಪಾತ್ರ ಇರಬಹುದು ಎಂದುಕೊಂಡೆ. ಆದರೆ, ಹಾಗೇನಿಲ್ಲ. ಇದೊಂದು ಸವಾಲಿನ ಪಾತ್ರ. ನಾನು ಇದುವರೆಗೂ ನೋಡಿರುವ ಚಿತ್ರಗಳಲ್ಲಿ ಇಂಥದ್ದೊಂದು ಪಾತ್ರ ಬಂದಿಲ್ಲ. ಹಾಗೆಯೇ ಇಂಥದ್ದೊಂದು ಪಾತ್ರ ಹೇಗೆ ಹೊಳೆಯಿತು ಎಂಬ ಆಶ್ಚರ್ಯವೂ ಆಯಿತು’ ಎಂದರು. ಇನ್ನು, ಮತ್ತೊಬ್ಬ ನಾಯಕಿಯಾಗಿರುವ ಐಶ್ವರ್ಯಾ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಖುಷಿಪಟ್ಟರು.

     

    ನಿರ್ಮಾಪಕರಲ್ಲೊಬ್ಬರಾದ ತಿಲಕ್‍ ರಾಜು ಅನಿವಾಸಿ ಭಾರತೀಯರು. ಸದ್ಯ ಅಮೇರಿಕಾದಲ್ಲಿ ವಾಸಿಸುತ್ತಿರುವ ಅವರಿಗೆ ಚಿತ್ರ ಮಾಡುವುದು ಬಹುದಿನಗಳ ಕನಸಂತೆ. ಈ ಚಿತ್ರದ ಮೂಲಕ ಅದು ನನಸಾಗುತ್ತಿರುವುದಾಗಿ ಖುಷಿಪಟ್ಟರು‘ಮನ ರೇ‘ ಚಿತ್ರಕ್ಕೆ ಆದಿ ಅವರ ಛಾಯಾಗ್ರಹಣವಿದೆ. ಈಗಾಗಲೇ ಸಾಕಷ್ಟು ಜನಪ್ರಿಯ ಚಿತ್ರಗಳಿಗೆ ಹಾಡಿ, ಉತ್ತಮ ಗಾಯಕರೆನಿಸಿಕೊಂಡಿರುವ ಅನಿರುದ್ಧ್ ಶಾಸ್ತ್ರಿ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.  ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನವೆಂಬರ್ ನಲ್ಲಿ ಅಜಯ್ ರಾಜ್‍ ನಟನೆಯ ‘ಮನ್ ರೇ’ ಶೂಟಿಂಗ್

    ನವೆಂಬರ್ ನಲ್ಲಿ ಅಜಯ್ ರಾಜ್‍ ನಟನೆಯ ‘ಮನ್ ರೇ’ ಶೂಟಿಂಗ್

    ಳೆದ ತಿಂಗಳು ನಡೆದ ‘ಸೇನಾಪುರ’ ಚಿತ್ರದ ಟ್ರೈಲರ್ ಬಿಡುಗಡೆ ಸಮಯದಲ್ಲಿ ಸದ್ಯದಲ್ಲೇ ಇನ್ನೊಂದು ಹೊಸ ಚಿತ್ರದ ಘೋಷಣೆ ಮಾಡುವುದಾಗಿ ನಿರ್ದೇಶಕ ಗುರು ಸಾವನ್‍ ಹೇಳಿಕೊಂಡಿದ್ದರು. ಅದರಂತೆ ಒಂದು ತಿಂಗಳ ಒಳಗೆ ಅವರು ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಮನ್ ರೇ’. ಚಿತ್ರದ ಘೋಷಣೆ ಅಧಿಕೃತವಾಗಿ ಸೋಮವಾರದಂದು ಆಗಿದ್ದು, ನವೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ.

    ಭೂಮಿಕಾ ಕ್ರಿಯೇಷನ್ಸ್ ಅಡಿ ತಿಲಕ್‍ ರಾಜು ಮತ್ತು ರಾಜಣ್ಣ ನಿರ್ಮಿಸುತ್ತಿರುವ ‘ಮನ್‍ರೇ’ ಚಿತ್ರದಲ್ಲಿ ಅಜಯ್‍ ರಾಜ್‍ ನಾಯಕನಾಗಿ ಕಾಣಿಸಿಕೊಂಡರೆ, ಗಾಯಕಿ ಐಶ್ವರ್ಯ ರಂಗರಾಜನ್‍ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇನ್ನು, ‘ಅಮೃತವರ್ಷಿಣಿ’ ಖ್ಯಾತಿಯ ರಜನಿ, ಪ್ರಮೋದ್‍ ಶೆಟ್ಟಿ, ಸೂರ್ಯ ಸಿದ್ಧಾರ್ಥ್, ಅಮಿತ್ ರಾಜ್ ಮುಂತಾದವರು ನಟಿಸುತ್ತಿದ್ದಾರೆ. ‘ಮನ್‍ರೇ’ ಕುರಿತು ಮಾತನಾಡುವ ಗುರು ಸಾವನ್‍, ‘ಮನ್‍ ರೇ’ ಎಂದರೆ ಮನಸ್ಸಿನ ಎಕ್ಸ್ ರೇ ಎಂದರ್ಥ. ಮನಸ್ಸಿನ ತೊಳಲಾಟವನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ. ಕಾನ್ಶಿಯಸ್‍ ಮತ್ತು ಸಬ್‍ ಕಾನ್ಶಿಯಸ್‍ ಮೈಂಡ್‍ ನಡುವಿನ ತೊಳಲಾಟವಿದು. ಸುಮಾರು 8-9 ವರ್ಷಗಳ ಹಿಂದೆಯೇ ಕಥೆ ಮಾಡಿಕೊಂಡಿದ್ದೆ. ಇದೊಂದು ಸೈಕಲಾಜಿಕಲ್‍ ಥ್ರಿಲ್ಲರ್ ಕಥೆ. ಸಂಪೂರ್ಣ ಕಾಲ್ಪನಿಕ’ ಎನ್ನುತ್ತಾರೆ ಅವರು.

    ಈ ಸಮಸ್ಯೆ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ ಎನ್ನುವ ಗುರು, ‘ನಾವು ಏನೋ ಕೆಲಸ ಮಾಡುತ್ತಿದ್ದರೆ, ಮನಸ್ಸು ಇನ್ನೇನೋ ಯೋಚಿಸುತ್ತಿರುತ್ತದೆ. ಇಲ್ಲಿ ನಾಯಕ ಆರವ್‍, ಭ್ರಮೆಯ ಲೋಕದಲ್ಲಿ ಬದುಕುತ್ತಿರುತ್ತಾನೆ. ಅವನು ವಾಸ್ತವಕ್ಕೆ ಹೇಗೆ ಬರುತ್ತಾನೆ. ಅವನ ಸುತ್ತಲಿನವರು, ಅವನ ಈ ಸಮಸ್ಯೆಯಿಂದ ಎಷ್ಟೆಲ್ಲಾ ಕಷ್ಟಪಡುತ್ತಾರೆ ಎನ್ನುವುದನ್ನು ಈ ಚಿತ್ರದ ಮೂಲಕ ಪ್ರಯತ್ನ ಮಾಡುತ್ತಿದ್ದೇವೆ. ಪ್ರಮೋದ್‍ ಶೆಟ್ಟಿ ಇಲ್ಲಿ ಅರಸ್‍ ಎಂಬ ವೈದ್ಯರ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಪ್ರೀಪ್ರೊಡಕ್ಷನ್‍ ಕೆಲಸಗಳು ನಡೆಯುತ್ತಿವೆ. ನವೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭವಾಗಿ ಮುಂದಿನ ವರ್ಷ ಮೇನಲ್ಲಿ ಬಿಡುಗಡೆ ಮಾಡುವ ಪ್ಲಾನ್‍ ಇದೆ’ ಎನ್ನುತ್ತಾರೆ.

    ಸಾಮಾನ್ಯವಾಗಿ ಸೈಕಾಲಾಜಿಕಲ್‍ ಥ್ರಿಲ್ಲರ್ ಎಂದರೆ ಕ್ರೈಮ್‍ ಅಥವಾ ಹಿಂಸೆ ಇರುತ್ತದೆ. ಆದರೆ, ಈ ಚಿತ್ರದಲ್ಲಿ ಅಂಥದ್ದು ಯಾವುದೂ ಇರುವುದಿಲ್ಲ ಎನ್ನುವ ಅಜಯ್‍ ರಾಜ್‍, ‘ಸರಳವಾಗಿ ಹೇಳಬೇಕು ಎಂದರೆ ಇದು ಮನಸ್ಸಿನೊಳಗೆ ನಡೆಯುವ ಸಂಘರ್ಷ. ಇಲ್ಲಿ ನಾಯಕನೇ ಸಮಸ್ಯೆ. ಅವನಿಂದ ಏನಾಗುತ್ತದೆ ಎಂಬುದು ಕಥೆ’ ಎಂದರು.

    ರಜನಿಗೆ ಇಲ್ಲಿ ವಿಶೇಷ ಪಾತ್ರ ಸಿಕ್ಕಿದೆಯಂತೆ. ಅಷ್ಟೇ ಅಲ್ಲ, ಇದು ಅವರ ಕನಸಿನ ಪಾತ್ರವಂತೆ. ‘ನಿರ್ದೇಶಕರು ಬಂದು ಒಂದು ಸೀನ್‍ ಕೇಳಿ, ಆ ನಂತರ ಚಿತ್ರದಲ್ಲಿ ನಟಿಸುವ ಬಗ್ಗೆ ಯೋಚನೆ ಮಾಡಿ ಎಂದರು. ಬಹುಶಃ ಗ್ಲಾಮರಸ್‍ ಪಾತ್ರ ಇರಬಹುದು ಎಂದುಕೊಂಡೆ. ಆದರೆ, ಹಾಗೇನಿಲ್ಲ. ಇದೊಂದು ಸವಾಲಿನ ಪಾತ್ರ. ನಾನು ಇದುವರೆಗೂ ನೋಡಿರುವ ಚಿತ್ರಗಳಲ್ಲಿ ಇಂಥದ್ದೊಂದು ಪಾತ್ರ ಬಂದಿಲ್ಲ. ಹಾಗೆಯೇ ಇಂಥದ್ದೊಂದು ಪಾತ್ರ ಹೇಗೆ ಹೊಳೆಯಿತು ಎಂಬ ಆಶ್ಚರ್ಯವೂ ಆಯಿತು’ ಎಂದರು. ಇನ್ನು, ಮತ್ತೊಬ್ಬ ನಾಯಕಿಯಾಗಿರುವ ಐಶ್ವರ್ಯಾ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಖುಷಿಪಟ್ಟರು.

     

    ನಿರ್ಮಾಪಕರಲ್ಲೊಬ್ಬರಾದ ತಿಲಕ್‍ ರಾಜು ಅನಿವಾಸಿ ಭಾರತೀಯರು. ಸದ್ಯ ಅಮೇರಿಕಾದಲ್ಲಿ ವಾಸಿಸುತ್ತಿರುವ ಅವರಿಗೆ ಚಿತ್ರ ಮಾಡುವುದು ಬಹುದಿನಗಳ ಕನಸಂತೆ. ಈ ಚಿತ್ರದ ಮೂಲಕ ಅದು ನನಸಾಗುತ್ತಿರುವುದಾಗಿ ಖುಷಿಪಟ್ಟರು. ‘ಮನ ರೇ‘ ಚಿತ್ರಕ್ಕೆ ಆದಿ ಅವರ ಛಾಯಾಗ್ರಹಣವಿದೆ. ಈಗಾಗಲೇ ಸಾಕಷ್ಟು ಜನಪ್ರಿಯ ಚಿತ್ರಗಳಿಗೆ ಹಾಡಿ, ಉತ್ತಮ ಗಾಯಕರೆನಿಸಿಕೊಂಡಿರುವ ಅನಿರುದ್ಧ್ ಶಾಸ್ತ್ರಿ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಾಸುಕಿ ವೈಭವ್ ಮತ್ತು ಐಶ್ವರ್ಯ ರಂಗರಾಜನ್ ಕಂಠದಲ್ಲಿ ‘ಸಂಜು’ ಸಾಂಗ್

    ವಾಸುಕಿ ವೈಭವ್ ಮತ್ತು ಐಶ್ವರ್ಯ ರಂಗರಾಜನ್ ಕಂಠದಲ್ಲಿ ‘ಸಂಜು’ ಸಾಂಗ್

    ತ್ರಕರ್ತನಾಗಿ, ನಟನಾಗಿ ಇದೀಗ ನಿರ್ದೇಶಕನಾಗಿಯೂ‌ ಗುರುತಿಸಿಕೊಂಡಿರುವ ಯತಿರಾಜ್ (Yathiraj) ನಿರ್ದೇಶಿಸಿರುವ ಸಂಜು (Sanju) ಚಿತ್ರ ಸಿದ್ದವಾಗಿದೆ. ಪ್ರೀತಿ ಮತ್ತು ಭಾವನೆಗಳ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ.‌ ಯತಿರಾಜ್ ಅವರೆ ಕಥೆ ಹಾಗೂ ಚಿತ್ರಕಥೆ ಬರೆದಿದ್ದಾರೆ.

    ವಿಜಯ್ ಹರಿತ್ಸ ಸಂಗೀತ ನಿರ್ದೇಶಿಸಿರುವ ಎರಡು ಹಾಡುಗಳು ಈ ಚಿತ್ರದಲ್ಲಿದ್ದು, ಎರಡೂ ಹಾಡುಗಳನ್ನು (Song) ಆಕಾಶ್ ಹಾಸನ್ ಬರೆದಿದ್ದಾರೆ. ಡ್ಯುಯೆಟ್ ಹಾಡನ್ನು ಖ್ಯಾತ ಗಾಯಕ ವಾಸುಕಿ ವೈಭವ್ (Vasuki Vaibhav)  ಹಾಗೂ ಗಾಯಕಿ ಐಶ್ವರ್ಯ ರಂಗರಾಜನ್ (Aishwarya Rangarajan) ಹಾಡಿದ್ದಾರೆ. ಮತ್ತೊಂದು ವಿಭಿನ್ನ ಶೈಲಿಯ ಗೀತೆಯನ್ನು ಹೆಸರಾಂತ ಗಾಯಕ ನವೀನ್ ಸಜ್ಜು(Naveen Sajju)  ಹಾಡಿದ್ದಾರೆ. ಈ ಎರಡು ಹಾಡುಗಳನ್ನು ರೇಣು ಸ್ಟುಡಿಯೋ ಹಾಗೂ ಪಾರೇಕ್ ಸ್ಟುಡಿಯೋದಲ್ಲಿ ಇತ್ತೀಚೆಗೆ ರೆಕಾರ್ಡ್ ಮಾಡಿಕೊಳ್ಳಲಾಗಿದೆ.‌ ಹಾಡುಗಳು ಉತ್ತಮವಾಗಿ ಮೂಡಿ ಬಂದಿದೆ ಎಂದು ಗಾಯಕರು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ರಮ್ಯಾ ಬದಲು ರಚಿತಾ ರಾಮ್: ಎರಡು ಬಾರಿ ರಮ್ಯಾ ಸ್ಥಾನ ತುಂಬಿದ ರಚ್ಚು

    ಮೈಸೂರಿನ ಸಂತೋಷ್ ಡಿ ಎಂ ನಿರ್ಮಿಸಿರುವ ಈ ಚಿತ್ರಕ್ಕೆ ವಿದ್ಯಾ ನಾಗೇಶ್ ಛಾಯಾಗ್ರಹಣ, ಸಂಜೀವ್ ರೆಡ್ಡಿ ಸಂಕಲನ, ಮದನ್ ಹರಿಣಿ ನೃತ್ಯ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನವಿದೆ. ಮನ್ವಿತ್ ಈ ಚಿತ್ರದ ನಾಯಕನಾಗಿ ನಟಿಸಿದ್ದು, ಶ್ರಾವ್ಯ ನಾಯಕಿಯಾಗಿದ್ದಾರೆ. ಯತಿರಾಜ್, ಸುಂದರಶ್ರೀ, ಬಾಲ ರಾಜ್ವಾಡಿ, ಮಹಂತೇಶ್, ಅಪೂರ್ವ, ಚಂದ್ರಪ್ರಭ, ಪ್ರಕಾಶ್ ಶೆಣೈ, ವಿನೋದ್, ಬೌ ಬೌ ಜಯರಾಂ, ಬೇಬಿಶ್ರೀ, ರಾಜೇಗೌಡ, ನಾಗರತ್ನ, ಚೇತನ್, ಕುರಿ ರಂಗ, ಕಾತ್ಯಾಯಿನಿ‌ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

    ಮಡಿಕೇರಿಯ ಮೂರ್ನಾಡು ಎಂಬ ಅದ್ಭುತ ಸ್ಥಳದಲ್ಲೇ ಹೆಚ್ಚು ಚಿತ್ರೀಕರಣ ನಡೆದಿದೆ. ಅಲ್ಲಿ ಬಸ್ ನಿಲ್ದಾಣದ ಸೆಟ್ ಸಹ ಹಾಕಲಾಗಿತ್ತು. ಈ ಬಸ್ ನಿಲ್ದಾಣ ಚಿತ್ರದಲ್ಲಿ ಪ್ರಮುಖಪಾತ್ರ ವಹಿಸಿದೆ. ಶೀಘ್ರದಲ್ಲೇ ಹಾಡುಗಳನ್ನು ಬಿಡುಗಡೆ ಮಾಡುವ ಯೋಜನೆ ಇದೆ ಎಂದು ನಿರ್ದೇಶಕ ಯತಿರಾಜ್ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಐಶ್ವರ್ಯ ರಂಗರಾಜನ್ ಧ್ವನಿಯಲ್ಲಿ ‘ಮಾಂಕ್ ದಿ ಯಂಗ್’ ಹಾಡು

    ಐಶ್ವರ್ಯ ರಂಗರಾಜನ್ ಧ್ವನಿಯಲ್ಲಿ ‘ಮಾಂಕ್ ದಿ ಯಂಗ್’ ಹಾಡು

    ಇತ್ತೀಚಿಗೆ ಈ ಚಿತ್ರದ ” ಕಣ್ ಗಳೆ ಸೋತು” ಎಂಬ ಹಾಡು ಬಿಡುಗಡೆಯಾಯಿತು.  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಹಾಗೂ ಹಿರಿಯ ನಟ ಸುಂದರರಾಜ್ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಸುಪ್ರೀತ್ ಫಲ್ಗುಣ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡನ್ನು ಸುಮಧುರ ಕಂಠದ ಗಾಯಕಿ ಐಶ್ವರ್ಯ ರಂಗರಾಜನ್ ಇಂಪಾಗಿ ಹಾಡಿದ್ದಾರೆ. ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ, ಮೆಚ್ಚುಗೆ ಪಡೆಯುತ್ತಿದೆ. ಅಶ್ವಿನ್ ಶಾನ್ ಭಾಗ್ ಈ ಹಾಡನ್ನು ಬರೆದಿದ್ದಾರೆ.

    ನಮ್ಮ ಚಿತ್ರದಲ್ಲಿ ಎರಡು ಹಾಡುಗಳಿದ್ದು, ಅಶ್ವಿನ್ ಶಾನ್ ಭಾಗ್ ಬರೆದಿದ್ದಾರೆ. ಖ್ಯಾತ ಗಾಯಕಿಯರಾದ ಐಶ್ವರ್ಯ ರಂಗರಾಜನ್ ಹಾಗೂ ಸಾದ್ವಿನಿ ಕೊಪ್ಪ ಈ ಹಾಡುಗಳನ್ನು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಸುಪ್ರೀತ್ ಫಲ್ಗುಣ ಮಾಹಿತಿ ನೀಡಿದರು. ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರ,  ಎಲ್ಲರ ಸಹಕಾರದಿಂದ ಚೆನ್ನಾಗಿ ಬಂದಿದೆ‌. ಹಾಡುಗಳಂತೂ ಅದ್ಭುತವಾಗಿದೆ ಎಂದರು ನಿರ್ದೇಶಕ  ಮಾಸ್ಚಿತ್ ಸೂರ್ಯ. ನಾಯಕ ಸರೋವರ್,  ನಾಯಕಿ ಸೌಂದರ್ಯ ಗೌಡ, ನಟಿ ಉಷಾ ಭಂಡಾರಿ, ನಟ ಶಿವಪ್ಪ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಇದನ್ನೂ ಓದಿ: ಬಿಕಿನಿ ತೊಟ್ಟು ಪೋಸ್‌ ಕೊಟ್ಟ ನಿವೇದಿತಾಗೆ ಬೆವರಿಳಿಸಿದ ನೆಟ್ಟಿಗರು

    ನಿವೃತ್ತ ಆರ್ಮಿ ಆಫೀಸರ್ ರಾಜೇಂದ್ರನ್, ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳಿ, ಸರೋವರ್, ಗೋಪಿಚಂದ್,  ಲಾಲ್ ಚಂದ್ ಖತಾರ್ ಐದು ಜನ ಸೇರಿ “ಮಾಂಕ್ ದಿ ಯಂಗ್” ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.  ಐದು ಜನ ನಿರ್ಮಾಪಕರು ಮಾತನಾಡಿ, ತಮ್ಮ ನೂತನ ಪ್ರಯತ್ನಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು. ಛಾಯಾಗ್ರಾಹಕ ಕಾರ್ತಿಕ್ ಶರ್ಮ, ನೃತ್ಯ ನಿರ್ದೇಶಕ ಹರ್ಷವರ್ಧನ್  ಸೇರಿದಂತೆ ಅನೇಕ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಿರ್ಮಾಪಕ ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು ಹಾಡು ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದರು. ನಾಡಿನ ಪ್ರಸಿದ್ದ ನೃತ್ಯಗಾರರು ಚಿತ್ರದ ಹಾಡುಗಳಿಗೆ ಹೆಜ್ಜೆ ಹಾಕಿದರು.

    Live Tv
    [brid partner=56869869 player=32851 video=960834 autoplay=true]