Tag: ಐಸಿಸ್

  • ಐಸಿಸ್ ಮಾಡ್ಯೂಲ್ ಭೇದಿಸಿದ ದೆಹಲಿ ಪೊಲೀಸರು; ಇಬ್ಬರ ಬಂಧನ

    ಐಸಿಸ್ ಮಾಡ್ಯೂಲ್ ಭೇದಿಸಿದ ದೆಹಲಿ ಪೊಲೀಸರು; ಇಬ್ಬರ ಬಂಧನ

    – ಪ್ರಮುಖ ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದ ಶಂಕಿತ ಭಯೋತ್ಪಾದಕರು

    ನವದೆಹಲಿ: ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾದೊಂದಿಗೆ ಸಂಯೋಜಿತವಾಗಿರುವ ಭಯೋತ್ಪಾದಕ ಮಾಡ್ಯೂಲ್ ಅನ್ನು ದೆಹಲಿ ಪೊಲೀಸರು (Delhi Police) ಭೇದಿಸಿದ್ದಾರೆ. ಈ ಜಾಲದಲ್ಲಿದ್ದ ಇಬ್ಬರು ಶಂಕಿತರು ಭಯೋತ್ಪಾದಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಂಧನಗಳು ದೆಹಲಿಯಲ್ಲಿ ಸಂಭವನೀಯ ಭಯೋತ್ಪಾದಕ ದಾಳಿಯನ್ನು ತಪ್ಪಿಸಿವೆ.

    ಬಂಧಿತರ ಪೈಕಿ ಓರ್ವ ಅದ್ನಾನ್ ಮಧ್ಯಪ್ರದೇಶದ ಭೋಪಾಲ್ ಮೂಲದವನಾಗಿದ್ದು, ಮತ್ತೊಬ್ಬ ಆರೋಪಿ ದೆಹಲಿಯವನು ಎಂದು ತಿಳಿದು ಬಂದಿದೆ. ದೆಹಲಿಯ ಸಾದಿಕ್ ನಗರ ಮತ್ತು ಭೋಪಾಲ್‌ನಲ್ಲಿ ನಡೆದ ಸಂಘಟಿತ ಕಾರ್ಯಾಚರಣೆಯಲ್ಲಿ ಮಾಹಿತಿ ಪಡೆದ ನಂತರ ಇಬ್ಬರನ್ನು ಬಂಧಿಸಲಾಗಿದೆ. ಶಂಕಿತರು ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಹಾರ ಚುನಾವಣೆ ಎನ್‌ಡಿಎ & ಲಠ್‌ಬಂಧನ್ ನಡುವಿನ ಹೋರಾಟ: ಆರ್‌ಜೆಡಿ, ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

    ಆರೋಪಿಗಳು ಐಸಿಸ್ (ISIS) ಜೊತೆ ಸಂಬಂಧ ಹೊಂದಿದ್ದಾರೆ ಮತ್ತು ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ದಾಳಿಯನ್ನು ಯೋಜಿಸುತ್ತಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅವರಿಂದ ಎಲೆಕ್ಟ್ರಾನಿಕ್ ಸಾಧನಗಳು ಮತ್ತು ಅಪರಾಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ದೆಹಲಿ ಪೊಲೀಸರು ಸೆಪ್ಟೆಂಬರ್‌ನಲ್ಲೂ ದೆಹಲಿ, ಜಾರ್ಖಂಡ್, ತೆಲಂಗಾಣ ಮತ್ತು ಮಧ್ಯಪ್ರದೇಶದಾದ್ಯಂತ ಹಲವಾರು ದಾಳಿಗಳನ್ನು ನಡೆಸಿ ಪಾಕಿಸ್ತಾನ ಮೂಲದ ಇದೇ ರೀತಿಯ ಭಯೋತ್ಪಾದಕ ಮಾಡ್ಯೂಲ್ ಅನ್ನು ಭೇದಿಸಿದ್ದರು. ದಾಳಿಗಳ ನಂತರ, ಪೊಲೀಸರು ಐವರು ಭಯೋತ್ಪಾದಕರನ್ನು ಬಂಧಿಸಿದ್ದರು. ಅವರನ್ನು ಅಶರ್ ದಾನಿಶ್, ಅಫ್ತಾಬ್, ಸುಫಿಯಾನ್, ಮುಜಾಪಾ ಮತ್ತು ಕಮ್ರಾನ್ ಖುರೇಷಿ ಅಲಿಯಾಸ್ ಸಮರ್ ಖಾನ್ ಎಂದು ಗುರುತಿಸಲಾಗಿತ್ತು. ಇದನ್ನೂ ಓದಿ: ಡ್ರೈವರ್‌, ಕಂಡಕ್ಟರ್ ಬೆಂಕಿ ನಂದಿಸ್ತಿದ್ದರು, 5 ಸೆಕೆಂಡ್‌ಲ್ಲಿ ಜೀವ ಉಳಿಸಿಕೊಂಡ್ವಿ – ಪ್ರಾಣಾಪಾಯದಿಂದ ಪಾರಾದ ಆಕಾಶ್ ಮಾತು

  • ಐಸಿಸ್‌ ಮಾದರಿಯಲ್ಲಿ ಧಾರ್ಮಿಕ ಮತಾಂತರ ದಂಧೆ – 6 ರಾಜ್ಯಗಳಲ್ಲಿ 10 ಮಂದಿ ಅರೆಸ್ಟ್‌, ಬೃಹತ್‌ ಜಾಲ ಭೇದಿಸಿದ UP ಪೊಲೀಸ್‌

    ಐಸಿಸ್‌ ಮಾದರಿಯಲ್ಲಿ ಧಾರ್ಮಿಕ ಮತಾಂತರ ದಂಧೆ – 6 ರಾಜ್ಯಗಳಲ್ಲಿ 10 ಮಂದಿ ಅರೆಸ್ಟ್‌, ಬೃಹತ್‌ ಜಾಲ ಭೇದಿಸಿದ UP ಪೊಲೀಸ್‌

    – ಭಾರತದಲ್ಲಿ ಮತಾಂತರಕ್ಕೆ ಅಮೆರಿಕ, ಕೆನಾಡ ಸೇರಿದಂತೆ ವಿದೇಶಗಳಿಂದ ಫಂಡಿಂಗ್‌

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಸ್ವಯಂ ಘೋಷಿತ ದೇವಮಾನವ ಜಮಾಲುದ್ದೀನ್ ಅಲಿಯಾಸ್ ಛಂಗೂರ್ ಬಾಬಾ ಮತಾಂತರದ ಸೀಕ್ರೆಟ್‌ ಬಯಲಾದ ಬೆನ್ನಲ್ಲೇ ಉತ್ತರ ಪ್ರದೇಶದ ಪೊಲೀಸರು ಮತ್ತೊಂದು ಮತಾಂತರದ ಬೃಹತ್‌ ಜಾಲವನ್ನ ಭೇದಿಸಿದ್ದಾರೆ.

    ಹೌದು. ಅಂತಾರಾಷ್ಟ್ರೀಯ ಹಣಕಾಸು ನೆರವು ಪಡೆದು ಐಸಿಸ್‌ ಮಾದರಿಯಲ್ಲಿ ಮತಾಂತರ (ISIS-Style’ Religious Conversion) ದಂಧೆ ನಡೆಸುತ್ತಿದ್ದ ಬೃಹತ್‌ ಜಾಲ ಭೇದಿಸಿರುವ ಪೊಲೀಸರು 6 ವಿಭಿನ್ನ ರಾಜ್ಯಗಳಲ್ಲಿ 10 ಮಂದಿಯನ್ನ ಬಂಧಿತರನ್ನ ಗೋವಾದ ಆಯೇಷಾ (ಅಲಿಯಾಸ್ ಎಸ್.ಬಿ. ಕೃಷ್ಣ), ಕೋಲ್ಕತ್ತಾದ ಅಲಿ ಹಸನ್ (ಅಲಿಯಾಸ್ ಶೇಖರ್ ರಾಯ್) ಮತ್ತು ಒಸಾಮಾ, ಆಗ್ರಾದ ರೆಹಮಾನ್ ಖುರೇಷಿ, ಖಲಾಪರ್, ಮುಜಫರ್‌ನಗರದ ಅಬ್ಬು ತಾಲಿಬ್, ಡೆಹ್ರಾಡೂನ್‌ನ ಅಬುರ್ ರೆಹಮಾನ್, ದೆಹಲಿಯ ಮುಸ್ತಫಾ (ಅಲಿಯಾಸ್ ಮನೋಜ್), ಜೈಪುರದ ಮೊಹಮ್ಮದ್ ಅಲಿ ಮತ್ತು ಜುನೈದ್ ಖುರೇಷಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: Uttar Pradesh | ಸ್ಕೂಲ್ ವ್ಯಾನ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ರೇಪ್ – ಡ್ರೈವರ್ ಬಂಧನ

    ಬೆನ್ನುಬಿದ್ದದ್ದು ಹೇಗೆ?
    ಕಳೆದ ಮಾರ್ಚ್‌ ತಿಂಗಳಲ್ಲಿ 33 ಮತ್ತು 18 ವರ್ಷದ ಇಬ್ಬರು ಸಹೋದರಿಯರು ಕಾಣೆಯಾಗಿದ್ದರು. ಈ ಪ್ರಕರಣದ ಬೆನ್ನತ್ತಿದ್ದ ಪೊಲೀಸರಿಗೆ ಅವರನ್ನು ತಮ್ಮ ಧರ್ಮ ಬದಲಾಯಿಸಲು ಒತ್ತಾಯಿಸಲಾಗಿದೆ ಜೊತೆಗೆ ಮೂಲಭೂತ ವಾದಕ್ಕೆ ಒಳಗಾಗುತ್ತಿದ್ದಾರೆ ಎಂಬುದು ಗೊತ್ತಾಯಿತು. ಅಲ್ಲದೇ ‘ಲವ್ ಜಿಹಾದ್’ ಮತ್ತು ಮೂಲಭೂತವಾದದಲ್ಲಿ ತೊಡಗಿರುವ ಗ್ಯಾಂಗ್ ಈ ಸಹೋದರಿಯರನ್ನ ಗುರಿಯಾಗಿಸಿಕೊಂಡಿದೆ ಎಂಬುದನ್ನೂ ಕಂಡುಕೊಂಡರು. ಇಲ್ಲಿಂದ ತನಿಖೆ ಶುರು ಮಾಡಿದ ಪೊಲೀಸರು ದಂಧೆಯನ್ನ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರ ಗುಂಪು ಐಸಿಸ್‌ ಮಾದರಿಯಲ್ಲಿ ಕಾರ್ಯ ನಿರ್ವಹಿಸುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮಗಳಿಂದಿಗೆ ಮಾತನಾಡಿದ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರಾಜೀವ್ ಕೃಷ್ಣ, ಮತಾಂತರ ದಂಧೆ ತಡೆಯುವ ನಿಟ್ಟಿನಲ್ಲಿ ಪೊಲೀಸರು ʻಮಿಷನ್ ಅಸ್ಮಿತಾʼಕಾರ್ಯಾಚರಣೆ ಆರಂಭಿಸಿದ್ದು, ಮತಾಂತರ ಸಿಂಡಿಕೇಟ್‌ನ ಪ್ರಮುಖರಾದ ಮೊಹಮ್ಮದ್ ಉಮರ್ ಗೌತಮ್ ಮತ್ತು ಮುಫ್ತಿ ಜಹಾಂಗೀರ್ ಆಲಂ ಖಾಸ್ಮಿನನ್ನ ವಿಶೇಷ ತಂಡ ಬಂಧಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿಯನ್ನ TRF ನಡೆಸಿದೆ ಅನ್ನೋದಕ್ಕೆ ಸಾಕ್ಷಿ ತೋರಿಸಿ – ಉಗ್ರ ಸಂಘಟನೆಗೆ ಪಾಕ್‌ ನೇರ ಬೆಂಬಲ

    ಛಂಗೂರ್ ಬಾಬಾ ನೇತೃತ್ವದ ಸಿಂಡಿಕೇಟ್ ವಿಚಾರಣೆಯನ್ನ ಎಸ್ ಐಟಿ ಮತ್ತು ವಿಶೇಷ ಕಾರ್ಯಪಡೆ ಮುಂದುವರೆಸಿವೆ. ಲವ್ ಜಿಹಾದ್, ಅಕ್ರಮವಾಗಿ ಮತಾಂತರ ದಂಧೆ ನಡೆಸುವವರು, ತೀವ್ರವಾದಿಗಳು ಮತ್ತು ಜಾಗತಿಕ ಮಟ್ಟದಲ್ಲಿರುವ ಜಿಹಾದಿಗಳ ಜೊತೆಗೆ ಸೇರಿಕೊಂಡು ರಾಷ್ಟ್ರದ ಭದ್ರತೆಗೆ ಧಕ್ಕೆ ತರಲು ಪ್ರಯತ್ನಿಸುವ ಜಾಲದೊಂದಿಗೆ ಕೈ ಜೋಡಿಸುತ್ತಿರುವುದು ಕಂಡುಬಂದಿದೆ. ಈ ಸಂಬಂಧ ಆರು ರಾಜ್ಯಗಳಾದ್ಯಂತ 10 ಜನರನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    ಅಮೆರಿಕ, ಕೆನಡಾದಿಂದ ಫಂಡಿಂಗ್‌
    ಪ್ರಕರಣದ ತನಿಖೆ ನಡೆಸುತ್ತಿದ್ದಂತೆ ಇನ್ನಷ್ಟು ಸ್ಫೋಟಕ ಸಂಗತಿಗಳು ಬೆಳಕಿಗೆ ಬಂದಿವೆ. ಈ ಕುರಿತು ಮಾಹಿತಿ ನೀಡಿರುವ ಆಗ್ರಾ ಪೊಲೀಸ್‌ ಆಯುಕ್ತ, ಈ ಮತಾಂತರ ದಂಧೆಗೆ ಅಮೆರಿಕ ಮತ್ತು ಕೆನಡಾ ಸೇರಿದಂತೆ ವಿದೇಶಗಳಿಂದ ಹಣೆ ಹೊಳೆಯೇ ಹರಿದುಬಂದಿದೆ. ಸದ್ಯಕ್ಕೆ ಅಮೆರಿಕ ಮತ್ತು ಕೆನಡಾದ ಹಣದ ಮೂಲದ ಬಗ್ಗೆ ಸುಳಿವು ಸಿಕ್ಕಿದೆ. ಉಳಿದ ದೇಶಗಳಿಂದ ಹಣ ಸಂದಾಯವಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಪುಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ – ಕೆಲಸದ ಒತ್ತಡವೇ ಕಾರಣ ಅಂತ ಡೆತ್ ನೋಟ್ ಬರೆದಿಟ್ಟು ಸೂಸೈಡ್

    ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉತ್ತರ ಪ್ರದೇಶ ಪೊಲೀಸರು ಹೆಚ್ಚಿನ ತನಿಖೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆ ವಿಶೇಷ ಕಾರ್ಯಪಡೆ (STF) ಮತ್ತು ಭಯೋತ್ಪಾದನಾ ನಿಗ್ರಹ ದಳ (ATS) ಸೇರಿದಂತೆ ವಿಶೇಷ ಘಟಕಗಳನ್ನು ಕರೆಸಿಕೊಂಡಿದ್ದಾರೆ. ಇದನ್ನೂ ಓದಿ: 10 ವರ್ಷಗಳಿಂದ ಭಾರತದಲ್ಲಿ ಮಂಗಳಮುಖಿ ವೇಷದಲ್ಲಿದ್ದ ಅಬ್ದುಲ್ ಕಲಾಂ ಅರೆಸ್ಟ್‌

  • ಪುಣೆಯ ಐಸಿಸ್‌ ಮಾಡ್ಯೂಲ್‌ ಕೇಸ್‌ – ಇಬ್ಬರು ಉಗ್ರರ ಬಂಧನ

    ಪುಣೆಯ ಐಸಿಸ್‌ ಮಾಡ್ಯೂಲ್‌ ಕೇಸ್‌ – ಇಬ್ಬರು ಉಗ್ರರ ಬಂಧನ

    ನವದೆಹಲಿ: ಪುಣೆಯ ಐಸಿಸ್( ISIS) ಮಾಡ್ಯೂಲ್ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ.

    ಅಬ್ದುಲ್ಲಾ ಫಯಾಜ್ ಶೇಖ್ ಮತ್ತು ತಲ್ಹಾ ಲಿಯಾಕತ್ ಖಾನ್ ಇಬ್ಬರನ್ನೂ ಇಂಡೋನೇಷ್ಯಾದಲ್ಲಿ ಬಂಧಿಸಲಾಗಿದೆ. ಇಬ್ಬರನ್ನು ಭಾರತಕ್ಕೆ ಕಳುಹಿಸಲಾಗಿದ್ದು, ಮುಂಬೈನಲ್ಲಿ ಬಂಧಿಸಲಾಗಿದೆ. ಅವರನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇದನ್ನೂ ಓದಿ: ಖಂಡಾಂತರ ಕ್ಷಿಪಣಿ ದಾಳಿಗೆ ನೂರ್‌ ಖಾನ್‌ ವಾಯುನೆಲೆ ಧ್ವಂಸ – ʻಆಪರೇಷನ್ ಸಿಂಧೂರʼದ ಯಶಸ್ಸು ಒಪ್ಪಿಕೊಂಡ ಪಾಕ್ ಪ್ರಧಾನಿ

    ಮಹಾರಾಷ್ಟ್ರ, ಗುಜರಾತ್ ಮತ್ತು ಭಾರತದ ಇತರ ಭಾಗಗಳಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಐಸಿಸ್ ಮೂಲಕ ಪ್ರಾಯೋಜಿತ ಪಿತೂರಿಯಲ್ಲಿ ಇಬ್ಬರೂ ತೊಡಗಿದ್ದರು. ತನಿಖೆಯಲ್ಲಿ ಈ ಬಂಧನವು ಪ್ರಮುಖ ಹಂತವೆಂದು ಪರಿಗಣಿಸಲಾಗಿದೆ.

    ಎನ್‌ಐಎ ಪ್ರಕಾರ, ಆರೋಪಿಗಳು ಐಇಡಿಗಳಿಗಾಗಿ ಕಾರ್ಯಾಗಾರಗಳನ್ನು ಆಯೋಜಿಸುವುದು, ಗುಂಡು ಹಾರಿಸುವ ಅಭ್ಯಾಸಕ್ಕಾಗಿ ಸ್ಥಳಗಳನ್ನು ಹುಡುಕುವುದು ಮತ್ತು ಕಾಡುಗಳಲ್ಲಿ ಅಡಗಿಕೊಳ್ಳುವುದು, ಹಾಗೆಯೇ ಸಶಸ್ತ್ರ ದರೋಡೆ ಮತ್ತು ಕಳ್ಳತನದ ಮೂಲಕ ಹಣವನ್ನು ಸಂಗ್ರಹಿಸುವುದು ಮುಂತಾದ ಅನೇಕ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಪಾಕ್‌ಗೆ ಡ್ರೋನ್ ಸಪ್ಲೈ ಮಾಡಿದ ಟರ್ಕಿಗೆ ಕಂಟಕ – ಟರ್ಕಿ ಮಾರ್ಬಲ್‌ಗೆ ಬೆಂಗಳೂರಲ್ಲಿ ಬಹಿಷ್ಕಾರ

    ಅಬ್ದುಲ್ಲಾ ಫಯಾಜ್ ಶೇಖ್ ಅಲಿಯಾಸ್ ‘ದಿಯಾಪರ್‌ವಾಲಾ’ ಪುಣೆಯ ಕೊಂಡವದಲ್ಲಿರುವ ಮಿತಾನಗರ ನಿವಾಸಿಯಾಗಿದ್ದರೆ, ತಲ್ಹಾ ಲಿಯಾಕತ್ ಖಾನ್ ವನ್ವಾಡಿ (ಪುಣೆ)ಯಲ್ಲಿ ವಾಸಿಸುತ್ತಿದ್ದರು. ಇಬ್ಬರೂ ಸ್ವಲ್ಪ ಸಮಯದಿಂದ ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕಾಗಿ, ಎನ್‌ಐಎ 3 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.

  • ಉಗ್ರರು ಕೈವಶ ಮಾಡಿದ ಬೆನ್ನಲ್ಲೇ ಸಿರಿಯಾದ ಮೇಲೆ ಅಮೆರಿಕ ವಾಯು ದಾಳಿ

    ಉಗ್ರರು ಕೈವಶ ಮಾಡಿದ ಬೆನ್ನಲ್ಲೇ ಸಿರಿಯಾದ ಮೇಲೆ ಅಮೆರಿಕ ವಾಯು ದಾಳಿ

    ವಾಷಿಂಗ್ಟನ್‌: ಉಗ್ರರು ಕೈವಶ ಮಾಡಿದ ಬೆನ್ನಲ್ಲೇ ಅಮೆರಿಕ(USA) ಸಿರಿಯಾದ (Syria) ಮೇಲೆ ವೈಮಾನಿಕ ದಾಳಿ (Airstrikes) ನಡೆಸಿದೆ.

    ಸಿರಿಯಾ ಸರ್ವಾಧಿಕಾರಿ ಬಶರ್ ಅಲ್ ಅಸ್ಸಾದ್ (Bashar al-Assad) ಅವರ ಆಡಳಿತ ಕೊನೆಗೊಂಡ ಬೆನ್ನಲ್ಲೇ ಅಮೆರಿಕ ಐಸಿಸ್‌ (ISIS) ಉಗ್ರ ಸಂಘಟನೆಯ ನೆಲೆಯ ಮೇಲೆ ದಾಳಿ ನಡೆಸಿದೆ. ಮಧ್ಯ ಸಿರಿಯಾದಲ್ಲಿರುವ 75ಕ್ಕೂ ಹೆಚ್ಚು ನೆಲೆಗಳ ಮೇಲೆ ಬಾಂಬ್‌ ದಾಳಿ ನಡೆಸಿದೆ.

    ಸರ್ವಾಧಿಕಾರಿ ಅಸ್ಸಾದ್‌ ದೇಶ ತೊರೆದ ನಂತರ ಹಯಾತ್ ತಹ್ರೀರ್ ಅಲ್-ಶಾಮ್ ನೇತೃತ್ವದ ಉಗ್ರರು ಸಿರಿಯಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಘಟನೆ ವಶಪಡಿಸಿಕೊಂಡರೂ ಅಲ್ಲಿ ಐಸಿಸ್‌ ಉಗ್ರರು ಇನ್ನೂ ಇದ್ದಾರೆ. ಮುಂದಿನ ದಿನಗಳಲ್ಲಿ ಐಸಿಸ್‌ ಉಗ್ರರು ಚಿಗುರಿ ಮತ್ತೆ ಹೋರಾಟಕ್ಕೆ ಇಳಿಯಬಾರದು ಎಂಬ ಕಾರಣಕ್ಕೆ ಅಮೆರಿಕ ಏರ್‌ಸ್ಟ್ರೈಕ್‌ ನಡೆಸಿದೆ. ಇದನ್ನೂ ಓದಿ: ಕಣ್ಮರೆಯಾಗಿದ್ದ ವಿಮಾನ ಮಾಸ್ಕೋದಲ್ಲಿ ಲ್ಯಾಂಡ್‌ – ಪದಚ್ಯುತ ಸಿರಿಯಾ ಅಧ್ಯಕ್ಷ ಅಸ್ಸಾದ್‌ಗೆ ಪುಟಿನ್‌ ರಾಜಾಶ್ರಯ

    ಪೂರ್ವ ಸಿರಿಯಾದಲ್ಲಿ ಅಮೆರಿಕ ಸುಮಾರು 900 ಪಡೆಗಳನ್ನು ಹೊಂದಿದೆ. ಈ ಸೈನಿಕರು ಕುರ್ದಿಶ್ ನೇತೃತ್ವದ ಸಿರಿಯನ್ ಡೆಮಾಕ್ರಟಿಕ್ ಫೋರ್ಸ್‌ನೊಂದಿಗೆ ಕೆಲಸ ಮಾಡುತ್ತಿದ್ದಾರೆ.

    ದಾಳಿಯ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಪ್ರತಿಕ್ರಿಯಿಸಿ, ಸಿರಿಯಾದಲ್ಲಿ ಸೃಷ್ಟಿಯಾಗಿರುವ ನಿರ್ವಾತದ ಲಾಭವನ್ನು ಪಡೆಯಲು ಐಸಿಸ್‌ ಪ್ರಯತ್ನಿಸುತ್ತಿದೆ. ಐಸಿಸ್‌ ಮೇಲೆ ಅಮೆರಿಕ ಕಣ್ಣಿಟ್ಟು ಅವರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿಸಿದರು.

    ಅಸ್ಸಾದ್ ಅಸ್ಸಾಂ ಆಡಳಿತದ ಪತನದಿಂದ ಜನತೆಗೆ ನ್ಯಾಯ ಸಿಕ್ಕಿದೆ. ಇದು ಸಿರಿಯಾದಲ್ಲಿ ದೀರ್ಘಕಾಲದಿಂದ ಬಳಲುತ್ತಿರುವ ಜನರಿಗೆ ಸಿಕ್ಕಿದ ಐತಿಹಾಸಿಕ ಕ್ಷಣ ಎಂದು ಹೇಳಿದರು.

    ಇಸ್ರೇಲ್‌ನಿಂದಲೂ ದಾಳಿ:
    ಇನ್ನೊಂದು ಕಡೆ ಇಸ್ರೇಲ್‌ ಸಿರಿಯಾದ ಮೇಲೆ ವಾಯು ದಾಳಿ ನಡೆಸಿದೆ. ಸೇನೆಯ ಕೇಂದ್ರ ಕಚೇರಿ, ಗುಪ್ತಚರ ಸಂಸ್ಥೆ ಮತ್ತು ಕಸ್ಟಮ್ಸ್‌ನ ಕಚೇರಿಗಳನ್ನು ಒಳಗೊಂಡ ಕಟ್ಟಡದ ಮೇಲೆ ದಾಳಿ ನಡೆದಿದೆ. ಇರಾನ್‌ನ ವಿಜ್ಞಾನಿಗಳು ಈ ಸಂಕೀರ್ಣದಲ್ಲಿ ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸಿದ್ದರು ಎಂದು ಇಸ್ರೇಲ್‌ ಈ ಹಿಂದೆ ಹೇಳಿಕೊಂಡಿತ್ತು.

  • ಉಳ್ಳಾಲದ ಮಾಜಿ ಶಾಸಕ ದಿ. ಇದಿನಬ್ಬರ ಮೊಮ್ಮಗನಿಗೆ ಜಾಮೀನು

    ಉಳ್ಳಾಲದ ಮಾಜಿ ಶಾಸಕ ದಿ. ಇದಿನಬ್ಬರ ಮೊಮ್ಮಗನಿಗೆ ಜಾಮೀನು

    ಮಂಗಳೂರು: ಐಸಿಸ್ (ISIS) ನಂಟು ಪ್ರಕರಣದಲ್ಲಿ ಎನ್ ಐಎಯಿಂದ ಬಂಧನಕ್ಕೊಳಗಾಗಿದ್ದ ಉಳ್ಳಾಲದ ಮಾಜಿ ಶಾಸಕ ದಿ. ಇದಿನಬ್ಬರವರ ಮೊಮ್ಮಗ ಅಮ್ಮರ್ ಅಬ್ದುಲ್ ರೆಹಮಾನ್ ಗೆ ದೆಹಲಿ ಹೈಕೋರ್ಟ್ (Delhi Highcourt) ಜಾಮೀನು ನೀಡಿದೆ.

    2021 ರ ಆಗಸ್ಟ್ 21 ರಂದು ಬಂಧನಕ್ಕೊಳಗಾಗಿದ್ದ ರೆಹಮಾನ್ ಮೊಬೈಲ್ ನಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳಿಗೆ ಐಸಿಸ್ ಪರವಾದ  ಬಾವುಟ, ಕರಪತ್ರ ವೀಡಿಯೋಗಳು ಸಿಕ್ಕಿದ್ದವು. ಇದನ್ನು ಕೋರ್ಟ್‍ಗೂ ನೀಡಲಾಗಿತ್ತು. ಈ ನಡುವೆ ಬಂಧನ ಪ್ರಶ್ನಿಸಿ ವಿಚಾರಣಾಧೀನ ಕೋರ್ಟ್ ನಲ್ಲಿ ರೆಹಮಾನ್ ಜಾಮೀನು ಅರ್ಜಿ ಸಲ್ಲಿಸಿದ್ದು, ಕೋರ್ಟ್ ಜಾಮೀನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇದೀಗ ಸುದೀರ್ಘ ವಿಚಾರಣೆ ಬಳಿಕ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.

    ಜಾಮೀನು ಆದೇಶದಲ್ಲಿ ಹಲವು ಅಂಶಗಳನ್ನು ದೆಹಲಿ ಹೈಕೋರ್ಟ್ ಉಲ್ಲೇಖಿಸಿದ್ದು, ಉಗ್ರ ಸಂಘಟನೆ ಜೊತೆಗಿನ ಆಕರ್ಷಣೆಯನ್ನು ಉಗ್ರ ನಂಟು ಎನ್ನಲು ಆಗಲ್ಲ. ಐಸಿಸ್ ಬಾವುಟ, ಕರಪತ್ರ ಮೊಬೈಲ್ ನಲ್ಲಿದ್ದರೆ ಉಗ್ರ ಎನ್ನಲು ಪೂರಕ ಸಾಕ್ಷ್ಯವಲ್ಲ. ಇವುಗಳೆಲ್ಲ ಇಂದಿನ ಡಿಜಿಟಲ್ ಯುಗದಲ್ಲಿ ಇಂಟರ್ ನೆಟ್ ನಲ್ಲಿ ಸಿಗುತ್ತದೆ. ಕುತೂಹಲ ಇರೋ ಯಾರು ಬೇಕಾದರೂ ಮೊಬೈಲ್, ಕಂಪ್ಯೂಟರ್ ನಲ್ಲಿ ಡೌನ್ ಲೋಡ್ ಮಾಡಬಹುದು. ಹಾಗಾಗಿ ಇದನ್ನ ಇಟ್ಟು ಕೊಂಡವರನ್ನ ಐಸಿಸ್ ನಂಟನ್ನ ಸಾಬೀತುಪಡಿಸಲು ಆಗಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇದನ್ನೂ ಓದಿ: ಕೈಬೆರಳಿನ ಶಸ್ತ್ರಚಿಕಿತ್ಸೆಗೆ ಕರೆದೊಯ್ದು ನಾಲಿಗೆಗೆ ಸರ್ಜರಿ ಮಾಡಿದ್ರು!- ತನಿಖೆಗೆ ಆದೇಶ

  • ಐಸಿಸ್ ಸೇರಿ ಉಗ್ರನಾಗಲು ಬಯಸಿದ್ದ ಐಐಟಿ ವಿದ್ಯಾರ್ಥಿ ಅರೆಸ್ಟ್ – ಕರ್ನಾಟಕಕ್ಕಿದೆಯಾ ಲಿಂಕ್?

    ಐಸಿಸ್ ಸೇರಿ ಉಗ್ರನಾಗಲು ಬಯಸಿದ್ದ ಐಐಟಿ ವಿದ್ಯಾರ್ಥಿ ಅರೆಸ್ಟ್ – ಕರ್ನಾಟಕಕ್ಕಿದೆಯಾ ಲಿಂಕ್?

    – ವಿಚಾರಣೆ ವೇಳೆ ಬೆಚ್ಚಿ ಬೀಳಿಸುವ ಮಾಹಿತಿ ಸ್ಫೋಟ

    ಗುವಾಹಟಿ: ಭಯೋತ್ಪಾದಕ ಗುಂಪು ಐಸಿಎಸ್ ಸಂಘಟನೆ (ISIS) ಸೇರಿ ಉಗ್ರನಾಗಲು ಮುಂದಾಗಿದ್ದ ಐಐಟಿ ವಿದ್ಯಾರ್ಥಿಯನ್ನು ಅಸ್ಸಾಂ ಪೊಲೀಸರು (Assam Police) ಬಂಧಿಸಿರುವ ಘಟನೆ ನಡೆದಿದೆ. ವಿದ್ಯಾರ್ಥಿಯನ್ನು ಬಂಧಿಸಿದ ಬಳಿಕ ಗುವಾಹಟಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

    ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಗುವಾಹಟಿಯಲ್ಲಿ ಜೈವಿಕ ತಂತ್ರಜ್ಞಾನ ಓದುತ್ತಿದ್ದ ಅಂತಿಮ ವರ್ಷದ ವಿದ್ಯಾರ್ಥಿ ತೌಸೀಫ್ ಅಲಿ ಫಾರೂಕಿಯನ್ನು (Tauseef Ali Farooqui) ವಿಚಾರಣೆ ನಡೆಸುವ ವೇಳೆ ಬೆಚ್ಚಿ ಬೀಳಿಸುವ ಮಾಹಿತಿಗಳು ಬೆಳಕಿಗೆ ಬಂದಿವೆ.

    ಕರ್ನಾಟಕದಲ್ಲೂ ಮಾಡ್ಯೂಲ್ ಸ್ಥಾಪಿಸಿದ್ದ:
    ಈತ 2019ರಿಂದಲೇ ಐಸಿಸ್ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ. ಅಲ್ಲದೇ ಪಾಣಿಪತ್‌ಗೆ ಸೇರಿದ ಫಾರೂಕಿ ಸಹಚರ ಅನುರಾಗ್ ಸಿಂಗ್ ಅಲಿಯಾಸ್ ರೆಹಾನ್ ಇಸ್ಲಾಂಗೆ ಮತಾಂತರಗೊಂಡಿದ್ದ. ರೆಹಾನ್ ಪತ್ನಿ ಬಾಂಗ್ಲಾದೇಶದ ಪ್ರಜೆ. ಆದ್ದರಿಂದ ಬಾಂಗ್ಲಾದೇಶದಲ್ಲಿ ತಲೆ ಮರೆಸಿಕೊಂಡಿದ್ದು, ಭಾರತೀಯರನ್ನು ಐಸಿಸ್‌ಗೆ ಆಮೂಲಾಗ್ರೀಕರಣಗೊಳಿಸುತ್ತಿದ್ದ ಎಂದು ಶಂಕಿಸಲಾಗಿದೆ. ಅಲ್ಲದೇ ಕರ್ನಾಟಕ, ಜಾರ್ಖಂಡ್, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗೋವಾ, ಪಂಜಾಬ್, ಮಹಾರಾಷ್ಟ್ರ ರಾಜ್ಯಗಳಲ್ಲಿಯೂ ಮಾಡ್ಯೂಲ್‌ಗಳನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಎನ್‌ಐಎ ಮೂಲಗಳು ತಿಳಿಸಿವೆ.

    ಪೊಲೀಸರು ಹೇಳಿದ್ದೇನು?
    ಐಸಿಸ್‌ಗೆ ಸೇರಿರುವುದಾಗಿ ಹೇಳಿದ್ದ ಐಐಟಿ-ಜಿ ವಿದ್ಯಾರ್ಥಿ ತೌಸೀಫ್ ಅಲಿ ಫಾರೂಕಿಯನ್ನು ಅಸ್ಸಾಂ ಎಸ್‌ಟಿಎಫ್ ಬಂಧಿಸಿದೆ. ಶನಿವಾರ ಬೆಳಗ್ಗೆಯಿಂದ ವಿದ್ಯಾರ್ಥಿ ನಾಪತ್ತೆಯಾಗಿದ್ದ. ಐಸಿಸ್ ಸೇರುವ ಬಗ್ಗೆ ಆತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ. ನಾವು ಆತನನ್ನು ಅಸ್ಸಾಂನ ಕಾಮ್ರೂಪ್ ಜಿಲ್ಲೆಯ ಹಾಜೋದಲ್ಲಿ ಪತ್ತೆ ಹಚ್ಚಿದ್ದೇವೆ ಎಂದು ವಿಶೇಷ ಕಾರ್ಯಪಡೆಯ (ಎಸ್‌ಟಿಎಫ್) ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಲ್ಯಾಣ್ ಕುಮಾರ್ ಪಾಠಕ್ ತಿಳಿಸಿದ್ದರು.

    ತೌಸೀಫ್ ಕ್ಯಾಂಪಸ್‌ನಲ್ಲಿ ಹೆಚ್ಚು ಸ್ನೇಹಿತರನ್ನು ಹೊಂದಿರಲಿಲ್ಲ. ಹೆಚ್ಚಿನ ಸಮಯವನ್ನು ಆತ ಹಾಸ್ಟೆಲ್‌ನಲ್ಲೇ ಕಳೆಯುತ್ತಿದ್ದ. ಆತನ ಕೊಠಡಿಯಲ್ಲಿ ಐಸಿಸ್ ಧ್ವಜವನ್ನು ಹೋಲುವ ಕಪ್ಪು ಧ್ವಜ ಮತ್ತು ಧರ್ಮದ ಕೆಲವು ಪ್ರತಿಗಳು ಸಿಕ್ಕಿವೆ. ವಶಪಡಿಸಿಕೊಂಡ ವಸ್ತುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಿದ್ದೇವೆ ಎಂದು ತಿಳಿಸಿದ್ದರು.

    ಫಾರೂಕಿ ಏನಂತ ಬರೆದುಕೊಂಡಿದ್ದ?
    ಸೋಮವಾರ ಲಿಕ್ಡಿಇನ್‌ನಲ್ಲಿ ತೌಸೀಫ್ ಅಲಿ ಬಹಿರಂಗ ಪತ್ರವನ್ನು ಬರೆದಿದ್ದ. ಭಾರತೀಯ ಸಂವಿಧಾನ, ಅದರ ಸಂಸ್ಥೆಗಳು ಮತ್ತು ಮುಂತಾದವುಗಳಿಂದ ನಾನು ಹೊರ ಬಂದಿದ್ದೇನೆ. ಇಸ್ಲಾಮಿಕ್ ಸ್ಟೇಟ್-ಖೊರಾಸನ್ ಪ್ರಾಂತ್ಯ ಎಂದು ಕರೆಯಲ್ಪಡುವ ಪ್ರದೇಶಕ್ಕೆ ನಾನು ವಲಸೆ ಹೋಗುತ್ತಿದ್ದೇನೆ. ಮುಸ್ಲಿಂ-ನಾಯಕತ್ವಕ್ಕೆ ನಾನು ಪ್ರತಿಜ್ಞೆ ಮಾಡಿದ ಮೊದಲ ಹೆಜ್ಜೆ ಇದಾಗಿದೆ. ಇದು ಮುಸ್ಲಿಮರು (ಅಲ್ಲಾಗೆ ಶರಣಾದವರು) ಮತ್ತು ಕಾಫೀರ್ (ನಾಸ್ತಿಕರು) ನಡುವಿನ ಹೋರಾಟ ಎಂದು ಬರೆದುಕೊಂಡಿದ್ದ.

  • ಉಗ್ರನಾಗಲು ಐಸಿಸ್‌ ಸೇರಲು ಮುಂದಾಗಿದ್ದ ಐಐಟಿ ವಿದ್ಯಾರ್ಥಿ ವಶಕ್ಕೆ

    ಉಗ್ರನಾಗಲು ಐಸಿಸ್‌ ಸೇರಲು ಮುಂದಾಗಿದ್ದ ಐಐಟಿ ವಿದ್ಯಾರ್ಥಿ ವಶಕ್ಕೆ

    ಗುವಾಹಟಿ: ಭಯೋತ್ಪಾದಕ ಗುಂಪು ಐಸಿಎಸ್‌ಗೆ (ISIS) ಸೇರಲು ಮುಂದಾಗಿದ್ದ ಐಐಟಿ ವಿದ್ಯಾರ್ಥಿಯನ್ನು (IIT Student) ಅಸ್ಸಾಂ ಪೊಲೀಸರು (Assam Police) ವಶಕ್ಕೆ ಪಡೆದಿದ್ದಾರೆ.

    ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ಗುವಾಹಟಿಯಲ್ಲಿ (IIT) ಜೈವಿಕ ತಂತ್ರಜ್ಞಾನ ಓದುತ್ತಿದ್ದ ಅಂತಿಮ ವರ್ಷದ ವಿದ್ಯಾರ್ಥಿ ತೌಸೀಫ್ ಅಲಿ ಫಾರೂಕಿಯನ್ನು (Tauseef Ali Farooqui) ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ

     ಸುದ್ದಿಗೋಷ್ಠಿ ನಡೆಸಿದ ವಿಶೇಷ ಕಾರ್ಯಪಡೆಯ (ಎಸ್‌ಟಿಎಫ್) ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಲ್ಯಾಣ್ ಕುಮಾರ್ ಪಾಠಕ್ ಅವರು, ಐಸಿಸ್‌ಗೆ ಸೇರಿರುವುದಾಗಿ ಹೇಳಿದ ಐಐಟಿ-ಜಿ ವಿದ್ಯಾರ್ಥಿ ತೌಸೀಫ್ ಅಲಿ ಫಾರೂಕಿಯನ್ನು ಅಸ್ಸಾಂ ಎಸ್‌ಟಿಎಫ್‌ ಬಂಧಿಸಿದೆ. ಶನಿವಾರ ಬೆಳಗ್ಗೆಯಿಂದ ವಿದ್ಯಾರ್ಥಿ ನಾಪತ್ತೆಯಾಗಿದ್ದ. ಐಸಿಸ್ ಸೇರುವ ಬಗ್ಗೆ ಆತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದ. ನಾವು ಆತನನ್ನು ಅಸ್ಸಾಂನ ಕಾಮ್ರೂಪ್ ಜಿಲ್ಲೆಯ ಹಾಜೋದಲ್ಲಿ ಪತ್ತೆ ಹಚ್ಚಿದ್ದೇವೆ ಎಂದು ತಿಳಿಸಿದರು.

    ತೌಸೀಫ್ ಕ್ಯಾಂಪಸ್‌ನಲ್ಲಿ ಹೆಚ್ಚು ಸ್ನೇಹಿತರನ್ನು ಹೊಂದಿರಲಿಲ್ಲ. ಹೆಚ್ಚಿನ ಸಮಯವನ್ನು ಆತ ಹಾಸ್ಟೆಲ್‌ನಲ್ಲೇ ಕಳೆಯುತ್ತಿದ್ದ. ಆತನ ಕೊಠಡಿಯಲ್ಲಿ ಐಸಿಸ್‌ ಧ್ವಜವನ್ನು ಹೋಲುವ ಕಪ್ಪು ಧ್ವಜ ಮತ್ತು ಧರ್ಮದ ಕೆಲವು ಪ್ರತಿಗಳು ಸಿಕ್ಕಿವೆ. ವಶಪಡಿಸಿಕೊಂಡ ವಸ್ತುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಿದ್ದೇವೆ ಎಂದು ಅವರು ಹೇಳಿದರು. ಇದನ್ನೂ ಓದಿ: ಕಾವೇರಿ ನೀರಿನಲ್ಲಿ ಕಾರು ವಾಶ್‌: ಮಾಲೀಕರಿಗೆ 5 ಸಾವಿರ ದಂಡ ವಿಧಿಸಿದ ಜಲಮಂಡಳಿ

    ಸೋಮವಾರ ಲಿಕ್ಡಿಇನ್‌ನಲ್ಲಿ ತೌಸೀಫ್ ಅಲಿ ಬಹಿರಂಗ ಪತ್ರವನ್ನು ಬರೆದಿದ್ದ. ಭಾರತೀಯ ಸಂವಿಧಾನ, ಅದರ ಸಂಸ್ಥೆಗಳು ಮತ್ತು ಮುಂತಾದವುಗಳಿಂದ ನಾನು ಹೊರ ಬಂದಿದ್ದೇನೆ. ಇಸ್ಲಾಮಿಕ್ ಸ್ಟೇಟ್-ಖೊರಾಸನ್ ಪ್ರಾಂತ್ಯ ಎಂದು ಕರೆಯಲ್ಪಡುವ ಪ್ರದೇಶಕ್ಕೆ ನಾನು ವಲಸೆ ಹೋಗುತ್ತಿದ್ದೇನೆ. ಮುಸ್ಲಿಂ-ನಾಯಕತ್ವಕ್ಕೆ ನಾನು ಪ್ರತಿಜ್ಞೆ ಮಾಡಿದ ಮೊದಲ ಹೆಜ್ಜೆ ಇದಾಗಿದೆ. ಇದು ಮುಸ್ಲಿಮರು(ಅಲ್ಲಾಗೆ ಶರಣಾದವರು) ಮತ್ತು ಕಾಫೀರ್‌ (ನಾಸ್ತಿಕರು) ನಡುವಿನ ಹೋರಾಟ ಎಂದು ಬರೆದುಕೊಂಡಿದ್ದ.

     

    ಅಸ್ಸಾಂ ಎಸ್‌ಟಿಎಫ್ ಇತ್ತೀಚೆಗೆ ಭಾರತದಲ್ಲಿ ಐಸಿಸ್‌ಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿತ್ತು. ಡೆಹ್ರಾಡೂನ್‌ನ ಚಕ್ರತಾ ಮೂಲದ ಹ್ಯಾರಿಸ್ ಭಾರತದಲ್ಲಿ ಐಸಿಸ್ ಮುಖ್ಯಸ್ಥನಾಗಿದ್ದರೆ ಪಾಣಿಪತ್‌ನ ಅನುರಾಗ್ ಸಿಂಗ್ ಅಲಿಯಾಸ್ ರೆಹಾನ್ ಇಸ್ಲಾಂಗೆ ಮತಾಂತರಗೊಂಡಿದ್ದ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ನಾಲ್ವರು ಭಯೋತ್ಪಾದಕರ ಬಂಧನ – ಅಪಾರ ಶಸ್ತ್ರಾಸ್ತ್ರ ವಶ

     ಐಸಿಸ್‌ನ ನೇಮಕಾತಿ, ಭಯೋತ್ಪಾದಕ ನಿಧಿ ಮತ್ತು ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಬಳಸಿ ಭಾರತದಾದ್ಯಂತ ದಾಳಿಗಳನ್ನು ನಡೆಸುವುದು ಸೇರಿದಂತೆ ವಿವಿಧ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಇಬ್ಬರೂ ತೊಡಗಿಸಿಕೊಂಡಿದ್ದರು. ಹೆಚ್ಚಿನ ತನಿಖೆಗಾಗಿ ಇಬ್ಬರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸಲಾಗಿದೆ.

     

  • ರಷ್ಯಾದಲ್ಲಿ ನಡೆದ ಭೀಕರ ದಾಳಿ ಖಂಡಿಸಿದ ಪ್ರಧಾನಿ ಮೋದಿ

    ರಷ್ಯಾದಲ್ಲಿ ನಡೆದ ಭೀಕರ ದಾಳಿ ಖಂಡಿಸಿದ ಪ್ರಧಾನಿ ಮೋದಿ

    – ‌ಐಸಿಸ್‍ಗೆ ಪುಟಿನ್‌ ಎಚ್ಚರಿಕೆ
    – ಭಯೋತ್ಪಾದಕರ ಫೋಟೋ ಬಿಡುಗಡೆ

    ನವದೆಹಲಿ: ರಷ್ಯಾ ರಾಜಧಾನಿ ಮಾಸ್ಕೋದ ಕ್ರೋಕಸ್ ಕನ್ಸರ್ಟ್ ಹಾಲ್‌ನಲ್ಲಿ (Crocus City Hall Attack) ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಖಂಡಿಸಿದ್ದಾರೆ.

    ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಿ, ಮಾಸ್ಕೋದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ. ಸಂತ್ರಸ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಈ ದುಃಖದ ಸಮಯದಲ್ಲಿ ಭಾರತವು ರಷ್ಯಾದ ಒಕ್ಕೂಟದ ಸರ್ಕಾರ ಮತ್ತು ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಎಂದು ಹೇಳಿದ್ದಾರೆ.

    ಇತ್ತ ದಾಳಿಗೆ ಸಂಬಂಧಪಟ್ಟಂತೆ ರಷ್ಯಾ ಅಧ್ಯಕ್ಷ ಪುಟಿನ್, ದಾಳಿಕೋರರು ತಕ್ಕ ಬೆಲೆ ತೆರಬೇಕಾಗುತ್ತದೆ. ಭಯೋತ್ಪಾದಕರನ್ನು ನಾವು ಸುಮ್ಮನೆ ಬಿಡಲ್ಲ ಎಂದು ದಾಳಿಯ ಹೊಣೆ ಹೊತ್ತ ಐಸಿಸ್‍ಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ರಷ್ಯಾದಲ್ಲಿ ಉಗ್ರರ ಅಟ್ಟಹಾಸ- 70ಕ್ಕೂ ಹೆಚ್ಚು ಮಂದಿ ದುರ್ಮರಣ

    ಶುಕ್ರವಾರ ಮಧ್ಯರಾತ್ರಿ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ನಡೆದ ಈ ಭೀಕರ ಭಯೋತ್ಪಾದಕ ದಾಳಿಯಲ್ಲಿ ಈವರೆಗೆ ಕನಿಷ್ಠ 70 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಮತ್ತು 140 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೃತ್ಯದ ಬಳಿಕ ಮಾಸ್ಕೋದ ಹೊರವಲಯದಲ್ಲಿರುವ ಕ್ರೋಕಸ್ ಕನ್ಸರ್ಟ್ ಹಾಲ್ ಮೇಲೆ ನಮ್ಮ ಯೋಧರು ದಾಳಿ ನಡೆಸಿದ್ದಾರೆ. ಸದ್ಯ ದಾಳಿಕೋರರು ಸುರಕ್ಷಿತವಾಗಿದ್ದು, ವಾಪಸ್ಸಾಗಿದ್ದಾರೆ ಎಂದು ಐಸಿಸ್ ತನ್ನ ಟೆಲಿಗ್ರಾಮ್ ನಲ್ಲಿ ಹೇಳಿಕೆ ನೀಡಿದೆ.

    ಉಗ್ರರ ಫೋಟೋ ಬಿಡುಗಡೆ: ಘಟನೆಯ ಬಳಿಕ ರಷ್ಯಾದ ಮಾಧ್ಯಮಗಳು ಭಯೋತ್ಪಾದಕರ ಫೋಟೋಗಳನ್ನು ಬಿಡುಗಡೆ ಮಾಡಿವೆ. ಉಗ್ರರ ದಾಳಿಯ ವೇಳೆ ಸ್ಥಳದಲ್ಲಿ ಇದ್ದ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮ ವರದಿಗಳು, ದಾಳಿಕೋರರು ‘ಏಷ್ಯನ್ ಮತ್ತು ಕಕೇಶಿಯನ್’ ಜನರಂತೆ ಕಾಣುತ್ತಿದ್ದರು ಮತ್ತು ವಿದೇಶಿ ಭಾಷೆಯಲ್ಲಿ ಮಾತನಾಡುತ್ತಿದ್ದರು, ರಷ್ಯನ್ ಅಲ್ಲ. ಭಯೋತ್ಪಾದಕರು ಇಂಗುಶೆಟಿಯಾ ಸ್ಥಳೀಯರು ಎಂಬುದಾಗಿ ವರದಿ ಮಾಡಿವೆ.

  • ಶಂಕಿತ ಉಗ್ರನ ಜೊತೆ ಭಟ್ಕಳದ ವಿಚ್ಛೇದಿತ ಮಹಿಳೆ ಲಿಂಕ್‌ – ಲವ್‌ ಕಹಾನಿ ಶುರುವಾಗಿದ್ದೇ ರೋಚಕ!

    ಶಂಕಿತ ಉಗ್ರನ ಜೊತೆ ಭಟ್ಕಳದ ವಿಚ್ಛೇದಿತ ಮಹಿಳೆ ಲಿಂಕ್‌ – ಲವ್‌ ಕಹಾನಿ ಶುರುವಾಗಿದ್ದೇ ರೋಚಕ!

    – ಭಯೋತ್ಪಾದನಾ ನಿಗ್ರಹ ದಳದಿಂದ ತೀವ್ರ ವಿಚಾರಣೆ

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದ ವಿಚ್ಛೇದಿತ ಮಹಿಳೆಯೊಬ್ಬಳು ಭಯೋತ್ಪಾದಕನೊಂದಿಗೆ ಸಂಪರ್ಕ ಬೆಳಸಿ ಹಣ ನೀಡಿದ ಕುರಿತು ಮುಂಬೈನ ಭಯೋತ್ಪಾದನಾ ನಿಗ್ರಹ ದಳ ಭಟ್ಕಳದ (Bhatkal) ಮಹಿಳೆಯೊಬ್ಬಳನ್ನ ವಿಚಾರಣೆ ನಡೆಸಿದೆ.

    ಕಳೆದ ಎರಡು ದಿನಗಳ ಹಿಂದೆ ಮುಂಬೈನಲ್ಲಿ (Mumbai) ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಐಸಿಸ್ (ISIS) ಸಂಘಟನೆಗೆ ಹಣ ವರ್ಗಾವಣೆ ಮಾಡುತ್ತಿದ್ದ ಇಂಜಿನಿಯರ್ ಹುಸೇನ್ ಅಬ್ದುಲ್ ಅಜೀಜ್ ಶೇಖ್ (32) ಎಂಬಾತನನ್ನು ನಾಸಿಕ್‌ನ ಟಿಡ್ಕೆ ಕಾಲೋನಿಯಲ್ಲಿ ಬಂಧಿಸಿದ್ದರು. ಇದನ್ನೂ ಓದಿ: ಅಳಿಯನ ಪರೀಕ್ಷೆಯ ಫಲಿತಾಂಶಕ್ಕಾಗಿ ಸಿಎಂ ಬಳಿ ನುಗ್ಗಿದ ಮಾವ- ಮಾಣಿಕ್ ಷಾ ಗ್ರೌಂಡ್‌ನಲ್ಲಿ ಭದ್ರತಾ ಲೋಪ

    ಈ ಸಂದರ್ಭದಲ್ಲಿ ಹುಸೇನ್ ಅಬ್ದುಲ್ ಅಜೀಜ್ ಶೇಖ್ ಮನೆಯಲ್ಲಿ ಸಿಮ್ ಕಾರ್ಡ್ಸ್, ಮೊಬೈಲ್ ಫೋನ್‌ಗಳು, ಪೆನ್‌ಡ್ರೈವ್‌‌ಗಳು, ಲ್ಯಾಪ್‌ಟಾಪ್ ಪತ್ತೆಯಾಗಿತ್ತು. ಇವುಗಳನ್ನು ತಪಾಸಣೆ ನಡೆಸಿದಾಗ, ಹುಸೇನ್ ಅಬ್ದುಲ್ ಅಜೀಜ್ ಶೇಖ್ ಜೊತೆ ಭಟ್ಕಳದ ಆಜಾದ್ ನಗರದ ಮಹಿಳೆ ಸಂಪರ್ಕವಿರುವುದು ಪತ್ತೆಯಾಗಿದೆ. ಈ ಮಹಿಳೆ ಆರೋಪಿ ಹುಸೇನ್ ಅಬ್ದುಲ್ ಅಜೀಜ್ ಶೇಖ್‌ನನ್ನ ಪ್ರೀತಿ ಮಾಡುತ್ತಿದ್ದಳು ಎಂಬ ವಿಚಾರವೂ ತಿಳಿದುಬಂದಿದೆ.

    ಜನವರಿ 24 ರಂದು ಭಟ್ಕಳಕ್ಕೆ ಆಗಮಿಸಿದ್ದ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಭಟ್ಕಳ ಪೊಲೀಸರ ಸಹಾಯ ಪಡೆದು, ಶಂಕಿತ ಉಗ್ರನ ಜೊತೆ ಸಂಪರ್ಕವಿದ್ದ ಮಹಿಳೆಯ ಮನೆಗೆ ತೆರಳಿ ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದಾರೆ. ಅಧಿಕಾರಿಗಳು ಮಹಿಳೆಯಿಂದ ಸಾಕಷ್ಟು ಮಾಹಿತಿ ಕಲೆ ಹಾಕಿದ್ದಾರೆ. ಇದನ್ನೂ ಓದಿ: ಕರ್ತವ್ಯ ಪಥದಲ್ಲಿ ಮಿಂಚಿದ ʻರಾಕೆಟ್‌ ಗರ್ಲ್‌ʼ – ಚಂದ್ರಯಾನ-3 ಸಕ್ಸಸ್‌ನಲ್ಲಿ ಮಹಿಳಾ ವಿಜ್ಞಾನಿಗಳ ಕೊಡುಗೆ ನೆನಪಿಸಿದ ಟ್ಯಾಬ್ಲೊ

    ಆನ್‌ಲೈನ್‌ನಲ್ಲಿ ಅರೇಬಿಕ್‌ ಕ್ಲಾಸ್‌: ಶಂಕಿತ ಉಗ್ರನೊಂದಿಗೆ ಸಂಪರ್ಕದಲ್ಲಿದ್ದ ಮಹಿಳೆ ಭಟ್ಕಳದಲ್ಲಿದ್ದುಕೊಂಡೇ ಆನ್‌ಲೈನ್ ಅರೇಬಿಕ್ ಕ್ಲಾಸ್ ನಡೆಸುತ್ತಿದ್ದಳು. ಜೊತೆಗೆ ಮದರಸಾದ ಶಿಕ್ಷಕಿಯಾಗಿದ್ದಳು. ಈಕೆ ಜ.17ರಂದು ಆರೋಪಿ ಹುಸೇನ್ ಅಬ್ದುಲ್ ಅಜೀಜ್ ಶೇಖ್ ನನ್ನು ಭಟ್ಕಳದ ಲಾಡ್ಜ್‌ವೊಂದರಲ್ಲಿ ಭೇಟಿಯಾಗಿದ್ದಳು. ಅಲ್ಲದೇ, ಆರೋಪಿ ಹುಸೇನ್ ಅಬ್ದುಲ್ ಅಜೀಜ್ ಶೇಖ್‌ಗೆ ವಿವಿಧ ಹಂತಗಳಲ್ಲಿ ಈವರೆಗೆ 4-5 ಲಕ್ಷ ರೂ. ನೀಡಿದ್ದು ಬೆಳಕಿಗೆ ಬಂದಿದೆ. ಆ ನಂತರ ಆರೋಪಿ ಜೊತೆ ಮಹಿಳೆ ನಿರಂತರ ಸಂಪರ್ಕದಲ್ಲಿದ್ದಳು ಎಂದು ಮೂಲಗಳಿಂದ ತಿಳಿದುಬಂದಿದೆ. ಮಹಿಳೆಯ ತಂದೆ ಭಟ್ಕಳದಲ್ಲಿ ಐಸ್ ಕ್ರೀಮ್ ಪಾರ್ಲರ್ ನಡೆಸುತಿದ್ದಾರೆ.

  • ಐಸಿಸ್‌ ಜೊತೆ ನಂಟು; 2014 ರಲ್ಲಿ ಬಂಧಿತನಾಗಿದ್ದ ಟೆಕ್ಕಿ ದೋಷಿ ಎಂದು ಕೋರ್ಟ್‌ ತೀರ್ಪು

    ಐಸಿಸ್‌ ಜೊತೆ ನಂಟು; 2014 ರಲ್ಲಿ ಬಂಧಿತನಾಗಿದ್ದ ಟೆಕ್ಕಿ ದೋಷಿ ಎಂದು ಕೋರ್ಟ್‌ ತೀರ್ಪು

    ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ನಿಷೇಧಿತ ಸಂಘಟನೆ ಐಸಿಸ್‌ ಪರ ಪ್ರಚಾರ ನಡೆಸುತ್ತಿದ್ದ ಟೆಕ್ಕಿಯೊಬ್ಬನನ್ನು ದೋಷಿ ಎಂದು ಎನ್‌ಐಎ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

    ಜಾಲಹಳ್ಳಿಯಲ್ಲಿ ಮೆಹದಿ ಮಸ್ರೂರ್ ಬಿಸ್ವಾಸ್ ಎಂಬಾತನನ್ನು ಬಂಧಿಸಲಾಗಿತ್ತು. ನಗರದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಬಿಸ್ವಾಸ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸಾಮಾಜಿಕ ಜಾಲತಾಣದ ಮೂಲಕ ಐಸಿಸ್‌ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಬಂಧಿಸಲಾಗಿತ್ತು.

    2014 ರ ಡಿಸೆಂಬರ್‌ನಲ್ಲಿ ಜಾಲಹಳ್ಳಿಯ ಮನೆಯಲ್ಲಿ ಮೆಹದಿ ಬಿಸ್ವಾಸ್‌ ಪೊಲೀಸರು ಬಂಧಿಸಿದ್ದರು. ನಂತರ ಪ್ರಕರಣ ಎನ್ಐಎಗೆ ವರ್ಗಾವಣೆ ಮಾಡಲಾಗಿತ್ತು. ಎನ್‌ಐಎ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿತ್ತು.

    ಪ್ರಕರಣದ ವಿಚಾರಣೆ ನಡೆಸಿ ದೋಷಿ ಎಂದು ಎನ್‌ಐಎ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಇಂದು (ಶುಕ್ರವಾರ) ಆರೋಪಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಬಂಧಿತ ವ್ಯಕ್ತಿ ಕೋಲ್ಕತ್ತಾ ಮೂಲದವನು ಎಂಬುದು ತಿಳಿದುಬಂದಿದೆ.

    ಬಂಧಿತ ಬಿಸ್ವಾನ್‌, ಸಾಮಾಜಿಕ ಜಾಲತಾಣದ ಮೂಲಕ ಐಸಿಸ್ ಪರ 15,000 ಕ್ಕೂ ಹೆಚ್ಚು ಟ್ವೀಟ್ ಪ್ರಚಾರ ನಡೆಸಿದ್ದ. ಯುಎಪಿಎ 13, 18b, 39, ಐಪಿಸಿ 125, 153a, 505(1)(c), 505(2) ಅಡಿಯಲ್ಲಿ ತಪ್ಪಿತಸ್ಥ ಎಂದು ಕೋರ್ಟ್‌ ಆದೇಶ ಹೊರಡಿಸಿದೆ.