Tag: ಐಸೋಲೇಷನ್

  • ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್ ದೃಢ; ಎಲ್ಲ ರಾಜ್ಯಗಳ ಆಸ್ಪತ್ರೆಗಳಲ್ಲಿ ಐಸೋಲೇಷನ್‌ ಸೌಲಭ್ಯ ಸಿದ್ಧತೆಗೆ ಕೇಂದ್ರ ಸೂಚನೆ

    ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್ ದೃಢ; ಎಲ್ಲ ರಾಜ್ಯಗಳ ಆಸ್ಪತ್ರೆಗಳಲ್ಲಿ ಐಸೋಲೇಷನ್‌ ಸೌಲಭ್ಯ ಸಿದ್ಧತೆಗೆ ಕೇಂದ್ರ ಸೂಚನೆ

    ನವದೆಹಲಿ: ಭಾರತದಲ್ಲಿ ಮೊದಲ ಮಂಕಿಪಾಕ್ಸ್​ ಕೇಸ್​ ಪತ್ತೆಯಾಗಿದೆ. ಇತ್ತೀಚೆಗೆ ಆಫ್ರಿಕನ್ ದೇಶದಿಂದ ಭಾರತಕ್ಕೆ ಬಂದಿದ್ದರು ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್‌ (Monkeypox) ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ (Health Ministry) ಸೋಮವಾರ ದೃಢಪಡಿಸಿದೆ.

    ಭಾನುವಾರ (ಸೆ.8) ಶಂಕಿತ ವ್ಯಕ್ತಿಯಿಂದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಮಾದರಿ ಪರೀಕ್ಷೆ ಬಳಿಕ ಮಂಕಿಪಾಕ್ಸ್‌ ದೃಢಪಟ್ಟಿರುವುದಾಗಿ ಸಚಿವಾಲಯ ತಿಳಿಸಿದೆ. ರೋಗಿಯಲ್ಲಿ ಪಶ್ಚಿಮ ಆಫ್ರಿಕಾದ ಕ್ಲಾಡ್-2ನ Mpox ವೈರಸ್ ಇರುವಿಕೆಯನ್ನು ಪ್ರಯೋಗಾಲಯ ಪರೀಕ್ಷೆ ದೃಢಪಡಿಸಿದೆ. ಈ ಹಿನ್ನೆಲೆ ಅವರನ್ನು ಪ್ರತ್ಯೇಕವಾಗಿ ಇಡಲಾಗಿದೆ. ಸೋಂಕಿತ ವ್ಯಕ್ತಿಯ ಗುರುತನ್ನು ಬಹಿರಂಗಪಡಿಸದೆ, ರೋಗಿಯು ಸ್ಥಿರವಾಗಿದ್ದಾರೆ, ಇತರೇ ರೋಗಲಕ್ಷಣಗಳು ಕಂಡುಬಂದಿಲ್ಲ ಎಂದು ತಿಳಿದುಬಂದಿದೆ.

    2022ರ ಜುಲೈ ತಿಂಗಳಲ್ಲಿ ಕೇರಳದಲ್ಲಿ 3 ಮಂಕಿಪಾಕ್ಸ್‌ ಪ್ರಕರಣ ಪತ್ತೆಯಾಗಿತ್ತು. UAE (ಯುನೈಟೆಡ್‌ ಅರಬ್‌ ಎಮಿರೇಟ್ಸ್‌)ಯಿಂದ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡ ನಂತರ ಉಲ್ಬಣಗೊಂಡಿತ್ತು. ಇದನ್ನೂ ಓದಿ: ಮುಡಾ ಕೇಸ್‌ನ್ನು ಬಿತ್ತರಿಸದಿರಲಿ ಅಂತಾ ದರ್ಶನ್ ಕೇಸ್ ಫೋಟೋ ವೈರಲ್ ಮಾಡ್ತಾ ಇದ್ದೀರಾ? – ಛಲವಾದಿ ಆಕ್ಷೇಪ

    ರಾಜ್ಯಗಳಿಗೆ ಸೂಚನೆ:
    ಮೊದಲ ಪ್ರಕರಣದ ವರದಿಯಾದ ಬೆನ್ನಲ್ಲೇ ಎಲ್ಲಾ ರಾಜ್ಯಗಳಿಗೆ ಪತ್ರ ಬರೆದಿರುವ ಕೆಂದ್ರ ಆರೋಗ್ಯ ಸಚಿವಾಲಯ, ಮಂಕಿಪಾಕ್ಸ್‌ ಬಗ್ಗೆ ಜನಸಾಮಾನ್ಯರಿಗಿರುವ ಅನಗತ್ಯ ಭೀತಿಯನ್ನು ನಿವಾರಿಸುವಂತೆ ಸೂಚನೆ ನೀಡಿದೆ. ಭಾರತದಲ್ಲಿ ಹೊಸದಾಗಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. ಸಚಿವಾಲಯವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಎಲ್ಲಾ ಆಸ್ಪತ್ರೆಗಳಲ್ಲಿನ ಐಸೋಲೇಷನ್‌ ಸೌಲಭ್ಯ, ತರಬೇತಿ ಪಡೆದ ವೈದ್ಯರು ಇರುವಂತೆ ಮತ್ತು ಚಿಕಿತ್ಸೆಗೆ ಅಗತ್ಯವಿರುವ ಉಪಕರಣಗಳು ಇರುವಂತೆ ನೋಡಿಕೊಳ್ಳಬೇಕು. ಶಂಕಿತರು ಮತ್ತು ಸೋಂಕು ದೃಢಪಟ್ಟವರ ಸಂಪರ್ಕಕ್ಕೆ ಬಂದ ಇತರರನ್ನು ಪತ್ತೆ ಮಾಡುವ ಕೆಲಸವನ್ನು ಮಾಡಬೇಕು ಎಂದು ರಾಜ್ಯಗಳಿಗೆ ಸಚಿವಾಲಯ ಸೂಚನೆ ನೀಡಿದೆ.

    ಕರ್ನಾಟಕದಲ್ಲೂ ಹೈ ಅಲರ್ಟ್‌:
    ವಿದೇಶಗಳಲ್ಲಿ ಮಂಕಿ ಪಾಕ್ಸ್‌ ಆತಂಕ ಹೆಚ್ಚಾಗುತ್ತಿದ್ದಂತೆ ರಾಜ್ಯ ಸರ್ಕಾರ ಈಗಾಗಲೇ ನಿಗಾ ವಹಿಸಿದೆ. ಎರಡುವಾರಗಳ ಹಿಂದೆಯೇ ವೈದ್ಯಕೀಯ ಸಚಿವ ಶರಣ ಪ್ರಕಾಶ್ ಪಾಟೀಲ್, ಮಂಕಿಪಾಕ್ಸ್ ಕಾಯಿಲೆಗೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 50 ಬೆಡ್ ಹಾಸಿಗೆ ಮೀಸಲು ಇಡಲಾಗಿದೆ ಎಂದು ತಿಳಿಸಿದ್ದರು. ಅಲ್ಲದೇ ರಾಜ್ಯದ ಆಸ್ಪತ್ರೆಗಳಲ್ಲಿ ತೀವ್ರ ನಿಗಾ ಘಟಕ (ICU) ಬೆಡ್ ಸಿದ್ಧತೆಗೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದರು. ಇದನ್ನೂ ಓದಿ: ‌’ವೆಟ್ಟೈಯಾನ್’ ಚಿತ್ರದ ಸಾಂಗ್ ರಿಲೀಸ್- ಮಂಜು ವಾರಿಯರ್ ಜೊತೆ ತಲೈವಾ ಸಖತ್ ಸ್ಟೆಪ್ಸ್

    ಮಂಕಿಪಾಕ್ಸ್ ಎಂದರೇನು?
    ಮಂಕಿಪಾಕ್ಸ್ ಎಂಬ ವೈರಸ್‌ನಿಂದ ಹರಡುವ ರೋಗವೇ ಮಂಕಿಪಾಕ್ಸ್. ಈ ವೈರಸ್ ಸಿಡುಬಿಗೆ ಕಾರಣವಾಗುವ ವೈರಾಣುವಿನ ವರ್ಗಕ್ಕೆ ಸೇರಿದ್ದಾಗಿದೆ. ಕ್ಲಾಡ್ ಐ ಮತ್ತು ಕ್ಲಾಡ್ ಐಐ ಎಂಬ ಎರಡು ವಿಧದ ಮಂಕಿಪಾಕ್ಸ್ ಸೋಂಕುಗಳಿವೆ. ಕ್ಲಾಡ್ ಐ ಮಧ್ಯ ಆಫ್ರಿಕಾದಲ್ಲಿ ಕಂಡುಬಂತು. ಕ್ಲಾಡ್ ಐಐ ಪಶ್ಚಿಮ ಆಫ್ರಿಕಾದಲ್ಲಿ ಪತ್ತೆಯಾಗಿದೆ. ಐಬಿ ಎಂದು ಕರೆಯಲ್ಪಡುವ ಕ್ಲಾಡ್ ಐನ ಹೊಸ ರೂಪಾಂತರ ಬಹುಬೇಗ ಹರಡುತ್ತದೆ.

    ಮೊದಲು ಪತ್ತೆಯಾಗಿದ್ದೆಲ್ಲಿ?
    ಆಫ್ರಿಕಾ ಖಂಡದ ದೇಶಗಳು. (1958ರಲ್ಲಿ ಮಂಕಿಪಾಕ್ಸ್ ಮೊದಲ ಬಾರಿಗೆ ಪತ್ತೆಯಾಯಿತು. ಈ ವೈರಾಣುವಿನ ಮೂಲ ಯಾವುದು ಎಂದು ಈವರೆಗೆ ಪತ್ತೆಯಾಗಿಲ್ಲ). ಇದನ್ನೂ ಓದಿ: ಹರಿಯಾಣದಲ್ಲಿ ಆಪ್‌-ಕಾಂಗ್ರೆಸ್‌ ಮೈತ್ರಿಗೆ ಬ್ರೇಕ್‌? – 20 ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

    ಸೋಂಕಿನ ಲಕ್ಷಣಗಳೇನು? 
    ಸೋಂಕು ತಗುಲಿದ ನಂತರ 6ರಿಂದ 13 ದಿನಗಳಲ್ಲಿ ರೋಗ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ 5ರಿಂದ 21 ದಿನಗಳ ಅವಧಿಯಲ್ಲೂ ಕಾಣಿಸಿಕೊಳ್ಳಬಹುದು.
    * ಜ್ವರ
    * ತೀವ್ರವಾದ ತಲೆನೋವು
    * ದುಗ್ಧರಸ ಗ್ರಂಥಿಗಳಲ್ಲಿ ಊತ
    * ಬೆನ್ನು ನೋವು
    * ಸ್ನಾಯು ನೋವು
    * ತೀವ್ರತರ ನಿತ್ರಾಣ
    * ಮುಖ, ಕೈ, ಕಾಲುಗಳು, ಹಸ್ತ, ಪಾದಗಳಲ್ಲಿ ದುದ್ದುಗಳು
    * 95% ಪ್ರಕರಣಗಳಲ್ಲಿ ಮುಖದಲ್ಲಿಯೇ ಹೆಚ್ಚು ದುದ್ದುಗಳು ಕಾಣಿಸಿಕೊಳ್ಳುತ್ತವೆ

    ಹರಡುವುದು ಹೇಗೆ?
    ಸೋಂಕು ಪೀಡಿತ ಪ್ರಾಣಿಯಿಂದ ಮನುಷ್ಯರಿಗೆ, ವ್ಯಕ್ತಿಯಿಂದ ವ್ಯಕ್ತಿಗೆ ಮಂಕಿಪಾಕ್ಸ್ ವೈರಸ್ ಹರಡುತ್ತದೆ.
    * ಸೋಂಕು ತಗುಲಿದ ಪ್ರಾಣಿಗಳ ಜೊತೆ ನೇರ ಸಂಪರ್ಕ ಹೊಂದುವ ಮನುಷ್ಯರಿಗೆ ರೋಗ ಹರಡುತ್ತದೆ.
    * ರೋಗಕಾರಕ ಪ್ರಾಣಿಗಳ ರಕ್ತ, ಚರ್ಮ, ಗಾಯದಿಂದ.
    * ರೋಗ ತಗುಲಿರುವ ಪ್ರಾಣಿಗಳ ಮಾಂಸ ಸೇವನೆ.
    * ಸೋಂಕಿತ ವ್ಯಕ್ತಿಯ ಉಸಿರಾಟದಿಂದ ಹೊರಬೀಳುವ ಕಣಗಳಿಂದ.
    * ಸೋಂಕಿತನ ಚರ್ಮದ ಗಾಯದಲ್ಲಿನ ಕೀವಿನಿಂದ.
    * ಹೊಕ್ಕುಳಬಳ್ಳಿಯ ಮೂಲಕ ತಾಯಿಯಿಂದ ಭ್ರೂಣಕ್ಕೆ ಸೋಂಕು ಪ್ರಸರಣ.
    * ಪ್ರಸವದ ವೇಳೆ ಅಥವಾ ಪ್ರಸವಾನಂತರ ನಿಕಟ ಸಂಪರ್ಕದಿಂದ.

    ತಡೆ ಹೇಗೆ?
    * ಚರ್ಮದಲ್ಲಿ ದುದ್ದು ಕಾಣಿಸಿಕೊಂಡವರಿಂದ ದೂರ ಇರುವುದು, ದುದ್ದು ಮುಟ್ಟದಿರುವುದು.
    * ಸೋಂಕಿತರನ್ನು ಆಲಂಗಿಸಿಕೊಳ್ಳಬೇಡಿ, ಲೈಂಗಿಕ ಸಂಪರ್ಕ ಮಾಡಬೇಡಿ.
    * ಸೋಂಕಿತರೊಂದಿಗೆ ಆಹಾರ ಸೇವನೆ, ಬಟ್ಟಲು, ಲೋಟ ಇತ್ಯಾದಿ ವಸ್ತುಗಳನ್ನು ಹಂಚಿಕೊಳ್ಳದಿರುವುದು.
    * ಸೋಂಕಿತರು ಬಳಿಸಿದ ಬಟ್ಟೆ, ಟವಲ್, ಹೊದಿಕೆ ಮುಟ್ಟದಿರುವುದು.
    * ಸೋಂಕಿತ ಪ್ರಾಣಿಗಳನ್ನು ಮುಟ್ಟದಿರುವುದು.
    * ಸೋಂಕಿತರಿಂದ ಪ್ರತ್ಯೇಕವಾಗಿ ಇರಬೇಕು.

  • ಕೊರೊನಾ ಐಸೋಲೇಷನ್‍ಗಾಗಿ 11 ದಿನ ಮರವೇರಿ ಕುಳಿತ ವಿದ್ಯಾರ್ಥಿ

    ಕೊರೊನಾ ಐಸೋಲೇಷನ್‍ಗಾಗಿ 11 ದಿನ ಮರವೇರಿ ಕುಳಿತ ವಿದ್ಯಾರ್ಥಿ

    ಹೈದರಾಬಾದ್: ವಿದ್ಯಾರ್ಥಿಯೊಬ್ಬನಿಗೆ ಕೊರೊನಾ ಸೋಂಕು ಕಾಣಿಸಿಕೊಂಡು ಮನೆಯಲ್ಲಿ ಐಸೋಲೇಷನ್‍ನಲ್ಲಿರುವಂತೆ ಸೂಚನೆ ನೀಡಿದ ವೇಳೆ ಮನೆಯಲ್ಲಿ ಐಸೋಲೇಷನ್ ಆಗುವಷ್ಟು ಸೌಕರ್ಯ ಇಲ್ಲದೆ ಹನ್ನೊಂದು ದಿನಗಳ ಕಾಲ ಮರದ ಮೇಲೆ ದಿನಕಳೆದ ಪ್ರಸಂಗವೊಂದು ವರದಿಯಾಗಿದೆ.

    ತೆಲಂಗಾಣದ ನಲಗೊಂಡ ಜಿಲ್ಲೆಯ ಕೊಥಾನಂದಿಕೊಂಡ ಗ್ರಾಮದಲ್ಲಿ ವಾಸವಿರುವ ಶಿವ ಎಂಬ ವಿದ್ಯಾರ್ಥಿಯೊರ್ವನಿಗೆ ಕೆಲದಿನಗಳ ಹಿಂದೆ ಕೊರೊನಾ ದೃಢಪಟ್ಟಿತ್ತು. ಬಳಿಕ ಅಲ್ಲಿನ ಆರೋಗ್ಯ ಇಲಾಖೆ ಮತ್ತು ಸ್ಥಳೀಯರು ಐಸೋಲೆಷನ್‍ನಲ್ಲಿ ಇರುವಂತೆ ಸೂಚನೆ ನೀಡಿದರು ಆದರೆ ಶಿವ ಅವರ ಮನೆಯಲ್ಲಿ ಒಂದೇ ಕೋಣೆ ಇದ್ದುದರಿಂದಾಗಿ ಆತ ಮರದಲ್ಲಿ 11 ದಿನ ವಾಸವಾಗುವ ಮೂಲಕ ಐಸೋಲೇಷನ್‍ಗೆ ಒಳಗಾಗಿದ್ದಾನೆ.

    ಈ ಕುರಿತು ಪ್ರತಿಕ್ರಿಯಿಸಿದ ಶಿವ, ನಮ್ಮಲ್ಲಿ ಯಾವುದೇ ಐಸೋಲೇಷನ್ ಸೆಂಟರ್‍ ಗಳಿಲ್ಲ. ನಾವು ಕುಟುಂಬದೊಂದಿಗೆ ವಾಸವಿರುವ ಕಾರಣ ಏನು ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ. ಹಾಗಾಗಿ ನಾನು ಮರದ ಮೇಲೆ ವಾಸವಾಗಲು ನಿರ್ಧರಿಸಿದೆ.

    ಇದಲ್ಲದೆ ಶಿವ ಅವರ ಗ್ರಾಮದಿಂದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಬೇಕಾದರೆ 5 ಕಿ.ಮಿ ಕ್ರಮಿಸಬೇಕು. ತುರ್ತು ಚಿಕಿತ್ಸೆಗಾಗಿ 30 ಕಿ.ಮಿ ಕ್ರಮಿಸಬೇಕಾದಂತಹ ಪರಿಸ್ಥಿತಿಯನ್ನು ಗ್ರಾಮಸ್ಥರು ಹೊರಹಾಕಿದ್ದಾರೆ.

  • ಹೆಲ್ತ್ ವಾರಿಯರ್ಸ್‌ಗೆ ಮನೆಯಲ್ಲೇ ಟ್ರೀಟ್‍ಮೆಂಟ್

    ಹೆಲ್ತ್ ವಾರಿಯರ್ಸ್‌ಗೆ ಮನೆಯಲ್ಲೇ ಟ್ರೀಟ್‍ಮೆಂಟ್

    – ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ರ‍್ಯಾಂಡಮ್ ಟೆಸ್ಟ್

    ಬೆಂಗಳೂರು: ಹೆಲ್ತ್ ವಾರಿಯರ್ಸ್‌ಗೆ ಮಹಾಮಾರಿ ಕೊರೊನಾ ವೈರಸ್ ಬಂದರೆ ಹೋಂ ಐಸೋಲೇಷನ್‍ಗೆ ಗ್ರೀನ್‍ಸಿಗ್ನಲ್ ನೀಡಲಾಗಿದೆ.

    ಹೆಲ್ತ್ ವಾರಿಯರ್ಸ್‌ಗೆ ಕೊರೊನಾ ಬಂದರೆ ಮನೆಯಲ್ಲೇ ಟ್ರೀಟ್‍ಮೆಂಟ್ ಸಿಗಲಿದೆ. ವೈದ್ಯರು, ನರ್ಸ್, ಪ್ಯಾರ ಮೆಡಿಕಲ್ ಸಿಬ್ಬಂದಿಗಷ್ಟೇ ಇದು ಅನ್ವಹಿಸಲಿದೆ. ಕೊರೊನಾ ಪಾಸಿಟಿವ್ ಇದ್ದಾಗ ಯಾವುದೇ ಗುಣಲಕ್ಷಣ ಇಲ್ಲದೇ ಇದ್ದರೆ ಹೋಂ ಐಸೋಲೇಷನ್ ಆಗಬಹುದು.

    ಹೆಲ್ತ್ ವಾರಿಯರ್ಸ್‌ಗೆ ಮನೆಯಲ್ಲೇ ಟ್ರೀಟ್ ಮೆಂಟ್ ತೆಗೆದುಕೊಳ್ಳುವ ವಿಧಾನ ಗೊತ್ತಿರುವುದರಿಂದ ಈ ನಿರ್ಧಾರ ಮಾಡಲಾಗಿದೆ. 7 ದಿನಗಳ ಬಳಿಕ ಹೋಂ ಐಸೋಲೇಷನ್‍ನಲ್ಲಿದ್ದು ನಂತರ ಮತ್ತೆ ಸ್ವ್ಯಾಬ್ ಟೆಸ್ಟ್ ಮಾಡಲಾಗುತ್ತೆ.

    ಇನ್ನೂ ಬಿಎಂಟಿಸಿ ಬಳಿಕ ಇದೀಗ ಕೆಎಸ್‌ಆರ್‌ಟಿಸಿ ಸಿಬ್ಬಂದಿ ರ‍್ಯಾಂಡಮ್ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ. ಕೆಎಸ್‌ಆರ್‌ಟಿಸಿ ಎಲ್ಲಾ ಸಿಬ್ಬಂದಿಗೆ ಗಂಟಲು ದ್ರವ ಪರೀಕ್ಷೆಗೆ ನಿರ್ಧಾರ ಮಾಡಲಾಗಿದೆ. ಆಯಾ ಆಯಾ ಜಿಲ್ಲಾ ಘಟಕಗಳಲ್ಲಿ ಗಂಟಲು ದ್ರವ ಪರೀಕ್ಷೆಗೆ ಸೂಚನೆ ನೀಡಲಾಗಿದೆ.

  • ಕೊರೊನಾದಿಂದ ಗುಣಮುಖರಾದ ಹೊಸಪೇಟೆ ಮೂಲದ ಇಬ್ಬರು ಐಸೋಲೇಷನ್‍ನಿಂದ ಡಿಸ್ಚಾರ್ಜ್

    ಕೊರೊನಾದಿಂದ ಗುಣಮುಖರಾದ ಹೊಸಪೇಟೆ ಮೂಲದ ಇಬ್ಬರು ಐಸೋಲೇಷನ್‍ನಿಂದ ಡಿಸ್ಚಾರ್ಜ್

    ಬಳ್ಳಾರಿ: ಕೊರೊನಾ ವೈರಸ್ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಹೊಸಪೇಟೆ ಮೂಲದ ಇಬ್ಬರನ್ನು ಐಸೋಲೇಷನ್‍ನಿಂದ ಬಿಡುಗಡೆ ಮಾಡಲಾಯಿತು.

    ಪಿ-333 ಹಾಗೂ ಪಿ-337 ಸಂಖ್ಯೆಯ ಈ ಇಬ್ಬರಲ್ಲಿ ಕೊರೊನಾ ವೈರಸ್ ಪಾಸಿಟಿವ್ ದಾಖಲಾಗಿತ್ತು. ಸತತ 14 ದಿನಗಳ ಕಾಲ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಈ ಇಬ್ಬರನ್ನ ಜಿಲ್ಲಾ ಸರ್ಕಾರಿ ಕೋವಿಡ್-19 ಅಸ್ಪತ್ರೆಯಿಂದ ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಡಲಾಯಿತು.

    ಈವರೆಗೂ ಒಟ್ಟಾರೆಯಾಗಿ ಏಳು ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಉಳಿದಂತೆ ಆರು ಮಂದಿ ಮಾತ್ರ ಐಸೋಲೇಷನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 13 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಈಗ ಒಟ್ಟು 7 ಜನ ಬಿಡುಗಡೆಯಾಗಿದ್ದು ಇನ್ನು ಉಳಿದ 6 ಜನರು ಚಿಕಿತ್ಸೆ ಮುಂದುವರಿದಿದೆ. 6 ಜನರು ಚಿಕಿತ್ಸೆಗೆ ಸ್ಪಂಧಿಸುತ್ತಿದ್ದು, ಸದ್ಯದಲ್ಲೇ ಅವರನ್ನು ಬಿಡುಗಡೆ ಮಾಡವ ವಿಶ್ವಾಸದಲ್ಲಿ ಜಿಲ್ಲಾಡಳಿತವಿದೆ. ಹೀಗಾಗಿ ಕರೋನಾ ಮುಕ್ತ ಜಿಲ್ಲೆಯಾಗಿ ಬಳ್ಳಾರಿ ಹೊರಹೊಮ್ಮುವ ಸಾದ್ಯತೆ ಹೆಚ್ಚಿದೆ.

     

  • ಆನೆಗೂ ಕೊರೊನಾ ವೈರಸ್ ಭೀತಿ – ಮಠದಲ್ಲೇ ಐಸೋಲೇಷನ್

    ಆನೆಗೂ ಕೊರೊನಾ ವೈರಸ್ ಭೀತಿ – ಮಠದಲ್ಲೇ ಐಸೋಲೇಷನ್

    ಗದಗ: ದೈತ್ಯ ಆನೆಗೆ ಇರುವೆಯೊಂದು ಕಾಟ ಕೊಡುವ ಕಥೆ ಕೇಳಿದ್ದೆವು. ಆದರೆ ಈಗ ಕಣ್ಣಿಗೆ ಕಾಣದ ಕೊರೊನಾ ವೈರಸ್ ಆನೆಗಳಲ್ಲೂ ಭೀತಿ ಹುಟ್ಟಿಸಿದ್ದು, ಆನೆಗಳಿಗೆ ಕೊರೊನಾ ಹರಡಬಾರದು ಎಂದು ಜಿಲ್ಲೆಯ ಶಿರಹಟ್ಟಿಯ ಫಕೀರೇಶ್ವರ ಮಠ ಹಾಗೂ ಲಕ್ಷ್ಮೇಶ್ವರ ಸಮೀಪದ ಮುಕ್ತಿ ಮಂದಿರದ ಆನೆಗಳನ್ನು ಮಠದಲ್ಲೇ ಐಸೋಲೇಷನ್‍ನಲ್ಲಿ ಇಡಲಾಗಿದೆ.

    ಪ್ರತಿದಿನ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪಶುವೈದ್ಯರು ಬಂದು ಎರಡೂ ಆನೆಗಳ ಆರೋಗ್ಯವನ್ನು ಪರೀಕ್ಷೆ ಮಾಡುತ್ತಿದ್ದಾರೆ. ಈ ಮೊದಲು ಎರಡೂ ಆನೆಗಳನ್ನು ಪ್ರತಿದಿನ ನಾಲ್ಕಾರು ಕಿಲೋಮೀಟರ್ ವಾಕಿಂಗ್ ಹಾಗೂ ಆಹಾರಕ್ಕಾಗಿ ಕರೆದುಕೊಂಡು ಹೋಗಲಾಗುತಿತ್ತು. ಆದರೆ ಸರ್ಕಾರದ ಲಾಕ್‍ಡೌನ್ ಆದೇಶದ ನಂತರ ಎರಡು ಆನೆಗಳಿಗೆ ಮಠದಲ್ಲೇ ಆರೈಕೆ ಮಾಡಲಾಗುತ್ತಿದೆ. ಅರಣ್ಯ ಇಲಾಖೆಯವರು ಎರಡು ಆನೆಗಳ ಆರೋಗ್ಯದ ಬಗ್ಗೆ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

    ಪ್ರತಿದಿನ ಮಠಗಳಿಗೆ ಭೇಟಿ ನೀಡಿ ಎರಡು ಆನೆಗಳ ಆರೋಗ್ಯದ ಬಗ್ಗೆ ಪಶುವೈದ್ಯರು ನಿಗಾ ವಹಿಸಿದ್ದಾರೆ. ಅಷ್ಟೇ ಅಲ್ಲದೇ ಆನೆಗಳನ್ನು ನೋಡಿಕೊಳ್ಳುತ್ತಿರುವ ಮಾವುತರಿಗೆ ಮಾಸ್ಕ್ ಧರಿಸಿಯೇ ಆನೆಗಳ ಆರೈಕೆ ಮಾಡಬೇಕು ಹಾಗೂ ಹೊರಗಿನ ಯಾವುದೇ ವ್ಯಕ್ತಿಗಳನ್ನು ಭೇಟಿ ಮಾಡದಂತೆ ಸೂಚನೆ ನೀಡಿದ್ದಾರೆ. ಸದ್ಯ ಎರಡೂ ಆನೆಗಳ ಆರೋಗ್ಯವು ಚೆನ್ನಾಗಿದೆ.

    ಈ ಹಿಂದೆ ನ್ಯೂಯಾರ್ಕ್‍ನಲ್ಲಿನ ಬ್ರಾನ್ಸ್ ಮೃಗಾಲಯದಲ್ಲಿನ ಹುಲಿಗೆ ಕೊರೊನಾ ವೈರಸ್ ತಗುಲಿರುವುದು ವರದಿಯಾಗಿತ್ತು. ಮನುಷ್ಯನಿಂದ ವನ್ಯ ಜೀವಿಗೆ ಕೊರೊನಾ ವೈರಸ್ ತಗುಲಿರುವುದು ಇದೇ ಮೊದಲ ಪ್ರಕರಣವಾಗಿದ್ದು, ಬಹುಶಃ ಝೂನಲ್ಲಿ ಕೆಲಸ ಮಾಡುತ್ತಿದ್ದ ಸೋಂಕಿತ ಸಿಬ್ಬಂದಿಯಿಂದ ಹುಲಿಗೆ ಸೋಂಕು ಹರಡಿದೆ ಎಂದು ಶಂಕಿಸಲಾಗಿತ್ತು. ಅಷ್ಟೇ ಅಲ್ಲದೆ ಕೊರೊನಾ ವೈರಸ್ ಬೆಕ್ಕುಗಳಿಗೂ ಹರಡಿರುವುದು ವರದಿಯಾಗಿತ್ತು. ಬೆಕ್ಕಿನ ಮಾಲೀಕನಿಗೆ ಕೊರೊನಾ ಬಂದಿದ್ದು ಆತ ಹೋಮ್ ಕ್ವಾರಂಟೈನ್‍ನಲ್ಲಿದ್ದ. ಇದರಿಂದಾಗಿ ವೈರಸ್ ಬೆಕ್ಕಿಗೂ ಬಂದಿದೆ. ಬೆಕ್ಕಿನಲ್ಲಿ ಕೊರೊನಾ ಸೋಂಕು ಬಂದಿರುವುದನ್ನು ಬೆಲ್ಜಿಯಂನ ಆರೋಗ್ಯ ಅಧಿಕಾರಿಗಳು ಖಚಿತ ಪಡಿಸಿದ್ದರು.

    ಹಾಗೆಯೇ ಹಾಂಕಾಂಗ್‍ನಲ್ಲಿ ಕೊರೊನಾ ಪೀಡಿತರ ಸಂಪರ್ಕಕ್ಕೆ ಬಂದಿದ್ದ 17 ನಾಯಿ ಮತ್ತು 8 ಬೆಕ್ಕುಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ 2 ನಾಯಿಗಳಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ವೈರಸ್ ಮನುಷ್ಯನಿಂದ ಪ್ರಾಣಿಗಳಿಗೆ ಹೋಗಬಹುದು. ಆದರೆ ಪ್ರಾಣಿಗಳಿಂದ ಮನುಷ್ಯನಿಗೆ ಬರಬಹುದು ಎನ್ನುವುದನ್ನು ನಾನು ಒಪ್ಪುವುದಿಲ್ಲ ಎಂದು ಬೆಲ್ಜಿಯಂ ಆರೋಗ್ಯ ಅಧಿಕಾರಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದರು.

  • ರಾಜೀವ್ ಗಾಂಧಿ ಐಸೋಲೇಷನ್ ವಾರ್ಡ್‍ನಲ್ಲಿ ವೈದ್ಯರಿಗೆ ಆತಂಕ

    ರಾಜೀವ್ ಗಾಂಧಿ ಐಸೋಲೇಷನ್ ವಾರ್ಡ್‍ನಲ್ಲಿ ವೈದ್ಯರಿಗೆ ಆತಂಕ

    ಬೆಂಗಳೂರು: ಅಮೆರಿಕದಿಂದ ಬಂದ ಟೆಕ್ಕಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಐಸೋಲೇಷನ್ ವಾರ್ಡ್‍ನಲ್ಲಿ ಕೆಲಸ ಮಾಡುತ್ತಿರುವ ವೈದ್ಯರ ತಂಡ ಆತಂಕದಲ್ಲಿದೆ.

    ಇಷ್ಟು ದಿನ ಟ್ರಿಪಲ್ ಲೇಯರ್ ಮಾಸ್ಕ್ ಹಾಕಿಕೊಂಡು ಪ್ರಾಥಮಿಕ ಪರೀಕ್ಷೆ ಮಾಡುತ್ತಿದ್ದ ವೈದ್ಯರ ತಂಡ ಎನ್ 95 ಮಾಸ್ಕ್ ಬಳಸುತ್ತಿದ್ದಾರೆ. ಜೊತೆಗೆ ಐಸೋಲೇಷನ್ ವಾರ್ಡಿನಲ್ಲಿ ಕೆಲಸ ಮಾಡುವ ಎಲ್ಲರಿಗೂ ಎನ್ 95 ಮಾಸ್ಕ್ ಬಳಸುವಂತೆ ತಿಳಿಸಿದ್ದಾರೆ.

    ಪ್ರತಿ ಒಂದು ಗಂಟೆಗೆ ಐಸೋಲೇಷನ್ ವಾರ್ಡ್‍ಗೆ ಕ್ರಿಮಿನಾಶಕ ಬಳಸಿ ಸ್ವಚ್ಚತೆ ಮಾಡುವಂತೆ ಸೂಚಿಸಿದ್ದಾರೆ. ಐಸೋಲೇಷನ್ ವಾರ್ಡ್‍ನಲ್ಲಿ 5 ಜನ ಸೋಂಕು ಶಂಕಿತರು ಇದ್ದು ಇದರಲ್ಲಿ ಈಗಾಗಲೇ ಒಬ್ಬರಿಗೆ ಪಾಸಿಟಿವ್ ಇರುವುದು ದೃಢವಾಗಿತ್ತು. ಟೆಕ್ಕಿಯ ಸ್ನೇಹಿತನಿಗೂ ಪಾಸಿಟಿವ್ ಇರುವುದು ಪಕ್ಕಾ ಆಗಿದ್ದು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಈ ಇಬ್ಬರು ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಉಳಿದ ಮೂವರನ್ನು ಬೇರೆ ಬೇರೆ ವಾರ್ಡ್‍ಗಳಲ್ಲಿ ದಾಖಲು ಮಾಡಿಕೊಂಡಿದ್ದಾರೆ. ಕೊರೊನಾ ಈಗ ವೈದ್ಯರಿಗೂ ಆತಂಕ ಉಂಟು ಮಾಡಿದೆ.

    ಮಹಾಮಾರಿ ಕೊರೊನಾ ವೈರಸ್ ದಿನೇ ದಿನೇ ಜನರಲ್ಲಿ ಭಯವನ್ನ ಹೆಚ್ಚು ಮಾಡ್ತಿದೆ. ಈಗಾಗಲೇ ಕರ್ನಾಟಕದಲ್ಲಿ 4 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಟ್ವೀಟ್ ಮಾಡಿ ಸ್ಪಷ್ಟಪಡಿಸಿದರು. ಹಾಗೆಯೇ ಬೆಂಗಳೂರಿನಲ್ಲಿ ಮೂರು ಕೊರೊನಾ ಪಾಸಿಟಿವ್ ಕೇಸ್‍ಗಳು ವರದಿಯಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ಐಸಿಎಂಆರ್) ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.