Tag: ಒಕ್ಕಲಿಗ ಸಮುದಾಯ

  • ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಕೆಶಿ

    ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಕೆಶಿ

    ಬೆಂಗಳೂರು: ನಾನು ಸರ್ಕಾರದಲ್ಲಿದ್ದೇನೆ. ಸಮಾಜದವರ ಅಭಿಪ್ರಾಯಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಅದು ಅವರ ಅಭಿಪ್ರಾಯ. ಆನಂತರ ಇದರ ಬಗ್ಗೆ ಮಾತನಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

    ದೆಹಲಿಗೆ (Delhi) ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ ನಿನ್ನೆ ನಡೆದ ಒಕ್ಕಲಿಗ ಸಮುದಾಯದ ಸಭೆಯ (Vokkaliga Community Meeting) ಬಗ್ಗೆ ಪ್ರತಿಕ್ರಿಯಿಸಿದ ಅವರು, ಆ ವಿಚಾರವಾಗಿ ಈಗ ಪ್ರತಿಕ್ರಿಯಿಸುವುದಿಲ್ಲ ಎಂದರು. ಇದನ್ನೂ ಓದಿ: ಒಕ್ಕಲಿಗ ಸಭೆಯಲ್ಲಿ ಹೆಚ್‌ಡಿಕೆ-ಡಿಕೆಶಿ ಮುಖಾಮುಖಿ

    ದೆಹಲಿ ಭೇಟಿಯ ಕುರಿತು ಕೇಳಿದಾಗ, ಕಾವೇರಿ ನೀರಿನ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ದಿನಾಂಕ ನಿಗದಿಯಾಗಿದ್ದು, ಈ ಬಗ್ಗೆ ವಕೀಲರುಗಳ ಬಳಿ ಚರ್ಚಿಸಲು ಹಾಗೂ ಒಂದಷ್ಟು ಕೆಲಸಗಳ ಕಾರಣಕ್ಕೆ ತೆರಳುತ್ತಿರುವೆ ಎಂದು ತಿಳಿಸಿದರು.

  • 60 ದಿನ ಜಾತಿಗಣತಿ ಮುಂದೂಡಿ, 15 ದಿನ ಕಾಲಮಿತಿ ಹೆಚ್ಚಿಸಿ – ಒಕ್ಕಲಿಗ ಸಭೆಯಲ್ಲಿ ನಿರ್ಣಯ

    60 ದಿನ ಜಾತಿಗಣತಿ ಮುಂದೂಡಿ, 15 ದಿನ ಕಾಲಮಿತಿ ಹೆಚ್ಚಿಸಿ – ಒಕ್ಕಲಿಗ ಸಭೆಯಲ್ಲಿ ನಿರ್ಣಯ

    ಬೆಂಗಳೂರು: 60 ದಿನ ಜಾತಿಗಣತಿ ಮುಂದೂಡಿ, 15 ದಿನ ಕಾಲಮಿತಿಯನ್ನು ಹೆಚ್ಚು ಮಾಡಿ ಎಂದು ಸರ್ಕಾರಕ್ಕೆ ಒತ್ತಾಯಿಸಿ ಒಕ್ಕಲಿಗ ಸಮುದಾಯದ ಸಭೆ ನಿರ್ಣಯ ಮಾಡಿದೆ.

    ಆದಿಚುಂಚನಗಿರಿ ಶ್ರೀಗಳಾದ ನಿರ್ಮಲಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಒಕ್ಕಲಿಗ ಸಮುದಾಯದ ಸಭೆಯಲ್ಲಿ ನಂಜಾವಧೂತ ಸ್ವಾಮೀಜಿ, ನಿಶ್ಚಲಾನಂದ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು, ಡಿಕೆಶಿ, ಹೆಚ್‌ಡಿಕೆ, ಡಿವಿಎಸ್, ಶೋಭಾ ಕರಂದ್ಲಾಜೆ, ಅಶೋಕ್ ಸೇರಿದಂತೆ ಸಮುದಾಯದ ನಾಯಕರು, ರಾಜ್ಯ ಒಕ್ಕಲಿಗ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಒಗ್ಗಟ್ಟು ಪ್ರದರ್ಶಿಸಿದರು.ಇದನ್ನೂ ಓದಿ: ಒಕ್ಕಲಿಗ ಸಭೆಯಲ್ಲಿ ಹೆಚ್‌ಡಿಕೆ-ಡಿಕೆಶಿ ಮುಖಾಮುಖಿ

    ಸಭೆಯಲ್ಲಿ ಪ್ರಮುಖವಾಗಿ ನಾಲ್ಕು ನಿರ್ಣಯಗಳನ್ನ ಕೈಗೊಳ್ಳಲಾಗಿದೆ. ಸಮುದಾಯದ ಜಾತಿಗಣತಿ ಸ್ವಾಗತಿಸುತ್ತೇವೆ ಆದರೆ ತರಾತುರಿಯಲ್ಲಿ ಜಾತಿಗಣತಿ ಬೇಡ, ಮುಂದೂಡಬೇಕು. 15 ದಿನ ಜಾತಿಗಣತಿ ಮಾಡಲು ಸಾಧ್ಯವಿಲ್ಲ, ತೆಲಂಗಾಣ ಮಾದರಿಯಲ್ಲಿ ಜಾಸ್ತಿ ದಿನ ಮಾಡಬೇಕು. ಜಾತಿಗಳಿಗೆ ಕ್ರಿಶ್ಚಿಯನ್ ಸೇರಿಸಿರುವುದನ್ನ ಕೈ ಬಿಡಬೇಕು. ಸಮುದಾಯದ ಎಲ್ಲರೂ ಒಕ್ಕಲಿಗ ಎಂದೇ ಜಾತಿ ಬರೆಸಬೇಕು ಎಂದು ಒಕ್ಕಲಿಗ ಸಮುದಾಯದ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದಾರೆ.

    ಸಭೆ ಬಳಿಕ ಮಾತನಾಡಿದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ, ಜಾತಿಗಣತಿ ಮುಂದೂಡಿ, ತರಾತುರಿ ಬೇಡ. ಈಗಿರುವ ಕಾಲಮಿತಿ ಸಾಕಾಗಲ್ಲ ಎಂದು ಸಭೆಯಲ್ಲಿ ನಿರ್ಣಯಿಸಲಾಗಿದೆ. ಒಕ್ಕಲಿಗ ಅಂತಾ ಮೊದಲು ಬರೆಸಬೇಕು. ಅಗತ್ಯ ಇದ್ದರೆ ಉಪಜಾತಿಗಳನ್ನ ಬರೆಸಬೇಕು ಎಂದು ತೀರ್ಮಾನ ಮಾಡಿದ್ದೇವೆ. ಒಕ್ಕಲಿಗರ ಸಂಘ, ಸ್ವಾಮೀಜಿಗಳಿಂದ ಜಾಗೃತಿ ಮೂಡಿಸುತ್ತೇವೆ. ಯಾವುದೇ ರೀತಿ ನಿರ್ಲಕ್ಷ್ಯ ಮಾಡದೇ ಜಾಗೃತಿಗೆ ಇಳಿಯುತ್ತೇವೆ. ಒಕ್ಕಲಿಗರ ಸಂಘದ ನೌಕರರು ಒಂದೆಡೆ ಸೇರಿದಂತೆ ಎಲ್ಲರೂ ಹಳ್ಳಿ ಹಳ್ಳಿಗಳಲ್ಲಿ ಜಾಗೃತಿ ಮಾಡುತ್ತೇವೆ ಎಂದು ಹೇಳಿದರು.ಇದನ್ನೂ ಓದಿ: ಜಾತಿಗಣತಿ ವೇಳೆ ಉಪಜಾತಿಗಳ ಮೊದಲು ಒಕ್ಕಲಿಗ ಎಂದು ಬರೆಸಬೇಕು: ಸಭೆಯಲ್ಲಿ ಒಕ್ಕೊರಲ ಕೂಗು

  • ಜಾತಿಗಣತಿ ವೇಳೆ ಉಪಜಾತಿಗಳ ಮೊದಲು ಒಕ್ಕಲಿಗ ಎಂದು ಬರೆಸಬೇಕು: ಸಭೆಯಲ್ಲಿ ಒಕ್ಕೊರಲ ಕೂಗು

    ಜಾತಿಗಣತಿ ವೇಳೆ ಉಪಜಾತಿಗಳ ಮೊದಲು ಒಕ್ಕಲಿಗ ಎಂದು ಬರೆಸಬೇಕು: ಸಭೆಯಲ್ಲಿ ಒಕ್ಕೊರಲ ಕೂಗು

    ಬೆಂಗಳೂರು: ಜಾತಿಗಣತಿ (Caste Census) ವೇಳೆ ಉಪಜಾತಿಗಳ ಮೊದಲು ಒಕ್ಕಲಿಗ (Vokkaliga) ಎಂದು ಬರೆಸಬೇಕು ಎಂದು ಒಕ್ಕಲಿಗ ಸಮುದಾಯದ ಸಭೆಯಲ್ಲಿ ಒಕ್ಕೊರಲ ಕೂಗು ಕೇಳಿಬಂದಿದೆ.

    ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ನಿರ್ಮಲಾನಂದಸ್ವಾಮಿಗಳ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯದ ಜಾತಿಗಣತಿ ಜಾಗೃತಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ನಂಜಾವಧೂತ ಸ್ವಾಮೀಜಿ, ಹೆಚ್‌ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್, ಡಿವಿ ಸದಾನಂದಗೌಡ, ಆರ್ ಅಶೋಕ್, ಚಲುವರಾಯಸ್ವಾಮಿ, ಅಶ್ವಥ್ ನಾರಾಯಣ್, ನಿಖಿಲ್ ಕುಮಾರಸ್ವಾಮಿ, ಎಂ.ಸಿ.ಸುಧಾಕರ್, ಒಕ್ಕಲಿಗರ ಸಂಘದ ಅಧ್ಯಕ್ಷರು ಹಾಗೂ ವಿವಿಧ ಮಠಾಧೀಶರು ಭಾಗಿಯಾಗಿದ್ದಾರೆ. ಅಲ್ಲದೇ ಒಕ್ಕಲಿಗ ಶಾಸಕರು, ಸಂಸದರು, ಪರಿಷತ್ ಸದಸ್ಯರು, ಮಾಜಿ ಶಾಸಕರು ಪಕ್ಷಾತೀತವಾಗಿ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ; JDS ಮುಖಂಡ ಕಬ್ಜ ಮಾಡಿದ್ದ 75 ಕೋಟಿ ಮೌಲ್ಯದ ಭೂಮಿ ಬಿಡಿಎ ವಶಕ್ಕೆ

    ಸಮೀಕ್ಷೆ ಗೊಂದಲ, ಒಕ್ಕಲಿಗರ ಉಪ ಜಾತಿಯ ಕುರಿತು ಸಭೆಯಲ್ಲಿ ಚರ್ಚೆ ನಡೆಯುತ್ತಿದೆ. ಒಕ್ಕಲಿಗರನ್ನ ಏನೆಂದು ಉಲ್ಲೇಖಿಸಬೇಕು ಎಂದು ಸಮಾಲೋಚನೆ ನಡೆಸಲಾಗುತ್ತಿದೆ. ಸಭೆ ಬಳಿಕ ಶ್ರೀಗಳು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಜಾತಿ ಸಮೀಕ್ಷೆಯಲ್ಲಿ ಏನೆಂದು ನಮೂದಿಸಬೇಕು? ಒಕ್ಕಲಿಗ ಸಮುದಾಯಲ್ಲಿ ಉಪಜಾತಿಗಳಿವೆ. ಜಾತಿ ಕಲಂನಲ್ಲಿ ಏನೆಂದು ನಮೂದು ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಇದನ್ನೂ ಓದಿ: ಬೆಂಗಳೂರಿನ ಹಲವೆಡೆ ಮಂಗಳವಾರ ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ ಕರೆಂಟ್ ಇರಲ್ಲ?

    ಇನ್ನು ಸಭೆಗೂ ಮುನ್ನ ಹೆಚ್‌ಡಿಕೆ ಹಾಗೂ ಡಿಕೆಶಿ ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿ ಮಾಡಿದ್ದಾರೆ. ಸ್ವಾಮೀಜಿಗಳ ಜೊತೆಯಲ್ಲೇ ಇಬ್ಬರೂ ವೇದಿಕೆಗೆ ಆಗಮಿಸಿದರು. ಸ್ವಾಮೀಜಿ ಅಕ್ಕಪಕ್ಕದಲ್ಲಿ ಕುಳಿತರೂ ಡಿಕೆಶಿ ಹಾಗೂ ಹೆಚ್‌ಡಿಕೆ ಒಬ್ಬರನ್ನೊಬ್ಬರು ಮಾತನಾಡಿಸಲಿಲ್ಲ. ಇದನ್ನೂ ಓದಿ: ಕ್ರಿಶ್ಚಿಯನ್ ಕುರುಬ ಅಂತ ನಾವು ಬರೆಸಿಲ್ಲ, ಜನರೇ ಬರೆಸಿದ್ದಾರೆ: ಶಿವರಾಜ ತಂಗಡಗಿ

  • ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ – ಪ್ರೊ. ಭಗವಾನ್ ಮನೆಗೆ ಮುತ್ತಿಗೆಗೆ ಯತ್ನ

    ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ – ಪ್ರೊ. ಭಗವಾನ್ ಮನೆಗೆ ಮುತ್ತಿಗೆಗೆ ಯತ್ನ

    ಮೈಸೂರು: ನಗರದಲ್ಲಿ ಶುಕ್ರವಾರ (ಅ.13) ನಡೆದ ಮಹಿಷ ಉತ್ಸವದ ವೇಳೆ ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್ ಭಗವಾನ್ (KS Bhagawan) ಒಕ್ಕಲಿಗ ಸಮುದಾಯದ (Okkaliga Community) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿಂದು ಪ್ರೊ.ಭಗವಾನ್ ನಿವಾಸಕ್ಕೆ ಮೈಸೂರು ಚಾಮರಾಜ ಕ್ಷೇತ್ರದ ಒಕ್ಕಲಿಗರ ಸಂಘದಿಂದ ಮುತ್ತಿಗೆಗೆ ಯತ್ನಿಸಲಾಯಿತು.

    ಅವಹೇಳನಕಾರಿ ಹೇಳಿಕೆಯಿಂದ ಆಕ್ರೋಶಗೊಂಡಿದ್ದ ಪ್ರತಿಭಟನಾಕಾರರು ಮನೆಗೆ ಮುತ್ತಿಗೆಹಾಕಲು ಯತ್ನಿಸಿದರು. ಬ್ಯಾರಿಕೇಡ್ ಕಿತ್ತು ಭಗವಾನ್ ಮನೆಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು (Mysuru City Police) ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ಹಾಗೂ ತಳ್ಳಾಟ ನೂಕಾಟವೂ ನಡೆದಿದ್ದು, ಕೆಲವರು ಕೈ ಮತ್ತು ಹಣೆಯ ಭಾಗಕ್ಕೆ ಗಾಯವನ್ನೂ ಮಾಡಿಕೊಂಡರು. ಇದನ್ನೂ ಓದಿ: World Cup 2023: ಇಂಡೋ-ಪಾಕ್‌ ಕದನ ಯಾವಾಗಲೂ ರಣಕಣ ಏಕೆ? – ನೆನಪಿದೆಯಾ ಆ ಕರಾಳ ದಿನಗಳು?

    ಶುಕ್ರವಾರ ಮಹಿಷ ಉತ್ಸವ ಕಾರ್ಯಕ್ರಮದಲ್ಲಿ ಪ್ರೊ.ಭಗವಾನ್ ಒಕ್ಕಲಿಗರು ಸಂಸ್ಕೃತಿ ಹೀನರೆಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರಿಂದ ರೊಚ್ಚಿಗೆದ್ದ ಒಕ್ಕಲಿಗ ಸಮುದಾಯದ ಮುಖಂಡರು ಭಗವಾನ್ ಮನೆಗೆ ಮುತ್ತಿಗೆಹಾಕಲು ಯತ್ನಿಸಿದರು.

    ಒಕ್ಕಲಿಗ ಜನಾಂಗಕ್ಕೆ ಸಂಸ್ಕೃತಿ ಕಲಿಸಿ, ಭಗವಾನ್ ತಾವೂ ಒಕ್ಕಲಿಗ ಸಮುದಾಯದವರು ಎಂದು ಹೇಳಿಕೊಳ್ಳುತ್ತಾರೆ. ಮತ್ತೊಂದುಕಡೆ ಸಮುದಾಯವನ್ನೇ ನಿಂದಿಸುತ್ತಾರೆ. ಅವರು ಒಕ್ಕಲಿಗ ಸಮುದಾಯದವರು ಎಂಬುದೇ ಅನುಮಾನವಿದೆ. ಅವರನ್ನು ಈಗಲೆ ಕರೆಸಿ, ಇಲ್ಲವೇ ದೂರು ನೀಡುತ್ತೇವೆ. ಕೂಡಲೇ ಎಫ್‌ಐಆರ್ ಮಾಡಿಸಿ ಎಂದು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಪ್ರಿಯಕರನಿಂದ ವಂಚನೆ, ಕೊಲೆ ಬೆದರಿಕೆ ಆರೋಪ- ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

    ಸದ್ಯ ಭಗವಾನ್ ಮನೆಗೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸ್ಥಳದಲ್ಲಿ ರಾಜ್ಯ ಮೀಸಲು ಪಡೆ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿಂದು ಹಲವೆಡೆ ವಿದ್ಯುತ್ ವ್ಯತ್ಯಯ; Ind Vs Pak ಮ್ಯಾಚ್ ನೋಡುವ ಫ್ಯಾನ್ಸ್‌ಗೆ ನಿರಾಸೆ ಸಾಧ್ಯತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಈ ಬಾರಿ ಸಿಎಂ ಸ್ಥಾನವನ್ನು ಒಕ್ಕಲಿಗರಿಗೆ ನೀಡಬೇಕು: ಉಮಾಪತಿ ಶ್ರೀನಿವಾಸ ಗೌಡ

    ಈ ಬಾರಿ ಸಿಎಂ ಸ್ಥಾನವನ್ನು ಒಕ್ಕಲಿಗರಿಗೆ ನೀಡಬೇಕು: ಉಮಾಪತಿ ಶ್ರೀನಿವಾಸ ಗೌಡ

    ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ಸಿಎಂ ಆಗಲು ಬಯಸಿದರೆ ಅವರು ಒಬ್ಬೊಂಟಿಯಲ್ಲ ಜೊತೆಗೆ ನಾವು ನಿಲ್ಲುತ್ತೇವೆ ಎಂದು ರಾಜ್ಯ ಒಕ್ಕಲಿಗರ ಸಂಘದ (Vokkaliga Sangha ) ನಿರ್ದೇಶಕ ಉಮಾಪತಿ ಶ್ರೀನಿವಾಸ್ ಗೌಡ ಹೇಳಿದ್ದಾರೆ.

    ಈ ಬಾರಿ ಸಿಎಂ ಸ್ಥಾನವನ್ನು ಒಕ್ಕಲಿಗರಿಗೆ ನೀಡಬೇಕು. ಅದಕ್ಕಾಗಿ ಡಿ.ಕೆ ಶಿವಕುಮಾರ್ ಅವರಿಗೆ ಬೆಂಬಲ ಸೂಚಿಸುತ್ತೇವೆ. ಅವರಿಗೆ ಸಿಎಂ ಆಗಲು ಅವಕಾಶ ಇದುವರೆಗೂ ಸಿಕ್ಕಿಲ್ಲ. ಕಾಂಗ್ರೆಸ್ (Congress) ಪಕ್ಷದ ಏಳಿಗೆಗಾಗಿ ಅವರು ಸಾಕಷ್ಟು ಶ್ರಮಪಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಆಗಿದ್ದಾರೆ. ಆದರೆ ಡಿಕೆಶಿ ಇದುವರೆಗೂ ಸಿಎಂ ಆಗಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಗುರುವನ್ನು ಸೋಲಿಸಿದ ಶಿಷ್ಯ: ಸಿಟಿ ರವಿ ಸೋತಿದ್ದು ಎಲ್ಲಿ?

    ಶಿವಕುಮಾರ್ ಅವರು ನಮ್ಮ ಸಮುದಾಯದ ಧ್ವನಿಯಾಗಿದ್ದಾರೆ. ನಮ್ಮ ಸಮುದಾಯಕ್ಕೆ ಗೌರವ ಸಿಗಬೇಕಾದರೆ, ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರೆಯಲೇ ಬೇಕು. ಇದು ಮನವಿಯೇ ಹೊರತು ಬೇಡಿಕೆ ಅಲ್ಲ. ಅವರಿಗೆ ಸಿಎಂ ಸ್ಥಾನ ಸಿಗುವವರೆಗೂ ಹೋರಾಟ ನಡೆಸುತ್ತೇವೆ ಎಂದು ಆಗ್ರಹಿಸಿದರು. ಇದನ್ನೂ ಓದಿ: ಸಮುದಾಯದ ಐವರಿಗೆ ಸಚಿವ ಸ್ಥಾನ, 1 ಡಿಸಿಎಂ ಕೊಡಿ – ಮುಸ್ಲಿಂ ಮುಖಂಡರ ಆಗ್ರಹ

  • ರಾಜಕೀಯ ಅಖಾಡದಲ್ಲಿ `ಡೆತ್’ ಚಾಲೆಂಜ್ – ಡಿಕೆ ಸುರೇಶ್ ವಿರುದ್ಧ ಸಿಡಿದ ಮುನಿರತ್ನ

    ರಾಜಕೀಯ ಅಖಾಡದಲ್ಲಿ `ಡೆತ್’ ಚಾಲೆಂಜ್ – ಡಿಕೆ ಸುರೇಶ್ ವಿರುದ್ಧ ಸಿಡಿದ ಮುನಿರತ್ನ

    ಬೆಂಗಳೂರು: ರಾಜಕೀಯ ರಣಾಂಗಣದಲ್ಲಿ ಇದುವರೆಗೆ ಆಣೆ-ಪ್ರಮಾಣ ರಾಜಕೀಯ ಕಾಮನ್ ಆಗಿತ್ತು. ದೇವರ ಮೇಲೆ ಆಣೆ-ಪ್ರಮಾಣ ಮಾಡೋದು ಸಹಜವಾಗಿತ್ತು. ಆದರೀಗ `ಡೆತ್ ಚಾಲೆಂಜ್’ ಶುರುವಾಗಿದೆ.

    `ನಾನು ಒಕ್ಕಲಿಗ ಮಹಿಳೆಗೆ ಹೊಡೆಯಿರಿ’ ಅಂತಾ ಹೇಳಿದ್ದೇನೆ ಎನ್ನುವುದನ್ನು ಪ್ರೂವ್ ಮಾಡಿದ್ರೆ ನಾನು ನೇಣು ಹಾಕಿಕೊಳ್ಳುತ್ತೇನೆ. ಇಲ್ಲದಿದ್ರೆ ಡಿ.ಕೆ ಸುರೇಶ್ (DK Suresh) ನೇಣು ಹಾಕಿಕೊಳ್ತಾರಾ ಎಂದು ತೋಟಗಾರಿಕಾ ಸಚಿವ ಮುನಿರತ್ನ (Munirathna) ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ ಸುರೇಶ್‌ಗೆ ಸವಾಲ್ ಎಸೆದಿದ್ದಾರೆ. ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ – ಕೊಲೆ ಆರೋಪ

    ಮುನಿರತ್ನ ಪ್ರಚೋದನಕಾರಿ ಭಾಷಣ ಮಾಡಿರುವ ಬಗ್ಗೆ ಸಂಸದ ಡಿ.ಕೆ ಸುರೇಶ್ ವೀಡಿಯೋವೊಂದನ್ನ ರಿಲೀಸ್ ಮಾಡಿದ್ದರು. ಈ ಸಂಬಂಧ ಸಚಿವ ಮುನಿರತ್ನ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಶನಿವಾರದಿಂದ ಎಕ್ಸ್‌ಪ್ರೆಸ್‌ವೇ ಸಂಚಾರ ಮತ್ತಷ್ಟು ದುಬಾರಿ – 22% ಟೋಲ್ ದರ ಹೆಚ್ಚಳ

    ಸಂಸದ ಡಿ.ಕೆ ಸುರೇಶ್ ನನ್ನ ಬಗ್ಗೆ ಕೆಲ ಪದಬಳಕೆ ಮಾಡಿದ್ದಾರೆ. ಅವರ ಮೇಲೆ ನನಗೆ ಬಹಳ ಗೌರವ ಇದೆ. 7 ವರ್ಷ ಅವರ ಜೊತೆಯಿದ್ದೆ. ಇದೇ ಸುರೇಶ್ ನನಗೆ 5 ಭಾಷೆಗಳಲ್ಲಿ ಮಾತನಾಡುವಂತೆ ಹೇಳುತ್ತಿದ್ದರು. ಉರ್ದು, ತಮಿಳು, ತೆಲುಗಿನಲ್ಲಿ ಮಾತನಾಡಿ ಸರ್ ವೋಟು ಬರುತ್ತೆ ಅಂತಾ ಹೇಳಿದ್ದರು. ಆದರೀಗ ಅವರೇ ಈ ರೀತಿ ಹೇಳ್ತಿರೋದು ಸರಿಯಲ್ಲ. ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾರೆ ಅಂತಾ ಅಂದುಕೊಂಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಒಕ್ಕಲಿಗ ಹೆಣ್ಣು ಮಗಳು ಅಂತಾ ನಾನೇನಾದರೂ ಹೇಳಿದರೆ ನಾನು ಇವತ್ತೇ ರಿಸೈನ್ ಮಾಡ್ತೀನಿ. ಕ್ರಿಶ್ಚಿಯನ್ ಮತಾಂತರ ವಿಚಾರದಲ್ಲಿ ಮಾತನಾಡುವಾಗ ಹಾಗೂ ಕೊರೊನಾ ಸಂದರ್ಭದಲ್ಲಿ ಊಟ ಕೊಡದವರನ್ನ ನಾನು ಅವತ್ತು ಹೊಡೆದೋಡಿಸಿ ಅಂದಿದ್ದೇನೆ. ಆದರೆ ಒಕ್ಕಲಿಗ ಹೆಣ್ಣು ಮಗಳು ಅಂತಾ ಪದಪ್ರಯೋಗ ಮಾಡಿದ್ರೇ ನೇಣುಗಂಬ ಏರೋಕೆ ರೆಡಿ ಇದ್ದೀನಿ. ನಾನು ಹಾಗೇ ಹೇಳಿದ್ರೆ ಭೂಮಿ ಮೇಲೆ ಇರಲ್ಲ. ಡೆತ್ ನೋಟ್ ಬರೆದು ನೇಣು ಹಾಕಿಕೊಳ್ಳುವೆ. ಇಲ್ಲದೇ ಇದ್ರೆ ಡಿಕೆ ಸುರೇಶ್ ನೀವು ನೇಣು ಹಾಕಿಕೊಳ್ತೀರಾ ಎಂದು ಸವಾಲ್ ಹಾಕಿದ್ದಾರೆ.

    ಡಿ.ಕೆ ಸುರೇಶ್ ವಿರುದ್ಧ ಫೋಟೋ ರಿಲೀಸ್ ಮಾಡಿದ ಮುನಿರತ್ನ, ಬಿಜೆಪಿ ಸ್ಥಳೀಯ ನಾಯಕಿ ಸುನಂದಾ ಬೋರೇಗೌಡ ಅವರು ಇಲ್ಲಿನ ಜೆ.ಪಿ ಪಾರ್ಕ್ ಭಾಗದಲ್ಲಿ ಪ್ಲಾಸ್ಟಿಕ್ ಲೋಟ ಹಂಚುತ್ತಿದ್ದರು. ಈ ವೇಳೆ ಮುಸ್ಲಿಂ ಮಹಿಳೆಯೊಬ್ಬಳು ಸುನಂದಾಗೆ ಹಲ್ಲೆ ಮಾಡೋಕೆ ಮುಂದಾಗಿದ್ರು. ಈ ಘಟನೆ ನಂತರ ಮುಸ್ಲಿಂ ಮಹಿಳೆ (Muslim Women) ಮನೆಗೆ ಹೋಗಿ ಡಿ.ಕೆ ಸುರೇಶ್ ಸನ್ಮಾನ ಮಾಡಿ 50 ಸಾವಿರ ಕೊಟ್ಟಿದ್ದರು. ಇದು ಒಕ್ಕಲಿಗ ಮಹಿಳೆಗೆ ಮಾಡಿದ ಅವಮಾನ ಅಲ್ವೇ ಎಂದು ಪ್ರಶ್ನಿಸಿದ್ದಾರೆ.

    ಈ ಹಿಂದೆ ನನ್ನ ಕೈಯಲ್ಲಿ ಬೇರೆ ಭಾಷೆಯಲ್ಲಿ ಮಾತಾನಾಡಿಸುವಂತೆ ಹೇಳಿದ್ದು ಯಾರು? ಬೇರೆ ಭಾಷೆಯಲ್ಲಿ ಮಾತಾನಾಡಿದ ತಕ್ಷಣ ನನ್ನ ಮಾತೃಭಾಷೆ ನಾನು ಮಾತಾನಾಡುವ ಭಾಷೆ ಕನ್ನಡ ಬದಲಾಗುತ್ತದೆಯೇ? ಸಂಸದರಿಗೆ ಸಣ್ಣ ವಿಚಾರದಲ್ಲಿ ರಾಜಕೀಯ ಮಾಡೋದು ಶೋಭೆ ತರಲ್ಲ. ಯಾಕೆ ಜಾತಿ ತಂದು ಅಡ್ಡ ಇಡುತ್ತೀರಾ? ಬೆಂಗಳೂರು ಶಾಂತಿಯಿಂದಿದೆ. ನಿಮ್ಮ ವಕ್ರದೃಷ್ಟಿ ಬೆಂಗಳೂರು ಮೇಲೆ ಬೀಳೋದು ಬೇಡ. ಬೆಂಗಳೂರನ್ನು ಹಾಳು ಮಾಡಬೇಡಿ ಎಂದು ಮನವಿ ಮಾಡಿದರು.

    ಬೇರೆ ಭಾಷೆಯಲ್ಲಿ ಮಾತಾನಾಡೋದು ತಪ್ಪು ಅನ್ನೋದಾದ್ರೆ, ನನ್ನನ್ನು ಮಾತಾನಾಡುವಂತೆ ಹೇಳಿರೋದು ಯಾರು? ರಜನಿಕಾಂತ್ ಕನ್ನಡದಿಂದ ಹೋಗಿ ಸೂಪರ್ ಸ್ಟಾರ್ ಆಗಿ ಬೆಳೆದಿಲ್ವಾ? ನನ್ನ ಉಸಿರು ನನ್ನ ಮಾತೃಭಾಷೆ ಕನ್ನಡ, ಈ ಕೀಳು ರಾಜಕೀಯ ಬೇಡ ಎಂದರು.

    ಬೆಂಗಳೂರು ದಕ್ಷಿಣ, ಆನೇಕಲ್, ರಾಮನಗರ, ಚನ್ನಪಟ್ಟಣ, ಮಾಗಡಿ ಎಲ್ಲೂ ನೀವು ಗೆಲ್ಲೋದಕ್ಕಾಗಲ್ಲ. ಆದರೂ ಆರ್‌ಆರ್ ನಗರದ ಮೇಲೆ ಮಾತ್ರ ಯಾಕೆ ಗಮನ? ಅವರ ಅಣ್ಣ ಪಾಪ ಗಡ್ಡ ತೆಗೆಯುತ್ತಿಲ್ಲ. ಯಾಕೆಂದ್ರೆ ಅವ್ರಿಗೆ ಸಿಎಂ ಆಗಬೇಕು ಅನ್ನೋ ಆಸೆ. ಅದರ ಬಗ್ಗೆ ಇವರಿಗೆ ಯೋಚನೆಯಿಲ್ಲ. ಡಿ.ಕೆ ಸುರೇಶ್ ಅವರಣ್ಣ ಗಡ್ಡ ಶೇವಿಂಗ್ ಮಾಡದೇ ಎಲ್ಲಾ ಕಡೆ ಓಡಾಡ್ತಾ ಇದ್ದಾರೆ. ಆದ್ರೆ ಇವರಿಗೆ ಬರೀ ಆರ್.ಆರ್ ನಗರದ್ದೇ ಚಿಂತೆಯಾಗಿದೆ. ಮೊದಲು ಡಿಕೆಶಿ (DK Shivakumar) ಶೇವಿಂಗ್ ಬಗ್ಗೆ ಗಮನ ಕೊಡಲಿ ಎಂದು ತಿರುಗೇಟು ನೀಡಿದ್ದಾರೆ.

  • ಒಳಮೀಸಲಾತಿ ಹಂಚಿಕೆ; ಪ್ರತ್ಯೇಕ ಮೀಸಲಾತಿ ರದ್ದು – EWS ಕೋಟಾ ವ್ಯಾಪ್ತಿಗೆ ಮುಸ್ಲಿಮರು

    ಒಳಮೀಸಲಾತಿ ಹಂಚಿಕೆ; ಪ್ರತ್ಯೇಕ ಮೀಸಲಾತಿ ರದ್ದು – EWS ಕೋಟಾ ವ್ಯಾಪ್ತಿಗೆ ಮುಸ್ಲಿಮರು

    ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನವಾಗಿದೆ. ಲಿಂಗಾಯತರಿಗೆ 2D ಮೀಸಲಾತಿ, ಒಕ್ಕಲಿಗರಿಗೆ 2C ಮೀಸಲಾತಿಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಮುಸ್ಲಿಮರಿಗೆ 2B ಮೀಸಲಾತಿ ರದ್ದುಗೊಳಿಸಿ, ಆರ್ಥಿಕವಾಗಿ ಹಿಂದುಳಿದ ವರ್ಗದ ಅಡಿಯಲ್ಲೇ ಮೀಸಲಾತಿ ನೀಡುವ ಬಗ್ಗೆ ಚರ್ಚೆ ನಡೆದಿದೆ. ಆದ್ರೆ, ಈ ಬಗ್ಗೆ ತೀರ್ಮಾನ ಹೊರಬೀಳಬೇಕಿದೆ.

    ಮೀಸಲಾತಿ ಗಿಫ್ಟ್ – ಸರ್ಕಾರದ ನಿರ್ಣಯಗಳೇನು?
    ಲಿಂಗಾಯತ ಸಮುದಾಯಕ್ಕೆ ಶೇ.2 ಹೆಚ್ಚುವರಿ ಮೀಸಲಾತಿ ಕಲ್ಪಿಸುವ ನಿರ್ಣಯ ಕೈಗೊಂಡಿದೆ. 2D ಪ್ರವರ್ಗದಲ್ಲಿ ಲಿಂಗಾಯತರಿಗೆ ಇದ್ದ ಶೇ.5ರಷ್ಟು ಇದ್ದ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸಲಾಗಿದೆ. ಒಕ್ಕಲಿಗ ಸಮುದಾಯಕ್ಕೆ ಶೇ.2 ಹೆಚ್ಚುವರಿ ಮೀಸಲಾತಿ ಕಲ್ಪಿಸಲಾಗಿದೆ. ಈ ಮೂಲಕ 2C ಪ್ರವರ್ಗದಲ್ಲಿ ಒಕ್ಕಲಿಗರಿಗೆ ಶೇ.4ರಷ್ಟು ಇದ್ದ ಮೀಸಲಾತಿಯನ್ನು ಶೇ.6ಕ್ಕೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಲಿಂಗಾಯತರಿಗೆ ಶೇ.7, ಒಕ್ಕಲಿಗರಿಗೆ ಶೇ.6ರಷ್ಟು ಮೀಸಲಾತಿ – SC ಒಳ ಮೀಸಲಾತಿಗೆ ಸಂಪುಟ ಅಸ್ತು

    ಮುಸ್ಲಿಮರಿಗೆ ಇದ್ದ ಪ್ರತ್ಯೇಕ 2B ಮೀಸಲಾತಿ ರದ್ದುಗೊಳಿಸಲಾಗಿದೆ. EWS (ಆರ್ಥಿಕ ದುರ್ಬಲ ವರ್ಗ) ಕೋಟಾ ವ್ಯಾಪ್ತಿಗೆ ಮುಸ್ಲಿಮರನ್ನು ಸೇರಿಸಿದ್ದು, ಅದೇ ಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ಕಾಡು ಕುರುಬ, ಗೊಂಡ ಕುರುಬರನ್ನ ಎಸ್‌ಟಿಗೆ ಸೇರಿಸಿ ಒಳಮೀಸಲಾತಿ ಕಲ್ಪಿಸುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಸಲ್ಲಿಸಲಾಗಿದೆ. ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿ ಸಂಬಂಧ ಸದಾಶಿವ ಆಯೋಗದ ವರದಿ ಜಾರಿ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇದನ್ನೂ ಓದಿ: ಚಾಮರಾಜನಗರಕ್ಕೆ ಭೇಟಿ ಕೊಟ್ರೆ ಅಧಿಕಾರ ಹೋಗುತ್ತೆ – ಮೌಢ್ಯಕ್ಕೆ ಸೆಡ್ಡು ಹೊಡೆದ ಸಿದ್ದರಾಮಯ್ಯ, ಬೊಮ್ಮಾಯಿ‌

  • ಶೇ.10ಕ್ಕೆ ಮೀಸಲಾತಿ ಹೆಚ್ಚಳಕ್ಕೆ ಒಕ್ಕಲಿಗರ ಸಂಘ ಒತ್ತಾಯ

    ಶೇ.10ಕ್ಕೆ ಮೀಸಲಾತಿ ಹೆಚ್ಚಳಕ್ಕೆ ಒಕ್ಕಲಿಗರ ಸಂಘ ಒತ್ತಾಯ

    ಬೆಂಗಳೂರು: ಜನಸಂಖ್ಯೆಗೆ ಅನುಗುಣವಾಗಿ ಒಕ್ಕಲಿಗ ಸಮುದಾಯದ (Vokkaliga Community) ಮೀಸಲಾತಿ (Reservation) ಪ್ರಮಾಣವನ್ನು ಶೇ.4ರಿಂದ ಶೇ.10ಕ್ಕೆ ಹೆಚ್ಚಿಸಬೇಕು ಎಂದು ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ.

    ರಾಜ್ಯದ ಜನಸಂಖ್ಯೆಯಲ್ಲಿ ಶೇ.16ರಷ್ಟು ಒಕ್ಕಲಿಗ ಸಮುದಾಯದ (Vokkaliga Community) ಜನಸಂಖ್ಯೆ ಇದ್ದು, ಶೇ.4 ಮೀಸಲಾತಿ ಕಡಿಮೆಯಾಗಿದೆ. ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿನ 3A ಅಡಿಯಲ್ಲಿ ಒಕ್ಕಲಿಗರ ಸಮುದಾಯ ಸೇರಿಸಲಾಗಿದೆ. 3A ನಲ್ಲಿ ಒಕ್ಕಲಿಗರ ಉಪ ಪಂಗಡಗಳು ಹಾಗೂ ಇತರೆ ಜಾತಿಗಳೂ (Cast) ಸೇರಿವೆ ಎಂದು ಹೇಳಿದೆ. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಪೋಸ್ಟ್‌ ಮಾಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಮಾನತು

    ರಾಜ್ಯ ಸರ್ಕಾರ (Government Of Karnataka) ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೀಸಲಾತಿ (SC ST Reservation) ಹೆಚ್ಚಳ ಮಾಡಿರುವುದನ್ನು ಒಕ್ಕಲಿಗರ ಸಂಘ ಸ್ವಾಗತಿಸುತ್ತದೆ. ಅದೇ ರೀತಿ 3ಎ ಮೀಸಲಾತಿ ಪ್ರಮಾಣವನ್ನು ಶೇ.4ರಿಂದ ಶೇ.10ಕ್ಕೆ ಹೆಚ್ಚಿಸುವ ಮೂಲಕ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಸಂಘ ಮನವಿ ಮಾಡಿದೆ. ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರ್ ಕೊಡುಗೆ ನೆನೆಯದಿದ್ದರೆ ನರಕಕ್ಕೆ ಹೋಗ್ತೀರಾ: ಬಿ.ಎಲ್. ಸಂತೋಷ್‌

    ನಮ್ಮ ಸಮುದಾಯ ಅನಾದಿಕಾಲದಿಂದಲೂ ಕೃಷಿಯನ್ನೇ ನಂಬಿ ಬದುಕುತ್ತಿದೆ. ಬೇಸಾಯದ ವೆಚ್ಚ ದಿನದಿಂದ ದಿನಕ್ಕೆ ದುಬಾರಿಯಾಗಿದ್ದು, ಅತಿವೃಷ್ಟಿ, ಪ್ರವಾಹ, ಬರ, ಕೀಟ ಹಾಗೂ ರೋಗ ಬಾಧೆಯಿಂದ ಪದೇ-ಪದೇ ಸಂಕಷ್ಟಕ್ಕೆ ಸಿಲುಕುತ್ತಿದೆ. ನಮ್ಮ ಸಮುದಾಯದ ಶೇ.70ರಷ್ಟು ಮಂದಿ ಆರ್ಥಿಕವಾಗಿ ಹಿಂದುಳಿದಿದ್ದಾರೆ. ಸಾಕಷ್ಟು ಬಡವರೂ ಇದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು. ಈ ಮೂಲಕ ಒಕ್ಕಲಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸಂಘದ ರಾಜ್ಯಾಧ್ಯಕ್ಷರು ಹಾಗೂ ಶಾಸಕರೂ ಆದ ಸಿ.ಎನ್.ಬಾಲಕೃಷ್ಣ (CN Balakrishna), ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜೆಡಿಎಸ್‍ಗೆ ಒಕ್ಕಲಿಗ ಸಮಾಜ ಕೇವಲ ವೋಟ್ ಬ್ಯಾಂಕ್ – ದಳಪತಿಗಳ ವಿರುದ್ಧ ವಿಜಯೇಂದ್ರ ಕಿಡಿ

    ಜೆಡಿಎಸ್‍ಗೆ ಒಕ್ಕಲಿಗ ಸಮಾಜ ಕೇವಲ ವೋಟ್ ಬ್ಯಾಂಕ್ – ದಳಪತಿಗಳ ವಿರುದ್ಧ ವಿಜಯೇಂದ್ರ ಕಿಡಿ

    – ಹೆಚ್‍ಡಿಕೆಯನ್ನು ಸಿಎಂ ಮಾಡಿದ್ದು ಬಿಎಸ್‍ವೈ

    ಮಂಡ್ಯ: ಜೆಡಿಎಸ್ ಪಕ್ಷಕ್ಕೆ ಒಕ್ಕಲಿಗ ಸಮಾಜ ಕೇವಲ ವೋಟ್ ಬ್ಯಾಂಕ್ ಆಗಿದೆ ಎಂದು ಸಿಎಂ ಯಡಿಯೂರಪ್ಪ ಅವರು ಪುತ್ರ ವಿಜಯೇಂದ್ರ ಕಿಡಿಕಾರಿದ್ದಾರೆ.

    ಕೆಆರ್ ಪೇಟೆಯಲ್ಲಿ ಮಾತನಾಡಿದ ಅವರು, ಒಕ್ಕಲಿಗ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ಮಾಡಿಕೊಂಡು ಜೆಡಿಎಸ್ ರಾಜಕೀಯ ಮಾಡಿದೆ. ಜೆಡಿಎಸ್‍ಗೆ ಅಧಿಕಾರ ಸಿಕ್ಕರೂ ರಾಜ್ಯದ ಅಭಿವೃದ್ಧಿ ಕಡೆ ಗಮನಹರಿಸಲಿಲ್ಲ ಎಂದು ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

    ಯಡಿಯೂರಪ್ಪ ಅವರನ್ನು ಒಕ್ಕಲಿಗ ವಿರೋಧಿ ಎನ್ನುತ್ತಾರೆ. ಆದರೆ ಒಕ್ಕಲಿಗ ನಾಯಕರು ಎನಿಸಿಕೊಂಡಿರುವ ಕುಮಾರಸ್ವಾಮಿ ಮತ್ತು ಸದಾನಂದಗೌಡರನ್ನು ಸಿಎಂ ಮಾಡಿದ್ದೆ ಯಡಿಯೂರಪ್ಪನವರು. ಯಡಿಯೂರಪ್ಪನವರನ್ನು ಎಲ್ಲಾ ಸಮುದಾಯದವರು ಒಪ್ಪಿದ್ದಾರೆ. ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ನಿರ್ನಾಮವಾಗಿದೆ. ಈಗ ಬೆರಳೆಣಿಕೆಯ ಶಾಸಕರಷ್ಟೇ ಜೆಡಿಎಸ್‍ನಲ್ಲಿದ್ದಾರೆ. ಅವರು ಕೂಡ ಯಾವತ್ತು ಜೆಡಿಎಸ್ ಬಿಟ್ಟು ಓಡಿಹೋಗ್ತಾರೋ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಕಾಲೆಳೆದರು.

    ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿಯಾಗಿ ತಮ್ಮ ಮಗನನ್ನ ಗೆಲ್ಲಿಸಿಕೊಳ್ಳಲಾಗಲಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ಅಧಿಕಾರದ ಮದದಿಂದ ಮಂಡ್ಯ ಗೆಲ್ಲುತ್ತೆವೆ ಎನ್ನುತ್ತಿದ್ದರು. ರಾಜ್ಯದಲ್ಲಿ ಎಲ್ಲಾದರು ಪ್ರಜ್ಞಾವಂತ ಮತದಾರರು ಇದ್ದರೆ ಅದು ಮಂಡ್ಯದಲ್ಲಿ ಅನ್ನೋದು ಸಾಬೀತಾಗಿದೆ. ಅಧಿಕಾರದ ಮದದಲ್ಲಿದ್ದವರಿಗೆ ಸರಿಯಾದ ಪಾಠವನ್ನೇ ಮಂಡ್ಯ ಜನ ಕಲಿಸಿದ್ದಾರೆ. ಒಬ್ಬ ಹೆಣ್ಣುಮಗಳ ವಿರುದ್ಧ ಬಾಯಿಗೆ ಬಂದಹಾಗೇ ಮಾತನಾಡಿದರು. ಹೆಣ್ಣಿಗೆ ಗೌರವ ಕೊಡಬೇಕು ಎಂಬ ಕನಿಷ್ಠ ಸೌಜನ್ಯವೂ ಅಂದಿನ ಮುಖ್ಯಮಂತ್ರಿಗೆ ಇರಲಿಲ್ಲ ಎಂದು ಹೆಚ್‍ಡಿಕೆ ವಿರುದ್ಧ ಕಿಡಿಕಾರಿದರು.

  • ಜಿಟಿಡಿ ಬಿಜೆಪಿಗೆ ಬಂದ್ರೆ ಒಳ್ಳೆಯದು: ಸಚಿವ ಮಾಧುಸ್ವಾಮಿ

    ಜಿಟಿಡಿ ಬಿಜೆಪಿಗೆ ಬಂದ್ರೆ ಒಳ್ಳೆಯದು: ಸಚಿವ ಮಾಧುಸ್ವಾಮಿ

    – ಎಲ್ಲಾ ಒಕ್ಕಲಿಗರು ಡಿಕೆಶಿ ಪರವಾಗಿಲ್ಲ

    ಹಾಸನ: ಮಾಜಿ ಸಚಿವ ಜಿ.ಟಿ.ದೇವೇಗೌಡರು ಬಿಜೆಪಿಗೆ ಬಂದರೆ ಒಳ್ಳೆಯದು. ಜಿಟಿಡಿ ಬಿಜೆಪಿಗೆ ಅಸ್ಪೃಶ್ಯರಲ್ಲ, ಅವರನ್ನು ಗೃಹಮಂಡಳಿ ಅಧ್ಯಕ್ಷರನ್ನಾಗಿ ಮಾಡಿದ್ದು ಎಂದು ಬಹಿರಂಗವಾಗಿಯೇ ಜಿ.ಟಿ.ದೇವೇಗೌಡರನ್ನು ಸಚಿವ ಮಾಧುಸ್ವಾಮಿ ಪಕ್ಷಕ್ಕೆ ಆಹ್ವಾನಿಸಿದರು.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಟಿಡಿ ಸೇರಿದಂತೆ ಜೆಡಿಎಸ್‍ನ ಕೆಲ ಶಾಸಕರು ಬಿಜೆಪಿಗೆ ಬಾಹ್ಯ ಬೆಂಬಲ ಕೊಡೋಣ ಎಂದಿದ್ದರು. ಅವರವರ ಕ್ಷೇತ್ರಗಳ ಅಭಿವೃದ್ಧಿ ದೃಷ್ಟಿಯಿಂದ ಅದು ಒಳ್ಳೆದು. ಜಿಟಿಡಿ ಬಿಜೆಪಿಗೆ ಅಸ್ಪೃಶ್ಯರಲ್ಲ, ಅವರನ್ನು ಗೃಹಮಂಡಳಿ ಅಧ್ಯಕ್ಷರನ್ನಾಗಿ ಮಾಡಿದ್ದು ನಾವು. ಅವರು ಬಿಜೆಪಿಗೆ ಬಂದರೆ ಒಳ್ಳೆಯದು ಎಂದು ಹೇಳಿದರು.

    ಒಕ್ಕಲಿಗರ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಡಿಕೆಶಿ ಇಡಿ ಕಸ್ಟಡಿ ವಿರೋಧಿಸಿ ಈ ದೊಡ್ಡ ಪ್ರತಿಭಟನೆ ಒಳ್ಳೆಯದಲ್ಲ. ನಾವು ಡಿಕೆಶಿ ಬಂಧಿಸಿ ಎಂದು ಹೇಳಿಲ್ಲ. ಅಷ್ಟಕ್ಕೇ ಒಂದು ಸಮುದಾಯ ಹೋರಾಟಕ್ಕೆ ಇಳಿಯುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿ ಒಕ್ಕಲಿಗ ಸಮುದಾಯದ ವಿರುದ್ಧವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

    ಬಿಜೆಪಿ ಒಕ್ಕಲಿಗ ಸಮಾಜದ ವಿರೋಧಿಯಾಗಿದ್ದರೆ ಸದಾನಂದಗೌಡರನ್ನು ಕೇಂದ್ರದಲ್ಲಿ ಮಂತ್ರಿ ಮಾಡುತ್ತಿರಲಿಲ್ಲ. ನಮ್ಮ ಸರ್ಕಾರದಲ್ಲಿ ಕಂದಾಯ ಸಚಿವರು ಯಾರು? ಅಶ್ವಥ್ ನಾರಾಯಣ ಡಿಸಿಎಂ ಆಗಿಲ್ಲವೇ. ಜಾತಿ ಜಾತಿಯವರು ಹೋರಾಟಕ್ಕಿಳಿದರೆ ಕಾನೂನು ಏನು ಮಾಡಬೇಕು. ಡಿಕೆಶಿ ತನಿಖೆಗೆ ಸಹಕಾರ ನೀಡಬೇಕು ಅಲ್ಲವೇ? ಅದಕ್ಕಾಗಿ ಇಡಿ ವಶಕ್ಕೆ ಪಡೆದಿದೆ. ಎಲ್ಲ ಒಕ್ಕಲಿಗರು ಡಿಕೆಶಿ ಪರವಾಗಿಲ್ಲ. ಅವರ ಬೆಂಬಲಿಗರು ಮಾತ್ರ ಪ್ರತಿಭಟನೆ ಮಾಡಿದ್ದಾರೆ ಎಂದು ಹೇಳಿದರು.

    ಅತಿವೃಷ್ಟಿ ಅಂತಿಮ ವರದಿ ಸಿದ್ಧವಾಗಿಲ್ಲ, ಆದ ನಂತರ ಕೇಂದ್ರದ ಬಳಿಗೆ ಹೋಗುತ್ತೇವೆ. ಉ.ಕ.ಭಾಗದಲ್ಲಿ ಹೊಸದಾಗಿ ಮನೆ ಕಟ್ಟಲು ಆಗಲ್ಲ. ಮುಂದಿನ ಸೆಪ್ಟಂಬರ್‍ವರೆಗೆ ಶಾಶ್ವತ ಪರಿಹಾರ ಸದ್ಯಕ್ಕೆ ಮಾಡಲು ಆಗಲ್ಲ. ಕೇಂದ್ರ ನೆರವು ಕೊಟ್ಟಿಲ್ಲ ಎಂದು ನಾವು ಸುಮ್ಮನೆ ಕುಳಿತಿಲ್ಲ. ಕೇಂದ್ರ ಪರಿಹಾರ ಕೊಡೋ ವಿಶ್ವಾಸ ಇದೆ, ಸ್ವಲ್ಪ ವಿಳಂಬವಾಗಬಹುದು ಎಂದರು.

    ಇದೇ ವೇಳೆ ಅಕ್ಬೋಬರ್‍ನಲ್ಲಿ ಅಧಿವೇಶನ ಕರೆಯುತ್ತೇವೆ. ಅದಕ್ಕೂ ಮುನ್ನಾ ರೈತರ ಎಲ್ಲಾ ಸಾಲದ ಬಗ್ಗೆ ಮಾಹಿತಿ ಪಡೆಯುತ್ತೇವೆ. ಎಲ್ಲವನ್ನೂ ಲೆಕ್ಕಾಚಾರ ಮಾಡಿ ಒಂದು ತೀರ್ಮಾನಕ್ಕೆ ಬರುತ್ತೇವೆ. ರೈತರಿಗೆ ಏನಾದರು ಮಾಡಬೇಕು ಎಂಬುದು ಯಡಿಯೂರಪ್ಪ ಕನಸು ಎಂದು ತಿಳಿಸಿದರು.