Tag: ಒಡೆಯ

  • ಕನ್ನಡ ರಾಜ್ಯೋತ್ಸವಕ್ಕೆ ‘ಒಡೆಯ’ನ ಗಿಫ್ಟ್- ಟೀಸರ್ ರಿಲೀಸ್

    ಕನ್ನಡ ರಾಜ್ಯೋತ್ಸವಕ್ಕೆ ‘ಒಡೆಯ’ನ ಗಿಫ್ಟ್- ಟೀಸರ್ ರಿಲೀಸ್

    ಬೆಂಗಳೂರು: ಇಂದು ಸಮಸ್ತ ಕನ್ನಡಿಗರು ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡುತ್ತಿದ್ದಾರೆ. ಇತ್ತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇಂದು ‘ಒಡೆಯ’ ಸಿನಿಮಾದ ಟೀಸರ್ ಬಿಡುಗಡೆ ಮಾಡುವುದಾಗಿ ದೀಪಾವಳಿ ಹಬ್ಬಕ್ಕೆ ಸಿಹಿ ಸುದ್ದಿ ಕೊಟ್ಟಿದ್ದರು. ಅವರು ಹೇಳಿದಂತೆ ಕನ್ನಡಿಗರಿಗೆ ಆ್ಯಕ್ಷನ್ ‘ಒಡೆಯ’ ನ ದರ್ಶನ ಮಾಡಿಸಿದ್ದಾರೆ.

    ದರ್ಶನ್ ಅಭಿನಯದ ‘ಒಡೆಯ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಈ ವಿಡಿಯೋ ಕೇವಲ 1 ನಿಮಿಷ 4 ಸೆಕೆಂಡ್‍ಗಳು ಮಾತ್ರ ಇದೆ. “ನಾನು ಅಧಿಕಾರದ ಆಸೆಯಿಂದ ಬಂದಿಲ್ಲ. ಅಧಿಕಾರನೇ ಆಸೆ ಪಟ್ಟು ನನ್ನನ್ನು ಇಲ್ಲಿಗೆ ಕರೆಸಿಕೊಂಡಿದೆ. ಇನ್ಮುಂದೆ ಅಧಿಕಾರನೂ ನಂದೆನೇ, ಆಜ್ಞೆಯೂ ನಂದೆನೇ” ಎಂಬ ಮಾಸ್ ಡೈಲಾಗ್ ಮೂಲಕ ಟೀಸರ್ ಶುರುವಾಗಿದೆ.

    ಟೀಸರ್ ಪೂರ್ತಿ ದರ್ಶನ್ ಅವರ ಆ್ಯಕ್ಷನ್ ಝಲಕನ್ನು ನೋಡಬಹುದು. ಈ ಮೂಲಕ ಆ್ಯಕ್ಷನ್ ಪ್ರಿಯರಿಗೆ ದರ್ಶನ್ ಲಾಂಗ್ ಹಿಡಿದು ದರ್ಶನ ಕೊಟ್ಟಿದ್ದಾರೆ. ಈಗಾಗಲೇ ಯೂಟ್ಯೂಬ್‍ನಲ್ಲಿ 4 ಲಕ್ಷಕ್ಕೂ ಅಧಿಕ ವ್ಯೂವ್ಸ್ ಕಂಡಿದೆ. 67 ಸಾವಿರಕ್ಕೂ ಅಧಿಕ ಮಂದಿ ಲೈಕ್ಸ್ ಮಾಡಿದ್ದಾರೆ.

    ‘ಒಡೆಯ’ ಸಿನಿಮಾದಲ್ಲಿ ದರ್ಶನ್ ಗಜೇಂದ್ರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಎಂ.ಡಿ. ಶ್ರೀಧರ್ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು, ಎನ್.ಸಂದೇಶ್ ನಿರ್ಮಾಣ ಮಾಡುತ್ತಿದ್ದಾರೆ. ಇದೊಂದು ಅಣ್ಣ-ತಮ್ಮಂದಿರ ಸಿನಿಮಾವಾಗಿದೆ.

    ದರ್ಶನ್ ಅವರು ಕೂಡ ಟ್ವೀಟ್ ಮಾಡುವ ಮೂಲಕ ಜನರಿಗೆ ಕನ್ನಡ ರಾಜ್ಯೋತ್ವವಕ್ಕೆ ಶುಭಾ ಕೋರಿದ್ದಾರೆ. “ಕನ್ನಡ ನಾಡಲ್ಲಿ ಹುಟ್ಟಿಬರಲು ಪುಣ್ಯ ಮಾಡಿರಲೇಬೇಕು. ಸಮಸ್ತ ಕನ್ನಡ ಕುಲಕೋಟಿಗೆ ಕನ್ನಡ ರಾಜ್ಯೋತ್ಸವದ ಹಾರ್ಧಿಕ ಶುಭಾಶಯಗಳು. ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ” ಎಂದು ಬರೆದು ವಿಶ್ ಮಾಡಿದ್ದಾರೆ.

  • ಕನ್ನಡ ರಾಜ್ಯೋತ್ಸವಕ್ಕೆ ದರ್ಶನ್ ಭರ್ಜರಿ ಗಿಫ್ಟ್ – ಒಡೆಯ ಚಿತ್ರದ ಟೀಸರ್ ರಿಲೀಸ್

    ಕನ್ನಡ ರಾಜ್ಯೋತ್ಸವಕ್ಕೆ ದರ್ಶನ್ ಭರ್ಜರಿ ಗಿಫ್ಟ್ – ಒಡೆಯ ಚಿತ್ರದ ಟೀಸರ್ ರಿಲೀಸ್

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡ ರಾಜ್ಯೋತ್ಸವ ದಿನದಂದು ತಮ್ಮ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ನೀಡಲಿದ್ದಾರೆ.

    ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ನಮ್ಮ ‘ಒಡೆಯ’ ಚಿತ್ರದ ಟೀಸರ್ ಇದೇ ನವೆಂಬರ್ 1 ರಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‍ನಲ್ಲಿ ಬೆಳಗ್ಗೆ 9:55ಕ್ಕೆ ಬಿಡುಗಡೆಯಾಗಲಿದೆ. ನಿಮ್ಮ ಪ್ರೀತಿ-ಪ್ರೋತ್ಸಾಹ- ಆಶೀರ್ವಾದ ಸದಾ ಹೀಗೆ ಇರಲಿ. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ.

    ಶನಿವಾರ ದರ್ಶನ್, “ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು. ಈ ಹಬ್ಬವು ನಿಮ್ಮ ಬಾಳಿಗೆ ಮತ್ತಷ್ಟು ಹೊಸ ಬೆಳಕನ್ನು ತರಲಿ ಎಂದು ಆಶಿಸುತ್ತೇನೆ. ಒಡೆಯ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರದ ಟೀಸರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ? ನಿಮ್ಮ ಪ್ರೀತಿಗೆ ಸದಾ ಆಭಾರಿ” ಎಂದು ಟ್ವೀಟ್ ಮಾಡಿದ್ದರು.

    ಇತ್ತೀಚೆಗೆಷ್ಟೆ ಒಡೆಯ ಚಿತ್ರತಂಡ ಸ್ವಿಡ್ಜರ್ ಲೆಂಡ್‍ಗೆ ತೆರಳಿದ್ದು, ಅಲ್ಲಿನ ಸಾಂಗ್ ಶೂಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದೊಂದು ಅಣ್ಣ-ತಮ್ಮಂದಿರ ಸಿನಿಮಾವಾಗಿದ್ದು, ದರ್ಶನ್ ಗಜೇಂದ್ರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

    ಒಡೆಯ ತಮಿಳಿನ ‘ವೀರಂ’ ಚಿತ್ರದ ರಿಮೇಕ್ ಆಗಿದ್ದು, ಎಂ.ಡಿ ಶ್ರೀಧರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ದರ್ಶನ್ ಅವರಿಗೆ ನಾಯಕಿಯಾಗಿ ರಾಘವಿ ತಿಮ್ಮಯ್ಯ, ಯಶಸ್ ಸೂರ್ಯ, ಚಿಕ್ಕಣ್ಣ ಸೇರಿದಂತೆ ಹಲವು ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

  • ದರ್ಶನ್ – ಪ್ರಕಾಶ್ ಪುನರ್ ಮಿಲನ!

    ದರ್ಶನ್ – ಪ್ರಕಾಶ್ ಪುನರ್ ಮಿಲನ!

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಬರ್ಟ್ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡು ಕೊಂಚ ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ. ಇನ್ನೇನು ಗೌರಿ ಗಣೇಶ ಹಬ್ಬ ಮುಗಿಯುತ್ತಲೇ ಆ ಚಿತ್ರದ ಎರಡನೇ ಹಂತದ ಚಿತ್ರೀಕರಣ ನಡೆಯಲಿದೆ. ರಾಬರ್ಟ್ ಜೊತೆಗೇ ಮತ್ತೊಂದಷ್ಟು ಚಿತ್ರಗಳೂ ಕೂಡಾ ದರ್ಶನ್ ಅವರ ಲಿಸ್ಟಿನಲ್ಲಿ ಸಾಲುಗಟ್ಟಿ ನಿಂತಿವೆ. ಹಾಗಿದ್ದರೂ ಕೂಡಾ ದರ್ಶನ್ ಮತ್ತೊಂದು ಚಿತ್ರವನ್ನೀಗ ಒಪ್ಪಿಕೊಂಡಿದ್ದಾರೆಂಬ ಮಾತುಗಳೂ ಕೇಳಿ ಬರುತ್ತಿವೆ.

    ವರ್ಷಗಳ ಹಿಂದೆ ದರ್ಶನ್ ಅಭಿನಯ ತಾರಕ್ ಚಿತ್ರ ತೆರೆ ಕಂಡಿತ್ತು. ಆ ಚಿತ್ರವನ್ನು ನಿರ್ದೇಶನ ಮಾಡಿದ್ದವರು ಮಿಲನ ಪ್ರಕಾಶ್. ಆ ಕಾಲಕ್ಕೆ ದರ್ಶನ್ ಪಕ್ಕಾ ಮಾಸ್ ಚಿತ್ರಗಳತ್ತಲೇ ಹೆಚ್ಚಾಗಿ ಒತ್ತು ನೀಡಿದ್ದರು. ಅಂಥಾ ಹೊತ್ತಿನಲ್ಲಿಯೇ ದರ್ಶನ್ ಅಭಿಮಾನಿಗಳು ಬಹುಕಾಲದಿಂದ ಕಾಯುತ್ತಿದ್ದ ಫ್ಯಾಮಿಲಿ ಸಬ್ಜೆಕ್ಟಿನ ಕಥೆಯೊಂದಿಗೆ ಪ್ರಕಾಶ್ ಮೋಡಿ ಮಾಡಿದ್ದರು. ಈ ಫ್ಯಾಮಿಲಿ ಎಂಟರ್ ಟೈನರ್ ಚಿತ್ರ ಸೂಪರ್ ಹಿಟ್ ಆಗಿತ್ತು. ಅದರಲ್ಲಿನ ದರ್ಶನ್ ನಟನೆಯಂತೂ ಎಲ್ಲರ ಮೆಚ್ಚುಗೆ ಗಳಿಸಿಕೊಂಡಿತ್ತು. ಹೀಗೆ ಹಿಟ್ ಸಿನಿಮಾ ನಿರ್ದೇಶನ ಮಾಡಿದ್ದ ಪ್ರಕಾಶ್ ದರ್ಶನ್ ಅವರ ಮತ್ತೊಂದು ಚಿತ್ರ ನಿರ್ದೇಶನ ಮಾಡೋದು ಗ್ಯಾರೆಂಟಿ ಎನ್ನಲಾಗುತ್ತಿದೆ.

    ಇದಕ್ಕೆ ದರ್ಶನ್ ಕಡೆಯಿಂದಲೇ ಒಪ್ಪಿಗೆ ಸಿಕ್ಕಿದೆಯಂತೆ. ಪ್ರಕಾಶ್ ಕೂಡಾ ಸಮರ್ಥ ತಂಡದೊಂದಿಗೆ ಎಲ್ಲ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳಲು ತಯಾರಾಗಿದ್ದಾರೆ. ಸದ್ಯದಲ್ಲಿಯೇ ಟೈಟಲ್ ಲಾಂಚ್ ಮಾಡಿ, ಈ ಚಿತ್ರವನ್ನು ಅಧಿಕೃತಗೊಳಿಸಿ ನಂತರ ಉಳಿದ ಕೆಲಸ ಮಾಡೋ ನಿರ್ಧಾರ ಅವರದ್ದು. ಹಾಗಂತ ಈ ಚಿತ್ರ ಈ ಕೂಡಲೇ ಶುರುವಾಗುತ್ತೆ ಅಂತೇನಲ್ಲ. ದರ್ಶನ್ ಈಗ ರಾಬರ್ಟ್ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಅದಾದ ನಂತರ ಒಡೆಯ ಮತ್ತು ವೀರ ಮದಕರಿ ನಾಯಕ ಚಿತ್ರಗಳು ಅವರಿಗಾಗಿ ಕಾದಿವೆ. ಇದಾದ ನಂತರ ಮಿಲನ ಪ್ರಕಾಶ್ ನಿರ್ದೇಶನದ ಚಿತ್ರ ಶುರುವಾಗಲಿದೆಯಂತೆ.

  • ದಸರಾ ಹಬ್ಬಕ್ಕೆ ದರ್ಶನ ನೀಡಲಿದ್ದಾನಾ ‘ಒಡೆಯ’?

    ದಸರಾ ಹಬ್ಬಕ್ಕೆ ದರ್ಶನ ನೀಡಲಿದ್ದಾನಾ ‘ಒಡೆಯ’?

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕುರುಕ್ಷೇತ್ರದ ವಿಚಾರದಲ್ಲಿಯೂ ಬಾಕ್ಸಾಫೀಸ್ ಸುಲ್ತಾನ ಎಂಬ ಬಿರುದಿಗೆ ತಕ್ಕುದಾಗಿಯೇ ಅಬ್ಬರಿಸಿದ್ದಾರೆ. ಅದೇನೇ ಅಡೆತಡೆಗಳು ಬಂದರೂ ಕುರುಕ್ಷೇತ್ರದತ್ತ ಜನರ ಪ್ರೀತಿ, ಆದರಗಳು ಮಾತ್ರ ಕಡಿಮೆಯಾಗಿಲ್ಲ. ಕನ್ನಡ ಮಾತ್ರವಲ್ಲದೇ ವಿದೇಶಗಳಲ್ಲಿಯೂ ಕೂಡಾ ಕುರುಕ್ಷೇತ್ರ ಮನಗೆದ್ದಿದೆ. ಕೌರವೇಂದ್ರನಾಗಿ ದರ್ಶನ್ ಎಲ್ಲರಿಗೂ ಆಪ್ತವಾಗಿದ್ದಾರೆ. ಕುರುಕ್ಷೇತ್ರದ ಬಿಸಿ ಹೀಗೆ ಮುಂದುವರೆದಿರುವಾಗಲೇ ದರ್ಶನ್ ‘ಒಡೆಯ’ನಾಗಿ ಶೀಘ್ರದಲ್ಲಿಯೇ ಅಭಿಮಾನಿಗಳ ಮುಂದೆ ಅವತರಿಸೋ ಸನ್ನಾಹದಲ್ಲಿದ್ದಾರೆ.

    ಯಜಮಾನ ಚಿತ್ರದ ಬಳಿಕ ದರ್ಶನ್ ಒಡೆಯ ಚಿತ್ರದ ಚಿತ್ರೀಕರಣವನ್ನು ವೇಗವಾಗಿ ಮುಗಿಸಿಕೊಂಡಿದ್ದರು. ಪಕ್ಕಾ ಪ್ಲ್ಯಾನಿಂಗ್‍ನೊಂದಿಗೆ ಬೇಗನೆ ಈ ಸಿನಿಮಾದ ಚಿತ್ರೀಕರಣ ಸಮಾಪ್ತಿಯಾಗಿದೆ. ಇದೀಗ ಇದರ ಅಂತಿಮ ಕೆಲಸ ಕಾರ್ಯಗಳು ನಡೆಯುತ್ತಿವೆ. ಈ ತಿಂಗಳ ಕಡೇಯ ಹೊತ್ತಿಗೆಲ್ಲ ಇದರ ಎಲ್ಲ ಕೆಲಸವೂ ಸಮಾಪ್ತಿಯಾಗುತ್ತದೆ. ಆದ್ದರಿಂದಲೇ ಮುಂದಿನ ತಿಂಗಳು ದಸರಾ ಗಿಫ್ಟ್ ಎಂಬಂತೆ ಒಡೆಯನ ದರ್ಶನ ಮಾಡಿಸಲು ಚಿತ್ರತಂಡ ತಯಾರಾಗಿರುವಂತಿದೆ.

    ಎಲ್ಲವೂ ಅಂದುಕೊಂಡಂತೆಯೇ ಆದರೆ ಒಡೆಯ ಚಿತ್ರ ಸೆಪ್ಟೆಂಬರ್ 22ರಂದು ತೆರೆಗಾಣೋ ಸಾಧ್ಯತೆಗಳಿವೆ. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಮೂಡಿ ಬಂದಿರೋ ಈ ಅದ್ದೂರಿ ಚಿತ್ರ ಎಚ್‍ಡಿ ಶ್ರೀಧರ್ ನಿರ್ದೇಶನದಲ್ಲಿ ಮೂಡಿ ಬಂದಿದೆ. ದರ್ಶನ್ ಖದರ್ ಅನ್ನು ಮತ್ತಷ್ಟು ಮಿರುಗಿಸುವಂಥಾ ಕಥೆ ಹೊಂದಿರೋ ಈ ಚಿತ್ರದ ಬಗ್ಗೆ ಅವರ ಅಭಿಮಾನಿಗಳು ಕೂಡಾ ಭಾರೀ ಕುತೂಹಲವಿಟ್ಟುಕೊಂಡು ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ಯಶಸ್ ಮತ್ತು ಪಂಕಜ್ ದರ್ಶನ್ ಸಹೋದರರಾಗಿ ನಟಿಸಿದ್ದಾರೆ. ಬೃಹತ್ ತಾರಾಬಳಗವನ್ನು ಹೊಂದಿರೋ ಈ ಚಿತ್ರ ಮುಂದಿನ ತಿಂಗಳು ತೆರೆಗಾಣೋದು ಬಹುತೇಕ ಖಚಿತ.

  • ಒಡೆಯನಾಗಿ ಅಖಾಡಕ್ಕಿಳಿದ ದರ್ಶನ್

    ಒಡೆಯನಾಗಿ ಅಖಾಡಕ್ಕಿಳಿದ ದರ್ಶನ್

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇಷ್ಟುದಿನ ‘ಯಜಮಾನ’ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಈಗ ಆ ಸಿನಿಮಾದ ಚಿತ್ರೀಕರಣವನ್ನು ಮುಗಿಸಿ ‘ಒಡೆಯ’ ಸಿನಿಮಾಕ್ಕೆ ಎಂಟ್ರಿ ಕೊಟ್ಟಿದ್ದಾರೆ.

    ನಟ ದರ್ಶನ್ ಅವರು ಇಂದಿನಿಂದ ‘ಒಡೆಯ’ ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದು, ಮೊದಲು ದಿನವೇ ನೀಲಿ ಬಣ್ಣದ ಶರ್ಟ್ ಮತ್ತು ಬಿಳಿ ಪಂಚೆ ಧರಿಸಿ ಸೆಟ್‍ಗೆ ಒಡೆಯ ಲುಕ್ ನಲ್ಲಿ ಎಂಟ್ರಿಕೊಟ್ಟಿದ್ದಾರೆ. ದರ್ಶನ್ ಅವರು ಒಡೆಯನ ರಾಯಲ್ ಲುಕ್ ನೋಡಿ ಶೂಟಿಂಗ್‍ಗೆ ಬಂದ ತಕ್ಷಣ ಅಭಿಮಾನಿಗಳು ಮುಗಿಬಿದ್ದಿದ್ದು, ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಆ ಫೋಟೋಗಳನ್ನು ಅಭಿಮಾನಿಗಳು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡುತ್ತಿದ್ದಾರೆ.

    ‘ಒಡೆಯ’ ಸಿನಿಮಾವನ್ನು ಎಂ.ಡಿ.ಶ್ರೀಧರ್ ನಿರ್ದೇಶನ ಮಾಡುತ್ತಿದ್ದು, ದರ್ಶನ್ ಮತ್ತು ಶ್ರೀಧರ್ ಕಾಂಬಿನೇಷನ್‍ನಲ್ಲಿ ಮೂಡಿ ಬರುತ್ತಿರುವ ಮೂರನೇ ಸಿನಿಮಾವಾಗಿದೆ. ಈ ಸಿನಿಮಾದಲ್ಲಿ ಕೊಡಗಿನ ಬೆಡಗಿ ರಾಘವಿ ದರ್ಶನ್ ಅವರಿಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

    ದರ್ಶನ್ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿದ್ದು, ಇತ್ತೀಚೆಗಷ್ಟೆ ‘ಯಜಮಾನ’ ಸಿನಿಮಾದ ಹಾಡೊಂದರ ಶೂಟಿಂಗ್ ಗಾಗಿ ಸ್ವೀಡನ್‍ ಗೆ ಚಿತ್ರತಂಡ ತೆರಳಿತ್ತು. ಈ ಸಿನಿಮಾವನ್ನು ಬಿ. ಸುರೇಶ್ ಮತ್ತು ಅವರ ಪತ್ನಿ ಶೈಲಜಾ ನಾಗ್ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಸದ್ಯಕ್ಕೆ ಯಜಮಾನ ಸಿನಿಮಾದ ಚಿತ್ರೀಕರಣ ಮುಗಿದೆ. ಇಂದು ‘ಒಡೆಯ’ ಸಿನಿಮಾದ ಚಿತ್ರೀಕರಣದಲ್ಲಿ ದರ್ಶನ್ ಬ್ಯುಸಿಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ‘ಒಡೆಯ’ನಿಗಾಗಿ ಮಿನಿ ಸ್ಕಾಟ್ಲೆಂಡ್‍ನಿಂದ ಹಾರಿ ಬಂದ ಕನ್ನಡದ ಒಡತಿ!

    ‘ಒಡೆಯ’ನಿಗಾಗಿ ಮಿನಿ ಸ್ಕಾಟ್ಲೆಂಡ್‍ನಿಂದ ಹಾರಿ ಬಂದ ಕನ್ನಡದ ಒಡತಿ!

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ಸಿನಿಮಾ `ಒಡೆಯ’. ಈ ಸಿನಿಮಾದ ಟೈಟಲ್ ಕಾಂಟ್ರವರ್ಸಿಯಿಂದ ಬಜಾರ್ ಲ್ಲಿ ಹವಾ ಎಬ್ಬಿಸಿತ್ತು. ಇದೀಗ ನಾಯಕಿ ಆಯ್ಕೆ ವಿಚಾರವಾಗಿ ಸುದ್ದಿಯಲ್ಲಿದೆ. ಕನ್ನಡತಿಯೇ ಬೇಕು ಅಂತ ಹಠಹಿಡಿದ ಚಿತ್ರತಂಡಕ್ಕೆ ಬೊಂಬೆಯಂತಹ ಬೆಡಗಿ ಸಿಕ್ಕಿದ್ದಾಳೆ.

    ಒಡೆಯ ಸಿನಿಮಾದ ಮೂಲಕ ಮತ್ತೊಬ್ಬ ಕನ್ನಡತಿಯನ್ನ ಪರಿಚಯಿಸಬೇಕು ಅನ್ನೋದು ಚಿತ್ರತಂಡದ ಮಹದಾಸೆಯಾಗಿತ್ತು. ಹೀಗಾಗಿ ಇಡೀ ಒಡೆಯ ಚಿತ್ರತಂಡ ಕನ್ನಡದ ಹುಡುಗಿಗಾಗಿ ಹುಡುಕಾಟದಲ್ಲಿ ನಿರತರಾಗಿದ್ದರು. ಅದರಂತೇ ಕನ್ನಡದ ಹೊಸ ಪ್ರತಿಭೆಗಳಿಗೆ ಮಣೆಹಾಕಿದ್ದರು. ಸಾಕಷ್ಟು ಜನ ನ್ಯೂ ಕಮ್ಮರ್  ಗಳು ಒಡೆಯ ಚಿತ್ರತಂಡವನ್ನ ಸಂಪರ್ಕ ಕೂಡ ಮಾಡಿದ್ದರು. ಆದರೆ ಸಾರಥಿಯ ಜತೆ ಸ್ಕ್ರೀನ್ ಶೇರ್ ಮಾಡುವ ಅವಕಾಶ ಕೊಡಗಿನ ಕಿನ್ನರಿಗೆ ಸಿಕ್ಕಿದೆ.

    ಕೊಡಗಿನ ಬೆಡಗಿ ರಾಘವಿ ‘ಒಡೆಯ’ ಸಿನಿಮಾಗೆ ಆಯ್ಕೆಯಾಗಿದ್ದಾರೆ. ಇವರು ಸಿನಿಮಾಗಾಗಿ ರಾಘವಿ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಶೀಘ್ರದಲ್ಲೇ ಒಡೆಯ ಸಿನಿಮಾದ ಫೋಟೋಶೂಟ್‍ನಲ್ಲಿ ರಾಘವಿ ಅವರು ಪಾಲ್ಗೊಳ್ಳಲಿದ್ದಾರೆ.

    ಎಂ.ಡಿ.ಶ್ರೀಧರ್ ಹಾಗೂ ದರ್ಶನ್ ಕಾಂಬಿನೇಷನ್‍ನಲ್ಲಿ ಬರುತ್ತಿರುವ ಮೂರನೇ ಸಿನಿಮಾ `ಒಡೆಯ’ ಆಗಿದೆ. ಒಡೆಯ ಸಿನಿಮಾಗೆ ನಟಿ ಮಾತ್ರವಲ್ಲ ಪ್ರತಿಯೊಬ್ಬ ಕಲಾವಿದರು, ತಂತ್ರಜ್ಞರು ಕನ್ನಡದವರೇ ಆಗಿರಬೇಕು ಎಂದು ದರ್ಶನ್ ತಿಳಿಸಿದ್ದರು. ಹೀಗಾಗಿಯೇ ಕನ್ನಡ ನೆಲದ ಕಲಾವಿದರು- ತಂತ್ರಜ್ಞರನ್ನ ಆಯ್ಕೆ ಮಾಡಲಾಗುತ್ತಿದೆ.

    ಈಗಾಗಲೇ, ದೇವರಾಜ್, ರವಿಶಂಕರ್, ಸಾಧುಕೋಕಿಲ, ಚಿಕ್ಕಣ್ಣ, ಚಿತ್ರಾಶೆಣೈ, ಪಂಕಜ್, ಯಶಸ್ ಸೂರ್ಯ, ಶರತ್ ಲೋಹಿತಾಶ್ವ, ಅವಿನಾಶ್, ಸೇರಿದಂತೆ ಹಲವರನ್ನ ಚಿತ್ರಕ್ಕೆ ಆಯ್ಕೆಮಾಡಲಾಗಿದೆ. ಸದ್ಯಕ್ಕೆ ಡಿಸೆಂಬರ್ ನಲ್ಲಿ ಒಡೆಯ ಸಿನಿಮಾದ ಶೂಟಿಂಗ್ ಶುರುವಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಪಘಾತದ ಬಳಿಕ ದರ್ಶನ್ ಸಿನಿಮಾ ಶೂಟಿಂಗ್‍ಗೆ ರೀ-ಎಂಟ್ರಿ!

    ಅಪಘಾತದ ಬಳಿಕ ದರ್ಶನ್ ಸಿನಿಮಾ ಶೂಟಿಂಗ್‍ಗೆ ರೀ-ಎಂಟ್ರಿ!

     ಕೆಲ ದಿನಗಳಿಂದ ಕೈಗಾಗಿರುವ ಫ್ರಾಕ್ಚರ್ ನಿಂದಾಗಿ ವಿಶ್ರಾಂತಿ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಸಿನಿಮಾ ಶೂಟಿಂಗ್‍ಗೆ ಮರಳಿದ್ದಾರೆ.

    ದರ್ಶನ್ ಕೈಯಲ್ಲಿ ಹಲವಾರು ಪ್ರಾಜೆಕ್ಟ್ ಗಳಿವೆ. ಯಾವುದೇ ಒಂದು ಅಡೆತಡೆಯಾದರೂ ಕೋಟಿ ಕೋಟಿ ನಷ್ಟ ಉಂಟಾಗುತ್ತೆ. ಇದನ್ನರಿತ ದರ್ಶನ್ ಮತ್ತೆ ಸಿನಿಮಾದಲ್ಲಿ ನಟಿಸುವುದ್ದಕ್ಕೆ ನಿರ್ಧರಿಸಿದ್ದಾರೆ. ದರ್ಶನ್ ಸ್ನೇಹಿತರು ಹಾಗೂ ಆಪ್ತರು ಹೇಳಿದಂತೆ ದರ್ಶನ್‍ಗೆ ಹೆಚ್ಚಿನ ವಿಲ್ ಪವರ್ ಇದೆ. ದೇಹದ ನೋವನ್ನು ವಿಲ್ ಪವರ್ ದೂರ ಮಾಡುತ್ತೆ. ಹೀಗಾಗಿ ಇನ್ನು ಕೆಲವೇ ದಿನದಲ್ಲಿ ದರ್ಶನ್ ಮತ್ತೆ ಸಿನಿಮಾ ಚಟುವಟಿಕೆಗಳಲ್ಲಿ ಭಾಗಿಯಾಗ್ತಾರೆ.

    ದರ್ಶನ್‍ಗೆ ಅಪಘಾತವಾಗೋದಕ್ಕೂ ಮೊದಲೇ `ಯಜಮಾನ’ ಚಿತ್ರದ ಟಾಕೀ ಭಾಗದ ಶೂಟಿಂಗ್ ಸಂಪೂರ್ಣ ಮುಗಿಸಿದ್ದರು. ‘ಒಡೆಯ’ ಸಿನಿಮಾದ ಒಂದು ಶೆಡ್ಯೂಲ್ ಕಂಪ್ಲೀಟ್ ಮಾಡಿದ್ದರು. ಅಪಘಾತವಾದ ಮರುದಿನದಿಂದ ಒಡೆಯ ಸಿನಿಮಾದ ಶೂಟಿಂಗ್ ಬೆಂಗಳೂರಿನಲ್ಲಿ ಶುರುವಾಗಬೇಕಿತ್ತು. ನಂತರ ಅದು ಪೋಸ್ಟ್ ಪೋನ್ ಆಯ್ತು. ಆದರೆ ಈ ಗ್ಯಾಪ್‍ನಲ್ಲಿ `ಯಜಮಾನ’ ಚಿತ್ರದ ಸಂಪೂರ್ಣ ಕೆಲಸವನ್ನು ಮುಗಿಸಿಕೊಡೋಕೆ ದರ್ಶನ್ ನಿರ್ಧರಿಸಿದ್ದಾರೆ.

    ಯಜಮಾನ ಚಿತ್ರದ ಎರಡು ಹಾಡಿನ ಚಿತ್ರೀಕರಣ ಈ ತಿಂಗಳು ನಡೆಯಬೇಕಿತ್ತು. ನಂತರದಲ್ಲಿ ದರ್ಶನ್ ಡಬ್ಬಿಂಗ್ ಕಾರ್ಯ ಮುಗಿಸಿವುದ್ದಕ್ಕೆ ನಿರ್ಧರಿಸಿದ್ದರು. ಆದರೆ ದರ್ಶನ್ ತಂಡದ ಸಮಯ ವೇಸ್ಟ್ ಮಾಡದೇ ಮುಂದಿನ ವಾರವೇ ಡಬ್ಬಿಂಗ್ ಕೆಲಸ ಶುರುಮಾಡುವುದ್ದಕ್ಕೆ ಯೋಚಿಸಿದ್ದರು. ಅಲ್ಲಿಗೆ ಒಂದೇ ತಿಂಗಳೊಳಗೆ ದರ್ಶನ್ ಸಿನಿಮಾ ಕೆಲಸ ಶುರು ಮಾಡಿದಂತಾಯ್ತು. ಹೀಗಾಗಿ ಅಂದುಕೊಂಡ ಸಮಯದಲ್ಲಿ ಶೂಟಿಂಗ್ ಮುಗಿಸಿಕೊಡೋಕೆ ದರ್ಶನ್ ಯೋಚಿಸಿ ಈ ತಿಂಗಳೊಳಗೆ `ಯಜಮಾನ’ ಚಿತ್ರದ ಡಬ್ಬಿಂಗ್ ಕಾರ್ಯವನ್ನ ಮುಗಿಸಿಕೊಡಲಿದ್ದಾರೆ.

    ಯಜಮಾನ ಡಬ್ಬಿಂಗ್ ಕೆಲಸಕ್ಕೇನೋ ದಾರಿ ಕಂಡುಕೊಂಡಾಯ್ತು. ಸಾಮಾನ್ಯವಾಗಿ ಮೂಳೆ ಫ್ರ್ಯಾಕ್ಚರ್ ಒಳಗಾದಾಗ ಕೈ ಅಲ್ಲಾಡಿಸಬಾರದು ಎಂದೇ ಸಿಮೆಂಟ್ ಬ್ಯಾಂಡೇಜ್ ಹಾಕಿರುತ್ತಾರೆ. ವೈದ್ಯರ ಸಲಹೆಯ ಮೇರೆಗೆ ಇನ್ನೂ ಒಂದು ತಿಂಗಳು ದರ್ಶನ್ ಬ್ಯಾಂಡೇಜ್ ತೆಗೆಯುವಂತೆ ಇಲ್ಲವೇ ಇಲ್ಲ. ಏಕೆಂದರೆ ಶೂಟಿಂಗ್‍ಗೆ ಒಮ್ಮೆ ಹೋದ ಮೇಲೆ ಫೈಟ್ ಡ್ಯಾನ್ಸ್ ಮಾಡಬೇಕು. ಸದ್ಯ ದರ್ಶನ್ ನವೆಂಬರ್ 20ರಿಂದ ಚಿತ್ರೀಕರಣಕ್ಕೆ ಎಂಟ್ರಿಯಾಗಲಿದ್ದಾರೆ.

    ಯಜಮಾನ ಚಿತ್ರದ ಬಾಕಿ ಎರಡು ಹಾಡನ್ನು ಯುರೋಪ್‍ನಲ್ಲಿ ಚಿತ್ರೀಕರಿಸೋಕೆ ಯೋಜನೆ ನಡೆದಿದೆ. ಚಿತ್ರೀಕರಣದ ದಿನಾಂಕಕ್ಕೆ ದಾಸ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ನವೆಂಬರ್ ತಿಂಗಳೊಳಗೆ ಯಜಮಾನ ಚಿತ್ರದ ಸಂಪೂರ್ಣ ಚಿತ್ರೀಕರಣ ಮುಗಿಸಿಕೊಡಲಿದ್ದಾರೆ. ಈಗಾಗಲೇ ಯಜಮಾನದ ನಿರ್ಮಾಪಕ ಬಿ ಸುರೇಶ್ ತಂಡ ಯುರೋಪ್ ದೇಶಗಳನ್ನು ಸುತ್ತಿ ಹಾಡು ಚಿತ್ರೀಕರಿಸುವ ಜಾಡು ಹುಡುಕಿಕೊಂಡು ಬಂದಿದೆ. ಸ್ವೀಡನ್ ಮುಂತಾದ ನಗರಗಳಲ್ಲಿ ಅದರ ಚಿತ್ರೀಕರಣ ನಡೆಯುತ್ತೆ.

    ಇಷ್ಟು ದಿನ ದರ್ಶನ್ ಕೈಗೆ ಬ್ಯಾಂಡೇಜ್ ಹಾಕಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ದರ್ಶನ್ ಮುಂದಿನ ಸಿನಿಮಾಗಳ ಶೂಟಿಂಗ್ ಶೆಡ್ಯೂಲ್ ಪಕ್ಕಾ ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ. ಪ್ಲ್ಯಾನ್ ಆದ ಚಿತ್ರಗಳ ಸ್ಕ್ರಿಪ್ಟ್ ಕೇಳಿ ಫೈನಲ್ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ‘ಒಡೆಯ’ ದರ್ಶನ್ ತಮ್ಮನಾಗಲಿದ್ದಾರಾ ಪಂಕಜ್?

    ‘ಒಡೆಯ’ ದರ್ಶನ್ ತಮ್ಮನಾಗಲಿದ್ದಾರಾ ಪಂಕಜ್?

    ಬೆಂಗಳೂರು: ತಂದೆ ಎಸ್ ನಾರಾಯಣ್ ಗರಡಿಯಲ್ಲಿ ನಟನಾಗಿ, ನಿರ್ದೇಶಕ ವಿಭಾಗದಲ್ಲಿಯೂ ಪಳಗಿಕೊಂಡಿರುವವರು ಪಂಕಜ್ ನಾರಾಯಣ್. ಇದೀಗ ಶ್ರೀಧರ್ ನಿರ್ದೇಶನದ ಒಡೆಯ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮನಾಗಿ ನಟಿಸಲು ಪಂಕಜ್ ತಯಾರಾಗಿದ್ದಾರೆ!

    ಚಿತ್ರತಂಡದ ಅಧಿಕೃತ ಮೂಲಗಳೇ ಈ ಸುದ್ದಿಯನ್ನು ಹೊರ ಹಾಕಿವೆ. ಅದರನ್ವಯ ದರ್ಶನ್ ಅವರ ತಮ್ಮನಾಗಿ ಪಂಕಜ್ ನಟಿಸಲಿರೋದು ಪಕ್ಕಾ. ಈ ಚಿತ್ರದಲ್ಲಿ ದರ್ಶನ್ ಅವರಿಗೆ ಇಬ್ಬರು ಸಹೋದರರಿರಲಿದ್ದಾರಂತೆ. ಅದರಲ್ಲೊಬ್ಬರಾಗಿ ಪಂಕಜ್ ನಟಿಸಿದರೆ, ಮತ್ತೋರ್ವ ಸಹೋದರನಾಗಿ ಯಶಸ್ ಸೂರ್ಯ ಅಭಿನಯಿಸಲಿದ್ದಾರೆ.

    ಚೆಲುವಿನ ಚಿಲಿಪಿಲಿ ಸೇರಿದಂತೆ ಒಂದಷ್ಟು ಚಿತ್ರಗಳಲ್ಲಿ ನಾಯಕನಾಗಿಯೂ ನಟಿಸಿದ್ದ ಪಂಕಜ್ ಒಂದು ಚಿತ್ರದಲ್ಲಿ ನಾರಾಯಣ್ ಅವರಿಗೆ ನಿರ್ದೇಶನ ವಿಭಾಗದಲ್ಲಿಯೂ ಸಾಥ್ ನೀಡಿದ್ದರು. ಇದೀಗ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹು ನಿರೀಕ್ಷಿತ ಒಡೆಯ ಚಿತ್ರದಲ್ಲಿ ನಟಿಸುವ ಸುವರ್ಣಾವಕಾಶವನ್ನೇ ಗಿಟ್ಟಿಸಿಕೊಂಡಿದ್ದಾರೆ.

    ಒಡೆಯ ಚಿತ್ರ ಇದೇ ತಿಂಗಳ ಹತ್ತನೇ ತಾರೀಕಿನಿಂದ ಮೈಸೂರಿನಲ್ಲಿ ಚಿತ್ರೀಕರಣ ಆರಂಭಿಸಲಿದೆ. ಈ ಚಿತ್ರದಲ್ಲಿ ದರ್ಶನ್ ತಮ್ಮಂದಿರ ಪಾತ್ರಗಳಿಗೂ ಮಹತ್ವ ಇದೆಯಂತೆ. ಅಂಥಾ ಪಾತ್ರದಲ್ಲಿ ಮಿಂಚಲು ಪಂಕಜ್ ರೆಡಿಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಒಡೆಯನಿಗೆ ಸಾಥ್ ನೀಡಿದ್ರು ರೆಬಲ್ ಅಂಬಿ

    ಒಡೆಯನಿಗೆ ಸಾಥ್ ನೀಡಿದ್ರು ರೆಬಲ್ ಅಂಬಿ

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರ ಹೊಸ ಸಿನಿಮಾ `ಒಡೆಯ’ ಲಾಂಚ್ ಆಗಿದೆ. ಈ ಸಿನಿಮಾಕ್ಕೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರು ಸಾಥ್ ನೀಡಿದ್ದಾರೆ.

    `ಒಡೆಯ’ ದರ್ಶನ್ ಅವರ 52ನೇ ಸಿನಿಮಾವಾಗಿದೆ. ಈ ಸಿನಿಮಾದ ಮುಹೂರ್ತ ಗುರುವಾರ ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಈ ಸಿನಿಮಾವನ್ನು ನಿರ್ಮಾಪಕ ಸಂದೇಶ್ ನಾಗರಾಜ್ ಅವರು ನಿರ್ಮಿಸುತ್ತಿದ್ದು, ನಿನ್ನೆ ಇವರ ಹುಟ್ಟುಹಬ್ಬವಾದ ಹಿನ್ನೆಲೆಯಲ್ಲಿ ಸಿನಿಮಾದ ಮುಹೂರ್ತ ಕಾರ್ಯಕ್ರಮವನ್ನು ನೆರವೇರಿಸಲಾಗಿದೆ. ಈ ಕಾರ್ಯಕ್ರಮಕ್ಕೆ ನಟ ಅಂಬರೀಶ್ ಭಾಗಿಯಾಗಿದ್ದು, ದರ್ಶನ್ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.


    ಸಂದೇಶ್ ನಾಗರಾಜ್ ಅವರು ನಟ ಅಂಬರೀಶ್ ಮತ್ತು ದರ್ಶನ್ ಇಬ್ಬರಿಗೂ ಆಪ್ತರಾಗಿದ್ದಾರೆ. ಈ ಹಿಂದೆ ಕೂಡ ಸಂದೇಶ್ ನಾಗರಾಜ್, ದರ್ಶನ್ ಅವರ `ಐರಾವತ’ ಸಿನಿಮಾಗೆ ಬಂಡವಾಳ ಹಾಕಿದ್ದರು. ಈಗ ಮತ್ತೆ ಇವರೇ ದರ್ಶನ್ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ನಟ ಅಂಬರೀಶ್ ಅವರ ಮಗ ಅಭಿಷೇಕ್ ಅವರ ಚೊಚ್ಚಲ ಚಿತ್ರ `ಅಮರ್’ ಸಿನಿಮಾ ಕೂಡ ಸಂದೇಶ್ ನಾಗರಾಜ್ ಅವರ ಬ್ಯಾನರ್ ನಲ್ಲಿ ಮೂಡಿ ಬರುತ್ತಿದೆ.

    `ಒಡೆಯ’ ಸಿನಿಮಾವನ್ನು ಎಂ.ಡಿ.ಶ್ರೀಧರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಶ್ರೀಧರ್ ದರ್ಶನ್ ಜೊತೆಗೆ `ಬುಲ್ ಬುಲ್’ ಸಿನಿಮಾವನ್ನು ಮಾಡಿದ್ದರು. ಈ ಸಿನಿಮಾದ ನಂತರ ಮತ್ತೆ ಈ ಜೋಡಿ ಒಂದಾಗಿದೆ. ಈ ಸಿನಿಮಾಕ್ಕೆ ಮೊದಲು `ಒಡೆಯರ್’ ಎಂದು ಟೈಟಲ್ ಇಡಲಾಗಿತ್ತು. ಆದರೆ ಇದು ಮೈಸೂರು ಒಡೆಯರ್ ಅವರ ಮನೆತನದ ಹೆಸರು ಎಂದು ಚರ್ಚೆಗೆ ಗ್ರಾಸವಾಗಿತ್ತು. ಬಳಿಕ `ಒಡೆಯರ್’ ಟೈಟಲನ್ನು `ಒಡೆಯ’ ಎಂದು ಬದಲಿಸಲಾಗಿದೆ. ಸದ್ಯ ದರ್ಶನ್ ಅವರು `ಕುರುಕ್ಷೇತ್ರ’, `ಯಜಮಾನ’ ಮತ್ತು `ಒಡೆಯ’ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://twitter.com/DarshanFanz/status/1030006819890974720