ಬಾಗಲಕೋಟೆ: ಮನೆಗಳ್ಳರ ಹಾವಳಿಗೆ ಬೇಸತ್ತ ಮಹಿಳೆಯರು ಒನಕೆ ಓಬವ್ವನ (Onake Obavva) ರೂಪ ತಾಳಿ ಗಮನ ಸೆಳೆದಿರುವ ಘಟನೆ ಬಾಗಲಕೋಟೆ (Bagalkote) ಜಿಲ್ಲೆಯ ಮುಧೋಳ ನಗರದಲ್ಲಿ ನಡೆದಿದೆ.
ನಗರದ ಜಯನಗರ ನಿವಾಸಿಗಳೇ ಓಬವ್ವನ ರೂಪ ತಾಳಿದ ಮಹಿಳೆಯರು. ಕಳ್ಳರ ಕಾಟದಿಂದ ಬೇಸತ್ತ ಮಹಿಳೆಯರು, ರಾತ್ರಿಪೂರ್ತಿ ಬಡಿಗೆ ಹಿಡಿದು ಬಡಾವಣೆಯಲ್ಲಿ ಗಸ್ತು ತಿರುಗಿ ಗಮನ ಸೆಳೆದಿದ್ದಾರೆ.
ಬಡಾವಣೆಯಲ್ಲಿ ಸಂಶಯಾಸ್ಪದ ವ್ಯಕ್ತಿಗಳು ಬಂದರೆ ವಿಚಾರಿಸಿ ನಂತರ ಅವರನ್ನು ಬಡಾ ವಣೆ ಒಳಗಡೆ ಬಿಟ್ಟುಕೊಳ್ಳುತ್ತಾರೆ. ಕೆಲ ದಿನಗಳ ಹಿಂದೆ ಜಯನಗರ ಬಡಾವಣೆಯಲ್ಲಿ ಸಂಶಯಾಸ್ಪದವಾಗಿ ತಿರುಗುತ್ತಿದ್ದ ಇಬ್ಬರು ವ್ಯಕ್ತಿಗಳ ಥಳಿಸಿ ಪೊಲೀಸರಿಗೂ ಒಪ್ಪಿಸಿದ್ದಾರೆ.
ನವದೆಹಲಿ: ಕನ್ನಡ ನಾಡಿನ ಹೆಮ್ಮೆ ಒನಕೆ ಓಬವ್ವನನ್ನು ಪ್ರಧಾನಿ ನರೇಂದ್ರ ಮೋದಿ ನೆನೆದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.
ಮೋದಿ ಟ್ವಿಟ್ಟರ್ ನಲ್ಲಿ, ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕøತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೋಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ಎಂದು ಕನ್ನಡದಲ್ಲಿ ಬರೆದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಜನವರಿ ಅಂತ್ಯಕ್ಕೆ ಬೊಮ್ಮಾಯಿ ಅಧಿಕಾರ ಹೋಗುತ್ತೆ: ಶಿವರಾಜ್ ತಂಗಡಗಿ
ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ.
ಇತ್ತೀಚೆಗೆ ಮೋದಿ ಅವರು ಕನ್ನಡದಲ್ಲಿಯೇ ರಾಜ್ಯೋತ್ಸವಕ್ಕೆ ಶುಭಕೋರಿದ್ದು, ಕನ್ನಡಿಗರು ಸಂತೋಷಪಟ್ಟಿದ್ದರು. ಇತ್ತ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಟ್ವಿಟ್ಟರ್ ನಲ್ಲಿ, ನಾಡಿನ ಸಮಸ್ತ ಜನತೆಗೆ ಚಿತ್ರದುರ್ಗದ ವೀರವನಿತೆ ಒನಕೆ ಓಬವ್ವ ಜಯಂತಿಯ ಹಾರ್ದಿಕ ಶುಭಕಾಮನೆಗಳು. ಓಬವ್ವನವರ ಶೌರ್ಯ, ಮಾತೃಭೂಮಿಯ ಮೇಲಿನ ಭಕ್ತಿ ಅನನ್ಯವಾದದ್ದು, ಅವರ, ಧೈರ್ಯ, ಸಾಹಸ ನಮಗೆ ಸ್ಪೂರ್ತಿ ನೀಡುತ್ತದೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.
“ನಾಡಿನ ಸಮಸ್ತ ಜನತೆಗೆ ಚಿತ್ರದುರ್ಗದ ವೀರವನಿತೆ ಒನಕೆ ಓಬವ್ವ ಜಯಂತಿಯ ಹಾರ್ದಿಕ ಶುಭಕಾಮನೆಗಳು. ಓಬವ್ವನವರ ಶೌರ್ಯ, ಮಾತೃಭೂಮಿಯ ಮೇಲಿನ ಭಕ್ತಿ ಅನನ್ಯವಾದದ್ದು, ಅವರ ಧೈರ್ಯ, ಸಾಹಸ ನಮಗೆ ಸ್ಪೂರ್ತಿ ನೀಡುತ್ತದೆ.#ಒನಕೆಓಬವ್ವpic.twitter.com/m0FlbZpsER
ಒನಕೆ ಓಬವ್ವ ಜನ್ಮ ದಿನವಾದ ನವೆಂಬರ್ 11ರಂದು ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿಯನ್ನಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಕನ್ನಡ ಮತ್ತ ಸಂಸ್ಕøತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ವೆಂಕಟೇಶಪ್ಪ ನಡಾವಳಿಗಳನ್ನು ಹೊರಡಿಸಿದ್ದು, ಒನಕೆ ಓಬವ್ವ ಹೆಸರು, ಚಿತ್ರದುರ್ಗ ಇತಿಹಾಸದಲ್ಲಿ ಮರೆಯಲಾಗದು. ಅವರನ್ನು ಕರ್ನಾಟಕ ವೀರ ವನಿತೆಯರಾದ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕ್ಕರ ಸಾಲಿನಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಇದನ್ನೂ ಓದಿ: ಶ್ರೀಕಿಗೂ, ನನ್ನ ಮಗನಿಗೂ ಯಾವುದೇ ರೀತಿಯ ಸಂಬಂಧವಿಲ್ಲ: ರುದ್ರಪ್ಪ ಲಮಾಣಿ
ಒನಕೆ ಓಬವ್ವ 18ನೇ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮುದ್ದಹನುಮಪ್ಪನ ಹೆಂಡತಿ. ಚಿತ್ರದುರ್ಗದ ಮೇಲೆ ಹೈದರಾಲಿ ಸೈನಿಕರು ಹಠತ್ತಾಗಿ ಆಕ್ರಮಣ ಮಾಡಿದಾಗ ಓಬವ್ವ ತನ್ನ ಒನಕೆಯನ್ನು ಅಸ್ತ್ರವನ್ನಾಗಿ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿದ್ದರು. ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ್ರು ಸೈನಿಕರನ್ನು ತನ್ನ ಒನಕೆಯಿಂದಲೇ ಕೊಂದರು. ಕೊನೆಯಲ್ಲಿ ಎದುರಾಳಿಯು ಬೆನ್ನಹಿಂದೆ ಬಂದದ್ದನ್ನು ಗಮನಿಸಲಾಗದೇ ಶುತ್ರುವಿನ ಕತ್ತಿಗೆ ಬಲಿಯಾದರು. ಅಂದಿನಿಂದ ಅವರು ಒನಕೆ ಓಬವ್ವ ಎಂದು ಪ್ರಸಿದ್ಧಿ ಹೊಂದಿದ್ದಾರೆ.
ಬೆಂಗಳೂರು: ಒನಕೆ ಓಬವ್ವ ಜನ್ಮ ದಿನವಾದ ನವೆಂಬರ್ 11ರಂದು ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿಯನ್ನಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ಕನ್ನಡ ಮತ್ತ ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ವೆಂಕಟೇಶಪ್ಪ ನಡಾವಳಿಗಳನ್ನು ಹೊರಡಿಸಿದ್ದು, ಒನಕೆ ಓಬವ್ವ ಹೆಸರು, ಚಿತ್ರದುರ್ಗ ಇತಿಹಾಸದಲ್ಲಿ ಮರೆಯಲಾಗದು. ಅವರನ್ನು ಕರ್ನಾಟಕ ವೀರ ವನಿತೆಯರಾದ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕ್ಕರ ಸಾಲಿನಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪುನೀತ್ ನೆನಪಿಗಾಗಿ ಎದೆ ಮೇಲೆ ಹಚ್ಚೆ ಹಾಕಿಸಿಕೊಂಡ ಅಭಿಮಾನಿ
ಒನಕೆ ಓಬವ್ವ 18ನೇ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮುದ್ದಹನುಮಪ್ಪನ ಹೆಂಡತಿ. ಚಿತ್ರದುರ್ಗದ ಮೇಲೆ ಹೈದರಾಲಿ ಸೈನಿಕರು ಹಠತ್ತಾಗಿ ಆಕ್ರಮಣ ಮಾಡಿದಾಗ ಓಬವ್ವ ತನ್ನ ಒನಕೆಯನ್ನು ಅಸ್ತ್ರವನ್ನಾಗಿ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿದ್ದರು. ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ್ರು ಸೈನಿಕರನ್ನು ತನ್ನ ಒನಕೆಯಿಂದಲೇ ಕೊಂದರು. ಕೊನೆಯಲ್ಲಿ ಎದುರಾಳಿಯು ಬೆನ್ನಹಿಂದೆ ಬಂದದ್ದನ್ನು ಗಮನಿಸಲಾಗದೇ ಶುತ್ರುವಿನ ಕತ್ತಿಗೆ ಬಲಿಯಾದರು. ಅಂದಿನಂದ ಅವರು ಒನಕೆ ಓಬವ್ವ ಎಂದು ಪ್ರಸಿದ್ಧಿ ಹೊಂದಿರುತ್ತಾರೆ. ಇದನ್ನೂ ಓದಿ: 46 ವರ್ಷಕ್ಕೆ ನನ್ನ ತಮ್ಮ ದೇವರಿಗೆ ತುಂಬಾ ಇಷ್ಟ ಆಗ್ಬಿಟ್ಟ: ಶಿವಣ್ಣ
ಈ ಮೇಲ್ಕಂಡಗಳ ಅಂಶಗಳ ಹಿನ್ನಲೆಯಲ್ಲಿ ಒನಕೆ ಓಬವ್ವರ ಜನ್ಮ ದಿನವಾದ ನವೆಂಬರ್ 11 ಅನ್ನು ಒನಕೆ ಓಬವ್ವ ಜಯಂತಿಯನ್ನಾಗಿ ಆಚರಣೆ ಮಾಡುವಂತೆ ಘೋಷಿಸಲಾಗಿದೆ. ಅದರಂತೆ ನವೆಂಬರ್ 11ರಂದು ಒನಕೆ ಓಬವ್ವ ಜಯಂತಿಯನ್ನು ರಾಜ್ಯಾದ್ಯಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸಲು ಸರ್ಕಾರ ಆದೇಶಿಸಿದೆ ಎಂದು ತಿಳಿಸಿದ್ದಾರೆ.
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಎಂದ ಕ್ಷಣ ವೀರವನಿತೆ ಒನಕೆ ಓಬವ್ವಳ ಸಾಹಸ ಕಣ್ಮುಂದೆ ಬರುತ್ತೆ. ಆಕೆ ಹೈದರಾಲಿ ಸೈನಿಕರ ವಿರುದ್ಧ ಒನಕೆ ಹಿಡಿದು ವೀರಾವೇಶದಿಂದ ಹೋರಾಡಿ ಕೋಟೆಯನ್ನು ರಕ್ಷಿಸಿದ ಸಾಹಸವನ್ನು ದುರ್ಗದ ಜನರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಆದರೆ ಚಿತ್ರದುರ್ಗ ಜಿಲ್ಲಾಡಳಿತಕ್ಕೆ ಮಾತ್ರ ಆ ಓಬವ್ವಳ ನೆನಪೇ ಇಲ್ಲದಂತಾಗಿದೆ.
ರಾಜ್ಯ ಸರ್ಕಾರ ಪ್ರತಿಷ್ಠೆಯ ಪ್ರಶ್ನೆಯಾಗಿ ಟಿಪ್ಪು ಜಯಂತಿಯನ್ನು ಹಠ ಹಿಡಿದು ಮಾಡುತ್ತಿದೆ. ಆದರೆ ಅದೇ ಟಿಪ್ಪುವಿನ ತಂದೆ ಹೈದರಾಲಿಯ ಸೈನ್ಯವನ್ನು ದುರ್ಗಾದ ಏಳುಸುತ್ತಿನ ಕೋಟೆಯಿಂದ ಹಿಮ್ಮೆಟ್ಟಿಸಿದ ವೀರ ವನಿತೆ ಒನಕೆ ಓಬವ್ವಳನ್ನು ಮರೆತೇ ಬಿಟ್ಟಿದೆ. ಚಿತ್ರದುರ್ಗ ಜಿಲ್ಲಾಡಳಿತ 2012 ಮತ್ತು 2015ರಲ್ಲಿ ಒನಕೆ ಓಬವ್ವಳ ಜಯಂತಿ ಆಯೋಜಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ.
ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಛಲವಾದಿ ಗುರುಪೀಠದ ಬಸವನಾಗಿದೇವ ಶರಣರು ಓಬವ್ವನ ವಿಗ್ರಹಕ್ಕೆ ಹೂಮಾಲೆ ಹಾಕಿ ಪೂಜೆ ಸಲ್ಲಿಸಿ ಸಾಂಕೇತಿಕವಾಗಿ ಒನಕ ಓಬವ್ವಳ ಸ್ಮರಣೆ ಮಾಡಿದರು. ಒನಕೆ ಓಬವ್ವ ಸ್ಮಾರಕ ಮತ್ತು ಜಯಂತಿ ಶೀಘ್ರದಲ್ಲೇ ಜಾರಿ ಮಾಡುವಂತೆ ಆಗ್ರಹಿಸಿದ್ದಾರೆ.
ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಆಂಜನೇಯ ಅವರನ್ನು ಕೇಳಿದರೆ ಈ ಬಗ್ಗೆ ಚರ್ಚಿಸಲು ಶೀಘ್ರದಲ್ಲಿ ಸಭೆ ಕರಿತೀವಿ. ಸ್ಮಾರಕ ನಿರ್ಮಾಣ ಜಯಂತಿ ಮಾಡಲು ಕ್ರಮ ಕೈಗೊಳ್ತೇವೆ ಎಂದು ಭರವಸೆ ನೀಡಿದ್ದಾರೆ.
ಜೀವದ ಹಂಗು ತೊರೆದು ಹೋರಾಡಿದ್ದ ಒನಕೆ ಓಬವ್ವಳನ್ನು ಸ್ಮರಿಸಬೇಕಾಗಿರುವುದು ಸರ್ಕಾರದ ಕರ್ತವ್ಯ. ಇನ್ನಾದರು ಸರ್ಕಾರ ಈ ಕಡೆ ಗಮನ ಹರಸಲಿ ಎನ್ನುವುದು ಕೋಟೆ ನಾಡಿನ ಜನರ ಆಗ್ರಹವಾಗಿದೆ.