Tag: ಒಮಾನ್

  • ಒಮಾನ್‌ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ- 13 ಮಂದಿ ದುರ್ಮರಣ

    ಒಮಾನ್‌ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ- 13 ಮಂದಿ ದುರ್ಮರಣ

    – ನೋಡನೋಡ್ತಿದ್ದಂತೇ ನೀರಿನಲ್ಲಿ ಕೊಚ್ಚಿ ಹೋದ ವಾಹನಗಳು

    ಮಸ್ಕತ್:‌ ಒಮಾನ್‌ನಲ್ಲಿ ಸೋಮವಾರ ಭಾರೀ ಮಳೆ (Rain In Oman) ಮುಂದುವರಿದಿದ್ದು, ಹಠಾತ್‌ ಪ್ರವಾಹ ಸೃಷ್ಟಿಯಾಗಿದೆ. ಪರಿಣಾಮ 13 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ನೋಡ ನೋಡುತ್ತಿದ್ದಂತೆಯೇ ವಾಹನಗಳು ಕೊಚ್ಚಿ ಹೋಗಿವೆ.

    ಉತ್ತರ ಅಲ್ ಶರ್ಕಿಯಾ ಗವರ್ನರೇಟ್‌ನಲ್ಲಿ ನಾಗರಿಕ ರಕ್ಷಣಾ ಮತ್ತು ಅಂಬುಲೆನ್ಸ್ ವಿಭಾಗದ ಶೋಧ ತಂಡಗಳ ಕಾರ್ಯಾಚರಣೆಯಿಂದಾಗಿ ಓರ್ವನ ಶವವನ್ನು ಹೊರತೆಗೆಯಲಾಗಿದೆ. ಮಗು ಸೇರಿದಂತೆ ಉಳಿದ ಮೂವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಪ್ರವಾಹದಿಂದಾಗಿ ಭಾನುವಾರ ಕನಿಷ್ಟ 12 ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇದರಲ್ಲಿ 9 ವಿದ್ಯಾರ್ಥಿಗಳು, ಇಬ್ಬರು ಸ್ಥಳೀಯ ನಿವಾಸಿಗಳು ಮತ್ತು ವಲಸಿಗರೊಬ್ಬರು ಸೇರಿದ್ದಾರೆ ಎಂಬುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದಿನ 3 ದಿನ ಒಣಹವೆ – ಏ.18 ರಿಂದ ವಿವಿಧೆಡೆ ಮಳೆ

    ಧಾರಾಕಾರ ಮಳೆಯಿಂದಾಗಿ ಒಮಾನ್‌ನ ಹಲವು ಭಾಗಗಳಲ್ಲಿ ಭಾರೀ ಪ್ರವಾಹ ಉಂಟಾಗಿದೆ. ಜನರು ತಮ್ಮ ಮನೆಗಳಲ್ಲಿ ಸಿಲುಕಿಕೊಂಡಿದ್ದಾರೆ. ಒಮಾನ್‌ನ ಬೀದಿಗಳಲ್ಲಿ ಪ್ರವಾಹದ ನೀರು ಹರಿಯುತ್ತಿದ್ದಂತೆ ವಾಹನಗಳು ಜಲಾವೃತಗೊಂಡಿರುವ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರಾಯಲ್ ಓಮನ್ ಪೊಲೀಸ್, ರಾಯಲ್ ಆರ್ಮಿ ಆಫ್ ಒಮಾನ್, ನಾಗರಿಕ ರಕ್ಷಣಾ ಪ್ರಾಧಿಕಾರ ಮತ್ತು ಅಂಬುಲೆನ್ಸ್ ತಂಡಗಳು ಶಾಲೆಗಳಿಂದ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದವು.

    https://twitter.com/Khaledjelassi10/status/1779633187901104443

    ತುರ್ತು ನಿರ್ವಹಣೆಗಾಗಿ ಒಮಾನ್‌ನ ರಾಷ್ಟ್ರೀಯ ಸಮಿತಿಯು ಮಳೆಯಿಂದ ಪ್ರಭಾವಿತವಾಗಿರುವ ಎಲ್ಲಾ ಗವರ್ನರೇಟ್‌ಗಳನ್ನು ಎಚ್ಚರಿಸಿದೆ ಎಂದು ವರದಿ ತಿಳಿಸಿದೆ. ಒಮಾನ್ ಹೊರತುಪಡಿಸಿ, ಯುಎಇ ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು, ಮಿಂಚು ಮತ್ತು ಗುಡುಗು ಸೇರಿದಂತೆ ಭಾರೀ ಮಳೆಯಾಗುವ ಸಾಧ್ಯತೆಗಳಿರುವುದಾಗಿ ವರದಿಯಾಗಿದೆ.

  • ಭಾರತಕ್ಕೆ ಭೇಟಿ ನೀಡಲಿದ್ದಾರೆ ಒಮಾನ್ ರಕ್ಷಣಾ ಅಧಿಕಾರಿಗಳು

    ಭಾರತಕ್ಕೆ ಭೇಟಿ ನೀಡಲಿದ್ದಾರೆ ಒಮಾನ್ ರಕ್ಷಣಾ ಅಧಿಕಾರಿಗಳು

    ನವದೆಹಲಿ: ಜನವರಿ 30 ರಿಂದ ಫೆಬ್ರವರಿ 3 ರವರೆಗೆ ಒಮಾನ್ ರಕ್ಷಣಾ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ನಾಸರ್ ಅಲ್ ಝಾಬಿ ಸೇರಿದಂತೆ ಹಲವಾರು ಉನ್ನತ ಮಟ್ಟದ ರಕ್ಷಣಾ ಅಧಿಕಾರಿಗಳು ಭಾರತಕ್ಕೆ ಭೇಟಿ ನೀಡಲಿದ್ದಾರೆ.

    ಭೇಟಿ ಬಳಿಕ ಭಾರತ ಮತ್ತು ಒಮಾನ್ ರಕ್ಷಣಾ ಸಂಬಂಧಗಳನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲಿದ್ದಾರೆ. ಜಂಟಿ ಮಿಲಿಟರಿ ಸಹಕಾರ ಸಮಿತಿ(ಜೆಎಂಎಂಸಿ) ಭಾರತ ಮತ್ತು ಒಮಾನ್ ನಡುವಿನ ರಕ್ಷಣಾ ವೇದಿಕೆಯಾಗಿದೆ.

    ಕೊನೆಯ (ಜೆಎಂಸಿಸಿ) 2018 ರಲ್ಲಿ ಒಮಾನ್‍ನಲ್ಲಿ ನಡೆದಿತ್ತು. ಕೋವಿಡ್ ಬಿಕ್ಕಟ್ಟಿನಿಂದಾಗಿ 3 ವರ್ಷಗಳ ಅಂತರದ ನಂತರ ನಡೆಯುತ್ತಿರುವ ಭೇಟಿ ಇದಾಗಿದೆ. ಭಾರತ ಪ್ರವಾಸದ ವೇಳೆ ಝಾಬಿ ಅವರು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ. ಭೇಟಿಯ ವೇಳೆ ರಕ್ಷಣಾ ಉತ್ಪನ್ನಗಳ ಖರೀದಿ ಸಂಬಂಧ ಮಾತುಕತೆ ನಡೆಯುವ ಸಾಧ್ಯತೆಯೂ ಇದೆ. ಇದನ್ನೂ ಓದಿ: ಇರಾಕ್ ಏರ್‌ಸ್ಟ್ರೈಕ್ ದಾಳಿ- 6 ಇಸ್ಲಾಮಿಕ್ ಸ್ಟೇಟ್ ಉಗ್ರರ ಹತ್ಯೆ

    ಫೆಬ್ರವರಿಯಲ್ಲಿ ಒಮಾನ್‍ನ ವಾಯುಪಡೆಯ ಮುಖ್ಯಸ್ಥರು ಮತ್ತು ರಾಯಲ್ ನೌಕಾಪಡೆ ಮುಖ್ಯಸ್ಥರು ಸಹ ಭಾರತಕ್ಕೆ ಭೇಟಿಯಾಗಲಿದ್ದಾರೆ

    ಒಮಾನ್‍ನ ನೌಕಾ ಮತ್ತು ವಾಯುಪಡೆ ಮುಖ್ಯಸ್ಥರ ಭೇಟಿಯು 5 ವರ್ಷಗಳ ನಂತರ ನಡೆಯುತ್ತಿದೆ. ಫೆಬ್ರವರಿಯಲ್ಲಿ ಭಾರತ ಮತ್ತು ಒಮಾನ್ ವಾಯುಪಡೆಯ ನಡುವೆ ಜೋಧ್‍ಪುರದಲ್ಲಿ ಜಂಟಿಯಾಗಿ ವೈಮಾನಿಕ ಸಮರ ಅಭ್ಯಾಸ ನಡೆಯಲಿದೆ. ಒಮಾನ್‍ನಿಂದ 150 ಕ್ಕೂ ಹೆಚ್ಚು ಸಿಬ್ಬಂದಿ ಈ ಅಭ್ಯಾಸದಲ್ಲಿ ಭಾಗವಹಿಸಲಿದ್ದಾರೆ.  ಇದನ್ನೂ ಓದಿ: ಬಾಪು ಆದರ್ಶಗಳನ್ನು ಮತ್ತಷ್ಟು ಜನಪ್ರಿಯಗೊಳಿಸುತ್ತೇವೆ: ಮೋದಿ

    ಒಮಾನ್ ದೇಶವು ಭಾರತದ ಅತ್ಯಂತ ನಿಕಟ ರಕ್ಷಣಾ ಪಾಲುದಾರರ ದೇಶಗಳಲ್ಲಿ ಒಂದಾಗಿದೆ. ಗಲ್ಫ್ ವಲಯದಲ್ಲಿರುವ ದೇಶಗಳ ಪೈಕಿ ಭಾರತದ ಮೂರು ಸೇನೆಯ ಜೊತೆ ಜಂಟಿಯಾಗಿ ಸಮರಭ್ಯಾಸ ನಡೆಸುತ್ತಿರುವ ಏಕೈಕ ದೇಶ ಒಮಾನ್ ಆಗಿದೆ.