Tag: ಒಳ ಹರಿವು

  • ಕೊಡಗಿನಲ್ಲಿ ಭಾರೀ ಮಳೆ- ಕೆಆರ್‍ಎಸ್ ಡ್ಯಾಂ ಒಳ ಹರಿವು ಹೆಚ್ಚಳ

    ಕೊಡಗಿನಲ್ಲಿ ಭಾರೀ ಮಳೆ- ಕೆಆರ್‍ಎಸ್ ಡ್ಯಾಂ ಒಳ ಹರಿವು ಹೆಚ್ಚಳ

    – ಕಾವೇರಿ ನದಿಗೆ 15 ಸಾವಿರ ಕ್ಯೂಸೆಕ್ ನೀರು

    ಮಂಡ್ಯ: ಕೊಡಗು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‍ಎಸ್ ಜಲಾಶಯಕ್ಕೆ 10 ಸಾವಿರ ಕ್ಯೂಸೆಕ್‍ಗೂ ಅಧಿಕ ನೀರು ಹರಿದು ಬರುತ್ತಿದೆ.

    ಕಳೆದ ತಿಂಗಳು ಸುರಿದ ಧಾರಾಕಾರ ಮಳೆಯಿಂದಾಗಿ ಕೆಆರ್‍ಎಸ್ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿತ್ತು. ಹೀಗಾಗಿ ಸಿಎಂ ಯಡಿಯೂರಪ್ಪನವರು ಜಲಾಶಯಕ್ಕೆ ಬಾಗೀನವನ್ನು ಅರ್ಪಿಸಿದರು. ಇದಾದ ಬಳಿಕ ಕೊಡಗು ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿತ್ತು. ಇದೀಗ ಕಳೆದ ಎರಡ್ಮೂರು ದಿನಗಳಿಂದ ಮತ್ತೆ ಮಳೆ ಸುರಿಯಲು ಆರಂಭವಾಗಿದೆ. ಹೀಗಾಗಿ ಸದ್ಯ ಕೆಆರ್‍ಎಸ್ ಜಲಾಶಯಕ್ಕೆ 10,035 ಕ್ಯೂಸೆಕ್ ನೀರು ಹರಿದು ಬರುತ್ತಿದೆ.

    ಇಂದು ಹಾಗೂ ನಾಳೆ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಹೀಗಾಗಿ ಪ್ರಸ್ತುತ ಕೆಆರ್‍ಎಸ್ ಜಲಾಶಯದಿಂದ ಕಾವೇರಿ ನದಿಗೆ 15 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದೆ. ಕೆಆರ್‍ಎಸ್ ಜಲಾಶಯದ ಇಂದಿನ ಮಟ್ಟ 124.65 ಅಡಿ ಇದ್ದು, ಒಳ ಹರಿವು 10,035 ಕ್ಯೂಸೆಕ್ ಇದೆ. ಹೊರ ಹರಿವು 15,681 ಕ್ಯೂಸೆಕ್ ಇದೆ. ಕೆಆರ್‍ಎಸ್ ಜಲಾಶಯದಲ್ಲಿ ಪ್ರಸ್ತುತ 49.243 ಟಿಎಂಸಿ ನೀರು ಸಂಗ್ರಹವಾಗಿದೆ.

  • ಕೆಆರ್‌ಎಸ್‌ ಭರ್ತಿ – 42 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

    ಕೆಆರ್‌ಎಸ್‌ ಭರ್ತಿ – 42 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

    ಮಂಡ್ಯ: ಕಳೆದ ನಾಲ್ಕು ದಿನದಲ್ಲಿ ದಾಖಲೆಯ ಪ್ರಮಾಣದ ನೀರು ಹರಿದು ಬಂದಿದ್ದರಿಂದ ಕೆಆರ್‌ಎಸ್‌ ಜಲಾಶಯ ಮಂಗಳವಾರ ಭರ್ತಿಯಾಗಿದೆ.

    ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಗರಿಷ್ಟ ಮಟ್ಟ 124.80 ಅಡಿ ಆಗಿದ್ದು ಈಗ 124.30 ಅಡಿ ನೀರು ಸಂಗ್ರಹಗೊಂಡಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾದ ಪರಿಣಾಮ ಎರಡು ದಿನಗಳ ಹಿಂದೆ 2 ಲಕ್ಷ ಕ್ಯೂಸೆಕ್ ಅಧಿಕ ನೀರು ಬರುತಿತ್ತು. ಈಗ ಮಳೆ ಪ್ರಮಾಣ ತಗ್ಗಿದ್ದು, 50 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದೆ.

    ಈಗ ಒಳಹರಿವು 54,496 ಕ್ಯೂಸೆಕ್ ಇದ್ದು, 43,093 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಸದ್ಯ ಈಗ ಒಟ್ಟು 48.754 ಟಿಎಂಸಿ ನೀರು ಸಂಗ್ರಹಗೊಂಡಿದೆ.

    ಕಾವೇರಿ ಜಲಾನಯನ ಪ್ರದೇಶ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹೇಮಾವತಿ ಮತ್ತು ಹಾರಂಗಿ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತಿತ್ತು. ಪರಿಣಾಮ ಭಾನುವಾರ ಸಂಜೆ 2,05,852 ಕ್ಯುಸೆಕ್ ಇದ್ದ ಒಳ ಹರಿವಿನ ಪ್ರಮಾಣ ಸೋಮವಾರ ಬೆಳಗ್ಗೆ 2.04 ಲಕ್ಷ ಕ್ಯುಸೆಕ್ ಇತ್ತು.

    ಸೋಮವಾರ ಬೆಳಗ್ಗೆ 122.40 ಅಡಿ ಇದ್ದ ನೀರಿನ ಮಟ್ಟವು ಹೊರ ಹರಿವಿನಿಂದ ಹೆಚ್ಚಳದಿಂದಾಗಿ ಸಂಜೆ ವೇಳೆಗೆ 121.80 ಅಡಿಗೆ ಇಳಿದಿತ್ತು. ಸೋಮವಾರ ಬೆಳಿಗ್ಗೆಯಿಂದ 1.64 ಲಕ್ಷ ಕ್ಯೂಸೆಕ್ ನೀರು ಬಿಡಲಾಗುತ್ತಿತ್ತು. ನಂತರ ಒಳ ಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ಹೊರ ಹರಿವನ್ನು 50 ಸಾವಿರಕ್ಕೆ ಇಳಿಸಲಾಗಿತ್ತು. ಇದೀಗ ಒಳ ಹರಿವಿಗೆ ತಕ್ಕಂತೆ ಹೊರ ಹರಿವನ್ನು ತಗ್ಗಿಸಿದ್ದು 43,093 ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ.

    2012 ರಿಂದ 2017ರವರೆಗೆ ಬರ ಬಂದಿದ್ದರಿಂದ ಜಲಾಶಯ ಭರ್ತಿಯಾಗಿರಲಿಲ್ಲ. ಕಳೆದ ವರ್ಷ ಜುಲೈ 15 ರಂದು ಕೆಆರ್‌ಎಸ್‌ ಭರ್ತಿಯಾಗಿತ್ತು. ಈ ಮೂಲಕ ದಶಕದ ಬಳಿಕ ಕೆಆರ್‌ಎಸ್‌ ಅವಧಿಗೂ ಮುನ್ನವೇ ಭರ್ತಿಯಾಗಿತ್ತು. ಈ ಹಿಂದೆ 2007ರಲ್ಲಿ ಕೆಆರ್‌ಎಸ್‌ ಜುಲೈ ತಿಂಗಳಿನಲ್ಲಿ ಭರ್ತಿಯಾಗಿತ್ತು.