Tag: ಓದು

  • ಓದಿನ ಕಡೆ ಗಮನಕೊಡುವಂತೆ ಹೇಳಿದ್ದಕ್ಕೆ ಫುಟ್ಬಾಲ್ ಪ್ಲೇಯರ್ ಸೂಸೈಡ್

    ಓದಿನ ಕಡೆ ಗಮನಕೊಡುವಂತೆ ಹೇಳಿದ್ದಕ್ಕೆ ಫುಟ್ಬಾಲ್ ಪ್ಲೇಯರ್ ಸೂಸೈಡ್

    ಧಾರವಾಡ: ಓದಿನ ಕಡೆ ಗಮನ ಕೊಡು ಎಂದು ಪೋಷಕರು ಹೇಳಿದ್ದಕ್ಕೆ ಯುವಕನೋರ್ವ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ.

    ಮೃತನನ್ನು ಚೇತನ್ ತೊಂಡಿಹಾಳ ಎಂದು ಗುರುತಿಸಲಾಗಿದೆ. ಈತ ಧಾರವಾಡದ ಸಾಧನಕೇರಿಯ ನಿವಾಸಿಯೇ ನಗರದ ಕಲಗೇರಿ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಒಳ್ಳೆಯ ಫುಟ್ಬಾಲ್ ಪ್ಲೇಯರ್ (FootBall Player) ಆಗಿದ್ದ ಈತನಿಗೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದನು. ಇದನ್ನೂ ಓದಿ: ಮಲೆನಾಡಲ್ಲಿ ಮತ್ತೆ ನಕ್ಸಲರ ಹೆಜ್ಜೆ – ಹೈ ಅಲರ್ಟ್ ಘೋಷಣೆ

    ನಾಲ್ಕು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಚೇತನ್, ಅದರಿಂದ ಹೊರ ಬರಲಾಗದೇ ಒದ್ದಾಡುತ್ತಿದ್ದನು. ಆತನ ಕುಟುಂಬಸ್ಥರು ಆತನಿಗೆ ಬೆಂಗಳೂರಿನ ಮಾನಸಿಕ ಆಸ್ಪತ್ರೆಯಲ್ಲೂ ಚಿಕಿತ್ಸೆ ಕೊಡಿಸಿದ್ದರು. ಆದರೆ ಖಿನ್ನತೆಯಿಂದ ಹೊರಬರಲಾಗದೇ ಚೇತನ್ ಕೊನೆಗೆ ಕೆಲಗೇರಿ ಕೆರೆಗೆ ಹಾರಿ ತನ್ನ ಪ್ರಾಣ ಕಳೆದುಕೊಂಡಿದ್ದಾನೆ.

    ಚೇತನ್ ತನಗಿಷ್ಟ ಬಂದಂತೆ ಇರಲಿ ಎಂದು ನಾವು ಒತ್ತಡ ಹಾಕಿರಲಿಲ್ಲ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಆತನಿಗೆ ಚಿಕಿತ್ಸೆ ಸಹ ಕೊಡಿಸಿದ್ದೆವು. ಆದರೆ ಆತ ಮನೆ ಬಿಟ್ಟು ಹೊರಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಚೇತನ್ ಪೋಷಕರು ಇದೀಗ ಕಣ್ಣೀರು ಹಾಕುತ್ತಿದ್ದಾರೆ.

    ಈ ಸಂಬಂಧ ಉಪನಗರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

  • ಓದಿನಿಂದ ತಪ್ಪಿಸಿಕೊಳ್ಳಲು ಸ್ನೇಹಿತನನ್ನೇ ಹತ್ಯೆ ಮಾಡಿದ ಬಾಲಕ

    ಓದಿನಿಂದ ತಪ್ಪಿಸಿಕೊಳ್ಳಲು ಸ್ನೇಹಿತನನ್ನೇ ಹತ್ಯೆ ಮಾಡಿದ ಬಾಲಕ

    ಲಕ್ನೋ: ಓದಿನಿಂದ ತಪ್ಪಿಸಿಕೊಳ್ಳಲು ಅಪ್ರಾಪ್ತ ಬಾಲಕನೊಬ್ಬನು ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಂದ ಘಟನೆ ಗಾಜಿಯಾಬಾದ್‍ನಲ್ಲಿ ನಡೆದಿದೆ.

    ಗಾಜಿಯಾಬಾದ್‍ನ ಆಕಾಶ್ ನಗರ ಪ್ರದೇಶದ ನಿವಾಸಿ ನೀರಜ್ (13)ನನ್ನು 16 ವರ್ಷದ ಬಾಲಕ ಕೊಂದಿದ್ದಾನೆ. ನೀರಜ್‍ನೊಂದಿಗೆ ಅಪ್ರಾಪ್ತ ಬಾಲಕ ಕೆಲ ತಿಂಗಳಿಂದ ಸ್ನೇಹ ಬೆಳಸಿದ್ದ. ಈ ವೇಳೆ ನಿರಜ್‌ ದುರ್ಬಲನಾಗಿರುವುದನ್ನು ಗಮನಿಸಿ ಕಳೆದ 5 ತಿಂಗಳಿನಿಂದ ನೀರಜ್‍ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ. ಈ ಹಿನ್ನೆಲೆಯಲ್ಲಿ ನೀರಜ್‍ನನ್ನು ಕಾರು ನೋಡುವ ನೆಪದಲ್ಲಿ ಕರೆದೊಯ್ದಿದ್ದಾನೆ. ಅಲ್ಲಿ ಬಿದ್ದಿದ್ದ ಬಿಯರ್ ಬಾಟಲ್‍ನ್ನು ಎತ್ತುಕೊಂಡು ನೀರಜ್‍ನ ಕತ್ತು ಸೀಳಿದ್ದಾನೆ. ಬಳಿಕ ನೀರಜ್ ಶವವನ್ನು ಪೊದೆಯಲ್ಲಿ ಬಚ್ಚಿಟ್ಟು ಪರಾರಿಯಾಗಿದ್ದಾನೆ.

    ಘಟನೆ ಸಂಬಂಧ ನೀರಜ್ ತಂದೆ ಪೊಲೀಸರಿಗೆ ದೂರು ನೀಡಿದ್ದು, ಅಪ್ರಾಪ್ತ ಬಾಲಕ ತಮ್ಮ ಮನೆಗೆ ಬಂದು ನೀರಜ್‍ನನ್ನು ಕರೆದುಕೊಂಡು ಹೋಗಿದ್ದಾನೆ ಎಂದು ತಿಳಿಸಿದ್ದಾರೆ. ಅವರ ಹೇಳಿಕೆಯ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, 16 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಕಾನೂನಿನಲ್ಲಿ ಪೋಷಕರ ಅನುಮತಿಯಿಲ್ಲದೇ ಅಪ್ರಾಪ್ತೆ ವಿವಾಹವಾಗಬಹುದು: ಕೋರ್ಟ್‌

    POLICE JEEP

    ವಿಚಾರಣೆ ವೇಳೆ ಬಾಲಕನ ತಂದೆ ತಾಯಿ ಓದು ಓದು ಎಂದು ಪ್ರತಿನಿತ್ಯ ಹಿಂಸಿಸುತ್ತಿದ್ದರು. ಆದರೆ ಆತನಿಗೆ ಓದನ್ನು ಮುಂದುವರಿಸಲು ಇಷ್ಟವಿರಲಿಲ್ಲ. ಅದರಿಂದ ತಪ್ಪಿಸಿಕೊಳ್ಳಲು ಸಿನಿಮಾಗಳನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ. ಈ ಹಿನ್ನೆಲೆಯಲ್ಲಿ ಮತ್ತೊಬ್ಬನ್ನು ಕೊಲ್ಲಲು ಯತ್ನಿದ್ದ. ಆದರೆ ಧೈರ್ಯ ಸಾಲದೇ ಸುಮ್ಮನಾಗಿದ್ದ. ಇದಾದ ಬಳಿಕ ನೀರಜ್ ದುರ್ಬಲನಾಗಿದ್ದನ್ನು ಗಮನಿಸಿ ಅವನನ್ನು ಕೊಂದಿರುವುದಾಗಿ ತಿಳಿಸಿದ್ದಾನೆ. ಪ್ರಕರಣ ಸಂಬಂಧಿಸಿ ಪೊಲೀಸರು ಎಲ್ಲಾ ಕೋನದಲ್ಲೂ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಡಿಕೇರಿ ಚಲೋ ಕೈಬಿಟ್ಟ ಕಾಂಗ್ರೆಸ್ ನಿಲುವು ಸ್ವಾಗತಿಸಿದ ಮಾಜಿ ಸಿಎಂ ಬಿಎಸ್‍ವೈ

    Live Tv
    [brid partner=56869869 player=32851 video=960834 autoplay=true]

  • ವಿದ್ಯಾಭ್ಯಾಸಕ್ಕೆ ಬಡತನ ಅಡ್ಡಿ- ಯುವತಿ ಆತ್ಮಹತ್ಯೆಗೆ ಶರಣು

    ವಿದ್ಯಾಭ್ಯಾಸಕ್ಕೆ ಬಡತನ ಅಡ್ಡಿ- ಯುವತಿ ಆತ್ಮಹತ್ಯೆಗೆ ಶರಣು

    ದಾವಣಗೆರೆ: ಮನೆಯಲ್ಲಿ ಬಡತನದ ಕಾರಣಕ್ಕೆ ಮುಂದೆ ಓದಿಸುವುದು ಕಷ್ಟ ಎಂದು ತಾಯಿ ಹೇಳಿದ್ದರಿಂದ ಮನನೊಂದ ಪ್ರತಿಭಾನ್ವಿತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಉಜ್ಜಪ್ಪ ವಡೇರಹಳ್ಳಿಯಲ್ಲಿ ನಡೆದಿದೆ.

    ಉಜ್ಜಪ್ಪ ವಡೇರಹಳ್ಳಿಯಲ್ಲಿ ಗ್ರಾಮದ ನಾಗರಾಜಪ್ಪ ಮತ್ತು ಚಂದ್ರಮ್ಮನ ಅವರ ಪುತ್ರಿ ರಕ್ಷಿತಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು, ದಾವಣಗೆರೆಯ ಸೀತಮ್ಮ ಪಿಯು ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಓದುತ್ತಿದ್ದಳು. ಕೆಲ ದಿನಗಳ ಹಿಂದೆ ಪಿಯುಸಿ ಪಾಸ್ ಆಗಿದ್ದು, ಮುಂದೆ ಪದವಿ ವ್ಯಾಸಂಗ ಮಾಡಬೇಕು ಎನ್ನುವ ಆಸೆಯನ್ನು ಹೊಂದಿದ್ದಳು. ಆದರೆ ರಕ್ಷಿತಾ ತಂದೆ ನಾಗರಾಜಪ್ಪ ಮೂರು ವರ್ಷದ ಹಿಂದೆ ಧರ್ಮಸ್ಥಳಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದರು. ಇದಾದ ಬಳಿಕ ತಾಯಿ ಚಂದ್ರಮ್ಮ ಕೂಲಿ ಮಾಡಿ ಮಗಳನ್ನು ಓದಿಸುತ್ತಿದ್ದರು.

    ಲಾಕ್‍ಡೌನ್ ಕಾರಣ ಚಂದ್ರಮ್ಮಗೆ ಕೂಲಿ ಕೆಲಸ ಸಿಗದಂತಾಗಿದ್ದು, ಆರ್ಥಿಕ ಸಮಸ್ಯೆ ಸೃಷ್ಟಿಯಾಯಿತು. ಮನೆಯಲ್ಲಿ ಬಡತನ ಇದೆ, ಮುಂದಿನ ವಿದ್ಯಾಭ್ಯಾಸಕ್ಕೆ ಕಳುಹಿಸುವ ಶಕ್ತಿ ಇಲ್ಲ, ಮನೆಯಲ್ಲೇ ಇರುವಂತೆ ಮಗಳಿಗೆ ಹೇಳಿದ್ದಾರೆ. ಇದು ರಕ್ಷಿತಾಗೆ ಸಾಕಷ್ಟು ನೋವು ತಂದಿದ್ದು, ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಉಜ್ಜಪ್ಪ ವಡೇರಹಳ್ಳಿ ಗ್ರಾಮದಲ್ಲಿ ವ್ಯಾಸಂಗ ಮಾಡಿ 10ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆಯುವ ಮೂಲಕ ಪ್ರಥಮ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದಳು. ನಂತರ ದಾವಣಗೆರೆಯ ಪರಿಶಿಷ್ಟ ಜಾತಿ ವಿದ್ಯಾರ್ಥಿನಿಯರ ನಿಲಯದಲ್ಲಿದ್ದು, ಸೀತಮ್ಮ ಕಾಲೇಜಿನ ಕಲಾ ವಿಭಾಗದಲ್ಲಿ ಪಿಯುಸಿ ಓದಿ ಶೇ.60ರಷ್ಟು ಅಂಕಗಳನ್ನು ಪಡೆದಿದ್ದಳು. ಮುಂದೆ ಬಿಎ ಅಥವಾ ಬಿಕಾಂ ಮಾಡಬೇಕೆಂಬ ಆಸೆ ಇತ್ತು. ಆದರೆ ತಾಯಿ ಚಂದ್ರಮ್ಮಗೆ ಮುಂದೆ ಓದಿಸುವಷ್ಟು ಶಕ್ತಿ ಇರಲಿಲ್ಲ. ಇದನ್ನೇ ಮನಸ್ಸಿನಲ್ಲಿಟ್ಟುಕೊಂಡ ರಕ್ಷಿತಾ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮನೆಯಲ್ಲಿ ಬೈದಿದ್ದಕ್ಕೆ 1.5 ಲಕ್ಷದೊಂದಿಗೆ ಗೋವಾಗೆ ತೆರಳಿ ಪಾರ್ಟಿ ಮಾಡಿದ ಬಾಲಕ!

    ಮನೆಯಲ್ಲಿ ಬೈದಿದ್ದಕ್ಕೆ 1.5 ಲಕ್ಷದೊಂದಿಗೆ ಗೋವಾಗೆ ತೆರಳಿ ಪಾರ್ಟಿ ಮಾಡಿದ ಬಾಲಕ!

    – ಓದು ಅಂತ ಬುದ್ಧಿ ಹೇಳಿದ್ದಕ್ಕೆ ಹಣದೊಂದಿಗೆ ಪರಾರಿ

    ಗಾಂಧಿನಗರ: ಮಕ್ಕಳನ್ನು ಓದುವಂತೆ ಪೋಷಕರು ಬೈಯುವುದು ಸಾಮಾನ್ಯ. ಈ ಬೈಗುಳ ಕೆಲವೊಮ್ಮೆ ನೋವುಂಟು ಮಾಡುತ್ತದೆ. ಆದರೆ ಪೋಷಕರು ನಮಗೆ ಬುದ್ಧಿ ಹೇಳುವುದು ನಮ್ಮ ಒಳಿತಿಗಾಗಿಯೇ ಆಗಿರುತ್ತದೆ. ಅದೇ ರೀತಿ ಗುಜರಾತ್ ನ ವಡೋದರಾದ ಹುಡುಗನೊಬ್ಬ ಹೆತ್ತವರು ಬೈದರೆಂದು ಸಿಟ್ಟಿನಿಂದ ಮನೆಯಿಂದ ಎಸ್ಕೇಪ್ ಆಗಿ ಗೋವಾದಲ್ಲಿ ಪಾರ್ಟಿ ಮಾಡಿರುವ ಅಚ್ಚರಿಯ ಘಟನೆಯೊಂದು ನಡೆದಿದೆ.

    ಹೌದು. ಈ ಘಟನೆ ನಡೆದು ಕೆಲ ದಿನಗಳಾದರೂ ಇದೀಗ ಭಾರೀ ಸುದ್ದಿಯಲ್ಲಿದೆ. ಕಳೆದ ವಾರ ಪೋಷಕರು ಹಾಗೂ ಅಜ್ಜ-ಅಜ್ಜಿ 14 ವರ್ಷದ ಬಾಲಕನಿಗೆ ಓದುವಂತೆ ಬುದ್ಧಿ ಹೇಳಿದ್ದಾರೆ. ಆದರೆ ಇದರಿಂದ ನೊಂದ 10ನೇ ತರಗತಿ ಬಾಲಕ ರೈಲು ಹತ್ತಿ ಗೋವಾಗೆ ತೆರಳಲಲು ಪ್ಲಾನ್ ಮಾಡಿದ್ದಾನೆ. ಅಂತೆಯೇ ವಡೋದರಾ ರೈಲ್ವೇ ನಿಲ್ದಾಣಕ್ಕೂ ಬಂದಿದ್ದಾನೆ. ಆದರೆ ಬಾಲಕನಲ್ಲಿ ಆಧಾರ್ ಕಾರ್ಡ್ ಇಲ್ಲದಿದ್ದರಿಂದ ಆತನಿಗೆ ಟಿಕೆಟ್ ಸಿಕ್ಕಿರಲಿಲ್ಲ. ನಂತರ ಆತ ಪುಣೆಗೆ ಬಸ್ಸಿನಲ್ಲಿ ತೆರಳಲು ನಿರ್ಧರಿಸಿದ್ದಾನೆ. ಅಲ್ಲಿಂದ ಗೋವಾಕ್ಕೆ ಮತ್ತೊಂದು ಬಸ್ ಹತ್ತಿದ್ದಾನೆ.

    ಗೋವಾಕ್ಕೆ ತಲುಪಿದ ಬಾಲಕ ಅಲ್ಲಿ ಕ್ಲಬ್, ರೆಸ್ಟೋರೆಂಟ್ ನಲ್ಲಿ ಸುತ್ತಾಡಿಕೊಂಡು ಎಂಜಾಯ್ ಮಾಡಿದ್ದಾನೆ. ತನ್ನ ಕೈಯಲ್ಲಿದ್ದ ಹಣವೆಲ್ಲ ಮುಗಿಯುತ್ತಿದ್ದಂತೆಯೇ ಆತ ಮತ್ತೆ ಪುಣೆಯತ್ತ ಬರಲು ತಿರ್ಮಾನಿಸಿದ್ದಾನೆ. ಅಲ್ಲದೆ ಹೊಸ ಸಿಮ್ ಕಾರ್ಡ್ ತೆಗೆದುಕೊಂಡಿದ್ದಾನೆ.

    ಇತ್ತ ಮಗನನ್ನು ಹುಡುಕಾಡಿ ಬೇಸತ್ತ ಪೋಷಕರು ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬೆನ್ನಲ್ಲೇ ಪೋಷಕರಿಗೆ ಮತ್ತೊಂದು ಶಾಕ್ ಕಾದಿದ್ದು, ಮನೆಯಲ್ಲಿದ್ದ 1.5 ಲಕ್ಷ ರೂ. ನಗದು ಕೂಡ ಕಾಣೆಯಾಗಿತ್ತು. ಪೋಷಕರ ದೂರು ದಾಖಲಿಸಿಕೊಂಡ ಪೊಲೀಸರು ಬಾಲಕನ ಪತ್ತೆಗೆ ತೀವ್ರ ಹುಡುಕಾಟ ಆರಂಭಿಸಿದ್ದಾರೆ. ಬಾಲಕನ ಮೊಬೈಲ್ ಫೋನ್ ಸ್ವಿಚ್ಛ್ ಆಫ್ ಎಂದು ಬರುತ್ತಿದ್ದರಿಂದ ಪೊಲೀಸರಿಗೆ ಆತನ ಪತ್ತೆ ಮಾಡಲು ಅಸಾಧ್ಯವಾಗಿತ್ತು.

    ಇನ್ನು ಬಾಲಕ ಫೋನ್ ಸ್ವಿಚ್ಛ್ ಆಫ್ ಮಾಡಿಕೊಂಡು ಹೊಸ ಸಿಮ್ ತೆಗೆದುಕೊಳ್ಳುತ್ತಿದ್ದಂತೆಯೇ ಟ್ರೇಸ್ ಮಾಡಿದ್ದ ಪೊಲೀಸರು, ಪುಣೆ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ಹೀಗಾಗಿ ಕೂಡಲೇ ಪೊಲೀಸರು ಬಾಲಕನ ಪತ್ತೆ ಮಾಡಿದ್ದಾರೆ. ಅಲ್ಲದೆ ವಡೋದರ ಪೊಲೀಸರಿಗೆ ಬಾಲಕನನ್ನು ಒಪ್ಪಿಸಿದ್ದಾರೆ.

  • ಶಾಲೆ ಫೀ ಕಟ್ಟಲು ಮೊಬೈಲ್ ಕದ್ದ ಬಾಲಕಿ- ವಿದ್ಯಾರ್ಥಿನಿಯನ್ನು ಕ್ಷಮಿಸಿ, ಸಹಾಯ ಮಾಡಿದ ಮಾಲೀಕ

    ಶಾಲೆ ಫೀ ಕಟ್ಟಲು ಮೊಬೈಲ್ ಕದ್ದ ಬಾಲಕಿ- ವಿದ್ಯಾರ್ಥಿನಿಯನ್ನು ಕ್ಷಮಿಸಿ, ಸಹಾಯ ಮಾಡಿದ ಮಾಲೀಕ

    – 11ನೇ ತರಗತಿಯಲ್ಲಿ ಶೇ.71 ಅಂಕ ಪಡೆದಿರುವ ಬಾಲಕಿ
    – ಬಾಲಕಿ ವಿರುದ್ಧ ದೂರು ನೀಡದೆ, ಸಹಾಯ
    – ದುಃಖತಪ್ತಳಾಗಿ ಮೊಬೈಲ್ ಮರಳಿಸಿದ ಬಾಲಕಿ

    ಭೋಪಾಲ್: ಶಾಲೆ ಫೀ ಕಟ್ಟಲು 16 ವರ್ಷದ ಬಾಲಕಿ ಮೊಬೈಲ್ ಕದ್ದಿದ್ದಾಳೆ. ಬಾಲಕಿ ಕದ್ದಿದ್ದರ ಹಿಂದಿನ ಕಾರಣ ತಿಳಿದು, ಆಕೆಯ ವಿರುದ್ಧ ದೂರು ನೀಡದೆ, ಶಿಕ್ಷಿಸದೆ ಸಂತ್ರಸ್ತ ಮರಳಿ ಸಹಾಯ ಮಾಡಿರುವ ಅಪರೂಪದ ಘಟನೆ ನಡೆದಿದೆ.

    ಮಧ್ಯಪ್ರದೇಶದ ಇಂದೋರ್ ನಲ್ಲಿ ಘಟನೆ ನಡೆದಿದ್ದು, ಫೀ ಕಟ್ಟಲು ಹಣವಿಲ್ಲದ್ದಕ್ಕೆ ಓದು ಮುಗಿಸಲು ಸಾಧ್ಯವಾಗದೆ ಹತಾಶೆಗೊಂಡ ಬಾಲಕಿ ಮೊಬೈಲ್ ಕದ್ದಿದ್ದಾಳೆ. ಸಂತ್ರಸ್ತ ಧೀರಜ್ ದುಬೆ ಡಿಟೆಕ್ಟಿವ್ ಏಜೆನ್ಸಿ ನಡೆಸುವ ಹಿನ್ನೆಲೆ ಕದ್ದ ನಂತರ ಸಂತ್ರಸ್ತ ತನ್ನ ಮೊಬೈಲ್ ಟ್ರ್ಯಾಕ್ ಮಾಡಿದ್ದು, ಈ ವೇಳೆ ಬಾಲಕಿ ಸಿಕ್ಕಿಬಿದ್ದಿದ್ದಾಳೆ. ನಂತರ ಬಾಲಕಿ ಮೊಬೈಲ್ ಯಾಕೆ ಕದ್ದಿದ್ದಾಳೆ ಎಂಬ ಕಾರಣವನ್ನು ಧೀರಜ್ ತಿಳಿದಿದ್ದಾರೆ. ಹೀಗಾಗಿ ಆಕೆಯನ್ನು ಶಿಕ್ಷಿಸದೆ, ಆಕೆಯ ವಿರುದ್ಧ ದೂರು ನೀಡಿದೆ, ಶಾಲೆಯ ಉಳಿದ ಶುಲ್ಕದ ಹಣವನ್ನು ಬಾಲಕಿಗೆ ನೀಡಿದ್ದಾರೆ.

    ಖಾಸಗಿ ಡಿಟೆಕ್ಟಿವ್ ಆಗಿರುವ ಧೀರಜ್ ಪ್ರಕರಣದ ಕುರಿತು ಮಾಹಿತಿ ನೀಡಿದ್ದು, ಬಾಲಕಿ ಉತ್ತಮ ವಿದ್ಯಾರ್ಥಿನಿಯಾಗಿದ್ದಾಳೆ. 11ನೇ ತರಗತಿ ಪರೀಕ್ಷೆಯಲ್ಲಿ ಅವಳು ಶೇ.71 ಅಂಕ ಪಡೆದಿದ್ದಾಳೆ. ಅಲ್ಲದೆ 12ನೇ ತರಗತಿಗೆ ಸೇರಲು ಉತ್ಸುಕಳಾಗಿದ್ದಾಳೆ. ಆದರೆ ಅವಳ ಶಾಲೆಯ ಶುಲ್ಕ ತುಂಬಲು ಪೋಷಕರ ಬಳಿ ಅಷ್ಟು ಹಣವಿಲ್ಲ ಎಂದು ತಿಳಿಸಿದ್ದಾರೆ.

    ಆಗಸ್ಟ್ 2ರಂದು ಯಾರೋ ನನ್ನ ಬೆಲೆ ಬಾಳುವ ಮೊಬೈಲ್ ಕದ್ದರು. ನಂತರ ದ್ವಾರಕಿಪುರ ಪೊಲೀಸ್ ಠಾಣೆಯಲ್ಲಿ ಘಟನೆ ವಿವರಿಸಿ, ದೂರು ದಾಖಲಿಸಿದೆ. ಆದರೆ ಪೊಲೀಸರು ಯಾವುದೇ ರೀತಿಯ ಮಾಹಿತಿ ಕಲೆ ಹಾಕುವಲ್ಲಿ ವಿಫಲವಾದರು. ಹೀಗಾಗಿ ನಾನೇ ತನಿಖೆ ನಡೆಸಲು ಆರಂಭಿಸಿದೆ ಎಂದು ತಿಳಿಸಿದ್ದಾರೆ.

    ತುಂಬಾ ತಲೆ ಕೆಡಿಸಿಕೊಂಡು ಮೊಬೈಲ್ ಟ್ರೇಸ್ ಮಾಡಿದೆ. ಆ ದಿನ ತಾನು ಎಲ್ಲೆಲ್ಲಿಗೆ ಭೇಟಿ ನೀಡಿದ್ದೆ, ಏನು ಮಾಡಿದೆ, ಎಲ್ಲವನ್ನೂ ನೆನಪಿಸಿಕೊಂಡೆ. ಈ ವೇಳೆ ಹೊರಗಡೆ ಎಲ್ಲಿಯೂ ಮೊಬೈಲ್ ಕಳೆದಿಲ್ಲ ಎಂಬುದನ್ನು ಖಚಿತವಾಯಿತು. ಬಳಿಕ ಕಳ್ಳ ನಮ್ಮ ಮನೆಯಿಂದಲೇ ಮೊಬೈಲ್ ಕದ್ದಿದ್ದಾನೆ ಎಂದು ತಿಳಿದು, ಆ ದಿನ ಮನೆಗೆ ಯಾರ್ಯಾರು ಭೇಟಿ ನೀಡಿದ್ದಾರೆ ಎಲ್ಲರ ಪಟ್ಟಿ ಮಾಡಿದೆ. ಈ ವೇಳೆ ತಾಯಿ ಮಗಳ ಮೇಲೆ ಅನುಮಾನ ಬಂದಿತು. ಏಕೆಂದರೆ ಮಹಿಳೆ ಮನೆಯಲ್ಲಿ ಅವರ ಪತಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು. ಕುಟುಂಬ ಉಳಿಸಿದ ಹಣವನ್ನೆಲ್ಲ ಅವರ ವೈದ್ಯಕೀಯ ವೆಚ್ಚಕ್ಕೆ ಖರ್ಚು ಮಾಡುತ್ತಿದೆ. ಅಲ್ಲದೆ ಮಹಿಳೆಯ ಮಗಳು ತುಂಬಾ ಜಾಣೆ, ತನ್ನ ಶಿಕ್ಷಣವನ್ನು ಪೂರೈಸುವ ಕನಸು ಹೊಂದಿದ್ದಾಳೆ ಎಂಬುದನ್ನು ಅರಿತೆ ಎಂದು ವಿವರಿಸಿದ್ದಾರೆ.

    ಇಷ್ಟೆಲ್ಲ ಸ್ಪಷ್ಟವಾದ ಬಳಿಕ ಬಾಲಕಿ ಜೊತೆಗೆ ನಿಧಾನವಾಗಿ ಮಾತನಾಡಿದೆ. ಈ ವೇಳೆ ಬಾಲಕಿ ನಾನು ಶೇ.71ರಷ್ಟು ಅಂಕ ಪಡೆದಿದ್ದೇನೆ. ಮುಂದೆ ಓದಬೇಕೆಂಬ ಕನಸು ಹೊಂಡಿದ್ದೇನೆ ಎಂದು ತಿಳಿಸಿದಳು. ಈ ವೇಳೆ ಬಾಲಕಿ ನಡುಗುತ್ತಿದ್ದಳು, ನನ್ನನ್ನು ಕಣ್ಣೆತ್ತಿ ನೋಡುತ್ತಿರಲಿಲ್ಲ. ನಂತರ ಕಳ್ಳತನ ಮಾಡುವುದಾಗಿ ಬಾಲಕಿ ಒಪ್ಪಿಕೊಂಡಳು ಎಂದು ತಿಳಿಸಿದ್ದಾರೆ.

    ಹೆಚ್ಚು ವಿಚಾರಣೆ ನಡೆಸುತ್ತಿದ್ದಂತೆ ಬಾಲಕಿ ಕಣ್ಣೀರು ಹಾಕಿದ್ದು, ಈ ವೇಳೆ ಶಾಲಾ ಶುಲ್ಕ 2,500 ರೂ. ಕಟ್ಟಬೇಕಿತ್ತು. ಆದರೆ ಪೋಷಕರ ಬಳಿ ಹಣ ಇರಲಿಲ್ಲ. ಮೊಬೈಲ್ ಕದ್ದಿರುವುದಾಗಿ ತಿಳಿಸಿದ್ದಾಳೆ. ಈ ವೇಳೆ ಫೀ ರಿಸಿಪ್ಟ್ ಸಹ ಡಿಟೆಕ್ಟರ್‍ಗೆ ತೋರಿಸಿದ್ದಾಳೆ. ಅಲ್ಲದೆ ಬಾಲಕಿ ಮೊಬೈಲ್‍ನ್ನು ಮಾರಾಟ ಮಾಡಿಲ್ಲ, ಬದಲಿಗೆ ಓದು ಮುಗಿದ ಬಳಿಕ, ಕೆಲಸಕ್ಕೆ ಹೋಗಿ ಮೊಬೈಲ್ ಮರಳಿ ಅವರಿಗೆ ನೀಡಲು ಯೋಚಿಸಿದ್ದಾಳೆ. ಇದನ್ನು ತಿಳಿದ ಧೀರಜ್ 2,500 ರೂ. ನೀಡಿ ತಮ್ಮ ಮೊಬೈಲ್ ಮರಳಿ ಪಡೆದಿದ್ದಾರೆ. ಅಲ್ಲದೆ ಬಾಲಕಿಯ ಉಳಿದ ಶಾಲಾ ಶುಲ್ಕವನ್ನು ಸಹ ಧೀರಜ್ ಪಾವತಿಸಿದ್ದು, ಬಾಲಕಿ ವಿರುದ್ಧ ದೂರು ದಾಖಲಿಸದಿರಲು ನಿರ್ಧರಿಸಿದ್ದಾರೆ.

  • ಜೈಲಿನಲ್ಲಿ ಭವಿಷ್ಯ ಹೇಳೋ ಕಲೆಯನ್ನು ಕಲಿಯುತ್ತಿದ್ದಾಳೆ ಹಂತಕಿ ಅಪೂರ್ವ ಶುಕ್ಲಾ

    ಜೈಲಿನಲ್ಲಿ ಭವಿಷ್ಯ ಹೇಳೋ ಕಲೆಯನ್ನು ಕಲಿಯುತ್ತಿದ್ದಾಳೆ ಹಂತಕಿ ಅಪೂರ್ವ ಶುಕ್ಲಾ

    ನವದೆಹಲಿ: ಮಾಜಿ ಗವರ್ನರ್ ಎನ್.ಡಿ.ತಿವಾರಿ ಪುತ್ರ ರೋಹಿತ್ ತಿವಾರಿಯನ್ನು ಕೊಲೆಗೈದು ಜೈಲುಪಾಲಾಗಿರುವ ಪತ್ನಿ ಅಪೂರ್ವ ಶುಕ್ಲಾ ಜೈಲಿನಲ್ಲಿ ಕಾರ್ಡ್ ಮೂಲಕ ಭವಿಷ್ಯ ಹೇಳುವ ಕಲೆಯನ್ನು ಕಲಿಯುತ್ತಿದ್ದಾಳೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಆಸ್ತಿಗಾಗಿ ಪತಿಯನ್ನೇ ಕೊಲೆ ಮಾಡಿದ್ದ ಅಪೂರ್ವ ಸದ್ಯ ತಿಹಾರ್ ಜೈಲಿನಲ್ಲಿದ್ದಾಳೆ. ಈ ಸಂದರ್ಭದಲ್ಲಿ ಪತಿಯನ್ನ ಕೊಲೆ ಮಾಡಿದ್ದಕ್ಕೆ ಪಶ್ಚತ್ತಾಪ ಪಡುವಂತೆ ಅಪೂರ್ವ ಕಾಣುತ್ತಿಲ್ಲ. ಜೈಲಿನಲ್ಲಿ ಪ್ರತಿ ಮಂಗಳವಾರ ಹಾಗೂ ಗುರುವಾರ ನಡೆಯುವ ಕಾರ್ಡ್ ಮೂಲಕ ಭವಿಷ್ಯ ಹೇಳುವ ತರಗತಿಗೆ ತಪ್ಪದೇ ಭಾಗವಹಿಸುತ್ತಿದ್ದಾಳೆ. ಅಲ್ಲದೇ ಇದನ್ನು ಕಲಿಯಲು ಸಾಕಷ್ಟು ಆಸಕ್ತಿ ತೋರಿಸುತ್ತಿದ್ದಾಳೆ ಎಂದು ಜೈಲಿನ ಮೂಲಗಳು ಮಾಧ್ಯಮಕ್ಕೆ ಸ್ಪಷ್ಟಪಡಿಸಿವೆ.

    ನ್ಯಾಯಾಲಯದ ವಿಚಾರಣೆ ಕಾರಣದಿಂದ ಕೆಲ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಆ ಬಳಿಕ ಮೊದಲ ಸಾಲಿನಲ್ಲೇ ಕುಳಿತು ಓದುವುದರಲ್ಲಿ ಆಸಕ್ತಿ ವಹಿಸಿದ್ದಾಳೆ. ಆಕೆ ಇದನ್ನು ಕಲಿಯಲು ಆಸಕ್ತಿ ತೋರಿರುವುದು ತಮಗೆ ಅಚ್ಚರಿಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಏನಿದು ಪ್ರಕರಣ?
    ಏಪ್ರಿಲ್ 16 ರಂದು ಮಾಜಿ ಮುಖ್ಯಮಂತ್ರಿ ಎನ್.ಡಿ.ತಿವಾರಿ ಪುತ್ರ ರೋಹಿತ್ ತಿವಾರಿ ಅವರನ್ನು ಕೊಲೆ ಮಾಡಲಾಗಿತ್ತು. ಕೊಲೆ ಪ್ರಕರಣವನ್ನು ಭೇದಿಸಿದ್ದ ದೆಹಲಿ ಪೊಲೀಸರು ಅವರ ಪತ್ನಿ ಅಪೂರ್ವ ಶುಕ್ಲಾಳನ್ನು ಬಂಧಿಸಿದ್ದರು. ಮೊದಲು ಪ್ರಕರಣದಲ್ಲಿ ರೋಹಿತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿತ್ತು. ಆದರೆ ಮರಣೋತ್ತರ ವರದಿಯಲ್ಲಿ ಅವರ ಕೊಲೆ ನಡೆದಿದೆ ಎಂಬುವುದು ಸ್ಪಷ್ಟವಾಗಿತ್ತು.

    ಆರಂಭದಲ್ಲಿ ಪೊಲೀಸರ ದಿಕ್ಕು ತಪ್ಪಿಸಲು ಅಪೂರ್ವ ಯತ್ನಿಸಿದ್ದಳು. ಪ್ರಕರಣ ಪ್ರಾಥಮಿಕ ವಿಚಾರಣೆ ವೇಳೆ ಅಂದು ಮನೆಗೆ ಬಂದಿರಲಿಲ್ಲ ಎಂಬುದು ಸ್ಪಷ್ಟವಾಗಿತ್ತು. ಅಂದು ರೋಹಿತ್ ಅವರ ತಾಯಿ ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಅಂದು ಸಂಜೆ ರೋಹಿತ್ ಕೊಠಡಿಗೆ ತೆರಳಿದ್ದ ಅಪೂರ್ವ ಉಸಿರುಗಟ್ಟಿಸಿ ಕೊಲೆ ಮಾಡಿದ್ದಳು. ಕೇವಲ ಒಂದೂವರೆ ಗಂಟೆಯಲ್ಲಿ ಅವಧಿಯಲ್ಲಿ ಸಾಕ್ಷಿ ನಾಶಕ್ಕೆ ಯತ್ನಿಸಿದ್ದಳು. ವಿಚಾರಣೆಯಲ್ಲಿ ಅಪೂರ್ವ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಳು. ವೈವಾಹಿಕ ಜೀವನದಲ್ಲಿ ಇಬ್ಬರ ಜೀವನದಲ್ಲಿ ಉಂಟಾದ ಅಸಮಾಧಾನ ಹಾಗೂ ಆಸ್ತಿ ಮೇಲಿನ ಆಸೆಯಿಂದ ಕೊಲೆ ಮಾಡಿದ್ದೇನೆ ಎಂದು ಹೇಳಿದ್ದಳು.

  • ಮತ್ತೆ ಚಾಮುಂಡೇಶ್ವರಿ ಸೋಲಿನ ನೆನಪು ಮಾಡಿಕೊಂಡ ಮಾಜಿ ಸಿಎಂ

    ಮತ್ತೆ ಚಾಮುಂಡೇಶ್ವರಿ ಸೋಲಿನ ನೆನಪು ಮಾಡಿಕೊಂಡ ಮಾಜಿ ಸಿಎಂ

    – ಶ್ಯಾನಭೋಗರ ಮಾತು ಕೇಳಿದ್ರೆ ಸಿಎಂ ಆಗ್ತಿರಲಿಲ್ಲ ಎಂದ್ರು

    ಬೆಂಗಳೂರು: ರಾಜ್ಯ ಮುಖ್ಯಮಂತ್ರಿಯಾಗಿ ನಾನು ಜನತೆಗೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದೆ. ಆದರೆ ಚಾಮುಂಡೇಶ್ವರಿ ಕ್ಷೇತ್ರದ ಜನ ನನ್ನನ್ನು ಸೋಲಿಸಿದರು. ಬಹುಶಃ ವರುಣಾ ಕ್ಷೇತ್ರದಲ್ಲಿ ನಿಂತಿದ್ದರು ಕೂಡ ನೀವು ಆರ್ಶೀವಾದ ಮಾಡುತ್ತಿದ್ದಿರಿ ಎಂದು ಸುತ್ತೂರು ಜಾತ್ರ ಮಹೋತ್ಸವದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

    ಪದೇ ಪದೇ ಸಿದ್ದರಾಮಯ್ಯ ಅವರಿಗೆ ಚಾಮುಂಡೇಶ್ವರಿ ಸೋಲು ಕನವರಿಕೆ ಆಗುತ್ತಿದ್ದು, ಈ ಹಿಂದೆ ಹಲವು ವೇದಿಕೆಗಳಲ್ಲಿ ತಮ್ಮ ಸೋಲಿನ ಬಗ್ಗೆ ಪ್ರಸ್ತಾಪ ಮಾಡಿದ್ದರು. ಇಂದು ಕೂಡ ತಮ್ಮ ಆರಂಭಿಕ ಜೀವನದ ಬಗ್ಗೆ ನೆನಪಿಸಿಕೊಂಡ ಅವರಿಗೆ ಚಾಮುಂಡೇಶ್ವರಿ ಕ್ಷೇತ್ರದ ಸೋಲು ಕನವರಿಕೆ ಆಯಿತು. ವೇದಿಕೆಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಗೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದರು ಕೂಡ ಚಾಮುಂಡೇಶ್ವರಿ ಜನರು ನನ್ನನ್ನು ಸೋಲಿಸಿದರು. ಆದರೆ ದೂರದ ಎಲ್ಲೋ ಬಾದಾಮಿ ಕ್ಷೇತ್ರದ ಜನ ಗೆಲ್ಲಿಸಿದರು. ವರುಣಾ ಕ್ಷೇತ್ರದಲ್ಲಿ ನಿಂತಿದ್ದರು ಕೂಡ ನೀವು ಆಶೀರ್ವಾದ ನೀಡುತ್ತಿದ್ದಿರಿ. ಹೀಗಾಗಿ ಈ ವರುಣಾ ಕ್ಷೇತ್ರ ಹಾಗೂ ಸುತ್ತೂರು ಮಠದ ಮೇಲೆ ನಮಗೆ ಅಪಾರ ಗೌರವ ಇದೆ ಎಂದರು.

    ಇದಕ್ಕೂ ಮುನ್ನ ಆರಂಭಿಕ ಜೀವನದ ಬಗ್ಗೆ ನೆನಪಿಸಿಕೊಂಡ ಅವರು, ಊರಿನಲ್ಲಿ ಪಂಚಾಯಿತಿ ಸೇರಿಸಿ ನಾನು ಲಾಯರ್ ಓದಿದೆ. ಏಕೆಂದರೆ ನಮ್ಮಪ್ಪ ನಮ್ಮೂರಿನ ಶ್ಯಾನಬೋಗರ ಮಾತು ಕೇಳುತ್ತಿದ್ದರು. ನನ್ನ ಮಗ ಲಾಯರ್ ಓದಬೇಕು ಎಂದು ಶ್ಯಾನಬೋಗರ ಬಳಿ ಕೇಳಿದರು. ಆಗ ಆ ಶ್ಯಾನಬೋಗರು ಹೇ ಕುರುಬರು ಲಾಯರ್ ಓದಲು ಆಗುತ್ತಾ? ಲಾಯರ್ ಗಿರಿ ಏನಿದ್ರು ಬ್ರಾಹ್ಮಣರ ಕೆಲಸ ಎಂದು ಹೇಳಿದ್ದರು. ಅಂದು ಶ್ಯಾನಬೋಗರ ಮಾತು ಕೇಳಿ ನಮ್ಮಪ್ಪ ನನಗೆ ಓದಿಸೋಲ್ಲ ಎಂದಿದ್ದ. ನಾನು ಮನೆಯಲ್ಲಿ ಗಲಾಟೆ ಮಾಡಿ ಲಾಯರ್ ಓದಿಸಲಿಲ್ಲ ಅಂದರೆ ಪಾಲು ಕೊಟ್ಟು ಬಿಡು ಎಂದು ಕೇಳಿದ್ದೆ. ಆಗ ಊರಿನಲ್ಲಿ ಪಂಚಾಯಿತಿ ಸೇರಿಸಿ ಕೊನೆಗೆ ನಾನು ಲಾಯರ್ ಓದಲು ಅನುಮತಿ ನೀಡಿದರು. ಆಗ ಶ್ಯಾನಬೋಗರ ಮಾತು ಕೇಳಿದರೆ ಲಾಯರ್ ಆಗುತ್ತಿರಲಿಲ್ಲಾ ಎಂದರು. ಅಲ್ಲದೇ ಲಾಯರ್ ಓದಿದಕ್ಕೆ ಸಿಎಂ ಆದೆ ಎಂದರು.

    ಇದೇ ವೇಳೆ ಯಾರು ಕೂಡ ಕರ್ಮವನ್ನ ನಂಬಬೇಡಿ ಎಂದ ಸಿದ್ದರಾಮಯ್ಯ ಅವರು, ಈ ಜನ್ಮದಲ್ಲಿ ಹೀಗಾಗಿದ್ದೆ, ಆ ಜನ್ಮದಲ್ಲಿ ಹಾಗಾಗಿದ್ದೆ ಎಂಬುವುದನ್ನು ನಂಬಲೇಬೇಡಿ. ಅದೊಂದು ದೊಡ್ಡ ಸುಳ್ಳಿನ ಕಥೆ. ಪಾಪ ಮಾಡಿದರೆ ಕುರಿ, ಕೋಳಿ, ನಾಯಿ ಆಗುತ್ತಾರೆ ಎಂಬುವುದು ಸುಳ್ಳು. ನಾನು ನಂಬಲ್ಲ ನೀವು ನಂಬಬೇಡಿ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಜೀವನದಲ್ಲಿ ಏನೂ ಸಾಧಿಸಕ್ಕಾಗಿಲ್ಲ, ನನ್ಯಾರೂ ಲೈಕ್ ಮಾಡಿಲ್ಲ- ವಿದ್ಯಾರ್ಥಿನಿ ಆತ್ಮಹತ್ಯೆ

    ಜೀವನದಲ್ಲಿ ಏನೂ ಸಾಧಿಸಕ್ಕಾಗಿಲ್ಲ, ನನ್ಯಾರೂ ಲೈಕ್ ಮಾಡಿಲ್ಲ- ವಿದ್ಯಾರ್ಥಿನಿ ಆತ್ಮಹತ್ಯೆ

    – ಸೆಲ್ಫಿ ವಿಡಿಯೋ ಮಾಡಿ ಸಾವಿಗೆ ಶರಣು

    ಮೈಸೂರು: ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿಧ್ಯಾರ್ಥಿನಿಯೊಬ್ಬಳು ಜೀವನದಲ್ಲಿ ಏನೂ ಸಾಧಿಸೋಕೆ ಆಗಿಲ್ಲ. ಅಲ್ಲದೆ ಬದುಕಿದ್ದಾಗ ನನ್ನ ಯಾರೂ ಲೈಕ್ ಮಾಡಿಲ್ಲ ಎಂದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ.

    ಜಿಲ್ಲೆಯ ಬನ್ನಿಮಂಟಪದ ಕಾವೇರಿನಗರದ ನಿವಾಸಿ ಯಾಸ್ಮಿನ್ ತಾಜ್(18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೈಸೂರಿನ ಜೆ.ಎಸ್.ಎಸ್ ಕಾಲೇಜಿನ ಕಾಮರ್ಸ್ ವಿದ್ಯಾರ್ಥಿನಿಯಾಗಿದ್ದ ಈಕೆ ತನಗೆ ಓದು ತಲೆಗೆ ಹತ್ತುತ್ತಿಲ್ಲ ಎಂದು ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು. ಈ ಖಿನ್ನತೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೂ ಮುನ್ನ ಮಾತ್ರೆ ಸೇವಿಸಿಸುವುದನ್ನು ವಿಡಿಯೋ ಮಾಡಿ, ಇದನ್ನು ಶೇರ್ ಮಾಡುವಂತೆ ಮನವಿ ಕೂಡ ಮಾಡಿದ್ದಾಳೆ.

    ಜೆ.ಎಸ್.ಎಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಯಾಸ್ಮಿನ್ ತಾಜ್ ಓದುವುದರಲ್ಲಿ ಹಿಂದಿದ್ದಳು. ಆದ್ದರಿಂದ ಜೀವನದಲ್ಲಿ ತುಂಬಾ ನೊಂದಿದ್ದಳು. ನನಗೆ ಓದುವುದಕ್ಕೆ ಆಸೆ. ಆದ್ರೆ ನನ್ನ ತಲೆಗೆ ಓದು ಹತ್ತಲಿಲ್ಲ, ನಾನೊಬ್ಬಳು ಡಲ್ ಸ್ಟೂಡೆಂಟ್. ಮುಂದೆ ಸಿಂಗರ್ ಅಥವಾ ಲಾಯರ್ ಆಗುವ ಆಸೆ ಇತ್ತು. ದೇವರು ನನ್ನ ಆಸೆಯನ್ನು ಪೂರೈಸಲಿಲ್ಲ. ಜೊತೆಗೆ ನನಗೆ ಆರೋಗ್ಯದ ಸಮಸ್ಯೆ ಕೂಡ ಇದೆ. ಆದ್ದರಿಂದ ಕಾಲೇಜಿಗೆ ಸರಿಯಾಗಿ ಹೋಗಿಲ್ಲ. ಅದಕ್ಕೆ ಪ್ರಿಪರೇಟರಿ ಪರೀಕ್ಷೆಗೆ ಹಾಲ್ ಟಿಕೆಟ್ ಸಿಗಲಿಲ್ಲ. ಜೀವನಲ್ಲಿ ನಾನು ಏನೂ ಸಾಧಿಸಲಿಲ್ಲ ಎಂದು ತನ್ನ ಮೊಬೈಲ್‍ನಲ್ಲಿ ವಿಡಿಯೋ ಮಾಡಿಟ್ಟು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಅಷ್ಟೇ ಅಲ್ಲದೆ ವಿಡಿಯೋದಲ್ಲಿ, ಬದುಕಿದ್ದಾಗ ನನ್ನನ್ನ ಯಾರೂ ಲೈಕ್ ಮಾಡಿಲ್ಲ, ಸಾಯುವ ವಿಡಿಯೋನಾದ್ರೂ ಲೈಕ್ ಮಾಡಿ ಶೇರ್ ಮಾಡಿ. ಈ ಮೂಲಕ ಯಾಸ್ಮಿನ್ ಆತ್ಮಹತ್ಯೆ ಮಾಡಿಕೊಂಡಳು ಅಂತ ಪ್ರಪಂಚಕ್ಕೆ ತಿಳಿಸಿ ಎಂದು ತೆಲುಗು ಭಾಷೆಯಲ್ಲಿ ಮನವಿ ಮಾಡಿದ್ದಾಳೆ. ಸದ್ಯ ಈ ಘಟನೆ ಕುರಿತು ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv