Tag: ಓಮ್ನಿ

  • ಒಂದೇ ಕುಟುಂಬದ 8 ಜನರಿದ್ದ ಕಾರಿಗೆ ಬೆಂಕಿ – ಹುಡುಗಿ ಸಜೀವ ದಹನ

    ಒಂದೇ ಕುಟುಂಬದ 8 ಜನರಿದ್ದ ಕಾರಿಗೆ ಬೆಂಕಿ – ಹುಡುಗಿ ಸಜೀವ ದಹನ

    – 7 ಮಂದಿಗೆ ಗಾಯ, ಮಾದಾವರ ಬಳಿ ಘಟನೆ

    ಬೆಂಗಳೂರು: ನೆಲಮಂಗಲದ ಮಾದಾವರ (Madavara, Nelamangala) ಬಳಿ ಭಾರೀ ಅಪಘಾತ ಸಂಭವಿಸಿದೆ. ಸಹೋದರನ ಮನೆಯಿಂದ ಊಟ ಮುಗಿಸಿ ಬರುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಹುಡುಗಿಯೊಬ್ಬಳು ಸುಟ್ಟು ಕರಕಲಾದ ದಾರುಣ ಘಟನೆ ನಡೆದಿದೆ.

    ಬೆಂಗಳೂರು- ತುಮಕೂರು ಹೈವೆಯ ಮಾದಾವರ ಟೋಲ್ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಓಮ್ನಿ ಕಾರಿಗೆ ಬಲೆನೋ ಕಾರು ಹಿಂಬದಿಯಿಂದ ಡಿಕ್ಕಿಯೊಡೆದ ಪರಿಣಾಮ ಓಮ್ನಿ‌ಕಾರು ಪಲ್ಟಿಯಾಗಿ ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿ ಒಟ್ಟು 8 ಜನ ಪ್ರಯಾಣ ಮಾಡ್ತಿದ್ರು. ಏಳು ಜನಕ್ಕೆ ಸುಟ್ಟ ಗಾಯಗಳಾಗಿದ್ರೇ 15 ವರ್ಷದ ಹುಡುಗಿಯೊಬ್ಬಳು ಸಜೀವ ದಹನವಾಗಿದ್ದಾಳೆ.

    ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡ್ತಿದ್ದ 8 ಜನರಲ್ಲಿ ದಿವ್ಯಾ ಸಾವನ್ನಪ್ಪಿದ್ರೆ ಮಾಯಾಂಕ್, ಮಂಜುಳ, ಸುನಿತಾ, ತರುಣ್, ಮಹೇಶ್, ನಮನ್ ಹಾಗೂ ಶಾಂತಿಲಾಲ್ ಗಾಯಾಳುಗಳಾಗಿದ್ದಾರೆ. ಇವರಲ್ಲಿ ನಮನ್, ಸುನಿತಾ, ಮಾಯಾಂಕ್ ಸ್ಥಿತಿ ಗಂಭೀರವಾಗಿದೆ. ಮಾದಾವರದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳುಗಳೆಲ್ಲರೂ ಗುಜರಾತಿ ಮೂಲದ ಕುಟುಂಬದವರು. ಇದನ್ನೂ ಓದಿ: ಮುಸ್ಲಿಮರಿಗೆ ರಾಷ್ಟ್ರದ ಸಂಪತ್ತಿನ ಮೊದಲ ಹಕ್ಕು ಎಂದು ಕಾಂಗ್ರೆಸ್‌ ಹೇಳಿತ್ತು: ಮೋದಿ ಕಿಡಿ

    ಸ್ಥಳಕ್ಕೆ ಬೇಟಿ ಕೊಟ್ಟು ಪರಿಶೀಲನೆ ನಡೆಸಿದ ಬೆಂಗಳೂರು ಗ್ರಾಮಾಂತರ ಎಸ್. ಪಿ ಮಲ್ಲಿಕಾರ್ಜುನ್ ಬಾಲಾದಂಡಿ ನಂತರ ಘಟನೆಯ ವಿವರ ನೀಡಿದ್ರು. ತುಮಕೂರು ರಸ್ತೆ ಹೈವೇಯಲ್ಲಿ 10ಗಂಟೆ ರಾತ್ರಿಯಲ್ಲಿ ಘಟನೆ ನಡೆದಿದೆ. ಬಲೆನೋ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಮುಂದಿದ್ದ ಕಾರು ಎರಡು ಮೂರು ಪಲ್ಟಿ ಆಗಿದ್ದು ನಂತರ ಬೆಂಕಿ ಹತ್ತಿಕೊಂಡಿದೆ.

    ಇನ್ನು ಡಿಕ್ಕಿಯೊಡೆದ ಬಲೆನೋ ಕಾರಿನಲ್ಲಿದ್ದವರನ್ನು ಪರಿಶೀಲನೆ ನಡೆಸಬೇಕಿದೆ.‌ ಅವರು ಮದ್ಯ ಸೇವಿಸಿ ಚಾಲನೆ ಮಾಡಿದ್ರಾ ಅನ್ನೋ‌ ಬಗ್ಗೆ ತನಿಖೆ ಮಾಡುತ್ತಿದ್ದೇವೆ.‌ ಸದ್ಯ ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ ಎಂದು ಮಾಹಿತಿ ನೀಡಿದ್ರು.

    ಒಟ್ಟಾರೆ ಸಂಬಂಧಿಕರ ಮನೆಯಲ್ಲಿ ಊಟ ಮುಗಿಸಿ ಖುಷಿಯಿಂದ‌ ಮನೆಗೆ ವಾಪಸ್ ಆಗುತ್ತಿದ್ದ ಕುಟುಂಬಕ್ಕೆ ದೊಡ್ಡ ಅಘಾತವಾಗಿದೆ. ಮನೆ ಮಗಳು ಧಗಧಗನೇ ಹೊತ್ತಿ ಉರಿಯುತ್ತಿದ್ರೂ ಕಾಪಾಡಲಾಗದ ದುಸ್ಥಿತಿ ನಿರ್ಮಾಣವಾಗಿದ್ದು ದುರಂತ.

  • ಬೆಳ್ಳಂಬೆಳಗ್ಗೆ ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು

    ಬೆಳ್ಳಂಬೆಳಗ್ಗೆ ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು

    ರಾಮನಗರ: ಬೆಳ್ಳಂಬೆಳಗ್ಗೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ಭೀಕರ ಅಪಘಾತ ನಡೆದಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.

    ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಘಟನೆ ನಡೆದಿದೆ. ಹಿಂಬದಿಯಿಂದ ಓಮ್ನಿ ಕಾರು ಲಾರಿಗೆ (Omni- Lorry Accident) ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.

    ಬೆಂಗಳೂರಿನಿಂದ ಮೈಸೂರು ಕಡೆ ಹೋಗ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಓಮ್ನಿ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಓಮ್ನಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: 60 ಬಾರಿ ಚಿನ್ನ ಕಳ್ಳಸಾಗಾಣಿಕೆಗೆ ಸಹಾಯ – ಏರ್‌ಪೋರ್ಟ್ ಅಧಿಕಾರಿ ವಿರುದ್ಧ ಎಫ್‍ಐಆರ್

    ಗುದ್ದಿದ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತ ಹಿನ್ನೆಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಓಮ್ನಿ ಮೇಲೆ ಮಗುಚಿ ಬಿದ್ದ ಲಾರಿ- ವ್ಯಕ್ತಿ ಸಾವು

    ಓಮ್ನಿ ಮೇಲೆ ಮಗುಚಿ ಬಿದ್ದ ಲಾರಿ- ವ್ಯಕ್ತಿ ಸಾವು

    ಮಂಗಳೂರು: ಓಮ್ನಿ ಮೇಲೆ ಲಾರಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಎಂಬಲ್ಲಿ ನಡೆದಿದೆ.

    ಮೃತನನ್ನು ಲೋಕೇಶ್ ಎಂದು ಗುರುತಿಸಲಾಗಿದೆ. ಲಾರಿಯು ಉಡುಪಿ ಕಡೆಗೆ ಗೋಣಿ ಚೀಲಗಳನ್ನು ಹೊತ್ತು ಸಾಗುತ್ತಿತ್ತು. ಬ್ರೇಕ್ ಹಾಕಿದಾಗ ಲಾರಿ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಈ ವೇಳೆ ರಸ್ತೆಯಲ್ಲಿ ಲಾರಿ ಎಡಭಾಗಕ್ಕೆ ಮಗುಚಿ ಬಿದ್ದಿದೆ. ಪರಿಣಾಮ ರಸ್ತೆ ಪಕ್ಕದಲ್ಲೇ ನಿಂತಿದ್ದ ಓಮ್ನಿ ಮೇಲೆ ಮಗುಚಿ ಬಿದ್ದಿದೆ.

    ಕಾರಿನಲ್ಲಿದ್ದ ಚಿತ್ರಾಪುರ ನಿವಾಸಿ ಲೋಕೇಶ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಲೋಕೇಶ್ ಚಿಕಿತ್ಸೆ ಫಲಕಾರಿಯಾಗದೇ ಲೋಕೇಶ್ ಮೃತಪಟ್ಟಿದ್ದಾರೆ.

    ಘಟನೆ ಸಂಬಂದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 13 ಜಿಲ್ಲೆಗಳಲ್ಲಿ ಮಳೆ ಹಾನಿ, ಈವರೆಗೂ 12 ಜನ, 62 ಜಾನುವಾರುಗಳು ಸಾವು: ಬೊಮ್ಮಾಯಿ

    Live Tv
    [brid partner=56869869 player=32851 video=960834 autoplay=true]

  • ಸರ್ವೀಸ್ ರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಓಮ್ನಿ

    ಸರ್ವೀಸ್ ರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಓಮ್ನಿ

    ದಾವಣಗೆರೆ: ಜಿಲ್ಲೆಯ ಆನಗೋಡು ರಾಷ್ಟ್ರೀಯ ಹೆದ್ದಾರಿ ಬಳಿ ಒಕ್ಕಣಿಗೆ ಹಾಕಿದ್ದ ರಾಗಿ ಹುಲ್ಲಿನ ಮೇಲೆ ಓಮ್ನಿ
    ಕಾರು ಬರುತ್ತಿದ್ದಂತೆ, ಬೆಂಕಿ ಹೊತ್ತಿ ಧಗಧಗನೆ ಉರಿದು ಸುಟ್ಟು ಭಸ್ಮವಾಗಿದೆ.

    ಫಜಲ್ ಅಹಮ್ಮದ್ ಎಂಬವರಿಗೆ ಸೇರಿದ ಕಾರಾಗಿದೆ. ಅಂಗಡಿಗೆ ದಿನಸಿ ಸಾಮನುಗಳನ್ನ ಒಯ್ಯುವಾಗ ಹೊತ್ತಿ ಉರಿದಿದೆ. ಓಮ್ನಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತಿದ್ದಂತೆ ಚಾಲಕ ಹೊರ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಗ್ನಿ ಶಾಮಕ ಸಿಬ್ಬಂದಿ ಬರುವಷ್ಟರಲ್ಲೆ ಓಮ್ನಿ ಕಾರು ಸಂಪೂರ್ಣ ಭಸ್ಮವಾಗಿದೆ.  ಇದನ್ನೂ ಓದಿ: ಹುಟ್ಟೂರಿಗೆ ನೆರವಾದ ಸೋನು ಸೂದ್-1,000 ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ

    ಬೆಂಕಿ ಹೊತ್ತಿ ಉರಿಯುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಾವಣಗೆರೆ ರೂರಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನೂತನ ದಾಖಲೆ ಬರೆದ ಭಾರತ ಮೂಲದ ಹರ್‌ಪ್ರೀತ್ ಚಂಡಿ

  • ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ – ಹೊತ್ತಿ ಉರಿದ ಓಮ್ನಿ

    ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ – ಹೊತ್ತಿ ಉರಿದ ಓಮ್ನಿ

    ನೆಲಮಂಗಲ: ಹಾಸನ ಮಾರ್ಗವಾಗಿ ಬೆಂಗಳೂರು ಕಡೆ ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ನೋಡನೋಡುತ್ತಲೇ, ಕ್ಷಣಾರ್ಧದಲ್ಲಿ ಧಗಧಗನೆ ಹೊತ್ತಿ ಉರಿದು ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ನಗರದ ಕುಣಿಗಲ್ ಸರ್ಕಲ್ ಬಳಿ ನಡೆದಿದೆ.

    ಓಮ್ನಿ ಕಾರು ಹಾಸನದಿಂದ ಬೆಂಗಳೂರು ಕಡೆಗೆ ಚಲಿಸುತ್ತಿತ್ತು. ಇತ್ತ ಕುಣಿಗಲ್ ಸರ್ಕಲ್ ಬಳಿ ಬರುತ್ತಿದ್ದಂತೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಕಾರಿನ ಚಾಲಕ ಕಾರು ನಿಲ್ಲಿಸಿ ಕಾರಿನಲ್ಲಿದ್ದ ಪ್ರಾಯಾಣಿಕರನ್ನು ಕೆಳಗಿಳಿಸಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಜಾರಕಿಹೊಳಿ ಸಿಡಿ ಕೇಸ್ – ನರೇಶ್ ಗೌಡಗೆ ಯುವ ಕಾಂಗ್ರೆಸ್ ಮುಖಂಡ ಪಟ್ಟ

    ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ನೆಲಮಂಗಲ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

  • ಪೆಟ್ರೋಲ್ ಹಾಕುವಾಗ ಓಮ್ನಿಗೆ ಹೊತ್ತಿಕೊಂಡ ಬೆಂಕಿ

    ಪೆಟ್ರೋಲ್ ಹಾಕುವಾಗ ಓಮ್ನಿಗೆ ಹೊತ್ತಿಕೊಂಡ ಬೆಂಕಿ

    – ಇಂಡಿ ಪಂಪ್ ಪೆಟ್ರೋಲ್ ಬಂಕ್ ನಲ್ಲಿ ಅವಘಡ

    ಹುಬ್ಬಳ್ಳಿ: ಪೆಟ್ರೋಲ್ ಹಾಕುವ ವೇಳೆ ಮಾರುತಿ ಓಮ್ನಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ನಗರದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರಿನ ಇಂಡಿಪಂಪ್ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ದೊಡ್ಡ ಹಾನಿ ಸಂಭವಿಸಿಲ್ಲ.

    ಮಾರುತಿ ಓಮ್ನಿಗೆ ಪೆಟ್ರೋಲ್ ಹಾಕುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವೆಯ ವಾಹನ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

    ಬೆಂಕಿ ಕಾಣುತ್ತಿದಂತೆಯೇ ಜನರು ಆತಂಕಗೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಅಗ್ನಿಶಾಮಕ ಸಿಬ್ಬಂದಿ ಬೆಂಕಿನ ನಂದಿಸಿದ ನಂತರ ಸ್ಥಳೀಯರು ನಿರಾಳರಾದರು.

  • ಮುಂಜಾನೆ ಭೀಕರ ಅಪಘಾತ – ಐದು ಮಂದಿ ದಾರುಣ ಸಾವು

    ಮುಂಜಾನೆ ಭೀಕರ ಅಪಘಾತ – ಐದು ಮಂದಿ ದಾರುಣ ಸಾವು

    ಆನೇಕಲ್: ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ಮಂದಿ ದಾರುಣವಾಗಿ ಮೃತಪಟ್ಟ ಘಟನೆ ತಮಿಳುನಾಡು ಈರೋಡ್‍ನ ಕಾವೇರಿಪಟ್ಟಣಂ ಬಳಿ ನಡೆದಿದೆ.

    ಘಟನೆಯಲ್ಲಿ ಬಸ್ಸಿನಿಂದ ಇಳಿಯುತ್ತಿದ್ದ ಪ್ಯಾಸೆಂಜರ್ ಹಾಗೂ ಓಮ್ನಿಯಲ್ಲಿದ್ದ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ದುರ್ದೈವಿಗಳನ್ನು ಪ್ರಶಾಂತ್, ಲಿಂಗಾ, ಸುರೇಂದರ್, ಶಿವಕುಮಾರ್, ಓಮ್ನಿ ಚಾಲಕ ಹಾಗೂ ಬಸ್ ಪ್ಯಾಸೆಂಜರ್ ದೇವರಾಜು ಎಂದು ಗುರುತಿಸಲಾಗಿದೆ.

    ಸ್ನೇಹಿತರೆಲ್ಲ ಸೇರಿ ಈರೋಡ್ ಜಿಲ್ಲೆಯ ಭವಾನಿಯಿಂದ ಬೆಂಗಳೂರಿನ ವಂಡರ್ ಲಾ ಹೊರಟಿದ್ದರು. ಈ ಸಂದರ್ಭದಲ್ಲಿ ಅಂದರೆ ಮುಂಜಾನೆ 4 ಗಂಟೆ ಸುಮಾರಿಗೆ ಪ್ರವಾಸಿ ತಾಣಕ್ಕೆ ಹೋಗುವ ದಾರಿಯಲ್ಲಿ ಈ ದುರಂತ ಸಂಭವಿಸಿದೆ.

    ವ್ಯಕ್ತಿಯೊಬ್ಬರು ರಸ್ತೆ ದಾಟಲು ಯತ್ನಿಸಿದ್ದಾರೆ. ಹೀಗಾಗಿ ಬಸ್ಸಿನ ಚಾಲಕ ಬ್ರೇಕ್ ಹಾಕಿದ್ದಾನೆ. ಈ ವೇಳೆ ಹಿಂದಿನಿಂದ ಬಂದ ಓಮ್ನಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಓಮ್ನಿ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಪರಿಣಾಮ 5 ಮಂದಿ ಸ್ಥಳದಲ್ಲಿ ಮೃತಪಟ್ಟರೆ ಓಮ್ನಿಯಲ್ಲಿದ್ದ ಗೌತಮ್, ಭರಣಿ ಹಾಗೂ ಅಶೋಕ್ ಎಂಬವರಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸ್ಥಳಕ್ಕೆ ಕಾವೇರಿಪಟ್ಟಣಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

  • ತಂದೆ, ತಾಯಿ ಕಣ್ಣೆದುರೇ ಬಾಲಕ ಸಾವು- ಮುಗಿಲುಮುಟ್ಟಿದ ಆಕ್ರಂದನ

    ತಂದೆ, ತಾಯಿ ಕಣ್ಣೆದುರೇ ಬಾಲಕ ಸಾವು- ಮುಗಿಲುಮುಟ್ಟಿದ ಆಕ್ರಂದನ

    ಹಾಸನ: ತಂದೆ, ತಾಯಿಯ ಎದುರೇ ರಸ್ತೆ ಅಪಘಾತದಲ್ಲಿ ನಾಲ್ಕು ವರ್ಷದ ಬಾಲಕ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹಾಸನದ ಅರಸೀಕೆರೆಯಲ್ಲಿ ನಡೆದಿದೆ.

    ಮೃತ ದುರ್ದೈವಿಯನ್ನು ಯೋಗೇಶ್(4) ಎಂದು ಗುರುತಿಸಲಾಗಿದೆ. ಸ್ಕೂಟರ್‍ನಲ್ಲಿ ಹೋಗುತ್ತಿದ್ದ ವೇಳೆ ಓಮ್ನಿ ಬಂದು ಡಿಕ್ಕಿ ಹೊಡೆದ ಪರಿಣಾಮ ತಂದೆ-ತಾಯಿ ಜೊತೆಗೆ ಸ್ಕೂಟರ್‍ನಲ್ಲಿ ಹೋಗುತ್ತಿದ್ದ ಯೋಗೇಶ್ ಮೃತಪಟ್ಟಿದ್ದಾನೆ.

    ಮೃತ ಯೋಗೇಶ್ ತಾಯಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಅವರನ್ನು ಕೆಲಸಕ್ಕೆ ಬಿಡಲು ಸ್ಕೂಟರ್‍ನಲ್ಲಿ ಯೊಗೇಶ್ ತಂದೆ ಹೊರಟಿದ್ದರು. ಅವರ ಜೊತೆ ಮಗ ಯೋಗೇಶ್ ಕೂಡ ಹೊರಟಿದ್ದ. ಆದರೆ ಅರಸೀಕೆರೆಯ ಎಪಿಎಂಸಿ ಮಾರುಕಟ್ಟೆ ಬಳಿ ಮಾರತಿ ಓಮ್ನಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಯೋಗೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

    ಈ ಅಪಘಾತದಲ್ಲಿ ಮೃತ ಯೋಗೇಶ್ ತಂದೆ ಮತ್ತು ತಾಯಿಗೆ ಕೈ, ಕಾಲು, ತಲೆಗೆ ಗಾಯವಾಗಿದೆ. ಆದರೆ ಕಣ್ಣೆದುರೇ ಮಗನ ಸಾವು ಕಂಡು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಓಮ್ನಿ ಮೇಲೆ ಉರುಳಿದ ಕಂಟೈನರ್- ಮಹಿಳೆಯರಿಬ್ಬರ ದುರ್ಮರಣ

    ಓಮ್ನಿ ಮೇಲೆ ಉರುಳಿದ ಕಂಟೈನರ್- ಮಹಿಳೆಯರಿಬ್ಬರ ದುರ್ಮರಣ

    ಬೆಂಗಳೂರು: ಓಮ್ನಿ ಮೇಲೆ ಕಂಟೈನರ್ ಲಾರಿ ಉರುಳಿದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸೂರು ಸಮೀಪದ ಕಾಮನದೊಡ್ಡಿ ಬಳಿ ನಡೆದಿದೆ.

    ಬೆಂಗಳೂರಿನ ಅರಕೆರೆ ನಿವಾಸಿಗಳಾದ ಅಂಬಿಕಾ (38) ಹೇಮಾ (40) ಮೃತ ದುರ್ದೈವಿಗಳು. ಈ ಅವಘಡದಲ್ಲಿ ಇಬ್ಬರು ಮಕ್ಕಳು, ಓರ್ವ ಪುರುಷ ಹಾಗೂ ಇಬ್ಬರು ಮಹಿಳೆಯರಿಗೆ ಗಂಭೀರವಾಗಿ ಗಾಯವಾಗಿದ್ದು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಅರಕೆರೆಯ ನಾಗಭೂಷಣ್ ಎಂಬವರು ಕುಟುಂಬ ಸಮೇತ ತಿರುವಣ್ಣಮಲೈಗೆ ತೆರಳಿ ವಾಪಸ್ ಬರುವಾಗ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಓಮ್ನಿ ಮೇಲೆ ಕಂಟೈನರ್ ಲಾರಿ ಬಿದ್ದಿದೆ. ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ನಾಗಭೂಷಣ್ ಬಿಎಂಟಿಸಿ ಸಂಸ್ಥೆಯಲ್ಲಿ ಸೂಪರ್ ವೈಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

    ಈ ಸಂಬಂಧ ಸ್ಥಳಕ್ಕೆ ಸುಳಗಿರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿದ್ದಾರೆ

  • ಕೆರೆಗೆ ಉರುಳಿ ಬಿತ್ತು ಓಮ್ನಿ- ಈಜಿ ದಡ ಸೇರಿದ ಚಾಲಕ

    ಕೆರೆಗೆ ಉರುಳಿ ಬಿತ್ತು ಓಮ್ನಿ- ಈಜಿ ದಡ ಸೇರಿದ ಚಾಲಕ

    ಹಾವೇರಿ: ಕೆರೆಗೆ ಓಮ್ನಿ ಕಾರೊಂದು ಉರುಳಿ ಬಿದ್ದು, ಚಾಲಕ ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಕರೇಕ್ಯಾತನಹಳ್ಳಿ ಗ್ರಾಮದ ಬಳಿ ನಡೆದಿದೆ.

    ಓಂಕಾರಯ್ಯ(40) ಈಜಿ ದಡ ಸೇರಿದ ಚಾಲಕ. ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಓಮ್ನಿ ಉರುಳಿ ಬಿದ್ದಿದೆ. ನಂತರ ಜೀವ ಉಳಿಸಿಕೊಳ್ಳಲು ಚಾಲಕ ಈಜಿ ದಡ ಸೇರಿದ್ದಾನೆ. ಕೆರೆಗೆ ತಡೆ ಗೋಡೆ ಇಲ್ಲದ್ದರಿಂದ ಓಮ್ನಿ ಕೆರೆಗೆ ಉರುಳಿದೆ.

    ಮಂಗಳವಾರ ರಾತ್ರಿ ಕೆರೆಯ ಪಕ್ಕದಲ್ಲಿದ್ದ ರಸ್ತೆಯಲ್ಲಿ ಓಂಕಾರಯ್ಯ ಓಮ್ನಿ ಚಲಾಯಿಸಿಕೊಂಡು ಬರುತ್ತಿದ್ದರು. ಆಗ ಎದುರಿನಿಂದ ಬಂದ ಲಾರಿಗೆ ದಾರಿ ನೀಡಲು ಹೋಗಿ ನಿಯಂತ್ರಣ ತಪ್ಪಿ ಕೆರೆಗೆ ವಾಹನ ಪಲ್ಟಿಯಾಗಿದೆ. ಓಮ್ನಿಯಲ್ಲಿ ಪ್ರಯಾಣಿಕರು ಇಲ್ಲದ್ದರಿಂದ ಭಾರಿ ದುರಂತ ತಪ್ಪಿದೆ.

    ಕೆರೆಯ ದಂಡೆಯ ಮೇಲೆ ನಿತ್ಯವೂ ನೂರಾರು ವಾಹನಗಳು ಓಡಾಡುತ್ತವೆ. ಆದರೂ ಕೂಡ ಕೆರೆಗೆ ತಡೆಗೋಡೆ ನಿರ್ಮಿಸಿಲ್ಲವೆಂದು ಅಧಿಕಾರಿಗಳು ಮತ್ತು ಸರ್ಕಾರದ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

    ಘಟನೆ ಕುರಿತು ಆಡೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv