Tag: ಔಷಧಾಲಯ

  • ಜೂನ್ 21 ರಿಂದ 5 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ

    ಜೂನ್ 21 ರಿಂದ 5 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ

    ವಾಷಿಂಗ್ಟನ್: ವಿಶ್ವದಾದ್ಯಂತ ಕೋವಿಡ್ ಹೆಚ್ಚಳವಾಗುತ್ತಿದೆ. ಇದರಿಂದ ಆಯಾ ದೇಶಗಳು ಕೋವಿಡ್ ನಿಯಂತ್ರಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆ. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್ ಹಾಗೂ ಐಸಿಯು ಘಟಕಗಳನ್ನು ಸಿದ್ಧಪಡಿಸಿವೆ.

    CHILDRENS COVID

    ಅಮೆರಿಕದಲ್ಲೂ ಕೆಲ ದಿನಗಳಿಂದ ಕೋವಿಡ್ ಕೇಸ್ ಹೆಚ್ಚಳವಾಗುತ್ತಿದ್ದು, ಮಕ್ಕಳ ಮೇಲೆ ನಿಗಾ ಇರಿಸಲಾಗಿದೆ. ಅದಕ್ಕಾಗಿ ಜೂನ್ 21 ರಿಂದ 5 ವರ್ಷದ ಮಳಿಗೂ ಕೊರೊನಾ ಲಸಿಕೆ ನೀಡಲು ಅಮೆರಿಕದ ಆರೋಗ್ಯ ಇಲಾಖೆ ನಿರ್ಧರಿಸಿದೆ. ಇದನ್ನೂ ಓದಿ: 140 ಪ್ರಯಾಣಿಕರ ಜೀವ ಉಳಿಸಿ ತಾನೇ ಪ್ರಾಣ ಬಿಟ್ಟ ಹೈಸ್ಪೀಡ್ ಬುಲೆಟ್ ಟ್ರೈನ್ ಚಾಲಕ

    ಇದಕ್ಕಾಗಿ ಜೂನ್ 15ರಂದೇ ಸ್ವತಂತ್ರ ತಜ್ಞರ ಸಮಿತಿಯು ಮಕ್ಕಳ ದತ್ತಾಂಶವನ್ನು ಕಲೆ ಹಾಕಲು ಸಭೆ ನಡೆಸಲಿದೆ. ಇದನ್ನೂ ಓದಿ: ಸೇನೆಯಲ್ಲಿ 4 ವರ್ಷ ಮಾತ್ರ ಸೇವೆ – ಶೀಘ್ರವೇ ಅಗ್ನಿಪಥ್‌ಗೆ ಅನುಮೋದನೆ

    COVID HIKE

    ಈ ಕುರಿತು ಮಾಹಿತಿ ನೀಡಿರುವ ಶ್ವೇತಭವನದ ಕೋವಿಡ್ ಪ್ರತಿಕ್ರಿಯೆ ಸಂಯೋಜಕ ಡಾ.ಆಶಿಶ್ ಝಾ, ಬೈಡನ್ ನೇತೃತ್ವದ ಸರ್ಕಾರವು 10 ಮಿಲಿಯನ್ (ದಶಲಕ್ಷ) ನಷ್ಟು ಫಿಜರ್ ಮತ್ತು ಮೊಡೆರ್ನಾ ಲಸಿಕೆಗಳನ್ನು ರಾಜ್ಯಗಳ ಔಷಧಾಲಯಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಲಭ್ಯವಾಗುವಂತೆ ಮಾಡಿದೆ. ಆರೋಗ್ಯ ಇಲಾಖೆ ಅಧಿಕೃತ ಆದೇಶ ಹೊರಡಿಸಿದ ನಂತರ ಲಸಿಕೆಯನ್ನು ವಿತರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

  • ಕಾಶ್ಮೀರದಲ್ಲಿ ಮನಬಂದಂತೆ ಕಾರ್ಮಿಕರ ಮೇಲೆ ಗುಂಡಿನ ದಾಳಿ – ಇಬ್ಬರು ಬಲಿ

    ಕಾಶ್ಮೀರದಲ್ಲಿ ಮನಬಂದಂತೆ ಕಾರ್ಮಿಕರ ಮೇಲೆ ಗುಂಡಿನ ದಾಳಿ – ಇಬ್ಬರು ಬಲಿ

    ಶ್ರೀನಗರ: ಭಯೋತ್ಪಾದಕರು ಮನಬಂದಂತೆ ಕಾರ್ಮಿಕರ ಮೇಲೆ ಗುಂಡು ಹರಿಸುತ್ತಿದ್ದು, ಪರಿಣಾಮ ಇಬ್ಬರು ಸ್ಥಳೀಯೇತರ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನ ವಾನ್ಪೋಹ್ ಪ್ರದೇಶದಲ್ಲಿ ನಡೆದಿದೆ.

    ಸಿಐಡಿ ಮೂಲಗಳನ್ನು ಪ್ರಕಾರ, ಕಾಶ್ಮೀರಿ ಅಲ್ಲದ ಮೂವರು ಕಾರ್ಮಿಕರಾದ ರಾಜಾ ರೇಶಿ ದೇವ್, ಜೋಗಿಂದರ್ ರೇಶಿ ದೇವ್ ಮತ್ತು ಚುಂಚುನ್ ರೇಶಿ ದೇವ್ ಎಂಬವರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಈ ಮೂವರಲ್ಲಿ ರಾಜಾ ರೇಶಿ ದೇವ್, ಜೋಗಿಂದರ್ ರೆಶಿ ದೇವ್ ಮೃತಪಟ್ಟಿದ್ದು, ಚುಂಚುನ್ ರೇಶಿ ದೇವ್ ಅವರಿಗೆ ಗಾಯವಾಗಿದೆ. ಇದನ್ನೂ ಓದಿ: ಬಾಲಕಿ ಅತ್ಯಾಚಾರ ಪ್ರಕರಣ – ಎಸ್‍ಪಿ, ಬಿಎಸ್‍ಪಿ ಜಿಲ್ಲಾ ಅಧ್ಯಕ್ಷ ಸೇರಿ 7 ಮಂದಿ ಅರೆಸ್ಟ್

    ಶನಿವಾರ ಬಿಹಾರ ಮೂಲದ ಗೋಲ್ಗಪ್ಪ ಮಾರಾಟ ಮಾಡುತ್ತಿದ್ದ ಅರವಿಂದ್ ಕುಮಾರ್ ಅವರನ್ನು ಶ್ರೀನಗರದ ಈದ್ಗಾದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಉತ್ತರ ಪ್ರದೇಶದ ಕಾರ್ಮಿಕ ಸಗೀರ್ ಅಹ್ಮದ್ ಅವರನ್ನು ಪುಲ್ವಾಮಾದಲ್ಲಿ ಹತ್ಯೆಗೈದಿದ್ದರು.

    ಈ ಮೊದಲು ಮೂವರನ್ನು ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ್ದರು. ಇದರಲ್ಲಿ ಪ್ರಮುಖ ನಗರದ ಅತ್ಯಂತ ಪ್ರಸಿದ್ಧ ಔಷಧಾಲಯದ ಮಾಲೀಕ, ಕಾಶ್ಮೀರಿ ಪಂಡಿತ್ ಉದ್ಯಮಿ ಮಖನ್ ಲಾಲ್ ಬಿಂದ್ರೂ ಮತ್ತು ಬಿಹಾರದ ನಿವಾಸಿ ಗೋಲ್ಗಪ್ಪ ಮಾರಾಟ ಮಾಡುವ ಮೂಲಕ ತನ್ನ ದೈನಂದಿನ ಜೀವನ ನಡೆಸುತ್ತಿದ್ದ ಅರವಿಂದ್ ಅವರನ್ನು ಗುಂಡಿಕ್ಕಿ ಕೊಂದಿದ್ದರು. ಇದನ್ನೂ ಓದಿ: ಸಿಲಿಂಡರ್ ಸ್ಪೋಟ – ಮನೆ ಬೆಂಕಿಗಾಹುತಿ

    ಕಾಶ್ಮೀರ ಪೊಲೀಸರ ಉಗ್ರ ನಿಗ್ರಹ ಘಟಕದ ಕೇಂದ್ರ ಕಚೇರಿಯಾದ ಹಿರಿಯ ಪೊಲೀಸ್ ಅಧೀಕ್ಷಕರ ಕಛೇರಿಯಿಂದ ಕೆಲವೇ ಮೀಟರ್ ದೂರದಲ್ಲಿರುವ ಇಕ್ಬಾಲ್ ಪಾರ್ಕ್‍ನಲ್ಲಿ ಔಷಧಾಲಯದಲ್ಲಿ ಔಷಧ ವಿತರಿಸುವಾಗ ಬಿಂದ್ರೂ ಅವರನ್ನು ಸಂಜೆ ಉಗ್ರರು ದಾಳಿ ಮಾಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ.