Tag: ಕಂದಹಾರ್

  • ಭಾರತೀಯ ರಾಯಭಾರ ಕಚೇರಿ ಮೇಲೆ ತಾಲಿಬಾನ್ ದಾಳಿ

    ಭಾರತೀಯ ರಾಯಭಾರ ಕಚೇರಿ ಮೇಲೆ ತಾಲಿಬಾನ್ ದಾಳಿ

    ಕಾಬೂಲ್: ಅಫ್ಘಾನಿಸ್ತಾನವನ್ನು ಹಿಡಿತಕ್ಕೆ ಪಡೆದಿರುವ ತಾಲಿಬಾನ್ ಭಯೋತ್ಪಾದಕರ ಅಟ್ಟಹಾಸ ನಿಂತಿಲ್ಲ. ಈಗ ಭಾರತೀಯ ರಾಯಭಾರ ಕಚೇರಿಗೆ ದಾಳಿ ಮಾಡಿ ದಾಖಲೆಗಳನ್ನು ಹುಡುಕಾಡಿದ್ದಾರೆ ಎಂದು ವರದಿಯಾಗಿದೆ.

    ಹೇರತ್ ಮತ್ತು ಕಂದಹಾರ್ ನಲ್ಲಿರುವ  ಭಾರತದ ರಾಯಭಾರ ಕಚೇರಿಗೆ ದಾಳಿ ಮಾಡಿರುವ ತಾಲಿಬಾನ್ ಉಗ್ರರು ದಾಖಲೆಗಳಿಗಾಗಿ ಹುಡುಕಾಡಿದ್ದಾರೆ ಮತ್ತು ರಾಯಭಾರ ಕಚೇರಿಯಲ್ಲಿದ್ದ ವಾಹನಗಳನ್ನು ಕೊಂಡೊಯ್ದಿದ್ದಾರೆ. ಕಾಬೂಲ್ ಮತ್ತು ಜಲಾಲಬಾದ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮೇಲೆ ದಾಳಿ ನಡೆದಿದ್ಯಾ ಇಲ್ಲವೋ ಎನ್ನುವುದು ತಿಳಿದು ಬಂದಿಲ್ಲ.

    ಭಯೋತ್ಪಾದಕ ಗುಂಪಿನ ಮುಖ್ಯಸ್ಥ ಮತ್ತು ತಾಲಿಬಾನ್‍ನ ಉಪನಾಯಕ ಸಿರಾಜುದ್ದೀನ್ ಹಕ್ಕಾನಿಯ ಸಹೋದರ ಅನಸ್ ಹಕ್ಕಾನಿ ನೇತೃತ್ವದ ಹಕ್ಕಾನಿ ನೆಟ್‍ವರ್ಕ್‍ನ ಸುಮಾರು 6 ಸಾವಿರ ಕಾರ್ಯಕರ್ತರು ರಾಜಧಾನಿಯಾದ ಕಾಬೂಲ್ ಮೇಲೆ ಹಿಡಿತ ಸಾಧಿಸಿದ್ದಾರೆ ಎಂದು ವರದಿಯಾಗಿದೆ.

    ಅಫ್ಘಾನಿಸ್ತಾನದ ಗುಪ್ತಚರ ಸಂಸ್ಥೆ ಎನ್‍ಡಿಎಸ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದವರಿಗೆ ಮನೆ ಮನೆಯಲ್ಲೂ ತಾಲಿಬಾನ್ ಬಂದೂಕುಧಾರಿಗಳು ಹುಡುಕಾಡುತ್ತಿದ್ದಾರೆ.

    ಅಫ್ಘಾನಿಸ್ತಾನದಲ್ಲಿ ಇನ್ನೂ 450 ಭಾರತೀಯರು ಸಿಲುಕಿಕೊಂಡಿದ್ದು ಅವರನ್ನು ಭಾರತಕ್ಕೆ ವಾಪಸ್ ಕರೆತರುವುದೇ ಈಗ ಸರ್ಕಾರಕ್ಕೆ ಸವಾಲಾಗಿದೆ. ಅಮೆರಿಕ ಮತ್ತು ಇತರೆ ರಾಯಭಾರ ಕಚೇರಿಗಳ ಮೂಲಕ ಭಾರತೀಯರನ್ನು ಕರೆತರುವ ಪ್ರಯತ್ನವನ್ನು ವಿದೇಶಾಂಗ ಸಚಿವಾಲಯ ಮಾಡುತ್ತಿದೆ. ಇದನ್ನೂ ಓದಿ: ವಿಮಾನದಿಂದ ಬಿದ್ದವರ ಗುರುತು ಪತ್ತೆ- ಮೂವರಲ್ಲಿ ಒಬ್ಬ ಯುವ ಫುಟ್‍ಬಾಲ್ ಆಟಗಾರ 

    ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡು ನಾಲ್ಕು ದಿನವಾದ್ರೂ ಇನ್ನೂ ಅಲ್ಲಿ ಸರ್ಕಾರ ರಚನೆ ಆಗಿಲ್ಲ. ಅಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ವಿಮಾನ ನಿಲ್ದಾಣಕ್ಕೆ ಕರೆತರುವುದೇ ಹರಸಾಹಸವಾಗಿದೆ. ಪ್ರತಿ ಚೆಕ್‍ಪೋಸ್ಟ್‍ಗಳಲ್ಲೂ ಬಂದೂಕುಧಾರಿ ತಾಲಿಬಾನಿಗಳು ತಪಾಸಣೆ ಮಾಡ್ತಿರುವ ಕಾರಣ ತಾಲಿಬಾನಿಗಳ ಅಧಿಕೃತ ಒಪ್ಪಿಗೆ ಸಿಗದ ಹೊರತು ಜೀವಭಯದಿಂದಾಗಿ ಕಾಬೂಲ್‍ನಲ್ಲಿ ಸಿಲುಕೊಂಡಿರುವ ಕೆಲವು ಭಾರತೀಯರು ಮನೆಬಿಟ್ಟು ಹೊರಬರಲು ಸಿದ್ಧರಿಲ್ಲ.

    ಕಾಬೂಲ್ ವಿಮಾನ ನಿಲ್ದಾಣದಿಂದ ಭಾರತದ ರಾಯಭಾರ ಕಚೇರಿಗೆ 10 ಕಿಲೋ ಮೀಟರ್ ದೂರವಿದೆ. ವಿಮಾನ ನಿಲ್ದಾಣಕ್ಕೆ ಅಮೆರಿಕ ಸೈನಿಕರ ಪಹರೆ ಇದ್ದರೂ ಹೊರಗಿನ ಭದ್ರತೆ ಅಮೆರಿಕ ಸೈನಿಕರ ಕೈಯಲ್ಲಿ ಇಲ್ಲ. ಹೀಗಾಗಿ ತಾಲಿಬಾನಿಗಳ ಸ್ಥಳೀಯ ನಾಯಕರೊಂದಿಗೆ ಸಂಪರ್ಕ ಸಾಧಿಸುವುದು ಕೂಡಾ ಸವಾಲಾಗಿದೆ ಎಂದು ವರದಿ ಆಗಿದೆ. ಇದನ್ನೂ ಓದಿ: ಪ್ರಜಾಪ್ರಭುತ್ವ ಸರ್ಕಾರ ಇಲ್ಲ, ಷರಿಯಾ ಕಾನೂನುಗಳೇ ಜಾರಿ – ತಾಲಿಬಾನ್

    ನಾಲ್ಕು ದಿನಗಳ ಹಿಂದೆ ಭಾರತದ ರಾಜತಾಂತ್ರಿಕ ಸಿಬ್ಬಂದಿ, ಸೈನಿಕರನ್ನು ಕರೆತರುವ ವೇಳೆ ಚೆಕ್‍ಪೋಸ್ಟ್ ನಲ್ಲಿ ತಾಲಿಬಾನಿಗಳು ತಡೆಹಾಕಿದ್ದರು. ಆ ಬಳಿಕ ಅಲ್ಲಿಂದ ವಿಮಾನ ನಿಲ್ದಾಣಕ್ಕೆ ಕರೆತರಲು ಭಾರತಕ್ಕೆ 1 ದಿನ ಹಿಡಿದಿತ್ತು.

  • ಕಂದಹಾರ್ ಏರ್ ಪೋರ್ಟ್ ಮೇಲೆ ರಾಕೆಟ್ ದಾಳಿ – ವಿಮಾನ ಹಾರಾಟ ರದ್ದು

    ಕಂದಹಾರ್ ಏರ್ ಪೋರ್ಟ್ ಮೇಲೆ ರಾಕೆಟ್ ದಾಳಿ – ವಿಮಾನ ಹಾರಾಟ ರದ್ದು

    ಕಾಬೂಲ್: ದಕ್ಷಿಣ ಅಫ್ಘಾನಿಸ್ತಾನದ ಕಂದಹಾರ್ ವಿಮಾನ ನಿಲ್ದಾಣದಲ್ಲಿ ಉಗ್ರರು ಮೂರು ರಾಕೆಟ್‍ಗಳ ದಾಳಿ ನಡೆಸಿದ್ದಾರೆ. ಮೂರರಲ್ಲಿ ಎರಡು ರಾಕೆಟ್‍ಗಳು ರನ್ ವೇ ಮೇಲೆ ಬಿದ್ದು, ಸ್ಫೋಟಗೊಂಡಿವೆ.

    ಶನಿವಾರ ರಾತ್ರಿ ವಿಮಾನ ನಿಲ್ದಾಣದ ಮೇಲೆ ಮೂರು ರಾಕೆಟ್‍ಗಳನ್ನು ಹಾರಿಸಲಾಗಿದ್ದು, ಅವುಗಳಲ್ಲಿ ಎರಡು ರಾಕೆಟ್ ರನ್‍ವೇಗೆ ಹೊಡೆದಿದೆ. ಪರಿಣಾಮ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮುಖ್ಯಸ್ಥ ಮಸೂದ್ ಪಶ್ತುನ್ ತಿಳಿಸಿದ್ದಾರೆ. ಇದೀಗ ರನ್‍ವೇಯನ್ನು ದುರಸ್ತಿ ಮಾಡಿಸುವ ಕೆಲಸ ನಡೆಯುತ್ತಿದ್ದು, ವಿಮಾನಗಳು ಭಾನುವಾರದ ನಂತರ ಕಾರ್ಯನಿರ್ವಹಿಸುವ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.

    ತಾಲಿಬಾನ್ ಕೃತ್ಯ ಶಂಕೆ:
    ಕಳೆದ ಕೆಲ ದಿನಗಳಿಂದಲೂ ಉಗ್ರರು ಸತತ ದಾಳಿ ನಡೆಸುತ್ತಿದ್ದಾರೆ. ನಗರದ ಸುತ್ತಲೂ ತಾಲಿಬಾನ್, ಹೆರಾತ್, ಲಷ್ಕರ್ ಗಾಹಾ ಸಂಘಟನೆಯಯ ಉಗ್ರರು ಆವರಿಸಿದ್ದು, ಕಂದಹಾರ್ ವಶಕ್ಕೆ ಮುಂದಾಗುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿವೆ. ರಾಕೆಟ್ ದಾಳಿ ಸಹ ತಾಲಿಬಾನ್ ನಡೆಸಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದೆ.

    ಕಂದಹಾರ್ ಮೇಲೆ ದಾಳಿ ಏಕೆ?:
    ಕಂದಹಾರ್ ಅಫ್ಘಾನಿಸ್ತಾನದ ಎರಡನೇ ಅತಿ ದೊಡ್ಡ ನಗರವಾಗಿದ್ದು, ಇಲ್ಲಿಯ ವಿಮಾನ ನಿಲ್ದಾಣದಿಂದಲೇ ಸೇನೆಗೆ ಸಶಾಸ್ತ್ರಗಳ ಸರಬರಾಜು ಮಾಡಲಾಗುತ್ತದೆ. ಈ ಹಿನ್ನೆಲೆ ಕಂದಹಾರ್ ಮೇಲೆ ದಾಳಿ ನಡೆದಿರುವ ಸಾಧ್ಯತೆಗಳಿವೆ. ಕಂದಹಾರ್ ವಿಮಾನ ನಿಲ್ದಾಣದ ಮೇಲೆಯೇ ಉಗ್ರರು ಕಣ್ಣಿಟ್ಟಿದ್ದು, ಕಳೆದ ಎರಡ್ಮೂರು ವಾರಗಳಿಂದ ಸೇನೆಯ ಮೇಲೆ ನಿರಂತರವಾಗಿ ದಾಳಿ ನಡೆಸಿಕೊಂಡು ಬರುತ್ತಿದ್ದಾರೆ. ಉಗ್ರರ ವಿರುದ್ಧ ಅಫ್ಘಾನಿಸ್ತಾನ ಸೇನೆ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ.

    ಅಮೆರಿಕದ ಸಹಾಯ: ಅಫ್ಘಾನಿಸ್ತಾನದ ನ್ಯಾಷನಲ್ ಡಿಫೆನ್ಸ್ ಸೆಕ್ಯುರಿಟಿ ಫೋರ್ಸ್ ಅಮೆರಿಕದ ಸಹಾಯ ಪಡೆದು ಉಗ್ರರು ವಶಕ್ಕೆ ಗ್ರಾಮಗಳನ್ನು ಖಾಲಿ ಮಾಡಿಸುವಲ್ಲಿ ಯಶಸ್ವಿಯಾಗಿದೆ. ಪಾಕಿಸ್ತಾನದ ಬೆಂಬಲದಿಂದ ತಾಲಿಬಾನ್ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಕೊಂಡಿರುವ ಬಗ್ಗೆ ವರದಿಯಾಗಿದೆ.

    ಯುದ್ಧದ ಸ್ಥಿತಿ ನಿರ್ಮಾಣ: ಕಂದಹಾರ್ ನಗರ ಪ್ರವೇಶಿಸಿರುವ ತಾಲಿಬಾನ್ ಉಗ್ರರು ಸೇನೆಯ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ಅಫ್ಘಾನಿಸ್ತಾನದಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಾವಿರಾರು ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಹಲವು ಇಲಾಖೆಗಳಲ್ಲಿ ಅಡಗಿ ಕುಳಿತಿದ್ದ ಉಗ್ರರನ್ನು ಸೇನೆ ಹೊಡೆದುರಿಳಿಸಿದ್ದು, ಮೃತರಲ್ಲಿ ಪಾಕಿಸ್ತಾನದ ಅಧಿಕಾರಿಗಳು ಸಹ ಇದ್ದಾರೆ. ಮೃತರ ಬಳಿ ಪಾಕಿಸ್ತಾನದ ಗುರುತಿನ ಚೀಟಿಗಳು ಲಭ್ಯವಾಗಿವೆ. ಇದನ್ನೂ ಓದಿ: ಕೇಂದ್ರದ 10 ಕೊರೊನಾ ಹಾಟ್ ಸ್ಪಾಟ್- ರಾಜ್ಯಗಳ ಲಿಸ್ಟ್ ನಲ್ಲಿ ಕರ್ನಾಟಕ

  • ಕಂದಹಾರ್‌ಗೆ ನುಗ್ಗಿದ ತಾಲಿಬಾನ್ ಉಗ್ರರು

    ಕಂದಹಾರ್‌ಗೆ ನುಗ್ಗಿದ ತಾಲಿಬಾನ್ ಉಗ್ರರು

    – ಇರಾನ್ ಗಡಿಪೋಸ್ಟ್ ವಶ
    – ಅಫ್ಘಾನ್ ಸೇನೆ, ತಾಲಿಬಾನ್ ಸಂಘರ್ಷ ತೀವ್ರ

    ಕಾಬೂಲ್: ಅಮೆರಿಕ ಸೇನೆ ಮತ್ತು ನ್ಯಾಟೋ ಪಡೆಗಳು ಮರಳುತ್ತಿದ್ದಂತೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಹೆಚ್ಚಾಗುತ್ತಿದೆ. ಈಗ ದೇಶದ 2ನೇ ಅತಿದೊಡ್ಡ ನಗರವಾಗಿರುವ 6 ಲಕ್ಷ ಜನಸಂಖ್ಯೆಯುಳ್ಳ ಕಂದಹಾರ್ ನಗರವನ್ನು ಪ್ರವೇಶಿಸಿದ್ದಾರೆ.

    ವಿದೇಶಿ ಪಡೆಗಳು ತೆರಳುತ್ತಿದ್ದಂತೆ ಒಂದೊಂದೇ ಪ್ರದೇಶವನ್ನು ವಶಪಡಿಸಿಕೊಳ್ಳುತ್ತಿರುವ ಉಗ್ರರು ಈಗಾಗಲೇ ದೇಶದ ಶೇ.85ರಷ್ಟುಭಾಗವನ್ನು ವಶಪಡಿಸಿಕೊಂಡಿರುವುದಾಗಿ ಪ್ರಕಟಿಸಿದ್ದಾರೆ. ಇಷ್ಟೇ ಅಲ್ಲದೇ ಇರಾನ್ ಜೊತೆಗಿನ ವ್ಯಾಪಾರ ನಡೆಸುವ ಗಡಿ ಚೆಕ್ ಪೋಸ್ಟ್  ವಶಕ್ಕೆ ಪಡೆದಿದ್ದಾರೆ.

    https://twitter.com/TGhazniwal1/status/1414152231973179392

    ಕಂದಹಾರ್ ಗವರ್ನರ್ ವಕ್ತಾರರಾದ ಬಹಿರ್ ಅಹಮದಿ ಅವರು, ದೇಶದ ಎರಡನೇ ಅತಿದೊಡ್ಡ ನಗರ ಕಂದಹಾರ್ ಅನ್ನು ಕಳೆದ ಶುಕ್ರವಾರ ಉಗ್ರರು ಪ್ರವೇಶಿಸಿದ್ದಾರೆ ಎಂದು ತಿಳಿಸಿದ್ದಾರೆ. ಉಗ್ರರು ಮುನ್ನುಗ್ಗುತ್ತಿರುವುದನ್ನು ನೋಡಿದರೆ ಅಫ್ಘಾನಿಸ್ತಾನ ಪೂರ್ಣ ಪ್ರಮಾಣದಲ್ಲಿ ತಾಲಿಬಾನ್ ಕೈವಶವಾಗುವ ಅಪಾಯವಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ. ಇದನ್ನೂ ಓದಿ: ಪಕ್ಷೇತರರಾಗಿ ಅಖಾಡಕ್ಕಿಳೀತಾರಾ ಜಿಟಿಡಿ?

    https://twitter.com/TGhazniwal1/status/1414273311887011843

    7 ಪೊಲೀಸ್ ಜಿಲ್ಲಾ ಪ್ರದೇಶದ ಮೂಲಕ ಕಂದಹಾರ್ ನಗರವನ್ನು ಮೊದಲ ಬಾರಿಗೆ ಪ್ರವೇಶಿಸಿದ್ದು, ಅಫ್ಘಾನ್ ಸೇನೆ ದಾಳಿ ನಡೆಸಿ ತಿರುಗೇಟು ನೀಡುತ್ತಿದೆ. ಇದರಿಂದಾಗಿ ಎರಡೂ ಬಣಗಳ ನಡುವೆ ಸಂಘರ್ಷ ಜೋರಾಗಿದೆ.

    https://twitter.com/TGhazniwal1/status/1414202014301577218

    ಅಮೆರಿಕ ಹಿಂದೆ ಸರಿದಿದ್ದು ಯಾಕೆ?
    2001ರಲ್ಲಿ ವಿಶ್ವ ವಾಣಿಜ್ಯ ಕಟ್ಟಡದ ಮೇಲೆ ಉಗ್ರರ ದಾಳಿಯಿಂದ ಸಿಟ್ಟಾದ ಅಮೆರಿಕ ಅಲ್‍ ಖೈದಾ ಉಗ್ರರನ್ನು ಮಟ್ಟ ಹಾಕಲು ದೊಡ್ಡ ಕಾರ್ಯಾಚರಣೆ ಆರಂಭಿಸಿತು. ಕಳೆದ 20 ವರ್ಷಗಳಿಂದ ಅಮೆರಿಕ ಸೇನೆ ಮತ್ತು ನ್ಯಾಟೋ ಪಡೆಗಳು ಅಫ್ಘಾನಿಸ್ತಾನದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಆದರೆ ಅಫ್ಘಾನಿಸ್ತಾನದಲ್ಲಿ ಸೈನ್ಯವನ್ನು ಕಳುಹಿಸಿದ್ದರಿಂದ ಅಮೆರಿಕಕ್ಕೆ ಭಾರೀ ಪ್ರಮಾಣದಲ್ಲಿ ನಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಹಿಂದೆ ಸರಿಯುವ ನಿರ್ಧಾರವನ್ನು ಅಮೆರಿಕ ಕೈಗೊಂಡಿದ್ದು, ಮೇ 1ರಿಂದ ಆ ಪ್ರಕ್ರಿಯೆ ಆರಂಭವಾಗಿದೆ.

    https://twitter.com/TGhazniwal1/status/1413837949477732358

    ಭಾರತೀಯರು ವಾಪಸ್:
    ಕಂದಾಹರ್ ನಲ್ಲಿರುವ ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಭಾರತೀಯ ರಾಜತಾಂತ್ರಿಕರು, ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಯನ್ನು ಕರೆ ತರಲು ವಾಯು ಪಡೆಯ ವಿಶೇಷ ವಿಮಾನವನ್ನು ಭಾರತ ಕಳುಹಿಸಿದೆ. ಸದ್ಯ ಈಗ  ಕಾಬೂಲ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾರತೀಯ ರಾಜತಾಂತ್ರಿಕರು ಮತ್ತು ಅಫ್ಘಾನ್ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ.