Tag: ಕಂದಾಯ ನಿರೀಕ್ಷಕ

  • ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲು ಆರೋಪ – ಕಂದಾಯ ನಿರೀಕ್ಷಕ, ಗ್ರಾಮಾಡಳಿತ ಅಧಿಕಾರಿ ಸಸ್ಪೆಂಡ್

    ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲು ಆರೋಪ – ಕಂದಾಯ ನಿರೀಕ್ಷಕ, ಗ್ರಾಮಾಡಳಿತ ಅಧಿಕಾರಿ ಸಸ್ಪೆಂಡ್

    ಯಾದಗಿರಿ: ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲಾಗಿರುವ ಆರೋಪದ ಮೇಲೆ ಕಂದಾಯ ನಿರೀಕ್ಷಕ ಮತ್ತು ಗ್ರಾಮಾಡಳಿತ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

    ಯಾದಗಿರಿ (Yadagiri) ಜಿಲ್ಲೆಯ ಶಹಾಪುರ (Shahapura) ತಾಲೂಕಿನ ದೋರನಹಳ್ಳಿಯ ಕಂದಾಯ ನಿರೀಕ್ಷಕ ಮಹೇಂದ್ರಸ್ವಾಮಿ ಹಾಗೂ ಗ್ರಾಮಾಡಳಿತ ಅಧಿಕಾರಿ ದೇವಿಂದ್ರಪ್ಪ ಅವರನ್ನು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.ಇದನ್ನೂ ಓದಿ: ಮಟ್ಟಣ್ಣನವರ್ ಬಿಜೆಪಿ ಅಭ್ಯರ್ಥಿ ಆಗಿದ್ದವರು, ತಿಮರೋಡಿ RSSನವ್ರು, ಬಿಜೆಪಿ ಹೋರಾಟ ಯಾರ ವಿರುದ್ಧ – ಪ್ರಿಯಾಂಕ್ ಖರ್ಗೆ ಪ್ರಶ್ನೆ

    ಅಕ್ರಮ ಗಣಿಗಾರಿಕೆಯಲ್ಲಿ ಇಬ್ಬರು ಅಧಿಕಾರಿಗಳು ಶಾಮೀಲಾಗಿರುವ ಆಡಿಯೋವೊಂದು ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ.

  • 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ‘ಲೋಕಾ’ ಬಲೆಗೆ ಬಿದ್ದ ಅಧಿಕಾರಿ – ಅರೆಸ್ಟ್‌

    4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ‘ಲೋಕಾ’ ಬಲೆಗೆ ಬಿದ್ದ ಅಧಿಕಾರಿ – ಅರೆಸ್ಟ್‌

    ಮಂಗಳೂರು: 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಮುಲ್ಕಿ ಕಂದಾಯ ನಿರೀಕ್ಷಕ, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಧಿಕಾರಿಯನ್ನು ಬಂಧಿಸಲಾಗಿದೆ.

    ಮುಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ್ ಬಂಧಿತ ಆರೋಪಿ. ಆಸ್ತಿಯ ಪಹಣಿಯಲ್ಲಿ ಹೆಸರು ಸೇರಿಸಲು 4 ಲಕ್ಷ ರೂಪಾಯಿ‌ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಹೆಸರು ಸೇರ್ಪಡಗೆ ಅರ್ಜಿ ಸಲ್ಲಿಸಿದ್ದರೂ ಒಂದು ವರ್ಷದಿಂದ ಕ್ರಮ ಕೈಗೊಳ್ಳದೇ ಫೈಲ್ ಹಾಗೆಯೇ ಇರಿಸಿದ್ದ.

    ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚದ ಬೇಡಿಕೆ ಇಟ್ಟಿದ್ದ. ಈ ಕುರಿತು ಮಂಗಳೂರು ಲೋಕಾಯುಕ್ತ ಕಚೇರಿಗೆ ಸಂತ್ರಸ್ತ ವ್ಯಕ್ತಿ ದೂರು ನೀಡಿದ್ದರು. ಮಂಗಳೂರು ಹೊರವಲಯದ ಸುರತ್ಕಲ್ ಜಂಕ್ಷನ್ ಬಳಿ 4 ಲಕ್ಷ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.

    ರೆಡ್‌ಹ್ಯಾಂಡ್ ಆಗಿ ಕಂದಾಯ ನಿರೀಕ್ಷಕ ದಿನೇಶ್‌ ಸಿಕ್ಕಿಬಿದ್ದಿದ್ದಾನೆ. ಲೋಕಾಯುಕ್ತ ಎಸ್‌ಪಿ ನಟರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.