Tag: ಕಂಪ್ಯೂಟರ್ ಬಾಬಾ

  • ಹಠ ಯೋಗಕ್ಕೆ ದಿಗ್ವಿಜಯ್ ಸಿಂಗ್‍ರನ್ನ ಆಹ್ವಾನಿಸಿರಲಿಲ್ಲ: ಕಂಪ್ಯೂಟರ್ ಬಾಬಾ ಯೂಟರ್ನ್

    ಹಠ ಯೋಗಕ್ಕೆ ದಿಗ್ವಿಜಯ್ ಸಿಂಗ್‍ರನ್ನ ಆಹ್ವಾನಿಸಿರಲಿಲ್ಲ: ಕಂಪ್ಯೂಟರ್ ಬಾಬಾ ಯೂಟರ್ನ್

    ಭೋಪಾಲ್: ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು ಹಠ ಯೋಗಕ್ಕೆ ಆಹ್ವಾನಿಸಿರಲಿಲ್ಲ ಎಂದು ಬಿಜೆಪಿ ಮಾಜಿ ಸಚಿವ ಕಂಪ್ಯೂಟರ್ ಬಾಬಾ ಯೂಟರ್ನ್ ಹೊಡೆದಿದ್ದಾರೆ.

    ಚುನಾವಣಾ ಆಯೋಗ ನೀಡಿರುವ ನೋಟಿಸ್‍ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವರು, ಹಠ ಯೋಗ ಕ್ಯಾಂಪ್‍ಗೆ ಬರುವಂತೆ ದಿಗ್ವಿಜಯ್ ಸಿಂಗ್ ಅವರಿಗೆ ಆಹ್ವಾನ ನೀಡಿರಲಿಲ್ಲ. ಅವರು ಪತ್ನಿಯ ಸಮೇತ ಬಂದು ಪೂಜೆಯಲ್ಲಿ ಭಾಗವಹಿಸಿದ್ದು ನನಗೆ ತಿಳಿದಿಲ್ಲ. ಅಷ್ಟೇ ಅಲ್ಲದೆ ದಾನಿಗಳಿಂದ ಹಣ ಸಂಗ್ರಹಿಸಿ ಹಠ ಯೋಗ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

    ಕಂಪ್ಯೂಟರ್ ಬಾಬಾ ಅವರ ಮೂಲ ಹೆಸರು ನಾಮ್‍ದಾಸ್ ತ್ಯಾಗಿ. ಅವರು ಬಿಜೆಪಿ ಮುಖಂಡ ಶಿವರಾಜ್ ಸಿಂಗ್ ಚೌವ್ಹಾನ್ ಅವರ ಸರ್ಕಾರದಲ್ಲಿ ಸಚಿವರಾಗಿದ್ದರು. ಆದರೆ ಭೋಪಾಲ್‍ನ ಸಫಿಯಾ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರ ಗೆಲುವಿಗಾಗಿ ಹಠ ಯೋಗ ಕ್ಯಾಂಪ್ ಮಾಡಿದ್ದರು.

    ಈ ಹಿಂದೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಕಂಪ್ಯೂಟರ್ ಬಾಬಾ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಐದು ವರ್ಷ ಸರ್ಕಾರ ನಡೆಸಿದರೂ ರಾಮ ಮಂದಿರ ನಿರ್ಮಾಣ ಮಾಡಲಿಲ್ಲ. ರಾಮ ಮಂದಿರ ಇಲ್ಲವೆಂದ ಮೇಲೆ ಮೋದಿಯೂ ಇಲ್ಲ ಎಂದು ಹೇಳಿದ್ದರು. ಈ ಸಂಬಂಧ ಬಿಜೆಪಿಯು ಕಂಪ್ಯೂಟರ್ ಬಾಬಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

    ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಅವರಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಸಾಧ್ವಿ ಪ್ರಜ್ಞಾಸಿಂಗ್ ಕಣಕ್ಕೆ ಇಳಿದಿದ್ದಾರೆ. ಹೀಗಾಗಿ ಈ ನಾಯಕರ ಮಧ್ಯೆ ಭರ್ಜರಿ ಪೈಪೋಟಿ ಏರ್ಪಟ್ಟಿದೆ. ಮಧ್ಯಪ್ರದೇಶದ ಸಾಗರ್, ಭೋಪಾಲ್ ಸೇರಿದಂತೆ 8 ಲೋಕಸಭಾ ಕ್ಷೇತ್ರಗಳ ಮತದಾನವು ಮೇ 12ರಂದು ನಡೆಯಲಿದೆ.

  • ದಿಗ್ವಿಜಯ್ ಸಿಂಗ್ ಪರ ಬಿಜೆಪಿಯ ಮಾಜಿ ಸಚಿವ ಪ್ರಚಾರ

    ದಿಗ್ವಿಜಯ್ ಸಿಂಗ್ ಪರ ಬಿಜೆಪಿಯ ಮಾಜಿ ಸಚಿವ ಪ್ರಚಾರ

    ಭೋಪಾಲ್: ಬಿಜೆಪಿಯ ಮಾಜಿ ಸಚಿವ ಕಂಪ್ಯೂಟರ್ ಬಾಬಾ ಅವರು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪರ ಪ್ರಚಾರ ಮಾಡುತ್ತಿದ್ದಾರೆ.

    ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ದಿಗ್ವಿಜಯ್ ಸಿಂಗ್ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಅವರ ಗೆಲುವಿಗಾಗಿ ಕಂಪ್ಯೂಟರ್ ಬಾಬಾ ಅವರು ಹಠ ಯೋಗ ಮಾಡುತ್ತಿದ್ದಾರೆ. ಸಾವಿರಾರು ಸಾಧುಗಳು ಕೂಡ ಹಠ ಯೋಗದಲ್ಲಿ ಭಾಗಿಯಾಗಿದ್ದಾರೆ.

    ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕಂಪ್ಯೂಟರ್ ಬಾಬಾ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಐದು ವರ್ಷ ಸರ್ಕಾರ ನಡೆಸಿದರೂ ರಾಮ ಮಂದಿರ ನಿರ್ಮಾಣ ಮಾಡಲಿಲ್ಲ. ರಾಮ ಮಂದಿನ ಇಲ್ಲವೆಂದಮೇಲೆ ಮೋದಿಯೂ ಇಲ್ಲ ಎಂದು ಹೇಳಿದ್ದಾರೆ.

    ಕಂಪ್ಯೂಟರ್ ಬಾಬಾ ನೇತೃತ್ವದಲ್ಲಿ ದಿಗ್ವಿಜಯ್ ಸಿಂಗ್ ಅವರು ಇಂದು ಕುಟುಂಬ ಸಮೇತ ವಿಶೇಷ ಪೂಜೆ ನೆರವೇರಿಸಿದರು. ಇತ್ತ ಅನೇಕ ಸಾಧುಗಳು ಹಠ ಯೋಗದಲ್ಲಿ ನಿರತರಾಗಿದ್ದಾರೆ.

    ದಿಗ್ವಿಜಯ್ ಸಿಂಗ್ ಅವರಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಸಾಧ್ವಿ ಪ್ರಜ್ಞಾಸಿಂಗ್ ಕಣಕ್ಕೆ ಇಳಿದಿದ್ದಾರೆ. ಹೀಗಾಗಿ ಈ ನಾಯಕರ ಮಧ್ಯೆ ಭರ್ಜರಿ ಪೈಪೋಟಿ ಏರ್ಪಟ್ಟಿದೆ. ಮಧ್ಯಪ್ರದೇಶದ ಸಾಗರ್, ಭೋಪಾಲ್ ಸೇರಿದಂತೆ 8 ಲೋಕಸಭಾ ಕ್ಷೇತ್ರಗಳ ಮತದಾನವು ಮೇ 12ರಂದು ನಡೆಯಲಿದೆ.