Tag: ಕಂಬನಿ

  • ಸಿದ್ದೇಶ್ವರ ಸ್ವಾಮಿಗಳ ಅಗಲಿಕೆಗೆ ಸ್ಯಾಂಡಲ್ ವುಡ್ ನಿಂದ ಕಂಬನಿ

    ಸಿದ್ದೇಶ್ವರ ಸ್ವಾಮಿಗಳ ಅಗಲಿಕೆಗೆ ಸ್ಯಾಂಡಲ್ ವುಡ್ ನಿಂದ ಕಂಬನಿ

    ಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ, ವಿಜಯಪುರದ ಜ್ಞಾನಯೋಗಾಶ್ರಮದ ಗುರುಗಳಾದ ಸಿದ್ದೇಶ್ವರ ಸ್ವಾಮಿಗಳ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನ ಸಾಕಷ್ಟು ಕಲಾವಿದರು, ನಿರ್ದೇಶಕರು ಮತ್ತು ತಂತ್ರಜ್ಞರು ಕಂಬನಿ ಮಿಡಿದಿದ್ದಾರೆ. ಅಗಲಿದ ಚೇತನನ ಗುಣಗಾನ ಮಾಡಿದ್ದಾರೆ. ನಾಡಿನ ಏಳಿಗೆಗಾಗಿ ಮಹಾತ್ಮ ಮತ್ತೆ ಹುಟ್ಟಿ ಬರಲಿ ಎಂದು ಪ್ರಾರ್ಥಿಸಿದ್ದಾರೆ.

    ಸಿದ್ದೇಶ್ವರ ಸ್ವಾಮಿ ಅಗಲಿಕೆಯ ಕುರಿತು ಟ್ವಿಟ್ ಮಾಡಿರುವ ನಟ ಧನಂಜಯ್, ‘ಶತಮಾನದ ಸಂತ, ನಾಡು ಕಂಡ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯರಾಗಿರುವುದು ತುಂಬಾ ನೋವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಜ್ಞಾನದ ಬೆಳಕು ನಮ್ಮನ್ನು ಸದಾ ಕಾಯುತ್ತಿರಲಿ’ ಎಂದು ಬರೆದಿದ್ದಾರೆ.

    ಹಿರಿಯ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಕೂಡ ಕಂಬನಿ ಮಿಡಿದಿದ್ದು, ‘ನಡೆದಾಡುವ ದೇವರು ಎಂದೇ ಭಕ್ತರ ಹೃದಯದಲ್ಲಿ ಉಳಿದಿರುವ, ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ ಅಪಾರ ನೋವು ತಂದಿದೆ. ನಿಮ್ಮ ಸಾಮಾಜಿಕ ಸೇವೆ ಯಾವಾಗಲೂ ಹೃದಯದಲ್ಲಿ ಇರತ್ತೆ. ನಿಮಗೆ ಅನಂತ ನೋವಿನ ಅಶ್ರುತರ್ಪಣೆ’ ಎಂದು ಟ್ವಿಟ್ ಮಾಡಿದ್ದಾರೆ.

    ನಿರ್ದೇಶಕ, ನಟ ರಿಷಬ್ ಶೆಟ್ಟಿ ಕೂಡ ಅಗಲಿದ ಸ್ವಾಮೀಜಿಗಳನ್ನು ನೆನಪಿಸಿಕೊಂಡಿದ್ದು, ‘ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ನಿಮ್ಮ ಅಗಲಿಕೆ ಸಹಿಸಲಸಾಧ್ಯ. ನಮಗಾಗಿ ಇನ್ನಷ್ಟು ವರ್ಷ ಬದುಕಬೇಕಿತ್ತು ನೀವು. ನಿಮ್ಮ ಬದುಕೇ ನಮಗೊಂದು ಆದರ್ಶ. ಹೋಗ್ಬನ್ನಿ ಗುರುವರ್ಯರೆ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ನಿರ್ದೇಶಕ ಗುರು ದೇಶಪಾಂಡೆ ಗುರುಗಳ ಲಿಂಗೈಕ್ಯಕ್ಕೆ ಅಂತಿಮ ನಮಗಳನ್ನು ಸಲ್ಲಿಸಿದ್ದು, ‘ವಿಜಯಪುರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ, ಕಾಯಕಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ’ ಎಂದು ಬರೆದುಕೊಂಡಿದ್ದಾರೆ. ಇವರುಗಳ ಜೊತೆಗೆ ಇನ್ನೂ ಅನೇಕ ಕಲಾವಿದರು, ತಂತ್ರಜ್ಞರು, ನಿರ್ದೇಶಕರು ಸೇರಿದಂತೆ ಅನೇಕರು ಕಂಬಿನಿ ಮಿಡಿದು, ಅಗಲಿದ ದೇವರಿಗೆ ನಮನ ಸಲ್ಲಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಿರಿಯ ನಟ ರಾಜೇಶ್ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

    ಹಿರಿಯ ನಟ ರಾಜೇಶ್ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

    ಹಿರಿಯ ನಟ ರಾಜೇಶ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ನಟರ ಅಗಲಿಕೆಯಿಂದಾಗಿ ಕನ್ನಡ ಚಿತ್ರರಂಗ ಅದ್ಭುತ ಕಲಾವಿದರೊಬ್ಬರನ್ನು ಕಳೆದುಕೊಂಡಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ : ರಾಜೇಶ್ ಅವರ ಕೊನೆಯ ಸಿನಿಮಾದ ಎಕ್ಸ್‌ಕ್ಲೂಸಿವ್‌ ಫೋಟೋಸ್, ಮಾಹಿತಿ


    ರಾಜೇಶ್ ಅವರ ಜತೆಗಿನ ನೆನಪುಗಳನ್ನು ಹಂಚಿಕೊಂಡಿರುವ ಅವರು, ನಾಯಕ ನಟರಾಗಿ ಮಾತ್ರವಲ್ಲದೆ ಪೋಷಕ ನಟರಾಗಿಯೂ ಬೆಳ್ಳಿ ತೆರೆಯನ್ನು ಬೆಳಗಿದ ರಾಜೇಶ್ ಅವರು ನನಗೆ ಚಿರಪರಿಚಿತರು. ಹಲವಾರು ಸಂದರ್ಭಗಳಲ್ಲಿ ನಾವು ಭೇಟಿಯಾಗಿದ್ದೆವು. ರಂಗಭೂಮಿ ಮೂಲಕ ಕಲಾ ಜಗತ್ತಿಗೆ ಪ್ರವೇಶ ಪಡೆದ ಮುನಿಚೌಡಪ್ಪ ಅವರಿಗೆ ರಂಗಭೂಮಿ ಕೊಟ್ಟ ಹೆಸರು ವಿದ್ಯಾಸಾಗರ್. ಇದನ್ನೂ ಓದಿ : ರವೀಂದ್ರ ಕಲಾಕ್ಷೇತ್ರದಲ್ಲಿ ನಟ ರಾಜೇಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ರಂಗಭೂಮಿ ಮೂಲಕವೇ ಬೆಳ್ಳೆ ತೆರೆಗೆ ಬಂದು ರಾಜೇಶ್ ಆಗಿ ಖ್ಯಾತಿ ಪಡೆದರು. ನಾಯಕ ನಟರಾಗಿ ಮತ್ತು ಪೋಷಕ ಪಾತ್ರಗಳಲ್ಲೂ ಮಿಂಚಿ ಮೂರು ತಲೆ ಮಾರಿನ ಕನ್ನಡಿಗರಿಗೆ ಪರಿಚಿತರಾಗಿದ್ದರು. ಒಬ್ಬೊಬ್ಬರಾಗಿ ಹಿರಿಯ ಕಲಾವಿದರನ್ನು ನಮ್ಮ ಕಲಾ ಜಗತ್ತು ಕಳೆದುಕೊಳ್ಳುತ್ತಿರುವುದು ಬಹಳ ದುಃಖದ ಸಂಗತಿ.ಇವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅಭಿಮಾನಿಗಳಿಗೆ, ಕುಟುಂಬಕ್ಕೆ ಮತ್ತು ಬಂಧು ಮಿತ್ರರಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ ಮಾಜಿ ಸಿಎಂ ಸಿದ್ಧರಾಮಯ್ಯ.

  • ಸಿಎಂ ಉದಾಸಿ ನಿಧನಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಂತಾಪ

    ಸಿಎಂ ಉದಾಸಿ ನಿಧನಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಂತಾಪ

    ಬೆಂಗಳೂರು: ಮಾಜಿ ಸಚಿವ, ಹಾನಗಲ್ ಕ್ಷೇತ್ರದ ಶಾಸಕರಾಗಿದ್ದ ರಾಜ್ಯ ಬಿಜೆಪಿಯ ಹಿರಿಯ ಮುಖಂಡರಾದ ಸಿಎಂ ಉದಾಸಿ ಅವರ ನಿಧನಕ್ಕೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನ

    ಸಿಎಂ ಉದಾಸಿ ಅವರು ರಾಜ್ಯ ರಾಜಕಾರಣದ ಹಿರಿಯ ನಾಯಕರು. ಅವರಿಗೆ ಆಡಳಿತದಲ್ಲಿ ಅಪಾರ ಅನುಭವ ಇತ್ತು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಹತ್ತಿರದವರಾಗಿದ್ದರು. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಲೋಕೋಪಯೋಗಿ ಖಾತೆಗಳನ್ನು ಉದಾಸಿ ಅವರು ಅಚ್ಚುಕಟ್ಟಾಗಿ ನಿಭಾಯಿಸಿದ್ದರು. ಉದಾಸಿ ಅವರು ಏಳು ಭಾಷೆಗಳನ್ನು ಬಲ್ಲ ಧೀಮಂತ ನಾಯಕ. ಅಂಥ ಮುತ್ಸದ್ದಿ ನಾಯಕನನ್ನು ಕಳೆದುಕೊಂಡು ರಾಜ್ಯ ಈಗ ಬಡವಾಗಿದೆ. ಇದರಿಂದ ಕರ್ನಾಟಕ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ಎಂದು ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ಆಶಾ ಕಾರ್ಯಕರ್ತೆಯರೊಂದಿಗೆ ಮುಖ್ಯಮಂತ್ರಿ ಸಂವಾದ: ಕೋವಿಡ್ 19 ನಿರ್ವಹಣೆಗೆ ಮೆಚ್ಚುಗೆ

    ವೈಯಕ್ತಿಕವಾಗಿ ಸಿಎಂ ಉದಾಸಿ ಅವರು ನನಗೆ ಗುರುಗಳು ಹಾಗೂ ಮಾರ್ಗದರ್ಶಕರು. ಅಂಥವರನ್ನು ಕಳೆದುಕೊಂಡಿರುವುದಕ್ಕೆ ನನಗೆ ಬಹಳ ದುಃಖವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.