ಲಕ್ನೋ: ಮೇಕೆ (Goat) ಮರಿಗಳ ಹುಟ್ಟುಹಬ್ಬವನ್ನು (Birth Day) ದಂಪತಿ ಅದ್ಧೂರಿಯಾಗಿ ಉತ್ತರ ಪ್ರದೇಶದಲ್ಲಿ (UttaraPradesh) ಆಚರಿಸಿದ್ದಾರೆ.
ಉತ್ತರಪ್ರದೇಶದ ಕಾನ್ಶಿರಾಮ್ ಕಾಲೋನಿಯಲ್ಲಿ ವಾಸಿಸುವ ರಾಜಾ ಮತ್ತು ಅವರ ಪತ್ನಿಗೆ ಮಕ್ಕಳಿರಲಿಲ್ಲ. ಇದರಿಂದಾಗಿ ಕಳೆದ ವರ್ಷ ಅವರು ಸಾಕಿದ್ದ ಮುದ್ದಿನ ಮೇಕೆ 2 ಮರಿಗಳಿಗೆ ಜನನ ನೀಡಿತ್ತು. ಈ 2 ಮರಿಗಳನ್ನು ಮುದ್ದಿನಿಂದ ಸಾಕಿದ್ದ ದಂಪತಿ ಆ ಮರಿಗಳ ಮೊದಲ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.
ತಮ್ಮ ಸಂಬಂಧಿಕರು ಮತ್ತು ಸ್ನೇಹಿತರನ್ನು ಮೇಕೆ ಮರಿಗಳ ಹುಟ್ಟುಹಬ್ಬಕ್ಕೆ ಆಹ್ವಾನಿಸಿದ್ದರು. ಈ ವೇಳೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಜೊತೆಗೆ ಡಿಜೆಗೂ ವ್ಯವಸ್ಥೆ ಮಾಡಿದ್ದರು. ಅಷ್ಟೇ ಅಲ್ಲದೇ ಆ 2 ಮೇಕೆಗಳಿಗೆ ಕಂಬಳಿಯನ್ನು (Blanket) ರಾಜು ದಂಪತಿ ಉಡುಗೊರೆಯಾಗಿ ನೀಡಿದ್ದಾರೆ. ಇದೀಗ ಪಾರ್ಟಿಯ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಕುದಿಯುತ್ತಿರುವ ಸಾಂಬಾರ್ ಪಾತ್ರೆಗೆ ಬಿದ್ದು ಬಾಲಕ ಸಾವು
ಈ ಬಗ್ಗೆ ರಾಜಾ ಮತನಾಡಿ, ನಾವು ಮೇಕೆಗಳನ್ನು ನಮ್ಮ ಮಕ್ಕಳಂತೆ ನೋಡಿದ್ದೇವೆ. ಆ 2 ಮರಿಗಳಿಗೆ ಕುಬೇರ ಮತ್ತು ಲಕ್ಷ್ಮೀ ಎಂದು ಹೆಸರಿಟ್ಟಿದ್ದೇವೆ. ನಾವು ಅವುಗಳನ್ನು ರಿಕ್ಷಾದಲ್ಲೂ ಹೊರಗಡೆ ಕರೆದುಕೊಂಡು ಹೋಗುತ್ತೇವೆ. ಈ ಹಿನ್ನೆಲೆಯಲ್ಲಿ ಅವರ ಹುಟ್ಟುಹಬ್ಬ ಆಚರಿಸಲು ನಿರ್ಧರಿಸಿದ್ದೆವು ಎಂದರು. ಇದನ್ನೂ ಓದಿ: ಚಲಿಸುವ ಕಾರಿನ ಬಾನೆಟ್ ಮೇಲೆ ಕೂತು ಯುವತಿ ಜಾಲಿ ರೈಡ್ – ವಾಹನ ಪೊಲೀಸರ ವಶಕ್ಕೆ
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ‘ಕಂಬಳಿ’ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಕುರುಬ ಸಮುದಾಯದ ಸಂಕೇತವಾಗಿರುವ ಕಂಬಳಿ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ನಾಯಕರು ಹಗ್ಗಜಗ್ಗಾಟ ನಡೆಸುತ್ತಿದ್ದಾರೆ.
ಸಮಾವೇಶವೊಂದರಲ್ಲಿ ಕಂಬಳಿಯನ್ನು ಹೊದ್ದುಕೊಂಡು ಸಮುದಾಯಕ್ಕೆ ಭರವಸೆ ನುಡಿಗಳನ್ನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು, ಮುಸಲ್ಮಾನ ಸಮುದಾಯದ ಟೋಪಿ ಹಾಕಿರುವ ಸಿದ್ದರಾಮಯ್ಯ ಅವರ ಫೋಟೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಿಎಂ ಆಗ್ಲೇಬೇಕುಂತ ರಗ್ಗು ಹೊದ್ದು ಮಲಗಿದ್ದ ಸಿದ್ದರಾಮಯ್ಯರನ್ನು ಕರ್ಕೊಂಡು ಬಂದಿದ್ದು ನಾನು: ಹೆಚ್ಡಿಕೆ
“ಕಂಬಳಿ ಹಾಕಲು ಕುರುಬ ಜಾತಿಯವರೆ ಆಗಬೇಕು ಅನ್ನುವ ನಿಮ್ಮ ವಾದದ ಪ್ರಕಾರ ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೇ?” ಎಂದು ಕುಟುಕಿದ್ದಾರೆ.
ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ..
ದಾಸಶ್ರೇಷ್ಠ ಕನಕದಾಸರ ಈ ಮಾತುಗಳನ್ನು ಎಂದೋ ಮರೆತುಬಿಟ್ಟು ಕುಲಗಳನ್ನು ಒಡೆದು, ಸಮಾಜವನ್ನು ಅಸ್ಥಿರಗೊಳಿಸಿ,ತಮ್ಮ ಬೇಳೆ ಬೇಯಿಸಿಕೊಳ್ಳುವುದೇ ರಾಜಕೀಯ ಎಂದು ಭಾವಿಸಿದ್ದು ದುರಂತ.
ಟೀಕಿಸುವ ಭರದಲ್ಲಿ ಸಿ.ಟಿ.ರವಿ ಅವರು ಕೀಳುಮಟ್ಟದ ಪದ ಬಳಸಿ ವಿವಾದಕ್ಕೆ ಗುರಿಯಾಗಿದ್ದಾರೆ. ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಪರಸ್ಪರ ಕೀಳುಮಟ್ಟದ ಭಾಷೆ ಬಳಸಿ ವಾಕ್ಸಮರ ನಡೆಸುತ್ತಿದ್ದಾರೆ. ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಪಕ್ಷದಲ್ಲಿದ್ದುಕೊಂಡೇ ಬೆನ್ನಿಗೆ ಚೂರಿ ಹಾಕುವವರು ತಾಯಿ ದ್ರೋಹಿಗಳು: ಸಿದ್ದರಾಮಯ್ಯ
ಮೈಸೂರು: ಕುರುಬ ಸಮಾಜವನ್ನು ಹರಾಜು ಹಾಕುವ ಕೆಲಸವನ್ನು ಸಿದ್ದರಾಮಯ್ಯ ಮಾಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ತರಾಟೆಗೆ ತೆಗೆದುಕೊಂಡರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂಬಳಿ ಬಗ್ಗೆ ಉಪ ಚುನಾವಣೆಯಲ್ಲಿ ಅನವಶ್ಯಕವಾಗಿ ಚರ್ಚೆ ಆಗುತ್ತಿದೆ. ಕಂಬಳಿ ಒಂದೇ ಜಾತಿಯ ಗುತ್ತಿಗೆ ಅಲ್ಲ. ಸಿಎಂಗೆ ಕುರುಬ ಸಮುದಾಯದವರು ಕಂಬಳಿ ಹೊದ್ದಿಸಿ ಹರಸಿದ್ದಾರೆ. ಇದನ್ನೆ ದೊಡ್ಡ ಅಪರಾಧ ಅನ್ನೋ ರೀತಿ ಸಿದ್ದರಾಮಯ್ಯ ಬಿಂಬಿಸುತ್ತಿದ್ದಾರೆ. ‘ಕಂಬಳಿ ಹೊದ್ದುಕೊಳ್ಳಲು ಅವನೇನೂ ಕುರುಬನೇನ್ರಿ’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದು ತಪ್ಪು. ಸಿಎಂ ಕಂಬಳಿ ಹೊದ್ದು ಕೊಂಡಿದ್ದನ್ನು ಪ್ರಶ್ನಿಸೋದು ಸಣ್ಣತನ. ಕಂಬಳಿಯ ಗೌರವ ಕಾಪಾಡುತ್ತೇನೆ ಎಂದು ಸಿಎಂ ಸೌಜನ್ಯದಿಂದ ಹೇಳಿದ್ದಾರೆ. ಇದನ್ನು ಸಿದ್ದರಾಮಯ್ಯ ಅನವಶ್ಯಕವಾಗಿ ಹಾದಿ ರಂಪ ಬೀದಿ ರಂಪ ಮಾಡುತ್ತಿದ್ದಾರೆ. ಏಕವಚನದಲ್ಲಿ ಸಿಎಂ ಹಾಗೂ ಪ್ರಧಾನ ಮಂತ್ರಿಯನ್ನು ಸಂಬೋಧಿಸೋದು ಸರಿಯಲ್ಲ. ಸಿದ್ದರಾಮಯ್ಯ, ರಾಹುಲ್ ಗಾಂಧಿಯನ್ನು ಏನ್ಲಾ ರಾಹುಲ್ ಗಾಂಧಿ ಅನ್ನಲಿ ನೋಡೋಣಾ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಎರಡೂ ಉಪಚುನಾವಣೆಯಲ್ಲಿ ಜೆಡಿಎಸ್ ಲೆಕ್ಕಕ್ಕೆ ಇಲ್ಲ: ಜಮೀರ್
ಸಿದ್ದರಾಮಯ್ಯ ಸಂಕುಚಿತ ಮನೋಭಾವ ತೋರಿ ಕುರುಬರನ್ನು ಏಕಾಂಗಿ ಮಾಡಿ ಬಿಡುತ್ತೀರಾ ನೀವು? ಯಾವ ಜಾತಿಯೂ ಏಕಾಂಗಿಯಾಗುವುದು ಒಳ್ಳೆಯದಲ್ಲ. ಸಿದ್ದರಾಮಯ್ಯಗೆ ಕೃತಜ್ಞತೆಯೇ ಇಲ್ಲ. ಕೃತಜ್ಞತೆಯೆ ಇಲ್ಲದ ರಾಜಕಾರಣಿ ಅಂದರೆ ಅದು ಸಿದ್ದರಾಮಯ್ಯ. ಸಿದ್ದರಾಮಯ್ಯ ಒಂಥರ ಇಂಗ್ಲೀಷ್ನವರು ಇದ್ದಾಂಗೆ. ಜನರನ್ನು ಬಳಸಿಕೊಂಡು ನಂತರ ಅವರನ್ನೆ ಹೊರಗಡೆ ಬಿಸಾಕುತ್ತಾರೆ. ನಿಮ್ಮ ಮನೋಭಾವದ ಪರಿಣಾಮ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿರಿ ಎಂದು ವಾಗ್ದಾಳಿ ನಡೆಸಿದರು.
ಕುರುಬ ಸಮುದಾಯಕ್ಕೆ ಸಿದ್ದರಾಮಯ್ಯ ಕೊಡುಗೆ ಶೂನ್ಯ. ನಮ್ಮನ್ನೆ ಬಲಿ ಹಾಕಲಿಲ್ವಾ ನೀನು? ಸಮುದಾಯದ ನಾಯಕರನ್ನು ತುಳಿದು ಹಾಕಿದ್ದೀರಿ. ಅಹಿಂದ ನಾಯಕರನ್ನು ವ್ಯವಸ್ಥಿತವಾಗಿ ಮುಗಿಸುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ನೀನು ಏನ್ ಈ ಸಮಾಜದ ಉದ್ಧಾರಕ್ಕೆ ಮಾಡಿದ್ದೀಯಾ ಹೇಳು ಸಿದ್ದರಾಮಯ್ಯ? ಸಿಎಂ ಕುರುಬ ಸಮುದಾಯಕ್ಕೆ ಏನೂ ಮಾಡಿದ್ದಾರೆ ಎಂದು ಆಮೇಲೆ ಕೇಳಿ. ಮೊದಲು ನಿಮ್ಮ ಕೊಡುಗೆ ಏನೂ ಹೇಳಿ. ಸಿದ್ದರಾಮಯ್ಯ ನಡವಳಿಕೆಗಳು ಕುರುಬ ಸಮುದಾಯವನ್ನು ಏಕಾಂಗಿ ಮಾಡಬಾರದು ಎಂದು ಏಕವಚನದಲ್ಲೇ ಸಿದ್ದರಾಮಯ್ಯ ವಿರುದ್ಧ ಗರಂ ಆದರು.
ನಮ್ಮ ಕುರುಬ ಹುಡುಗರಿಗೆ ಸಿದ್ದರಾಮಯ್ಯ ನೋಡಿದರೆ ಇಂಗ್ಲಿಷ್ ಸಿನಿಮಾ ಹೀರೋ ನೋಡಿದಂತೆ ಆಗುತ್ತೆ. ಹಿಂದೆ ನೋಡಲ್ಲ, ಮುಂದೆ ನೋಡಲ್ಲ ಶಿಳ್ಳೆ ಹೊಡೆಯುತ್ತಾರೆ ಅಷ್ಟೆ. ಸಿದ್ದರಾಮಯ್ಯ ನಮಗೇನು ಮಾಡಿದರು ಅನ್ನೋದನ್ನು ಹುಡುಗರು ಯೋಚಿಸೋದೆ ಇಲ್ಲ. ಸಿದ್ದರಾಮಯ್ಯ ನೋಡಿದರೆ ಸಾಕು ಸುಮ್ಮೆ ಶಿಳ್ಳೆ ಹೊಡೆಯುತ್ತಾರೆ ಎಂದು ಯುವಸಮುದಾಯಕ್ಕೆ ಚಾಟಿ ಬೀಸಿದರು.
ಉಪ ಚುನಾವಣೆಗಳನ್ನೆ ಮಾಡಬೇಡಿ. ಚುನಾವಣೆಯಲ್ಲಿ ಗೆದ್ದವರು ಸತ್ತರೆ ಅವರ ಮುಂದೆ ಸೋತವರಿಗೆ ಗೆಲುವು ಘೋಷಿಸಿ. ಉಪ ಚುನಾವಣೆಯ ಗೊಡವೆಗಳೆ ಬೇಡ ಎಂದು ಆಶಯ ವ್ಯಕ್ತಪಡಿಸಿದರು.
ಕುರುಬ ಸಮುದಾಯದವರ ಸಮಾವೇಶವೊಂದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಂಬಳಿ ಹೊದ್ದುಕೊಂಡು ಭರವಸೆಯ ನುಡಿಗಳನ್ನಾಡಿದ್ದರು. ‘ಕಂಬಳ ಹೊದ್ದುಕೊಳ್ಳಲು ಅವನೇನು ಕುರುಬನೇನ್ರಿ’ ಎಂದು ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದರು.
ಬೆಂಗಳೂರು: ಚಳಿಗಾಲದಲ್ಲಿ ನಟಿ ಹರಿಪ್ರಿಯಾಗೆ ಅವರ ಅಮ್ಮ ಸ್ಪೆಷಲ್ ಗಿಫ್ಟ್ ವೊಂದನ್ನು ನೀಡಿದ್ದಾರೆ.
ಬೆಳಗ್ಗೆ ಎದ್ದ ತಕ್ಷಣ ಮೈ ಜುಮ್ಮೆನಿಸುವ ಚಳಿ. ಹೊರಗಡೆ ಕಾಲು ಹೆಜ್ಜೆ ಇಡಲು ಸಹ ಆಗಲ್ಲ. ಚಳಿಗಾಲದಲ್ಲಿ ಚರ್ಮದ ಆರೋಗ್ಯ ಕಾಪಾಡುವುದೇ ದೊಡ್ಡ ಸವಾಲು. ಅದರಲ್ಲೂ ಹೀರೋ, ಹಿರೋಯಿನ್ಗಳಿಂಗತೂ ತ್ವಚೆಯ ಆರೋಗ್ಯ ಕಾಪಾಡಿಕೊಂಡು ಸುಂದರವಾಗಿ ಕಾಣುವಂಥ ಡ್ರೆಸ್ ಹುಡುಕುವುದೇ ದೊಡ್ಡ ಸರ್ಕಸ್.
ಈ ನಿಟ್ಟಿನಲ್ಲಿ ಕನ್ನಡದ ನಟಿ ಹರಿಪ್ರಿಯಾ ತಾಯಿ, ತಮ್ಮ ಮಗಳಾದ ಹರಿಪ್ರಿಯಾಗಾಗಿ ವಿಶೇಷವಾದ ಕಂಬಳಿಯೊಂದನ್ನು ತಯಾರಿಸಿದ್ದಾರೆ. ಮತ್ಸ್ಯಕನ್ಯೆ ರೀತಿ ಕಲರ್ ಫುಲ್ ಆಗಿರುವ ಹೊದಿಕೆಯನ್ನು ಕೈಯಾರೆ ಸಿದ್ಧ ಮಾಡಿದ್ದಾರೆ. ಈ ವಿಚಾರವನ್ನು ಸ್ವತಃ ಹರಿಪ್ರಿಯಾ ಅವರೇ ಟ್ವೀಟ್ ಮಾಆಡುವ ಮೂಲಕ ರೀವಿಲ್ ಮಾಡಿದ್ದಾರೆ.
This winter I could only survive with this Mermaid blanket 😍 It takes a lot of effort and time!! All thanks to Amma for knitting this super cool, colorful blanket for me 😬😘 Mommie is the best ❤❤ Mommie knows the best 🤩🥰 pic.twitter.com/MX1QzRKvou
ಇದನ್ನು ಹೊದ್ದಿರುವ ಫೋಟೋವನ್ನು ಟ್ವೀಟ್ ಮಾಡಿರುವ ಹರಿಪ್ರಿಯಾ, ಈ ಚಳಿಗಾಲದಲ್ಲಿ ನಾನು ಈ ಮತ್ಸ್ಯಕನ್ಯೆ ಕಂಬಳಿಯಿಂದ ಮಾತ್ರ ಚಳಿಯನ್ನು ತಡೆಯಬಲ್ಲೆ. ಇದನ್ನು ತಯಾರಿಸಲು ತುಂಬ ಶ್ರಮ ಮತ್ತು ಸಮಯವನ್ನು ತೆಗದುಕೊಂಡಿದೆ. ಈ ಸೂಪರ್ ಕೂಲ್ ಮತ್ತು ವರ್ಣರಂಜಿತ ಕಂಬಳಿಯನ್ನು ನನಗಾಗಿ ಹೆಣೆದಿದ್ದಕ್ಕಾಗಿ ಅಮ್ಮನಿಗೆ ಧನ್ಯವಾದಗಳು. ಮಮ್ಮಿ ಈಸ್ ದ ಬೆಸ್ಟ್ ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರು: ಯೋಧರನ್ನು ಕಳೆದುಕೊಂಡು ಇಡೀ ದೇಶ ಮರುಗುತ್ತಿದ್ದ ವೇಳೆಯಲ್ಲೇ ಶಾಂತಿನಗರ ಶಾಸಕ ಹ್ಯಾರಿಸ್ ಅವರು ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡು ವಿವಾದಕ್ಕೀಡಾದ ಬೆನ್ನಲ್ಲೇ ಇದೀಗ ಮತ್ತೊಂದು ಆರೋಪ ಅವರ ವಿರುದ್ಧ ಕೇಳಿಬಂದಿದೆ.
ಹೌದು. ಶಾಸಕ ಎನ್ ಎ ಹ್ಯಾರಿಸ್ ಈಗ ತಮ್ಮ ಜನ್ಮದಿನಕ್ಕಾಗಿ ಸರ್ಕಾರಿ ಶಾಲೆಯ ಕಟ್ಟಡವನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡ ಆರೋಪಕ್ಕೆ ಸಿಲುಕಿದ್ದಾರೆ. ಮೂರ್ನಾಲ್ಕು ದಿನಗಳ ಹಿಂದೆಯಷ್ಟೇ ಶಾಸಕರು ತಮ್ಮ ಹುಟ್ಟುಹಬ್ಬಕ್ಕಾಗಿ ಕ್ಷೇತ್ರದ ಮತದಾರರಿಗೆ ರಾತ್ರೋರಾತ್ರಿ ಕಂಬಳಿಗಳನ್ನು ವಿತರಣೆ ಮಾಡಿದ್ರು. ಆದರೆ ಈ ಕಂಬಳಿಗಳನ್ನು ಅವರ ಕ್ಷೇತ್ರದಲ್ಲಿ ಬರುವ ಜೋಗುಪಾಳ್ಯದಲ್ಲಿರುವ ಸರಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಶೇಖರಣೆ ಮಾಡಿಟ್ಟಿದ್ದರು.
ಶಾಲೆಯ ಎರಡು ಕೊಠಡಿಗಳಲ್ಲಿ ಈ ಕಂಬಳಿಗಳ ರಾಶಿ ಇಡಲಾಗಿತ್ತು. ಇದರಿಂದ ಎರಡು ಮೂರು ದಿನಗಳ ಕಾಲ ವಿದ್ಯಾರ್ಥಿಗಳಿಗೆ ಕೊಠಡಿಯಿಲ್ಲದೆ ಪಾಠಕ್ಕೆ ತೊಂದರೆಯಾಗಿದೆ. ಸಾಲದ್ದಕ್ಕೆ ರಾತ್ರಿ ವೇಳೆಯಲ್ಲೂ ಕ್ಷೇತ್ರದ ಮತದಾರರಿಗೆ ಕಂಬಳಿಗಳನ್ನು ವಿತರಿಸುವ ಮೂಲಕ ಶಾಲೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ.
ಇದೇ ಶಾಲೆಗೆ ಅಂಟಿಕೊಂಡಿರುವ ರಸ್ತೆಗೆ ಫುಟ್ ಪಾತ್ ಇಲ್ಲ. ಮಕ್ಕಳು ರಸ್ತೆಯಲ್ಲೇ ನಡೆದುಕೊಂಡು ಹೋಗಬೇಕಾಗಿದೆ. ಜೊತೆಗೆ ಶಾಲೆಯ ಎದುರೇ ಕಸದ ರಾಶಿ ಸದಾ ಬಿದ್ದಿರುತ್ತದೆ. ಇವೆಲ್ಲ ಸರಿ ಮಾಡದ ಶಾಸಕರು ತಮ್ಮ ಸ್ವಾರ್ಥಕ್ಕಾಗಿ ಶಾಲೆಯನ್ನೆ ದುರ್ಬಳಕೆ ಮಾಡಿಕೊಳ್ತಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಪ್ರೇಮಿಗಳ ದಿನದಂದೇ ಉಗ್ರನ ಆತ್ಮಾಹುತಿ ದಾಳಿಯಿಂದ 40 ಯೋಧರು ಹುತಾತ್ಮರಾಗಿದ್ದರು. ಈ ಹಿನ್ನೆಲೆಯಲ್ಲಿ ಇಡೀ ದೇಶ ದುಃಖದಲ್ಲಿ ಮುಳುಗಿದ್ದಾಗ ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಶಾಂತಿನಗರದ ಬಸ್ ನಿಲ್ದಾಣದಲ್ಲಿ ಅಬ್ಬರದ ಆರ್ಕೆಸ್ಟ್ರಾ ಕಾರ್ಯಕ್ರಮ ಆಯೋಜಿಸಿ ವಿವಾದಕ್ಕೆ ಗುರಿಯಾಗಿದ್ರು. ಈ ವಿವಾದ ಮರೆಯಾಗುವ ಮುನ್ನವೇ ಇದೀಗ ಮತ್ತೊಂದು ವಿವಾದ ಶಾಸಕರನ್ನು ಸುತ್ತಿಕೊಂಡಿದೆ.
ಬಳ್ಳಾರಿ: ರಾಜ್ಯದ ಜನತೆಗೆ ಭಾಗ್ಯಗಳ ಮೇಲೆ ಭಾಗ್ಯಗಳನ್ನ ನೀಡುತ್ತಿರುವ ಸಿದ್ದರಾಮಯ್ಯ ಸರ್ಕಾರ ಮತ್ತೊಂದು ಹೊಸ ಭ್ಯಾಗ್ಯವನ್ನ ನೀಡಲು ಮುಂದಾಗಿದೆ. ಇನ್ನು ಮುಂದೆ ಬಿಪಿ.ಎಲ್ ಕಾರ್ಡ್ ಹೊಂದಿದ ಪ್ರತಿ ಕುಟುಂಬಗಳಿಗೆ ಕಂಬಳಿ ಭಾಗ್ಯ ದೊರೆಯಲಿದೆ.
ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ ಮಂಗಳವಾರ ನಡೆದ ಹಾಲಮತ ಅಧ್ಯಯನ ಪೀಠದ ದಶಮಾನೋತ್ಸವ ಸಮಾರಂಭದಲ್ಲಿ ಭಾಗಿಯಾದ ಸಾರಿಗೆ ಸಚಿವ ಹೆಚ್ ಎಂ ರೇವಣ್ಣ ಈ ವಿಷಯವನ್ನ ಬಹಿಂಗಪಡಿಸಿದ್ದಾರೆ.
ಕ್ಯಾಬಿನೆಟ್ ನಲ್ಲಿ ಈ ಕುರಿತು ಚರ್ಚೆ ನಡೆಯುತ್ತಿದೆ. ಕಂಬಳಿ ತಯಾರಿಕೆಯ ಮೇಲೆ ಅವಲಂಬನೆಯಾಗಿರುವ ಕುಟುಂಬಗಳು ಸಂಕಷ್ಟದಲ್ಲಿದ್ದು, ಈ ಯೋಜನೆ ಜಾರಿಯಿಂದ ಅವರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಅಲ್ಲದೆ ಕಂಬಳಿ ಬಳಕೆ ಮಾಡುವುದರಿಂದ ಮನುಷ್ಯ ಚಳಿ, ಮಳೆ, ಗಾಳಿಯಿಂದ ರಕ್ಷಣೆ ಪಡೆಯಬಹುದೆಂದು ತಿಳಿಸಿದ್ರು.