Tag: ಕಟ್ಟಡ ಕಾರ್ಮಿಕರು

  • ಕಟ್ಟಡ ಕಾರ್ಮಿಕರ ಹೆಲ್ತ್ ಚೆಕಪ್‌ನಲ್ಲೂ 47.99 ಕೋಟಿ ಗೋಲ್ಮಾಲ್‌ – ಲೋಕಾಯುಕ್ತಕ್ಕೆ ಬಿಜೆಪಿ ದೂರು

    ಕಟ್ಟಡ ಕಾರ್ಮಿಕರ ಹೆಲ್ತ್ ಚೆಕಪ್‌ನಲ್ಲೂ 47.99 ಕೋಟಿ ಗೋಲ್ಮಾಲ್‌ – ಲೋಕಾಯುಕ್ತಕ್ಕೆ ಬಿಜೆಪಿ ದೂರು

    – ಸಚಿವ ಸಂತೋಷ್‌ ಲಾಡ್‌ ರಾಜೀನಾಮೆಗೆ ಆಗ್ರಹ

    ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ, ವಾಲ್ಮೀಕಿ ಹಗರಣ, ಕೋವಿಡ್‌ ಹಗರಣಗಳು ಸದ್ದು ಮಾಡುತ್ತಿರುವ ಹೊತ್ತಿನಲ್ಲಿ ಮತ್ತೊಂದು ಅಕ್ರಮ ಆರೋಪ ಕೇಳಿಬಂದಿದೆ. ಕಟ್ಟಡ ಕಾರ್ಮಿಕರ (Construction Workers) ಆರೋಗ್ಯ ತಪಾಸಣೆಯಲ್ಲಿ ಅಕ್ರಮ ನಡೆದಿದೆ ಎಂದು ಬಿಜೆಪಿ ನಿಯೋಗ ಲೋಕಾಯುಕ್ತಕ್ಕೆ ದೂರು ನೀಡಿದೆ.

    ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳ ಹೆಲ್ತ್ ಚೆಕಪ್‌ನಲ್ಲಿ (Health Check Up) ಭಾರೀ ಗೋಲ್ಮಾಲ್ ನಡೆದಿದೆ. 47.99 ಕೋಟಿ ರೂ.ಗಳನ್ನ ಗುಳುಂ ಮಾಡಲಾಗಿದೆ. ಯಾವುದೇ ಹೆಲ್ತ್ ಚೆಕಪ್ ನಡೆಸದೇ ಹಣ ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ನಿಯೋಗ ಆರೋಪಿಸಿದೆ. ಇದನ್ನೂ ಓದಿ: ಇನ್ಸ್ಟಾದಲ್ಲೇ 3 ವರ್ಷ ಲವ್; ಅಡ್ರೆಸ್ ಇಲ್ಲದ ಕಲ್ಯಾಣದ ಮಂಟಪದಲ್ಲಿ ಮದುವೆ ಫಿಕ್ಸ್ ಮಾಡಿ ವಧು ಎಸ್ಕೇಪ್!

    ಅಲ್ಲದೇ ಹೆಲ್ತ್ ಚೆಕಪ್ ಹೆಸರಲ್ಲಿ ಒಂದೊಂದಕ್ಕೆ ಒಂದೊಂದು ರೀತಿಯಲ್ಲಿ ಬಿಲ್ ಮಾಡಿದ್ದಾರೆ. ಅರ್ಹತೆ ಇಲ್ಲದ ಕಂಪನಿಗೆ ಟೆಂಡರ್ ಕೊಟ್ಟು ಹಣ ಹೊಡೆದಿದ್ದಾರೆ. ಇದಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇರ ಹೊಣೆ ಹೊತ್ತು ರಾಜೀನಾಮೆ ನೀಡ್ಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎ.ನ್‌ ರವಿಕುಮಾರ್ ಆಗ್ರಹಿಸಿದ್ದಾರೆ. ಇದನ್ನೂ ಓದಿ: AI ಬಳಸಿ ನನ್ನ ಖಾಸಗಿ ವೀಡಿಯೋ ಲೀಕ್ ಮಾಡಿದ್ದಾರೆ – ನಟಿ ಪ್ರಗ್ಯಾ ನಗ್ರಾ ಆರೋಪ

  • ದೆಹಲಿಯಲ್ಲಿ ನರಬಲಿ – 6 ವರ್ಷದ ಬಾಲಕನ ಕತ್ತುಸೀಳಿ ಕೊಂದ ಇಬ್ಬರು ಅರೆಸ್ಟ್

    ದೆಹಲಿಯಲ್ಲಿ ನರಬಲಿ – 6 ವರ್ಷದ ಬಾಲಕನ ಕತ್ತುಸೀಳಿ ಕೊಂದ ಇಬ್ಬರು ಅರೆಸ್ಟ್

    ನವದೆಹಲಿ: 6 ವರ್ಷದ ಬಾಲಕನ ಕತ್ತು ಸೀಳಿ ನರಬಲಿ ನೀಡಿರುವ ಘಟನೆ ದಕ್ಷಿಣ ದೆಹಲಿಯ (NewDelhi) ಲೋಧಿ ಕಾಲೊನಿಯಲ್ಲಿ ನಡೆದಿದ್ದು, ಇಬ್ಬರು ಆರೋಪಿ (Accused) ಗಳನ್ನು ಪೊಲೀಸರು (Police) ಬಂಧಿಸಿದ್ದಾರೆ.

    ಬಿಹಾರ (Bihar) ಮೂಲದ ವಿಜಯ್ ಕುಮಾರ್, ಅಮರ್ ಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳು ಮತ್ತು ಬಾಲಕನ ಪೋಷಕರು ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಒಂದೇ ಕೊಳೆಗೇರಿಯಲ್ಲಿ ವಾಸವಾಗಿದ್ದರು. ವಿಜಯ್ ಮತ್ತು ಅಮರ್ ಅಪರಾಧ ಎಸಗುವಾಗ ಮಾದಕ ವಸ್ತು ಸೇವಿಸಿದ್ದರು. ಪ್ರಸಾದ ಸೇವಿಸಿದ ಬಳಿಕ ಶ್ರೇಯಸ್ಸಾಗಲು ಹುಡುಗನನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡಲು 2 ಕೋಟಿ ರೂ. ಬಿಡುಗಡೆ: ಪ್ರಭು ಚವ್ಹಾಣ್

    ಶನಿವಾರ ಊಟ ಮಾಡಿದ ನಂತರ ಭಜನೆ ಕೇಳುತ್ತಿದ್ದೆವು. ರಾತ್ರಿ 10:30ರ ಸುಮಾರಿಗೆ ಬಾಲಕ ತನ್ನ ಶೆಡ್‌ಗೆ ಹಿಂತಿರುಗುತ್ತಿದ್ದಾಗ ಆರೋಪಿಗಳು ಬಾಲಕನನ್ನು ತಮ್ಮ ಅಡುಗೆ ಸ್ಥಳಕ್ಕೆ ಕರೆದು ಮೊದಲು ತಲೆಯ ಮೇಲೆ ಹಲ್ಲೆ ನಡೆಸಿ ನಂತರ ಕತ್ತು ಸೀಳಿ ಕೊಂದಿದ್ದಾರೆ. ಬಳಿಕ ಮಗನ ಮೃತದೇಹ ಕಂಡು ಗಾಬರಿಗೊಂಡಿದ್ದಾರೆ ಎಂದು ಬಾಲಕನ ತಂದೆ ದೂರಿನಲ್ಲಿ ತಿಳಿಸಿರುವುದಾಗಿ ಉಪ ಪೊಲೀಸ್ ಆಯುಕ್ತ (ದಕ್ಷಿಣ) ಚಂದನ್ ಚೌಧರಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಗಳ ಆಗಮನದ ಖುಷಿಯಲ್ಲಿ ಮೇಘನಾ ರಾಜ್

    KILLING CRIME

    ಬಳಿಕ ವಿಧಿವಿಜ್ಞಾನ (Forensic Science) ತಜ್ಞರು ಘಟನಾಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಏಮ್ಸ್ (AIIMS) ಟ್ರಾಮಾ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಬಾಲಕನ ತಂದೆಯ ಹೇಳಿಕೆಯನ್ನು ಆಧರಿಸಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 302, 34ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಹಣದಾಸೆಗೆ ವೃದ್ಧ ದಂಪತಿಯನ್ನು ಹತ್ಯೆಗೈದು ಮನೆಯೆಲ್ಲಾ ಹುಡುಕಿದ್ರು- ಆದ್ರೆ ಸಿಕ್ಕಿದ್ದು ಕೇವಲ 500 ರೂ!

    ಹಣದಾಸೆಗೆ ವೃದ್ಧ ದಂಪತಿಯನ್ನು ಹತ್ಯೆಗೈದು ಮನೆಯೆಲ್ಲಾ ಹುಡುಕಿದ್ರು- ಆದ್ರೆ ಸಿಕ್ಕಿದ್ದು ಕೇವಲ 500 ರೂ!

    ಅಹಮದಬಾದ್: ಹಣಕ್ಕಾಗಿ ಕಟ್ಟಡ ಕಾರ್ಮಿಕರು ಮನೆಯೊಂದಕ್ಕೆ ನುಗ್ಗಿ ಇಬ್ಬರು ವೃದ್ಧ ದಂಪತಿಯನ್ನು ಹತ್ಯೆ ಮಾಡಿರುವ ಘಟನೆ ಘಾಟ್‌ಲೋದಿಯಾದಲ್ಲಿ ನಡೆದಿದೆ.

    ದಯಾನಂದ ಶಾನುಭೋಗ (90) ಮತ್ತು ವಿಜಯಲಕ್ಷ್ಮಿ ಶಾನುಭೋಗ (80) ಹತ್ಯೆಯಾದ ದಂಪತಿ. ಕೊಲೆ ಮಾಡಿದ ಏಮನ್‌ ಟೊಪ್ನೊ (26) ಮತ್ತು ಮುಕುತ್‌ ಹಪ್ಕಡದ (19) ಬಂಧಿತ ಆರೋಪಿಗಳು. ಇದನ್ನೂ ಓದಿ: ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೈಲಿನಿಂದ ಬಿಡುಗಡೆ

    ಕಟ್ಟಡ ಕಾರ್ಮಿಕರಾಗಿದ್ದ ಏಮನ್‌ ಮತ್ತು ಮುಕುತ್‌ ತಮ್ಮ ಮನೆಯವರಿಗೆ ಕೂಲಿ ಹಣವನ್ನು ಕಳುಹಿಸಿದ್ದರು. ತಮಗೆ ಹಣದ ಅವಶ್ಯಕತೆ ಹೆಚ್ಚಿತ್ತು. ಹೀಗಾಗಿ ಸಂಪಾದನೆಗೆ ಸುಲಭ ದಾರಿ ಹುಡುಕಲು ಪ್ರಯತ್ನಿಸಿದರು. ಆಗ ಮನೆ ದರೋಡೆಯ ಯೋಜನೆ ಅವರಿಗೆ ಹೊಳೆಯಿತು.

    POLICE JEEP

    ಈ ವೇಳೆ ಮನೆಯೊಂದಕ್ಕೆ ನುಗ್ಗಿದ ಆರೋಪಿಗಳು ವೃದ್ಧ ದಯಾನಂದ್‌ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಆತನ ಪತ್ನಿಯ ಕುತ್ತಿಗೆಯನ್ನೂ ಕೊಯ್ದಿದ್ದಾರೆ. ವೃದ್ಧ ದಂಪತಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದಾಗ, ಆರೋಪಿಗಳು ಮನೆಯನ್ನು ಹುಡುಕಾಡಿದ್ದಾರೆ. ಎಷ್ಟು ಹುಡುಕಿದರೂ ಕೊನೆಗೆ ಅವರಿಗೆ ಸಿಕ್ಕಿದ್ದು ಕೇವಲ 500 ರೂಪಾಯಿ. ಕೊನೆಗೆ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ದಂಪತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ದೆಹಲಿ ವಿವಿ ಪ್ರೊಫೆಸರ್‌ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಕಾರು ಚಾಲಕ!

    ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.

  • ಕಟ್ಟಡ ಕಾರ್ಮಿಕರ ಕಾರ್ಡ್ ದುರುಪಯೋಗವಾದರೆ ಕ್ರಮ: ಸಿಎಂ

    ಕಟ್ಟಡ ಕಾರ್ಮಿಕರ ಕಾರ್ಡ್ ದುರುಪಯೋಗವಾದರೆ ಕ್ರಮ: ಸಿಎಂ

    ದಾವಣಗೆರೆ: ಕಟ್ಟಡ ಕಾರ್ಮಿಕರ ಕಾರ್ಡ್ ದುರುಪಯೋಗವಾದರೆ ಕ್ರಮ ಎಂದು ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.

    ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆಂದು ಹೊನ್ನಾಳಿ ಹೆಲಿಪ್ಯಾಡ್ ಗೆ ಇಂದು ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ ವರದಿಗಾರರು ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ನೀಡುವ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ. ನಕಲಿ ಕಾರ್ಡ್ ಗಳು ಸೃಷ್ಟಿಯಾಗಿವೆ ಎಂದು ಸಿಎಂ ಗಮನಕ್ಕೆ ತಂದಾಗ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಇದನ್ನು ತಪ್ಪಿಸಲೆಂದೇ ಈ-ಶ್ರಮ ಎಂಬ ಪೋರ್ಟಲ್ ಪ್ರಾರಂಭಿಸಿ ಆಧಾರ್ ಕಾರ್ಡ್ ಲಿಂಕ್ ಕಲ್ಪಿಸಲಾಗಿದೆ. ದುರುಪಯೋಗವಾಗಿರುವ ಪ್ರಕರಣಗಳಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಎಲ್ಲ ಸಂಸ್ಥೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಜನಪರ ಸರ್ಕಾರ: ಬೊಮ್ಮಯ

    ಗಡಿ ಭಾಗಳಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿದ್ದು, ಶೇ.1ಕ್ಕಿಂತ ಕಡಿಮೆಯಾಗುತ್ತಿದೆ. ಶೀಘ್ರವಾಗಿ ತಜ್ಞರ ಸಭೆ ನಡೆಯಲಿದ್ದು, ಶಾಲೆಗಳ ಪುನರಾರಂಭ ಸೇರಿದಂತೆ ನಿರ್ಬಂಧಗಳನ್ನು ಸಡಿಲಗೊಳಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

  • ಆಹಾರ ಕಿಟ್ ಅವ್ಯವಹಾರ ತನಿಖೆಗೆ ಆಗ್ರಹಿಸಿ ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರ ಪ್ರತಿಭಟನೆ

    ಆಹಾರ ಕಿಟ್ ಅವ್ಯವಹಾರ ತನಿಖೆಗೆ ಆಗ್ರಹಿಸಿ ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರ ಪ್ರತಿಭಟನೆ

    – ಬೆಂಗಳೂರಿನಲ್ಲಿ ಕಾರ್ಮಿಕರ ಬಂಧನ ತೀವ್ರ ಖಂಡನೆ

    ಬೆಂಗಳೂರು: ಇಂದು ರಾಜ್ಯ ವಿವಿಧ ಕಟ್ಟಡ ಕಾರ್ಮಿಕ ಸಂಘಗಳು ಆಹಾರ ಕಿಟ್ ಹಂಚಿಕೆಯಲ್ಲಿ ನಡೆದಿರುವ ಕೋಟ್ಯಾಂತರ ಅವ್ಯವಹಾರವನ್ನು ತನಿಖೆಗೊಳಪಡಿಸಬೇಕು ಮತ್ತು ಕಾರ್ಮಿಕರಿಗೆ ಕೋವಿಡ್ ಎರಡನೇ ಅಲೆ ಪರಿಹಾರ ಹತ್ತು ಸಾವಿರಕ್ಕೆ ಆಗ್ರಹಿಸಿ ಬೆಂಗಳೂರಿನ ಕಲ್ಯಾಣ ಮಂಡಳಿ ಮತ್ತು ರಾಜ್ಯದ ವಿವಿದ ಜಿಲ್ಲೆ ತಾಲೂಕುಗಳಲ್ಲಿ ಪ್ರತಿಭಟನೆ ನಡೆಸಿದರು. ಬೆಂಗಳೂರಿನಲ್ಲಿ ಬೆಳೆಗ್ಗೆಯೇ 40 ಕ್ಕೂ ಅಧಿಕ ಕಾರ್ಮಿಕರನ್ನು ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ಕಾರ್ಮಿಕರು ಮಂಡಳಿ ಎದುರು ಪ್ರತಿಭಟನೆ ನಡೆಸಿದರು.

    ರಾಜ್ಯದ ಬೆಂಗಳೂರು, ತುಮಕೂರು, ಕೋಲಾರ, ಕಲಬುರಗಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ಮಂಡ್ಯ ಧಾರವಾಡ ಸೇರಿ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಪ್ರತಿಭಟನೆಗಳು ನಡೆದವು.

    ಬೆಂಗಳೂರಿನಲ್ಲಿ ಬೆಳಗ್ಗೆ ಕಲ್ಯಾಣ ಮಂಡಳಿ ಮುಂದೆ ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡದೆ 40 ಕಾರ್ಮಿಕರನ್ನು ಬಂಧಿಸಿದ್ದು, ತೀವ್ರ ಖಂಡನಾರ್ಹ ಬಳಿಕ ಮತ್ತೆ ಕಾರ್ಮಿಕರ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ ಆರಂಭಗೊಳ್ಳುತ್ತಿದ್ದಂತೆ ಪೊಲೀಸರು ಬಂಧಿಸಲು ಮುಂದಾದರು.

    ಇಂದು ಬೆಳೆಗ್ಗೆ 40 ಜನ ಕಾರ್ಮಿಕರನ್ನು ಬಂಧಿಸಿದ ಬಳಿಕಾವೂ ಸಮಾವೇಶಗೊಂಡ ನೂರಾರು ಕಾರ್ಮಿಕರು ಪೊಲೀಸರ ಕ್ರಮವನ್ನು ಖಂಡಿಸಿದರು. ಮತ್ತೆ ಸಮಾವೇಶಗೊಂಡ ಕಾರ್ಮಿಕ ನಾಯಕರು ಮತ್ತು ಕಾರ್ಮಿಕರನ್ನು ಬಂಧಿಸಲು ಮುಂದಾದಾಗ ಅದನ್ನು ಪ್ರತಿಭಟಿಸಿ ಕಾರ್ಮಿಕರು ಸಮನ್ವಯ ಸಮಿತಿ ನಾಯಕರ ನೇತೃತ್ವದಲ್ಲಿ ಮಂಡಳಿ ಮುಂದೆ ಪ್ರತಿಭಟನೆ ಯಶಸ್ವಿಯಾಗಿ ಪ್ರತಿಭಟನೆ ನಡೆಸಿದರು. ನಮ್ಮ ಪತ್ರಿಭಟನೆಗೆ ಮಣಿದು ಪೊಲೀಸರು ಅವಕಾಶ ನೀಡಲೇಬೇಕಾಯಿತು. ಮತ್ತು ಮಂಡಳಿ ಸಿಇಓ ಆಗಮಿಸಿ ಮನವಿ ಸ್ವೀಕರಿಸಬೇಕಾಯಿತು. ಬಳಿಕ ಒಂದೂವರೆ ಗಂಟೆ ಸಮನ್ವಯ ಸಮಿತಿ ಮುಖಂಡರ ಜೊತೆ ಮಾತುಕತೆ ನಡೆಸಿದರು.

    ಬಾಕಿ ಇರುವ ಕೋವಿಡ್ ಪರಿಹಾರ, ಆಹಾರ ಕಿಟ್ ಹಂಚಿಕೆಯನ್ನು ಶಾಸಕರಿಗೆ ವಹಿಸಿರುವುದು, ವೈದ್ಯಕೀಯ ಪರಿಹಾರ, ಮನೆಗೆ ಧನಸಹಾಯ ಪಿಂಚಣಿ ಸೇರಿ ಇತ್ಯಾದಿ ಅಂಶಗಳ ಕುರಿತು ತ್ವರಿತಗತಿಯಲ್ಲಿ ಕ್ರಮವಹಿಸಲು ಸಮನ್ವಯ ಸಮಿತಿ ಮುಖಂಡರು ಆಗ್ರಹಿಸಿದರು. ರಾಜ್ಯಾದ್ಯಂತ ಜುಲೈ 12 ರ ಹೋರಾಟವನ್ನು ಯಶಸ್ವಿ ಗೊಳಿಸಿದ ಕಾರ್ಮಿಕರಿಗೆ ಸಮನ್ವಯ ಸಮಿತಿ ಅಭಿನಂದನೆ ಸಲ್ಲಿಸಿದೆ. ಇದನ್ನೂ ಓದಿ: ಹೋರಿಯ ಹುಟ್ಟು ಹಬ್ಬ ಆಚರಿಸಿದ ಶಾಸಕ ರೇಣುಕಾಚಾರ್ಯ

    ಬೆಂಗಳೂರಿನಲ್ಲಿ ಹೋರಾಟದ ನೇತೃತ್ವವನ್ನು ಸಮನ್ವಯ ಸಮಿತಿಯ ಮುಖಂಡರಾದ ಕೆ.ಮಹಾಂತೇಶ, ಶಾಮಣ್ಣ ರೆಡ್ಡಿ ಎನ್.ಪಿ ಸ್ವಾಮಿ ,ನಾಗನಾಥ್, ಅಪ್ಪಣ್ಣ, ಲಿಂಗರಾಜ್, ಲಕ್ಷ್ಮೀ, ಲಕ್ಮಣ್ ಕುಮಾರ್, ವಿನಯ್ ಶ್ರೀನಿವಾಸ್, ಲೀಲಾವತಿ ಧನಶೇಖರ್, ಹನುಮೇಶ್,ಶ್ರೀಕಾಂತ, ಹರೀಶಕುಮಾರ್ ಹನುಮಂತರಾವ್ ಹವಾಲ್ದಾರ್ ಸೇರಿ ಹಲವರು ವಹಿಸಿದ್ದರು. ಮತ್ತು ಮಂಡಳಿ ಸಿ.ಇ.ಓ ಜೊತೆ ನಡೆದ ಮಾತುಕತೆಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಮಗಳ ಸಾವಿನ ಸುದ್ದಿ ಕೇಳಿ ತಂದೆ ಹೃದಯಾಘಾತದಿಂದ ಸಾವು

  • ಗೂಡ್ಸ್ ವಾಹನದಲ್ಲಿ ಬಂದ ಕಾರ್ಮಿಕರು ಕ್ಯಾರಂಟೈನ್‍ಗೆ ಶಿಫ್ಟ್

    ಗೂಡ್ಸ್ ವಾಹನದಲ್ಲಿ ಬಂದ ಕಾರ್ಮಿಕರು ಕ್ಯಾರಂಟೈನ್‍ಗೆ ಶಿಫ್ಟ್

    ಚಿಕ್ಕಮಗಳೂರು: ಕಳೆದ ಎರಡು ತಿಂಗಳ ಹಿಂದೆ ಗಾರೆ ಕೆಲಸಕ್ಕೆಂದು ಗದಗ ಜಿಲ್ಲೆಯಿಂದ ಮಡಿಕೇರಿಯ ಕುಶಾಲನಗರಕ್ಕೆ ಬಂದಿದ್ದ ಕಾರ್ಮಿಕರು ಕೆಲಸ ಇಲ್ಲವೆಂದು ಗೂಡ್ಸ್ ವಾಹನದಲ್ಲಿ ಗದಗಕ್ಕೆ ತೆರಳುತ್ತಿದ್ದರು. ಈ ವೇಳೆ ಚಿಕ್ಕಮಗಳೂರು ನಗರ ಪೊಲೀಸರು ರಕ್ಷಿಸಿ ನಗರದ ನರಿಗುಡ್ಡನಹಳ್ಳಿ ಸರ್ಕಲ್‍ನಲ್ಲಿರುವ ಬಿಸಿಎಂ ಹಾಸ್ಟೆಲ್ಲಿನ ಕ್ವಾರಂಟೈನ್‍ಗೆ ದಾಖಲಿಸಿದ್ದಾರೆ.

    ಹಾಸನ ಮಾರ್ಗದಿಂದ ಬಂದ ವಾಹನವನ್ನು ಹಿರೇಮಗಳೂರು ಚೆಕ್‍ಪೋಸ್ಟ್ ಬಳಿ ಕರ್ತವ್ಯ ನಿರತ ಪೊಲೀಸರು ಚೆಕ್ ಮಾಡಿದ್ದು, ಗಾಡಿಯಲ್ಲಿ ಆರು ಜನ ಇದ್ದರು. ಎಲ್ಲರೂ ಗದಗ ಜಿಲ್ಲೆಯವರಾಗಿದ್ದು, ತಮ್ಮ ಊರಿಗೆ ತೆರಳುತ್ತಿದ್ದರು. ಎಲ್ಲರನ್ನೂ ಕ್ವಾರಂಟೈನ್ ಘಟಕಕ್ಕೆ ಬಿಟ್ಟಿದ್ದಾರೆ. ಗದಗದಿಂದ ಬಂದಿದ್ದ ಇವರು, ಎಲ್ಲಿ ಕೆಲಸ ಸಿಗುತ್ತದೆಯೋ ಅಲ್ಲಿ ಕೆಲಸ ಮಾಡಿಕೊಂಡು ಬದುಕುತ್ತಿದ್ದರು. ಕಳೆದ 26 ದಿನಗಳಿಂದ ಕೊರೊನಾ ಆತಂಕದಿಂದ ದೇಶವೇ ಲಾಕ್‍ಡೌನ್ ಆದ ಹಿನ್ನೆಲೆ ಎಲ್ಲೂ ಕೆಲಸ ಸಿಗದ್ದಕ್ಕೆ ಊರಿಗೆ ಮರಳುತ್ತಿದ್ದರು.

    ಒಂದು ಕಡೆ ಕೆಲಸವಿಲ್ಲ, ಇನ್ನೊಂದೆಡೆ ದುಡಿದ ಹಣವೆಲ್ಲವೂ ಕರ್ಚಾದ ಹಿನ್ನೆಲೆ ಊರಿಗೆ ಹೊರಟಿದ್ದರು. ಕುಶಾಲನಗರದ ಬಸ್ ನಿಲ್ದಾಣದ ಬಳಿ ಬಂದಾಗ, ಅಲ್ಲಿಗೆ ಬಂದ ಗೂಡ್ಸ್ ವಾಹನದ ಚಾಲಕ ಚಿಕ್ಕಮಗಳೂರಿಗೆ ಹೋಗುತ್ತಿದ್ದೇನೆ, ಅಲ್ಲಿಂದ ಬೇರೆ ಗಾಡಿಯಲ್ಲಿ ನಿಮ್ಮೂರಿಗೆ ಹೋಗುವಿರಂತೆ ಎಂದು ಹೇಳಿ ಒಬ್ಬೊಬ್ಬರಿಂದ ತಲಾ 100 ರೂಪಾಯಿಗೆ ಮಾತನಾಡಿಕೊಂಡು ಕರೆದುಕೊಂಡು ಬಂದಿದ್ದ. ಇದೀಗ ವಾಹನದಲ್ಲಿದ್ದ ಎಲ್ಲರನ್ನೂ ಕ್ವಾರಂಟೈನ್ ಘಟಕಕ್ಕೆ ಬಿಟ್ಟಿದ್ದು, ಲಾರಿ ಹಾಗೂ ಚಾಲಕನನ್ನು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.