Tag: ಕಟ್ಟಡ ನವೀಕರಣ

  • ಸಿಂಪಲ್ ಮಿನಿಸ್ಟರ್ ಅನ್ನೋ ಪ್ರಿಯಾಂಕ್ ಖರ್ಗೆಯ `ಕಾಸ್ಟ್ಲೀ’ ದರ್ಬಾರ್..!

    ಸಿಂಪಲ್ ಮಿನಿಸ್ಟರ್ ಅನ್ನೋ ಪ್ರಿಯಾಂಕ್ ಖರ್ಗೆಯ `ಕಾಸ್ಟ್ಲೀ’ ದರ್ಬಾರ್..!

    ಕಲಬುರಗಿ: ನಾನು ಒಬ್ಬ ಸಿಂಪಲ್ ಮಿನಿಸ್ಟರ್ ಎಂದು ಹೇಳುವ ಸಮಾಜ ಕಲ್ಯಾಣ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರಗಿಯಲ್ಲಿರುವ ಅವರ ಕಾರ್ಯಾಲಯದ ಕಟ್ಟಡದ ನವೀಕರಣಕ್ಕಾಗಿ ಲಕ್ಷ ಲಕ್ಷ ಹಣ ಸುರಿದಿದ್ದಾರೆ.

    ತಾನೊಬ್ಬ ಸಿಂಪಲ್ ಮಿನಿಸ್ಟರ್, ತನಗೆ ಹಾರ-ತೂರಾಯಿ ಬೇಡ. ಅದೇ ಹಣ ಸಣ್ಣ-ಪುಟ್ಟ ಅಭಿವೃದ್ಧಿ ಕೆಲಸಕ್ಕೆ ನೀಡಿ ಎಂದು ಪ್ರಿಯಾಂಕ್ ಖರ್ಗೆ ಭಾಷಣ ಬಿಗಿಯುತ್ತಾರೆ. ಆದ್ರೆ ತಮ್ಮ ಕಲಬುರಗಿ ಉಸ್ತುವಾರಿ ಸಚಿವರ ಕಚೇರಿ ಕಟ್ಟಡದ ನವೀಕರಣಕ್ಕಾಗಿ ಒಂದಲ್ಲ ಎರಡಲ್ಲ ಬರೋಬ್ಬರಿ 55 ಲಕ್ಷ ಹಣ ಖರ್ಚು ಮಾಡಿದ್ದಾರೆ.

    ಕಟ್ಟಡಕ್ಕೆ ಬೇಕಾದ ಕಂಪ್ಯೂಟರ್ ಖರೀದಿ, ಎಸಿ, ಫರ್ನಿಚರ್, ಎಲೆಕ್ಟ್ರಿಕಲ್ ವರ್ಕ್, ಕಟ್ಟಡ ಪ್ಯಾಚಪ್ ವರ್ಕ್ ಎಂದು ಲಕ್ಷಾಂತರ ರೂಪಾಯಿ ದುಂದುವೆಚ್ಚ ಮಾಡಿದ್ದಾರೆ. ಆದ್ರೆ ಇವರು ತಿಂಗಳಿಗೆ ಒಂದು ಬಾರಿ ಈ ಕಚೇರಿಗೆ ಬಂದ್ರೇನೆ ದೊಡ್ಡ ವಿಷಯ. ಹೀಗಿರುವಾಗ ಇಷ್ಟು ಹಣ ಖರ್ಚು ಮಾಡಿ ಕಟ್ಟಡ ನವೀಕರಣ ಮಾಡಿದ್ದು ಯಾಕೆ? ಇದೇ ಹಣವನ್ನು ಜನರ ಅಭಿವೃದ್ಧಿಗೆ ಬಳಸಬಹುದಿತ್ತಲ್ವಾ? ಅಂತ ಜನರು ಸಚಿವರನ್ನು ಟೀಕಿಸುತ್ತಿದ್ದಾರೆ. ಇದೀಗ ಅವರ ಡೈಲಾಗ್ ಅವರಿಗೇ ತಿರುಗಿ ಬಿದ್ದಿದೆ.

    ಈ ಕುರಿತು ಬಿಜೆಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ದಿವ್ಯಾ ಹಾಗರಗಿ ಮಾತನಾಡಿ, ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತಮ್ಮ ಕ್ಷೇತ್ರದಲ್ಲಿ ನಾನು ಬಂದರೇ ಯಾವುದೇ ದುಂದುವೆಚ್ಚ ಮಾಡಬೇಡಿ, ನಾನೊಬ್ಬ ಸಾಮಾನ್ಯ ಸಚಿವ ಅಂತ ತಮ್ಮ ಪ್ರಚಾರಕ್ಕಾಗಿ ಡ್ರಾಮಾ ಮಾಡಿಕೊಂಡು ಹೋಗುತ್ತಿದ್ದಾರೆ. ಯಾವಗಲೋ ಒಮ್ಮೆ ಕಚೇರಿಗೆ ಬರುವ ಪ್ರಿಯಾಂಕ್ ಖರ್ಗೆ ಅವರು ಲಕ್ಷಾಂತರ ರೂಪಾಯಿ ಕಟ್ಟಡ ನವೀಕರಣಕ್ಕೆ ಖರ್ಚು ಮಾಡುತ್ತಿದ್ದಾರೆ. ಆ ದುಡ್ಡು ಯಾರದ್ದು? ಅದು ಜನಸಾಮಾನ್ಯರು ತುಂಬಿರುವ ತೆರಿಗೆ ಹಣ. ಅದನ್ನು ಬೇಕಾಬಿಟ್ಟಿ ಖರ್ಚು ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

    ಮಾಧ್ಯಮಗಳನ್ನು ಉಗ್ರಗಾಮಿಗಳಿಗೆ ಹೋಲಿಸುವ ಪ್ರಿಯಾಂಕ್ ಖರ್ಗೆ ಜನರ ತೆರಿಗೆ ಹಣ ಉಳಿಸಬೇಕು, ನಂತರ ಮತದಾರರಿಗೆ ನೀತಿ ಪಾಠ ಮಾಡಲು ಮುಂದಾಗಬೇಕು ಎಂದು ಎಲ್ಲರೂ ಮಾತನಾಡುವಂತಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೈತ್ರಿ ಸರ್ಕಾರದ ಸೂಪರ್ ಸಿಎಂ ಎಚ್.ಡಿ.ರೇವಣ್ಣ ಎಡವಟ್ಟು- ಹೀಗೆ ಮಾಡ್ಬಹುದಾ ಸಚಿವರೇ?

    ಮೈತ್ರಿ ಸರ್ಕಾರದ ಸೂಪರ್ ಸಿಎಂ ಎಚ್.ಡಿ.ರೇವಣ್ಣ ಎಡವಟ್ಟು- ಹೀಗೆ ಮಾಡ್ಬಹುದಾ ಸಚಿವರೇ?

    ಬೆಂಗಳೂರು: ಮೈತ್ರಿ ಸರ್ಕಾರದಲ್ಲಿಯೇ ಸೂಪರ್ ಸಿಎಂ ಅಂತಾನೆ ಕರೆಸಿಕೊಳ್ಳುವ ಎಚ್.ಡಿ.ರೇವಣ್ಣ ಎಡವಟ್ಟು ಮಾಡಿಕೊಂಡಿದ್ದಾರೆ. ಸರ್ಕಾರ ರಚನೆಯ ಬಳಿಕ ಎಲ್ಲ ಸಚಿವರಿಗೂ ಸರ್ಕಾರಿ ಬಂಗಲೆಯನ್ನು ನೀಡಲಾಗಿದೆ. ಆದ್ರೆ ಎಚ್.ಡಿ.ರೇವಣ್ಣ ತಮ್ಮ ಕಟ್ಟಡದ ಕೊಳಚೆ ನೀರನ್ನು ರಸ್ತೆಗೆ ತಿರುಗಿಸುವ ಕೆಲಸ ಮಾಡಿದ್ದಾರೆ.

    ಸದ್ಯ ಆಷಾಢ ಮಾಸ ಇರೋದರಿಂದ ಸರ್ಕಾರಿ ಬಂಗಲೆಗೆ ಸಚಿವರು ಪ್ರವೇಶ ಮಾಡಿಲ್ಲ. ಆಷಾಢ ಕಳೆದ ಮೇಲೆ ಶಿವಾನಂದ ಸರ್ಕಲ್ ಬಳಿ ಇರುವ ಕುಮಾರಕೃಪಾ ನಂಬರ್ 1 ನಿವಾಸಕ್ಕೆ ಎಚ್.ಡಿ.ರೇವಣ್ಣ ಪ್ರವೇಶ ಮಾಡಲಿದ್ದಾರೆ. ಆದರೆ ಪ್ರವೇಶಕ್ಕೂ ಮುನ್ನವೇ ವಾಸ್ತು ಪ್ರಕಾರ ಕಟ್ಟಡದ ನವೀಕರಣ ನಡೆಯುತ್ತಿದೆ. ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಹೆಚ್.ಸಿ.ಮಹಾದೇವಪ್ಪ ತಮ್ಮ ಪ್ರವೇಶದ ವೇಳೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಟ್ಟಡದ ನವೀಕರಣಗೊಳಿಸಿದ್ದರು. ಈಗ ಮತ್ತೆ ಅದೇ ಕಟ್ಟಡದ ನವೀಕರಣ ನಡೆಯುತ್ತಿದೆ.

    ಮಳೆಯಾದರೆ ಕುಮಾರ ಕೃಪಾ ಮುಂದೆ ಮಳೆನೀರು ನಿಂತುಕೊಳ್ಳುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಮನೆಯ ಮುಂದಿನ ನೀರನ್ನು ರಸ್ತೆಗೆ ತಿರುಗಿಸಿದ್ದಾರೆ. ಮಳೆಯ ನೀರು ಮತ್ತು ಕಟ್ಟಡದ ಕೊಳಚೆ ನೇರವಾಗಿ ರಸ್ತೆಯ ಮೇಲೆ ಹರಿಯುವ ಸಾಧ್ಯತೆಗಳಿವೆ. ಇದರಿಂದ ಸಹಜವಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಆಗಲಿದೆ.

    ಅತಿ ಹೆಚ್ಚಾಗಿ ಜೋತಿಷ್ಯ ನಂಬುವ ಸಚಿವರು ಸಾರ್ವಜನಿಕರ ಹಣದಲ್ಲಿ ಸರ್ಕಾರದ ಕಟ್ಟಡವನ್ನು ತಮಗೆ ಅನುಕೂಲವಾಗುವಂತೆ ಮಾಡಿಕೊಳ್ಳುತ್ತಿರೋದು ಇದೀಗ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಕೊಳಚೆ ನೀರನ್ನು ರಸ್ತೆಗೆ ಹರಿಸುವ ಮೂಲಕ ಕೇವಲ ತಮ್ಮ ಸುರಕ್ಷತೆ ನೋಡಿಕೊಂಡು ಸಾರ್ವಜನಿಕರಿಗೆ ತೊಂದರೆ ಮಾಡಿದಂತಾಗುತ್ತದೆ. ಸಚಿವರೇ ನೀವು ಹೇಗೆ ಮಾಡಬಹುದಾ ಎಂಬ ಪ್ರಶ್ನೆಯೊಂದು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ.