Tag: ಕಡಲಾಮೆ

  • ಕಡಲಾಮೆಗಳಿಗಾಗಿ 3 ತಿಂಗಳು ಕ್ಷಿಪಣಿ ಪರೀಕ್ಷೆ ಬಂದ್

    ಕಡಲಾಮೆಗಳಿಗಾಗಿ 3 ತಿಂಗಳು ಕ್ಷಿಪಣಿ ಪರೀಕ್ಷೆ ಬಂದ್

    ಭುವನೇಶ್ವರ: ಅಳಿವಿನಂಚಿನಲ್ಲಿರುವ ಆಲೀವ್ ರಿಡ್ಲಿ (Olive Ridley) ಕಡಲಾಮೆಗಳ (Sea Turtles) ಸಂರಕ್ಷಣೆಗಾಗಿ ಒಡಿಶಾದ ವೀಲರ್ ದ್ವೀಪದಲ್ಲಿ (Wheeler Island ) ಜನವರಿಯಿಂದ ಮಾರ್ಚ್‌ವರೆಗೆ ಕ್ಷಿಪಣಿ ಪರೀಕ್ಷೆ ನಡೆಸದಿರಲು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ನಿರ್ಧರಿಸಿದೆ.

    ಈ ಅವಧಿಯಲ್ಲಿ ಕಡಲಾಮೆಗಳು ಸಮುದ್ರ ಸಮೀಪದ ಭೂಪ್ರದೇಶಕ್ಕೆ ಬಂದು ಗೂಡು ಕಟ್ಟಿ ಮೊಟ್ಟೆಗಳನ್ನಿಡುತ್ತವೆ. ಕ್ಷಿಪಣಿ ಪರೀಕ್ಷೆಯಿಂದ ಉಂಟಾಗುವ ಭಾರಿ ಶಬ್ದ ಮತ್ತು ಬೆಳಕು ಈ ಆಮೆಗಳಿಗೆ ತೊಂದರೆ ಉಂಟು ಮಾಡಬಹುದು ಎಂಬ ಕಾರಣಕ್ಕೆ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

    ಆಹಾರಕ್ಕಾಗಿ ಈ ಆಮೆಗಳನ್ನು ಬೇಟೆಯಾಡುವವರು ಮತ್ತು ಮೊಟ್ಟೆಗಳನ್ನು ಗೊಬ್ಬರವಾಗಿ ಬಳಕೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಈ ತಳಿಯ ಆಮೆಗಳು ಅಳಿವಿನಂಚಿಗೆ ತಲುಪಿದೆ.

    ಯಾಂತ್ರೀಕೃತ ದೋಣಿಗಳು, ಕ್ಷಿಪಣಿ ಪರೀಕ್ಷೆ ಮತ್ತು ಜನರ ಚಲನೆಯು ಸಮುದ್ರ ಆಮೆಗಳ ಸಾಮೂಹಿಕ ಗೂಡುಕಟ್ಟುವ ಮತ್ತು ದ್ವೀಪದ ಸಂತಾನೋತ್ಪತ್ತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.   ಇದನ್ನೂ ಓದಿ: ನಾನು 40 ವರ್ಷಗಳ ಕಾಲ ವಾರಕ್ಕೆ 85-90 ಗಂಟೆ ಕೆಲಸ ಮಾಡಿದ್ದೆ, ನನ್ನ ಶ್ರಮ ವ್ಯರ್ಥವಾಗಲಿಲ್ಲ: ನಾರಾಯಣ ಮೂರ್ತಿ

    ಮೀನುಗಾರಿಕಾ ದೋಣಿಗಳು ಆಮೆಗಳು ಮೊಟ್ಟೆಗಳನ್ನು ಇಟ್ಟಿರುವ ಜಾಗಗಳು ಇರುವ ಮರಳಿನ ಪಟ್ಟಿಗಳ ಹತ್ತಿರ ಹೋಗದಂತೆ ಸೇನೆ ಮತ್ತು ಕೋಸ್ಟ್ ಗಾರ್ಡ್‌ ಗಸ್ತು ಕಾಯುತ್ತಿವೆ.

    ಸುಮಾರು 6.6 ಲಕ್ಷ ಸಮುದ್ರ ಆಮೆಗಳು ಗಂಜಾಂ ಜಿಲ್ಲೆಯಲ್ಲಿರುವ ರುಶಿಕುಲ್ಯ ರೂಕೆರಿಯಲ್ಲಿ ಗೂಡುಕಟ್ಟಿವೆ. ಒಡಿಶಾ ಸರ್ಕಾರ (Odisha Government ) ಈಗಾಗಲೇ ನವೆಂಬರ್ 1 ರಿಂದ ಮೇ 31 ರವರೆಗೆ ಈ ಕರಾವಳಿ ಭಾಗದಲ್ಲಿ ಮೀನುಗಾರಿಕೆಯನ್ನು ನಿಷೇಧಿಸಿದೆ.

     

  • ಕಡಲ ತೀರದಲ್ಲಿ ಕಡಲಾಮೆಗಳ 125 ಮೊಟ್ಟೆಗಳು ಪತ್ತೆ

    ಕಡಲ ತೀರದಲ್ಲಿ ಕಡಲಾಮೆಗಳ 125 ಮೊಟ್ಟೆಗಳು ಪತ್ತೆ

    ಕಾರವಾರ: ಬೃಹದಾಕಾರದ ಕಡಲಾಮೆಗಳ 125 ಮೊಟ್ಟೆಗಳು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನಲ್ಲಿ ಪತ್ತೆಯಾಗಿದೆ.

    ಅಳಿವಿನಂಚಿನಲ್ಲಿರುವ ಬೃಹದಾಕಾರದ ಕಡಲಾಮೆ 125 ಮೊಟ್ಟೆಗಳು ಕಡಲತೀರದಲ್ಲಿ ಪತ್ತೆಯಾಗಿದ್ದು, ಅವುಗಳನ್ನು ರಕ್ಷಣೆ ಮಾಡಲಾಗಿದೆ. ಪ್ರತಿ ವರ್ಷ ಕಡಲಾಮೆಗಳು ಕಾಸರಕೋಡಿನ ಬಂದರು ಜಾಗದ ಬಳಿ ಮೊಟ್ಟೆ ಇಟ್ಟು 45 ದಿನದ ನಂತರ ಮರಿ ಮಾಡಿ ಕರೆದುಕೊಂಡು ಹೋಗುತ್ತವೆ. ಐದು ಅಡಿ ಸುತ್ತಳತೆಗೂ ಹೆಚ್ಚು ಹಾಗೂ ಮೂರು ಅಡಿಗೂ ಹೆಚ್ಚು ಈ ಆಮೆಗಳು ಬೆಳೆಯುತ್ತದೆ.

    ಸದ್ಯ ಅವನತಿಯ ಅಂಚಿನಲ್ಲಿರುವ ಈ ಆಮೆಗಳು ಸಮುದ್ರದ ತಡದಲ್ಲಿನ ಯಾಂತ್ರಿಕ ಬದಲಾವಣೆಯಿಂದಾಗಿ ತನ್ನ ವಂಶಗಳನ್ನು ಕಳೆದುಕೊಳ್ಳುತಿದ್ದು ಅಳಿವಿನಂಚಿಗೆ ತಲುಪಿದೆ. ಇಂದು ಅರಣ್ಯ ಇಲಾಖೆ ಈ ಮೊಟ್ಟೆಗಳನ್ನು ರಕ್ಷಣೆಮಾಡಿದ್ದು ಕೃತಕ ಶಾಖ ನೀಡಿ 45 ದಿನದ ನಂತರ ಸಮುದ್ರಕ್ಕೆ ಬಿಡಲಿದ್ದಾರೆ.

  • ಕಾಲಿಲ್ಲದ ದೊಡ್ಡ ಕಡಲಾಮೆ ರಕ್ಷಣೆ

    ಕಾಲಿಲ್ಲದ ದೊಡ್ಡ ಕಡಲಾಮೆ ರಕ್ಷಣೆ

    ಉಡುಪಿ: ಜಿಲ್ಲೆಯ ಕೋಟ ಪಡುಕೆರೆಯಲ್ಲಿ ಕಡಲ ಆಮೆಯನ್ನು ರಕ್ಷಣೆ ಮಾಡಲಾಗಿದೆ.

    ಕೋಟದ ಕಡಲ ಕಿನಾರೆಯಲ್ಲಿ ಗಾಯಗೊಂಡು ಅಸಹಾಯಕ ಸ್ಥಿತಿಯಲ್ಲಿದ್ದ ಕಡಲಾಮೆಯನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಡಲಾಗಿದೆ. ಸ್ಥಳೀಯ ಮೀನುಗಾರ ಪ್ರದೀಪ್ ಅವರು, ಕಡಲಂಚಿನಲ್ಲಿ ಬಲೆಹಾಕಿ ಮೀನು ಹಿಡಿಯುವ ಸಂದರ್ಭದಲ್ಲಿ ಗಾಯಗೊಂಡಿರುವ ಕಡಲ ಆಮೆ ಒದ್ದಾಡುತ್ತಿರುವುದನ್ನು ನೋಡಿದ್ದಾರೆ. ಬಳಿಕ ಸಮುದ್ರ ತೀರದಲ್ಲಿದ್ದ ಆಮೆಯನ್ನು ರಕ್ಷಣೆ ಮಾಡಿದ್ದಾರೆ.

    ರಕ್ಷಣೆ ಮಾಡಿದ ಆಮೆಯ ಬಗ್ಗೆ ಕೋಟದ ಸಾಮಾಜಿಕ ಸೇವಾ ಸಂಸ್ಥೆಯಾದ, ಗೀತಾನಂದ ಫೌಂಡೇಶನ್ ಗಮನಕ್ಕೆ ತಂದಿದ್ದಾರೆ. ಸಂಸ್ಥೆಯ ರವಿಕಿರಣ್ ಮತ್ತು ಸಾಮಾಜಿಕ ಕಾರ್ಯಕರ್ತ ವಿನಯಚಂದ್ರ ಅರಣ್ಯ ಇಲಾಖೆಯನ್ನು ಸಂಪರ್ಕ ಮಾಡಿದ್ದಾರೆ. ಉಪವಲಯ ಅರಣ್ಯಾಧಿಕಾರಿ ಜೀವನ್ ದಾಸ್ ಶೆಟ್ಟಿ, ಅರಣ್ಯ ರಕ್ಷಕರಾದ ಶಿವಪ್ಪ ನಾಯ್ಕ, ಅರಣ್ಯ ವೀಕ್ಷಕರು ಪರಶುರಾಮ್ ಮೇಟಿ ಮತ್ತು ವಾಹನ ಚಾಲಕ ಜೋಯ್ ಕಡಲಾಮೆ ರಕ್ಷಣಾ ಕಾರ್ಯಚರಣೆಯನ್ನು ನೆಡೆಸಿದ್ದಾರೆ.

    ಬಳಿಕ ಆಮೆಯನ್ನು ಕಡಲಲ್ಲಿ ಅಲೆಗಳ ಅಬ್ಬರ ಹೆಚ್ಚಾದ್ದರಿಂದ ಸುರಕ್ಷತೆಯ ದೃಷ್ಟಿಯಿಂದ ಹಾರಾಡಿಯ ಸುವರ್ಣ ನದಿ ಮಡಿಲಿಗೆ ಬಿಡಲಾಗಿದೆ. ಮೀನುಗಾರರ ಬಲೆಗೆ ಸಿಲುಕಿ ಅಥವಾ ದೊಡ್ಡ ಮೀನುಗಳ ದಾಳಿಗೆ ತುತ್ತಾಗಿ ಆಮೆ ಒಂದು ಕಾಲನ್ನು ಕಳೆದುಕೊಂಡಿದೆ.