Tag: ಕಡಲ ತೀರದ ಭಾರ್ಗವ

  • ‘ಮಧುರ ಮಧುರ’ ಹಾಡಿಗೆ ಸೊಂಟ ಬಳುಕಿಸಿದ ಶ್ರುತಿ ಪ್ರಕಾಶ್

    ‘ಮಧುರ ಮಧುರ’ ಹಾಡಿಗೆ ಸೊಂಟ ಬಳುಕಿಸಿದ ಶ್ರುತಿ ಪ್ರಕಾಶ್

    ನ್ನಡದಲ್ಲೀಗ ಕಂಟೆಂಟ್ ಓರಿಯಂಟೆಡ್ ಚಿತ್ರಗಳೇ ಹೆಚ್ಚಾಗಿ ಜನಪ್ರಿಯಾಗುತ್ತಿದೆ. ಅಂತಹ ಉತ್ತಮ ಕಂಟೆಂಟ್ ಇರುವ ಮತ್ತೊಂದು ಕನ್ನಡ ಚಿತ್ರ ‘ಕಡಲ ತೀರದ ಭಾರ್ಗವ’. ವಿಭಿನ್ನ ಕಥೆಯುಳ್ಳ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಬಿಡುಗಡೆಗೆ ಸಿದ್ದವಾಗಿದೆ.

    ಪಟೇಲ್ ವರುಣ್ ರಾಜು ಹಾಗೂ ಭರತ್ ಗೌಡ ನಿರ್ಮಿಸಿರುವ, ಪನ್ನಗ ಸೋಮಶೇಖರ್ ನಿರ್ದೇಶಿಸಿರುವ ಈ ಚಿತ್ರದ  ‘ಮಧುರ ಮಧುರ’ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಅನಿಲ್ ಸಿ ಜೆ ಸಂಗೀತ ನೀಡಿರುವ ಈ ಹಾಡನ್ನು ವಾರಿಜಾಶ್ರೀ ಹಾಗೂ ಅನಿಲ್ ಸಿ ಜೆ ಅವರು ಸುಶ್ರಾವ್ಯವಾಗಿ ಹಾಡಿದ್ದಾರೆ. ಇತ್ತೀಚೆಗೆ ಬಿಡುಗಡೆಯಾಗಿರುವ ಈ ಹಾಡು ಜನಪ್ರಿಯವಾಗಿದ್ದು, ಈಗಾಗಲೇ ಐದು ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ. ಇದನ್ನೂ ಓದಿ: ಸಚಿವ ಸುಧಾಕರ್‌ರನ್ನ ಹಾಡಿ ಹೊಗಳಿದ ರಮ್ಯಾ: ಕೈಗೆ ನಟಿ ಬೈ ಹೇಳಿ ಬಿಜೆಪಿ ಸೇರ್ಪಡೆ?

    ಆರ್ಯನ್ ರೋಷನ್ ನೃತ್ಯ ನಿರ್ದೇಶಿಸಿರುವ ‘ಮಧುರ ಮಧುರ’ ಹಾಡಿಗೆ‌ ನಾಯಕ ಭರತ್ ಗೌಡ ಹಾಗೂ ನಾಯಕಿ ಶ್ರುತಿ ಪ್ರಕಾಶ್ ಹೆಜ್ಜೆ ಹಾಕಿದ್ದಾರೆ. ಅನಿಲ್ ಸಿ ಜೆ  ಸಂಗೀತಕ್ಕೆ ಹಾಗೂ ಕೀರ್ತನ ಪೂಜಾರಿ ಅವರ ಛಾಯಾಗ್ರಹಣಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ಯದಲ್ಲೇ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಲಿದೆ. ಆನಂತರ ಟ್ರೇಲರ್ ಬರಲಿದ್ದು, ಟ್ರೇಲರ್ ನಲ್ಲೇ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗುವುದೆಂದು ನಿರ್ಮಾಪಕರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಎಲ್ಲರನ್ನೂ ಕಾಡಲು ಶುರು ಮಾಡಿದೆ ಕಡಲ ತೀರದ ಭಾರ್ಗವ ಚಿತ್ರದ ‘ಸಮಯವೇ’ ಲಿರಿಕಲ್ ವೀಡಿಯೋ ಸಾಂಗ್

    ಎಲ್ಲರನ್ನೂ ಕಾಡಲು ಶುರು ಮಾಡಿದೆ ಕಡಲ ತೀರದ ಭಾರ್ಗವ ಚಿತ್ರದ ‘ಸಮಯವೇ’ ಲಿರಿಕಲ್ ವೀಡಿಯೋ ಸಾಂಗ್

    ಟೈಟಲ್ ಮೂಲಕವೇ ಕೆಲವೊಂದು ಸಿನಿಮಾಗಳು ಮೊದಲ ಹಂತದಲ್ಲೇ ತನ್ನತ್ತ ಸೆಳೆದು ಬಿಡುತ್ತವೆ. ಟೈಟಲ್ ಹಾಡುಗಳು ಒಂದು ರೀತಿ ಸಿನಿಮಾಗೆ ಆಮಂತ್ರಣವಿದ್ದಂತೆ ಅದೇ ರೀತಿ ಚಂದನವನದಲ್ಲಿ ಟೈಟಲ್ ಮೂಲಕವೇ ತಿರುಗಿ ನೋಡುವಂತೆ ಮಾಡಿದ ಸಿನಿಮಾ ಕಡಲ ತೀರದ ಭಾರ್ಗವ ಸಿನಿಮಾ. ಈಗಾಗಲೇ ಖಡಕ್ ಹಾಗೂ ರೋಚಕ ಟೀಸರ್ ಮೂಲಕ ಚಿತ್ರ ರಸಿಕರನ್ನು ಸೆಳೆದಿರುವ ಈ ಚಿತ್ರ ಹಾಡಿನ ಮೂಲಕ ಸೆಳೆಯೋಕೆ ಶುರುಮಾಡಿದೆ.

    Kadalatheerada Bhargava

    ಕಡಲ ತೀರದ ಭಾರ್ಗವ ಸಿನಿಮಾ ಸೆಟ್ಟೇರಿದಾಗ ಒಂದು ರೀತಿಯ ಸಂಚಲನ ಸೃಷ್ಟಿಸಿತ್ತು. ಇದೇನು ಕಾರಂತರ ಜೀವನಗಾಥೆಯಾ ಎಂದು ಆದರೆ ಪೋಸ್ಟರ್ ನೋಡಿದ ಮೇಲೆ ಇದು ಪ್ರೇಮಕಥೆ ಎನ್ನುವುದು ತಿಳಿಯಿತು. ಅಲ್ಲಿಂದ ಇಲ್ಲಿಯವರೆಗೂ ಸಿನಿಮಾದ ಪೋಸ್ಟರ್, ಟೀಸರ್ ಒಳಗೊಂಡಂತೆ ಸುದ್ದಿಯಾಗುತ್ತಲೇ ಬಂದ ಈ ಸಿನಿಮಾ ಈಗ ಬಿಡುಗಡೆಯ ಹಂತಕ್ಕೆ ಬಂದು ನಿಂತಿದೆ. ಚಿತ್ರದ ಒಂದೊಂದೇ ಸ್ಯಾಂಪಲ್‍ಗಳ ಮೂಲಕ ಚಿತ್ರ ಪ್ರೇಮಿಗಳ ಚಿತ್ತ ಕದಿಯುತ್ತ ಬಂದಿರುವ ಚಿತ್ರತಂಡವೀಗ ಚಿತ್ರದ ಮೊದಲ ಸಾಂಗ್ ‘ಸಮಯವೇ’ ಎಂಬ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆ ಮಾಡಿ ಗಮನ ಸೆಳೆಯುತ್ತಿದೆ.

    Kadalatheerada Bhargava

    ಮೊದಲೇ ಹೇಳಿದಂತೆ ಹಾಡುಗಳು ಚಿತ್ರಕ್ಕೆ ಒಂದು ರೀತಿ ಆಮಂತ್ರಣ ಪತ್ರವಿದ್ದಂತೆ. ಹಾಡುಗಳು ಮನಸ್ಸಿಗಿಷ್ಟವಾದರೆ ಸಾಕು ಸಿನಿಮಾ ನೋಡಲು ಪ್ರೇರೇಪಿಸುತ್ತೆ. ಅದೇ ನಿಟ್ಟಿನಲ್ಲಿ ಚೆಂದವಾಗಿ ಕಟ್ಟಿಕೊಟ್ಟ ಹಾಡು ‘ಸಮಯವೇ’. ಅನಿಲ್ ಸಿ ಜೆ ಮ್ಯೂಸಿಕ್ ಮೋಡಿಯಲ್ಲಿ, ವಿಜಯ್ ಪ್ರಕಾಶ್ ದನಿಯ ಮ್ಯಾಜಿಕ್‍ನಲ್ಲಿ ಮೂಡಿ ಬಂದಿರುವ ಈ ಹಾಡಿಗೆ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ಕೃಷಿಯಿದೆ. ಸದ್ಯಕ್ಕಂತೂ ಎಲ್ಲರನ್ನೂ ಈ ಹಾಡು ಕಾಡಲು ಶುರುಮಾಡಿದೆ. ಇದನ್ನೂ ಓದಿ: ಖಡಕ್ ಟ್ರೇಲರ್ ನೊಂದಿಗೆ ಬಂದ ಕಡಲ ತೀರದ ಭಾರ್ಗವ!

    Kadalatheerada Bhargava

    ಪನ್ನಗ ಸೋಮಶೇಖರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸಸ್ಪೆನ್ಸ್, ಥ್ರಿಲ್ಲರ್ ಚಿತ್ರದ ಮೂಲಕ ಭರತ್ ಗೌಡ, ವರುಣ್ ರಾಜು ಇಬ್ಬರು ಪ್ರತಿಭಾವಂತ ನಾಯಕ ನಟರು ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿಡುತ್ತಿದ್ದು, ಚಿತ್ರದಲ್ಲಿ ಶ್ರುತಿ ಪ್ರಕಾಶ್ ನಾಯಕ ನಟಿಯಾಗಿ ನಟಿಸಿದ್ದಾರೆ. ಇದನ್ನೂ ಓದಿ: ರೋಚಕ ಟೀಸರ್ ಹೊತ್ತು ಬಂದ ‘ಕಡಲ ತೀರದ ಭಾರ್ಗವ’ ಚಿತ್ರತಂಡ

    Kadalatheeradabhargava

    ಸಸ್ಪೆನ್ಸ್, ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರವನ್ನು ಇವಕಲ ಸ್ಟುಡಿಯೋ ಬ್ಯಾನರ್ ನಡಿ ಚಿತ್ರದ ನಾಯಕ ನಟರಾದ ಭರತ್ ಗೌಡ, ವರುಣ್ ರಾಜು ನಿರ್ಮಾಣ ಮಾಡಿದ್ದು, ಶ್ರೀಧರ್, ರಾಘವ್ ನಾಗ್, ಅಶ್ವಿನ್ ಹಾಸನ್ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕೀರ್ತನ್ ಪೂಜಾರ್ ಛಾಯಾಗ್ರಹಣ, ಆಶಿಕ್ ಕುಸುಗೊಳ್ಳಿ, ಉಮೇಶ್ ಬೋಸಗಿ ಸಂಕಲನ ಚಿತ್ರಕ್ಕಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಚಿತ್ರತಂಡ ಸದ್ಯದಲ್ಲೇ ಸಿನಿಮಾ ಬಿಡುಗಡೆ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದೆ.

     

  • ರೋಚಕ ಟೀಸರ್ ಹೊತ್ತು ಬಂದ ‘ಕಡಲ ತೀರದ ಭಾರ್ಗವ’ ಚಿತ್ರತಂಡ

    ರೋಚಕ ಟೀಸರ್ ಹೊತ್ತು ಬಂದ ‘ಕಡಲ ತೀರದ ಭಾರ್ಗವ’ ಚಿತ್ರತಂಡ

    ಡಲ ತೀರದ ಭಾರ್ಗವ ಎಂದಾಕ್ಷಣ ದುತ್ತನೆ ಕಣ್ಮುಂದೆ ಬರುವ ವ್ಯಕ್ತಿತ್ವ ಶಿವರಾಮ ಕಾರಂತರು. ಆ ಜನಪ್ರಿಯ ಹೆಸರನ್ನು ಸಿನಿಮಾ ಶೀರ್ಷಿಕೆಯಾಗಿಸಿಕೊಂಡು ಸಿನಿಮಾವೊಂದು ಸೆಟ್ಟೇರಿದ್ದು ಕೂಡ ನಿಮಗೆ ಗೊತ್ತಿರಬಹುದು. ಹಾಗಂತ ಇದು ಕಾರಂತರ ಜೀವನ ಕಥೆಯಾ? ಅಂದ್ರೆ ಖಂಡಿತ ಅಲ್ಲ. ಸಿನಿಮಾ ಕಥೆಗೆ ಈ ಹೆಸರು ಸೂಕ್ತ ಎನ್ನಿಸಿದ್ದರಿಂದ ಕಡಲ ತೀರದ ಭಾರ್ಗವ ಎಂದು ಟೈಟಲ್ ಫಿಕ್ಸ್ ಮಾಡಿದೆ ಚಿತ್ರತಂಡ. ಇದೀಗ ‘ಕಡಲ ತೀರದ ಭಾರ್ಗವ’ ಚಿತ್ರತಂಡ ಟೀಸರ್ ಮೂಲಕ ಪ್ರೇಕ್ಷಕರೆದುರು ಬಂದಿದೆ.

    ಹೊಸ ತಂಡವೊಂದು ಹೊಸ ಕನಸಿಟ್ಟುಕೊಂಡು ಹೊಸ ಹುರುಪಿನಿಂದ ಮಾಡಿರುವ ಸಿನಿಮಾ ‘ಕಡಲ ತೀರದ ಭಾರ್ಗವ’. ಟೀಸರ್ ಎಲ್ಲರ ಹುಬ್ಬೇರಿಸುವಂತಿದ್ದು, ಹೊಸಬರ ಸಿನಿಮಾ ಎನ್ನಲಾರದಷ್ಟು ಪ್ರಾಮಿಸಿಂಗ್ ಆಗಿ ಮೂಡಿಬಂದಿದೆ. ಒಂದಿಷ್ಟು ರೋಚಕತೆಯನ್ನು ಒಳಗೊಂಡಿರುವ ಟೀಸರ್ ತುಣುಕು ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುತ್ತೆ ಎಂಬ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಅದಕ್ಕೆ ತಕ್ಕಂತೆ ಅನಿಲ್ ಸಿ.ಜೆ ಹಿನ್ನೆಲೆ ಸಂಗೀತದ ಜುಗಲ್ಬಂದಿಯಿದೆ. ಪ್ರೀತಿ, ಕೋಪ, ನೋವಿನ ಎಳೆ ಒಳಗೊಂಡ ಟೀಸರ್ ಖಂಡಿತ ಸಿನಿಮಾ ತಂಡ ಹೊಸದೇನನ್ನೋ ಹೇಳ ಹೊರಟಿದೆ ಎಂಬ ಫೀಲ್ ನೀಡದೇ ಇರದು. ಇದನ್ನೂ ಓದಿ: ಕತ್ರಿನಾ ಜೊತೆಗೆ ವಿಕ್ಕಿ ಕೌಶಲ್ ಎಂಗೇಜ್‍ಮೆಂಟ್?

    Kadalatheeradabhargava

    ಇಬ್ಬರು ಸ್ನೇಹಿತರು ಹಾಗೂ ನಾಯಕಿ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ ‘ಕಡಲ ತೀರದ ಭಾರ್ಗವ’. ಪನ್ನಗ ಸೋಮಶೇಖರ್ ಚಿತ್ರದ ಸೂತ್ರಧಾರ. ಮೊದಲ ಬಾರಿ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಇವರು ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ. ನವ ಪ್ರತಿಭೆಗಳಾದ ಭರತ್ ಗೌಡ, ವರುಣ್ ರಾಜು ಪಟೇಲ್ ನಾಯಕ ನಟರಾಗಿ ಗಾಂಧಿನಗರಕ್ಕೆ ಈ ಸಿನಿಮಾ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಕೇವಲ ನಾಯಕ ನಟರಾಗಿ ಮಾತ್ರವಲ್ಲದೇ ನಿರ್ಮಾಪಕರಾಗಿಯೂ ಈ ಇಬ್ಬರು ಮೊದಲ ಹೆಜ್ಜೆ ಇಟ್ಟಿದ್ದಾರೆ. ಬಿಗ್ ಬಾಸ್ ಖ್ಯಾತಿಯ ನಟಿ ಶ್ರುತಿ ಪ್ರಕಾಶ್ ಚಿತ್ರದ ನಾಯಕ ನಟಿಯಾಗಿ ಸ್ಕ್ರೀನ್ ಶೇರ್ ಮಾಡಿದ್ದಾರೆ. ಇದನ್ನೂ ಓದಿ: ಟಾಪ್‌ಲೆಸ್ ಅವತಾರದಲ್ಲಿ ಇಷಾ ಗುಪ್ತ – ಹೆಚ್ಚಾಯ್ತು ತುಂಡೈಕ್ಳ ಎದೆ ಬಡಿತ

    ಇವಕಲ ಸ್ಟುಡಿಯೋ ಬ್ಯಾನರ್ ನಡಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಶ್ರೀಧರ್, ರಾಘವ್ ನಾಗ್, ಅಶ್ವಿನ್ ಹಾಸನ್ ಒಳಗೊಂಡ ಹಲವು ಕಲಾವಿದರ ತಾರಾಬಳಗವಿದೆ. ಬೆಂಗಳೂರು, ಕೊಡಗು, ಉಡುಪಿ, ಭಟ್ಕಳ, ಮುರುಡೇಶ್ವರದ ಕಡಲ ತೀರದಲ್ಲಿ ಚಿತ್ರವನ್ನು ಸೆರೆ ಹಿಡಿಯಲಾಗಿದೆ. ಅನಿಲ್ ಸಿ.ಜೆ ಸಂಗೀತ ಸಂಯೋಜನೆ, ಕೀರ್ತನ್ ಪೂಜಾರ್ ಚೆಂದದ ಸಿನಿಮ್ಯಾಟೋಗ್ರಫಿ, ಆಶಿಕ್ ಕುಸುಗೊಳ್ಳಿ, ಉಮೇಶ್ ಬೋಸಗಿ ಸಂಕಲನ ಚಿತ್ರಕ್ಕಿದೆ. ಪ್ರಾಮಿಸಿಂಗ್ ಟೀಸರ್ ಮೂಲಕ ಸಿನಿಮಾದ ಝಲಕ್ ತೋರಿಸಿ ಕುತೂಹಲ ಹುಟ್ಟು ಹಾಕಿರುವ ಚಿತ್ರತಂಡ ಸದ್ಯದಲ್ಲೇ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ಹೊತ್ತು ತರಲಿದೆ. ಇದನ್ನೂ ಓದಿ: ಕನ್ನಡದ ಹಿರಿಯ ಹಾಸ್ಯ ಕಲಾವಿದ ಶಂಕರ್ ರಾವ್ ನಿಧನ

  • ಖಡಕ್ ಟ್ರೇಲರ್ ನೊಂದಿಗೆ ಬಂದ ಕಡಲ ತೀರದ ಭಾರ್ಗವ!

    ಖಡಕ್ ಟ್ರೇಲರ್ ನೊಂದಿಗೆ ಬಂದ ಕಡಲ ತೀರದ ಭಾರ್ಗವ!

    ಬೆಂಗಳೂರು: ಒಂದು ಸಿನಿಮಾ ಬಗ್ಗೆ ಕುತೂಹಲ ಹುಟ್ಟಿಸಿ, ಅದನ್ನು ನೋಡಲೇ ಬೇಕೆಂಬ ತುಡಿತ ಮೂಡಿಸುವಲ್ಲಿ ಟ್ರೇಲರ್ ಪಾತ್ರ ಮಹತ್ವದ್ದು. ಆದರೆ ಒಂದಿಡೀ ಸಿನಿಮಾ ಸಾರವನ್ನು ಸೆಕೆಂಡು, ನಿಮಿಷಗಳ ಬೊಗಸೆಯಲ್ಲಿ ಹಿಡಿದಿಡುವುದು ಬಲು ಕಷ್ಟದ ಕೆಲಸ. ಅದರಲ್ಲಿ ಗೆದ್ದವರು ಸಿನಿಮಾ ಮೂಲಕ ಗೆಲ್ಲುವುದೂ ನಿಶ್ಚಿತ ಎಂಬಂಥಾ ನಂಬಿಕೆ ಇದೆ. ಈ ಆಧಾರದಲ್ಲಿ ಹೇಳೋದಾದರೆ ಕಡಲ ತಡಿಯ ಭಾರ್ಗವ ಎಂಬ ಸಿನಿಮಾ ಗೆಲುವಿನ ಹಾದಿಯಲ್ಲಿದೆ. ಯಾಕೆಂದರೆ ಇದೀಗ ಲಾಂಚ್ ಆಗಿರೋ ಈ ಸಿನಿಮಾ ಟ್ರೇಲರ್ ಅಷ್ಟೊಂದು ಪರಿಣಾಮಕಾರಿಯಾಗಿ ಮೂಡಿ ಬಂದಿದೆ.

    ಅಷ್ಟಕ್ಕೂ ಕಡಲ ತೀರದ ಭಾರ್ಗವ ಅಂದಾಕ್ಷಣವೇ ಕನ್ನಡಿಗರೆಲ್ಲರ ಮನಸಲ್ಲಿ ಮೇರು ಸಾಹಿತಿ ಶಿವರಾಮ ಕಾರಂತರ ಚಿತ್ರ ಮೂಡಿಕೊಳ್ಳುತ್ತದೆ. ಈ ಸಿನಿಮಾ ಆರಂಭಿಕವಾಗಿ ಗಮನ ಸೆಳೆದದ್ದರ ಹಿಂದೆಯೂ ಶಿವರಾಮ ಕಾರಂತರೆಂಬ ಮಾಯೆಯಿದ್ದದ್ದು ಸುಳ್ಳಲ್ಲ. ಪ್ರತಿಭೆಯ ವಿರಾಟ್ ರೂಪದಂತಿದ್ದ ವರ್ಣರಂಜಿತ ವ್ಯಕ್ತಿತ್ವದ ಕಾರಂತರಿಗೂ ಈ ಸಿನಿಮಾಗೂ ಸಂಬಂಧವಿದೆಯಾ ಎಂಬ ಪ್ರಶ್ನೆಗೆ ಚಿತ್ರತಂಡ ಇಲ್ಲ ಎಂಬ ನಿಖರ ಉತ್ತರವನ್ನೇ ರವಾನಿಸಿತ್ತು. ಇದೀಗ ಟ್ರೇಲರ್ ಮೂಲಕ ಬೇರೆಯದ್ದೇ ಕಥೆಯ ದಿಕ್ಕು ತೋರಿಸೋ ಮೂಲಕ ಚಿತ್ರತಂಡ ಕಾರಂತರ ವಿಚಾರವಾಗಿ ಹುಟ್ಟಿಕೊಂಡಿದ್ದ ಕೌತುಕಕ್ಕೆ ನಿಖರವಾದ ಉತ್ತರವನ್ನೇ ಕೊಟ್ಟಿದೆ.

    https://www.youtube.com/watch?v=2freW2IGokw

    ಈ ಟ್ರೇಲರ್ ನೋಡಿದವರ್ಯಾರೂ ಕಡಲ ತೀರದ ಭಾರ್ಗವ ಚಿತ್ರದತ್ತ ಆಕರ್ಷಿತರಾಗದಿರಲು ಸಾಧ್ಯವೇ ಇಲ್ಲ. ಪ್ರೀತಿ ಪ್ರೇಮ, ನಶೆ, ದ್ವೇಷ ಸೇರಿದಂತೆ ಬೇರೆಯದ್ದೇ ಛಾಯೆಗಳಿಂದ ಈ ಟ್ರೇಲರ್ ಹೊರ ಬಂದಿದೆ. ಅದುವೇ ಈ ಸಿನಿಮಾದ ದೃಶ್ಯ ವೈಭವಕ್ಕೆ, ಭಿನ್ನ ಬಗೆಯ ಕಥಾನಕಕ್ಕೆ ಕನ್ನಡಿ ಹಿಡಿದಂತಿದೆ. ಇದು ಪನ್ನಗ ಸೋಮಶೇಖರ್ ನಿರ್ದೇಶನ ಮಾಡಿರೋ ಚಿತ್ರ. ಈಗಾಗಲೇ ಹಲವಾರು ಕಿರುಚಿತ್ರಗಳನ್ನು ನಿರ್ದೇಶನ ಮಾಡಿರೋ ಪನ್ನಗ ಕಿರುತೆರೆ ಕ್ಷೇತ್ರದಲ್ಲಿಯೂ ಒಂದಷ್ಟು ಅನುಭವ ಹೊಂದಿದ್ದಾರೆ. ಭರತ್ ಗೌಡ ಮತ್ತು ವರುಣ್ ರಾಜ್ ಜೋಡಿಯಾಗಿ ನಟಿಸಿರೋ ಈ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಶ್ರುತಿ ಪ್ರಕಾಶ್ ನಾಯಕಿಯಾಗಿ ನಟಿಸಿದ್ದಾರೆ. ಇಷ್ಟರಲ್ಲಿಯೇ ಈ ಸಿನಿಮಾದ ಬಿಡುಗಡೆ ದಿನಾಂಕ ಹೊರಬೀಳಲಿದೆ.